Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ? - Vistara News

ಸ್ಯಾಂಡಲ್ ವುಡ್

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

Actor Darshan: ಪರಪ್ಪನ ಅಗ್ರಹಾರ ಜೈಲಿನೊಳಗೆ ಕೈದಿಗಳ ಜತೆಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕುಳಿತಿದ್ದ ಕಾರಣಕ್ಕೆ ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ/ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Chitradurga Renukaswamy murder case) ಬಂಧಿಯಾಗಿರುವ ನಟ ದರ್ಶನ್ (Actor Darshan) ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಇದೀಗ ಕೋರ್ಟ್‌ ಆದೇಶದ ಮೇರೆಗೆ ಬಳ್ಳಾರಿ ಜೈಲಿಗೆ (bellary jail) ಸ್ಥಳಾಂತರ ಆಗಿದ್ದಾರೆ. ಬಿಗಿ ಭದ್ರೆತೆಯೊಂದಿಗೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಜೈಲಿಗೆ ದರ್ಶನ್‌ನನ್ನು ಕರೆತರಲಾಯಿತು.

ಪೊಲೀಸರು ದರ್ಶನ್ ಇದ್ದ ವಾಹನಕ್ಕೆ ಸಂಪೂರ್ಣ ಬಟ್ಟೆ ಕಟ್ಟಿ ಯಾರಿಗೂ ಕಾಣಿಸಬಾರೆಂದು ಕರೆತಂದಿದ್ದರು. ಬಳ್ಳಾರಿ ಜೈಲಿಗೆ ಬಂದ ನಟ ದರ್ಶನ್‌ರಿಗೆ ಮೊದಲು ಮೆಡಿಕಲ್ ಚೆಕಪ್‌ಗೆ ಕರೆದೊಯ್ದಲಾಗಿತ್ತು. ಬಳಿಕ ದರ್ಶನ್‌ಗೆ ನಿಗದಿ ಮಾಡಿದ್ದ ಸೆಲ್‌ಗೆ ಬಿಡಲಾಗಿದೆ.

ಗಾಡಿಗೆ ಅಡ್ಡ ಬಂದ ಹಸುಗಳು

ನಟ ದರ್ಶನ್‌ ಕರೆತರುವಾಗ ಸೆಂಟ್ರಲ್ ಜೈಲ್ ರಸ್ತೆಯಲ್ಲಿ ಹತ್ತಾರು ಹಸುಗಳು ಅಡ್ಡಬಂದಿದ್ದವು. ಬಳಿಕ ಪೊಲೀಸ್‌ ಸಿಬ್ಬಂದಿಯೇ ಹಸುಗಳು ಬೇಗ ಹೋಗಲಿ ಎಂದು ಓಡಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಓಡಿಸುವ ವೇಳೆ ಬೆದರಿದ ಘಟನೆಯು ನಡೆದಿದೆ.

ಹೈದರ್‌ಬಾದ್‌ ರಸ್ತೆ ಮೂಲಕ ಬಳ್ಳಾರಿ ತಲುಪಿದ ಪೊಲೀಸರು

ಇನ್ನೂ ಪೊಲೀಸರು ಮಾಧ್ಯಮಗಳ ಕಣ್ತಪ್ಪಿಸಿ ದರ್ಶನ್‌ನನ್ನು ಹೈದರ್‌ಬಾದ್ ರಸ್ತೆಯಲ್ಲಿ ಕರೆದುಕೊಂಡು ಹೋದರು. ಬಳ್ಳಾರಿಗೆ ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾರೆ. ಎರಡು ಬೊಲೇರೋ ಹಾಗೂ ಒಂದು ಟಿಟಿ ವಾಹನ ಪ್ರತ್ಯೇಕವಾಗಿ ಗುರುವಾರ ಬೆಳಗ್ಗೆ 5:28ಕ್ಕೆ ದೇವನಹಳ್ಳಿ ಟೋಲ್ ಪಾಸ್ ಆದ ದೃಶ್ಯ ಲಭ್ಯವಾಗಿದೆ. ದೇವನಹಳ್ಳಿ ಸಾದಹಳ್ಳಿ ಟೋಲ್‌ನಲ್ಲಿ ಪೊಲೀಸರಿಂದ ದರ್ಶನ್ ಕರೆದುಕೊಂಡು ಹೋಗುತ್ತಿರುವ ವಾಹನಗಳು ಪಾಸ್ ಮಾಡಿಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಕಲಬುರಗಿ ಜೈಲಿಗೆ ಗುರುವಾರ ಆರೋಪಿ ನಾಗರಾಜ್ ಶಿಫ್ಟ್ ಆಗಲಿದ್ದಾರೆ. ನಟ ದರ್ಶನ ಮ್ಯಾನೇಜರ್ ಆಗಿದ್ದ ನಾಗರಾಜ್ A-11 ಆಗಿದ್ದು, ಬೆಂಗಳೂರಿನಿಂದ ಕಲಬುರಗಿ ಜೈಲಿಗೆ ಸಂಜೆ 4 ಗಂಟೆ ತಲುಪಲಿದ್ದಾರೆ. ಈಗಾಗಲೆ ಬೆಂಗಳೂರಿನಿಂದ ಕಲಬುರಗಿಗೆ ಬಿಗಿ ಭದ್ರತೆಯಲ್ಲಿ ಕರೆತರಲಾಗುತ್ತಿದೆ. ಇತ್ತ ಶಿವಮೊಗ್ಗ ಜೈಲಿಗೆ A6 ಆರೋಪಿ ಜಗದೀಶ್ ಹಾಗೂ ಆ12 ಲಕ್ಷ್ಮಣ ಕರೆತರಲಿದ್ದಾರೆ. ರಾಜ್ಯದಲ್ಲೇ ಹೈ ಟೆಕ್ ಕಾರಾಗೃಹ ಎಂಬ ಖ್ಯಾತಿ ಹೊಂದಿರುವ ಶಿವಮೊಗ್ಗ ಜೈಲು ಕೊರಿಯನ್ ಮಾದರಿಯಲ್ಲಿದೆ. 270 ಕೊಠಡಿ ಹೊಂದಿರುವ ಕೇಂದ್ರ ಕಾರಗೃಹದಲ್ಲಿ 773 ಜನ ಖೈದಿಗಳು ಇದ್ದಾರೆ.

ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿದ್ದು ಯಾಕಾಗಿ?

ಪರಪ್ಪನ ಅಗ್ರಹಾರ ಜೈಲಿನೊಳಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕೈದಿಗಳ ಜತೆಗೆ ಕುಳಿತಿರುವ ನಟ ದರ್ಶನ್‌ನ (Actor Darshan) ಫೋಟೊಗಳು ವೈರಲ್‌ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ ಬಂಧಿಯಾಗಿದೆ.

ಜೈಲಿನ ಒಳಗೆ ದರ್ಶನ್‌ ಬಿಂದಾಸ್‌ ಆಗಿದ್ದರು. ಬ್ಯಾರಕ್‌ನಿಂದ ಹೊರಗೆ ಚೇರ್‌ನಲ್ಲಿ ಕುಳಿತಿರುವ ನಟ ದರ್ಶನ್‌ ಬಲಗೈನಲ್ಲಿ ಕಪ್‌, ಎಡಗೈನಲ್ಲಿ ಸಿಗರೇಟ್‌ ಸೇದುವ ಫೋಟೋ ವೈರಲ್‌ ಆಗಿತ್ತು. ದರ್ಶನ್‌ ಜತೆಗೆ ವಿಲ್ಸನ್‌ ಗಾರ್ಡನ್‌ ನಾಗ, ಎ11 ಆರೋಪಿ ದರ್ಶನ್‌ ಮ್ಯಾನೇಜರ್‌ ನಾಗರಾಜ್‌, ಕುಳ್ಳ ಸೀನಾ ಒಟ್ಟಾಗಿ ಕೂತು ಹರಟೆ ಹೊಡೆದಿದ್ದರು.

ಯಾವ್ಯಾವ ಜೈಲಿಗೆ ಯಾರು?

  1. 1.ಬಳ್ಳಾರಿ‌ ಜೈಲಿಗೆ ದರ್ಶನ್
    2.ಮೈಸೂರು ಜೈಲಿಗೆ ಪವನ್, ರಾಘವೇಂದ್ರ ನಂದೀಶ್
  2. 3.ಶಿವಮೊಗ್ಗ ಜೈಲಿಗೆ ಜಗದೀಶ್, ಲಕ್ಷ್ಮಣ್
  3. 4.ಧಾರವಾಡ ಜೈಲಿಗೆ ಧನರಾಜ್
  4. 5.ವಿಜಯಪುರ ಜೈಲಿಗೆ ವಿನಯ್
  5. 6.ಕಲಬುರುಗಿ ಜೈಲಿಗೆ ನಾಗರಾಜ್
  6. 7.ಬೆಳಗಾವಿ ಜೈಲಿಗೆ ಪ್ರದೂಶ್

ಜೈಲು ಸಿಬ್ಬಂದಿ ಜತೆ ಅಳಲು ತೋಡಿಕೊಂಡ ದರ್ಶನ್

ಈಗಾಗಲೇ ಸೆರೆಮನೆ ವಾಸದ ಕಷ್ಟ ಅನುಭವಿಸಿರುವ ನಟ ದರ್ಶನ್ ಈ ಕುರಿತು ಜೈಲು ಸಿಬ್ಬಂದಿ ಜತೆ ದುಃಖ ವ್ಯಕ್ತಪಡಿಸಿದ್ದರು. ಇದೆಲ್ಲಾ ಬೇಕಿತ್ತಾ ನಂಗೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅಭಿನಯದ ಚೌಕ ಚಿತ್ರವನ್ನು ಈ ಹಿಂದೆ ಬಳ್ಳಾರಿ ಜೈಲಿನಲ್ಲಿಯೇ ಚಿತ್ರೀಕರಣ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿನ ಖೈದಿಗಳ ಜೊತೆ ನಟ ಸಹಜ ಮಾತುಕತೆ ನಡೆಸಿದ್ದರು. ಬಳ್ಳಾರಿ ಜೈಲಿನ ಕಷ್ಟಗಳು, ಅಲ್ಲಿನ ವಾತಾವರಣದ ಬಗ್ಗೆ ಅಲ್ಲಿನ ಖೈದಿಗಳಿಂದ ತಿಳಿದುಕೊಂಡಿರುವ ದರ್ಶನ್‌ಗೆ ಈಗ ತಾನೇ ಆ ಜೈಲಿಗೆ ಖೈದಿಯಾಗಿ ವರ್ಗಾವಣೆಯಾಗುತ್ತಿರುವುದು ಆತಂಕ ಹೆಚ್ಚಿಸಿದೆ ಎನ್ನಲಾಗಿದೆ.

ಸಾಮಾನ್ಯ ಸೆಲ್ ನಲ್ಲಿ ದರ್ಶನ್ ?

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸೆಲ್‌ಗಳು ಇಲ್ಲ. ಇಲ್ಲಿ ಎಲ್ಲವೂ ಸಾಮಾನ್ಯ ಸೆಲ್‌ಗಳಾಗಿದೆ. ಹೀಗಾಗಿ ದರ್ಶನ್ ಕೂಡ‌ ಇಲ್ಲಿರುವ ಎಲ್ಲ ಕೈದಿಗಳಂತೆಯೇ ಸಾಮಾನ್ಯ ಕೈದಿಯಾಗಿ‌ ಮುಂದುವರಿಯಬೇಕಿದೆ. ಕೇಂದ್ರ ಕಾರಾಗೃಹದ ಹೊರ ಭದ್ರತಾ ವಿಭಾಗದ ಸೆಲ್‌ನಲ್ಲಿ ನಟ ದರ್ಶನ್ ಅವರನ್ನು ಇರಿಸಲಾಗುತ್ತದೆ. ಹೊರ ಭದ್ರತಾ ವಿಭಾಗದಲ್ಲಿ ಒಟ್ಟು 11 ಸೆಲ್‌ಗಳಿದ್ದು, ಒಂದು ಸೆಲ್‌ನಲ್ಲಿ ಇಬ್ಬರು ಕೈದಿಗಳು ಇರುವ ವ್ಯವಸ್ಥೆ ಇದೆ. ಪ್ರತಿಯೊಂದು ಸೆಲ್ 10/10 ಅಡಿ ಅಗಲವನ್ನು ಹೊಂದಿದೆ.

ಇಲ್ಲಿರುವ ಹನ್ನೊಂದು ಸೆಲ್‌ಗಳಿಗೆ ದಿನದ 24 ಗಂಟೆಯೂ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ. ಸೆಲ್ ಮುಂಭಾಗ 20 ಅಡಿ ಅಗಲ 60 ಅಡಿ ಉದ್ದದ ಜಾಗದಲ್ಲಿ ವಾಕಿಂಗ್ ಮಾಡಬಹುದು. ಬೆಳಗ್ಗೆ ಮತ್ತು ಸಂಜೆ ವಾಕಿಂಗ್ ಮಾಡಲು 15 ನಿಮಿಷ ಅವಕಾಶವಿದೆ. ಈ ವೇಳೆ ಭದ್ರತೆ ಸಿಬ್ಬಂದಿ ಕೂಡ ಹಾಜರಿರುತ್ತಾರೆ. ಸೆಲ್‌ನ ಒಳಗಡೆ ಬಾತ್ ರೂಂ, ಶೌಚಾಲಯದ ವ್ಯವಸ್ಥೆ ಇದ್ದು, ಸ್ನಾನ ಮಾಡಲು ತಣ್ಣೀರು ಮಾತ್ರ ಇರುತ್ತದೆ. ಈ ಸೆಲ್‌ಗೆ ಎರಡು ಗೇಟ್‌ಗಳಿರುತ್ತವೆ. ಇಲ್ಲಿರುವ ಹನ್ನೊಂದು ಸೆಲ್ ಗಳಲ್ಲಿ ಸದ್ಯ ಶಿವಮೊಗ್ಗ, ಹಾಸನ,ಬೆಂಗಳೂರು, ಮಂಗಳೂರು ಮೂಲದ ಕೈದಿಗಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ಪೃಥ್ವಿ ಅಂಬಾರ್, ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್‌

ಪೃಥ್ವಿ ಅಂಬರ್ ಹಾಗೂ ಪ್ರಮೋದ್ ಅವರು ಮೊದಲ ಬಾರಿ ಒಟ್ಟಿಗೆ ತೆರೆ ಹಂಚಿಕೊಂಡಿರುವ ‘ಭುವನ್ ಗಗನಂ’ ಸಿನಿಮಾಕ್ಕೆ (Kannada New Movie) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ ಕೊಟ್ಟಿದ್ದಾರೆ. ಭುವನಂ ಗಗನಂ ಹಾಡು ಬಿಡುಗಡೆ ಮಾಡಿ ಇಡೀ ಸಿನಿತಂಡಕ್ಕೆ ಆಲ್ ದಿ ಬೆಸ್ಟ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: “ಭುವನಂ ಗಗನಂ” ಸಿನಿಮಾ ತನ್ನ ಟೀಸರ್ ನಿಂದಲೇ ಪ್ರೇಕ್ಷಕರಲ್ಲಿ ಕುತೂಹಲ ಕೇಂದ್ರ ಬಿಂದುವಾಗಿದೆ. ಕ್ಲಾಸ್ ಕಥೆಗಳ ಮೂಲಕ ಗಮನ ಸೆಳೆದ ಪೃಥ್ವಿ ಅಂಬಾರ್ ಹಾಗೂ ಮಾಸ್ ಸಿನಿಮಾಗಳ ಮೂಲಕ ಸೈ ಎನಿಸಿಕೊಂಡ ಪ್ರಮೋದ್, ಮೊದಲ ಬಾರಿ ಒಟ್ಟಿಗೆ ತೆರೆ ಹಂಚಿಕೊಂಡಿರುವ ಈ ಚಿತ್ರದ (Kannada New Movie) ಟೈಟಲ್ ಟ್ರ್ಯಾಕ್ ಅನಾವರಣಗೊಂಡಿದೆ.

ಹೊಸ ಪ್ರತಿಭೆಗಳಿಗೆ ಸದಾ ಬೆನ್ನುತಟ್ಟುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಚಿತ್ರರಂಗದ ಭರವಸೆ ನಾಯಕರಾಗಿರುವ ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ಕೊಟ್ಟಿದ್ದಾರೆ, ಭುವನಂ ಗಗನಂ ಹಾಡು ಬಿಡುಗಡೆ ಮಾಡಿ ಇಡೀ ಸಿನಿತಂಡಕ್ಕೆ ಆಲ್ ದಿ ಬೆಸ್ಟ್ ತಿಳಿಸಿದ್ದಾರೆ. ಭುವನಂ ಗಗನಂ ಎಂದು ಶುರುವಾಗುವ ಹಾಡಿಗೆ ಅನಿರುದ್ಧ ಶಾಸ್ತ್ರೀ ಕ್ಯಾಚಿ ಮ್ಯಾಚಿ ಪದ ಪೊಣಿಸಿದ್ದು, ಅರ್ಮಾನ್ ಮಲ್ಲಿಕ್ ಹಾಗೂ ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದಾರೆ. ಗುಮ್ಮಿನೇನಿ ವಿಜಯ್ ಈ ಮಧುರ ಗೀತೆಗೆ ಟ್ಯೂನ್ ಹಾಕಿದ್ದಾರೆ. ಭುವನಂ ಗಗನಂ ಟೈಟಲ್ ಟ್ರ್ಯಾಕ್‌ನಲ್ಲಿ ಪ್ರಮೋದ್ ಹಾಗೂ ರೆಚೆಲ್ ಡೇವಿಡ್ ಜೋಡಿಯ ಕೆಮಿಸ್ಟ್ರಿ ನೋಡುಗರಿಗೆ ಇಷ್ಟವಾಗುತ್ತದೆ.

ಇದನ್ನೂ ಓದಿ: Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ

ಗಿರೀಶ್ ಮೂಲಿಮನಿ ಭುವನಂ ಗಗನಂ ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದು, ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಇದೀಗ ಭುವನಂ ಗಗನಂ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ. ಮುನೇಗೌಡ ತಮ್ಮದೇ ಎಸ್‌ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂಗೆ ಹಣ ಹಾಕಿದ್ದಾರೆ.

ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್‌ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಪ್ರಚಾರ ಅಖಾಡಕ್ಕೆ ಇಳಿದಿರುವ ಚಿತ್ರತಂಡ ಆದಷ್ಟು ಬೇಗ ಭುವನಂ ಗಗನಂ ಸಿನಿಮಾ ತೆರೆಗೆ ತರಲಿದೆ.

Continue Reading

ಸಿನಿಮಾ

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಕುಟುಂಬಸ್ಥರು ಹೊರತು ಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ. ಜತೆಗೆ ಯಾವುದೇ ವಿವಿಐಪಿ ಟ್ರೀಟ್ಮೆಂಟ್‌ ಇರುವುದಿಲ್ಲ. ಸಾಮಾನ್ಯ ಖೈದಿಯಂತೆ ಸಿಸಿಟಿವಿ ಕಣ್ಗಾವಲು ಇರಲಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್‌ನನ್ನು (Actor Darshan) ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಆಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ದರ್ಶನ್‌ಗಿಲ್ಲ ವಿವಿಐಪಿ ಟ್ರೀಟ್ಮೆಂಟ್‌; ಸಾಮಾನ್ಯ ಖೈದಿಗೆ ಸಿಸಿಟಿವಿ ಕಣ್ಗಾವಲು

ಈಗಾಗಲೇ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದು, ಸಾಮಾನ್ಯ ಖೈದಿಯಂತೆ ಇರಬೇಕಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ವಿವಿಐಪಿ ಟ್ರೀಟ್ಮೆಂಟ್‌ ಬಳ್ಳಾರಿ ಜೈಲಿನಲ್ಲಿ ಇರುವುದಿಲ್ಲ. ಇನ್ನೂ ದಿನದ 24/7 ದರ್ಶನ್ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ದಿನನಿತ್ಯ ದರ್ಶನ್ ಸಿಸಿಟಿವಿ ಫೂಟೇಜ್ ಪ್ರತ್ಯೇಕವಾಗಿ ಶೇಖರಿಸಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ದರ್ಶನ್ ಇರುವ ಕೊಠಡಿಗೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗ ನಿಯೋಜನೆ ಮಾಡಲಾಗಿದೆ. ಭದ್ರತೆ ಹಾಗೂ ದರ್ಶನ್ ಚಲನವಲನಗಳ ಬಗ್ಗೆ ತೀವ್ರ ನಿಗಾ ಇಡಲಾಗುತ್ತದೆ. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿನಿತ್ಯ ಬೀಗ ತೆರೆಯುವ ಹಾಗೂ ಬೀಗ ಮುದ್ರೆ ಮಾಡುವ ಸಮಯದಲ್ಲಿ ಕೂಲಂಕುಷವಾಗಿ ತಪಾಸಣೆ ಮಾಡುವಂತೆ ಸೂಚನೆನೀಡಲಾಗಿದೆ. ಯಾವುದೇ ನಿಷೇಧಿತ ವಸ್ತುಗಳು ದೊರಕದ ಹಾಗೆ ಪ್ರತ್ಯೇಕ ವಹಿಯನ್ನು ನಿರ್ವಹಿಸಬೇಕು. ಪಹರೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಬೇಕು ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Chikkanna: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಭೇಟಿ ಮಾಡಿದ್ದಕ್ಕೆ ನಟ ಚಿಕ್ಕಣ್ಣ ವಿಚಾರಣೆಗೆ ಹಾಜರು

ಕಳೆದ ಬಾರಿ ವಿಚಾರಣೆ ಬಳಿಕ ನಟ ದರ್ಶನ್ ಅವರನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರಿಂದ ನಟ ಚಿಕ್ಕಣ್ಣನನ್ನು (Actor Chikkanna) ಮತ್ತೆ ಈ ಬಾರಿ ಎಸಿಪಿ ಚಂದನ್ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ನಟ ಚಿಕ್ಕಣ್ಣ ನ್ಯಾಯಾಧೀಶರ ಮುಂದೆಯೂ ಹಾಜರಾಗಿದ್ದರು. ಸಿಆರ್ ಪಿಸಿ 164 ಅಡಿಯಲ್ಲಿ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

VISTARANEWS.COM


on

By

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿ ನಟ ಚಿಕ್ಕಣ್ಣ (Actor Chikkanna) ಬಸವೇಶ್ವರನಗರದಲ್ಲಿರುವ ತನಿಖಾಧಿಕಾರಿ ಮುಂದೆ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಣ್ಣ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದರು.

ಕಳೆದ ಬಾರಿ ವಿಚಾರಣೆ ಬಳಿಕ ನಟ ದರ್ಶನ್ (actor darshan) ಅವರನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರಿಂದ ನಟ ಚಿಕ್ಕಣ್ಣನನ್ನು ಮತ್ತೆ ಈ ಬಾರಿ ಎಸಿಪಿ ಚಂದನ್ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ನಟ ಚಿಕ್ಕಣ್ಣ ನ್ಯಾಯಾಧೀಶರ ಮುಂದೆಯೂ ಹಾಜರಾಗಿದ್ದರು. ಸಿಆರ್ ಪಿಸಿ 164 ಅಡಿಯಲ್ಲಿ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ಭೇಟಿಗೆ ತೆರೆಳಿದ್ದ ನಟ ಚಿಕ್ಕಣ್ಣನ ಜೊತೆ ಈ ಸಂದರ್ಭದಲ್ಲಿ ಅಭಿಷೇಕ್ ಅಂಬರೀಶ್ , ಧನ್ವೀರ್ ಕೂಡ ಇದ್ದರು. ಅಲ್ಲಿ ದರ್ಶನ್ ಭೇಟಿ ಮಾಡಿ ಕೆಲಕಾಲ ಚಿಕ್ಕಣ್ಣ ಮಾತುಕತೆ ನಡೆಸಿದ್ದರು.
ನಟ ದರ್ಶನ್ ನನ್ನು ಭೇಟಿ ಮಾಡಿದ ಕಾರಣಕ್ಕಾಗಿ ಪೊಲೀಸರಿಂದ ಚಿಕ್ಕಣ್ಣಗೆ ನೊಟೀಸ್ ನೀಡಲಾಗಿತ್ತು.


ನಾನೊಬ್ಬ ಸಾಕ್ಷಿದಾರನಾಗಿದ್ದುಕೊಂಡು ಜೈಲಿಗೆ ಹೋಗಿ ದರ್ಶನ್‌ ಜತೆಗೆ ಮಾತನಾಡಿಸಬಾರದು ಎಂಬುದು ನನಗೆ ತಿಳಿದಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ ಭೇಟಿ ಮಾಡಿ ಬಂದಿದ್ದೆ. ಹೀಗಾಗಿ ಪೊಲೀಸರು ವಿಚಾರಣೆಗೆ ಬರುವಂತೆ ನಿನ್ನೆ ಬುಧವಾರ ನೋಟಿಸ್ ಕೊಟ್ಟು 9 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಡಲಾಗಿತ್ತು. ಈ ನಿಟ್ಟಿನಲ್ಲಿ ಗುರುವಾರ ಬಂದು ವಿಚಾರಣೆಗೆ ಹಾಜರಾಗಿದ್ದೇನೆ. ವಿಚಾರಣೆ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಒಂದಷ್ಟು ಪ್ರಶ್ನೆ ಕೇಳಿದ್ದರು ಅದಕ್ಕೆ ಉತ್ತರ ಕೊಟ್ಟಿದ್ದಿನಿ. ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇನೆ. ಸದ್ಯ ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ಸಾಕ್ಷಿದಾರ ಹೋಗ ಬಾರದು ಅನ್ನೋದು ನನಗೆ ತಿಳಿದಿರಲಿಲ್ಲ, ಗೊತ್ತಿದ್ದರೆ ಹೋಗಿ ದರ್ಶನ್‌ನನ್ನು ಜೈಲಿನಲ್ಲಿ ಭೇಟಿ ಆಗುತ್ತಿರಲಿಲ್ಲ ಎಂದು ಚಿಕ್ಕಣ್ಣ ಪ್ರತಿಕ್ರಿಯಿಸಿದ್ದಾರೆ.

ಪಾರ್ಟಿ ವಿಚಾರದಲ್ಲಿ ವಿಚಾರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೆಸ್ಟ್ ಆಗಿದ್ದ ನಟ ದರ್ಶನ್ ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ವಿಚಾರಣೆಗೆ ಒಳಪಡಿಸಲಾಗಿತ್ತು. ನಟ ಯಶಸ್‌ ಸೂರ್ಯ ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ ನಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ನಟ ದರ್ಶನ್ ಜೊತೆ ಕೊಲೆಯ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ಮೂರು ಗಂಟೆಗಳ ಕಾಲ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ, ಅದೇ ದಿನ ತಾನು ದರ್ಶನ್ ಜೊತೆ ಪಾರ್ಟಿ ಮಾಡಿದ್ದು ನಿಜ ಎಂದು ಚಿಕ್ಕಣ್ಣ ಒಪ್ಪಿಕೊಂಡಿದ್ದರು.

Continue Reading

ಬೆಂಗಳೂರು

Kannada New Movie: ರಿಷಭ್ ಶೆಟ್ಟಿ ನಿರ್ಮಾಣದ ಪ್ರಮೋದ್ ಶೆಟ್ಟಿ ಅಭಿನಯದ “ಲಾಫಿಂಗ್ ಬುದ್ಧ” ಈ ವಾರ ತೆರೆಗೆ

ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ. ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ (Kannada New Movie) ಈ ವಾರ ಬಿಡುಗಡೆಯಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ. ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ (Kannada New Movie) ಈ ವಾರ ಬಿಡುಗಡೆಯಾಗುತ್ತಿದೆ.

ಪೊಲೀಸ್ ಅವರ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೇ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ದಿಗಂತ್ ಮಂಚಾಲೆ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ. ಹಿರಿಯ ನಟ ಸುಂದರರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ.

ಇದನ್ನೂ ಓದಿ: Bengaluru Power Cut: ಆ.29 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ವಿಷ್ಣು ವಿಜಯ್ ಸಂಗೀತ ನಿರ್ದೇಶನ, ಎಸ್. ಚಂದ್ರಶೇಖರನ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ ಹಾಗೂ ಧರಣಿ ಗಂಗೆಪುತ್ರ ಅವರ ಕಲಾ ನಿರ್ದೇಶನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.

Continue Reading
Advertisement
Viral News
ವೈರಲ್ ನ್ಯೂಸ್4 mins ago

Viral News: 10 ವರ್ಷಗಳ ಬೋಧನೆಯ ಅನಂತರವೂ ಸಂಬಳ ಹೆಚ್ಚಿಸಿಲ್ಲ; ಹತಾಶೆಯಿಂದ ರಾಜೀನಾಮೆ

Kannada New Movie
ಬೆಂಗಳೂರು26 mins ago

Kannada New Movie: ಪೃಥ್ವಿ ಅಂಬಾರ್, ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್‌

Ranjani Raghavan
ಸಿನಿಮಾ43 mins ago

Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ

DK Shivakumar
ಬೆಂಗಳೂರು1 hour ago

DK Shivakumar: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ. ಶಿವಕುಮಾರ್‌

Prajwal Revannas anticipatory bail plea adjourned to September 5
ಹಾಸನ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

Actor Darshan
ಸಿನಿಮಾ2 hours ago

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Physical Abuse
ಉಡುಪಿ3 hours ago

Physical Abuse : ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಅರೆಸ್ಟ್‌

Kangana Ranaut
ರಾಜಕೀಯ3 hours ago

Kangana Ranaut: ದೂರದೃಷ್ಟಿಯೇ ಇಲ್ಲದ ರಾಹುಲ್ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ: ಕಂಗನಾ

attempt to murder case
ತುಮಕೂರು4 hours ago

Attempt To murder : ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Deepfake Video
ವೈರಲ್ ನ್ಯೂಸ್4 hours ago

Deepfake Video: ಶುಬ್ ಮನ್ ಗಿಲ್ ಅನ್ನು ದೂಷಿಸಿದ ವಿರಾಟ್; ಡೀಪ್ ಫೇಕ್ ವಿಡಿಯೋ ವೈರಲ್

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್5 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌