Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ - Vistara News

ಸಿನಿಮಾ

Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ

ವೃತ್ತಿಯಲ್ಲಿ ಅಥ್ಲೆಟ್​ ಆಗಿರುವ ಸಾಗರ್ ಭಾರಧ್ವಜ್ ಎಂಬವರನ್ನು ರಂಜನಿ ರಾಘವನ್ (Ranjani Raghavan) ಕೈಹಿಡಿಯಲಿದ್ದಾರೆ. ಸಾಗರ್ ರನ್ನರ್, ಸೈಕಲಿಸ್ಟ್​, ಬೈಕರ್ ಕೂಡ ಆಗಿದ್ದಾರೆ. ಮದುವೆ ಹಾಗೂ ನಿಶ್ಚಿತಾರ್ಥದ ದಿನಾಂಕದ ಬಗ್ಗೆ ನಟಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

VISTARANEWS.COM


on

Ranjani Raghavan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕನ್ನಡತಿ ಧಾರವಾಹಿ (Kannadati serial) ಮೂಲಕ ಎಲ್ಲರ ಮನಗೆದ್ದಿರುವ ನಟಿ (kannada actress) ರಂಜನಿ ರಾಘವನ್ (Ranjani Raghavan) ಇದೀಗ ತಮ್ಮ ಬಾಳ ಸಂಗಾತಿಯನ್ನು ಸಾಮಾಜಿಕ ಜಾಲತಾಣದ (social media) ಮೂಲಕ ಎಲ್ಲರಿಗೂ ಪರಿಚಯಿಸಿದ್ದಾರೆ. ಇವರ ಈ ಫೋಟೋ ಭಾರಿ ವೈರಲ್ (Viral news) ಆಗಿದ್ದು, ಶುಭಾಶಯಗಳ ಹೊಳೆಯೇ ಹರಿದು ಬರುತ್ತಿದೆ.

ವೃತ್ತಿಯಲ್ಲಿ ಅಥ್ಲೆಟ್​ ಆಗಿರುವ ಸಾಗರ್ ಭಾರಧ್ವಜ್ ಎಂಬವರನ್ನು ರಂಜನಿ ಕೈಹಿಡಿಯಲಿದ್ದಾರೆ. ಸಾಗರ್ ರನ್ನರ್, ಸೈಕಲಿಸ್ಟ್​, ಬೈಕರ್ ಕೂಡ ಆಗಿದ್ದಾರೆ. ಮದುವೆ ಹಾಗೂ ನಿಶ್ಚಿತಾರ್ಥದ ದಿನಾಂಕದ ಬಗ್ಗೆ ನಟಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಂಜನಿ ಅವರ ‘ಕಾಂಗರೂ’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.
ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ ರಂಜನಿ ರಾಘವನ್ 1994ರ ಮಾರ್ಚ್ 29ರಂದು ಬೆಂಗಳೂರಿನಲ್ಲಿ ಜನಿಸಿದರು. ಬೆಂಗಳೂರಿನ ಶೇ‍ಷಾದ್ರಿಪುರಂ ಕಾಲೇಜಿನಲ್ಲಿ ಎಂಬಿಎ ಮುಗಿಸಿರುವ ಇವರು ಓರ್ವ ಸೃಜನಶೀಲ ಬರಹಗಾರ್ತಿಯೂ ಆಗಿದ್ದಾರೆ.

Ranjani Raghavan
Ranjani Raghavan

‘ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ನಾಯಕಿಯಾಗಿ ಕಿರುತೆರೆಗೆ ಎಂಟ್ರಿಕೊಟ್ಟ ಇವರು ಬಳಿಕ ಪೌರ್ಣಮಿ ಎಂಬ ಮಲಯಾಳಂ ಸೀರಿಯಲ್‌ನಲ್ಲಿ ಕಾಣಿಸಿಕೊಂಡಿದ್ದರು. ಅನಂತರ ‘ಇಷ್ಟದೇವತೆ’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ಇದರ ಕಥೆಯನ್ನು ತಾವೇ ಬರೆದು ನಿರ್ದೇಶಕಿಯಾಗಿ ಗುರುತಿಸಿಕೊಂಡರು.


ಬಳಿಕ ಕನ್ನಡತಿ ಧಾರವಾಹಿ ಮೂಲಕ ಮನೆಮಾತಾದ ಇವರು 2017ರಲ್ಲಿ ‘ರಾಜಹಂಸ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಪ್ರವೇಶಿಸಿದರು. ಅನಂತರ ಪುಣ್ಯ, ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ನೈಟ್ ಕರ್ಫ್ಯೂ ಸೇರಿದಂತೆ ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.


ಇದನ್ನೂ ಓದಿ: Kannada New Movie: ರಾ ಲುಕ್‌ನಲ್ಲಿ ವಿಜಯ್ ರಾಘವೇಂದ್ರ; ʼರಿಪ್ಪನ್ ಸ್ವಾಮಿʼ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್‌

ಕಥೆ ಡಬ್ಬಿ, ಸ್ವೈಪ್ ಅಪ್ ಎಂಬ ಪುಸ್ತಕ ಬಿಡುಗಡೆ ಮಾಡಿ ಸಾಹಿತ್ಯ ಪ್ರೇಮಿಗಳ ಮನಗೆದ್ದಿರುವ ನಟಿ ರಂಜನಿ ರಾಘವನ್ ಇದೀಗ ಹಸೆ ಮಣೆ ಏರಲು ಸಿದ್ದರಾಗಿದ್ದಾರೆ. ಕಾರ್ಯಕ್ರಮ ಖಾಸಗಿಯಾಗಿಡಲು ಬಯಸುತ್ತಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್ನಲ್ಲಿ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್‌ನಲ್ಲಿ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ.

ಇದನ್ನೂ ಓದಿ: Viral News: 10 ವರ್ಷಗಳ ಬೋಧನೆಯ ಅನಂತರವೂ ಸಂಬಳ ಹೆಚ್ಚಿಸಿಲ್ಲ; ಹತಾಶೆಯಿಂದ ರಾಜೀನಾಮೆ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಬಳ್ಳಾರಿ ಜೈಲಿನ ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡರು. ಆದರೆ ಯಾವುದೇ ಕಾರಣಕ್ಕೂ ಜೈಲಿನಲ್ಲಿ ಕೂಲಿಂಗ್ ಗ್ಲಾಸ್‌ನಂಥ ವಸ್ತುಗಳನ್ನು ಒಯ್ಯುವ ಹಾಗಿಲ್ಲ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ, ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್‌ನನ್ನು (Actor Darshan) ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಆಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.

ದರ್ಶನ್‌ಗಿಲ್ಲ ವಿವಿಐಪಿ ಟ್ರೀಟ್ಮೆಂಟ್‌; ಸಾಮಾನ್ಯ ಖೈದಿಗೆ ಸಿಸಿಟಿವಿ ಕಣ್ಗಾವಲು

ಈಗಾಗಲೇ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದು, ಸಾಮಾನ್ಯ ಖೈದಿಯಂತೆ ಇರಬೇಕಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ವಿವಿಐಪಿ ಟ್ರೀಟ್ಮೆಂಟ್‌ ಬಳ್ಳಾರಿ ಜೈಲಿನಲ್ಲಿ ಇರುವುದಿಲ್ಲ. ಇನ್ನೂ ದಿನದ 24/7 ದರ್ಶನ್ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ದಿನನಿತ್ಯ ದರ್ಶನ್ ಸಿಸಿಟಿವಿ ಫೂಟೇಜ್ ಪ್ರತ್ಯೇಕವಾಗಿ ಶೇಖರಿಸಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

ದರ್ಶನ್ ಇರುವ ಕೊಠಡಿಗೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗ ನಿಯೋಜನೆ ಮಾಡಲಾಗಿದೆ. ಭದ್ರತೆ ಹಾಗೂ ದರ್ಶನ್ ಚಲನವಲನಗಳ ಬಗ್ಗೆ ತೀವ್ರ ನಿಗಾ ಇಡಲಾಗುತ್ತದೆ. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿನಿತ್ಯ ಬೀಗ ತೆರೆಯುವ ಹಾಗೂ ಬೀಗ ಮುದ್ರೆ ಮಾಡುವ ಸಮಯದಲ್ಲಿ ಕೂಲಂಕುಷವಾಗಿ ತಪಾಸಣೆ ಮಾಡುವಂತೆ ಸೂಚನೆನೀಡಲಾಗಿದೆ. ಯಾವುದೇ ನಿಷೇಧಿತ ವಸ್ತುಗಳು ದೊರಕದ ಹಾಗೆ ಪ್ರತ್ಯೇಕ ವಹಿಯನ್ನು ನಿರ್ವಹಿಸಬೇಕು. ಪಹರೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಬೇಕು ಎನ್ನಲಾಗಿದೆ.

Continue Reading

ಕಿರುತೆರೆ

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

Namratha Gowda: ಹಾಟ್‌ ಆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರು ನಮ್ರತಾ ಗೌಡ . ಇಲ್ಲಿವೆ ಫೋಟೊಗಳು!

VISTARANEWS.COM


on

Namratha Gowda
Koo
Namratha Gowda
ಬಿಗ್‌ಬಾಸ್‌ ಖ್ಯಾತಿಯ ನಮ್ರತಾ ಗೌಡ ಲಕ್ಷ್ಮೀ ಕೃಷ್ಣ ಡಿಸೈನ್ ಮಾಡಿರುವ ಕಪ್ಪು ಸೀರೆಯುಟ್ಟು ಗಮನ ಸೆಳೆದಿದ್ದಾರೆ.
Namratha Gowda
ಸ್ಲೀವ್ ಲೆಸ್ ಬ್ಲೌಸ್ ಜತೆ ಬ್ಲ್ಯಾಕ್‌ ಹ್ಯಾಂಡ್‌ ಗ್ಲೌಸ್‌, ಅದರ ಮೇಲೆ ಡೈಮಂಡ್‌ ರಿಂಗ್‌ ಮತ್ತು ಸಿಂಹಿಣಿಯ ಲೋಗೋ ಇರುವ ಬೆಲ್ಟ್‌ ಇದು ಬೆಡಗಿಯ ನ್ಯೂ ಲುಕ್‌ನ ವಿಷೇಶವಾಗಿದೆ.
Namratha Gowda
ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ಯೂಟ್‌ ಮತ್ತು ಹಾಟ್ ಫೋಟೊಗಳನ್ನು ಪೋಸ್ಟ್‌ ಮಾಡಿರುವ ನಮ್ಮು “Some wars help us bloom” ಎಂದು ಕ್ಯಾಪ್ಶನ್ ಸಹ ಹಾಕಿಕೊಂಡಿದ್ದಾರೆ.
Namratha Gowda
ಕೆಲದಿನಗಳ ಹಿಂದೆ ಪ್ಯಾರ್ ಗೆ ಆಗ್ಬಿಟ್ಟೈತೆ ನಟಿ ಪಾರುಲ್ ಯಾದವ್ ಬ್ಲ್ಯಾಕ್ ಸೀರೆ ಧರಿಸಿ ಬೋಲ್ಡ್‌ ಆಗಿ ಫೋಟೊ ಶೂಟ್ ಮಾಡಿಸಿದ್ದು ಅದು ವೈರಲ್ ಆಗಿತ್ತು. ಇದೀಗ ಅವರನ್ನು ಮೀರಿಸುವ ಹಾಗೆ ನಟಿ ನಮ್ರತಾ ಗೌಡ ಫೋಟೊಗಳನ್ನು ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
Namratha Gowda
ಸದ್ಯಕ್ಕೆ ಜಿಮ್‌ ವರ್ಕೌಟ್‌ ಮಾಡಿ ಫಿಟ್‌ ಆಗುತ್ತಿರುವ ನಮ್ರತಾ ಮುಂಬರುವ ಪ್ರಾಜೆಕ್ಟ್‌ಗಳಲ್ಲಿ ಬ್ಯೂಸಿ ಆಗಲಿದ್ದಾರೆ.
Continue Reading

ವೈರಲ್ ನ್ಯೂಸ್

Deep Fake Video: ಎಐ ಬಳಸಿ ದರ್ಶನ್‌- ಧನ್ವಿರ್ ವಿಡಿಯೋ ದುರ್ಬಳಕೆ..!

ಬಳ್ಳಾರಿ ಜೈಲು ಸೇರಿರುವ ದರ್ಶನ್ ಗೆ ಈಗ ಎಐ ಕಾಟ ಶುರುವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ (Deep Fake Video) ನಟ ದರ್ಶನ್‌ ಹಾಗೂ ಧನ್ವೀರ್‌ ಪರಸ್ಪರ ಮುತ್ತು ಕೊಡುತ್ತಿರುವಂತೆ ವಿಡಿಯೋ ಎಡಿಟ್ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇಷ್ಟು ದಿನ ನಟಿಮಣಿಯರ ಟಾರ್ಗೆಟ್ ಆಗಿದ್ದ ಎಐ ತಂತ್ರಜ್ಞಾನವನ್ನು ಇದೀಗ ದರ್ಶನ್ ಮೇಲೂ ಪ್ರಯೋಗ ಮಾಡಲಾಗಿದೆ.

VISTARANEWS.COM


on

By

Deep Fake Video
Koo

ಬೆಂಗಳೂರು: ಡೀಪ್ ಫೇಕ್ ವಿಡಿಯೋಗೆ (Deep Fake Video) ಈಗಾಗಲೇ ಸಾಕಷ್ಟು ಮಂದಿ ನಟ, ನಟಿಯರು ಬಲಿಯಾಗಿದ್ದಾರೆ. ಈಗ ಇದು ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್ ನನ್ನೂ (Actor darshan) ಕೂಡ ಬಿಟ್ಟಿಲ್ಲ. ಆರ್ಟಿಫಿಷಿಯಲ್ ತಂತ್ರಜ್ಞಾನವನ್ನು ಬಳಸಿಕೊಂಡು ಎಡಿಟ್ ಮಾಡಿರುವ ದರ್ಶನ್‌- ಧನ್ವಿರ್ ವಿಡಿಯೋ (Darshan- Dhanvir Video) ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ ದರ್ಶನ್ ಅನ್ನು ರಾಜಾತಿಥ್ಯ ಪ್ರಕರಣದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.


ಬಳ್ಳಾರಿ ಜೈಲು ಸೇರಿರುವ ದರ್ಶನ್ ಗೆ ಈಗ ಎಐ ಕಾಟ ಶುರುವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ನಟ ದರ್ಶನ್‌ ಹಾಗೂ ಧನ್ವೀರ್‌ ಪರಸ್ಪರ ಮುತ್ತು ಕೊಡುತ್ತಿರುವಂತೆ ವಿಡಿಯೋ ಎಡಿಟ್ ಕಿಡಿಗೇಡಿಗಳು ಹಂಚಿಕೊಂಡಿದ್ದಾರೆ.
ಇಷ್ಟು ದಿನ ನಟಿಮಣಿಯರ ಟಾರ್ಗೆಟ್ ಆಗಿದ್ದ ಎಐ ತಂತ್ರಜ್ಞಾನವನ್ನು ಇದೀಗ ದರ್ಶನ್ ಮೇಲೂ ಪ್ರಯೋಗ ಮಾಡಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ದಚ್ಚು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟೆಂಬರ್ 9 ರವರೆಗೆ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ 24 ನೇ ಎಸಿಎಂಎಂ ಕೋರ್ಟ್ ಬುಧವಾರ ಆದೇಶಿಸಿತ್ತು. ದರ್ಶನ್ ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಬುಧವಾರ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಜೈಲು ಅಧಿಕಾರಿಗಳು ಹಾಜರು ಪಡಿಸಲಾಯಿತು.

ತುಮಕೂರು ಹಾಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ರೇಣುಕಾಸ್ವಾಮಿ ಕೊಲೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾದರು.

ಪವಿತ್ರ ಗೌಡ, ದರ್ಶನ್, ಪುಟ್ಟಸ್ವಾಮಿ ಅಲಿಯಾಸ್ ಪವನ್, ನಂದಿಶ್ ,ರಾಘವೇಂದ್ರ, ಲಕ್ಷ್ಮಣ, ದೀಪಕ್, ಪ್ರದೂಷ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಹೆಸರು ಕರೆದು ಹಾಜರಾತಿ ತೆಗೆದುಕೊಂಡ ನ್ಯಾಯಾಧೀಶರು ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಳಿಕ ನಟ ದರ್ಶನ್ ನನ್ನು ಬಳ್ಳಾರಿ ಜೈಲ್ ಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: Actor Chikkanna: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಭೇಟಿ ಮಾಡಿದ್ದಕ್ಕೆ ನಟ ಚಿಕ್ಕಣ್ಣ ವಿಚಾರಣೆಗೆ ಹಾಜರು

ಸೆಲೆಬ್ರಿಟಿಗಳ ಭೇಟಿಗೆ ಅವಕಾಶವಿಲ್ಲ

ಸದ್ಯ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಭೇಟಿಗೆ ಯಾವ ಸೆಲೆಬ್ರಿಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ. ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.

ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಹಾಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.

Continue Reading

ಬೆಂಗಳೂರು

Kannada New Movie: ಪೃಥ್ವಿ ಅಂಬಾರ್, ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್‌

ಪೃಥ್ವಿ ಅಂಬರ್ ಹಾಗೂ ಪ್ರಮೋದ್ ಅವರು ಮೊದಲ ಬಾರಿ ಒಟ್ಟಿಗೆ ತೆರೆ ಹಂಚಿಕೊಂಡಿರುವ ‘ಭುವನ್ ಗಗನಂ’ ಸಿನಿಮಾಕ್ಕೆ (Kannada New Movie) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ ಕೊಟ್ಟಿದ್ದಾರೆ. ಭುವನಂ ಗಗನಂ ಹಾಡು ಬಿಡುಗಡೆ ಮಾಡಿ ಇಡೀ ಸಿನಿತಂಡಕ್ಕೆ ಆಲ್ ದಿ ಬೆಸ್ಟ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: “ಭುವನಂ ಗಗನಂ” ಸಿನಿಮಾ ತನ್ನ ಟೀಸರ್ ನಿಂದಲೇ ಪ್ರೇಕ್ಷಕರಲ್ಲಿ ಕುತೂಹಲ ಕೇಂದ್ರ ಬಿಂದುವಾಗಿದೆ. ಕ್ಲಾಸ್ ಕಥೆಗಳ ಮೂಲಕ ಗಮನ ಸೆಳೆದ ಪೃಥ್ವಿ ಅಂಬಾರ್ ಹಾಗೂ ಮಾಸ್ ಸಿನಿಮಾಗಳ ಮೂಲಕ ಸೈ ಎನಿಸಿಕೊಂಡ ಪ್ರಮೋದ್, ಮೊದಲ ಬಾರಿ ಒಟ್ಟಿಗೆ ತೆರೆ ಹಂಚಿಕೊಂಡಿರುವ ಈ ಚಿತ್ರದ (Kannada New Movie) ಟೈಟಲ್ ಟ್ರ್ಯಾಕ್ ಅನಾವರಣಗೊಂಡಿದೆ.

ಹೊಸ ಪ್ರತಿಭೆಗಳಿಗೆ ಸದಾ ಬೆನ್ನುತಟ್ಟುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಚಿತ್ರರಂಗದ ಭರವಸೆ ನಾಯಕರಾಗಿರುವ ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ಕೊಟ್ಟಿದ್ದಾರೆ, ಭುವನಂ ಗಗನಂ ಹಾಡು ಬಿಡುಗಡೆ ಮಾಡಿ ಇಡೀ ಸಿನಿತಂಡಕ್ಕೆ ಆಲ್ ದಿ ಬೆಸ್ಟ್ ತಿಳಿಸಿದ್ದಾರೆ. ಭುವನಂ ಗಗನಂ ಎಂದು ಶುರುವಾಗುವ ಹಾಡಿಗೆ ಅನಿರುದ್ಧ ಶಾಸ್ತ್ರೀ ಕ್ಯಾಚಿ ಮ್ಯಾಚಿ ಪದ ಪೊಣಿಸಿದ್ದು, ಅರ್ಮಾನ್ ಮಲ್ಲಿಕ್ ಹಾಗೂ ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದಾರೆ. ಗುಮ್ಮಿನೇನಿ ವಿಜಯ್ ಈ ಮಧುರ ಗೀತೆಗೆ ಟ್ಯೂನ್ ಹಾಕಿದ್ದಾರೆ. ಭುವನಂ ಗಗನಂ ಟೈಟಲ್ ಟ್ರ್ಯಾಕ್‌ನಲ್ಲಿ ಪ್ರಮೋದ್ ಹಾಗೂ ರೆಚೆಲ್ ಡೇವಿಡ್ ಜೋಡಿಯ ಕೆಮಿಸ್ಟ್ರಿ ನೋಡುಗರಿಗೆ ಇಷ್ಟವಾಗುತ್ತದೆ.

ಇದನ್ನೂ ಓದಿ: Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ

ಗಿರೀಶ್ ಮೂಲಿಮನಿ ಭುವನಂ ಗಗನಂ ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದು, ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಇದೀಗ ಭುವನಂ ಗಗನಂ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ. ಮುನೇಗೌಡ ತಮ್ಮದೇ ಎಸ್‌ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂಗೆ ಹಣ ಹಾಕಿದ್ದಾರೆ.

ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್‌ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಪ್ರಚಾರ ಅಖಾಡಕ್ಕೆ ಇಳಿದಿರುವ ಚಿತ್ರತಂಡ ಆದಷ್ಟು ಬೇಗ ಭುವನಂ ಗಗನಂ ಸಿನಿಮಾ ತೆರೆಗೆ ತರಲಿದೆ.

Continue Reading
Advertisement
Bomb Threat
ಕ್ರೈಂ11 mins ago

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Actor Darshan
ಬೆಂಗಳೂರು31 mins ago

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

Karwar Jail
ಕ್ರೈಂ39 mins ago

Karwar Jail: ನಟ ದರ್ಶನ್‌ಗೆ ಐಷಾರಾಮಿ ಸವಲತ್ತು! ಕಾರವಾರ ಜೈಲಿನಲ್ಲಿ ತಂಬಾಕಿಗೆ ಬೇಡಿಕೆ ಇಟ್ಟ ಖೈದಿಗಳಿಂದ ಗಲಾಟೆ

Shalini Rajaneesh
ಫ್ಯಾಷನ್44 mins ago

Shalini Rajaneesh: ಸೀರೆ, ಹಣೆಗೆ ಅಗಲವಾದ ರೆಡ್ ಬಿಂದಿ ಎಂದಿಗೂ ಬದಲಾಗದ ನನ್ನ ಯೂನಿಕ್ ಫ್ಯಾಷನ್ ಸ್ಟೇಟ್ಮೆಂಟ್!

karnataka Weather Forecast
ಮಳೆ48 mins ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Namratha Gowda
ಕಿರುತೆರೆ1 hour ago

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

DK Shivakumar
ರಾಜಕೀಯ2 hours ago

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Viral News
ವೈರಲ್ ನ್ಯೂಸ್2 hours ago

Viral News: ಯುಪಿ ಸರ್ಕಾರದ ಆಫರ್‌; ಇದು ಕಾನೂನುಬದ್ಧ ಲಂಚ ಎಂದು ಪರ-ವಿರೋಧದ ಜಗಳಕ್ಕಿಳಿದ ಯೂಟ್ಯೂಬರ್ಸ್‌

Finance Commission Meeting
ಬೆಂಗಳೂರು3 hours ago

Finance Commission Meeting: 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು ರೂ.79770 ಕೋಟಿ ನಷ್ಟ: ಸಿದ್ದರಾಮಯ್ಯ

Muda scam CM gets temporary relief Hearing adjourned to August 31
ಬೆಂಗಳೂರು3 hours ago

CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್9 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌