Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ - Vistara News

ಹಾಸನ

Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

Prajwal Revanna Case : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ್ಯಾ. ಎಂ. ನಾಗಪ್ರಸನ್ನರವರ ಹೈಕೋರ್ಟ್ ಪೀಠ ಸೆ.5ಕ್ಕೆ ಮುಂದೂಡಿದೆ.

VISTARANEWS.COM


on

Prajwal Revannas anticipatory bail plea adjourned to September 5
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ಹೈಕೋರ್ಟ್ ಮುಂದೂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಮುಂದೂಡಿದೆ.

ಇನ್ನು ಇದೇ ವೇಳೆ ಹೈಕೋರ್ಟ್‌ಗೆ ಎಸ್‌ಪಿಪಿ ರವಿವರ್ಮ ಕುಮಾರ್ ಸಂತ್ರಸ್ತೆಯ ಗುರುತು ಮರೆಮಾಚಲು ಇನ್ ಕ್ಯಾಮೆರಾ ವಿಚಾರಣೆಗೆ ಮನವಿ ಮಾಡಿದ್ದರು. ಇನ್ ಕ್ಯಾಮರಾ ವಿಚಾರಣೆ ಅಂದರೆ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸುವುದಾಗಿದೆ. ಇನ್ನೂ ಇನ್‌ ಕ್ಯಾಮೆರಾ ವಿಚಾರಣೆ ಕುರಿತು ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ನ್ಯಾ. ಎಂ.ನಾಗಪ್ರಸನ್ನರವರ ಹೈಕೋರ್ಟ್ ಪೀಠ ಪ್ರತಿಕ್ರಿಯಿಸಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ: Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿತ್ತು.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್ 29ಕ್ಕೆ ಇತ್ತೀಚೆಗೆ ಮುಂದೂಡಿತ್ತು.

ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ನಾಲ್ಕನೇ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಇದಕ್ಕೂ ಮೊದಲು ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿತ್ತು. ಜುಲೈ 24ರಂದು ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿತ್ತು. ಇದರಿಂದ ನಾಲ್ಕನೇ ಕೇಸ್‌ನಲ್ಲಿಯೂ ಪ್ರಜ್ವಲ್‌ಗೆ ಹಿನ್ನಡೆಯಾಗಿತ್ತು. ಇದೀಗ ಐದನೇ ಬಾರಿಯೂ ಪ್ರಜ್ವಲ್‌ಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ.

ಏನಿದು ಪ್ರಕರಣ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Karnataka Weather Forecast : ಗುರುವಾರ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ (Rain News) ಜನರು ಪರದಾಡಿದರು. ಉಡುಪಿ ಜಿಲ್ಲೆಯ ಮೀನುಗಾರರಿಗೂ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಉಡುಪಿ: ಪೂರ್ವ ಅರಬ್ಬೀ ಸಮುದ್ರದಲ್ಲಿ ಟ್ರಫ್ ಎದ್ದಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ.ಇದರ ಪ್ರಭಾವದಿಂದಾಗಿ ಗುರುವಾರ ರಾಜ್ಯದ ಹಲವೆಡೆ ಮಳೆ (Rain News) ಅಬ್ಬರಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆಯು ಗುರುವಾರ (Karnataka Weather Forecast) ಗರ್ಜಿಸಿತ್ತು.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೋಡ ಕವಿದು ಗುಡುಗು ಸಹಿತ ಭರ್ಜರಿ ಮಳೆಯಾಗಿತ್ತು. ದಿಢೀರ್‌ ಮಳೆಗೆ ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ, ಮೆಜೆಸ್ಟಿಕ್‌, ಶಿವಾಜಿನಗರ, ವಿಧಾನಸೌಧ ಸೇರಿದಂತೆ ಹಲವೆಡೆ ಮಳೆಯಾಗಿದೆ.

ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಿ, ಬಸ್ ನಿಲ್ದಾಣವನ್ನು ಆಶ್ರಯ ಪಡೆದರು. ಕೆಲವೆಡೆ ರಸ್ತೆ ಮೇಲೆ ನೀರು ನಿಂತ ಕಾರಣ ಸವಾರರು ಸಂಕಷ್ಟ ಎದುರಿಸಿದರು. ಫ್ರೀಡಂ ಪಾರ್ಕ್‌ನಿಂದ ಆನಂದ್‌ ರಾವ್ ಸರ್ಕಲ್‌ಗೆ ಸಂಪರ್ಕಿಸುವ ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಲೋಕಾಯುಕ್ತ ಕಚೇರಿಯ ಮುಂಭಾಗ ಸಂಪೂರ್ಣ ಕೆರೆಯಂತಾಗಿತ್ತು. ಮಳೆ ನೀರಲ್ಲಿ ರಸ್ತೆ ದಾಟಲು ಜನರು ಪರದಾಡಿದರು.

ಇನ್ನು ಬೆಂಗಳೂರಿನಲ್ಲಿ ಭಾರಿ ಮಳೆಗೆ ಚಿಕ್ಕಪೇಟೆಯಲ್ಲಿರುವ ಸುಲ್ತಾನ್ ಪೇಟೆ ಜಲಾವೃತಗೊಂಡಿತ್ತು. ಜವಳಿ ಅಂಗಡಿಗಳ ಪ್ರಮುಖ ಕೇಂದ್ರವಾಗಿರುವ ಸುಲ್ತಾನ್ ಪೇಟೆಯ ಬಹುತೇಕ ಗಲ್ಲಿಗಳಿಗೆ, ಅಂಗಡಿಗಳಿಗೂ ಮೋರಿ ನೀರು ನುಗ್ಗಿತ್ತು. ನೀರು ತೆರವು ಮಾಡಲು ಅಂಗಡಿ ಸಿಬ್ಬಂದಿ ಪರದಾಡಿದರು.

ಇದನ್ನೂ ಓದಿ: CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಮುಂದಿನ ಐದು ದಿನಗಳಿಗೆ ಮಳೆ ಅಲರ್ಟ್

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆಗಸ್ಟ್ 29 ರಿಂದ ಆಗಸ್ಟ್ 31ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 29 ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ ಆಗಸ್ಟ್ 29ರಿಂದ ಸೆಪ್ಟೆಂಬರ್1ರ ವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ

ಕರಾವಳಿಯ ಉಡುಪಿಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ನೀಡಲಾಗಿದೆ. ಗಾಳಿ ಜತೆಗೆ ಮಳೆಯಾಗಲಿದ್ದು, ಕಡಲಿಗಿಳಿಯುವ ಮೀನುಗಾರರಿಗೆ ಎಚ್ಚರಿಕೆ ಸಂದೇಶ ನೀಡಿದೆ. ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ ನೀಡಿದೆ. ಹವಾಮಾನ ಇಲಾಖೆ ಮನ್ಸೂಚನೆ ಮೇರೆಗೆ ಕೆಲ ಬೋಟ್‌ಗಳು ವಾಪಸ್ ಆಗಿವೆ. ಐಎಂಡಿ ಆಗಸ್ಟ್ 30 ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಆಗಸ್ಟ್ 31 ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

DK Shivakumar: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ. ಶಿವಕುಮಾರ್‌

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

DK Shivakumar
Koo

ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಕೇಳಿದಾಗ “ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ” ಎಂದು ತಿಳಿಸಿದರು.

ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇದನ್ನೂ ಓದಿ: Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಮೇಲೆ ದೂರು ದಾಖಲಾಗಿರುವ ಬಗ್ಗೆ ಕೇಳಿದಾಗ ” ಸಿಎಂ ಏನು ಮಾಡಿದ್ದಾರೆ ಎಂದು ಅವರ ಮೇಲೆ ಎಲ್ಲಾ ಏಕೆ ಮುಗಿಬೀಳುತ್ತಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಆಗುವುದಿಲ್ಲ. ಜಮೀನು ಕಳೆದುಕೊಂಡಿರುವುದಕ್ಕೆ ಪರಿಹಾರವಾಗಿ ಬಿಜೆಪಿಯವರೇ ನಿವೇಶನ ನೀಡಿದ್ದಾರೆ. ಸಿಎಂ ಅವರು ಎಲ್ಲೂ ಪ್ರಭಾವವನ್ನು ಬೀರಿಲ್ಲ, ಸಹಿಯನ್ನು ಮಾಡಿಲ್ಲ ಎಂದರು.

ನಕಲಿಗಲ್ಲ ಅಸಲಿಗೆ ಉತ್ತರ ಕೊಡುತ್ತೇನೆ

ಜಮೀನನ್ನು ಡೀನೋಟಿಫಿಕೇಶನ್ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ” ನಕಲಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಅಸಲಿಗೆ ಮಾತ್ರ ಉತ್ತರ ಕೊಡುತ್ತೇನೆ” ಎಂದು ತಿರುಗೇಟು ನೀಡಿದರು.

75 ಲಕ್ಷ ಜನರಿಗೆ ಎತ್ತಿನಹೊಳೆ ಯೋಜನೆಯಿಂದ ಅನುಕೂಲ

ಬುಧವಾರ ಸಂಜೆ ಎತ್ತಿನಹೊಳೆ ಏತ ನೀರಾವರಿಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗಿದೆ. ಈ ಯೋಜನೆಯಿಂದ ತುಮಕೂರು, ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರದ ಸ್ವಲ್ಪ ಭಾಗ ಸೇರಿದಂತೆ ಏಳು ಜಿಲ್ಲೆಗಳ 75 ಲಕ್ಷ ಜನರಿಗೆ ಉಪಯೋಗವಾಗುತ್ತದೆ. ಪ್ರಸ್ತುತ 550 ಕ್ಯೂಸೆಕ್ಸ್ ನೀರನ್ನು ಪಂಪ್ ಮಾಡಲಾಗುತ್ತಿದೆ. ಇದರ ಆರು ಪಟ್ಟು ನೀರನ್ನು ಪಂಪ್ ಮಾಡಲಾಗುವುದು. ಪ್ರಸ್ತುತ ಮೇಲೆತ್ತಿರುವ ನೀರನ್ನು ವಾಣಿವಿಲಾಸ (ಮಾರಿಕಣಿವೆ) ಸಾಗರಕ್ಕೆ ಹರಿಸಲಾಗುತ್ತಿದೆ. ಮಳೆಗಾಲ ಮುಗಿಯುವ ಹೊತ್ತಿಗೆ ಒಂದಷ್ಟು ನೀರನ್ನು ಎತ್ತಬೇಕಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದರು.

ಅಲ್ಲಲ್ಲಿ ಅರಣ್ಯ ಇಲಾಖೆಯ ಭೂಮಿಯ ಸ್ವಾಧೀನ ತೊಂದರೆ ಇದೆ. ಅದನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ಈಗಾಗಲೇ ಅನೇಕ ಕಡೆ ಅರಣ್ಯ ಇಲಾಖೆಗೆ ಬದಲಿ ಭೂಮಿ ನೀಡಲಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಮಹತ್ವಕಾಂಕ್ಷಿಯ ಕಾರ್ಯಕ್ರಮ ಇದಾಗಿದ್ದು. ಇದಕ್ಕೆ ಸಂಬಂಧಪಟ್ಟ ಎಲ್ಲಾ ಜಿಲ್ಲೆಯ ಶಾಸಕರನ್ನು, ಜನಪ್ರತಿನಿಧಿಗಳನ್ನು ಕರೆದು ಉದ್ಘಾಟನೆ ಮಾಡಲಾಗುವುದು. ಸಾವಿರಾರು ಜನರು ಬಂದು ವೀಕ್ಷಣೆ ಮಾಡುವಂತೆ ಉದ್ಘಾಟನಾ ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲರೂ ಒಂದೇ ಕಡೆಗೆ ಬಂದು ಉದ್ಘಾಟನೆ ಮಾಡುವ ಬದಲು ಪ್ರಮುಖವಾದ ಸ್ಥಳಗಳಲ್ಲಿ ಚಾಲನೆ ನೀಡುವಂತೆ ಕಾರ್ಯಕ್ರಮ ಮಾಡಲಾಗುವುದು. ಈ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಬಿತ್ತರಗೊಳ್ಳುವಂತೆ ನೋಡಿಕೊಳ್ಳಲಾಗುವುದು. ಈ ಯೋಜನೆ ಬಗ್ಗೆ ಸಾಕಷ್ಟು ಜನ ಟೀಕೆ ಮಾಡಿದರು. ಆದರೆ ಇಂದು, ಟೀಕೆಗಳು ಸತ್ತಿವೆ ಕೆಲಸ ಮಾತ್ರ ಉಳಿದಿದೆ. ಈ ಯೋಜನೆಗೆ ಸಹಕಾರ ನೀಡಿದ ಎಲ್ಲಾ ಇಲಾಖೆ ಹಾಗೂ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದರು.

ಮಣ್ಣು ಅಗೆಯುವ ಕಾರ್ಮಿಕನಿಂದ ಹಿಡಿದು ಎಂಜಿನಿಯರ್‌ಗಳ ತನಕ ಉತ್ತಮ ಕೆಲಸ ಮಾಡಿದ್ದಾರೆ. ಸುಮಾರು ಒಂದುವರೆ ಕಿಲೋಮೀಟರ್ ದೂರ ಸುರಂಗ ಮಾರ್ಗದ ಮೂಲಕವೇ ನೀರು ಹೋಗುತ್ತಿದೆ. ರೈತರು ತಮ್ಮ ಭೂಮಿಯನ್ನು ಕೊಟ್ಟು ಸಹಕಾರ ನೀಡಿದ್ದಾರೆ. ನಾವು ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಬೇಕು. ಮುಖ್ಯಮಂತ್ರಿಗಳ ಬಳಿ ಮಾತನಾಡಿ ಉದ್ಘಾಟನಾ ದಿನಾಂಕವನ್ನು ಅಂತಿಮ ಮಾಡಲಾಗುವುದು ಎಂದು ಹೇಳಿದರು.

ಬುಧವಾರ ಸಂಜೆ ಕತ್ತಲಲ್ಲಿ ವೀಕ್ಷಣೆ ಮಾಡಿದ ಕಾರಣ ಸರಿಯಾಗಿ ಗಮನಿಸಲು ಆಗಿರಲಿಲ್ಲ. ಆದ ಕಾರಣ ಇಲ್ಲಿಯೇ ಉಳಿದುಕೊಂಡು ಮತ್ತೊಮ್ಮೆ ವೀಕ್ಷಣೆ ಮಾಡಿದೆ. ಅಧಿಕಾರಿಗಳಿಗೆ ಒಂದಷ್ಟು ಮಾರ್ಗದರ್ಶನ ನೀಡಿದೆ. ಉದ್ಘಾಟನಾ ಸ್ವರೂಪ, ಎಲ್ಲಿ ಉದ್ಘಾಟನೆ ಮಾಡಬೇಕು ಎಂಬುದನ್ನೂ ಚರ್ಚೆ ಮಾಡಲಾಯಿತು ಎಂದು ತಿಳಿಸಿದರು.

ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಸಂಜೆ ತೀರ್ಪು ಪ್ರಕಟ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ, ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಸಂಜೆ 4.30 ಕ್ಕೆ ಹೈಕೋರ್ಟ್ ವಿಭಾಗೀಯ ಪೀಠವು  ತೀರ್ಪು ಪ್ರಕಟಿಸಲಿದೆ.

ಇದನ್ನೂ ಓದಿ: Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

ಡಿಕೆ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಸರ್ಕಾರದ ಪರ ಕಪಿಲ್ ಸಿಬಲ್ ವಾದ ಮಂಡಿಸಿದರು. ಯತ್ನಾಳ್ ಪರ ಹಿರಿಯ ವೆಂಕಟೇಶ ದಳವಾಯಿ ವಾದ ಮಂಡಿಸಿದರು. ಸಿಬಿಐ ಪರ ಹಿರಿಯ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿದರು.

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

karnataka Weather Forecast : ಇಂದು ರಾಜಧಾನಿ ಬೆಂಗಳೂರಿನಲ್ಲಿ ಘಳಿಗೆಗೊಂದು ವಾತಾವರಣ ಇರಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ (Rain News) ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕೋಲಾರ-ಬೆಳಗಾವಿಯಲ್ಲಿ ಮಳೆ ಅಬ್ಬರ

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಾದ ಧಾರವಾಡ, ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಬಿಸಿಲಿನ ಜತೆಗೆ ಮೋಡ ಕವಿದ ವಾತಾವರಣ ಇರಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Karnataka Weather Forecast : ಉತ್ತರಕನ್ನಡದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಘಟ್ಟಪ್ರದೇಶದಲ್ಲಿ ಮಳೆ ಅಬ್ಬರಕ್ಕೆ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್ ಆಗಿದೆ. ದಾವಣಗೆರೆಯಲ್ಲಿ ತುಂಗಾ ನಾಲೆ ಒಡೆದು ಸಾವಿರಾರು ಎಕರೆ ಬೆಳೆ ನಾಶವಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರಾವಳಿಯ ಉತ್ತರಕನ್ನಡದಲ್ಲಿ ನಿರಂತರ ಮಳೆಯಿಂದಾಗಿ (Karnataka Weather Forecast) ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು (Rain News) ಗಂಭೀರಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಹೊನ್ನಿಕೊಪ್ಪದಲ್ಲಿ ಘಟನೆ ನಡೆದಿದೆ. ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಪಕ್ಕದ ಮನೆಯ ಸಾತವ್ವ ಭೀಮಣ್ಣ(50) ಎಂಬುವವರಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ‌ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕಂದಾಯ ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್

ಚಿಕ್ಕೋಡಿ: ಮಹಾರಾಷ್ಟ್ರ ಹಾಗೂ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿದ್ದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಎರಡನೇ ಬಾರಿಗೆ ಕುಡಚಿ ಉಗಾರಖುರ್ದ್ ಮಧ್ಯದ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಸೇತುವೆ ಇದಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂಪರ್ಕ ಕೊಂಡಿಯಾಗಿರೋ ಸೇತುವೆಯಲ್ಲಿ ನಿತ್ಯ ನೂರಾರು ಬಸ್ ಹಾಗೂ ವಾಹನಗಳು ಓಡಾಡುವ ಪ್ರಮುಖ ರಾಜ್ಯ ಹೆದ್ದಾರಿ ಇದಾಗಿದೆ. ಬಾಗಲಕೋಟೆ, ಜಮಖಂಡಿಯಿಂದ ಮಹಾರಾಷ್ಟ್ರಕ್ಕೆ ಸಂಪರ್ಕಿಸಲಿದೆ. ಕುಡಚಿ ಠಾಣಾ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಸೇತುವೆಗೆ ಬ್ಯಾರಿಕೇಡ್‌ ಅಳವಡಿಸಿದ್ದಾರೆ.

ಯಲ್ಲಮ್ಮ ದೇವಸ್ಥಾನ ಜಲಾವೃತ

ಮಹಾರಾಷ್ಟ್ರದ ಪುಣೆಯಲ್ಲಿ ಭಾರಿ ‌ಮಳೆಯಿಂದಾಗಿ ಮಹಾರಾಷ್ಟ್ರದ ಮೀರ್ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ಯಲ್ಲಮ್ಮ ದೇವಸ್ಥಾನ ಜಲಾವೃತಗೊಂಡಿದೆ. ಸೊನ್ನ ಬ್ಯಾರೆಜ್‌ನಿಂದ ಭೀಮಾನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

ಇತ್ತ ಮಹಾರಾಷ್ಟ್ರದ ಮಹಾಮಳೆಗೆ ಭೀಮಾನದಿಗೆ ನೀರಿನ ಒಳಹರಿವು ಹೆಚ್ಚಳಗೊಂಡಿದೆ. ಭೀಮಾ ನದಿ ಒಡಲು ಅಪಾಯದ ಮಟ್ಟ ಮೀರಿ ಉಕ್ಕಿಹರಿಯುತ್ತಿದೆ. ಭೀಮಾನದಿಗೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಭೀಮಾ ನದಿ ತೀರದ ದೇಗುಲಗಳು ಜಲಾವೃತಗೊಂಡಿದೆ. ವಿರಾಂಜನೇಯ ಹಾಗೂ ಕಂಗಳೇಶ್ವರ ಎರಡು ದೇವಾಲಯಗಳು ಮುಳುಗಡೆಯಾಗಿದೆ. ಇತ್ತ ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದರೂ ಜಿಲ್ಲಾಡಳಿತದ ಆದೇಶಕ್ಕೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಬ್ಯಾರೇಜ್ ಮುಂಭಾಗದ ಭೀಮಾ ನದಿ ತೀರದಲ್ಲಿಯೇ ಮೀನು ಹಿಡಿಯುವ ಹುಚ್ಚು ಸಾಹಸ ಮಾಡುತ್ತಿದ್ದಾರೆ.

ದಾವಣಗೆರೆಯಲ್ಲಿ ತುಂಗಾ ನಾಲೆ ಒಡೆದು ಸಾವಿರಾರು ಎಕರೆ ಬೆಳೆ ನಾಶ

ದಾವಣಗೆರೆಯಲ್ಲಿ ತುಂಗಾ ನಾಲೆ ಒಡೆದು ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಬೆಳೆ ನೀರು ಪಾಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಕಳೆದುಕೊಂಡ ರೈತರು ಆತಂಕದಲ್ಲಿದ್ದಾರೆ. ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿನ ತುಂಗಾ ಕಾಲುವೆ ಒಡೆದ ಪರಿಣಾಮ ಬೆಳೆಗಳು ಜಲಾವೃತಗೊಂಡಿದೆ. ತುಂಗಾ ಮೇಲ್ದಂಡೆ ನಾಲೆ ಒಡೆದು ಸಾವಿರಾರು ಎಕರೆ ಜಮೀನು ಜಲಾವೃತ ಪರಿಣಾಮ ರೈತರಲ್ಲಿ ಆತಂಕ ಹೆಚ್ಚಿದೆ. ಮಣ್ಣು ಸಮೇತ ಜಮೀನುಗಳಿಗೆ ಕಾಲುವೆ ನೀರು ನುಗ್ಗಿ, ಅಡಿಕೆ, ತೆಂಗು, ಭತ್ತ, ಹತ್ತಿ ಸೇರಿದಂತೆ ಅನೇಕ ತರಕಾರಿ ಬೆಳೆ ಕಳೆದುಕೊಂಡಿದ್ದಾರೆ.

ಕರಾವಳಿಗೆ ಭಾರಿ ಮಳೆ ಎಚ್ಚರಿಕೆ

ಆಗಸ್ಟ್‌ 29ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಸಂಭವಿಸುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಬರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bomb Threat
ಕ್ರೈಂ11 mins ago

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Actor Darshan
ಬೆಂಗಳೂರು32 mins ago

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

Karwar Jail
ಕ್ರೈಂ40 mins ago

Karwar Jail: ನಟ ದರ್ಶನ್‌ಗೆ ಐಷಾರಾಮಿ ಸವಲತ್ತು! ಕಾರವಾರ ಜೈಲಿನಲ್ಲಿ ತಂಬಾಕಿಗೆ ಬೇಡಿಕೆ ಇಟ್ಟ ಖೈದಿಗಳಿಂದ ಗಲಾಟೆ

Shalini Rajaneesh
ಫ್ಯಾಷನ್44 mins ago

Shalini Rajaneesh: ಸೀರೆ, ಹಣೆಗೆ ಅಗಲವಾದ ರೆಡ್ ಬಿಂದಿ ಎಂದಿಗೂ ಬದಲಾಗದ ನನ್ನ ಯೂನಿಕ್ ಫ್ಯಾಷನ್ ಸ್ಟೇಟ್ಮೆಂಟ್!

karnataka Weather Forecast
ಮಳೆ49 mins ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Namratha Gowda
ಕಿರುತೆರೆ1 hour ago

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

DK Shivakumar
ರಾಜಕೀಯ2 hours ago

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Viral News
ವೈರಲ್ ನ್ಯೂಸ್2 hours ago

Viral News: ಯುಪಿ ಸರ್ಕಾರದ ಆಫರ್‌; ಇದು ಕಾನೂನುಬದ್ಧ ಲಂಚ ಎಂದು ಪರ-ವಿರೋಧದ ಜಗಳಕ್ಕಿಳಿದ ಯೂಟ್ಯೂಬರ್ಸ್‌

Finance Commission Meeting
ಬೆಂಗಳೂರು3 hours ago

Finance Commission Meeting: 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು ರೂ.79770 ಕೋಟಿ ನಷ್ಟ: ಸಿದ್ದರಾಮಯ್ಯ

Muda scam CM gets temporary relief Hearing adjourned to August 31
ಬೆಂಗಳೂರು3 hours ago

CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್9 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌