DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್ - Vistara News

ರಾಜಕೀಯ

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮತಿ ನೀಡಲಾಗಿತ್ತು. ಆದರೆ ಹಾಲಿ ಕಾಂಗ್ರೆಸ್ ಸರ್ಕಾರವು ಇದನ್ನು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಸಿಬಿಐ ರಿಟ್‌ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಗುರುವಾರ (ಆ.29) ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಪೀಠವು ಎರಡು ಕಡೆಯ ವಕೀಲರಿಂದ ವಾದ-ಪ್ರತಿವಾದ ಆಲಿಸಲಾಗಿದೆ. ಪಿಸಿ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಲಾಗಿತ್ತು. ಇದು ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಸುವುದು ಸೂಕ್ತ. ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದ ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಉಮೇಶ್ ಎಂ.ಅಡಿಗ ಅವರ ಪೀಠ ತೀರ್ಪು ನೀಡಿದೆ. ಇದರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್‌ ಸಿಕ್ಕಿದೆ.

ಇನ್ನು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಾವು ಶ್ರಮ ಪಟ್ಟು ರಾಜಕಾರಣ ಮಾಡುತ್ತಿದ್ದೇವೆ. ಬಿಜೆಪಿ ನಾಯಕರ ಮೇಲೆ ಸಾವಿರಾರು ಕೇಸ್ ಇವೆ. ಯಾವುದನ್ನು ಕೂಡ ತನಿಖೆ ಮಾಡುತ್ತಿಲ್ಲ. ಲೋಕಾಯುಕ್ತ ಕೋರ್ಟ್‌ನಲ್ಲೂ ಕೂಡ ಇವೆ. ಈ ಹಿಂದೆ ಕೇಸ್ ಹಾಕಿ ನನ್ನ ಜೈಲಿಗೆ ಕಳುಹಿಸಿದ್ದರು. ನಾನು ಏನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತೆ ಎಂದು ಅವತ್ತೆ ಹೇಳಿದ್ದೆ, ಇವತ್ತು ಹೇಳುತ್ತೇನೆ. ಸಿಬಿಐಗೆ ಕೊಟ್ಟಿದ್ದು ಸರಿಯಲ್ಲ, ಸಿಬಿಐ ಅರ್ಧ ತನಿಖೆ ಮಾಡಿದ್ದೇವೆ ಎಂದು ಹೇಳಿದರು. ಆದರೆ ಯಾವುದೇ ತನಿಖೆ ಮಾಡಿರಲಿಲ್ಲ. ನಾವು ನ್ಯಾಯುತವಾಗಿ ಆಸ್ತಿ ಮಾಡಿದ್ದೇವೆ. ಯಾರಿಗೂ ತೊಂದರೆ ಕೊಟ್ಟಿಲ್ಲ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

CM Siddaramaiah : ಮುಡಾ ಸಂಕಷ್ಟದಿಂದ (MUDA Scam) ಪಾರಾಗಲು ಸಿಎಂ ಸಿದ್ದರಾಮಯ್ಯ ಘಟಾನುಘಟಿ ವಕೀಲರನ್ನು ಮುಂದಿಟ್ಟುಕೊಂಡು ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ. ಗುರುವಾರ ಹೈಕೋರ್ಟ್‌ನಲ್ಲಿ ಹೈ ವೋಲ್ಟೇಜ್‌ ಲೀಗಲ್‌ ಫೈಟ್‌ ಹೇಗಿತ್ತು? ಇಲ್ಲಿದೆ ಸಂಪೂರ್ಣ ಮಾಹಿತಿ..

VISTARANEWS.COM


on

By

Muda scam CM gets temporary relief Hearing adjourned to August 31
Koo

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ (High Court) ಗುರುವಾರ (ಆ.29) ನಡೆದಿದೆ. ಸುದೀರ್ಘ ಎರಡೂವರೆ ಗಂಟೆ ಕಾಲ ಸಿಎಂ ಪರ ವಕೀಲ ವಾದ ಮಂಡಿಸಿದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.31 ಶನಿವಾರ ಬೆಳಗ್ಗೆ 11:30ಕ್ಕೆ ಮುಂದೂಡಿದರು. ಜತೆಗೆ ಶನಿವಾರದವರೆಗೂ ಕೆಳ ನ್ಯಾಯಾಲಯ ವಿಚಾರಣೆಗೂ ತಡೆನೀಡಿದ್ದರು.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ಇನ್ನು ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಡಿಯೊ ಕಾನ್ಫರೆನ್ಸ್ ಮುಖಾಂತರ ಹಾಜರಾಗಬೇಕಿತ್ತು. ಆದರೆ ಅವರು ಗೈರಾಗಿದ್ದರು.

ಸಿಎಂ ಪರ ಅಭಿಷೇಕ್‌ ಸಿಂಘ್ವಿ ಮಾತಿನ ಚಾಟಿ ಹೇಗಿತ್ತು?

ರಾಜ್ಯಪಾಲರು ಮೊದಲು ದೂರುದಾರನಿಗೆ ದಂಡ ಹಾಕಬೇಕು. ದೂರುದಾರ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವ ಮೊದಲೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೋಗಿದ್ದಾರೆ. ಲೋಕಾಯುಕ್ತ ಪೊಲೀಸರಿಗೂ ದೂರು ಕೊಟ್ಟಿದ್ದಾರೆ. ಸಮಯ ವ್ಯರ್ಥ ಮಾಡಿರುವ ದೂರದಾರನಿಗೆ ಮೊದಲು ದಂಡ ಹಾಕಬೇಕಾಗಿತ್ತು. ನಾನು ಲೋಕಾಯುಕ್ತ ಹಾಗೂ ರಾಜ್ಯಪಾಲರನ್ನು ದೋಷಣೆ ಮಾಡಲ್ಲ. ದೂರು ಕೊಟ್ಟಿದ್ದು ಇವರು, ಪ್ರಾಸಿಕ್ಯೂಷನ್‌ ಅನುಮತಿ ಕೇಳಿದ್ದರು. ಆ ಅರ್ಜಿ ರಾಜ್ಯಪಾಲರ ಬಳಿ ಇರಬೇಕಾದರೆ ಕೆಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರಿಗೆ ದಂಡ ಹಾಕುವ ಅಧಿಕಾರ ಇಲ್ಲ, ಮಾನ್ಯ ನ್ಯಾಯಮೂರ್ತಿಗಳು ದಂಡ ಹಾಕಬೇಕು ಎಂದರು.

ಎರಡು ಕಡೆ ಹೇಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರು ದೂರುದಾರರನ್ನು ಪರಿಶೀಲನೆ ಮಾಡಬೇಕು. ಸೀರಿಯಸ್‌ನೆಸ್‌ ಇಲ್ಲದಿದ್ದರೆ ದಾರಿಹೋಕರು ಕೂಡ ಅರ್ಜಿ ಕೊಡುತ್ತಾರೆ. ಅದಕ್ಕೆ ರಾಜ್ಯಪಾಲರು ಸೀರಿಯಸ್ ಆಗಿ ಇರಬೇಕೆಂದು ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಮಾತಿನ ಚಾಟಿ ಬೀಸಿದರು. ಈ ವೇಳೆ ದೂರುದಾರರ ಪರ ವಕೀಲ ಅಬ್ರಹಾಂ ಮಧ್ಯೆ ಪ್ರವೇಶಿಸಿ ಪ್ರಾಸಿಕ್ಯೂಷನ್‌ಗೆ ಮೊದಲು ಅರ್ಜಿ ಹಾಕಿದ್ದು ಎಂದು ಸಮರ್ಥನೆ ಕೊಟ್ಟರು. ಆಗ ಅಭಿಷೇಕ್‌ ಸಿಂಘ್ವಿ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್‌ಗೆ (Prosecution) ಅರ್ಜಿ ಸಲ್ಲಿಸಿದ್ದು ಒಬ್ಬರು, ಆದರೆ ಮೂವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದರು.

ಬಳಿಕ ಅಭಿಷೇಕ್‌ ಸಿಂಘ್ವಿ, ಸಾಯಿಕೃಷ್ಣ ಕನ್ನಡದಲ್ಲಿ ಬರೆದ ದೂರನ್ನು ನನ್ನ ಸ್ನೇಹಿತ ರವಿ ವರ್ಮಕುಮಾರ್ ಓದುತ್ತಾರೆ. ನನಗೆ ಕನ್ನಡ ಓದಲು ಬರುವುದಿಲ್ಲ ಎಂದರು. ಆನಂತರ ಕನ್ನಡದಲ್ಲಿ ಬರೆದ ಅರ್ಜಿಯನ್ನು ರವಿ ಓದಿದರು. ಪ್ರಾಸಿಕ್ಯೂಷನ್‌ ಕೊಡುವಾಗ ರಾಜ್ಯಪಾಲರು ಅರ್ಜಿ ಪರಿಶೀಲನೆ ಮಾಡಿಲ್ಲ. ಅದರ ಮೇಲೆ ಶೋಕಾಸ್ ಮಾಡಿಲ್ಲ, ಇದು ರಾಜ್ಯಪಾಲರಿಗೆ ಅಪ್ಲಿಕೇಷನ್ ಆಫ್ ಮೈಂಡ್ ಇಲ್ಲ ಅನ್ನೋದನ್ನು ತೋರಿಸುತ್ತೆ. 31 ಜುಲೈ ದೂರು ಮಾತ್ರ ನಮ್ಮ ಗಮನಕ್ಕೆ ಬಂತು, ಅದಕ್ಕೂ ಮೊದಲು ಬಂದ ದೂರುಗಳು ಯಾಕೆ ನಮ್ಮ ಗಮನಕ್ಕೆ ಬರಲಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತೆ ಎಂದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

ಮಧ್ಯೆ ಪ್ರವೇಶಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ 17-A ಅನುಮತಿ ಕೊಡುವಾಗ ಪ್ರೊಸಿಜರ್‌ ಫಾಲೋ ಮಾಡಬೇಕಾ ಎಂದು ಪ್ರಶ್ನಿಸಿದರು. ಆಗ ಪ್ರತ್ಯುತ್ತರ ನೀಡಿದ ಅಭಿಷೇಕ್‌ ಸಿಂಘ್ವಿ ಖಂಡಿತವಾಗಿಬೇಕು. ಇದು ನ್ಯಾಚುರಲ್ ಜೆಸ್ಟಿಸ್ ನಿಯಮವಾಗಿದೆ. ಆರ್ಟಿಕಲ್ 14 ಅಡಿಯಲ್ಲಿ ಅವಕಾಶ ಕೊಡಬೇಕು. ಆಡಳಿತದ ಅತಿ ಉನ್ನತ ಸ್ಥಾನದಲ್ಲಿ ಇರುವವರ ಬಗ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಆಗ ನ್ಯಾಚುರಲ್ ಜೆಸ್ಟಿಸ್ ನಿಯಮ ಪಾಲನೆ ಮಾಡಬೇಕು. ಧರ್ಮಪಾಲ್, ಸತ್ಯಪಾಪ್‌ ಕೇಸ್‌ನಲ್ಲಿ ನೈಸರ್ಗಿಕ ಕಾನೂನು ಪಾಲನೆ ಕಡ್ಡಾಯ ಎಂದು ಹೇಳಿದ್ದಾರೆ. ಮೆನಕಾಗಾಂಧಿ ಕೇಸ್‌ನಲ್ಲೂ ನೈಸರ್ಗಿಕ ಕಾನೂನು ಪಾಲನೆ ಕಡ್ಡಾಯ ಎಂದು ಹೇಳಿದ್ದಾರೆ ಎಂದು ಹಲವು ತೀರ್ಪುಗಳ ನಿದರ್ಶನ ನೀಡಿದರು. ಹೀಗಾಗಿ ಇದನ್ನೂ ನಾವು ಪಾಲನೆ ಮಾಡಬೇಕೆಂದರು.

ಮುಂದುವರಿದು, ಪಿಸಿಆರ್ ಸಲ್ಲಿಕೆ ಬಗ್ಗೆ ಎಲ್ಲೂ ದೂರುದಾರರು ಹೇಳಿಲ್ಲ. ಆಕ್ಷೇಪಣೆ ಪತ್ರದಲ್ಲೂ ಇದನ್ನೂ ಹೇಳಿಲ್ಲ. ಆಗಸ್ಟ್ 8ಕ್ಕೆ ಪಿಸಿಆರ್ ಸಲ್ಲಿಕೆ ಮಾಡಿದ್ದರು, ಜುಲೈ 31ಕ್ಕೆ ಪ್ರಾಸಿಕ್ಯೂಷನ್‌ ಕೇಳಿದ ಬಗ್ಗೆ ಎಲ್ಲೂ ಹೇಳಿಲ್ಲ. ರಾಜ್ಯಪಾಲರು ಯಾವುದೇ ಆಕ್ಷೇಪಣೆ ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಎಚ್ ಡಿ ಕುಮಾರಸ್ವಾಮಿ, ನಿರಾಣಿ ವಿರುದ್ಧ ತನಿಖೆ ಮುಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದರೂ ಕೊಡುತ್ತಿಲ್ಲ. ಆದರೆ ಆದರೆ ಇಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದು ಅಭಿಷೇಕ್‌ ಸಿಂಘ್ವಿ ಕೌಂಟರ್‌ ಕೊಟ್ಟರು.

ಈ ಪ್ರಕರಣದಲ್ಲಿ ಒಂದೇ ಒಂದು ಪಾಯಿಂಟ್ ಬಗ್ಗೆ ಸಹ ಕಾನೂನಿನ ಸೂಕ್ಷ್ಮತೆ ಅರಿತಿಲ್ಲ. ಕ್ಯಾಬಿನೆಟ್ ನಿರ್ಣಯ ಪಾಲಿಸಿಲ್ಲ ಎಂದರು. ಈ ವೇಳೆ ನ್ಯಾಯಮೂರ್ತಿ ನಾಗಪ್ರಸನ್ನ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡುವಾಗ ಪರಮಾಧಿಕಾರ ಇರುತ್ತೆ ಅಲ್ಲವೇ? ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದಾಲ್ಲವೇ, ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಬಹುದಲ್ಲವೇ ಎಂದರು. ಇದಕ್ಕೆ ಉತ್ತರಿಸಿದ ಅಭಿಷೇಕ್‌ ಸಿಂಘ್ವಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಾಗ ಮೆರಿಟ್ಸ್, ದಾಖಲೆ ನೋಡಬೇಕು. ಮನ್ಸೂಕ್ ಲಾಲ್ ವಿಠಲ್ ದಾಸ ಕೇಸ್‌ನಲ್ಲಿ ಇದನ್ನೂ ಹೇಳಿದ್ದಾರೆ ಎಂದು ನಿರ್ದಶನ ನೀಡಿದರು. ಸಂವಿಧಾನ ಪೀಠ ಕೊಟ್ಟ ತೀರ್ಪುಗಳನ್ನು ಇದೇ ವೇಳೆ ಉಲ್ಲೇಖ ಮಾಡಿದರು. ರಾಜ್ಯಪಾಲರು ಕೊಟ್ಟ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಬಹುದು ಎಂದರು.

ಅಲ್ಲದೆ, ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಕೇಸ್‌ ಅನ್ನು ಪ್ರಸ್ತಾಪ ಮಾಡಿದರು. ಜನಪ್ರತಿನಿಧಿಗಳಿಂದ ಆಯ್ಕೆ ಆದ ಸರ್ಕಾರದ ನಾಯಕನ ವಿರುದ್ಧ ಪ್ರಾಸಿಕ್ಯೂಷನ್‌ ಕೊಡುವಾಗ ನಿಯಮ ಪಾಲನೆ ಮಾಡಬೇಕು. ಕೊಟ್ಟ ಉತ್ತರವನ್ನು ಟೇಬಲ್ ಕೆಳಗೆ ಹಾಕಿದರೆ ಅದು ನೈಸರ್ಗಿಕ ಕಾನೂನು ಪಾಲನೆ ಆಗಲ್ಲ. ರಾಜ್ಯಪಾಲರ ವಿರುದ್ಧ ಸಹ ಸರ್ಕಾರ ನಿರ್ಣಯ ಮಾಡಬಹುದು. ರಾಜ್ಯಪಾಲರನ್ನು ವಾಪಸ್‌ ಕಳುಹಿಸಬಹುದು. ಆದರೆ ಅದು ನಮ್ಮ ಆಚರಣೆ ಹಾಗೂ ಕಾನೂನಿಗೆ ಮಾರಕವಾಗಲಿದೆ. ಹೀಗಾಗಿ ಸಂಸ್ಥೆಗಳು ಕೆಲಸ ಮಾಡುವಾಗ ಕಾರ್ಯವ್ಯಾಪ್ತಿ ಬಗ್ಗೆ ಸ್ಪಷ್ಟತೆ ಇರಬೇಕು. ಅದರೊಳಗೆ ಕೆಲಸ ಮಾಡಬೇಕು ಎಂದರು. ಪ್ರತಿ ಒಬ್ಬರಿಗೂ ಆರ್ಟಿಕಲ್ 14, 21 ಕೊಡಲೇಬೇಕು. ಅವರ ಮೇಲೆ ಆರೋಪ ಬಂದಾಗ ಅವರ ನಿಲುವು ಹೇಳಲು ಅವಕಾಶ ಕೊಡಬೇಕು. ಎರಡು ಬಾರಿ ಸಿಎಂ ಕಡೆಯಿಂದ ಉತ್ತರ ಬಂದರೂ ಪರಿಗಣಿಸಲಿಲ್ಲ. 218 ಹಾಗೂ 17- A ಕೆಳಗಡೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಲು ಸ್ಪಷ್ಟ ದಾಖಲೆಗಳು ಇರಬೇಕು ಎಂದರು. 55 ಕೋಟಿ ರೂ. ಹಣ ಪಡೆದಿದ್ದಾರೆ ಅಷ್ಟು ನಷ್ಟವಾಗಿದೆ ಎಂದು ಹೇಳಿದ್ದರಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದಾಗ, ಅದು ಆಸ್ತಿ ಮೌಲ್ಯದ ಬಗ್ಗೆ ಹೇಳಿರಬೇಕು, ದೂರಿನಲ್ಲಿ ಎಲ್ಲೂ 17A ಬಗ್ಗೆ ಹೇಳಿಲ್ಲ ಎಂದು ಸಿಎಂ ಪರ ವಕೀಲ ಸಿಂಗ್ವಿ ಉತ್ತರಿಸಿದರು.

ಬಳಿಕ ಸಿಂಗ್ವಿ ಹಾಗೂ ಮೆಹ್ತಾ ಶನಿವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು. ಮತ್ತೊಬ್ಬ ಅರ್ಜಿದಾರ ಹೊಸದಾಗಿ ಸೇರ್ಪಡೆ ಆಗಿದ್ದೇನೆ, ಸಿಎಂ ಕೇಸ್‌ನಲ್ಲಿ ನನ್ನನ್ನು ಪರಿಗಣಿಸಿ ಎಂದು ಮನವಿ ಮಾಡಿದರು. ನ್ಯಾಯಮೂರ್ತಿಗಳು ನೀವು ಯಾರು ಎಂದು ಪ್ರಶ್ನಿಸಿದರು. ಆಗ ಕೆಲವರ ಹಕ್ಕಿಗಾಗಿ ಸಮಸ್ಯೆ ಆಗುತ್ತಿದೆ. ಹೀಗಾಗಿ ನಾನು ಸಹ ಅರ್ಜಿದಾರನಾಗಿ ಸೇರ್ಪೆಯಾಗುತ್ತೇನೆ ಎಂದಾಗ ಜಡ್ಜ್‌ ನಿರಾಕರಿಸಿದರು.

ಅರ್ಧ ಗಂಟೆ ಮೊದಲೆ ಬಂದು ಕುಳಿತಿದ್ದ ಕಾಂಗ್ರೆಸ್‌ ನಾಯಕರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಸಂಬಂಧ ವಿಚಾರಣೆ ಹಿನ್ನೆಲೆಯಲ್ಲಿ ಸಲೀಂ ಅಹಮದ್ ಸೇರಿ ಕೆಲ ಕಾಂಗ್ರೆಸ್‌ ನಾಯಕರು ಕೋರ್ಟ್ ಹಾಲ್‌ಗೆ ಅರ್ಧ ಗಂಟೆ ಮೊದಲೆ ಬಂದು ಕುಳಿತಿದ್ದರು. ಅರ್ಜಿದಾರ ಸ್ನೇಹಮಯಿ‌ಕೃಷ್ಣ ಹಾಗೂ ಅರ್ಜಿದಾರರ ಪರವಾಗಿ ಲಕ್ಷ್ಮಿ‌ಅಯ್ಯಂಗಾರ್, ಪ್ರಭುಲಿಂಗ ನಾವದಗಿ, ರಂಗನಾಥ್ ರೆಡ್ಡಿ ಹಾಜರಾಗಿದ್ದರು. ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಸಹ ಹಾಜರಿದ್ದರು.

ಕೋರ್ಟ್ ಕಲಾಪ ವೀಕ್ಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನಿವಾಸದಿಂದಲೇ ಕೋರ್ಟ್‌ ಕಲಾಪ‌ವನ್ನು ಯೂಟ್ಯೂಬ್ ಮೂಲಕ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು. ಸಿಂಘ್ವಿ ವಾದವನ್ನು ಆಲಿಸಿದರು. ಸಿಎಂಗೆ ಸಚಿವ ಜಮೀರ್ ಅಹ್ಮದ್ ಖಾನ್ ಸಾಥ್‌ ನೀಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

DK Shivakumar: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ. ಶಿವಕುಮಾರ್‌

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

DK Shivakumar
Koo

ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಕೇಳಿದಾಗ “ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ” ಎಂದು ತಿಳಿಸಿದರು.

ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇದನ್ನೂ ಓದಿ: Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಮೇಲೆ ದೂರು ದಾಖಲಾಗಿರುವ ಬಗ್ಗೆ ಕೇಳಿದಾಗ ” ಸಿಎಂ ಏನು ಮಾಡಿದ್ದಾರೆ ಎಂದು ಅವರ ಮೇಲೆ ಎಲ್ಲಾ ಏಕೆ ಮುಗಿಬೀಳುತ್ತಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಆಗುವುದಿಲ್ಲ. ಜಮೀನು ಕಳೆದುಕೊಂಡಿರುವುದಕ್ಕೆ ಪರಿಹಾರವಾಗಿ ಬಿಜೆಪಿಯವರೇ ನಿವೇಶನ ನೀಡಿದ್ದಾರೆ. ಸಿಎಂ ಅವರು ಎಲ್ಲೂ ಪ್ರಭಾವವನ್ನು ಬೀರಿಲ್ಲ, ಸಹಿಯನ್ನು ಮಾಡಿಲ್ಲ ಎಂದರು.

ನಕಲಿಗಲ್ಲ ಅಸಲಿಗೆ ಉತ್ತರ ಕೊಡುತ್ತೇನೆ

ಜಮೀನನ್ನು ಡೀನೋಟಿಫಿಕೇಶನ್ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ” ನಕಲಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಅಸಲಿಗೆ ಮಾತ್ರ ಉತ್ತರ ಕೊಡುತ್ತೇನೆ” ಎಂದು ತಿರುಗೇಟು ನೀಡಿದರು.

75 ಲಕ್ಷ ಜನರಿಗೆ ಎತ್ತಿನಹೊಳೆ ಯೋಜನೆಯಿಂದ ಅನುಕೂಲ

ಬುಧವಾರ ಸಂಜೆ ಎತ್ತಿನಹೊಳೆ ಏತ ನೀರಾವರಿಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗಿದೆ. ಈ ಯೋಜನೆಯಿಂದ ತುಮಕೂರು, ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರದ ಸ್ವಲ್ಪ ಭಾಗ ಸೇರಿದಂತೆ ಏಳು ಜಿಲ್ಲೆಗಳ 75 ಲಕ್ಷ ಜನರಿಗೆ ಉಪಯೋಗವಾಗುತ್ತದೆ. ಪ್ರಸ್ತುತ 550 ಕ್ಯೂಸೆಕ್ಸ್ ನೀರನ್ನು ಪಂಪ್ ಮಾಡಲಾಗುತ್ತಿದೆ. ಇದರ ಆರು ಪಟ್ಟು ನೀರನ್ನು ಪಂಪ್ ಮಾಡಲಾಗುವುದು. ಪ್ರಸ್ತುತ ಮೇಲೆತ್ತಿರುವ ನೀರನ್ನು ವಾಣಿವಿಲಾಸ (ಮಾರಿಕಣಿವೆ) ಸಾಗರಕ್ಕೆ ಹರಿಸಲಾಗುತ್ತಿದೆ. ಮಳೆಗಾಲ ಮುಗಿಯುವ ಹೊತ್ತಿಗೆ ಒಂದಷ್ಟು ನೀರನ್ನು ಎತ್ತಬೇಕಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದರು.

ಅಲ್ಲಲ್ಲಿ ಅರಣ್ಯ ಇಲಾಖೆಯ ಭೂಮಿಯ ಸ್ವಾಧೀನ ತೊಂದರೆ ಇದೆ. ಅದನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ಈಗಾಗಲೇ ಅನೇಕ ಕಡೆ ಅರಣ್ಯ ಇಲಾಖೆಗೆ ಬದಲಿ ಭೂಮಿ ನೀಡಲಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಮಹತ್ವಕಾಂಕ್ಷಿಯ ಕಾರ್ಯಕ್ರಮ ಇದಾಗಿದ್ದು. ಇದಕ್ಕೆ ಸಂಬಂಧಪಟ್ಟ ಎಲ್ಲಾ ಜಿಲ್ಲೆಯ ಶಾಸಕರನ್ನು, ಜನಪ್ರತಿನಿಧಿಗಳನ್ನು ಕರೆದು ಉದ್ಘಾಟನೆ ಮಾಡಲಾಗುವುದು. ಸಾವಿರಾರು ಜನರು ಬಂದು ವೀಕ್ಷಣೆ ಮಾಡುವಂತೆ ಉದ್ಘಾಟನಾ ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲರೂ ಒಂದೇ ಕಡೆಗೆ ಬಂದು ಉದ್ಘಾಟನೆ ಮಾಡುವ ಬದಲು ಪ್ರಮುಖವಾದ ಸ್ಥಳಗಳಲ್ಲಿ ಚಾಲನೆ ನೀಡುವಂತೆ ಕಾರ್ಯಕ್ರಮ ಮಾಡಲಾಗುವುದು. ಈ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಬಿತ್ತರಗೊಳ್ಳುವಂತೆ ನೋಡಿಕೊಳ್ಳಲಾಗುವುದು. ಈ ಯೋಜನೆ ಬಗ್ಗೆ ಸಾಕಷ್ಟು ಜನ ಟೀಕೆ ಮಾಡಿದರು. ಆದರೆ ಇಂದು, ಟೀಕೆಗಳು ಸತ್ತಿವೆ ಕೆಲಸ ಮಾತ್ರ ಉಳಿದಿದೆ. ಈ ಯೋಜನೆಗೆ ಸಹಕಾರ ನೀಡಿದ ಎಲ್ಲಾ ಇಲಾಖೆ ಹಾಗೂ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದರು.

ಮಣ್ಣು ಅಗೆಯುವ ಕಾರ್ಮಿಕನಿಂದ ಹಿಡಿದು ಎಂಜಿನಿಯರ್‌ಗಳ ತನಕ ಉತ್ತಮ ಕೆಲಸ ಮಾಡಿದ್ದಾರೆ. ಸುಮಾರು ಒಂದುವರೆ ಕಿಲೋಮೀಟರ್ ದೂರ ಸುರಂಗ ಮಾರ್ಗದ ಮೂಲಕವೇ ನೀರು ಹೋಗುತ್ತಿದೆ. ರೈತರು ತಮ್ಮ ಭೂಮಿಯನ್ನು ಕೊಟ್ಟು ಸಹಕಾರ ನೀಡಿದ್ದಾರೆ. ನಾವು ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಬೇಕು. ಮುಖ್ಯಮಂತ್ರಿಗಳ ಬಳಿ ಮಾತನಾಡಿ ಉದ್ಘಾಟನಾ ದಿನಾಂಕವನ್ನು ಅಂತಿಮ ಮಾಡಲಾಗುವುದು ಎಂದು ಹೇಳಿದರು.

ಬುಧವಾರ ಸಂಜೆ ಕತ್ತಲಲ್ಲಿ ವೀಕ್ಷಣೆ ಮಾಡಿದ ಕಾರಣ ಸರಿಯಾಗಿ ಗಮನಿಸಲು ಆಗಿರಲಿಲ್ಲ. ಆದ ಕಾರಣ ಇಲ್ಲಿಯೇ ಉಳಿದುಕೊಂಡು ಮತ್ತೊಮ್ಮೆ ವೀಕ್ಷಣೆ ಮಾಡಿದೆ. ಅಧಿಕಾರಿಗಳಿಗೆ ಒಂದಷ್ಟು ಮಾರ್ಗದರ್ಶನ ನೀಡಿದೆ. ಉದ್ಘಾಟನಾ ಸ್ವರೂಪ, ಎಲ್ಲಿ ಉದ್ಘಾಟನೆ ಮಾಡಬೇಕು ಎಂಬುದನ್ನೂ ಚರ್ಚೆ ಮಾಡಲಾಯಿತು ಎಂದು ತಿಳಿಸಿದರು.

ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಸಂಜೆ ತೀರ್ಪು ಪ್ರಕಟ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ, ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಸಂಜೆ 4.30 ಕ್ಕೆ ಹೈಕೋರ್ಟ್ ವಿಭಾಗೀಯ ಪೀಠವು  ತೀರ್ಪು ಪ್ರಕಟಿಸಲಿದೆ.

ಇದನ್ನೂ ಓದಿ: Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

ಡಿಕೆ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಸರ್ಕಾರದ ಪರ ಕಪಿಲ್ ಸಿಬಲ್ ವಾದ ಮಂಡಿಸಿದರು. ಯತ್ನಾಳ್ ಪರ ಹಿರಿಯ ವೆಂಕಟೇಶ ದಳವಾಯಿ ವಾದ ಮಂಡಿಸಿದರು. ಸಿಬಿಐ ಪರ ಹಿರಿಯ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿದರು.

Continue Reading

ರಾಜಕೀಯ

Kangana Ranaut: ದೂರದೃಷ್ಟಿಯೇ ಇಲ್ಲದ ರಾಹುಲ್ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ: ಕಂಗನಾ

ರಾಹುಲ್ ಗಾಂಧಿ ಎಂದರೆ ಅವ್ಯವಸ್ಥೆ. ಅವರಿಗೆ ತಮ್ಮ ಭಾಷಣಗಳಲ್ಲಿ, ನಡವಳಿಕೆಯಲ್ಲಿ ಗೊಂದಲಮಯರಾಗಿದ್ದಾರೆ. ಲೋಕಸಭೆಯಲ್ಲಿ ಭಾಷಣ ಮಾಡುವಾಗ ಹಿಂದೂ ದೇವರಾದ ಶಿವನ ಚಿತ್ರಗಳನ್ನು ತೋರಿಸಿದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ ರಣಾವತ್ (Kangana Ranaut), ಅವರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

VISTARANEWS.COM


on

By

Kangana Ranaut
Koo

ಕಾಂಗ್ರೆಸ್ ನಾಯಕ (Congress leader) ರಾಹುಲ್ ಗಾಂಧಿ (Rahul Gandhi) ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಸಂಸದೆ (BJP MP), ನಟಿ ಕಂಗನಾ ರಣಾವತ್ (Kangana Ranaut), ರಾಹುಲ್ ಗಾಂಧಿಗೆ ಯಾವುದೇ ದೂರದೃಷ್ಟಿ ಇಲ್ಲ ಮತ್ತು ನಿರಂತರವಾಗಿ ಮಾರ್ಗವನ್ನು ಬದಲಾಯಿಸುತ್ತಾರೆ. ಕಾಂಗ್ರೆಸ್ ಸಂಸದರು ಒಂದು ಕೊಳಕು ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಕಂಗನಾ, ರಾಹುಲ್ ಗಾಂಧಿ ಎಂದರೆ ಅವ್ಯವಸ್ಥೆ. ಅವರಿಗೆ ತಮ್ಮ ಭಾಷಣಗಳಲ್ಲಿ, ನಡವಳಿಕೆಯಲ್ಲಿ ಗೊಂದಲಮಯರಾಗಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಭಾಷಣ ಮಾಡುವಾಗ ಹಿಂದೂ ದೇವರಾದ ಶಿವನ ಚಿತ್ರಗಳನ್ನು ತೋರಿಸಿದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ, ಅವರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಯಾವುದೇ “ಸಂಘಟಿತ ಕಲ್ಪನೆ” ಕಾಣಲಿಲ್ಲ ಮತ್ತು ಅವರು ನಿರಂತರವಾಗಿ ಮಾರ್ಗಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅವರು ನಾಯಕರಾಗಿ ಯಾರು ಎಂಬ ನಿರ್ಣಾಯಕ ಕಲ್ಪನೆಯನ್ನು ಹೊಂದಿಲ್ಲ ಎಂದು ತೋರುತ್ತದೆ. ಕೇವಲ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ ಮತ್ತು ಪ್ರತಿ ಬಾರಿ ಅವರು ತಮ್ಮ ಮಾರ್ಗವನ್ನು ಬದಲಾಯಿಸುತ್ತಿದ್ದಾರೆ ಎಂದು ಹೇಳಿದರು.

ರೈತರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಕಂಗನಾ, ಕೇಂದ್ರ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪ್ರತಿಭಟನೆಗಳು ಭಾರತದಲ್ಲಿ ಬಾಂಗ್ಲಾದೇಶದಂತಹ ನಾಗರಿಕ ಅಶಾಂತಿಗೆ ಕಾರಣವಾಗಬಹುದು ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ಸಂಸದೆ ಕಂಗನಾ ರಣಾವತ್‌ ರೈತರ ಪ್ರತಿಭಟನೆ ವಿರುದ್ಧ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಕೇಂದ್ರದಲ್ಲಿದ್ದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ರೈತರ ಪ್ರತಿಭಟನೆ ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿಗೆ ಕಾರಣವಾಗುತ್ತಿತ್ತು ಎಂದು ಹೇಳಿಕೆ ನೀಡಿ ಮತ್ತೊಮ್ಮೆ ರೈತರ ಕೋಪಕ್ಕೆ ಕಾರಣವಾಗಿದ್ದರು.

ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಕಂಗನಾ ರಣಾವತ್‌‌ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಮಯದಲ್ಲಿ, “ಶವಗಳನ್ನು ನೇತುಹಾಕುತ್ತಿರುವುದು ಕಂಡುಬಂದಿದೆ ಮತ್ತು ಅತ್ಯಾಚಾರಗಳು ನಡೆಯುತ್ತಿದ್ದವು,” ಎಂದು ಆರೋಪಿಸಿದ್ದರು. ಕಾನೂನುಗಳನ್ನು ಹಿಂತೆಗೆದುಕೊಂಡ ನಂತರವೂ ಪ್ರತಿಭಟನೆಗಳು ಮುಂದುವರಿಯುತ್ತಿರುವುದಕ್ಕೆ ಪಟ್ಟಭದ್ರ ಹಿತಾಸಕ್ತಿಗಳು ಮತ್ತು “ವಿದೇಶಿ ಶಕ್ತಿಗಳೇ ” ಕಾರಣ ಎಂದು ದೂಷಿಸಿದ್ದರು.

ಇದನ್ನೂ ಓದಿ: Crimes Against Women: ಮಹಿಳೆಯರ ವಿರುದ್ಧದ ಅಪರಾಧ ಆರೋಪ: ಪ.ಬಂಗಾಳದ ಶಾಸಕ, ಸಂಸದರೇ ಹೆಚ್ಚು!

ಕಂಗನಾ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಮೋದಿ ಸರ್ಕಾರದ ಪ್ರಚಾರ ಯಂತ್ರವು “ನಿರಂತರವಾಗಿ ರೈತರನ್ನು ಅವಮಾನಿಸುತ್ತಿದೆ” ಎಂದು ಆರೋಪಿಸಿದರು.


ಈ ಕುರಿತು ಎಕ್ಸ್ ನಲಿ ಪೋಸ್ಟ್ ಮಾಡಿರುವ ಅವರು, 378 ದಿನಗಳ ಮ್ಯಾರಥಾನ್ ಹೋರಾಟದಲ್ಲಿ 700 ಸಹೋದ್ಯೋಗಿಗಳನ್ನು ಬಲಿಕೊಟ್ಟ ರೈತರನ್ನು ಬಿಜೆಪಿ ಸಂಸದರು ಅತ್ಯಾಚಾರಿಗಳು ಮತ್ತು ವಿದೇಶಿ ಶಕ್ತಿಗಳ ಪ್ರತಿನಿಧಿಗಳು ಎಂದು ಕರೆಯುವುದು ಬಿಜೆಪಿಯ ರೈತ ವಿರೋಧಿ ನೀತಿ ಮತ್ತು ಉದ್ದೇಶಗಳಿಗೆ ಮತ್ತೊಂದು ಪುರಾವೆಯಾಗಿದೆ ಎಂದು ತಿಳಿಸಿದ್ದು, ರೈತ ಸಂಸ್ಥೆಗಳು ಮತ್ತು ರಾಜಕಾರಣಿಗಳ ಕುರಿತು ನಟಿಯ ಹೇಳಿಕೆಗಳನ್ನು ಖಂಡಿಸಿದ್ದಾರೆ.

Continue Reading

ದೇಶ

Crimes Against Women: ಮಹಿಳೆಯರ ವಿರುದ್ಧದ ಅಪರಾಧ ಆರೋಪ: ಪ.ಬಂಗಾಳದ ಶಾಸಕ, ಸಂಸದರೇ ಹೆಚ್ಚು!

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ನ್ಯೂ ಎಲೆಕ್ಷನ್ ವಾಚ್‌ನ ವರದಿಯ ಪ್ರಕಾರ 2009ರಿಂದ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಸಂಸದರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಅದರಲ್ಲೂ ಮಹಿಳೆಯರ ವಿರುದ್ದದ ಅಪರಾಧ (Crimes Against Women) ಪ್ರಕರಣಗಳಲ್ಲಿ ಬಿಜೆಪಿಯ ಹೆಚ್ಚಿನ ಸಂಸದರು, ಶಾಸಕರು ಭಾಗಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

VISTARANEWS.COM


on

By

Crimes Against Women
Koo

ನವದೆಹಲಿ: ಮಹಿಳೆಯರ ವಿರುದ್ಧ ಅಪರಾಧ (Crimes Against Women) ಪ್ರಕರಣಗಳಲ್ಲಿ ಒಟ್ಟು 151 ಹಾಲಿ ಸಂಸದರು ಮತ್ತು ಶಾಸಕರು ಭಾಗಿಯಾಗಿರುವುದಾಗಿ ಘೋಷಿಸಿದ್ದಾರೆ. ರಾಜಕೀಯ ಪಕ್ಷದಲ್ಲಿ ಭಾರತೀಯ ಜನತಾ ಪಕ್ಷ (BJP) ಮತ್ತು ರಾಜ್ಯದ ಪೈಕಿ ಪಶ್ಚಿಮ ಬಂಗಾಳ (West Bengal) ಅತಿ ಹೆಚ್ಚು ಶಾಸಕರು, ಸಂಸದರು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ವರದಿಯೊಂದು ತಿಳಿಸಿದೆ.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಮತ್ತು ನ್ಯೂ ಎಲೆಕ್ಷನ್ ವಾಚ್ (NEW) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯು ಹಾಲಿ ಸಂಸದರು ಮತ್ತು ಶಾಸಕರ 4,809 ಚುನಾವಣಾ ಅಫಿಡವಿಟ್‌ಗಳಲ್ಲಿ 4,693 ಅನ್ನು ವಿಶ್ಲೇಷಿಸಿದೆ. ಇದು ಕಳೆದ ಐದು ವರ್ಷಗಳಲ್ಲಿ ಎಲ್ಲಾ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಹಾಲಿ ಸಂಸದರ 776 ಅಫಿಡವಿಟ್‌ಗಳಲ್ಲಿ 755 ಮತ್ತು 4,033 ಹಾಲಿ ಶಾಸಕರ ಪೈಕಿ 3,938 ವಿಶ್ಲೇಷಣೆಯನ್ನು ಒಳಗೊಂಡಿದೆ.

ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿ ಘೋಷಿತ ಪ್ರಕರಣಗಳನ್ನು ಹೊಂದಿರುವ 151 ಹಾಲಿ ಸಂಸದರು ಮತ್ತು ಶಾಸಕರ ಪೈಕಿ 16 ಸಂಸದರು ಮತ್ತು 135 ಶಾಸಕರಿದ್ದಾರೆ ಎಂದು ವರದಿ ಹೇಳಿದೆ.

Crimes Against Women
Crimes Against Women


ಪಕ್ಷಗಳ ಪೈಕಿ ಬಿಜೆಪಿಗೆ ಮೊದಲ ಸ್ಥಾನ

ಪಕ್ಷಗಳ ಪೈಕಿ ಬಿಜೆಪಿ ಅತಿ ಹೆಚ್ಚು ಸಂಸದರು ಮತ್ತು ಶಾಸಕರು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳನ್ನು ಹೊಂದಿದ್ದಾರೆ. ಮಹಿಳೆಯರ ವಿರುದ್ಧದ ಅಪರಾಧಗಳ ಘೋಷಿತ ಪ್ರಕರಣಗಳಲ್ಲಿ ಬಿಜೆಪಿಯ 54, ಕಾಂಗ್ರೆಸ್ ನ 23, ತೆಲುಗು ದೇಶಂ ಪಕ್ಷದ (ಟಿಡಿಪಿ) 17 ಶಾಸಕ, ಸಂಸದರು ಇದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹೆಚ್ಚು

ರಾಜ್ಯಗಳ ಪೈಕಿ ಮಹಿಳೆಯರ ವಿರುದ್ಧದ ಅಪರಾಧಗಳ ಘೋಷಿತ ಪ್ರಕರಣಗಳೊಂದಿಗೆ 25 ಸಂಸದರು ಮತ್ತು ಶಾಸಕರು ಪಶ್ಚಿಮ ಬಂಗಾಳದವರಾಗಿದ್ದರೆ. ಆಂಧ್ರಪ್ರದೇಶದಲ್ಲಿ 21, ಒಡಿಶಾದಲ್ಲಿ 17 ಮಾಡಿ ಇದ್ದು, ಅನಂತರದ ಸ್ಥಾನದಲ್ಲಿದೆ.

16 ಜನಪ್ರತಿನಿಧಿಗಳ ಮೇಲೆ ಅತ್ಯಾಚಾರ ಪ್ರಕರಣ

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಘೋಷಿಸಿರುವ ಒಟ್ಟು 151 ಸಂಸದರು ಮತ್ತು ಶಾಸಕರ ಪೈಕಿ 16 ಹಾಲಿ ಶಾಸಕರು ಅತ್ಯಾಚಾರ ಪ್ರಕರಣಗಳನ್ನು ಘೋಷಿಸಿದ್ದಾರೆ. ಈ 16 ಮಂದಿಯಲ್ಲಿ ಇಬ್ಬರು ಹಾಲಿ ಸಂಸದರಾಗಿದ್ದು, ಉಳಿದ 14 ಮಂದಿ ಶಾಸಕರಾಗಿದ್ದಾರೆ.

ಪಕ್ಷಗಳ ಪೈಕಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಅತ್ಯಧಿಕ ಸಂಖ್ಯೆಯ ಹಾಲಿ ಸಂಸದರು ಮತ್ತು ಶಾಸಕರನ್ನು ಹೊಂದಿದ್ದು, ತಲಾ ಐದು ಅತ್ಯಾಚಾರ ಪ್ರಕರಣಗಳನ್ನು ಹೊಂದಿದ್ದಾರೆ. ರಾಜ್ಯಗಳ ಪೈಕಿ ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳವು ಅತ್ಯಾಚಾರಕ್ಕೆ ಸಂಬಂಧಿಸಿದ ಘೋಷಿತ ಪ್ರಕರಣಗಳೊಂದಿಗೆ ಅತಿ ಹೆಚ್ಚು ಶಾಸಕರನ್ನು ಹೊಂದಿದ್ದು, ತಲಾ ಇಬ್ಬರನ್ನು ಹೊಂದಿದೆ.

ಅಪರಾಧ ಪ್ರಕರಣ ಹೆಚ್ಚಳ

2024ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಮತ್ತು ಇತರ ವಿವರಗಳನ್ನು ವಿಶ್ಲೇಷಿಸುವ ಎಡಿಆರ್ ಮತ್ತು ನ್ಯೂ ನ ಪ್ರತ್ಯೇಕ ವರದಿಯು ಇತ್ತೀಚೆಗೆ ಬಿಡುಗಡೆ ಮಾಡಿದ್ದು, 2009 ರಿಂದ ಘೋಷಿತ ಗಂಭೀರ ಅಪರಾಧ ಪ್ರಕರಣಗಳನ್ನು ಹೊಂದಿರುವ ಸಂಸದರ ಸಂಖ್ಯೆ ಶೇ. 124ರಷ್ಟು ಹೆಚ್ಚಳವಾಗಿದೆ.

2024 ರ ಲೋಕಸಭಾ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳ ಪೈಕಿ ಶೇ. 31 ಅಂದರೆ 170 ಅಭ್ಯರ್ಥಿಗಳು ಅತ್ಯಾಚಾರ, ಕೊಲೆ, ಕೊಲೆ ಯತ್ನ, ಅಪಹರಣ, ಮಹಿಳೆಯರ ವಿರುದ್ಧದ ಅಪರಾಧಗಳು ಇತ್ಯಾದಿಗಳಿಗೆ ಸಂಬಂಧಿಸಿದ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ವರದಿ ಹೇಳಿದೆ.

2019 ರಲ್ಲಿ 539 ಮಂದಿ ಗೆದ್ದಿದ್ದು, ಶೇ. 29ರಷ್ಟು ಅಂದರೆ 159 ಮಂದಿ ಗಂಭೀರ ಅಪರಾಧ ಪ್ರಕರಣಗಳನ್ನು ಘೋಷಿಸಿದ್ದಾರೆ.

2014 ರಲ್ಲಿ, 542 ಸಂಸದರಲ್ಲಿ 112 ಅಂದರೆ ಶೇ. 21ರಷ್ಟು ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.

2009 ರಲ್ಲಿ ವಿಶ್ಲೇಷಿಸಲಾದ 543 ಸಂಸದರಲ್ಲಿ 76 ಅಂದರೆ ಶೇ. 14ರಷ್ಟು ಸಂಸದರು ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದರು.


ಇದನ್ನೂ ಓದಿ: Physical Abuse : ಡಜನ್‌ಗಟ್ಟಲೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೊ ಮಾಡಿ ಬೆದರಿಸುತ್ತಿದ್ದ ವ್ಯಕ್ತಿ ಬಂಧನ

ಘೋಷಿತ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆಗಳು ಶೇ. 15.3 ಆಗಿದ್ದರೆ, ಶುದ್ಧ ಹಿನ್ನೆಲೆ ಹೊಂದಿರುವ ಅಭ್ಯರ್ಥಿಯು ಗೆಲ್ಲುವ ಸಾಧ್ಯತೆ ಶೇ. 4.4 ಎಂದು ವರದಿ ತಿಳಿಸಿದೆ.

18ನೇ ಲೋಕಸಭೆಯಲ್ಲಿ ಪಕ್ಷಗಳ ಪೈಕಿ ಬಿಜೆಪಿಯು ತನ್ನ 240 ವಿಜೇತ ಅಭ್ಯರ್ಥಿಗಳಲ್ಲಿ 94 ಅಭ್ಯರ್ಥಿಗಳು ಘೋಷಿತ ಕ್ರಿಮಿನಲ್ ಪ್ರಕರಣಗಳೊಂದಿಗೆ ಅತಿ ಹೆಚ್ಚು ಸಂಸದರನ್ನು ಹೊಂದಿದೆ. ಇದರ ಅನಂತರ ಕಾಂಗ್ರೆಸ್ 49, ಮತ್ತು ಸಮಾಜವಾದಿ ಪಕ್ಷದ 21 ಮಂದಿ ಸಂಸದರು ಘೋಷಿತ ಕ್ರಿಮಿನಲ್ ಪ್ರಕರಣವನ್ನು ಹೊಂದಿದ್ದಾರೆ.

Continue Reading
Advertisement
Spectrum Dress Fashion
ಫ್ಯಾಷನ್4 mins ago

Spectrum Dress Fashion: ಮಳೆಗಾಲದ ಫ್ಯಾಷನ್‌ಗೆ ಕಾಲಿಟ್ಟಿವೆ ಗ್ಲಾಮರಸ್‌ ಸಿಕ್ವೀನ್ಸ್ ರೆಟ್ರೊ ಸ್ಪೆಕ್ಟ್ರಮ್‌ ಡ್ರೆಸ್

Bomb Threat
ಕ್ರೈಂ23 mins ago

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Actor Darshan
ಬೆಂಗಳೂರು43 mins ago

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

Karwar Jail
ಕ್ರೈಂ51 mins ago

Karwar Jail: ನಟ ದರ್ಶನ್‌ಗೆ ಐಷಾರಾಮಿ ಸವಲತ್ತು! ಕಾರವಾರ ಜೈಲಿನಲ್ಲಿ ತಂಬಾಕಿಗೆ ಬೇಡಿಕೆ ಇಟ್ಟ ಖೈದಿಗಳಿಂದ ಗಲಾಟೆ

Shalini Rajaneesh
ಫ್ಯಾಷನ್56 mins ago

Shalini Rajaneesh: ಸೀರೆ, ಹಣೆಗೆ ಅಗಲವಾದ ರೆಡ್ ಬಿಂದಿ ಎಂದಿಗೂ ಬದಲಾಗದ ನನ್ನ ಯೂನಿಕ್ ಫ್ಯಾಷನ್ ಸ್ಟೇಟ್ಮೆಂಟ್!

karnataka Weather Forecast
ಮಳೆ1 hour ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Namratha Gowda
ಕಿರುತೆರೆ1 hour ago

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

DK Shivakumar
ರಾಜಕೀಯ2 hours ago

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Viral News
ವೈರಲ್ ನ್ಯೂಸ್2 hours ago

Viral News: ಯುಪಿ ಸರ್ಕಾರದ ಆಫರ್‌; ಇದು ಕಾನೂನುಬದ್ಧ ಲಂಚ ಎಂದು ಪರ-ವಿರೋಧದ ಜಗಳಕ್ಕಿಳಿದ ಯೂಟ್ಯೂಬರ್ಸ್‌

Finance Commission Meeting
ಬೆಂಗಳೂರು3 hours ago

Finance Commission Meeting: 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು ರೂ.79770 ಕೋಟಿ ನಷ್ಟ: ಸಿದ್ದರಾಮಯ್ಯ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್9 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌