Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ! - Vistara News

ಸಿನಿಮಾ

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲು ಸಿಬ್ಬಂದಿ ಬ್ಯಾರಕ್‌ಗೆ ಹೋಗಿ ಅಂದರೆ ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ದರಂತೆ.

VISTARANEWS.COM


on

Do you know when Darshan got royalty in Central Jail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೆಂಟ್ರಲ್‌ ಜೈಲಿನಲ್ಲಿ ನಟ ದರ್ಶನ್‌ (Actor Darshan) ಫೋಟೊ ವೈರಲ್‌ ಆಗಿದ್ದೆ ತಡ ಈಗ ಒಂದೊಂದೆ ವಿಚಾರಗಳು ಹೊರಬರುತ್ತಿವೆ. ಇಷ್ಟಕ್ಕೂ ಜೈಲು ಸೇರಿದ್ದ ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲುಪಾಲಾದ ಮೂರೇ ದಿನ ಸಾಮಾನ್ಯ ಕೈದಿಯಂತಿದ್ದ ದರ್ಶನ್, ಬಳಿಕ ನಾಲ್ಕನೇ ದಿನದಿಂದ ರಾಜಾತಥ್ಯ ಸಿಗುತಿತ್ತಂತೆ. ಇನ್ನು ಜೈಲು ಸಿಬ್ಬಂದಿ ನಿಮ್ಮ ಬ್ಯಾರಕ್‌ಗೆ ತೆರಳಿ ಎಂದು ಸೂಚಿಸುತ್ತಿದ್ದರಂತೆ. ಈ ವೇಳೆ ಫಿಲ್ಮಿ ಸ್ಟೈಲ್‌ನಲ್ಲೇ ದರ್ಶನ್‌ ಆವಾಜ್ ಹಾಕಿ ‘ಬಿಸ್ಕತ್ ಹಾಕಿಲ್ವಾ’ ಸುಮ್ಮನಿರು ಅಂತಿದ್ದರಂತೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೆ ಸತ್ಯ ಹೊರಗೆ ಬರುತ್ತಿದೆ.

ಬದಲಾದ ಬೆಂಗಳೂರು ಸೆಂಟ್ರೆಲ್‌ ಜೈಲ್‌ ಚಿತ್ರಣ

ಬೆಂಗಳೂರು: ದರ್ಶನ್ ಸಿಗರೇಟ್‌ ಸೇದುವ ಫೋಟೊ ವೈರಲ್ ಆದ ಬಳಿಕ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಒಂದೆಡೆ ಜೈಲು ಸಿಬ್ಬಂದಿ ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಕೈದಿಗಳಿಂದಲೂ ಧರಣಿ ನಡೆದಿದೆ ಎನ್ನಲಾಗಿದೆ. ನಮಗೆ ಬೀಡಿ, ಸಿಗರೇಟ್ ಸಿಗುತ್ತಿಲ್ಲ. ನಮ್ಗೆ ಇರೋದಕ್ಕೆ ಆಗುತ್ತಿಲ್ಲ ಎಂದು ನಿನ್ನೆ ಶನಿವಾರ ಪ್ರತಿಭಟಿಸಿದ್ದಾರೆ. ಫೋಟೊ ವೈರಲ್ ಬಳಿಕ ಜೈಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಬೀಡಿ, ಸಿಗರೇಟ್ ಸಂಪೂರ್ಣ ಬಂದ್ ಆಗಿದೆ.

ಇದನ್ನೂ ಓದಿ: Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

ಹಿಂಡಲಗಾ ಜೈಲಿನಲ್ಲಿ ಸಿಗರೇಟ್‌ಗಾಗಿ ಕೈದಿಗಳಿಂದಲ್ಲೂ ಡಿಮ್ಯಾಂಡ್‌

ಬೆಂಗಳೂರು ಜೈಲಲ್ಲಿ ದರ್ಶನ್ ಸಿಗರೇಟ್ ಸೇದಿದ ಎಫೆಕ್ಟ್ ಇತರ ಕೈದಿಗಳಿಂದಲೂ ಡಿಮ್ಯಾಂಡ್ ಬಂದಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ವಿಶೇಷ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆದಿದೆ. ಬೀಡಿ, ಸಿಗರೇಟ್, ತಂಬಾಕು ಕೊಡುವವರಗೆ ನಾವು ತಿಂಡಿ ತಿನ್ನಲ್ಲ ಎನ್ನುತ್ತಿದ್ದಂತೆ. ಬೆಳಗಿನ ಉಪಹಾರ ಮಾಡದೆ ಪ್ರೊಟ್ಟೆಸ್ಟ್‌ ಮಾಡುತ್ತಿದ್ದರಂತೆ. ಇದೀಗ ಈ ಬೇಡಿಕೆ ಜೈಲಧಿಕಾರಿಗಳಿಗೆ ತಲೆ ನೋವಾಗಿದೆ. ಸದ್ಯ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಜೈಲಾಧಿಕಾರಿಗಳು ಇದ್ದಾರೆ. ಬೀಡಿ ಸಿಗರೇಟ್ ನೀಡದಿದ್ದರೆ ಮಧ್ಯಾಹ್ನ ಊಟವನ್ನೂ ಮಾಡಲ್ಲ ಎಂದು ಬೆದರಿಕೆ ಹಾಕುತ್ತಿದ್ದರಂತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

Actor Darshan : ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಅಲ್ಲಿನ ವ್ಯವಸ್ಥೆ ಸರಿ ಹೋಗುತ್ತಿಲ್ವಾಂತೆ. ಹೀಗಾಗಿ ಆರೋಗ್ಯದ ನೆಪವೊಡ್ಡಿ ಬಳ್ಳಾರಿಯಿಂದ ಮತ್ತೆ ಬೆಂಗಳೂರಿಗೆ ಶಿಫ್ಟ್‌ ಆಗಲು ಯೋಚಿಸುತ್ತಿದ್ದರಂತೆ.

VISTARANEWS.COM


on

By

Actor Darshan shifted back to Bengaluru from Ballari
Koo

ಬಳ್ಳಾರಿ/ಬೆಂಗಳೂರು: ನಟ ದರ್ಶನ್‌ ಬಳ್ಳಾರಿಯಿಂದ ಮತ್ತೆ ಬೆಂಗಳೂರು ಜೈಲಿಗೆ (Actor Darshan) ಶಿಫ್ಟ್ ಆಗ್ತಾರಾ ಇಂತಹದೊಂದು ಸುದ್ದಿ ಹರಿದಾಡುತ್ತಿದೆ. ದರ್ಶನ್‌ಗೆ ಬಳ್ಳಾರಿಯಲ್ಲಿ ‌ನಿಜ ಜೈಲಿನ ದರ್ಶನವಾಗುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಆರಾಮಾಗಿದ್ದ ದರ್ಶನ್‌ಗೆ ಬಳ್ಳಾರಿಯಲ್ಲಿ ಇರಲಾಗುತ್ತಿಲ್ವಂತೆ. ನಿನ್ನೆ ಪತ್ನಿ ಭೇಟಿಯ ವೇಳೆ ಬಳ್ಳಾರಿ ಜೈಲಿನ ಸಂಕಷ್ಟ ಹೇಳಿಕೊಂಡರಂತೆ. ಬೆನ್ನು ನೋವು, ಕೈ ನೋವು ಇರುವುದರಿಂದ ಇಂಡಿಯನ್ ಟಾಯ್ಲೆಟ್ ಸಮಸ್ಯೆ ಆಗುತ್ತಿದೆ. ಒಂದು ಕಡೆಗೆ ನೋವು, ಜೈಲ್‌ನ ವ್ಯವಸ್ಥೆ ನನಗೆ ಸರಿ ಹೋಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಆರೋಗ್ಯ, ತಾಂತ್ರಿಕ ತೊಂದರೆ ನೆಪವೊಡ್ಡಿ ವಕೀಲರ ಮೂಲಕ ಬೆಂಗಳೂರಿಗೆ ಶಿಫ್ಟ್ ಆಗಲು ಪ್ಲ್ಯಾನ್‌ ನಡೆದಿದೆ ಎನ್ನಲಾಗಿದೆ. ವಕೀಲರ ಮೂಲಕ ಕೋರ್ಟ್‌ಗೆ ಮನವಿ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಈ ಹಿಂದೆ ಕೋರ್ಟ್‌ನಲ್ಲಿ ಮನೆಯೂಟ ಕೇಳಿದಾಗ ನಿರಾಕರಣೆ ಮಾಡಿತ್ತು. ಇದೇ ವಾರದಲ್ಲಿ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗುವ ಸಾಧ್ಯತೆ ಇದೆ. ಇದರ ಮಧ್ಯೆ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲು ಕೋರ್ಟ್‌ ಒಪ್ಪಿಗೆ ನೀಡುತ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಂಗಳೂರಿಗೆ ಶಿಫ್ಟ್ ಆಗಬೇಕು ಅಂದರೆ ದರ್ಶನ್‌ಗೆ ಮೇಜರ್ ಸಮಸ್ಯೆ ಇರಬೇಕು. ಅದರಲ್ಲೂ ಹಾರ್ಟ್ ಸಮಸ್ಯೆ, ಕಿಡ್ನಿ ಸಂಬಂಧಿಸಿದ ಗಂಭೀರ ಸಮಸ್ಯೆ ಇರಬೇಕು. ಆಗ ಮಾತ್ರ ಯಾವುದೇ ಕೈದಿಯನ್ನು ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆ ಇರುತ್ತೆ. ಆದರೆ ದರ್ಶನ್ ಅವರಿಗೆ ಸ್ಪೈನಲ್ ಕಾರ್ಡ್, ಎಡಗೈ ಮೂಳೆ ನೋವು ಮಾತ್ರ ಇದೆ. ಇದು ಜೈಲ್ ರೂಲ್ಸ್ ಪ್ರಕಾರ ಮೇಜರ್ ಸಮಸ್ಯೆ ಅಲ್ಲ ಎನ್ನಲಾಗುತ್ತಿದೆ.

ಚಾರ್ಜ್ ಶೀಟ್ ಸಲ್ಲಿಕೆ ಆದ ಬಳಿಕ ಬೇಲ್‌ಗೆ ಅರ್ಜಿ ಹಾಕುವ ಸಾಧ್ಯತೆ ಇದೆ. ಬೇಲ್‌ಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದರಿಂದ ಜೈಲ್ ಟು ಜೈಲ್ ಶಿಫ್ಟ್ ಮಾಡುವುದು ಅನುಮಾನವಿದೆ. ದರ್ಶನ್‌ಗೆ ಈಗಿರುವ ಸಮಸ್ಯೆಗೆ ಚಿಕಿತ್ಸೆ ನೀಡಲು ಜೈಲಲ್ಲೇ ನುರಿತ ವೈದ್ಯರಿದ್ದಾರೆ. ಕಿಡ್ನಿ ಸಮಸ್ಯೆ, ಹಾರ್ಟ್ ಸಮಸ್ಯೆ ಇದ್ದರೆ ಜೈಲಿನಲ್ಲೇ ಟ್ರೀಟ್ಮೆಂಟ್‌ಗೆ ಬಳ್ಳಾರಿಯಲ್ಲೇ ಖಾಸಗಿ ವೈದ್ಯರಿದ್ದಾರೆ. ಬಳ್ಳಾರಿಯಲ್ಲೂ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು ಇದ್ದಾವೆ ಅಲ್ಲಿ ಚಿಕಿತ್ಸೆ ನೀಡೋದಕ್ಕೆ ಅವಕಾಶ ಇದೆ. ಗಂಭೀರ ಸಮಸ್ಯೆಗೆ ಬಳ್ಳಾರಿಯಲ್ಲಿನ ಚಿಕಿತ್ಸೆ ಕೊಡಲು ಆಗದೇ ಹೋದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

ಪತ್ನಿ ಭೇಟಿ ನಂತರ ಕಣ್ತುಂಬ ನಿದ್ದೆ ಮಾಡಿದ ದಾಸ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಮೂರನೇ ರಾತ್ರಿ ಕಳೆದಿರುವ ಕೊಲೆ ಆರೋಪಿ ದರ್ಶನ್ ಭಾನುವಾರ ಬೆಳಗ್ಗೆ ಎದ್ದು ವಾಕಿಂಗ್ ಮಾಡಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿಗೆ ಬಂದಾಗಿನಿಂದ ಇದೇ ಮೊದಲ ಬಾರಿಗೆ ಬೆಳಗ್ಗೆ ವಾಕಿಂಗ್ ಮಾಡಿದ್ದು, ಎರಡು ರಾತ್ರಿ ನಿದ್ದೆ ಇಲ್ಲದೇ ಒದ್ದಾಡಿದ್ದರು. ನಿನ್ನೆ ಶನಿವಾರ ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿ ಹೋದ ಬೆನ್ನಲ್ಲೇ ನಿರಾಳರಾಗಿರುವ ದರ್ಶನ್ ರಾತ್ರಿ ಚೆನ್ನಾಗಿ ನಿದ್ದೆ ಮಾಡಿದ್ದರಂತೆ. ಪತ್ನಿ ವಿಜಯಲಕ್ಷ್ಮಿ ಮೈಸೂರು ಚಾಮುಂಡೇಶ್ವರಿ ದೇವಿಯ ಕುಂಕುಮ, ಅಕ್ಷತೆ, ಪ್ರಸಾದ ತಂದು ಕೊಟ್ಟಿದ್ದರು. ಸುದೀರ್ಘ ಅರ್ಧ ಗಂಟೆ ದರ್ಶನ್ ಜತೆ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದರು. ಪತ್ನಿ ಬಂದು ಹೋದ ಬೆನ್ನಲ್ಲೇ ಇಂದು ಫುಲ್ ಆಕ್ಟೀವ್ ಆಗಿದ್ದಾರೆ.

ಇದನ್ನೂ ಓದಿ: Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ?

ಸೆಂಟ್ರಲ್‌ ಜೈಲಿನಲ್ಲಿ ನಟ ದರ್ಶನ್‌ ಫೋಟೊ ವೈರಲ್‌ ಆಗಿದ್ದೆ ತಡ ಈಗ ಒಂದೊಂದೆ ವಿಚಾರಗಳು ಹೊರಬರುತ್ತಿವೆ. ಇಷ್ಟಕ್ಕೂ ಜೈಲು ಸೇರಿದ್ದ ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಜೈಲುಪಾಲಾದ ಮೂರೇ ದಿನ ಸಾಮಾನ್ಯ ಕೈದಿಯಂತಿದ್ದ ದರ್ಶನ್, ಬಳಿಕ ನಾಲ್ಕನೇ ದಿನದಿಂದ ರಾಜಾತಥ್ಯ ಸಿಗುತಿತ್ತಂತೆ. ಇನ್ನು ಜೈಲು ಸಿಬ್ಬಂದಿ ನಿಮ್ಮ ಬ್ಯಾರಕ್‌ಗೆ ತೆರಳಿ ಎಂದು ಸೂಚಿಸುತ್ತಿದ್ದರಂತೆ. ಈ ವೇಳೆ ಫಿಲ್ಮಿ ಸ್ಟೈಲ್‌ನಲ್ಲೇ ದರ್ಶನ್‌ ಆವಾಜ್ ಹಾಕಿ ‘ಬಿಸ್ಕತ್ ಹಾಕಿಲ್ವಾ’ ಸುಮ್ಮನಿರು ಅಂತಿದ್ದರಂತೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೆ ಸತ್ಯ ಹೊರಗೆ ಬರುತ್ತಿದೆ.

ಬದಲಾದ ಬೆಂಗಳೂರು ಸೆಂಟ್ರೆಲ್‌ ಜೈಲ್‌ ಚಿತ್ರಣ

ಬೆಂಗಳೂರು: ದರ್ಶನ್ ಸಿಗರೇಟ್‌ ಸೇದುವ ಫೋಟೊ ವೈರಲ್ ಆದ ಬಳಿಕ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಒಂದೆಡೆ ಜೈಲು ಸಿಬ್ಬಂದಿ ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಕೈದಿಗಳಿಂದಲೂ ಧರಣಿ ನಡೆದಿದೆ ಎನ್ನಲಾಗಿದೆ. ನಮಗೆ ಬೀಡಿ, ಸಿಗರೇಟ್ ಸಿಗುತ್ತಿಲ್ಲ. ನಮ್ಗೆ ಇರೋದಕ್ಕೆ ಆಗುತ್ತಿಲ್ಲ ಎಂದು ನಿನ್ನೆ ಶನಿವಾರ ಪ್ರತಿಭಟಿಸಿದ್ದಾರೆ. ಫೋಟೊ ವೈರಲ್ ಬಳಿಕ ಜೈಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಬೀಡಿ, ಸಿಗರೇಟ್ ಸಂಪೂರ್ಣ ಬಂದ್ ಆಗಿದೆ.

ಹಿಂಡಲಗಾ ಜೈಲಿನಲ್ಲಿ ಸಿಗರೇಟ್‌ಗಾಗಿ ಕೈದಿಗಳಿಂದಲ್ಲೂ ಡಿಮ್ಯಾಂಡ್‌

ಬೆಂಗಳೂರು ಜೈಲಲ್ಲಿ ದರ್ಶನ್ ಸಿಗರೇಟ್ ಸೇದಿದ ಎಫೆಕ್ಟ್ ಇತರ ಕೈದಿಗಳಿಂದಲೂ ಡಿಮ್ಯಾಂಡ್ ಬಂದಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ವಿಶೇಷ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆದಿದೆ. ಬೀಡಿ, ಸಿಗರೇಟ್, ತಂಬಾಕು ಕೊಡುವವರಗೆ ನಾವು ತಿಂಡಿ ತಿನ್ನಲ್ಲ ಎನ್ನುತ್ತಿದ್ದಂತೆ. ಬೆಳಗಿನ ಉಪಹಾರ ಮಾಡದೆ ಪ್ರೊಟ್ಟೆಸ್ಟ್‌ ಮಾಡುತ್ತಿದ್ದರಂತೆ. ಇದೀಗ ಈ ಬೇಡಿಕೆ ಜೈಲಧಿಕಾರಿಗಳಿಗೆ ತಲೆ ನೋವಾಗಿದೆ. ಸದ್ಯ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಜೈಲಾಧಿಕಾರಿಗಳು ಇದ್ದಾರೆ. ಬೀಡಿ ಸಿಗರೇಟ್ ನೀಡದಿದ್ದರೆ ಮಧ್ಯಾಹ್ನ ಊಟವನ್ನೂ ಮಾಡಲ್ಲ ಎಂದು ಬೆದರಿಕೆ ಹಾಕುತ್ತಿದ್ದರಂತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

Rishab Shetty And NTR: ಮಂಗಳೂರು ಏರ್‌ಪೋರ್ಟ್‌ನಲ್ಲಿ ಕುಂದಾಪುರ ಬಾಯ್ಸ್ ದರ್ಶನ ಕೊಟ್ಟಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ ರಿಷಬ್ ಶೆಟ್ಟಿ ಮತ್ತು ಜೂ. ಎನ್.ಟಿ.ಆರ್ ಭೇಟಿಯಾದರು. ಇದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ.

VISTARANEWS.COM


on

Rishab Shetty And NTR
Koo

Rishab Shetty And NTR: ಇಂದು (ಆಗಸ್ಟ್‌ 31) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ರಿಷಬ್ ಶೆಟ್ಟಿ ಮತ್ತು ಜ್ಯೂ. ಎನ್‌ಟಿಆರ್ (Rishab Shetty And NTR) ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.

Rishab Shetty And NTR with family

ಶ್ರಾವಣ ಮಾಸದ ಶನಿವಾರದಂದು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಸ್ಟಾರ್ ನಟರು ದೇವರ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದರು.

NTR and Rishab Shetty

ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ರಿಷಬ್ ಶೆಟ್ಟಿ ಮತ್ತು ಜೂ. ಎನ್.ಟಿ.ಆರ್ ಮಂಗಳೂರು ಏರ್‌ಪೋರ್ಟ್‌ನಲ್ಲಿ ಭೇಟಿಯಾಗಿದ್ದರು ಮತ್ತು ಡಿವೈನ್ ಸ್ಟಾರ್, ಟೈಗರ್‌ನನ್ನು ಸ್ವಾಗತಿಸಿದ್ದರು.

ಸೆ.2ರಂದು ನನ್ನ ತಾಯಿ ಹುಟ್ಟುಹಬ್ಬ ಇದೆ. ಅವರ ತವರು ಕುಂದಾಪುರಕ್ಕೆ ಬರಬೇಕೆಂಬ ಮಹಾದಾಸೆ ಇತ್ತು. ಮಗನಾಗಿ ಅವರ ಸಣ್ಣ ಆಸೆಯನ್ನು ಈಡೇರಿಸುವುದೇ ನನ್ನ ಭಾಗ್ಯ. ಅವರ ಹುಟ್ಟುಹಬ್ಬಕ್ಕೆ ಇದೇ ದೊಡ್ಡ ಗಿಫ್ಟ್‌. ಅಮ್ಮನನ್ನು ಕರೆದುಕೊಂಡು ಬಂದಿದ್ದು ಖುಷಿ ಆಯಿತು. ಜತೆಗೆ ಆಸೆ ಈಡೇರಿಸಿ ಎಂಬ ನೆಮ್ಮದಿ ಇದೆ ಎಂದು ಟಾಲಿವುಡ್‌ ನಟ ಜ್ಯೂ.ಎನ್‌ಟಿಆರ್‌ ತಿಳಿಸಿದರು.

Rishab Shetty And NTR photo

ಇವರಿಬ್ಬರ ದಿಢೀರ್ ಭೇಟಿ ನೋಡಿ “ತಾರಕ್ ಕಾಂತಾರದಲ್ಲಿ ನಟಿಸುತ್ತಾರಾ?” “ರಿಷಬ್ ಸಿಂಹಾದ್ರಿ ಭೇಟಿ ಏನು ಸೀಕ್ರೆಟ್ ಏನು?” ಹೀಗೆ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಕುತುಹಲ ಮೂಡಿಸಿದ್ದವು.

ಇದನ್ನೂ ಓದಿ: Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

Continue Reading

ಸಿನಿಮಾ

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

Sonal Monteiro: ಕನ್ನಡದ ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ಸೋನಲ್‌ ಮೊಂಥೆರೋ ಅವರು ಕ್ರಿಶ್ಚಿಯನ್‌ ಸಂಪ್ರದಾಯದಂತೆ ಮದುವೆಯಾಗಲಿದ್ದು, ಸೋನಲ್ ಮನೆಯಲ್ಲಿ Roce Celebration ಆರಂಭಗೊಂಡಿದೆ. ಇದರ ಕಂಪ್ಲೀಟ್‌ ಡಿಟೆಲ್ಸ್‌ ಇಲ್ಲಿದೆ.

VISTARANEWS.COM


on

Sonal Monteiro
Koo

ಕನ್ನಡದ ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ (Sonal Monteiro) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿ ಬೆಂಗಳೂರಿನನ ಮೈಸೂರು ರೋಡಿನಲ್ಲಿರುವ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಎಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

tharun sudhir and sonal monteiro

ಈಗ ಇನ್ನೊಮ್ಮೆ ಸೆಪ್ಟೆಂಬರ್ 1ರಂದು ಮಂಗಳೂರಿನಲ್ಲಿ ಕ್ರಿಶ್ಚಿಯನ್‌ ಸಂಪ್ರದಾಯದಂತೆ ಮದುವೆಯಾಗಲು ಹೊರಟಿದ್ದಾರೆ. ಈಗಾಗಲೆ ಮದುವೆ ಸಮಾರಂಭ ಆರಂಭವಾಗಿದ್ದು, ಫೋಟೊಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.

ಈಗಾಗಲೆ ಹತ್ತಿರದವರಿಗೆ ಆಮಂತ್ರಣ ನೀಡಿರುವ ಸೋನಲ್-ತರುಣ್, ಕುಟುಂಬಸ್ಥರು ಮತ್ತು ಆತ್ಮೀಯರ ಸಮ್ಮುಖದಲ್ಲಿ ಈ ಮದುವೆ ನಡೆಯಲಿದೆ. ಈ ಹಿಂದೆ ಚಿರಂಜೀವಿ ಸರ್ಜಾ-ಮೇಘನಾ ಸರ್ಜಾ ಅವರು ಹಿಂದು-ಕ್ರಿಶ್ಚಿಯನ್ ಧರ್ಮದ ಪ್ರಕಾರ ಮದುವೆಯಾಗಿದ್ದರು.

ಈಗ ಸೋನಲ್, ತರುಣ್ ಸಹ ಸಜ್ಜಾಗಿದ್ದಾರೆ. ಕ್ರಿಶ್ಚಿಯನ್ ಧರ್ಮದಲ್ಲಿ ಮದುವೆ ಹೆಣ್ಣು ಗುರುಗಳು ಅಥವಾ ಗುರುಗಳ ಪ್ರತಿನಿಧಿಯ ಮುಂದೆ ಎಲ್ಲರೆದುರಿಗೆ ತನ್ನ ಒಪ್ಪಿಗೆಯನ್ನು ವ್ಯಕ್ತಪಡಿಸಬೇಕಾಗುತ್ತದೆ.

ಮಂಗಳೂರಿನಲ್ಲಿ ವಿವಾಹ ಸಂಭ್ರಮ ಆರಂಭವಾಗಿದ್ದು ಮದುವೆ ಪ್ರಯುಕ್ತ ಸುಂದರವಾಗಿ ಡೆಕೋರೇಶನ್ ಮಾಡಲಾಗಿದೆ. ಸೋನಲ್ ಅವರ ಕುಟುಂಬಸ್ಥರು ಹೆಚ್ಚಾಗಿ ಭಾಗಿಯಾಗಿದ್ದು, ವಿವಾಹ ಪೂರ್ವದ ಶಾಸ್ತ್ರಕ್ಕೆ ಸೋನಲ್ ಅವರು ಹಳದಿ ಬಣ್ಣದ ಡ್ರೆಸ್ ಧರಿಸಿದ್ದರು. ಈಗಾಲೆ ಹಿಂದು ಸಂಪ್ರದಾಯದಲ್ಲಿ ಮದುವೆಯಾದ ಸೋನಲ್‌, ಮತ್ತೊಮ್ಮೆ ಮದುವೆಯಾಗುತ್ತಿರುವ ಖುಷಿಯಲ್ಲಿ ಇದ್ದಾರೆ.

ಇದನ್ನೂ ಓದಿ: Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

Continue Reading

ಸ್ಯಾಂಡಲ್ ವುಡ್

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

Renuka swamy Murder case : ರೇಣುಕಾ ಸ್ವಾಮಿ ಕೊಲೆ ಕೇಸ್‌ ಎ1 ಆರೋಪಿ ಆಗಿರುವ ಪವಿತ್ರಾಗೌಡ (Pavitra Gowda) ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ. ಈ ಮೂಲಕ ಪವಿತ್ರಾಗೆ ಜೈಲುವಾಸ ಮುಂದುವರಿದಿದೆ.

VISTARANEWS.COM


on

By

Renuka Swamy murder case Pavithra Gowdas bail plea rejected
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ಪವಿತ್ರಾಗೌಡ (Pavitra Gowda) ಪರ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಜಾಗೊಳಿಸಿ ಸಿಸಿಎಚ್‌ (CCH)57ನೇ ನ್ಯಾಯಾಲಯದ ನ್ಯಾಯಾಧೀಶರಾದ ಜೈ ಶಂಕರ್‌ ಆದೇಶ ಹೊರಡಿಸಿದ್ದಾರೆ. ಎ1 ಆರೋಪಿ‌ ಪವಿತ್ರಾಗೌಡ ಪರ ಅನುಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ.

ದರ್ಶನ್- ಪವಿತ್ರಾ ದೂರದೂರವಾದರೂ ಒಂದಾಯಿತು ಇವರಿಬ್ಬರ ಮನೆಯ ಶ್ವಾನಗಳು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Jail) ಬಳ್ಳಾರಿ ಜೈಲಿಗೆ (Bellary Jail) ನಟ ದರ್ಶನ್ (Actor Darshan) ಸ್ಥಳಾಂತರಗೊಂಡಿದ್ದರೂ ಪವಿತ್ರಾ ಗೌಡ (Pavitra Gowda) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. ಹೀಗಾಗಿ ದರ್ಶನ್ ಮತ್ತು ಪವಿತ್ರಾ ದೂರದೂರವಾಗಿದ್ದಾರೆ. ಆದರೆ ಇವರಿಬ್ಬರ ಶ್ವಾನಗಳು ಮಾತ್ರ ಇದೀಗ ಒಂದಾಗಿವೆ.

ದರ್ಶನ್ ಮತ್ತು ಪವಿತ್ರ ಗೌಡ ಜೈಲು ಸೇರುತ್ತಿದ್ದ ಹಾಗೆ ಇವರ ಶ್ವಾನಗಳು ಒಂದಾಗಿದ್ದವು. ಪವಿತ್ರಗೌಡ ಮನೆಯಲ್ಲಿದ್ದ ಶ್ವಾನಗಳನ್ನು ದರ್ಶನ್ ಮನೆಗೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಈಗ ದರ್ಶನ್ ಮತ್ತು ಪವಿತ್ರಾ ಗೌಡ ಮನೆಯ ಶ್ವಾನಗಳು ಸ್ನೇಹಿತರಾಗಿದೆ.


ಪವಿತ್ರಾ ಗೌಡ ಮನೆಯಲ್ಲಿದ್ದ ವೈಟ್ ಫ್ರೆಂಚ್ ಬುಲ್ ಡಾಗ್ ಮತ್ತು ಬೆಲ್ಜಿಯಂ ಮಲಿನಾಯ್ಸ್ ತಳಿಯ ಶ್ವಾನಗಳು ಮನೆಯೊಡತಿ ಇಲ್ಲದೆ ಸೊರಗಿದ್ದವು. ಅವುಗಳನ್ನು ಪೀಪಲ್ಸ್ ಫಾರ್ ಅನಿಮಲ್ಸ್ ಟೀಂ ರಕ್ಷಣೆ ಮಾಡಿತ್ತು. ಬಳಿಕ ಅಧಿಕಾರಿಗಳು ಅವುಗಳನ್ನು ದರ್ಶನ್ ಮನೆಗೆ ಬಿಟ್ಟಿದ್ದಾರೆ.

ಶ್ವಾನ ಪ್ರೇಮಿಯಾಗಿದ್ದ ದರ್ಶನ್ ಸ್ನೇಹಿತೆ ಪವಿತ್ರಾಗೌಡ ಮನೆಯಲ್ಲಿ ವಿವಿಧ ತಳಿಯ 3 ಶ್ವಾನಗಳಿದ್ದವು. ಅವುಗಳಲ್ಲಿ ಒಂದನ್ನು ಕುಟುಂಬಸ್ಥರು ತೆಗೆದುಕೊಂಡು ಹೋಗಿದ್ದಾರೆ. ಒಲಿದ ಎರಡು ಶ್ವಾನಗಳನ್ನು ಪವನ್ ನೋಡಿಕೊಳ್ಳುತ್ತಿದ್ದ. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಮತ್ತು ಪವನ್ ಜೈಲು ಸೇರಿದ್ದಾರೆ. ಬಳಿಕ ಶ್ವಾನಗಳನ್ನು ನೋಡಿಕೊಳ್ಳುವವರಿಲ್ಲದೆ ಅವುಗಳು ಸೊರಗಿದ್ದವು.

Actor Darshan
Actor Darshan


ದರ್ಶನ್ ಮನೆಗೆ ಎಂಟ್ರಿ

ಪವಿತ್ರಾ ಮತ್ತು ಪವನ್ ಜೈಲು ಸೇರಿದ್ದರಿಂದ ಸರಿಯಾಗಿ ಆಹಾರ ಇಲ್ಲದೆ ಬಲಹೀನವಾಗಿದ್ದ ಶ್ವಾನಗಳ ದೃಶ್ಯ ಕಣ್ಣೀರು ತರಿಸುವಂತ್ತಿತ್ತು. ಇದನ್ನು ತಿಳಿದು ಅಲರ್ಟ್ ಆದ ಪೀಪಲ್ಸ್ ಫಾರ್ ಅನಿಮಲ್ಸ್ ಟೀಂ ಈ ವಿಚಾರವನ್ನು ಆರ್.ಆರ್. ನಗರದ ಪೊಲೀಸರ ಗಮನಕ್ಕೆ ತಂದಿದ್ದರು.

ಪೀಪಲ್ಸ್ ಫಾರ್ ಅನಿಮಲ್ಸ್ ನ‌ ಲೀನಾ ಮತ್ತು ಹರೀಶ್ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಿಬಿಎಂಪಿ ಪಶುಸಂಗೋಪನಾ‌ ಇಲಾಖೆಗೆ ಮಾಹಿತಿ ನೀಡಿರುವ ಪೊಲೀಸರು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳ ಸಹಾಯದಿಂದ ಪವಿತ್ರಾ ಮನೆಯಲ್ಲಿದ್ದ ಎರಡು ಶ್ವಾನವನ್ನು ದರ್ಶನ್ ಮನೆಗೆ ಸ್ಥಳಾಂತರಿಸಿದ್ದಾರೆ. ದರ್ಶನ್ ಮನೆಯಲ್ಲಿ ಶ್ವಾನಗಳನ್ನು ನೋಡಿಕೊಳ್ಳಲು ಕೇರ್ ಟೇಕರ್ ಗಳು ಇರುವುದರಿಂದ ಈ ಶ್ವಾನಗಳನ್ನು ದರ್ಶನ್ ಮನೆಗೆ ಸ್ಥಳಾಂತರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Girl commits suicide after being fed up with rumours of love
ಮಂಡ್ಯ2 mins ago

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Do you know when Darshan got royalty in Central Jail
ಸಿನಿಮಾ34 mins ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ38 mins ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

police Firing
ಕಲಬುರಗಿ2 hours ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

karnataka weather Forecast
ಮಳೆ7 hours ago

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ16 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ17 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ17 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ17 hours ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್22 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌