Actor Darshan : ರೇಣುಕಾಸ್ವಾಮಿ ಕೊಲೆಗೂ ಮೊದಲು, ನಂತರ ದರ್ಶನ್ ಹಾಗೂ ಪವಿತ್ರ ಮಾತಾಡಿದ್ದು ಜಸ್ಟ್‌ 16 ಸೆಕೆಂಡ್! - Vistara News

ಬೆಂಗಳೂರು

Actor Darshan : ರೇಣುಕಾಸ್ವಾಮಿ ಕೊಲೆಗೂ ಮೊದಲು, ನಂತರ ದರ್ಶನ್ ಹಾಗೂ ಪವಿತ್ರ ಮಾತಾಡಿದ್ದು ಜಸ್ಟ್‌ 16 ಸೆಕೆಂಡ್!

Actor Darshan : ರೇಣುಕಾಸ್ವಾಮಿ ಕೊಲೆಗೂ ಮೊದಲು, ನಂತರ ದರ್ಶನ್ ಹಾಗೂ ಪವಿತ್ರ ಮಾತಾಡಿದ್ದು ಜಸ್ಟ್‌ 16 ಸೆಕೆಂಡ್ ಅಂತೆ. ಡೆವಿಲ್ ಗ್ಯಾಂಗ್ ರೇಣುಕಾಸ್ವಾಮಿಗೆ ಬಲವಂತವಾಗಿ ಬಿರಿಯಾನಿ ತಿನ್ನಿಸಿದ್ದರಂತೆ.

VISTARANEWS.COM


on

Darshan and Pavitra spoke for just 16 seconds before and after Renukaswamys murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder) ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾದ ಬೆನ್ನಲ್ಲೆ ಮತ್ತಷ್ಟು ರಹಸ್ಯಗಳ ಬೆಳಕಿಗೆ ಬರುತ್ತಿವೆ. ಇದರಲ್ಲಿ ಪವಿತ್ರಗೌಡ ಹಾಗೂ ದರ್ಶನ್ (Actor Darshan) ಇಡೀ ಪ್ರಕರಣದಲ್ಲಿ ಮಾತನಾಡಿರುವುದು ಕೇವಲ 16 ಸೆಕೆಂಡ್ ಮಾತ್ರವಂತೆ! ಇಷ್ಟಕ್ಕೂ ಅವರಿಬ್ಬ ನಡುವೆ ನಡೆದ ಸಂಭಾಷಣೆ ಏನು ಎನ್ನುವ ಮಾಹಿಯಿ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನೆದಿನೇ ಡೆವಿಲ್ ಗ್ಯಾಂಗ್ ಪ್ರದರ್ಶಿಸಿರುವ ಮೃಗೀಯ ವರ್ತನೆ ಒಂದು ಕಡೆ ಬಹಿರಂಗವಾಗುತ್ತಿದೆ. ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆಗೂ ಮೊದಲು, ನಂತರ ಏನೆಲ್ಲಾ‌ ಪಿತೂರಿ, ಸಂಭಾಷಣೆ ನಡಿತು ಎನ್ನುವುದು ಆರೋಪಿಗಳ ಮೊಬೈಲ್ ರಿಟ್ರೀವ್ ವೇಳೆ ಬಯಲಿಗೆ ಬಂದಿದೆ. ಅದರಲ್ಲಿ ರೇಣುಕಾಸ್ವಾಮಿ ಕೊಲೆಗೂ ಮೊದಲು- ಕೊಲೆ ನಂತರ ಪವಿತ್ರಗೌಡ ಹಾಗೂ ದರ್ಶನ್ ವಾಟ್ಸಾಪ್ ಕಾಲ್‌ನಲ್ಲಿ 16 ಸೆಕೆಂಡ್ ಮಾತನಾಡಿರುವುದು ಬೆಳಕಿಗೆ ಬಂದಿದೆ.

ಭೀಕರ ಹಲ್ಲೆ, ಕೊಲೆ ಬಗ್ಗೆ ವೈದ್ಯಕೀಯ ವರದಿ ಕೇಳಿದ ಪೊಲೀಸರು!

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಇದುವರೆಗೂ ಆರು ಪ್ರಮುಖ ವೈದ್ಯಕೀಯ ರಿಪೋರ್ಟ್‌ಗಳು ಪೊಲೀಸರ ಕೈ ಸೇರಿವೆ.  ಆರು ರಿಪೋರ್ಟ್‌ಗಳು ಆರೋಪಿಗಳಿಗೆ ವಿರುದ್ಧವಾಗಿಯೇ ಇದ್ದು, ಆತಂಕ ಉಂಟು ಮಾಡಿದೆ. ಹಾಗಾದರೆ ಪೊಲೀಸರು ಕೇಳಿದ್ದ ಆರು ವರದಿ ಯಾವ್ಯಾವುದು..

1.ಮರಣೋತ್ತರ ಪರೀಕ್ಷೆಯ ಅಭಿಪ್ರಾಯ ವರದಿ
2.ಮೃತದೇಹದ ಮೇಲೆ ಉಂಟಾದ ಗಾಯಗಳ ವಿವರ
3.ಎಫ್ಎಸ್ಎಲ್ ಹಾಗೂ ಡಿಎನ್ಎ ಮ್ಯಾಚಿಂಗ್ ರಿಪೋರ್ಟ್
4.ತಲೆ ಮೇಲಿನ ಗಾಯದ ರೀತಿ ಬಗ್ಗೆ ವರದಿ
5.ಶೂ ಅಥವಾ ಚಪ್ಪಲಿಯಿಂದ ಎದೆಭಾಗಕ್ಕೆ ತುಳಿದ ಬಗ್ಗೆ ವರದಿ
6.ಶೂ ಅಥವಾ ಚಪ್ಪಲಿಯಿಂದ ಮಾರ್ಮಾಂಗಕ್ಕೆ ಒದ್ದ ಬಗ್ಗೆ ವರದಿ

ಈ ಆರು ವಿಚಾರಗಳ ಬಗ್ಗೆ ವೈದ್ಯರಿಂದ ಅಭಿಪ್ರಾಯ ವರದಿ ಪಡೆದ ಪೊಲೀಸರು, ಅವುಗಳ ವರಿದಿಗಳನ್ನು ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ರೇಣುಕಾಸ್ವಾಮಿ ದೇಹದ ಮೇಲಿನ 39 ಗಾಯಗಳ ಬಗ್ಗೆ ಉಲ್ಲೇಖ ಆಗಿದೆ.  ತಲೆ, ಕಿವಿ, ಕಣ್ಣು, ಎದೆ, ಬೆನ್ನು, ಕೈ ಮೇಲಿನ ಗಾಯಗಳ ಬಗ್ಗೆ ವರದಿಯಲ್ಲಿ ಇದೆ. ಎಫ್ಎಸ್ಎಲ್ ಹಾಗೂ ಡಿಎನ್ಎ ಮ್ಯಾಚಿಂಗ್ ವರದಿ ಕೂಡ ಬಂದಿದ್ದು, ಆರೋಪಿಗಳ ಬಟ್ಟೆ, ಶೂ, ಚಪ್ಪಲಿಗಳ ಮೇಲೆ ಡಿಎನ್ಎ ಮ್ಯಾಚ್ ಆಗಿದೆ‌. ತಲೆ ಮೇಲಿನ ಗಾಯದ ಬಗ್ಗೆ ಪ್ರತ್ಯೇಕ ವರದಿ ನೀಡಿದ್ದಾರೆ. ಇದರ ಜತೆಗೆ ಶೂನಿಂದ ಮಾರ್ಮಾಂಗಕ್ಕೆ ಒದ್ದಿದ್ದ ಬಗ್ಗೆಯೂ ವರದಿ ನೀಡಿದ್ದು ಇದೆಲ್ಲ ಆರೋಪಿಗಳಿಗೆ ಮುಂದೆ ಸಂಕಷ್ಟ ತರುವುದು ಪಕ್ಕ.

ಇದನ್ನೂ ಓದಿ: DK Shivakumar :ಮುಡಾ ಕೇಸ್‌ ಡೈವರ್ಟ್‌ಗೆ ದರ್ಶನ್‌ ಫೋಟೊ ರಿಲೀಸ್‌; ಪ್ರಲ್ಹಾದ್ ಜೋಶಿ ಆರೋಪಕ್ಕೆ ಡಿಸಿಎಂ ಡಿಕೆಶಿ ಟಾಂಗ್

ಬಲವಂತವಾಗಿ ಬಿರಿಯಾನಿ ತಿನ್ನಿಸಿದ ಡೆವಿಲ್ ಗ್ಯಾಂಗ್

ಇನ್ನು ಚಾರ್ಜ್ ಶೀಟ್‌ನಲ್ಲಿ ಡೆವಿಲ್ ಗ್ಯಾಂಗ್ ಅಮಾನವೀಯ ಹಲ್ಲೆ ನಡೆಸುವ ಜತೆಗೆ ವಿಕೃತಿ ಮೆರೆದಿದ್ದಾರೆ. ಕಿಡ್ನ್ಯಾಪ್ ಮಾಡಿಕೊಂಡ ಬಳಿಕ ರೇಣುಕಾಸ್ವಾಮಿಗೆ ಬಲವಂತವಾಗಿ ಬಿರಿಯಾನಿ ತಿನ್ನಿಸಿದ್ದಾರೆ. ನಾನು ಜಂಗಮ ನಾನ್ ವೆಜ್ ತಿನ್ನಲ್ಲ ಅಂತ ಹೇಳಿದರೂ ಊಟಕ್ಕೆ ಬೆಲೆ ಕೊಡೋ ಎಂದು ಭಯ ಪಡಿಸಿ, ಬೇಡ ಬೇಡ ಅಂದರು ಚಿಕನ್ ಬಿರಿಯಾನಿ ತಿನ್ನಿಸಿ ಕ್ರೌರ್ಯ ಮೆರೆದಿರುವುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಕೊಲೆಗೂ ಮುನ್ನ ರಾಬ್ರಿ ಮಾಡಿದ ಡಿ ಗ್ಯಾಂಗ್‌

ಮತ್ತೊಂದೆಡೆ ರೇಣುಕಾಸ್ವಾಮಿ ಕಿಡ್ನಾಪ್ ಹೊತ್ತಲ್ಲಿ ಸುಲಿಗೆ ಮಾಡಿದ್ದಾರೆ. ಮಾರ್ಗ ಮಧ್ಯೆ ರೇಣುಕಾಸ್ವಾಮಿಯ ರಾಬರಿ ಮಾಡಿದ್ದ ಎ4 ಆರೋಪಿ ರಾಘವೇಂದ್ರ ರೇಣುಕಾಸ್ವಾಮಿಯ ಚೈನ್, ರಿಂಗ್, ವಾಚ್ ಮತ್ತು ಲಿಂಗದ ಕರಡಿಕೆ ಸುಲಿಗೆ ಮಾಡಿರೋದು ಸಹ ಉಲ್ಲೇಖಿಸಲಾಗಿದೆ.

ಪತಿಗೆ ಜಾಮೀನು ಕೊಡಿಸಲು ಪರದಾಡುತ್ತಿರು ವಿಜಯಲಕ್ಷ್ಮೀ

ಇವೆಲ್ಲ ಒಂದು ಕಡೆಯಾದರೆ ಮತ್ತೊಂದೆಡೆ ಚಾರ್ಜ್ ಶೀಟ್ ಸಲ್ಲಿಕೆಯಾಗುತ್ತಿದ್ದಂತೆ ವಕೀಲರ ಜತೆ ಚರ್ಚೆ ಮಾಡಿರುವ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸೋಮವಾರ ಜಾಮೀನು ಅರ್ಜಿ ಸಲ್ಲಿಕೆಗೆ ನಿರ್ಧಾರ ಮಾಡಿದ್ದಾರೆ. ಅದಂತೆ ಬಳ್ಳಾರಿ ಜೈಲಿಗೆ ಹೋದ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ಜಾಮೀನು ವಕಾಲತ್ತಿಗೆ ಸಹಿ ಪಡೆದಿದ್ದಾರೆ. ಸದ್ಯ ಕೋರ್ಟ್ ನಲ್ಲಿ ಸಿಸಿ ನಂಬರ್ ಆಗಿದ್ದು, ಆರೋಪಿಗಳ ಪರ ವಕೀಲರಿಗೆ ಸೋಮವಾರ ಚಾರ್ಜ್ ಶೀಟ್ ಪ್ರತಿ ಸಿಗಲಿದೆ. ಬಳಿಕ ಅದನ್ನು ಪರಿಶೀಲನೆ ನಡೆಸಿ ಸೋಮವಾರ ಅಥವಾ ಮಂಗಳವಾರ ನಟ ದರ್ಶನ್ ಜಾಮೀನು ಕೋರಿ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಹಾಕುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar :ಮುಡಾ ಕೇಸ್‌ ಡೈವರ್ಟ್‌ಗೆ ದರ್ಶನ್‌ ಫೋಟೊ ರಿಲೀಸ್‌; ಪ್ರಲ್ಹಾದ್ ಜೋಶಿ ಆರೋಪಕ್ಕೆ ಡಿಸಿಎಂ ಡಿಕೆಶಿ ಟಾಂಗ್

Muda case : ಸಿಎಂ ಸಿದ್ದರಾಮಯ್ಯರ ಮುಡಾ ಕೇಸ್‌ ಡೈವರ್ಟ್‌ ಮಾಡಲು ನಟ ದರ್ಶನ್‌ ಫೋಟೊ ರಿಲೀಸ್‌ ಮಾಡಿದ್ದಾರೆ ಎಂದು ಸಂಸದ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಹದಾಯಿ, ಭದ್ರಾ ಯೋಜನೆಗಳಿಗೆ ಅನುಮತಿ, ಹಣ ಕೊಡಿಸಲು ಪ್ರಹ್ಲಾದ ಜೋಶಿಯವರಿಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ ಎಂದು ಟಾಂಗ್‌ (DK Shivakumar) ಕೊಟ್ಟರು.

VISTARANEWS.COM


on

By

Pralhad Joshi and Dk Shivakumar
Koo

ಬೆಂಗಳೂರು: ಸಂಸದರೇ ನಟ ದರ್ಶನ್, ಮುಡಾ ವಿಚಾರ ಎಲ್ಲವನ್ನು ಬಿಟ್ಟುಬಿಡಿ. ಮಹದಾಯಿಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ ಎಂದು ಗಣೇಶ ಹಬ್ಬದ ದಿನ ಕೈ ಮುಗಿದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಈ ಎರಡು ಯೋಜನೆಗಳಿಗೆ ಇರುವ ವಿಘ್ನ ನಿವಾರಣೆ ಮಾಡಿಸಿ.. ಇಲ್ಲಿಂದಲೇ ನಿಮಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ವ್ಯಂಗ್ಯ ಮಾಡಿದರು.

ಮುಡಾ, ವಾಲ್ಮೀಕಿ ಪ್ರಕರಣದ ಹಾದಿ ತಪ್ಪಿಸಲು ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜೈಲಿನ ಒಳಗಡೆ ಇರುವ ಫೋಟೋವನ್ನು ಸರ್ಕಾರವೇ ಬಿಡುಗಡೆ ಮಾಡಿದೆ ಎನ್ನುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಡಿಸಿಎಂ ಈ ರೀತಿ ಪ್ರತಿಕ್ರಿಯಿಸಿದರು.

ಸದಾಶಿವ ನಗರದ ನಿವಾಸದ ಬಳಿ ಮಾತನಾಡಿದ ಅವರು “ಮಹದಾಯಿ ವಿಚಾರವಾಗಿ ಸರ್ವ ಪಕ್ಷ ಸಭೆ ಅಥವಾ ನಿಯೋಗದ ಸಭೆ ನಡೆಸುವುದೋ ಎನ್ನುವ ಬಗ್ಗೆ 15 ದಿನಗಳಲ್ಲಿ ಮುಖ್ಯಮಂತ್ರಿಗಳ ಬಳಿ ಮಾತನಾಡಲಾಗುವುದು. ಹಾಗೂ ನಮ್ಮ ಹೋರಾಟದ ಸ್ವರೂಪದ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದರು. ಜೋಶಿ ಅವರು ಸರ್ಕಾರದ ಮೇಲೆ ಮಾಡಿರುವ ಗಂಭೀರ ಆರೋಪದ ಬಗ್ಗೆ ಮರು ಪ್ರಶ್ನಿಸಿದಾಗ “ಅವರು ಮಾಡುತ್ತಿರಲಿ” ಎಂದರು.

ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ

ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಭಗೀರಥ ಎಂದು ಕರೆಯುತ್ತೇನೆ ಎನ್ನುವ ಸಂಸದ ಸುಧಾಕರ್ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಸಂಸದ ಡಾ. ಕೆ.ಸುಧಾಕರ್ ಅವರು ಸವಾಲು ಹಾಕಿದ್ದಾರೆ. ಈ ಸವಾಲನ್ನು ನಾನು ಪ್ರೀತಿ, ಗೌರವಗಳಿಂದ ಸ್ವೀಕರಿಸುತ್ತೇನೆ. ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದೂ ಭಾವಿಸುತ್ತೇನೆ. ಅವರೂ ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಇದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ” ಎಂದರು.

“ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಬೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ” ಎಂದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ಆನಂತರ ಎತ್ತಿನಹೊಳೆ ಯೋಜನೆಯಲ್ಲಿ ತುಮಕೂರು, ದೊಡ್ಡಬಳ್ಳಾಪುರ ಭಾಗದ ಸಮಸ್ಯೆಗಳ ವಿವರಣೆ ಹಾಗೂ ಅರಣ್ಯ ಭೂಮಿ ಸ್ವಾಧೀನ ತೊಂದರೆಗಳನ್ನು ಮುಖ್ಯಮಂತ್ರಿಗಳ ಬಳಿ ಒಂದು ವಾರಗಳ ನಂತರ ಮಾತನಾಡಿ ಬಗೆಹರಿಸಲಾಗುವುದು ಎಂದು ಹೇಳಿದರು.

ಇನ್ನು ಒಂದು ತಿಂಗಳಲ್ಲಿ ಕೋವಿಡ್ ವರದಿಯನ್ನು ನೀಡುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವ ಕಾರಣಕ್ಕೆ ಸುಧಾಕರ್ ಅವರು ನಿಮ್ಮನ್ನು ಪದೇಪದೇ ಹೊಗಳುತ್ತಿದ್ದಾರೆಯೇ ಎಂದು ಕೇಳಿದಾಗ “ನನಗೆ ಕೋವಿಡ್ ವರದಿಯ ಬಗ್ಗೆ ಏನು ಗೊತ್ತಿಲ್ಲ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಾನು ಭಾಗವಹಿಸಿರಲಿಲ್ಲ. ಸಕಲೇಶಪುರದ ಎತ್ತಿನಹೊಳೆಯಲ್ಲಿದ್ದೆ” ಎಂದರು.

ಈಗ ಎಂಪಿ ಸುಧಾಕರ್ ಅಲ್ಲವೇ?

ಮಾತಿನ ಮಧ್ಯೆ ಡಿಸಿಎಂ ಅವರು “ಸುಧಾಕರ್ ಈಗ ಎಂಪಿ ಅಲ್ಲವೇ? ಎಂದು ಮಾಧ್ಯಮದವರ ಬಳಿ ಪ್ರಶ್ನಿಸಿದರು. ನಮ್ಮಲ್ಲಿ ಇಬ್ಬರು ಸುಧಾಕರ್ ಇದ್ದಾರೆ. ಇವರೂ ಸೇರಿ ಮೂರು ಜನ ಆಗುತ್ತಾರೆ. ನಮ್ಮವರು ಇಬ್ಬರೂ ಮಂತ್ರಿಗಳು. ಇವರು ಸಂಸದರು ಎಂದಾಗ, ಮಾಧ್ಯಮದವರು ‘ಮಾಜಿ ಸಚಿವರು ಆಗಿದ್ದರು’ ಎಂದು ಹೇಳಿದಾಗ ಮಾಜಿ ಸಚಿವ ಸುಧಾಕರ್” ಎಂದರು.

ಬಯಲು ಸೀಮೆಯಲ್ಲಿ ಇನ್ನು ಕೆರೆಗಳು ತುಂಬಿಲ್ಲ

“ಗೌರಿ ಹಬ್ಬದ ದಿನ ಗಂಗೆಯನ್ನು ಪೂಜೆ ಮಾಡಿ ಸಂಭ್ರಮ ಪಟ್ಟಿದ್ದೇವೆ. ಇದನ್ನು ಒಂದು ಒಂದಷ್ಟು ಜನ ನೋಡಿ ಸಂಭ್ರಮಪಟ್ಟಿದ್ದಾರೆ ಟೀಕೆ ಮಾಡಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆಬಿದ್ದು ಜಲಾಶಯಗಳು ತುಂಬಿವೆ. ಬಯಲು ಸೀಮೆಯಲ್ಲಿ ಒಂದಿಷ್ಟು ಕಡೆ ಮಳೆ ಕಡಿಮೆಯಾಗಿದೆ. ಮಂಡ್ಯ ಬೆಂಗಳೂರು ಗ್ರಾಮಾಂತರ ತುಮಕೂರು ಈ ಭಾಗದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಎತ್ತಿನಹೊಳೆ ಯೋಜನೆ ಪ್ರಗತಿ ಕಂಡಿರಲಿಲ್ಲ. ಇದಕ್ಕೆ ನಾನಾ ಕಾರಣಗಳು ಇರಬಹುದು” ಎಂದು ಹೇಳಿದರು.

Continue Reading

ಕ್ರೈಂ

Road Accident : ಗಣೇಶ ಹಬ್ಬದ ದಿನವೇ ಡೆಡ್ಲಿ ಆ್ಯಕ್ಸಿಡೆಂಟ್ಸ್‌; ಐವರು ಸ್ಥಳದಲ್ಲೇ ಸಾವು

Road Accident : ಗಣೇಶ ಹಬ್ಬದ ದಿನವೇ ಪ್ರತ್ಯೇಕ ಕಡೆಗಳಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಬ್ಬದ ಸಂಭ್ರಮದಲ್ಲಿ ಇರಬೇಕಾದ ಕುಟುಂಬಗಳಲ್ಲಿ ಈಗ ಸೂತಕ ಛಾಯೆ ಆವರಿಸಿದೆ.

VISTARANEWS.COM


on

By

Deadly accidents on the day of Ganesh festival Five killed on the spot
Koo

ಬೆಂಗಳೂರು: ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಚಾಲಕ ದುರ್ಮರಣ ಹೊಂದಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಸಂಚಾರ ಠಾಣಾ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ಘಟನೆ ನಡೆದಿದೆ. ಕಿರಣ್ (32) ಮೃತ ದುರ್ದೈವಿ. ನಿನ್ನೆ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಕಾರೊಂದು ಮುದ್ದಿನಪಾಳ್ಯ ಕಡೆಯಿಂದ ದೀಪಾ ಕಾಂಪ್ಲೆಕ್ಸ್ ಕಡೆಗೆ ತೆರಳುತ್ತಿತ್ತು.

ಈ ವೇಳೆ ಎದುರಿಗೆ ಬರುತ್ತಿದ್ದ ಆಟೋಗೆ ಕಾರು ಡಿಕ್ಕಿಯಾಗಿದೆ. ಘಟನೆಯಿಂದ ಆಟೋ ಚಾಲಕ ಮತ್ತು ಪ್ರಯಾಣಿಕನಿಗೆ ಗಾಯವಾಗಿತ್ತು. ಕೂಡಲೇ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಧ್ಯರಾತ್ರಿ ಆಟೋ ಚಾಲಕ ಕಿರಣ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕ ಗುರು ರಾಘವೇಂದ್ರ ಎಂಬಾತ ವಿರುದ್ಧ ಪ್ರಕರಣ ದಾಖಲಾಗಿದೆ.

ನಿಂತಿದ್ದ ಟ್ರ್ಯಾಕ್ಟರ್ ಬೈಕ್ ಡಿಕ್ಕಿ; ಬಸ್‌ ಹರಿದು ಸವಾರರಿಬ್ಬರು ದುರ್ಮರಣ

ನಿಂತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಂದ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಮರೇಶ್ ಬಸಯ್ಯ ಬೆನಕನಾಳಮಠ (21), ಶರಣಬಸಯ್ಯ ಬಸಯ್ಯ ಬೆನಕನಾಳಮಠ (16) ಮೃತ ದುರ್ದೈವಿ.

ಮೃತ ಅಮರೇಶ್ ಮತ್ತು ಬಸಯ್ಯ ಇಬ್ಬರು ಅಣ್ಣ -ತಮ್ಮಂದಿರು. ‌ ಮೂಲತಃ ಇಳಕಲ್ಲ ನಗರ ನಿವಾಸಿಯಾಗಿದ್ದಾರೆ. ಪಲ್ಸರ್ ಬೈಕ್ ಮೂಲಕ ಬಾಗಲಕೋಟೆಯಿಂದ ಇಳಕಲ್ಲಗೆ ತೆರಳುತ್ತಿದ್ದರು. ಇತ್ತ ಡಿಸೇಲ್ ಖಾಲಿ ಆಗಿದ್ದರಿಂದ ರಸ್ತೆ ಪಕ್ಕ ಟ್ರ್ಯಾಕ್ಟರ್‌ಗೆ ನಿಲ್ಲಿಸಲಾಗಿತ್ತು. ನಿಂತಿದ್ದ ಟ್ರ್ಯಾಕ್ಟರ್‌ ಹಿಂಬದಿಗೆ ಬೈಕ್‌ ಡಿಕ್ಕಿ ಹೊಡೆದಿದೆ.

ಬೈಕ್‌ನಿಂದ ಕೆಳಗೆ ಬಿದ್ದವರ ಮೇಲೆ ಚಲಿಸುತ್ತಿದ್ದ ಬಸ್ ಅಡಿಗೆ ಸಿಲುಕಿ ಸಹೋದರರು ಮೃತಪಟ್ಟಿದ್ದಾರೆ. ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಮಿನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಅಮಿನಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಸ್ತೆ ದಾಟುತ್ತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ

ರಸ್ತೆ ದಾಟುತ್ತಿದ್ದ ಮಹಿಳೆಗೆ ಆಟೋವೊಂದು ಡಿಕ್ಕಿ ಹೊಡೆದಿದೆ. ಮಂಗಳೂರಿನ ಕಿನ್ನಿಗೋಳಿಯ ರಾಮನಗರ ಬಳಿ ಅಪಘಾತ ನಡೆದಿದೆ. ಅಪಘಾತದಲ್ಲಿ ರಾಜರತ್ನಪುರ ನಿವಾಸಿ ಚೇತನ (35) ಗಂಭೀರ ಗಾಯಗೊಂಡಿದ್ದಾರೆ. ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆ ತರುವಾಗ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಪಲ್ಟಿ ಹೊಡೆದ ಆಟೋ ಎತ್ತಿದ ನಂತರ ತಾಯಿಯನ್ನು ಮಗಳು ಮೇಲಕ್ಕೆತ್ತಿದ್ದಾಳೆ. ಆಟೋ ಚಾಲಕ, ಪ್ರಯಾಣಿಕ ಸೇರಿ ಸ್ಥಳದಲ್ಲಿದ್ದವರಿಗೂ ಸಣ್ಣ ಪುಟ್ಟ ಗಾಯವಾಗಿದೆ. ಆಟೋ ಕಟೀಲಿನಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.

ಟಾಟಾ ಏಸ್ ಆಟೋ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು

ಹಬ್ಬಕ್ಕೆ ಗಣಪತಿ ಮೂರ್ತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್‌ ಆಟೋ ಪಲ್ಟಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಟೋದಲ್ಲಿ 9 ಯುವಕರು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ .ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಘಟನೆ ನಡೆದಿದೆ.
ಶ್ರೀಧರ್ (20), ಧನುಷ್ (20) ಮೃತ ಯುವಕರು.

ಇವರಿಬ್ಬರ ತಲೆಗೆ ಗಂಭೀರ ಗಾಯವಾಗಿತ್ತು, ಹೀಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೂವರು ಯುವಕರಿಗೆ ಹೆಚ್ಚಿನ ಗಾಯವಾಗಿದ್ದು, ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳಾಗಿದ್ದಾರೆ. ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

ಗಣೇಶ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಲಾರಿ ಮಧ್ಯೆ ಅಪಘಾತ

ಗಣೇಶ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಲಾರಿ ಮಧ್ಯೆ ಅಪಘಾತ ನಡೆದಿದೆ. ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಂದು ಲಾರಿಯೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಪ್ಪಳ ತಾಲೂಕಿನ ಕೋಳೂರು ಕ್ರಾಸ್ ಬಳಿ ಅಪಘಾತ ನಡೆದಿದೆ. ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮಕ್ಕೆ ತೆರಳುವಾಗ ಅಪಘಾತ ನಡೆದಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಡುಗಿಯರಿಗಾಗಿ ವ್ಹೀಲಿಂಗ್‌ ಮಾಡುತ್ತಿದ್ದವರು ಅರೆಸ್ಟ್‌

ಬೈಕ್‌ ವ್ಹೀಲಿಂಗ್‌ ಮಾಡುತ್ತಾ ಇನ್ಸ್ಟಾಗ್ರಾಂನಲ್ಲಿ ರೀಲ್ಸ್‌ ಅಪ್ಲೋಡ್ ಮಾಡುತ್ತೀರಾ?ಹಾಗಿದ್ದರೆ ಹುಷಾರಾಗಿರಿ. ಯಾಕೆಂದರೆ ಹುಡುಗೀಯರನ್ನು ಪಟಾಯಿಸಲು ಬಸ್‌ಗಳ ಹಿಂದೆ ವ್ಹೀಲಿಂಗ್‌ ಮಾಡಿ ಫೋಸ್ ಕೊಟ್ಟ ಪುಂಡರು ಅರೆಸ್ಟ್ ಆಗಿದ್ದಾರೆ. ತೌಫೀಕ್‌ ,ಅಸ್ಮಲ್ ,‌ಮುಜಾಯಿದ್ ಬಂಧಿತರು.

ಆರೋಪಿಗಳಿಂದ ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ. ಕಳೆದ ತಿಂಗಳು ವ್ಹೀಲಿಂಗ್‌ ಶೂರರ ಪುಂಡಾಟಿಕೆ ಬಗ್ಗೆ ವಿಸ್ತಾರ ನ್ಯೂಸ್ ವರದಿ ಮಾಡಿತ್ತು. ವಿಸ್ತಾರ ನ್ಯೂಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಚಿಕ್ಕಬಳ್ಳಾಪುರ ಪೊಲೀಸರು, ವ್ಹೀಲಿಂಗ್‌ ಶೂರರ ಸೋಷಿಯಲ್ ಮೀಡಿಯಾಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಬಾಗೇಪಲ್ಲಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡು ಮಹಿಳೆಗೆ ಗುದ್‌ ಬಿಟ್ಟೆ ಎಂದು ಚಿತ್ರ ನಿರ್ದೇಶಕ ನಾಗಶೇಖರ್‌ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

VISTARANEWS.COM


on

By

I lost control of my eyes while driving the car Film director Nagashekhar
Koo

ಬೆಂಗಳೂರು: ನಿನ್ನೆ ಶುಕ್ರವಾರ ಚಿತ್ರ ನಿರ್ದೇಶಕ ನಾಗಶೇಖರ್ (Nagashekar) ಕಾರು (Road Accident) ಅಪಘಾತವಾಗಿತ್ತು. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ ಸಂಭವಿಸಿತ್ತು. ರಭಸವಾಗಿ ಬಂದ ಕಾರು ಮರಕ್ಕೆ ಗುದ್ದಿತ್ತು. ಇತ್ತ ಫುಟ್‌ಪಾತ್‌ ಮೇಲೆ ನಿಂತಿದ್ದ ಮಹಿಳೆಗೂ ಕಾರು ಡಿಕ್ಕಿ ಹೊಡೆದಿತ್ತು.

ಈ ಸಂಬಂಧ ಜ್ಞಾನಭಾರತಿ ಸಂಚಾರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿರುವ ನಾಗಶೇಖರ್, ಕಾರು ಓಡಿಸಿಕೊಂಡು ಬರುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ. ಬಳಿಕ ಕಾರನ್ನು ಫುಟ್‌ಪಾತ್‌ ಮೇಲೆ ಹತ್ತಿಸಿದೆ . ಫುಟ್‌ಪಾತ್ ಮೇಲೆ ನಿಂತಿದ್ದ ಲಕ್ಷ್ಮಿ ಎಂಬ ಮಹಿಳೆಗೆ ಸಣ್ಣ-ಪುಟ್ಟ ಗಾಯವಾಗಿದೆ. ನಾನೇ ಮಹಿಳೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೇನೆ. ಆ ಮಹಿಳೆ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

ಸದ್ಯ ಅಪಘಾತದ ಸಂಬಂಧ ಸಂಚಾರಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ. ಸೆಲ್ಪ್ ಆಕ್ಸಿಡೆಂಟ್ ಹಿನ್ನೆಲೆಯಲ್ಲಿ ಇನ್ಸೂರೆನ್ಸ್ ಕ್ಲೈಮ್ ಮಾಡಲು ಒಂದು ಮೆಮೋ ಕಾಪಿ ಕೊಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನೂ ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ರೈಲ್ವೆ ಟ್ರ್ಯಾಕ್‌ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ರೈಲ್ವೆ ಟ್ರ್ಯಾಕ್‌ಮ್ಯಾನ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೆಲ್ಡಿಂಗ್ ಬಿಟ್ಟಿದ್ದ ಹಳಿಯಲ್ಲಿ ಬರುತ್ತಿದ್ದ ರೈಲು ನಿಲ್ಲಿಸಿ ದುರಂತ ತಪ್ಪಿಸಿದ್ದಾರೆ. ಉತ್ತರಕನ್ನಡದ ಕುಮಟಾ ಹೊನ್ನಾವರದ ಕೊಂಕಣ ರೈಲ್ವೇ ಮಾರ್ಗದಲ್ಲಿ ಘಟನೆ ನಡೆದಿದೆ. ಮಹಾದೇವ್ ರೈಲು ದುರಂತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಆಗಿದ್ದಾರೆ.

Road Accident
Road Accident

ಬೆಳಗ್ಗೆ 5 ಗಂಟೆಗೆ ತಿರುವನಂತಪುರದಿಂದ ನವದೆಹಲಿಗೆ ರಾಜಧಾನಿ ಎಕ್ಸಪ್ರೆಸ್ ರೈಲು ಹೊರಟಿತ್ತು. ಇದೇ ವೇಳೆ ಕುಮಟಾ ಸಮೀಪ ಹಳಿಯಲ್ಲಿ ವೆಲ್ಡಿಂಗ್ ಬಿಟ್ಟಿದ್ದನ್ನು ಮಹಾದೇವ ಗಮನಿಸಿದ್ದರು. ಹೊನ್ನಾವರ ಸ್ಟೇಷನ್ ಮಾಸ್ಟರ್‌ಗೆ ಕರೆಮಾಡಿ ರೈಲು ನಿಲ್ಲಿಸಲು ಮಾಹಿತಿ ನೀಡಿದ್ದರು. ರೈಲು ನಿಲ್ದಾಣ ದಾಟಿದ್ದರಿಂದ ಹಳಿಯಲ್ಲಿ 500 ಮೀಟರ್ ಓಡಿ ರೈಲಿಗೆ ಕೆಂಪು ಬಾವುಟ ತೋರಿಸಿ ನಿಲ್ಲಿಸಿದ್ದಾರೆ. ಟ್ರ್ಯಾಕ್‌ಮ್ಯಾನ್ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Karnataka Weather Forecast : ರಾಜ್ಯಾದ್ಯಂತ ಸೆ.6ರಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ (Rain News) ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಗಾಳಿಯೊಂದಿಗೆ ಮಳೆ ಅಬ್ಬರ

ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.

ಭಾನುವಾರವೂ ಭಾರಿ ಮಳೆ ಎಚ್ಚರಿಕೆ

ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Darshan and Pavitra spoke for just 16 seconds before and after Renukaswamys murder
ಬೆಂಗಳೂರು29 seconds ago

Actor Darshan : ರೇಣುಕಾಸ್ವಾಮಿ ಕೊಲೆಗೂ ಮೊದಲು, ನಂತರ ದರ್ಶನ್ ಹಾಗೂ ಪವಿತ್ರ ಮಾತಾಡಿದ್ದು ಜಸ್ಟ್‌ 16 ಸೆಕೆಂಡ್!

Pralhad Joshi and Dk Shivakumar
ಕರ್ನಾಟಕ1 hour ago

DK Shivakumar :ಮುಡಾ ಕೇಸ್‌ ಡೈವರ್ಟ್‌ಗೆ ದರ್ಶನ್‌ ಫೋಟೊ ರಿಲೀಸ್‌; ಪ್ರಲ್ಹಾದ್ ಜೋಶಿ ಆರೋಪಕ್ಕೆ ಡಿಸಿಎಂ ಡಿಕೆಶಿ ಟಾಂಗ್

Auto driver found dead under mysterious circumstances
ಕೊಡಗು2 hours ago

Suspicious Death : ಬಾಣಂತಿ ಅಕ್ಕನನ್ನು ಮನೆಗೆ ಬಿಟ್ಟು ಹೊರಹೋದ ಆಟೋ ಡ್ರೈವರ್‌ ಶೆಡ್‌ನಲ್ಲಿ ಹೆಣವಾಗಿ ಪತ್ತೆ

Road Accident
ದಕ್ಷಿಣ ಕನ್ನಡ2 hours ago

Road Accident : 2 ದಿನಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಕಾರು ಅಪಘಾತದಲ್ಲಿ ಸಾವು; ಪತಿ ಗಂಭೀರ

Nude video found on Morarji Desai school teachers mobile phone
ಕೋಲಾರ3 hours ago

Morarji Desai School : ವಸತಿ ಶಾಲಾ ಶಿಕ್ಷಕನ‌ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ 5 ಸಾವಿರ ನಗ್ನ ವಿಡಿಯೊ, ಫೋಟೊಗಳು ಪತ್ತೆ!

Deadly accidents on the day of Ganesh festival Five killed on the spot
ಕ್ರೈಂ4 hours ago

Road Accident : ಗಣೇಶ ಹಬ್ಬದ ದಿನವೇ ಡೆಡ್ಲಿ ಆ್ಯಕ್ಸಿಡೆಂಟ್ಸ್‌; ಐವರು ಸ್ಥಳದಲ್ಲೇ ಸಾವು

I lost control of my eyes while driving the car Film director Nagashekhar
ಬೆಂಗಳೂರು6 hours ago

Road Accident: ಕಾರು ಓಡಿಸುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡೆ; ಚಿತ್ರ ನಿರ್ದೇಶಕ ನಾಗಶೇಖರ್‌

her husband was having an illicit relationship Suicide by setting herself on fire
ಬೆಂಗಳೂರು ಗ್ರಾಮಾಂತರ6 hours ago

Self Harming : ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಬಲಿ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Karnataka weather Forecast
ಮಳೆ14 hours ago

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Dina bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 week ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 week ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌