Ganesh Fest 2024 : ಯಡವಟ್ಟು ಆಯ್ತು ತಲೆ ಕೆಟ್ಟು ಹೋಯ್ತು; 65 ಗ್ರಾಂ ಚಿನ್ನದ ಸರ ಸಮೇತ ಗಣೇಶ ವಿಸರ್ಜನೆ ಮಾಡಿದ ಯುವಕರು! - Vistara News

ಬೆಂಗಳೂರು

Ganesh Fest 2024 : ಯಡವಟ್ಟು ಆಯ್ತು ತಲೆ ಕೆಟ್ಟು ಹೋಯ್ತು; 65 ಗ್ರಾಂ ಚಿನ್ನದ ಸರ ಸಮೇತ ಗಣೇಶ ವಿಸರ್ಜನೆ ಮಾಡಿದ ಯುವಕರು!

Ganesh Fest 2024: ಗಣೇಶನಿಗಾಗಿ ಸುಮಾರು 65 ಗ್ರಾಂ ಚಿನ್ನದ ಸರ ಹಾಕಿ ಪೂಜೆ ಮಾಡಿದ್ದರು. ಸಂಜೆ ವಿರ್ಸಜನೆ ವೇಳೆ ಚಿನ್ನದ ಸರದ ಸಮೇತ ಗಣೇಶ ಮೂರ್ತಿ ವಿಸರ್ಜನೆ ಮಾಡಿ, ಯಡವಟ್ಟು ಮಾಡಿಕೊಂಡಿದ್ದರು.

VISTARANEWS.COM


on

Youth immerse Ganesh with 65 grams of gold chain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆ ಯುವಕರಿಗೆ ಒಂದು ಕ್ಷಣ ಹೋದ ಜೀವ ವಾಪಸ್‌ ಬಂದಿತ್ತು. ಒಂದು ಸಣ್ಣ ಯಡವಟ್ಟಿನಿಂದ ಇಡೀ ರಾತ್ರಿ ಯುವಕರ ತಲೆ ಕೆಟ್ಟು ಹೋಗಿತ್ತು. ಯಾಕೆಂದರೆ ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆಯ ಜೋಶ್‌ನಲ್ಲಿ ಯುವಕರು ಯಡವಟ್ಟು ಮಾಡಿಕೊಂಡಿದ್ದರು. ಗಣೇಶನಿಗಾಗಿ ಸುಮಾರು 65 ಗ್ರಾಂ ಚಿನ್ನದ ಸರ ಹಾಕಿ ಪೂಜೆ ಮಾಡಿದ್ದರು. ಸಂಜೆ ವಿರ್ಸಜನೆ ವೇಳೆ ಚಿನ್ನದ ಸರದ ಸಮೇತ ಗಣೇಶ ಮೂರ್ತಿ ವಿಸರ್ಜನೆ ಮಾಡಿದ್ದಾರೆ. ಬೆಂಗಳೂರಿನ ಮಾಗಡಿರೋಡ್‌ನ ದಾಸರಹಳ್ಳಿಯ ಬಿ.ಆರ್.ಐ ಕಾಲೋನಿಯಲ್ಲಿ ಘಟನೆ ನಡೆದಿದೆ.

ಏರಿಯಾದಲ್ಲಿ ಮನೆಯಲ್ಲಿಟ್ಟ ಗಣೇಶ ವಿಸರ್ಜನೆಗಾಗಿ ಬಿಬಿಎಂಪಿಯಿಂದ ಟ್ರಕ್ ನೀರಿನ ವ್ಯವಸ್ಥೆ ಮಾಡಲಾಗಿತ್ತು.
ನಿನ್ನೆ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಹೋಗಿ ಚಿನ್ನದ ಸರದ ಸಮೇತ ಗಣೇಶ ಮೂರ್ತಿ ವಿಸರ್ಜನೆ ಮಾಡಿದ್ದಾರೆ. ರಾತ್ರಿ ಹತ್ತು ಗಂಟೆಯ ಸುಮಾರಿಗೆ ಚಿನ್ನದ ಸರದ ನೆನಪಾಗಿದೆ. ಎದ್ದನೋ ಬಿದ್ದನೋ ಓಡಿದ ಯುವಕರು ತಕ್ಷಣ ಟ್ರಕ್‌ನ ಚಾಲಕ ಹಾಗೂ ಬಿಬಿಎಂಪಿ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ.

Youth immerse Ganesh with 65 grams of gold chain
Youth immerse Ganesh with 65 grams of gold chain

ಈ ವೇಳೆ ಟ್ರಕ್‌ನಲ್ಲಿದ್ದ ನೀರನ್ನು ಖಾಲಿ ಮಾಡಿ, ಗಣೇಶ ಮೂರ್ತಿ ಕರಗಿದ್ದ ಮಣ್ಣಲ್ಲಿ ಚಿನ್ನದ ಸರಕ್ಕೆ ಹುಡುಕಾಟ ನಡೆಸಿದ್ದಾರೆ. ರಾತ್ರಿಯೆಲ್ಲ ಹುಡುಕಾಡಿದ ಬಳಿಕ‌ ಬೆಳಗಿನ ಜಾವ 65 ಗ್ರಾಂ ಚಿನ್ನದ ಸರ ಸಿಕ್ಕಿದೆ. ಚಿನ್ನದ ಸರ ಕಂಡು ಯುವಕರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actress Ramya : ಮೋಹಕ ತಾರೆ ನಟಿ ರಮ್ಯಾಗೆ ಕೂಡಿ ಬಂತಾ ಕಂಕಣ ಭಾಗ್ಯ? ನವೆಂಬರ್‌ನಲ್ಲಿ ಮದುವೆ ಫಿಕ್ಸಾ!

Actress Ramya : ಸ್ಯಾಂಡಲ್‌ ಕ್ವೀನ್‌ ರಮ್ಯಾ ಅವರು ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ ಅಂತೆ. ವರ ಚೌದ್ರಿ ಫ್ಯಾಮಿಲಿ ಎಂಬುದು ದಟ್ಟವಾಗಿ ಕೇಳಿ ಬರುತ್ತಿದೆ. ಇನ್ನೂ ಈ ಕುರಿತು ನಟಿ ರಮ್ಯಾ ಅವರಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಂದಿಲ್ಲ.

VISTARANEWS.COM


on

By

Actress Ramya
Koo

ನಟಿ ರಮ್ಯಾಗೆ (Actress Ramya) ಹೋದಲ್ಲೆಲ್ಲ ಎದುರಾಗುವ ಮೊದಲ ಪ್ರಶ್ನೆ ಮದುವೆ ಯಾವಾಗ ಎನ್ನುವುದು.

Ramya actress
Actress Ramya

ಹಿಂದೊಮ್ಮೆ ಮಂಡ್ಯದಲ್ಲೂ ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ ಕೂಡಲೇ, ʻʻದಯವಿಟ್ಟು ನಂಗೊಬ್ಬ ಹುಡುಗನ್ನ ಹುಡುಕಿಕೊಡಿ ಪ್ಲೀಸ್‌ʼʼ ಎಂದಿದ್ದರು. ʻನಾನು ಗೌಡ್ರು ತಾನೇ.. ನಂಗೊಬ್ಬ ಒಳ್ಳೆಯ ಗೌಡ್ರ ಹುಡುಗನ್ನ ಹುಡುಕಿ ಪ್ಲೀಸ್‌. ನನಗೂ ನೋಡಿ ನೋಡಿ ಸಾಕಾಗಿದೆ ಹುಡುಕಿ ನೀವೆʼʼ ಎಂದಿದ್ದರು.

Actress Ramya
Actress Ramya

ಇದೀಗ 42 ವಯಸ್ಸಿಗೆ ರಮ್ಯಾಗೆ ಕಂಕಣ ಭಾಗ್ಯ ಕೂಡಿ ಬಂದಂತಿದೆ. ನವೆಂಬರ್ ತಿಂಗಳಲ್ಲಿ ಹಸೆಮಣೆ ಏರಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಮೋಹಕತಾರೆ ರಮ್ಯಾ ಉದ್ಯಮಿಯೊಬ್ಬರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

Actress Ramya
Actress Ramya

ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ. ವರ ಚೌದ್ರಿ ಫ್ಯಾಮಿಲಿ ಎಂಬುದು ದಟ್ಟವಾಗಿ ಕೇಳಿ ಬರುತ್ತಿದೆ. ಇನ್ನೂ ಈ ಕುರಿತು ನಟಿ ರಮ್ಯಾ ಅವರಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಂದಿಲ್ಲ.

ಗುಲಾಬಿಗಳ ಜತೆ ಮೋಹಕ ತಾರೆ

Actress Ramya
ಮೋಹಕತಾರೆ ರಮ್ಯಾ (Actress Ramya) ಅವರು ಸುಂದರವಾದ ಫೋಟೊಗಳನ್ನು ಶೇರ್ ಮಾಡಿದ್ದಾರೆ. ಇದರಲ್ಲಿ ನಟಿ ಗುಲಾಬಿ ಬಣ್ಣದ ಗುಲಾಬಿಗಳ ಸೌಂದರ್ಯವನ್ನು ಸವಿಯುವುದು ಕಾಣಬಹುದು.
ʻʻ2 ದಶಕ ಕನ್ನಡ ಚಿತ್ರರಂಗವನ್ನು ಆಳಿದ ನಟಿ ಈಗಲೂ ತನ್ನ ಜೀವನದ ಸಾಮ್ರಾಜ್ಯಕ್ಕೆ ತಾನೆ ರಾಣಿ , ಲವ್ ಯೂ ರಾಣಿʼʼ ಎಂದು ಅಭಿಮಾನಿಯೊಬ್ಬರು ಕಮೆಂಟ್ ಮಾಡಿದ್ದಾರೆ.
Actress Ramya
ಈ ಫೋಟೊ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ನೂರಾರು ಮಂದಿ ಇದಕ್ಕೆ ಕಮೆಂಟ್​ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.
Actress Ramya
ಫೋಟೊಗಳ ಜತೆ ರಮ್ಯಾ ಅವರು ಒಂದು ಚಂದದ ಕವನ ಹಂಚಿಕೊಂಡಿದ್ದಾರೆ. ಈ ಕವನದಲ್ಲಿ ದೇವರು ಮತ್ತು ಜೀವನದ ಬಗ್ಗೆ ಹೇಳಲಾಗಿದೆ.
Actress Ramya
ಗಾರ್ಡನ್ ಏರಿಯಾದಲ್ಲಿ ವೈಟ್ ಶರ್ಟ್ ಧರಿಸಿ ನಿಂತಿದ್ದ ನಟಿ ಗುಲಾಬಿಗಳಿಗೆ ದೂರದಿಂದಲೇ ಕಿಸ್ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Renuka swamy murder : ಟೀ ಕುಡಿಯಲು ಹೋದವನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌

Renuka swamy Murder case : ದರ್ಶನ್‌ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ16 ಆರೋಪಿ ಕೇಶವಮೂರ್ತಿ ಸಿಲುಕಿದ್ದೇ ರೋಚಕವಾಗಿದೆ. ಟೀ ಕುಡಿಯೋಕೆ ಹೋದವನು ಕೊನೆಗೆ ಕೊಲೆ ಪ್ರಕರಣದಲ್ಲಿ ಜೈಲು ಸೇರುವಂತಾಗಿದೆ. ಇಷ್ಟಕ್ಕೂ ಆ ದಿನ ಏನೆಲ್ಲ ಆಯಿತು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Renukaswamy murder
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka swamy murder) ಪ್ರಕರಣವನ್ನು ವಿಶೇಷ ಆಸಕ್ತಿ ವಹಿಸಿ ಕಾನೂನು ವ್ಯಾಪ್ತಿಯಲ್ಲಿ ಯಾವ್ಯಾವ ಕೆಲಸಗಳನ್ನು ಮಾಡಬಹುದು ಆ ರೀತಿ ಪೊಲೀಸರು ಕೆಲಸ ಮಾಡಿದ್ದಾರೆ‌. ಇನ್ವೆಷ್ಟಿಗೇಷನ್ ಅಂದರೆ ಇದು ಎಂಬ ರೀತಿಯಲ್ಲಿ ತೋರಿಸಿ ಕೊಟ್ಟಿದ್ದಾರೆ. ಹಾಗೆ ಹಣದಾಸೆಗೆ ಬಿದ್ದವನು ದೊಡ್ಡ ಕೇಸ್‌ನಲ್ಲಿ ಹೇಗೆ ಫಿಟ್ ಆದ ಎಂಬ ಮಾಹಿತಿ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ16 ಆರೋಪಿ ಕೇಶವ ಮೂರ್ತಿ ಕ್ರೈಂ ಸೀನ್‌ನಲ್ಲೇ ಇರಲಿಲ್ಲ. ಆದರೆ ಆತನ ಹಣದಾಸೆ, ಬಡತನವು ಬಹು ದೊಡ್ಡ ಪ್ರಕರಣದ ಆರೋಪಿಯನ್ನಾಗಿಸಿದೆ. ಉತ್ತರಹಳ್ಳಿಯಲ್ಲಿ ಟೀ ಕುಡಿಯುತ್ತಿದ್ದವನು ಕೊಲೆ ಕೇಸಲ್ಲಿ ಭಾಗಿಯಾಗಿದ್ದೇ ರೋಚಕ. ರೇಣುಕಾಸ್ವಾಮಿ ಕೊಲೆಯಾದ ಬಳಿಕ ಈತ ರಾಘವೇಂದ್ರನ ಕಣ್ಣಿಗೆ ಬಿದ್ದಿದ್ದ. ಆಗಲೇ ಕೇಶವಮೂರ್ತಿಯ ಬ್ಯಾಡ್ ಟೈಂ ಶುರುವಾಗಿತ್ತು. ಕ್ರೈಂನಲ್ಲಿ ಭಾಗಿಯಾಗಿಲ್ಲದಿದ್ರೂ ಸಾಕ್ಷಿ ನಾಶದ ಕೇಸ್‌ ಈತನ ಹೆಗಲೇರಿದೆ.

ಚಿತ್ರದುರ್ಗದ ಲಿಂಕ್ ಇರಲಿ ಎಂದು ರಾಘವೇಂದ್ರನನ್ನು ಸರಂಡರ್ ಆಗಲು ಡಿ ಗ್ಯಾಂಗ್ ನಿರ್ಧರಿಸಿತ್ತು. ಮೊದಲು ಆತ ಒಪ್ಪಿರಲಿಲ್ಲ. ಹೀಗಾಗಿ ಕಾರ್ತಿಕ್ ಹಾಗೂ ನಿಖಿಲ್ ನಾವು ಸರಂಡರ್ ಆಗುತ್ತೇವೆ ಎಂದು ಒಪ್ಪಿದ್ದರು. ಈ ವೇಳೆ ಮತ್ತೊಬ್ಬ ಯಾರಾದರೂ ಬೇಕಲ್ಲ ಎಂದು ಹುಡುಕುವಾಗಲೇ ಕಾರ್ತಿಕ್‌ಗೆ ಆತನ ಸ್ನೇಹಿತ ಕೇಶವಮೂರ್ತಿ ಸಿಕ್ಕಿದ್ದ. ಸ್ನೇಹಿತ ಎಂಬ ಕಾರಣಕ್ಕೆ ಕಾರ್ತಿಕ್‌ನನ್ನು ಮಾತನಾಡಿಸಿದ್ದ.

ಈ ವೇಳೆ ಕೇಶವ ಮೂರ್ತಿ ಬಳಿ ಒಂದು ಕೊಲೆಯಾಗಿದೆ. ಸರಂಡರ್ ಆದರೆ ಕೈ ತುಂಬಾ ಹಣ ಕೊಡುತ್ತಾರೆ ಎಂದಿದ್ದ. ಹಣದಾಸೆಗೆ ಬಿದ್ದವನು ಸರಂಡರ್ ಆಗಲು ಒಪ್ಪಿ ಶೆಡ್‌ಗೆ ಹೋಗಿದ್ದ. ನಂತರ ಐದು ಲಕ್ಷ ಅಡ್ವಾನ್ಸ್ ಕೂಡ ಪಡೆದಿದ್ದ. ಆಗಲೇ ಕೇಶವಮೂರ್ತಿಗೆ ದರ್ಶನ್ ಈ ಕೊಲೆಯಲ್ಲಿ ಭಾಗಿಯಾಗಿದ್ದಾನೆಂದು ಗೊತ್ತಾಗಿದ್ದು.

ಮಣ್ಣು ಪರೀಕ್ಷೆ ಮಾಡಿಸಿದ ಪೊಲೀಸರು

ಸದ್ಯ ಆ ಹಣದ ರಿಕವರಿ ಕೂಡ ಆಗಿದೆ. ಇನ್ನು ಇದೇ ತನಿಖೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಮತ್ತೊಂದು ಹೆಜ್ಜೆ ಇಟ್ಟಿದೆ. ಈ ಹಿಂದೆ ಕೃತ್ಯ ನಡೆದ ವೇಳೆ ಬಳಕೆಯಾದ ವಸ್ತುಗಳನ್ನು ಪೊಲೀಸರು ರಿಕವರಿ ಮಾಡಿದ್ದರು. ಇದೇ ಮೊದಲ ಬಾರಿಗೆ ಮತ್ತೊಂದು ಪ್ರಯೋಗಕ್ಕೆ ಮುಂದಾಗಿ ಯಶಸ್ವಿಯಾಗಿದೆ. ಕೃತ್ಯ ನಡೆದ ಸಂದರ್ಭದಲ್ಲಿ ದರ್ಶನ್ ಧರಿಸಿದ್ದ ಶೂನಲ್ಲಿದ್ದ ಮಣ್ಣಿನ ವಿವರ ಪಡೆದಿದ್ದರು. ಅದಕ್ಕೆ ಪೂರಕವಾಗಿ ಶೆಡ್‌ನಲ್ಲಿದ್ದ ಮಣ್ಣನ್ನೂ ಎಫ್‌ಎಸ್ಎಲ್ ಗೆ ಕಳಿಸಿದ್ದರು . ಸದ್ಯ ಎರಡು ಕೂಡ ಮ್ಯಾಚ್ ಆಗಿದ್ದು ಅದರ ಬಗ್ಗೆ ಕೂಡ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan : ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು; ಸೆರೆವಾಸದಲ್ಲಿರುವ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ಗೆ ಸಿಗುತ್ತಾ ಬೇಲ್‌!

Actor Darshan : ಕೊಲೆ ಕೇಸ್‌ನಲ್ಲಿ ಸೆರೆವಾಸದಲ್ಲಿರುವ ನಟ ದರ್ಶನ್‌ನ ನ್ಯಾಯಾಂಗ ಬಂಧನ ಅವಧಿ ನಾಳೆ ಸೋಮವಾರ ಮುಕ್ತಾಯವಾಗಲಿದೆ. ಈ ನಡುವೆ ರೇಣುಕಾಸ್ವಾಮಿ ಕೊಲೆಯಾಗಿ ಮೂರು ತಿಂಗಳು ಕಳೆದಿದ್ದು, ಕೊಲೆಯಾದ ದಿನದಿಂದ ಇಂದಿನವರೆಗೆ ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ.

VISTARANEWS.COM


on

By

actor darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Actor Darshan) ಜೈಲುಪಾಲಾಗಿರುವ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ಸೆ.9ಕ್ಕೆ ಮುಕ್ತಾಯವಾಗಲಿದೆ. ಸೋಮವಾರ 24ನೇ ಎಸಿಎಂಎ ಕೋರ್ಟ್‌ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಸೇರಿದಂತೆ ವಿವಿಧ ಜೈಲಿನಿಂದ ಎಲ್ಲ ಆರೋಪಿಗಳು ಹಾಜರಾಗಲಿದ್ದಾರೆ.

ಸೋಮವಾರ ಎಲ್ಲ 16 ಆರೋಪಿಗಳ ಕೈಗೆ ಚಾರ್ಜ್ ಶೀಟ್ ಸೇರಲಿದ್ದು, ಚಾರ್ಜ್ ಶೀಟ್ ಸಿಗುತ್ತಿದ್ದಂತೆ ಕೆಲವು ಆರೋಪಿಗಳಿಂದ ಜಾಮೀನಿಗೆ ಅರ್ಜಿ ಸಾಧ್ಯತೆ ಇದೆ. ಮುಖ್ಯವಾಗಿ ಎ2 ಆರೋಪಿ ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಚಾರ್ಜ್ ಶೀಟ್ ಸಿಕ್ಕ ನಂತರ ಸೆಷನ್ಸ್ ಕೋರ್ಟ್‌ನಲ್ಲಿ ಬಹುತೇಕ ನಾಳೆಯೇ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ.

ಜೈಲುಪಾಲಾಗಿ ಇಂದಿಗೆ ಮೂರು ತಿಂಗಳು

ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನ್ಯಾಪ್‌ ಮತ್ತು ಕೊಲೆ ಆಗಿ ಇಂದಿಗೆ ಬರೋಬ್ಬರಿ ಮೂರು ತಿಂಗಳಾಗಿದೆ. ರಾಜನಂತೆ ಬಂಗಲೆಯಲ್ಲಿದ್ದ ನಟ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಏನೆಲ್ಲ ಆಯಿತು ಎಂಬ ಮಾಹಿತಿ ಇಲ್ಲಿದೆ.

-ಜೂನ್ 8ರ ಬೆಳಗ್ಗೆ 11 ಗಂಟೆ ಸುಮಾರಿಗೆ ಡಿ ಗ್ಯಾಂಗ್‌ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದರು.

-ಆ ದಿನ ಮಧ್ಯಾಹ್ನ ಪಟ್ಟಣಗೇರೆ ಶೆಡ್‌ನಲ್ಲಿ ರೇಣಕಾಸ್ವಾಮಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಕರೆಂಟ್ ಶಾಕ್ ನೀಡಿ ಬರ್ಬರವಾಗಿ ಕೊಲೆ ಮಾಡಿದ್ದರು.

-ಜೂ.8ರ ಸಂಜೆ 6 ಗಂಟೆಗೆ ರೇಣುಕಾಸ್ವಾಮಿ ಮೃತಪಟ್ಟ ವಿಚಾರ ಕೇಳಿ ಶಾಕ್ ಆಗಿದ್ದ ದರ್ಶನ್

-ಶವವನ್ನು ಸಾಗಿಸಲು ಪ್ಲಾನ್ ಮಾಡಿದ್ದ ಗ್ಯಾಂಗ್‌ಗೆ ನಟನ ಆಪ್ತರಾದ ವಿನಯ್ ಮತ್ತು ಪ್ರದೂಷ್‌ಗೆ 30 ಲಕ್ಷ ಹಣ ಸುಪಾರಿ ನೀಡಿದ್ದ.

-ಕೊಲೆ ನಾವೇ ಮಾಡಿರುವುದಾಗಿ ಹೇಳಿ ಸರೆಂಡರ್ ಆಗಲು ನಾಲ್ಕು ಜನರನ್ನು ದರ್ಶನ್ ಆಪ್ತರು ನೇಮಿಸಿದ್ದರು.

-ನಿಖಿಲ್ ನಾಯ್ಕ ,ರಾಘವೇಂದ್ರ, ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ಈ ನಾಲ್ವರಿಂದ ಶವ ಸಾಗಿಸಿ, ಸುಮನಹಳ್ಳಿ ರಾಜಕಾಲುವೆ ಬಳಿ ಶವ ಎಸೆದಿದ್ದರು.

-ಜೂನ್ 9 ರಂದು ಬೆಳಗ್ಗೆ 8 ಗಂಟೆಗೆ ಅಪರಿಚಿತ ಶವ ಎಂಬಂತೆ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

-ಅಪರಿಚಿತ ಶವವೆಂದು ಪ್ರಕರಣ ದಾಖಲಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಶುರು ಮಾಡಿದ್ದರು.

-ಜೂನ್ 10 ರಂದು ಪ್ಲ್ಯಾನ್ ಪ್ರಕಾರ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ಹಾಜರಾಗಿ ನಾಲ್ವರು ಶರಣಾಗಿದ್ದರು. ವಿಚಾರಣೆ ವೇಳೆ ಆರೋಪಿಗಳು ಪೊಲೀಸರ ಮುಂದೆ ಸುಳ್ಳು ಹೇಳಿಕೆ ನೀಡಿದ್ದರು.

-ಬಳಿಕ ಪೊಲೀಸರು ತಮ್ಮದೆ ಸ್ಟೈಲ್‌ನಲ್ಲಿ ವಿಚಾರಣೆ ನಡೆಸಿದಾಗ ಪವಿತ್ರಗೌಡ ಹಾಗೂ ದರ್ಶನ್ ಪಾತ್ರದ ಬಗ್ಗೆ ಮಾಹಿತಿ ನೀಡಿದ್ದರು. ಸತ್ಯ ತಿಳಿದು ಪೊಲೀಸರಿಗೆ ಶಾಕ್ ಆಗಿತ್ತು.

-ರೇಣುಕಾಸ್ವಾಮಿ ಕೊಲೆ ಹಿಂದೆ ನಟ ದರ್ಶನ್ ಕೈವಾಡ ಇದೆ ಎಂಬ ಸತ್ಯ ಹೊರಬಂದಿತ್ತು. ನಟ ದರ್ಶನ್ ಜೂನ್ 11ರಂದು ಮೈಸೂರಲ್ಲಿ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿ ಕೊಲೆಗೂ ಮೊದಲು, ನಂತರ ದರ್ಶನ್ ಹಾಗೂ ಪವಿತ್ರ ಮಾತಾಡಿದ್ದು ಜಸ್ಟ್‌ 16 ಸೆಕೆಂಡ್!

-ಪ್ರಕರಣದಲ್ಲಿ ದರ್ಶನ್ ಭಾಗಿ ಬಗ್ಗೆ ತಿಳಿದ ಪೊಲೀಸರು ಮೈಸೂರಿಗೆ ಪ್ರಯಾಣ ಬೆಳೆಸಿದ್ದರು. ಎಸಿಪಿ ಚಂದನ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆದಿತ್ತು. ನಟ ದರ್ಶನ್‌ನನ್ನು ಜೂನ್ 11ರಂದು ಬಂಧಿಸಿ ಎಸಿಪಿ ಚಂದನ್ ಮತ್ತು ತಂಡ ಬೆಂಗಳೂರಿಗೆ ಕರೆತಂದಿತ್ತು.

-ದರ್ಶನ್ ಬಂಧಿಸಿ ಬೆಳಗ್ಗೆ 11 ಗಂಟೆ ಸುಮಾರಿಗೆ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಗೆ ಕರೆತರಲಾಗಿತ್ತು. ಒಂದೇ ದಿನದಲ್ಲಿ‌ 17 ಜನ ಆರೋಪಿಗಳನ್ನು ಬಂಧಿಸಿ ಕರೆತರಲಾಗಿತ್ತು. ಜೂನ್ 11ರಂದು ಕೋರ್ಟ್‌ಗೆ ಹಾಜರು ಪಡೆಸಿದ ಪೊಲೀಸರು 4 ದಿನ‌ ಕಸ್ಟಡಿಗೆ ಪಡೆದಿದ್ದರು.

-ಜೂನ್ 15ಕ್ಕೆ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪುನಃ 5 ದಿನ ಕಸ್ಟಡಿಗೆ ಪಡೆದಿದ್ದ ತಂಡ ತೀವ್ರ ವಿಚಾರಣೆ ನಡೆಸಿತ್ತು. ಜೂನ್ 20ಕ್ಕೆ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿತ್ತು. ಈ ವೇಳೆ ದರ್ಶನ್, ವಿನಯ್‌, ಪ್ರದೂಷ್, ರಾಘವೇಂದ್ರ ಇವರನ್ನು ಹೆಚ್ಚುವರಿ ತನಿಖೆಗಾಗಿ ಎರಡು ದಿನ ಕಸ್ಟಡಿಗೆ ಪಡೆಯಲಾಗಿತ್ತು.

-ಮತ್ತೆ ಎರಡು ದಿನ ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದ ಪೊಲೀಸರು ಜೂನ್ 22ರಂದು ಕೋರ್ಟ್‌ಗೆ ಹಾಜರು ಪಡಿಸಿದ್ದರು. ರೇಣುಕಾಸ್ವಾಮಿ ಕೇಸ್‌ನಲ್ಲಿ 14 ದಿನಗಳ‌ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿತ್ತು.

-ಈ ಮಧ್ಯೆ ನಟ ದರ್ಶನ್‌ ಮನೆ ಊಟಕ್ಕೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆಯೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬಯಲಾಗಿತ್ತು. ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ರೇಣುಕಾಸ್ವಾಮಿ ಕೊಲೆ ಆರೋಪಿಗಳು ದಿಕ್ಕಾಪಾಲಾಗಿದ್ದರು.

-ಎಲ್ಲ ಆರೋಪಿಗಳನ್ನು ರಾಜ್ಯದ ವಿವಿಧ ಜೈಲಿಗಳಿಗೆ ಕಾರಗೃಹ ಅಧಿಕಾರಿಗಳು ರವಾನಿಸಿದ್ದರು. ದರ್ಶನ್ ಬಿಸಿಲು ನಾಡು ಬಳ್ಳಾರಿ ಜೈಲಿಗೆ ಶಿಫ್ಟ್ಆದರು. ಇದಾದ ಬಳಿಕ ಸೆಪ್ಟೆಂಬರ್ 3 ರಂದು 24 ಎಸಿಎಂಎಂ ಕೋರ್ಟ್‌ಗೆ ತನಿಖಾಧಿಕಾರಿ ಎಸಿಪಿ ಚಂದನ್ ನೇತೃತ್ವದ ತಂಡ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಭಾನುವಾರದಂದು ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು ಜತೆಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇನ್ನೂ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನಿರಂತರ ಗಾಳಿಯ ವೇಗ 40-50 ಕಿ.ಮೀ ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್‌

ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಹಗುರ ಮಳೆ

ಮುಂದಿನ 48 ಗಂಟೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

Continue Reading
Advertisement
Actress Ramya
ಸ್ಯಾಂಡಲ್ ವುಡ್40 seconds ago

Actress Ramya : ಮೋಹಕ ತಾರೆ ನಟಿ ರಮ್ಯಾಗೆ ಕೂಡಿ ಬಂತಾ ಕಂಕಣ ಭಾಗ್ಯ? ನವೆಂಬರ್‌ನಲ್ಲಿ ಮದುವೆ ಫಿಕ್ಸಾ!

Youth immerse Ganesh with 65 grams of gold chain
ಬೆಂಗಳೂರು2 hours ago

Ganesh Fest 2024 : ಯಡವಟ್ಟು ಆಯ್ತು ತಲೆ ಕೆಟ್ಟು ಹೋಯ್ತು; 65 ಗ್ರಾಂ ಚಿನ್ನದ ಸರ ಸಮೇತ ಗಣೇಶ ವಿಸರ್ಜನೆ ಮಾಡಿದ ಯುವಕರು!

Renukaswamy murder
ಸ್ಯಾಂಡಲ್ ವುಡ್3 hours ago

Renuka swamy murder : ಟೀ ಕುಡಿಯಲು ಹೋದವನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌

fraud case
ಬೆಳಗಾವಿ5 hours ago

Fraud Case : ಹುಡುಗಿಯರೇ ಹುಷಾರ್‌! ಸ್ವಲ್ಪ ಯಾಮಾರಿದರೂ ನಿಮ್ಮನ್ನ ಬೆತ್ತಲಾಗಿಸಿ ಹಣ ಕೀಳುತ್ತಾರೆ ಈ ಖದೀಮರು

road accident
ಚಿಕ್ಕೋಡಿ6 hours ago

Road Accident : ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಬಸ್‌; ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಭೀಕರ ದೃಶ್ಯ

murder case
ಕಲಬುರಗಿ7 hours ago

Murder case : ನಡುರಸ್ತೆಯಲ್ಲಿ ಅಡ್ಡಗಟ್ಟಿ ವ್ಯಕ್ತಿಯ ಹೊಟ್ಟೆ ಬಗೆದು ಕೊಂದ ದುಷ್ಕರ್ಮಿಗಳು

Road Accident
ರಾಯಚೂರು8 hours ago

Road Accident : ಬಸ್‌ಗಳ ನಡುವೆ ಭೀಕರ ಅಪಘಾತ; ಚಾಲಕ ಸ್ಥಳದಲ್ಲೇ ದುರ್ಮರಣ

Murder Case A scuffle between brothers during Ganesh festival ends in murder
ಉತ್ತರ ಕನ್ನಡ9 hours ago

Murder Case : ಗಣೇಶ ಹಬ್ಬದಲ್ಲಿ ಸಹೋದರರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯ

actor darshan
ಸಿನಿಮಾ10 hours ago

Actor Darshan : ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು; ಸೆರೆವಾಸದಲ್ಲಿರುವ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ಗೆ ಸಿಗುತ್ತಾ ಬೇಲ್‌!

physical abuse
ಬೆಂಗಳೂರು ಗ್ರಾಮಾಂತರ10 hours ago

Physical Abuse : ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ದುಷ್ಟ; ಬೆತ್ತಲೆಗೊಳಿಸಿ ಥಳಿಸಿದ ಯುವಕರು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 week ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 week ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌