Murder Case : ಚಾಕುವಿನಿಂದ ಹೆತ್ತವಳ ಕತ್ತು ಸೀಳಿ ಬರ್ಬರವಾಗಿ ಕೊಂದ ಪಾಪಿ ಮಗ - Vistara News

ಬೆಂಗಳೂರು ಗ್ರಾಮಾಂತರ

Murder Case : ಚಾಕುವಿನಿಂದ ಹೆತ್ತವಳ ಕತ್ತು ಸೀಳಿ ಬರ್ಬರವಾಗಿ ಕೊಂದ ಪಾಪಿ ಮಗ

Murder Case : ಕ್ಷುಲ್ಲಕ ಕಾರಣಕ್ಕೆ ಪಾಪಿ ಮಗನೊಬ್ಬ ಚಾಕುವಿನಿಂದ ಹೆತ್ತ ತಾಯಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೃತ್ಯದ ಬಳಿಕ ಕಾಲ್ಕಿತ್ತಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೊಡ್ಡಬಳ್ಳಾಪುರ: ಮಗನೇ ತಾಯಿಯ ಕತ್ತು ಕೊಯ್ದು ಕೊಲೆ (Murder Case) ಮಾಡಿದ್ದಾನೆ. ಚಾಕುವಿನಿಂದ ಕತ್ತು ಸೀಳಿ ತಾಯಿಯ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹೊರವಲಯದ ರಾಗರಾಳ್ಳಗುಟ್ಟೆ ಬಳಿ ನಡೆದಿದೆ. ಗ್ರಾಮದ ರತ್ನಮ್ಮ (56) ಕೊಲೆಯಾದವರು. ಮಗ ಗಂಗರಾಜು ಕೊಲೆ ಆರೋಪಿ ಆಗಿದ್ದಾನೆ.

ಕ್ಷುಲ್ಲಕ ಕಾರಣಕ್ಕೆ ತಾಯಿ-ಮಗನ ನಡುವೆ ಜಗಳ ಶುರುವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಗಂಗರಾಜು ತಾಯಿಯನ್ನು ಕೊಂದಿದ್ದಾನೆ. ಕೊಲೆ ನಂತರ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ರಾಗರಾಳ್ಳಗುಟ್ಟೆಯಲ್ಲಿ ಪ್ರಕರಣ ದಾಖಲಾಗಿದೆ.

ನಡುರಸ್ತೆಯಲ್ಲಿ ಅಡ್ಡಗಟ್ಟಿ ವ್ಯಕ್ತಿಯ ಹೊಟ್ಟೆ ಬಗೆದು ಕೊಂದ ದುಷ್ಕರ್ಮಿಗಳು

ಕಲಬುರಗಿ: ಕಲಬುರಗಿ ನಗರ ಹೊರವಲಯದ ಕೆಸರಟಗಿ ಬಳಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ವ್ಯಕ್ತಿಯನ್ನು ಹೊಡೆದು ಭೀಕರ ಹತ್ಯೆ (Murder Case) ಮಾಡಲಾಗಿದೆ. ಕಪಿಲ್ ಗಾಯಕ್ವಾಡ್ (38) ಕೊಲೆಯಾದವನು.

ಪತ್ನಿಯ ಸಮ್ಮುಖದಲ್ಲೆ ಪತಿ ಕಪಿಲ್‌ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ ಹೋಗುತ್ತಿದ್ದಾಗ, ಮಾರ್ಗ ಮಧ್ಯೆ ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರಿಡ್ಜ್‌ ಬಳಿ ಹತ್ಯೆ ನಡೆಸಿದ್ದಾರೆ. ಕುಟುಂಬಸ್ಥರಿಂದ ಕಪಿಲ್ ಪತ್ನಿ ಭಾಗ್ಯ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.

ಮೃತದೇಹವನ್ನ ಕಲಬುರಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

karnataka Weather Forecast : ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ (rain News) ಸಾಧ್ಯತೆ ಇದ್ದು, 9 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಹೀಗಾಗಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಮಲೆನಾಡು ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲೂ ಸಾಧಾರಣವಾಗಿರಲಿದೆ.

ಗುಡುಗು ಸಹಿತ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ ಅಬ್ಬರ

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Renuka swamy murder : ಟೀ ಕುಡಿಯಲು ಹೋದವನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌

Renuka swamy Murder case : ದರ್ಶನ್‌ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ16 ಆರೋಪಿ ಕೇಶವಮೂರ್ತಿ ಸಿಲುಕಿದ್ದೇ ರೋಚಕವಾಗಿದೆ. ಟೀ ಕುಡಿಯೋಕೆ ಹೋದವನು ಕೊನೆಗೆ ಕೊಲೆ ಪ್ರಕರಣದಲ್ಲಿ ಜೈಲು ಸೇರುವಂತಾಗಿದೆ. ಇಷ್ಟಕ್ಕೂ ಆ ದಿನ ಏನೆಲ್ಲ ಆಯಿತು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Renukaswamy murder
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka swamy murder) ಪ್ರಕರಣವನ್ನು ವಿಶೇಷ ಆಸಕ್ತಿ ವಹಿಸಿ ಕಾನೂನು ವ್ಯಾಪ್ತಿಯಲ್ಲಿ ಯಾವ್ಯಾವ ಕೆಲಸಗಳನ್ನು ಮಾಡಬಹುದು ಆ ರೀತಿ ಪೊಲೀಸರು ಕೆಲಸ ಮಾಡಿದ್ದಾರೆ‌. ಇನ್ವೆಷ್ಟಿಗೇಷನ್ ಅಂದರೆ ಇದು ಎಂಬ ರೀತಿಯಲ್ಲಿ ತೋರಿಸಿ ಕೊಟ್ಟಿದ್ದಾರೆ. ಹಾಗೆ ಹಣದಾಸೆಗೆ ಬಿದ್ದವನು ದೊಡ್ಡ ಕೇಸ್‌ನಲ್ಲಿ ಹೇಗೆ ಫಿಟ್ ಆದ ಎಂಬ ಮಾಹಿತಿ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ16 ಆರೋಪಿ ಕೇಶವ ಮೂರ್ತಿ ಕ್ರೈಂ ಸೀನ್‌ನಲ್ಲೇ ಇರಲಿಲ್ಲ. ಆದರೆ ಆತನ ಹಣದಾಸೆ, ಬಡತನವು ಬಹು ದೊಡ್ಡ ಪ್ರಕರಣದ ಆರೋಪಿಯನ್ನಾಗಿಸಿದೆ. ಉತ್ತರಹಳ್ಳಿಯಲ್ಲಿ ಟೀ ಕುಡಿಯುತ್ತಿದ್ದವನು ಕೊಲೆ ಕೇಸಲ್ಲಿ ಭಾಗಿಯಾಗಿದ್ದೇ ರೋಚಕ. ರೇಣುಕಾಸ್ವಾಮಿ ಕೊಲೆಯಾದ ಬಳಿಕ ಈತ ರಾಘವೇಂದ್ರನ ಕಣ್ಣಿಗೆ ಬಿದ್ದಿದ್ದ. ಆಗಲೇ ಕೇಶವಮೂರ್ತಿಯ ಬ್ಯಾಡ್ ಟೈಂ ಶುರುವಾಗಿತ್ತು. ಕ್ರೈಂನಲ್ಲಿ ಭಾಗಿಯಾಗಿಲ್ಲದಿದ್ರೂ ಸಾಕ್ಷಿ ನಾಶದ ಕೇಸ್‌ ಈತನ ಹೆಗಲೇರಿದೆ.

ಚಿತ್ರದುರ್ಗದ ಲಿಂಕ್ ಇರಲಿ ಎಂದು ರಾಘವೇಂದ್ರನನ್ನು ಸರಂಡರ್ ಆಗಲು ಡಿ ಗ್ಯಾಂಗ್ ನಿರ್ಧರಿಸಿತ್ತು. ಮೊದಲು ಆತ ಒಪ್ಪಿರಲಿಲ್ಲ. ಹೀಗಾಗಿ ಕಾರ್ತಿಕ್ ಹಾಗೂ ನಿಖಿಲ್ ನಾವು ಸರಂಡರ್ ಆಗುತ್ತೇವೆ ಎಂದು ಒಪ್ಪಿದ್ದರು. ಈ ವೇಳೆ ಮತ್ತೊಬ್ಬ ಯಾರಾದರೂ ಬೇಕಲ್ಲ ಎಂದು ಹುಡುಕುವಾಗಲೇ ಕಾರ್ತಿಕ್‌ಗೆ ಆತನ ಸ್ನೇಹಿತ ಕೇಶವಮೂರ್ತಿ ಸಿಕ್ಕಿದ್ದ. ಸ್ನೇಹಿತ ಎಂಬ ಕಾರಣಕ್ಕೆ ಕಾರ್ತಿಕ್‌ನನ್ನು ಮಾತನಾಡಿಸಿದ್ದ.

ಈ ವೇಳೆ ಕೇಶವ ಮೂರ್ತಿ ಬಳಿ ಒಂದು ಕೊಲೆಯಾಗಿದೆ. ಸರಂಡರ್ ಆದರೆ ಕೈ ತುಂಬಾ ಹಣ ಕೊಡುತ್ತಾರೆ ಎಂದಿದ್ದ. ಹಣದಾಸೆಗೆ ಬಿದ್ದವನು ಸರಂಡರ್ ಆಗಲು ಒಪ್ಪಿ ಶೆಡ್‌ಗೆ ಹೋಗಿದ್ದ. ನಂತರ ಐದು ಲಕ್ಷ ಅಡ್ವಾನ್ಸ್ ಕೂಡ ಪಡೆದಿದ್ದ. ಆಗಲೇ ಕೇಶವಮೂರ್ತಿಗೆ ದರ್ಶನ್ ಈ ಕೊಲೆಯಲ್ಲಿ ಭಾಗಿಯಾಗಿದ್ದಾನೆಂದು ಗೊತ್ತಾಗಿದ್ದು.

ಮಣ್ಣು ಪರೀಕ್ಷೆ ಮಾಡಿಸಿದ ಪೊಲೀಸರು

ಸದ್ಯ ಆ ಹಣದ ರಿಕವರಿ ಕೂಡ ಆಗಿದೆ. ಇನ್ನು ಇದೇ ತನಿಖೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಮತ್ತೊಂದು ಹೆಜ್ಜೆ ಇಟ್ಟಿದೆ. ಈ ಹಿಂದೆ ಕೃತ್ಯ ನಡೆದ ವೇಳೆ ಬಳಕೆಯಾದ ವಸ್ತುಗಳನ್ನು ಪೊಲೀಸರು ರಿಕವರಿ ಮಾಡಿದ್ದರು. ಇದೇ ಮೊದಲ ಬಾರಿಗೆ ಮತ್ತೊಂದು ಪ್ರಯೋಗಕ್ಕೆ ಮುಂದಾಗಿ ಯಶಸ್ವಿಯಾಗಿದೆ. ಕೃತ್ಯ ನಡೆದ ಸಂದರ್ಭದಲ್ಲಿ ದರ್ಶನ್ ಧರಿಸಿದ್ದ ಶೂನಲ್ಲಿದ್ದ ಮಣ್ಣಿನ ವಿವರ ಪಡೆದಿದ್ದರು. ಅದಕ್ಕೆ ಪೂರಕವಾಗಿ ಶೆಡ್‌ನಲ್ಲಿದ್ದ ಮಣ್ಣನ್ನೂ ಎಫ್‌ಎಸ್ಎಲ್ ಗೆ ಕಳಿಸಿದ್ದರು . ಸದ್ಯ ಎರಡು ಕೂಡ ಮ್ಯಾಚ್ ಆಗಿದ್ದು ಅದರ ಬಗ್ಗೆ ಕೂಡ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan : ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು; ಸೆರೆವಾಸದಲ್ಲಿರುವ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ಗೆ ಸಿಗುತ್ತಾ ಬೇಲ್‌!

Actor Darshan : ಕೊಲೆ ಕೇಸ್‌ನಲ್ಲಿ ಸೆರೆವಾಸದಲ್ಲಿರುವ ನಟ ದರ್ಶನ್‌ನ ನ್ಯಾಯಾಂಗ ಬಂಧನ ಅವಧಿ ನಾಳೆ ಸೋಮವಾರ ಮುಕ್ತಾಯವಾಗಲಿದೆ. ಈ ನಡುವೆ ರೇಣುಕಾಸ್ವಾಮಿ ಕೊಲೆಯಾಗಿ ಮೂರು ತಿಂಗಳು ಕಳೆದಿದ್ದು, ಕೊಲೆಯಾದ ದಿನದಿಂದ ಇಂದಿನವರೆಗೆ ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ.

VISTARANEWS.COM


on

By

actor darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Actor Darshan) ಜೈಲುಪಾಲಾಗಿರುವ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ಸೆ.9ಕ್ಕೆ ಮುಕ್ತಾಯವಾಗಲಿದೆ. ಸೋಮವಾರ 24ನೇ ಎಸಿಎಂಎ ಕೋರ್ಟ್‌ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಸೇರಿದಂತೆ ವಿವಿಧ ಜೈಲಿನಿಂದ ಎಲ್ಲ ಆರೋಪಿಗಳು ಹಾಜರಾಗಲಿದ್ದಾರೆ.

ಸೋಮವಾರ ಎಲ್ಲ 16 ಆರೋಪಿಗಳ ಕೈಗೆ ಚಾರ್ಜ್ ಶೀಟ್ ಸೇರಲಿದ್ದು, ಚಾರ್ಜ್ ಶೀಟ್ ಸಿಗುತ್ತಿದ್ದಂತೆ ಕೆಲವು ಆರೋಪಿಗಳಿಂದ ಜಾಮೀನಿಗೆ ಅರ್ಜಿ ಸಾಧ್ಯತೆ ಇದೆ. ಮುಖ್ಯವಾಗಿ ಎ2 ಆರೋಪಿ ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಚಾರ್ಜ್ ಶೀಟ್ ಸಿಕ್ಕ ನಂತರ ಸೆಷನ್ಸ್ ಕೋರ್ಟ್‌ನಲ್ಲಿ ಬಹುತೇಕ ನಾಳೆಯೇ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ.

ಜೈಲುಪಾಲಾಗಿ ಇಂದಿಗೆ ಮೂರು ತಿಂಗಳು

ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನ್ಯಾಪ್‌ ಮತ್ತು ಕೊಲೆ ಆಗಿ ಇಂದಿಗೆ ಬರೋಬ್ಬರಿ ಮೂರು ತಿಂಗಳಾಗಿದೆ. ರಾಜನಂತೆ ಬಂಗಲೆಯಲ್ಲಿದ್ದ ನಟ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಏನೆಲ್ಲ ಆಯಿತು ಎಂಬ ಮಾಹಿತಿ ಇಲ್ಲಿದೆ.

-ಜೂನ್ 8ರ ಬೆಳಗ್ಗೆ 11 ಗಂಟೆ ಸುಮಾರಿಗೆ ಡಿ ಗ್ಯಾಂಗ್‌ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದರು.

-ಆ ದಿನ ಮಧ್ಯಾಹ್ನ ಪಟ್ಟಣಗೇರೆ ಶೆಡ್‌ನಲ್ಲಿ ರೇಣಕಾಸ್ವಾಮಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಕರೆಂಟ್ ಶಾಕ್ ನೀಡಿ ಬರ್ಬರವಾಗಿ ಕೊಲೆ ಮಾಡಿದ್ದರು.

-ಜೂ.8ರ ಸಂಜೆ 6 ಗಂಟೆಗೆ ರೇಣುಕಾಸ್ವಾಮಿ ಮೃತಪಟ್ಟ ವಿಚಾರ ಕೇಳಿ ಶಾಕ್ ಆಗಿದ್ದ ದರ್ಶನ್

-ಶವವನ್ನು ಸಾಗಿಸಲು ಪ್ಲಾನ್ ಮಾಡಿದ್ದ ಗ್ಯಾಂಗ್‌ಗೆ ನಟನ ಆಪ್ತರಾದ ವಿನಯ್ ಮತ್ತು ಪ್ರದೂಷ್‌ಗೆ 30 ಲಕ್ಷ ಹಣ ಸುಪಾರಿ ನೀಡಿದ್ದ.

-ಕೊಲೆ ನಾವೇ ಮಾಡಿರುವುದಾಗಿ ಹೇಳಿ ಸರೆಂಡರ್ ಆಗಲು ನಾಲ್ಕು ಜನರನ್ನು ದರ್ಶನ್ ಆಪ್ತರು ನೇಮಿಸಿದ್ದರು.

-ನಿಖಿಲ್ ನಾಯ್ಕ ,ರಾಘವೇಂದ್ರ, ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ಈ ನಾಲ್ವರಿಂದ ಶವ ಸಾಗಿಸಿ, ಸುಮನಹಳ್ಳಿ ರಾಜಕಾಲುವೆ ಬಳಿ ಶವ ಎಸೆದಿದ್ದರು.

-ಜೂನ್ 9 ರಂದು ಬೆಳಗ್ಗೆ 8 ಗಂಟೆಗೆ ಅಪರಿಚಿತ ಶವ ಎಂಬಂತೆ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

-ಅಪರಿಚಿತ ಶವವೆಂದು ಪ್ರಕರಣ ದಾಖಲಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಶುರು ಮಾಡಿದ್ದರು.

-ಜೂನ್ 10 ರಂದು ಪ್ಲ್ಯಾನ್ ಪ್ರಕಾರ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ಹಾಜರಾಗಿ ನಾಲ್ವರು ಶರಣಾಗಿದ್ದರು. ವಿಚಾರಣೆ ವೇಳೆ ಆರೋಪಿಗಳು ಪೊಲೀಸರ ಮುಂದೆ ಸುಳ್ಳು ಹೇಳಿಕೆ ನೀಡಿದ್ದರು.

-ಬಳಿಕ ಪೊಲೀಸರು ತಮ್ಮದೆ ಸ್ಟೈಲ್‌ನಲ್ಲಿ ವಿಚಾರಣೆ ನಡೆಸಿದಾಗ ಪವಿತ್ರಗೌಡ ಹಾಗೂ ದರ್ಶನ್ ಪಾತ್ರದ ಬಗ್ಗೆ ಮಾಹಿತಿ ನೀಡಿದ್ದರು. ಸತ್ಯ ತಿಳಿದು ಪೊಲೀಸರಿಗೆ ಶಾಕ್ ಆಗಿತ್ತು.

-ರೇಣುಕಾಸ್ವಾಮಿ ಕೊಲೆ ಹಿಂದೆ ನಟ ದರ್ಶನ್ ಕೈವಾಡ ಇದೆ ಎಂಬ ಸತ್ಯ ಹೊರಬಂದಿತ್ತು. ನಟ ದರ್ಶನ್ ಜೂನ್ 11ರಂದು ಮೈಸೂರಲ್ಲಿ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿ ಕೊಲೆಗೂ ಮೊದಲು, ನಂತರ ದರ್ಶನ್ ಹಾಗೂ ಪವಿತ್ರ ಮಾತಾಡಿದ್ದು ಜಸ್ಟ್‌ 16 ಸೆಕೆಂಡ್!

-ಪ್ರಕರಣದಲ್ಲಿ ದರ್ಶನ್ ಭಾಗಿ ಬಗ್ಗೆ ತಿಳಿದ ಪೊಲೀಸರು ಮೈಸೂರಿಗೆ ಪ್ರಯಾಣ ಬೆಳೆಸಿದ್ದರು. ಎಸಿಪಿ ಚಂದನ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆದಿತ್ತು. ನಟ ದರ್ಶನ್‌ನನ್ನು ಜೂನ್ 11ರಂದು ಬಂಧಿಸಿ ಎಸಿಪಿ ಚಂದನ್ ಮತ್ತು ತಂಡ ಬೆಂಗಳೂರಿಗೆ ಕರೆತಂದಿತ್ತು.

-ದರ್ಶನ್ ಬಂಧಿಸಿ ಬೆಳಗ್ಗೆ 11 ಗಂಟೆ ಸುಮಾರಿಗೆ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಗೆ ಕರೆತರಲಾಗಿತ್ತು. ಒಂದೇ ದಿನದಲ್ಲಿ‌ 17 ಜನ ಆರೋಪಿಗಳನ್ನು ಬಂಧಿಸಿ ಕರೆತರಲಾಗಿತ್ತು. ಜೂನ್ 11ರಂದು ಕೋರ್ಟ್‌ಗೆ ಹಾಜರು ಪಡೆಸಿದ ಪೊಲೀಸರು 4 ದಿನ‌ ಕಸ್ಟಡಿಗೆ ಪಡೆದಿದ್ದರು.

-ಜೂನ್ 15ಕ್ಕೆ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪುನಃ 5 ದಿನ ಕಸ್ಟಡಿಗೆ ಪಡೆದಿದ್ದ ತಂಡ ತೀವ್ರ ವಿಚಾರಣೆ ನಡೆಸಿತ್ತು. ಜೂನ್ 20ಕ್ಕೆ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿತ್ತು. ಈ ವೇಳೆ ದರ್ಶನ್, ವಿನಯ್‌, ಪ್ರದೂಷ್, ರಾಘವೇಂದ್ರ ಇವರನ್ನು ಹೆಚ್ಚುವರಿ ತನಿಖೆಗಾಗಿ ಎರಡು ದಿನ ಕಸ್ಟಡಿಗೆ ಪಡೆಯಲಾಗಿತ್ತು.

-ಮತ್ತೆ ಎರಡು ದಿನ ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದ ಪೊಲೀಸರು ಜೂನ್ 22ರಂದು ಕೋರ್ಟ್‌ಗೆ ಹಾಜರು ಪಡಿಸಿದ್ದರು. ರೇಣುಕಾಸ್ವಾಮಿ ಕೇಸ್‌ನಲ್ಲಿ 14 ದಿನಗಳ‌ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿತ್ತು.

-ಈ ಮಧ್ಯೆ ನಟ ದರ್ಶನ್‌ ಮನೆ ಊಟಕ್ಕೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆಯೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬಯಲಾಗಿತ್ತು. ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ರೇಣುಕಾಸ್ವಾಮಿ ಕೊಲೆ ಆರೋಪಿಗಳು ದಿಕ್ಕಾಪಾಲಾಗಿದ್ದರು.

-ಎಲ್ಲ ಆರೋಪಿಗಳನ್ನು ರಾಜ್ಯದ ವಿವಿಧ ಜೈಲಿಗಳಿಗೆ ಕಾರಗೃಹ ಅಧಿಕಾರಿಗಳು ರವಾನಿಸಿದ್ದರು. ದರ್ಶನ್ ಬಿಸಿಲು ನಾಡು ಬಳ್ಳಾರಿ ಜೈಲಿಗೆ ಶಿಫ್ಟ್ಆದರು. ಇದಾದ ಬಳಿಕ ಸೆಪ್ಟೆಂಬರ್ 3 ರಂದು 24 ಎಸಿಎಂಎಂ ಕೋರ್ಟ್‌ಗೆ ತನಿಖಾಧಿಕಾರಿ ಎಸಿಪಿ ಚಂದನ್ ನೇತೃತ್ವದ ತಂಡ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Physical Abuse : ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ದುಷ್ಟ; ಬೆತ್ತಲೆಗೊಳಿಸಿ ಥಳಿಸಿದ ಯುವಕರು

Physical Abuse : ಅಂಗಡಿಯಲ್ಲಿ ಹಾಲು ತರಲು ಹೋದ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಯುವಕರ ತಂಡವೊಂದು ಥಳಿಸಿದೆ.

VISTARANEWS.COM


on

By

physical abuse
Koo

ಬೆಂಗಳೂರು ಗ್ರಾಮಾಂತರ: ಮಹಿಳೆಗೆ ಬಾಯಿ ಮುಚ್ಚಿ ಎಳೆದೊಯ್ಯಲು (Physical Abuse) ಯತ್ನಿಸಿದ ವ್ಯಕ್ತಿಗೆ ಅಲ್ಲೇ ಇದ್ದ ಯುವಕರು ಗೂಸಾ ಕೊಟ್ಟಿದ್ದಾರೆ. ಕಾಮುಕನನ್ನು ನಗ್ನಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಕುಡಿದ ನಶೆಯಲ್ಲಿ ವ್ಯಕ್ತಿ ಮೇಲೆ ಹತ್ತಕ್ಕೂ ಅಧಿಕ ಯುವಕರಿಂದ ಹಲ್ಲೆ ನಡೆದಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಕಲ್ಕೆರೆ ಕಾಲೋನಿ ಬಳಿ ಘಟನೆ ನಡೆದಿದೆ.

ಧಾರವಾಡ ಮೂಲದ ರವಿಕುಮಾರ್ ಹಲ್ಲೆಗೊಳಗಾದವನು. ರವಿಕುಮಾರ್‌ ಕಲ್ಕೆರೆ ಹೋಟೆಲ್‌ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಅಪರಿಚಿತ ಮಹಿಳೆಯೊಬ್ಬರು ಅಂಗಡಿಗೆ ಹಾಲು ತೆಗೆದುಕೊಂಡು ಬರಲು ಹೋಗಿದ್ದರು. ನಶೆ ಏರಿಸಿಕೊಂಡಿದ್ದ ರವಿಕುಮಾರ್‌, ಮಹಿಳೆಯ ಹಿಂದಿನಿಂದ ಬಂದು ಬಾಯಿ ಮುಚ್ಚಿಕೊಂಡು ಎಳೆದೊಯ್ಯಲು ಯತ್ನಿಸಿದ್ದಾನೆ.

ಇದನ್ನೂ ಓದಿ:Self Harming : ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಬಲಿ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಇದರಿಂದ ಆತಂಕಗೊಂಡ ಮಹಿಳೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದಾಳೆ. ಅಲ್ಲಿಯೇ ಇದ್ದ ಗ್ರಾಮದ ಯುವಕರು ಮಹಿಳೆ ನೆರವಿಗೆ ಧಾವಿಸಿದ್ದಾರೆ. ಯುವಕರ ಕಂಡು ಎಸ್ಕೇಪ್ ಆಗಲು ಯತ್ನಿಸಿದ ರವಿಕುಮಾರ್‌ನನ್ನು ಹಿಡಿದು ಮನಸೋ ಇಚ್ಛೆ ಥಳಿಸಿದ್ದಾರೆ. ರವಿಕುಮಾರ್‌ನನ್ನು ನಗ್ನಗೊಳಿಸಿ ಮರ್ಮಾಂಗ ಮತ್ತು ವೃಷಣಕ್ಕೆ ಹೊಡೆದು ತೀವ್ರ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಮಾಡಿ ಆಟೋದಲ್ಲಿ ಕರೆದೊಯ್ಯುವ ವೇಳೆ ಪೊಲೀಸರು ಆಗಮಿಸಿದ್ದು, ರವಿಕುಮಾರ್‌ನನ್ನು ಬನ್ನೇರುಘಟ್ಟ ಪೊಲೀಸರ ವಶಕ್ಕೆ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ವಿಜಯಶ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೊಟ್ಟಿಗೆರೆಯ ವಿಜಯಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
CM Siddaramaiah
ಪ್ರಮುಖ ಸುದ್ದಿ1 min ago

CM Siddaramaiah: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ವಿವಾದ ಆಲಿಸಿ ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

murder case
ಬೆಂಗಳೂರು ಗ್ರಾಮಾಂತರ2 hours ago

Murder Case : ಚಾಕುವಿನಿಂದ ಹೆತ್ತವಳ ಕತ್ತು ಸೀಳಿ ಬರ್ಬರವಾಗಿ ಕೊಂದ ಪಾಪಿ ಮಗ

actor darshan and gang
ಬೆಂಗಳೂರು3 hours ago

Actor Darshan: ನಟ ದರ್ಶನ್‌ ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ; ಕೋರ್ಟ್‌ಗೆ ಡಿಜಿಟಲ್‌ ಎವಿಡೆನ್ಸ್‌ ಸಲ್ಲಿಸಿದ ತನಿಖಾಧಿಕಾರಿಗಳು

Actor Darshan
ಸಿನಿಮಾ4 hours ago

Actor Darshan : ರೇಣುಕಾಸ್ವಾಮಿಯ ಎದೆ ಮೇಲೆ ಕಾಲಿಟ್ಟು, ಕಿವಿ ಹೊಸಕಿ, ಮರ್ಮಾಂಗ ತುಳಿದ್ರಾ! ನಟ ದರ್ಶನ್‌ ತಪ್ಪೊಪ್ಪಿಗೆ!

Road Accident
ತುಮಕೂರು5 hours ago

Road Accident : ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

karnataka weather Forecast
ಮಳೆ11 hours ago

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

Dina bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ತಲೆದೋರಲಿದೆ; ಹೂಡಿಕೆ ವ್ಯವಹಾರಗಳನ್ನು ಮಾಡ್ಬೇಡಿ

Actress Ramya
ಸ್ಯಾಂಡಲ್ ವುಡ್20 hours ago

Actress Ramya : ಮೋಹಕ ತಾರೆ ನಟಿ ರಮ್ಯಾಗೆ ಕೂಡಿ ಬಂತಾ ಕಂಕಣ ಭಾಗ್ಯ? ನವೆಂಬರ್‌ನಲ್ಲಿ ಮದುವೆ ಫಿಕ್ಸಾ!

Youth immerse Ganesh with 65 grams of gold chain
ಬೆಂಗಳೂರು22 hours ago

Ganesh Fest 2024 : ಯಡವಟ್ಟು ಆಯ್ತು ತಲೆ ಕೆಟ್ಟು ಹೋಯ್ತು; 65 ಗ್ರಾಂ ಚಿನ್ನದ ಸರ ಸಮೇತ ಗಣೇಶ ವಿಸರ್ಜನೆ ಮಾಡಿದ ಯುವಕರು!

Renukaswamy murder
ಸ್ಯಾಂಡಲ್ ವುಡ್23 hours ago

Renuka swamy murder : ಟೀ ಕುಡಿಯಲು ಹೋದವನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 week ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌