CM Siddaramaiah : ಸಿದ್ದರಾಮಯ್ಯ ವಿಷ್ಯದಲ್ಲಿ ಆತುರದ ನಿರ್ಣಯ; ರಾಜ್ಯಪಾಲರಿಂದ ಸಂವಿಧಾನಕ್ಕೆ ಅಪಚಾರ- ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ - Vistara News

ರಾಜಕೀಯ

CM Siddaramaiah : ಸಿದ್ದರಾಮಯ್ಯ ವಿಷ್ಯದಲ್ಲಿ ಆತುರದ ನಿರ್ಣಯ; ರಾಜ್ಯಪಾಲರಿಂದ ಸಂವಿಧಾನಕ್ಕೆ ಅಪಚಾರ- ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ

CM Siddaramaiah : ಸಿಎಂ ಸಿದ್ದರಾಮಯ್ಯ ವಿಷಯದಲ್ಲಿ ರಾಜ್ಯಪಾಲರು ಆತುರದ ನಿರ್ಣಯ ತೆಗೆದುಕೊಂಡಿದ್ದಾರೆ. ರಾಜ್ಯಪಾಲರಿಂದ ಸಂವಿಧಾನಕ್ಕೆ ಅಪಚಾರವಾಗಿದೆ ಎಂದು ಸಿಎಂ ಪರ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ ವಾದಿಸಿದರು. ವಾದ-ವಿವಾದ ಆಲಿಸಿದ ನ್ಯಾಯಾಲಯ ಮಧ್ಯಾಹ್ನ 2:30ಕ್ಕೆ ವಿಚಾರಣೆ ಮುಂದೂಡಿದೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಸೆ.12ರಂದು ನಡೆಯಿತು. ವಾದ-ವಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಗುರುವಾರ (ಸೆ.12) ಮಧ್ಯಾಹ್ನ 2.30ಕ್ಕೆ ಮುಂದೂಡಿತು.

ಮೊದಲಿಗೆ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ ರಾಘವನ್ ವಾದ ಆರಂಭಿಸಿದರು. 50-50 ಫಾರ್ಮುಲಾ ಅಡಿಯಲ್ಲಿ ನಿವೇಶನ ಕೊಡಬಾರದು ಎಂದು ಸರ್ಕಾರ ಆದೇಶ ಮಾಡಿದೆ, ಅದರಲ್ಲಿ ತಪ್ಪು ಆಗಿವೆ. ಮೂಡಾ ಆಯುಕ್ತ ದಿನೇಶ್ ಅಮಾನತು ಆದೇಶ ಪ್ರಸ್ತಾಪಿಸಲು ಮುಂದಾದಾಗ ಎಜಿ ಶಶಿಕಿರಣ್ ಶೆಟ್ಟಿ ಆಕ್ಷೇಪಿಸಿ, ಅಮಾನತು ಆದೇಶ ಹಿಂಪಡೆಯಲಾಗಿದೆ. ರಾಘವನ್‌ ಅವರು ಹೇಳುತ್ತಿರುವ ವಿಚಾರಗಳು ಇಲ್ಲಿಗೆ ಅನ್ವಯಿಸುವುದಿಲ್ಲ. ಪ್ರತಿವಾದಿಗಳು ಮಿಸ್ ಲೀಡ್ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಸರ್ಕಾರ ಮಾಡಿರುವ ಆದೇಶ ಗಮನಕ್ಕೆ ತಂದಿದ್ದೇವೆ. ಅದನ್ನು ಪ್ರತಿವಾದಿಗಳು ಮುಚ್ಚಿಡುತ್ತಿದ್ದಾರೆ ಎಂದರು.

ಒಂದು ಬೆಳವಣಿಗೆಯನ್ನು ಕೋರ್ಟ್ ಗಮನಕ್ಕೆ ತರಲು ಬಯಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದಿಸಿದರು. ಸರ್ಕಾರ ಮುಡಾ ಹಗರಣ ಸಂಬಂಧ ಆಯುಕ್ತರನ್ನು ಅಮಾನತು ಮಾಡಿದೆ. 50 :50 ಅಡಿಯಲ್ಲಿ ಹಂಚಿಕೆ ಮಾಡಿದ ಕಾರಣಕ್ಕೆ ಅಮಾನತು ಮಾಡಿದೆ ಎಂದರು. ಮುಡಾದಲ್ಲಿ ಆಗಿರುವ ಅಕ್ರಮ ತನಿಖೆಗೆ ಸರ್ಕಾರ ಕಮಿಟಿ ರಚನೆ ಮಾಡಿದೆ ಎಂದು ನ್ಯಾಯಾಧೀಶರು ಉತ್ತರಿಸಿ, ಇವತ್ತು ವಿಚಾರಣೆ ಮುಗಿಸೋಣ ಎಂದರು.

ವಾಕ್ ಆ್ಯಂಡ್‌ ಗೋ ನಿರ್ಧಾರಗಳು ಆಗಬಾರದು- ಅಭಿಷೇಕ್‌ ಮನುಸಿಂಘ್ಟಿ

ಜನಪ್ರತಿನಿಧಿಗಳ ವಿರುದ್ಧ ಪ್ರಾಸಿಕ್ಯೂಷನ್ ಕೊಡುವಾಗ ವಾಕ್ ಆ್ಯಂಡ್‌ ಗೋ ರೀತಿಯಲ್ಲಿ ನಿರ್ಧಾರಗಳು ಆಗಬಾರದು. ರಾಜ್ಯಪಾಲರ ವಿವೇಚನಾ ಅಧಿಕಾರಕ್ಕೆ ಮಾತ್ರ ಸಿಮೀತವಾಗಿದೆ ಎಂದು ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಆರಂಭಿಸಿದರು. ರಾಜ್ಯಪಾಲರ ಆದೇಶದಲ್ಲಿ ಒಂದೆ ಅಂಶ ಮುಖ್ಯವಾಗಿದೆ. ನಾನು ವಿವೇಚನಾಧಿಕಾರವನ್ನು ಬಳಸುತ್ತಿದ್ದೇನೆ. ಸಚಿವ ಸಂಪುಟದ ಯಾವುದೇ ನಿರ್ಧಾರವನ್ನು ಪರಿಗಣಿಸಿಲ್ಲ ಎಂದಿದೆ. ಆದರೆ ರಾಜ್ಯಪಾಲರಿಗೆ ಸಿಎಂ ಹಗರಣದಲ್ಲಿ ಭಾಗಿಯಾಗಿರುವುದಕ್ಕೆ ಮೇಲ್ನೊಟಕ್ಕೆ ಯಾವುದೇ ಸಾಕ್ಷಿ ಇದೆ ಎಂದು ಉಲ್ಲೇಖಿಸಿಲ್ಲ.

ಸಂವಿಧಾನಕ್ಕೆ ರಾಜ್ಯಪಾಲರಿಂದ ಅಪಚಾರ

ರಾಜ್ಯಪಾಲರು ವಿವೇಚನೆಯನ್ನು ಹೇಗೆ ಬಳಸಿದೆ ಎಂಬುದನ್ನು ತಿಳಿಸಬೇಕಿತ್ತು. ತಾರತಮ್ಯ ಮಾಡಿಲ್ಲವೆಂಬುದನ್ನು ರಾಜ್ಯಪಾಲರು ವಾದಿಸಬೇಕಿತ್ತು. ಇನ್ನೊಂದು ಪ್ರಮುಖ ಅಂಶವೆಂದರೆ ರಾಜ್ಯಪಾಲರ ಐದಾರು ಪುಟದ ಆದೇಶದಲ್ಲಿ ಬೇರೇನೂ ಹೇಳಿಲ್ಲ. ನಾನು ಸಚಿವ ಸಂಪುಟದ ಆದೇಶ ಪಾಲಿಸಬೇಕಿಲ್ಲವೆಂದು ರಾಜ್ಯಪಾಲರು ಹೇಳಿದ್ದಾರೆ. ಆದರೆ ಸಿಎಂ ಪಾತ್ರ ಇದೆಯೇ ಎಂಬುದನ್ನು ರಾಜ್ಯಪಾಲರು ತಿಳಿಸಿಲ್ಲ. ಯಾವುದಾದರೂ ಕಡತಕ್ಕೆ ಸಿಎಂ ಸಹಿ ಹಾಕಿದ್ದಾರೆಯೇ ಹೇಳಿಲ್ಲ. ಹೀಗಾಗಿ ರಾಜ್ಯಪಾಲರು ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ. ಯಾವ ಸಂಪುಟ ತಾನೆ ತನ್ನ ನಾಯಕ ವಿರುದ್ಧ ಅಭಿಯೋಜನಾ ಮಂಜೂರಾತಿ ನೀಡಿ ಎಂದು ಹೇಳುತ್ತದೆ? ಎಂದಾಗ ಮಧ್ಯಪ್ರವೇಶಿಸಿದ ನ್ಯಾಯಾಧೀಶರು ಅಲ್ಲಿ ಪಕ್ಷಪಾತಿತ ಇರಬಹುದಲ್ಲವೇ? ಪ್ರಶ್ನೆ ಮಾಡಿದರು.

ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ಬಹಳ ದೂರ ನಿಂತಿದ್ದಾರೆ. 23 ವರ್ಷದಲ್ಲಿ ನನ್ನ ಅರ್ಜಿದಾರರ ಮೇಲೆ ಯಾವುದೇ ದೂರು ಇಲ್ಲ. 1984 ರಿಂದ ನನ್ನ ಅರ್ಜಿದಾರರು ಮಂತ್ರಿ ಆಗಿದ್ದಾರೆ. ಆದರೆ ಇಲ್ಲಿವರೆಗೂ ದೂರುದಾರರು ಕೊಟ್ಟಿರುವ ಸಂಬಂಧ ಇದುವರೆಗೂ ಎಲ್ಲೂ ಅಧಿಕಾರ ಹೊಂದಿಲ್ಲ. ಅದರ ಸಂಬಂಧ ಆದೇಶ ಮಾಡಿಲ್ಲ. ಪ್ರಾಸಿಕ್ಯೂಷನ್ ಕೊಡುವಾಗ ವಿಚಾರಣೆಗೆ ಯೋಗ್ಯ ಎನ್ನುವ ಬಗ್ಗೆ ವಿಚಾರಗಳನ್ನು ಪ್ರಸ್ತಾಪ ಮಾಡಬೇಕಿತ್ತು .ಆದರೆ ಇದ್ಯಾವುದು ಸಹ ರಾಜ್ಯಪಾಲರು ಮಾಡಲಿಲ್ಲ. ಘಟನೆಗಳನ್ನು ಚೈನ್ ಲಿಂಕ್ ರೀತಿ ನೋಡಬೇಕಿತ್ತು. ಅದನ್ನು ರಾಜ್ಯಪಾಲರು ಮಾಡಲಿಲ್ಲ. ಯಾರು ಸಹ 20 ಪುಟಗಳ ರಾಜ್ಯಪಾಲರ ಆದೇಶ ಇರಬೇಕು ಅಂತ ಹೇಳುವುದಿಲ್ಲ. ಆದರೆ ಕೊಡುವ ಕಾರಣಗಳು ಸಂಪೂರ್ಣವಾಗಿ ಇರಬೇಕು. ಆಳವಾಗಿ ಅಧ್ಯಯನ ಮಾಡಿರಬೇಕು ಎಂದು ವಾದ ಮಂಡಿಸಿದರು.

ಸಿದ್ದರಾಮಯ್ಯ ವಿರುದ್ಧ ಮಾತ್ರ ಯಾಕೆ ಆರೋಪ

ಮುಂದುವರಿದು,.. ರಾಜ್ಯಪಾಲರು ಕೇವಲ ಎಂಪಿ ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಕೇಸ್ ಆಧರಿಸಿದ್ದಾರೆ. ರಾಜಕೀಯದಲ್ಲಿ ಕೆಲವೊಮ್ಮೆ ಸಿಎಂರನ್ನು ಸಚಿವ ಸಂಪುಟ ವಿರೋಧಿಸಲೂಬಹುದು. ಕಳೆದ 23 ವರ್ಷಗಳಲ್ಲಿ 23 ಅಧಿಕಾರಿಗಳು ಇದರಲ್ಲಿ ಭಾಗಿಯಾಗಿರಬಹುದು. ಆದರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತ್ರ ಆರೋಪಿಸಲಾಗಿದೆ. 1984 ರಿಂದಲೂ ಸಿದ್ದರಾಮಯ್ಯ ಶಾಸಕರಾಗಿದ್ದಾರೆ. ಆದರೆ ಅವರು ಮುಡಾಗೆ ಸಂಬಂಧಿಸಿದ ಯಾವುದೇ ಹೊಣೆ ನಿಭಾಯಿಸಿಲ್ಲ ಎಂದು ಅಭಿಷೇಕ್‌ ಸಿಂಘ್ವಿ ವಾದಿಸಿದರು.

ಲಲಿತಾಕುಮಾರಿ ಕೇಸ್‌ ಉಲ್ಲೇಖ

17a ಸಂಬಂಧಿಸಿದಂತೆ ಲಲಿತಕುಮಾರಿ ಕೇಸ್ ಉಲ್ಲೇಖಿಸಿದ ಸಿಂಘ್ವಿ, 17a ಇರುವುದು ಸುಳ್ಳು ಆರೋಪಗಳಿಂದ ಪರಿಶೀಲಿಸಿ ರಕ್ಷಣೆ ಮಾಡಲು ಇರುವುದು. ಯಾವುದೇ ವಿಚಾರಕ್ಕೂ ಎರಡು ಆಯಾಮಗಳಿರುತ್ತವೆ. ರಾಜ್ಯಪಾಲರ ಆದೇಶದಲ್ಲಿ ಒಂದೇ ಒಂದು ಕಾರಣವಿಲ್ಲ. ಆದರೆ ರಾಜ್ಯಪಾಲರ ಕಡತದಲ್ಲಿ ಕಾರಣಗಳಿವೆ ಎನ್ನಲಾಗುತ್ತಿದೆ. ರಾಜ್ಯಪಾಲರು 50 ಪುಟಗಳ ಆದೇಶ ನೀಡಬೇಕೆಂದು ನಾನು ಹೇಳುತ್ತಿಲ್ಲ. ಆದರೆ ಅವರ ಸಾವಿರ ಪುಟಗಳ ಕಡತದಲ್ಲೇನಿದೆ ಎಂಬುದನ್ನು ಹೇಳಬೇಕಿತ್ತು.

ಲಲಿತಾ ಕುಮಾರಿ ಪ್ರಕರಣಕ್ಕೂ ಸೆಕ್ಷನ್ 17A ಪ್ರಕ್ರಿಯೆಗೂ ಸಂಬಂಧವಿಲ್ಲ. ತನಿಖಾಧಿಕಾರಿ ಮೊದಲು ಅಭಿಪ್ರಾಯ ರೂಪಿಸಿಕೊಳ್ಳಬೇಕು. ತನಿಖೆ ನಡೆಸುವ ಅಗತ್ಯದ ಬಗ್ಗೆ ನಿರ್ಧರಿಸಿದ ಬಳಿಕ ಅನುಮತಿ ಕೋರಿ ಸಕ್ಷಮ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಖಾಸಗಿ ದೂರಿಗೆ ಅವಕಾಶ ಕೊಟ್ಟರೆ 17Aನ ಈ ರಕ್ಷಣೆ ಇರುವುದಿಲ್ಲ. ರಾಜಕೀಯದಲ್ಲಿ ಸಾಕಷ್ಟು ಬಾರಿ ಸಂಪುಟ ತಮ್ಮ ಮುಖ್ಯಮಂತ್ರಿ ವಿರುದ್ಧ ನಡೆದಿದೆ. ತಾವು ಭಾವಿಸಿದಂತೆ ಅಷ್ಟು ವಿಶ್ವಾಸಪೂರ್ಣವಾಗಿರುವುದಿಲ್ಲ. ಇದು ಸರಿಯಾಗಿದೆ ಎಂದು ಭಾವಿಸಿದರೆ, ಅದು ಪ್ರತಿ ಸಂದರ್ಭದಲ್ಲಿ ಪೂರ್ವಾಪೇಕ್ಷಿತ ಪಕ್ಷಪಾತವನ್ನು ಅರ್ಥೈಸುತ್ತದೆ.

ವಿವೇಚನಾಧಿಕಾರ ವಿಶೇಷ ಸಂದರ್ಭದಲ್ಲಿ ಬಳಸಬೇಕು

ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ವಿಶೇಷ ಸಂದರ್ಭದಲ್ಲಷ್ಟೇ ಬಳಸಬೇಕು. ಹಾಗೆ ಬಳಸಿದಾಗ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಬೇಕು. ಪರಿಶೀಲಿಸಿದ ಕಡತದಲ್ಲಿನ ಒಂದೇ ಒಂದೇ ಪದವನ್ನೂ ಆದೇಶದಲ್ಲಿ ಉಲ್ಲೇಖಿಸಿಲ್ಲ. ಸಾವಿರ ಪುಟಗಳನ್ನು ಪರಿಶೀಲಿಸಿ ಆದೇಶ ನೀಡಿರಬಹುದು. ಆದರೆ ಅವರು ನೀಡದ ಕಾರಣವನ್ನು ಸಾವಿರ ಪುಟಗಳಲ್ಲಿ ಹುಡುಕಲಾಗದು ಎಂದು ಅಭಿಷೇಕ್‌ ಸಿಂಘ್ವಿ ವಾದಿಸಿದರು.

ಸಚಿವ ಸಂಪುಟದ ಶಿಫಾರಸು ಪಾಲಿಸದಿದ್ದಾಗ ಹೆಚ್ಚಿನ ಕಾರಣವನ್ನು ನೀಡಬೇಕು ಎಂದು ನ್ಯಾಯಾಧೀಶರು ಪ್ರಶ್ನಿಸಿದಾಗ, ರಾಜ್ಯಪಾಲರ ಪಾತ್ರದ ಬಗ್ಗೆ ಡಾ.ಬಿ.ಆರ್. ಅಂಬೇಡ್ಕರ್ ಚರ್ಚಿಸಿದ್ದಾರೆ. ರಾಜ್ಯಪಾಲರಿಗೆ ಕೆಲಸವೇ ಇಲ್ಲದಿರುವುದರಿಂದ ಹುದ್ದೆಗೆ ಯಾರೂ ಅರ್ಜಿ ಸಲ್ಲಿಸುವುದಿಲ್ಲ. ಹೀಗಿದ್ದ ಅಭಿಪ್ರಾಯ ಈಗಿನ ಪರಿಸ್ಥಿತಿಯಲ್ಲಿ ಬದಲಾಗಿದೆ. ಸಚಿವ ಸಂಪುಟದ ನಿರ್ಧಾರವನ್ನು ಅನುಮತಿ ನೀಡುವ ಮುನ್ನ ಸರಿ ಇರಲಿ, ತಪ್ಪಿರಲಿ ಒಮ್ಮೆ ಪರಿಶೀಲನೆ ಮಾಡಬೇಕು. ಕ್ಯಾಬಿನೆಟ್ ನಿರ್ಣಯ ಪರಿಶೀಲನೆ ಮಾಡಿ ತಿರಸ್ಕರಿಸುವುದು ರಾಜ್ಯಪಾಲರು ಏಕಪಕ್ಷೀಯ ಹಾಗೂ ರಾಜಕೀಯ ಪ್ರೇರಿತ ಆಗಿದ್ದಾರೆ ಎನ್ನಬೇಕಾಗುತ್ತೆ ಎಂದು ಅಭಿಷೇಕ್‌ ಸಿಂಘ್ವಿ ಲಾ ಪಾಯಿಂಟ್‌ ಹಾಕಿದರು.

ಆತುರದ ನಿರ್ಣಯ ಯಾಕಾಗಿ?

ಸಂಪುಟದ ನಿರ್ಣಯದಲ್ಲಿನ ದೋಷವನ್ನು ರಾಜ್ಯಪಾಲರು ತಮ್ಮ ಆದೇಶದಲ್ಲಿ ಉಲ್ಲೇಖಿಸಬೇಕಿತ್ತು ಎಂದು ಅಭಿಷೇಕ್‌ ಸಿಂಘ್ವಿ ವಾದಿಸಿದಾಗ ಮಧ್ಯಪ್ರವೇಶಿಸಿದ ನ್ಯಾಯಾದೀಶರು ರಾಜ್ಯಪಾಲರ ಕಡತದಲ್ಲಿಯೇ ಕಾರಣಗಳಿದ್ದರೆ ಅದನ್ನು ಪರಿಗಣಿಸಬಾರದೇ? ನಾನು ಕೆಲ ಸ್ಪಷ್ಟನೆಗಾಗಿ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ ಎಂದರು. 17A ಅಡಿಯಲ್ಲಿ ಈ ಹಿಂದೆ ಶಶಿಕಲಾ ಜೊಲ್ಲೆ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಅನುಮತಿ‌ ಕೇಳಲಾಗಿದೆ. ಅದಕ್ಕೆ ಅನುಮತಿ ನೀಡಿಲ್ಲ. ಆದರೆ 20 ವರ್ಷಗಳ ಹಳೆಯ ಪ್ರಕರಣಕ್ಕೆ ಅನುಮತಿ ನೀಡಲಾಗಿದೆ. ಇಷ್ಟು ಆತುರ ನಿರ್ಣಯ ತೆಗೆದುಕೊಳ್ಳುವುದರ ಹಿಂದೆ ಉದ್ದೇಶ ಏನಿದೆ?

ಬಿಜೆಪಿಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಪ್ರಕರಣದಲ್ಲಿ ಸಿಸಿಟಿವಿ ವಿಡಿಯೊ ದಾಖಲೆ ಇದ್ದರೂ, ಎರಡೂವರೆ ವರ್ಷ ಕಡತಗಳನ್ನು ಇಟ್ಟುಕೊಂಡು ಆನಂತರ ರಾಜ್ಯಪಾಲರು ಪೂರ್ವಾನುಮತಿ ನಿರಾಕರಿಸಿದ್ದಾರೆ. ನನ್ನ ಅರ್ಜಿದಾರರ ಕೇಸ್‌ನಲ್ಲಿ ಬೆಳಗ್ಗೆ ಅರ್ಜಿ, ಸಂಜೆ ನನಗೆ ಶೋಕಾಸ್‌ ನೋಟೀಸ್ ನೀಡಿದ್ದಾರೆ. ಇದರ ಹಿಂದೆ ಏನು ನಡೆದಿದೆ. ಸಿಎಂ ವಿರುದ್ಧ ಒಂದೇ ಒಂದು ಕೇಸ್ ಇಲ್ಲ. ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ರಚನೆ ಮಾಡಿ, ರಾಜ್ಯಪಾಲರಿಂದಲೇ ಪ್ರಮಾಣ ವಚನ ಭೋದಿಸಿದ್ದಾರೆ. ಅಂತವರು ಮಾಡಿದ ನಿರ್ಣಯ ಪರಿಶೀಲನೆ ಮಾಡಬೇಕು. ಪರಿಶೀಲನೆ ಮಾಡಿ ಅದನ್ನು ತಿರಸ್ಕರಿಸಿದ ಬಗ್ಗೆ ಕಾರಣಗಳನ್ನು ತಿಳಿಸಬೇಕು. ಆರ್ಟಿಕಲ್ 14 ಸಮಾನತೆಯ ಹಕ್ಕಿನ ಆಧಾರದಲ್ಲೂ ವಾದಿಸುತ್ತಿದ್ದೇನೆ. ಮಧ್ಯಾಹ್ನದ ಊಟದ ಮೊಟ್ಟೆ ಹಗರಣಕ್ಕೆ ಅನುಮತಿ ನೀಡಿಲ್ಲ. ಸಿಎಂ ಸಹಿ ಇಲ್ಲದ 23 ವರ್ಷಗಳ ಹಳೆಯ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿಗೆ ಒಂದೂ ಕಾರಣ ನೀಡಿಲ್ಲ. ಆದರೆ ಶಶಿಕಲಾ ಜೊಲ್ಲೆ ವಿರುದ್ಧ ಅನುಮತಿ ನೀಡದಿರಲು ಕಾರಣಗಳನ್ನು ನೀಡಿದ್ದಾರೆ ಎಂದು ಅಭಿಷೇಕ್‌ ಸಿಂಘ್ವಿ ವಾದಿಸಿದರು.

ಮುಡಾ ಸಭೆಗಳಲ್ಲಿ ಯತೀಂದ್ರ ಭಾಗಿ

ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ಮುಡಾದ ಎರಡು ನಿರ್ದಿಷ್ಟ ಸಭೆಯಲ್ಲಿ ಭಾಗವಹಿಸಿದ್ದರಲ್ಲವೇ? ಎಂದು ನ್ಯಾಯಾಧೀಶರು ಪ್ರಶ್ನಿಸಿದಾಗ, ಯತೀಂದ್ರ ಅವರನ್ನು ಆರೋಪಿಯನ್ನಾಗಿಸಿಲ್ಲ ಎಂದು ಸಿಂಘ್ವಿ ಅವರು ಹೇಳಿದಾಗ ಯತೀಂದ್ರರನ್ನು ಆರೋಪಿಯನ್ನಾಗಿ ಮಾಡಿಲ್ಲ ಎಂದು ನ್ಯಾಯಾಧೀಶರು ತಿಳಿಸಿದರು.
ಡಿನೋಟಿಫಿಕೇಷನ್ ವಿಚಾರದಲ್ಲಿ ಆಗಲಿ, ಜಮೀನು ಖರೀದಿಯಲ್ಲಾಗಲೀ ಹಾಗೂ 50:50 ನಿವೇಶನ ಹಂಚಿಕೆಯಲ್ಲಾಗಲೀ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಮುಡಾ ಸಭೆಯಲ್ಲಿ ಸಿಎಂ ಪುತ್ರ ಪದನಿಮಿತ್ತ ಸದಸ್ಯರಾಗಿ ಮಾತ್ರ ಮುಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಆ ಸಭೆಯಲ್ಲಿ ಬೇರೆ ಹಲವು ವಿಚಾರಗಳನ್ನು ನಿರ್ಣಯಿಸಲಾಗಿದೆ.

ರಾಜ್ಯಪಾಲರು ಸಚಿವ ಸಂಪುಟದೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ಸಿಎಂ ವಿಚಾರ ಎಂಬ ಕಾರಣ ಮಾತ್ರಕ್ಕೆ ಸಚಿವ ಸಂಪುಟದ ತೀರ್ಮಾನ ಕಡೆಗಣಿಸಬಾರದು. ಹಾಗೆ ನೋಡಿದರೆ ರಾಷ್ಟ್ರಪತಿಗಳಿಗಿಂತ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರವಿದೆ. ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವ ಅಧಿಕಾರ ರಾಜ್ಯಪಾಲರಿಗೆ ಮಾತ್ರವಿದೆ. ಅವರ ವಿವೇಚನಾಧಿಕಾರ ಸಂವಿಧಾನದಲ್ಲಿ ಸ್ಪಷ್ಟವಾಗಿರಬೇಕು ಎಂದು ಅಭಿಷೇಕ್‌ ಸಿಂಘ್ವಿ ವಾದಿಸಿದ್ದರು. ಬಳಿಕ ವಾದ-ವಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಗುರುವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋರ್ಟ್

CM Siddaramaiah : ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿಸಿರಿದ ಹೈಕೋರ್ಟ್, ಮಧ್ಯಂತರ ತಡೆ ಮುಂದುವರಿಕೆ

CM Siddaramaiah : ರಾಜ್ಯಪಾಲರ ಪ್ರಾಸಿಕ್ಯೂಷನ್‌ ತಡೆಯಾಜ್ಞೆ ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ಸುದೀರ್ಘ ವಾದ -ಪ್ರತಿವಾದ ಆಲಿಸಿದ ಹೈ ಕೋರ್ಟ್‌ ತೀರ್ಪು ಕಾಯ್ದಿಸಿರಿದೆ. ಅಂತಿಮ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಸಿ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

VISTARANEWS.COM


on

By

Prosecution against Siddaramaiah Hc reserves verdict after hearing arguments
Koo

ಬೆಂಗಳೂರು:ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ಅರ್ಜಿ ವಿಚಾರಣೆಯ ಸುದೀರ್ಘ ವಾದ -ಪ್ರತಿವಾದ ಆಲಿಸಿ ಹೈಕೋರ್ಟ್‌ ತೀರ್ಪು ಕಾಯ್ದಿಸಿರಿದೆ. ಅಂತಿಮ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಸಿ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಮೊದಲಿಗೆ ದೂರದಾರರ ವಾದ ಆಲಿಸಿ ಬಳಿಕ ಅರ್ಜಿದಾರರ ಪ್ರತಿವಾದ ಆಲಿಸಿ ಗುರುವಾರ ಬೆಳಗ್ಗೆ ವಾದ-ವಿವಾದ ಆಲಿಸಿದ್ದ ಏಕಸದಸ್ಯ ಪೀಠವು ಮಧ್ಯಾಹ್ನಕ್ಕೆ ವಿಚಾರಣೆಯನ್ನು ಮುಂದೂಡಿತ್ತು. ಮಧ್ಯಾಹ್ನದ ನಂತರ ಶುರುವಾದ ವಿಚಾರಣೆಯಲ್ಲಿ ಸಿಎಂ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಆರಂಭಿಸಿದರು. ಅಭಿಷೇಕ್‌ ಅವರು ಸುಭಾಷ್ ದೇಸಾಯಿ ಪ್ರಕರಣ ತೀರ್ಪು ಉಲ್ಲೇಖಿಸುವಾಗ ಮಧ್ಯಪ್ರವೇಶಿಸಿದ ನ್ಯಾಯಾಧೀಶರು ಇದೆಲ್ಲವೂ ಆರ್ಟಿಕಲ್ 356 ಸಂಬಂಧ ಇರುವ ತೀರ್ಪುಗಳು ಎಂದರು.

ರಾಜ್ಯಪಾಲರು ಅತಿ ವಿರಳ ಸಂದರ್ಭದಲ್ಲಿ ಮಾತ್ರ ವಿವೇಚನಾಧಿಕಾರ ಬಳಸಬೇಕು. ರಾಜ್ಯಪಾಲರು ಜನರಿಂದ ಆಯ್ಕೆಯಾಗಿಲ್ಲ, ನೇಮಕಗೊಂಡಿದ್ದಾರೆ. ಹೀಗಾಗಿ ರಾಜ್ಯಪಾಲರಿಗೆ ಹೆಚ್ಚಿನ ಉತ್ತರದಾಯಿತ್ವ ಇದೆ. ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ತೀರ್ಪು ಉಲ್ಲೇಖಿಸಿದರು. 17A ಆದೇಶ ಮರುಪರಿಶೀಲನೆಗೆ ಒಳಪಡಿಸಬಹುದು. ಇಲ್ಲಿ ಸರಿಯಾದ ರಕ್ಷಣೆ ನೀಡದೇ ಇದ್ದರೆ, ಜನರಿಂದ ಆಯ್ಕೆಯಾದ ಸರ್ಕಾರಕ್ಕೆ ಹಾನಿಯಾಗುವ ಸಾಧ್ಯತೆ ಇರುತ್ತೆ ಎಂದು ಅಭಿಷೇಕ್‌ ಮನುಸಿಂಘ್ವಿ ವಾದಿಸಿದರು.

ರಾಷ್ಟ್ರಪತಿ ಆಳ್ವಿಕೆಗಿಂತ ಇದು ಹೆಚ್ಚು ರಾಜಕೀಯ ಪ್ರೇರಿತ

ಎಂ.ಪಿ.ಪೋಲೀಸ್ ಎಸ್ಟಾಬ್ಲಿಷ್ಮೆಂಟ್ ಕೇಸ್ ಉಲ್ಳೇಖಿಸಿ ವಾದ ಮುಂದುವರಿಸಿದ ಅಭಿಷೇಕ್‌ ಮನುಸಿಂಘ್ವಿ, ಸರಿಯಾದ ಅಂಶಗಳು ಇದ್ದರೂ ರಾಜ್ಯಪಾಲರು ಅಸಂಬಂಧ ಆದೇಶ ನೀಡಿದ್ದಾರೆ ಎಂದರು. ರಾಷ್ಟ್ರಪತಿ ಆಳ್ವಿಕೆ ಹೇರಿದ ಪ್ರಕರಣಗಳು 17A ಕೇಸ್‌ಗಿಂತ ಗಂಭೀರವಲ್ಲವೇ? ಆರ್ಟಿಕಲ್ 356 ತೀರ್ಪುಗಳನ್ನು ಸೆ. 17A ಕೇಸ್‌ಗೆ ಉಲ್ಲೇಖಿಸುವುದು ಸೂಕ್ತವೇ ಎಂದು ಸಿಎಂ ಪರ ವಕೀಲ ಅಭಿಷೇಕ್‌ ಮನುಸಿಂಘ್ವಿಗೆ ನ್ಯಾಯಾಧೀಶರು ಪ್ರಶ್ನಿಸಿದರು.

ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ರಾಷ್ಟ್ರಪತಿ ಆಳ್ವಿಕೆಗಿಂತ ಇದು ಹೆಚ್ಚು ರಾಜಕೀಯ ಪ್ರೇರಿತವಾಗಿದೆ. ಸೆಕ್ಷನ್ 17ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ ಎಂದರು. ಆಗ ಮತ್ತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ಪಾಲಿಸಲೇಬೇಕೆಂದಿಲ್ಲ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ ಎಂದು ಕೇಳಿದರು. ಸಚಿವ ಸಂಪುಟದ ನಿರ್ಧಾರವನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪು ಎಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತವೆನ್ನಲಾಗದು. ರಾಜ್ಯಪಾಲರು ಮಧ್ಯಪ್ರದೇಶ ಪೊಲೀಸ್‌ ಸ್ಥಾಪನಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪನ್ನು ತಪ್ಪಾಗಿ ಅರ್ಥೈಸಿದ್ದಾರೆ. ಆದರೆ ನಮ್ಮ ಕೇಸ್‌ನಲ್ಲಿ ಇಡೀ ತೀರ್ಪು ಸಿದ್ದರಾಮಯ್ಯ ಪರವಾಗಿದೆ ಎಂದು ಸಿಂಘ್ವಿ ವಾದಿಸಿದರು.

ಯಾವುದೇ ಒಂದೇ ಒಂದು ರೀಸನ್ ನೀಡದೆ ಅನುಮತಿ ನೀಡಿದ್ದಾರೆ. ಸಚಿವ ಸಂಪುಟದ ಶಿಫಾರಸ್ಸಿನಲ್ಲಿ ಇಂತಹ ತಪ್ಪಿದೆ ಎಂದು ರಾಜ್ಯಪಾಲರು ಹೇಳಿಲ್ಲ. ವಿವೇಚನಾಧಿಕಾರವನ್ನು ರಾಜ್ಯಪಾಲರು ಬಾಹಿರವಾಗಿ ಬಳಸಿದ್ದಾರೆ. ಎಂ.ಪಿ. ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಕೇಸನ್ನು ರಾಜ್ಯಪಾಲರು ತಪ್ಪಾಗಿ ಬಳಸಿದ್ದಾರೆ. ಪೂರ್ವಾನುಮತಿಯನ್ನು ಯಾವ ಕಾರಣದಿಂದ ನೀಡಬೇಕು ಅನ್ನೋದು ಮುಖ್ಯ. ಹೀಗಾಗಿ ರಾಜ್ಯಪಾಲರ ಆದೇಶವನ್ನು ಕೋರ್ಟ್ ಮರುಪರಿಶೀಲಿಸಬೇಕಿದೆ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ರಾಜ್ಯಪಾಲರು ನಿರ್ಧಾರ ಕೈಗೊಳ್ಳಬೇಕು. 1000 ಪುಟಗಳ ದಾಖಲೆ ಪರಿಶೀಲಿಸಿ 5 ಪುಟಗಳಲ್ಲಿ ಆದೇಶ ಹೇಳಲಾಗದು. ರಾಜ್ಯಪಾಲರ ಆದೇಶ ಓದಿದರೆ ಎಲ್ಲವೂ ಅರ್ಥವಾಗುವಂತಿರಬೇಕು. ರಾಜ್ಯಪಾಲರ ಆದೇಶದಲ್ಲಿ ಅನುಮತಿಗೆ ನೀಡುವ ಕಾರಣ ಶೂನ್ಯವಾಗಿದೆ ಎಂದು ಸಿಎಂ ಪರ ವಕೀಲ ಅಭಿಷೇಕ್‌ ಮನುಸಿಂಘ್ವಿ ವಾದಿಸಿದರು.

ಪ್ರಾಸಿಕ್ಯುಷನ್ ಅನುಮತಿಯನ್ನು ಏಕೆ ಕೊಡಲಾಗಿದೆ ಎಂಬ ಅಂಶವೇ ರಾಜ್ಯಪಾಲರ ಆದೇಶದಲ್ಲಿ ಇಲ್ಲ. ಸಿದ್ದರಾಮಯ್ಯ ಈ ಹಗರಣದಲ್ಲಿ ಹೇಗೆ ಭಾಗಿಯಾಗಿದ್ದಾರೆ? ಮೂಡಾ ಹಗರಣದ ಬಗ್ಗೆ ವರದಿ ನೀಡಿ ಸಿಎಸ್‌ಗೆ ರಾಜ್ಯಪಾಲರು ಕೇಳಿದ್ರೆ, ಸಿಎಸ್ ವರದಿ ನೀಡಿದ್ದು ಅದರಲ್ಲಿ ಸಿಎಂ ಪಾತ್ರ ಶೂನ್ಯವಾಗಿದೆ. ರಾಜ್ಯಪಾಲರ ಆದೇಶದಲ್ಲಿಯೂ ಅವರು ಪರಿಶೀಲಿಸಿದ ಫೈಲ್‌ಗಳ ಉಲ್ಲೇಖವಿಲ್ಲ. ಇಂತಹ ಟಿಪ್ಪಣಿಗಳ ಆಧಾರದ ಮೇಲೆ ನಿರ್ಧಾರ ಕೈಗೊಂಡಿದ್ದೇನೆಂದು ಹೇಳಿಲ್ಲ. ಕಂಪಾರಿಟೀವ್ ಚಾರ್ಟ್ ಬಗ್ಗೆಯೂ ರಾಜ್ಯಪಾಲರ ಆದೇಶದಲ್ಲಿ ಉಲ್ಲೇಖಿಸಿಲ್ಲ. ಸಿಎಂ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆ ಬಗ್ಗೆಯೂ ಉಲ್ಲೇಖಿಸಿಲ್ಲ. ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ಪಾತ್ರವೇನು ಎಂದೂ ರಾಜ್ಯಪಾಲರು ಹೇಳಿಲ್ಲ. ಪಕ್ಷಪಾತದಿಂದ ರಾಜ್ಯಪಾಲರು ಕೇವಲ 6 ಆರು ಪುಟಗಳ ಆದೇಶ ನೀಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಗೆ ಸೆಕ್ಷನ್ 17A ಸೇರ್ಪಡೆಗೆ ಕಾರಣವಿದೆ ಮೊದಲಿಗೆ ಲೋಕಾಯುಕ್ತ, ಲೋಕಪಾಲರ ಅನುಮತಿಗೆ ಪ್ರಸ್ತಾಪವಿತ್ತು. ಆದರೆ ನಂತರ ಸಕ್ಷಮ ಪ್ರಾಧಿಕಾರಕ್ಕೆ ಇದರ ಹೊಣೆ ನೀಡಲಾಯಿತು. ತನಿಖಾಧಿಕಾರಿಯಿಂದ ಮಾತ್ರ 17A ಅನುಮತಿ ಕೇಳಬೇಕು. ಪರ್ಯಾಯ ಮಾಡಿ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಸಿಂಘ್ವಿ ವಾದಿಸಿದರು.

ಖಾಸಗಿ ದೂರು ಪ್ರಕರಣ ದಾಖಲಿಸಲು 17A ಅಗತ್ಯವಿದೆ. ತನಿಖಾಧಿಕಾರಿ ಪಬ್ಲಿಕ್ ಸರ್ವೆಂಟ್ ಅನುಮತಿ ಪಡೆಯಲು ಹೇಗೆ ಸಾಧ್ಯ? 156 ಅಡಿ ಮಾತ್ರ ತನಿಖಾಧಿಕಾರಿ ಅನುಮತಿ ಕೇಳಲು ಸಾಧ್ಯ. ಖಾಸಗಿ ದೂರು ದಾಖಲಿಸಲು 17A ಅನುಮತಿ ಅಗತ್ಯ ಎಂದು ನಾನೇ ಆದೇಶ ಮಾಡಿದ್ದೇನೆ ಎಂದು ನ್ಯಾಯಾಧೀಶರು ತಿಳಿಸಿದರು. ಖಾಸಗಿ ದೂರಲ್ಲಿ ಪಬ್ಲಿಕ್ ಸರ್ವೆಂಟ್ ವಿರುದ್ಧ ತನಿಖೆ ಆರಂಭಿಸಲು 17A ಅಗತ್ಯವಿದೆ. ಹೀಗಿದ್ದಾಗ ತನಿಖಾಧಿಕಾರಿ ಅನುಮತಿ ಕೇಳುವ ಸಂದರ್ಭ ಹೇಗೆ ಎದುರಾಗುತ್ತೆ ಎಂದು ಪ್ರಶ್ನಿಸಿದರು. ಸೆಕ್ಷನ್ 17A ಅಡಿಯಲ್ಲಿ ಪೊಲೀಸ್ ಅಧಿಕಾರಿಯೇ ಅನುಮತಿ ಕೇಳಬೇಕು. ತನಿಖಾಧಿಕಾರಿಯೇ ತನಿಖೆಯ ಸಂಪೂರ್ಣ ಹಕ್ಕು ಹೊಂದಿರುತ್ತಾನೆ ಎಂದು ಸಿಂಘ್ವಿ ವಾದಿಸಿದಾಗ, ಪೊಲೀಸ್ ಅಧಿಕಾರಿ ದೂರು ಸ್ವೀಕರಿಸಲಿಲ್ಲವೆಂದಾದರೆ ಏನು ಮಾಡಬೇಕು? ಖಾಸಗಿ ದೂರುದಾರರಿಗೆ ಇರುವ ಮಾರ್ಗ ಯಾವುದು ಎಂದು ನ್ಯಾಯಾಧೀಶರು ಮರು ಪ್ರಶ್ನಿಸಿದರು. ನ್ಯಾಯಾಧೀಶರ ಪ್ರಶ್ನೆಗೆ ಉತ್ತರ ನೀಡಲು ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಗಲಿಬಿಲಿಗೊಂಡರು.

ಜುಲೈ 18ರಂದು ಟಿ.ಜೆ.ಅಬ್ರಹಾಂ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಜುಲೈ 26ಕ್ಕೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಎಸ್‌ಪಿಗೆ ದೂರು ನೀಡಬೇಕಿತ್ತು ಅದನ್ನು ಮಾಡಿಲ್ಲ. ಖಾಸಗಿ ದೂರುದಾರರಿಗೆ ಅವಕಾಶ ನೀಡಿದರೆ ಎಲ್ಲದಕ್ಕೂ ದೂರು ದಾಖಲಿಸುತ್ತಾರೆ. ಅದಕ್ಕೆಂದೇ 17A ರಕ್ಷಣೆ ಇದೆಯಲ್ಲಾ. ಸಕ್ಷಮ ಪ್ರಾಧಿಕಾರದ ಅನುಮತಿ ಬೇಕೆಂದಿರುವುದು ಇದಕ್ಕಾಗಿಯೇ ಎಂದು ನ್ಯಾಯಾಧೀಶರು ಉತ್ತರಿಸಿದರು.

ರಾಜ್ಯಪಾಲರು ಪಕ್ಷಾತೀತರಾಗಿರಬೇಕೆಂಬ ಮಾತುಗಳು ಕೇಳಲು ಮಾತ್ರ ಇದೆ. ಹಲವು ರಾಜ್ಯಪಾಲರು ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಖಾಸಗಿ ದೂರುದಾರರು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಲು ಅವಕಾಶ ನೀಡಬಾರದು. ವಿಪಕ್ಷಗಳ ಸರ್ಕಾರಗಳ ವಿರುದ್ಧ ದೂರುಗಳು ದಾಖಲಿಸಲು ಬಳಕೆಯಾಗಬಹುದು ಎಂದು ಸಿಂಘ್ವಿ ವಾದಿಸಿದರು. ಆಗ ಮತ್ತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು ಪೊಲೀಸ್ ಅಧಿಕಾರಿ ದೂರು ದಾಖಲಿಸದಿದ್ದರೆ ಏನು ಮಾಡಬೇಕು ಎಂದಾಗ ಸಿಎಂ ಪರ ವಕೀಲ ಸಿಂಘ್ವಿ ಆಗ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲು ಅವಕಾಶವಿದೆಯಲ್ಲಾ. ತನಿಖೆಗೆ ನಿರ್ದೇಶಿಸುವಂತೆ ಹೈಕೋರ್ಟ್ ಅನ್ನು ಕೋರಬಹುದು ಎಂದರು.

ಅದೂ ಸಾಧ್ಯವಿದೆ ಎಂದರೆ ಖಾಸಗಿ ದೂರಿಗೂ ಅವಕಾಶವಿದೆಯಲ್ಲಾ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಆಗ ದೂರುದಾರರು ರಾಜ್ಯಪಾಲರ ಮನೆ ಮುಂದೆ ನಿಲ್ಲುತ್ತಾರೆ. ರಾಜ್ಯಪಾಲರು ಎಲ್ಲರ ವಿರುದ್ಧದ ದೂರುಗಳಿಗೆ ಸಕ್ಷಮ ಪ್ರಾಧಿಕಾರಿಯಲ್ಲ. ದೂರುದಾರರು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಕೋರಬಹುದು ಎಂದು ಸಿಂಘ್ವಿ ವಾದಿಸಿದರು. ಒಂದು ದೂರಿನಲ್ಲಿ ಮಾತ್ರ ಶೋಕಾಸ್ ನೋಟಿಸ್ ನೀಡಲಾಗಿದೆ.

ಉಳಿದ ಎರಡು ದೂರಿನಲ್ಲಿ ಶೋಕಾಸ್ ನೋಟಿಸ್ ನೀಡಿಲ್ಲ. ಇಲ್ಲಿ ನೈಸರ್ಗಿಕ ನ್ಯಾಯ ಉಲ್ಲಂಘನೆ ಆಗಿದೆ ಎಂದು ಅಭಿಷೇಕ್‌ ಮನುಸಿಂಘ್ವಿ ವಾದಿಸಿದರು. ರಾಜ್ಯಪಾಲರು ಉಳಿದ ಎರಡು ದೂರುಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ನ್ಯಾಯಾಧೀಶರು ಕೇಳಿದಾಗ, ದೂರುಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ ಶೋಕಾಸ್ ನೋಟಿಸ್ ನೀಡಿಲ್ಲ ಎಂದು ಸಿಂಘ್ವಿ ಉತ್ತರಿಸಿದರು. ಯಾರ ದೂರಿಗೂ ಶೋಕಾಸ್ ನೋಟಿಸ್ ನೀಡಿಲ್ಲದಿದ್ದರೆ ಅಗತ್ಯವಿಲ್ಲವೆನ್ನಬಹುದಿತ್ತು. ಒಬ್ಬರ ದೂರಿಗೆ ನೀಡಿ, ಇಬ್ಬರ ದೂರಿಗೆ ಶೋಕಾಸ್ ನೋಟಿಸ್ ನೀಡಿಲ್ಲ. ಕನ್ನಡದಲ್ಲಿ ನೂರಕ್ಕೂ ಅಧಿಕ ಪುಟಗಳ ದಾಖಲೆಗಳನ್ನು ಒಂದೇ ಬಾರಿ ಪರಿಶೀಲಿಸಿ ಶೋಕಾಸ್ ನೊಟೀಸ್ ನೀಡುತ್ತಾರೆ. ಆದರೆ ಮತ್ತೊಂದು ಪ್ರಕರಣದಲ್ಲಿ ಟ್ರಾನ್ಸಲೇಷನ್ ಕೇಳಿ ಕಡತವನ್ನು ವಾಪಸ್ಸು ಕಳಿಸಿದ್ದಾರೆ. ಇದು ಹೇಗೆ ಸಾಧ್ಯವಾಗುತ್ತೆ? ಎಂದು ಸಿಂಘ್ವಿ ವಾದಿಸಿದರು. ರಾಜ್ಯಪಾಲರು ಸಿಎಂ ಬಿಟ್ಟು ಉಳಿದವರಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿಲ್ಲ. ಶಶಿಕಲಾ ಜೊಲ್ಲೆ ಕೇಸ್‌ನಲ್ಲಿ ತಿರಸ್ಕರಿಸಲಾಗಿದೆ. ಮುರುಗೇಶ್ ನಿರಾಣಿ ಕೇಸ್‌ನಲ್ಲಿ ಸ್ಪಷ್ಟನೆ ಕೇಳಿ ಹಿಂತಿರುಗಿಸಲಾಗಿದೆ. ಎಚ್‌ಡಿ ಕುಮಾರಸ್ವಾಮಿ ಕೇಸಿನಲ್ಲೂ ಹಿಂತಿರುಗಿಸಲಾಗಿದೆ.

ಈ ಪ್ರಕರಣವೆಲ್ಲವೂ ಬಿಜೆಪಿಯ ಆಡಳಿತದಲ್ಲಿ ನಡೆದಿದೆ

ಕೆಸರೆ ಗ್ರಾಮದ ಜಮೀನು 1992 ರಲ್ಲಿ ಮುಡಾಗೆ ಭೂಮಿ ಸ್ವಾಧೀನವಾಗಿತ್ತು. ದೇವರಾಜು ಎಂಬುವರು ಜಮೀನಿನ ಮಾಲೀಕರಾಗಿದ್ದರು ಎಂದು ಸಿಂಘ್ವಿ ಹೇಳಿದಾಗ, ದೇವರಾಜು ಜಮೀನಿನ ಮಾಲೀಕರು ಹೇಗಾದರು ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಆಗ 10.04.1993 ರಲ್ಲಿ ದೇವರಾಜುವಿನ ಹೆಸರಲ್ಲಿ ಫವತಿ ಖಾತೆಯಾಗಿದೆ. ನಂತರ ಜಮೀನು ಕಾನೂನಿನ ಪ್ರಕ್ರಿಯೆಯಂತೆ ಡಿನೋಟಿಫೈ ಆಗಿದೆ.

23 ವರ್ಷಗಳ ಹಗರಣದಂತೆ ದೊಡ್ಡ ದನಿಯಲ್ಲಿ ಬಿಂಬಿಸಲಾಗಿದೆ. ಇದು ಸಿಎಂ ವಿರುದ್ಧದ ಭ್ರಷ್ಟಾಚಾರ ಪ್ರಕರಣವಲ್ಲ. ಪೇಪರ್ ಮೇಲೆ ಮಾತ್ರ ಮುಡಾ ನಿವೇಶನ ಹಂಚಿಕೆಯಾಗಿದೆ. 2004 ರಲ್ಲಿ ಭಾಮೈದನಿಗೆ ಕ್ರಯ ಪತ್ರವಾಗಿದೆ. 2005 ರಲ್ಲಿ ಭೂಪರಿವರ್ತನೆ ಮಾಡಲಾಗಿದೆ. 2010 ರಲ್ಲಿ ಸಿದ್ದರಾಮಯ್ಯ ಪತ್ನಿಗೆ ದಾನಪತ್ರವಾಗಿದೆ.

ಅಕ್ರಮವಾಗಿದ್ದರೆ 5 ವರ್ಷಗಳ ನಂತರ ಯಾರಾದರೂ ದಾನಪತ್ರ ಮಾಡಿಸಿಕೊಳ್ಳುತ್ತಾರಾ? ಸಿಎಂ ಪತ್ನಿಗೆ ಮಾತ್ರ ಈ ರೀತಿಯ ಬದಲಿ ನಿವೇಶನ ಹಂಚಿಕೆಯಾಗಿಲ್ಲ. ಮುಡಾ ಸಭೆಯಲ್ಲಿ ಸಿಎಂ ಪುತ್ರ ಇದ್ದರೂ ಮಾತನಾಡಿಲ್ಲ. ದೂರು ಇರುವುದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಂದು ಅಭಿಷೇಕ್‌ ಸಿಂಘ್ವಿ ವಾದಿಸಿದರು. ಮೂಡಾ ಸ್ವಾಧೀನ ಪಡಿಸಿಕೊಂಡ ಭೂಮಿಯಲ್ಲಿ 50 :50 ಅನುಪಾತದಲ್ಲಿ ನಿವೇಶನ ಹಂಚಿಕೆ ಬಗ್ಗೆ ನಿರ್ಧಾರವಾಗಿದೆ. ಇಡೀ ಪ್ರಕರಣ ಬಿಜೆಪಿಯ ಆಡಳಿತದಲ್ಲಿ ನಡೆದಿದೆ ಎಂದು ಹೇಳಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ ಮನುಸಿಂಘ್ವಿ ವಾದ ಮುಕ್ತಾಯಗೊಳಿಸಿದರು.

ಟಿ.ಜೆ.ಅಬ್ರಹಾಂರನ್ನು ಪ್ರೀತಿಯಿಂದ ಕರೆದು ಮಾತಾಡಿ ಆದೇಶ ಮಾಡಲಾಗಿದೆ- ರವಿವರ್ಮ ಕುಮಾರ್

ಸಿದ್ದರಾಮಯ್ಯ ಪರ ಹಿರಿಯ ವಕೀಲ ಫ್ರೋ ರವಿವರ್ಮ ಕುಮಾರ್ ವಾದ ಮಂಡನೆ ಶುರು ಮಾಡಿದರು. ಆಗಸ್ಟ್‌ 14ರಂದು ಅಬ್ರಹಾಂ ಅವರಿಂದ ಹೆಚ್ಚುವರಿ ಮಾಹಿತಿ ಪಡೆಯಲಾಗಿದೆ. ನಂತರ ಸ್ಯಾಂಕ್ಷನ್ ನೀಡಿ ಆದೇಶ ಮಾಡಲಾಗಿದೆ. 05/07 ರಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ರಾಜ್ಯಪಾಲರು ಟಿ.ಜೆ.ಅಬ್ರಹಾಂ ಅವರನ್ನು ಪ್ರೀತಿಯಿಂದ ಕರೆದು ಮಾತಾಡಿ ಆದೇಶ ಮಾಡಲಾಗಿದೆ. ಸ್ನೇಹಮಯಿ ಕೃಷ್ಣ ಅವರಿಂದ ಯಾವುದೇ ಸಮಜಾಯಿಸಿ ಕೇಳಿಲ್ಲ, ಪ್ರದೀಪ್ ಕುಮಾರ್ ಅವರಿಂದಲೂ ಯಾವುದೇ ಮಾಹಿತಿ ಕೇಳಿಲ್ಲ. ಕಾನೂನು ಸಲಹೆ ಪಡೆದು ಸಿದ್ದರಾಮಯ್ಯ ಅವರಿಂದ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ದಾರೆ. ಈ ಮಧ್ಯೆ ರಾಜ್ಯಪಾಲರು ವಿವೇಚನೆ ಬಳಸಿ ಆದೇಶ ಮಾಡಲಾಗಿದೆ ಎಂದು ಬರೆದಿದ್ದಾರೆ.

ಒಬ್ಬ ಭಕ್ತ ಕೈಲಾಸಕ್ಕೆ ಹೋಗಬೇಕೋ ಅಥವಾ ವೈಕುಂಠಕ್ಕೆ ಹೋಗಬೇಕಾ ಅಂತ ಯೋಚನೆ ಮಾಡಿದ್ದ. ಈ ವೇಳೆ ಲೋಲಾಕ್ ಧರಿಸಿದ್ದ. ಲೋಲಾಕ್ ಸ್ಪರ್ಷಿಸುತ್ತಿದ್ದಂತೆ ವಿಷ್ಣು ನೆನಪಾಗುತ್ತಿದ್ದ. ಅಂತಿಮವಾಗಿ ಕೈಲಾಸಕ್ಕೆ ಹೋಗದೇ ಆತ ವೈಕುಂಠಕ್ಕೆ ಹೋದ ಎಂದು ಪುರಾಣದ ಕಥೆಯನ್ನು ಉಲ್ಲೇಖಿಸಿ ರಾಜ್ಯಪಾಲರು ಸಂಪುಟದ ವರದಿಯ ಪೀಡನೆಗೆ ಒಳಗಾಗಿದ್ದಾರೆ.

ವಿಚಾರಣೆ ಆರಂಭವಾದ ಬಳಿಕ ರಾಜ್ಯಪಾಲರ ಕಡತವನ್ನು ಸಲ್ಲಿಸಲಾಗಿದೆ. ಅಕ್ರಮ ಮತ್ತು ಅಧಿಕಾರ ದುರುಪಯೋಗವಾಗಿರುವ ಸಾಧ್ಯತೆ ಇದೆ ಎಂದು ರಾಜ್ಯಪಾಲರ ಉಲ್ಲೇಖವಿದೆ. ಸಹಿ ಹಾಕಿದ ಬಳಿಕ ಶೋಕಾಸ್ ನೋಟಿಸ್ ನೀಡಿದ್ದಾರೆ. 14.08.2024 ರಂದು ಫೈಲ್ ಪರಿಶೀಲಿಸಿದ್ದೇನೆ, ಡಿಕ್ಟೇಷನ್ ನೀಡಿದ್ದೇನೆ ಎಂದು ಬರೆಯಲಾಗಿದೆ. ಟಿ.ಜೆ.ಅಬ್ರಹಾಂ ಜು. 26ರಂದು ನೀಡಿದ ದೂರಿನ ಮೇಲೆ ಫೈಲ್ ಸಿದ್ದಪಡಿಸಲಾಗಿದೆ. ಜು. 5 ರಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ಕಡತದಲ್ಲಿ ಅದರ ಉಲ್ಲೇಖವಿಲ್ಲವೆಂದು ರವಿಕುಮಾರ್‌ ವಾದಮಂಡನೆ ಮಾಡಿದರು. ಸಚಿವ ಸಂಪುಟದ ಆದೇಶ ತಿರಸ್ಕರಿಸಿದ ನಂತರ ರಾಜ್ಯಪಾಲರು ಏನು ಮಾಡಿದ್ದಾರೆ. ಸಿಎಂ ನೀಡಿದ ಉತ್ತರಕ್ಕೂ ರಾಜ್ಯಪಾಲರು ಪ್ರತಿಕ್ರಿಯೆ ನೀಡಿಲ್ಲ. ಎರಡು ವರ್ಷನ್‌ಗಳನ್ನು ಪರಿಗಣಿಸಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ. 1. ಮೇಲ್ನೋಟಕ್ಕೆ ಕಾನೂನು ಬಾಹಿರ ಕೃತ್ಯ ನಡೆದಿದ್ದು ವಿವೇಚನೆ ಬಳಸಿ ಸ್ಯಾಂಕ್ಷನ್ ನೀಡಲಾಗಿದೆ. 2. ಲೀಗಲ್ ಓಪಿನಿಯನ್ ಹಾಗೂ ಕ್ಯಾಬಿನೆಟ್ ಆದೇಶ ಪರಿಶೀಲಿಸಿ ಸ್ವತಂತ್ರವಾಗಿ ನಿರ್ಧಾರ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯಪಾಲರ ಆದೇಶವೇ ಕಾನೂನುಬಾಹಿರ

28 ವರ್ಷಗಳ ಹಿಂದೆ ನಿಂಗ ಸಾವನ್ನಪ್ಪಿದ್ದಾನೆ. ನಿಂಗನ ಹೆಸರಿಗೆ ಜಮೀನು ಅವಾರ್ಡ್ ಆಗಿತ್ತು. ಯಾವಾಗ ಮೂಡಾ ಈ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ದೂರು ನೀಡಿಲ್ಲ ಎಂದು ರವಿವರ್ಮ ವಾದಿಸಿದಾಗ, ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಆದರೆ ಎಲ್ಲಾ ದಾಖಲೆಗಳಲ್ಲಿಯೂ ಈ ಜಾಗ ಮೂಡಾ ವಶದಲ್ಲಿ ಇದೆ ಎಂದು ಹೇಳುತ್ತಿವೆ ಎಂದರು. ಆದರೆ, ಈ ಜಾಗ ಮೂಡಾ ವಶದಲ್ಲಿ ಇಲ್ಲ ಅನ್ನೋದಕ್ಕೆ‌ ದಾಖಲೆಗಳು ನನ್ನ ಬಳಿ ಇವೆ ಎಂದು ರವಿವರ್ಮ ಕುಮಾರ್ ವಾದಿಸಿದರು.

ರಾಜ್ಯಪಾಲರ ಆದೇಶದಲ್ಲಿ 25 ಸೆಕ್ಷನ್‌ಗಳನ್ನು ಉಲ್ಲೇಖಿಸಲಾಗಿದೆ. ಉದಾಹರಣೆಗೆ ಫೋರ್ಜರಿ ಮತ್ತಿತರ ಸೆಕ್ಷನ್ ಉಲ್ಲೇಖಿಸಿದ್ದಾರೆ. ಆದರೆ ಸಿಎಂ ಫೋರ್ಜರಿ ಮಾಡಿದ್ದಾರಾ ಎಂಬುದಕ್ಕೆ ಉತ್ತರವಿಲ್ಲ. ಜಮೀನು ಸ್ವಾಧೀನವಾದ ಬಳಿಕ ಪರಿಹಾರದ ನೋಟಿಸ್ ವಿಳಂಬವಾಗಿ ತಲುಪಿದೆ. ಮುಡಾ ಜಮೀನನ್ನು ಭೌತಿಕವಾಗಿ ಸ್ವಾಧೀನಕ್ಕೆ ಪಡೆದಿರಲಿಲ್ಲ. ನಂತರ ಸೆ.48 ಅಡಿ ಜಮೀನನ್ನು ಡಿನೋಟಿಫಿಕೇಷನ್ ಮಾಡಲಾಗಿದೆ. ಮಹಜರ್ ಮಾಡಿ ಭೂಮಿಯನ್ನು ಸ್ವಾಧೀನಕ್ಕೆ ಪಡೆದಿರಲಿಲ್ಲ. ಆದರೂ ರಾಜ್ಯಪಾಲರು ಮುಡಾ ಸ್ವಾಧೀನದಲ್ಲಿತ್ತು ಎಂದು ಹೇಳಿದ್ದಾರೆ. ಹೀಗಾಗಿ ರಾಜ್ಯಪಾಲರ ಆದೇಶವೇ ಕಾನೂನುಬಾಹಿರವಾಗಿದೆ.

ಜುಜುಬಿ ಸೈಟ್‌ಗೆ ಅಕ್ರಮ ಮಾಡ್ತಾರಾ

ಅಂತಿಮ ಭೂಸ್ವಾಧೀನದ ನಂತರ ಜಮೀನು ಮುಡಾ ಸ್ವಾಧೀನಕ್ಕೆ ಹೋಗುತ್ತದಲ್ಲವೇ ಎಂದು ನ್ಯಾಯಾಧೀಶರು ಪ್ರಶ್ನಿಸಿದಾಗ, ಇಲ್ಲ ಪ್ರಕ್ರಿಯೆ ಪಾಲಿಸದಿರುವುದರಿಂದ ಸ್ವಾಧೀನಕ್ಕೆ ಹೋಗುವುದಿಲ್ಲ ಎಂದು ರವಿಕುಮಾರ್‌ ಉತ್ತರಿಸಿದರು. ಸ್ವಾಧೀನದಲ್ಲಿ ಇದ್ದಿದ್ದಾದರೆ ಮುಡಾ ಲೇಔಟ್ ರಚಿಸಲು ಹೇಗೆ ಬಿಟ್ಟಿರಿ? ನೀವು ಏಕೆ ಮುಡಾ ಬಡಾವಣೆ ವಿರೋಧಿಸಲಿಲ್ಲಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಮುಡಾ ಬಡಾವಣೆ ನಕ್ಷೆಯಲ್ಲಿ ನಮ್ಮ ಜಮೀನು ಇರಲಿಲ್ಲ. ಹೀಗಾಗಿ ನಾವು ಅದನ್ನು ವಿರೋಧಿಸುವ ಅಗತ್ಯವಿರಲಿಲ್ಲ. ಇದರಲ್ಲಿ ಸಿಎಂ ಪಾತ್ರವೇನು ಎಂಬುದಕ್ಕೆ ಯಾರೂ ಉತ್ತರಿಸಿಲ್ಲ. ಜಮೀನು ಮುಡಾ ಸ್ವಾಧೀನದಲ್ಲಿತ್ತು ಎಂಬ ಭಾವನೆ ಆಧಾರದಲ್ಲಿ ರಾಜ್ಯಪಾಲರು ಆದೇಶಿಸಿದ್ದಾರೆ. ಕಳೆದ 50 ವರ್ಷದ ಇತಿಹಾಸವನ್ನು ನೀವು ನೋಡಬಹುದು. ಸಿದ್ದರಾಮಯ್ಯ ಒಬ್ಬರೇ 5 ವರ್ಷ ಸಂಪೂರ್ಣ ಅಧಿಕಾರದಲ್ಲಿದ್ದರು. ಈಗ ಮತ್ತೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರ ಮೇಲೆ ಯಾವುದೇ ಆರೋಪವೂ ಕೇಳಿ ಬಂದಿಲ್ಲ. ಒಂದು ಜುಜುಬಿ ಸೈಟ್‌ಗೆ ಅಕ್ರಮ ಮಾಡ್ತಾರಾ ಎಂದು ರವಿವರ್ಮ ಕುಮಾರ್ ವಾದ ಮಂಡನೆ ಮಾಡಿದರು. ಆ ಸೈಟ್‌ ಬೆಲೆ 55 ಕೋಟಿ ರೂ. ಆಗಿದೆ ಎಂಬುದೇ ತಕರಾರು ಎಂದು ನ್ಯಾಯಾಧೀಶರು ತಿಳಿಸಿದರು. ಒಂದು ಸರ್ಕಾರ ಇದ್ದಾಗ ಹಲವರಿಗೆ ಸಹಕಾರ ಆಗಬಹುದು. ಅವರ ಸಂಬಂಧಿಕರಿಗೆ ಅನುಕೂಲ ಆಗಿರಬಹುದು. ಅದಕ್ಕೆ ಈ ರೀತಿ ಸ್ಯಾಂಕ್ಷನ್ ನೀಡಬಹುದೇ? ಎಂದು ರವಿವರ್ಮ ವಾದಿಸಿದಾಗ, ಅದು ಸ್ಯಾಂಕ್ಷನ್ ಅಲ್ಲ, ಅಪ್ರೂವಲ್ ಎಂದು ನ್ಯಾಯಾಧೀಶರು ತಿಳಿಸಿದರು.

ರಾಜಕೀಯ ದುರುದ್ದೇಶ

ಕೆಸರೆ ಗ್ರಾಮವೇ ಇಲ್ಲ ಎಂದು ದೂರುದಾರರು ಹೇಳಿದ್ದಾರೆ ಎಂದಾಗ 2011ರಲ್ಲಿ ಜನಗಣತಿ ಪ್ರಕಾರ ಕೆಸರೆ ಗ್ರಾಮ ಇದೆ. ಈ ಗ್ರಾಮದಲ್ಲಿ 4 ಸಾವಿರ ಎಕರೆ ಭೂಮಿ, ಸ್ಕೂಲ್ ಹಾಗೂ ಆಸ್ಪತ್ರೆ ಇದೆ. ಮೈಸೂರು ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಈ ಗ್ರಾಮ ಇದೆ. 60:40 ಗೆ ಅವರ ತಕರಾರಿಲ್ಲ, 50:50 ಅನುಪಾತಕ್ಕೆ ತಕರಾರಿದೆ. ಪರಿಹಾರದ ನಿವೇಶನ ಕೊಟ್ಟಿರುವುದು ಸಿದ್ದರಾಮಯ್ಯ ಅಲ್ಲ ಮುಡಾ ಪ್ರಾಧಿಕಾರ. ಜನಪ್ರಿಯ ನಾಯಕನ ವಿರುದ್ಧ ರಾಜ್ಯಪಾಲರು ಈ ರೀತಿ ಅನುಮತಿ ನೀಡಬಾರದಿತ್ತು. ರಾಜಕೀಯ ದುರುದ್ದೇಶದಿಂದ ಈ ರೀತಿ ಮಾಡಿದ್ದಾರೆ . ಅಧಿಕಾರದಲ್ಲಿದ್ದಾಗ ಸಂಬಂಧಿಕರು, ಅಧಿಕಾರಿಗಳು ಅಸೂಯೆಯಿಂದ ಏನಾದರೂ ಮಾಡಿರಬಹುದು. ಅದಕ್ಕೆಲ್ಲಾ ಸಿಎಂ ಸಿದ್ದರಾಮಯ್ಯರನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಪರ ಪ್ರೊ. ರವಿವರ್ಮಕುಮಾರ್ ವಾದಮಂಡನೆ ಮುಕ್ತಾಯಗೊಳಿಸಿದರು.

ಬಳಿಕ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಆರಂಭಿಸಿದರು. ತನಿಖಾಧಿಕಾರಿಗೆ ಕಾಗ್ನಿಜೇಬಲ್ ಪ್ರಕರಣ ಅನ್ನಿಸಿದಾಗ ಮಾತ್ರ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು. ಅದಕ್ಕೆ ನಾನು ಡಾ.ಅಶೋಕ್ ಪ್ರಕರಣದಲ್ಲಿ ಅನುಮತಿ ಇಲ್ಲದೆ ಪಬ್ಲಿಕ್ ಸರ್ವೆಂಟ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬಾರದು ಅಂತ ಆದೇಶ ಮಾಡಿರುವುದು ಎಂದು ಎಜಿ ವಾದ ಮುಕ್ತಾಯಗೊಳಿಸಿದರು. ಕೇಂದ್ರ ಸರ್ಕಾರದ ಎಸ್ಓಪಿ ಪ್ರಕಾರ 17A ಅಡಿ ಪೂರ್ವಾನುಮತಿಯನ್ನ ತನಿಖಾಧಿಕಾರಿ ಪಡೆಯಬೇಕು. ಈ ಹಂತದಲ್ಲಿ ಪೂರ್ವಾನುಮತಿ ನೀಡಲು ಸಾಧ್ಯವಿಲ್ಲ, ಇಟ್ಸ್ ಪ್ರಿಮೆಚುರ್ ಎಂದಾಗ ಯಾವಾಗ ಪೂರ್ವಾನುಮತಿ ನೀಡಬೇಕಿತ್ತು ಎಂದು ಜಡ್ಜ್ ಪ್ರಶ್ನಿಸಿದರು. ಲಲಿತಾ ಕುಮಾರಿ ಪ್ರಕಾರ ತನಿಖಾಧಿಕಾರಿ ಪಡೆಯಬೇಕು ಎಂದೇಳಿ ಎಜಿ ವಾದ ಮುಕ್ತಾಯಗೊಳಿಸಿದರು.

ಟಿ.ಜೆ.ಅಬ್ರಹಾಂ ಪರ ರಂಗನಾಥ್ ರೆಡ್ಡಿ ವಾದ ಆರಂಭಿಸಲು ಮುಂದಾದಾಗ ಕೇವಲ 5 ನಿಮಿಷದಲ್ಲಿ ವಾದ ಮುಗಿಸಬೇಕು. ಈಗಾಗಲೇ ಹೇಳಿದ ವಿಷಯ ಪ್ರಸ್ತಾಪಿಸಬಾರದು ಎಂದು ಜಡ್ಜ್‌ ಸೂಚನೆ ಕೊಟ್ಟರು. ಸಿಎಂ ಪರ ವಕೀಲರು ಒಂದೆಡೆ ಕೃಷಿ ಜಮೀನು ಅಂತಾರೆ. ಮತ್ತೊಂದೆಡೆ ಮುಡಾ ಜಮೀನು ಒತ್ತುವರಿ ಮಾಡಿದೆ ಎನ್ನುತ್ತಿದ್ದಾರೆ. ಎರಡೆರಡು ರೀತಿಯಲ್ಲಿ ಸಿಎಂ ಪರ ವಕೀಲರು ವಾದಿಸಿದ್ದಾರೆ. ಪ್ರಕ್ರಿಯೆ ಪಾಲಿಸದೇ ಹಣವನ್ನು ಠೇವಣಿ ಇಡುವುದು ಸಾಧ್ಯವಿಲ್ಲ. ದೇವನೂರು ಬಡಾವಣೆಯ ಜಮೀನಿಗೆ ವಿಜಯನಗರದಲ್ಲಿ ಬದಲಿ ನಿವೇಶನ ನೀಡಲಾಗಿದೆ. ಚಿಂತಾಮಣಿಯ ಜಮೀನಿಗೆ ಸದಾಶಿವನಗರದಲ್ಲಿ ನಿವೇಶನ ಕೊಟ್ಟಂತಾಗಿದೆ ಎಂದು ವಾದ ಮುಗಿಸಿದರು. ಈ ವೇಳೆ ನಾಳೆಯೂ ವಾದ ಮಾಡಲು ರವಿವರ್ಮಾ ಕುಮಾರ್ ಅವಕಾಶ ಕೇಳಿದರು.

ಸುದೀರ್ಘ ವಾದ -ಪ್ರತಿವಾದ ಆಲಿಸಿ ಕೋರ್ಟ್‌ ತೀರ್ಪು ಕಾಯ್ದಿಸಿರಿದೆ. ಅಂತಿಮ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಸಿ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

Continue Reading

ಬೆಂಗಳೂರು

Prajwal Revanna Case: ಗನ್ನಿಕಡ ತೋಟದ ಮನೆ ರಹಸ್ಯ; 2ನೇ ಚಾರ್ಜ್‌ಶೀಟ್‌ನಲ್ಲಿ ಪ್ರಜ್ವಲ್‌ ರೇವಣ್ಣ ಪಾಪ ಕೃತ್ಯ ಬಯಲು

Prajwal Revanna Case : ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ 1652 ಪುಟಗಳ 2ನೇ ಚಾರ್ಜ್​​ಶೀಟ್‌ ಅನ್ನು ಸಲ್ಲಿಸಿದ್ದಾರೆ. 2ನೇ ಚಾರ್ಜ್‌ಶೀಟ್‌ನಲ್ಲಿ ಪ್ರಜ್ವಲ್‌ ಕಾಮುಕತ್ವ ಹೇಗಿತ್ತು? ಸಂತ್ರಸ್ತೆಗೆ ಹೇಗೆಲ್ಲ ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬುದನ್ನು ಉಲ್ಲೇಖಿಸಲಾಗಿದೆ.

VISTARANEWS.COM


on

By

Another chargesheet filed against Prajwal Revanna in 42nd ACMM court
Koo

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಕಿಡ್ನ್ಯಾಪ್‌ ಆಗಿದ್ದ ಸಂತ್ರಸ್ತೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳಿಂದ 113 ಸಾಕ್ಷಿಗಳನ್ನೊಳಗೊಂಡ 1632 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಇನ್‌ಸ್ಪೆಕ್ಟರ್‌ ಶೋಭಾರಿಂದ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇನ್ನೂ ಪ್ರಜ್ವಲ್ ಪಾಪ ಕೃತ್ಯವನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖವಾಗಿದೆ.

ಹೊಳೆನರಸೀಪುರದ ಗನ್ನಿಕಡ ತೋಟದ ಮನೆಯಲ್ಲಿ ಏನೆಲ್ಲ ನಡೆಯಿತು ಎಂಬುದನ್ನು ಉಲ್ಲೇಖಿಸಲಾಗಿದೆ. ಸಂತ್ರಸ್ತೆ ತೋಟದ ಮನೆಯ 1ನೇ ಮಹಡಿಯಲ್ಲಿನ ರೂಮ್‌ ಅನ್ನು ಕ್ಲೀನ್‌ ಮಾಡುತ್ತಿದ್ದರು. ಈ ವೇಳೆ ರೂಮಿಗೆ ಬಂದ ಆರೋಪಿ ಪ್ರಜ್ವಲ್‌, ಸಂತ್ರಸ್ತೆ ಬಳಿ ಕುಡಿಯಲು ನೀರು ಕೇಳಿದ್ದ. ನೀರು ತೆಗೆದುಕೊಂಡು ಬಂದ ಕೂಡಲೇ ಸಂತ್ರಸ್ತೆಯನ್ನು ಎಳೆದುಕೊಂಡು, ಹೊರಗೆ ತಪ್ಪಿಸಿಕೊಂಡು ಹೋಗದಂತೆ ಏಕಾಏಕಿ ರೂಮಿನ ಡೋರ್‌ ಲಾಕ್‌ ಮಾಡಿದ್ದ. ಬಳಿಕ ಬಲವಂತವಾಗಿ ಎಳೆದಾಡಿ ಸಂತ್ರಸ್ತೆಯನ್ನು ವಿವಸ್ತ್ರಗೊಳಿಸಿದ್ದ. ಈ ವೇಳೆ ದಮ್ಮಯ್ಯ ಬೇಡ, ಬಾಗಿಲು ತೆಗಿಯಣ್ಣ ಭಯವಾಗುತ್ತೆ ಅಂದರು ಬಿಡದೆ, ಏನು ಆಗಲ್ಲ ಸುಮ್ನೆ ಇರು ಎಂದು ಬೆದರಿಸಿ ಲೈಂಗಿಕ ಕೃತ್ಯವನ್ನು ಎಸಗಿದ್ದ. ಇದೆಲ್ಲವನ್ನು ಮೊಬೈಲ್‌ ಫೋನ್‌ನಲ್ಲಿ ಸೆರೆಯಿಡಿದಿದ್ದ.

ಇದಾದ ಬಳಿಕ ಮತ್ತೊಮ್ಮೆ ಬಸವನಗುಡಿಯಲ್ಲಿರುವ ರೇವಣ್ಣ ನಿವಾಸದಲ್ಲೇ ಮತ್ತೊಮ್ಮೆ ಸಂತ್ರಸ್ತೆಯ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಎಂದು ಉಲ್ಲೇಖಿಸಲಾಗಿದೆ. ಎರಡು ಬಾರಿ ಅತ್ಯಾಚಾರ ಎಸಗಿದಾಗಲು ಅದೆಲ್ಲವನ್ನೂ ಪ್ರಜ್ವಲ್‌ ರೆಕಾರ್ಡ್ ಮಾಡಿಕೊಂಡಿದ್ದ. ಅತ್ಯಾಚಾರದ ಸಂಗತಿ ಬಾಯಿಬಿಟ್ಟರೆ, ಈ ಎಲ್ಲ ವಿಡಿಯೊಗಳನ್ನು ನಿನ್ನ ಮಗನಿಗೆ ಕಳಿಸುವುದಾಗಿ ಬೆದರಿಸಿದ್ದ. ಹೀಗಾಗಿ ಮಾನ, ಮರ್ಯಾದೆಗೆ ಅಂಜಿ ದೂರು ನೀಡಲುಸಂತ್ರಸ್ತೆ ಹಿಂದೆಟ್ಟು ಹಾಕಿದ್ದರು. ಹೀಗೆ ಬೆದರಿಸಿ ಮಾಜಿ‌ ಸಂಸದ ಪ್ರಜ್ಬಲ್ ರೇವಣ್ಣ ಸಂತ್ರಸ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Assault Case : ಹುಡುಗರನ್ನು ಬಿಟ್ಟು ಜಿಮ್‌ ಟ್ರೈನರ್‌ಗೆ ಹೊಡೆಸಿದ್ದಕ್ಕೆ ನಟ ಧ್ರುವ ಸರ್ಜಾ ಮ್ಯಾನೇಜರ್‌ ಬಂಧನ

ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿತ್ತು.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್ 29ಕ್ಕೆ ಇತ್ತೀಚೆಗೆ ಮುಂದೂಡಿತ್ತು.

ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ನಾಲ್ಕನೇ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಇದಕ್ಕೂ ಮೊದಲು ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿತ್ತು. ಜುಲೈ 24ರಂದು ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿತ್ತು. ಇದರಿಂದ ನಾಲ್ಕನೇ ಕೇಸ್‌ನಲ್ಲಿಯೂ ಪ್ರಜ್ವಲ್‌ಗೆ ಹಿನ್ನಡೆಯಾಗಿತ್ತು. ಬಳಿಕ ಐದನೇ ಬಾರಿಯೂ ಪ್ರಜ್ವಲ್‌ಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗಿತ್ತು.

ಏನಿದು ಪ್ರಕರಣ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ಧ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CM Siddaramaiah: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ವಿವಾದ ಆಲಿಸಿ ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವಾದ-ವಿವಾದ ಆಲಿಸಿ ಸೆ.12ಕ್ಕೆ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

VISTARANEWS.COM


on

By

CM Siddaramaiah
Koo

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವಾದ-ವಿವಾದ ಆಲಿಸಿದ ಹೈಕೋರ್ಟ್‌ ಸೆ.12ಕ್ಕೆ ಮುಂದೂಡಿದ್ದಾರೆ.

ಸೆ.9ರಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. 17A ಅಡಿ ಪ್ರಾಸಿಕ್ಯೂಷನ್‌ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಲಲಿತಾ ಕುಮಾರಿ ಪ್ರಕರಣವನ್ನು ಉಲ್ಲೇಖಿಸಿದ್ದರು. ಎಫ್‌ಐಆರ್ ದಾಖಲಿಸುವ ಮೊದಲು ಪ್ರಾಥಮಿಕ ತನಿಖೆ ಅಗತ್ಯವೆಂದಿದೆ. ಆದರೆ 17ಎ ಅಡಿ ಅನುಮತಿಗೆ ಪ್ರಾಥಮಿಕ ತನಿಖೆ ಆಗಿರಬೇಕಿಂದಿಲ್ಲ. ವಿಚಾರಣೆ, ತನಿಖೆಗೂ ಮುನ್ನ 17 ಎ ಅನುಮತಿ ಬೇಕಲ್ಲವೇ ? ಎಂದು ಅಡ್ವೊಕೆಟ್ ಜನರಲ್‌ಗೆ ನ್ಯಾ.ಎಂ.ನಾಗಪ್ರಸನ್ನ ಪ್ರಶ್ನೆ ಮಾಡಿದರು. ಯಾವ ಕೇಸ್‌ನಲ್ಲಿ ಪ್ರಾಥಮಿಕ ತನಿಖೆ ಬೇಕೆಂಬುದನ್ನು ಸುಪ್ರೀಂಕೋರ್ಟ್ ಹೇಳಿದೆ. ಇದು 22 ವರ್ಷಕ್ಕಿಂತ ಹಳೆಯ ಕೇಸ್ ಆಗಿರುವುದರಿಂದ ಪ್ರಾಥಮಿಕ ತನಿಖೆ ಬೇಕು ಎಂದು ಎಜಿ ವಾದಿಸಿದರು.

ಪೊಲೀಸರಿಗೆ ದೂರು ನೀಡಿದ ನಂತರ 15 ದಿನಗಳಿಂದ 6 ವಾರ ಕಾಲಾವಕಾಶ ಇದೆ. ಆದರೆ ಅದಕ್ಕೆ ಕಾಯದೇ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಎಲ್ಲ ನಾಗರಿಕರು ಎಲ್ಲರ ವಿರುದ್ಧ ದೂರು ನೀಡಿದರೆ ಸಮಸ್ಯೆ ಆಗಲಿದೆ ಎಂದಾಗ, ಮಧ್ಯಪ್ರವೇಶಿಸಿ ನ್ಯಾಯಾಧೀಶರು, ಹೀಗಾಗಿಯೇ ಡಾ.ಅಶೋಕ್ ಕೇಸ್‌ನಲ್ಲಿ ಮಾರ್ಗಸೂಚಿ ರೂಪಿಸಲಾಗಿದೆ ಎಂದರು. ರಾಜ್ಯಪಾಲರು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು. ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ವರದಿ ಪಡೆಯಬೇಕಿತ್ತು. ವರದಿಯ ಬಲವಿಲ್ಲದೇ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ 17ಎ ಮಾರ್ಗಸೂಚಿ ಆಧರಿಸಿ ಎಜಿ ವಾದ ಮಂಡಿಸಿದ್ದರು. ಸಿಎಂ ಕರ್ತವ್ಯದ ಭಾಗವಾಗಿ ಈ ಕೃತ್ಯ ನಡೆದಿಲ್ಲ. ಇದಕ್ಕೆ ಅವಕಾಶ ಕೊಟ್ಟರೆ ದಿನನಿತ್ಯ ಹಲವು ಖಾಸಗಿ ದೂರು ದಾಖಲಾಗಬಹುದು. ಸಕ್ಷಮ ಪ್ರಾಧಿಕಾರಿಯೇ ಇದನ್ನೆಲ್ಲಾ ವಿಚಾರಣೆ ನಡೆಸಿದರೆ ಸಮಸ್ಯೆ ಆಗಲಿದೆ. ಪೊಲೀಸ್ ಅಧಿಕಾರಿಯ ಮೂಲಕವೇ 17ಎ ಅಡಿ ಅನುಮತಿ ಪಡೆಯಬೇಕು ಎಂದರು.

ರಾಜ್ಯಪಾಲರು ಅನುಸರಿಸಿದ ಪ್ರಕ್ರಿಯೆಗೆ ಕಾನೂನಿನಡಿ ಅವಕಾಶವಿಲ್ಲ-ಎಜಿ

3 ವಾಲ್ಯೂಮ್‌ಗಳ ದಾಖಲೆಗಳನ್ನು ರಾಜ್ಯಪಾಲರ ಪರ ವಕೀಲರು ನೀಡಿದ್ದಾರೆ. ಆದರೆ ಶೋಕಾಸ್ ನೋಟಿಸ್ ನೀಡುವ ಮುನ್ನ ಪ್ರಾಥಮಿಕ ವರದಿ ಇಲ್ಲ. 17ಎ ಅಡಿ ರಾಜ್ಯಪಾಲರೇ ಪ್ರಾಥಮಿಕ ತನಿಖೆ ನಡೆಸುವಂತಿಲ್ಲ. ತನಿಖಾಧಿಕಾರಿಯಂತೆ ರಾಜ್ಯಪಾಲರು ವರ್ತಿಸುವಂತಿಲ್ಲ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಾಧೀಶರು ಎಫ್‌ಐಆರ್ ದಾಖಲಿಸುವ ಮುನ್ನ 17ಎ ಅನುಮತಿ ಪಡೆಯಬೇಕು. ಕೋರ್ಟ್ ಸೂಚಿಸಿದ್ದರೆ ಎಫ್‌ಐಆರ್ ದಾಖಲಾಗುತ್ತಿತ್ತು. ಇದನ್ನು ತಡೆಯಲು ಖಾಸಗಿ ದೂರುದಾರರಿಗೆ ಅನುಮತಿ ಪಡೆಯುವ ಅವಕಾಶ ನೀಡಲಾಗಿದೆ ಎಂದರು.

ಈ ವೇಳೆ ವಾದ ಮುಂದುವರಿಸಿದ ಎಜಿ ಶಶಿಕಿರಣ್‌, ತನಿಖಾಧಿಕಾರಿಯು ಪ್ರಾಥಮಿಕ ತನಿಖೆ ನಡೆಸಬೇಕು, ರಾಜ್ಯಪಾಲರಲ್ಲ. ರಾಜ್ಯಪಾಲರು ಅನುಸರಿಸಿದ ಪ್ರಕ್ರಿಯೆಗೆ ಕಾನೂನಿನಡಿ ಅವಕಾಶವಿಲ್ಲ. ರಾಜ್ಯಪಾಲರು ಖಾಸಗಿ ದೂರುದಾರರಿಗೆ ಅವಕಾಶವನ್ನೇ ನೀಡಬಾರದಿತ್ತು. ದೂರುದಾರ ಪ್ರದೀಪ್ ಕುಮಾರ್ ಪೊಲೀಸರಿಗೆ ದೂರನ್ನೇ ನೀಡಿರಲಿಲ್ಲ. ಖಾಸಗಿ ದೂರುದಾರರ ಮನವಿಯನ್ನು ರಾಜ್ಯಪಾಲರು ಹಿಂತಿರುಗಿಸಬೇಕಿತ್ತು. ಸಚಿವ ಸಂಪುಟದ ನಿರ್ಧಾರವನ್ನು ತಿರಸ್ಕರಿಸುವ ಅನಿಯಂತ್ರಿತ ಅಧಿಕಾರವಿಲ್ಲ. ರಾಜ್ಯಪಾಲರ ಆದೇಶದಲ್ಲಿ ಇದಕ್ಕೆ ಕಾರಣಗಳಿರಬೇಕು. ರಾಜ್ಯಪಾಲರು ಪರಿಶೀಲಿಸಿದ ಕಡತದಲ್ಲಲ್ಲ ಎಂದು ವಾದ ಅಂತ್ಯಗೊಳಿಸಿದರು.

ಪತ್ನಿ ಆಸ್ತಿಯನ್ನು ಪತಿಯ ಆಸ್ತಿ ಎಂದು ಪರಿಗಣಿಸಿ- ಸ್ನೇಹಮಯಿ ಕೃಷ್ಣ ಪರ ವಕೀಲೆ ವಾದ

ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಶುರು ಮಾಡಿದರು. 1996 – 1999 ಅವಧಿಯಲ್ಲಿ ಡಿಸಿಎಂ ಆಗಿದ್ದಾಗ ಡಿನೋಟಿಫಿಕೇಷನ್ ಮಾಡಲಾಗಿದೆ. 2004-2007 ರಲ್ಲಿ ಡಿಸಿಎಂ ಆಗಿದ್ದಾಗ ಭೂಪರಿವರ್ತನೆ ಮಾಡಲಾಗಿದೆ. 2013 – 2018 ವರೆಗೆ ಸಿಎಂ ಆಗಿದ್ದಾಗ ಪರಿಹಾರದ ಸೈಟ್‌ಗೆ ಅರ್ಜಿ ಸಲ್ಲಿಸಲಾಗಿದೆ. 2018-2022 ವರೆಗೆ ಸಿದ್ದರಾಮಯ್ಯ ಶಾಸಕರಾಗಿದ್ದರು. ಸರ್ಕಾರಿ ಗೆಸ್ಟ್ ಹೌಸ್‌ನಲ್ಲಿ ಮುಡಾದಿಂದ ಸೇಲ್ ಡೀಡ್ ಮಾಡಿಕೊಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗದೇ ಸೇಲ್ ಡೀಡ್ ಮಾಡಲಾಗಿದೆ.

ಅಧಿಕಾರ ದುರುಪಯೋಗ ಪಡಿಸಿಕೊಂಡು ಹೀಗೆ ಮಾಡಲಾಗಿದೆ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಈ ಎಲ್ಲಾ ಚಟುವಟಿಕೆ ನಡೆದಿವೆ. ಪತ್ನಿಗೆ ಬೇರೆ ಆದಾಯದ ಮೂಲಗಳಿರಲಿಲ್ಲ. ಆದಾಯ ತೆರಿಗೆ ರಿಟರ್ನ್ ಅನ್ನು ಸಿದ್ದರಾಮಯ್ಯ ಪತ್ನಿ ಫೈಲ್ ಮಾಡಿಲ್ಲ. ಹೀಗಾಗಿ ಪತ್ನಿಯ ಆಸ್ತಿಯನ್ನು ಪತಿಯ ಆಸ್ತಿ ಎಂದೇ ಪರಿಗಣಿಸಬೇಕು. ಸಿದ್ದರಾಮಯ್ಯ ಮೇಲಿನ ಆರೋಪಗಳಿಗೆ ಪುರಾವೆಗಳಿವೆ ಎಂದು ಸ್ನೇಹಮಯಿ ಕೃಷ್ಣ ಪರ ಲಕ್ಷ್ಮಿ ಅಯ್ಯಂಗಾರ್ ವಾದಮಂಡನೆ ಪೂರ್ಣಗೊಳಿಸಿದರು. ಇದಾದ ಬಳಿಕ ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

DK Shivakumar :ಮುಡಾ ಕೇಸ್‌ ಡೈವರ್ಟ್‌ಗೆ ದರ್ಶನ್‌ ಫೋಟೊ ರಿಲೀಸ್‌; ಪ್ರಲ್ಹಾದ್ ಜೋಶಿ ಆರೋಪಕ್ಕೆ ಡಿಸಿಎಂ ಡಿಕೆಶಿ ಟಾಂಗ್

Muda case : ಸಿಎಂ ಸಿದ್ದರಾಮಯ್ಯರ ಮುಡಾ ಕೇಸ್‌ ಡೈವರ್ಟ್‌ ಮಾಡಲು ನಟ ದರ್ಶನ್‌ ಫೋಟೊ ರಿಲೀಸ್‌ ಮಾಡಿದ್ದಾರೆ ಎಂದು ಸಂಸದ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಹದಾಯಿ, ಭದ್ರಾ ಯೋಜನೆಗಳಿಗೆ ಅನುಮತಿ, ಹಣ ಕೊಡಿಸಲು ಪ್ರಹ್ಲಾದ ಜೋಶಿಯವರಿಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ ಎಂದು ಟಾಂಗ್‌ (DK Shivakumar) ಕೊಟ್ಟರು.

VISTARANEWS.COM


on

By

Pralhad Joshi and Dk Shivakumar
Koo

ಬೆಂಗಳೂರು: ಸಂಸದರೇ ನಟ ದರ್ಶನ್, ಮುಡಾ ವಿಚಾರ ಎಲ್ಲವನ್ನು ಬಿಟ್ಟುಬಿಡಿ. ಮಹದಾಯಿಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ ಎಂದು ಗಣೇಶ ಹಬ್ಬದ ದಿನ ಕೈ ಮುಗಿದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಈ ಎರಡು ಯೋಜನೆಗಳಿಗೆ ಇರುವ ವಿಘ್ನ ನಿವಾರಣೆ ಮಾಡಿಸಿ.. ಇಲ್ಲಿಂದಲೇ ನಿಮಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ವ್ಯಂಗ್ಯ ಮಾಡಿದರು.

ಮುಡಾ, ವಾಲ್ಮೀಕಿ ಪ್ರಕರಣದ ಹಾದಿ ತಪ್ಪಿಸಲು ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜೈಲಿನ ಒಳಗಡೆ ಇರುವ ಫೋಟೋವನ್ನು ಸರ್ಕಾರವೇ ಬಿಡುಗಡೆ ಮಾಡಿದೆ ಎನ್ನುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಡಿಸಿಎಂ ಈ ರೀತಿ ಪ್ರತಿಕ್ರಿಯಿಸಿದರು.

ಸದಾಶಿವ ನಗರದ ನಿವಾಸದ ಬಳಿ ಮಾತನಾಡಿದ ಅವರು “ಮಹದಾಯಿ ವಿಚಾರವಾಗಿ ಸರ್ವ ಪಕ್ಷ ಸಭೆ ಅಥವಾ ನಿಯೋಗದ ಸಭೆ ನಡೆಸುವುದೋ ಎನ್ನುವ ಬಗ್ಗೆ 15 ದಿನಗಳಲ್ಲಿ ಮುಖ್ಯಮಂತ್ರಿಗಳ ಬಳಿ ಮಾತನಾಡಲಾಗುವುದು. ಹಾಗೂ ನಮ್ಮ ಹೋರಾಟದ ಸ್ವರೂಪದ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದರು. ಜೋಶಿ ಅವರು ಸರ್ಕಾರದ ಮೇಲೆ ಮಾಡಿರುವ ಗಂಭೀರ ಆರೋಪದ ಬಗ್ಗೆ ಮರು ಪ್ರಶ್ನಿಸಿದಾಗ “ಅವರು ಮಾಡುತ್ತಿರಲಿ” ಎಂದರು.

ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ

ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಭಗೀರಥ ಎಂದು ಕರೆಯುತ್ತೇನೆ ಎನ್ನುವ ಸಂಸದ ಸುಧಾಕರ್ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಸಂಸದ ಡಾ. ಕೆ.ಸುಧಾಕರ್ ಅವರು ಸವಾಲು ಹಾಕಿದ್ದಾರೆ. ಈ ಸವಾಲನ್ನು ನಾನು ಪ್ರೀತಿ, ಗೌರವಗಳಿಂದ ಸ್ವೀಕರಿಸುತ್ತೇನೆ. ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದೂ ಭಾವಿಸುತ್ತೇನೆ. ಅವರೂ ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಇದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ” ಎಂದರು.

“ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಬೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ” ಎಂದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ಆನಂತರ ಎತ್ತಿನಹೊಳೆ ಯೋಜನೆಯಲ್ಲಿ ತುಮಕೂರು, ದೊಡ್ಡಬಳ್ಳಾಪುರ ಭಾಗದ ಸಮಸ್ಯೆಗಳ ವಿವರಣೆ ಹಾಗೂ ಅರಣ್ಯ ಭೂಮಿ ಸ್ವಾಧೀನ ತೊಂದರೆಗಳನ್ನು ಮುಖ್ಯಮಂತ್ರಿಗಳ ಬಳಿ ಒಂದು ವಾರಗಳ ನಂತರ ಮಾತನಾಡಿ ಬಗೆಹರಿಸಲಾಗುವುದು ಎಂದು ಹೇಳಿದರು.

ಇನ್ನು ಒಂದು ತಿಂಗಳಲ್ಲಿ ಕೋವಿಡ್ ವರದಿಯನ್ನು ನೀಡುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವ ಕಾರಣಕ್ಕೆ ಸುಧಾಕರ್ ಅವರು ನಿಮ್ಮನ್ನು ಪದೇಪದೇ ಹೊಗಳುತ್ತಿದ್ದಾರೆಯೇ ಎಂದು ಕೇಳಿದಾಗ “ನನಗೆ ಕೋವಿಡ್ ವರದಿಯ ಬಗ್ಗೆ ಏನು ಗೊತ್ತಿಲ್ಲ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಾನು ಭಾಗವಹಿಸಿರಲಿಲ್ಲ. ಸಕಲೇಶಪುರದ ಎತ್ತಿನಹೊಳೆಯಲ್ಲಿದ್ದೆ” ಎಂದರು.

ಈಗ ಎಂಪಿ ಸುಧಾಕರ್ ಅಲ್ಲವೇ?

ಮಾತಿನ ಮಧ್ಯೆ ಡಿಸಿಎಂ ಅವರು “ಸುಧಾಕರ್ ಈಗ ಎಂಪಿ ಅಲ್ಲವೇ? ಎಂದು ಮಾಧ್ಯಮದವರ ಬಳಿ ಪ್ರಶ್ನಿಸಿದರು. ನಮ್ಮಲ್ಲಿ ಇಬ್ಬರು ಸುಧಾಕರ್ ಇದ್ದಾರೆ. ಇವರೂ ಸೇರಿ ಮೂರು ಜನ ಆಗುತ್ತಾರೆ. ನಮ್ಮವರು ಇಬ್ಬರೂ ಮಂತ್ರಿಗಳು. ಇವರು ಸಂಸದರು ಎಂದಾಗ, ಮಾಧ್ಯಮದವರು ‘ಮಾಜಿ ಸಚಿವರು ಆಗಿದ್ದರು’ ಎಂದು ಹೇಳಿದಾಗ ಮಾಜಿ ಸಚಿವ ಸುಧಾಕರ್” ಎಂದರು.

ಬಯಲು ಸೀಮೆಯಲ್ಲಿ ಇನ್ನು ಕೆರೆಗಳು ತುಂಬಿಲ್ಲ

“ಗೌರಿ ಹಬ್ಬದ ದಿನ ಗಂಗೆಯನ್ನು ಪೂಜೆ ಮಾಡಿ ಸಂಭ್ರಮ ಪಟ್ಟಿದ್ದೇವೆ. ಇದನ್ನು ಒಂದು ಒಂದಷ್ಟು ಜನ ನೋಡಿ ಸಂಭ್ರಮಪಟ್ಟಿದ್ದಾರೆ ಟೀಕೆ ಮಾಡಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆಬಿದ್ದು ಜಲಾಶಯಗಳು ತುಂಬಿವೆ. ಬಯಲು ಸೀಮೆಯಲ್ಲಿ ಒಂದಿಷ್ಟು ಕಡೆ ಮಳೆ ಕಡಿಮೆಯಾಗಿದೆ. ಮಂಡ್ಯ ಬೆಂಗಳೂರು ಗ್ರಾಮಾಂತರ ತುಮಕೂರು ಈ ಭಾಗದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಎತ್ತಿನಹೊಳೆ ಯೋಜನೆ ಪ್ರಗತಿ ಕಂಡಿರಲಿಲ್ಲ. ಇದಕ್ಕೆ ನಾನಾ ಕಾರಣಗಳು ಇರಬಹುದು” ಎಂದು ಹೇಳಿದರು.

Continue Reading
Advertisement
Prosecution against Siddaramaiah Hc reserves verdict after hearing arguments
ಕೋರ್ಟ್4 mins ago

CM Siddaramaiah : ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿಸಿರಿದ ಹೈಕೋರ್ಟ್, ಮಧ್ಯಂತರ ತಡೆ ಮುಂದುವರಿಕೆ

Colon cancer is on the rise‌ Those above 50 years of age are targeted
ಆರೋಗ್ಯ1 hour ago

Colon cancer : ಕರುಳಿನ ಕ್ಯಾನ್ಸರ್ ವಯಸ್ಸಾದವರಿಗೆ ಕಂಟಕ! ಈ ಆಹಾರಗಳನ್ನು ತಿನ್ನಲೇಬೇಡಿ

Suvarna Celebrity League a reality show launched on Star Suvarna
ಸಿನಿಮಾ2 hours ago

Suvarna Celebrity League : ವಾರಾಂತ್ಯದಲ್ಲಿ ಸೆಲೆಬ್ರಿಟಿಗಳ ಸಮರ; ಕಿರುತೆರೆಯಲ್ಲಿ ಶುರುವಾಗಲಿದೆ ಸುವರ್ಣ ಸೆಲೆಬ್ರಿಟಿ ಲೀಗ್

Self harming
ಬೆಂಗಳೂರು4 hours ago

Self Harming : ಅಮ್ಮ ಬೈಕ್‌ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ

Actor darshan
ಸಿನಿಮಾ4 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಗ್ಯಾಂಗ್‌ಗೆ ಮತ್ತೊಂದು ದಿನ ಸೆರೆವಾಸ; ನಾಳೆಗೆ ವಿಚಾರಣೆ ಮುಂದೂಡಿದ ಕೋರ್ಟ್‌

CM Siddaramaiah
ರಾಜಕೀಯ5 hours ago

CM Siddaramaiah : ಸಿದ್ದರಾಮಯ್ಯ ವಿಷ್ಯದಲ್ಲಿ ಆತುರದ ನಿರ್ಣಯ; ರಾಜ್ಯಪಾಲರಿಂದ ಸಂವಿಧಾನಕ್ಕೆ ಅಪಚಾರ- ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ

Road Accident
ಪ್ರಮುಖ ಸುದ್ದಿ7 hours ago

Road Accident : ಏರ್‌ಪೋರ್ಟ್‌ ರೋಡ್‌ನಲ್ಲಿ ಡೆಡ್ಲಿ ಹಿಟ್‌ ಆ್ಯಂಡ್‌ ರನ್‌; ಲಾಂಗ್‌ ಡ್ರೈವ್‌‌ ಬಂದಿದ್ದ ಮೂವರು ವಿದ್ಯಾರ್ಥಿಗಳು ಬಲಿ

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರ ಅನುಮಾನವೇ ಸಂಬಂಧಗಳನ್ನು ಹಾಳು ಮಾಡುತ್ತೆ

Installation of Ganesha idol at home Muslim man preaches message of unity
ಗದಗ1 day ago

Ganesh Chaturthi: ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಭಾವೈಕ್ಯತೆಯ ಸಂದೇಶ ಸಾರಿದ ಮುಸ್ಲಿಂ ವ್ಯಕ್ತಿ

karnataka weather Forecast
ಮಳೆ2 days ago

Karnataka Weather : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌