Murder case:ಪ್ರಿಯಕರನೊಟ್ಟಿಗೆ ಏಕಾಂತದಲ್ಲಿರುವಾಗಲೇ ಮಗಳು ಲಾಕ್‌; ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿಯನ್ನೇ ಕೊಂದಳು ಪಾಪಿ - Vistara News

ಬೆಂಗಳೂರು

Murder case:ಪ್ರಿಯಕರನೊಟ್ಟಿಗೆ ಏಕಾಂತದಲ್ಲಿರುವಾಗಲೇ ಮಗಳು ಲಾಕ್‌; ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿಯನ್ನೇ ಕೊಂದಳು ಪಾಪಿ

Murder case: ರೂಮಿನಲ್ಲಿ ಇದ್ದಾಗಲೇ ಪ್ರಿಯಕರನೊಂದಿಗೆ ಮಗಳು ಲಾಕ್‌ ಆಗಿದ್ದಳು. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಾಯಿಯ ಉಸಿರನ್ನೇ ನಿಲ್ಲಿಸಿದ್ದಳು. ಬಾತ್‌ರೂಮ್‌ನಲ್ಲಿ ಬಿದ್ದು ತಾಯಿ ಸತ್ತರು ಎಂದ ಮಗಳು ಇದೀಗ ಪ್ರಿಯಕರನೊಂದಿಗೆ ಜೈಲು ಪಾಲಾಗಿದ್ದಾಳೆ.

VISTARANEWS.COM


on

Murder case
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರಿನ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯ ಹೊಂಗಸಂದ್ರದಲ್ಲಿ ಪ್ರಿಯಕರನೊಂದಿಗೆ ಸೇರಿದ ಗೃಹಿಣಿಯೊಬ್ಬಳು ತನ್ನ ಸ್ವಂತ ತಾಯಿಯನ್ನೇ ಕೊಂದು (Murder case) ಹಾಕಿದ್ದಾಳೆ. ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಯಲಕ್ಷ್ಮಿ ಮೃತ ದುರ್ದೈವಿ. ಮಗಳು ಪವಿತ್ರಾ ಹಾಗೂ ಪ್ರಿಯಕರ ನವನೀಶ್‌ ಕೊಲೆ ಆರೋಪಿಗಳಾಗಿದ್ದಾರೆ.

ಈ ಪವಿತ್ರಾ 12 ವರ್ಷದ ಹಿಂದೆ ಸುರೇಶ್ ಎಂಬಾತನೊಂದಿಗೆ ಮದುವೆಯಾಗಿದ್ದಳು. ಪವಿತ್ರಾ ವಾಸವಿದ್ದ ಮನೆಯಲ್ಲಿ ತಮಿಳುನಾಡು ಮೂಲದ ನವನೀಶ್ ಬಾಡಿಗೆಗೆ ಬಂದಿದ್ದ. ನವನೀಶ್‌ನ ಮೋಹಕಕ್ಕೆ ಪವಿತ್ರಾ ಸಿಲುಕಿದ್ದಳು. ಮದುವೆ ಆಗಿದ್ದರೂ ಮತ್ತೊಬ್ಬನ ಜತೆಗೆ ಅಕ್ರಮ ಸಂಬಂಧವನ್ನು ಹೊಂದಿದ್ದಳು. ಪತಿ ಕೆಲಸಕ್ಕೆಂದು ಅಂಗಡಿಗೆ ಹೋಗುತ್ತಿದ್ದಂತೆ ನವನೀಶ್‌ ಪವಿತ್ರಾ ಮನೆಗೆ ಬರುತ್ತಿದ್ದ. ಇವರಿಬ್ಬರ ಕಳ್ಳ ಸಂಬಂಧ ಅದ್ಹೇಗೋ ತಾಯಿ ಜಯಲಕ್ಷ್ಮಿಗೆ ಗೊತ್ತಾಗಿತ್ತು.

Murder case
ಮಗಳಿಂದಲೇ ಕೊಲೆಯಾದ ಜಯಲಕ್ಷ್ಮೀ

ಮಗಳ ಈ ನಡೆಗೆ ಸಿಟ್ಟಾದ ಜಯಲಕ್ಷ್ಮೀ ಹಲವು ಬಾರಿ ವಾರ್ನಿಂಗ್ ಕೊಟ್ಟಿದ್ದರು. ಆದರೂ ಪವಿತ್ರಾ ಅಮ್ಮನ ಮಾತಿಗೆ ಡೋಟ್‌ಕೇರ್‌ ಎಂದಿದ್ದಳು. ಮೊನ್ನೆ ಸೆ. 11ರಂದು ಇಬ್ಬರು ರೂಮಿನೊಳಗೆ ಇದ್ದಾಗಲೇ ಜಯಲಕ್ಷ್ಮಿಗೆ ಲಾಕ್‌ ಆಗಿದ್ದಳು. ಇದರಿಂದ ಸಿಟ್ಟಿಗೆದ್ದ ಜಯಲಕ್ಷ್ಮಿ ಗಲಾಟೆ ಮಾಡಿದ್ದರು. ತಮ್ಮಿಬ್ಬರ ಸಂಬಂಧಕ್ಕೆ ತಾಯಿ ಅಡ್ಡಿಯಾಗಿದ್ದಕ್ಕೆ ಕೋಪಗೊಂಡಿದ್ದ ಪವಿತ್ರಾ, ತನ್ನ ಪ್ರಿಯಕರನೊಂದಿಗೆ ಸೇರಿ ಪಕ್ಕದಲ್ಲೆ ಇದ್ದ ಟವೆಲ್‌ನಿಂದ ಜಯಲಕ್ಷ್ಮಿ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Hariprakash Konemane: ದಲಿತೋದ್ಧಾರದ ಮಾತುಗಳು ಮೊಸಳೆ ಕಣ್ಣೀರಷ್ಟೇ; ಕಾಂಗ್ರೆಸ್ ತನ್ನ ನಿಜಬಣ್ಣ ತೆರೆದಿಟ್ಟಿದೆ- ಹರಿಪ್ರಕಾಶ್ ಕೋಣೆಮನೆ

ಕೊಲೆ ನಂತರ ಬಾತ್ ರೂಂನಲ್ಲಿ ಬಿದ್ದು ಸತ್ತಿದ್ದಾರೆ ಎಂದು ಪವಿತ್ರಾ ಹೇಳಿಕೆ ನೀಡಿದ್ದಳು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಉಸಿರುಗಟ್ಟಿಸಿ ಕೊಲೆ ಎಂದು ವರದಿ ಬಂದಿತ್ತು. ಇದೀಗ ವರದಿ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಾಯ್ಬಿಟ್ಟಿದ್ದಾರೆ.

ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರ ಕೊಲೆ ಪ್ರಕರಣ ದಾಖಲಾಗಿದೆ. 46 ವರ್ಷದ ಜಯಲಕ್ಷ್ಮೀ ಎಂಬುವವರು ಮೃತರು. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ. ಆರಂಭದಲ್ಲಿ ಕೊಲೆ ಎಂದು ಶಂಕಿಸಲಾಗಿತ್ತು, ನಂತರ ಪೋಸ್ಟ್ ಮಾರ್ಟಮ್ ವರದಿ ಬಂದ ಮೇಲೆ ಕೊಲೆ ಎಂದು ಖಚಿತವಾಗಿತ್ತು. ಆರಂಭದಲ್ಲಿ ಮೃತಳ ಮಗಳು ಅನುಮಾನಾಸ್ಪದ ಹೇಳಿಕೆ ನೀಡಿದ್ದಳು. ತಾಯಿಗೆ ಆರೋಗ್ಯ ಸರಿ ಇರಲಿಲ್ಲ ಅನಂತರ ಬಿದ್ದು ಸಾವಾಗಿದ್ದಾರೆ ಎಂದಿದ್ದರು. ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Hindi Imposition : ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಕರವೇ; ಕಪ್ಪು ದಿನವನ್ನಾಗಿ ಆಚರಣೆ

Hindi Imposition: ಹಿಂದಿ ದಿವಸ್ ಮೂಲಕ ನಮ್ಮ ಮೇಲೆ ಹೇರಿಕೆ ನಡೆಸುತ್ತಿದ್ದಾರೆ. ಹಿಂದಿ ಕಾರ್ಯಕ್ರಮವನ್ನು ಧಿಕ್ಕರಿಸಿ ನಾವು ಕಪ್ಪು ದಿನವನ್ನಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಕರವೇ ನಾರಾಯಣ ಗೌಡ ಆಕ್ರೋಶ ಹೊರಹಾಕಿದರು.

VISTARANEWS.COM


on

By

Hindi Imposition
Koo

ಹಿಂದಿ ಹೇರಿಕೆ (Hindi Imposition) ವಿರುದ್ಧ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಜ್ಜಾಗಿದೆ. ಶನಿವಾರ ಹಿಂದಿ ದಿವಸ ಆಚರಣೆ ವಿರೋಧಿಸಿ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. ಹಿಂದಿ ದಿವಸ್ ಆಚರಣೆ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರ ಇದೆ. ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಕರವೇ ಆರೋಪಿಸಿದೆ.

ಈ ಹಿನ್ನೆಲೆಯಲ್ಲಿ ಕರವೇಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್‌) ಕರವೇ ಅಧ್ಯಕ್ಷ ಟಿಎ ನಾರಾಯಣ ಗೌಡ ನೇತೃತ್ವದಲ್ಲಿ ಹಿಂದಿ ದಿವಸ್ ಅನ್ನು ಕರಾಳ ದಿನವನ್ನಾಗಿ ಆಚರಣೆ ಮಾಡಲಿದ್ದಾರೆ. ಭಾರತದಲ್ಲಿ 22 ಆಡಾಳಿತಾತ್ಮಕ‌ ಭಾಷೆಗಳು ಇವೆ. ಎಲ್ಲ ಭಾಷೆಗಳನ್ನು ಮಾತನಾಡುವುದರಿಂದ ಭಾರತ ದೇಶವಾಗಿದೆ. ಅಂತಹ ಎಲ್ಲಾ ಭಾಷೆಗಳನ್ನು ತುಳಿತ್ತಕ್ಕೆ ಒಳಪಡಿಸಲು, ಕೇಂದ್ರ ಸರ್ಕಾರ ಹಿಂದಿ ಸಪ್ತಾಹ, ಹಿಂದಿ ದಿವಸ್ ಅನ್ನುವ ಕಾರ್ಯಕ್ರಮಗಳನ್ನು ಮಾಡುತ್ತಿದೆ.

ದೇಶದ ಹಲವು ಉದ್ಯೋಗಗಳ ಪರಿಕ್ಷೆಯಲ್ಲಿ ಹಿಂದಿಯನ್ನು ಬಲವಂತವಾಗಿ ಹೇರಿದ್ದಾರೆ. ಈಗ ಹಿಂದಿ ದಿವಸ್ ಮೂಲಕ ನಮ್ಮ ಮೇಲೆ ಹೇರಿಕೆ ನಡೆಸುತ್ತಿದ್ದಾರೆ. ಬಲವಂತವಾಗಿ ಹೇರಿಕೆ ಮಾಡುವ ಮೂಲಕ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದೀರಾ. ಹೀಗಾಗಿ ಇಂದು ಹಿಂದಿ ಕಾರ್ಯಕ್ರಮವನ್ನು ಧಿಕ್ಕರಿಸಿ ನಾವು ಕಪ್ಪು ದಿನವನ್ನಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಕರವೇ ನಾರಾಯಣ ಗೌಡ ಆಕ್ರೋಶ ಹೊರಹಾಕಿದರು.

ಪ್ರಾದೇಶಿಕ ಭಾಷೆಗಳನ್ನು ಮುಗಿಸುವ ಹುನ್ನಾರ

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕರವೇ ಕಾರ್ಯಕರ್ತರು ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸೆಪ್ಟೆಂಬರ್ 14 ರಂದು ಎಲ್ಲಾ ರಾಜ್ಯಗಳಲ್ಲಿ ಹಿಂದಿ ದಿವಸ್ ಆಚರಿಸಲು ಹೊರಟಿದೆ. ದೇಶದಾದ್ಯಂತ ಹಿಂದಿ ದಿವಸ್, ಹಿಂದಿ ಸಪ್ತಾಹ ಆಚರಿಸಲು ಹೊರಟಿದೆ. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎನ್ನುವ ಅರಿವೇ ಇಲ್ಲ. ಕೋಟಿ ಕೋಟಿ ಖರ್ಚು ಮಾಡಿ ಹಿಂದಿಯನ್ನು ವೈಭವೀಕರಿಸಲಾಗುತ್ತಿದೆ. ದೇಶದಲ್ಲಿ ಅಧಿಕೃತ ರಾಷ್ಟ್ರ ಭಾಷೆ ಯಾವುದೂ ಇಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ.

ಪ್ರಾದೇಶಿಕ ಭಾಷೆಗಳನ್ನು ಮುಗಿಸಲು ಹುನ್ನಾರ ಮಾಡಿದ್ದಾರೆ. ಒಕ್ಕೂಟ, ಅಖಂಡ ಭಾರತ ಉಳಿಯಬೇಕಾದರೆ ಎಲ್ಲಾ ಭಾಷೆ , ಆಚಾರ ವಿಚಾರ ಉಳಿಯಬೇಕು. ಕೆಲವು ರಾಜ್ಯಗಳಲ್ಲಿ ಹಿಂದಿ ಭಾಷಿಕರ ಸಂಖ್ಯೆ ಜಾಸ್ತಿ ಇದೆ ಎಂಬ ಮಾತ್ರಕ್ಕೆ ಘೋಷಣೆ ಸರಿಯಲ್ಲ. ಇದು ಭಾರತ ಒಕ್ಕೂಟಕ್ಕೆ ಧಕ್ಕೆ ತರುತ್ತದೆ. ಬಾಂಗ್ಲಾದೇಶ, ಪಾಕಿಸ್ತಾನ ಭಾಷೆಯಿಂದಲೇ ವಿಭಜನೆ ಆಯ್ತು, ಇದನ್ನ ಮರೆಯಬಾರದು, ಹಿಂದಿ ಹೇರಿಕೆ ಒಪ್ಪಲ್ಲ. 2300 ವರ್ಷ ಇತಿಹಾಸ ಇರೋದು ಕನ್ನಡ ಭಾಷೆ ಹಾಗೂ ಹಿಂದಿಗೆ 650 ವರ್ಷ ಮಾತ್ರ ಇತಿಹಾಸ ಇದೆ. ಎಂಟು ಜ್ಞಾನಪೀಠ ಪ್ರಶಸ್ತಿ ಸಿಕ್ಕ ಕನ್ನಡ ರಾಷ್ಟ್ರ ಭಾಷೆ ಯಾಕಾಗಬಾರದು. ಇದು ಅಪಾಯಕಾರಿ ಅಂತಾ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುತ್ತೇವೆ. ಹಿಂದಿ ಹೇರಿಕೆಯನ್ನ ವಾಪಾಸ್ ಪಡೆಯಬೇಕು ಅಂತಾ ಮೋದಿಗೆ ಆಗ್ರಹ ಮಾಡುತ್ತೇವೆ. ಇದನ್ನೂ ಮುಂದುವರೆಸಿದರೆ ಕರ್ನಾಟಕ ಪೂರ್ತಿ ಹೋರಾಟ ಮಾಡಲಾಗುತ್ತದೆ ಎಂದು ನಾರಾಯಣಗೌಡ ಎಚ್ಚರಿಕೆ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ಸೆ.17ರವರೆಗೆ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ

Actor Darshan : ಸೆ.17ರವರೆಗೆ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮುಂದುವರಿದಿದ್ದು, ನಾಲ್ಕು ದಿನಗಳು ಜೈಲೆಗತಿಯಾಗಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಅರ್ಜಿ ಸಂಬಂಧ ನ್ಯಾಯಾಲಯದ ಒಂದಷ್ಟು ಕಾರ್ಯವಿಧಾನಗಳು ಬಾಕಿ ಇರುವ ಕಾರಣ ಮತ್ತಷ್ಟು ದಿನಗಳವರೆಗೆ ದರ್ಶನ್‌ ಗ್ಯಾಂಗ್‌ಗೆ (Actor Darshan) ಜೈಲೇ ದಿಕ್ಕು . ಜಾಮೀನು ಅರ್ಜಿಗೆ ರಜೆ ದಿನಗಳೇ ಅಡ್ಡಿಯಾಗಿದೆ.

ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ಮೂರು ದಿನಗಳ ಕಾಲ ನ್ಯಾಯಾಲಯವು ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಆದೇಶ ನೀಡಿತ್ತು. ನಿನ್ನೆ ಗುರುವಾರ ಕೂಡ ಒಂದು ದಿನ ಜ್ಯೂಡಿಷಿಯಲ್ ಕಷ್ಟಡಿಗೆ ಒಳಪಡಿಸಲಾಗಿತ್ತು. ಇಂದು ಶುಕ್ರವಾರ ಮತ್ತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾತಿ ಪಡೆದ ಕೋರ್ಟ್‌ ಸೆ.17ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ಗಣೇಶ ಹಬ್ಬ ಹಾಗು ರಜಾದಿನಗಳು ಬ್ಯಾಕ್ ಟು ಬ್ಯಾಕ್ ಬಂದ ಹಿನ್ನೆಲೆಯಲ್ಲಿ ಚಾರ್ಜ್ ಶೀಟ್ ಕೂಡ ಆರೋಪಿಗಳ ಕೈ ಸೇರಿರಲಿಲ್ಲ . ಸೋಮವಾರ ಆರೋಪಿಗಳಿಗೆ ಚಾರ್ಜ್ ಶೀಟ್ ಸಿಕ್ಕಿದರೂ ಮುಖ್ಯವಾಗಿ ಬೇಕಾದ ಟೆಕ್ನಿಕಲ್ ಎವಿಡೆನ್ಸ್‌ಗಳು ಹಾಗು ಅದರ ವರದಿ ಸಿಕ್ಕಿರಲಿಲ್ಲ, ಈಗಲೂ ಸಿಕ್ಕಿಲ್ಲ. ಇದೆಲ್ಲಾವೂ ಜಾಮೀನು ಅರ್ಜಿ ಸಲ್ಲಿಕೆ ಮಾಡಲು ವಿಳಂಬವಾಗುತ್ತಿದೆ.

ಇನ್ನು ಚಾರ್ಜ್ ಶೀಟ್ ಹಾಗೂ ಡಿಜಿಟಲ್ ಎವಿಡೆನ್ಸ್ ವರದಿಗಳನ್ನು ಅನಾಲೈಝ್ ಮಾಡಿದ ಬಳಿಕವಷ್ಟೇ ಮೂವ್ ಆಗಬಹುದು. ಅದಾದ ಬಳಿಕ ಈ ಪ್ರಕರಣವನ್ನು ಸೆಷನ್ ಕೋರ್ಟ್‌ಗೆ ವರ್ಗಾವಣೆಯಾಗಿ, ಅಲ್ಲಿ ನ್ಯಾಯಾಲಯದ ಅನುಮತಿ ಪಡೆದು ಜಾಮೀನು ಅರ್ಜಿ ಸಲ್ಲಿಕೆ ಮಾಡಬೇಕು. ಇನ್ನು ಇದೇ ವೇಳೆ ದರ್ಶನ್ ಪರ ವಕೀಲ ಆದಷ್ಟು ಬೇಗ ವರದಿಗಳನ್ನು ನೀಡಬೇಕು ಜಾಮೀನು ಸಲ್ಲಿಕೆ ಮಾಡುವುದು ಆರೋಪಿಯ ಫಂಡಮೆಂಟಲ್ ರೈಟ್ಸ್ ಎಂದು ವಾದ ಮಂಡಿಸಿದರು. ಸದ್ಯ ನಾಲ್ಕು ದಿನಗಳಲ್ಲಿ ಕೋರ್ಟ್‌ನ ಪೆಂಡಿಂಗ್ ಕೆಲಸಗಳು ಕ್ಲಿಯರ್ ಆದರೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಅಲ್ಲಿವರೆಗೂ ಕೊಲೆ ಆರೋಪಿಗಳಿಗೆ ಜೈಲೇ ಗತಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Theft case : ಬೆಂಗಳೂರಿನಲ್ಲಿ ದೇವರನ್ನೇ ಕದ್ದ ಖದೀಮರು! ಸಿಸಿ ಕ್ಯಾಮೆರಾದಲ್ಲಿ ಸೆರೆ

Theft case : ಬೆಂಗಳೂರಿನಲ್ಲಿ ಬೈಕ್‌ನಲ್ಲಿ ಬಂದ ಖದೀಮರು ದೇವರನ್ನೇ ಕದ್ದಿದ್ದಾರೆ. ಕಳ್ಳರ ಕಳ್ಳಾಟ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಲಘಟ್ಟಪುರ ಪೊಲೀಸರ ಕಾರ್ಯಾಚರಣೆ ನಡೆಸಿ ಕುಖ್ಯಾತ ಸರಗಳ್ಳ ರಮೇಶ್ ಎಂಬಾತನನ್ನು ಬಂಧಿಸಿದ್ದಾರೆ.

VISTARANEWS.COM


on

By

theft case
Koo

ಬೆಂಗಳೂರು: ಚಿನ್ನ, ಬೆಳ್ಳಿ, ಬೈಕ್‌, ಕಾರು ಇದ್ಯಾವುದನ್ನು ಮುಟ್ಟಲ್ಲ ಆದರೆ ದೇವರನ್ನು ಕಂಡರೆ ಬಿಡೋದಿಲ್ಲ. ಬೆಂಗಳೂರಿನಲ್ಲಿ ಗಣಪತಿ ಉತ್ಸವಗಳಿಗೆ ಮಾರಾಟಕ್ಕಿಟ್ಟಿದ್ದ ಗಣಪತಿ ಮೂರ್ತಿ ಕಳವು (Theft Case) ಮಾಡಿದ್ದಾರೆ. ರಾತ್ರೋ ರಾತ್ರಿ ಬಂದ ಖದೀಮರು ಗಣಪತಿ ಮೂರ್ತಿ ಕದ್ದು ಕ್ಷಣಾರ್ಧದಲ್ಲಿ ಎಸ್ಕೇಪ್‌ ಆಗಿದ್ದಾರೆ. ಕಳೆದ 12ರಂದು ಮಧ್ಯರಾತ್ರಿ 12 .45ರ ಸುಮಾರಿಗೆ ಬೆಂಗಳೂರಿನ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಅಂದ್ರಳ್ಳಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದಿರುವ ಇಬ್ಬರು ಖದೀಮರಿಂದ ಕೃತ್ಯ ನಡೆದಿದೆ.

ಅಂದ್ರಹಳ್ಳಿ ಮುಖ್ಯ ರಸ್ತೆಯಲ್ಲಿ ಗಣಪತಿ ಉತ್ಸವಗಳಿಗಾಗಿ ಗಣಪತಿ ವಿಗ್ರಹಗಳನ್ನು ಮಾರಾಟಕ್ಕಿಡಲಾಗಿತ್ತು. ಸುಮಾರು 20 ರಿಂದ 30 ವಿಗ್ರಹಗಳನ್ನು ಮಾರಾಟಕ್ಕಿಡಲಾಗಿತ್ತು. ವ್ಯಾಪಾರಿಯೊಬ್ಬರು ರಾತ್ರಿ ಹೊತ್ತು ಮೂರ್ತಿ ಅಲ್ಲೇ ಬಿಟ್ಟು ಟಾರ್ಪಲ್ ಹೊದಿಸಿ‌ ಹೋಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದಿರುವ ಇಬ್ಬರು ಖದೀಮರಿಂದ ಒಂದು ಮೂರ್ತಿ ಕಳುವು ಮಾಡಿದ್ದಾರೆ. ಖದೀಮರು ಮೂರ್ತಿ ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಇದನ್ನೂ ಓದಿ; Physical Abuse : ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ!

ಕುಖ್ಯಾತ ಸರಗಳ್ಳ ಅರೆಸ್ಟ್‌

ತಲಘಟ್ಟಪುರ ಪೊಲೀಸರ ಕಾರ್ಯಾಚರಣೆ ನಡೆಸಿ ಕುಖ್ಯಾತ ಸರಗಳ್ಳ ರಮೇಶ್ ಎಂಬಾತನನ್ನು ಬಂಧಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುವ ಮಹಿಳೆಯರ ಮಾಂಗಲ್ಯ ಸರವನ್ನೇ ಟಾರ್ಗೆಟ್‌ ಮಾಡಿ ಕದಿಯುತ್ತಿದ್ದ. ಕದ್ದ ಬೈಕ್‌ನಲ್ಲಿ ಸರಗಳ್ಳತನ ಮಾಡುತ್ತಿದ್ದ. ಕಳೆದ ತಿಂಗಳು 27 ರಂದು ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಸರ ಕಸಿದು ಪರಾರಿಯಾಗಿದ್ದ. ಕುತ್ತಿಗೆಯಲ್ಲಿದ್ದ 6 ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದ.
ಪ್ರಕರಣ ದಾಖಲಿಸಿ ಸಿಸಿಟಿವಿ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿಚಾರಣೆಯಲ್ಲಿ 4 ಬೈಕ್ ಹಾಗೂ 1 ಆಟೋ ಕಳವು ಪ್ರಕರಣವು ಬೆಳಕಿಗೆ ಬಂದಿದೆ. ಕದ್ದ ಚಿನ್ನವನ್ನು ಆನೇಕಲ್‌ನ ಜುವೆಲ್ಲರಿ ಶಾಪ್‌ನಲ್ಲಿ ಅಡವಿಡುತ್ತಿದ್ದ. ಬಂಧಿತನಿಂದ 10 ಲಕ್ಷ ಮೌಲ್ಯದ 6 ಗ್ರಾಂ ಚಿನ್ನಾಭರಣ, 4 ಬೈಕ್ ಹಾಗೂ 1 ಆಟೋ ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Theft case : ಆನ್‌ಲೈನ್‌ ಬೆಟ್ಟಿಂಗ್‌ ಗೀಳು; ಅಣ್ಣನ ಮದುವೆಗೆ ತಂದಿದ್ದ ಚಿನ್ನ ಕದ್ದು ಸಿಕ್ಕಿಬಿದ್ದ ತಮ್ಮ!

Theft case: ಆನ್‌ಲೈನ್‌ ಬೆಟ್ಟಿಂಗ್‌ ಗೀಳಿಗೆ ಬಲಿಯಾದ ತಮ್ಮನೊಬ್ಬ ಅಣ್ಣನ ಮದುವೆಗೆ ತಂದಿದ್ದ ಚಿನ್ನ ಕದ್ದು ಸಿಕ್ಕಿಬಿದ್ದಿದ್ದಾನೆ. ಖದೀಮರು ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಲಾಗಿದೆ.

VISTARANEWS.COM


on

By

theft case
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಚಿನ್ನ ಕದ್ದ (Theft case) ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆದಿತ್ಯ ಎಂಬಾತನಿಂದ 100 ಗ್ರಾಂ ಬೆಳ್ಳಿ, 102 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆದಿತ್ಯ ಆನ್‌ಲೈನ್‌ ಬೆಟ್ಟಿಂಗ್‌ನಲ್ಲಿ ಜೂಜಾಡಿ ಹಣ ಸೋತಿದ್ದ. ಸಾಲ ತೀರಿಸಲಿಕ್ಕೆ ತನ್ನ ಮನೆಯಲ್ಲೇ ಕಳವು ಮಾಡಿದ್ದ. ಆದಿತ್ಯಾ ಕುಟುಂಬಸ್ಥರು ಮೊದಲ ಮಗನ ಮದುವೆಗೆ ಚಿನ್ನ ಖರೀದಿಸಿ ಇಟ್ಟಿದ್ದರು. ಸಾಲಗಾರರ ಕಾಟಕ್ಕೆ ಬೇಸತ್ತ ಆದಿತ್ಯಾ ಅಣ್ಣನಿಗೆ ಖರೀದಿಸಿದ್ದ ಚಿನ್ನವನ್ನು ಕದ್ದು ಮಳ್ಳನಂತೆ ಸುಮ್ಮನೆ ಇದ್ದ. ಬಳಿಕ ಆದಿತ್ಯಾ ತಾಯಿ ಚಿನ್ನ ಕಳ್ಳತನ ಸಂಬಂಧ ದೂರು ನೀಡಿದ್ದರು. ಪೊಲೀಸರ ವಿಚಾರಣೆ ವೇಳೆ ಮಗನೇ ಮನೆಗಳವು ಮಾಡಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರು ಪೊಲೀಸರ ಬಲೆಗೆ ಬಿದ್ದ ಖದೀಮರು

ಬೆಂಗಳೂರಿನ ಹನುಂತನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ರವಿ, ಅರುಣ್, ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರ ಬಂಧನದಿಂದ 4 ಪ್ರಕರಣ ಬೆಳಕಿಗೆ ಬಂದಿದೆ. ಬೈಕ್‌ನಲ್ಲಿ ಲೈಟ್ ಆಫ್ ಆಗಿರುವ ಮನೆಗಳ ರೆಕ್ಕಿ ಮಾಡುತ್ತಿದ್ದರು. ಬಳಿಕ ಕಾಲಿಂಗ್ ಬೆಲ್ ಒತ್ತುತ್ತಿದ್ದರು. ಡೋರ್ ಓಪನ್ ಮಾಡದೇ ಇದ್ದಾಗ, ಬಾಗಿಲು ಒಡೆಯುತ್ತಿದ್ದರು. ಮನೆಯಲ್ಲಿದ್ದ ಚಿನ್ನಾಭರಣ ಲೂಟಿ ಮಾಡಿ ಎಸ್ಕೇಪ್ ಆಗುತ್ತಿದ್ದರು. ಸಿಸಿಟಿವಿ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು 480 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಒಂಟಿ ಮನೆ ಟಾರ್ಗೆಟ್‌

ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಿದ್ದಾರೆ. 20 ಲಕ್ಷ ಮೌಲ್ಯದ 300 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ರಿಯಾನ್ @ ನಾಗರಾಜ್ ಬಂಧಿತ ಆರೋಪಿ ಆಗಿದ್ದಾನೆ. ಬಂಧಿತನಿಂದ 09 ಮನೆಗಳವು ಪ್ರಕರಣ ಬೆಳಕಿಗೆ ಬಂದಿದೆ. ಸಿದ್ದಾಪುರ ನಿವಾಸಿ ಆಗಿರುವ ಆರೋಪಿ ರಿಯಾನ್ ಟಿವಿ ಡಿಶ್ ರಿಪೇರಿ ಮಾಡುವ ನೆಪದಲ್ಲಿ ಒಂಟಿ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ.

ವೈಟ್ ಫೀಲ್ಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಮಾಡುತ್ತಿದ್ದ ಕಳ್ಳಿಯನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಪಿಂಕಿದೇವಿ ಬಂಧಿತ ಆರೋಪಿಯಾಗಿದ್ದಾಳೆ. ಬಂಧಿತಳಿಂದ 54 ಲಕ್ಷ ಮೌಲ್ಯದ 570 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಸಾಫ್ಟ್ ವೇರ್ ಉದ್ಯೋಗಿ ಮನೆಯಲ್ಲಿ ಕೆಲಸಕ್ಕಿದ್ದ ಪಿಂಕಿದೇವಿ ಮನೆಗಳವು ಮಾಡಿದ್ದಳು. ಬಳಿಕ ಬಿಹಾರಕ್ಕೆ ತೆರಳಿದ್ದ ಆರೋಪಿಯನ್ನು ಬಂಧಿಸಿ ಕರೆತಂದಿದ್ದಾರೆ.

ಇದನ್ನೂ ಓದಿ: Physical Abuse : ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ!

ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ

ಮಂಗಳೂರು: ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದು, ಒರಿಸ್ಸಾದ ಗಜಪತಿ ಜಿಲ್ಲೆಯ ಬುಲುಬಿರೊ (24), ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನ ದಿಲ್ ದಾರ್ ಆಲಿ (28) ಬಂಧಿತ ಆರೋಪಿ ಆಗಿದ್ದಾರೆ.

ಬಂಧಿತರಿಂದ 2.6 ಲಕ್ಷ ಮೌಲ್ಯದ 8.65 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಒರಿಸ್ಸಾದಿಂದ ರೈಲಿನಲ್ಲಿ ಬೆಂಗಳೂರಿಗೆ ಅಲ್ಲಿಂದ ಬಸ್‌ನಲ್ಲಿ ಮಂಗಳೂರು, ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಅಡಿಕೆ ತೂಕದಲ್ಲಿ ಮೋಸ ಹಾಕಿದವನಿಗೆ 20 ಲಕ್ಷ ರೂ. ದಂಡ ಹಾಕಿದ ಗ್ರಾಮಸ್ಥರು

ಶಿವಮೊಗ್ಗದಲ್ಲಿ ರಾಶಿ ಅಡಿಕೆ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಗೆ ಗ್ರಾಮಸ್ಥರು 20 ಲಕ್ಷ ರೂ. ದಂಡ ಹಾಕಿದ್ದಾರೆ. ರೈತರಿಂದ ಅಡಿಕೆ ಖರೀದಿಸುವಾಗ ‌ಪ್ರತಿ ಕ್ವಿಂಟಾಲ್‌ಗೆ 3 ಕೆ.ಜಿ ಅಡಿಕೆ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ರೈತರಿಗೆ ವಂಚಿಸುತ್ತಿದ್ದ ವ್ಯಾಪಾರಿಗೆ ತಕ್ಕ ಪಾಠ ಕಲಿಸಿದ ಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮಸ್ಥರು, ಸಮಿತಿಯಿಂದ ಬರೋಬ್ಬರಿ 20 ಲಕ್ಷ ರೂ. ದಂಡ ಹಾಕಿದ್ದಾರೆ. ರೈತರ ಮನೆ ಬಾಗಿಲಲ್ಲಿ ರಾಶಿ ಅಡಿಕೆ ತೂಕದಲ್ಲಿ ವರ್ತಕನಿಂದ ಮೋಸ ನಡೆದಿದೆ. ಅಡಿಕೆ ವರ್ತಕ ತಟ್ಟೆಹಳ್ಳಿ ದಿಲೀಪ ಎಂಬಾತನಿಂದ ಮೋಸವಾಗಿದೆ.
ಗಣಕೀಕೃತ ತಕ್ಕಡಿಯಲ್ಲಿ ಬೆಳೆಗಾರರಿಗೆ ಗಮನಕ್ಕೆ ಬಾರದಂತೆ ಒಂದು ಕ್ವಿಂಟಾಲ್‌ಗೆ 3 ಕೆ.ಜಿ ಮೋಸಮಾಡಿದ್ದು, ಗ್ರಾಮದ ದೇವಾಲಯಕ್ಕೆ 20 ಲಕ್ಷರೂ. ದಂಡ ಕಟ್ಟಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಘಟನೆ ನಡೆದಿದೆ.

ಸೈರನ್ ಒಡೆದು ಎಟಿಎಂ‌ನಲ್ಲಿ ಲಾಕ್‌ಆದ ವ್ಯಕ್ತಿ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಅಂಬೇಡ್ಕರ್ ವೃತ್ತದಲ್ಲಿರುವ ಇಂಡಿಯನ್ ಬ್ಯಾಂಕ್ ಎಟಿಎಂ‌ಗೆ ಬೆಳಗಿನ ಜಾವ 3 ಗಂಟೆಗೆ ನುಗ್ಗಿದ ವ್ಯಕ್ತಿಯೊಬ್ಬ ಸೈರನ್‌ ಒಡೆದು ಹಾಕಿದ್ದ. ಈ ವೇಳೆ ಎಟಿಎಂ ಬಾಗಿಲು ಆಟೋಮೆಟಿಕ್ ಆಗಿ ಲಾಕ್ ಆಗಿತ್ತು. 5 ಗಂಟೆ ವೇಳೆಗೆ ವ್ಯಕ್ತಿ ಲಾಕ್ ಆಗಿದ್ದನ್ನ ಗಮನಿಸಿದ ಸಮೀಪದ ಎಸ್‌ಬಿಐ ಎಟಿಎಂನ ಸೆಕ್ಯುರಿಟಿ ಗಾರ್ಡ್ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಮಾನಸಿಕ ಅಸ್ವಸ್ಥನಂತೆ ಇರುವ ಹಾಸನ ಮೂಲದ ವ್ಯಕ್ತಿಯಿಂದ ಎಟಿಎಂ ಯಂತ್ರಕ್ಕೆ ಯಾವುದೇ ಹಾನಿಯಾಗಿಲ್ಲ. ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Hindi Imposition
ಬೆಂಗಳೂರು3 mins ago

Hindi Imposition : ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಕರವೇ; ಕಪ್ಪು ದಿನವನ್ನಾಗಿ ಆಚರಣೆ

Murder case
ಬೆಂಗಳೂರು1 hour ago

Murder case:ಪ್ರಿಯಕರನೊಟ್ಟಿಗೆ ಏಕಾಂತದಲ್ಲಿರುವಾಗಲೇ ಮಗಳು ಲಾಕ್‌; ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿಯನ್ನೇ ಕೊಂದಳು ಪಾಪಿ

They have done a disservice to the Constitution Congress has exposed its true colours Hariprakash Koonemane
ರಾಜಕೀಯ2 hours ago

Hariprakash Konemane: ದಲಿತೋದ್ಧಾರದ ಮಾತುಗಳು ಮೊಸಳೆ ಕಣ್ಣೀರಷ್ಟೇ; ಕಾಂಗ್ರೆಸ್ ತನ್ನ ನಿಜಬಣ್ಣ ತೆರೆದಿಟ್ಟಿದೆ- ಹರಿಪ್ರಕಾಶ್ ಕೋಣೆಮನೆ

dina bhavishya
ಭವಿಷ್ಯ7 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರ

Minister Pralhad Joshi warns Mandya SP not to come under political pressure
ಹುಬ್ಬಳ್ಳಿ17 hours ago

Pralhad Joshi: ರಾಜಕೀಯ ಒತ್ತಡಕ್ಕೆ ಒಳಗಾಗಿ ಹುಚ್ಚಾಟ ಮಾಡ್ಬೇಡಿ; ಮಂಡ್ಯ ಎಸ್‌ಪಿಗೆ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ

Actor darshan
ಬೆಂಗಳೂರು19 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ಸೆ.17ರವರೆಗೆ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ

Nagamangala case
ಮಂಡ್ಯ19 hours ago

Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

Nagamangala Case
ಮಂಡ್ಯ20 hours ago

Nagamangala Case: ನಾಗಮಂಗಲ ಗಲಭೆಯು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ; ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸಂಚು- ಎಚ್‌ಡಿ ಕುಮಾರಸ್ವಾಮಿ

Road Accident
ಬಾಗಲಕೋಟೆ21 hours ago

Road Accident : ಸ್ಕೂಟಿಗೆ ಗುದ್ದಿ ಬೈಕ್‌ನಿಂದ ಹಾರಿ ಬಿದ್ದ ಸವಾರರು; ಸ್ಥಳದಲ್ಲೇ ಓರ್ವ ಸಾವು, ಮತ್ತಿಬ್ಬರು ಗಾಯ

theft case
ಬೆಂಗಳೂರು21 hours ago

Theft case : ಬೆಂಗಳೂರಿನಲ್ಲಿ ದೇವರನ್ನೇ ಕದ್ದ ಖದೀಮರು! ಸಿಸಿ ಕ್ಯಾಮೆರಾದಲ್ಲಿ ಸೆರೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 year ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌