Kidnap case : ಚಿತ್ರದುರ್ಗದಲ್ಲಿ ಹಾಡಹಗಲೇ ಮುಸ್ಲಿಂ ಬಾಲಕಿ ಕಿಡ್ನ್ಯಾಪ್‌ಗೆ ಯತ್ನ; ಸಿಕ್ಕಿ ಬಿದ್ದ ಅಪಹರಣಕೋರರಿಗೆ ಧರ್ಮದೇಟು - Vistara News

ಚಿತ್ರದುರ್ಗ

Kidnap case : ಚಿತ್ರದುರ್ಗದಲ್ಲಿ ಹಾಡಹಗಲೇ ಮುಸ್ಲಿಂ ಬಾಲಕಿ ಕಿಡ್ನ್ಯಾಪ್‌ಗೆ ಯತ್ನ; ಸಿಕ್ಕಿ ಬಿದ್ದ ಅಪಹರಣಕೋರರಿಗೆ ಧರ್ಮದೇಟು

Kidnap case : ಹಾಡಹಗಲೇ ಪಿಯುಸಿ ವಿದ್ಯಾರ್ಥಿನಿಯನ್ನು ಯುವಕರಿಬ್ಬರು ಅಪಹರಣಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದಾರೆ. ಮುಸ್ಲಿಂ ಬಾಲಕಿಯನ್ನು ಹಿಂದು ಯುವಕರು ಕಿಡ್ನ್ಯಾಪ್‌ ಮಾಡಲು ಯತ್ನಿಸಿ ಸಾರ್ವಜನಿಕರಿಂದ ಧರ್ಮದೇಟು ತಿಂದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

Kidnap case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ಜ್ಞಾನ ಭಾರತಿ ಶಾಲೆ ಮುಂಭಾಗ ಹಾಡಹಗಲೇ ಮುಸ್ಲಿಂ ಬಾಲಕಿಯನ್ನು ಕಿಡ್ನ್ಯಾಪ್‌ಗೆ (Kidnap case) ಯತ್ನಿಸಲಾಗಿದೆ. ಕಿರಾತಕರಿಬ್ಬರು ಬಾಲಕಿಯನ್ನು ಎಳೆದೊಯ್ಯುವಾಗ ಕಿರುಚಾಡಿದ್ದಾಳೆ. ಇದರಿಂದ ಬೆದರಿದ ಇಬ್ಬರು ಬಾಲಕಿಯನ್ನು ಬಿಟ್ಟು ಎಸ್ಕೇಪ್‌ ಆಗಲು ಯತ್ನಿಸಿದ್ದಾರೆ. ಬಾಲಕಿ ಕಿರುಚಾಟ ಕೇಳಿದ ಸ್ಥಳೀಯರು ಕೂಡಲೇ ಓರ್ವನನ್ನು ಹಿಡಿದು ಥಳಿಸಿದ್ದಾರೆ.

ಟಗರುಹಟ್ಟಿಯ ಆರೋಪಿ ಪಾರ್ಥ ಎಂಬಾತನನ್ನು ಹಿಡಿದು ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಇತ್ತ ಸ್ಥಳದಲ್ಲೇ ಇದ್ದ ಬಾಲಕಿ ಚಪ್ಪಲಿ ಹಿಡಿದು ಮನಬಂದಂತೆ ಹೊಡೆದಿದ್ದಾಳೆ. ಬಳಿಕ ಆರೋಪಿಯನ್ನುಪೊಲೀಸರಿಗೆ ಒಪ್ಪಿಸಿದ್ದಾರೆ. 17 ವರ್ಷದ ಬಾಲಕಿಯನ್ನುಆರೋಪಿ ಆನಂದ್ ಮತ್ತು ಪಾರ್ಥ ಎಂಬುವವರಿಂದ ಕಿಡ್ನ್ಯಾಪ್‌ ನಡೆದಿದೆ.

ಸದ್ಯ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಿಡ್ನ್ಯಾಪ್‌ ಮಾಡಲು ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲಕಿಯಿಂದ ದೂರು ದಾಖಲಾಗಿದೆ. ಯಾಕಾಗಿ ಕಿಡ್ನ್ಯಾಪ್‌ ಮಾಡಲು ಯತ್ನಿಸಿದರು ಎಂಬುದು ತಿಳಿದುಬಂದಿದೆ.

ಹಾಡಹಗಲೇ ಬಾಲಕಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ‌ ಠಾಣೆಗೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಆಗಮಿಸಿದರು. ಎಸ್ಪಿ ಸಮ್ಮುಖದಲ್ಲಿ‌ ಆರೋಪಿಯ ತೀವ್ರ ವಿಚಾರಣೆ ನಡೆದಿದೆ. ಘಟನೆ ಸಂಬಂಧ ಎಸ್ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ಪಡೆದರು.

ಇದನ್ನೂ ಓದಿ: MLA Muniratna : ಲಂಚಕ್ಕಾಗಿ ಗುತ್ತಿಗೆದಾರನಿಗೆ ಜೀವ ಬೆದರಿಕೆ; ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

ಕಾಮುಕನಾದ ಸರ್ಕಾರಿ ಶಾಲೆ ಶಿಕ್ಷಕ ಅರೆಸ್ಟ್‌

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಕಳೆದ ಆರು ತಿಂಗಳಿಂದ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಬಾಲಕಿಯೊರ್ವಳು ಲೈಂಗಿಕ ಕಿರುಕುಳ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ. ಈ ವೇಳೆ ವಿಚಾರಿಸಲು ಹೋದಾಗ ತಮಗೂ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಎಂದು 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ತಡರಾತ್ರಿ ಆರೋಪಿ ಶಿಕ್ಷಕ ಸಾದಿಕ ಬೇಗ್‌ ಎಂಬಾತನನ್ನು ಬಂಧಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಯಾದಗಿರಿ

Physical Abuse : ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ!

Physical Abuse: ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ ಹಾಕಲಾಗಿದೆ. ದಲಿತರು ಅಂಗಡಿಗೆ ತೆರಳಿ ವಸ್ತುಗಳನ್ನು ಖರೀದಿಸಲು ಹೋದರೆ ಮಾಲೀಕರು ಕೊಡುತ್ತಿಲ್ಲವಂತೆ.

VISTARANEWS.COM


on

By

Physical Abuse
ಸಾಂದರ್ಭಿಕ ಚಿತ್ರ
Koo

ಯಾದಗಿರಿ : ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದೆ. ಅತ್ಯಾಚಾರ (Physical Abuse) ಎಸಗಿದ ಆರೋಪಿ ಮೇಲೆ ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ (Boycott of Dalits) ಹಾಕಲಾಗಿದೆ. ಸವರ್ಣೀಯ ಯುವಕ ಅತ್ಯಾಚಾರವೆಸಗಿದ್ದರಿಂದ 15 ವರ್ಷದ ಬಾಲಕಿ 5 ತಿಂಗಳ ಗರ್ಭಿಣಿ ಆಗಿದ್ದಳು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ‌ಗ್ರಾಮವೊಂದರಲ್ಲಿ‌ ಈ ಘಟನೆ ನಡೆದಿದೆ.

ಪ್ರಕರಣ ಸಂಬಂಧ ಬಾಲಕಿ ಪೋಷಕರು ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದರು. ಸಂಧಾನಕ್ಕೆ ಬಾರದೇ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದಕ್ಕೆ ಕೋಪಗೊಂಡ ಸವರ್ಣೀಯ ಮುಖಂಡರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ದಲಿತರಿಗೆ ದಿನಸಿ ಕಿರಾಣಿ ಹಾಗೂ ದೈನಂದಿನ ವಸ್ತುಗಳನ್ನು ನೀಡದಂತೆ ಆದೇಶಿಸಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗೆ ಪೆನ್, ಪೆನ್ಸಿಲ್ ಸಹ ನೀಡದಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಗ್ರಾಮದ ದಲಿತರಿಗೆ ಬಹಿಷ್ಕಾರ ಹಾಕಿರುವ ಆಡಿಯೊ ವೈರಲ್ ಆಗಿದೆ.

ಅಂಗಡಿಯವರ ಜತೆಗೆ ಮಹಿಳೆಯೊಬ್ಬರು ಮಾತನಾಡಿದ್ದು, ಅಂಗಡಿಗೆ ಉಪ್ಪು ತರಲು ಹೋದರೆ ಉಪ್ಪು ಕೊಡುತ್ತಿಲ್ಲ. 8-10 ಜನ ಬಂದು ನಮಗೆ ಉಪ್ಪು ಕೊಡಬೇಡಿ ಅಂದಿದ್ದಾರೆ. ಮತ್ತೊಬ್ಬ ಅಂಗಡಿಯೊಬ್ಬನಿಂದ ಪೆನ್ನು ನೀಡಲು ನಿರಾಕರಿಸಿದ್ದಾರೆ. ನನಗೆ ಏನು ಗೊತ್ತಿಲ್ಲ, ಊರಿನವರು ಕೊಡಬೇಡಿ ಅಂದಿದ್ದಾರೆ. ಊರಿನವರು ಹೇಗೆ ಇರಬೇಕೆಂದು ಹೇಳಿದ್ದಾರೆ ನಾವು ಹಾಗೆ ಇರಬೇಕೆಂದು ಅಂಗಡಿ ಮಾಲೀಕ ಮಾತಾಡಿದ್ದಾನೆ.

ಬಹಿಷ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶೀಧರ ಕೋಸುಂಬೆ ಪ್ರತಿಕ್ರಿಯಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಸಂತ್ರಸ್ತೆ ಪೋಷಕರಿಗೆ ಗ್ರಾಮಸ್ಥರು ಬಹಿಷ್ಕಾರ ಹಾಕಿರುವುದು ಕೇಳಿ ಬಂದಿದೆ. ಅದಲ್ಲದೇ ಅಲ್ಲಿನ ‌ಮಕ್ಕಳಿಗೆ ಪೆನ್ನ, ಪುಸ್ತಕ ಕೊಡದಂತೆ ವರ್ತಿಸಿದ್ದಾರೆ. ಇದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತದ್ದು, ಸಂಬಂಧಪಟ್ಟ ಜಿಲ್ಲಾಡಳಿತ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಬೇಕು. ಬಹಿಷ್ಕಾರ ತೆರವು ಮಾಡಬೇಕು, ಬಹಿಷ್ಕಾರ ಹಾಕಿದವರ ಮೇಲೆ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದರು.

ಚಿತ್ರದುರ್ಗದಲ್ಲಿ ಅಪ್ರಾಪ್ತೆ ಮೇಲೆ ಕಾಮುಕನ ಅಟ್ಟಹಾಸ

ಚಿತ್ರದುರ್ಗ: 17 ವರ್ಷದ ಅಪ್ರಾಪ್ತೆ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಚಿತ್ರದುರ್ಗ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿ ಶ್ರೀನಿವಾಸ್ ಎಂಬಾತನನ್ನು ಭರಮಸಾಗರ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಆರೋಪಿ ಶ್ರೀನಿವಾಸ್‌ಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಬಳಿಕ ಜೈಲಿಗೆ ಕಳಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ; ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ

Karnataka Weather Forecast : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather Forecast Cloudy weather in Bengaluru Moderate rainfall in coastal and Malnad regions
Koo

ಬೆಂಗಳೂರು: ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ (Karnataka Weather Forecast) ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಶುಕ್ರವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲೂ ಸಾಧಾರಣವಾಗಿರಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಒಣ ಹವಾಮಾನ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ.

Continue Reading

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ (Rain News) ಸಾಧಾರಣವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ಸೆ.11ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಸಂಭವಿಸುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಹಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಘಳಿಗೆಗೊಂದು ವಾತಾವರಣ ಇರಲಿದೆ. ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Renukaswamy case : ರೇಣುಕಾಸ್ವಾಮಿ ಪವಿತ್ರಾಗೌಡಗೆ ಮಾತ್ರವಲ್ಲ ಸ್ಯಾಂಡಲ್‌ವುಡ್‌ನ ಆ ಸ್ಟಾರ್‌ ನಟಿಯರಿಗೂ ಕಳಿಸಿದ್ದನಂತೆ ಬ್ಯಾಡ್‌ ಮಸೇಜ್‌

Renukaswamy case : ರೇಣುಕಾಸ್ವಾಮಿ ನಟಿ ಪವಿತ್ರಾಗೌಡಗೆ ಮಾತ್ರವಲ್ಲ ಸ್ಯಾಂಡಲ್‌ವುಡ್‌ನ ಮತ್ತಿಬ್ಬರು ಸ್ಟಾರ್‌ ನಟಿಯರಿಗೂ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದನಂತೆ. ಈ ಕುರಿತು ಎ 14 ಆರೋಪಿ ಪ್ರದೂಶ್‌ ಹೇಳಿಕೆ ನೀಡಿದ್ದು, ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ.

VISTARANEWS.COM


on

By

Renukaswamy had sent the message not only to Pavithra Gowda but also to those star actresses of Sandalwood
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (renukaswamy case) ಚಾರ್ಜ್‌ಶೀಟ್‌ ಕೋರ್ಟ್‌ಗೆ ಸಲ್ಲಿಕೆ ಆಗುತ್ತಿದ್ದಂತೆ ಒಂದೊಂದೆ ವಿಚಾರಗಳು ಹೊರಬರುತ್ತಿದೆ. ಸದ್ಯ ರೇಣುಕಾಸ್ವಾಮಿ ಕೊಲೆ (Murder case) ಚಾರ್ಜ್ ಶೀಟ್‌ನಲ್ಲಿ ಸ್ಯಾಂಡಲ್‌ವುಡ್‌ನ ಮತ್ತಿಬ್ಬರು ನಟಿಯರ ಹೆಸರುಗಳು ಉಲ್ಲೇಖವಾಗಿವೆ. ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಶುಭಾ ಪೂಂಜಾ ಹೆಸರು ಇದೆ. ಎ14 ಆರೋಪಿ ಪ್ರದೂಶ್ ಸ್ವ ಇಚ್ಛಾ ಹೇಳಿಕೆಯಲ್ಲಿ ಇಬ್ಬರ ನಟಿಯರ ಹೆಸರು ಉಲ್ಲೇಖ ಮಾಡಿದ್ದಾನೆ.

ರೇಣುಕಾಸ್ವಾಮಿ ಈ ಇಬ್ಬರು ನಟಿಯರಿಗೂ ಅಶ್ಲೀಲ ಸಂದೇಶ ಕಳಿಸಿದ್ದನಂತೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ನಟ ದರ್ಶನ್‌ ಮೊಬೈಲ್ ತೆಗೆದುಕೊಂಡು ಪ್ರದೂಶ್‌ಗೆ ನೀಡಿದ್ದ. ಪ್ರದೂಶ್‌ ಮೊಬೈಲ್‌ ಪರಿಶೀಲನೆ ಮಾಡಿದಾಗ ರಾಗಿಣಿ ಹಾಗೂ ಶುಭಾ ಪೂಂಜಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ದರ್ಶನ್‌ಗೆ ತಿಳಿಸಿದ್ದಾಗಿ ಸ್ವ ಇಚ್ಛೆ ಹೇಳಿಕೆಯನ್ನು ಪ್ರದೂಶ್‌ ನೀಡಿದ್ದಾನೆ.

Renukaswamy case shubha punja
Renukaswamy case ragini

ಆದರೆ ಶುಭ ಪೂಂಜಾ ಹಾಗೂ ರಾಗೀಣಿ ದ್ವಿವೇದಿ ಅಶ್ಲೀಲ ಮಸೇಜ್‌ ಬಂದಿರುವುದನ್ನು ತಳ್ಳಿ ಹಾಕಿದ್ದಾರೆ. ಚಾರ್ಜ್ ಶೀಟ್‌ನಲ್ಲಿ ಹೆಸರು ಉಲ್ಲೇಖವಾಗಿರುವ ಬಗ್ಗೆ ನಟಿ ಶುಭ ಪೂಂಜಾ ಪೋಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿಯಿಂದ ನನ್ನ ಪ್ರೊಫೈಲ್‌ಗೆ ಯಾವುದೇ ಮೆಸೇಜ್ ಬಂದಿಲ್ಲ. ನನ್ನ ಹೆಸರಿನ ಬೇರೆ ಪ್ರೊಫೈಲ್‌ಗಳಿಗೆ ಬಂದಿರುವ ಬಗ್ಗೆಯೂ ಗೊತ್ತಿಲ್ಲ. ಆದರೆ ನನ್ನ ಪ್ರೊಫೈಲ್‌ಗೆ ಯಾವುದೇ ಮೆಸೇಜ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Renukaswamy case ragini
Renukaswamy case ragini

ಚಾರ್ಜ್ ಶೀಟ್‌ನಲ್ಲಿ ಹೆಸರು ಉಲ್ಲೇಖವಾಗಿರುವ ಬಗ್ಗೆ ನಟಿ ರಾಗಿಣಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಫೇಕ್ ಪ್ರೊಫೈಲ್‌ಗಳಿಂದ ನಿತ್ಯವೂ ಇಂತಹ ಮೆಸೇಜ್‌ಗಳು ಬರುತ್ತವೆ. ಅದರ ಬಗ್ಗೆ ನಾನು ತುಂಬಾ ತಲೆ ಕೆಡಿಸಿಕೊಳ್ಳಲ್ಲ. ಅಷ್ಟಕ್ಕೂ ಯಾವ ಪ್ರೊಫೈಲ್‌ನಿಂದ ಮೆಸೇಜ್ ಬಂದಿದೆ ಎಂಬುದರ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಯಾಕಂದರೆ ನನ್ನ ಸೋಶಿಯಲ್ ಮೀಡಿಯಾ ಪ್ರೊಫೈಲ್‌ನ ನಾನು ನೋಡಿಕೊಳ್ಳಲ್ಲ. ಸಿಂಗಾಪುರ್ ಮೂಲದ ಏಜೆ‌ಸ್ಸಿಗೆ ವಹಿಸಿದ್ದೇನೆ. ಏನೇ ಬಂದರು ಅದನ್ನು ಅವರು ಹ್ಯಾಂಡಲ್ ಮಾಡುತ್ತಾರೆ. ಹೀಗಾಗಿ ಯಾವ ಮೆಸೇಜ್ ಬಗ್ಗೆಯೂ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Ibbani thabbida ileyali :ಇಬ್ಬನಿ ತಬ್ಬಿದ ಇಳೆಯಲಿ; ಪ್ರೇಮಕಾವ್ಯವನ್ನು ತಬ್ಬಿದ ನಿರ್ದೇಶಕ-ತಬ್ಬಿಬ್ಬಾದ ಪ್ರೇಕ್ಷಕ

ಚಿಕ್ಕಣ್ಣ ಇದ್ದಾಗಲೇ ರೇಣುಕಾಸ್ವಾಮಿ ಬಗ್ಗೆ ಚರ್ಚೆ ಆಯ್ತಾ?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಚಾರ್ಜ್​ಶೀಟ್​ನಲ್ಲಿ ನಟ ಚಿಕ್ಕಣ್ಣನ ಹೇಳಿಕೆಯೂ ಉಲ್ಲೇಖವಾಗಿದೆ. ಅಂದು ಸ್ಟೋನಿಬ್ರೂಕ್​​ನಲ್ಲಿ ದರ್ಶನ್​ ಭೇಟಿ ಮಾಡಿದ್ದ ಚಿಕ್ಕಣ್ಣ ಪೊಲೀಸರಿಗೆ ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ಜೂನ್ 8ರಂದು ಎ.ಪಿ ಅರ್ಜುನ್ ಕಛೇರಿಯಲ್ಲಿ ನನ್ನ ಮುಂದಿನ ಚಿತ್ರದ ಬಗ್ಗೆ ಚರ್ಚೆ‌ ಮಾಡುತ್ತಿದ್ದೆ. ಆಗ ನಟ ಯಶಸ್ ಕರೆ ಮಾಡಿ ದರ್ಶನ್ ಮಧ್ಯಾಹ್ನ ಸ್ಟೋನಿ ಬ್ರೂಕ್ ನಲ್ಲಿ ಊಟ ಅರೆಂಜ್ ಮಾಡಿದ್ದಾರೆ. ನಿನಗೆ ಕರೆ ಮಾಡಿ ತಿಳಿಸುವಂತೆ ಸೂಚಿಸಿದ್ದಾರೆ, ಡೈರೆಕ್ಟಾಗಿ ಸ್ಟೋನಿ ಬ್ರೂಕ್ ಬರುವಂತೆ ಹೇಳಿದ್ದರು. ನಾನು ಬರಲು ಟ್ರೈ ಮಾಡುತ್ತೇನೆಂದು ಯಶಸ್‌ಗೆ ತಿಳಿಸಿದೆ.

ಆದರೆ 10 ನಿಮಿಷಗಳ ನಂತರ ದರ್ಶನ್ ನನಗೆ ಕರೆ ಮಾಡಿ ಬರುವಂತೆ ತಿಳಿಸಿದರುನಾನು ಮನೆಗೆ ಬಂದು ಬಟ್ಟೆ ಬದಲಾಯಿಸಿಕೊಂಡು 02-45ಕ್ಕೆ‌‌ ನನ್ನ ಖಾಸಗಿ ವಾಹನದಲ್ಲಿ ಡ್ರೈವರ್ ಸಿದ್ದು ಜತೆಯಲ್ಲಿ ಸ್ಟೋನಿ ಬ್ರೂಕ್‌ಗೆ ಹೋಗಿದ್ದೆ. ನಾನು ಸಿದ್ದುನನ್ನು ಕಾರಲ್ಲಿ ಬಿಟ್ಟು ಡಿ ಬಾಸ್ ಸಫಾರಿ ಎಂಬ ಲಾಂಜ್‌ಗೆ ತೆರಳಿದೆ. ಅಲ್ಲಿ ದರ್ಶನ್, ವಿನಯ್, ಪ್ರದೂಷ್, ಯಶಸ್, ನಾಗರಾಜು ಊಟ ಮಾಡುತ್ತಿದ್ದರು. ​​ನಾನು ಕುಳಿತುಕೊಂಡು ನನ್ನ ಮುಂದಿನ ಚಿತ್ರದ ಬಗ್ಗೆ ಮಾತನಾಡುತ್ತಾ, ಊಟ ಮಾಡಿದೆ.

ಆಗ ಪವನ್, ದರ್ಶನ್ ಬಳಿಗೆ ಬಂದು ಕಿವಿಯಲ್ಲಿ ಯಾವುದೋ ವಿಚಾರ ತಿಳಿಸಿದರು. ವಿಷಯ ತಿಳಿಸಿದ ನಂತರ ದರ್ಶನ್ ಮುಖಭಾವ ಬದಲಾವಣೆಯಾಗಿತ್ತು. ನಂತರ ದರ್ಶನ್ ಯಾರಿಗೋ ಕರೆ ಮಾಡಿ ಗಂಭೀರವಾಗಿ ಯಾವುದೋ ವಿಚಾರದ ಬಗ್ಗೆ ಚರ್ಚೆ ಮಾಡಿದರು. ನಂತರ ಚಿಕ್ಕಣ್ಣ ನೀನು ಹೊರಡು ನಮಗೆ ಬೇರೆ ಕೆಲಸ ಇದೆ ಎಂದು ದರ್ಶನ್ ತಿಳಿಸಿದರು. ಹೀಗಾಗಿ ಎಲ್ಲರೂ ಒಟ್ಟಿಗೆ ಕೆಳಗೆ ಬಂದಿದ್ದು‌. ನಾನು ಅಲ್ಲಿಂದ ಹೊರಟು ಹೋದೆ. ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನದಲ್ಲಿ ದರ್ಶನ್, ಪ್ರದೂಷ್ ಹಾಗೂ ವಿನಯ್ ಹಾಗೂ ನಾಗರಾಜು ಬಿಳಿ ಬಣ್ಣದ ಸ್ಕಾರ್ಪಿಯೋ ವಾಹನವಲ್ಲಿ ಅಲ್ಲಿಂದ ಹೋದರು.

ಜೂನ್ 10 ರಂದು ನನ್ನ ಸ್ನೇಹಿತ ನಾಗೇಂದ್ರ ನನಗೆ ಕರೆ ಮಾಡಿ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದ್ದರು. ನಾನು ಕೊಲೆಯ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ನೋಡಿದ್ದೆ. ದರ್ಶನ್ ಕಿವಿಯಲ್ಲಿ ಬಂದು ಏನೋ ಹೇಳಿದ್ದ ಪವನ್‌ನನ್ನು ಸಹ ಬಂಧಿಸಿರುವುದು ತಿಳಿದು ಬಂದಿತ್ತು. ನಾನು ಸಿನಿಮಾ ಇಂಡಸ್ಟ್ರಿಯಲ್ಲಿ ನಾಯಕ ನಟ ಹಾಗೂ ಹಾಸ್ಯ ನಟನಾಗಿದ್ದೇನೆ. ನನಗೆ ದರ್ಶನ್ ಬುಲ್ ಬುಲ್ ಚಿತ್ರದ ಸಮಯದಿಂದ ಪರಿಚಯವಾಗಿರುತ್ತದೆ. ನಾನು ಅವರೊಂದಿಗೆ ಸುಮಾರು 03 ಚಿತ್ರಗಳಲ್ಲಿ ಹಾಸ್ಯನಟನಾಗಿ ಕೆಲಸ ಮಾಡಿದ್ದೇನೆ. ರಾಬರ್ಟ್ ಸಿನಿಮಾದ ವೇಳೆ ಹೆಚ್ಚಾಗಿ ಅವರೊಂದಿಗೆ ಒಡನಾಟ ಹೊಂದಿದ್ದೆ. ದರ್ಶನ್- ಪವಿತ್ರಗೌಡ ಜತೆಗೆ ಲಿವಿಂಗ್ ರಿಲೇಷನ್‌ನಲ್ಲಿ ಇದ್ದ ಬಗ್ಗೆ ನನಗೆ ತಿಳಿದಿದೆ ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Self Harming
ವಿಜಯನಗರ36 seconds ago

Self Harming : ಮುದ್ದಾದ ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದಳು; ಬಳಿಕ ತಾನೂ ನೇಣಿಗೆ ಶರಣಾದಳು ತಾಯಿ

Kidnap case
ಚಿತ್ರದುರ್ಗ23 mins ago

Kidnap case : ಚಿತ್ರದುರ್ಗದಲ್ಲಿ ಹಾಡಹಗಲೇ ಮುಸ್ಲಿಂ ಬಾಲಕಿ ಕಿಡ್ನ್ಯಾಪ್‌ಗೆ ಯತ್ನ; ಸಿಕ್ಕಿ ಬಿದ್ದ ಅಪಹರಣಕೋರರಿಗೆ ಧರ್ಮದೇಟು

Road Accident
ಚಿಕ್ಕಬಳ್ಳಾಪುರ2 hours ago

Road Accident : ಕಾರಿನ ಮೇಲೆ ಉರುಳಿ ಬಿದ್ದ ಟೊಮ್ಯಾಟೊ ತುಂಬಿದ ಲಾರಿ; ಮೂವರು ಸ್ಥಳದಲ್ಲೇ ದುರ್ಮರಣ

Murder case
ಹಾಸನ3 hours ago

Murder Case : ಹಾಸನದಲ್ಲಿ ಚಾಕುವಿನಿಂದ ಇರಿದು ವಾಟರ್‌ಮ್ಯಾನ್‌ನ ಬರ್ಬರವಾಗಿ ಕೊಂದ ರೌಡಿಶೀಟರ್‌

FIR registered against MLA Munirathna and four others
ರಾಜಕೀಯ4 hours ago

MLA Muniratna : ಲಂಚಕ್ಕಾಗಿ ಗುತ್ತಿಗೆದಾರನಿಗೆ ಜೀವ ಬೆದರಿಕೆ; ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

Hindi Imposition
ಬೆಂಗಳೂರು4 hours ago

Hindi Imposition : ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಕರವೇ; ಕಪ್ಪು ದಿನವನ್ನಾಗಿ ಆಚರಣೆ

Murder case
ಬೆಂಗಳೂರು5 hours ago

Murder case:ಪ್ರಿಯಕರನೊಟ್ಟಿಗೆ ಏಕಾಂತದಲ್ಲಿರುವಾಗಲೇ ಮಗಳು ಲಾಕ್‌; ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿಯನ್ನೇ ಕೊಂದಳು ಪಾಪಿ

They have done a disservice to the Constitution Congress has exposed its true colours Hariprakash Koonemane
ರಾಜಕೀಯ6 hours ago

Hariprakash Konemane: ದಲಿತೋದ್ಧಾರದ ಮಾತುಗಳು ಮೊಸಳೆ ಕಣ್ಣೀರಷ್ಟೇ; ಕಾಂಗ್ರೆಸ್ ತನ್ನ ನಿಜಬಣ್ಣ ತೆರೆದಿಟ್ಟಿದೆ- ಹರಿಪ್ರಕಾಶ್ ಕೋಣೆಮನೆ

dina bhavishya
ಭವಿಷ್ಯ11 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರ

Minister Pralhad Joshi warns Mandya SP not to come under political pressure
ಹುಬ್ಬಳ್ಳಿ21 hours ago

Pralhad Joshi: ರಾಜಕೀಯ ಒತ್ತಡಕ್ಕೆ ಒಳಗಾಗಿ ಹುಚ್ಚಾಟ ಮಾಡ್ಬೇಡಿ; ಮಂಡ್ಯ ಎಸ್‌ಪಿಗೆ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 year ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌