MLA Muniratna : ಬಿಬಿಎಂಪಿ ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ; ತಲೆಮರೆಸಿಕೊಂಡಿದ್ದ ಶಾಸಕ ಮುನಿರತ್ನ ಕೋಲಾರದಲ್ಲಿ ಅರೆಸ್ಟ್‌ - Vistara News

ರಾಜಕೀಯ

MLA Muniratna : ಬಿಬಿಎಂಪಿ ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ; ತಲೆಮರೆಸಿಕೊಂಡಿದ್ದ ಶಾಸಕ ಮುನಿರತ್ನ ಕೋಲಾರದಲ್ಲಿ ಅರೆಸ್ಟ್‌

MLA Muniratna : ಎಫ್‌ಐಆರ್ ದಾಖಲಾಗುತ್ತಿದ್ದಂತೆ ನಾಪತ್ತೆ ಆಗಿದ್ದ ಮಾಜಿ ಸಚಿವ ಕಂ ಶಾಸಕ ಮುನಿರತ್ನರನ್ನು ಕೋಲಾರ ಪೊಲೀಸರ ಸಹಾಯದೊಂದಿಗೆ ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

a case of threat to the contractor Absconding MLA Munirathna arrested in Kolar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಬಿಬಿಎಂಪಿ ಗುತ್ತಿಗೆದಾರನಿಗೆ ಲಂಚ ಕೇಳಿದ್ದಲ್ಲದೇ ಜಾತಿ ನಿಂದನೆ ಹಾಗೂ ಜೀವಬೆದರಿಕೆ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಶಾಸಕ ಮುನಿರತ್ನ ವಿರುದ್ಧ (MLA Muniratna) ದೂರು ದಾಖಲಾಗಿತ್ತು. ಇತ್ತ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶಾಸಕ ಮುನಿರತ್ನರನ್ನು ಕೋಲಾರ ಜಿಲ್ಲೆಯ ನಂಗಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತವರು ಜಿಲ್ಲೆಯಾದ ಆಂಧ್ರಪ್ರದೇಶದ ಚಿತ್ತೂರಿಗೆ ಪಲಾಯಾನ‌ ಮಾಡುವ ವೇಳೆ ಮುನಿರತ್ನರನ್ನು ಅರೆಸ್ಟ್‌ ಮಾಡಲಾಗಿದೆ. ಗುತ್ತಿಗೆದಾರ ಚೆಲುವರಾಜು ಸಿಎಂ ಸಿದ್ದರಾಮಯ್ಯಗೆ ಮನವಿ ಕೊಟ್ಟ ಒಂದೇ ಗಂಟೆಯಲ್ಲಿ ಪೊಲೀಸರು ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ.

ಕೋಲಾರ ಪೊಲೀಸರ ನೆರವಿನೊಂದಿಗೆ ಮುಳಬಾಗಲು ತಾಲ್ಲೂಕಿನ ನಂಗಲಿ ಬಳಿ ವಶಕ್ಕೆ ಪಡೆಯಲಾಗಿದೆ. ಕೋಲಾರ ಮಾರ್ಗವಾಗಿ ಆಂದ್ರಪ್ರದೇಶಕ್ಕೆ ತೆರಳುತ್ತಿದ್ದ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುನಿರತ್ನರನ್ನು ವಶಕ್ಕೆ ಪಡೆದು ಕೋಲಾರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದಾರೆ.

ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ಎಂದು ಬೆದರಿಕೆ

ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ಈ ಕುರಿತು ಮಾತನಾಡಿದ್ದು, ನನ್ನ ಕರೆಸಿ ಬೆದರಿಕೆ ಹಾಕಿ 20 ಲಕ್ಷ ರೂ. ಹಣ ಕೇಳಿದ್ದಾರೆ. ನಾನು ಆತ್ಮಹತ್ಯೆಗೂ ಯತ್ನಿಸಿದ್ದೆ, ಆದರೆ ನನ್ನ ಕುಟುಂಬದ ಸಲುವಾಗಿ ಉಳಿದುಕೊಂಡಿದ್ದೇನೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ನೋಡು.. ರೇಣುಕಾಸ್ವಾಮಿಗೆ ಗತಿ ಕಾಣಿಸಿದ್ದು ನಮ್ಮ ಅಕ್ಕನ ಮಗ ಎಂದು ಬೆದರಿಕೆ ಹಾಕಿದ್ದರಂತೆ. ನನ್ನ ಬಳಿ ನಿನ್ನನ್ನು ಮುಗಿಸಲು ನೂರು ಪ್ಲ್ಯಾನ್ ಇದೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಶಾಸಕ ಮುನಿರತ್ನ ಆಪ್ತನಾಗಿರುವ ವಸಂತ್ ಕುಮಾರ್ ಕೂಡ ಚೆಲುವರಾಜುಗೆ ಬೆದರಿಕೆ ಹಾಕಿದ್ದನಂತೆ. ರೇಣುಕಾಸ್ವಾಮಿಯನ್ನು ಕೊಂದ ಹಾಗೇ ನಿನ್ನನ್ನು ಕೊಂದು ಹಾಕುತ್ತಾರೆ. ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ಯಾರು ಗೊತ್ತಾ? ಮುನಿರತ್ನ ಅವರ ತಂಗಿ ಮಗಾನೇ. ಸುಮ್ಮನೆ ಅವರು ಹೇಳಿದ್ದಂತೆ ಕೇಳು ಎಂದು ಚೆಲುವರಾಜುಗೆ ವಸಂತ್ ಕುಮಾರ್ ಮುಖಾಂತರ ಸೂಚನೆ ನೀಡಿ ಬೆದರಿಕೆ ಹಾಕಿಸಿದ್ದರಂತೆ.

ಅವಾಚ್ಯ ಶಬ್ಧಗಳಿಂದ ನಿಂದನೆ

ಶಾಸಕ ಮುನಿರತ್ನ ವಿರುದ್ಧ ಲಂಚ ಬೇಡಿಕೆ ಆರೋಪ ಕೇಳಿ ಬಂದಿದೆ. ಬಿಬಿಎಂಪಿ ವಾರ್ಡ್ ನಂ 42 ಲಕ್ಷ್ಮಿದೇವಿನಗರ ವಾರ್ಡ್‌ನಲ್ಲಿ ಘನ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ನಿರ್ವಹಣೆ ಸಂಬಂಧಿಸಿದಂತೆ ಗುತ್ತಿಗೆದಾರ ಚೆಲುವರಾಜುಗೆ ಲಂಚ ನೀಡುವಂತೆ ತೊಂದರೆ ಹಾಗೂ ಜೀವಬೆದರಿಕೆ ನೀಡಿದ್ದರಂತೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಗುತ್ತಿಗೆದಾರ ಚೆಲುವರಾಜು ಆರೋಪಿಸಿದ್ದರು. ಮೆ. ಗಂಗಾ ಎಂಟರ್ ಪ್ರೈಸಸ್ ಎಂಬ ಕಂಪನಿ ಹೆಸರಿನಲ್ಲಿ ಚೆಲುವರಾಜು ಗುತ್ತಿಗೆ ಕೆಲಸ ಮಾಡುತ್ತಿದ್ದಾರೆ. ಲಕ್ಷ್ಮೀದೇವಿ ನಗರ ವಾರ್ಡ್ ನ ಡಿ. ದೇವರಾಜು ಅರಸು ಟ್ರಕ್ ಟರ್ಮಿನಲ್ ಪ್ರದೇಶದಲ್ಲಿ ಚೆಲುವರಾಜು ಕಸ ಸಂಗ್ರಹ‌ದ ಗುತ್ತಿಗೆ ಪಡೆದಿದ್ದಾರೆ. ಆದರೆ ಮುನಿರತ್ನ ಚೆಲುವರಾಜುಗೆ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರಂತೆ. ಜತೆಗೆ ಜೀವ ಬೆದರಿಕೆ ಹಾಕುತ್ತಿದ್ದರಂತೆ.

ನಾನು ಮಾಗಡಿ ತಾಲೂಕಿನವನು. ಬಿಬಿಎಂಪಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದೆ. ನಂತರ ಟ್ರಕ್ ಡ್ರೈವರ್ ಆಗಿ ಬಳಿಕ ಕಸ ಸಂಗ್ರಹದ ಗುತ್ತಿಗೆದಾರನಾದೆ. ಒಂದು ದಿನ ಎಂಎಲ್‌ಎ ಗನ್ ಮ್ಯಾನ್ ವಿಜಯ್ ನನಗೆ ಕರೆ ಮಾಡಿದ್ದರು. ವೈಯ್ಯಾಲಿಕಾವಲ್‌ನಲ್ಲಿರುವ ಅವರ ಮನೆಗೆ ಹೋಗಿ ಮುನಿರತ್ನ ಅವರನ್ನು ಭೇಟಿಯಾದೆ. ನಿನಗೆ 10 ಆಟೋ ಕೊಡಿಸುತ್ತೀನಿ, 20 ಲಕ್ಷ ಕೊಡು ಎಂದು ಹೇಳಿದರು. ನಾನು 20 ಲಕ್ಷ ಕೊಟ್ಟೆ, ಆದರೆ ಆಟೋ ಕೊಡಿಸಿಲ್ಲ ಕೇವಲ ಶಿಫಾರಸು ಪತ್ರ ಕೊಟ್ಟು ಸುಮ್ಮನಾದರು.

ಜೂನ್ ತಿಂಗಳಲ್ಲಿ ಮತ್ತೆ ಎಂ ಎಲ್ ಎ ಮುನಿರತ್ನ ನನಗೆ ಕರೆ ಮಾಡಿ, ಮನೆಗೆ ಬಾ ಅಂತಾ ಕರೆದರು. ಆದರೆ ನಾನು ಹೋಗಲಿಲ್ಲ. ನಂತರ ಅಧಿಕೃತವಾಗಿ ಎಂಎಲ್‌ಎ ಪಿಎಸ್ ಪತ್ರ ಬರೆದು ಸಭೆಗೆ ಕರೆದರು. ಸಭೆಗೆ ಹೋದಾಗ ಬಾಯಿಗೆ ಬಂದಹಾಗೇ ಅವಾಚ್ಯ ಶಬ್ಧಗಳಿಂದ ಬೈದರು. ನನ್ನ ಟೆಂಡರ್ ರದ್ದು ಮಾಡಲು ಆಯುಕ್ತರಿಗೆ ಎಂಎಲ್‌ಎ ಪತ್ರ ಬರೆದರು. ನಂತರ ಮತ್ತೆ 30 ಲಕ್ಷ ದುಡ್ಡು ಕೊಡು ಎಂದರು. ಹಣ ಕೊಡದೆ ಇದ್ದಾಗ ಮತ್ತೆ ಆಯುಕ್ತರಿಗೆ ನನ್ನ ಟೆಂಡರ್ ರದ್ದು ಮಾಡುವಂತೆ ಪತ್ರ ಬರೆದರು. ಅವರ ಮನೆಗೆ ಹೋದಾಗಲೆಲ್ಲ ಬಾಯಿಗೆ ಬಂದ ಹಾಗೇ ಬೈದು ಸಾಯಿಸುತ್ತೇನೆ ಎಂದು ಅವಾಜ್ ಹಾಕಿದ್ದರಂತೆ.

ನನ್ನಗೆ 11 ಕೋಟಿ ಅರಿಯರ್ಸ್ ಬಂದಾಗ, ಅದರಲ್ಲೂ ದುಡ್ಡು ಕೊಡು ಎಂದು ಕಿರುಕುಳ‌ ಕೊಟ್ಟರು. ಬೇರೆ ಗುತ್ತಿಗೆದಾರರ ಮುಖಾಂತರ ಹಣ ನೀಡುವಂತೆ ಕಿರುಕುಳ ನೀಡಲು ಶುರುಮಾಡಿದರು. ಸೆ. 9ರಂದು ಮತ್ತೆ ಜೀವ ಬೆದರಿಕೆ ಹಾಕಿ, ರೇಣುಕಾಸ್ವಾಮಿ ಮಾದರಿಯಲ್ಲೇ ಕೊಲೆ ಮಾಡ್ತೇವೆ ಎಂದು ಮುನಿರತ್ನ ಆಪ್ತ ವಸಂತಕುಮಾರ್ ಬೆದರಿಕೆ ಹಾಕಿದ್ದಾನೆ. ಮೇ 18ರಂದು ನಿನ್ನ ಹೆಂಡತಿ ಚೆನ್ನಾಗಿದ್ದರೆ ಫೋಟೊ ತೋರಿಸೋ ಎಂದು
ಹೆಂಡತಿ ಬಗ್ಗೆ ಅವಾಚ್ಯ ಶಬ್ಧದಿಂದ ನಿಂದಿಸಿದ್ದಾರೆ.

ಮುನಿರತ್ನ ಫೋನ್‌ ಸ್ವಿಚ್ಡ್‌ ಆಫ್

ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ವೈಯ್ಯಾಲಿಕಾವಲ್ ಪೊಲೀಸರಿಂದ‌ ಮುನಿರತ್ನಗಾಗಿ ಹುಡುಕಾಟ ನಡೆಸಿದ್ದರು. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆ ಆಗಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಮುನಿರತ್ನ ಮನೆ ಬಳಿ ಪೊಲೀಸ್ ಭದ್ರತೆ ನೀಡಲಾಗಿತ್ತು. ಪ್ರತಿಭಟನೆ ಕೂಡ‌ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲೂ ಒಂದು ಕೆಎಸ್ಆರ್ಪಿಸಿ ತುಕಡಿ ನಿಯೋಜನೆ ಮಾಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

MLA Muniratna : ಲಂಚಕ್ಕಾಗಿ ಗುತ್ತಿಗೆದಾರನಿಗೆ ಜೀವ ಬೆದರಿಕೆ; ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

MLA Muniratna : ಲಂಚಕ್ಕೆ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರ ಚೆಲುವರಾಜು ನೀಡಿದ ದೂರಿನ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

By

FIR registered against MLA Munirathna and four others
ಶಾಸಕ ಮುನಿರತ್ನ ಹಾಗೂ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು
Koo

ಬೆಂಗಳೂರು: ಮಾಜಿ ಸಚಿವ, ಶಾಸಕ ಮುನಿರತ್ನ (MLA Muniratna) ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ್ದು, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ದೂರು ದಾಖಲಾಗಿದೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, A-1 ಮಾಜಿ ಸಚಿವ ಮುನಿರತ್ನ, A-2-ಆಪ್ತ ಸಹಾಯಕ ವಿ.ಜಿ ಕುಮಾರ್, A-3 ಸೆಕ್ಯೂರಿಟಿ ಅಭಿಷೇಕ್ , A-4 ವಸಂತ್ ಕುಮಾರ್ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಗುತ್ತಿಗೆದಾರನ ಬಳಿ ಲಂಚಕ್ಕೆ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಚೆಲುವರಾಜು ಎಂಬುವವರು ನಿನ್ನೆ ಶುಕ್ರವಾರ ಸುದ್ದಿಗೋಷ್ಠಿ ‌ನಡೆಸಿ ಆಡಿಯೋ ಬಿಡುಗಡೆ ಮಾಡಿದ್ದರು. ಚೆಲವರಾಜು ನೀಡಿದ ದೂರಿನ ಒಂದು ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ ದಾಖಲಾಗಿದ್ದರೆ, ಮಾಜಿ ಕಾರ್ಪೋರೇಟರ್‌ ವೇಲು‌ ನಾಯ್ಕರ್ ನೀಡಿದ ದೂರಿನ ಮೇರೆಗೆ ಜಾತಿ ನಿಂದನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ಎಂದು ಬೆದರಿಕೆ

ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ಈ ಕುರಿತು ಮಾತನಾಡಿದ್ದು, ನನ್ನ ಕರೆಸಿ ಬೆದರಿಕೆ ಹಾಕಿ 20 ಲಕ್ಷ ರೂ. ಹಣ ಕೇಳಿದ್ದಾರೆ. ನಾನು ಆತ್ಮಹತ್ಯೆಗೂ ಯತ್ನಿಸಿದ್ದೆ, ಆದರೆ ನನ್ನ ಕುಟುಂಬದ ಸಲುವಾಗಿ ಉಳಿದುಕೊಂಡಿದ್ದೇನೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ನೋಡು.. ರೇಣುಕಾಸ್ವಾಮಿಗೆ ಗತಿ ಕಾಣಿಸಿದ್ದು ನಮ್ಮ ಅಕ್ಕನ ಮಗ ಎಂದು ಬೆದರಿಕೆ ಹಾಕಿದ್ದರಂತೆ. ನನ್ನ ಬಳಿ ನಿನ್ನನ್ನು ಮುಗಿಸಲು ನೂರು ಪ್ಲ್ಯಾನ್ ಇದೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಶಾಸಕ ಮುನಿರತ್ನ ಆಪ್ತನಾಗಿರುವ ವಸಂತ್ ಕುಮಾರ್ ಕೂಡ ಚೆಲುವರಾಜುಗೆ ಬೆದರಿಕೆ ಹಾಕಿದ್ದನಂತೆ. ರೇಣುಕಾಸ್ವಾಮಿಯನ್ನು ಕೊಂದ ಹಾಗೇ ನಿನ್ನನ್ನು ಕೊಂದು ಹಾಕುತ್ತಾರೆ. ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ಯಾರು ಗೊತ್ತಾ? ಮುನಿರತ್ನ ಅವರ ತಂಗಿ ಮಗಾನೇ. ಸುಮ್ಮನೆ ಅವರು ಹೇಳಿದ್ದಂತೆ ಕೇಳು ಎಂದು ಚೆಲುವರಾಜುಗೆ ವಸಂತ್ ಕುಮಾರ್ ಮುಖಾಂತರ ಸೂಚನೆ ನೀಡಿ ಬೆದರಿಕೆ ಹಾಕಿಸಿದ್ದರಂತೆ.

ಅವಾಚ್ಯ ಶಬ್ಧಗಳಿಂದ ನಿಂದನೆ

ಶಾಸಕ ಮುನಿರತ್ನ ವಿರುದ್ಧ ಲಂಚ ಬೇಡಿಕೆ ಆರೋಪ ಕೇಳಿ ಬಂದಿದೆ. ಬಿಬಿಎಂಪಿ ವಾರ್ಡ್ ನಂ 42 ಲಕ್ಷ್ಮಿದೇವಿನಗರ ವಾರ್ಡ್‌ನಲ್ಲಿ ಘನ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ನಿರ್ವಹಣೆ ಸಂಬಂಧಿಸಿದಂತೆ ಗುತ್ತಿಗೆದಾರ ಚೆಲುವರಾಜುಗೆ ಲಂಚ ನೀಡುವಂತೆ ತೊಂದರೆ ಹಾಗೂ ಜೀವಬೆದರಿಕೆ ನೀಡಿದ್ದರಂತೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಗುತ್ತಿಗೆದಾರ ಚೆಲುವರಾಜು ಆರೋಪಿಸಿದ್ದರು. ಮೆ. ಗಂಗಾ ಎಂಟರ್ ಪ್ರೈಸಸ್ ಎಂಬ ಕಂಪನಿ ಹೆಸರಿನಲ್ಲಿ ಚೆಲುವರಾಜು ಗುತ್ತಿಗೆ ಕೆಲಸ ಮಾಡುತ್ತಿದ್ದಾರೆ. ಲಕ್ಷ್ಮೀದೇವಿ ನಗರ ವಾರ್ಡ್ ನ ಡಿ. ದೇವರಾಜು ಅರಸು ಟ್ರಕ್ ಟರ್ಮಿನಲ್ ಪ್ರದೇಶದಲ್ಲಿ ಚೆಲುವರಾಜು ಕಸ ಸಂಗ್ರಹ‌ದ ಗುತ್ತಿಗೆ ಪಡೆದಿದ್ದಾರೆ. ಆದರೆ ಮುನಿರತ್ನ ಚೆಲುವರಾಜುಗೆ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರಂತೆ. ಜತೆಗೆ ಜೀವ ಬೆದರಿಕೆ ಹಾಕುತ್ತಿದ್ದರಂತೆ.

ನಾನು ಮಾಗಡಿ ತಾಲೂಕಿನವನು. ಬಿಬಿಎಂಪಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದೆ. ನಂತರ ಟ್ರಕ್ ಡ್ರೈವರ್ ಆಗಿ ಬಳಿಕ ಕಸ ಸಂಗ್ರಹದ ಗುತ್ತಿಗೆದಾರನಾದೆ. ಒಂದು ದಿನ ಎಂಎಲ್‌ಎ ಗನ್ ಮ್ಯಾನ್ ವಿಜಯ್ ನನಗೆ ಕರೆ ಮಾಡಿದ್ದರು. ವೈಯ್ಯಾಲಿಕಾವಲ್‌ನಲ್ಲಿರುವ ಅವರ ಮನೆಗೆ ಹೋಗಿ ಮುನಿರತ್ನ ಅವರನ್ನು ಭೇಟಿಯಾದೆ. ನಿನಗೆ 10 ಆಟೋ ಕೊಡಿಸುತ್ತೀನಿ, 20 ಲಕ್ಷ ಕೊಡು ಎಂದು ಹೇಳಿದರು. ನಾನು 20 ಲಕ್ಷ ಕೊಟ್ಟೆ, ಆದರೆ ಆಟೋ ಕೊಡಿಸಿಲ್ಲ ಕೇವಲ ಶಿಫಾರಸು ಪತ್ರ ಕೊಟ್ಟು ಸುಮ್ಮನಾದರು.

ಜೂನ್ ತಿಂಗಳಲ್ಲಿ ಮತ್ತೆ ಎಂ ಎಲ್ ಎ ಮುನಿರತ್ನ ನನಗೆ ಕರೆ ಮಾಡಿ, ಮನೆಗೆ ಬಾ ಅಂತಾ ಕರೆದರು. ಆದರೆ ನಾನು ಹೋಗಲಿಲ್ಲ. ನಂತರ ಅಧಿಕೃತವಾಗಿ ಎಂಎಲ್‌ಎ ಪಿಎಸ್ ಪತ್ರ ಬರೆದು ಸಭೆಗೆ ಕರೆದರು. ಸಭೆಗೆ ಹೋದಾಗ ಬಾಯಿಗೆ ಬಂದಹಾಗೇ ಅವಾಚ್ಯ ಶಬ್ಧಗಳಿಂದ ಬೈದರು. ನನ್ನ ಟೆಂಡರ್ ರದ್ದು ಮಾಡಲು ಆಯುಕ್ತರಿಗೆ ಎಂಎಲ್‌ಎ ಪತ್ರ ಬರೆದರು. ನಂತರ ಮತ್ತೆ 30 ಲಕ್ಷ ದುಡ್ಡು ಕೊಡು ಎಂದರು. ಹಣ ಕೊಡದೆ ಇದ್ದಾಗ ಮತ್ತೆ ಆಯುಕ್ತರಿಗೆ ನನ್ನ ಟೆಂಡರ್ ರದ್ದು ಮಾಡುವಂತೆ ಪತ್ರ ಬರೆದರು. ಅವರ ಮನೆಗೆ ಹೋದಾಗಲೆಲ್ಲ ಬಾಯಿಗೆ ಬಂದ ಹಾಗೇ ಬೈದು ಸಾಯಿಸುತ್ತೇನೆ ಎಂದು ಅವಾಜ್ ಹಾಕಿದ್ದರಂತೆ.

ನನ್ನಗೆ 11 ಕೋಟಿ ಅರಿಯರ್ಸ್ ಬಂದಾಗ, ಅದರಲ್ಲೂ ದುಡ್ಡು ಕೊಡು ಎಂದು ಕಿರುಕುಳ‌ ಕೊಟ್ಟರು. ಬೇರೆ ಗುತ್ತಿಗೆದಾರರ ಮುಖಾಂತರ ಹಣ ನೀಡುವಂತೆ ಕಿರುಕುಳ ನೀಡಲು ಶುರುಮಾಡಿದರು. ಸೆ. 9ರಂದು ಮತ್ತೆ ಜೀವ ಬೆದರಿಕೆ ಹಾಕಿ, ರೇಣುಕಾಸ್ವಾಮಿ ಮಾದರಿಯಲ್ಲೇ ಕೊಲೆ ಮಾಡ್ತೇವೆ ಎಂದು ಮುನಿರತ್ನ ಆಪ್ತ ವಸಂತಕುಮಾರ್ ಬೆದರಿಕೆ ಹಾಕಿದ್ದಾನೆ. ಮೇ 18ರಂದು ನಿನ್ನ ಹೆಂಡತಿ ಚೆನ್ನಾಗಿದ್ದರೆ ಫೋಟೊ ತೋರಿಸೋ ಎಂದು
ಹೆಂಡತಿ ಬಗ್ಗೆ ಅವಾಚ್ಯ ಶಬ್ಧದಿಂದ ನಿಂದಿಸಿದ್ದಾರೆ.

ಮುನಿರತ್ನ ಫೋನ್‌ ಸ್ವಿಚ್ಡ್‌ ಆಫ್

ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ. ವೈಯ್ಯಾಲಿಕಾವಲ್ ಪೊಲೀಸರಿಂದ‌ ಮುನಿರತ್ನಗಾಗಿ ಹುಡುಕಾಟ ನಡೆಸಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಮುನಿರತ್ನ ಮನೆ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ಪ್ರತಿಭಟನೆ ಕೂಡ‌ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲೂ ಒಂದು ಕೆಎಸ್ಆರ್ಪಿಸಿ ತುಕಡಿ ನಿಯೋಜನೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Hariprakash Konemane: ದಲಿತೋದ್ಧಾರದ ಮಾತುಗಳು ಮೊಸಳೆ ಕಣ್ಣೀರಷ್ಟೇ; ಕಾಂಗ್ರೆಸ್ ತನ್ನ ನಿಜಬಣ್ಣ ತೆರೆದಿಟ್ಟಿದೆ- ಹರಿಪ್ರಕಾಶ್ ಕೋಣೆಮನೆ

Hariprakash Konemane: ರಾಹುಲ್ ಮೀಸಲಾತಿ ಕುರಿತ ಹೇಳಿಕೆ ಉದ್ದೇಶಪೂರ್ವಕವಾಗೇ ಇದೆ. ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ, ದಲಿತೋದ್ಧಾರದ ಮಾತು ಮೊಸಳೆ ಕಣ್ಣೀರು ಅಂತ ದೃಢಪಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಟೀಕಿಸಿದ್ದಾರೆ.

VISTARANEWS.COM


on

By

They have done a disservice to the Constitution Congress has exposed its true colours Hariprakash Koonemane
Koo

ಮಂಗಳೂರು: ರಾಹುಲ್ ಗಾಂಧಿ ತನ್ನ ಜತೆಗೆ ನಕ್ಸಲರು, ಮತಾಂಧರು, ಭಯೋತ್ಪಾದಕರನ್ನು ಸೇರಿಸಿಕೊಂಡು ದೇಶದ ವಿರುದ್ಧ ತಾನಿದ್ದೇನೆಂದು ತೋರಿಸುತ್ತಿದ್ದಾರೆ. ದೇಶದ ಬಗ್ಗೆ, ಸೇನೆಯ ಬಗ್ಗೆ ಅಗೌರವ ತೋರುತ್ತಿದ್ದಾರೆ. ವಿದೇಶದಲ್ಲಿ ಕುಳಿತು ಭಾರತದ ಚುನಾವಣಾ ವ್ಯವಸ್ಥೆಯನ್ನು ಟೀಕಿಸುತ್ತಿದ್ದಾರೆ. ಸೂಕ್ತ ಸಂದರ್ಭದಲ್ಲಿ ದಲಿತರ, ಹಿಂದುಳಿದವರ ಮೀಸಲು ವ್ಯವಸ್ಥೆಯನ್ನು ತೆಗೆದುಹಾಕುವುದಾಗಿ ಹೇಳುತ್ತಿದ್ದಾರೆ. ಆ ಮೂಲಕ ಸಂವಿಧಾನಕ್ಕೆ ಒಂದೆಡೆ ಅಪಚಾರ ಎಸಗಿದ್ದು, ಮತ್ತೊಂದೆಡೆ ಕಾಂಗ್ರೆಸ್ ಪಕ್ಷದ ನಿಜಬಣ್ಣವನ್ನು ತೆರೆದಿಟ್ಟಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ (Hariprakash Konemane) ಟೀಕಿಸಿದ್ದಾರೆ.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಭಾರತದ ಬಗ್ಗೆ ತಪ್ಪು ಕಲ್ಪನೆ ಬರುವ ರೀತಿ ಅಮೆರಿಕಾದಲ್ಲಿ ನಿಂತು ರಾಹುಲ್ ಮಾತನಾಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಮೀಸಲಾತಿ ವ್ಯವಸ್ಥೆ ತೆಗೆದು ಹಾಕುವುದಾಗಿ ಹೇಳಿದ್ದು, ನಾವಿದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಮೀಸಲಾತಿ ತೆಗೆಯುವ ಸೂಕ್ತ ಸಂದರ್ಭ ಯಾವುದು ಎಂಬುದನ್ನು ಕೇಳಬಯಸುತ್ತೇನೆ ಎಂದರು. ಸಮಾಜದ ಕಟ್ಟಕಡೆಯ ಕೆಳಸ್ತರದ ಜಾತಿಗಳನ್ನು ಮೇಲೆ ತರುವುದಕ್ಕಾಗಿ ಮೀಸಲಾತಿ ಅನಿವಾರ್ಯ ಎಂದು ಕೋರ್ಟ್ ಹೇಳಿದೆ ಎಂಬುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್‌ ಮುಖವಾಡ ಕಳಚಿದೆ

ರಾಹುಲ್ ಮೀಸಲಾತಿ ಕುರಿತ ಹೇಳಿಕೆ ಉದ್ದೇಶಪೂರ್ವಕವಾಗೇ ಇದೆ. 1960ರಲ್ಲಿ ಅಂದಿನ ಪ್ರಧಾನಿ ಜವಾಹರ್ ನೆಹರು ಭಾಷಣ ಮಾಡುತ್ತ ಸರ್ಕಾರಿ ವ್ಯವಸ್ಥೆಯಲ್ಲಿ ದಕ್ಷತೆ ತರುವುದಕ್ಕಾಗಿ ಮೀಸಲಾತಿ ತೆಗೆದು ಹಾಕಬೇಕೆಂದು ಹೇಳಿದ್ದರು. ಅದೇ ಹೇಳಿಕೆಯನ್ನು ಈಗ ಮರಿ ಮೊಮ್ಮಗ ಉಲ್ಲೇಖಿಸಿದ್ದಾರೆ. ಆಮೂಲಕ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ, ದಲಿತೋದ್ಧಾರದ ಮಾತು ಮೊಸಳೆ ಕಣ್ಣೀರು ಅಂತ ದೃಢಪಡಿಸಿದೆ. ಈ ಹೇಳಿಕೆಯ ಕಾರಣಕ್ಕೆ ರಾಹುಲ್ ಗಾಂಧಿ ಕೋಟ್ಯಂತರ ದಲಿತ ವರ್ಗದ, ಹಿಂದುಳಿದ ವರ್ಗದ ಕ್ಷಮೆಯಾಚನೆ ಮಾಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಪಿಎಫ್ಐ, ಎಸ್ಡಿಪಿಐ ಮತ್ತು ವಿಭಜಕ ಶಕ್ತಿಗಳು ಆಡಳಿತ ನಡೆಸುತ್ತಿರುವಂತೆ ಕಾಣುತ್ತಿದೆ. ಮೊದಲೇ ನಮಗೆ ರಾಜ್ಯದಲ್ಲಿ ಪಿಎಫ್ಐ, ಎಸ್ಡಿಪಿಐ ಅಧಿಕಾರಕ್ಕೆ ಬಂದಿದೆ ಎಂಬ ಅನುಮಾನ ಇತ್ತು. ಈಗ ಆ ಮಾತು ದೃಢವಾಗಿದೆ. ಸತತ ಎರಡನೇ ವರ್ಷವೂ ರಾಜ್ಯದಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಭೆ ಕೃತ್ಯ ನಡೆಸಿದ್ದಾರೆ. ನಾಗಮಂಗಲದ ಘಟನೆ ನೋಡಿದರೆ ಪೂರ್ವಯೋಜಿತ ಅನ್ನುವ ಸಂಶಯ ಬರುತ್ತದೆ. ಯಾಕಂದರೆ, ಅಲ್ಲಿ ಘಟನೆ ನಡೆಯುವಾಗ ಪೊಲೀಸರೇ ಇರಲಿಲ್ಲ. ಗಣೇಶನ ವಿಸರ್ಜನೆಗೆ ಭದ್ರತೆ ಕೊಡುವ ಕಾಳಜಿ ರಾಜ್ಯದ ಪೊಲೀಸರಿಗೆ, ಸರ್ಕಾರಕ್ಕೆ ಇಲ್ಲದಿರುವುದು ವಿಭಜಕ ಶಕ್ತಿ ಬಲಗೊಂಡಿರುವುದನ್ನು ಸೂಚಿಸುತ್ತದೆ ಎಂದು ಹೇಳಿದರು.

ನಾಗಮಂಗಲದಲ್ಲಿ ಗಲಭೆ ನಡೆಸಿದವರ ಜತೆಗೆ ಗಣೇಶೋತ್ಸವ ಆಯೋಜಕರ ಮೇಲೂ ಕೇಸು ದಾಖಲಿಸಿದ್ದಾರೆ. ದಾಳಿ ನಡೆಸಿದವರೊಂದಿಗೆ 26ನೇ ಆರೋಪಿಯೆಂದು ಆಯೋಜಕರನ್ನು ಸೇರಿಸಿದ್ದಾರೆ. ದೊಂಬಿ ನಡೆದು ಹತ್ತಾರು ಅಂಗಡಿ, ವಾಹನಗಳಿಗೆ ಬೆಂಕಿ ಹಾಕಿದ್ದರೂ ಅದೊಂದು ಸಣ್ಣ ಘಟನೆ, ಮರೆತು ಬಿಡಿ ಎಂದು ಗೃಹ ಸಚಿವರು ಕ್ಷುಲ್ಲಕ ಮಾತಗಳನ್ನಾಡಿದ್ದಾರೆ. ಮಂಗಳೂರಿನ ಕುಕ್ಕರ್ ಬಾಂಬ್ ಸಂದರ್ಭದಲ್ಲಿ ಡಿಕೆಶಿ ಹೇಳಿರುವ ಮಾತಿಗೂ ಪರಮೇಶ್ವರ್ ಮಾತಿಗೂ ತಾಳೆಯಾಗುತ್ತಿದೆ. ಇವರು ವಿಭಜಕ ಶಕ್ತಿಗಳ ಪರವಾಗಿದ್ದಾರೆ ಎನ್ನುವುದನ್ನು ಇದು ತೋರಿಸುತ್ತದೆ ಎಂದು ಹೇಳಿದರು.

ದೇಶ ಒಡೆಯುವುದರಲ್ಲೇ ಕಾಂಗ್ರೆಸಿಗೆ ಆಸಕ್ತಿ

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಆಗುತ್ತಿರುವುದಕ್ಕೆ ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರ ಕಾರಣ. ಅಲ್ಲಿ ದೇಶದ ಧ್ವಜ ಹಾರಿಸುವುದಕ್ಕೂ ನಿರ್ಬಂಧ ವಿಧಿಸಿದ್ದ 370 ವಿಧಿಯನ್ನು ತೆಗೆದು ಹಾಕಿ, ಉಗ್ರರನ್ನು ಸದೆಬಡಿದು ಚುನಾವಣೆ ನಡೆಸುತ್ತಿದ್ದರೆ, ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಪರವಾಗಿರುವ ರಾಜಕೀಯ ಶಕ್ತಿಗಳ ಜತೆ ನಿಂತು ತಾವು ಅಧಿಕಾರಕ್ಕೆ ಬಂದರೆ ಮತ್ತೆ ಪ್ರತ್ಯೇಕ ಸ್ಥಾನ ಕೊಡಿಸುವ 370 ವಿಧಿ ಜಾರಿಗೆ ತರುತ್ತೇವೆಂದು ಪ್ರಣಾಳಿಕೆಯಲ್ಲಿ ಹೇಳಿದೆ. ಕಾಂಗ್ರೆಸ್ ಗೆ ಈ ದೇಶವನ್ನು ಜೋಡಿಸುವುದರಲ್ಲಿ ನಂಬಿಕೆ ಇಲ್ಲ. ಜಾತಿ, ಧರ್ಮದ ಹೆಸರಲ್ಲಿ ದೇಶ ಒಡೆಯುವುದರಲ್ಲೇ ಇದೆ, ಮತ್ತೆ ದೇಶ ವಿಭಜನೆಯ ನೆನಪನ್ನು ಮಾಡಿಕೊಟ್ಟಿದೆ ಎಂದು ಹೇಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Pralhad Joshi: ರಾಜಕೀಯ ಒತ್ತಡಕ್ಕೆ ಒಳಗಾಗಿ ಹುಚ್ಚಾಟ ಮಾಡ್ಬೇಡಿ; ಮಂಡ್ಯ ಎಸ್‌ಪಿಗೆ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ

Pralhad Joshi : ನಾಗಮಂಗಲ ಗಲಭೆ ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಒಳಗಾಗಿ ಏನೇನೋ ಹುಚ್ಚಾಟ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಂಡ್ಯ ಎಸ್‌ಪಿಗೆ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

By

Minister Pralhad Joshi warns Mandya SP not to come under political pressure
Koo

ಹುಬ್ಬಳ್ಳಿ: ಮಂಡ್ಯದ ನಾಗಮಂಗಲ ಗಲಭೆ (Nagamangala Case) ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಒಳಗಾಗಿ ಏನೇನೋ ಹುಚ್ಚಾಟ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಮಂಡ್ಯ ಎಸ್‌ಪಿಗೆ ಎಚ್ಚರಿಕೆ ನೀಡಿದ್ದಾರೆ. ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಇದ್ದಂತಿದೆ. ನಿಜವಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸೂಚಿಸಿದರು. ನಾಗಮಂಗಲದಲ್ಲಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಗೆ ಎಲ್ಲದೂ ಸರ್ಕಾರದ ನಿಯಮ ಮತ್ತು ಪೊಲೀಸ್ ಇಲಾಖೆ ಅನುಮತಿ ಮೇರೆಗೆ ನಡೆದಿದೆ. ಗಲಭೆ ಖಂಡಿಸಿ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ. ಮಸೀದಿ ಇರುವುದೇ ರಸ್ತೆಯಲ್ಲಿ. ಇನ್ನು, ಇಲ್ಲಿ ಓಡಾಡಬೇಡಿ, ವಾದ್ಯ ಬರಿಸಬೇಡಿ ಎಂದರೆ ಹೇಗೆ? ಇದನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಎಂದು ಜೋಶಿ ಹರಿ ಹಾಯ್ದರು. ಗಲಭೆಯಲ್ಲಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆದವರನ್ನು ಬಿಟ್ಟು ಗಣಪತಿ ಇಟ್ಟವರನ್ನು, ಸಿಕ್ಕ ಸಿಕ್ಕವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿ ಕ್ರಮ ಜರುಗಿಸುವುದು ಸರಿಯಲ್ಲ ಎಂದು ಖಂಡಿಸಿದರು.

ಮಮತಾ ಬ್ಯಾನರ್ಜಿ ಡ್ರಾಮಾ ಬಿಟ್ಟು ರಾಜೀನಾಮೆ ನೀಡೋದು ಒಳ್ಳೇದು

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡುವುದೇ ಒಳ್ಳೆಯದು ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಮತಾ ಅವರು ರಾಜೀನಾಮೆಯ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದರು. ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಆಗಿ ಸರ್ಕಾರ ಮುನ್ನಡೆಸಲು ಅವರು ಸಮರ್ಥರಿಲ್ಲ. ಸಮರ್ಪಕ ಆಡಳಿತ ನೀಡುವಲ್ಲಿ ಅವರು ಅಸಮರ್ಥರಾಗಿದ್ದಾರೆ ಎಂದು ಪ್ರಕ್ರಿಯಿಸಿದರು. ಅಧಿಕಾರ ನೀಡಿದ ಜನರಿಗೆ ನ್ಯಾಯ ಒದಗಿಸುವಲ್ಲಿ ಸಹ ವೈಫಲ್ಯ ಕಂಡಿದ್ದಾರೆ. ಸಮುದಾಯಕ್ಕೆ ಅವಮಾನ ಮಾಡುತ್ತಲೆ ಬಂದಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸುವ ಬದಲು ರಾಜೀನಾಮೆ ನೀಡುವುದೇ ಸೂಕ್ತ ಎಂದರು. ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ. ಜನರೆದುರು ಈ ರೀತಿ ಕಣ್ಣಾ ಮುಚ್ಚಾಲೆ ಆಡುವುದು ಬೇಡ. ಬದಲಿಗೆ ರಾಜೀನಾಮೆ ನೀಡಲಿ ಎಂದರು.

ಅರವಿಂದ ಕೇಜ್ರಿವಾಲ್ ದೋಷಮುಕ್ತರಾಗಿಲ್ಲ

ದೆಹಲಿ ಸಿಎಂ ಆಗಿದ್ದ ಅರವಿಂದ ಕೇಜ್ರಿವಾಲ್ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ಅವರಿನ್ನೂ ದೋಷಮುಕ್ತರಾಗಿ ಹೊರ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು. ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ. ಈ ಹಿಂದೆ ಲಾಲೂ ಪ್ರಸಾದ್ ಯಾದವ್ ಅವರಿಗೂ ಬೇಲ್ ಸಿಕ್ಕಿತ್ತು ಆಮೇಲೆ ಶಿಕ್ಷೆಗೆ ಗುರಿಯಾದರು. ನ್ಯಾಯಾಂಗ ವ್ಯವಸ್ಥೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ನ್ಯಾಯಾಲಯ ಅವರನ್ನು ಇನ್ನೂ ಆರೋಪಮುಕ್ತ ಮಾಡಿಲ್ಲ. ಬಿಜೆಪಿಗೆ ನ್ಯಾಯಾಂಗದ ಮೇಲೆ ನಂಬಿಕೆಯಿದೆ ಎಂದು ಹೇಳಿದರು. ಹಿಂದೆ ಲಾಲೂ ಪ್ರಸಾದ ಯಾದವ್ ಅವರಿಗೂ ಬೇಲ್ ಸಿಕ್ಕಿತ್ತು. ಸಮಗ್ರ ವಿಚಾರಣೆ ಬಳಿಕ ಆರೋಪ ಸಾಬೀತಾಗಿ ಶಿಕ್ಷೆಗೆ ಒಳಗಾದರು ಎಂದು ಪ್ರಲ್ಹಾದ ಜೋಶಿ ವಿಶ್ಲೇಷಿಸಿದರು. ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಅತ್ಯುನ್ನತವಾಗಿದೆ ಮತ್ತು ಅತ್ಯಂತ ಶ್ರೇಷ್ಠವಾಗಿದೆ ಎಂಬುದಕ್ಕೆ ಇದು ನಿದರ್ಶನವಾಗಿದೆ ಎಂದರು.
ದೇಶದಲ್ಲಿ ಕೋರ್ಟ್‌ಗಳು ನ್ಯಾಯಯುತವಾಗಿ, ಅತ್ಯಂತ ನಿಷ್ಪಕ್ಷವಾಗಿ ಕೆಲಸ ಮಾಡುತ್ತಿವೆ ಎಂದು ಸಚಿವರು, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅರಿಯಲಿ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

ದೇಶವಿರೋಧಿಗಳ ಜತೆ ಕೈ ಜೋಡಿಸುವುದೇ ರಾಹುಲ್ ಗಾಂಧಿ ನಡೆ

ಭಾರತದ ವಿರೋಧಿಗಳ ಜತೆ ಕೈ ಜೋಡಿಸುವುದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಹೇಳನ ಮಾಡುವುದು ದೇಶದ್ರೋಹದ ಕೆಲಸ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ದೇಶದ್ರೋಹಿಗಳ ಜತೆ, ಭಾರತದ ವಿರೋಧಿಗಳ ಜತೆ ರಾಹುಲ್ ಗಾಂಧಿ ದೇಶದ ವಿರುದ್ಧವಾಗಿ, ಪ್ರಜಾಪ್ರಭುತ್ವವನ್ನು ವಿರೋಧಿಸುವ ರೀತಿ ಮಾತನಾಡುತ್ತಾರೆ ಎಂದು ಹರಿ ಹಾಯ್ದರು. ವಿದೇಶದಲ್ಲಿ ನಿಂತು ಭಾರತದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎನ್ನುವ ರಾಹುಲ್ ಗಾಂಧಿ, ತುರ್ತು ಪರಿಸ್ಥಿತಿ ಹೇರಿದವರು ಯಾರು? ಎಂಬುದನ್ನು ಅರಿತುಕೊಂಡು ಮಾತನಾಡಲಿ ಎಂದು ತಿರುಗೇಟು ನೀಡಿದರು. ಪ್ರಜಾಪ್ರಭುತ್ವ, ಸಮಾನತೆ ಎಂದು ಭಾಷಣ ಬಿಗಿಯುವ ರಾಹುಲ್ ಗಾಂಧಿ ಕಾಂಗ್ರೆಸ್ನಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರೇ ಪ್ರಧಾನಿ ಅಭ್ಯರ್ಥಿ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

ಇನ್ನು, ಚುನಾವಣಾ ಆಯೋಗದ ಬಗ್ಗೆ ಆರೋಪ ಮಾಡುತ್ತಾರೆ. ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶಗಳಲ್ಲಿ ಕಾಂಗ್ರೆಸ್ ಮತ್ತು ವಿಪಕ್ಷಗಳು ಗೆದ್ದಿಲ್ಲವೇ? ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್‌ನವರಿಗೆ ಪ್ರಜಾಪ್ರಭುತ್ವ, ಚುನಾವಣಾ ಆಯೋಗ, ನ್ಯಾಯಾಂಗ ಹೀಗೆ ಸಾಂವಿಧಾನಿಕವಾಗಿ ಇರುವ ಯಾವುದರ ಮೇಲೂ ನಂಬಿಕೆಯೇ ಇಲ್ಲ. ಅನುಕೂಲ ಸಿಂಧುಗಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇನ್ನೂ ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷ. ಹಾಗಾಗಿ ಪ್ರಧಾನಿ ಮೋದಿ ಸಿಜೆ ಅವರ ಮನೆಯಲ್ಲಿ ಗಣಪತಿ ಪೂಜೆ ಮಾಡಿದ್ದಕ್ಕೆ ವಿರೋಧ ಮಾಡುತ್ತಿದೆ ಎಂದು ಟೀಕಿಸಿದರು. ಹಿಂದೆ ಪ್ರಧಾನಿ ಆಗಿದ್ದ ಮನಮೋಹನ್ ಸಿಂಗ್ ಅವರು ಸಿಜೆಯವರ ಇಫ್ತೀಯಾರ್ ಕೂಟದಲ್ಲಿ ಭಾಗವಹಿಸಿದ್ದರಲ್ಲ. ಆಗೇಕೆ ಆಕ್ಷೇಪಿಸಲಿಲ್ಲ? ಎಂದು ಪ್ರಶ್ನಿಸಿದರು. ಇಲ್ಲಿ ಪ್ರಧಾನಿ ಮೋದಿ ಅವರು ಸಿಜೆ ಮನೆಗೆ ಹೋಗಿದ್ದಕ್ಕಲ್ಲ ವಿರೋಧ. ಗಣಪತಿ ಪೂಜೆ ಮಾಡಿದ್ದಕ್ಕೆ ಅವರ ವಿರೋಧ. ಹೀಗೆ ಯಾವತ್ತೂ ಹಿಂದೂ ವಿರೋಧಿಯಾಗೆ ವರ್ತಿಸುತ್ತಿದ್ದಾರೆ ಕಾಂಗ್ರೆಸ್ ನಾಯಕರು ಎಂದು ಪ್ರಲ್ಹಾದ ಜೋಶಿ ಕಿಡಿ ಕಾರಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಂಡ್ಯ

Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

Nagamangala Case : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಶುರುವಾದ ಗಲಭೆಯಿಂದಾಗಿ ಕೆಲವರ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ.

VISTARANEWS.COM


on

By

Nagamangala case
Koo

ಮಂಡ್ಯ: ನಾಗಮಂಗಲದಲ್ಲಿ (Nagamangala Case) ನಡೆದಿದ್ದ ಕೋಮು ದಳ್ಳುರಿ ಬಾರಿ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿರುವ ಈ ಗಲಭೆಯಿಂದಾಗಿ ಯಾರಿಗೆ ಅನುಕೂಲ ಆಗಿದೆಯೊ ಬಿಟ್ಟಿದೆಯೊ ಆದರೆ ಗಲಭೆ ಮಾತ್ರ ಕೆಲವರ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ.

ಶಾಂತಿಯ ತೋಟವಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಎನ್ನುವಂತೆ ಕೋಮು ದಳ್ಳುರಿ ಎಂಬುದು ದೊಡ್ಡದಾಗಿ ಸದ್ದು ಮಾಡಿದೆ. ರಾಜ್ಯದ ಘಟಾನುಗಟಿಗಳು, ರಾಜಕೀಯ ನಾಯಕರು ಇಲ್ಲಿಗೆ ಬಂದು ತಮಗೆ ಅನ್ನಿಸಿದ್ದನ್ನು ಹೇಳಿ ಹೊರಟಿದ್ದಾರೆ. ಆದರೆ ಕೆಲವು ಕುಟುಂಬಗಳು ಮಾತ್ರ ತಮ್ಮ ಬದುಕಿನ ಜೀವನೋಪಾಯಕ್ಕೆ ಆಧಾರವಾಗಿದ್ದ ಅಂಗಡಿಯನ್ನೇ ಕಳೆದುಕೊಂಡು ಬೀದಿಗೆ ಬಂದಿವೆ. ಇದ್ದದ್ದನ್ನು ಕಳೆದುಕೊಂಡಿರುವ ನಾವು ಮುಂದೇನು ಮಾಡಬೇಕು ಎಂದು ಕಣ್ಣೀರು ಹಾಕುತ್ತಿದ್ದಾರೆ.

ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಎದುರಿನಲ್ಲೇ ಪಾತ್ರೆ ವ್ಯಾಪಾರಿಯೊಬ್ಬರು ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಗಲಭೆ ಆರಂಭವಾಗುತ್ತಿದ್ದಂತೆ ಗಲಭೆಕೋರರು ಸ್ಟವ್ ಮತ್ತು ಪಾತ್ರೆ ಅಂಗಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಗಡಿಯಲ್ಲಿನ ಒಂದೇ ಒಂದು ಪಾತ್ರೆಯೂ ಉಳಿಯದಂತೆ ಬೆಂಕಿಗೆ ಆಹುತಿ ಆಗಿರುವುದು ಗಲಭೆಯ ತೀವ್ರತೆಗೆ ಸಾಕ್ಷಿಯಾಗಿದೆ. ಇನ್ನು ಗೌರಿ-ಗಣೇಶ ಹಬ್ಬ ಇದೆ ವ್ಯಾಪಾರ ಚೆನ್ನಾಗಿ ನಡೆಯಲಿದೆ ಎಂಬ ಕಾರಣಕ್ಕೆ ಬಳೆ ಮತ್ತು ಮಹಿಳೆಯರ ಅಲಂಕಾರಿಕ ವಸ್ತುಗಳನ್ನಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ಕುಟುಂಬವು ಬೀದಿಗೆ ಬಂದಿದೆ. ಯಾಕಂದ್ರೆ ದುಷ್ಕರ್ಮಿಗಳು ಬಳೆ ಅಂಗಡಿಯನ್ನೂ ಸುಟ್ಟುಹಾಕಿದ್ದಾರೆ. ಈ ಸಂಬಂಧ ಮಾತನಾಡಿದ ಅಂಗಡಿಯ ಮಾಲೀಕರು ತಮ್ಮ ಬದುಕಿಗೆ ಆಸೆಯಾಗಿದ್ದ ಅಂಗಡಿಯ ದುಸ್ಥಿತಿಯನ್ನ ಕಂಡು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Nagamangala Case: ನಾಗಮಂಗಲ ಗಲಭೆಯು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ; ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸಂಚು- ಎಚ್‌ಡಿ ಕುಮಾರಸ್ವಾಮಿ

ಬಳೆ ಮತ್ತು ಪಾತ್ರೆ ಅಂಗಡಿಗಳು ಮಾತ್ರವಲ್ಲ ಟೈಲರ್ ಸೇರಿದಂತೆ ಹಲವು ರೀತಿಯಲ್ಲಿ ಸಣ್ಣ ಪುಟ್ಟ ಅಂಗಡಿಯನ್ನಿಟ್ಟುಕೊಂಡು ಬದುಕು ಸಾಗಿಸುತ್ತಿದ್ದ ಹಲವರು ಬದುಕಿನ ಬಂಡಿಯೇ ಬೆಂಕಿಯ ಜ್ವಾಲೆಯಲ್ಲಿ ಬೆಂದು ಹೋಗಿವೆ. ನಾಗಮಂಗಲದ ಮೈಸೂರು ರಸ್ತೆಯಲ್ಲಿ ಟೈಯರ್ ಮಾರಾಟದ ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ರಿಯಾಜ್ ಕುಟುಂಬವು ತತ್ತರಿಸಿ ಹೋಗಿದೆ. ಯಾಕಂದರೆ 20 ಲಕ್ಷ ರೂ. ಬಂಡವಾಳ ಹಾಕಿಕೊಂಡು ನಾಲ್ಕು ಜನರಿಗೆ ಕೆಲಸ ಕೊಟ್ಟಿದ್ದ ರಿಜ್ವಾನ್ ಈಗ ತಾನೇ ಇನ್ನೊಬ್ಬರ ಬಳಿ ಕೆಲಸಕ್ಕೆ ಹೋಗಬೇಕಾದ ಸಂದರ್ಭ ಎದುರಾಗಿದೆ. ಗಲಭೆ ನಡೆದಿರುವ ಜಾಗಕ್ಕೂ ತಮ್ಮ ಟಯರ್ ಅಂಗಡಿ ಇರುವ ಜಾಗಕ್ಕೂ ತುಂಬಾ ದೂರ ಇದೆ. ಆದರೂ ಗಲಭೆಯಲ್ಲಿ ಟಾರ್ಗೆಟ್ ಮಾಡಿರುವ ರೀತಿಯಲ್ಲಿ ತಮ್ಮ ಟೈಯರ್ ಅಂಗಡಿಗೆ ಬೆಂಕಿ ಬಿದ್ದು, ಎಲ್ಲವೂ ನಾಶವಾಗಿದೆ. ಬದರಿಕೊಪ್ಪಲಿನ ‌ನಿವಾಸಿಗಳು ಈ ಮಾರ್ಗವಾಗಿ ಗಣೇಶ ಮೂರ್ತಿಯ ಮೆರವಣಿಗೆಯನ್ನು ತಾರದೆ ಇದ್ದರೂ ಗಲಭೆ ಆಗಿದೆ ಎಂದರು. ಇದು ರಿಜ್ವಾನ್ ಮತ್ತು ಶಾಹಿನ್ ತಾಜ್ ಅವರ ಕುಟುಂಬಕ್ಕೆ ಸೀಮಿತವಾಗಿಲ್ಲ, ಈ ಎರಡು ಕುಟುಂಬಗಳಂತೆ ಇನ್ನೂ ಹಲವು ಕುಟುಂಬಗಳು ಬದುಕಿನ‌ ಆಸರೆಯನ್ನೇ ಕಳೆದುಕೊಂಡಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
a case of threat to the contractor Absconding MLA Munirathna arrested in Kolar
ರಾಜಕೀಯ48 mins ago

MLA Muniratna : ಬಿಬಿಎಂಪಿ ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ; ತಲೆಮರೆಸಿಕೊಂಡಿದ್ದ ಶಾಸಕ ಮುನಿರತ್ನ ಕೋಲಾರದಲ್ಲಿ ಅರೆಸ್ಟ್‌

Self Harming
ವಿಜಯನಗರ3 hours ago

Self Harming : ಮುದ್ದಾದ ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದಳು; ಬಳಿಕ ತಾನೂ ನೇಣಿಗೆ ಶರಣಾದಳು ತಾಯಿ

Kidnap case
ಚಿತ್ರದುರ್ಗ3 hours ago

Kidnap case : ಚಿತ್ರದುರ್ಗದಲ್ಲಿ ಹಾಡಹಗಲೇ ಮುಸ್ಲಿಂ ಬಾಲಕಿ ಕಿಡ್ನ್ಯಾಪ್‌ಗೆ ಯತ್ನ; ಸಿಕ್ಕಿ ಬಿದ್ದ ಅಪಹರಣಕೋರರಿಗೆ ಧರ್ಮದೇಟು

Road Accident
ಚಿಕ್ಕಬಳ್ಳಾಪುರ5 hours ago

Road Accident : ಕಾರಿನ ಮೇಲೆ ಉರುಳಿ ಬಿದ್ದ ಟೊಮ್ಯಾಟೊ ತುಂಬಿದ ಲಾರಿ; ಮೂವರು ಸ್ಥಳದಲ್ಲೇ ದುರ್ಮರಣ

Murder case
ಹಾಸನ6 hours ago

Murder Case : ಹಾಸನದಲ್ಲಿ ಚಾಕುವಿನಿಂದ ಇರಿದು ವಾಟರ್‌ಮ್ಯಾನ್‌ನ ಬರ್ಬರವಾಗಿ ಕೊಂದ ರೌಡಿಶೀಟರ್‌

FIR registered against MLA Munirathna and four others
ರಾಜಕೀಯ6 hours ago

MLA Muniratna : ಲಂಚಕ್ಕಾಗಿ ಗುತ್ತಿಗೆದಾರನಿಗೆ ಜೀವ ಬೆದರಿಕೆ; ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

Hindi Imposition
ಬೆಂಗಳೂರು7 hours ago

Hindi Imposition : ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಕರವೇ; ಕಪ್ಪು ದಿನವನ್ನಾಗಿ ಆಚರಣೆ

Murder case
ಬೆಂಗಳೂರು8 hours ago

Murder case:ಪ್ರಿಯಕರನೊಟ್ಟಿಗೆ ಏಕಾಂತದಲ್ಲಿರುವಾಗಲೇ ಮಗಳು ಲಾಕ್‌; ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿಯನ್ನೇ ಕೊಂದಳು ಪಾಪಿ

They have done a disservice to the Constitution Congress has exposed its true colours Hariprakash Koonemane
ರಾಜಕೀಯ8 hours ago

Hariprakash Konemane: ದಲಿತೋದ್ಧಾರದ ಮಾತುಗಳು ಮೊಸಳೆ ಕಣ್ಣೀರಷ್ಟೇ; ಕಾಂಗ್ರೆಸ್ ತನ್ನ ನಿಜಬಣ್ಣ ತೆರೆದಿಟ್ಟಿದೆ- ಹರಿಪ್ರಕಾಶ್ ಕೋಣೆಮನೆ

dina bhavishya
ಭವಿಷ್ಯ14 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 year ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌