ಬೆಂಗಳೂರಿನಲ್ಲಿ ಮನೆಗಳ್ಳರನ್ನು ಬಂಧಿಸಿದ ಪೊಲೀಸರು - Vistara News

ಕ್ರೈಂ

ಬೆಂಗಳೂರಿನಲ್ಲಿ ಮನೆಗಳ್ಳರನ್ನು ಬಂಧಿಸಿದ ಪೊಲೀಸರು

ಮಹದೇವಪುರ ಪೊಲೀಸ್‌ ಠಾಣೆಯ ಕ್ಷಿಪ್ರ ಕಾರ್ಯಾಚರಣೆ ಯಶಸ್ವಿ. ಮನೆಗಳ್ಳತ ಮಾಡುತ್ತಿದ್ದ ಇಬ್ಬರು ದರೋಡೆಕೋರರು ಬಂಧನ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ನಗರ ವೈಟ್‌ಫೀಲ್ಡ್‌ ವಿಭಾಗದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ ಆಸಾಮಿಯನ್ನು ಮಹದೇವಪುರ ಹೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ವೈಟ್‌ಫೀಲ್ಡ್ ಬಳಿ ಇದ್ದ ಮನೆಯ ಬೀಗವನ್ನು ಒಡೆದು ದರೋಡೆ ಮಾಡಿದ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಮನೆಯಲ್ಲಿದ್ದ ಚಿನ್ನದ ಒಡವೆಗಳನ್ನು ಕಳ್ಳತನ ಮಾಡಿರುವ ಬಗ್ಗೆ ಮಹದೇವಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದ್ದು, ಈ ಬಗ್ಗೆ ತನಿಖೆ ಆರಂಭಿಸಲಾಗಿತ್ತು.

ಬೆ೦ಗಳೂರು ನಗರ ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿ ಗಿರೀಶ್‌.ಎಸ್‌, ರವರ ಮಾರ್ಗದರ್ಶನ ಮತ್ತು ವೈಟ್‌ಫಿಲ್ಡ್‌ ಉಪ ವಿಭಾಗದ ಎ.ಸಿ.ಪಿ. ಶಾಂತಮಲ್ಲಪ್ಪ, ರವರ ಸಾರಥ್ಯದಲ್ಲಿ ಮಹದೇವಪುರ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ 20 ಗ್ರಾಂ ಚಿನ್ನ ಹಾಗೂ ಅಂದಾಜು ₹10 ಲಕ್ಷ ಮೌಲ್ಯದ ಒಡವೆಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸದರಿ ಪ್ರಕರಣದಲ್ಲಿ ದರೊಡೆ ಮಾಡಿದವರನ್ನು ಧರ್ಮ(26) ಹಾಗೂ ರಾಜ್‌ ಬಿನ್‌ ಪ್ರಕಾಶ್‌ ಗುಂಡ(26) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹುಷಾರ್‌ ! ಬೆಂಗಳೂರಿನಲ್ಲಿ ಮತ್ತೊಮ್ಮೆ ಪತ್ತೆಯಾಯ್ತು ಓಜಿಕುಪ್ಪಂ ಗ್ಯಾಂಗ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

VISTARANEWS.COM


on

Prajwal Revanna Case Government work against Revanna HD Kumaraswamy gives details of the case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ (Hassan Pen Drive Case) ಅನ್ನು ನಾನು ವೀಕ್ಷಣೆ ಮಾಡಿಲ್ಲ. ಆ ಪೆನ್‌ಡ್ರೈವ್‌ಗಳಲ್ಲಿರುವ ಅಶ್ಲೀಲ ವಿಡಿಯೊಗಳನ್ನು ನಾನು ನೋಡಿಲ್ಲ. ಈ ವಿಷಯ ಗೊತ್ತಿದ್ದರೆ ನಾನು ಪ್ರಜ್ವಲ್‌ಗೆ ಎಂಪಿ ಟಿಕೆಟ್‌ ಕೊಡುತ್ತಿರಲಿಲ್ಲ. ಇದು ದೇವೇಗೌಡರ ಕುಟುಂಬ ಸರ್ವನಾಶ ಮಾಡಬೇಕೆಂದು ವ್ಯವಸ್ಥಿತ ಸಂಚಾಗಿದೆ. ಈ ಇಡೀ ಪ್ರಕರಣದಲ್ಲಿ ಸರ್ಕಾರ ವ್ಯವಸ್ಥಿತವಾಗಿ ಸಂಚು ರೂಪಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಪೆನ್‌ಡ್ರೈವ್‌ ವಿಷಯ ನನ್ನ ಮುಂದೆ ಬಂದಿದ್ದರೆ ನಾನು ಟಿಕೆಟ್‌ ಕೊಡುತ್ತಿರಲಿಲ್ಲ. ಪ್ರಜ್ವಲ್‌ ರೇವಣ್ಣನಿಗೆ ಟಿಕೆಟ್‌ ಕೊಡುವ ಪ್ರಶ್ನೆಯೇ ಉದ್ಭವ ಆಗುತ್ತಿರಲಿಲ್ಲ. ಆಗ ನಾನು ಟಿಕೆಟ್‌ ನಿರಾಕರಣೆ ಮಾಡಿದ್ದು, ಸ್ಥಳೀಯ ಕಾರ್ಯಕರ್ತರಿಗೆ ಪ್ರಜ್ವಲ್‌ ಸ್ಪಂದಿಸುತ್ತಿರಲಿಲ್ಲ ಎಂಬ ದೂರು ಬಂದಿತ್ತು. ಹಾಗಾಗಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಎಂದು ಹೇಳಿದ್ದೆ ಎಂಬುದಾಗಿ ಸ್ಪಷ್ಟನೆ ನೀಡಿದರು.

ಪೆನ್‌ಡ್ರೈವ್‌ಗಳು ಮಾರ್ಫಿಂಗ್ ಮಾಡಿರೋದಾ? ನಕಲಿಯೋ ನನಗೆ ಗೊತ್ತಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬವನ್ನು ಸರ್ವನಾಶ ಮಾಡಬೇಕೆಂಬ ವ್ಯವಸ್ಥಿತ ಸಂಚು ಇಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಗುಡುಗಿದರು.

ನರೇಂದ್ರ ಮೋದಿ ಆಡಳಿತ ತೆಗೆದು ದೆಹಲಿ ಗದ್ದುಗೆ ಹಿಡಿಯಲು ಷಡ್ಯಂತ್ರ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಸಂಚಾಗಿದೆ. ಎಸ್‌ಐಟಿಯು ಕಾಂಗ್ರೆಸ್‌ ಪರವಾಗಿ ಕೆಲಸ ಮಾಡುತ್ತಿದೆ. ಈಗಲೂ ಹೇಳುತ್ತೇನೆ, ಇಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು. ಇದೇ ನಮ್ಮ ಪಕ್ಷದ ನಿರ್ಧಾರವಾಗಿದೆ. ವಕೀಲ ದೇವರಾಜೇಗೌಡ ಏನೆಲ್ಲ ಹೇಳಿದರು. ಏನು ನಡೆಯುತ್ತಾ ಇದೆ ಇಲ್ಲಿ. ಆ ಬಗ್ಗೆ ತನಿಖೆ ಆಗಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಎಸ್‌ಐಟಿಗೆ ಎಚ್‌ಡಿಕೆ ವಾರ್ನಿಂಗ್‌

ಎಸ್‌ಐಟಿ ತನಿಖೆ ಹಾಗೂ ಕಾರ್ಯವೈಖರಿ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ವಾರ್ನಿಂಗ್ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಕಾಂಗ್ರೆಸ್ ನಡೆಗೆ ಎಚ್‌ಡಿಕೆ ಗರಂ ಆಗಿದ್ದಾರೆ. ಕಾಲ ಚಕ್ರ ಉರುಳುತ್ತದೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ವಾರ್ನ್‌ ಮಾಡಿದ್ದಾರೆ.

ಡಿಕೆಶಿಯನ್ನು ವಜಾ ಮಾಡಿ

ಮಹಾನುಭಾವ ಡಿ.ಕೆ.ಶಿವಕುಮಾರ್ ಹಿಸ್ಟರಿ ತೆಗೆದರೆ ಈ ರೀತಿ ಕೇಸಲ್ಲಿ ಎಕ್ಸ್‌ಪರ್ಟ್ ಎಂಬುದು ಗೊತ್ತಾಗುತ್ತದೆ. ಇಂತಹವರನ್ನು ಇಟ್ಕೊಂಡು ಎಸ್‌ಐಟಿ ಮೂಲಕ ಯಾವ ಪಾರದರ್ಶಕ ತನಿಖೆ ಆಗುತ್ತದೆ? ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ, ಸಂತ್ರಸ್ತೆಯರಿಗೂ ನ್ಯಾಯ ಕೊಡಬೇಕು, ಸತ್ಯ ಗೊತ್ತಾಗಬೇಕು. ಈ ಕೇಸ್‌ನಲ್ಲಿ ಡಿ.ಕೆ. ಶಿವಕುಮಾರ್‌ ಸಂಚು ಕಾಣುತ್ತಿದೆ. ಮೊದಲು ಅವರನ್ನು ಕ್ಯಾಬಿನೆಟ್‌ನಿಂದ ಸಸ್ಪೆಂಡ್ ಮಾಡಬೇಕು. ಈ ಪ್ರಕರಣದಲ್ಲಿ ಡಿಕೆಶಿ ಸಂಚು ಏನಿದೆ? ಆ ಬಗ್ಗೆ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲಿ ಎಂದು ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಅಲ್ಲದೆ, ಡಿಸಿಎಂ ಡಿಕೆಶಿ ಮುಖ ನೋಡಿದರೆ ಬಾಲ ಸುಟ್ಟ ಬೆಕ್ಕಿನಂತೆಯೇ ಆಗಿದೆ. ದೇವರಾಜೇಗೌಡ ಸ್ಫೋಟಕ ಸುದ್ದಿಗೋಷ್ಠಿ ನಂತರ ಅವರ ಮುಖ ನೋಡಿ ಎಂದು ವ್ಯಂಗ್ಯವಾಡಿದರು.

ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ತನಿಖೆಯಾಗಲಿ ಎಂದು ಬಿಜೆಪಿ ಮುಖಂಡ ವಿವೇಕ್ ರೆಡ್ಡಿ ಆಗ್ರಹಿಸಿದ್ದಾರೆ. ನ್ಯಾಯಯುತ ತನಿಖೆ ನಡೆಯಬೇಕಾದರೆ ನ್ಯಾಯಾಂಗ ತನಿಖೆಗೆ ಈ ಪ್ರಕರಣವನ್ನು ವಹಿಸಿ ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ಬೆಳಗಾವಿ ಸಾಹುಕಾರ್ ರಮೇಶ್‌ ಜಾರಕಿಹೊಳಿ ಪ್ರಕರಣ ಏನಾಯಿತು ಈಗ ಎಂಬುದು ಗೊತ್ತಾ? ಮೂವತ್ತು, ನಲವತ್ತು ಕೋಟಿ ರೂಪಾಯಿ ಖರ್ಚು ಮಾಡಿ ಜಾರಕಿಹೊಳಿ ಅವರ ಹೆಸರನ್ನು ಹಾಳು ಮಾಡಿದರು. ಆ ಆಡಿಯೊ ಈಗಲೂ ಓಡಾಡುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಂತಾ ನಿಮ್ಮ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡುತ್ತಾರೆ. ಇಷ್ಟೆಲ್ಲ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಗೆ ಎಸ್‌ಐಟಿಯಿಂದ ನೋಟಿಸ್‌ ಕೊಡಲಾಯಿತೇ? 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೆಸಿಫಿಕ್ ಆಗಿ ಚಾರ್ಜ್‌ ಮಾಡುತ್ತಿರುವ ರಾಹುಲ್‌ ಗಾಂಧಿಯನ್ನು ಎಸ್‌ಐಟಿಯವರು ಕರೆಯಬೇಕಲ್ವಾ? ಈಗ ಪೋಕ್ಸೋ ಕೇಸ್ ಹಾಕಲು 16 ವರ್ಷದ ಸಂತ್ರಸ್ತೆಯನ್ನು ಎಸ್‌ಐಟಿಯವರು ಹುಡುಕುತ್ತಿದ್ದಾರೆ. 2900 ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬುದಾಗಿ ಸಿಂಗಾಪುರದಲ್ಲೂ ಸುದ್ದಿ ಅಂತೆ ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಹಾಸನ ಡಿಸಿ ವಿರುದ್ಧ ಎಚ್‌ಡಿಕೆ ಗರಂ

ಇದೇ ವೇಳೆ ಶಿಶುಪಾಲ ಹಾಗೂ ಪಾಪದ ಕಥೆ ಹೇಳಿದ್ದ ಹಾಸನ ಡಿಸಿ ಎಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ. ಕೋಲಾರದಲ್ಲಿದ್ದಾಗ ಗಂಡ, ಹೆಂಡತಿ ಏನ್ ಮಾಡಿದ್ದೀರಾ ಅಂತಾ ಗೊತ್ತಿದೆ. ಯಾವುದೋ ಸಮಿತಿಯವರ ಮನವಿ ಪಡೆದು ವ್ಯಂಗ್ಯ ಮಾಡ್ತೀರಾ ಡಿಸಿ ಅವರೇ? ನಿಮ್ಮ ಯೋಗ್ಯತೆ ನನಗೆ ಚೆನ್ನಾಗಿ ಗೊತ್ತು ಕಿಡಿಕಾರಿದರು.

15 ದಿನಗಳಿಂದ ತಲೆಮರೆಸಿಕೊಂಡಿದ್ದಾನಲ್ಲ ಆ ಕಾರ್ತಿಕ್‌ಗೆ ಯಾವ ನೋಟಿಸ್ ಕೊಟ್ಟಿರಿ? ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದೀರಾ? ಲುಕ್‌ ಔಟ್‌ ನೋಟಿಸ್‌ ಕೊಟ್ಟಿರಾ? ಏನು ನಡೆಯುತ್ತಿದೆ ಇಲ್ಲಿ ಎಂದು ಕಿಡಿಕಾರಿದರು.

ಎಚ್.ಡಿ.ರೇವಣ್ಣ ಎಲ್ಲಿಗೂ ಓಡಿ ಹೋಗಿರಲಿಲ್ಲ. ದೇವರಿಗೆ ಕೈಮುಗಿದುಕೊಂಡು ಓಡಾಡಿಕೊಂಡಿದ್ದ. ಅಯ್ಯೋ ದೇವರೇ ಕಾಪಾಡಪ್ಪ ಅಂತಿದ್ದ. ಆದರೆ, ಬೇಕೆಂದೇ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕಂಪ್ಲೇಂಟ್ ತೆಗೆದುಕೊಳ್ಳಲು ಸಂತ್ರಸ್ತೆಯರನ್ನು ಹುಡುಕುತ್ತಿದ್ದೇವೆ ಎಂದು ಎಸ್‌ಐಟಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಯಾರಿಗೆಲ್ಲ ಹೇಗೆ ಹೆದರಿಸಿ ಕಂಪ್ಲೇಂಟ್ ತೆಗೆದುಕೊಳ್ಳುವುದಕ್ಕೆ ಪ್ರಯತ್ನ ಮಾಡಲಾಗುತ್ತಿದೆ ಎಂಬ ವಿಷಯ ನಮಗೆ ಗೊತ್ತಾಗಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರೇವಣ್ಣ ಪಾತ್ರ ಎಷ್ಟಿದೆ?

ಯಾರೂ ನೇರವಾಗಿ ಎಚ್.ಡಿ.ರೇವಣ್ಣ ಮೇಲೆ ಕಂಪ್ಲೇಂಟ್‌ ಕೊಟ್ಟಿಲ್ಲ. ಕಿಡ್ನ್ಯಾಪ್ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಪಾತ್ರ ಎಷ್ಟಿದೆ ಗೊತ್ತಿದೆಯಾ? ಬೇಲ್ ವಿಚಾರಣೆ ವೇಳೆ ಆ ಹೆಣ್ಣು ಮಗಳ ಕುರಿತು ಎಸ್‌ಪಿಪಿಯ ಮಾತು ಏನು? ಕಿಡ್ನ್ಯಾಪ್ ಆಗಿದ್ದ ಹೆಣ್ಣು ಮಗಳು ಬದುಕಿದ್ದಾಳೆ, ಸತ್ತಿದ್ದಾಳಾ ಅಂದಿದ್ದರು. ಕೊನೆಗೆ ಮೈಸೂರಿನ ಕಾಳೇನಹಳ್ಳಿ ತೋಟದ ಮನೆಯಿಂದ ಕರೆತಂದಿದ್ದರು. ಆ ತೋಟದ ಮನೆಗೆ ಹೋಗಿ ಕರೆತಂದದ್ರಲ್ಲ, ಮಹಜರು ಮಾಡಿದ್ರಾ? ಒಂದೂವರೆ ದಿವಸ ಆದರೂ ಆ ಹೆಣ್ಣು ಮಗಳು ಹೇಳಿಕೆ ಕೊಟ್ಟಿಲ್ಲವಾ? 2 ದಿನವಾದರೂ ಆ ಹೆಣ್ಣು ಮಗಳನ್ನು ಜಡ್ಜ್ ಮುಂದೆ ಹಾಜರು ಪಡಿಸಿಲ್ಲ ಏಕೆ? ಒಬ್ಬ ಜವಾಬ್ದಾರಿಯುತ ಮಂತ್ರಿಯಾಗಿ ಕೆಲಸ ಮಾಡಿದವರು ರೇವಣ್ಣ. ನೀವು ಬರೆಸಿಕೊಂಡ ಹೇಳಿಕೆಗೆ ಎಚ್.ಡಿ.ರೇವಣ್ಣ ಸೈನ್‌ ಮಾಡಬೇಕಾ? ಇದೇನು ಡಿಸಿಎಂ ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಂ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮಹಿಳಾ ಆಯೋಗ ಬರೆದಿದ್ದ ಪತ್ರದಲ್ಲಿ ಎಲ್ಲಿಯೂ ಪ್ರಜ್ವಲ್ ರೇವಣ್ಣ ಅವರ ಹೆಸರು ಇಲ್ಲ. ಪ್ರಜ್ವಲ್ ಆಗಲಿ, ರೇವಣ್ಣ ಹೆಸರಾಗಲಿ ಆಯೋಗದ ಪತ್ರದಲ್ಲಿ ಇರಲಿಲ್ಲ. ಆದರೆ, ಸಿಎಂ ತಮ್ಮ ಪತ್ರದಲ್ಲಿ ಪ್ರಜ್ವಲ್ ಹೆಸರನ್ನು ಉಲ್ಲೇಖಿಸುತ್ತಾರೆ. ಏಪ್ರಿಲ್ 28ಕ್ಕೆ ಪೆನ್‌ಡ್ರೈವ್ ಪ್ರಕರಣ ತನಿಖೆಗೆ SIT ರಚನೆ ಮಾಡಿದ್ದರು. ಏಪ್ರಿಲ್ 28ರಂದು ಬೆಂಗಳೂರಿನಲ್ಲಿ ಸಂತ್ರಸ್ತೆಯಿಂದ ಕಂಪ್ಲೇಂಟ್ ಬರೆಸಿದ್ದರು. ಗಣಕಯಂತ್ರದಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ದೂರು ಬರೆಸಿದರು. ಹೊಳೆನರಸೀಪುರದ ಪೊಲೀಸ್‌ ಠಾಣೆಗೆ ಬೆಂಗಳೂರಿನಿಂದ ಕಂಪ್ಲೇಂಟ್ ಬರೆಸಿ ನೀಡಿದರು. ರಾಜ್ಯದ ಗೌರವವನ್ನು ಉಳಿಸಲು SIT ಮಾಡಿದ್ರು ಅಂತ ಖುಷಿ ಇತ್ತು. ಆದರೆ, ಕೊನೆಗೆ ಮಾಡಿದ್ದೇನು? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

ಪತ್ರದಲ್ಲಿ ಪ್ರಜ್ವಲ್‌, ರೇವಣ್ಣ ಹೆಸರೇ ಇಲ್ಲ

ಏಪ್ರಿಲ್ 25ರಂದು ಮಹಿಳಾ ಆಯೋಗದ ಅಧ್ಯಕ್ಷರಿಂದಲೇ ಸಿಎಂಗೆ ಪತ್ರ ಬರೆಯಲಾಗಿದೆ. ಪೆನ್‌ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಗಳಿಂದ ಲೈಂಗಿಕ ದೌರ್ಜನ್ಯ ಅಂತಾ ಬರೆದಿದ್ದರು. ಮಹಿಳಾ ಆಯೋಗದ ಪತ್ರದಲ್ಲಿ ರಾಜಕಾರಣಿ ಯಾರೆಂದು ಹೇಳಿರಲಿಲ್ಲ. ಒಬ್ಬ ಅಲ್ಲ ಎಷ್ಟೋ ರಾಜಕಾರಣಿಗಳು ಎನ್ನುವ ಅರ್ಥದಲ್ಲಿತ್ತು ಆ ಪತ್ರ. ಆ ಬಳಿಕ ಏಪ್ರಿಲ್ 27ರಂದು ಮುಖ್ಯಮಂತ್ರಿಗಳಿಂದ ತನಿಖಾ ತಂಡ ರಚನೆ ಆಗುತ್ತದೆ. ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ತನಿಖಾ ತಂಡ ರಚಿಸುತ್ತೇನೆ ಎಂಬುದಾಗಿ ಹೇಳಿದ್ದನ್ನು ಎಚ್.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿದರು.

Continue Reading

ಕರ್ನಾಟಕ

Road Accident: ಮಂಜೇಶ್ವರದಲ್ಲಿ ಆಂಬ್ಯುಲೆನ್ಸ್-ಕಾರಿನ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

Road Accident: ಕೇರಳದ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಭೀಕರ ಅಪಘಾತ ನಡೆದಿದೆ. ತ್ರಿಶ್ಯೂರು ಗುರುವಾಯೂರು ಮೂಲದ ಮೂವರು ಯುವಕರು ಮೃತಪಟ್ಟಿದ್ದಾರೆ.

VISTARANEWS.COM


on

Car Accident
Koo

ಮಂಗಳೂರು: ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ ಮೂವರು ದುರ್ಮರಣ ಹೊಂದಿರುವ ಘಟನೆ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಮಂಗಳವಾರ ನಡೆದಿದೆ.

ಕೇರಳದ ತ್ರಿಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೊನ್ ಸೇರಿ ಮೂವರು ಮೃತರು. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿಗೂ ಗಾಯಗಳಾಗಿರುವುದು ಕಂಡುಬಂದಿದೆ.

ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

ಇದನ್ನೂ ಓದಿ | Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿಯಾಗಿ ಮೂವರ ಸಾವು

chikkaballapur road accident

ಚಿಕ್ಕಬಳ್ಳಾಪುರ: ಕಲ್ಲು ಕೂಚ (ಕಂಬ) ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ (Road Accident), ಕಂಬಗಳಡಿ ಸಿಲುಕಿಕೊಂಡು ಮೂವರು ಕಾರ್ಮಿಕರು (laborers death) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ- ಗೌರಿಬಿದನೂರು (Chikkaballapur news) ಮಾರ್ಗದ ಕಣಿವೆ ಬಳಿ ದುರ್ಘಟನೆ ನಡೆದಿದೆ.

ಕೋಲಾರದ ಮಾಲೂರಿನ ಚಿಕ್ಕತಿರುಪತಿಯಿಂದ ಮಂಚೇನಹಳ್ಳಿಗೆ ಬರುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ‌ ಪಲ್ಟಿಯಾಗಿದೆ. ಕ್ಯಾಂಟರ್‌ನ ಹಿಂಬದಿಯಲ್ಲಿ ಸಾಗಿಸಲಾಗುತ್ತಿದ್ದ ಕಲ್ಲಿನ ಕಂಬಗಳ ಮೇಲೆ ಕುಳಿತಿದ್ದ ಕೂಲಿ ಕಾರ್ಮಿಕರು, ಈ ಕಲ್ಲುಗಳಡಿ ಸಿಲುಕಿಕೊಂಡು ದಾರುಣವಾಗಿ ಸಾವಿಗೀಡಾದರು.

108 ಸಿಬ್ಬಂದಿ ಮುಷ್ಕರದ ಹಿನ್ನೆಲೆಯಲ್ಲಿ ಕರೆ ಕಳುಹಿಸಿದರೂ ಆಂಬ್ಯುಲೆನ್ಸ್ ಸಮಯಕ್ಕೆ ಸರಿಯಾಗಿ ಬರಲಿಲ್ಲ. ಆಂಬ್ಯುಲೆನ್ಸ್ ಬಂದಿದ್ದರೆ ಜೀವಗಳನ್ನು ಉಳಿಸಬಹುದಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ‌ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆ

ಕೊರಟಗೆರೆ: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು, ಜಮೀನಿನಲ್ಲಿ 5ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ತನ್ನ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದು, ಕಳೆದ ಭಾನುವಾರ ತಡರಾತ್ರಿ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತೀರಿಸಲಾಗದೆ ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಹಣದ ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು. ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಎಲ್ಲಿಂದ ಸಾಲವನ್ನು ಕಟ್ಟುತ್ತಾನೆ? ಈ ಘಟನೆಗಳ ಬಗ್ಗೆ ಕೊಡಲೇ ಸರ್ಕಾರ ಗಮನ ಹರಿಸಬೇಕು. ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ಕಿಡಿಗೇಡಿಗಳ ವಿಕೃತಿ; ವಿಡಿಯೋ ವೈರಲ್‌

Viral Video:ವಿದ್ಯಾರ್ಥಿಯೊಬ್ಬ ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದು, 20,000ರೂ ಸಾಲದ ಸುಳಿಗೆ ಬಿದ್ದಿದ್ದ. ಆರೋಪಿಗಳು ಬಡ್ಡಿ ಎಲ್ಲಾ ಸೇರಿಸಿ 50,000 ಕೊಡಲೇಬೇಕೆಂದು ಹೇಳಿದ್ದರು. ಅಷ್ಟೊಂದು ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ವಿದ್ಯಾರ್ಥಿಯನ್ನು ಆರು ಜನ ಅಪ್ರಾಪ್ತರು ಸೇರಿ ಚೆನ್ನಾಗಿ ಥಳಿಸಿದ್ದು, ಬಳಿಕ ಆತನನ್ನು 10 ದಿನಗಳ ಕಾಲ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ಮಾಡಿದ್ದಾರೆ. ಆತನ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದಾರೆ.

VISTARANEWS.COM


on

Viral Video
Koo

ಉತ್ತರಪ್ರದೇಶ: ಆನ್‌ಲೈನ್‌ ಗೇಮಿಂಗ್‌ (Online Gaming)ನಲ್ಲಿ ಸೋತು ಹಣ ವಾಪಾಸ್‌ ನೀಡಲು ವಿಳಂಬ ಮಾಡಿದನೆಂದು ನೀಟ್‌ ಪರೀಕ್ಷೆಗೆ(NEET Exam) ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿ ಚಿತ್ರಹಿಂಸೆ ನೀಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಿಡಿಗೇಡಿಗಳು ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದು, ಆರು ಜನ ಅಪ್ರಾಪ್ತರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇನ್ನು ಈ ಶಾಕಿಂಗ್‌ ವಿಡಿಯೋ(Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ಘಟನೆ ವಿವರ:

ಇಟವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದು, 20,000ರೂ ಸಾಲದ ಸುಳಿಗೆ ಬಿದ್ದಿದ್ದ. ಆರೋಪಿಗಳು ಬಡ್ಡಿ ಎಲ್ಲಾ ಸೇರಿಸಿ 50,000 ಕೊಡಲೇಬೇಕೆಂದು ಹೇಳಿದ್ದರು. ಅಷ್ಟೊಂದು ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ವಿದ್ಯಾರ್ಥಿಯನ್ನು ಆರು ಜನ ಅಪ್ರಾಪ್ತರು ಸೇರಿ ಚೆನ್ನಾಗಿ ಥಳಿಸಿದ್ದು, ಬಳಿಕ ಆತನನ್ನು 10 ದಿನಗಳ ಕಾಲ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ಮಾಡಿದ್ದಾರೆ. ಆತನ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದಾರೆ. ಬಳಿಕ ಆತನನ್ನು ಬೆಂಕಿ ಹಾಕಿ ಸುಡಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ 11 ಜನ ಆರೋಪಿಗಳು ಭಾಗಿಯಾಗಿದ್ದು, ಆರು ಅಪ್ರಾಪ್ತರನ್ನು ಅರೆಸ್ಟ್‌ ಮಾಡಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಐವರು ಎಸ್ಕೇಪ್‌ ಆಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಸೋಮವಾರ ಸಂತ್ರಸ್ತ ವಿದ್ಯಾರ್ಥಿಯ ಬಾವ ಕಾಕಡಿಯೋ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:Narendra Modi: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ, ಆಶೀರ್ವಾದ ಮಾಡಿದ ಅಜ್ಜಿ; Video ಇದೆ

ಇಂತಹದ್ದೇ ರೀತಿಯ ಘಟನೆಯೊಂದು ಉತ್ತರಪ್ರದೇಶದ ಫತೇಹ್‌ಪುರದಲ್ಲಿ ನಡೆದಿತ್ತು. ಆನ್‌ಲೈನ್‌ ಗೇಮ್‌ನ ಚಟ ಹೊಂದಿದ್ದ ಯುವಕನೊಬ್ಬ ಸಾಲ ತೀರಿಸಲು ಇನ್ಶೂರೆನ್ಸ್‌ ಹಣಕ್ಕಾಗಿ ಹೆತ್ತ ತಾಯಿಯನ್ನೇ ಕೊಂದಿದ್ದ. ಹಿಮಾಂಶು ಎಂಬ ಆರೋಪಿ 50 ಲಕ್ಷ ರೂ.ಗಳ ವಿಮೆ ಹಣವನ್ನು ಪಡೆಯಲು ತನ್ನ ತಾಯಿಯನ್ನು ಕೊಂದು ನಂತರ ಶವವನ್ನು ಸೆಣಬಿನ ಚೀಲದಲ್ಲಿ ತುಂಬಿ ಯಮುನಾ ನದಿಯ ದಂಡೆಯಲ್ಲಿ ಎಸೆದಿದ್ದ. ಹಿಮಾಂಶು ಜನಪ್ರಿಯ ಆನ್‌ಲೈನ್‌ ಫ್ಲಾಟ್‌ಫಾರ್ಮ್‌ ಒಂದರಲ್ಲಿ ಗೇಮಿಂಗ್‌ ಆಡುವ ಚಟ ಹೊಂದಿದ್ದ. ಇದಕ್ಕಾಗಿ ಆತನ ಸುಮಾರು 4 ಲಕ್ಷ ರೂ. ಸಾಲ ಮಾಡಿದ್ದ. ಇದನ್ನು ತೀರಿಸಲು ಆತ ತನ್ನ ತಾಯಿಯನ್ನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Continue Reading

ಕ್ರೈಂ

ಮಾದಕ ವಸ್ತು ನೀಡಿ ಕುಟುಂಬಸ್ಥರೊಂದಿಗೆ ಮಲಗಲು ಹಿಂಸೆ ನೀಡುವ ಪತಿ; ಮಹಿಳೆಯೊಬ್ಬರ ಕಣ್ಣೀರಿನ ಕಥೆ ಇದು

Crime News: ಪತಿಯೇ ತನ್ನ ಕುಟುಂಬಸ್ಥರೊಂದಿಗೆ ದೈಹಿಕ ಸಂಬಂಧ ಹೊಂದಲು ಪತ್ನಿಗೆ ನಿರಂತರ ಹಿಂದೆ ನೀಡುತ್ತಿದ್ದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಚುರು ಚಿಲ್ಲೆಯ ಮಹಿಳೆಯೊಬ್ಬರು ಈ ಬಗ್ಗೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಮಾವ ಮತ್ತು ಪತಿಯ ಸಹೋದರ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ. 15-20 ವರ್ಷಗಳಿಂದ ಪತಿ ನಿರಂತರವಾಗಿ ತನಗೆ ಮಾದಕ ವಸ್ತುಗಳನ್ನು ಬಲವಂತವಾಗಿ ತಿನ್ನಿಸುತ್ತಿದ್ದು, ಬಳಿಕ ಇತರರೊಂದಿಗೆ ದೈಹಿಕ ಸಂಬಂಧ ಬೆಳೆಸುವಂತೆ ಪೀಡಿಸುತ್ತಿದ್ದಾನೆ. ಒಂದುವೇಳೆ ಇದನ್ನು ವಿರೋಧಿಸಿದರೆ ಕ್ರೂರವಾಗಿ ಹಲ್ಲೆ ನಡೆಸುತ್ತಾನೆ ಎಂದು ಸಂತ್ರಸ್ತೆ ಹೇಳಿದ್ದಾರೆ.

VISTARANEWS.COM


on

Crime News
Koo

ಜೈಪುರ: ಪತಿಯೇ ತನ್ನ ಕುಟುಂಬಸ್ಥರೊಂದಿಗೆ ದೈಹಿಕ ಸಂಬಂಧ ಹೊಂದಲು ಪತ್ನಿಗೆ ನಿರಂತರ ಹಿಂದೆ ನೀಡುತ್ತಿದ್ದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಚುರು ಚಿಲ್ಲೆಯ ಮಹಿಳೆಯೊಬ್ಬರು ಈ ಬಗ್ಗೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಮಾವ ಮತ್ತು ಪತಿಯ ಸಹೋದರ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ (Crime News).

ಸಾಂದ್ವ ಪೊಲೀಸ್‌ ಠಾಣೆಯ ವ್ಯಾಪ್ತಿಗೆ ಸೇರಿದ ಗ್ರಾಮದ ಈ ಮಹಿಳೆ ತನ್ನ ದೂರಿನಲ್ಲಿ, 15-20 ವರ್ಷಗಳಿಂದ ಪತಿ ನಿರಂತರವಾಗಿ ತನಗೆ ಮಾದಕ ವಸ್ತುಗಳನ್ನು ಬಲವಂತವಾಗಿ ತಿನ್ನಿಸುತ್ತಿದ್ದು, ಬಳಿಕ ಇತರರೊಂದಿಗೆ ದೈಹಿಕ ಸಂಬಂಧ ಬೆಳೆಸುವಂತೆ ಪೀಡಿಸುತ್ತಿದ್ದಾನೆ. ಒಂದುವೇಳೆ ಇದನ್ನು ವಿರೋಧಿಸಿದರೆ ಕ್ರೂರವಾಗಿ ಹಲ್ಲೆ ನಡೆಸುತ್ತಾನೆ ಎಂದು ಹೇಳಿದ್ದಾರೆ.

ಪತಿ ಆಕೆ ಕುಡಿಯುವ ಚಹಾದಲ್ಲಿ ಮಾದಕ ವಸ್ತುಗಳನ್ನು ಬೆರೆಸುತ್ತಿದ್ದ. ಬಳಿಕ ಆಕೆಯ ಮೇಲೆ ಆತನ ಕುಟುಂಬಸ್ಥರು ಅತ್ಯಾಚಾರ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಒಮ್ಮೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮಹಿಳೆ ಗಂಡನ ಕ್ರೂರ ಕೃತ್ಯವನ್ನು ವಿರೋಧಿಸಿದ್ದರು. ಆ ವೇಳೆ ಆತ ಹರಿತವಾದ ಕತ್ತಿ ಹಿಡಿದು ಆಕೆಯ ಕೊಲೆ ಮಾಡಲು ಹೊರಟಿದ್ದ. ಆ ವೇಳೆ ಮಹಿಳೆ ಓಡಿ ತನ್ನ ಜೀವ ಉಳಿಸಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಈ ಮಹಿಳೆಗೆ ಮೂವರು ಪುತ್ರರು ಮತ್ತು ಓರ್ವ ಪುತ್ರಿ ಇದ್ದಾಳೆ.

ಸಹೋದರನನ್ನು ಕೊಲ್ಲುವ ಬೆದರಿಕೆ

ಸದ್ಯ ಮಕ್ಕಳು ಮಹಿಳೆಯ ಸಹೋದರನೊಂದಿಗೆ ವಾಸಿಸುತ್ತಿದ್ದಾರೆ. ʼʼಆರೋಪಿಗಳು ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಸಹೋದರನಿಗೂ ಜೀವ ಬೆದರಿಕೆ ಹಾಕಿದ್ದಾರೆ. ಸಹೋದರನನ್ನು ಕೊಲ್ಲುವುದಾಗಿ ಹೇಳಿದ್ದಾರೆʼʼ ಎಂದು ಮುಹಿಳೆ ತನ್ನ ದೂರಿನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಪೋಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ!

ಇನ್ನೊಂದು ಆಘಾತಕಾರಿ ಘಟನೆಯಲ್ಲಿ ಉತ್ತರ ಪ್ರದೇಶದ ಮಹಿಳೆಯೊಬ್ಬಳು ತಾನೇ ಮದ್ಯಪಾನ ಮಾಡಿ, ಪತಿಯ ಗುಪ್ತಾಂಗವನ್ನೇ ಸುಟ್ಟು, ಅದನ್ನು ಕತ್ತರಿಸಲು ಯತ್ನಿಸಿದ್ದಾಳೆ. ಅಮ್ರೋಹ ಜಿಲ್ಲೆಯ ಚಾಕ್‌ ಮೆಹೂದ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೆಹರ್‌ ಜಹಾನ್‌ ಎಂಬ 30 ವರ್ಷದ ಮಹಿಳೆಯು ಪತಿ ಮನ್ನಾನ್‌ ಜೈದಿಯ ಗುಪ್ತಾಂಗ ಸುಟ್ಟು, ಕತ್ತರಿಸಲು ಯತ್ನಿಸಿದ್ದಾಳೆ. ದಿನವಿಡೀ ದುಡಿದು ಮನೆಗೆ ಬಂದ ಗಂಡನಿಗೆ ಮಹಿಳೆಯು ಹಾಲಿನಲ್ಲಿ ಮತ್ತು ಬರುವ ಅಂಶವನ್ನು ಸೇರಿಸಿ, ಆತ ನಶೆಗೆ ಜಾರುತ್ತಲೇ ಕೈ ಕಾಲು ಕಟ್ಟಿಹಾಕಿದ್ದಾಳೆ. ಬಳಿಕ ಆತನ ಗುಪ್ತಾಂಗವನ್ನು ಸಿಗರೇಟಿನಿಂದ ಸುಟ್ಟಿದ್ದಾಳೆ. ಈ ವೇಳೆ ಮನ್ನಾನ್‌ ಜೈದಿಗೆ ಎಚ್ಚರವಾಗಿದೆ. ಇನ್ನೇನು ಗುಪ್ತಾಂಗ ಕತ್ತರಿಸಬೇಕು ಎನ್ನುವಷ್ಟರಲ್ಲೇ ಆತ ಕೂಗಾಡಿದ್ದಾನೆ. ಬಳಿಕ ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಮೆಹರ್‌ ಜಹಾನ್‌ನನ್ನು ಬಂಧಿಸಿದ್ದಾರೆ.

ಮೆಹರ್‌ ಜಹಾನ್‌ಗೆ ಕುಡಿತದ ಚಟ ಇರುವ, ಆಗಾಗ ಸಿಗರೇಟು ಸೇದುವ ಚಟ ಇರುವುದು ಮನ್ನಾನ್‌ ಜೈದಿಗೆ ಗೊತ್ತಾಗಿದೆ. ಪತ್ನಿಯ ಚಟಗಳ ಕುರಿತು ಅರಿತುಕೊಂಡ ಮನ್ನಾನ್‌ ಜೈದಿಯು ನಾಲ್ಕು ಮಾತು ಬೈದಿದ್ದಾನೆ. ನಿನ್ನ ತಂದೆ-ತಾಯಿಗೆ ಹೇಳುತ್ತೇನೆ ಎಂದಿದ್ದಾನೆ. ಇದರಿಂದಾಗಿ ಕುಪಿತಗೊಂಡ ಮೆಹರ್‌ ಜಹಾನ್‌, ಗಂಡನನ್ನು ಕಟ್ಟಿ ಹಾಕಿ ಕೊಲೆ ಮಾಡಲು ಯತ್ನಿಸಿದ್ದಾಳೆ ಎನ್ನಲಾಗಿದೆ.

Continue Reading
Advertisement
West Bengal
ದೇಶ5 mins ago

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ6 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Champions Trophy 2025
ಕ್ರೀಡೆ7 mins ago

Champions Trophy 2025: ಇವರಿಂದ ಒಪ್ಪಿಗೆ ಸಿಕ್ಕರೆ ಪಾಕಿಸ್ತಾನದಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಆಡಲು ಸಿದ್ಧ ಎಂದ ಬಿಸಿಸಿಐ ಉಪಾಧ್ಯಕ್ಷ

Viral News
ವೈರಲ್ ನ್ಯೂಸ್11 mins ago

Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Car Accident
ಕರ್ನಾಟಕ14 mins ago

Road Accident: ಮಂಜೇಶ್ವರದಲ್ಲಿ ಆಂಬ್ಯುಲೆನ್ಸ್-ಕಾರಿನ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

Viral Video
ವೈರಲ್ ನ್ಯೂಸ್21 mins ago

Viral Video: ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ಕಿಡಿಗೇಡಿಗಳ ವಿಕೃತಿ; ವಿಡಿಯೋ ವೈರಲ್‌

karnataka rains
ಮಳೆ30 mins ago

Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

India’s Jersey T20 World Cup
ಕ್ರೀಡೆ49 mins ago

India’s Jersey T20 World Cup: ಭಾರತ ತಂಡದ ಹೊಸ ಜೆರ್ಸಿ ಕಂಡು ಟ್ರೋಲ್​ ಮಾಡಿದ ನೆಟ್ಟಿಗರು

Narendra Modi
ದೇಶ55 mins ago

Narendra Modi: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ, ಆಶೀರ್ವಾದ ಮಾಡಿದ ಅಜ್ಜಿ; Video ಇದೆ

Aravind Kejriwal
ದೇಶ1 hour ago

Arvind Kejriwal: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ6 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ21 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ22 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ22 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

ಟ್ರೆಂಡಿಂಗ್‌