Karnataka Rain : ಮಳೆ-ಗಾಳಿ ಜತೆಗೆ ಸಿಡಿಲು ಬಡಿದು ಇಬ್ಬರು ಸಾವು; ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿ - Vistara News

ಪ್ರಮುಖ ಸುದ್ದಿ

Karnataka Rain : ಮಳೆ-ಗಾಳಿ ಜತೆಗೆ ಸಿಡಿಲು ಬಡಿದು ಇಬ್ಬರು ಸಾವು; ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿ

Karnataka Weather Forecast : ಮಳೆ-ಗಾಳಿ (Karnataka Rain) ಜತೆಗೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ.

VISTARANEWS.COM


on

Karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಸಿಡಿಲು ಬಡಿದು ರೈತರೊಬ್ಬರು (Karnataka Rain) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮಪ್ಪ ಭಾಳಪ್ಪ ಮಂಗಳೂರ (56) ಮೃತ ದುರ್ದೈವಿ. ದನ ಕಾಯುತ್ತಿದ್ದ ಭೀಮಪ್ಪ ಭಾಳಪ್ಪ ಮನೆಗೆ ತೆರಳುವಾಗ ಸೋಮವಾರ ಸಂಜೆ ಹೊತ್ತಿಗೆ ಮಳೆ- ಗಾಳಿ ಜತೆಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ. ಹೊಸೂರು ಗ್ರಾಮದ 1008 ಪಾರ್ಶ್ವನಾಥ ಜೈನ ಮಂದಿರಕ್ಕೆ ಹಾನಿಯಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಿಡಿಲಿನ ಅಬ್ಬರವು ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಎರಡು ದಿನಗಳಿಂದ ಹುಕ್ಕೇರಿ ಬಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಹುಕ್ಕೇರಿ, ಚಿಕ್ಕೋಡಿ, ನಿಪ್ಪಾಣಿ ತಾಲೂಕಗಳ ವಿವಿಧೆಡೆ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ಮಳೆಯಿಂದ ರಸ್ತೆ ಮೇಲೆ ನೀರು ಹರಿದಿದೆ. ವರುಣನ ಆರ್ಭಟಕ್ಕೆ ಪ್ರಯಾಣಿಕರ ಪರದಾಡಿದರು. ಇತ್ತ ಮಳೆಯಿಂದ ಹಿಂಗಾರು ಬಿತ್ತನೆಗೆ ಸಜ್ಜಾದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಗಾಳಿ- ಮಳೆಗೆ ಹಾರಿ ಹೋದ ಕಾರ್ಖಾನೆಯ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ತಡ ರಾತ್ರಿ ಸುರಿದ ಗಾಳಿ- ಮಳೆಗೆ ಕಾರ್ಖಾನೆಯ ಚಾವಣಿ ಹಾರಿಹೋಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸನೀಲ್ ಎನ್ನುವವರಿಗೆ ಸೇರಿದ ಕಾರ್ಖಾನೆಯಲ್ಲಿದ್ದ ಮಷಿನ್ ಹಾಗು ಕಟ್ಟಡಕ್ಕೆ ಹಾನಿಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ಚಾವಣಿ ಹಾರಿ ಹೋಗಿದೆ.

ರಾಯಚೂರಿನಲ್ಲೂ ಸಿಡಿಲು ಬಡಿದು ವ್ಯಕ್ತಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ. ದುರಗಪ್ಪ (35) ಮೃತ ದುರ್ದೈವಿ. ರಾಯಚೂರಿನ ಲಿಂಗಸ್ಗೂರು ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗ್ರೇಡ್ -2 ತಹಶಿಲ್ದಾರ್ ಶಂಶಾಲಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲೂ ಅಬ್ಬರಿಸಿದ್ದ ಮಳೆ

ಕಾಫಿನಾಡ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ಮಳೆ ಅಬ್ಬರ ಜೋರಾಗಿತ್ತು. ಆಲಿಕಲ್ಲು ಮಳೆಗೆ ಮಲೆನಾಡಿಗರು ಹೈರಾಣಾದರು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಭಾರೀ ಆಲಿಕಲ್ಲು ಮಳೆಯಾಗಿತ್ತು. ಹಸಿರ ಹುಲ್ಲಿನ ರಾಶಿ ಮೇಲೆ ಆಲಿಕಲ್ಲು ಹರಡಿದಂತೆ ಸುರಿದಿದೆ. ಅಕ್ಟೋಬರ್‌ನಲ್ಲಿ ಆಲಿಕಲ್ಲು ಮಳೆ ಕಂಡು ಮಲೆನಾಡಿಗರು ಕಂಗಲಾಗಿದ್ದು, ಕಾಫಿ ಬೆಳೆಗೆ ಹಾನಿಯಾಗುವ ಆತಂಕ ಇದೆ.

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಜಲಾವೃತಗೊಂಡಿತ್ತು. ಕಳಸ-ಬಾಳೆಹೊನ್ನೂರು ರಾಜ್ಯ ಹೆದ್ದಾರಿ ಬಂದ್ ಆಗಿತ್ತು. ಹೊರನಾಡು ಮಾರ್ಗದಲ್ಲಿ ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವು ಬಂದ್ ಆಗಿತ್ತು. ಸೇತುವೆ ಮೇಲೆ 2 ಅಡಿ ಎತ್ತರದಲ್ಲಿ ನೀರು ಹರಿಯುತ್ತಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದಾವಣಗೆರೆ

Accident Case : ದಾವಣಗೆರೆಯಲ್ಲಿ ದುರಂತ; ಬಿಸಿ ನೀರು ಹಾಗೂ ಬಿಸಿ ಸಾಂಬಾರ್‌ ಬಿದ್ದು ಪ್ರತ್ಯೇಕ ಕಡೆ ಇಬ್ಬರು ಮಕ್ಕಳು ಸಾವು

Accident Case : ದಾವಣಗೆರೆಯಲ್ಲಿ ದುರಂತ ಸಂಭವಿಸಿದೆ. ಬಿಸಿ ನೀರು ಹಾಗೂ ಬಿಸಿ ಸಾಂಬಾರ್‌ ಬಿದ್ದು ಪ್ರತ್ಯೇಕ ಕಡೆ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

VISTARANEWS.COM


on

By

Two children die after hot water and hot sambar fall on them
ಬಿಸಿ ಸಾಂಬಾರ್‌ ಬಿದ್ದು ಮಿಥುನ್ ಸಾವು
Koo

ದಾವಣಗೆರೆ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಿಸಿ ನೀರು ಹಾಗು ಬಿಸಿ ಸಾಂಬಾರ್ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ (Accident Case) ಘಟನೆ ನಡೆದಿದೆ. ಪೋಷಕರು ಎಷ್ಟೇ ಜಾಗೃತವಾಗಿದ್ದರೂ ಅನಾಹುತಗಳು ನಿಲ್ಲುತ್ತಿಲ್ಲ. ದಾವಣಗೆರೆಯ ಚನ್ನಗಿರಿ ತಾಲೂಕಿನ ತ್ಯಾವಣಿಗೆ ಹಾಗೂ ಜಗಳೂರು ಪಟ್ಟಣದ ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ದುರಂತಗಳು ನಡೆದಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಗೊಲ್ಲರಹಟ್ಟಿಯಲ್ಲಿ ಬಿಸಿ ಸಾಂಬಾರ್ ಬಿದ್ದು ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಗೊಲ್ಲರಹಟ್ಟಿಯ ಶ್ರೀನಿವಾಸ್ ಎಂಬುವವರ ಪುತ್ರ ಮಿಥುನ್ (4) ಮೃತ ದುರ್ದೈವಿ. ಅಡುಗೆ ಮನೆಯ ಕಟ್ಟೆಯ ಮೇಲೆ ಇಟ್ಟಿದ್ದ ಬಿಸಿ ಸಾಂಬಾರ್ ಪಾತ್ರೆಯನ್ನು ಏಕಾಏಕಿ ಎಳೆದಿದ್ದಾನೆ. ಈ ವೇಳೆ ಬಿಸಿ ಸಾಂಬಾರ್ ದೇಹದ ಮೇಲೆ ಬಿದ್ದು ಬೆಂದು ಹೋಗಿದ್ದ. ಕೂಡಲೇ ದಾವಣಗೆರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮಿಥುನ್ ಮೃತಪಟ್ಟಿದ್ದಾನೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Physical Abuse : ಇನ್ಸ್ಟಾಗ್ರಾಮ್ ಲವ್‌; ಮದುವೆ ಆಗೋಣ ಬಾ ಎಂದವನು ಲಾಡ್ಜ್‌ಗೆ ಕರೆದೊಯ್ದು ಕೈಕೊಟ್ಟ ಪೊಲೀಸ್‌ ಪೇದೆ!

ಬಿಸಿ ನೀರು ಬಿದ್ದು ಒಂದೂವರೆ ವರ್ಷದ ಮಗು ಸಾವು

ಮತ್ತೊಂದು ಪ್ರಕರಣದಲ್ಲಿ ಒಂದೂವರೆ ವರ್ಷದ ಮಗುವಿನ ಮೇಲೆ ಬಿಸಿ ನೀರು ಬಿದ್ದು ಮೃತಪಟ್ಟಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತ್ಯಾವಣೆಗೆ ಗ್ರಾಮದಲ್ಲಿ ಘಟನೆ ನಡೆದಿದೆ. ವಡ್ನಾಳ್ ತಿಪ್ಪೇಶ್ ಹಾಗೂ ರೇಣುಕಾ ದಂಪತಿ ಪುತ್ರ ಯಶಸ್ ಮೃತ ದುರ್ದೈವಿ.

ರೇಣುಕಾ ವಡ್ನಾಳ್ ಗ್ರಾಮದಿಂದ ತ್ಯಾವಣೆಗೆ ತವರು ಮನೆಗೆ ಬಂದಿದ್ದರು. ಸ್ನಾನ ಮಾಡಲು ಬಾತ್ ರೂಮ್‌ನಲ್ಲಿ ಕೊಡದಲ್ಲಿ‌ ಬಿಸಿ ನೀರು ಇಟ್ಟಿದ್ದರು. ಆಟವಾಡುತ್ತಾ ಬಾತ್ ರೂಮ್‌ಗೆ ಹೋಗಿದ್ದ ಯಶಸ್‌ ಬಿಸಿ ನೀರು ತುಂಬಿದ ಕೊಡವನ್ನು ಮೈ ಮೇಲೆ ಎಳೆದುಕೊಂಡಿದ್ದಾನೆ. ಈ ವೇಳೆ ಬಿಸಿ ನೀರು ಬಿದ್ದು ಸೊಂಟದಿಂದ ಕಳೆಭಾಗ ಸಂಪೂರ್ಣ ಸುಟ್ಟು ಹೋಗಿತ್ತು. ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಯಶಸ್ ಮೃತಪಟ್ಟಿದ್ದಾನೆ. ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Physical Abuse : ಇನ್ಸ್ಟಾಗ್ರಾಮ್ ಲವ್‌; ಮದುವೆ ಆಗೋಣ ಬಾ ಎಂದವನು ಲಾಡ್ಜ್‌ಗೆ ಕರೆದೊಯ್ದು ಕೈಕೊಟ್ಟ ಪೊಲೀಸ್‌ ಪೇದೆ!

Physical Abuse : ಇನ್ಸ್ಟಾಗ್ರಾಮ್ ಮೂಲಕ ಯುವತಿಯನ್ನು ಪರಿಚಯ ಮಾಡಿಕೊಂಡ ಪೊಲೀಸ್‌ ಪೇದೆ, ಲವ್‌ ಮಾಡಿ ಮದುವೆ ಆಗೋಣ ಬಾ ಎಂದವನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

VISTARANEWS.COM


on

By

Physical Abuse
Koo

ಕಲಬುರಗಿ: ಪ್ರೀತಿಸಿ ಮದುವೆಯಾಗುವುದಾಗಿ (Love case) ಪೊಲೀಸ್ ಪೇದೆ ಯುವತಿಗೆ ವಂಚಿಸಿರುವ (Physical Abuse) ಆರೋಪ ಕೇಳಿ ಬಂದಿದೆ. ಪೊಲೀಸ್ ಪೇದೆ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೆಎಸ್‌ಆರ್‌ಪಿ ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ‌ ದೌರ್ಜನ್ಯ ವೆಸಗಿ ಪೊಲೀಸ್ ಪೇದೆ ವಂಚಿಸಿದ್ದಾನೆ. ಹೈದರಾಬಾದ್‌ ಯುವತಿಯನ್ನು ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದ. ಹೀಗೆ ಇಬ್ಬರಿಬ್ಬರು ಮಸೇಜ್‌, ಫೋನ್‌ ಕಾಲ್‌ ಮೂಲಕ ಸಂಪರ್ಕದಲ್ಲಿದ್ದರು. ಈ ವೇಳೆ ಯಲ್ಲಾಲಿಂಗ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಆಗ ಜಾತಿ ಕಾರಣಕ್ಕೆ ಪ್ರೀತಿಯನ್ನು ಯುವತಿ ಮೊದಲು ನಿರಾಕರಿಸಿದ್ದಳು. ಆದರೆ ಪೋಷಕರನ್ನು ಒಪ್ಪಿಸಿ ಮದುವೆ ಆಗುವುದಾಗಿ ಪುಸಲಾಯಿಸಿದ್ದ ಎನ್ನಲಾಗಿದೆ.

ಈ ನಡುವೆ ಮದುವೆ ಆಗುತ್ತೇನೆ ಎಂದೇಳಿ ಹೈದರಾಬಾದ್‌ನಿಂದ ಯುವತಿಯನ್ನು ಕಲಬುರಗಿಗೆ ಕರೆಸಿಕೊಂಡಿದ್ದ.‌ ಅಲ್ಲಿಂದ ಕಲಬುರಗಿ ಬಸ್‌ ನಿಲ್ದಾಣದ ಸಮೀಪದಲ್ಲಿದ್ದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಯುವತಿ ಲಾಡ್ಜ್‌ಗೆ ಕರೆತಂದಿದ್ದು ಯಾಕೆ ಎಂದು ಪ್ರಶ್ನಿಸಿದಾಗ ನಾಳೆ ಮದುವೆ ಆಗೋಣಾ ಎಂದಿದ್ದಾನೆ. ಈತನ ಮಾತನ್ನು ನಂಬಿದ ಯುವತಿ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದಾಳೆ. ಪ್ರತ್ಯೇಕ ರೂಮು ಬುಕ್‌ ಮಾಡುವಂತೆ ಕೇಳಿದಾಗ, ಮದುವೆ ಆಗುತ್ತೇವೆ, ಮತ್ಯಾಕೆ ಎರಡು ರೂಮು ಎಂದು, ಒಂದೇ ರೂಮಿನಲ್ಲಿ ಇಬ್ಬರು ಉಳಿದುಕೊಂಡಿದ್ದರು. ಮದುವೆ ಆಗುವುದಾಗಿ ಹೇಳಿ ಬಲವಂತಾಗಿ ದೈಹಿಕ‌ಸಂಪರ್ಕ ಬೆಳಸಿದ್ದ.

ಮುಂಜಾನೆ ಮದುವೆ ವಿಷಯ ತೆಗೆದರೆ ಯಲ್ಲಾಲಿಂಗ ಮೇತ್ರೆ ನಿರಾಕರಿಸಿದ್ದಾನೆ. ನಿಮ್ಮ ಮನೆಯವರು ವರದಕ್ಷಿಣಿ ಕೊಡಲ್ಲ. ನಮ್ಮ ಮನೆಯಲ್ಲೂ ಮದುವೆಗೆ ಒಪ್ಪಲ್ಲ ಎಂದು ವಂಚಿಸಿದ್ದಾನೆ. ಈ ಕುರಿತು ದೂರಿನಲ್ಲಿ ಯುವತಿ ಉಲ್ಲೇಖಿಸಿದ್ದಾರೆ. ಹೀಗಾಗಿ ಯುವತಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ಕಲಬುರಗಿ ಮಹಿಳಾ ಠಾಣೆಯಲ್ಲಿ 64,318(B),351,352 BNS ಅಡಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಾಲಿವುಡ್

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡೇಟು! ಮುಂಬೈ ಆಸ್ಪತ್ರೆಗೆ ದಾಖಲು

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡು ತಗುಲಿದ್ದು, ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Actor Govinda
Koo

ಬಾಲಿವುಡ್‌ ನಟ ಗೋವಿಂದ (Actor Govinda) ಕಾಲಿಗೆ ಗುಂಡು ತಗುಲಿದೆ. ರಿವಾಲ್ವರ್​​ ಲಾಕ್​ ಓಪನ್​ ಆಗಿದ್ದರಿಂದ ಜೇಬಿಗೆ ರಿವಾಲ್ವರ್​ ಇಟ್ಟುಕೊಳ್ಳುವಾಗ ಮಿಸ್ ಫೈರ್ ಆಗಿದೆ. ಕೂಡಲೇ ಗೋವಿಂದ ಕುಟುಂಬಸ್ಥರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಮುಂಜಾನೆ 4.45ರ ಸುಮಾರಿಗೆ ಘಟನೆ ನಡೆದಿದೆ.

ನಟ ಗೋವಿಂದ ಲೈಸೆನ್ಸ್​ ರಿವಾಲ್ವರ್​ ಬಳಕೆ ಮಾಡುತ್ತಿದ್ದರು. ಮನೆ ಬಿಡುವಾಗ ಗನ್​ ಚೆಕ್​ ಮಾಡುತ್ತಿದ್ದರು. ಈ ವೇಳೆ ಗೋವಿಂದ ಕಾಲಿಗೆ ಬುಲೆಟ್ ತಗುಲಿದೆ. ತನ್ನದೇ ರಿವಾಲ್ವರ್​​ನಿಂದ ಫೈರಿಂಗ್​​​ ಆಗಿದೆ. ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಯಲ್ಲಿ ಗೋವಿಂದಗೆ ಟ್ರೀಟ್​ಮೆಂಟ್​ ಮುಂದುವರಿದಿದೆ. ಅದೃಷ್ಟವಶಾತ್‌ ಗೋವಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಈ ಸಂಬಂಧ ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ: Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

ಮುಂಜಾನೆ ಕೋಲ್ಕತ್ತಾಗೆ ಹೊರಡುವ ಮೊದಲು ನಟ ತನ್ನ ಪರವಾನಗಿ ಪಡೆದ ರಿವಾಲ್ವರ್ ಅನ್ನು ಪರಿಶೀಲಿಸುತ್ತಿದ್ದಾಗ ಜುಹು ನಿವಾಸದಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಆಕಸ್ಮಿಕವಾಗಿ ಗೋವಿಂದ ಕೈಯಿಂದ ಬಿದ್ದು, ಕಾಲಿಗೆ ಗುಂಡು ತಗುಲಿದೆ ಎನ್ನಲಾಗಿದೆ. ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗಲು ಬೆಳಿಗ್ಗೆ 6 ಗಂಟೆಗೆ ಫ್ಲೈಟ್‌ ಇತ್ತು. ನಾನು ಮೊದಲೇ ವಿಮಾನ ನಿಲ್ದಾಣವನ್ನು ತಲುಪಿದ್ದೆ. ಗೋವಿಂದ ಅವರು ತಮ್ಮ ನಿವಾಸದಿಂದ ವಿಮಾನ ನಿಲ್ದಾಣಕ್ಕೆ ತೆರಳಲು ಹೊರಟಿದ್ದರು. ಆಗ ಈ ಅವಘಡ ಸಂಭವಿಸಿದೆ. ಸದ್ಯ ವೈದ್ಯರು ಗುಂಡು ಹೊರತೆಗೆದಿದ್ದು, ಗೋವಿಂದ ಆರೋಗ್ಯ ಸ್ಥಿರವಾಗಿದೆ ಎಂದು ನಟನ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ಆಸ್ಪತ್ರೆಯಿಂದ ನಟ ಗೋವಿಂದ ಆಡಿಯೋ ಮೆಸೇಜ್ ರಿಲೀಸ್ ಮಾಡಿದ್ದಾರೆ. ಎಲ್ಲರ ಹಾರೈಕೆ ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ. ಗುಂಡು ಬಿದ್ದಿದನ್ನು ತೆಗೆಯಲಾಗಿದೆ. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಂದೇಶ ಕಳುಹಿಸಿದ್ದಾರೆ. ಗೋವಿಂದ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಧ್ಯರಾತ್ರಿಯೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

VISTARANEWS.COM


on

By

Superstar Rajinikanth is unwell Family members admitted to hospital in the middle of the night
Koo

ಸೂಪರ್‌ ಸ್ಟಾರ್‌ ರಜನಿಕಾಂತ್ (Actor Rajinikanth) ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ (ಸೆ.30) ಮಧ್ಯರಾತ್ರಿ ತಲೈವಾ ರಜನಿಕಾತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಲ್ಯಾಬ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್‌ ಅಭಿನಯಿಸಿರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ರಜನಿಕಾಂತ್‌ಗೆ 73 ವರ್ಷ ವಯಸ್ಸು ಆಗಿದೆ. ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading
Advertisement
Two children die after hot water and hot sambar fall on them
ದಾವಣಗೆರೆ48 ನಿಮಿಷಗಳು ago

Accident Case : ದಾವಣಗೆರೆಯಲ್ಲಿ ದುರಂತ; ಬಿಸಿ ನೀರು ಹಾಗೂ ಬಿಸಿ ಸಾಂಬಾರ್‌ ಬಿದ್ದು ಪ್ರತ್ಯೇಕ ಕಡೆ ಇಬ್ಬರು ಮಕ್ಕಳು ಸಾವು

Physical Abuse
ಕಲಬುರಗಿ1 ಗಂಟೆ ago

Physical Abuse : ಇನ್ಸ್ಟಾಗ್ರಾಮ್ ಲವ್‌; ಮದುವೆ ಆಗೋಣ ಬಾ ಎಂದವನು ಲಾಡ್ಜ್‌ಗೆ ಕರೆದೊಯ್ದು ಕೈಕೊಟ್ಟ ಪೊಲೀಸ್‌ ಪೇದೆ!

Karnataka Rain
ಪ್ರಮುಖ ಸುದ್ದಿ2 ಗಂಟೆಗಳು ago

Karnataka Rain : ಮಳೆ-ಗಾಳಿ ಜತೆಗೆ ಸಿಡಿಲು ಬಡಿದು ಇಬ್ಬರು ಸಾವು; ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿ

Actor Govinda
ಬಾಲಿವುಡ್3 ಗಂಟೆಗಳು ago

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡೇಟು! ಮುಂಬೈ ಆಸ್ಪತ್ರೆಗೆ ದಾಖಲು

Superstar Rajinikanth is unwell Family members admitted to hospital in the middle of the night
ಸಿನಿಮಾ3 ಗಂಟೆಗಳು ago

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

Karnataka Weather Forecast
ಮಳೆ8 ಗಂಟೆಗಳು ago

Karnataka Weather : ಭಾರಿ ಮಳೆ ಹಿನ್ನೆಲೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ9 ಗಂಟೆಗಳು ago

Dina Bhavishya : ಪ್ರಮುಖ ಜನರೊಡನೆ ವ್ಯವಹರಿಸುವಾಗ ಈ ರಾಶಿಯವರು ಎಚ್ಚರಿಕೆಯಿಂದ ಮಾತನಾಡಿ

Namma Metro Blue line
ಬೆಂಗಳೂರು18 ಗಂಟೆಗಳು ago

Namma Metro: ಏರ್‌ಪೋರ್ಟ್‌ ನೀಲಿ ಮೆಟ್ರೋ ಮಾರ್ಗದಲ್ಲಿ‌ ಬದಲಾವಣೆ; ಎರಡು ನಿಲ್ದಾಣಗಳನ್ನು ಕೈಬಿಡಲು ಮುಂದಾದ ಬಿಎಂಆರ್‌ಸಿಎಲ್‌

Road accident on Karkala-Dharmasthala highway Four members of a family dead
ಪ್ರಮುಖ ಸುದ್ದಿ21 ಗಂಟೆಗಳು ago

Road Accident: ಕಾರ್ಕಳ ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ದುರ್ಮರಣ

53rd KVS National Games inaugurated
ಬೆಂಗಳೂರು21 ಗಂಟೆಗಳು ago

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ; ಮೈದಾನದಲ್ಲಿ ಬಾಲಕರ ರೋಚಕ ಕ್ರಿಕೆಟ್

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌