Road Accident : ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌! ನಿಯಂತ್ರಣ ತಪ್ಪಿ ಗೂಡ್ಸ್‌ ಲಾರಿ ಪಲ್ಟಿ, ಚಾಲಕನ ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್‌! - Vistara News

ಹಾವೇರಿ

Road Accident : ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌! ನಿಯಂತ್ರಣ ತಪ್ಪಿ ಗೂಡ್ಸ್‌ ಲಾರಿ ಪಲ್ಟಿ, ಚಾಲಕನ ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್‌!

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ‌ ಗೂಡ್ಸ್ ಲಾರಿ (Road Accident) ಪಲ್ಟಿಯಾಗಿದ್ದು, ಸರ್ವೀಸ್ ರಸ್ತೆಯ ಜಾಲರಿಗೆ ಹಾಕಿದ್ದ ಕಬ್ಬಿಣದ ಪೈಪ್ ನೇರವಾಗಿ ಚಾಲಕನ ಎದೆ ಸಿಳಿದೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹೂಲಿಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಚಾಲಕನ ಎದೆಗೆ ಹೊಕ್ಕಿರುವ ಕಬ್ಬಿಣದ ಪೈಪ್ ಹೊರತೆಗೆಯಲು ಹರಸಾಹಸ ಪಡೆಬೇಕಾಯಿತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೈವೇ ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕೂಡಲೇ ಚಾಲಕ ಶಿವಾನಂದ ಬಡಗಿ (27) ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್‌ ಹೊರತೆಗೆಯಲು ಹರಸಾಹಸ ಪಟ್ಟರು.

ಇತ್ತ ಅತಿಯಾದ ನೋವು, ರಕ್ತ ಸೋರುತ್ತಿದ್ದರೂ ಎದೆಯಲ್ಲಿ ಹೊಕ್ಕಿರುವ ಕಬ್ಬಿಣದ ಪೈಪ್ ಕಂಡು ದಿಕ್ಕು ತೋಚದೆ ಚಾಲಕ ಕುಳಿತಿದ್ದ. ಹುಬ್ಬಳ್ಳಿಯಿಂದ ದಾವಣಗೆರೆ ಕಡೆಗೆ ಹೊರಟಿದ್ದಾಗ ಈ ಅಪಘಾತ ಸಂಭವಿಸಿದೆ. ಕೂಡಲೇ ಕಬ್ಬಿಣದ ಪೈಪ್ ಕಟ್‌ ಮಾಡಿ ಚಾಲಕನನ್ನು ಹೊರತೆಗೆದು ಬಳಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Assault Case : ಡೋರ್‌ ಹತ್ರ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದು ಹುಚ್ಚನಂತೆ ವರ್ತಿಸಿದ ಪ್ರಯಾಣಿಕ!

ಜಾಲಿ ರೈಡ್‌ ಮಾಡಲು ಬಂದವರು ಆಸ್ಪತ್ರೆಪಾಲು

ದೊಡ್ಡಬಳ್ಳಾಪುರ: ಜಾಲಿ ರೈಡ್‌ ಮಾಡಲು ಬಂದವರ ಬೈಕ್‌ ಅಪಘಾತಕ್ಕೀಡಾಗಿದ್ದು ಆಸ್ಪತ್ರೆಪಾಲಾಗಿದ್ದಾರೆ. ಜಾಲಿ ರೈಡ್‌ಗೆ ಬಂದು ಯೂ ಟರ್ನ್‌ಗೆ ನಿಂತಿದ್ದ ಬುಲೆಟ್ ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ‌ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನೂರು ಮೀಟರ್ ದೂರ ಹೋಗಿ ಬಿದ್ದ ಬುಲೆಟ್ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ಬಳಿ ಘಟನೆ ನಡೆದಿದೆ.

Road Accident
Road Accident

ಬುಲೆಟ್ ಬೈಕ್ ಸವಾರ ಹೆದ್ದಾರಿಯಲ್ಲಿ ಯೂ ಟರ್ನ್ ಮಾಡಲು ನಿಂತಿದ್ದ . ಈ ವೇಳೆ ಹಿಂದಿನಿಂದ ವೇಗವಾಗಿ ಜಾಲಿ ರೈಡ್ ಬಂದ ಯುವಕ ಬುಲೆಟ್ ಬೈಕ್‌ಗೆ ಗುದ್ದಿದ್ದಾನೆ. ಅಪಘಾತದ ರಭಸಕ್ಕೆ ಬುಲೆಟ್ ಬೈಕ್ ನಜ್ಜುಗುಜ್ಜಾಗಿದೆ. ಬುಲೆಟ್ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ದೊಡ್ಡಬಳ್ಳಾಪುರ ಸರ್ಕಾರಿ ಆಸ್ವತ್ರೆಗೆ ದಾಖಲು ಮಾಡಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಬೆಂಗಳೂರಿನಲ್ಲಿ ಲಘು, ಮಲೆನಾಡು ಸುತ್ತಮುತ್ತ ಭಾರಿ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ ಹಾಗೂ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Rain : ಮಳೆ-ಗಾಳಿ ಜತೆಗೆ ಸಿಡಿಲು ಬಡಿದು ಇಬ್ಬರು ಸಾವು; ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿ

Karnataka Weather Forecast : ಮಳೆ-ಗಾಳಿ (Karnataka Rain) ಜತೆಗೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ.

VISTARANEWS.COM


on

By

Karnataka Rain
Koo

ಚಿಕ್ಕೋಡಿ: ಸಿಡಿಲು ಬಡಿದು ರೈತರೊಬ್ಬರು (Karnataka Rain) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮಪ್ಪ ಭಾಳಪ್ಪ ಮಂಗಳೂರ (56) ಮೃತ ದುರ್ದೈವಿ. ದನ ಕಾಯುತ್ತಿದ್ದ ಭೀಮಪ್ಪ ಭಾಳಪ್ಪ ಮನೆಗೆ ತೆರಳುವಾಗ ಸೋಮವಾರ ಸಂಜೆ ಹೊತ್ತಿಗೆ ಮಳೆ- ಗಾಳಿ ಜತೆಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಜೈನ ಸಮುದಾಯ ಬಸದಿ ಶಿಖರಕ್ಕೆ ಹಾನಿಯಾಗಿದೆ. ಹೊಸೂರು ಗ್ರಾಮದ 1008 ಪಾರ್ಶ್ವನಾಥ ಜೈನ ಮಂದಿರಕ್ಕೆ ಹಾನಿಯಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಿಡಿಲಿನ ಅಬ್ಬರವು ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಎರಡು ದಿನಗಳಿಂದ ಹುಕ್ಕೇರಿ ಬಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಹುಕ್ಕೇರಿ, ಚಿಕ್ಕೋಡಿ, ನಿಪ್ಪಾಣಿ ತಾಲೂಕಗಳ ವಿವಿಧೆಡೆ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ಮಳೆಯಿಂದ ರಸ್ತೆ ಮೇಲೆ ನೀರು ಹರಿದಿದೆ. ವರುಣನ ಆರ್ಭಟಕ್ಕೆ ಪ್ರಯಾಣಿಕರ ಪರದಾಡಿದರು. ಇತ್ತ ಮಳೆಯಿಂದ ಹಿಂಗಾರು ಬಿತ್ತನೆಗೆ ಸಜ್ಜಾದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಗಾಳಿ- ಮಳೆಗೆ ಹಾರಿ ಹೋದ ಕಾರ್ಖಾನೆಯ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ತಡ ರಾತ್ರಿ ಸುರಿದ ಗಾಳಿ- ಮಳೆಗೆ ಕಾರ್ಖಾನೆಯ ಚಾವಣಿ ಹಾರಿಹೋಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸನೀಲ್ ಎನ್ನುವವರಿಗೆ ಸೇರಿದ ಕಾರ್ಖಾನೆಯಲ್ಲಿದ್ದ ಮಷಿನ್ ಹಾಗು ಕಟ್ಟಡಕ್ಕೆ ಹಾನಿಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ಚಾವಣಿ ಹಾರಿ ಹೋಗಿದೆ.

ರಾಯಚೂರಿನಲ್ಲೂ ಸಿಡಿಲು ಬಡಿದು ವ್ಯಕ್ತಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ. ದುರಗಪ್ಪ (35) ಮೃತ ದುರ್ದೈವಿ. ರಾಯಚೂರಿನ ಲಿಂಗಸ್ಗೂರು ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗ್ರೇಡ್ -2 ತಹಶಿಲ್ದಾರ್ ಶಂಶಾಲಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲೂ ಅಬ್ಬರಿಸಿದ್ದ ಮಳೆ

ಕಾಫಿನಾಡ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ಮಳೆ ಅಬ್ಬರ ಜೋರಾಗಿತ್ತು. ಆಲಿಕಲ್ಲು ಮಳೆಗೆ ಮಲೆನಾಡಿಗರು ಹೈರಾಣಾದರು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಭಾರೀ ಆಲಿಕಲ್ಲು ಮಳೆಯಾಗಿತ್ತು. ಹಸಿರ ಹುಲ್ಲಿನ ರಾಶಿ ಮೇಲೆ ಆಲಿಕಲ್ಲು ಹರಡಿದಂತೆ ಸುರಿದಿದೆ. ಅಕ್ಟೋಬರ್‌ನಲ್ಲಿ ಆಲಿಕಲ್ಲು ಮಳೆ ಕಂಡು ಮಲೆನಾಡಿಗರು ಕಂಗಲಾಗಿದ್ದು, ಕಾಫಿ ಬೆಳೆಗೆ ಹಾನಿಯಾಗುವ ಆತಂಕ ಇದೆ.

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಜಲಾವೃತಗೊಂಡಿತ್ತು. ಕಳಸ-ಬಾಳೆಹೊನ್ನೂರು ರಾಜ್ಯ ಹೆದ್ದಾರಿ ಬಂದ್ ಆಗಿತ್ತು. ಹೊರನಾಡು ಮಾರ್ಗದಲ್ಲಿ ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವು ಬಂದ್ ಆಗಿತ್ತು. ಸೇತುವೆ ಮೇಲೆ 2 ಅಡಿ ಎತ್ತರದಲ್ಲಿ ನೀರು ಹರಿಯುತ್ತಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಹಗುರದಿಂದ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಉಳಿದಂತೆ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾರಿ ಮಳೆಯಾಗಲಿದ್ದು, ಉಡುಪಿಯಲ್ಲಿ ಹಗುರದಿಂದ ಕೂಡಿರಲಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲಿಯಸ್ಸ್‌ ಇರಲಿದೆ. ಮಂಗಳವಾರದಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡ, ಹಾಸನ, ಮಂಡ್ಯ, ಮೈಸೂರು ಮತ್ತು ತುಮಕೂರು
ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Weather : ಮಲೆನಾಡಿನಲ್ಲಿ ಅಬ್ಬರಿಸುವ ಮಳೆ; ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌

Karnataka Weather Forecast : ಮಲೆನಾಡಿನಲ್ಲಿ ಮಳೆ ಅಬ್ಬರಿಸಲಿದ್ದು, ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ.

ಆರೆಂಜ್‌ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Continue Reading
Advertisement
Helicopter crashes in Pune's Bhavdan hilly area Three dead
ದೇಶ6 ನಿಮಿಷಗಳು ago

Helicopter crashed: ಪುಣೆಯ ಬವ್‌ದಾನ್ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪತನ; ಮೂವರು ದುರ್ಮರಣ

Love case
ಬೆಂಗಳೂರು36 ನಿಮಿಷಗಳು ago

Love Case : ಸಿರಿಯಲ್ ನಟಿಯ ಮದುವೆ ಕಿರಿಕ್‌; ವಾಶ್‌ರೂಮ್‌ನಲ್ಲಿ ಯುವಕ ಆತ್ಮಹತ್ಯೆ

Road Accident
ಹಾವೇರಿ1 ಗಂಟೆ ago

Road Accident : ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌! ನಿಯಂತ್ರಣ ತಪ್ಪಿ ಗೂಡ್ಸ್‌ ಲಾರಿ ಪಲ್ಟಿ, ಚಾಲಕನ ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್‌!

Family Dispute
ರಾಯಚೂರು2 ಗಂಟೆಗಳು ago

Family Dispute : ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಬರೆದಿಟ್ಟ ನೋವಿನ ಕಥೆ

Assault Case
ಬೆಂಗಳೂರು2 ಗಂಟೆಗಳು ago

Assault Case : ಡೋರ್‌ ಹತ್ರ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದು ಹುಚ್ಚನಂತೆ ವರ್ತಿಸಿದ ಪ್ರಯಾಣಿಕ!

Mahatma Gandhi How did the name Gandhi Class come about
ದೇಶ8 ಗಂಟೆಗಳು ago

Gandhi Jayanti 2024: `ಗಾಂಧಿ ಕ್ಲಾಸ್‌’ ಹೆಸರು ಬಂದಿದ್ದು ಹೇಗೆ?

karnataka Weather Forecast
ಮಳೆ9 ಗಂಟೆಗಳು ago

Karnataka Weather : ಬೆಂಗಳೂರಿನಲ್ಲಿ ಲಘು, ಮಲೆನಾಡು ಸುತ್ತಮುತ್ತ ಭಾರಿ ಮಳೆ ಸಾಧ್ಯತೆ

Dina bhavishya
ಭವಿಷ್ಯ9 ಗಂಟೆಗಳು ago

Dina Bhavishya : ಈ ರಾಶಿಯವರು ಅಮಾವಾಸ್ಯೆ ದಿನದ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವಿರಿ

Pai International Electronics Limited continues its tradition of conducting the most Genuine Lucky Draw function transparently
ಬೆಂಗಳೂರು20 ಗಂಟೆಗಳು ago

Pai International: ಪೈ ವತಿಯಿಂದ ಮೆಗಾ ಮಾನ್ಸೂನ್‌ ಮೇಳ; ಲಕ್ಕಿ ಡ್ರಾ ವಿಜೇತರ ಆಯ್ಕೆ, ಬಹುಮಾನ ಗೆದ್ದವರ ಪಟ್ಟಿ ಬಿಡುಗಡೆ

PSI Exam
ಬೆಂಗಳೂರು21 ಗಂಟೆಗಳು ago

PSI Exam : ಅಕ್ಟೋಬರ್‌ 3ರಂದು ಪಿಎಸ್‌ಐ ಪರೀಕ್ಷೆ ; ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌