HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು - Vistara News

ಬೆಂಗಳೂರು

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

HD Kumaraswamy : ಎಲೆಕ್ಷನ್‌ಗಾಗಿ ಎಚ್‌ಡಿ ಕುಮಾರಸ್ವಾಮಿ ಅವರು 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಸದ್ಯ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

HD kumaraswamy And Vijayetata
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ಉದ್ಯಮಿ ವಿಜಯ ಟಾಟಾ ಎಂಬುವವರಿಂದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ 50 ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಜಯ್ ಟಾಟಾ ದೂರಿನಲ್ಲಿ ಏನಿದೆ?

ರಿಯಲ್ ಎಸ್ಟೇಟ್ ಉದ್ಯಮಿಯಾದ ನಾನು 2018 ರಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದೇನೆ. ಎಚ್‌ಡಿ ದೇವೆಗೌಡರ ಪಕ್ಷದ ಸೋಷಿಯಲ್‌ ಮೀಡಿಯಾ ಉಪಾಧ್ಯಕ್ಷನಾಗಿ ನನ್ನನ್ನು ನೇಮಿಸಿದರು. 2019ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ಕುಮಾರಸ್ವಾಮಿ ಪರ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಅಭಿಯಾನ ನಡೆಸಿದ್ದೇನೆ. ಕಳೆದ ಕೆಲ ವರ್ಷಗಳಿಂದ ರಿಯಲ್ ಎಸ್ಟೇಟ್ ಉದ್ಯಮದ ಬಗ್ಗೆ ಗಮನಹರಿಸಿದ್ದೆ. ಪಕ್ಷದ ಕಾರ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಆಗಸ್ಟ್ 24, 2024 ರಂದು ರಮೇಶ್ ಗೌಡ ನನ್ನ ನಿವಾಸಕ್ಕೆ ಆಗಮಿಸಿದ್ದರು.

ನನ್ನ ಮನೆಯಲ್ಲಿ ಜತೆಯಲ್ಲಿ ಊಟ ಮಾಡುತ್ತಾ ಚೆನ್ನಪಟ್ಟಣ ಚುನಾವಣೆ ಬಗ್ಗೆ ವಿವರಿಸಿದರು. ನಿಖಿಲ್ ಕುಮಾರಸ್ವಾಮಿಯವರಿಗೆ ಚನ್ನಪಟ್ಟಣ ಚುನಾವಣೆಗೆ ಟಿಕೆಟ್ ನೀಡುವುದು ಅಂತಿಮವಾಗಿದೆ ಎಂದರು. ಇದೇ ವೇಳೆ ಕುಮಾರಸ್ವಾಮಿ ಫೋನ್ ಮಾಡಿದ್ದರು. ನಿಖಿಲ್ ಚನ್ನಪಟ್ಟಣ ಚುನಾವಣೆಗೆ ನಿಲ್ಲುತ್ತಿದ್ದಾರೆ, ಚುನಾವಣೆಗೆ 50 ಕೋಟಿ ರೂ. ಕೊಡಿ ಅಂದರು. ಈ ವೇಳೆ ನಾನು ಆಗಲ್ಲ ಸರ್ ಅಂತೇಳ್ದೆ, ಅದಕ್ಕೆ ಕುಮಾರಸ್ವಾಮಿ ಕೋಪ ಮಾಡಿಕೊಂಡರು. ನೀವು ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ನಡೆಸೋದಷ್ಟೇ ಅಲ್ಲ. ಬದುಕುವುದೇ ಕಷ್ಟವಾಗತ್ತೆ ಅಂತ ಬೆದರಿಕೆ ಹಾಕಿ ಫೋನ್ ಕಟ್ ಮಾಡಿದ್ದರು. ನಿಮ್ಮ ರಿಯಲ್ ಎಸ್ಟೇಟ್ ಪ್ರಾಜೆಕ್ಟ್ ಕಂಪ್ಲೀಟ್ ಮಾಡಲಿಕ್ಕೆ ಬಿಡೊಲ್ಲ ಎಂದು ಹೇಳಿದ್ದರಂತೆ.

ಕುಮಾರಸ್ವಾಮಿ ಜತೆ ಫೋನ್‌ನಲ್ಲಿ ಮಾತಾಡುವ ವೇಳೆ ರಮೇಶ್ ಗೌಡ ಎದುರಲ್ಲಿ ಕುಳಿತಿದ್ದರು. ಈ ವೇಳೆ ರಮೇಶ್ ಗೌಡ ಕೂಡ ಐದು ಕೋಟಿ ಕೇಳಿದರು. ದೇವಾಲಯ ಹಾಗೂ ಶಾಲೆ ಕಟ್ಟಿಸುತ್ತಿದ್ದು ಅದಕ್ಕಾಗಿ ಐದು ಕೋಟಿ ರೂ. ಕೊಡಿ ಎಂದು ರಮೇಶ್ ಗೌಡ ಕೇಳಿದರು. ತುಂಬಾ ಕಷ್ಟ ಇದೆ ಯಾವುದೇ ಕಾರಣಕ್ಕೂ ಆಗಲ್ಲ ಅಂತ ಹೇಳಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ಉದ್ಯಮಿ ವಿಜಯ್ ಟಾಟಾ ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದೇವೆ. ಒಂದು ವಾರದಿಂದ ಮೆಸೇಜ್, ಕಾಲ್ ಮಾಡುವ ಕೆಲಸ ರಮೇಶ್ ಗೌಡ ಮಾಡುತ್ತಿದ್ದರು. 2019ರ ಚುನಾವಣೆಗೆ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೀವಿ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಕುಮಾರಸ್ವಾಮಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿ ಎನ್ ಎಸ್ 352 ಅಡಿಯಲ್ಲಿ ಎನ್ ಸಿ ಆರ್ ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ (Actor Darshan) ರಾಜಾತಿಥ್ಯ ಕೇಸ್ ಸಂಬಂಧ ತನಿಖೆಯು ಕ್ಲೈ ಮ್ಯಾಕ್ಸ್ ಹಂತದಲ್ಲಿದ್ದು, ಇದೀಗ ಜೈಲಿನೊಳಗಿನ ಅಂದರ್ ಕಿ ದರ್ಬಾರ್ ಬೆಳಕಿಗೆ ಬಂದಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ನಟ ದರ್ಶನ್ (Actor Darshan) ಇದ್ದ ವೇಳೆ ಸಿಕ್ಕ ರಾಜಾತಿಥ್ಯದ ತನಿಖೆ ಕೊನೆಗೂ ಮುಕ್ತಾಯದ ಹಂತ ತಲುಪಿದೆ. ವಿಶೇಷ ಸವಲತ್ತುಗಳ ಜಾಡು ಹಿಡಿದ ಖಾಕಿಗೆ ರಾಜಾತಿಥ್ಯದ ಪಿನ್ ಟು ಪಿನ್ ಸಾಕ್ಷಿ ದೊರೆತಿದ್ದು, ಇದರ ಹೊರತಾಗಿ ಜೈಲಿನಲ್ಲಿ ಸಿಗುವ ಮದ್ಯದ ಬಾಟೆಲ್‌ಗಳ ಮತ್ತೊಂದು ಕಹಾನಿ ಬೆಳಕಿಗೆ ಬಂದಿದೆ.

ಜೈಲಿನೊಳಗೆ ದರ್ಶನ್‌ಗೆ ಸಿಕ್ಕ ರಾಜಾತಿಥ್ಯದ ಸಂಬಂಧ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ನಡೆಸಿದ ತನಿಖೆ ವೇಳೆ ರಾಜಾತಿಥ್ಯದ ಮಹತ್ವದ ಸಾಕ್ಷಿಗಳು ಲಭ್ಯವಾಗಿವೆ. ಜತೆಗೆ ಇದಕ್ಕೆ ಕಾರಾಗೃಹದ ಸಿಬ್ಬಂದಿ ಸಹಕರಿಸಿರುವ ಸಂಗತಿ ಸಹ ಬಯಲಾಗಿದೆ. ಸದ್ಯ ಈ ಎಲ್ಲಾ ಮಾಹಿತಿಗಳನ್ನು ಆರೋಪ ಪಟ್ಟಿಯಲ್ಲಿ ಸೇರಿಸಿರುವ ಪೊಲೀಸರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸುವ ತಯಾರಿಯಲ್ಲಿದ್ದಾರೆ.

ಜೈಲಿನ ಒಳಗಡೆ ದರ್ಶನ್ ರೌಂಡ್ ಟೇಬಲ್‌ನಲ್ಲಿ ಟೀ ಪಾರ್ಟಿ ಮಾಡಿದ್ದು, ಜೈಲಿನೊಳಗೆ ಹೊರಗಿನ ವ್ಯಕ್ತಿ ಜತೆ ವಿಡಿಯೊ ಕಾಲ್ ಸಂಭಾಷಣೆ ನಡೆಸಿದ್ದ ಈ ಎರಡು ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ವಿಸ್ತೃತ ಆರೋಪ ಪಟ್ಟಿ ತಯಾರಿಸಿದ್ದಾರೆ. ಸದ್ಯ ಈ ಆರೋಪ ಪಟ್ಟಿ ಅಂತಿಮ ಹಂತದ ತಯಾರಿಯಲ್ಲಿದ್ದು, ಪೊಲೀಸರು ಅಂತಿಮ ಪರಾಮರ್ಶೆಗೆಂದು ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಈ ಮೂಲಕ ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಜೈಲಿನಲ್ಲಿರುವ ರೌಡಿಗಳಿಗೆ ಸಪ್ಲೈ ಆಗುತ್ತಿದೆಯಾ ಕಾಸ್ಟ್ಲಿ ಡ್ರಿಂಕ್ಸ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಸಿಕ್ಕಿದ್ದ ರಾಜಾತಿಥ್ಯ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಈಗ ಹೊಸದಂದು ಸಂಗತಿ ಕೇಳಿ ಬಂದಿದೆ. ಜೈಲಿನಲ್ಲಿರುವ ಕೆಲ ರೌಡಿಗಳಿಗೆ ಕಾಸ್ಟ್ಲಿ ಡ್ರಿಂಕ್ಸ್ ಸರಬರಾಜು ಆಗುತ್ತಿದೆ ಎನ್ನಲಾಗಿದೆ. ಅದು ಮೂರು ಹಂತಗಳಲ್ಲಿ ಹೊರಗಿನಿಂದ ಜೈಲಿನೊಳಗೆ ಮದ್ಯ ತಲುಪುತ್ತಿದೆ ಎನ್ನಲಾಗಿದೆ. ಇನ್ನು ಮದ್ಯದ ಬಾಟಲ್‌ನ ಅಸಲಿ ಬೆಲೆ 2 ಸಾವಿರ ಇದ್ದರೆ ಅದನ್ನು ಜೈಲಿನೊಳಗೆ ಕೊಡಲು 25 ಸಾವಿರ ನೀಡಲಾಗುತ್ತಿದೆ ಎನ್ನಲಾಗಿದೆ.

ಬಾಟಲ್‌ನ ಓರ್ವ ಹೊರಗಡೆಯಿಂದ ತಂದರೆ, ಅದನ್ನು ಜೈಲಿನ ಒಳಗೆ ತೆಗೆದುಕೊಂಡು ಹೋಗುವವನು ಮತ್ತೊಬ್ಬನಂತೆ.. ಬಳಿಕ ಅದನ್ನು ರೌಡಿಗೆ ತಲುಪಿಸುವವನು ಮತ್ತೋಬ್ಬ.. ಇನ್ನು ಈ ಸರಬರಾಜು ಪ್ರಕ್ರಿಯೆಯಲ್ಲಿ ಜೈಲಿನ ಕೆಲ ಸಿಬ್ಬಂದಿ ಹಾಗೂ ಕೆಲ ಸಜಾ ಬಂಧಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಹೀಗೆ ಒಳಗೆ ಸಪ್ಲೈ ಮಾಡಿ ಎಣ್ಣೆಗೆ ಹಣ ಹೊರಗಡೆಯೇ ಪಡೆಯಲಾಗುತ್ತಿದೆ. ಯಾರ್ಯಾರು ಎಣ್ಣೆ ತಂದು ಕೊಡುತ್ತಿದ್ದರು ಎಂಬ ಬಗ್ಗೆ ತನಿಖೆ ಆರಂಭಿಸಿರುವ ಆಗ್ನೇಯ ವಿಭಾಗದ ಪೊಲೀಸರು ಕೆಲವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಇದೆಲ್ಲದರ ನಡುವೆ ನಗರ ಪೊಲೀಸ್ ಆಯುಕ್ತರು ಜೈಲಿನ ರಾಜಾತಿಥ್ಯದ ಬಗ್ಗೆ ವರದಿ ನೀಡುವಂತೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾರಿಮಾಗೆ ಸೂಚಿಸಿದ್ದರು. ಅದರಂತೆ ತನಿಖೆ ವೇಳೆ ಕಂಡು ಬಂದ ಅಂಶಗಳ ಸಹಿತ ರಾಜಾತಿಥ್ಯದ ವರದಿ ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ್ದಾರೆ. ಸದ್ಯ ರಾಜಾತಿಥ್ಯದ ತನಿಖೆ ಕೈಗೊಂಡಿದ್ದ ಪೊಲೀಸರು ಬಹುತೇಕ ತನಿಖೆ ಮುಕ್ತಾಯಗೊಳಿಸಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಆ ಬಳಿಕ ಜೈಲಿನ ಅಕ್ರಮ ಚಟುವಟಿಕೆಗಳ ಮತ್ತಷ್ಟು ಸಂಗತಿ ಬಯಲಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನವಾಗಿದೆ. ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬವನ್ನು ಪೀಣ್ಯ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

VISTARANEWS.COM


on

By

Bengaluru News
Koo

ಬೆಂಗಳೂರು: ಬೆಂಗಳೂರಿನ ಪೀಣ್ಯದಲ್ಲಿದ್ದ (Bengaluru News) ಒಂದೇ ಕುಟುಂಬದ ಮೂವರು ಪಾಕ್ ಪ್ರಜೆಗಳನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ತಾರಿಖ್ ಸಯೀದ್(ಪತಿ), ಅನಿಲ ಸಯೀದ್ (ಪತ್ನಿ), ಇಶ್ರತ್ ಸಯೀದ್ (ಮಗಳು) ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುಟುಂಬ ಮೆಹದಿ ಫೌಂಡೇಶನ್‌ಗೆ ಸೇರಿದ್ದರು. ಪಾಕಿಸ್ತಾನದಿಂದ ಬಾಂಗ್ಲಾಗೆ ಸುಮಾರು ಹದಿನೈದಕ್ಕೂ ಹೆಚ್ಚು ಮಂದಿ ಬಂದಿದ್ದರು, ಅದರಲ್ಲಿ ಈ ಪಾಕ್ ಕುಟುಂಬವಿತ್ತು. ಅಲ್ಲಿಂದ ದೆಹಲಿಗೆ ಅಕ್ರಮವಾಗಿ ಪ್ರವೇಶಿಸಿ, ಭಾರತ ದೇಶದ ನಕಲಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ ಪೋರ್ಟ್ ಮಾಡಿಕೊಂಡಿದ್ದರು. ಅಲ್ಲಿಂದ ನೇರ ಕೇರಳಕ್ಕೆ ಹೋಗಿದ್ದರು. ಕೇರಳದಿಂದ ದಾವಣಗೆರೆಗೆ ಬಂದಿದ್ದ ಪಾಕ್ ಕುಟುಂಬ, ದಾವಣಗೆರೆಯಲ್ಲಿ ಒಂದು ವರ್ಷಗಳ ಕಾಲ ವಾಸ ಮಾಡುತ್ತಿತ್ತು.

ಇದನ್ನೂ ಓದಿ:Jigani Police: ಉಲ್ಫಾ ಉಗ್ರ ಬಂಧನ ಬೆನ್ನಲ್ಲೆ ನಾಲ್ವರು ವಿದೇಶಿಗರು ಸೇರಿ ‌ಓರ್ವ ಪಾಕಿಸ್ತಾನ ಪ್ರಜೆ ಬಂಧನ

ಕಳೆದ ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ಪೀಣ್ಯಗೆ ಆಗಮಿಸಿದ್ದರು. ಪೀಣ್ಯದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಕುಟುಂಬ ಮೆಹದಿ ಫೌಂಡೇಶನ್‌ನ ಧರ್ಮ ಮತ್ತು ಧರ್ಮ ಗುರುಗಳ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದರು. ಜಿಗಣಿಯಲ್ಲಿ ಪಾಕ್ ಪ್ರಜೆ ರಷೀದ್ ಫ್ಯಾಮಿಲಿ ಬಂಧನವಾಗಿದ್ದರು. ರಷೀದ್ ತನಿಖೆಯ ವೇಳೆ ಪೀಣ್ಯದಲ್ಲಿ ಮತ್ತೊಂದು ಪಾಕ್ ಫ್ಯಾಮಿಲಿ ಇರುವುದಾಗಿ ಬಾಯಿಬಿಟ್ಟಿದ್ದರು. ಹೀಗಾಗಿ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ರಾತ್ರಿ ಪೀಣ್ಯದಿಂದ ಬಂಧನ ಮಾಡಿ ಕರೆತಂದಿದ್ದ ಪೊಲೀಸರು ಮೂವರಿಗೂ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೆಡಿಕಲ್ ಚೆಕಪ್ ಮುಗಿಸಿ ಮತ್ತೆ ಪೊಲೀಸ್ ಠಾಣೆಗೆ ಕರೆದೊಯ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ವಾಹನ ಸವಾರರು ಹೈರಾಣಗಿದ್ದರು.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಗುರುವಾರ ಮಧ್ಯಾಹ್ನದ ಹೊತ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ದಿಢೀರ್‌ ಶುರುವಾದ ಮಳೆಯಿಂದಾಗಿ ಬೈಕ್‌ ಸವಾರರು, ಸಾರ್ವಜನಿಕರು ಪರದಾಡಿದರು. ಮೆಜೆಸ್ಟಿಕ್‌, ಚಿಕ್ಕಪೇಟೆ, ಉಪ್ಪಾರ್‌ಪೇಟೆ, ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್ ಸೇರಿದಂತೆ ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗಿದೆ. ಇನ್ನೆರಡು ದಿನಗಳು ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Rain
Karnataka Rain

ರಾಜಧಾನಿ ಬೆಂಗಳೂರಲ್ಲಿ‌ ಬೆಳಗಿನ ಸಮಯ ಮೋಡ ಕವಿದ ವಾತಾವರಣ ಇತ್ತು, ನಂತರ ಬಿಸಿಲು ಆವರಿಸಿತ್ತು. ನೋಡನೋಡುತ್ತಿದ್ದಂತೆ ಮಧ್ಯಾಹ್ನ ಆಗುತ್ತಿದ್ದಂತೆ ಕಗ್ಗತ್ತಲು ಆವರಿಸಿ, ಮಧ್ಯಾಹ್ನ 2ರ ಸುಮಾರಿಗೆ ಶುರುವಾದ ಮಳೆಯು (Rain News) ಅರ್ಧ ಗಂಟೆಗೂ ಹೆಚ್ಚು ಸಮಯ (Bengaluru Rain) ಅಬ್ಬರಿಸಿದೆ. ಮಳೆ ಹಿನ್ನೆಲೆ ಹಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರು ಹೈರಾಣಾದರು.

Karnataka Rain
Karnataka Rain

ವೈಟ್ ಫೀಲ್ಡ್ ಸುತ್ತ ಮುತ್ತ ಭಾರಿ ಮಳೆಯಿಂದಾಗಿ ರಸ್ತೆಯಲ್ಲಿಯೇ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ವರ್ತೂರು, ತುಬರಹಳ್ಳಿ ಕಡೆ ನಿಧಾನಗತಿಯ ಸಂಚಾರ ಇದ್ದು, ಭಾರೀ ಮಳೆಗೆ ಸಿಲುಕಿ ವಾಹನ ಸವಾರರು ಪರದಾಡಿದರು.

ತಿಪಟೂರಿನಲ್ಲಿ ಭಾರಿ ಮಳೆ, ಜನ-ಜೀವನ ಅಸ್ತವ್ಯಸ್ತ

ತುಮಕೂರಿನ ತಿಪಟೂರಿನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ತಿಪಟೂರು ನಗರದ ಗಾಂಧಿನಗರ ಹಾಗೂ ಅರಸು ನಗರ ಕಾಲೋನಿಗಳ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗಿತ್ತು. ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆ ನಗರಸಭೆ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದರು. ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲ, ಹೀಗಾಗಿ ಮನೆಗಳಿಗೆ ನೀರು ನುಗ್ಗಿದೆ ಎಂದು ಆಕ್ರೋಶ ಹೊರಹಾಕಿದರು.

ಧರೆಗುರುಳಿದ ಬೃಹತ್ ಮರ

ಬೆಂಗಳೂರಿನ ನಾಗರಭಾವಿ ಬಿಡಿಎ ಕಾಂಪ್ಲೆಕ್ಸ್ ಬಳಿಯ ಬೃಹತ್ ಮರವೊಂದು ಧರೆಗುರುಳಿದೆ. ಆಲದಮರ ಬಸ್‌ ನಿಲ್ದಾಣದ ಮೇಲೆಯೇ ಬೃಹತ್ ಮರ ಬಿದ್ದಿದ್ದು,ಸ್ವಲ್ಪದರಲ್ಲೇ ಹಲವರು ಪಾರಾಗಿದ್ದಾರೆ. ನಿತ್ಯ ಬಸ್ ನಿಲ್ದಾಣದಲ್ಲಿ ಹತ್ತಾರು ಜನ ಪ್ರಯಾಣಿಕರು ನಿಲುತ್ತಿದ್ದರು. ಮರ ಬೀಳುವ ಶಬ್ಧ ಕೇಳಿ ಜನರು ಓಡಿಹೋದ ಕಾರಣ ಎಲ್ಲರೂ ಬಜಾವ್ ಆಗಿದ್ದಾರೆ. ಅದೃಷ್ಟವಶಾತ್‌ ಮರ ಬೀಳುವ ಸಮಯದಲ್ಲಿ ಯಾವುದೇ ವಾಹನಗಳು ಸಂಚಾರಿಸುತ್ತಿರಲಿಲ್ಲ. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.

Continue Reading

ಬೆಂಗಳೂರು

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

MLA Muniratna: ಶಾಸಕ ಮುನಿರತ್ನ ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಸಂತ್ರಸ್ತೆಯೊಂದಿಗೆ ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದರು.

VISTARANEWS.COM


on

By

MLA Muniratna
Koo

ಬೆಂಗಳೂರು: ಶಾಸಕ ಮುನಿರತ್ನ (MLA Muniratna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಮುಂದುವರಿದಿದೆ. ಸುದೀರ್ಘವಾಗಿ ಸಂತ್ರಸ್ತೆಯಿಂದ ಹೇಳಿಕೆ ದಾಖಲಿಸಿದ್ದು, ಈಗಾಗಲೇ ಮೊಬೈಲ್ ಸೀಜ್ ಮಾಡಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಅಧಿಕಾರಿಗಳಿಗೆ ಕೆಲ ವಿಡಿಯೊಗಳು ಮತ್ತು ಕೆಲ ದಾಖಲೆಗಳನ್ನು ಸಂತ್ರಸ್ತೆ ನೀಡಿದ್ದಾರೆ.

ಈ ಹಿಂದೆ ಅತ್ಯಾಚಾರ ಆರೋಪದ ಬೆನ್ನಲ್ಲೇ ಕಗ್ಗಲೀಪುರ ಪೊಲೀಸರು ಈ ಹಿಂದೆಯೇ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು. ಇದೀಗ ಗುರುವಾರ ಜೆಪಿ ಪಾರ್ಕ್‌ನ ಗೋಡೌನ್‌, ರಾಮಯ್ಯ ಸಮಾಧಿ ಬಳಿ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರ್‌ ಮಾಡಿದರು. ಹನಿಟ್ರ್ಯಾಪ್‌ ಮಾಡಿದ್ದ ಜೆಪಿ ಪಾರ್ಕ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ಸಂತ್ರಸ್ತೆ ಕರೆತಂದು ಮಹಜರ್‌ ನಡೆಸಿದರು.

ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ಮುನಿರತ್ನ ಸಂಬಂಧಿತ ಕೆಲ ದಾಖಲೆಗಳನ್ನು ಕೊಟ್ಟಿದ್ದಾರೆ ಎನ್ನಲಾಗಿದೆ. ಜತೆಗೆ ಮುನಿರತ್ನ ಆಪ್ತ ಸಹಾಯಕನ ವಿಚಾರಣೆ ನಡೆಸಲಾಗಿದ್ದು, ಸಂತ್ರಸ್ತೆ ಪರಿಚಿತೆ ಈ ರೀತಿ ಯಾಕೆ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ಆರು ಮಂದಿ ನಾಪತ್ತೆ

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕಳೆದ ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಒಟ್ಟು ಏಳು ಜನರ ಆರೋಪಿಗಳ‌ ಹೆಸರು ದಾಖಲಾಗಿದೆ. ಸದ್ಯ ಮುನಿರತ್ನರನ್ನು ಬಂಧನ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಎಸ್‌ಐಟಿ ಮುಂದೆ ಮುನಿರತ್ನ ನಂಗೇನು ಗೊತ್ತಿಲ್ಲ ಎಂದಿದ್ದಾರೆ. ಇನ್ನು ಇದುವರೆಗೂ ಪ್ರಕರಣದಲ್ಲಿ ಇನ್ನುಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ. ಪ್ರಕರಣ ದಾಖಲಾಗಿ 15 ದಿನ ಕಳೆದರೂ ಆರು ಜನ ಆರೋಪಿಗಳು ಪತ್ತೆಯಾಗಿದ್ದಾರೆ. ಮುನಿರತ್ನ‌ ನಾಯ್ಡು ಸೇರಿದಂತೆ ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಮತ್ತು ಲೋಕಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ನಾಪತ್ತೆಯಾಗಿರುವ ಆರು ಜನ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮುನಿರತ್ನರಿಗೆ ಡಿಎನ್‌ಎ ಟೆಸ್ಟ್‌

ಎಸ್‌ಐಟಿ ಅಧಿಕಾರಿಗಳು ಗುರುವಾರ 42ನೇ ಎಸಿಎಂಎಂ ಕೋರ್ಟ್‌ಗೆ ಶಾಸಕ ಮುನಿರತ್ನರನ್ನು ಹಾಜರು ಪಡಿಸಿದರು. ಇದೆ ವೇಳೆ ಎಸ್‌ಐಟಿ ಅಧಿಕಾರಿಗಳು ಡಿಎನ್‌ಎ ಟೆಸ್ಟ್ ಮಾಡಿಸಲು ಅನುಮತಿ ಕೇಳಿದರು. ಈ ವೇಳೆ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡಿ ನ್ಯಾಯಾಧೀಶರು ಆದೇಶಿಸಿದರು. ಇದಕ್ಕೂ ಮೊದಲು ಪೊಲೀಸರಿಂದ ಏನಾದರೂ ಸಮಸ್ಯೆ ಆಯಿತಾ ಎಂದು ಮುನಿರತ್ನರನ್ನು ನ್ಯಾಯಾಧೀಶರು ಕೇಳಿದರು. ಯಾವುದೇ ಸಮಸ್ಯೆ ಇಲ್ಲ, ಆದರೆ ಇದೊಂದು ಪಿತೂರಿ‌ ಎಂದು ಅಳಲು ತೋಡಿಕೊಂಡರು.

ವೈದ್ಯರೊಂದಿಗೆ ಹಾಜರಾಗಿದ್ದ ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ಮುನಿರತ್ನರ ರಕ್ತದ ಮಾದರಿ ಸಂಗ್ರಹ ಮಾಡಲು ಮುಂದಾದರು. ಈ ವೇಳೆ ಮುನಿರತ್ನ ತಮ್ಮ ವಕೀಲರು ಬರಬೇಕು. ಅವರ ಮುಂದೆ ಸ್ಯಾಂಪಲ್ಸ್ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು. ಮನವಿಯನ್ನ ಪುರಸ್ಕರಿಸಿ ವಕೀಲರು ಬಂದ ಮೇಲೆ ಸ್ಯಾಂಪಲ್ಸ್ ತೆಗೆದುಕೊಳ್ಳಲು ಎಸ್ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಕ್ತದ ಮಾದರಿ ಸಂಗ್ರಹಿಸುವ ಸಂಬಂಧ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು. ರಾಜ್ಯದಲ್ಲಿ ಕೆಲವೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ರಕ್ತದ ಮಾದರಿ ಸಂಗ್ರಹಿಸಲು ನಮ್ಮದು ಅಭ್ಯಂತರ ಇಲ್ಲ. ಆದರೆ ಯಾವ ಕಾರಣಕ್ಕಾಗಿ ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಕಾರಣ ಬೇಕು. ಘಟನೆ ನಡೆದು ವರ್ಷಗಳೆ ಕಳೆದಿದೆ. ಎಫ್ಎಸ್‌ಎಲ್‌ಗೆ ರವಾನೆ ಮಾಡಲು ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳಲಿ. ಸ್ಟೇಟ್ ಏಜೆನ್ಸಿ ಹೊರತು ಪಡಿಸಿ ಸೆಂಟ್ರಲ್ ಏಜೆನ್ಸಿಗೆ ಪರೀಕ್ಷೆ ನಡೆಸಲು ರವಾನಿಸಬೇಕು. ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳುವ ಮುನ್ನ ನಮ್ಮ ಗಮನಕ್ಕೆ ತರಬೇಕಿತ್ತು ಎಂದು ವಾದಿಸಿದರು.

ಪ್ರಕರಣ ತನಿಖಾ ಹಂತದಲ್ಲಿದೆ. ಅದರಲ್ಲೂ ಆರೋಪಿ ತನಿಖಾ ತಂಡದ ಕಸ್ಟಡಿಯಲ್ಲಿದ್ದಾರೆ. ಆ ಸಂದರ್ಭದಲ್ಲಿ ತನಿಖಾಧಿಕಾರಿಗಳ ಮನವಿಗೆ ಸ್ಪಂದಿಸಿ, ಆದೇಶ ಮಾಡಲಾಗಿದೆ. ನೀವು ಆಕ್ಷೇಪಣೆ ಸಲ್ಲಿಸುವುದಾದರೆ ಸಲ್ಲಿಕೆ ಮಾಡಿ ಎಂದು ಬ್ಲಡ್ ಸ್ಯಾಂಪಲ್ಸ್ ಸಂಗ್ರಹಿಸುವ ಪ್ರಕ್ರಿಯೆಯನ್ನು ನಾಳೆ ಶುಕ್ರವಾರ ಬೆಳಗ್ಗೆಗೆ ಮುಂದೂಡಿ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಮಧ್ಯಾಹ್ನದ ನಂತರ ರಕ್ತದ ಮಾದರಿ ಸಂಗ್ರಹಿಸಲು ವೈದ್ಯರಿಗೆ ಸೂಚನೆ ನೀಡಿದರು.

ಜಾಮೀನು ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ

ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಗುರುವಾರ ನಡೆಯಿತು. ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ಗುರುವಾರ (ಅ.3) ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಮತ್ತೊಂದು ಸುತ್ತಿನ ವಾದ ಮಂಡಿಸಿದರು. ಎಸ್‌ಐಟಿ ಪರ ಎಸ್‌ಪಿಪಿ ಪ್ರದೀಪ್ ಹಾಜರಾಗಿದ್ದರು. ಸೆಕ್ಷನ್ 376(2)n ಸಂಬಂಧಿಸಿದಂತೆ ಹಲವು ಕೋರ್ಟ್ ಆದೇಶಗಳ ಉಲ್ಲೇಖಿಸಿ ಅಶೋಕ್ ಹಾರನಹಳ್ಳಿ ವಾದ ಮಾಡಿದರು. ಎಸ್‌ಪಿಪಿ ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನಾಳೆ ಶುಕ್ರವಾರ 2:45ಕ್ಕೆ ವಿಚಾರಣೆ ಮುಂದೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan
ಬೆಂಗಳೂರು18 ನಿಮಿಷಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು3 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು3 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ4 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು4 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು6 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು7 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು8 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು8 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

PSI exam slated to be held across the state today
ಬೆಂಗಳೂರು13 ಗಂಟೆಗಳು ago

PSI Exam : ರಾಜ್ಯಾದ್ಯಂತ ಇಂದು ಪಿಎಸ್‌ಐ ಪರೀಕ್ಷೆ; ಇಎನ್‌ಟಿ ವೈದ್ಯರಿಂದ ಅಭ್ಯರ್ಥಿಗಳಿಗೆ ತಪಾಸಣೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌