Actor Darshan : ರೇಣುಕಾಸ್ವಾಮಿ ಫೋಟೊಗಳು ನೈಜವಲ್ಲ!ಮತ್ತೆ ಎಫ್‌ಎಸ್‌ಎಲ್ ಮೊರೆ ಹೋದ ಖಾಕಿ ಪಡೆ - Vistara News

ಬೆಂಗಳೂರು

Actor Darshan : ರೇಣುಕಾಸ್ವಾಮಿ ಫೋಟೊಗಳು ನೈಜವಲ್ಲ!ಮತ್ತೆ ಎಫ್‌ಎಸ್‌ಎಲ್ ಮೊರೆ ಹೋದ ಖಾಕಿ ಪಡೆ

Actor Darshan : ರೇಣುಕಾಸ್ವಾಮಿ ಫೋಟೊಗಳು ನೈಜವಲ್ಲ ಇಂತಹದೊಂದು ಪ್ರಶ್ನೆ ಕಾಡುತ್ತಿದೆ. ಹೀಗಾಗಿ ಪೊಲೀಸರು ಮತ್ತೆ ಎಫ್‌ಎಸ್‌ಎಲ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಈಗಾಗಲೆ ಕೋರ್ಟ್ ಪ್ರಕ್ರಿಯೆಗಳು ಶುರುವಾಗಿದೆ. ಈ ಸಂದರ್ಭದಲ್ಲಿ ಸಹಜವಾಗಿಯೇ ವಾದ-ಪ್ರತಿವಾದಗಳು ಜೋರಾಗಿದೆ. ಆದರೆ ಈಗ ಪ್ರಮುಖವಾದ ಎವಿಡೆನ್ಸ್ ಒಂದು ನೈಜನಾ ಅಥವಾ ಸುಳ್ಳಾ ಎಂಬ ಪ್ರಶ್ನೆಗಳು ಉದ್ಭವವಾಗಿದೆ. ಎಲ್ಲಾ ಕೋರ್ಟ್ ಕಲಾಪಗಳಲ್ಲಿ ನಡೆಯುವಂತೆ ಈ ಪ್ರಕರಣದಲ್ಲೂ ಕೂಡ ಮುಂದುವರೆದಿದೆ. ಮೊನ್ನೆಯಷ್ಟೆ ಪೊಲೀಸರು ಕಲೆ ಹಾಕಿದ್ದ ವಸ್ತ್ರಗಳು, ಅದರ ಮೇಲಿನ ರಕ್ತದ ಕಲೆಗಳೆಲ್ಲೂ ಸುಳ್ಳು ಸಾಕ್ಷಿಯಾಗಿದೆ ಎಂದು ನಟ ದರ್ಶನ್‌ (Actor Darshan) ಪರ ವಕೀಲರು ವಾದ ಮಂಡಿಸಿದ್ದರು. ಈಗ ಅದೊಂದು ಫೋಟೊ ಮೇಲೂ ಆರೋಪ ಶುರುವಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೂ ಮತ್ತಷ್ಟು ಸಾಕ್ಷಿಗಳ ಬಗ್ಗೆ ಧೃಡತೆ ಪತ್ರಗಳು ಇನ್ನೂ ಪೊಲೀಸರ ಕೈ ಸೇರಿಲ್ಲ. ಹೀಗಾಗಿ ಈಗ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಮಾಡಿರುವ ಹಾಗೂ ಲಗತ್ತಿಸಿರುವ ರೇಣುಕಾಸ್ವಾಮಿಯ ಫೋಟೊಗಳ ಬಗ್ಗೆ ದರ್ಶನ್‌ ಪರ ವಕೀಲರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೊಬೈಲ್‌ಗಳನ್ನು ರಿಟ್ರೀವ್ ಮಾಡಿದಾಗ ಕೃತ್ಯದ ಸಂಧರ್ಭದಲ್ಲಿ ತೆಗೆದಿದ್ದ ರೇಣುಕಾಸ್ವಾಮಿ ಕೈ ಮುಗಿದು ಕೂತಿರುವ ಫೋಟೊ ಹಾಗು ಸಾವನ್ನಪ್ಪಿದ ಬಳಿಕ ಶವವನ್ನು ಮಲಗಿಸಿದ್ದ ಫೋಟೋ ಸಿಕ್ಕಿತ್ತು.

ಇದನ್ನೂ ಓದಿ: Actor Darshan : ದರ್ಶನ್‌ ಬೇಲ್‌ ಭವಿಷ್ಯ! ಹೈದರಾಬಾದ್ CFSLನಲ್ಲೇ ಇರುವ ನಟನ ಐಫೋನ್‌ನಲ್ಲಿ ಅಡಗಿದ್ಯಾ ಸತ್ಯ?

ಈ ಫೋಟೋ ಕೃತ್ಯದ ಸಂದರ್ಭದಲ್ಲಿ ತೆಗೆಯಲಾಗಿದೆ ಎಂದು ಸಾಕ್ಷಿಯನ್ನಾಗಿ ಮಾಡಿಕೊಳ್ಳಲಾಗಿತ್ತು. ಆದರೆ ಈ ಫೋಟೊಗಳು ಆರ್ಟಿಫಿಷಲ್ ಇಂಟಲಿಜೆನ್ಸ್‌ನಿಂದ ಸೃಷ್ಟಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಇದರ ಅಸಲಿಯತ್ತು ತಿಳಿಯಲು ಪೊಲೀಸರು ಈಗ ರಿಪೋರ್ಟ್ ಬೇಗನೇ ಕೊಡುವಂತೆ ಎಫ್‌ಎಸ್‌ಎಲ್ ಮೊರೆ ಹೋಗಿದ್ದಾರೆ.

ಈಗಾಗಲೆ ಕಲೆ ಹಾಕಿರುವ ಸಾಕ್ಷಿಗಳಲ್ಲಿ ಈ ಫೋಟೊ ಪ್ರಮುಖ ಸಾಕ್ಷಿ ಎನಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇದರ ದೃಢೀಕೃತ ವರದಿ ಅವಶ್ಯಕತೆ ಇದೆ. ಸದ್ಯ ಇಲ್ಲಿಯವರೆಗೂ ಫೋಟೊ ಹಾಗೂ ರಿಟ್ರೀವ್ ಮಾಡಿದ್ದ ವರದಿಯನ್ನು ಮಾತ್ರ ಚಾರ್ಜ್ ಶೀಟ್‌ನಲ್ಲಿ ಸಲ್ಲಿಕೆ ಮಾಡಲಾಗಿತ್ತು. ಎಫ್ ಎಸ್ ಎಲ್ ವರದಿ ಬಂದ ಬಳಿಕ ಅಡಿಷನಲ್ ಚಾರ್ಜ್ ಶೀಟ್‌ಅನ್ನು ಪೊಲೀಸರು ಸಲ್ಲಿಕೆ ಮಾಡಲಿದ್ದಾರೆ. ಸದ್ಯ ಕೋರ್ಟ್ ಟ್ರಯಲ್ ನಡೆಯುತ್ತಿದ್ದು, ಯಾವ್ಯಾವ ಸಾಕ್ಷಿಗಳು ಈ ಕೇಸ್‌ಲ್ಲಿ ಪ್ರಮುಖ ಪಾತ್ರ ವಹಿಸುತ್ತೆ ಎಂಬುದನ್ನು ಕಾದು ನೋಡಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Electric shock : ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಕ್ಷಣಾರ್ಧದಲ್ಲೆ ಸುಟ್ಟುಕರಕಲು

Electric shock : ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ವಿದ್ಯುತ್‌ ತಂತಿ ಬಿದ್ದಿದ್ದು, ಕ್ಷಣಾರ್ಧದಲ್ಲೆ ಸುಟ್ಟುಕರಕಲಾಗಿದ್ದಾರೆ.

VISTARANEWS.COM


on

By

An electric wire fell on the woman Death due to electric shock
Koo

ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಹಿಳೆಯೊಬ್ಬರು (Electric shock) ಬಲಿಯಾಗಿದ್ದಾರೆ. ನೆಲಮಂಗಲ ಶಾಸಕ ಶ್ರೀನಿವಾಸ್ ಅವರ ಮನೆ ಸಮೀಪವೇ ಈ ದುರ್ಘಟನೆ ನಡೆದಿದೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕನಹಳ್ಳಿ ಬಳಿ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದ್ದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮಂಜಮ್ಮ (55) ಮೃತ ದುರ್ದೈವಿ.

ಮಂಜಮ್ಮ ಹಾಗೂ ಮತ್ತಿಬ್ಬರು ಮಹಿಳೆಯರು ಸೇರಿ ರಸ್ತೆ ಬದಿ ನಿಂತು ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಹೈಟೆನ್ಷನ್‌ ವೈರ್‌ ಮಂಜಮ್ಮ ಮೇಲೆ ಬಿದ್ದಿದೆ. ಅಷ್ಟೇ ಏಕಾಏಕಿ ಬೆಂಕಿ ಕಿಡಿ ಹೊತ್ತುಕೊಂಡಿದ್ದು, ಕ್ಷಣಾರ್ಧದಲ್ಲೇ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಮಂಜಮ್ಮ ಕೆಳಗೆ ಬಿದ್ದಿದ್ದು, ಬೆಂಕಿಯು ಹೊತ್ತಿ ಉರಿದಿದೆ. ಜತೆಗೆ ಇದ್ದ ಮಹಿಳೆಯು ಮಂಜಮ್ಮರ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅವರಿಗೂ ಕರೆಂಟ್‌ ಶಾಕ್‌ ಹೊಡೆದಿದೆ. ಕೂಡಲೇ ಅಕ್ಕ-ಪಕ್ಕದ ಜನರು ಓಡಿ ಬಂದಿದ್ದು, ಮಹಿಳೆಯನ್ನು ಎಳೆದುಕೊಂಡು ರಕ್ಷಿಸಿದ್ದಾರೆ.

ಬಳಿಕ ನೋಡುನೋಡುತ್ತಿದ್ದಂತೆ ಮಂಜಮ್ಮ ಬೆಂಕಿಯಿಂದ ಸುಟ್ಟುಹೋಗಿದ್ದಾರೆ. ಇನ್ನು ಇದೆಲ್ಲವೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದಾರೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ

ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಕ್‌ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದಾರೆ. ತಂದೆ, ತಾಯಿ ಸೇರಿ ಮಗು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮನೆಗೆ ಕೇಕ್‌ ತೆಗೆದು ಕೊಂಡು ಹೋಗಿದ್ದರು. ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜತೆ ಸೇರಿ ಕೇಕ್ ತಿಂದಿದ್ದರು. ಕೇಕ್ ತಿಂದ ನಂತರ ಮೂವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ.

ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಪಿ ಅಗ್ರಹಾರ ಠಾಣೆ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೇಕ್ ತಂದಿದ್ದು ಯಾವ ಬೇಕರಿಯಿಂದ? ಕೇಕ್‌ನಲ್ಲಿರೋ ಅಂಶಗಳಿಂದ ಅಸ್ವಸ್ಥರಾಗಿದ್ದಾರಾ ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ವೈದ್ಯರ ವರದಿಗಾಗಿ ಕಾಯುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bomb Threat : ಬೆಂಗಳೂರು ಪೊಲೀಸರಿಗೆ ತಲೆನೋವು ತಂದ ಬಾಂಬ್ ಬೆದರಿಕೆ‌ E-Mails

Bomb Threat : ಹುಸಿ ಬಾಂಬ್ ಬೆದರಿಕೆ‌ E-Mailsಗಳು ಬೆಂಗಳೂರು ಪೊಲೀಸರಿಗೆ ತಲೆನೋವು ಆಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 60ಕ್ಕೂ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಸದ್ಯ ಯಾವ ಪ್ರಕರಣದಲ್ಲೂ ಆರೋಪಿಗಳು ಸಿಕ್ಕಿಬಿದ್ದಿಲ್ಲ, ಎಲ್ಲವೂ ತನಿಖಾ ಹಂತದಲ್ಲೇ ಇರುವಾಗಲೇ ಮತ್ತೆ ಬೆದರಿಕೆ ಇ-ಮೇಲ್‌ ಬರುತ್ತಿವೆ.

VISTARANEWS.COM


on

By

Bomb threat e-mails a headache for Bengaluru police
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಪೊಲೀಸರಿಗೆ ಬಾಂಬ್ ಬೆದರಿಕೆ‌ (Bomb Threat) ಇ-ಮೇಲ್‌ ಸಂದೇಶಗಳು ತಲೆನೋವು ತಂದಿದೆ. ಪದೆ ಪದೇ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ ಬರುತ್ತಿದ್ದು,ಟೆನ್ಷನ್‌ ಹೆಚ್ಚು ಮಾಡಿದೆ. ಶಾಲೆಗಳು, ಹೋಟೆಲ್‌ಗಳು ನಂತರ ಕಾಲೇಜುಗಳಿಗೂ ಹುಸಿ ಬಾಂಬ್‌ ಬೆದರಿಕೆಗಳು ಬರುತ್ತಿವೆ. ಸದ್ಯ ಇ-ಮೇಲ್ ಜಾಡು ಹಿಡಿದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಇಲ್ಲೂ ಕೂಡ ವಿಪಿಎನ್ ಬಳಸಿ ಬೆದರಿಕೆ ಇ-ಮೇಲ್ ರವಾನೆ ಆಗುತ್ತಿದೆ.

ಅ.4ರಂದು ಮೂರು ಕಾಲೇಜಿಗೆ ಬಾಂಬ್ ಬೆದರಿಕೆ‌‌ ಇ-ಮೇಲ್ ಬಂದಿತ್ತು. ಹೀಗೆ ಇ-ಮೇಲ್‌ಗಳ ತನಿಖೆಗೆ ಸಾಲು ಸಾಲು ಸವಾಲು ಎದುರಾಗಿದೆ. ಮೈಕ್ರೋಸಾಪ್ಟ್ ಮೂಲಕ ನಕಲಿ ವಿಪಿಎನ್ ಬಳಸಿ ಇಮೇಲ್ ಕಳುಹಿಸಿರುವ ಶಂಕೆ ಇದೆ. ಐಪಿ ಅಡ್ರೆಸ್ ವಿವರ ನೀಡುವಂತೆ ಮೈಕ್ರೋಸಾಪ್ಟ್ ಕಂಪನಿಗೆ ಪೊಲೀಸರು ಪತ್ರ ಬರೆದಿದ್ದಾರೆ.

ಕಿಡಿಗೇಡಿಗಳು ವಿಪಿಎನ್ ಬಳಸಿ ಹುಸಿ ಬಾಂಬ್ ಬೆದರಿಕೆ ಹಾಕುತ್ತಿದ್ದಾರೆ. ಇದನ್ನು ಪತ್ತೆ ಮಾಡುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಸರ್ವರ್ ಪ್ರೊವೈಡರ್ ಕಂಪನಿಗಳು ಹಳೇ ಪ್ರಕರಣಗಳ ಮಾಹಿತಿಯೇ ನೀಡಿಲ್ಲ. ಅವುಗಳ ತನಿಖೆ ಇನ್ನು ಬಾಕಿ ಇರುವಾಗಲೇ ಮತ್ತೆ ಬೆದರಿಕೆ ಇ-ಮೇಲ್ ಶುರುವಾಗಿದೆ. ಹುಸಿ ಬಾಂಬ್ ಬೆದರಿಕೆ ಇ-ಮೇಲ್‌ಗಳನ್ನು ನಿರ್ಲಕ್ಷ್ಯಿಸುವಂತಿಲ್ಲ ಎಂಬಾತಾಗಿದೆ.

ಈವರೆಗೆ ಬಂದ ಬೆದರಿಕೆ ಇ-ಮೇಲ್‌ ವಿವರ ಹೀಗಿದೆ

ಅಕ್ಟೋಬರ್ 4
ಬೆಂಗಳೂರಿನ‌ ಮೂರು ಕಾಲೇಜಿಗೆ ಏಕಾಕಾಲಕ್ಕೆ ಹುಸಿ ಬಾಂಬ್ ಬೆದರಿಕೆ‌‌ ಮೇಲ್‌ ಬಂದಿತ್ತು. ಬಿ.ಎಂ.ಎಸ್‌ ಕಾಲೇಜು, ಎಂ.ಎಸ್‌.ರಾಮಯ್ಯ ಕಾಲೇಜು, ಬಿಐಟಿ​ ಕಾಲೇಜಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ‌

ಸೆಪ್ಟಂಬರ್ 28
ತಾಜ್ ವೆಸ್ಟ್ ಎಂಡ್ ಹೊಟೇಲ್‌ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಸೆಪ್ಟಂಬರ್ 18
ಅಶೋಕ ನಗರದ ಸೈನಿಕ ಶಾಲೆಗೆ ಹುಸಿ ಬಾಂಬ್ ಬೆದರಿಕೆ‌ ಮೇಲ್

ಆಗಸ್ಟ್ 29
ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಗೆ ಹುಸಿ‌ ಬಾಂಬ್ ಬೆದರಿಕೆ

ಆಗಸ್ಟ್ 13
ಜೆಪಿ‌ ನಗರದ ಕಂಪನಿಯೊಂದಕ್ಕೆ ಹುಸಿ ಬಾಂಬ್ ಬೆದರಿಕೆ‌ ಮೇಲ್

ಮೇ 23
ಎಲೆಕ್ಟ್ರಾನಿಕ್ ಸಿಟಿ ಹೋಟೆಲ್ ಸೇರಿ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ

ಮೇ 14
ಅಮೃತಹಳ್ಳಿಯ ಕೆಂಪಾಪುರದ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಮೇ 12
ಆರು ಆಸ್ಪತ್ರೆಗಳಿಗೆ ಬಾಂಬ್ ಇಟ್ಟಿದ್ದಾಗಿ ಬೆಂಗಳೂರು ಪೊಲೀಸರಿಗೆ ಹುಸಿ ಇ-ಮೇಲ್

ಏಪ್ರಿಲ್ 29
ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಬಾಂಬ್ ಇ-ಮೇಲ್

ಮಾರ್ಚ್ 29
ಆನೇಕಲ್ ಸ್ಕೂಲ್​ಗೆ ಬಾಂಬ್ ಬೆದರಿಕೆ ಇ-ಮೇಲ್

ಮಾರ್ಚ್ 6
ಸಿಎಂ, ಡಿಸಿಎಂ, ಗೃಹಸಚಿವರಿಗೆ ಹಣಕ್ಕೆ ಬೇಡಿಕೆ ಇಟ್ಟು ಹುಸಿ ಬಾಂಬ್ ಬೆದರಿಕೆ ಇ-ಮೇಲ್.

2023 ಡಿಸೆಂಬರ್ 11
ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ರಾಜಭವನದಲ್ಲಿ ಬಾಂಬ್ ಇಟ್ಟ ಬೆದರಿಕೆ

2023 ಡಿಸೆಂಬರ್ 1
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 60ಕ್ಕೂ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಸದ್ಯ ಯಾವ ಪ್ರಕರಣದಲ್ಲೂ ಆರೋಪಿಗಳು ಸಿಕ್ಕಿಬಿದ್ದಿಲ್ಲ, ಎಲ್ಲವೂ ತನಿಖಾ ಹಂತದಲ್ಲೇ ಇದೆ.

Continue Reading

ಬೆಂಗಳೂರು

Assault Case : ಜಸ್ಟ್‌ 20 ರೂಪಾಯಿಗೆ ನಡೆಯಿತು ಕೊಲೆ ಯತ್ನ; ಬಾರ್‌ ಕ್ಯಾಶಿಯರ್‌ಗೆ ಥಳಿಸಿದವರು ಅರೆಸ್ಟ್‌

Assault Case : ಬಾರ್ ಕ್ಯಾಶಿಯರ್ ರಂಜಿತ್‌ 20 ರೂಪಾಯಿ ಹೆಚ್ಚಿಗೆ ಕೇಳಿದ್ದಕ್ಕೆ ಕುಡುಕರು ಕೊಲೆಗೆ ಯತ್ನಿಸಿದ್ದಾರೆ. ಕ್ಯಾಶಿಯರ್‌ಗೆ‌ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

Assault Case
ಬಂಧಿತ ಆರೋಪಿಗಳು
Koo

ಬೆಂಗಳೂರು: ಬೆಂಗಳೂರಿನ ವಿದ್ಯಾರಣ್ಯಪುರ ಬಾರ್‌ವೊಂದರಲ್ಲಿ ಕೇವಲ 20 ರೂಪಾಯಿಗೆ ಕೊಲೆ ಯತ್ನ ನಡೆದಿದೆ. ಬಾರ್ ಕ್ಯಾಶಿಯರ್‌ಗೆ ಚಾಕು ಇರಿದ ಇಬ್ಬರು ಆರೋಪಿಗಳನ್ನು (Assault Case) ಪೊಲೀಸರು ಬಂಧಿಸಿದ್ದಾರೆ.

ಚೇತನ್ ಹಾಗು ಕಾರ್ತಿಕ್‌ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡ ಆರೋಪಿಗಳಾಗಿದ್ದಾರೆ. ವಿದ್ಯಾರಣ್ಯಪುರ ನರಸೀಪುರ ಜಯಶ್ರೀ ಬಾರ್‌ನಲ್ಲಿ ಕ್ಯಾಶಿಯರ್ ರಂಜಿತ್ ಎಂಬಾತನ ಮೇಲೆ ಹಲ್ಲೆ ಚಾಕು, ಬಾಟಲ್‌ನಿಂದ ಮೂವರು ಆರೋಪಿಗಳು ಹಲ್ಲೆ ನಡೆಸಿದ್ದರು.

ಈ ಆರೋಪಿಗಳು ಎಲ್ಲರೂ ಆಟೋ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದರು. ಕುಡಿಯಲು ಬಾರ್‌ಗೆ ಬಂದಾಗ 150 ರೂಪಾಯಿ ಬಿಲ್ ಆಗಿತ್ತು. ಬಾರ್ ಕ್ಯಾಶಿಯರ್ ರಂಜಿತ್‌ 20 ರೂಪಾಯಿ ಹೆಚ್ಚಿಗೆ ಕೇಳಿದ್ದ ಎನ್ನಲಾಗಿದೆ. ಇಷ್ಟಕ್ಕೆ ಸಿಟ್ಟಾದ ಮೂವರು ಆರೋಪಿಗಳು ಕೊಲೆಗೆ ಯತ್ನಿಸಿದ್ದಾರೆ. ಮೂವರಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಕೆರೆಕೋಡಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 30 ವರ್ಷದೊಳಗಿನ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಡಿರುವ ಶಂಕೆ ಇದೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Actor Darshan : ದರ್ಶನ್‌ ಬೇಲ್‌ ಭವಿಷ್ಯ! ಹೈದರಾಬಾದ್ CFSLನಲ್ಲೇ ಇರುವ ನಟನ ಐಫೋನ್‌ನಲ್ಲಿ ಅಡಗಿದ್ಯಾ ಸತ್ಯ?

Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಪೊಲೀಸರು ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ. ಚಾರ್ಜ್ ಶೀಟ್ ಲೋಪ ಇದೆ ಎಂದು ನಟ ದರ್ಶನ್‌ ಪರ ವಕೀಲ ಸಿ ವಿ ನಾಗೇಶ್‌ ವಾದಿಸಿದ್ದರು.

VISTARANEWS.COM


on

By

Actor Darshan
Koo

ಬೆಂಗಳೂರು: ದರ್ಶನ್‌ ಬೇಲ್‌ ಭವಿಷ್ಯ‌ ಮುಂದಕ್ಕೆ ಹೋಗಿದೆ. ಈ ಮಧ್ಯೆ ಕಳೆದ ಎರಡು ತಿಂಗಳಿಂದ ಹೈದರಾಬಾದ್ CFSLನಲ್ಲೇ ನಟ ದರ್ಶನ್‌ ಐಫೋನ್‌ ಇದ್ದು, ಡಿಜಿಟಲ್‌ ಎವಿಡೆನ್ಸ್‌ ಮೊಬೈಲ್‌ನಲ್ಲಿ ಅಡಗಿದ್ಯಾ ಸತ್ಯ? ಎಂಬ ಪ್ರಶ್ನೆ ಮೂಡಿದೆ.

ರೇಣುಕಾಸ್ವಾಮಿ‌ (Renukaswamy Murder case) ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಕಳೆದ ಅ.5ರಂದು ನಡೆಯಿತು. ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಸಹ ಪ್ರಬಲ ವಾದ ಮಂಡಿಸಿದ್ದರು. ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ ಅಂಶಗಳ ನ್ಯೂನತೆಗಳನ್ನು ಹೆಕ್ಕಿ ತೆಗೆದ ವಕೀಲರು ದರ್ಶನ್ ವಿರುದ್ಧ ಪೊಲೀಸರ ಸುಳ್ಳಿನ ಕಥೆ ಕಟ್ಟಿದ್ದಾರೆ ಎಂದು ವಾದ ಮಂಡಿಸಿದ್ದರು.

ರೇಣುಕಾಸ್ವಾಮಿಯ ಮೃತದೇಹ ಜೂನ್ 9ರಂದು ಪತ್ತೆಯಾಗಿರುವುದಾಗಿ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ನೀಡಿರುವ ದೂರಿನಲ್ಲಿ ಸ್ಪಷ್ಟವಾಗಿದೆ. ಆದರೆ ಜೂನ್ 11ರಂದು ಮಧ್ಯಾಹ್ನ 2:45ರ ಸುಮಾರಿಗೆ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿಸಲಾಗಿದೆ. ಮೃತನ ವಿವರ ಲಭ್ಯವಾಗಿರದಿದ್ದರಿಂದ ಮರಣೋತ್ತರ ಪರೀಕ್ಷೆ ವಿಳಂಬವಾಗಿದೆ ಎಂದು ಪೊಲೀಸರು ಕಾರಣ ನೀಡಿದ್ದಾರೆ. ಆದರೆ ಯಾವುದೇ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಲು ಮೃತನ ಐಡೆಂಟಿಟಿ ಮುಖ್ಯವಲ್ಲ ಎಂದು ಸಿಆರ್ಪಿಸಿ 174 ಸ್ಪಷ್ಟವಾಗಿ ಹೇಳಿದೆ. ಹಾಗಾದರೆ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿಸಲು ವಿಳಂಬ ಮಾಡಿರುವುದೇಕೆ ಎಂದು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು.

ಪಿಎಸ್ಐ ವಿನಯ್ ಆರೋಪಿ ಪ್ರದೂಷ್ ಜತೆ ನಿರಂತರ ಸಂಪರ್ಕ!

ಇನ್ನು ಕೊಲೆ ನಡೆದ ವಿಚಾರ ಕಾಮಾಕ್ಷಿಪಾಳ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿನಯ್‌ಗೆ ಗೊತ್ತಿತ್ತು. ಅವರ ಮೊಬೈಲ್‌ನಲ್ಲಿ ಘಟನಾ ಸ್ಥಳದ ಸಿಸಿಟಿವಿ ಹಾಗೂ ಮೃತದೇಹದ ಫೋಟೋ‌ ಪತ್ತೆಯಾಗಿದೆ.‌ ಅದನ್ನು ಆರೋಪಿ ಪ್ರದೂಷ್‌ಗೆ ಕಳಿಸಿದ್ದಾನೆ. ಹಾಗಾದರೆ ಪಿಎಸ್ಐ‌ ಫೋನ್‌ ಯಾಕೆ ಸೀಜ್ ಮಾಡಿಲ್ಲ. ಮೊಬೈಲ್ ರಿಟ್ರೀವ್ ಮಾಡಿಲ್ಲವೆಂದು ತನಿಖಾಧಿಕಾರಿಗಳ ವಿರುದ್ಧ ನಾಗೇಶ್‌ ಗುಡುಗಿದರು.

ದರ್ಶನ್ ಮನೆಯಲ್ಲಿ ಸಿಕ್ಕಿದ್ದು ವ್ಯವಹಾರಿಕ ಹಣ; ಸಾಕ್ಷಿಗಳಿಗೆ ನೀಡಲು ಇರುವುದು ಶುದ್ಧ ಸುಳ್ಳು!

ಅಲ್ಲದೆ ಜೂನ್ 18ರಂದು ದರ್ಶನ್ ಅವರ ಮನೆಯಲ್ಲಿ 37.5 ಲಕ್ಷ ರೂ ಹಣವನ್ನು ಜಪ್ತಿ ಮಾಡಿರುವ ಪೊಲೀಸರು, ಸಾಕ್ಷ್ಯ ನಾಶ ಮಾಡಲು ಪ್ರಕರಣದ ಇತರೆ ಆರೋಪಿಗಳಿಗೆ ನೀಡಲು ಹಣ ಸಂಗ್ರಹಿಸಿಟ್ಟಿರುವುದಾಗಿ ಹೇಳಿಕೆ ಪಡೆದಿರುವುದಾಗಿ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಮೋಹನ್ ರಾಜ್ ಎಂಬುವವರು ತಮ್ಮ ಮಗಳ ಆಲ್ಬಂ ಸಾಂಗ್ ಮಾಡಿಸಲು ದರ್ಶನ್ ಅವರಿಂದ ಫೆಬ್ರವರಿಯಲ್ಲಿ ಹಣ ಪಡೆದಿದ್ದರು. ಆ ಸಾಲದ ಹಣವನ್ನು ಮೇ 2ರಂದೇ ವಾಪಾಸ್ ನೀಡಿದ್ದಾರೆ. ಹಾಗಾದರೆ ದರ್ಶನ್ ಅವರು ಸಾಕ್ಷಿಗಳಿಗೆ ಕೊಡಲೆಂದೇ ಹಣ ಸಂಗ್ರಹಿಸಿಟ್ಟಿದ್ದರು ಎನ್ನಲು ಸಾಧ್ಯವೇ? ಮುಂದೆ ರೇಣುಕಾಸ್ವಾಮಿ ಎಂಬ ವ್ಯಕ್ತಿ ಬರಲಿದ್ದಾನೆ ಅವನ ಹತ್ಯೆಯಾಗಲಿದೆ. ಅದನ್ನು ಮುಚ್ಚಿಹಾಕಲು ಸಾಕ್ಷಿಗಳಿಗೆ ಹಣ ನೀಡಬೇಕಾಗುತ್ತದೆ ಎಂದು ದರ್ಶನ್ ಊಹಿಸಿರಲು ಸಾಧ್ಯವೇ ಎಂದು ತನಿಖಾಧಿಕಾರಿಗಳ ಕಾರ್ಯವೈಖರಿಯ ಕುರಿತು ಪ್ರಶ್ನೆ ಮಾಡಿದ ಹಿರಿಯ ವಕೀಲ ಸಿ.ವಿ. ನಾಗೇಶ್ ತನಿಖಾಧಿಕಾರಿಗಳ ಲೋಪದ ಬಗ್ಗೆ ಕೋರ್ಟ್ ಗಮನಕ್ಕೆ ತಂದರು.

ಸಿಆರ್ ಪಿಸಿ 161 ಹೇಳಿಕೆಗೂ 164 ಹೇಳಿಕೆಗೂ ತಾಳೆಯಿಲ್ಲ!

ಇನ್ನು ಪ್ರಕರಣದಲ್ಲಿ ಐ ವಿಟ್ನೆಸ್ ಹಾಗೂ ಕೆಲ ಸಾಕ್ಷಿಗಳ ಹೇಳಿಕೆ ದಾಖಲ ಮಾಡಲಾಗಿದೆ. ಆದರೆ ಎರಡು ಸ್ವ ಇಚ್ಚಾ ಹೇಳಿಕೆಗಳಲ್ಲಿ ಕೆಲ ಅಂಶಗಳು ವ್ಯತಿರಿಕ್ತವಾಗಿವೆ. ಪೊಲೀಸರಿಗೆ ಮಿಡ್ ನೈಟ್ ಹೇಳಿಕೆ ದಾಖಲಿಸುವ ಅಭ್ಯಾಸವಿದೆ. ಮಲಗುವಾಗ ಓದಬಹುದಾದ ಅರೇಬಿಯನ್ ನೈಟ್ಸ್ ರೀತಿ ಕಥೆಯಿದೆ. ಸಾಕ್ಷಿದಾರರಾಗಿ ನಟ ಚಿಕ್ಕಣ್ಣ ಹಾಗೂ ನವೀನ್ ಅವರು ಪೊಲೀಸರ ಮುಂದೆ ಹೇಳಿಕೆ ಹಾಗೂ ನ್ಯಾಯಾಲಯದ ಮುಂದೆ ಹೇಳಿಕೆಗಳು ವ್ಯತಿರಿಕ್ತವಾಗಿದೆ. ಶೂ ನಲ್ಲಿ ರಕ್ತದ ಗುರುತುವಿದೆ. ಆದರೆ ಯಾವ ಶೂ ಎಂದು ನಿಖರವಾಗಿ ತಿಳಿಸಿಲ್ಲ. ಪಂಚನಾಮೆ ವೇಳೆ ಇದ್ದ ರಕ್ತದ ಕಲೆಗಳು ಎಫ್ಎಸ್ಎಲ್‌ನಲ್ಲಿಲ್ಲ. ಹಾಗಾದರೆ ರಕ್ತದ ಗುರುತು ಚಾರ್ಜ್ ಶೀಟ್‌ನಲ್ಲಿ ಹೇಗೆ ಬಂತು ಪ್ರಶ್ನಿಸಿದ ಸಿವಿ ನಾಗೇಶ್, ರಿಮ್ಯಾಂಡ್ ಅರ್ಜಿಯಲ್ಲಿ ಕೆಲ ಸಾಕ್ಷಿಗಳ ಹೆಸರಿಲ್ಲ ಉಲ್ಲೇಖಿಸಿಲ್ಲ. ಕೇಳಿದರೆ, ಬೆದರಿಕೆ, ಗೌಪ್ಯತೆಯ ರೀಸನ್ ನೀಡಿದ್ದಾರೆ ಎಂದು ತಮ್ಮ ವಾದದಲ್ಲಿ ಮಂಡಿಸಿದ್ದರು.

ಕಾಲ್ ರೆಕಾರ್ಡಿಂಗ್ ಆಧಾರದ ಮೇಲೆ ಗಲ್ಲು ಶಿಕ್ಷೆ ವಿಧಿಸಲಾಗದು!

ಇನ್ನು ಪ್ರಕರಣದಲ್ಲಿ ಎ1 ಹಾಗೂ ಎ3 ಆರೋಪಿಗಳೊಂದಿಗೆ ದರ್ಶನ್ ನಿರಂತರವಾಗಿ ಫೋನ್ ಸಂಪರ್ಕದಲ್ಲಿದ್ದರು. ಫೋನ್ ಕಾಲ್‌ ಮೂಲಕವೇ ರೇಣುಕಾಸ್ವಾಮಿಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಎ1 ಆರೋಪಿ ದರ್ಶನ್‌ಗೆ ಸ್ನೇಹಿತೆ. ಪವನ್‌ ಮನಗೆಲದವನು. ಸ್ನೇಹಿತೆ, ಮನೆ ಕೆಲಸದವನ ಜತೆ ಮಾತಾಡಿದರೆ ಕೊಲೆಗೆ ಸಂಚು ರೂಪಿಸಿದಂತೆಯೇ? ಅವರು ಹಲವು ವರ್ಷಗಳಿಂದ ಮಾತನಾಡಿದ್ದಾರೆ. ಕೊಲೆಯಾದ ಒಂದೆರಡು ದಿನ ಹಿಂದೆ ಮುಂದೆ ಮಾತಾಡಿದರೆ ಸಂಶಯ ಪಡಬಹುದಿತ್ತೆಂದು. ಕಾರ್ ರೆಕಾರ್ಡ್ ಆಧಾರದ ಮೇಲೆ ಗಲ್ಲು ಶಿಕ್ಷೆ ವಿಧಿಸೋದಕ್ಕಾಗಲ್ಲ ಎಂದು ವಾದದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ರೇಣುಕಾಸ್ವಾಮಿ ಕೊಲೆಗೆ ದರ್ಶನ್ ಮತ್ತು ಟೀಂ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಕೂತು ಪ್ಲಾ‌ನ್ ಮಾಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ಅಲ್ಲಿ‌ ಸೇರಿದ್ದು ಊಟಕ್ಕೆ. ಊಟ‌ ಮಾಡುತ್ತ ಮುಂದಿನ ಸಿನಿಮಾ ಬಗ್ಗೆ ಚರ್ಚೆ ಮಾಡಿದ್ವಿ ಸಾಕ್ಷಿಗಳಾಗಿ ಚೇತನ್ ,ನವೀನ್ ಹಾಗೂ ಚಿಕ್ಕಣ ಹೇಳಿಕೆ ನೀಡಿದ್ದಾರೆ. ಹೀಗಾಗಿ ಇದು ದರ್ಶನ್‌ನ ಪ್ರಕರಣದಲ್ಲಿ ಸಿಲುಕಿಸಲು ಪೊಲೀಸರ ಸೃಷ್ಟಿಸಿರುವ ಸಾಕ್ಷಿಗಳ‌ ಸುಳ್ಳಿನ ಕಥೆ. ಹೀಗಾಗಿ ಜಾಮೀನು ನೀಡಬೇಕೆಂದು ಕೋರಿ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮುಕ್ತಾಯಗೊಳಿಸಿದ್ದು, ಮುಂದಿನ ವಿಚಾರಣೆಯನ್ನ ಕೋರ್ಟ್ ಅಕ್ಟೋಬರ್ 8ಕ್ಕೆ ಮುಂದೂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
An electric wire fell on the woman Death due to electric shock
ಬೆಂಗಳೂರು6 ನಿಮಿಷಗಳು ago

Electric shock : ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಕ್ಷಣಾರ್ಧದಲ್ಲೆ ಸುಟ್ಟುಕರಕಲು

Actor darshan
ಬೆಂಗಳೂರು2 ಗಂಟೆಗಳು ago

Actor Darshan : ರೇಣುಕಾಸ್ವಾಮಿ ಫೋಟೊಗಳು ನೈಜವಲ್ಲ!ಮತ್ತೆ ಎಫ್‌ಎಸ್‌ಎಲ್ ಮೊರೆ ಹೋದ ಖಾಕಿ ಪಡೆ

Bomb threat e-mails a headache for Bengaluru police
ಬೆಂಗಳೂರು2 ಗಂಟೆಗಳು ago

Bomb Threat : ಬೆಂಗಳೂರು ಪೊಲೀಸರಿಗೆ ತಲೆನೋವು ತಂದ ಬಾಂಬ್ ಬೆದರಿಕೆ‌ E-Mails

Road Accident
ಬಾಗಲಕೋಟೆ4 ಗಂಟೆಗಳು ago

Road Accident : ಬೈಕ್‌ ಸವಾರನ ಮುಖಕ್ಕೆ ಟ್ರ್ಯಾಕ್ಟರ್‌ ಬಡಿದು ಸಾವು;‌ ಪಾದಚಾರಿಗೆ ಡಿಕ್ಕಿ ಹೊಡೆದ ಚಿಗರಿ ಬಸ್

Self harming
ದಕ್ಷಿಣ ಕನ್ನಡ4 ಗಂಟೆಗಳು ago

Self Harming: ಮಾಜಿ ಶಾಸಕ‌ ಮೊಯ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆ; ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವರ ವಿರುದ್ಧ ಎಫ್‌ಐಆರ್‌

Assault Case
ಬೆಂಗಳೂರು5 ಗಂಟೆಗಳು ago

Assault Case : ಜಸ್ಟ್‌ 20 ರೂಪಾಯಿಗೆ ನಡೆಯಿತು ಕೊಲೆ ಯತ್ನ; ಬಾರ್‌ ಕ್ಯಾಶಿಯರ್‌ಗೆ ಥಳಿಸಿದವರು ಅರೆಸ್ಟ್‌

Actor Darshan
ಬೆಂಗಳೂರು5 ಗಂಟೆಗಳು ago

Actor Darshan : ದರ್ಶನ್‌ ಬೇಲ್‌ ಭವಿಷ್ಯ! ಹೈದರಾಬಾದ್ CFSLನಲ್ಲೇ ಇರುವ ನಟನ ಐಫೋನ್‌ನಲ್ಲಿ ಅಡಗಿದ್ಯಾ ಸತ್ಯ?

karnataka weather Forecast
ಮಳೆ10 ಗಂಟೆಗಳು ago

Karnataka Weather : ಕರಾವಳಿ, ಮಲೆನಾಡು ಸುತ್ತಮುತ್ತ ಇಂದು ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ10 ಗಂಟೆಗಳು ago

Dina Bhavishya : ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ

Missing case
ದಕ್ಷಿಣ ಕನ್ನಡ21 ಗಂಟೆಗಳು ago

Missing case : ಮಾಜಿ ಶಾಸಕ‌ ಮೊಯ್ದೀನ್ ಬಾವಾರ ಸಹೋದರ ಮಿಸ್ಸಿಂಗ್‌; ಸೇತುವೆ ಬಳಿ ಡ್ಯಾಮೇಜ್‌ ಸ್ಥಿತಿಯಲ್ಲಿ ಕಾರು ಪತ್ತೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌