Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ; ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್‌ - Vistara News

ಬೆಂಗಳೂರು

Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ; ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್‌

Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ ಆಗಲಿದೆ. ವಾದ-ಪ್ರತಿವಾದ ಆಲಿಸಿರುವ ಕೋರ್ಟ್‌ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಕೇಸ್‌ನಲ್ಲಿ ನಟ ದರ್ಶನ್ (Actor Darshan) ಆ್ಯಂಡ್ ಗ್ಯಾಂಗ್‌ ಜೈಲುಪಾಲಾಗಿದೆ. ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯು ಅ.10ರಂದು ನಡೆಯಿತು. ಸುದೀರ್ಘವಾಗಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಅ.14ಕ್ಕೆ ಕಾಯ್ದಿರಿಸಿದೆ. ಈ ಮೂಲಕ ದರ್ಶನ್‌ ಜಾಮೀನು ಭವಿಷ್ಯ ಮೂರು ದಿನ ಮುಂದಕ್ಕೆ ಹೋಗಿದ್ದು, ದಚ್ಚು ಜೈಲುವಾಸದಲ್ಲಿ ಇರುವಂತಾಗಿದೆ.

ಆರೋಪಿಗಳ ಜಾಮೀನು ಅರ್ಜಿಗಳಿಗೆ ಗುರುವಾರ (ಅ.10) ಆಕ್ಷೇಪಣೆ ಮಾಡಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದಿಸಿದರು. ದರ್ಶನ್‌ ಪರ ಸುದೀರ್ಘ ವಾದ ಮಂಡಿಸಿದ್ದ ಸಿ.ವಿ ನಾಗೇಶ್ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಕೌಂಟರ್ ಕೊಟ್ಟರು. ದರ್ಶನ್‌ ವಿರುದ್ಧ ತನಿಖಾಧಿಕಾರಿಗಳು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ್ದಾರೆ ಎಂದು ದರ್ಶನ್‌ ಪರ ಸಿ.ವಿ ನಾಗೇಶ್‌ ಆರೋಪಿಸಿದ್ದರು. ಇದೆಲ್ಲದಕ್ಕೂ ಪ್ರಸನ್ನ ಕುಮಾರ್‌ ಒಂದೊಂದಾಗಿ ಎದುರೇಟು ಕೊಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ; ನಾಳೆಗೂ ಭಾರಿ ವರ್ಷಧಾರೆ

Karnataka Weather Forecast: ಚಿಕ್ಕಮಗಳೂರಿನಲ್ಲಿ ಗುರುವಾರ ಮಳೆ ಅಬ್ಬರಿಸಿದ್ದು, ನಾಳೆ ಶುಕ್ರವಾರಕ್ಕೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಳಗಾವಿ/ಚಿಕ್ಕಮಗಳೂರು: ಬೆಳಗಾವಿಯಲ್ಲಿ ಧಾರಾಕಾರ ಮಳೆಯಿಂದಾಗಿ ಮನೆಗಳಿಗೆ (Rain News) ನೀರು ನುಗ್ಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಮಳೆರಾಯನ (Karnataka Weather Forecast) ಅಟ್ಟಹಾಸಕ್ಕೆ ಉಡಚ್ಚಮ್ಮಾ ದೇವಿ ದೇವಸ್ಥಾನಕ್ಕೆ ನೀರು ನುಗ್ಗಿದೆ. ಕಳೆದ ಒಂದು ಗಂಟೆಗಳ ಕಾಲ ಸುರಿದ ಭಾರಿ‌ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ದೇವಲಾಪೂರ ಮತ್ತು ಯರಡಾಲ ರಸ್ತೆ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸಂಚಾರ ಬಂದ್‌ ಆಗಿತ್ತು. ಮಳೆರಾಯನ ಆರ್ಭಟಕ್ಕೆ ಜಮೀನುಗಳು ನೀರುಪಾಲಾಗಿದ್ದು, ರೈತರು ಸಂಕಷ್ಟ ಅನುಭವಿಸಿದರು.

ಚಿಕ್ಕಮಗಳೂರಿನಲ್ಲೂ ಮಳೆ ಆರ್ಭಟ

ಚಿಕ್ಕಮಗಳೂರಿನ ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ರಸ್ತೆಗೆ ಗುಡ್ಡದ ಮಣ್ಣು ಬಿದ್ದಿದ್ದು, 2 ಜೆಸಿಬಿಯಿಂದ ನಿರಂತರ ಮಣ್ಣು ತೆರವಿನ ಕಾರ್ಯ ನಡೆಯುತ್ತಿದೆ. ಸುರಿಯುತ್ತಿರುವ ಮಳೆ ಮಧ್ಯೆಯೇ ತೆರವು ಕಾರ್ಯ ನಡೆಯುತ್ತಿದೆ. ಇನ್ನು ಅಪಾರ ಪ್ರಮಾಣದಲ್ಲಿ ನೀರು ಹರಿದು ರಸ್ತೆ ಬದಿ ಗುಂಡಿಗಳು ನಿರ್ಮಾಣವಾಗಿದೆ. ಹೀಗಾಗಿ ಅಧಿಕಾರಿಗಳು ತಾತ್ಕಾಲಿಕವಾಗಿ ಮಣ್ಣನ್ನು ಹಾಕಿ ಗುಂಡಿಗಳನ್ನು ಮುಚ್ಚುತ್ತಿದ್ದಾರೆ. ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ಮಳೆ ಜತೆ ಸರ್ಕಾರಿ ಆಸ್ಪತ್ರೆಗೆ ಡ್ರೈನೇಜ್ ನೀರು ನುಗ್ಗಿದೆ. ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಕಳೆದ ರಾತ್ರಿ ಸುರಿದ ಮಳೆಯಿಂದ ಸರ್ಕಾರಿ ಆಸ್ಪತ್ರೆ ಜಲಾವೃತಗೊಂಡಿದೆ. ಆಸ್ಪತ್ರೆಯಲ್ಲಿ ನೀರು ತುಂಬಿದ್ದರಿಂದ ರೋಗಿಗಳು ಪರದಾಟಬೇಕಾಯಿತು. ಮಳೆ ನೀರಿನ ಜತೆಗೆ ಡ್ರೈನೇಜ್ ನೀರು ಸೇರಿ ಕೆಟ್ಟ ವಾಸನೆ ಬರುತ್ತಿದ್ದು, ರೋಗಿಗಳು ಪರದಾಡಬೇಕಾಯಿತು.

ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕುದುರೆಮುಖ, ಸಂಸೆ, ಹೊರನಾಡು ಸುತ್ತಮುತ್ತ ಮಳೆ ಅಬ್ಬರಿಸುತ್ತಿದೆ. ಕಳಸ ಪಟ್ಟಣದಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಯಿಂದ ಕಾಫಿ-ಅಡಿಕೆ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಮಲೆನಾಡಿನಾದ್ಯಂತ ಬೆಳೆಗ್ಗೆಯಿಂದಲೂ ಮೋಡ ಕವಿದ ವಾತವರಣ ಇದೆ.

ಉಕ್ಕಿ ಹರಿದ ಇಂದಿರಮ್ಮನ ಕೆರೆ

ಧಾರವಾಡದಲ್ಲಿ ಸುರಿದ ನಿರಂತರ ಮಳೆಗೆ ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆ ತುಂಬಿ ಹರಿಯುತ್ತಿದೆ. ಕೆರೆ ಕೋಡಿ ಬಿದ್ದು ತುಂಬಿ ಹರಿಯುತ್ತಿರುವ ದೃಶ್ಯ ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದರು. ಕೆಲ ಯುವಕರು ಕೆರೆ ಕೋಡಿ ಬಿದ್ದು ಹರಿಯುತ್ತಿದ್ದ ನೀರಿನಲ್ಲಿ ದಾಟುವ ಹುಚ್ಚುತನ ಪ್ರದರ್ಶಿಸಿದ್ದರು. ಯುವಕನ ಹುಚ್ಚಾಟಕ್ಕೆ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.

ಕಳೆದ ಬುಧವಾರ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ವಿದ್ಯಾಕಾಶಿ ಜನರು ತತ್ತರಿಸಿ ಹೋಗಿದ್ದರು. ಧಾರವಾಡದಲ್ಲಿ ಮಳೆಯು ಅವಾಂತರವೇ ಸೃಷ್ಟಿಸಿತ್ತು. ಮಳೆಯ ನೀರು ನಿಂತಿರುವ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಧಾರವಾಡದ ಸಂಪಿಗೆನಗರ, ನಿಲಸಿಟಿ, ಶ್ರೀಶ ರೆಸಿಡೆನ್ಸಿ, ವ್ಯಾಸ ವಿಹಾರ ಲೇಔಟ್‌ನ ತುಂಬ ನೀರು ನಿಂತಿದ್ದರಿಂದ, ಜನರು ಮನೆಯಿಂದ ಹೊರ ಬರಲು ಆಗದೆ ಪರದಾಡಿದರು. ರಾಜಕಾಲುವೆ ಇಲ್ಲದಿರುವುದೇ ಇದಕ್ಕೆ ಕಾರಣವೆಂದು ದೂರಿದರು. ಸ್ಥಳಕ್ಕೆ ಬಂದ ಅಧಿಕಾರಿಗಳ ವಿರುದ್ಧ ದೂರುಗಳ ಪಟ್ಟಿ ನೀಡಿದ್ದರು.

ಧಾರವಾಡದಲ್ಲಿ ಮಳೆ ಅವಾಂತರ

ರಾತ್ರಿಯಿಡೀ ಸುರಿದ ಮಳೆಗೆ ಕಟಾವಿಗೆ ಬಂದಿದ್ದ ಬೆಳೆಗಳು ನೀರಲ್ಲಿ ಹೋಮವಾಗಿದೆ. ಲಕ್ಷಾಂತರ ರೂ ಮೌಲ್ಯದ ಬೆಳೆಗಳು ಮಳೆಗೆ ನೆಲಸಮವಾಗಿದೆ. ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ರೈತರು ಕಂಗಾಲಾಗಿದ್ದಾರೆ. ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡಬೇಕಾಯಿತು. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮ ಜಲಾವೃತಗೊಂಡಿದೆ. ಮಳೆಯ ಆರ್ಭಟಕ್ಕೆ ಮನೆಗಳೆಲ್ಲ ಕೆರೆಯಂತೆ ನಿರ್ಮಾಣವಾಗಿದ್ದು, ಮಳೆ ಬಂದಾಗೆಲ್ಲ ಇದೆ ಸಮಸ್ಯೆ ಅನುಭವಿಸುವಂತಾಗಿದೆ.

ಲಕ್ಷ್ಮೇಶ್ವರ-ದೊಡ್ಡೂರ ರಸ್ತೆ ಸಂಪರ್ಕ ಕಡಿತ

ಬೆಳಗಿನ ಜಾವ ಸುರಿದ ಭಾರಿ ಮಳೆಗೆ ಹಳ್ಳಕೊಳ್ಳ ತುಂಬಿ ಹರಿಯುತ್ತಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಬಳಿ ಹಳ್ಳದಲ್ಲಿ ನೀರು ತುಂಬಿ ಹರಿದಿದ್ದು, ಲಕ್ಷ್ಮೇಶ್ವರ-ದೊಡ್ಡೂರ ರಸ್ತೆ ಸಂಪರ್ಕ ಕಡಿತಗೊಂಡಿದೆ. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಳ್ಳದಲ್ಲಿ ಬೆಳೆ ಕಟಾವು ಯಂತ್ರ ಸಿಲುಕಿದ್ದರಿಂದ ರೈತರು ಪರದಾಡಿದರು. ಪ್ರತಿ ಬಾರಿ ಮಳೆಯಾದರೆ ಇದೇ ಸಂಕಷ್ಟ ಎದುರಾಗುತ್ತದೆ. ಸೇತುವೆ ನಿರ್ಮಾಣಕ್ಕೆ ಅನೇಕ ಬಾರಿ ಮನವಿ ಮಾಡಿದ್ದರು ಕ್ಯಾರೆ ಅಂತಿಲ್ಲ ಎಂದು ಆಕ್ರೋಶ ಹೊರಹಾಕಿದರು.

Continue Reading

ಬೆಂಗಳೂರು

Fake journalist : ಜನ ಸಾಮಾನ್ಯರ ಬಳಿ ಸುಲಿಗೆ ಮಾಡುತ್ತಿದ್ದ ನಕಲಿ‌ ಪತ್ರಕರ್ತ ಅರೆಸ್ಟ್‌

Fake journalist : ಬೇಕರಿಗಳನ್ನೇ ಟಾರ್ಗೆಟ್‌ ಮಾಡಿ ಸುಲಿಗೆ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Fake journalist arrested for targeting bakeries For money
Koo

ಬೆಂಗಳೂರು: ಇತ್ತೀಚಿಗೆ ನಕಲಿ ಪತ್ರಕರ್ತರ ಹಾವಳಿ (Fake journalist) ಹೆಚ್ಚಾಗಿದೆ. ಈ ನಕಲಿ ಪತ್ರಕರ್ತರು ಕೈಯಲ್ಲಿ ಮೈಕ್‌ ಹಿಡಿದು ರೌಂಡ್ಸ್‌ಗೆ ಇಳಿದರೆ ರೋಲ್‌ಕಾಲ್‌ ಫಿಕ್ಸ್‌ ಅಂತಲೇ ಅರ್ಥ.. ಹೀಗೆ ನಗರದ ಬೇಕರಿಗಳನ್ನೇ ಟಾರ್ಗೆಟ್‌ ಮಾಡಿ ಸುಲಿಗೆ ಮಾಡುತ್ತಿದ್ದ ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಹುಳಿಮಾವು ಪೊಲೀಸರು ಮಹಮ್ಮದ್ ಶಫಿ ಎಂಬಾತನನ್ನು ಬಂಧನ ಮಾಡಿದ್ದಾರೆ. ಈತ ಸಂಘಟನೆಯ ಜತೆಗೆ ಒಂದು ಯೂಟ್ಯೂಬ್‌ನಲ್ಲಿ ನ್ಯೂಸ್ ಚಾನಲ್‌ವೊಂದನ್ನು ಮಾಡಿಕೊಂಡು, ಬೆದರಿಕೆ, ವಸೂಲಿ ಮಾಡಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿದೆ.

ಕುತ್ತಿಗೆ ಐಡಿ ಕಾರ್ಡ್‌, ಪ್ರಜಾಪರ ಟಿವಿ ಎಂಬ ಕೈಯಲ್ಲಿ ಲೋಗೋ ಹಾಗೂ ಮೊಬೈಲ್ ಹಿಡಿದು ಪತ್ರಕರ್ತನಾಗಿರುವ ಮಹಮ್ಮದ್‌ ಶಫಿ, ತನ್ನ ಅಸಿಸ್ಟೆಂಟ್ ಜತೆಗೆ ಹೊರಟರೆ ಅಂದು ರೋಲ್ ಕಾಲ್ ಫಿಕ್ಸ್ ಅಂತಲೇ ಅರ್ಥ. ಹುಳಿಮಾವು ಬಳಿ ರಮೇಶ್ ಎಂಬುವವರ ಒಡೆತನದಲ್ಲಿರುವ ಎಸ್‌ಎಲ್‌ವಿ ಬೇಕರಿಗೆ ಎಂಟ್ರಿ ಕೊಟ್ಟ ಮಹಮ್ಮದ್ ಶಫಿ ತಾನು ಪತ್ರಕರ್ತ ಎಂದು ಪ್ರಜಾಪರ ಟಿವಿಯ ಲೋಗೋ ಹಿಡಿದು ಬಂದಿದ್ದ.

ಕ್ಲೀನಿಂಗ್ ವೇಳೆ ಒಳ ನುಗ್ಗುವ ಈತ, ವಾಶ್‌ ಮಾಡುವ ಸಂದರ್ಭದಲ್ಲಿ ಅದನ್ನು ವಿಡಿಯೊ ಮಾಡಿಕೊಂಡಿದ್ದ. ನಂತರ ಅಲ್ಲಿದ್ದ ಸಿಬ್ಬಂದಿ ಮುಂದೆ ದರ್ಪ ಮರೆದು ಫುಡ್ ಕ್ಲೀನ್ ಇಲ್ಲ, ತಯಾರಿಸುವ ಸ್ಥಳ ಸ್ವಚ್ಚವಿಲ್ಲ ಎಂದು ಕ್ಯಾತೆ ತೆಗೆದಿದ್ದ. ಎಲ್ಲಿ ಕ್ಲೀನ್ ಮಾಡುತ್ತಾರೋ, ಕಸ ಒಟ್ಟು ಮಾಡುತ್ತಾರೋ ನಿರ್ದಿಷ್ಟವಾಗಿ ಅಲ್ಲಿಯ ವಿಡಿಯೊ ತೆಗೆಯುತ್ತಿದ್ದ. ನಂತರ ತಾನು ಪ್ರೆಸ್ ರಿಪೋರ್ಟರ್ ಈ ಸುದ್ದಿನ ಹಾಕುತ್ತಿನಿ ನಂತರ ಆಟೋಮ್ಯಾಟಿಕ್ ಆಗಿ ನಿಮ್ಮ ಲೈಸೆನ್ಸ್ ಕ್ಯಾನ್ಸಲ್ ಆಗುತ್ತೆ ಎಂದು ಭಯ ಬೀಳಿಸುತ್ತಿದ್ದ.

ನಂತರ ಸುದ್ದಿ ಹಾಕಬಾರದು ಅಂದರೆ 50 ಸಾವಿರ ಕೊಡಬೇಕು ಇಲ್ಲದಿದ್ದರೆ, ನಂಗೆ ಲೋಕಲ್ ಎಎಲ್‌ಎ , ಬಿಡಿಎ ಅಧಿಕಾರಿಗಳು , ಫುಡ್ ಆಫೀಸರ್‌ಗಳೆಲ್ಲರೂ ಗೊತ್ತು . ನೀ ಹೇಗೆ ಬೇಕರಿ ನಡಿಸ್ತಿಯಾ ನೋಡ್ತಿನಿ ಎಂದು ಧಮ್ಕಿ ಹಾಕಿದ್ದ. ಇದರಿಂದ ಹೆದರಿದ ರಮೇಶ್ ಆತನಿಗೆ ಕನ್ವಿಯೆನ್ಸ್ ಮಾಡಿ ಹತ್ತು ಸಾವಿರ ಗೂಗಲ್ ಪೇ ಮಾಡಿದ್ದ. ನಂತರ ರಮೇಶ್ ಬೇಕರಿ ಅಸೋಸಿಯೇಷನ್ ಗಮನಕ್ಕೆ ತಂದಾಗ ಸುಮಾರು ನಲವತ್ತು ಐವತ್ತು ಜನರಿಗೆ ಇದೇ ರೀತಿಯಲ್ಲಿ ಬ್ಲ್ಯಾಕ್ ಮೇಲ್ ಮಾಡಿರುವುದು ತಿಳಿದು ಬಂದಿದೆ. ಹುಳಿಮಾವು ಪೊಲೀಸರು ನಕಲಿ ಪ್ರೆಸ್ ರಿಪೋರ್ಟರ್‌ನನ್ನು ಹೆಡೆಮುರಿ ಕಟ್ಟಿ ವಿಚಾರಣೆ ನಡೆಸುತ್ತಿದ್ದಾರೆ . ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಉತ್ತರಕನ್ನಡದಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather : ಬುಧವಾರದಂದು ಉತ್ತರಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Heavy rain forecast in Uttara Kannada
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

Continue Reading

ಬೆಂಗಳೂರು

Renukaswamy Case : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ A11, A12 ಆರೋಪಿಗಳ ಜಾಮೀನು ಅರ್ಜಿಯೂ ನಾಳೆಗೆ ಮುಂದೂಡಿಕೆ

Renukaswamy Case : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ A11, A12 ಆರೋಪಿಗಳ ಜಾಮೀನು ಅರ್ಜಿಯನ್ನು ನಾಳೆ ಬುಧವಾರಕ್ಕೆ ಕೋರ್ಟ್‌ ಮುಂದೂಡಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ಎ11 ಹಾಗೂ ಎ12 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯು ಮಂಗಳವಾರ ನಡೆಯಿತು. ಲಕ್ಷ್ಮಣ್ ಹಾಗೂ ನಾಗರಾಜು ಸಲ್ಲಿದ್ದ ಜಾಮೀನು ಅರ್ಜಿ ವಿಚಾರಣೆ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ನಡೆಯಿತು. ನಾಗರಾಜು ನಟ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರೆ, ಲಕ್ಷ್ಮಣ್ ದರ್ಶನ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಕ್ತಾಯವಾಗಿದ್ದು, ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಬೇರೆ ಯಾವುದೇ ಕ್ರೈಂಗಳಲ್ಲಿ ಭಾಗಿಯಾಗಿಲ್ಲ. ಜಾಮೀನು ನೀಡಿದರೆ ತಲೆಮರೆಸಿಕೊಳ್ಳುವ ಹುನ್ನಾರವಿಲ್ಲ. ಹೀಗಾಗಿ ಜಾಮೀನು ನೀಡಬೇಕೆಂದು ಲಕ್ಷ್ಮಣ್ ಹಾಗೂ ನಾಗರಾಜ್ ಪರ ವಕೀಲರು ವಾದ ಮಂಡಿಸಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆಲೆಬ್ರಿಟಿಗಳು ಇರುವುದರಿಂದ ಸೆನ್ಷೇಷನಲ್ ಆಗಿದೆ. ಜಾಮೀನು ನೀಡುವಾಗ ಆರೋಪಿಗಳು ಪೂರ್ವಗ್ರಹ ಪೀಡಿತ ರಾಗಬಾರದು. ಆರೋಪಿಗಳ ವಿರುದ್ಧ ಕೊಲೆ, ಒಳಸಂಚು ಸಾಮಾನ್ಯ ಉದ್ದೇಶದ ಆರೋಪವಿದೆ. ಜೊತೆಗೆ ಸಾಕ್ಷಿ ನಾಶದ ಆರೋಪವೂ ಇದೆ. ಆರೋಪ ಸಾಬೀತಾಗುವರೆಗೂ ಆರೋಪಿಗಳನ್ನು ಮುಗ್ಧರಾಗಿ ಪರಿಗಣಿಸಬೇಕು.

ಆರೋಪಿಗಳು ಈಗಾಗಲೇ ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಲಕ್ಷ್ಮಣ್ ಹಾಗೂ ನಾಗರಾಜ್ ವಿರುದ್ಧ ಅಪರಾಧ ಹಿನ್ನೆಲೆ ಇಲ್ಲ. ಆರೋಪಿಗಳು ಜಾಮೀನು ಪಡೆಯಲು ಟ್ರೈಪಾರ್ಟ್ ಟೆಸ್ಟ್ ಮುಖ್ಯ ಎಂದು ಲಕ್ಷ್ಮಣ್ ಹಾಗೂ ನಾಗರಾಜ್ ಪರ ವಕೀಲ ಸಂದೇಶ್ ಚೌಟ ವಾದಿಸಿದರು. ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರವಾಗಿಯೂ ಉಲ್ಲೇಖ‌ ಮಾಡಿದ ಸಂದೇಶ್ ಚೌಟ, ಈ ಫೋಟೊಗೆ ಸಂಬಂಧಿಸಿದಂತೆ ಮೂರು ಪ್ರಕರಣ ದಾಖಲು ಮಾಡಲಾಗಿದೆ. ನಂತರ ನಮ್ಮ ಕಕ್ಷಿದಾರರನ್ನು ಬೇರೆ ಬೇರೆ ಜೈಲುಗಳಿಗೆ ರವಾನೆ ಮಾಡಲಾಯಿತು. ಅಲ್ಲಿ ನಮ್ಮ ಕಕ್ಷಿದಾರರು ಸಫರ್ ಆಗುತ್ತಿದ್ದಾರೆ.

ಜೈಲಿನಲ್ಲಿ ಸಿಗರೇಟ್ ಸೇದುವುದು ಅಪರಾಧ ಅಲ್ಲ. ಅಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ನೀಡಲು ಜೈಲು ಮ್ಯಾನ್ಯುಲ್ ಸೂಚಿಸುತ್ತದೆ. ಆದರೆ ಇದನ್ನೇ ಮಹಾ ಅಪರಾಧ ಎಂಬಂತೆ ಬಿಂಬಿಸಲಾಗಿದೆ. ಈ ಪ್ರಕರಣದ ಮೂವರು ಆರೋಪಿಗಳ ವಿರುದ್ಧ 201 ಅಡಿಯಲ್ಲಿ ಚಾರ್ಜಸ್ ಮಾಡಲಾಗಿತ್ತು. ಅವರನ್ನು ಇವರೆ ಬಿಡುಗಡೆ ಮಾಡಬಹುದಿತ್ತು. ಆದರೆ ಯಾಕೆ ಜಾಮೀನು ನೀಡಬಹುದಾದ ಪ್ರಕರಣದಲ್ಲಿ, ಮೂರು ತಿಂಗಳಿಗೂ ಅಧಿಕ ಕಾಲ ಯಾಕೆ ಕಂಬಿ ಹಿಂದೆ ಇಡಲಾಗಿತ್ತು. ಜಾಮೀನು ಎಂಬುದು ಎಲ್ಲರ ಹಕ್ಕು. ಇದು ಭಯೋತ್ಪಾದನೆ ಅಲ್ಲ, ದೇಶದ ಭದ್ರತೆಗೆ ಧಕ್ಕೆ ಅಲ್ಲ, ಕ್ರೂರಾತಿ ಕ್ರೂರ ಕ್ರಿಮಿನಲ್ ಹಿನ್ನೆಲೆ ಉಳ್ಳವರು ಅಲ್ಲ. ಹೀಗಾಗಿ ಇವರಿಗೆ ಜಾಮೀನು ನೀಡಬೇಕು. ಜಾಮೀನು ಪರಿಗಣನೆಗೆ ಕೋರ್ಟ್ ಎಂಟು ಅಂಶಗಳನ್ನು ಪರಿಗಣಿಸುತ್ತೆ, ಆ ಎಂಟು ಅಂಶಗಳು ಇವೆ. ಹೀಗಾಗಿ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಬೇಕು.

ಅರ್ಜಿದಾರರ ಸುದೀರ್ಘ ವಾದ ಆಲಿಸಿದ್ದ ನ್ಯಾಯಾಧೀಶರು ಬಳಿಕ ಮಧ್ಯಾಹ್ನ 2.45ಕ್ಕೆ ಮುಂದೂಡಿದ್ದರು. ಮಧ್ಯಾಹ್ನದ ನಂತರ ಲಕ್ಷ್ಮಣ್ ಹಾಗೂ ನಾಗರಾಜ್ ಪರ ಸಂದೇಶ್ ಚೌಟ ವಾದ ಮುಂದುವರಿಸಿದರು. ಪೊಲೀಸರು ಸಾಕಷ್ಟು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ರಿಮ್ಯಾಂಡ್ ಅರ್ಜಿಯಲ್ಲಿ ಎಲ್ಲಾ ವಿಚಾರಗಳು ಉಲ್ಲೇಖ ಮಾಡಬೇಕಿತ್ತು. ಆದರೆ ಯಾವುದನ್ನೂ ಸರಿಯಾಗಿ ಉಲ್ಲೇಖ ಮಾಡಿಲ್ಲ. ಕೋಕಾ, ಎನ್‌ಐಎ, ಯುಎಪಿಎ ಕಾಯ್ದೆ ಅಡಿಯಲ್ಲಿ ಸಾಕ್ಷಿಗಳನ್ನು ಮರೆಮಾಚಬಹುದು.

ಆದರೆ ಇವರು ರಿಮ್ಯಾಂಡ್ ಅರ್ಜಿಯಲ್ಲಿ ಸಾಕ್ಷಿಗಳನ್ನು ಉಲ್ಲೇಖ ಮಾಡಿಲ್ಲ. ಆದರೆ ಸಾಕ್ಷಿಗಳ ಹೆಸರನ್ನು ಮುಚ್ಚಿಟ್ಟಾಗ ಸರಿಯಾದ ಕಾರಣ ತಿಳಿಸಬೇಕು. ಅದನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಳ್ಳಬೇಕು, ಆದರೆ ಇದ್ಯಾವುದೂ ಆಗಿಲ್ಲ. ಕೋಕಾ ಎನ್‌ಐಎ ಯುಎಪಿಎ ಪ್ರಕರಣಗಳಲ್ಲಿ ಸಾಕ್ಷಿಗಳನ್ನು ಮರೆಮಾಚಬಹುದು. ಆದರೆ ಇವರು ಎಲ್ಲಿಯೂ ಯಾವ ರಿಮ್ಯಾಂಡ್ ಅರ್ಜಿಯಲ್ಲೂ ಸಾಕ್ಷಿಗಳ ಬಗ್ಗೆ ಉಲ್ಲೇಖ ಮಾಡಿಲ್ಲ. ಒಂದು ವೇಳೆ ಸಾಕ್ಷಿಗಳ ಹೆಸರನ್ನು ಮುಚ್ಚಿಟ್ಟಾಗ ಸರಿಯಾದ ಕಾರಣ ತಿಳಿಸಬೇಕು. ಅದನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಳ್ಳಬೇಕು. ಪಟ್ಟಣಗೆರೆ ಶೆಡ್‌ನ ಸೆಕ್ಯೂರಿಟಿ‌ ಗಾರ್ಡ್ ಈ ಪ್ರಕರಣದ ಐ ವಿಟ್ನೆಸ್ ಆಗಿದ್ದು, ಎಲ್ಲೂ ಸಹ ಆರೋಪಿ‌ ಲಕ್ಷ್ಮಣ್ ಬಗ್ಗೆ ಹೇಳಿಕೆ ನೀಡಿಲ್ಲ. ಅದು 161 ಹೇಳಿಕೆ ಇರಲಿ ಅಥವಾ 164 ಹೇಳಿಕೆ ಇರಲಿ. ಎಲ್ಲಿಯೂ ಆರೋಪಿ ಲಕ್ಷ್ಮಣ್ ಬಗ್ಗ ಹೇಳಿಕೆ ನೀಡಿಲ್ಲ.

ಸಾಕ್ಷಿಗಳ ಹೇಳಿಕೆ ದಾಖಲು‌ ಮಾಡುವಲ್ಲಿಯೂ ಸಾಕಷ್ಟೂ ತಡ ಆಗಿದೆ. ಪ್ರತ್ಯಕ್ಷದರ್ಶಿಗಳಾದ ಕಿರಣ್, ಮಲ್ಲಿಕಾರ್ಜುನ, ವಿಜಯ್ ಕುಮಾರ್ ಜೂನ್ 15 ಕ್ಕೆ ಪಡೆದಿದ್ದಾರೆ. ನಂತರ ಮಧುಸೂಧನ್, ಪುನೀತ್ ಹೇಳಿಕೆ ದಾಖಲಾಗಿದೆ. ಪುನೀತ್‌ ಸ್ಟಾರ್ ವಿಟ್ನೇಸ್ ಆಗಿದ್ದು, ಘಟನಾ ಸ್ಥಳದಲ್ಲಿ ಇದ್ದ ಎಂಬ ಮಾಹಿತಿ ಇದ್ದರೂ ತಡವಾಗಿ ಹೇಳಿಕೆ ದಾಖಲಿಸಿದ್ಯಾಕೆ.? ಎಂದು ಪ್ರಶ್ನಿಸಿದ್ದರು. ಕೃತ್ಯದಲ್ಲಿ ಯಾವುದೇ ಆರೋಪಿ ಡೆಡ್ಲಿ ವೆಪನ್ ಬಳಸಿಲ್ಲ. ಅಲ್ಲದೇ ಸಂಚು ಮಾಡಿ ಯಾವುದೇ ವೆಪನ್ ತಂದಿಲ್ಲ. ನೈಲಾನ್ ಹಗ್ಗ, ಲಾಠಿ & ವಾಟರ್ ಬಾಟೆಲ್ ಅಷ್ಟೇ. ಈ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳ ವಿರುದ್ಧ ನೇರವಾದ ಯಾವುದೇ ಸಾಕ್ಷಿಗಳಿಲ್ಲ. ಹೀಗಾಗಿ ಜಾಮೀನು ನೀಡಬೇಕು ನಾಗರಾಜ್ ಮತ್ತು ಲಕ್ಷ್ಮಣ್ ಪರವಾಗಿ ಸಂದೇಶ್ ಚೌಟ ವಾದಿಸಿದರು.

ಸಾಕ್ಷಿ ಸೃಷ್ಟಿ, ಇರುವ ಸಾಕ್ಷಿ ನಾಶ, ಸಾಕ್ಷಿಗಳ ತತ್ವಿರುದ್ದ ಮಾಹಿತಿ ನೀಡಲಾಗಿದೆ. ಕೇಸ್ ದಾಖಲಿಸುವುದು ತಡ ಆಗಿದೆ. ಮೃತನ ಸಾವಿನ ಸಮಯ ತಿಳಿದಿಲ್ಲ. ರಿಮ್ಯಾಂಡ್ ಅರ್ಜಿಯಲ್ಲಿ ಸಾಕ್ಷಿಗಳ ಹೆಸರೆಳಿಲ್ಲ. ಕೇಸ್ ಡೈರಿ ಉಲ್ಲೇಖಿಸದೇ ಇರೋದು, ಪೊಲೀಸರಿಗೆ ಮಾಹಿತಿ ಇದ್ದರೂ ತನಿಖೆ ತಡ, ಕೊಲೆಗೆ ಬಳಕೆ ಮಾಡಿದ್ದರೆ ಎನ್ನಲಾದ ವಸ್ತುಗಳಲ್ಲಿ ರಕ್ತ ಮಾದರಿ ಇಲ್ಲ. ಬಂಧನಕ್ಕೆ ಪೊಲೀಸರು ಕಾರಣ ನೀಡಿಲ್ಲ. ಚಾರ್ಜ್ ಶೀಟ್ ನಲ್ಲಿ ಸಾಕಷ್ಟು ತಪ್ಪುಗಳಿವೆ. ಮಾಡಿರುವ ಆರೋಪ ಸುಳ್ಳು ಎಂಬುದಕ್ಕೆ ಸಾಕ್ಷಿ ಇದೆ. ಹೀಗಾಗಿ ನಾಗರಾಜ್ ಹಾಗೂ ಲಕ್ಷ್ಮಣ್ ಗೆ ಜಾಮೀನು ನೀಡುವಂತೆ ಮನವಿ ಮಾಡಿದರು. ಸುದೀರ್ಘ ವಾದ ಆಲಿಸಿದ ನ್ಯಾಯಾಲಯ ನಾಳೆ ಬುಧವಾರಕ್ಕೆ ಲಕ್ಷ್ಮಣ್ ಹಾಗೂ ನಾಗರಾಜ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿತು.

Continue Reading
Advertisement
karnataka Weather Forecast
ಮಳೆ1 ಗಂಟೆ ago

Karnataka Weather : ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ; ನಾಳೆಗೂ ಭಾರಿ ವರ್ಷಧಾರೆ

Actor Darshan
ಬೆಂಗಳೂರು2 ಗಂಟೆಗಳು ago

Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ; ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್‌

Fake journalist arrested for targeting bakeries For money
ಬೆಂಗಳೂರು3 ಗಂಟೆಗಳು ago

Fake journalist : ಜನ ಸಾಮಾನ್ಯರ ಬಳಿ ಸುಲಿಗೆ ಮಾಡುತ್ತಿದ್ದ ನಕಲಿ‌ ಪತ್ರಕರ್ತ ಅರೆಸ್ಟ್‌

Murder case
ತುಮಕೂರು5 ಗಂಟೆಗಳು ago

Murder Case : ಬುದ್ದಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

Ratan Tata missed england's royal honour to take care of sick dogs
ದೇಶ7 ಗಂಟೆಗಳು ago

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ಮಿಸ್‌ ಮಾಡಿದ್ದರು ರತನ್‌ ಟಾಟಾ!

Ratan Tata joined the company as an ordinary employee but Why is he the guru of the industry
ದೇಶ7 ಗಂಟೆಗಳು ago

Ratan Tata : ರತನ್‌ ಟಾಟಾ ಕಂಪನಿ ಸೇರಿದ್ದು ಸಾಮಾನ್ಯ ಉದ್ಯೋಗಿಯಾಗಿ! ಉದ್ಯಮ ರಂಗದ ಗುರು ಆಗಿದ್ದೇಗೆ?

Ratan Tata
ದೇಶ8 ಗಂಟೆಗಳು ago

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಇನ್ನಿಲ್ಲ; ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರ ಸಂತಾಪ

Why Ratan Tata didn't get married
ದೇಶ8 ಗಂಟೆಗಳು ago

Ratan Tata: ರತನ್ ಟಾಟಾ ಯಾಕೆ ಮದ್ವೆ ಆಗಲಿಲ್ಲ! ತಮ್ಮ ಪ್ರೀತಿಯ ಕತೆ ಬಗ್ಗೆ ಹೇಳಿದ್ದೇನು?

Dina Bhavishya
ಭವಿಷ್ಯ8 ಗಂಟೆಗಳು ago

Dina Bhavishya : ಈ ದಿನ ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ

Heavy rain forecast in Uttara Kannada
ಮಳೆ2 ದಿನಗಳು ago

Karnataka Weather : ಇಂದು ಉತ್ತರಕನ್ನಡದಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್‌ ಘೋಷಣೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ7 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌