Road Accident: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ; ಯುವಕ ಸಾವು, ಹಲವರು ಗಂಭೀರ - Vistara News

ಶಿವಮೊಗ್ಗ

Road Accident: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ; ಯುವಕ ಸಾವು, ಹಲವರು ಗಂಭೀರ

Road Accident: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟರೆ, ಹಲವರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು (Road Accident) ಪಲ್ಟಿಯಾಗಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃತಪಟ್ಟಿದ್ದಾನೆ. ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಭತ್ತದ ಗದ್ದೆಗೆ ಪಲ್ಟಿಯಾಗಿದೆ. ಪರಿಣಾಮ ಬೆಂಗಳೂರಿನ ನೆಲಮಂಗಲ ಮೂಲಕ ಚಂದನ್‌ (26) ಎಂಬಾತ ಮೃತಪಟ್ಟಿದ್ದಾನೆ.

ಕೊಡುಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯ ಜಿಲ್ಲೆಯ ಯೋಗೇಶ್‌ ಎಂಬುವವರಿಗೆ ಗಂಭೀರ ಗಾಯವಾಗಿದೆ. ಯುವಕರ ತಂಡ ಬೆಂಗಳೂರಿನಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದರು. ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟರೆ, ಉಳಿದವರಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಯಾರದ್ದೋ ನಿರ್ಲಕ್ಷ್ಯಕ್ಕೆ ಬಾಲಕ ಬಲಿ

ಯಾರದ್ದೋ ನಿರ್ಲಕ್ಷ್ಯಕ್ಕೆ ಬಾಲಕನೊಬ್ಬ ಬಲಿಯಾಗಿದ್ದಾನೆ. ನಿಲ್ಲಿಸಿದ ಸ್ಕೂಟಿಗೆ ಬಾಲಕನ ಕೈ ಟಚ್ ಆಗಿ ರಸ್ತೆಗೆ ಬಿದ್ದವನ ಮೇಲೆ ಟೆಂಪೋ ಹರಿದಿದೆ. ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ಅಪಘಾತ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಏಳು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು.

ಧಾರವಾಡದಲ್ಲಿ ಹೊತ್ತಿ ಉರಿದ ಕಾರು

ಧಾರವಾಡದ ಸತ್ತೂರು ಬಳಿ ಹುಂಡೈ ಟಿ20 ಕಾರೊಂದು ಬೆಂಕಿಗೆ ಆಹುತಿ ಆಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿರುವ ಶಂಕೆ ಇದೆ. ಧಾರವಾಡ ಮೂಲದವರ ಕಾರು ಎಂದು ತಿಳಿದು ಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಕಾರಿನಿಂದ ಹೊರಬಂದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಯುವತಿ ಸಾವು

ವಿಜಯದಶಮಿ ದಿನ ತಾತನಿಗೆ ಬನ್ನಿ ಕೊಡಲು ತೆರಳಿದ್ದ ಮೊಮ್ಮಕ್ಕಳ ಬಾಳಲ್ಲಿ ದುರಂತ ನಡೆದಿದೆ. ರಾಯಚೂರಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಓರ್ವ ಯುವತಿ ಮೃತಪಟ್ಟರೆ, ಮತ್ತೋರ್ವ ಯುವತಿಗೆ ಗಂಭೀರ ಗಾಯವಾಗಿದೆ. ರಾಯಚೂರು ನಗರದ ಡಿಸಿ ಬಂಗಲೆ ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಸಾಕ್ಷಿ (20) ಎಂಬಾಕೆ ಮೃತಪಟ್ಟರೆ, ಸಂಜನಾ ಎಂಬಾಕೆಗೆ ಗಂಭೀರ ಗಾಯವಾಗಿದೆ.

ಸಂಜನಾ ಮತ್ತು ಸಾಕ್ಷಿ ತಡರಾತ್ರಿ ತಾತನ ಮನೆಗೆ ಬನ್ನಿ ಕೊಡಲು ತೆರಳಿದ್ದರು. ಬನ್ನಿ ಕೊಟ್ಟು ವಾಪಸ್ ಸ್ಕೂಟರ್‌ ಬರುವ ವೇಳೆ ರೋಡ್ ಕ್ರಾಸ್ ಮಾಡುವಾಗ ಬಸವೇಶ್ವರ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಸ್ವಿಪ್ಟ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್‌ನ ಹಿಂದೆ ಕುಳಿತಿದ್ದ ಸಾಕ್ಷಿ, ಕಾರಿನ ಮೇಲೆ ಬಿದ್ದು ಮೃತಪಟ್ಟಿದ್ದಾಳೆ. ಅಪಘಾತದ ಬಳಿಕ ಕಾರು ಬಿಟ್ಟು ಎಸ್ಕೇಪ್ ಕಾರು ಚಾಲಕ ಎಸ್ಕೇಪ್‌ ಆಗಿದ್ದಾನೆ. ರಾಯಚೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Rain : ಅಬ್ಬರಿಸುತ್ತಿರುವ ಮಳೆಗೆ ಕಂಗಲಾದ ರೈತರು; ಜಮೀನುಗಳಿಗೆ ನೀರು ನುಗ್ಗಿ ಅವಾಂತರ

Karnataka Rain : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರೈತರು ಕಂಗಲಾಗಿದ್ದಾರೆ. ಜಮೀನುಗಳು ಜಲಾವೃತಗೊಂಡಿದ್ದು, ಬೆಳೆ ಕೊಳೆತು ಹೋಗುವ ಆತಂಕದಲ್ಲಿದ್ದಾರೆ.

VISTARANEWS.COM


on

By

karnataka Rain
Koo

ಹಾವೇರಿ: ಹಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣನ (Karnataka Rain ) ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿದೆ. ನಗರದ ಪಿಬಿ ರಸ್ತೆ, ಹಾನಗಲ್ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ. ಕೆರೆಯಂತಾದ ರಸ್ತೆಗಳಲ್ಲಿ ವಾಹನ‌ ಸವಾರರು ಪರದಾಡಿದರು. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ‌ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರವೇ ಸೃಷ್ಟಿಯಾಗಿದೆ.

ಹಾವೇರಿ ತಾಲೂಕಿನ ಕನಕಾಪುರ ಬಳಿ ತುಂಗಾ ಮೇಲ್ದಂಡೆ ಯೋಜನೆ ಕಾಲುವೆ ಒಡೆದು ಬೆಳೆಹಾನಿಯಾಗಿದೆ. ಜಮೀನುಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಬ್ಯಾಡಗಿ ಪಟ್ಟಣದ ಜನಾತಾ ಪ್ಲಾಟ್‌ನ ಮನೆಗಳಿಗೆ ನೀರು ನುಗ್ಗಿದೆ. ಹಾವೇರಿ ಬ್ಯಾಡಗಿ ರಸ್ತೆ ತಡೆದು ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಪ್ರತಿಭಟಿಸಿದರು. ಮಳೆ ನೀರು ಹೋಗಲು ಸರಿಯಾದ ಕಾಲುವೆ ಇಲ್ಲದ ಪರಿಣಾಮ ಮಳೆ ನೀರು ಮನೆಗಳಿಗೆ ನುಗ್ಗಿದೆ ಎಂದು ಆಕ್ರೋಶಿಸಿದರು.

ವಿಜಯನಗರದಲ್ಲೂ ಧಾರಾಕಾರ ಮಳೆ

ವಿಜಯನಗರ ಜಿಲ್ಲೆಯಲ್ಲಿ ನಿನ್ನೆ ತಡೆರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ, ಮನೆಗಳಿಗೆ ನೀರು ನುಗ್ಗಿದೆ. ಕೂಡ್ಲಿಗಿ ತಾಲೂಕಿನ ಕೊಟ್ಟೂರು ರಸ್ತೆಯಲ್ಲಿ ಹತ್ತಾರು ಮನೆಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ನೀರು ನುಗ್ಗಿದ್ದರಿಂದ ರಾತ್ರಿಯಿಡಿ ನಿವಾಸಿಗಳು ಜಾಗರಣೆ ಇರಬೇಕಾಯಿತು. ಮೊಣಕಾಲುದ್ದ ಮಳೆ ನೀರು ನಿಂತು ಮನೆಯಲ್ಲಿದ್ದ ಸಾಮಗ್ರಿಗಳು ನೀರಲ್ಲೇ ಮುಳುಗಡೆಯಾಗಿದ್ದವು. ಮಳೆ ನೀರು ನುಗ್ಗಿದ ಮನೆಗಳಿಗೆ ತೆರಳಿ ಜನರ ಸಮಸ್ಯೆಯನ್ನು ಪುರಸಭೆ ಅಧ್ಯಕ್ಷ ಕಾವಲಿ ಶಿವಪ್ಪ ಆಲಿಸಿದರು.

ತಡರಾತ್ರಿ ಸುರಿದ ಮಳೆಗೆ ಈರುಳ್ಳಿ ಬೆಳೆಗೆ ಹಾನಿಯಾಗಿದೆ. ಹತ್ತಾರು ಎಕರೆಯಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆಗೆ ಮಳೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದೆ. ಬೆಳೆದು ನಿಂತಿದ್ದ ಈರುಳ್ಳಿ ಬೆಳೆಗೆ ಮಳೆ ನೀರು ನುಗ್ಗಿದ್ದರಿಂದ ಕೊಳೆಯುವ ಆತಂಕ ಇದೆ. ವಿಜಯನಗರದ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಎಸ್.ಎಂ ಮಂಜಯ್ಯ ಎಂಬವವರು ಬೆಳೆಗೆ ನುಗ್ಗಿದ ನೀರನ್ನು ಹರಿಮಾಡಿ ಬಿಟ್ಟು ಈರುಳ್ಳಿ ರಕ್ಷಣೆಗೆ ಮುಂದಾದರು. ಕೈಗೆ ಬಂದ ತುತ್ತು ಬಾಯಿಗೆ ಬರುತ್ತೋ..? ಇಲ್ವೋ..? ಆತಂಕದಲ್ಲಿದ್ದಾರೆ. ಬೆಳೆ ನಾಶ ಆದರೆ ಸೂಕ್ತ ಪರಿಹಾರ ಕೊಡಬೇಕು ಅಂತ ಈರುಳ್ಳಿ ಬೆಳೆಗಾರರಿಂದ ಆಗ್ರಹಿಸಿದ್ದಾರೆ.

ಹಡಗಲಿ ತಾಲೂಕಿನಲ್ಲೂ ಭಾರೀ ಮಳೆ ಸುರಿದಿದ್ದು, ಈರುಳ್ಳಿ ಹೊಲಕ್ಕೆ ನೀರು ನುಗ್ಗಿತ್ತು. ಅಪಾರ ಪ್ರಮಾಣ ಈರುಳ್ಳಿ ಬೆಳೆ ನಾಶವಾಗಿದೆ. ಹಡಗಲಿ ತಾಲೂಕಿನ ಕೆಂಚಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 3.5 ಎಕರೆ ಹೊಲದಲ್ಲಿ ಈರುಳ್ಳಿ ಕಿತ್ತು ಒಣಗಿಸಲು ಹಾಕಲಾಗಿತ್ತು. ಆದರೆ ನಿನ್ನೆ ರಾತ್ರಿ ಭಾರೀ ಮಳೆಯಿಂದಾಗಿ ನೀರಲ್ಲೇ ಈರುಳ್ಳಿ ಬೆಳೆ ತೇಲಾಡಿದೆ. ಎಕರೆಗೆ ಹತ್ತಾರು ಸಾವಿರ ಖರ್ಚು ಮಾಡಲಾಗಿತ್ತು. ಮಾರ್ಕೆಟ್‌ನಲ್ಲಿ ಈರುಳ್ಳಿ ಬೆಳೆಗೆ ಬೆಲೆ ಇರುವುದರಿಂದ ಆಶಾ ಭವಾನೆಯಲ್ಲಿದ್ದರು. ಆದರೆ ಏಕಾಏಕಿ ನಿನ್ನೆ ಮಳೆ ಸುರಿದಿದ್ದು, ಈರುಳ್ಳಿ ಕೊಳೆತುಹೋಗುವ ಆತಂಕದಲ್ಲಿ ಅನ್ನದಾತ ಇದ್ದಾರೆ.

ದಾವಣಗೆರೆಯಲ್ಲಿ ನಿರಂತರ ಮಳೆಗೆ ಗೋಡೆ ಕುಸಿತ

ನಿರಂತರವಾಗಿ ಸುರಿದ ಮಳೆಗೆ ದೊಡ್ಡಬೊಮ್ಮನಹಳ್ಳಿ ಕೋಟೆ ಗೋಡೆ ಕುಸಿದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ಘಟನೆ ನಡೆದಿದೆ. ಪಾಳೇಗಾರರ ಕಾಲದಲ್ಲಿ ನಿರ್ಮಾಣವಾಗಿದ್ದ ಕೋಟೆ ಗೋಡೆಯು ನಿರಂತರ ಮಳೆಯಿಂದ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತವಾಗಿಲ್ಲ. ಸತತ ಮಳೆಯಿಂದ ಜಗಳೂರು ತಾಲ್ಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಮಳೆ‌ ಜತೆ 57 ಕೆರೆ ಯೋಜನೆ ನೀರು ಕೂಡ ಸೇರಿ ಕೋಡಿ‌ ಬೀಳುತ್ತಿವೆ. ಕೋಡಿ ಬಿದ್ದ ತಾಲೂಕಿನ ಎರಡನೇ ಅತಿ ದೊಡ್ಡ ಕೆರೆ ಗಡಿಮಾಕುಂಟೆ‌ ಕೆರೆಯ ಕೋಡಿ ಬೀಳುವ ದೃಶ್ಯವನ್ನು ನೋಡಲು ಗ್ರಾಮಸ್ಥರು ನೆರೆದಿದ್ದರು. ಕೋಡಿ ಬೀಳುತ್ತಿದ್ದಂತೆ ಕೇಕೆ‌‌ ಶಿಳ್ಳೇ‌ಹಾಕಿ ಸಂತೋಷ ವ್ಯಕ್ತಪಡಿಸಿದರು.

ಕೊಪ್ಪಳದಲ್ಲಿ ಮಳೆಗೆ ನೆಲಕಚ್ಚಿದ ಮೆಕ್ಕೆಜೋಳ

ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿ ತಡರಾತ್ರಿ ಸುರಿದ ಮಳೆಗೆ ಮೆಕ್ಕೆಜೋಳ ಬೆಳೆ ನೆಲ‌ಕಚ್ಚಿದೆ. ಮಳೆಯ ಆರ್ಭಟಕ್ಕೆ ಮೆಕ್ಕಜೋಳ ಬೆಳೆ ಹಾನಿಯಾಗಿದೆ. ತಿಗರಿ ಗ್ರಾಮದ‌‌ ಕೊಟ್ರಪ್ಪ ಅಂಗಡಿ ಎಂಬ ರೈತನ ಬೆಳೆ ಹಾನಿಯಾಗಿದೆ. ಎರಡು ಎಕರೆ‌ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆ ಬೆಳೆದಿದ್ದರು. ಆದರೆ ಮಳೆಯಿಂದಾಗಿ ಮೆಕ್ಕೆಜೋಳ ಬೆಳೆ ನೆಲಕಚ್ಚಿದ್ದು, ಪರಿಹಾರ ನೀಡುವಂತೆ ರೈತ ಕೊಟ್ರಪ್ಪ ಆಗ್ರಹಿಸಿದರು.

ಭದ್ರಾವತಿಯಲ್ಲಿ ಮಳೆ ಅಬ್ಬರ

ಶಿವಮೊಗ್ಗದ ಭದ್ರಾವತಿ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತಗೊಂಡಿದೆ. ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಚರಂಡಿಗಳು ತುಂಬಿ ಹರಿಯುತ್ತಿವೆ. ಚರಂಡಿ ತುಂಬಿದ ಪರಿಣಾಮ ರಸ್ತೆ ಮೇಲೆ ನೀರು ಹರಿಯುತ್ತಿದೆ. ಭದ್ರಾವತಿ ನಗರದ ಜನ್ನಾಪುರದ ಕಿತ್ತೂರು ರಾಣಿ ಚೆನ್ನಮ್ಮ ಬ್ಲಾಕ್‌ನ ಮನೆಯೊಂದರ ಕಾಂಪೌಂಡ್‌ ಗೋಡೆ ಕುಸಿದಿದೆ. ಮನೆಗಳಿಗೆ ನುಗ್ಗಿರುವ ನೀರನ್ನು ಹೊರ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ.

ಧಾರವಾಡದಲ್ಲಿ ಪ್ರವಾಹಕ್ಕೆ ಸಿಲುಕಿದ ವ್ಯಕ್ತಿ

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕಾಲವಾಡ ಗ್ರಾಮದ ಹೊರಹೊಲಯದಲ್ಲಿ ಬೆಣ್ಣೆ ಹಳ್ಳದ ಪ್ರವಾಹಕ್ಕೆ ವ್ಯಕ್ತಿಯೊಬ್ಬರು ಸಿಲುಕಿದ ಘಟನೆ ನಡೆದಿದೆ. ಲಕ್ಷ್ಮಣ ಬಾರಕೇರ ಹಳ್ಳದಲ್ಲಿ ಸಿಲುಕಿರುವವರು. ಕಳೆದ ಎರಡು ದಿನಗಳಿಂದ ಲಕ್ಷ್ಮಣ ಹೊಲದಲ್ಲಿಯೇ ಇದ್ದರು. ನಿನ್ನೆ ಏಕಾಏಕಿ ಬೆಣ್ಣೆ ಹಳ್ಳದ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಸುತ್ತಲೂ ನೀರು ಆವರಿಸಿದೆ. ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ಹೊರತರಲಾಯಿತು. ಸ್ಥಳಕ್ಕೆ ನವಲಗುಂದ ಶಾಸಕ ಕೋನರೆಡ್ಡಿ ಭೇಟಿ ನೀಡಿದರು.

ಮಡಿಕೇರಿಯಲ್ಲಿ ಮಳೆಯ ಸಿಂಚನ

ಶನಿವಾರ ಬೆಳಗ್ಗಿನಿಂದಲೇ ತುಂತುರು ಮಳೆ ಆರಂಭವಾಗಿದ್ದು, ದಸರಾ ಶೋಭಾಯಾತ್ರೆ ಸಿದ್ಧತೆಗೆ ವರುಣ ಅಡ್ಡಿಯಾಗಿದ್ದಾನೆ. ಮಳೆಯ‌ ನಡುವೆ ಶೋಭಾಯಾತ್ರೆಗೆ ಬಿರುಸಿನ ಸಿದ್ಧತೆ ನಡೆಯುತ್ತಿದೆ. ಸಂಜೆ ವೇಳೆಗೆ ಮಳೆ ಬಿಡುವು ನೀಡುವ ಸಾಧ್ಯತೆ ಇದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದ್ದು, ಮಳೆಯಿಂದ ಜನತೆಗೆ ಕಿರಿಕಿರಿ‌ ಅನುಭವಿಸಿದ್ದಾರೆ.

Continue Reading

ಮಳೆ

Karnataka Weather : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಬೆಂಗಳೂರಿಗೂ ಅಲರ್ಟ್‌

Karnataka Weather Forecast : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, ಬೆಂಗಳೂರಿಗೂ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

moderate rains and at isolated to scattered heavy to very heavy rains associated with thunderstorm
Koo

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾದರೆ, ಕರಾವಳಿಯಲ್ಲಿ ಸಾಧಾರಣವಾಗಿರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಮಧ್ಯಮದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

moderate rains and at isolated to scattered heavy to very heavy rains associated with thunderstorm
moderate rains and at isolated to scattered heavy to very heavy rains associated with thunderstorm

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೆಲವೊಮ್ಮೆ ಗುಡುಗು ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಯಾದಗಿರಿಯಲ್ಲಿ ಮಳೆಯಾರ್ಭಟ; ಸಿಡಿಲು ಬಡಿದು ಮಹಿಳೆ ಸಾವು, ಮತ್ತಿಬ್ಬರಿಗೆ ಗಾಯ

Karnataka Rain : ಯಾದಗಿರಿಯಲ್ಲಿ ಮಳೆಯಾರ್ಭಟ ಜೋರಾಗಿದ್ದು, ಸಿಡಿಲು ಬಡಿದು ಮಹಿಳೆ ಮೃತಪಟ್ಟರೆ, ಮತ್ತಿಬ್ಬರಿಗೆ ಗಾಯವಾಗಿದೆ.

VISTARANEWS.COM


on

By

Heavy rains lash Yadgir Woman killed in lightning strike
Koo

ಯಾದಗಿರಿ: ಭಾರಿ ಮಳೆ ಜತೆಗೆ ಸಿಡಿಲು ಬಡಿದು ಕೂಲಿ ಕಾರ್ಮಿಕ‌ ಮಹಿಳೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಂದ್ಲಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರ್ಮಿಕರು ಹತ್ತಿ ಬಿಡಿಸಲು ಬೇರೊಬ್ಬರ ಜಮೀನಿಗೆ ಕೂಲಿಗೆ ತೆರಳಿದ್ದರು. ನಿನ್ನೆ ಸಂಜೆ ಜಮೀನಿನಲ್ಲಿ ಹತ್ತಿ ಬಿಡಿಸುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ನಿಂಗಮ್ಮ ಕೊಂಗಂಡಿ (35) ಮೃತ ದುರ್ದೈವಿ. ಭಾಗಮ್ಮ, ಬಸವರಾಜ ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸುರಪುರ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಲವತ್ತು ಕೋಳಿಗಳು ಬಲಿ

ಕೊಪ್ಪಳ ತಾಲೂಕಿನ ಗಿಣಗೇರಿಯ ಹುಲಿಗಿ ಚಿಕನ್ ಸೆಂಟರ್‌ನಲ್ಲಿ ಭಾರಿ ಮಳೆಗೆ ನಲವತ್ತು ಕೋಳಿಗಳು ಬಲಿಯಾಗಿವೆ. ನಿನ್ನೆ ರಾತ್ರಿ ಸುರಿದ ಮಳೆಗೆ ರಾಜು ಎಂಬುವವರಿಗೆ ಸೇರಿದ ಶಾಪ್‌ನ ಒಳಗೆ ಗ್ರಾಮದ ಚರಂಡಿ ನೀರು ನುಗ್ಗಿದೆ. ಪರಿಣಾಮ ನೀರಿಗೆ ಸಿಲುಕಿ ಮಾರಾಟಕ್ಕಿಟ್ಟಿದ್ದ ಕೋಳಿಗಳು ಮೃತಪಟ್ಟಿವೆ. ಸಾವಿರಾರು ರೂಪಾಯಿ ಮೌಲ್ಯದ ಕೋಳಿಗಳು ಕಳೆದುಕೊಂಡು ಶಾಪ್ ಮಾಲೀಕ ನಷ್ಟ ಅನುಭವಿಸಿದ್ದರು.

ಕೋಡಿ ಬಿದ್ದು ಮನೆಗಳು ಜಲಾವೃತ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಹಿರೇಮಲ್ಲನಹೊಳೆ ಗ್ರಾಮದಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ
ಹಿರೇಮಲ್ಲನಹೊಳೆ ಕೆರೆ ಕೋಡಿ ಬಿದ್ದಿದೆ. ಮೂವತ್ತು ವರ್ಷಗಳ ಬಳಿಕ ಕೆರೆ ಕೋಡಿ ಬಿದ್ದಿದ್ದು, 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದವು. ಕೆರೆ ತುಂಬಿ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ತೊರೆಸಾಲು, ಹಿರೇಮಲ್ಲನಹೊಳೆ, ತಾಯಿಟೋಣಿ, ಹಾಲೆಹಳ್ಳಿ, ಕೋರಚರಹಟ್ಟಿ ಗ್ರಾಮದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಜೆಸಿಬಿ ಮೂಲಕ ಕೋಡಿ ಬಿದ್ದ ನೀರನ ಹರಿವನ್ನು ಬೇರೆ ಕಡೆಗೆ ಬದಲಿಸಲು ಪ್ರಯತ್ನಿಸಿದರು.

ಚಿತ್ರದುರ್ಗದಲ್ಲೂ ಮಳೆ ಅಬ್ಬರ

ಚಿತ್ರದುರ್ಗ ಜಿಲ್ಲೆಯ ಹಲವು ಕಡೆ ತಡರಾತ್ರಿ ಮಳೆಯ ಅಬ್ಬರ ಜೋರಾಗಿತ್ತು. ಮಳೆಯ ಆರ್ಭಟಕ್ಕೆ ಕೆರೆ ಕಟ್ಟೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿತ್ತು. ಚಳ್ಳಕೆರೆ ತಾಲೂಕಿನ ರೇಖಲಗೆರೆ ಕೆರೆ ಕೋಡಿ ತುಂಬಿ ಹರಿಯುತ್ತಿದೆ. ರಾಮಸಾಗರ ಹಳ್ಳ ಸಂಪೂರ್ಣ ಭರ್ತಿಯಾಗಿದೆ. ರೇಖಲಗೆರೆ ಫೀಡರ್ ಚಾನಲ್ ಮೂಲಕ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ರಾತ್ರಿ ಮಳೆಗೆ ವರವು ಗ್ರಾಮದ ಕೆರೆಯೂ ಸಂಪೂರ್ಣ ಭರ್ತಿಯಾಗಿ, ಕೋಡಿ ಬಿದ್ದು ಹರಿಯುತ್ತಿದೆ. ಬರದ ನಾಡಲ್ಲಿ ಬರಪೂರ ಮಳೆಗೆ ಅನ್ನದಾತರಲ್ಲಿ ಸಂತಸ ಮೂಡಿದೆ.

ಇದನ್ನೂ ಓದಿ:Karnataka Weather : ದಕ್ಷಿಣದಿಂದ ಉತ್ತರ ಒಳನಾಡಿನವರೆಗೂ ಗುಡುಗು ಸಹಿತ ವ್ಯಾಪಕ ಮಳೆ ಮುನ್ಸೂಚನೆ

ಕೆರೆ ಕೋಡಿ ಬಿದ್ದು ಶವ ಸಾಗಿಸಲು ಗ್ರಾಮಸ್ಥರ ಹೆಣಗಾಟ

ಬೆಳಗಾವಿಯ ಕಿತ್ತೂರು ತಾಲೂಕಿನಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಬಸರಕೋಡ ಗ್ರಾಮದಲ್ಲಿ ಶವ ಸಾಗಿಸಲು ಗ್ರಾಮಸ್ಥರು ಹೆಣಗಾಡಿದರು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಸರಕೋಡ ಗ್ರಾಮದಲ್ಲಿ ಪ್ರತಿ ವರ್ಷ ಮಳೆಗಾಲ ಬಂದ್ರೇ ಶವ ಸಾಗಿಸಲು ಜನರು ಪರದಾಡಬೇಕು. ಸ್ಮಶಾನಕ್ಕೆ ಹೋಗುವ ಮಾರ್ಗದಲ್ಲಿರುವ ಕೆರೆ ಕೊಡಿ ಬಿದ್ದು ಪರದಾಟ ಅನುಭವಿಸಬೇಕು.

ಮಳೆಗಾಲದಲ್ಲಿ ರಸ್ತೆ ಮೇಲೆ ಕೆರೆಯ ನೀರು ಹಳ್ಳದಂತೆ ಹರಿದು ಹೋಗಲಿದೆ. ನಡುಮಟದ ನೀರಲ್ಲೇ ಶವ ಹೊತ್ತು ಸ್ಮಶಾನಕ್ಕೆ ಸಾಗಿಸುವ ಪರಿಸ್ಥಿತಿ ಇದೆ. ಗ್ರಾಮದಲ್ಲಿ ಹೃದಯಾಘಾತದಿಂದ ಶಂಕ್ರಪ್ಪ ಹರಿಜನ(40) ಎಂಬುವವರು ಮೃತಪಟ್ಟಿದ್ದರು. ಶವ ಹೊತ್ತು ರಭಸವಾಗಿ ಹರಿಯುವ ನೀರಲ್ಲೇ ಸಾಗಿದ ಗ್ರಾಮಸ್ಥರು ಅಂತ್ಯ ಸಂಸ್ಕಾರ ನೆರವೇರಿಸಿದರು. ಕೆರೆ ಪಕ್ಕ ಸೇತುವೆ ನಿರ್ಮಾಣಕ್ಕೆ ಹಣ ಬಂದ್ದರೂ, ಸಣ್ಣ ನೀರಾವರಿ ಇಲಾಖೆ ಅಸಡ್ಡೆ ತೋರುತ್ತಿದೆ. ಒಂದು ಕೋಟಿಗೂ ಅಧಿಕ ಹಣವನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ದುರಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತ

ಗದಗ ಜಿಲ್ಲೆಯ ನರಗುಂದ ತಾ. ಕುರ್ಲಗೇರಿ ಸೇತುವೆ ಭಾರೀ ಮಳೆಗೆ ಜಲಾವೃತಗೊಂಡಿದೆ. ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ರೋಣ ತಾ.ಯಾವಗಲ್ ಗ್ರಾಮದ ಬಳಿಯ ಸೇತುವೆ ಜಲಾವೃತವಾಗಿದೆ. ರೋಣ-ನರಗುಂದ ರಸ್ತೆ ಸಂಚಾರ ಸ್ಥಗಿತವಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಅಪಾಯ ಮಟ್ಟ ಮೀರಿ ಬೆಣ್ಣೆಹಳ್ಳ ಹರಿಯುತ್ತಿದೆ. ಹುಬ್ಬಳ್ಳಿ-ಧಾರವಾಢ ಹಾಗೂ ಗದಗ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಬೆಣ್ಣೆ ಹಳ್ಳದ ಬಳಿ ಯಾರು ಹೋಗದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಧ್ವನಿ ವರ್ಧಕದ ಮೂಲಕ ಬೆಣ್ಣೆ ಹಳ್ಳ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ ಮಾಡಿದೆ. ಕಷ್ಟ ಪಟ್ಟು ಬೆಳೆದ ಗೋವಿನಜೋಳ ಹತ್ತಿ ಈರುಳ್ಳಿ ಬೆಳೆಗಳು ಜಲಾವೃತಗೊಂಡು, ಬೆಳೆ ಹಾನಿಯಾಗಿದೆ.

ಧಾರವಾಡ, ಯಾದಗಿರಿಯಲ್ಲಿ ಭರ್ಜರಿ ಮಳೆ

ಧಾರವಾಡ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಮತ್ತಷ್ಟು ಮಳೆ ಆದರೆ ಪ್ರವಾಹ ಭೀತಿಯಲ್ಲಿ ಹಳ್ಳಕ್ಕೆ ಹೊಂದಿರುವ ಗ್ರಾಮಗಳು ಜಲಾವೃತಗೊಳ್ಳುವ ಸಾಧ್ಯತೆ ಇದೆ. ಯಾದಗಿರಿ ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಗರ ಸೇರಿದಂತೆ ವಿವಿಧೆಡೆ ಒಂದು ಗಂಟೆಗೂ ಮಳೆ ಸುರಿದಿದೆ. ಮಳೆಯಿಂದ ಯಾದಗಿರಿ ರೈತರು ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ದಕ್ಷಿಣದಿಂದ ಉತ್ತರ ಒಳನಾಡಿನವರೆಗೂ ಗುಡುಗು ಸಹಿತ ವ್ಯಾಪಕ ಮಳೆ ಮುನ್ಸೂಚನೆ

Karnataka Weather Forecast : ದಕ್ಷಿಣದಿಂದ ಉತ್ತರ ಒಳನಾಡಿನವರೆಗೂ ಗುಡುಗು ಸಹಿತ ವ್ಯಾಪಕ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ದಕ್ಷಿಣ ಮತ್ತು ಉತ್ತರ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ಗುಡುಗು ಜತೆಗೆ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಭಾರಿ ಮಳೆ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ಒಳನಾಡಿನ ಜಿಲ್ಲೆಗಳಿಗೆ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident
ರಾಯಚೂರು11 ಸೆಕೆಂಡುಗಳು ago

Road Accident : ರಾಯಚೂರಿನಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಸ್ಥಳದಲ್ಲೇ ಸವಾರರಿಬ್ಬರು ಸಾವು

Road Accident
ಶಿವಮೊಗ್ಗ24 ನಿಮಿಷಗಳು ago

Road Accident: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ; ಯುವಕ ಸಾವು, ಹಲವರು ಗಂಭೀರ

Munirathnas honeytrap case gets a twist Names of influential leaders revealed in probe
ಬೆಂಗಳೂರು3 ಗಂಟೆಗಳು ago

MLA Muniratna: ಮುನಿರತ್ನ ಹನಿಟ್ರ್ಯಾಪ್ ಕೇಸ್‌ಗೆ ಟ್ವಿಸ್ಟ್; ತನಿಖೆಯಲ್ಲಿ ಬಯಲಾಯ್ತು ಪ್ರಭಾವಿ ನಾಯಕರ ಹೆಸರು

Murder case
ಬೆಂಗಳೂರು ಗ್ರಾಮಾಂತರ3 ಗಂಟೆಗಳು ago

Murder Case : ಬನ್ನೇರುಘಟ್ಟದಲ್ಲಿ ಮಗನಿಂದಲೇ ತಂದೆಯ ಬರ್ಬರ ಹತ್ಯೆ

Actor Darshan suffers from back pain
ಬೆಂಗಳೂರು3 ಗಂಟೆಗಳು ago

Actor Darshan : ನಟ ದರ್ಶನ್‌ಗೆ ಬಿಟ್ಟು ಬಿಡದೆ ಕಾಡುತ್ತಿದೆ ಬೆನ್ನು ನೋವು; ನಾಳೆ ಆರು ಮಂದಿಯ ಬೇಲ್‌ ಭವಿಷ್ಯ

Spider detection A new species of spider found on the banks of Jayamangali river
ತುಮಕೂರು4 ಗಂಟೆಗಳು ago

Spider detection : ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆ

Dina Bhavishya
ಭವಿಷ್ಯ10 ಗಂಟೆಗಳು ago

Dina Bhavishya : ಈ ದಿನ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ

BSA motorcycles
ಆಟೋಮೊಬೈಲ್23 ಗಂಟೆಗಳು ago

BSA motorcycles : ‌ಬೆಂಗಳೂರಿಗೆ ಲಗ್ಗೆ ಇಟ್ಟ ಬಿಎಸ್ಎ ಗೋಲ್ಡ್‌ ಸ್ಟಾರ್

bwssb
ಬೆಂಗಳೂರು23 ಗಂಟೆಗಳು ago

BWSSB : ಬೆಂಗಳೂರಿಗರ ಬಹು ದಿನಗಳ ಕನಸು- ನನಸು; ಅಕ್ಟೋಬರ್ 16ರಂದು ಕಾವೇರಿ ಐದನೇ ಹಂತ ಲೋಕಾರ್ಪಣೆ

Actor Darshan is all set to move the court seeking transfer to Ballari to Bengaluru jail
ಬೆಂಗಳೂರು24 ಗಂಟೆಗಳು ago

Actor Darshan : ಬೆಂಗಳೂರು ಜೈಲಿಗೆ ಶಿಫ್ಟ್ ಮಾಡುವಂತೆ ಕೋರ್ಟ್ ಮೊರೆ ಹೋಗಲು ನಟ ದರ್ಶನ್ ತಯಾರಿ!

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ವಾರ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌