Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್ - Vistara News

ಬೆಂಗಳೂರು

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

Rajakaluve Encroachment: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ಬಿಬಿಎಂಪಿ ಡೆಮಾಲಿಷನ್ ಡ್ರೈವ್ ಮತ್ತೆ ಶುರು ಮಾಡಲು ಮುಂದಾಗಿದೆ. ಹಿಂದೊಮ್ಮೆ ಸ್ಟೇ ಆರ್ಡರ್‌ ಬರುತ್ತಿದ್ದಂತೆ, ಅಧಿಕಾರಿಗಳು ಠುಸ್‌ ಪಟಾಕಿ ಆಗಿದ್ದರು. ಇದೀಗ ಮತ್ತೆ ಡೆಮಾಲಿಷನ್‌ ಕೆಲಸಕ್ಕೆ ಕೈಹಾಕಿದೆ.

VISTARANEWS.COM


on

Rajakaluve Encroachment
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೃಹತ್‌ ಬೆಂಗಳೂರು ಪಾಲಿಕೆ ವ್ಯಾಪ್ತಿಯ ರಾಜಕಾಲುವೆ, ಕೆರೆಗಳನ್ನು ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ (Rajakaluve Encroachment) ಅಧಿಕಾರಿಗಳು ಶಾಕ್ ಕೊಡಲಿದ್ದಾರೆ. ಕಳೆದ ವಾರ ಸುರಿದ ಭಾರಿ ಮಳೆಗೆ ರಾಜಕಾಲುವೆಗಳ ನೀರು ರಸ್ತೆಗೆ ಹರಿದಿತ್ತು. ಇದರಿಂದ ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ಜನ ಇಡಿ ಶಾಪ ಹಾಕಿದ್ದರು, ಇದು ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಇತ್ತ ಖುದ್ದು ಡಿಸಿಎಂ ಶಿವಕುಮಾರ್‌ ಕೂಡ ಒತ್ತುವರಿ ತೆರವಿಗೆ ಆದೇಶ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಜಕಾಲುವೆ, ಕೆರೆ ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಮುಂದಾಗಿದೆ. ಈಗಾಗಲೇ 1,712 ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿರುವ ವರದಿ ಸಿದ್ದವಾಗಿದೆ. ಅದರಲ್ಲಿ 196 ಕಟ್ಟಡಗಳ ಕೇಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ ಇದೆ. ಉಳಿದಂತೆ 167 ಕಟ್ಟಡಗಳ ಸರ್ವೆ ಕಾರ್ಯ ಮುಗಿದಿದೆ. ತಹಸೀಲ್ದಾರರು ಆದೇಶ ನೀಡಿದ್ರೆ ಒತ್ತುವರಿ ತೆರವಿಗೆ ಬಿಬಿಎಂಪಿ ಮುಂದಾಗಲಿದೆ.

ಸದ್ಯ 1712 ಒತ್ತುವರಿ ಪ್ರಕರಣಗಳಲ್ಲಿ 300 ಕಡೆ ಖಾಲಿ ನಿವೇಶನ ಇದ್ದು, ಈಗಾಗಲೇ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 800 ಕಡೆ ಒತ್ತುವರಿ ತೆರವು ಬಾಕಿ ಇದೆ. ಯಾವ್ಯಾವ ವಲಯಗಳಲ್ಲಿ ಒತ್ತುವರಿ ಆಗಿದೆ ಎಂದು ನೋಡುವುದಾದರೆ, ಪೂರ್ವ ವಲಯದಲ್ಲಿ 123, ಪಶ್ಚಿಮ 46, ದಕ್ಷಿಣ 46, ಕೋರಮಂಗಲ ಕಣೆವೆ 104, ಹಾಗೂ ಯಲಹಂಕ 359, ಮಹಾದೇವಪುರ 492, ಬೊಮ್ಮನಹಳ್ಳಿ 201, ಆರ್ ಆರ್ ನಗರ 104 ಸೇರಿದಂತೆ ದಾಸರಹಳ್ಳಿ 207

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಬೆಂಗಳೂರು

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

KEA : ಕನ್ನಡ ಕಡ್ಡಾಯ ಪರೀಕ್ಷೆ ಅ.26ಕ್ಕೆ, ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯು ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ನಡೆಯಲಿದೆ.

VISTARANEWS.COM


on

By

kea
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ವಯೋಮಿತಿ ಸಡಿಲಿಕೆ ನಂತರ ಅರ್ಜಿ ಸಲ್ಲಿಸಿದ ಸುಮಾರು 63 ಸಾವಿರ ಮಂದಿಗೆ ಕನ್ನಡ ಕಡ್ಡಾಯ ಪರೀಕ್ಷೆ, ಅ.26ಕ್ಕೆ ರಾಜ್ಯದ 153 ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಜಿಟಿಟಿಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ 2,300 ಮಂದಿಯೂ ಸೇರಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ತಿಳಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆ ಅ.27ರಂದು ನಡೆಯಲಿದ್ದು, ಅದನ್ನು ಬರೆಯಲು 4.8 ಲಕ್ಷ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಈ ಸಲುವಾಗಿ 1,173 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ವಸ್ತ್ರ ಸಂಹಿತೆ ಕೂಡ ಇದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

ಓಎಂಆರ್ ನೋಂದಣಿ ಎಚ್ಚರ

ಸೆ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಓಎಂಆರ್ ಶೀಟ್ ನಲ್ಲಿ ನೋಂದಣಿ ಸಂಖ್ಯೆ‌ ಮತ್ತು ವರ್ಶನ್ ಕೋಡ್ ನಮೂದಿಸುವಾಗ ಸುಮಾರು ಒಂಬತ್ತು ಸಾವಿರ ಮಂದಿ ತಪ್ಪು ಮಾಡಿದ್ದು ಪುನಃ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಅಭ್ಯಾಸ ಸಲುವಾಗಿ ಈ ಬಾರಿ ಮಾದರಿ ಓಎಂಆರ್ ಶೀಟ್ ನೀಡಲಾಗಿತ್ತು. ಸರಿಯಾಗಿ ಅಭ್ಯಾಸ ಮಾಡಿಕೊಂಡು ಬನ್ನಿ. ಪುನಃ ತಪ್ಪು ಗಳಾದರೆ ಅದಕ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ.‌ ಮಾದರಿ ಓಎಂಆರ್ ಶೀಟ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಬೇಡ ಎಂದೂ‌ ಅವರು ಸಲಹೆ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Actor Darshan : ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು. ಇದೀಗ ನವಗ್ರಹ ಸಿನಿಮಾ ರೀ ರಿಲೀಸ್‌ಗೆ ಡೇಟ್‌ ಫಿಕ್ಸ್‌ ಆಗಿದೆ.

VISTARANEWS.COM


on

By

actor darshan
Koo

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಬೆನ್ನು ನೋವಿನಿಂದ ಒದ್ದಾಡುತ್ತಿರುವುದನ್ನು ಕಂಡು ಬೇಸರದಲ್ಲಿರುವ ಅಭಿಮಾನಿಗಳಿಗೆ ಕೊನೆಗೂ ಗುಡ್‌ ನ್ಯೂಸ್‌ ಸಿಕ್ಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರಲ್ಲೇ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ರಿಲೀಸ್ ಆಗ್ಬೇಕಿತ್ತು. ಆದರೆ ಇದೀಗ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಬಂಧಿಯಾಗಿದ್ದಾರೆ.

ದಾಸನ ಸಿನಿಮಾ ರೀ-ರಿಲೀಸ್, ಡೇಟ್ ಅನೌನ್ಸ್

ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಈ ವರ್ಷ ‘DEVIL THE HERO’ ಸಿನಿಮಾವನ್ನು ನೋಡಬೇಕು ಎಂಬುದು ದರ್ಶನ್ ಅಭಿಮಾನಿಗಳ ಆಸೆ ಆಗಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರಿದ ಬಳಿಕ ಆ ಸಿನಿಮಾದ ಕೆಲಸಕ್ಕೆ ಬ್ರೇಕ್​ ಬಿತ್ತು. ಹಾಗಾಗಿ ದೊಡ್ಡ ಪರದೆ ಮೇಲೆ ದರ್ಶನ್ ಹೊಸ ಸಿನಿಮಾ ತೆರೆಕಾಣಲಿಲ್ಲ. ಈ ಸಂದರ್ಭದಲ್ಲಿ ಅಭಿಮಾನಿಗಳು ದರ್ಶನ್​ ಅವರನ್ನು ಬಹಳ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಅವರ ಈ ಹಿಂದಿನ ಹಿಟ್ ಸಿನಿಮಾಗಳನ್ನು ಮತ್ತೆ ತೆರೆಗೆ ತರಲಾಗುತ್ತಿದೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು.

Actor darshan
Actor darshan

‘ನವಗ್ರಹ’ ಸಿನಿಮಾ ಹಿಟ್‌ ಆದ ನಂತರ ಸಿನಿಮಾದ ಸೀಕ್ವೆಲ್‌ ಬರಲಿದೆ ಅಂತ ಹೇಳಲಾಗಿತ್ತಾದರೂ ಕೊನೆವರೆಗೂ ಈ ಸಿನಿಮಾದ ಸೀಕ್ವೆಲ್‌ ಬರಲೇ ಇಲ್ಲ. ಇದೊಂದು ವಿಷಯ ಡಿ ಬಾಸ್‌ ಫ್ಯಾನ್ಸ್‌ ಅಲ್ಲಿ ನಿರಾಶೆ ಉಂಟು ಮಾಡಿತ್ತು. ಕೆಲವು ದಿನಗಳ ಹಿಂದೆ, ‘ನವಗ್ರಹ’ ಸಿನಿಮಾ ರೀ ರಿಲೀಸ್‌ ಮಾಡಬೇಕೆಂದು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಅಭಿಯಾನವನ್ನು ಸ್ಟಾರ್ಟ್‌ ಮಾಡಿದ್ದರು. #WeWantNavagrahaReRelease ಎಂಬ ಹ್ಯಾಶ್‌ಟ್ಯಾಗ್‌ ಬಳಸುವ ಮೂಲಕ ಈ ಟ್ರೆಂಡ್‌ ಅನ್ನು ವೈರಲ್‌ ಆಗಿತ್ತು. ಇದೀಗ ಮತ್ತೆ ಈ ಸಿನಿಮಾ ನೋಡೋ ಆಸೆಯಿಂದ ಅಭಿಮಾನಿಗಳು ಚಿತ್ರದ ರೀ ರಿಲೀಸ್‌ಗಾಗಿ ಪಟ್ಟು ಹಿಡಿದಿದ್ದಾರೆ.

ಕುತೂಹಲ ಮೂಡಿಸಿದ ದಿನಕರ್​ ಪೋಸ್ಟ್

‘ನವಗ್ರಹ’ ಕನ್ನಡ ಚಿತ್ರರಂಗದ ಸೂಪರ್ ಹಿಟ್​ ಸಿನಿಮಾ. 2008ರಲ್ಲಿ ತೆರೆಕಂಡ ನಟ ದರ್ಶನ್​​ ಮುಖ್ಯಭೂಮಿಕೆಯ ಈ ಚಿತ್ರ ಸೂಪರ್ ಹಿಟ್​ ಆಗಿತ್ತು. ಬಹುತಾರಾಗಣದ ಈ ಚಿತ್ರ ‘ಅಂಬಾರಿ’ ಕಳ್ಳತನಕ್ಕೆ ಪ್ರಯತ್ನಿಸುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾ ರೀ-ರಿಲೀಸ್​ ಆಗುತ್ತಿರುವ ಹಿನ್ನೆಲೆಯಲ್ಲಿ ನಿರ್ದೇಶಕ ದಿನಕರ್ ತೂಗುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ‘ನನ್ನ ನಿರ್ದೇಶನದ 2ನೇ ಸಿನಿಮಾ ನವಗ್ರಹ. ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ಬೆಳ್ಳಿ ತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. 16 ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ-ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ ನವೆಂಬರ್ 8ರಂದು ಮರುಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ನೋಡಿ ಆನಂದಿಸಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ನವಗ್ರಹ’ ಸಿನಿಮಾಗೆ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶನ ಮಾಡಿದ್ದಾರೆ. ದರ್ಶನ್ ಜೊತೆ ತರುಣ್ ಸುಧೀರ್​, ಧರ್ಮ ಕೀರ್ತಿರಾಜ್, ವಿನೋದ್ ಪ್ರಭಾಕರ್​, ಸೃಜನ್ ಲೋಕೇಶ್, ಗಿರಿ ದಿನೇಶ್, ನಾಗೇಂದ್ರ ಅರಸ್​, ವರ್ಷಾ, ಶರ್ಮಿಳಾ ಮಾಂಡ್ರೆ, ಕುರಿ ಪ್ರತಾಪ್, ಡೇರಿಂಗ್ ಸ್ಟಾರ್ ಧರ್ಮ ಸೇರಿದಂತೆ ಅನೇಕರು ನಟಿಸಿದ್ದಾರೆ. ಎ.ವಿ ಕೃಷ್ಣಕುಮಾರ್​ ಕ್ಯಾಮರಾ ಕೈಳಚಕವಿರುವ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಒದಗಿಸಿದ್ದರು. ಟಿ ಶಶಿಕುಮಾರ್​ ಸಂಕಲನದ ಹೊಣೆ ಹೊತ್ತಿದ್ದರು. ತೂಗುದೀಪ ಪ್ರೊಡಕ್ಷನ್ಸ್ ಅಡಿ ನಿರ್ಮಾಣಗೊಂಡ ಈ ಚಿತ್ರ 2008ರ ನವೆಂಬರ್​​ 7ರಂದು ಚಿತ್ರಮಂದಿರ ಪ್ರವೇಶಿಸಿ ಯಶಸ್ವಿಯಾಗಿತ್ತು. ಇದೀಗ ಅದೇ ದಿದಂದೇ ಮರು ಬಿಡುಗಡೆಗೆ ಸನ್ನದ್ಧವಾಗಿದೆ.

Continue Reading

ಬೆಂಗಳೂರು

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

By

Bengaluru News
Koo

ಬೆಂಗಳೂರು: ಡಿನ್ನರ್‌ ಮುಗಿಸಿ ಬರುತ್ತಿದ್ದ ಪ್ರೇಮಿಗಳಿಗೆ ಕಿರಾತಕರು ಅಡ್ಡ ಹಾಕಿ, ಬಳಿಕ ಯುವಕನ ಕುತ್ತಿಗೆ ಚಾಕು ಇಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ್ದರು. ಇದೀಗ ಆ ಆರೋಪಿಗಳಿಗೆ 10 ವರ್ಷಗಳ ನಂತರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2014ರ ಏಪ್ರಿಲ್ 11ರಂದು ಪ್ರೇಮಿಗಳಿಬ್ಬರು ಎಂ.ಜಿ ರೋಡ್‌ನಲ್ಲಿ ಡಿನ್ನರ್ ಮುಗಿಸಿ ಪುಲಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ (Bengaluru News) ನೇತಾಜಿ ರಸ್ತೆಯಲ್ಲಿ ಮಧ್ಯರಾತ್ರಿ 12:30ರ ಸಮಯಲ್ಲಿ ಕಾರಿನಲ್ಲಿ ಕುಳಿತಿದ್ದರು. ಈ ವೇಳೆ ಕಾಮುಕರ ದಂಡು ಅವರನ್ನು ಸುತ್ತುವರಿದು ಕಾರು ಏರಿಕೊಂಡಿದ್ದರು.

ಶೇಕ್ ಹೈದರ್, ಸೈಯದ್ ಶಫಿಕ್, ಮಹಮ್ಮಸ್ ಹಫೀಜ್, ಶೋಯಬ್ @ ಶೇಖ್ ಕಲ್ವಾನ ಕಾರಿನಲ್ಲಿ ಪ್ರೇಮಿಗಳು ಇದ್ದರೆ, ಮಹಮ್ಮದ್ ಇಸಾಕ್ ಎಂಬಾತ ಕಾಮುಕರ ಕಾರನ್ನು ಫಾಲೋ ಮಾಡಿದ್ದ. ಬಳಿಕ ರಾತ್ರಿಯಿಡಿ ಸಂತ್ರಸ್ತೆ ಕಾರಿನಲ್ಲೇ ಪುಲಕೇಶಿ ನಗರ ಸುತ್ತಾಡಿದ್ದರು. ಕಾರಿನಲ್ಲಿ ಆ ಯುವತಿಗೆ ಇನ್ನಿಲ್ಲದ ಚಿತ್ರಹಿಂಸೆ ನೀಡಿದ್ದರು. ಕೊನೆಗೆ ಕಾಮುಕರ ಗುಂಪಿನ ನಾಯಕ ಶೇಕ್ ಹೈದರ್ ಆಜ್ಞೆಯಂತೆ ಸಂತ್ರಸ್ತೆಯ ಸ್ನೇಹಿತನನ್ನು ಕಾರಿನಿಂದ ಇಳಿಸಿದ್ದರು.

ಸೈಯದ್ ಶಫಿಕ್, ಹಫಿಜ್, ಶೋಯಬ್ ಆ ಯುವಕನ ಕುತ್ತಿಗೆಗೆ ಚಾಕು ಹಿಡಿದು ಕೊಂಡಿದ್ದರು. ಕಾರಿನಲ್ಲಿದ್ದ ಶೇಕ್ ಹೈದರ್ ನಾನು ಹೇಳಿದ ಹಾಗೆ ಕೇಳದಿದ್ದರೆ ನಿನ್ನ ಹುಡುಗನನ್ನು ಕೊಲೆ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ್ದ. ನಂತರ ಯುವತಿ ಮೇಲೆ ಮೃಘೀಯ ರೀತಿ ವರ್ತಿಸಿದ್ದ. ತನ್ನ ಕಣ್ಣ ಮುಂದೆಯೇ ತನ್ನ ನಂಬಿ ಬಂದ ಪ್ರೇಯಸಿ ಮೇಲೆ ಕಾಮುಕರು ಪಿಶಾಚಿಗಳಂತೆ ಎಗರಿದ್ದರೂ ಏನು ಮಾಡಲು ಆಗದೆ ಅಸಯಾಕನಾಗಿದ್ದ.

ಯುವತಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ 50 ಸಾವಿರ ರೂ. ಗೆ ಡಿಮ್ಯಾಂಡ್ ಮಾಡಿದ್ದರು. ಹಣ ನೀಡದಿದ್ದಾಗ ಹುಡುಗನ ಕೈಯಲ್ಲಿದ್ದ ವಾಚ್‌ನ ಕಿತ್ತುಕೊಂಡು ಹೋಗಿದ್ದರು. ಈ ಘಟನೆ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲಿಗೆ ಅಂದಿನ ಇನ್‌ಸ್ಪೆಕ್ಟರ್‌ ಸರಿಯಾದ ಸೆಕ್ಷನ್ ಹಾಕಿಲ್ಲ ಎಂದು ಸಸ್ಪೆಂಡ್ ಕೂಡ ಆಗಿದ್ದರು. ಇದಾದ ನಂತರ ಅಂದಿನ ಪುಲಕೇಶಿ ನಗರ ಉಪವಿಭಾಗ ಎಸಿಪಿ ನೂರುಲ್ಲ ಶರೀಫ್ ತನಿಖೆ ನಡೆಸಿ ನ್ಯಾಯಲಯಕ್ಕೆ ಐವರು ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಕಾರಿನಲ್ಲಿ ಸಿಕ್ಕ ಆರೋಪಿಯ ತಲೆಕೂದಲು ಮತ್ತು ವೀರ್ಯದ ಕರುಹುಗಳು ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿತ್ತು. ಆರೋಪಿಗಳು ರಾಜಕೀಯ ಪ್ರಭಾವ ಹೊಂದಿದ್ದರು. ಆದರೆ ಇದ್ಯಾವುದಕ್ಕೂ ಮಣಿಯದ ಪೊಲೀಸರು ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದರು. ಸದ್ಯ ಆರೋಪಿಗಳ ಪೈಕಿ ಎ1 ಆರೋಪಿ ಶೇಕ್ ಹೈದರ್‌ಗೆ ಜೀವಾವಧಿ ಶಿಕ್ಷೆ 31 ಸಾವಿರ ದಂಡ ಹಾಗೂ ಎ2 ಸೈಯದ್ ಶಫಿಕ್ 10 ವರ್ಷ ಸಜೆ 23 ಸಾವಿರ ದಂಡ, ಎ3 ಮೊಹಮ್ಮದ್ ಹಫೀಜ್‌ಗೆ 3500 ದಂಡ, ಎ4 ಶೋಯಬ್ ಗೆ 1 ವರ್ಷ ಸಜೆ ಹಾಗೂ 3500 ದಂಡ ಹಾಗೂ ಎ5 ಮಹಮ್ಮದ್ ಇಸಾಕ್‌ಗೆ 6 ತಿಂಗಳ ಸಜೆ ಹಾಗೂ 3000 ದಂಡ ವಿಧಿಸಿ 57ನೇ ಸಿಸಿಹೆಚ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

Continue Reading
Advertisement
Murder Case
ಕೊಡಗು3 ನಿಮಿಷಗಳು ago

Murder case : ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು ಪಾಪಿ

Rajakaluve Encroachment
ಬೆಂಗಳೂರು5 ಗಂಟೆಗಳು ago

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

karnataka Weather Forecast
ಮಳೆ10 ಗಂಟೆಗಳು ago

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

dina bhavishya
ಭವಿಷ್ಯ10 ಗಂಟೆಗಳು ago

Dina Bhavishya: ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳಬೇಡಿ

kea
ಬೆಂಗಳೂರು1 ದಿನ ago

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

assault Case
ಕೊಡಗು1 ದಿನ ago

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

actor darshan
ಪ್ರಮುಖ ಸುದ್ದಿ1 ದಿನ ago

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Bengaluru News
ಬೆಂಗಳೂರು1 ದಿನ ago

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Dina Bhavishya
ಭವಿಷ್ಯ1 ದಿನ ago

Dina Bhavishya : ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌