Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌! - Vistara News

ಬೆಂಗಳೂರು

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

Assault case: ಕರ್ನಾಟಕದ ಲಾರಿ ಡ್ರೈವರ್‌ ಮೇಲೆ ತಮಿಳುನಾಡು ಟ್ರಾಫಿಕ್‌ ಪೊಲೀಸ್‌ ಮನಸೋ ಇಚ್ಛೆ ಹಲ್ಲೆ ಮಾಡಿದ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

assault case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಲಾರಿ ಡ್ರೈವರ್ ಮೇಲೆ ತಮಿಳುನಾಡು ಟ್ರಾಫಿಕ್ ಪೊಲೀಸ್ ಪೇದೆ ಮನಸೋ ಇಚ್ಛೆ ಹಲ್ಲೆ (Assault case) ಮಾಡಿದ್ದಾರೆ. ಕರ್ನಾಟಕ- ತಮಿಳುನಾಡಿನ ಹೊಸೂರು ಗಡಿಭಾಗದಲ್ಲಿ ಭಾನುವಾರ ರಾತ್ರಿ 10 ಘಂಟೆ ಸುಮಾರಿಗೆ ಘಟನೆ ನಡೆದಿದೆ. ರ‍್ಯಾಶ್‌ ಡ್ರೈವಿಂಗ್‌ ಮಾಡುತ್ತಿದ್ದೀಯಾ ಎಂದು ಆರೋಪಿಸಿ ಲಾರಿ ಚಾಲಕನ ಅಡ್ಡಗಟ್ಟಿ ಕಪಾಳ, ಮುಖ ಅಂತ ನೋಡದೆ ಹಲ್ಲೆ ನಡೆಸಿದ್ದಾರೆ. ಬಿಟ್ಬಿಡಿ ಸರ್ ಎಂದು ಚಾಲಕ ಅಂಗಲಾಚಿದರೂ ಬಿಡದೆ ಟ್ರಾಫಿಕ್‌ ಪೊಲೀಸ್‌ ಪೇದೆ ಹಲ್ಲೆ ನಡೆಸಿದ್ದಾರೆ. ಹೊಸೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಾರು ಚಾಲಕನೊರ್ವ ಹಲ್ಲೆ ಮಾಡುತ್ತಿರುವ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಬಳಿಕ ಕಾರು ಚಾಲಕನಿಗೂ ಅವಾಜ್ ಹಾಕಿ ತಮಿಳುನಾಡು ಪೊಲೀಸ್ ವಿಡಿಯೊ ಡಿಲೀಟ್ ಮಾಡಿಸಿದ್ದಾರೆ.

Car Fire Accident
Car Fire Accident

ನಡು ರಸ್ತೆಯಲ್ಲಿ ಧಗ-ಧಗನೆ ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಸ್ವಿಪ್ಟ್ ಡಿಸೈರ್ ಕಾರಿನ ಇಂಜಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡು ರಸ್ತೆಯಲ್ಲಿ ಧಗ-ಧಗನೆ ಹೊತ್ತಿ ಉರಿದಿದೆ. ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ. ಕಾರು ಚಲಿಸುತ್ತಿದ್ದಾಗ ಬಾನೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಾನೆಟ್‌ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಪ್ರಯಾಣಿಕರು ಕಾರಿನಿಂದು ಇಳಿದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಸಮಯಪ್ರಜ್ಙೆಯಿಂದ ಕೂದಲೆಳೆ ಅಂತರದಲ್ಲಿ ಎಲ್ಲರೂ ಪಾರಾಗಿದ್ದಾರೆ.

ಕರೆಂಟ್‌ ಶಾಕ್‌ನಿಂದ ನಾಲ್ವರು ಕಾರ್ಮಿಕರಿಗೆ ಗಾಯ

ಶಾರ್ಟ್ ಸರ್ಕ್ಯುಟ್‌ನಿಂದಾಗಿ ಕರೆಂಟ್‌ ಶಾಕ್‌ ಹೊಡೆದು ನಾಲ್ವರು ಕಾರ್ಮಿಕರಿಗೆ ಗಾಯವಾಗಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೇ ಕಟ್ಟಡದ ಬಳಿ ವಾಸ ಮಾಡಲು ಚಿಕ್ಕ ರೂಂ ನಿರ್ಮಿಸಿಕೊಂಡಿದ್ದರು. ರಾತ್ರಿ ರೂಂ ಗೆ ಪಡೆದಿದ್ದ ಕರೆಂಟ್‌ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಮಲಗಿದ್ದ ನಾಲ್ವರಿಗೆ ಗಾಯವಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ

ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಳಿಸಿ, ವ್ಯಕ್ತಿ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಕಿಡಿಗೇಡಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ತುಂಗಾನಗರದಲ್ಲಿ ನಿನ್ನೆ ಭಾನುವಾರ ರಾತ್ರಿ ಘಟನೆ ನಡೆದಿದೆ. ಶಿವಗಂಗೇಗೌಡ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ನಿನ್ನೆ ರಾತ್ರಿ ಶಿವಗಂಗೆಗೌಡರ ಮನೆ ಸಮೀಪ ಗ್ಯಾಂಗ್‌ವೊಂದು ಮದ್ಯ ಸೇವಿಸುತ್ತಿತ್ತು. ಇದನ್ನು ಪ್ರಶ್ನೆ ಮಾಡಿ ಎದ್ದು ಹೋಗುವಂತೆ ಶಿವಗಂಗೆಗೌಡ ಗದರಿದ್ದರು. ಇದಕ್ಕೆ ಸಿಟ್ಟಾದ ಕಿಡಿಗೇಡಿಗಳು ಶಿವಗಂಗೆಗೌಡ ಅವರಿಗೆ ಸೇರಿದ ಇನ್ನೋವಾ ಕಾರು ಸಿಮೆಂಟ್ ಇಟ್ಟಿಗೆಯಿಂದ ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳನ್ನು ಓಡಿಸಲು ಪ್ರಯತ್ನಿಸಿದಾಗ ಅಟ್ಯಾಕ್ ಮಾಡಿದ್ದಾರೆ. ಗಾಯಾಳು ಶಿವಗಂಗೆಗೌಡ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ಅಪಹರಿಸಿದ ತಮ್ಮ!

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ತಮ್ಮ ಅಪಹರಿಸಿದ್ದು, ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

VISTARANEWS.COM


on

By

kidnap case
Koo

ದಾವಣಗೆರೆ/ಬೆಂಗಳೂರು: ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತ ತಮ್ಮನೊಬ್ಬ ಅಕ್ಕನ ಮಗುವನ್ನೇ ಅಪಹರಿಸಿದ ಘಟನೆ (Kidnap case) ನಡೆದಿದೆ. ಬೆಂಗಳೂರಿನಿಂದ ಹೊರಟಿದ್ದ ಅಪ್ರಾಪ್ತ ಬಾಲಕನನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. 17 ವರ್ಷದ ತರುಣ್ ಎಂಬಾತ ಗೋಯಲ್ (3) ಎಂಬ ಮಗುವನ್ನು ಅಪಹರಿಸಿದ್ದ.
ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲಿನ ಮೂಲಕ ದಾವಣಗೆರೆಗೆ ಬಂದಾಗ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ತರುಣ್‌ನ ಅಕ್ಕ ಅಕ್ರಮ ಸಂಬಂಧವಿಟ್ಟುಕೊಂಡು ಬೇರೆ ವ್ಯಕ್ತಿ ಜತೆ ವಾಸಿಸುತ್ತಿದ್ದಳು. ಈ ವೇಳೆ ಅಕ್ರಮ ಸಂಬಂಧ ಬಿಡಲು ಒಪ್ಪದಿದ್ದಕ್ಕೆ ಅಕ್ಕನ ಮಗುವನ್ನು ಅಪಹರಿಸಿಕೊಂಡು ಬರುವಾಗ ದಾವಣಗೆರೆ ಆರ್‌ಪಿಎಫ್‌ (RPF) ವಿಚಾರಣೆ ನಡೆಸಿ ವಶಕ್ಕೆ ಪಡೆದುಕೊಂಡು, ಬಳಿಕ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟ್ರೈನ್ ಬರುತ್ತಿದ್ದಂತೆ ತಪಾಸಣೆ ಮಾಡಿ ವಿಚಾರಿಸಿದಾಗ ಮಗು ಅಪಹರಿಸಿಕೊಂಡು ಹೋಗುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೆ ಇನ್ಸ್‌ಪೆಕ್ಟರ್‌ ಎಕೆ ರೆಡ್ಡಿ, ಸಿಬ್ಬಂದಿಗಳಾದ ಶಿವಾನಂದ, ಅಮಿತ್, ಬಿಂದು ಮಧುರಿ ಅವರು ಇಬ್ಬರನ್ನು ರಕ್ಷಿಸಿದ್ದಾರೆ.

Continue Reading

ಬೆಂಗಳೂರು

Actor Darshan : ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

Actor Darshan : ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ ಬಳ್ಳಾರಿ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್‌ ಮಾಡುವಂತೆ ವಕೀಲರು ವಾದ ಮಾಡಿಸಲಿದ್ದಾರೆ.

VISTARANEWS.COM


on

By

Hc to hear Darshans bail plea tomorrow
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ (Actor Darshan) ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ನಾಳೆ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.

ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ (MRI) ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.

Continue Reading

ಬೆಂಗಳೂರು

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ.

VISTARANEWS.COM


on

By

Belekeri Port Scam Congress MLA Satish sentenced to 7 years in jail
Koo

ಬೆಂಗಳೂರು: ಬೇಲೆಕೇರಿ ಬಂದರು ಮೂಲಕ ಅಕ್ರಮ ಅದಿರು ನಾಪತ್ತೆ (Belekeri Port Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಐದು ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ. ಶಾಸಕ ಸತೀಶ್ ಸೈಲ್‌ಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿ ಕೋರ್ಟ್‌ ಆದೇಶಿಸಿದೆ. ವಂಚನೆ ಪ್ರಕರಣದಲ್ಲಿ 7 ವರ್ಷ, ಕಳ್ಳತನ ಪ್ರಕರಣದಲ್ಲಿ ಮೂರು ವರ್ಷ ಹಾಗೂ ಒಂಬತ್ತು ಕೋಟಿ 60 ಲಕ್ಷ ರೂ. ದಂಡ ವಿಧಿಸಲಾಗಿದೆ. ಮೊದಲ ಕೇಸ್‌ನಲ್ಲಿ 6 ಕೋಟಿ ರೂ. ದಂಡ, 2ನೇ ಕೇಸ್‌ನಲ್ಲಿ 9.6 ಕೋಟಿ ರೂ., 3ನೇ ಕೇಸ್‌ನಲ್ಲಿ 9.36 ಕೋಟಿ ರೂ. 4 ಕೇಸ್‌ನಲ್ಲಿ 9.54 ಕೋಟಿ, 5ನೇ ಕೇಸ್‌ನಲ್ಲಿ 9.25 ಕೋಟಿ, 6ನೇ ಕೇಸ್‌ನಲ್ಲಿ 90 ಲಕ್ಷ ರೂ. ದಂಡವನ್ನು ಕೋರ್ಟ್‌ ವಿಧಿಸಿದೆ.

ಸಿಬಿಐ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್.ಹೇಮಾ ವಾದ ಮಂಡಿಸಿದ್ದರು. 3100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆ ಮಾಡಿದ್ದಾರೆ. ಆರೋಪಿಗಳಿಗೆ ಜೈಲು ಶಿಕ್ಷೆಯ ಜತೆಗೆ ದಂಡ ವಿಧಿಸುವಂತೆ ಮನವಿ ಮಾಡಿದ್ದರು. ಶಾಸಕ ಸತೀಶ್ ಸೈಲ್ ಪರವಾಗಿ ಹಿರಿಯ ವಕೀಲ ಡಿ ಮೂರ್ತಿ ವಾದಿಸಿದ್ದರು. ಮೆಡಿಕಲ್ ರೆಕಾರ್ಡ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿ, ಕನಿಷ್ಠ ಶಿಕ್ಷೆ ನೀಡುವಂತೆ ವಿನಂತಿಸಿದ್ದರು. ಸುದೀರ್ಘ ವಾದ-ವಿವಾದ ಆಲಿಸಿದ್ದ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಬಂಧಿತ ಆರೋಪಿಗಳು

1) ಸತೀಶ್ ಸೈಲ್‌ ಕಾರವಾರ ಕಾಂಗ್ರೆಸ್‌ ಶಾಸಕ
2) ಮಹೇಶ್ ಬಿಳಿಯ ಡೆಪ್ಯೂಟಿ ಪೋರ್ಟ್ ಕನ್ಸರ್ವೇಟರ್ ಅಧಿಕಾರಿ
3) ಪ್ರೇಮಚಂದ್ ಗರ್ಗ್ ಲಾಲ್ವುಹಲ್ ಕಂಪೆನಿಯ ಮಾಲೀಕ
4) ಖಾರದಪುಡಿ ಮಹೇಶ್ ಶ್ರೀಲಕ್ಷ್ಮಿ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ
5) ಕೆ ವಿ ನಾಗರಾಜ್ ಮತ್ತು ಗೋವಿಂದರಾಜು – ಸ್ವಸ್ತಿಕ್ ಕಂಪೆನಿಯ ಮಾಲೀಕ
6) ಚೇತನ್ ಆಶಾಪುರ ಕಂಪೆನಿಯ ಮಾಲೀಕ

Continue Reading

ಬೆಂಗಳೂರು

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

Rajakaluve Encroachment: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ಬಿಬಿಎಂಪಿ ಡೆಮಾಲಿಷನ್ ಡ್ರೈವ್ ಮತ್ತೆ ಶುರು ಮಾಡಲು ಮುಂದಾಗಿದೆ. ಹಿಂದೊಮ್ಮೆ ಸ್ಟೇ ಆರ್ಡರ್‌ ಬರುತ್ತಿದ್ದಂತೆ, ಅಧಿಕಾರಿಗಳು ಠುಸ್‌ ಪಟಾಕಿ ಆಗಿದ್ದರು. ಇದೀಗ ಮತ್ತೆ ಡೆಮಾಲಿಷನ್‌ ಕೆಲಸಕ್ಕೆ ಕೈಹಾಕಿದೆ.

VISTARANEWS.COM


on

By

Rajakaluve Encroachment
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೃಹತ್‌ ಬೆಂಗಳೂರು ಪಾಲಿಕೆ ವ್ಯಾಪ್ತಿಯ ರಾಜಕಾಲುವೆ, ಕೆರೆಗಳನ್ನು ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ (Rajakaluve Encroachment) ಅಧಿಕಾರಿಗಳು ಶಾಕ್ ಕೊಡಲಿದ್ದಾರೆ. ಕಳೆದ ವಾರ ಸುರಿದ ಭಾರಿ ಮಳೆಗೆ ರಾಜಕಾಲುವೆಗಳ ನೀರು ರಸ್ತೆಗೆ ಹರಿದಿತ್ತು. ಇದರಿಂದ ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ಜನ ಇಡಿ ಶಾಪ ಹಾಕಿದ್ದರು, ಇದು ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಇತ್ತ ಖುದ್ದು ಡಿಸಿಎಂ ಶಿವಕುಮಾರ್‌ ಕೂಡ ಒತ್ತುವರಿ ತೆರವಿಗೆ ಆದೇಶ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಜಕಾಲುವೆ, ಕೆರೆ ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಮುಂದಾಗಿದೆ. ಈಗಾಗಲೇ 1,712 ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿರುವ ವರದಿ ಸಿದ್ದವಾಗಿದೆ. ಅದರಲ್ಲಿ 196 ಕಟ್ಟಡಗಳ ಕೇಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ ಇದೆ. ಉಳಿದಂತೆ 167 ಕಟ್ಟಡಗಳ ಸರ್ವೆ ಕಾರ್ಯ ಮುಗಿದಿದೆ. ತಹಸೀಲ್ದಾರರು ಆದೇಶ ನೀಡಿದ್ರೆ ಒತ್ತುವರಿ ತೆರವಿಗೆ ಬಿಬಿಎಂಪಿ ಮುಂದಾಗಲಿದೆ.

ಸದ್ಯ 1712 ಒತ್ತುವರಿ ಪ್ರಕರಣಗಳಲ್ಲಿ 300 ಕಡೆ ಖಾಲಿ ನಿವೇಶನ ಇದ್ದು, ಈಗಾಗಲೇ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 800 ಕಡೆ ಒತ್ತುವರಿ ತೆರವು ಬಾಕಿ ಇದೆ. ಯಾವ್ಯಾವ ವಲಯಗಳಲ್ಲಿ ಒತ್ತುವರಿ ಆಗಿದೆ ಎಂದು ನೋಡುವುದಾದರೆ, ಪೂರ್ವ ವಲಯದಲ್ಲಿ 123, ಪಶ್ಚಿಮ 46, ದಕ್ಷಿಣ 46, ಕೋರಮಂಗಲ ಕಣೆವೆ 104, ಹಾಗೂ ಯಲಹಂಕ 359, ಮಹಾದೇವಪುರ 492, ಬೊಮ್ಮನಹಳ್ಳಿ 201, ಆರ್ ಆರ್ ನಗರ 104 ಸೇರಿದಂತೆ ದಾಸರಹಳ್ಳಿ 207

Continue Reading
Advertisement
Medical negligence
ಪ್ರಮುಖ ಸುದ್ದಿ4 ನಿಮಿಷಗಳು ago

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

assault case
ಬೆಂಗಳೂರು2 ಗಂಟೆಗಳು ago

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

Dina Bhavishya
ಭವಿಷ್ಯ9 ಗಂಟೆಗಳು ago

Dina Bhavishya : ಉದ್ಯೋಗ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Murder Case
ಚಿತ್ರದುರ್ಗ22 ಗಂಟೆಗಳು ago

Murder Case : ಕ್ಷುಲ್ಲಕ ಕಾರಣಕ್ಕೆ ಶುರುವಾದ ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯ

kidnap case
ಬೆಂಗಳೂರು22 ಗಂಟೆಗಳು ago

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ಅಪಹರಿಸಿದ ತಮ್ಮ!

Hc to hear Darshans bail plea tomorrow
ಬೆಂಗಳೂರು1 ದಿನ ago

Actor Darshan : ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

Dina Bhavishya
ಭವಿಷ್ಯ1 ದಿನ ago

Dina Bhavishya : ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು

Belekeri Port Scam Congress MLA Satish sentenced to 7 years in jail
ಬೆಂಗಳೂರು2 ದಿನಗಳು ago

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು

Murder Case
ಕೊಡಗು2 ದಿನಗಳು ago

Murder case : ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು ಪಾಪಿ

Rajakaluve Encroachment
ಬೆಂಗಳೂರು2 ದಿನಗಳು ago

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌