ಮಹಿಳಾ ಮೀಸಲಾತಿ ಕಾಂಗ್ರೆಸ್ ವಿರುದ್ಧ ಏಪ್ರಿಲ್. 25ರಂದು ಆಕ್ರೋಶ ಯಾತ್ರೆ: ಬಿಜೆಪಿ - Vistara News

Latest

ಮಹಿಳಾ ಮೀಸಲಾತಿ ಕಾಂಗ್ರೆಸ್ ವಿರುದ್ಧ ಏಪ್ರಿಲ್. 25ರಂದು ಆಕ್ರೋಶ ಯಾತ್ರೆ: ಬಿಜೆಪಿ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮಹಿಳಾ ವಿರೋಧಿ ಕಾಂಗ್ರೆಸ್ ಮತ್ತು ಇಂಡಿ ಕೂಟದ ವಿರುದ್ಧ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಪ್ರಿಲ್. 25ರಂದು ಆಕ್ರೋಶ ಯಾತ್ರೆ ಮತ್ತು ಪ್ರತಿಭಟನಾ ಸಭೆಗಳನ್ನು ಏರ್ಪಡಿಸಲಾಗುವುದು ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಸಿ.ಮಂಜುಳಾ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಇದೇ 27ರಿಂದ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಬಿಜೆಪಿಯ 300 ಸಂಘಟನಾತ್ಮಕ ಮಂಡಲಗಳಲ್ಲಿ ಹೋರಾಟ ನಡೆಯಲಿದೆ. ಬಳಿಕ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಇಂದಿನಿಂದ ಕೇಂದ್ರ ಸಚಿವರು, ಸಂಸದರು ವಿಭಾಗ ಕೇಂದ್ರಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರಿನಲ್ಲಿ ಸಂಸದ ಬೃಜೇಶ್ ಚೌಟ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ನಾಳೆ ಮತ್ತು ನಾಡಿದ್ದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್- ಬೆಳಗಾವಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿಯಲ್ಲಿ, ಕೇಂದ್ರ ಸಚಿವ ವಿ.ಸೋಮಣ್ಣ ಅವರು 23ರಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ಮತ್ತು ಅವರ ಮಿತ್ರಪಕ್ಷಗಳ ಮಹಿಳಾ ವಿರೋಧಿ ನೀತಿಯ ಕುರಿತು ತಿಳಿಸಲಿದ್ದಾರೆ ಎಂದು ವಿವರ ನೀಡಿದರು. ಕಾಂಗ್ರೆಸ್ ಪಕ್ಷವು ಇತಿಹಾಸದ ಉದ್ದಕ್ಕೂ ತನ್ನ ಮಹಿಳಾ ವಿರೋಧಿ ಧೋರಣೆ ಪ್ರದರ್ಶನ ಮಾಡಿದ ಕುರಿತು ತಿಳಿಸಲಿದ್ದಾರೆ ಎಂದು ಹೇಳಿದರು. ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅವರು ಮಾತ್ರ ಮಹಿಳೆಯರು ಎಂದು ಕಾಂಗ್ರೆಸ್ ಭಾವಿಸಿದಂತಿದೆ. ಸಾಮಾನ್ಯ ಮಹಿಳೆಯರಿಗೆ ಸಿಗುವ ಅವಕಾಶಗಳನ್ನು ಅದು ಕಿತ್ತುಕೊಂಡಿದೆ ಎಂದು ಆಕ್ಷೇಪಿಸಿದರು. ಭಾರತದ ನಾರಿಯರು ಕೇವಲ ಹೂವಲ್ಲ; ಅವರು ಜ್ವಾಲೆ ಕೂಡ ಎಂಬ ನಿಟ್ಟಿನಲ್ಲಿ ಈ ಆಕ್ರೋಶವನ್ನು ನಾವು ವ್ಯಕ್ತಪಡಿಸಲಿದ್ದೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

VISTARANEWS.COM


on

ಐಪಿಎಲ್ 2026ರ ಸೋಮವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದ್ದಾರೆ. ಟೂರ್ನಿಯ ಇತಿಹಾಸದಲ್ಲಿ ಬರೋಬ್ಬರಿ 9,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಕಿಂಗ್ ಕೊಹ್ಲಿಗೆ ಇನ್ನು ಕೇವಲ 11 ರನ್‌ಗಳ ಅಗತ್ಯವಿದೆ. 2008 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿರುವ ಕೊಹ್ಲಿ, ತಮ್ಮ ಅಮೋಘ ಸ್ಥಿರತೆಯ ಮೂಲಕ ಕ್ರಿಕೆಟ್ ಲೋಕದ ‘ರನ್ ಮಷೀನ್’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಲು ಹೊರಟಿದ್ದಾರೆ.

ಪ್ರಸಕ್ತ ಸೀಸನ್‌ನಲ್ಲಿ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದು, ಕೇವಲ ಏಳು ಇನ್ನಿಂಗ್ಸ್‌ಗಳಲ್ಲಿ 328 ರನ್‌ಗಳನ್ನು ಸಿಡಿಸಿ ಅಬ್ಬರಿಸುತ್ತಿದ್ದಾರೆ. ಇದುವರೆಗೆ ಒಟ್ಟು 274 ಐಪಿಎಲ್ ಪಂದ್ಯಗಳನ್ನು ಆಡಿರುವ ಕೊಹ್ಲಿ, 8,989 ರನ್‌ಗಳನ್ನು ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಇಂದು ಅವರು 11 ರನ್ ಗಳಿಸಿದರೆ, ಐಪಿಎಲ್ ಇತಿಹಾಸದಲ್ಲಿ 9 ಸಾವಿರದ ಗಡಿ ದಾಟಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆ ಅವರ ಹೆಸರಿಗೆ ಸೇರಲಿದೆ. ಕೊಹ್ಲಿ ಅವರ ಈ ಸಾಧನೆಯನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯನ್ನು ಗಮನಿಸಿದರೆ ಕೊಹ್ಲಿ ಅವರ ಸಾಧನೆ ಎಷ್ಟು ದೊಡ್ಡದು ಎಂಬುದು ಅರ್ಥವಾಗುತ್ತದೆ. ಅವರ ನಂತರದ ಸ್ಥಾನದಲ್ಲಿರುವ ರೋಹಿತ್ ಶರ್ಮಾ (7,183 ರನ್) ಅವರಿಗಿಂತ ಕೊಹ್ಲಿ ಬಹಳ ಮುಂದಿದ್ದಾರೆ. ಶಿಖರ್ ಧವನ್, ಡೇವಿಡ್ ವಾರ್ನರ್ ಮತ್ತು ಕೆ.ಎಲ್. ರಾಹುಲ್ ಅವರಂತಹ ದಿಗ್ಗಜ ಆಟಗಾರರೂ ಸಹ ಕೊಹ್ಲಿಯ ರನ್ ವೇಗವನ್ನು ತಲುಪಲು ಹೋರಾಡುತ್ತಿದ್ದಾರೆ. ಕಿಂಗ್ ಕೊಹ್ಲಿಯ ಈ ಅಪ್ರತಿಮ ದಾಖಲೆಯು ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುವ ಕ್ಷಣ ಹತ್ತಿರದಲ್ಲಿದೆ.

Continue Reading

Latest

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

VISTARANEWS.COM


on

ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಈ ಸ್ಫೋಟ ಸಂಭವಿಸಿತ್ತು. ಆರೋಪಿ ಶಾರಿಕ್ ಸ್ಫೋಟಕ ತುಂಬಿದ್ದ ಕುಕ್ಕರ್ ಅನ್ನು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ, ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು.

ದೇಶದ ಭದ್ರತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದ ಈ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತು. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು. ತನಿಖೆಯ ವೇಳೆ ಶಾರಿಕ್ ನಿಷೇಧಿತ ಉಗ್ರಗಾಮಿ ಸಂಘಟನೆಗಳಿಂದ ಪ್ರೇರಿತನಾಗಿದ್ದದ್ದು ಮತ್ತು ಡಾರ್ಕ್ ವೆಬ್ ಮೂಲಕ ವಿದೇಶಿ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದು ಬಾಂಬ್ ತಯಾರಿಕಾ ತರಬೇತಿ ಪಡೆದಿದ್ದ ಎಂಬ ಆಘಾತಕಾರಿ ಸತ್ಯಗಳು ಹೊರಬಂದಿದ್ದವು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಎನ್‌ಐಎ ಸಲ್ಲಿಸಿದ್ದ ಸಾಕ್ಷ್ಯಧಾರಗಳನ್ನು ಪುರಸ್ಕರಿಸಿ ಶಾರಿಕ್ ದೋಷಿ ಎಂದು ತೀರ್ಪು ನೀಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಆತನಿಗೆ ಶಿಕ್ಷೆ ಪ್ರಕಟಿಸಲಾಗಿದೆ. ಈ ತೀರ್ಪು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗುವವರಿಗೆ ಕಠಿಣ ಸಂದೇಶ ರವಾನಿಸಿದ್ದು, ಸಂತ್ರಸ್ತ ಆಟೋ ಚಾಲಕ ಮತ್ತು ಸಾರ್ವಜನಿಕರಿಗೆ ನ್ಯಾಯ ಸಿಕ್ಕಂತಾಗಿದೆ.

Continue Reading

Latest

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

VISTARANEWS.COM


on

ಜಾಗತಿಕ ಆರ್ಥಿಕ ಬದಲಾವಣೆಗಳ ನಡುವೆ ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಸವಾಲು ಎದುರಾಗಿದೆ. ತಾನು ನೀಡಿದ್ದ 3.5 ಬಿಲಿಯನ್ ಡಾಲರ್ ಮೊತ್ತದ ಸಾಲವನ್ನು ಮರಳಿ ನೀಡುವಂತೆ ಸಂಯುಕ್ತ ಅರಬ್ ಸಂಸ್ಥಾನ (UAE) ಪಾಕಿಸ್ತಾನಕ್ಕೆ ತಿಳಿಸಿದೆ. ಈ ಹಿಂದೆ ಆರ್ಥಿಕ ಸ್ಥಿರತೆಗಾಗಿ ಯುಎಇ ಈ ಮೊತ್ತವನ್ನು ಪಾಕಿಸ್ತಾನದ ಸೆಂಟ್ರಲ್ ಬ್ಯಾಂಕ್‌ನಲ್ಲಿ ಇರಿಸಿತ್ತು. ಆದರೆ ಈಗಿನ ಭೌಗೋಳಿಕ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಮೊತ್ತವನ್ನು ವಾಪಸ್ ಪಡೆದಿರುವುದು ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು ನಿಧಿಯ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ.

ಪಾಕಿಸ್ತಾನವು ನೆರೆಯ ರಾಷ್ಟ್ರಗಳಾದ ಇರಾನ್ ಮತ್ತು ಅಮೆರಿಕದ ಮೇಲೆ ಆರ್ಥಿಕ ನೆರವಿಗಾಗಿ ನಿರೀಕ್ಷೆ ಇಟ್ಟುಕೊಂಡಿತ್ತು. ಇರಾನ್ ಜೊತೆಗಿನ ಗಡಿ ಸಮಸ್ಯೆಗಳು ಮತ್ತು ಆಂತರಿಕ ಸಂಘರ್ಷಗಳ ಕಾರಣದಿಂದ ಅಲ್ಲಿಂದ ಬೆಂಬಲ ಸಿಗುವುದು ಕಷ್ಟಕರವಾಗಿದೆ. ಇತ್ತ ಅಮೆರಿಕ ಕೂಡ ಸಾಲದ ಮರುಪಾವತಿಯ ಶರತ್ತುಗಳನ್ನು ಕಠಿಣಗೊಳಿಸಿರುವುದರಿಂದ, ಪಾಕಿಸ್ತಾನಕ್ಕೆ ಹೊಸ ಸಾಲ ಪಡೆಯುವ ಹಾದಿಗಳು ಮುಚ್ಚಿದಂತಾಗಿವೆ. ಇದು ದೇಶದ ಆರ್ಥಿಕತೆಯನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.

ಸದ್ಯಕ್ಕೆ ಪಾಕಿಸ್ತಾನ ಸರ್ಕಾರವು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ (IMF) ಜೊತೆ ಮಾತುಕತೆ ನಡೆಸಿ ಈ ಬಿಕ್ಕಟ್ಟಿನಿಂದ ಹೊರಬರಲು ಪ್ರಯತ್ನಿಸುತ್ತಿದೆ. ಯುಎಇ ನಂತಹ ಮಿತ್ರ ರಾಷ್ಟ್ರಗಳು ಕೂಡ ಸಾಲದ ಅವಧಿಯನ್ನು ವಿಸ್ತರಿಸುವ ಬದಲು ವಾಪಸ್ ಕೇಳುತ್ತಿರುವುದು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಆರ್ಥಿಕ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನವು ತನ್ನ ಆರ್ಥಿಕ ನೀತಿಗಳಲ್ಲಿ ಭಾರಿ ಬದಲಾವಣೆ ತರಬೇಕಾದ ಅನಿವಾರ್ಯತೆ ಎದುರಾಗಿದೆ.

Continue Reading

ಸಿನಿಮಾ

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

VISTARANEWS.COM


on

ತಮಿಳುನಾಡು ಚುನಾವಣೆ ಮುಗಿದು ಫಲಿತಾಂಶಕ್ಕೆ ದಿನಗಣನೆ ಎದುರಾಗಿದೆ. ಇದೇ ವೇಳೆ ಟಿವಿಕೆ ಯ ಪ್ರಮುಖ ನಾಯಕ ‘ದಳಪತಿ’ ಖ್ಯಾತಿಯ ವಿಜಯ್‌ ಆಸ್ತಿ ವಿವಾದ ಮಾತ್ರ ಮತ್ತೆ ಮತ್ತೆ ಮುನ್ನೆಲೆಗೆ ಬರುತ್ತಲೇ ಇದೆ. ಈ ಬಾರಿ ವಿವಾದದ ಕೇಂದ್ರಬಿಂದುವಾಗಿರುವುದು ಚುನಾವಣೆಗೂ ಮುನ್ನ ಸಲ್ಲಿಕೆಯಾದ ಅಫಿಡವಿಟ್‌ನಲ್ಲಿನ ಅಂಶಗಳು. ವಿಶೇಷವಾಗಿ, ವಿಜಯ್‌ ತಮ್ಮ ಪತ್ನಿಗೆ ನೀಡಿದ್ದಾರೆ ಎನ್ನಲಾದ 12 ಕೋಟಿ ರೂಪಾಯಿಗಳ ಸಾಲದ ವಿವರವು ಈಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ಈ 12 ಕೋಟಿ ರೂಪಾಯಿ ಸಾಲದ ಮೂಲ ಯಾವುದು ಮತ್ತು ಇಷ್ಟು ದೊಡ್ಡ ಮೊತ್ತವನ್ನು ಪತ್ನಿಗೆ ನೀಡಲು ಕಾರಣವೇನು ಎಂಬ ಪ್ರಶ್ನೆಯನ್ನು ವಿರೋಧ ಪಕ್ಷದ ನಾಯಕರು ಎತ್ತುತ್ತಿದ್ದಾರೆ. ಚುನಾವಣಾ ಕಣದಲ್ಲಿ ಈ ಆಸ್ತಿ ವಿವರಗಳು ದೊಡ್ಡ ಪ್ರಚಾರದ ವಸ್ತುವಾಗಿದ್ದವು, ಆದರೆ ಚುನಾವಣೆ ಮುಗಿದ ನಂತರವೂ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವೇದಿಕೆಗಳಲ್ಲಿ ಈ ಕುರಿತಾದ ಟೀಕೆಗಳು ಮತ್ತು ಕೆಸರೆರಚಾಟಗಳು ಮುಂದುವರಿದಿವೆ. ಇದು ಕೇವಲ ವೈಯಕ್ತಿಕ ಹಣಕಾಸಿನ ವಿಚಾರವಲ್ಲ, ಇದರ ಹಿಂದೆ ಬೇರೆಯದೇ ಆದ ಆರ್ಥಿಕ ಮೂಲಗಳಿವೆ ಎಂಬುದು ವಿರೋಧಿಗಳ ಆರೋಪ.

ಸದ್ಯಕ್ಕೆ ದಳಪತಿ ಕುಟುಂಬವು ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದು, ಕಾನೂನುಬದ್ಧವಾಗಿಯೇ ಎಲ್ಲಾ ವಿವರಗಳನ್ನು ನೀಡಲಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ಆದರೂ, ಜನರ ನಡುವೆ ಈ 12 ಕೋಟಿಯ ಲೆಕ್ಕಾಚಾರವು ಭಾರಿ ಕುತೂಹಲ ಮೂಡಿಸಿದೆ. ರಾಜಕೀಯ ಮೇಲಾಟಗಳ ನಡುವೆ ವಿಜಯ್‌ ಆಸ್ತಿ ಮತ್ತು ಸಾಲದ ವಿವಾದವು ಅಂತಿಮವಾಗಿ ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದು ಈಗ ಎಲ್ಲರ ಗಮನ ಸೆಳೆದಿದೆ.

Continue Reading
Advertisement
Latest16 minutes ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest25 minutes ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest59 minutes ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ2 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest2 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest3 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest4 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest6 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ7 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest7 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌