EV sales| ರಾಜ್ಯದಲ್ಲಿ ದಿನಕ್ಕೆ ಸರಾಸರಿ 300 ಎಲೆಕ್ಟ್ರಿಕ್‌ ವಾಹನ ಮಾರಾಟ, ದೇಶದಲ್ಲಿ ಮೂರನೇ ಸ್ಥಾನ - Vistara News

ಆಟೋಮೊಬೈಲ್

EV sales| ರಾಜ್ಯದಲ್ಲಿ ದಿನಕ್ಕೆ ಸರಾಸರಿ 300 ಎಲೆಕ್ಟ್ರಿಕ್‌ ವಾಹನ ಮಾರಾಟ, ದೇಶದಲ್ಲಿ ಮೂರನೇ ಸ್ಥಾನ

ಕರ್ನಾಟಕದಲ್ಲಿ ಕಳೆದ ಏಪ್ರಿಲ್-ಜೂನ್‌ ಅವಧಿಯಲ್ಲಿ ದಿನಕ್ಕೆ ಸರಾಸರಿ 300ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ವಾಹನ ಮಾರಾಟವಾಗಿರುವುದು ಗಮನಾರ್ಹ. ಆದರೆ ಗ್ರಾಹಕರಿಗೆ ಹೆಚ್ಚಿನ ಸಬ್ಸಿಡಿ ನೆರವು ನೀಡುವುದರಿಂದ ಮತ್ತಷ್ಟು ಪ್ರಯೋಜನವಾಗಬಹುದು.

VISTARANEWS.COM


on

electric vehicle
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿ ಸಾಂಪ್ರದಾಯಿಕ ವಾಹನಗಳ ಜತೆಗೆ ಎಲೆಕ್ಟ್ರಿಕ್‌ ವಾಹನಗಳ ಮಾರಾಟ ಕೂಡ ಗಮನಾರ್ಹವಾಗಿ ಏರಿಕೆಯಾಗುತ್ತಿದೆ. ಕಳೆದ ಏಪ್ರಿಲ್-ಜೂನ್‌ ಅವಧಿಯಲ್ಲಿ (EV sales) ದಿನಕ್ಕೆ ಸರಾಸರಿ ೩೦೦ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ವಾಹನಗಳು ನೋಂದಣಿಯಾಗಿರುವುದು ಮಾರಾಟದ ಪ್ರಗತಿಯನ್ನು ಬಿಂಬಿಸಿದೆ. ಉತ್ತರಪ್ರದೇಶ, ದಿಲ್ಲಿ ಬಿಟ್ಟರೆ ಅತಿ ಹೆಚ್ಚು ಎಲೆಕ್ಟ್ರಿಕ್‌ ವಾಹನಗಳು ಕರ್ನಾಟಕದಲ್ಲಿ ಮಾರಾಟವಾಗಿದೆ. ಮಹಾರಾಷ್ಟ್ರ ೪ನೇ ಹಾಗೂ ಬಿಹಾರ ೫ನೇ ಸ್ಥಾನದಲ್ಲಿದೆ.

ಏಪ್ರಿಲ್-ಜೂನ್‌ನಲ್ಲಿ ದಿನಕ್ಕೆ ೩೦೦ ಇ.ವಿ ನೋಂದಣಿ: ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್‌ನಲ್ಲಿ ರಾಜ್ಯದಲ್ಲಿ ದಿನಕ್ಕೆ ಸರಾಸರಿ ೪,೭೦೦ ವಾಹನಗಳು ನೋಂದಣಿಯಾಗಿವೆ. ಇದರಲ್ಲಿ ೩೦೦ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ವಾಹನವಾಗಿದೆ. ಈ ಅವಧಿಯಲ್ಲಿ ಒಟ್ಟು ೪.೭ ಲಕ್ಷ ವಾಹನಗಳು ನೋಂದಣಿಯಾಗಿದ್ದು, ಇದರಲ್ಲಿ ೩೦,೬೬೩ ಎಲೆಕ್ಟ್ರಿಕ್‌ ವಾಹನಗಳಾಗಿವೆ. ರಾಜ್ಯದಲ್ಲಿ ಈಗ

ಕರ್ನಾಟಕದಲ್ಲಿ ಒಟ್ಟು ೧.೨ ಲಕ್ಷ ಎಲೆಕ್ಟ್ರಿಕ್‌ ವಾಹನ: ೨೦೨೨ರ ಮಾರ್ಚ್‌ ಅಂತ್ಯದ ವೇಳೆಗೆ ಒಟ್ಟು ೨.೬ ಕೋಟಿ ವಾಹನಗಳು ಕರ್ನಾಟಕದ ಬಳಕೆದಾರರ ಬಳಿ ಇದ್ದು, ಇದರಲ್ಲಿ ೧.೨ ಲಕ್ಷ ಎಲೆಕ್ಟ್ರಿಕ್‌ ವಾಹನಗಳಾಗಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಕರ್ನಾಟಕದಲ್ಲಿರುವ ಒಟ್ಟು ಎಲೆಕ್ಟ್ರಿಕ್‌ ವಾಹನಗಳ ಸಂಖ್ಯೆ ೧.೨ ಲಕ್ಷ (ದೇಶದಲ್ಲಿ ೩ನೇ ಸ್ಥಾನ)

ರಾಜ್ಯಎಲೆಕ್ಟ್ರಿಕ್‌ ವಾಹನಗಳುಇತರ ವಾಹನ
ಕರ್ನಾಟಕ1.2 ಲಕ್ಷ2.6 ಕೋಟಿ
ಉತ್ತರಪ್ರದೇಶ3.3 ಲಕ್ಷ4 ಕೋಟಿ
ದಿಲ್ಲಿ1.5 ಲಕ್ಷ76.8 ಲಕ್ಷ
ಮಹಾರಾಷ್ಟ್ರ1.1 ಲಕ್ಷ3.1 ಕೋಟಿ
ಬಿಹಾರ83,3351 ಕೋಟಿ
ಭಾರತ13.3 ಲಕ್ಷ27.8 ಕೋಟಿ

ಕರ್ನಾಟಕದಲ್ಲಿ ಗ್ರಾಹಕರಿಗೆ ಎಲೆಕ್ಟ್ರಿಕ್‌ ವಾಹನಗಳ ಖರೀದಿಗೆ ಸಬ್ಸಿಡಿ ವಿಚಾರದಲ್ಲಿ ಸರ್ಕಾರದ ನೆರವು ಕಡಿಮೆ. ಇಲ್ಲಿ ಎಲೆಕ್ಟ್ರಿಕ್‌ ವಾಹನಗಳ ತಯಾರಕರಿಗೆ, ಹೂಡಿಕೆದಾರರಿಗೆ ಸರ್ಕಾರದ ನೆರವು ಹೆಚ್ಚು. ಹೀಗಿದ್ದರೂ, ಖರೀದಿದಾರರು ಎಲೆಕ್ಟ್ರಿಕ್‌ ವಾಹನಗಳನ್ನು ಖರೀದಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಎಲೆಕ್ಟ್ರಿಕ್‌ ವಾಹನಗಳ ತಯಾರಿಕೆ ಬಂಡವಾಳ ಹೂಡಿಕೆ ಮಾಡಲು ಬಯಸುವವರಿಗೆ ೧೫% ಬಂಡವಾಳ ಸಬ್ಸಿಡಿ ನೆರವು ಸಿಗುತ್ತದೆ.

ಎಲೆಕ್ಟ್ರಿಕ್‌ ವಾಹನಗಳ ಮಾರಾಟವನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಇ.ವಿಗಳ ಮೇಲಿನ ಜಿಎಸ್‌ಟಿಯನ್ನು ೧೨%ರಿಂದ ೫%ಕ್ಕೆ ತಗ್ಗಿಸಿದೆ. ಚಾರ್ಜಿಂಗ್‌ ಸ್ಟೇಶನ್‌ಗಳ ಮೇಲಿನ ಜಿಎಸ್‌ಟಿಯನ್ನು ೧೮%ರಿಂದ ೫%ಕ್ಕೆ ಕಡಿತಗೊಳಿಸಲಾಗಿದೆ. ಪ್ರಸ್ತುತ ೧,೫೭೬ ಚಾರ್ಜಿಂಗ್‌ ಸ್ಟೇಶನ್‌ಗಳು ಲಭ್ಯವಿದೆ.

ಇವಿ ಬಿಸಿನೆಸ್‌ ತಾಣ ಬೆಂಗಳೂರು: ಭಾರತದ ಐಟಿ ತಂತ್ರಜ್ಞಾನ ನಗರಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ವಾಹನ ಮಾರಾಟಕ್ಕೂ ಪ್ರಮುಖ ತಾಣವಾಗಿದೆ. ಮಹೀಂದ್ರಾ ಎಲೆಕ್ಟ್ರಿಕ್‌, ಅಥೆರ್‌ ಎನರ್ಜಿ, ಓಲಾ ಎಲೆಕ್ಟ್ರಿಕ್‌, ಬಾಷಿಲ್ಲಿ ಇವಿ ಮತ್ತು ಇವಿ ಬಿಡಿಭಾಗಗಳ ಉತ್ಪಾದನೆಯಲ್ಲಿ ನಿರತವಾಗಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

India Yamaha: ಬೆಂಗಳೂರಿನಲ್ಲಿ ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್‌ನ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದೆ.ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

Yamaha has opened a new Blue Square outlet in Bengaluru
Koo

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (India Yamaha Motor Pvt Ltd) ಪ್ರೈ. ಲಿಮಿಟೆಡ್, ಬೆಂಗಳೂರಿನಲ್ಲಿ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದ್ದು, ಈ ಔಟ್‌ಲೆಟ್ 7,100 ಚದರ ಅಡಿಯಷ್ಟು ವಿಶಾಲವಾಗಿದೆ. ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

ಈ ಬ್ಲೂ ಸ್ಕ್ವೇರ್ ಔಟ್‌ಲೆಟ್ ಯಮಹಾ ಬ್ರ್ಯಾಂಡ್‌ನ ಹುಮ್ಮಸ್ಸನ್ನು ದಾಟಿಸುತ್ತದೆ ಮತ್ತು ಗ್ರಾಹಕರಿಗೆ ಸಂಪೂರ್ಣ ಸೇವೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. ವೈಯಕ್ತೀಕರಿಸಿದ ವಿಧಾನದ ಮೂಲಕ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿದ್ದು, ಪ್ರತಿಯೊಬ್ಬ ಗ್ರಾಹಕರು ತೃಪ್ತಿಕರ ಸೇವೆ ಪಡೆಯಲಿದ್ದಾರೆ. ಈ ವಿಶೇಷವಾದ ಔಟ್‌ಲೆಟ್‌ಗಳನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಅನುವು ಮಾಡಿಕೊಟ್ಟಿರುವ ಬ್ರ್ಯಾಂಡ್ ಗ್ರಾಹಕರಿಗೆ ಯಮಹಾ ರೇಸಿಂಗ್ ಜಗತ್ತಿಗೆ ಪ್ರವೇಶಿಸುವ ಅವಕಾಶವನ್ನೂ ನೀಡುತ್ತಿದೆ.

ಇದನ್ನೂ ಓದಿ: Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

ಈ ಪ್ರೀಮಿಯಂ ಔಟ್‌ಲೆಟ್‌ಗಳ ಪ್ರತಿಯೊಂದು ವಿಭಾಗವನ್ನೂ ಅಂತರರಾಷ್ಟ್ರೀಯ ಮೋಟಾರ್‌ ಸ್ಪೋರ್ಟ್‌ಗಳಲ್ಲಿ ತೊಡಗಿಸಿಕೊಂಡಿರುವ ಜಾಗತಿಕ ಬ್ರ್ಯಾಂಡ್‌ ಆದ ಯಮಹಾ ಜತೆಗೆ ಸಂಬಂಧ ಹೊಂದುವ ಹೆಮ್ಮೆಯ ಭಾವವನ್ನು ಮೂಡಿಸುವಂತೆ ಚಿಂತನಶೀಲವಾಗಿ ರಚಿಸಲಾಗಿದೆ. ಯಮಹಾ, ಬ್ರ್ಯಾಂಡ್‌ನ ಹೆಮ್ಮೆಯ ರೇಸಿಂಗ್ ಪರಂಪರೆಯನ್ನು ಪ್ರತಿನಿಧಿಸುವ “ಬ್ಲೂ (ನೀಲಿ)” ಬಣ್ಣ ಮತ್ತು ಗ್ರಾಹಕರು ಯಮಹಾದ ಹರ್ಷದಾಯಕ ಮತ್ತು ಸೊಗಸಾದ ಶ್ರೇಣಿಯ ದ್ವಿಚಕ್ರ ವಾಹನಗಳೊಂದಿಗೆ ಸಂಪರ್ಕ ಸಾಧಿಸಲು ರಚಿಸಲಾದ ಪ್ಲಾಟ್‌ಫಾರ್ಮ್ ಅನ್ನು ಸಂಕೇತಿಸುವ “ಸ್ಕ್ವೇರ್” ಸಂಯೋಜನೆಯ ಮೂಲಕ ಗ್ರಾಹಕರೊಂದಿಗೆ ಉತ್ತಮ ಸಂಪರ್ಕವನ್ನು ಸಾಧಿಸಿದೆ.

ಉದ್ಯಮ-ಪ್ರಧಾನ ಅನುಭವವನ್ನು ಒದಗಿಸುವುದರ ಜತೆಗೆ, ಈ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಬ್ಲೂ ಸ್ಟ್ರೀಕ್ಸ್ ರೈಡರ್‌ಗಳಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ಯಮಹಾದ ವಿಶೇಷ ಬೈಕರ್ ಸಮುದಾಯದ ಸವಾರರು ಇತರ ಸವಾರರನ್ನು ಭೇಟಿ ಮಾಡಲು ಮತ್ತು ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ. ಹೊಸ ಔಟ್‌ಲೆಟ್ ಸೇರಿದಂತೆ ಈಗ ಕರ್ನಾಟಕ ಮಾರುಕಟ್ಟೆಯಲ್ಲಿ ಯಮಹಾ 23 ಎಕ್ಸ್‌ಕ್ಲೂಸಿವ್ ಬ್ಲೂ ಸ್ಕ್ವೇರ್ ಶೋ ರೂಂಗಳನ್ನು ಹೊಂದಿದೆ.

ಯಮಹಾದ ಸೂಪರ್‌ಸ್ಪೋರ್ಟ್ ಆರ್3 (321ಸಿಸಿ), ಟಾರ್ಕ್-ರಿಚ್ ಎಂಟಿ -03 (321 ಸಿಸಿ) ಮತ್ತು ಮ್ಯಾಕ್ಸಿ-ಸ್ಪೋರ್ಟ್ಸ್ ಏರಾಕ್ಸ್(155 ಸಿಸಿ) ಮತ್ತು ಏರಾಕ್ಸ್ ವರ್ಷನ್ ಎಸ್ (155 ಸಿಸಿ)ಗಳನ್ನು ಬ್ಲೂ ಸ್ಕ್ವೇರ್ ಶೋರೂಮ್‌ಗಳ ಮೂಲಕ ವಿಶೇಷವಾಗಿ ಮಾರಾಟ ಮಾಡಲಾಗುತ್ತದೆ. ಈ ಪ್ರೀಮಿಯಂ ಔಟ್‌ಲೆಟ್‌ಗಳು ವೈಝಡ್‌ಎಫ್‌-ಆರ್‌15 ಎಂ (155 ಸಿಸಿ), ವೈಝಡ್‌ಎಫ್‌-ಆರ್‌15 ವಿ4 (155ಸಿಸಿ), ವೈಝಡ್‌ಎಫ್‌-ಆರ್‌15ಎಸ್ ವಿ3 (155 ಸಿಸಿ), ಎಂಟಿ-15 ವಿ2 (155 ಸಿಸಿ), ಬ್ಲೂ ಕೋರ್ ತಂತ್ರಜ್ಞಾನ ಆಧರಿತ ಮಾಡೆಲ್ ಗಳಾದ ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 4.0 (149 ಸಿಸಿ), ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಕ್ಸ್ (149 ಸಿಸಿ), ಮತ್ತು ಸ್ಕೂಟರ್ ಗಳಾದ ಫ್ಯಾಸಿನೋ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ ಸ್ಟ್ರೀಟ್ ರಾಲಿ 125 ಎಫ್ಐ ಹೈಬ್ರಿಡ್ (125 ಸಿಸಿ) ಮುಂತಾದ ನವೀಕರಿಸಿದ ಲೈನ್-ಅಪ್‌ಗಳನ್ನು ಪ್ರದರ್ಶಿಸಲಾಗುತ್ತದೆ.

ಇದನ್ನೂ ಓದಿ: Vastu Tips: ನೆಲ ಒರೆಸುವಾಗಲೂ ವಾಸ್ತು ನಿಯಮ ಪಾಲಿಸಲೇಬೇಕು!

ಹೆಚ್ಚು ಸಮಗ್ರವಾದ ಅನುಭವವನ್ನು ಒದಗಿಸುವ ಭರವಸೆಯನ್ನು ನೀಡುತ್ತಾ, ಈ ಪ್ರೀಮಿಯಂ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಯಮಹಾದ ನಿಜವಾದ ಆ್ಯಕ್ಸೆಸರೀಸ್‌ಗಳು, ಅಧಿಕೃತ ಉಡುಪುಗಳು ಮತ್ತು ಯಮಹಾ ನಿಜವಾದ ಬಿಡಿಭಾಗಗಳನ್ನು ಗ್ರಾಹಕರಿಗೆ ಪ್ರದರ್ಶನ ಮತ್ತು ಮಾರಾಟ ಮಾಡುತ್ತವೆ.

Continue Reading

ಕರ್ನಾಟಕ

Toyota: ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024; ಟಿಟಿಟಿಐ ವಿದ್ಯಾರ್ಥಿಗಳ ಉತ್ತಮ ಸಾಧನೆ

Toyota: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

VISTARANEWS.COM


on

Toyota Technical Training Institute students Excellent performance in India Skills Competition 2024
Koo

ರಾಮನಗರ: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ (Toyota) ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸಂಯೋಜಿತ ಉತ್ಪಾದನೆ (ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ) ವಿಭಾಗದ ವೈಯಕ್ತಿಕ ಪ್ರತಿಸ್ಪರ್ಧಿಯಾಗಿ ಪ್ರೇಮ್. ವಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್‌ನಲ್ಲಿ ಮೋಹಿತ್ ಎಂ.ಯು, ಹರೀಶ್ ಆರ್, ಮತ್ತು ನೆಲ್ಸನ್ ವಿ ತಂಡ ಚಿನ್ನದ ಪದಕಗಳನ್ನು ಪಡೆದುಕೊಂಡಿದೆ.

ಮೆಕಾಟ್ರಾನಿಕ್ಸ್ ವಿಭಾಗದಲ್ಲಿ ದರ್ಶನ್ ಗೌಡ ಸಿ.ಎಸ್. ಮತ್ತು ಭಾನು ಪ್ರಸಾದ್ ಎಸ್.ಎಂ ತಂಡ ಚಿನ್ನದ ಪದಕ ಗಳಿಸಿದೆ. ಹೇಮಂತ್ ಕೆ.ವೈ ಮತ್ತು ಉದಯ್ ಕುಮಾರ್ ಬಿ ತಂಡ ಬೆಳ್ಳಿ ಪದಕ ಗಳಿಸಿದೆ. ಇದಲ್ಲದೆ, ರೋಹನ್ ಎ.ಎಸ್. ಬೆಳ್ಳಿ ಪದಕ ಮತ್ತು ಸುದೀಪ್ ಎಸ್.ಎಂ. ಅವರು ಕಾರ್ ಪೇಂಟಿಂಗ್‌ನಲ್ಲಿ ವೈಯಕ್ತಿಕ ಸ್ಪರ್ಧಿಯಾಗಿ ಮೆಡಲಿಯನ್ ಆಫ್ ಎಕ್ಸಲೆನ್ಸ್ ಪಡೆದಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ನಡೆದ ಸ್ಪರ್ಧೆಯ “ಆಫ್-ಸೈಟ್” ಭಾಗದ ನಾಲ್ಕು ವಿಭಾಗಗಳಲ್ಲಿ ಟಿಟಿಟಿಐ ಭಾಗವಹಿಸಿತ್ತು. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್, ಮೆಕಾಟ್ರಾನಿಕ್ಸ್, ಕಾರ್ ಪೇಂಟಿಂಗ್ ಮತ್ತು ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಟಿಟಿಟಿಐನ ವಿದ್ಯಾರ್ಥಿಗಳು ಅದ್ಭುತ ಕೌಶಲ್ಯ ಮತ್ತು ಡೆಡಿಕೇಷನ್ ಅನ್ನು ಪ್ರದರ್ಶಿಸಿದ್ದಾರೆ.

ಈ ವೇಳೆ ಎನ್‌ಎಸ್‌ಡಿಸಿ ಯ ಮಾರ್ಕೆಟಿಂಗ್ ಮತ್ತು ಕಮ್ಯುನಿಕೇಷನ್ಸ್ ಜನರಲ್ ಮ್ಯಾನೇಜರ್ ಮೋನಿಕಾ ನಂದಾ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಗಮನಾರ್ಹ ಸಾಧನೆ ಮಾಡಿದ ಟೊಯೋಟಾ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಟಿಟಿಟಿಐ) ನ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರ ಅನುಕರಣೀಯ ಕೌಶಲ್ಯಗಳು ಮತ್ತು ಸಮರ್ಪಣೆ ಟಿಟಿಟಿಐನ ತರಬೇತಿ ಕಾರ್ಯಕ್ರಮಗಳ ಪರಿಣಾಮಕಾರಿತ್ವಕ್ಕೆ ಸಾಕ್ಷಿಯಾಗಿದೆ. ಈ ವಿಜೇತರು ತಮ್ಮ ಸಂಸ್ಥೆಗೆ ಗೌರವವನ್ನು ತರುವುದಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತೀಯ ಕೌಶಲ್ಯ ಅಭಿವೃದ್ಧಿಯ ಖ್ಯಾತಿಯನ್ನು ಹೆಚ್ಚಿಸುತ್ತಾರೆ. ವಿಶ್ವ ಕೌಶಲ್ಯ ಸ್ಪರ್ಧೆಗೆ ಆಯ್ಕೆಯಾದವರು ಈ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರಿಸುತ್ತಾರೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತಾರೆ ಎಂದು ನಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟಿಟಿಟಿಐ ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗಳ ಬಗ್ಗೆ ನಾವು ಅಪಾರ ಹೆಮ್ಮೆ ಪಡುತ್ತೇವೆ. ಅವರ ಯಶಸ್ವಿ ಪ್ರಯಾಣ ನಮಗೆ ಹೆಚ್ಚು ಆನಂದವನ್ನು ನೀಡಿದೆ. ಕಠಿಣ ಪರಿಶ್ರಮದಿಂದಾಗಿ ಈ ಮೈಲಿಗಲ್ಲನ್ನು ವಿದ್ಯಾರ್ಥಿಗಳು ತಲುಪಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಆಟೋಮೊಬೈಲ್

Car Care Tips : ಕಾಸು ಉಳಿಸಿ ಎಂಜಿನ್ ಬೆಳಗಿಸಿ, ಕಾರಿನ ಎಂಜಿನ್ ನೀವೇ ​ಕ್ಲೀನ್ ಮಾಡಲು ಇಲ್ಲಿವೆ ಟಿಪ್ಸ್​​​

Car Care Tips: ಕಾರಿನ ಎಂಜಿನ್ ಕ್ಲೀನಿಂಗ್ ಸವಾಲಿನಿಂದ ಕೂಡಿರುವುದಕ್ಕೆ ಅದರ ಮೇಲೆ ಅಂಟಿರುವ ಗ್ರೀಸ್ ಹಾಗೂ ಇನ್ನಿತರ ವಸ್ತುಗಳ ಹಾಗೂ ಜಟಿಲ ಪ್ರದೇಶವೇ ಕಾರಣ. ಅನೇಕರು ಈ ಕಾರ್ಯವನ್ನು ವೃತ್ತಿಪರರಿಗೆ ವಹಿಸುತ್ತಾರೆ. ಆದರೆ ಹಣವನ್ನು ಉಳಿಸಬೇಕಾದರೆ ನೀವೇ ಅದನ್ನು ತೊಳೆಯಬಹುದು. ಪ್ರತಿ ಒಂದು ಅಥವಾ ಎರಡು ತಿಂಗಳಿಗೊಮ್ಮೆ ಎಂಜಿನ್ ಸ್ವಚ್ಛಗೊಳಿಸುವುದರಿಂದ ಅದು ತುಕ್ಕು ಸೇರಿದಂತೆ ನಾನಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

VISTARANEWS.COM


on

car care tips
Koo

ಬೆಂಗಳೂರು: ತಮ್ಮ ಕಾರುಗಳನ್ನು ಆಗಾಗ ತೊಳೆಯುವ ಮಂದಿ ಅದರ ಎಂಜಿನ್ (Car Engine) ಸ್ವಚ್ಛತೆ ಬಗ್ಗೆ ಹೆಚ್ಚು ಆಸಕ್ತಿ ವಹಿಸುವುದಿಲ್ಲ. ಎಂಜಿನ್ ಎಲ್ಲರಿಗೂ ಕಾಣುವುದಿಲ್ಲ ಎಂಬುದು ಮೊದಲ ಕಾರಣವಾದರೆ ಕ್ಲೀನ್ ಮಾಡಲು ಕಷ್ಟ ಎಂಬುದು ಎರಡನೇ ಸಂಗತಿ. ಆದರೆ, ಗ್ರೀಸ್​, ಆಯಿಲ್​ಗಳ ಸಣ್ಣ ಪ್ರಮಾಣದ ಸೋರಿಕೆ ಹಾಗೂ ಇನ್ನಿತ್ಯಾದಿ ಕಾರಣಕ್ಕೆ ಎಂಜಿನ್ ಮೇಲೆ ಹೆಚ್ಚು ಕೊಳೆ ಇರುತ್ತದೆ. ಅಂಕಿಅಂಶಗಳ ಪ್ರಕಾರ, 60% ಕ್ಕೂ ಹೆಚ್ಚು ಕಾರು ಮಾಲೀಕರಿಗೆ ಎಂಜಿನ್ ಸ್ವಚ್ಛ ಮಾಡುವುದೇ ಸವಾಲು. ಅದಕ್ಕಾಗಿ ವರ್ಷಕ್ಕೊಮ್ಮೆ ಸರ್ವಿಸ್​ಗೆ ಬಿಡುವಾಗ ಮಾತ್ರ ಎಂಜಿನ್ ಸ್ವಚ್ಛ ಮಾಡುತ್ತಾರೆ. ಹಾಗೆ ಮಾಡುವುದು ಸೂಕ್ತ ಮಾರ್ಗವಲ್ಲ. ಅದಕ್ಕಾಗಿ ಎಂಜಿನ್ ಶುಚಿ ಮಾಡುವಂಥ ಕೆಲವೊಂದು ಉಪಾಯಗಳನ್ನು ಈ ಕೆಳಗೆ (Car Care Tips) ನೀಡಲಾಗಿದೆ. ಅದನ್ನು ಪಾಲಿಸಿದರೆ ನಿಮ್ಮ ಕಾರಿನ ಎಂಜಿನ್ ಸದಾ ಬೆಳಗುತ್ತಿರುತ್ತದೆ.

ಕಾರ್ ಎಂಜಿನ್ ಅನ್ನು ಸ್ವಚ್ಛಗೊಳಿಸುವುದು ಹೇಗೆ

ಕಾರಿನ ಎಂಜಿನ್ ಕ್ಲೀನಿಂಗ್ ಸವಾಲಿನಿಂದ ಕೂಡಿರುವುದಕ್ಕೆ ಅದರ ಮೇಲೆ ಅಂಟಿರುವ ಗ್ರೀಸ್ ಹಾಗೂ ಇನ್ನಿತರ ವಸ್ತುಗಳ ಹಾಗೂ ಜಟಿಲ ಪ್ರದೇಶವೇ ಕಾರಣ. ಅನೇಕರು ಈ ಕಾರ್ಯವನ್ನು ವೃತ್ತಿಪರರಿಗೆ ವಹಿಸುತ್ತಾರೆ. ಆದರೆ ಹಣವನ್ನು ಉಳಿಸಬೇಕಾದರೆ ನೀವೇ ಅದನ್ನು ತೊಳೆಯಬಹುದು. ಪ್ರತಿ ಒಂದು ಅಥವಾ ಎರಡು ತಿಂಗಳಿಗೊಮ್ಮೆ ಎಂಜಿನ್ ಸ್ವಚ್ಛಗೊಳಿಸುವುದರಿಂದ ಅದು ತುಕ್ಕು ಸೇರಿದಂತೆ ನಾನಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

ಎಂಜಿನ್ ತೊಳೆಯಲು ಹೊರಡುವ ಮೊದಲು ಅಗತ್ಯ ವಸ್ತುಗಳು ಮತ್ತು ಪರಿಕರಗಳನ್ನು ತರಬೇಕು. ಮುಖ್ಯ ಉತ್ಪನ್ನಗಳಲ್ಲಿ ಒಂದು ಡಿಗ್ರೀಸರ್. ಇವುಗಳು ಎಂಜಿನ್ ಮೇಲೆ ಕುಳಿತಿರುವ ಗ್ರೀಸ್​ನಂಥ ಜಿಡ್ಡಿನಂಶವನ್ನು ಬೇಗ ಕರಗಿಸುತ್ತದೆ. ಇಂಥ ಕೆಮಿಕಲ್​ಗಲು ಹೊಂದಿರುವ ಘಾಟು ವಾಸನೆಯಿಂದಾಗಿ ಅವುಗಳನ್ನು ಹೊರಾಂಗಣದಲ್ಲಿ ಬಳಸಬೇಕು. ಲಿಕ್ವಿಡ್​ ಮಾದರಿಯ ಡಿಗ್ರೀಸರ್​ಗಳನ್ನು ಬಳಸಲು ಅನುಕೂಲ ಮಾಡಬಹುದು.

ಇನ್ನೇನು ಬೇಕು?

ಸ್ವಚ್ಛಗೊಳಿಸುವ ದಿನ ಮಳೆ ಅಥವಾ ಹೆಚ್ಚು ಚಳಿ ಇಲ್ಲದಿದ್ದರೆ ಉತ್ತಮ. ಇದರಿಂದ ಎಂಜಿನ್ ಮತ್ತು ಅದರ ಘಟಕಗಳು ತೊಳೆದ ಸ್ವಲ್ಪ ಹೊತ್ತಿನಲ್ಲಿಯೇ ಒಣಗುತ್ತವೆ. ಇನ್ನು ಎಂಜಿನ್ ಆಫ್​ ಮಾಡಿದ ಬಳಿಕ ಸಾಕಷ್ಟು ಹೊತ್ತು ಕಾಯುವುದು ಉತ್ತಮ. ತೊಳೆಯುವ ಸಂದರ್ಭದಲ್ಲಿ ಉಂಟಾಗಬಹುದಾದ ಸುಟ್ಟ ಗಾಯಗಳನ್ನು ತಪ್ಪಿಸಬಹುದು.

ಮೊದಲಿಗೆ ಎಂಜಿನ್ ಕಂಪಾರ್ಟ್​ಮೆಂಟ್​ ಅನ್ನು ಓಪನ್ ಮಾಡಬೇಕು. ಮೇಲೆ ನಿಂತಿರುವ ಎಲೆಗಳು ಮತ್ತು ಕಡ್ಡಿಗಳನ್ನು ನಿಧಾನವಾಗಿ ತೆಗೆಯಬೇಕು. ವ್ಯಾಕ್ಯೂಮ್ ಕ್ಲೀನರ್ ಅಥವಾ ಏರ್ ಕಂಪ್ರೆಸರ್ ಅನ್ನು ಅದಕ್ಕಾಗಿ ಬಳಸಬಹುದು. ಈ ವೇಳೆ ಬ್ಯಾಟರಿ, ಇಗ್ನಿಷನ್ ಕೇಬಲ್ ಗಳು ಮತ್ತು ಎಂಜಿನ್ ಕಂಟ್ರೋಲ್ ಯುನಿಟ್ ನಂತಹ ಎಲ್ಲಾ ಎಲೆಕ್ಟ್ರಾನಿಕ್ ಘಟಕಗಳನ್ನು ಸೀಲ್​ ಮಾಡಿರಬೇಕು. ಇದಕ್ಕೆ ನೀರು ಬೀಳದಂತೆ ನೋಡಿಕೊಳ್ಳಬೇಕು. ಏರ್ ಫಿಲ್ಟರ್​ಗಳನ್ನು ತೆಗೆದುಬಿಡಿ. ಸರಿಯಾದ ಟೂಲ್ಸ್​ ಇದ್ದರೆ ಬ್ಯಾಟರಿ ಸಂಪರ್ಕವನ್ನೂ ತಪ್ಪಿಸಿ. ಇದರಿಂದ ಶಾರ್ಟ್​ ಸರ್ಕೀಟ್​ನಂಥ ಸಂಭಾವ್ಯ ಅವಘಡಗಳನ್ನು ತಪ್ಪಿಸಬಹುದು.

ಡಿಗ್ರೀಸರ್ ನ ಹಾಕಿ

ಎಂಜಿನ್​ ಮೇಲ್ಮೈ ಕೊಳೆಯನ್ನು ತೆಗೆಯಲು ಒತ್ತಡದೊಂದಿಗೆ ನೀರು ಹಾಯಿಸಿ. ಮಾರುಕಟ್ಟೆಯಲ್ಲಿ ಬಗೆಬಗೆಯ ಕಂಪ್ರೆಸರ್​​ಗಳಿವೆ. ಎಂಜಿನ್ ಗೆ ಡಿಗ್ರೀಸರ್ ಹಚ್ಚಿ, ವಿಶೇಷವಾಗಿ ಕವರ್ ಗಳು ಮತ್ತು ಪೈಪ್ ಗಳಂತಹ ಭಾರಿ ಕೊಳೆಯಿರುವ ಜಾಗಗಳಿಗೆ ಪರಿಣಾಮಕಾರಿಯಾಗಿ ಹಚ್ಚಿ. ಸ್ವಚ್ಛಗೊಳಿಸಲು ಸಿಂಥೆಟಿಕ್ ಬ್ರಿಸ್ಟಲ್ ಬ್ರಷ್ ಬಳಸಿ. ಅಗತ್ಯವಿದ್ದರೆ, ಡಿಗ್ರೀಸರ್ ಅಪ್ಲಿಕೇಶನ್ ಮತ್ತೆ ಮತ್ತೆ ಹಾಕಿ.

ಡಿಗ್ರೀಸರ್ ಅನ್ನು ತೆಗೆದುಹಾಕಲು ಎಂಜಿನ್ ಅನ್ನು ಮತ್ತೆ ನೀರಿನಿಂದ ತೊಳೆಯಿರಿ. ಹಾನಿಯನ್ನು ತಪ್ಪಿಸಲು ಎಲ್ಲ ಗ್ರೀಸರ್​ಗಳನ್ನು ಚೆನ್ನಾಗಿ ತೊಳೆಯಿರು.

ಒಣಗಿಸಿ

ಎಂಜಿನ್ ಮೇಲೆ ನೀರಿನ ಕಲೆಗಳು ನಿಲ್ಲುವುದನ್ನು ತಪ್ಪಿಸಲು ಚೆನ್ನಾಗಿ ಒಣಗಿಸಿ. ನೀವು ಅದನ್ನು ಗಾಳಿಯಲ್ಲಿ ಒಣಗಲು ಬಿಡಬಹುದು ಅಥವಾ ಸ್ವಚ್ಛವಾದ ಮೈಕ್ರೋಫೈಬರ್ ಬಟ್ಟೆಯನ್ನು ಬಳಸಿ ಉಜ್ಜಬಹುದು. ಮೂಲೆಗಳನ್ನು ಮತ್ತು ತಲುಪಲು ಕಷ್ಟಕರವಾದ ಪ್ರದೇಶಗಳನ್ನು ಒಣಗಿಸಲು ಬಟ್ಟೆ ಬಳಸಿ. ಸಂಪೂರ್ಣವಾಗಿ ಒಣಗಿದ ನಂತರ, ಪ್ಲಾಸ್ಟಿಕ್ ಕವರ್​ ತೆಗೆದು ಎಲ್ಲಾ ವಿದ್ಯುತ್ ಸಂಪರ್ಕಗಳನ್ನು ಮರುಸಂಪರ್ಕಿಸಿ.

ಎಂಜಿನ್ ತೊಳೆಯುವುದರಿಂದ ಆಗುವ ಪ್ರಯೋಜಗಳು

ಎಂಜಿನ್​ ಮೇಲೆ ಕೊಳೆ ಕಡಿಯಿದ್ದಾಗ ಅದಕ್ಕೆ ಚೆನ್ನಾಗಿ ಗಾಳಿ ಬಡಿಯುತ್ತದೆ. ಅದರಿಂದ ಕಾರಿನ ಎಂಜಿನ್ ಅತಿಯಾಗಿ ಬಿಸಿಯಾಗುವ ಸಾಧ್ಯತೆ ಕಡಿಮೆ. ಎಂಜಿನ್ ನಿರ್ವಹಣೆ ಸುಲಭವಾಗುತ್ತದೆ. ಸೋರಿಕೆಗಳು, ಬಿರುಕುಗಳು ಮತ್ತು ಇತರ ಹಾನಿಯು ಚೆನ್ನಾಗಿ ಕಾಣಿಸುತ್ತದೆ. ನಿಯಮಿತವಾಗಿ ಸ್ವಚ್ಛಗೊಳಿಸುವುದರಿಂದ ಎಂಜಿನ್ ಭಾಗಗಳು ತುಕ್ಕು ಹಿಡಿಯುವುದನ್ನು ತಪ್ಪಿಸಬಹುದು.

ಇದನ್ನೂ ಓದಿ: Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

ಡಿಗ್ರೀಸರ್​ಗಳು ಯಾವುದೆಲ್ಲ?

ಆರ್ಗಾನಿಕ್​ ಡಿಗ್ರೀಸರ್​ಗಳು ಮಾರುಕಟ್ಟೆಯಲ್ಲಿವೆ. ಈ ಡಿಗ್ರೀಸರ್ ಗಳು ಕಡಿಮೆ ಬೆಲೆಗೆ ದೊರೆಯುತ್ತವೆ. ಡಾಂಬರು ಕಲೆಗಳು, ಯಂತ್ರ ತೈಲ, ಮ್ಯಾಸ್ಟಿಕ್, ನೈಸರ್ಗಿಕ ರಬ್ಬರ್ ಮತ್ತು ಸಿಲಿಕಾನ್ ಅನ್ನು ಇದರಿಂದ ತೆಗೆಯಬಹುದು. ಇದು ಬೆಂಕಿ ಅಪಾಯಕಾರಿ, ಆದ್ದರಿಂದ ಅವುಗಳನ್ನು ಬಳಸುವಾಗ ಎಚ್ಚರಿಕೆ ಅಗತ್ಯ.

ಎರಡನೆಯದದ್ದು ಲಿಕ್ವಿಡ್​ ಆಧಾರಿತ ಡಿಗ್ರೀಸರ್. ಇದು ಅತ್ಯುತ್ತಮ ಆಂಟಿ-ಸ್ಟ್ಯಾಟಿಕ್ ಗುಣಲಕ್ಷಣಗಳನ್ನು ಹೊಂದಿವೆ ಮತ್ತು ತುಕ್ಕು ಸೇರಿದಂತೆ ಕಠಿಣ ಕಲೆಗಳನ್ನು ತೆಗೆದುಹಾಕಬಹುದು. ಅವು ಸುರಕ್ಷಿತ ಮತ್ತು ನಿರುಪದ್ರವಿ. ಪ್ಲಾಸ್ಟಿಕ್ ಮೇಲ್ಮೈಗೂ ಹಾಕಬಹುದು. ಫೆರಸ್ ಮತ್ತು ಕಬ್ಬಿಣೇತರ ಲೋಹಗಳನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸುತ್ತವೆ.
ಮೂರನೇ ಮಾದರಿಯ ಸಾವಯವ ದ್ರಾವಕಗಳ ಎಮಲ್ಷನ್​ಗಳು ಅತ್ಯುತ್ತಮ ನುಗ್ಗುವ ಸಾಮರ್ಥ್ಯ ಹೊಂದಿವೆ. ತೈಲ ಕಣಗಳೊಂದಿಗೆ ಮೇಲ್ಮೈ ಮರು-ಮಾಲಿನ್ಯ ತಡೆಯುತ್ತವೆ. ಮಸಿ ಮತ್ತು ಆಕ್ಸೈಡ್​ ಫಿಲ್ಮ್ ಗಳನ್ನು ತೆಗೆದುಹಾಕುವಲ್ಲಿ ಅವು ಅತ್ಯುತ್ತಮವಾಗಿವೆ.

ಡಿಗ್ರೀಸರ್ ಗಳನ್ನು ಬಳಸುವ ಮುನ್ನ

ಮೊದಲಿಗೆ ಬಾಟಲಿಗಳಲ್ಲಿ ಬರೆದಿರುವ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ. ತಯಾರಕರ ಶಿಫಾರಸುಗಳನ್ನು ಅನುಸರಿಸಿ. ಉತ್ಪನ್ನವು ನೀವು ತೊಳೆಯುವ ಎಂಜಿನ್​ಗೆ ಹೊಂದಿಕೆಯಾಗುತ್ತದೆ ಎಂದು ಖಚಿತಪಡಿಸಿಕೊಳ್ಳಿ. ಉದಾಹರಣೆಗೆ, ಟ್ರೈಕ್ಲೋರೋಫ್ಲೋರೋಮೀಥೇನ್ ಆಧಾರಿತ ಡಿಗ್ರೀಸರ್ ಗಳು ಅಲ್ಯೂಮಿನಿಯಂ ವಸ್ತುಗಳಿಗೆ ಬಿದ್ದಾಗ ಸ್ಫೋಟವಾಗುತ್ತದೆ.

ದ್ರಾವಣ ಆಧಾರಿತ ಡಿಗ್ರೀಸರ್ ಗಳನ್ನು ಬಳಸುವಾಗ, ಬಟ್ಟೆ, ಸುರಕ್ಷತಾ ಕನ್ನಡಕಗಳು ಮತ್ತು ಉಸಿರಾಟದ ಸಾಧನವನ್ನು ಧರಿಸಿ. ಗಾಳಿಯಾಡುವ ಪ್ರದೇಶದಲ್ಲಿ ಕೆಲಸ ಮಾಡಿ. ಬೆಂಕಿಯ ಸಮೀಪ ತೆಗೆದುಕೊಂಡು ಹೋಗಬೇಡಿ. ಡಿಗ್ರೀಸರ್ ಅನ್ನು ಸಮಾನವಾಗಿ ಹಾಕಲು ಸ್ಪ್ರೇಯರ್ ಅಥವಾ ಲಿಂಟ್-ಫ್ರೀ ಬಟ್ಟೆಯನ್ನು ಬಳಸಿ.
ರಾಸಾಯನಿಕ ಉತ್ಪನ್ನವನ್ನು ಸಂಪೂರ್ಣವಾಗಿ ಒಣಗಲು ಬಿಡಬೇಡಿ.

ಶುಚಿಗೊಳಿಸುವ ಗುಣಮಟ್ಟ ನಿಯಂತ್ರಣ

ಆಟೋಮೋಟಿವ್ ತಜ್ಞರ ಪ್ರಕಾರ, ಡಿಗ್ರೀಸರ್ ಗಳ ಸಮಪರ್ಕ ಬಳಕೆ ಮತ್ತು ನಿಯಮಿತ ಎಂಜಿನ್ ಕ್ಲೀನಿಂಗ್ ಕಾರಿನ ಜೀವಿತಾವಧಿಯನ್ನು ಗಮನಾರ್ಹವಾಗಿ ವಿಸ್ತರಿಸುತ್ತದೆ. ಅದರ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಡಿಗ್ರೀಸರ್ ಗಳನ್ನು ಆಯ್ಕೆ ಮಾಡಲು ಮತ್ತು ಬಳಸಲು ಮತ್ತು ನಿಯಮಿತ ಎಂಜಿನ್ ಕ್ಲೀನಿಂಗ್ ಗಾಗಿ ಶಿಫಾರಸುಗಳನ್ನು ಅನುಸರಿಸಬೇಕು.

Continue Reading

ಪ್ರಮುಖ ಸುದ್ದಿ

Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

Electric Scooters : ಭಾರತೀಯ ಮಾರುಕಟ್ಟೆಯಲ್ಲಿರುವ ಐದು ಎಲೆಕ್ಟ್ರಿಕ್ ಸ್ಕೂಟರ್​ಗಳ ಬೂಟ್ ಸ್ಪೇಸ್​​ಗಳ ಮಾಹಿತಿ ನೀಡಲಾಗಿದೆ. ನಿಮಗೆ ಯಾವುದು ಇಷ್ಟವಾಯಿತು ಎಂಬುದನ್ನು ತಿಳಿಸಿ. ಹೋಲಿಕೆಗೊಂದು ಮಾಹಿತಿ, ನಾವು ರಸ್ತೆಯಲ್ಲಿ ಹೆಚ್ಚಾಗಿ ನೋಡುವ ಹೋಂಡಾ ಆ್ಯಕ್ಟಿವಾ ಎಲೆಕ್ಟ್ರಿಕ್​ ಸ್ಕೂಟರ್​ 18 ಲೀಟರ್ ಬೂಟ್​ ಸ್ಪೇಸ್ ಹೊಂದಿದೆ.

VISTARANEWS.COM


on

Electric Scooters
Koo

ಬೆಂಗಳೂರು: ಸ್ಕೂಟರ್​​ಗಳು ಅತ್ಯಂತ ಅಗತ್ಯ ವಸ್ತುಗಳಲ್ಲಿ ಒಂದಾಗಿದೆ. ಅದು ಪ್ರಾಯೋಗಿಕ ಅದು ಹೆಚ್ಚು ಉಪಯೋಗಕಾರಿ. ಯಾಕೆಂದರೆ ಸ್ಕೂಟರ್​​ಗಳಲ್ಲಿ ಹೆಚ್ಚು ಬೂಟ್​ ಸ್ಪೇಸ್​ ಹೊಂದಿದೆ. ಅದರಲ್ಲೂ ಎಲೆಕ್ಟ್ರಿಕ್​ ಸ್ಕೂಟರ್​ಗಳು ಹೆಚ್ಚು ಉಪಯೋಗಕಾರಿ. ಜತೆಗೆ ಹೈಟೆಕ್​ ಫೀಚರ್​ಗಳೂ ಇವೆ. ಇಂದಿನ ಕೆಲವು ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿನ ಬೂಟ್​ ಸ್ಪೇಸ್​ ಎಷ್ಟು ದೊಡ್ಡದಾಗಿದೆ ಎಂದರೆ ನಿಮಗೆ ಒಂದು ಕಲ್ಪನೆ ಮಾಡಲೂ ಸಾಧ್ಯವಿಲ್ಲದಷ್ಟು ದೊಡ್ಡದಾಗಿದೆ. ಹೀಗಾಗಿ ಭಾರತೀಯ ಮಾರುಕಟ್ಟೆಯಲ್ಲಿರುವ ಐದು ಎಲೆಕ್ಟ್ರಿಕ್ ಸ್ಕೂಟರ್​ಗಳ ಬೂಟ್ ಸ್ಪೇಸ್​​ಗಳ ಮಾಹಿತಿ ನೀಡಲಾಗಿದೆ. ನಿಮಗೆ ಯಾವುದು ಇಷ್ಟವಾಯಿತು ಎಂಬುದನ್ನು ತಿಳಿಸಿ. ಹೋಲಿಕೆಗೊಂದು ಮಾಹಿತಿ, ನಾವು ರಸ್ತೆಯಲ್ಲಿ ಹೆಚ್ಚಾಗಿ ನೋಡುವ ಹೋಂಡಾ ಆ್ಯಕ್ಟಿವಾ ಎಲೆಕ್ಟ್ರಿಕ್​ ಸ್ಕೂಟರ್​ 18 ಲೀಟರ್ ಬೂಟ್​ ಸ್ಪೇಸ್ ಹೊಂದಿದೆ.

ರಿವರ್ ಇಂಡಿ -​ 43 ಲೀಟರ್

ರಿವರ್​ ಇಂ ಡಿ ಕಂಪನಿಯ ​ ಸ್ಕೂಟರ್ 43 ಲೀಟರ್ ಬೂಟ್​ ಸ್ಪೇಸ್​ ಹೊಂದಿದೆ. ಇದರ ಬೂಟ್​ ಸ್ಪೇಸ್​ ನೋಡಿದರೆ ಇದಕ್ಕೆ ಯಾವುದೇ ಪರ್ಯಾಯ ಇಲ್ಲ. ಇದು ಯಾವುದೇ ಭಾರತೀಯ ಎಲೆಕ್ಟ್ರಿಕ್ ಸ್ಕೂಟರ್ ಪೈಕಿ ಅತಿದೊಡ್ಡ ಶೇಖರಣಾ ಸ್ಥಳವಾಗಿದೆ. ಪ್ರಾಯೋಗಿವಾಗಿ ಇಂಡಿ ಸ್ಕೂಟರ್​ನಲ್ಲಿ ಒಂದು ಜೋಡಿ ಪ್ಯಾನಿಯರ್ ಗಳು ಮತ್ತು ಅಕ್ಸಸರಿ ಹಾಗೂ ಟಾಪ್ ಬಾಕ್ಸ್ ನೀಡಲಾಗುತ್ತದೆ. ಇದು ಅದರ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಅಥೆರ್ ರಿಶ್ತಾ- 34 ಲೀಟರ್

ರಿಶ್ತಾ ಮತ್ತು ಜೆನ್ 2 ಓಲಾ ಮಾದರಿಗಳು ಒಂದೇ ರೀತಿಯ ಬೂಟ್​ ಸ್ಪೇಸ್​ ಹೊಂದಿದೆ. ಆದರೆ, ಓಲಾದಲ್ಲಿ ಅದರ ಬೂಟ್​ ಸ್ಪೇಸ್​ ಆಳವಿಲ್ಲದ ಕಾರಣ ಅಥೆರ್ ಒಂದು ಹೆಜ್ಜೆ ಮುಂದಕ್ಕೆ ನಿಲ್ಲುತ್ತದೆ. ಅಥೆರ್ ರಿಜ್ಟಾದ ಆಳವಾದ ಶೇಖರಣಾ ಸಾಮರ್ಥ್ಯ ಹೊಂದಿದೆ. ಅಥೆರ್ ಬೂಟ್ ನ ಸ್ವಲ್ಪ ದೂರದಲ್ಲಿ ಒಂದು ಸಣ್ಣ ಕ್ಯೂಬಿಯನ್ನು ನೀಡಿದೆ. ಅಲ್ಲಿ ನೀವು ನಿಮ್ಮ ಸ್ಮಾರ್ಟ್ ಫೋನ್, ವ್ಯಾಲೆಟ್ ಮುಂತಾದ ನಿಕ್-ನಾಕ್ ಗಳನ್ನು ಇಟ್ಟುಕೊಳ್ಳಬಹುದು.

ಇದನ್ನೂ ಓದಿ: Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

ಜೆನ್ 2 ಓಲಾ ಎಸ್ 1 ವೇರಿಯೆಂಟ್​- 34 ಲೀಟರ್

ಜೆನ್ 2 ಪ್ಲಾಟ್ ಫಾರ್ಮ್ ಗೆ ಸ್ಥಳಾಂತರಗೊಳ್ಳುವುದರೊಂದಿಗೆ, ಓಲಾದ ಎಲ್ಲಾ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 34 ಲೀಟರ್ ಬೂಟ್ ಸಾಮರ್ಥ್ಯ ನೀಡಲಾಗಿದೆ. ವಾಸ್ತವವಾಗಿ 36 ಲೀಟರ್ ಬೂಟ್ ಸಾಮರ್ಥ್ಯ ಹೊಂದಿದ್ದ ಜೆನ್ 1 ಓಲಾ ಮಾದರಿಗಳಿಗಿಂತ ಸ್ವಲ್ಪ ಕಡಿಮೆ ಎನಿಸಿದೆ. ಏನೇ ಇರಲಿ ಓಲಾ ಎಲೆಕ್ಟ್ರಿಕ್ ಗಳು ಮಾರುಕಟ್ಟೆಯಲ್ಲಿ ದೊಡ್ಡ ಬೂಟ್ ನೀಡಿದ ಮೊದಲ ಎಲೆಕ್ಟ್ರಿಕ್ ಸ್ಕೂಟರ್​​.

ಟಿವಿಎಸ್ ಐಕ್ಯೂಬ್ 32 ಲೀಟರ್

ಐಕ್ಯೂಬ್ ಮೊದಲ ಬಾರಿಗೆ ಬಿಡುಗಡೆಯಾದಾಗ ಮಾರಾಟದಲ್ಲಿದ್ದ ಎರಡು ರೂಪಾಂತರಗಳು ಕೇವಲ 17 ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಸ್ಥಳ ಹೊಂದಿದ್ದವು. ಟಿವಿಎಸ್ ಈಗ ಜನಪ್ರಿಯ ಇ-ಸ್ಕೂಟರ್ ನ ಎಲ್ಲಾ ರೂಪಾಂತರಗಳ (ಬೇಸ್ ಐಕ್ಯೂಬ್ 2.2 ಕಿಲೋವ್ಯಾಟ್ ಹೊರತುಪಡಿಸಿ) ಬೂಟ್ 32 ಲೀಟರ್ ಗಳಿಗೆ ಹೆಚ್ಚಿಸಿದೆ. ಬೇಸ್ ಐಕ್ಯೂಬ್ 2.2 30 ಲೀಟರ್ ನಲ್ಲಿ ವೇರಿಯೆಂಟ್​ನಲ್ಲಿ 30 ಲೀಟರ್ ಬೂಟ್​ ಸ್ಪೇಸ್​ ನೀಡಲಾಗಿದೆ.

ಸಿಂಪಲ್ ಒನ್ 30 ಲೀಟರ್

ಸಿಂಪಲ್ ಒನ್ ಸ್ಕೂಟರ್​ 30 ಲೀಟರ್ ಬೂಟ್ ಸ್ಪೇಸ್​ ಐದು ಸ್ಕೂಟರ್​ಗಳ ಪಟ್ಟಿಯಲ್ಲಿ ಅತ್ಯಂತ ಚಿಕ್ಕದು. ಸಿಂಪಲ್ ಒನ್​ ಸ್ಕೂಟರ್ ಹೆಚ್ಚು ಜನಪ್ರಿಯವಾಗಿಲ್ಲ ಎಂಬುದು ಮೊದಲ ಮಾತು. ಅದರೆ, ಅದರ ಬೂಟ್​ ಸ್ಪೇಸ್​​ ಸ್ಪರ್ಧಾತ್ಮಕವಾಗಿದೆ. ಇಂಡಿ ಹೊರತುಪಡಿಸಿ ಟಿವಿಎಸ್​, ಅಥೆರ್ ಹಾಗೂ ಓಲಾ ಸ್ಕೂಟರ್​ಗಳು ನಾನಾ ರೀತಿಯಲ್ಲಿ ಜನಪ್ರಿಯವಾಗಿದೆ. ಆದಾಗ್ಯೂ ಸಿಂಪನ್​ ಒನ್​ ಸ್ಪರ್ಧಾತ್ಮಕ ರೀತಿಯಲ್ಲೇ ಬೂಟ್​ ಸ್ಪೇಸ್​ ನೀಡುತ್ತಿದೆ.

Continue Reading
Advertisement
cyber attack ನನ್ನ ದೇಶ ನನ್ನ ದನಿ
ಅಂಕಣ38 seconds ago

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ನನ್ನ ದೇಶ ನನ್ನ ದನಿ baman das basu
ಅಂಕಣ11 mins ago

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

Karnataka weather Forecast
ಮಳೆ41 mins ago

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Heatwave Effect
ಆರೋಗ್ಯ1 hour ago

Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Stray dogs attack in Shira 4 children one woman injured
ಪ್ರಮುಖ ಸುದ್ದಿ7 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ7 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ7 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ8 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ8 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು14 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌