ನಕಲಿ ಡೀಲ್‌ ರಾಜ V/S ಮಿಸ್ಟರ್‌ ಬ್ಲ್ಯಾಕ್‌ಮೇಲರ್‌: ಎಚ್‌ಡಿಕೆ, ಅಶ್ವತ್ಥನಾರಾಯಣ ಸಮರ - Vistara News

ಪ್ರಮುಖ ಸುದ್ದಿ

ನಕಲಿ ಡೀಲ್‌ ರಾಜ V/S ಮಿಸ್ಟರ್‌ ಬ್ಲ್ಯಾಕ್‌ಮೇಲರ್‌: ಎಚ್‌ಡಿಕೆ, ಅಶ್ವತ್ಥನಾರಾಯಣ ಸಮರ

ಹಳೆ ಮೈಸೂರು ಭಾಗದಲ್ಲಿ, ಅದರಲ್ಲೂ ಮಂಡ್ಯ, ರಾಮನಗರ, ಕನಕಪುರ ಭಾಗದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೋಟೆ ಪ್ರವೇಶಿಸುವುದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದಾಗಿನಿಂದ ನಾಯಕರ ನಡುವೆ ಸಂಘರ್ಷ ಹೆಚ್ಚಾಗಿದೆ.

VISTARANEWS.COM


on

kumaraswamy and ashwathnarayana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐಟಿಬಿಟಿ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ವೈಯಕ್ತಿಕ ಹಂತಕ್ಕೆ, ಏಕವಚನಕ್ಕೆ ಇಳಿದಿದೆ. ಅಶ್ವತ್ಥನಾರಾಯಣ ಅವರನ್ನು ನಕಲಿ ಡೀಲ್‌ ರಾಜ ಎಂದು ಕುಮಾರಸ್ವಾಮಿ ತೆಗಳಿದ್ದರೆ, ಕುಮಾರಸ್ವಾಮಿ ಅವರನ್ನು ಮಿಸ್ಟರ್‌ ಬ್ಲ್ಯಾಕ್‌ಮೇಲರ್‌ ಎಂದು ಅಶ್ವತ್ಥನಾರಾಯಣ ಟೀಕಿಸಿದ್ದಾರೆ.

ಇಬ್ಬರ ನಡುವೆ ಈ ಹಿಂದಿನಿಂದಲೂ ಸಂಘರ್ಷ ನಡೆಯುತ್ತಲೇ ಇದೆ. 545 ಪಿಎಸ್‌ಐ ನೇಮಕ ಹಗರಣದ ಸಂದರ್ಭದಲ್ಲಿ, ಸರ್ಟಿಫಿಕೇಟ್‌ ನಕಲು ಮಾಡಿದ್ದವರು ಎಂದು ಅಶ್ವತ್ಥನಾರಾಯಣ ವಿರುದ್ಧ ಕುಮಾರಸ್ವಾಮಿ ಆರೋಪಿಸಿದ್ದರು. ನಂತರ ಇಬ್ಬರ ನಡುವೆ ನಡೆದಿದ್ದ ವಾಕ್ಸಮರ ಈಗ ಎರಡು ದಿನದಿಂದ ಪುನಾರಂಭಗೊಂಡಿದೆ.

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿಯಾಗುತ್ತಿದ್ದು, ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕೂಡಲೆ ವಿಶೇಷ ಅಧಿವೇಶನವನ್ನು ಕರೆಯಬೇಕು. ಆದರೆ ಅಧಿವೇಶನ ಕರೆಯಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಕುರಿತು ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಅಶ್ವತ್ಥನಾರಾಯಣ, ಅಧಿವೇಶನ ಇದ್ದಾಗಲೇ ಕುಮಾರಸ್ವಾಮಿ ಸದನಕ್ಕೇ ಬರುವುದಿಲ್ಲ. ಎಲ್ಲಿದ್ಯಪ್ಪ ಕುಮಾರಸ್ವಾಮಿ ಎಂದು ಅವರನ್ನು ಹುಡುಕಬೇಕು. ಸದನ ಕರೆಯಿರಿ ಎನ್ನುವವರು, ಸದನಕ್ಕೇ ಬರುವುದಿಲ್ಲ. ಸಿದ್ದರಾಮಯ್ಯ ರೀತಿಯಲ್ಲೇ ಇವರೂ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ | ನಮ್ಮದು ಡಿ.ಕೆ. ಶಿವಕುಮಾರ್‌ ಕುಟುಂಬ ಕೆಟ್ಟೋಯ್ತ?: ಆರೋಪಕ್ಕೆ ಅಶ್ವತ್ಥನಾರಾಯಣ ಆಕ್ರೋಶ

ಕುಮಾರಸ್ವಾಮಿ ಕೆಂಡಾಮಂಡಲ
ಅಶ್ವತ್ಥನಾರಾಯಣ ಅವರ ಹೇಳಿಕೆಗೆ 12 ಸರಣಿ ಟ್ವೀಟ್‌ ಮೂಲಕ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಅಶ್ವತ್ಥನಾರಾಯಣ ಅಲಿಯಾಸ್‌ ನಕಲಿ ಸರ್ಟಿಫಿಕೇಟ್‌ ರಾಜʼ ಅಲಿಯಾಸ್‌ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ!! ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು, ಜಾಣ ಕುರುಡಾದರೂ ಇರಬೇಕು.

ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ? ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ? ಆಪರೇಷನ್‌ ಕಮಲದಲ್ಲೂ ಕುಶಲತೆ? ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ? ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ!!

ಜೆಡಿಎಸ್‌ ಕಂಪನಿ ಎನ್ನುತ್ತೀರಿ! ನಿಮ್ಮ ಕಂಪನಿಗಳ ಕಥೆ ಬಿಚ್ಚಬೇಕೆ? ಹೊರಗೆ ಸಾಚಾತನ, ಒಳಗೆ ಸೋಗಲಾಡಿತನ. ಎರಡು ತಲೆಯ ಕುಶಲತೆಯನ್ನು ಎಲ್ಲಿಂದ ಕಲಿತಿರಿ? ಸಂಘದಿಂದ ಬಂದ ಸಂಸ್ಕಾರವೇ? ಅಥವಾ ತಮ್ಮ ಹಿನ್ನೆಲೆಯೇ ಇದಾ? ನಿಮ್ಮ ನೈಜ ಹಿನ್ನೆಲೆಯ ಪುರಾಣ ಗೊತ್ತಿದ್ದವರಿಗೆ ಇದೇನು ಅಚ್ಚರಿಯಲ್ಲ ಬಿಡಿ ಅಶ್ವತ್ಥನಾರಾಯಣ.

ಕುಮಾರಸ್ವಾಮಿ. ಜೆಡಿಎಸ್ ಕಂಪನಿ ಇರಲಿ, ನಿಮ್ಮ ಕಂಪನಿಗಳ ಬಗ್ಗೆಯೇ ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತು ಎಂಬುದನ್ನು ಮರೆಯಬೇಡಿ . ಚುನಾವಣೆ ಬರಲಿ, ಕಂಪನಿಗಳ ಕಲರವ ಮತ್ತು ʼಠಮ ಠಮ ಠಮʼ ಸದ್ದು ಏನೆಂಬುದನ್ನು ರಾಮನಗರದಲ್ಲಿ ಕೇಳುವಂತೆ ಮಾಡುತ್ತೇನೆ.

ಪಿಎಸ್‌ಐ ಅಕ್ರಮ, ಪ್ರಾಧ್ಯಾಪಕರ ಕರ್ಮಕಾಂಡ, ಕಟ್ಟಡಗಳ ಹೆಸರಿನಲ್ಲಿ ಕಮಿಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್‌ ಮಾಡುವ ಅಶ್ವತ್ಥನಾರಾಯಣ, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ? ಇದೇನಾ ಸಂಘ‌ ಕಲಿಸಿದ ಶಿಕ್ಷಣ? ಹೇಳಿ ಡೀಲ್‌ ಅಶ್ವತ್ಥನಾರಾಯಣ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮಿಸ್ಟರ್‌ ಬ್ಲ್ಯಾಕ್‌ಮೇಲರ್‌ ಎಂದ ಅಶ್ವತ್ಥನಾರಾಯಣ

‌ಕುಮಾರಸ್ವಾಮಿ ಹೇಳಿಕೆಗೆ ಪ್ರತಿಯುತ್ತರ ನೀಡಿರುವ ಅಶ್ವತ್ಥನಾರಾಯಣ, ಗಾಳಿಯಲ್ಲಿ ಗುಂಡು ಹಾರಿಸುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು. ಮಿಸ್ಟರ್ ಬ್ಲ್ಯಾಕ್‌ಮೇಲರ್‌, ಅದೇನು ಬಿಚ್ಚಿಡ್ತೀಯೋ ಬಿಚ್ಚಿಡಪ್ಪಾ. ಅದೆಲ್ಲೋ ಫೈವ್ ಸ್ಟಾರ್ ಹೋಟೆಲ್ನಲ್ಲಿ ಬಿಚ್ಚಿಡ್ತಾ ಇದ್ಯಲ್ಲಪ್ಪಾ? ಎಲ್ಲೆಲ್ಲೋ ಆಟ ಆಡಿದ ಹಾಗೆ ಇಲ್ಲಿ ಆಡಲು ಆಗಲ್ಲ. ನಮ್ಮದು ಕುಟುಂಬ ಆಧಾರಿತ ಪಕ್ಷ ಅಲ್ಲ. ಸುಮ್ಮನೆ ಬಿಚ್ಚಿಡ್ತೀನಿ ಬಿಚ್ಚಿಡ್ತೀನಿ ಅಂದ್ರೆ ಇಲ್ಲಿ ನಡೆಯಲ್ಲ. ನಿಮ್ಮ ಹಾಗೆ ನಮ್ಮಲ್ಲಿ ಯಾವುದೂ ಗುಟ್ಟುಗಳಿಲ್ಲ ಎಂದು ಕಟುವಾಗಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ | ಸಚಿವ ಅಶ್ವತ್ಥನಾರಾಯಣ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

T20 ವಿಶ್ವಕಪ್

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

T20 World Cup 2024: ಕಳೆದ ಹಲವು ದಿನಗಳಿಂದ ಲಾಡರ್‌ಹಿಲ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿದ್ದವು. ಭಾರತ ಹಾಗೂ ಕೆನಡಾ ಪಂದ್ಯಕ್ಕೂ ಮಳೆಯ ಭೀತಿ ಇತ್ತು. ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿತ್ತು. ಅದರಂತೆ, ಕೊನೆಗೆ ಟಾಸ್‌ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಸಮನಾಗಿ ಹಂಚಿಕೆ ಮಾಡಲಾಗಿದೆ.

VISTARANEWS.COM


on

T20 World Cup 2024
Koo

ಲಾಡರ್‌ಹಿಲ್‌ (ಯುಎಸ್‌ಎ): ಅಮೆರಿಕದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಗ್ರೂಪ್‌ ಹಂತದ ಭಾರತ ಹಾಗೂ ಕೆನಡಾ ನಡುವಿನ (India vs Canada Match) ಪಂದ್ಯವು ಒಂದೂ ಎಸೆತ ಕಾಣದೆ ರದ್ದಾಗಿದೆ. ಭಾರಿ ಮಳೆಯಿಂದಾಗಿ ಶನಿವಾರ (ಜೂನ್‌ 15) ಲಾಡರ್‌ಹಿಲ್‌ನಲ್ಲಿರುವ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯವು ರದ್ದಾಯಿತು. ಇದರಿಂದಾಗಿ ಎರಡೂ ತಂಡಗಳಿಗೆ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಗ್ರೂಪ್‌ ಹಂತದಲ್ಲಿ ಒಂದೂ ಪಂದ್ಯ ಸೋಲದ ಭಾರತ ತಂಡವು 7 ಅಂಕಗಳೊಂದಿಗೆ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಸೂಪರ್‌ 8 ಹಂತಕ್ಕೆ ಪ್ರವೇಶ ಪಡೆದಿದೆ.

ಕಳೆದ ಹಲವು ದಿನಗಳಿಂದ ಲಾಡರ್‌ಹಿಲ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿದ್ದವು. ಭಾರತ ಹಾಗೂ ಕೆನಡಾ ಪಂದ್ಯಕ್ಕೂ ಮಳೆಯ ಭೀತಿ ಇತ್ತು. ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿತ್ತು. ಅದರಂತೆ, ಕೊನೆಗೆ ಟಾಸ್‌ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಸಮನಾಗಿ ಹಂಚಿಕೆ ಮಾಡಲಾಗಿದೆ. ಇದರೊಂದಿಗೆ ಭಾರತ ಹಾಗೂ ಅಮೆರಿಕ ತಂಡವು ಸೂಪರ್‌ 8 ಪ್ರವೇಶಿಸಿವೆ. ಭಾನುವಾರ ಐರ್ಲೆಂಡ್‌ ಹಾಗೂ ಪಾಕಿಸ್ತಾನ ತಂಡಗಳು ಗ್ರೂಪ್‌ ಹಂತದ ಹಾಗೂ ಟೂರ್ನಿಯ ಕೊನೆಯ ಪಂದ್ಯವನ್ನು ಆಡಲಿವೆ.

ಭಾರತ ಹಾಗೂ ಕೆನಡಾ ಪಂದ್ಯವನ್ನು ಆಡಲಿಸಲು ಪ್ರಯತ್ನ ಮಾಡಲಾಯಿತು. ಹಲವು ಬಾರಿ ಪಿಚ್‌ ಹಾಗೂ ಮೈದಾನವನ್ನು ಪರಿಶೀಲನೆ ನಡೆಸಲಾಯಿತು. ಕೊನೆಗೆ ಐದು ಓವರ್‌ಗಳ ಪಂದ್ಯವನ್ನಾದರೂ ಆಡಿಸಲು ಪ್ರಯತ್ನಿಸಲಾಯಿತು. ಆದರೆ, ಮಳೆ ಕಡಿಮೆಯಾದರೂ ಮೈದಾನದಲ್ಲಿ ತೇವಾಂಶ ರದ್ದಿರುವ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು. ಸೂಪರ್‌ 8ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಒಂದೇ ಗ್ರೂಪ್‌ನಲ್ಲಿವೆ. ಜೂನ್‌ 19ರಿಂದ ಸೂಪರ್‌ 8 ಪಂದ್ಯಗಳು ಆರಂಭವಾಗಲಿವೆ. ಸೂಪರ್‌ 8 ಪಂದ್ಯಗಳು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿವೆ.

ಉತ್ತಮ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗವನ್ನು ಹೊಂದಿದ್ದರೂ ಸಂಘಟಿತ ಪ್ರದರ್ಶನ ನೀಡುವಲ್ಲಿ ವಿಫಲವಾಗುವ ಜತೆಗೆ ಅದೃಷ್ಟದಾಟದಲ್ಲೂ ಹಿನ್ನಡೆ ಅನುಭವಿಸಿದ ಪಾಕಿಸ್ತಾನ ಕ್ರಿಕೆಟ್‌ ತಂಡವು ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯಿಂದಲೇ ಹೊರಬಿದ್ದಿದೆ. ಸೂಪರ್‌ 8ರ ರೇಸ್‌ನಲ್ಲಿ ಹಿನ್ನಡೆ ಅನುಭವಿಸಿದ ಬಾಬರ್‌ ಅಜಂನೇತೃತ್ವದ ತಂಡವು ಟೂರ್ನಿಯಿಂದ ಹೊರಬಿದ್ದಿದ್ದು, ಪಾಕ್‌ ಕ್ರಿಕೆಟ್‌ ಅಭಿಮಾನಿಗಳು ತಂಡದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

Continue Reading

ಪ್ರಮುಖ ಸುದ್ದಿ

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

R Ashok: ಎಟಿಎಂ ಕಾಂಗ್ರೆಸ್ ಸರ್ಕಾರ ಹೈಕಮಾಂಡ್‌ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ ಎಂದು ಆರೋಪಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಕಾಂಗ್ರೆಸ್ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ದೂರಿದ್ದಾರೆ.

VISTARANEWS.COM


on

Government has no money to clean tankers no ability to provide clean drinking water says R Ashok
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರ್ಕಾರಕ್ಕಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನಡಿ ಅವರ ಕ್ಷೇತ್ರ ವರುಣದಲ್ಲಿ ಕಲುಷಿತ ನೀರನ್ನು ಜನರು ಸೇವಿಸಿ ಸಾವಿಗೀಡಾಗಿದ್ದಾರೆ. ಅಂದರೆ ಮುಖ್ಯಮಂತ್ರಿಗಳಿಗೆ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ. ಈಗ ತುಮಕೂರಿನಲ್ಲೂ ಕಲುಷಿತ ನೀರು ಸೇವಿಸಿ ಆರು ಜನರ ಸಾವಾಗಿದೆ. ಇದಕ್ಕೆ ಜಿಲ್ಲಾಧಿಕಾರಿಯನ್ನು ಕೇಳಿದರೆ ಮೂತ್ರಪಿಂಡ ಸಮಸ್ಯೆ ಎಂದು ಕಾರಣ ಹೇಳಿದ್ದಾರೆ. ಆರೋಗ್ಯ ಸಮಸ್ಯೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಅದನ್ನೇ ಸಬೂಬು ಮಾಡಬಾರದು. ಈ ಕುರಿತು ವರದಿ ಕೇಳಿದ್ದೇನೆ ಎಂದು ತಿಳಿಸಿದರು‌.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ಕೊಪ್ಪಳದಲ್ಲಿ ಕೂಡ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ‌‌. ಇದರಿಂದಲೇ ಜನರು ಕಲುಷಿತ ನೀರು ಕುಡಿಯಬೇಕಾಗಿದೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯ್ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಆರೋಪಿಸಿದರು.

ಅಧಿಕಾರಿಗಳ ಬಳಿ ಈ ಬಗ್ಗೆ ಕಾರಣ ಕೇಳಿದರೆ ಜಾತ್ರೆಯಲ್ಲಿ ಅವಾಂತರವಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರು 15 ಬಾರಿ ಬಜೆಟ್ ಮಂಡಿಸಿದರೂ ಕುಡಿಯುವ ನೀರು ಕೊಡಲು ಸಾಧ್ಯವಾಗಿಲ್ಲ. ನಾನು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದರು.

ಟ್ಯಾಂಕರ್ ಮಾಫಿಯಾ

ಎಟಿಎಂ ಕಾಂಗ್ರೆಸ್ ಸರ್ಕಾರ ಹೈಕಮಾಂಡ್‌ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರೂ ಅದನ್ನು ಸಾಬೀತುಪಡಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ ಎಂದರು.

ಇದನ್ನೂ ಓದಿ: ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ದ್ವೇಷದ ರಾಜಕಾರಣ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಚಾರದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಅವರಂತೂ ಇದನ್ನು ನೇರವಾಗಿ ಒಪ್ಪಿಕೊಂಡಿದ್ದಾರೆ. ಕರ್ನಾಟಕದಲ್ಲಿ ದ್ವೇಷ ರಾಜಕಾರಣ ಈವರೆಗೆ ಇರಲಿಲ್ಲ. ದೂರುದಾರರು ಮಾನಸಿಕ ಅಸ್ವಸ್ಥೆ ಎಂದು ಗೃಹ ಸಚಿವರು ಹೇಳಿದ್ದರೂ, ಚುನಾವಣೆಯ ಬಳಿಕ ರಾಜಕೀಯ ದ್ವೇಷ ಸಾಧಿಸಲಾಗಿದೆ ಎಂದು ದೂರಿದರು.

Continue Reading

ಪ್ರಮುಖ ಸುದ್ದಿ

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Sapthami Gowda: ವಕೀಲ ಶಂಕರಪ್ಪ ಅವರ ಮೂಲಕ ನಟಿ ಸಪ್ತಮಿಗೌಡ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Sapthami Gowda
Koo

ಬೆಂಗಳೂರು: ನಟ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಬೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ವಕೀಲ ಶಂಕರಪ್ಪ ಅವರ ಮೂಲಕ ನಟಿ (Sapthami Gowda) ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಯುವ ಮತ್ತು ಶ್ರೀದೇವಿ ಬೈರಪ್ಪ ನಡುವಿನ ಆರೋಪ-ಪ್ರತ್ಯಾರೋಪಗಳಲ್ಲಿ ಸಪ್ತಮಿಗೌಡ ಹೆಸರು ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ತನ್ನ ವೃತ್ತಿ ಜೀವನದ ಪರಿಣಾಮ ಬೀರಲಿದೆ ಎಂದು ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಇನ್ಮುಂದೆ ನಟಿಯ ಬಗ್ಗೆ ಎಲ್ಲಿಯೂ ಮಾತನಾಡದಂತೆ ಲೀಗಲ್ ನೋಟಿಸ್ ನೀಡಲಾಗಿದೆ ಹಾಗೂ ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ರೂ. ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ನಟಿ ಸಪ್ತಮಿಗೌಡ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸಿಟಿ ಸಿವಿಲ್ ಕೋರ್ಟ್, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ | Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದರು. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ್ದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದರು. ಆ ಮೂಲಕ ಡಿವೋರ್ಸ್‌ ಪ್ರಕರಣವು ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿತ್ತು

ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಮರುತ್ತರ ನೀಡಿದ್ದ ಶ್ರೀದೇವಿ ಭೈರಪ್ಪ, ಹಲವು ಆರೋಪಗಳನ್ನು ಮಾಡಿದ್ದರು. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು.

ಇದನ್ನೂ ಓದಿ | Sapthami Gowda: ಲವ್‌ ಬ್ರೇಕಪ್‌ ಆಗಿದೆ, ಬಾಯ್‌ಫ್ರೆಂಡ್‌ ನನ್ನ ಜತೆ ಇಲ್ಲ ಎಂದ ಸಪ್ತಮಿ ಗೌಡ!

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದರು. ಹೀಗಾಗಿ ಇದೀಗ ದಂಪತಿ ನಡುವಿನ ವಿವಾದದಲ್ಲಿ ತಮ್ಮ ಹೆಸರನ್ನು ತರದಂತೆ ಸಪ್ತಮಿ ಗೌಡ ನೋಟಿಸ್‌ ನೀಡಿದ್ದಾರೆ.

Continue Reading

ವಿದೇಶ

Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Gold Heist: ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಚಿನ್ನಾಭರಣಗಳ ಮಳಿಗೆಗೆ ನುಗ್ಗಿದ 20 ಮುಸುಕುಧಾರಿ ಧರೋಡೆಕೋರರು, ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಜೂನ್‌ 12ರಂದು ಮಧ್ಯರಾತ್ರಿ ಇವರು ಮಳಿಗೆಗೆ ನುಗ್ಗಿದ್ದಾರೆ. ಮುಖದ ತುಂಬ ಮುಸುಕು ಧರಿಸಿದ್ದ, ಕೈಯಲ್ಲಿ ಸುತ್ತಿಗೆಗಳನ್ನು ಹಿಡಿದುಕೊಂಡೇ ಬಂದಿದ್ದ ದರೋಡೆಕೋರರು, ಅಂಗಡಿಯಲ್ಲಿ ಗ್ಲಾಸ್‌ಗಳನ್ನು ಒಡೆದು, ಅವಸರದಲ್ಲಿಯೇ ಆಭರಣಗಳನ್ನು ಬ್ಯಾಗ್‌ಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

Gold Heist
Koo

ವಾಷಿಂಗ್ಟನ್:‌ ಬ್ಯಾಂಕ್‌ಗೆ ನುಗ್ಗಿ ಕೋಟ್ಯಂತರ ರೂಪಾಯಿಯನ್ನು ದರೋಡೆ ಮಾಡುವ ಮನಿ ಹೈಸ್ಟ್‌ (Money Heist) ಎಂಬ ರೋಚಕ ವೆಬ್‌ ಸಿರೀಸ್‌ಅನ್ನು ನೀವು ನೋಡಿರಬಹುದು. ಮಾಸ್ಟರ್‌ ಪ್ಲಾನ್‌ ಮೂಲಕ ದರೋಡೆ ಮಾಡುವ ಸಿರೀಸ್‌ ಜಗತ್ತಿನಾದ್ಯಂತ ಖ್ಯಾತಿ ಗಳಿಸಿದೆ. ಆದರೆ, ಅಮೆರಿಕದಲ್ಲಿ ಮನಿ ಹೈಸ್ಟ್‌ ಮಾದರಿಯಲ್ಲಿಯೇ ಸುಮಾರು 20 ದರೋಡೆಕೋರರು ಚಿನ್ನಾಭರಣಗಳ ಮಳಿಗೆಗೆ ನುಗ್ಗಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ (Gold Heist) ಮಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಹೌದು, ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಚಿನ್ನಾಭರಣಗಳ ಮಳಿಗೆಗೆ ನುಗ್ಗಿದ 20 ಮುಸುಕುಧಾರಿ ಧರೋಡೆಕೋರರು, ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಜೂನ್‌ 12ರಂದು ಮಧ್ಯರಾತ್ರಿ ಇವರು ಮಳಿಗೆಗೆ ನುಗ್ಗಿದ್ದಾರೆ. ಮುಖದ ತುಂಬ ಮುಸುಕು ಧರಿಸಿದ್ದ, ಕೈಯಲ್ಲಿ ಸುತ್ತಿಗೆಗಳನ್ನು ಹಿಡಿದುಕೊಂಡೇ ಬಂದಿದ್ದ ದರೋಡೆಕೋರರು, ಅಂಗಡಿಯಲ್ಲಿ ಗ್ಲಾಸ್‌ಗಳನ್ನು ಒಡೆದು, ಅವಸರದಲ್ಲಿಯೇ ಆಭರಣಗಳನ್ನು ಬ್ಯಾಗ್‌ಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಇಡೀ ಕಳ್ಳತನದ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇಲ್ಲಿದೆ ದರೋಡೆಯ ವಿಡಿಯೊ

ದರೋಡೆಕೋರರು ಮೊದಲು ಜ್ಯುವೆಲರಿ ಸ್ಟೋರ್‌ನ ಬಾಗಿಲನ್ನು ಒದ್ದು, ಸುತ್ತಿಗೆಯಿಂದ ಹೊಡೆದು ಮುರಿದುಹಾಕಿದ್ದಾರೆ. ಏಕಕಾಲಕ್ಕೆ ಅವರು ಮಳಿಗೆಗೆ ನುಗ್ಗಿದ್ದು, ಪ್ರತಿಯೊಂದು ಗಾಜುಗಳನ್ನು ಒಡೆದು, ಚಿನ್ನ, ವಜ್ರದ ಆಭರಣಗಳನ್ನು ಬ್ಯಾಗ್‌ಗೆ ತುಂಬಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕೆಲವೇ ಕೆಲವು ನಿಮಿಷಗಳಲ್ಲಿ ಇಡೀ ಮಳಿಗೆಯ ಆಭರಣಗಳನ್ನು ಗುಡಿಸಿ ಗುಂಡಾಂತರ ಮಾಡಿದ್ದಾರೆ.

ಬಂಧಿತ ಆರೋಪಿಗಳು

ದರೋಡೆಕೋರರು ಹಲವು ಕಾರುಗಳಲ್ಲಿ ಬಂದು ದರೋಡೆ ಮಾಡಿದ್ದಾರೆ. ಕೂಡಲೇ ಪೊಲೀಸರು ಇವರ ಕಾರುಗಳನ್ನು ಬೆನತ್ತಿದರೂ ಕೇವಲ ಐವರು ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ. ಬಂಧಿತರಿಂದ ಕೆಲ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಐವರನ್ನೂ ಜೈಲಿಗೆ ಹಾಕಿದ್ದಾರೆ. ದರೋಡೆಕೋರರು ಕದ್ದಿರುವ ಚಿನ್ನಾಭರಣಗಳ ಒಟ್ಟು ಮೌಲ್ಯ ಎಷ್ಟು ಎಂಬುದು ಇದುವರೆಗೆ ಗೊತ್ತಿಲ್ಲ. ಮಳಿಗೆಯಲ್ಲಿ ಕಳ್ಳತನ ಮಾಡಲು ದರೋಡೆಕೋರರು ಹಲವು ದಿನಗಳಿಂದ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಉಳಿದ ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

Continue Reading
Advertisement
T20 World Cup 2024
T20 ವಿಶ್ವಕಪ್57 mins ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Hiriya vidwamsa Sagri Raghavendra Upadhyaya passed away
ಶ್ರದ್ಧಾಂಜಲಿ2 hours ago

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Government has no money to clean tankers no ability to provide clean drinking water says R Ashok
ಪ್ರಮುಖ ಸುದ್ದಿ2 hours ago

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

Union Minister Pralhad Joshi statement about increase in petrol and diesel prices in the state
ಕರ್ನಾಟಕ2 hours ago

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Bribe Case
ಕ್ರೈಂ2 hours ago

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

Minister dr G Parameshwar inaugurated the hasiru grama programme in Koratagere
ತುಮಕೂರು2 hours ago

Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

Giorgia Meloni
ವಿದೇಶ2 hours ago

Giorgia Meloni: ಇಟಲಿ ಪ್ರಧಾನಿ ಮೆಲೋನಿ ಕಾರ್ಮಿಕ ಮಹಿಳೆಯ ಮಗಳು! ಅವರ ಕುರಿತ ಕುತೂಹಲಕರ ಸಂಗತಿಗಳಿವು

Sapthami Gowda
ಪ್ರಮುಖ ಸುದ್ದಿ2 hours ago

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Gold Heist
ವಿದೇಶ3 hours ago

Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Petrol Diesel Price
ಕರ್ನಾಟಕ3 hours ago

Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ9 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌