Amrit Mahotsav | ಅಮರವಾಗಿದೆ ಅಮರ ಸುಳ್ಯ ದಂಗೆ-1837; ಬ್ರಿಟಿಷರ ವಿರುದ್ಧ ರೈತರ ಕೆಚ್ಚೆದೆಯ ಹೋರಾಟ - Vistara News

ಕರ್ನಾಟಕ

Amrit Mahotsav | ಅಮರವಾಗಿದೆ ಅಮರ ಸುಳ್ಯ ದಂಗೆ-1837; ಬ್ರಿಟಿಷರ ವಿರುದ್ಧ ರೈತರ ಕೆಚ್ಚೆದೆಯ ಹೋರಾಟ

ಸೂರ್ಯ ಮುಳುಗದ ಸಾಮ್ರಾಜ್ಯವೆಂದೇ ಪ್ರಸಿದ್ಧಿ ಪಡೆದಿದ್ದ ಬ್ರಿಟಿಷರನ್ನು ಬಗ್ಗುಬಡಿದು ಎರಡು ವಾರಗಳ ಕಾಲ ಆಂಗ್ಲರಿಂದ ವಿಮೋಚನೆಯನ್ನು ಗಳಿಸಿದ ಜನರ ಅಸೀಮ ಸಾಹಸದ ಕತೆ ಇದು. ಅಮರ ಸುಳ್ಯ ಹೋರಾಟದ ಬಗ್ಗೆ ಇಂದಿಗೂ ಹಲವಾರು ಯಶೋಗಾಥೆಗಳಿವೆ.

VISTARANEWS.COM


on

Amrit Mahotsav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara-Logo-Azadi-ka-amrit-Mahotsav

| ಗಂಗಾಧರ ಕಲ್ಲಪಳ್ಳಿ, ಸುಳ್ಯ
ಬ್ರಿಟಿಷರ ದಬ್ಬಾಳಿಕೆಯ ಸಂಕೊಲೆಯಲ್ಲಿ ನಲುಗಿದ ಭಾರತೀಯರ ಆಕ್ರೋಶದ ದನಿ ಮೊಳಗಿದ್ದು 1857ರಲ್ಲಿ ಎಂಬುದು ಇತಿಹಾಸದ ಪುಟಗಳನ್ನು ತೆರೆದಾಗ ನಮಗೆ ತಿಳಿಯುತ್ತದೆ. ಇದನ್ನು ಮೊದಲ ಸ್ವಾತಂತ್ರ್ಯ ಸಂಗ್ರಾಮ (Amrit Mahotsav) ಎಂದು ಇತಿಹಾಸಕಾರರು ಪರಿಗಣಿಸಿದ್ದಾರೆ. ಆದರೆ, ಇದಕ್ಕೂ ಎರಡು ದಶಕಗಳ ಮೊದಲೇ 1837ರಲ್ಲಿ ರೈತಾಪಿ ವರ್ಗದಿಂದ ರಾಜ್ಯದಲ್ಲಿ ನಡೆದಿತ್ತು ‘ಅಮರ ಸುಳ್ಯ ದಂಗೆ’ ಅಥವಾ ‘ಕೊಡಗು-ಕೆನರಾ ಬಂಡಾಯ’…

1837ರಲ್ಲಿ ನಡೆದ ಆ ಹೋರಾಟದಲ್ಲಿ ಬ್ರಿಟಿಷರನ್ನು ಸೋಲಿಸಿ ಮಂಗಳೂರಿನ ಬಾವುಟಗುಡ್ಡೆಯಲ್ಲಿ ವಿಜಯ ಪತಾಕೆಯನ್ನು ಹಾರಿಸಿ 13 ದಿನಗಳ ಕಾಲ ಮಂಗಳೂರನ್ನು ಆಳಿದ್ದರು. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವಾಗ ಅಮರ ಸುಳ್ಯ ಹೋರಾಟದ ನೆನಪುಗಳು ಶಾಶ್ವತವಾಗಿ ಉಳಿಯಲು ಯೋಜನೆ ರೂಪಿಸಲಾಗಿದೆ. ಅಂದಿನ ಹೋರಾಟದ ನೇತೃತ್ವ ವಹಿಸಿದ್ದ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಮಂಗಳೂರಿನಲ್ಲಿ ಸ್ಥಾಪಿಸಿರುವುದು ಅದರ ಪ್ರಮುಖ ಭಾಗ.

ಕ್ರಿ.ಶ.1799ರಲ್ಲಿ ನಡೆದ 4ನೇ ಆಂಗ್ಲೋ-ಮೈಸೂರು ಯುದ್ಧದ ರಣಾಂಗಣದಲ್ಲಿ ಟಿಪ್ಪು ಮಡಿದ ನಂತರ ಮಂಗಳೂರು ಸಂಪೂರ್ಣವಾಗಿ ಇಂಗ್ಲಿಷರ ವಶವಾಯಿತು. ಅದಾದ ಕೆಲವೇ ದಿನಗಳಲ್ಲಿ ವಿಟ್ಲದ ರವಿವರ್ಮ ನರಸಿಂಹ ದೊಂಬ ಹೆಗ್ಗಡೆ ತಾನು ಸ್ವತಂತ್ರ ರಾಜನೆಂದು ಘೋಷಿಸಿಕೊಂಡ, ಆದರೆ ಮಂಗಳೂರನ್ನು ಗೆಲ್ಲುವ ಆತನ ಉದ್ದೇಶ ವಿಫಲವಾಯಿತು. ಹೆಗ್ಗಡೆ ಮತ್ತು ಆತನ ಸೇನಾಧಿಕಾರಿಯನ್ನು ಬಂಧಿಸಿದ ಇಂಗ್ಲಿಷರು ಅವರಿಗೆ ಗಲ್ಲು ಶಿಕ್ಷೆ ನೀಡುತ್ತಾರೆ. ಮುಂದೆ ಕ್ರಿ.ಶ.1811ರಲ್ಲಿ ಮಂಗಳೂರು ಮತ್ತು ಸುತ್ತಲ ಗ್ರಾಮಗಳ ರೈತರು ಅಸಹಕಾರ ಚಳವಳಿಗೆ ಧುಮುಕಿದರು. ಶಾಂತ ರೀತಿಯ ಪ್ರತಿಭಟನೆಗೆ ಮಹತ್ತರವಾದ ಬದಲಾವಣೆಗಳಾಗದಿದ್ದರೂ ಅಲ್ಪಸ್ವಲ್ಪ ಪರಿಹಾರದ ದಾರಿಯನ್ನು ತೋರಿಸಿದ ಬ್ರಿಟಿಷರು ಹೋರಾಟವನ್ನು ತಣ್ಣಗಾಗಿಸಿದರು.

ಇದನ್ನೂ ಓದಿ | Amrit Mahotsav | ಬ್ರಿಟಿಷರ ವಿರುದ್ಧ ದಂಗೆ ಸಂಘಟಿಸಿದ್ದ ಅಪ್ಪಾಸಾಹೇಬ ಪಟವರ್ಧನ್‌

ಇದು ನಡೆದು 20 ವರ್ಷಗಳಾಗುತ್ತಿದ್ದಂತೆ ಕೆನರಾ ಜಿಲ್ಲೆಯ ಗಡಿಪ್ರದೇಶವಾದ ಇಂದಿನ ಶಿವಮೊಗ್ಗ ಜಿಲ್ಲೆಯ ನಗರ ಎಂಬ ಊರಿನಲ್ಲಿ ರೈತ ಹೋರಾಟವೊಂದು ಮೊಗ್ಗೊಡೆಯಿತು. ಮೈಸೂರು ಮುಮ್ಮುಡಿ ಕೃಷ್ಣರಾಜ ಒಡೆಯರ್‌ನ ಕಂದಾಯ ನೀತಿಯ ವಿರುದ್ಧ ನಡೆದ ಬಂಡಾಯವದು. ತಣ್ಣಗೆ ಆರಂಭವಾದ ಈ ‘ನಗರ ರೈತದಂಗೆ’ ಮುಂದೆ ಉಗ್ರ ಸ್ವರೂಪವನ್ನು ಪಡೆದುಕೊಂಡಿತು. ಇದೇ ಸಮಯದಲ್ಲಿ ಮಂಗಳೂರಿನ ರೈತರು ಕೂಡ ಬ್ರಿಟಿಷರನ್ನು ಪ್ರತಿಭಟಿಸುವ ದಾರಿಯನ್ನು ಹಿಡಿದರು. ಶಾಂತ ಸ್ವರೂಪದ ಪ್ರತಿಭಟನೆ ನಂತರ ದಿನಗಳಲ್ಲಿ ಹಿಂಸಾತ್ಮಕ ರೂಪ ಪಡೆಯಿತು. ಈ ವಿಶಿಷ್ಟ ಪ್ರತಿಭಟನೆಯು ‘ ಮಂಗಳೂರು ಕೂಟ ಹೋರಾಟ ‘ ಎಂದು ಪ್ರಸಿದ್ಧಿಯನ್ನು ಪಡೆದಿದೆ . ಈ ಹೋರಾಟದಲ್ಲಿ ಭಾಗಿಗಳಾದ ದೇರೆಬೈಲು ರಾಮಯ್ಯ, ಸಂಕು ಪೂಂಜ ಸೂರಪ್ಪ , ಕೃಷ್ಣರಾವ್ ಮೊದಲಾದವರನ್ನು ಬ್ರಿಟಿಷರು ಬಂಧಿಸಿ ಬಿಡುಗಡೆಗೊಳಿಸಿದರು, ಮುಂದೆ ಈ ಹೋರಾಟ ಅಂತ್ಯವಾಯಿತು.

ನಂತರ ನಡೆದ ಅತ್ಯಂತ ಪ್ರಮುಖ ಹೋರಾಟವೆಂದರೆ 1837ರಲ್ಲಿ ನಡೆದ ʼಅಮರಸುಳ್ಯ ದಂಗೆ’ ಅಥವಾ ʼಕೊಡಗು-ಕೆನರಾʼ ಬಂಡಾಯ ಎಂದು ಕರೆಯಲಾಗಿರುವ ಬ್ರಿಟಿಷ್ ವಿರೋಧಿ ಸಶಸ್ತ್ರ ಕದನ. ಈ ಹೋರಾಟ ಆರಂಭಗೊಳ್ಳಲು ಮೂಲ ಕಾರಣ, ಕೊಡಗಿನ ಹಾಲೇರಿ ವಂಶದ ಅರಸ ಚಿಕ್ಕವೀರರಾಜೇಂದ್ರ ಒಡೆಯನ ವಿರುದ್ಧ ಬ್ರಿಟಿಷರು ಸುಳ್ಳು ಆರೋಪಗಳನ್ನು ಹೊರಿಸಿ ಆತನನ್ನು ಕುತಂತ್ರದಿಂದ ಪದಚ್ಯುತಿಗೊಳಿಸಿ ಜನರ ಇಚ್ಛೆಗೆ ವಿರುದ್ಧವಾಗಿ ಕಾಶಿಗೆ ಗಡಿಪಾರು ಮಾಡಿದುದು.

ವ್ಯಗ್ರರಾದ ರೈತರು

ಚಿಕ್ಕವೀರರಾಜನ ಹಿರಿಯರು ಇಂಗ್ಲಿಷರಿಗೆ ಆಪ್ತರಾಗಿದ್ದರೂ ಆತ ಮಾತ್ರ ಅವರ ವಿರುದ್ಧ ಬಹಿರಂಗವಾಗಿ ತೊಡೆತಟ್ಟಿ ಪಂಥಾಹ್ವಾನ ನೀಡಿದ್ದ. ಶಿವಮೊಗ್ಗದ ನಗರ ದಂಗೆಗೆ ಬೆಂಬಲ ಕೊಟ್ಟಿದ್ದಲ್ಲದೆ, ಬೆಂಗಳೂರಿನ ಬ್ರಿಟಿಷ್ ಮಿಲಿಟಲಿ ದಂಡಿನಲ್ಲಿ ಕ್ಷೋಭೆಯನ್ನು ಹುಟ್ಟಿಸುವಲ್ಲಿ ಯಶಸ್ವಿಯಾಗಿದ್ದ. ಹೈದರಾಬಾದ್, ಪಂಜಾಬ್ ರಾಜರೊಡನೆ ಸೇರಿ ಬ್ರಿಟಿಷ್ ವಿರೋಧಿ ಒಕ್ಕೂಟವನ್ನು ರೂಪಿಸುವ ಪ್ರಯತ್ನ ನಡೆಸಿದ್ದ. ಇದೇ ಹೊತ್ತಲ್ಲಿ ಕೊಡಗಿನೊಳಗೆ ರಾಜಕುಟುಂಬದಲ್ಲಿದ್ದ ಆಂತರಿಕ ಭಿನ್ನಾಭಿಪ್ರಾಯವನ್ನು ಬಳಸಿ ಅವನನ್ನು ಸಿಂಹಾಸನದಿಂದ ಕೆಳಗಿಳಿಸಲಾಯಿತು. ಇದರಿಂದ ರಾಜನ ಆಪ್ತರಾದ ಒಂದು ವರ್ಗದ ರೈತರು ವ್ಯಗ್ರರಾದರು. ಅದು ಮುಂದೆ 1837ರ ಹೋರಾಟದ ಮೂಲದ್ರವ್ಯವಾಯಿತು.

ಕೆದಂಬಾಡಿ ರಾಮಯ್ಯ ಗೌಡ

ಆಶ್ರಮದಲ್ಲಿ ಶಸ್ತ್ರಾಸ್ತ್ರ ತರಬೇತಿ

ಹೋರಾಟವನ್ನು ಶಿಸ್ತುಬದ್ಧವಾಗಿ ಸಂಘಟಿಸಿದ ಸುಳ್ಯ ಉಬರಡ್ಕ ಗ್ರಾಮದ ಕೆದಂಬಾಡಿ ರಾಮಯ್ಯ ಗೌಡ ಎಂಬ ಪ್ರಭಾವಶಾಲಿಯಾದ ಶ್ರೀಮಂತ ಜಮೀನ್ದಾರ, ಜನನಾಯಕನಾಗಿ ಹೊರಹೊಮ್ಮುತ್ತಾರೆ. ಸಶಸ್ತ್ರ ಸಮರಕ್ಕೆ ನಾಯಕನೊಬ್ಬ ಅನಿವಾರ್ಯ, ಅಂತಹ ನಾಯಕ ರಾಜ ಮನೆತನಕ್ಕೆ ಸೇರಿದವನಾದರೆ ಜನಸಾಮಾನ್ಯರು ಭಾವನಾತ್ಮಕತೆಯಿಂದ ಆಪ್ತತೆಯಿಂದ ಸ್ವೀಕರಿಸುತ್ತಾರೆ ಎಂದು ತಿಳಿದಿದ್ದ ಇವರು, ಶನಿವಾರಸಂತೆ ಹೆಮ್ಮನೆಯಿಂದ ಪುಟ್ಟಬಸಪ್ಪ ಎಂಬ ತರುಣನನ್ನು ಕರೆತರುತ್ತಾರೆ. ಅವನಿಗೆ ಸನ್ಯಾಸಿಯ ವೇಷ ತೊಡಿಸುತ್ತಾರೆ. ‘ಕಲ್ಯಾಣಸ್ವಾಮಿ’ ಎಂಬ ಹೆಸರನ್ನು ಇಡುತ್ತಾರೆ. ಸನಿಹದ ಪೂಮಲೆ ಕಾಡಲ್ಲಿ ಆಶ್ರಮ ಕಟ್ಟಿಸಿ ನೆಲೆ ನಿಲ್ಲಿಸುತ್ತಾರೆ. ಈತ ಹಾಲೇರಿ ರಾಜವಂಶಸ್ಥ ಎಂಬ ಸುದ್ದಿ ಎಲ್ಲೆಡೆ ಹರಡುತ್ತದೆ. ಜನ ಆಶ್ರಮಕ್ಕೆ ಭೇಟಿ ಕೊಡುತ್ತಾರೆ. ಈ ಮೂಲಕ ಸುಳ್ಯದ ಸುತ್ತಲಿನ ಗ್ರಾಮಗಳ ಯುವಕರನ್ನು ಯುದ್ಧಕ್ಕೆ ಸನ್ನದ್ಧಗೊಳಿಸಿ, ಶಸ್ತ್ರಾಸ್ತ್ರ ತರಬೇತಿ ನೀಡಲಾಗುತ್ತದೆ.

1837ರ ಮಾರ್ಚ್ 30ರಂದು ಹೋರಾಟಕ್ಕೆ ಸಜ್ಜುಗೊಳ್ಳುತ್ತಾರೆ, ಕಲ್ಯಾಣಸ್ವಾಮಿಯನ್ನು ಪೂಮಲೆ ಕಾಡಿನ ಆಶ್ರಮದಿಂದ ಗೌರಪೂರ್ವಕವಾಗಿ ಕರೆದುಕೊಂಡು ಬರುತ್ತಾರೆ. ಈ ದಿನ ಕೆದಂಬಾಡಿ ರಾಮಯ್ಯ ಗೌಡನ ಮಗನ ಮದುವೆಯೆಂಬ ಯುದ್ಧಸನ್ನದ್ಧತೆಯ ಸಂಕೇತದ ಸುದ್ದಿಯನ್ನು ಸಾರಲಾಗಿರುತ್ತದೆ. ಜನ ಆಯುಧಪಾಣಿಗಳಾಗಿ ಕೆದಂಬಾಡಿ ರಾಮಯ್ಯ ಗೌಡರ ಮನೆಯ ಮುಂದಿನ ಗದ್ದೆಯಲ್ಲಿ ಸೇರುತ್ತಾರೆ. ಕನಿಷ್ಠ 2000 ಹೋರಾಟಗಾರರು ಅಲ್ಲಿ ಸೇರಿರುತ್ತಾರೆ. ಅದೇ ದಿನ ಪೆರಾಜೆ, ಸುಳ್ಯ, ಸುಬ್ರಹ್ಮಣ್ಯ, ಮಂಜ್ರಾಬಾದ್, ಬಿಸಲೆ ಮೊದಲಾದ ಕಡೆಗಳಲ್ಲಿ ಯುದ್ಧದ ನಿರೂಪಗಳನ್ನು (War proclamation ) ಪ್ರಕಟಿಸಲಾಗುತ್ತದೆ.

ಯುದ್ಧದ ನಾಯಕತ್ವದ ಪಟ್ಟ

ಕೊಡಗಿನ ದಿವಾನನಾಗಿದ್ದ ತುದಿಯಡ್ಕ ಲಕ್ಷ್ಮೀನಾರಾಯಣರ ತಮ್ಮನಾದ ಅಟ್ಲೂರು ರಾಮಪ್ಪಯ್ಯ ಸುಳ್ಯದ ಪ್ರಭಾವದ ವ್ಯಕ್ತಿಯಾಗಿದ್ದ. ಹೋರಾಟಕ್ಕೆ ಮೊದಲು ಬೆಂಬಲ ನೀಡಿದ್ದರೂ ಕೊನೆಗೆ ವಿರುದ್ಧ ದಿಕ್ಕಿಗೆ ವಾಲಿಕೊಂಡಿದ್ದ. ದಂಡು ಹೊರಡುವ ಮೊದಲು ಅವನನ್ನು ಕರೆತರಲು ಕೆದಂಬಾಡಿ ರಾಮಯ್ಯ ಗೌಡರು ತಂಡವೊಂದನ್ನು ರಚಿಸಿ ಪಯಸ್ವಿನಿ ನದಿಯ ಪಶ್ಚಿಮದ ದಡದಲ್ಲಿನ ಅಟ್ಲೂರಿಗೆ ಕಳುಹಿಸುತ್ತಾರೆ. ಆದರೆ ರಾಮಪ್ಪಯ್ಯನ ಜನ ಇವರ ವಿರುದ್ಧ ಕಾದಾಟ ನಿಲ್ಲುತ್ತಾರೆ. ಆತನನ್ನು ಬಂಧಿಸಿ ಕರೆತರುವುದು ಅವರಿಗೆ ಅನಿವಾರ್ಯವಾಗುತ್ತದೆ. ಇಂದು ಮದುವೆಗದ್ದೆಯೆಂದು ಕರೆಯುವ ಮನೆಯ ಮುಂಭಾಗದ ಗದ್ದೆಯಲ್ಲಿ ಕಲ್ಯಾಣಸ್ವಾಮಿಗೆ ರಾಮಯ್ಯಗೌಡರ ನೇತೃತ್ವದಲ್ಲಿ ನಡೆದ ಕಾರ್ಯಯೋಜನೆಯಂತೆ ಯುದ್ಧದ ನಾಯಕತ್ವದ ಪಟ್ಟವನ್ನು ಕಟ್ಟಲಾಗುತ್ತದೆ.

ಇದನ್ನೂ ಓದಿ | Amrit Mahotsav | ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕೂ ಆ್ಯಪ್ ವಿಶೇಷ ಅಭಿಯಾನ

ಕಲ್ಯಾಣಸ್ವಾಮಿಗೆ ಬಣ್ಣದ ಕುದುರೆಯನ್ನು ರಾಜಾಶ್ವವಾಗಿ ಅರ್ಪಿಸಲಾಗುತ್ತದೆ. ಜತೆಗೆ ಪ್ರೀತಿ, ಗೌರವದ ಪರಾಕಾಷ್ಟೆ ಎಂಬಂತೆ ಮಿತ್ತೂರು ನಾಯರ್ ದೈವದ ಕೆಂಪು ಕೊಡೆಯನ್ನು ಹಿಡಿಯುತ್ತಾರೆ. ಮಿತ್ತೂರ್ ನಾಯರ್‌ ಸುಳ್ಯ ಪರಿಸರದ ಅತ್ಯಂತ ಕಾರಣಿಕದ ದೈವವೆಂಬ ನಂಬಿಕೆ ಇಂದಿಗೂ ಪ್ರಚಲಿತದಲ್ಲಿದೆ. ಇಂತಹ ದೈವದ ಛತ್ರಚಾಮರವನ್ನು ಮನುಷ್ಯ ಮಾತ್ರನೊಬ್ಬನಿಗೆ ಹಿಡಿಯುವುದೆಂದರೆ ಈ ಹೋರಾಟದ ಬಗ್ಗೆ ಜನ ಸಾಮಾನ್ಯರಿಗಿದ್ದ ಅರ್ಪಣಾ ಮನೋಭಾವ ಅರ್ಥವಾಗುತ್ತದೆ. ಮದುವೆ ಗದ್ದೆಯಲ್ಲಿ ಕ್ರಿ.ಶ.1837 ಮಾರ್ಚ್ 30 ರಂದು ರೈತ ಸೈನ್ಯ ಜಮಾವಣೆಯಾದಲ್ಲಿಂದ ಕೆದಂಬಾಡಿ ರಾಮಯ್ಯ ಗೌಡರ ನಾಯಕತ್ವದ ಗುಣಗಳು ಅನಾವರಣಗೊಳ್ಳುತ್ತಾ ಹೋಗುತ್ತವೆ. ಮೊದಲು ಈ ದಂಡು ಬೆಳ್ಳಾರೆಯತ್ತ ಸಾಗಿ ಕಂಪನಿಯ ಖಜಾನೆಯನ್ನು ಸ್ವಾಧೀನಕ್ಕೆ ಪಡೆದುಕೊಳ್ಳುತ್ತದೆ. ಆಗ ಸ್ಥಳೀಯ ಶಿರಸ್ತೇದಾರ ದೇವಪ್ಪನ ಪ್ರತಿಭಟನೆ ನಿಷ್ಪಲಗೊಳ್ಳುತ್ತದೆ.

೪ ತಂಡಗಳಾಗಿ ವಿಂಗಡನೆ

ಪೈಶ್ಕಾರನ ಕಚೇರಿಯ ಮುಖ್ಯ ಶಿರಸ್ತೇದಾರ, ತಹಸೀಲ್ದಾರ್ ಇನ್ನಿತರ ಉದ್ಯೋಗಿಗಳನ್ನು ಸೆರೆ ಹಿಡಿಯುತ್ತಾರೆ. ಬೆಳ್ಳಾರೆಯಲ್ಲಿ 3000ಕ್ಕಿಂತಲೂ ಹೆಚ್ಚು ಹೋರಾಟಗಾರರು ಜಮಾವಣೆಗೊಂಡಿದ್ದರು. ದಂಡಿನಲ್ಲಿ ಕುದುರೆ ಮತ್ತು ಆನೆಗಳೂ ಇದ್ದವು. ಬೆಳ್ಳಾರೆಯಲ್ಲಿ ಹೋರಾಟದ ಸೇನಾಳುಗಳನ್ನು ನಾಲ್ಕು ತಂಡಗಳಾಗಿ ವಿಂಗಡಿಸಲಾಗುತ್ತದೆ. 800 ಜನರ ಮೊದಲ ದಂಡು ಕುಡೆಕಲ್ಲು ಪುಟ್ಟ ಗೌಡ ಹಾಗೂ ಕುಂಚಡ್ಕ ರಾಮ ಗೌಡರ ನೇತೃತ್ವದಲ್ಲಿ ಕುಂಬ್ಳೆ- ಕಾಸರಗೋಡು ಮಂಜೇಶ್ವರಗಳನ್ನು ಗೆಲ್ಲಲು ಕಳುಹಿಸಲಾಯಿತು. ಎರಡನೇ ದಳ ಬಂಟ್ವಾಳ ಕಾರ್ಕಳಕ್ಕೆ ಮತ್ತು ಮೂರನೇ ತಂಡವು ಕೂಜುಗೋಡು ಮಲ್ಲಪ್ಪ ಗೌಡ ಹಾಗೂ ಅಪ್ಪಯ್ಯ ಗೌಡರ ಮುಂದಾಳುತನದಲ್ಲಿ ಉಪ್ಪಿನಂಗಡಿ – ಬಿಸಲೆ- ಐಗೂರಿಗೆ ಹೋಗುತ್ತದೆ. ಕಲ್ಯಾಣಸ್ವಾಮಿ, ಕೆದಂಬಾಡಿ ರಾಮಯ್ಯ ಗೌಡ, ಗುಡ್ಡೆಮನೆ ಅಪ್ಪಯ್ಯ ಗೌಡ ಹಾಗೂ ಕುಕ್ಕುನೂರು ಚೆನ್ನಯ್ಯ ಇವರಿದ್ದ ಪ್ರಧಾನ ಸೈನ್ಯವು ಮಂಗಳೂರಿಗೆ ಹೊರಟಿತು. ಜನಪ್ರಿಯವಾಗಿ ಕರೆಯಲಾಗುತ್ತಿದ್ದ ಮಂಗಳೂರಿಗೆ ಹೊರಟ ಮುಖ್ಯ ಸೈನ್ಯ ಮೊದಲು ಪುತ್ತೂರಿಗೆ ಲಗ್ಗೆ ಇಟ್ಟಿತು.

ಕಾಸರಗೋಡು ಕದನ

ಜನಸಮರದ ಸುದ್ದಿ ತಿಳಿದ ಕೆನರಾ ಜಿಲ್ಲೆಯ ಕಲೆಕ್ಟರ್ ಲೆವಿನ್ ಮಂಗಳೂರಿನಿಂದ ಹೊರಟು ತುಕಡಿಯೊಂದಿಗೆ ಪುತ್ತೂರಿಗೆ ಆಗಮಿಸಿದ. ಪುತ್ತೂರಲ್ಲಿ ಕಂಪನಿ ಕಚೇರಿ ಸುಲಭವಾಗಿ ಹೋರಾಟಗಾರರ ವಶಕ್ಕೆ ಬಂತು. ಅಲ್ಲಿನ ಉದ್ಯೋಗಿಗಳು ಬಂಧನಕ್ಕೊಳಗಾದರು. ಎರಡು ದಿನ ದೂರದಲ್ಲಿದ್ದು ಹೊಂಚು ಹಾಕಿದ ಲೆವಿನ್ ಯುದ್ಧ ನಡೆಸಿದರೆ ತನಗೇ ಅಪಾಯ ಎಂದು ತಿಳಿದು ಏಪ್ರಿಲ್ 2ರಂದು ರಾತ್ರಿ ಅಲ್ಲಿಂದ ಮಂಗಳೂರು ಕಡೆ ಕಾಲ್ಕಿತ್ತ. ಪುತ್ತೂರಲ್ಲಿ ಅದಾಗಲೇ ಅಪಾರ ಪ್ರಮಾಣದ ಸಶಸ್ತ್ರ ಜನ ಸೇರಿದ್ದರು. ಅಲ್ಲಿ ಅಪಾಯವನ್ನು ಎದುರು ಹಾಕಿಕೊಳ್ಳುವುದಕ್ಕಿಂತ ದುರ್ಬಲ ಮಂಗಳೂರನ್ನು ರಕ್ಷಿಸಲು ಮುಂದಾಗುವುದು ಒಳಿತೆಂದು ಲೆವಿನ್ ಭಾವಿಸಿದ. ಮಂಗಳೂರಲ್ಲಿ ಸಹ ಅಲ್ಲಿನ ನಿವಾಸಿಗಳ ಅಸಹಕಾರ ಲೆವಿನ್ ಗಮನಕ್ಕೆ ಬಂತು. ಪುತ್ತೂರಿಂದ ಮಂಗಳೂರಿಗೆ ಹೋಗುವ ದಾರಿಯಲ್ಲಿ ಲೆವಿನ್ ಸೈನಿಕರನ್ನು ಒಟ್ಟು ಸೇರಿಸಿ ಬಂದೂಕು ಮತ್ತು ಮದ್ದುಗುಂಡುಗಳನ್ನು ಕೊಟ್ಟರೂ ಅವರು ತಮಗೆ ಕೊಟ್ಟ ಕೆಲಸವನ್ನು ನಿರ್ವಹಿಸುವ ಬದಲು ಯಾರಿಗೂ ತಿಳಿಸದೆ ನಾಪತ್ತೆಯಾದರು. ಈ ಕಲೆಕ್ಟರ್ ಮಂಗಳೂರಿಗೆ ತಲಪುವ ಹೊತ್ತಿಗೆ ಊರು ನಿರ್ಜನವಾಗಿತ್ತು. ಅಲ್ಲಿನ ಜನ ಹೋರಾಟಗಾರರೊಂದಿಗೆ ಸಂಪರ್ಕದಲ್ಲಿರುವುದು ಅವನ ಗಮನಕ್ಕೆ ಬಂದಿತು. ನಗರದ ಕಾವಲು ಪಡೆ ಸಹ ಅವರೊಂದಿಗೆ ಸೇರಿಕೊಂಡಿತ್ತು.

ಒಂದೆಡೆ ಹೋರಾಟಗಾರರೊಂದಿಗೆ ಕಾದಾಡುತ್ತಾ, ಇನ್ನೊಂದೆಡೆ ಯುರೋಪಿಯನ್ ಕುಟುಂಬಗಳನ್ನು ಮಂಗಳೂರಿನಿಂದ ತೆರವು ಮಾಡಿ ಅಪಾಯಕಾರಿಯಲ್ಲದ ಸ್ಥಳಕ್ಕೆ ಕಳುಹಿಸಲು ಕಂಪನಿಯ ಅಧಿಕಾರಿಗಳು ತೀರ್ಮಾನಿಸಿದ್ದರು. ಏಪ್ರಿಲ್ 5ರಂದು ಅವರನ್ನು ಹಡಗಿಗೆ ಹತ್ತಿಸಲು ನಿರ್ಧರಿಸಿದ್ದರೂ ಅದು ಸಾಧ್ಯವಾಗಲಿಲ್ಲ. ಈ ನಡುವೆ ಖಜಾನೆಯನ್ನು ಸಂರಕ್ಷಿಸುವ ಪ್ರಯತ್ನದಿಂದ ಅವರ ಉಳಿದ ಕೆಲಸಕ್ಕೂ ಅಡಚಣೆಯಾಯಿತು. ಕೊನೆಗೂ ಆ ಸಾಹಸವನ್ನು ಕೈಬಿಡಬೇಕಾಯಿತು. ಅಂತೂ ಇಂತೂ ಏಪ್ರಿಲ್ 6 ಮತ್ತು 7 ರಂದು ಒಂದಷ್ಟು ಜನ ಮಂಗಳೂರು ತೊರೆದು ಕಣ್ಣನೂರಿಗೆ ಪಲಾಯನ ಮಾಡಿದರು. 1837ರ ಹೋರಾಟದ ಸೈನ್ಯವು ಮಂಗಳೂರಿನ ಕಡೆ ಸಾಗುತ್ತಿದ್ದಂತೆ ಅಪಾರವಾದ ಜನಬೆಂಬಲ, ನೆರವು ದೊರಕುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ಮಂಜಯ್ಯ ಹೆಗ್ಗಡೆ ಫಿರಂಗಿ, ಕುದುರೆ ಹಾಗೂ ಅಪಾರ ಪ್ರಮಾಣದ ಹಣವನ್ನು ನೀಡುತ್ತಾರೆ. ನಂದಾವರದಲ್ಲಿದ್ದ ಬಂಗಾಡಿ ಅರಸು ಮನೆತನದ ಲಕ್ಷ್ಮಪ್ಪ ಬಂಗರಸ ದೊಡ್ಡ ಸಂಖ್ಯೆಯ ಯೋಧರೊಂದಿಗೆ ನೇರವಾಗಿ ಯುದ್ಧಕ್ಷೇತ್ರಕ್ಕೆ ಧಾವಿಸುತ್ತಾರೆ. ಉಪ್ಪಿನಂಗಡಿಯಲ್ಲಿ ಕಂಪನಿಯ ಉದ್ಯೋಗಿ ಮಂಜ ದಂಡಿಗೆ ಜನರನ್ನು ಜಮಾವಣೆಗೊಳಿಸುತ್ತಾರೆ. ಬೆಳ್ಳಾರೆಯಿಂದ ಮಾರ್ಚ್ 30ರಂದು ಕಾಸರಗೋಡನ್ನು ಲಗ್ಗೆ ಹಾಕಲು ಹೊರಟ ತಂಡವು ಅದರಲ್ಲಿ ಯಶಸ್ಸನ್ನು ಕಂಡಿತು.

ಕಾಸರಗೋಡು, ಕುಂಬ್ಳೆ, ಮಂಜೇಶ್ವರಗಳನ್ನು ಗೆದ್ದ ಆ ರೈತರು ಪುತ್ತೂರಿನಿಂದ ಸೇನೆಯು ಮಂಗಳೂರು ಸೇರುವ ಸಮಯಕ್ಕೆ ಸರಿಯಾಗಿ ಅಲ್ಲಿಗೆ ತಲುಪಿತು. ಈ ನಡುವೆ ಚಂದ್ರಗಿರಿ ಫೆರಿ, ಬಿಸಿಲೆ ಪಾಸ್ ಮತ್ತಿತರ ದಾರಿಗಳ ಮೂಲಕ ನಡೆಯುತ್ತಿದ್ದ ಕಂಪನಿಯ ಟಪಾಲು ವ್ಯವಸ್ಥೆಯನ್ನು ಸಂಪೂರ್ಣವಾಗಿ ವಿಫಲಗೊಳಿಸಲಾಗಿತ್ತು. ಹೋರಾಟಗಾರರು ಪ್ರತಿಯೊಂದು ಉಕ್ಕಡದಲ್ಲಿಯೂ, ಪ್ರತಿಯೊಂದು ಗಡಿಯಲ್ಲಿಯೂ ಕಾವಲು ಪಡೆಯನ್ನು ನಿಯೋಜಿಸಿದ್ದರು. ಉದ್ದೇಶಿತ ಹೋರಾಟ ಪ್ರಥಮ ಹಂತದಲ್ಲಿ ಅಭೂತಪೂರ್ವ ಜಯವನ್ನು ಗಳಿಸಿ ಸುಳ್ಯ, ಸುಬ್ರಹ್ಮಣ್ಯ , ಬಿಸಲೆ, ಉಪ್ಪಿನಂಗಡಿ, ಬೆಳ್ತಂಗಡಿ, ಕುಂಬ್ಳೆ , ಕಾಸರಗೋಡು, ಮಂಜೇಶ್ವರ, ಬಂಟ್ವಾಳ, ಮುಲ್ಕಿ, ಸುರತ್ಕಲ್, ಪುತ್ತೂರು ಈ ಎಲ್ಲ ಊರುಗಳೂ ರೈತಸೈನ್ಯದ ಕೈವಶವಾಗುತ್ತವೆ. ಕೊನೆಗೆ ನಡೆದ ಮಂಗಳೂರು ಆಕ್ರಮಣದಲ್ಲಿ ಕೆದಂಬಾಡಿ ರಾಮಯ್ಯ ಗೌಡರು ಮತ್ತಿತರರು ಅಪ್ರತಿಮ ಹೋರಾಟದಲ್ಲಿ ಭಾಗಿಯಾಗುತ್ತಾರೆ. ಕೆನರಾ ಜಿಲ್ಲೆಯ ಕೇಂದ್ರಸ್ಥಾನ ಪತನಗೊಳ್ಳುತ್ತದೆ. ಆ ಸಮಯದಲ್ಲಿ ಸಂಗ್ರಾಮದ ಯೋಧರ ಸಂಖ್ಯಾಬಲ 10 ರಿಂದ 12 ಸಾವಿರದಷ್ಟು ಇತ್ತು ಎಂದು ಬ್ರಿಟಿಷ್ ದಾಖಲೆಗಳು ತಿಳಿಸುತ್ತವೆ.

ಮಂಗಳೂರನ್ನು ಆಕ್ರಮಿಸಿದ ಹೋರಾಟಗಾರರ ಸೈನ್ಯ ಮೊದಲು ಮಾಡಿದ ಕೆಲಸವೆಂದರೆ ಲೈಟ್‌ಹೌಸ್‌ ಪ್ರದೇಶದಲ್ಲಿದ್ದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ 7 ಬಾವುಟವನ್ನು ಕೆಳಗಿಳಿಸಿ ಹಾಲೇರಿ ರಾಜಲಾಂಛನದ ಧ್ವಜವನ್ನು ಹಾರಿಸಲಾಗುತ್ತದೆ. ಹೋರಾಟದ ಮುಖ್ಯಸ್ಥರಲ್ಲೊಬ್ಬನಾದ ಗುಡ್ಡೆಮನೆ ತಮ್ಮಯ್ಯರು ರಾಮಯ್ಯ ಗೌಡರ ಸೂಚನೆಗೆ ಅನುಗುಣವಾಗಿ ಈ ಕಾರ್ಯವನ್ನು ನೆರವೇರಿಸಿ ವಿಜಯದ ಸಂಕೇತವನ್ನು ಸಾರುತ್ತಾರೆ. ಅಂದಿನಿಂದ ಮಂಗಳೂರಿನ ಈ ಉನ್ನತ ಮತ್ತು ಪ್ರಮುಖ ಪ್ರದೇಶವು “ಬಾವುಟ ಗುಡ್ಡ” ಎಂಬ ಪ್ರಖ್ಯಾತಿಯನ್ನು ಪಡೆದುಕೊಳ್ಳುತ್ತದೆ. ನಂತರ ಸೈನ್ಯವು ಇಂಗ್ಲಿಷರ ಕಟ್ಟಡ, ಕುರುಹುಗಳನ್ನು ಸುಟ್ಟು ಹಾಕುತ್ತದೆ. ಸೆರೆಮನೆಯನ್ನು ಒಡೆದು, ಬ್ರಿಟಿಷ್ ನ್ಯಾಯವ್ಯವಸ್ಥೆಯಲ್ಲಿ ವಿನಾಕಾರಣ ಶಿಕ್ಷೆಗೆ ಈಡಾಗಿದ್ದ ಸ್ಥಳೀಯ ಜನರನ್ನು ಮುಕ್ತಗೊಳಿಸಲಾಗುತ್ತದೆ. ಅವರು ಸ್ವಂತ ಇಚ್ಛೆಯಿಂದ ಸೈನ್ಯಕ್ಕೆ ಸೇರ್ಪಡೆಗೊಳ್ಳುತ್ತಾರೆ. ನಂತರ ಮಂಗಳೂರಿನ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತದೆ. ಆಡಳಿತವನ್ನು ವಹಿಸಿಕೊಂಡ ಹೋರಾಟಗಾರರು ರೈತರಿಗೆ ಕಂದಾಯ ವಿನಾಯಿತಿಯನ್ನು ಘೋಷಿಸುತ್ತಾರೆ. ಮಂಗಳೂರಿನ ವರ್ತಕರ ಬೆಂಬಲವನ್ನು ಪಡೆದುಕೊಳ್ಳುತ್ತಾರೆ. ಎಲ್ಲವೂ ಸುಗಮವಾಗಿ ನಡೆಯುತ್ತದೆ.

ರೈತಸೇನೆಯ ಕಾದಾಟ ಕೊನೆಗೂ ಫಲಪ್ರದವಾಗಲಿಲ್ಲ

ಮಂಗಳೂರನ್ನು ಭದ್ರಪಡಿಸಿದ ನಂತರ ಹೋರಾಟಗಾರರ ಹಲವು ಪ್ರಮುಖರು ಮಡಿಕೇರಿ ಪಟ್ಟಣಕ್ಕೆ ಲಗ್ಗೆ ಹಾಕಲು ಸುಳ್ಯ, ಸುಬ್ರಹ್ಮಣ್ಯದ ಕಡೆ ಹಿಂದಿರುಗುತ್ತಾರೆ. ಕೂಜುಗೋಡು ಅಪ್ಪಯ್ಯ ಗೌಡ ಮತ್ತು ಕೂಜುಗೋಡು ಮಲ್ಲಪ್ಪ ಗೌಡ ಇವರ ನೇತೃತ್ವದಲ್ಲಿ ಬಿಸಿಲೆ ಘಾಟಿಯ ಮುಖಾಂತರ ರೈತಸೈನ್ಯ ಮಡಿಕೇರಿಯ ಕಡೆ ಸಾಗಿತು. ಬಲಮುರಿಯ ಗುಡ್ಡೆಮನೆ ಅಪ್ಪಯ್ಯ ಗೌಡ ಮಡಿಕೇರಿಗೆ ಮುತ್ತಿಗೆ ಹಾಕಲು ಜನರನ್ನು ಒಟ್ಟು ಸೇರಿಸಲು ಪಾಡಿ ನಾಲ್ಕುನಾಡಿನ ಕಡೆ ತೆರಳಿದರು. ಆದರೆ ಅಷ್ಟು ಹೊತ್ತಿಗಾಗಲೇ ಮೇಜರ್ ಡ್ರಾಯರ್‌ನ ಬೆಟಾಲಿಯನ್‌ ಪಾಂಡವಪುರದಿಂದ ಮಡಿಕೇರಿ ತಲುಪಿಯಾಗಿತ್ತು. ಮಡಿಕೇರಿಯ ಉತ್ತರ ದಿಕ್ಕಿನ ಉಕ್ಕಡದ ಬಳಿ ಉಗ್ರವಾಗಿ ಗುಂಡಿನ ಕಾಳಗ ನಡೆಯಿತು. ಆದರೆ ರೈತಸೇನೆಯ ಕಾದಾಟ ಕೊನೆಗೂ ಫಲಪ್ರದವಾಗಲಿಲ್ಲ. ಗುಡ್ಡೆಮನೆ ಅಪ್ಪಯ್ಯ ಗೌಡ ಮತ್ತಿತರರ ಕೆಚ್ಚೆದೆಯ ಪ್ರತಾಪವು ಸಾಫಲ್ಯವನ್ನು ಪಡೆಯಲಿಲ್ಲ. ಸಂಗ್ರಾಮದಲ್ಲಿ ವೀರೋಚಿತ ಸೋಲು ಎದುರಾಯಿತು. ಅತ್ತ ಮಂಗಳೂರಿನ ಸಹಾಯಕ್ಕೆ ಮುಂಬೈನಿಂದ ಸೈನ್ಯ , ಮದ್ದುಗುಂಡು, ಸಂಗ್ರಾಮ ಸಾಧನಗಳು ಬರುವ ವ್ಯವಸ್ಥೆಯಾಯಿತು. ಸೈನಿಕರನ್ನೂ, ಸಾಮಾನು ಸರಂಜಾಮನ್ನು ಒಯ್ಯಲು ಜಹಜುಗಳು ಸಿದ್ಧವಾದವು. ಧಾರವಾಡ, ಬೆಳಗಾವಿಯಿಂದ ಸೈನ್ಯ ಮಂಗಳೂರಿಗೆ ಹೊರಟವು. ಕೆನರಾ ಸೈನ್ಯಗಳ ನಾಯಕ ಬ್ರಿಗೇಡಿಯರ್ ಅಲನ್‌ಗೆ ಮಂಗಳೂರಿನ ಸಮಾಚಾರ ಹೋಯಿತು. ಕೂಡಲೇ ಕರ್ನಲ್ ಗ್ರೀನ್ ನಾಯಕತ್ವದಲ್ಲಿ ಸೈನ್ಯವನ್ನು ಮಂಗಳೂರಿಗೆ ಕಳುಹಿಸಿಸಲಾಯಿತು. ಮುಂಬೈ ಕಡೆಯಿಂದಲೂ ಸೈನ್ಯ ಬಂತು.

ಇದನ್ನೂ ಓದಿ | Amrit Mahotsav | ದೆಹಲಿ ಕೆಂಪುಕೋಟೆ ಮೇಲೆ ಹಾರಾಡೋದು ಧಾರವಾಡದಲ್ಲಿ ತಯಾರಾದ ಧ್ವಜ!

ಬ್ರಿಟಿಷ್‌ ಮೇಲುಗೈ

ಏಪ್ರಿಲ್ 16ರ ವೇಳೆಗೆ ಬ್ರಿಟಿಷ್ ಅಧಿಕಾರಿಗಳೆಲ್ಲ ಚರ್ಚಿಸಿ ಹೋರಾಟಗಾರರನ್ನು ಎದುರಿಸುವ ನಿಶ್ಚಯ ಮಾಡಿದರು. 1200 ಮಂದಿ ಯುರೋಪಿಯನ್ನರು ಮತ್ತು ಸಿಪಾಯಿಗಳ ನೇತೃತ್ವವನ್ನು ಗ್ರೀನ್ ವಹಿಸಿದ ಮೇಜರ್ ಎವರೆಸ್ಟನೂ ಮುಂಬಯಿ ಸೈನ್ಯದೊಂದಿಗೆ ಬಂದು ಸೇರಿಕೊಂಡ. ಹಲವು ಕಡೆ ಬ್ರಿಟಿಷರ ಸುಸಜ್ಜಿತ ಸೇನೆಗೂ ರೈತಸೈನ್ಯಕ್ಕೂ ನಡುವೆ ಕಾಳಗ ನಡೆಯಿತು. ಭೀಕರ ಕದನವನ್ನು ನಡೆಸಿದರೂ ಹೋರಾಟಗಾರರಿಗೆ ಮಂಗಳೂರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗೆ ವಿವಿಧ ಪ್ರದೇಶಗಳಲ್ಲಿ ಸೋಲು ಹಿಂಬಾಲಿಸಿತು. ಪ್ರಮುಖ ನಾಯಕರು ಒಬ್ಬೊಬ್ಬರಾಗಿ ಬ್ರಿಟಿಷರ ಸೆರೆಯಾದರು. ಸ್ಥಳೀಯ ಗೇಣಿಕಾರರ ನೆರವಿನಿಂದ ಇಂಗ್ಲಿಷರು ಹೋರಾಟಗಾರರ ವಿರುದ್ಧ ಮೇಲುಗೈ ಸಾಧಿಸಲು ಸಾಧ್ಯವಾಯಿತು. ಪುಟ್ಟಬಸಪ್ಪ ತನ್ನ ಸ್ವಂತ ಊರು ಹೆಮ್ಮನೆಯಲ್ಲಿ ಸೆರೆಯಾದರೆ, ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಮಡಿಕೇರಿಯಲ್ಲಿ ವಶಕ್ಕೆ ಪಡೆದುಕೊಳ್ಳಲಾಯಿತು. ಉಪ್ಪಿನಂಗಡಿ ಮಂಜ ಮತ್ತು ಲಕ್ಷ್ಮಪ್ಪ ಬಂಗರಸ ಮಂಗಳೂರಿನಲ್ಲಿ ಬಂಧಿಸಲ್ಪಡುತ್ತಾರೆ. ಈ ನಡುವೆ ಶಿವಮೊಗ್ಗದ ನಗರ ಪ್ರಾಂತದ ಹೋರಾಟಗಾರರ ಬೆಂಬಲದಿಂದ ಮತ್ತೆ ಸೈನ್ಯವನ್ನು ಆಯೋಜಿಸಲು ಹೊರಟಿದ್ದ ಕೆದಂಬಾಡಿ ರಾಮಯ್ಯ ಗೌಡರನ್ನು ಕಾರ್ಕಳದ ಸಮೀಪ ಕಬ್ಬನಾಲೆಯಲ್ಲಿ ಸೆರೆಹಿಡಿಯಲಾಯಿತು.

ಬಿಕರ್ನಕಟ್ಟೆಯಲ್ಲಿ ಗಲ್ಲು

ಕ್ರಿ.ಶ. 1837ರ ಹೋರಾಟಕ್ಕೆ ಸಂಬಂಧಿಸಿದಂತೆ ಒಟ್ಟು 1115 ಜನರನ್ನು ಬಂಧಿಸಲಾಗಿತ್ತು. ಅವರಲ್ಲಿ 12 ಮಂದಿಯನ್ನು ಕೋರ್ಟ್‌ ಮಾರ್ಷಲ್‌ಗೆ ಒಳಪಡಿಸಲಾಯಿತು. ವಿಶೇಷ ಆಯೋಗದ ಮುಂದೆ 54 ಕೇಸು ನಡೆದಿತ್ತು‌, ಅಲ್ಲಿ ಒಟ್ಟು 416 ಜನರ ವಿಚಾರಣೆ ನಡೆಸಲಾಗಿತ್ತು. ಕ್ರಿಮಿನಲ್ ನ್ಯಾಯಾಲಯದಲ್ಲಿ 133 ಜನರ ವಿಚಾರಣೆ ನಡೆಸಲಾಯಿತು. 35 ವಿಚಾರಣಾಧೀನ ಕೈದಿಗಳು ಸೆರೆಮನೆ ವಾಸದಲ್ಲಿದ್ದಾಗಲೇ ಮೃತಪಟ್ಟಿದ್ದರು. ಕೆಲವರನ್ನು ಮುಚ್ಚಳಿಕೆ ಪಡೆದು ಬಿಡಲಾಯಿತು. ಎಲ್ಲ ಬಂದಿಗಳನ್ನು ಸೆರೆಮನೆಯಲ್ಲಿಡಲು ಸೂಕ್ತ ವ್ಯವಸ್ಥೆ ಇರಲಿಲ್ಲ. 1837ರ ಹೋರಾಟದಲ್ಲಿ ಭಾಗವಹಿಸಿದ ಲಕ್ಷ್ಮಪ್ಪ ಬಂಗರಸನನ್ನು 1837ರ ಮೇ 23 ರಂದು, ಉಪ್ಪಿನಂಗಡಿಯ ಮಂಜನನ್ನು ಮೇ 30 ರಂದು ಮತ್ತು ಕಲ್ಯಾಣಸ್ವಾಮಿ ಎಂಬ ಹೆಸರಿನ ಪುಟ್ಟಬಸಪ್ಪನನ್ನು ಜೂನ್ 19ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಗಲ್ಲಿಗೇರಿಸಲಾಯಿತು. ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಅದೇ ವರ್ಷ ಅಕ್ಟೋಬರ್ 31ರಂದು ಮಡಿಕೇರಿ ಕೋಟೆಯೊಳಗೆ ನೇಣುಗಂಬಕ್ಕೆ ಏರಿಸಲಾಯಿತು.

ಕೆದಂಬಾಡಿ ರಾಮಯ್ಯ ಗೌಡ, ಅವರ ಮಗ ಸಣ್ಣಯ್ಯ ಗೌಡ, ಚೆಟ್ಟಿ ಕುಡಿಯ, ಕುಕ್ಕುನೂರು ಚೆನ್ನಯ್ಯ, ಕೂಜುಗೋಡು ಮಲ್ಲಪ್ಪ ಗೌಡ, ಬೀರಣ್ಣ ಬಂಟ, ಕಾರ್ಯಕಾರ ಸುಬೇದಾರ್ ಕೃಷ್ಣಯ್ಯ, ಗುಡ್ಡೆಮನೆ ತಮ್ಮಯ್ಯ ಮೊದಲಾದವರನ್ನು ಪ್ರಾಣಿಗಳಂತೆ ಬೋನಿನಲ್ಲಿ ತುಂಬಿಸಿ ಸಿಂಗಾಪುರ, ಬರ್ಮಾ ಮುಂತಾದ ಸಮುದ್ರದಾಚೆಗಿನ ಊರುಗಳಿಗೆ ಸಾಗಹಾಕಿ ಜೀವನದುದ್ದಕ್ಕೂ ಕೈಕಾಲುಗಳಿಗೆ ಕೋಳ ತೊಡಿಸಿ ಪ್ರಖರವಾದ ಶಿಕ್ಷೆಯನ್ನು ಕೊಟ್ಟು ಅವರ ಶವವೂ ದೊರಕದಂತೆ ನೋವು ನೀಡಲಾಯಿತು. ಉಳುವಾರು ಕೃಷ್ಣ, ಗೌಡಳ್ಳಿ ಸುಬ್ಬಪ್ಪು, ಕುಕ್ಕೆಟ್ಟಿ ಸುಬ್ಬ, ಶೇಕ್, ದೇರಾಜೆ ಬಚ್ಚ ಪಟೇಲ, ನೆಡುಂಪಳ್ಳಿ ದೇವಪ್ಪ ರೈ, ಗುಂಡ್ಲ ಸುಬ್ಬಪ್ಪ ಮತ್ತು ಇತರ ಕೆಲವರಿಗೆ ಜೀವಾವಧಿ ಶಿಕ್ಷೆ ನೀಡಲಾಗಿತ್ತು. ಇನ್ನು ಹಲವು ಮಂದಿಗೆ 14 ವರ್ಷ, 10 ವರ್ಷ ಮತ್ತು 7 ವರ್ಷಗಳ ಕಾರಾಗೃಹವಾಸದ ಶಿಕ್ಷೆಯನ್ನು ವಿಧಿಸಲಾಗಿತ್ತು. ಮಾನ್ಯದ ರಂಗಪ್ಪ ರಣರಂಗದಲ್ಲಿ ಮೃತ ಪಟ್ಟರೆ, ಚೆರಂಜಿ ಸುಬ್ರಾಯ ಗಾಯಾಳುವಾಗಿ ಸೆರೆ ಸಿಕ್ಕಿ ಜೈಲಿನಲ್ಲಿಯೇ ಮೃತಪಟ್ಟಿದ್ದರು.

ಜಮೀನು ಮುಟ್ಟುಗೋಲು

ಹೋರಾಟದ ಅಪ್ರತಿಮ ನಾಯಕ ಕೆದಂಬಾಡಿ ರಾಮಯ್ಯ ಗೌಡರಿಗೆ ಸುಳ್ಯದ ಉಬರಡ್ಕ ಮತ್ತು ಭಾಗಮಂಡಲದ ಚೆಟ್ಟಮಾನಿ ಎರಡು ಸ್ಥಳಗಳಲ್ಲಿ ಮನೆಗಳು ಇದ್ದು, ಅಪಾರ ಪ್ರಮಾಣದ ಜಮೀನುಗಳ ಮಾಲೀಕನಾಗಿದ್ದರು. ಕೊಡಗಿನ ರಾಜಕುಟುಂಬದ ಜತೆ ಇವರಿಗೆ ಉತ್ತಮ ಬಾಂಧವ್ಯವಿತ್ತು. ಅವರ ಒಬ್ಬ ಮಗನ ಹೆಸರು ಸಣ್ಣಯ್ಯ ಗೌಡ, ಮಗಳ ಗಂಡನ ಹೆಸರು ಮಡಿಯಾಲ ತಮ್ಮಯ್ಯ, ಅಣ್ಣ ಕೃಷ್ಣಪ್ಪ ಗೌಡ, ಕೆದಂಬಾಡಿ ರಾಮಯ್ಯ ಗೌಡರ ಕುಟುಂಬದ ಪ್ರತಿಯೊಬ್ಬ ಸದಸ್ಯನೂ ಶಿಕ್ಷೆಗೆ ಈಡಾಗುತ್ತಾರೆ. ಅವರ ಜಮೀನುಗಳನ್ನು ಕಂಪನಿ ಮುಟ್ಟುಗೋಲು ಹಾಕಿಕೊಳ್ಳುತ್ತದೆ.

ತುಳುನಾಡಿನ ಹಳ್ಳಿಯಲ್ಲಿ ಹುಟ್ಟಿ, ಸಾಮ್ರಾಜ್ಯಶಾಹಿ ಬ್ರಿಟಿಷರ ವಿರುದ್ಧ ಪುಟಿದೆದ್ದಿದ್ದ ಅಪ್ರತಿಮ ಹೋರಾಟಗಾರ, ಧೀರೋದಾತ್ತ ನಾಯಕ ಕೆದಂಬಾಡಿ ರಾಮಯ್ಯ ಗೌಡ ಮತ್ತವರ ಕುಟುಂಬ ವರ್ಗವು, ಇಂದಿನ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಸಂಪೂರ್ಣವಾಗಿ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಭಾಗಶಃ ಗೆದ್ದಿದ್ದರು. ಈ ಮೂಲಕ ೨ ವಾರಗಳ ಕಾಲ ಬ್ರಿಟಿಷರ ಕಪಿಮುಷ್ಟಿಯಿಂದ ಈ ಭಾಗವನ್ನು ರಕ್ಷಿಸಿದ್ದರು. ಕೊನೆಗೆ ಗುರುತು, ಪರಿಚಯವಿಲ್ಲದ ಕಡಲಾಚೆಗಿನ ಪ್ರದೇಶದಲ್ಲಿ ತಮ್ಮ ಜೀವನದ ಅಂತ್ಯವನ್ನು ಕಾಣುವಂತಾಯಿತು. ಇವರಲ್ಲದೆ ಇನ್ನೂ ಹಲವು ಜನ ನಾಡಿಗಾಗಿ ತ್ಯಾಗ ಮಾಡಿದ್ದಾರೆ.

ಇದನ್ನೂ ಓದಿ | Amrit Mahotsav | ಮುಳುಬಾಗಿಲು ಸ್ವಾಮಿ ಎಂಬ ಕ್ರಾಂತಿಕಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ರಸ್ತೆಗಳು ಸೇರಿ 33 ಸ್ಥಳಗಳು ಜಲಾವೃತಗೊಂಡಿದ್ದು, 16 ಮರಗಳು ನೆಲಕ್ಕುರುಳಿವೆ. ರಸ್ತೆಗಳಲ್ಲಿ ಭಾರಿ ಪ್ರಮಾಣದ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.

VISTARANEWS.COM


on

Bengaluru Rain
ಬೆಂಗಳೂರಿನ ಓಕಳೀಪುರಂನ ರಾಜೀವ್ ಗಾಂಧಿ ಅಷ್ಟಪಥ ಅಂಡರ್ ಪಾಸ್‌ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.
Koo

ಬೆಂಗಳೂರು: ನಗರದ ವಿವಿಧೆಡೆ ಸೋಮವಾರ ರಾತ್ರಿ ವರುಣ (Bengaluru Rain) ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ರಸ್ತೆಗಳು ಸೇರಿ ನಗರದ 33 ಸ್ಥಳಗಳು ಜಲಾವೃತಗೊಂಡಿದ್ದು, 16 ಮರಗಳು ನೆಲಕ್ಕುರುಳಿವೆ. ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡಬೇಕಾಯಿತು.

ಬೆಂಗಳೂರಿನ ಓಕಳೀಪುರಂ, ಮಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆ.ಆರ್.ಮಾರ್ಕೆಟ್, ಮತ್ತಿಕೆರೆ, ಕತ್ತರಿಗುಪ್ಪೆ, ಆನೇಕಲ್‌, ಎಲೆಕ್ಟ್ರಾನಿಕ್‌ ಸಿಟಿ ಸೇರಿ ವಿವಿಧೆಡೆ ಮಳೆ ಅಬ್ಬರಿಸಿದೆ. ಓಕಳೀಪುರಂನ ರಾಜೀವ್ ಗಾಂಧಿ ಅಷ್ಟಪಥ ಅಂಡರ್ ಪಾಸ್‌ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.

ಮೈಸೂರು ರಸ್ತೆಯ ಬ್ಯಾಟರಾಯನಪುರ, ಜೆಸಿ ನಗರದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಮಲ್ಲೇಶ್ವರ, ಬಸವನಗುಡಿ, ಕತ್ತರಿಗುಪ್ಪೆ ಸರ್ಕಲ್‌, ರಾಜಾಜಿನಗರ ಭಾಷ್ಯಂ ಸರ್ಕಲ್‌ ಬಳಿ ಸೇರಿದಂತೆ 16 ಕಡೆ ಮರಗಳು ನೆಲಕ್ಕುರುಳಿವೆ. ಅದೃಷ್ಟವಾಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಮಲ್ಲೇಶ್ವರದಲ್ಲಿ ಮರ ಬಿದ್ದಿರುವುದು

ರಾಜಾಜಿನಗರದಲ್ಲಿ ಮರ ನೆಲಕ್ಕುರುಳಿರುವುದು

ಭಾರಿ ಗಾಳಿ ಮಳೆಗೆ ಹಾರಿದ ಅಂಗಡಿಗಳ ಹೊದಿಕೆ, ಶೀಟ್‌ಗಳು

ಆನೇಕಲ್: ಭಾರಿ ಗಾಳಿ ಮಳೆಯಿಂದ ಹೂ ಮತ್ತು ಹಣ್ಣಿನ ಅಂಗಡಿಗಳ ಹೊದಿಕೆ ಮತ್ತು ಶೀಟ್‌ಗಳು ಹಾರಿದ ಘಟನೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆಯಿತು. ಚಂದಾಪುರ ಪುರಸಭೆ ಕಚೇರಿ ಮುಂದೆ ನೋಡ ನೋಡುತ್ತಿದ್ದಂತೆ ಅಂಗಡಿಗಳ ಶೀಟ್‌ಗಳು ಹಾರಿ ಹೋದವು. ಜತೆಗೆ ಹೂವು, ಹಣ್ಣು ನೀರುಪಾಲಾಗಿದ್ದರಿಂದ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಧಾರಕಾರ ಮಳೆ ಸುರಿಯಿತು.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

ಶಿಕ್ಷಣ ಎಂದರೆ ಮಕ್ಕಳು ನಲಿಯುತ್ತ ಕಲಿಯುವುದು. ಆಡುತ್ತ, ನಲಿಯುತ್ತ, ಎಲ್ಲರೊಂದಿಗೆ ಬೆರೆಯುತ್ತ ಜ್ಞಾನವನ್ನು ವೃದ್ಧಿಸಿಕೊಳ್ಳುವುದು. ಆದರೆ, ಬದಲಾದ ಕಾಲಘಟ್ಟದಲ್ಲಿ ಮಕ್ಕಳು ಅಂಕಗಳ ಹಿಂದೆ ಓಡಬೇಕಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುನ್ನಡೆ ಸಾಧಿಸುವ, ಮೊದಲ ರ‍್ಯಾಂಕ್‌ ಪಡೆಯುವ, ಆಟ ಬಿಟ್ಟು ಪಾಠದತ್ತ ಹೆಚ್ಚು ಗಮನ ಹರಿಸುವ, ಎಫರ್ಟ್‌ ಹೆಸರಲ್ಲಿ, ಅಂಕ ಸಾಧನೆ ಹೆಸರಲ್ಲಿ ಇನ್ನಿಲ್ಲದ ಒತ್ತಡ ಅವರ ಮೇಲಿದೆ. ಇಂತಹ ಸಮಸ್ಯೆಗಳ ಮಧ್ಯೆಯೇ, ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿರುವುದು ಮಕ್ಕಳ ಶೈಕ್ಷಣಿಕ ಏಳಿಗೆ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾಗಿ, ಇ-ಮೇಲ್‌ ಮೂಲಕ ಬೆದರಿಕೆ ಹಾಕುವ, ಭಯವನ್ನು ಹುಟ್ಟಿಸುವ ‘ಭಯೋತ್ಪಾದಕರಿಗೆ’ ತಕ್ಕ ಶಾಸ್ತಿ ಆಗಬೇಕಿದೆ.

VISTARANEWS.COM


on

School Children
Koo

ಶಾಲೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಇ-ಮೇಲ್‌ (E-Mail) ಮೂಲಕ ಬೆದರಿಕೆ ಒಡ್ಡುವುದು, ಆ ಮೂಲಕ ಮಕ್ಕಳು, ಪೋಷಕರು, ಶಿಕ್ಷಕರು ಆತಂಕಕ್ಕೀಡಾಗುವುದು, ಇದರಿಂದ ಎಲ್ಲೆಡೆ ಇದು ಸುದ್ದಿಯಾಗುವಂತೆ ಮಾಡುವ ಹೀನಾತಿಹೀನ ಪ್ರಕರಣಗಳು ಇತ್ತೀಚೆಗೆ ಹೆಚ್ಚು ಸುದ್ದಿಯಾಗುತ್ತಿವೆ. ಸೋಮವಾರ (ಮೇ 6) ಅಹಮದಾಬಾದ್‌ನಲ್ಲಿ ಹಲವು ಶಾಲೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಇ-ಮೇಲ್‌ ಮೂಲಕ ಬೆದರಿಕೆ ಹಾಕಲಾಗಿದೆ. ಇನ್ನು, ಮೇ 1ರಂದು ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ (NRC) ಸುಮಾರು 200ಕ್ಕೂ ಅಧಿಕ ಶಾಲೆಗಳಿಗೆ ಈ ರೀತಿಯ ಹುಸಿ ಬಾಂಬ್‌ ಬೆದರಿಕೆಯ ಮೇಲ್‌ಗಳನ್ನು (Hoax Bomb Threat) ಕಳುಹಿಸಲಾಗಿತ್ತು. ಸಹಜವಾಗಿಯೇ ಇದು ದೇಶಾದ್ಯಂತ ಸುದ್ದಿಯಾಯಿತು. ಶಾಲೆಗಳಿಂದ ಮಕ್ಕಳನ್ನು ಕೂಡಲೇ ಮನೆಗೆ ಕಳುಹಿಸಲಾಯಿತು. ಪೋಷಕರೂ ಶಾಲೆಗಳಿಗೆ ಓಡೋಡಿ ಬಂದು ಮಕ್ಕಳನ್ನು ಕರೆದುಕೊಂಡು ಹೋದರು. ಈಗಲೂ ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಆಗುತ್ತಿಲ್ಲ. ಕರೆಸಿಕೊಳ್ಳಲು ಶಿಕ್ಷಕರಿಗೂ ಧೈರ್ಯ ಸಾಲುತ್ತಿಲ್ಲ. ಒಟ್ಟಿನಲ್ಲಿ ಕಿಡಿಗೇಡಿಗಳು ಮಾಡುವ ಉಪದ್ವ್ಯಾಪದಿಂದ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಆತಂಕದಲ್ಲಿಯೇ ಮುಳುಗಿದ್ದಾರೆ. ಹಾಗಾಗಿ, ಇ-ಮೇಲ್‌ ಮೂಲಕ ಹುಸಿ ಬಾಂಬ್ ಬೆದರಿಕೆಯೊಡ್ಡುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಅನಾಮಧೇಯ ವ್ಯಕ್ತಿಗಳು ಮೇಲ್‌ ಮಾಡುವುದು, ತನಿಖೆ ಬಳಿಕ ಅದು ಹುಸಿ ಬಾಂಬ್‌ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸುವುದು, ಇಂತಹ ಪ್ರಕರಣಗಳು ದೇಶಾದ್ಯಂತ ನಡೆಯುತ್ತಿರುವುದರಿಂದ ಇದೊಂದು ದೊಡ್ಡ ವಿಷಯ ಅಲ್ಲ, ನಿರ್ಲಕ್ಷಿಸುವುದು ಒಳಿತು ಎಂದು ಎನಿಸಿದರು, ಹುಸಿ ಬೆದರಿಕೆಗಳು ಅತಿ ಹೆಚ್ಚು ಆತಂಕ ಸೃಷ್ಟಿಸುತ್ತಿವೆ, ಮಕ್ಕಳ ಜತೆಗೆ ಪೋಷಕರ ಮೇಲೂ ಪರಿಣಾಮ ಬೀರುತ್ತಿವೆ. ಆಧುನಿಕ ಕಾಲದಲ್ಲಿ ತಂತ್ರಜ್ಞಾನ ತುಂಬ ಮುಂದುವರಿದಿದೆ. ಸೈಬರ್‌ ಅಪರಾಧ ವಿಭಾಗವನ್ನೂ ತೆರೆಯಲಾಗಿದೆ. ಹಾಗಾಗಿ, ಸೈಬರ್‌ ಕ್ರೈಂ ಪೊಲೀಸರು ಇಂತಹ ಇ-ಮೇಲ್‌ ಕಡಿಗೇಡಿಗಳನ್ನು ಮಟ್ಟಹಾಕಬೇಕು. ಬೆಂಗಳೂರು, ಅಹಮದಾಬಾದ್‌, ದೆಹಲಿ ಎನ್ನದೆ, ದೇಶಾದ್ಯಂತ ಇಂತಹ ಪ್ರಕರಣಗಳನ್ನು ತಡೆಯಲು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮೇಲ್ನೋಟಕ್ಕೆ ಬೇರೆ ದೇಶದ ವಿಪಿಎನ್‌ (VPN) ಬಳಸಿ ಇ-ಮೇಲ್‌ ಬೆದರಿಕೆ ಒಡ್ಡಲಾಗುತ್ತಿದೆ ಎಂಬುದು ಗೊತ್ತಾದರೂ, ಸುಧಾರಿತ ತಂತ್ರಜ್ಞಾನವನ್ನು ಬಳಸಿ ಉಪದ್ವ್ಯಾಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಹುಸಿ ಬಾಂಬ್‌ ಬೆದರಿಕೆ ಕರೆಗಳು ಹತ್ತಾರು ಪರಿಣಾಮಗಳನ್ನು ಬೀರುತ್ತಿವೆ. ನಗರಗಳಲ್ಲಿ ಮಕ್ಕಳು ಪ್ರಾಣ ಭಯದಲ್ಲಿಯೇ ಶಾಲೆಗಳಿಗೆ ತೆರಳುವಂತಾಗಿದೆ. ಪೋಷಕರಂತೂ ಜೀವ ಹಿಡಿದುಕೊಂಡು ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವಂತಾಗಿದೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಸುಮಾರು 48 ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು. ಇದು ನೂರಾರು ಶಾಲೆಗಳಲ್ಲಿ ಆತಂಕ ಸೃಷ್ಟಿಸಿತ್ತು. ಎಷ್ಟೋ ದಿನಗಳವರೆಗೆ ಪೋಷಕರು ಮಕ್ಕಳನ್ನು ಶಾಲೆಗಳಿಗೇ ಕಳುಹಿಸರಲಿಲ್ಲ. ಶಾಲೆಗಳ ಆಡಳಿತ ಮಂಡಳಿಗಳೂ ಅಷ್ಟೇ, ಸುಮ್ಮನೆ ಅಪಾಯವನ್ನು ಮೇಲೆ ಎಳೆದುಕೊಳ್ಳುವುದು ಬೇಡ ಎಂದು ಮಕ್ಕಳನ್ನು ಹಲವು ದಿನಗಳವರೆಗೆ ಶಾಲೆಗೆ ಕರೆಸಿರಲಿಲ್ಲ. ಈಗ, ದೆಹಲಿ ಹಾಗೂ ಅಹಮದಾಬಾದ್‌ ಶಾಲೆಗಳು, ಮಕ್ಕಳು ಮತ್ತು ಪೋಷಕರ ಪರಿಸ್ಥಿತಿಯೂ ಇದರಿಂದ ಹೊರತಾಗಿಲ್ಲ.

ಮಕ್ಕಳಿಗೆ ಜೀವ ಭಯ, ಪೋಷಕರು ಹಾಗೂ ಶಿಕ್ಷಕರಿಗೆ ಆತಂಕ ಮಾತ್ರವಲ್ಲ, ಹುಸಿ ಬಾಂಬ್‌ ಬೆದರಿಕೆ ಪ್ರಕರಣಗಳು ಮಕ್ಕಳ ಶೈಕ್ಷಣಿಕ ಏಳಿಗೆಯ ಮೇಲೆಯೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಪದೇಪದೆ ಬೆದರಿಕೆ ಒಡ್ಡಿದರೆ ಮಕ್ಕಳು ಶಾಲೆಗಳಿಗೆ ಹೋಗುವುದಿಲ್ಲ. ಇದರಿಂದ ಅವರು ಪಠ್ಯವನ್ನು ಸರಿಯಾಗಿ ಅಭ್ಯಾಸ ಮಾಡಲು ಆಗುವುದಿಲ್ಲ. ಇನ್ನು, ಎಳೆಯ ವಯಸ್ಸಿನಲ್ಲೇ ಅವರು ಆತಂಕದಲ್ಲಿ ಶಾಲೆಗೆ ಹೋದರೆ, ಅದು ಅವರ ಮನಸ್ಸಿನ ಮೇಲೆ ಅಗಾಧವಾದ ಪರಿಣಾಮ ಬೀರುತ್ತದೆ. ಈಗಾಗಲೇ ಅತಿಯಾದ ಹೋಮ್‌ ವರ್ಕ್‌, ಆಟ-ಪಾಠಗಳಿಗೆ ಕಡಿಮೆ ಸಮಯ ಸಿಗುತ್ತಿದೆ. ಅತಿಯಾದ ಸ್ಪರ್ಧೆಯಿಂದ ಮಕ್ಕಳು ಅಂಕಗಳ ಹಿಂದೆ ಓಡಬೇಕಾದ, ರ‍್ಯಾಂಕ್‌ ಪಡೆಯಲೇಬೇಕಾದ ಅನಿವಾರ್ಯಕ್ಕೆ ಸಿಲುಕಿದ್ದಾರೆ. ಇದರಿಂದ ಮಕ್ಕಳು ನಾಲ್ಕೈದು ವರ್ಷದಿಂದಲೇ ಒತ್ತಡಕ್ಕೆ ಸಿಲುಕುತ್ತಿದ್ದಾರೆ.

ಅಷ್ಟಕ್ಕೂ ಶಿಕ್ಷಣ ಎಂದರೆ, ನಲಿಯುತ್ತ ಕಲಿಯುವುದಾಗಿದೆ. ಒತ್ತಡವಿಲ್ಲದೆ, ಆಡುತ್ತ, ನಲಿಯುತ್ತ, ಬೆರೆಯುತ್ತ ಜ್ಞಾನ ಸಂಪಾದಿಸುವುದಾಗಿದೆ. ಆದರೆ, ಈಗ ಬಾಂಬ್‌ ಬೆದರಿಕೆಯ ಆತಂಕವೂ ಮಕ್ಕಳಲ್ಲಿ ಮೂಡಿದರೆ, ಅದು ಸುದೀರ್ಘ ಅವಧಿಗೆ ಅವರನ್ನು ಕಾಡಲಿದೆ. ಶೈಕ್ಷಣಿಕ ಏಳಿಗೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಮಾನಸಿಕವಾಗಿಯೂ ಅವರು ಕುಗ್ಗಿಹೋಗಲಿದ್ದಾರೆ. ಇದರ ಮಧ್ಯೆಯೇ, ಹುಸಿ ಬಾಂಬ್‌ ಬೆದರಿಕೆ ನಿಗ್ರಹಕ್ಕಾಗಿ ಕೇಂದ್ರ ಸರ್ಕಾರವು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ. ಆದರೆ, ಈ ಸಮಸ್ಯೆಗೊಂದು ಕ್ಷಿಪ್ರವಾಗಿ ಕಾಯಂ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಅದರಲ್ಲೂ, ಶೈಕ್ಷಣಿಕ ವಾತಾವರಣವನ್ನೇ ಹಾಳುತ್ತಿರುವ ‘ಇ-ಮೇಲ್‌ ಭಯೋತ್ಪಾದಕರಿಗೆ’ ಕಠಿಣ ಶಿಕ್ಷೆಯಾಗಬೇಕಿದೆ.

ಇದನ್ನೂ ಓದಿ: ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Continue Reading

ಕರ್ನಾಟಕ

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

Prajwal Revanna Case: ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಹೀಗಾಗಿ ನನ್ನ ವಿರುದ್ಧ ಸುಳ್ಳು ಆಪಾದನೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ನನಗೂ ಮತ್ತು ಹಾಸನ ಪೆನ್ ಡ್ರೈವ್ ಪ್ರಕರಣಕ್ಕೂ (Prajwal Revanna Case) ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಈಗ ಆಗಿರುವ ಡ್ಯಾಮೇಜ್ ನಿವಾರಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಆಪಾದಿಸಿದ್ದಾರೆ.

ಇದೇ ದೇವರಾಜೇಗೌಡ ಈ ಹಿಂದೆ ತಮ್ಮಲ್ಲಿ ಪೆನ್ ಡ್ರೈವ್ ಇರುವ ಬಗ್ಗೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಅದನ್ನು ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಅಪಾದನೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

ನಾನೀಗ ಬೆಂಗಳೂರಿಂದ ಹೊರಗೆ ಇದ್ದು, ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ವತಂತ್ರ ಮತ್ತು ನಿಷ್ಪಕ್ಷಪಾತದ ತನಿಖೆ: ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’’ ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ.
ಎಸ್‌ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್‌ಐಟಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು. ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

Continue Reading

ಕರ್ನಾಟಕ

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

108 Ambulance: ಬಿಜೆಪಿ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನು ಸರಿಪಡಿಸಲು ಸಿಬ್ಬಂದಿ ಸಹಕರಿಸಬೇಕು. ಅನಗತ್ಯವಾಗಿ ಸಿಬ್ಬಂದಿ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೂ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

VISTARANEWS.COM


on

108 Ambulance
Koo

ಬೆಂಗಳೂರು: 108 ಆರೋಗ್ಯ ಕವಚದ ಆಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ. ಅಂಬ್ಯುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನು ಸರ್ಕಾರ ನೀಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ. 108 ಅಂಬ್ಯುಲೆನ್ಸ್ ಯೋಜನೆ ಸುಗಮವಾಗಿ ನಡೆಸಲು ಆರ್ಥಿಕ ವರ್ಷ 2023-24ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 210.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು, ಸದರಿ ಅನುದಾನದಲ್ಲಿ ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ನಿಗದಿಯಾದ ರೂ. 162.40 ಕೋಟಿಗಳ ಪೂರ್ಣ ಅನುದಾನವನ್ನು ಸೇವಾದಾರರಿಗೆ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ 108-ಆರೋಗ್ಯ ಕವಚ ಯೋಜನೆಗೆ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 260.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ವಾರ್ಷಿಕ ರೂ. 162.40 ಕೋಟಿಗಳ ಅನುದಾನವನ್ನು ಬಿಡುಗಡೆಗೊಳಿಸಬೇಕಾಗಿರುತ್ತದೆ. ಆರೋಗ್ಯ ಇಲಾಖೆ ಹಾಗೂ ಇ.ಎಂ.ಆರ್‌.ಐ ಗ್ರೀನ್‌ ಹೆಲ್ತ್‌ ಸಂಸ್ಥೆಯವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ 711 ಆಂಬ್ಯುಲೆನ್ಸ್‌ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಸೇವೆ ಒದಗಿಸಿದ್ದಲ್ಲಿ ಪ್ರತಿ ತ್ರೈಮಾಸಿಕಕ್ಕೆ ರೂ. 40.60 ಕೋಟಿಗಳಂತೆ ವಾರ್ಷಿಕ ರೂ. 162.40 ಕೋಟಿಗಳ ಅನುದಾನವು ಬಿಡುಗಡೆಗೊಳಿಸಲಾಗುವುದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

ವಿಪಕ್ಷಗಳ ನಾಯಕರು ಅನಗತ್ಯವಾಗಿ ಗ್ಯಾರಂಟಿ ಯೋಜನೆಯಿಂದ ಹಣಕಾಸಿನ ತೊಂದರೆಯಾಗಿದೆ ಎಂದು 108 ಆರೋಗ್ಯ ಕವಚ ಯೋಜನೆಗೆ ತಳುಕು ಹಾಕುವುದರಲ್ಲಿ ಯಾವುದೇ ಹುರುಳಿಲ್ಲ ಎಂದು‌ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 108 ವ್ಯವಸ್ಥೆಯಲ್ಲಿ ಒಂದಿಷ್ಟು ಲೋಪದೋಷಗಳು ಆಗಿರುವುದು ನಿಜ. 108 ಸಿಬ್ಬಂದಿಗಳಿಗೆ ಕನಿಷ್ಠ ವೇತನದ ಜಾರಿಗೊಳಿಸಿದ್ದಲ್ಲದೇ ಸರ್ಕಾರದ ಅನುಮತಿ ಇಲ್ಲದೇ ನಿಯಮಬಾಹಿರವಾಗಿ ಶೇ.45 ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು. ಇದೀಗ 108 ಸಿಬ್ಬಂದಿಗಳು ಶೇ 45 ರಷ್ಟು ವೇತನ ಹೆಚ್ಚಳ ಮಾಡಿರುವುದನ್ನ ಕಡಿತಗೊಳಿಸದಂತೆ ಬೇಡಿಕೆ ಇಡುತ್ತಿದ್ದಾರೆ.

ನಮ್ಮ ಸರ್ಕಾರ ನಿಯಮಾನುಸಾರ ಕನಿಷ್ಠ ವೇತನ ನೀಡಲು ಬದ್ಧವಾಗಿದ್ದು, ಅದರಂತೆ ಅನುದಾನವನ್ನು ನೀಡುತ್ತಾ ಬಂದಿದೆ. ಪ್ರತಿಯೊಬ್ಬ ಆಂಬ್ಯುಲೆನ್ಸ್ ಚಾಲಕರಿಗೆ 35 ಸಾವಿರಕ್ಕೂ ಹೆಚ್ವು ವೇತನ ದೊರೆಯುತ್ತಿದೆ. ಇದರ ಮೇಲೂ ಮೂಲ ವೇತನದಲ್ಲಿ ಶೇ 45 ರಷ್ಟು ಹೆಚ್ಚಳ ಮಾಡುವ ಬಗ್ಗೆ ಸಿಬ್ಬಂದಿಗಳು ಬೇಡಿಕೆ ಇಟ್ಟಿದ್ದು, ನಿಯಮಬಾಹಿರವಾಗಿ ಈ ಕ್ರಮ ಕೈಗೊಳ್ಳಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಈ ಬಗ್ಗೆ 108 ಸಿಬ್ಬಂದಿಯನ್ನು ಕರೆದು ಚರ್ಚಿಸಿ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬದಲಾವಣೆ ಮಾಡಲು ಅವಕಾಶವಿಲ್ಲ ಎಂದು ಸಿಬ್ಬಂದಿಗಳಿಗೆ ತಿಳಿಸಲಾಗಿದೆ. ನ್ಯಾಯಯುತವಾಗ ಕನಿಷ್ಢ ವೇತನ ಸರ್ಕಾರ ನೀಡುತ್ತಿದ್ದು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಜಿವಿಕೆ ಇಎಂಆರ್ ಸಂಸ್ಥೆ ಹಾಗೂ ಚಾಲಕರ ನಡುವಿನ ವೇತನ ಪಾವತಿ ಸಮಸ್ಯೆಗಳ ಬಗ್ಗೆಯೂ ಸಂಸ್ಥೆಯವರೊಂದಿಗೆ ಇಲಾಖೆ ಆಯುಕ್ತರು ಚರ್ಚಿಸಿ, ವೇತನ ಬಾಕಿ ಉಳಿಸಿಕೊಳ್ಳದಂತೆ ಆದೇಶಿಸಿದ್ದಾರೆ. ಇದಕ್ಕೂ ಮೀರಿ 108 ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೆ ಸರ್ಕಾರ ಸಿದ್ಧವಿದೆ. 108 ಆಂಬ್ಯುಲೆನ್ಸ್ ಸೇವೆಯನ್ನು ನಿಲ್ಲಿಸಲು ಸಾಧ್ಯವಿಲ್ಲ. ಅನಿವಾರ್ಯವಾಗಿ ಸರ್ಕಾರ ಪರ್ಯಾಯ ವ್ಯವಸ್ಥೆಗೆ ಮುಂದಾಗಬೇಕಾಗಲಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

ಹಿಂದಿನ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನು ನಮ್ಮ ಸರ್ಕಾರ ಸರಿಪಡಿಸುತ್ತಿದೆ. ಟೆಂಡರ್‌ಗಳನ್ನು ಕರೆಯದೇ ಜಿವಿಕೆ ಇಎಂಆರ್ ಸಂಸ್ಥೆಯೊಂದಿಗೆ ಒಡಂಬಡಿಕೆಯ ಮೂಲಕವೇ 108 ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಸರ್ಕಾರ ಬಂದ ಬಳಿಕ ನಿಯಮನುಸಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತಿದೆ. ವ್ಯವಸ್ಥೆಯಲ್ಲಾದ‌ ಲೋಪಗಳನ್ನು ಸರಿಪಡಿಸುತ್ತಿರುವಾಗ ಸಿಬ್ಬಂದಿ ಸಹಕರಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

Continue Reading
Advertisement
Dina Bhavishya
ಭವಿಷ್ಯ35 mins ago

Dina Bhavishya : ಈ ರಾಶಿಯವರಿಗೆ ಮಾತೇ ಕಂಟಕ; ಕುಟುಂಬದಲ್ಲಿ ಕಲಹ

Bengaluru Rain
ಕರ್ನಾಟಕ5 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ6 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ6 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ6 hours ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ6 hours ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ6 hours ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ6 hours ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ7 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ11 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ11 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ11 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌