ಬೆಳಗಾವಿ | ಮಳೆಗೆ ಕುಸಿದ ಶಾಲೆ ಕಟ್ಟಡಗಳು, ಒಂದಂತೂ ಕಣ್ಣೆದುರೇ ಉರುಳಿತು, ಮಕ್ಕಳು ಬಚಾವ್‌ - Vistara News

ಕರ್ನಾಟಕ

ಬೆಳಗಾವಿ | ಮಳೆಗೆ ಕುಸಿದ ಶಾಲೆ ಕಟ್ಟಡಗಳು, ಒಂದಂತೂ ಕಣ್ಣೆದುರೇ ಉರುಳಿತು, ಮಕ್ಕಳು ಬಚಾವ್‌

ಭಾರಿ ಮಳೆಯಿಂದ ಬೆಳಗಾವಿ ಜಿಲ್ಲೆ ತತ್ತರಿಸಿದೆ. ಇಲ್ಲಿನ ಎರಡು ಶಾಲೆಗಳ ಕಟ್ಟಡಗಳು ಧರಾಶಾಯಿಯಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಶಾಲೆ ಕಟ್ಟಡಗಳು ಇಲ್ಲಿ ಉರುಳುತ್ತಲೇ ಇವೆ.

VISTARANEWS.COM


on

school building
ಸಿಂಗಿನಕೊಪ್ಪ ಗ್ರಾಮದಲ್ಲಿ ಶಾಲಾ ಕಟ್ಟಡವೊಂದು ಕಣ್ಣೆದುರೇ ಉರುಳಿ ಬಿದ್ದಿದೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಹಲವು ಕಡೆ ಮನೆಗಳು ಉರುಳಿ ಬಿದ್ದಿವೆ. ಜಿಲ್ಲೆಯಲ್ಲಿ ಎರಡು ಶಾಲೆ ಕಟ್ಟಡಗಳು ಕೂಡಾ ಉರುಳಿ ಬಿದ್ದಿವೆ. ಅದರಲ್ಲಿ ಒಂದು ಕಟ್ಟಡವಂತೂ ಕಣ್ಣೆದುರೇ ಕುಸಿದು ಆತಂಕವನ್ನು ಸೃಷ್ಟಿಸಿತು. ಮಕ್ಕಳನ್ನು ತುರ್ತಾಗಿ ಶಿಫ್ಟ್‌ ಮಾಡಿದ್ದರಿಂದ ದೊಡ್ಡ ಅಪಾಯ ತಪ್ಪಿತು.

ಗುಂಡೇನಟ್ಟಿಯಲ್ಲಿ
ಜಿಲ್ಲೆಯ ಖಾನಾಪುರ ತಾಲೂಕಿನ ಗುಂಡೇನಟ್ಟಿ ಗ್ರಾಮದಲ್ಲಿರುವ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಮಳೆಗೆ ಕುಸಿದು ಬಿದ್ದಿದೆ. ಹಲವು ದಿನಗಳ ಮಳೆಗೆ ಶಿಥಿಲಾವಸ್ಥೆ ತಲುಪಿದ್ದ ಶಾಲಾ ಕಟ್ಟಡದ ಒಂದು ಪಾರ್ಶ್ವದ ಗೋಡೆ ಗುರುವಾರ ಉರುಳಿ ಬಿತ್ತು. ಆದರೆ, ಅದೃಷ್ಟವಶಾತ್‌ ಈ ಸಂದರ್ಭದಲ್ಲಿ ಮಕ್ಕಳು ಇರಲಿಲ್ಲ. ಹೀಗಾಗಿ ಯಾರಿಗೂ ಅಪಾಯವಾಗಿಲ್ಲ.

ಭಾರಿ ಮಳೆಗೆ ಕುಸಿದ ಗುಂಡೇನಟ್ಟಿ ಶಾಲೆಯ ಗೋಡೆ

ಸಿಂಗಿನಕೊಪ್ಪ ಗ್ರಾಮದಲ್ಲಿ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸಿಂಗಿನಕೊಪ್ಪ ಗ್ರಾಮದಲ್ಲಿ ಶಾಲಾ ಕಟ್ಟಡವೊಂದು ಕಣ್ಣೆದುರೇ ಉರುಳಿ ಬಿದ್ದಿದೆ. ಕಟ್ಟಡದ ಒಂದು ಭಾಗದ ಮೇಲ್ಚಾವಣಿ ಕುಸಿಯುತ್ತಿರುವುದನ್ನು ಕಂಡು ಎಚ್ಚೆತ್ತ ಶಿಕ್ಷಕರು ಕೂಡಲೇ ಮಕ್ಕಳನ್ನು ಬೇರೆ ಕೊಠಡಿಗೆ ಶಿಫ್ಟ್‌ ಮಾಡಿದರು. ಹಾಗಾಗಿ ಮೇಲ್ಚಾವಣಿ ಕುಸಿದರೂ ಅಪಾಯ ಉಂಟಾಗಲಿಲ್ಲ.

ಈ ಒಂದೇ ಕೊಠಡಿಯಲ್ಲಿ ಮೂವತ್ತು ಮಕ್ಕಳು ಪಾಠ ಕೇಳುತ್ತಿದ್ದರು. ಆಗ ಮೇಲಿನಿಂದ ಚಾವಣಿ ಬೀಳುವ ಸೂಚನೆ ಕಾಣಿಸಿತು. ಆಗ ಕೂಡಲೇ ಮಕ್ಕಳನ್ನು ಹೊರಗೆ ಕಳುಹಿಸಲಾಯಿತು. ಬಳಿಕ ಸ್ವಲ್ಪ ಹೊತ್ತಿನಲ್ಲಿ ಚಾವಣಿ ಉರುಳಿ ಬಿತ್ತು. ಬಳಿಕ ಸಮುದಾಯ ಭವನದಲ್ಲಿ ಕಲಿಕೆ ಆರಂಭಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಶಿಥಿಲ ಕಟ್ಟಡಗಳು ಉರುಳುತ್ತಲೇ ಇವೆ. ಹಲವು ಕಡೆ ನದಿ ನೀರಿನಿಂದ ದೊಡ್ಡ ಮಟ್ಟದ ಪ್ರವಾಹ ಸೃಷ್ಟಿಯಾಗಿ ಕಟ್ಟಡಗಳು ಶಿಥಿಲಗೊಂಡಿದ್ದವು.

ಇದನ್ನೂ ಓದಿ| Heavy Rain | ಉಕ್ಕಿ ಹರಿಯುವ ಸೇತುವೆ ದಾಟಲು ಜೆಸಿಬಿ ಮೊರೆ ಹೋದ ಶಾಲಾ ಮಕ್ಕಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

DK Shivakumar: ಸರ್ಕಾರಿ ಅಧಿಕಾರಿಗಳು ಜನಸೇವೆಗೆ ತಮ್ಮ ಬದುಕು ಮುಡಿಪಿಟ್ಟಿದ್ದಾರೆ. ಅವರನ್ನು ಗುಲಾಮರು ಎಂದ ಮಾಜಿ ಶಾಸಕರ ಹೇಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಚನ್ನಪಟ್ಟಣದ ಬೇವೂರು ಹಾಗೂ ತಿಟ್ಟಮಾರನಹಳ್ಳಿ ಜಿ.ಪಂ. ವ್ಯಾಪ್ತಿಯಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಹಾಗೂ ಚನ್ನಪಟ್ಟಣದ ಮಾಜಿ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರು ಹೇಳದೆ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

VISTARANEWS.COM


on

DCM Dk shivakumar statement in bagilige bantu sarkara sevege irali sahakara programme in channapattana
Koo

ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳು ಜನಸೇವೆಗೆ ತಮ್ಮ ಬದುಕು ಮುಡಿಪಿಟ್ಟಿದ್ದಾರೆ. ಅವರನ್ನು ಗುಲಾಮರು ಎಂದ ಮಾಜಿ ಶಾಸಕರ ಹೇಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಚನ್ನಪಟ್ಟಣದ ಬೇವೂರು ಹಾಗೂ ತಿಟ್ಟಮಾರನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಹಾಗೂ ಚನ್ನಪಟ್ಟಣದ ಮಾಜಿ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರು ಹೇಳದೆ ಪರೋಕ್ಷವಾಗಿ ಹೀಗೆ ತಿಳಿಸಿದರು.

ಸರ್ಕಾರಿ ಕೆಲಸ ದೇವರ ಕೆಲಸ ಎಂದು ಇದೇ ಜಿಲ್ಲೆಯವರಾದ ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧದ ಪ್ರವೇಶದ್ವಾರದ ಮೇಲೆ ಬರೆದಿದ್ದಾರೆ. ಸರ್ಕಾರಿ ಅಧಿಕಾರಿಗಳು ಕೂಡ ಜನಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

ಮಾಜಿ ಶಾಸಕರು ನಿಮ್ಮನ್ನು ಗುಲಾಮರು ಎಂದು ಕರೆದಿದ್ದು, ನಾನು ನಿಮ್ಮ ಬಳಿ ಕ್ಷಮೆ ಕೇಳುತ್ತೇನೆ. ನಾನು ಸಂವಿಧಾನದ ಅಡಿಯಲ್ಲಿ ಸರ್ಕಾರಿ ನೌಕರ. ಜನ ಸಂತೋಷವಾಗಿರಲು ನಾವು ಸರ್ಕಾರದ ಕೆಲಸ ಮಾಡಬೇಕು. ನೊಂದ ಜನರಿಗೆ ಸಹಾಯ ಮಾಡಲು ಸರ್ಕಾರದಿಂದ ವೇತನ ನೀಡಲಾಗುತ್ತಿದೆ. ಕಷ್ಟಗಳಿಗೆ ಪರಿಹಾರ ಕೊಡು ಎಂದು ಕೇಳಲು ಜನ ದೇವಾಲಯಕ್ಕೆ ಹೋಗುತ್ತಾರೆ. ಅದೇ ರೀತಿ ಸರ್ಕಾರಿ ಕಚೇರಿ ಕೂಡ ದೇವಾಲಯ. ಜನರ ಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ಸರ್ಕಾರಿ ಕಚೇರಿ ಇದೆ ಎಂದರು.

ಕ್ಷೇತ್ರದ ಎರಡು ಕಡೆ ಈ ಕಾರ್ಯಕ್ರಮವನ್ನು ಮಾಡಿದ್ದು, ಈಗಾಗಲೇ 3 ಸಾವಿರ ಜನ ಅರ್ಜಿ ಸಲ್ಲಿಸಿದ್ದಾರೆ. ವ್ಯಾಪಾರಕ್ಕೆ ಸಾಲ ಸೌಲಭ್ಯ, ನಿವೇಶನ, ಮನೆ, ಸ್ಮಶಾನಕ್ಕೆ ಭೂಮಿ, ಕಾಲುವೆ ದುರಸ್ತಿ, ರಸ್ತೆ ಅಭಿವೃದ್ಧಿ, ವಿವಿಧ ಪಿಂಚಣಿ, ಪೋಡಿ, ಖಾತೆ ಸಮಸ್ಯೆ, ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಜನರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಇನ್ನು ಮುಂದೆ ಬಡವರ, ರೈತರ ಕೆಲಸಗಳಿಗೆ ಸರ್ಕಾರಿ ಅಧಿಕಾರಿಗಳು, ನೌಕರರು ಲಂಚ ಕೇಳಿದರೆ ನಮಗೆ ದೂರು ನೀಡಿ. ಇದಕ್ಕಾಗಿ ಸರ್ಕಾರಿ ಕಚೇರಿಯಲ್ಲಿ ಪ್ರತ್ಯೇಕ ದೂರವಾಣಿ ಸಂಖ್ಯೆ ನೀಡಲಾಗುವುದು. ಲಂಚ ಕೇಳುವವರನ್ನು ಬಲಿ ಹಾಕುತ್ತೇವೆ. ಸರ್ಕಾರಿ ಅಧಿಕಾರಿಗಳಿಗೆ ವೇತನ ಇದೆ. ಆದರೆ ರೈತನಿಗೆ ಸಂಬಳ, ಬಡ್ತಿ, ಪಿಂಚಣಿ, ಲಂಚ ಸಿಗುವುದಿಲ್ಲ. ಆದರೂ ಅವರು ಬದುಕಬೇಕು. ಅಧಿಕಾರಿಗಳು ಕೂಡ ಅವರ ಪರಿಸ್ಥಿತಿಯಲ್ಲಿ ನಿಂತು ಆಲೋಚನೆ ಮಾಡಬೇಕು. ಇಲ್ಲಿ ತಮ್ಮ ಸಮಸ್ಯೆ ನಿವಾರಣೆ ಮಾಡಿಕೊಳ್ಳಬೇಕು ಎಂದು ಜನ ಬಂದಿದ್ದಾರೆ. ಈ ಜನರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಅವರ ಕೆಲಸ ಮಾಡಿಕೊಡಬೇಕು ಎಂದು ಸೂಚಿಸಿದರು.

ನೀವು ಯಾವುದೇ ಪಕ್ಷಕ್ಕೆ ಮತ ಹಾಕಿದ್ದರೂ, ಬೆಂಬಲ ನೀಡಿದ್ದರೂ ಮುಜುಗರ ಬೇಡ. ನಮ್ಮ ಬಳಿ ಸಮಸ್ಯೆ ಹೇಳಿಕೊಳ್ಳಿ, ಪರಿಹಾರ ಪಡೆಯಿರಿ. ನೀವು ಇಲ್ಲಿ ಅರ್ಜಿ ಕೊಡಲು ಸಂಕೋಚ ಪಡುವುದಾದರೆ, ಅಂತಹವರು ತಾಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

ಸರ್ಕಾರದಿಂದ ಅನೇಕ ಸಮುದಾಯಗಳ ನಿಗಮಗಳಿವೆ. ಈ ನಿಗಮಗಳಲ್ಲಿ 1 ಲಕ್ಷ ರೂ. ಸಾಲ ಸೌಲಭ್ಯ ನೀಡಲಾಗುತ್ತಿದೆ. ಯುವಕರಿಗೆ ಸ್ವಯಂ ಉದ್ಯೋಗ ಮಾಡಲು ಸಬ್ಸಿಡಿ ಸಹಿತ ಸಾಲ ನೀಡಲಾಗುವುದು ಎಂದರು.

ನಿಮ್ಮ ಬದುಕಲ್ಲಿ ಬದಲಾವಣೆ ತರಲು ಬಂದಿದ್ದೇನೆ

ಈ ಕ್ಷೇತ್ರದಲ್ಲಿ ಬಗರ್ ಹುಕುಂ ಸಾಗುವಳಿ ಜಮೀನು, ಆಶ್ರಯ ಮನೆ ಯೋಜನೆ ಕುರಿತು ಸಭೆ ಆಗಿಲ್ಲ. ಈ ಹಿಂದೆ ಇದ್ದ ಶಾಸಕರು ಯಾಕೆ ಸಭೆ ಮಾಡಿಲ್ಲ ಎಂದು ಟೀಕೆ ಮಾಡಲು ಹೋಗುವುದಿಲ್ಲ. ಇಲ್ಲಿನ ಬಡವರಿಗೆ ನಿವೇಶನ, ಮನೆ ನೀಡಲು ಎಲ್ಲೆಲ್ಲಿ ಜಾಗ ಇದೆಯೋ ಅದನ್ನು ಗುರುತಿಸಿ. ಸರ್ಕಾರಿ ಜಮೀನು ಇಲ್ಲವಾದರೆ ನಿಮ್ಮ ನಿಮ್ಮ ಊರುಗಳಲ್ಲೇ 2-3 ಎಕರೆ ಜಾಗವನ್ನೂ ಸರ್ಕಾರದ ವತಿಯಿಂದ ಖರೀದಿ ಮಾಡುವ ಆಲೋಚನೆ ಇದೆ. ಚನ್ನಪಟ್ಟಣದಲ್ಲಿ ಕನಿಷ್ಠ 50 ಎಕರೆ ಜಾಗ ಗುರುತಿಸಿ ಅಲ್ಲಿ ಸರ್ಕಾರದ ವತಿಯಿಂದ ಲೇಔಟ್ ಮಾಡಿ, ನಿವೇಶನ ಹಂಚಿಕೆ ಮಾಡಲಾಗುವುದು. ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ನಾನು ಬಂದಿದ್ದೇನೆ ಎಂದು ಡಿಸಿಎಂ ತಿಳಿಸಿದರು.

ನಮ್ಮ ಸರ್ಕಾರ ಪ್ರತಿ ತಿಂಗಳು ಬಡ ಕುಟುಂಬದ ಮಹಿಳೆಗೆ 2 ಸಾವಿರ, ಉಚಿತ ಬಸ್ ಪ್ರಯಾಣ, ಅನ್ನಭಾಗ್ಯ ಅಕ್ಕಿ ಹಾಗೂ ಅಕ್ಕಿಯ ಹಣ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ನಿಮಗೆ ತಲುಪಿಸುತ್ತಿದೆ. ಈ ಹಿಂದೆ ಇದ್ದವರು ನಿಮಗೆ ಏನು ಸಹಾಯ ಮಾಡಿದರು, ಏನು ಮಾಡಲಿಲ್ಲ ಎಂಬುದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಅವರು ಅವರದೇ ಆದ ಲೆಕ್ಕಾಚಾರದಲ್ಲಿ ನಿಮ್ಮ ಹೃದಯ ಗೆದ್ದಿದ್ದರು. ನಾನು ನಿಮ್ಮ ಹೃದಯ ಗೆಲ್ಲಬೇಕು ಎಂದರೆ ಶ್ರಮ ವಹಿಸಿ ಕೆಲಸ ಮಾಡಬೇಕು. ನಿಮಗೆ ಆರ್ಥಿಕ ಶಕ್ತಿ ತುಂಬಿ, ನಿಮ್ಮ ಕೈ ಬಲಪಡಿಸಬೇಕು. ಈ ಕಾರಣಕ್ಕೆ ನಾನು ಸರ್ಕಾರಿ ಅಧಿಕಾರಿಗಳನ್ನು ನಿಮ್ಮ ಮನೆ ಬಾಗಿಲಿಗೆ ಕರೆತಂದಿದ್ದೇನೆ ಎಂದರು.

ಈ ಕಾರ್ಯಕ್ರಮ ನಮ್ಮ ಜವಾಬ್ದಾರಿ. ಜನರ ಋಣ ತೀರಿಸಲು ಇಲ್ಲಿಗೆ ಬಂದಿದ್ದೇವೆ. ಈ ಭಾಗದ ಜನ ನಿವೇಶನ, ಮನೆ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಡುತ್ತಿದ್ದಾರೆ. ಇಷ್ಟು ದಿನ ಇದ್ದ ಶಾಸಕರು ಇಲ್ಲಿಗೆ ಬಂದು ಮತ ಹಾಕಿಸಿಕೊಂಡು ಹೋಗುತ್ತಿದ್ದರು. ಈ ಕ್ಷೇತ್ರದ ಹಳ್ಳಿಗಳ ಕಡೆ ತಿರುಗಿ ನೋಡುತ್ತಿರಲಿಲ್ಲ. ನಾನು ಬೆಂಗಳೂರು, ರಾಮನಗರ, ಕನಕಪುರದಲ್ಲಿ ಈ ಕಾರ್ಯಕ್ರಮ ಮಾಡಿದ್ದೇನೆ. ಈ ಹಿಂದೆ ಇದ್ದವರಿಗೆ ಈ ಬಗ್ಗೆ ಆಸಕ್ತಿ ಇರಲಿಲ್ಲ, ಹೀಗಾಗಿ ಇಂತಹ ಕಾರ್ಯಕ್ರಮ ಮಾಡಲಿಲ್ಲ. ಇಷ್ಟು ದಿನ ನೀವು ಆಶ್ವಾಸನೆಯಲ್ಲಿ ಬದುಕಿದ್ದೀರಿ. ನಿಮ್ಮ ಕಷ್ಟಗಳಿಗೆ ಆದಷ್ಟು ಬೇಗ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಬಾರಿ ಚನ್ನಪಟ್ಟಣದಲ್ಲಿ ನಿಮ್ಮ ಕಷ್ಟಕ್ಕೆ ಸ್ಪಂದಿಸುವ ಶಾಸಕ ಆಯ್ಕೆಯಾಗುವ ಆತ್ಮವಿಶ್ವಾಸ ನನಗಿದೆ. ನಿಮಗೆ ನೋವಿದೆ, ಹಸಿದಿದ್ದೀರಿ. ನಿಮ್ಮ ಕಷ್ಟಕ್ಕೆ ಸ್ಪಂದಿಸುವ ಶಾಸಕನನ್ನು ಆಯ್ಕೆ ಮಾಡುತ್ತೀರಿ ಎಂಬ ನಂಬಿಕೆ, ವಿಶ್ವಾಸ ಇದೆ ಎಂದರು.

ಈ ಭಾಗದ ಅಭಿವೃದ್ಧಿಗೆ ವಿಶೇಷ ಅನುದಾನ

ಸರ್ಕಾರದಿಂದ 150-200 ಕೋಟಿಯಷ್ಟು ವಿಶೇಷ ಅನುದಾನ ತಂದು ಕ್ಷೇತ್ರದ ಎಲ್ಲಾ ಹಳ್ಳಿಗಳಲ್ಲಿ ಆಗಬೇಕಿರುವ ಕೆಲಸ ಮಾಡಲಾಗುವುದು. ನನ್ನ ನೀರಾವರಿ ಇಲಾಖೆಯಿಂದ 540 ಕೋಟಿ ವೆಚ್ಚದಲ್ಲಿ ಸತ್ತೆಗಾಲದಿಂದ 1.5 ಟಿಎಂಸಿ ನೀರು ಪೂರೈಸುವ ಕೆಲಸ ಮಾಡಲಾಗಿದೆ. ಇನ್ನು ಕಳೆದ ವರ್ಷ ಇಲ್ಲಿ ಮಳೆ ಬಂದು ನೀರು ನಿಂತಾಗ ನಾನು ಇಲ್ಲಿಗೆ ಬಂದು ಭೇಟಿ ನೀಡಿದ್ದೆ. ಇಲ್ಲಿ ನೀರು ಬಾರದಂತೆ ಕೋಡಿಹಳ್ಳಕ್ಕೆ ತಡೆಗೋಡೆ ನಿರ್ಮಿಸುವ ಯೋಜನೆಗೆ 1.40 ಕೋಟಿ ರೂ. ಅನುದಾನ ನೀಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಶಿವಕುಮಾರ್‌ ಹೇಳಿದರು.

ಈ ಭಾಗದಲ್ಲಿ ಸಿ.ಎಸ್. ಆರ್. ನಿಧಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಿಸಿ ಗ್ರಾಮೀಣ ಭಾಗದ ಮಕ್ಕಳಿಗೆ ಜಾಗತಿಕ ಮಟ್ಟದ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಈಗಾಗಲೇ ಟೊಯೊಟಾ ಅವರಿಂದ ಕೆಲವು ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿವೆ. ಇನ್ನು ಈ ಭಾಗದ ರೈತರ ಪಂಪ್‌ಸೆಟ್‌ಗಳಿಗೆ ಅನುಕೂಲವಾಗಬೇಕು ಎಂದು ನಾವು ಉಚಿತ ಟಿಸಿ ಹಾಕಿಸಿದ್ದೆವು. ಸುರೇಶ್ ಅವರು ಸಂಸದರಾಗಿದ್ದಾಗ ಈ ಸೌಲಭ್ಯ ಕಲ್ಪಿಸಲಾಯಿತು. ಪಕ್ಕದ ಮಂಡ್ಯದಲ್ಲಿ ಇಂತಹ ವ್ಯವಸ್ಥೆ ಇಲ್ಲ. ನನ್ನ ಕೊಡುಗೆ ಏನು ಎಂದು ಯಾರು ಏನಾದರೂ ಟೀಕೆ ಮಾಡಲಿ. ನನ್ನ ಹಾಗೂ ನಿಮ್ಮ ಸಂಬಂಧ ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ ಎಂದರು.

ತಕ್ಷಣವೇ ಬಸ್‌ ವ್ಯವಸ್ಥೆ ಮಾಡಲು ಸೂಚನೆ:

ಸಭೆಯಲ್ಲಿ ಸಿದ್ದರಾಮೇಶ್ವರ ಕಾಲೇಜು ಹಾಗೂ ಇತರೆ ಸರ್ಕಾರಿ ಶಾಲೆಗಳ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು “ಸರ್ ನಮಗೆ ಸಮಯಕ್ಕೆ ಸರಿಯಾಗಿ ಬಸ್ ಇಲ್ಲ. ಚನ್ನಪಟ್ಟಣದಿಂದ ಮಲ್ಲನಕುಪ್ಪೆಗೆ ಪ್ರತಿದಿನ 9 ಗಂಟೆಗೆ ತಲುಪುವಂತೆ ಬಸ್ ವ್ಯವಸ್ಥೆ ಕಲ್ಪಿಸಿ” ಎಂದು ಮನವಿ ಮಾಡಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ಮನವಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, “ನಮ್ಮ ಹೆಣ್ಣು ಮಕ್ಕಳು ಧೈರ್ಯ, ಓದುವ ಛಲದಿಂದ ಇಲ್ಲಿಯವರೆಗೂ ಬಂದಿದ್ದಾರೆ. ನಿಮ್ಮ ಅಧಿಕಾರಿಗೆ ಹೇಳಿ” ಎಂದು ಪಕ್ಕದಲ್ಲಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಹೇಳಿದರು. ಆಗ ಕೆಎಸ್‌ಆರ್‌ಟಿಸಿ ಅಧಿಕಾರಿಯನ್ನು ಕರೆದ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು, “ಸೋಮವಾರವೇ ಬಸ್ ಬರಬೇಕು. ಈ ವಿದ್ಯಾರ್ಥಿನಿಯರ ಸಮಸ್ಯೆ ಬಗೆಹರಿಸಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು.

Continue Reading

ಕರ್ನಾಟಕ

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

MEIL: ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಎನ್‌ಪಿಸಿಐಎಲ್‌) ಶುದ್ಧ ಮತ್ತು ಸುರಕ್ಷಿತ ಅಣು ವಿದ್ಯುತ್‌ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ರಾಜ್ಯದ ಕೈಗಾ ಸ್ಥಾವರದಲ್ಲಿ 2×700 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಯೋಜನೆ ರೂಪಿಸಿದೆ. ಇದಕ್ಕಾಗಿ ಎನ್‌ಪಿಸಿಎಲ್‌ ತನ್ನ ಈವರೆಗಿನ ಬೃಹತ್‌ ಮೊತ್ತ ಎನ್ನಬಹುದಾದದ 12,799 ಕೋಟಿ ರೂ.ಗಳ ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ದೇಶದ ಪ್ರಖ್ಯಾತ ಮೂಲಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ ಈ ವಿದ್ಯುತ್‌ ಸ್ವಾವಲಂಬಿ ನಿರ್ಮಾಣ ಟೆಂಡರ್‌ ಅನ್ನು ತನ್ನದಾಗಿಸಿಕೊಂಡಿದೆ.

VISTARANEWS.COM


on

MEIL got the opportunity to implement Kaiga nuclear power generation project
Koo

ಬೆಂಗಳೂರು: ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (MEIL) ಶುದ್ಧ ಮತ್ತು ಸುರಕ್ಷಿತ ಅಣು ವಿದ್ಯುತ್‌ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ರಾಜ್ಯದ ಕೈಗಾ ಸ್ಥಾವರದಲ್ಲಿ 2×700 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಯೋಜನೆ ರೂಪಿಸಿದೆ.

ಇದಕ್ಕಾಗಿ ಎನ್‌ಪಿಸಿಎಲ್‌ ತನ್ನ ಈವರೆಗಿನ ಬೃಹತ್‌ ಮೊತ್ತ ಎನ್ನಬಹುದಾದ 12,799 ಕೋಟಿ ರೂ.ಗಳ ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ದೇಶದ ಪ್ರಖ್ಯಾತ ಮೂಲಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ ಈ ವಿದ್ಯುತ್‌ ಸ್ವಾವಲಂಬಿ ನಿರ್ಮಾಣ ಟೆಂಡರ್‌ ಅನ್ನು (Bengaluru News) ತನ್ನದಾಗಿಸಿಕೊಂಡಿದೆ.

ಅಣುಶಕ್ತಿ ಇಲಾಖೆಯ ಅಧೀನದಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ ಪಿಸಿಐಎಲ್) ನಡೆಸುವ ಎಂಜಿನಿಯರಿಂಗ್, ಸಂಗ್ರಹಣೆ ಮತ್ತು ನಿರ್ಮಾಣ (ಇಪಿಸಿ) ಗುತ್ತಿಗೆಗೆ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಎಂಇಐಎಲ್) ಅತ್ಯಂತ ಕಡಿಮೆ ಬಿಡ್‌ದಾರನಾಗಿ ಹೊರಹೊಮ್ಮಿದೆ. ಈ ಪ್ರತಿಷ್ಠಿತ ಯೋಜನೆಯು ಕರ್ನಾಟಕದ ಕೈಗಾದಲ್ಲಿ ನಿರ್ಮಾಣವಾಗಲಿದ್ದು, ಶುದ್ಧ ಮತ್ತು ವಿಶ್ವಾಸಾರ್ಹ ಪರಮಾಣು ಶಕ್ತಿಯತ್ತ ಭಾರತದ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ಗುಣಮಟ್ಟ ಮತ್ತು ವೆಚ್ಚ ಆಧಾರಿತ ಆಯ್ಕೆ (ಕ್ಯೂಸಿಬಿಎಸ್) ವಿಧಾನವನ್ನು ಪರಿಚಯಿಸುವುದರೊಂದಿಗೆ ಈ ಯೋಜನೆಯು ಮಹತ್ವ ಪಡೆದುಕೊಂಡಿದ್ದು, ಈ ಕಠಿಣ ಯೋಜನೆ ಜಾರಿಗೆ ತಾಂತ್ರಿಕ ಪರಿಣಿತಿ ಮತ್ತು ಕಡಿಮೆ ವೆಚ್ಚದ ವಿದ್ಯುತ್‌ ಉತ್ಪಾದನೆ ಹಾದಿ ಸುಗಮಗೊಳಿಸಲಿದೆ.

ಟೆಂಡರ್ ಪ್ರಕ್ರಿಯೆಯು ಮೇ 2023ರಲ್ಲಿ ಪ್ರಾರಂಭವಾಯಿತು, ತಾಂತ್ರಿಕ ಬಿಡ್ ಅಕ್ಟೋಬರ್ 2023 ರಲ್ಲಿ ತೆರೆಯಲ್ಪಟ್ಟಿತು. ಅತ್ಯಂತ ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ದೇಶದ ಪ್ರಮುಖ ಮೂಲ ಸೌಕರ್ಯ ಸಂಸ್ಥೆಗಳಾದ ಬಿಎಚ್ಇಎಲ್, ಎಲ್ ಅಂಡ್‌ ಟಿ ಮತ್ತು ಎಂಇಐಎಲ್ ಆಸಕ್ತಿ ತೋರಿಸಿತ್ತು. ಎಂಇಐಎಲ್ 12,799.92 ಕೋಟಿ ರೂ.ಗಳ ಕನಿಷ್ಠ ಬಿಡ್ ಸಲ್ಲಿಸುವ ಮೂಲಕ ತನ್ನ ಅಸಾಧಾರಣ ತಾಂತ್ರಿಕ ಸಾಮರ್ಥ್ಯ ಮತ್ತು ವೆಚ್ಚ-ದಕ್ಷತೆಯನ್ನು ಪ್ರದರ್ಶಿಸುವ ಮೂಲಕ ಅತ್ಯಂತ ಕಡಿಮೆ ಬಿಡ್‌ದಾರನಾಗಿ ಹೊರಹೊಮ್ಮುವ ಮೂಲಕ ನಿರ್ಮಾಣ ಕಾರ್ಯದ ಜವಾಬ್ದಾರಿ ವಹಿಸಿಕೊಂಡಿದೆ.

“ಈ ಒಪ್ಪಂದವು ಎಂಇಐಎಲ್‌ಗೆ ಮಹತ್ವದ ಯೋಜನೆ ಜತೆಗೆ ಪರಮಾಣು ಇಂಧನ ಕ್ಷೇತ್ರದ ಪ್ರವೇಶಕ್ಕೆ ಸಮರ್ಥ ವೇದಿಕೆಯಾಗಿದೆ ” ಎಂದು ಎಂಇಐಎಲ್ ನಿರ್ದೇಶಕ ಸಿ.ಎಚ್.ಸುಬ್ಬಯ್ಯ ಹೇಳಿದ್ದಾರೆ.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

“ಉತ್ಕೃಷ್ಟತೆ ಮತ್ತು ನಾವೀನ್ಯತೆಗೆ ಹೆಸರುವಾಸಿಯಾಗಿರುವ ಎಂಇಐಎಲ್‌ ಈ ಯೋಜನೆ ಮೂಲಕ ದೇಶದ ಶುದ್ಧ ಇಂಧನ ಪರಿಹಾರ ಮತ್ತು ಸ್ವಾವಲಂಬನೆಗೆ ಕೊಡುಗೆ ನೀಡಲು ಉತ್ಸುಕವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

DK Shivakumar: ಬಿಜೆಪಿ ರೈತರ ವಿರೋಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM DK Shivakumar statement about milk price hike
Koo

ಬೆಂಗಳೂರು: ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ ಎಂದರು.

ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, “ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು ಏನಾದರೂ ವಿವಾದ ಮಾಡಲಿ, ಪರವಾಗಿಲ್ಲ. ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು. ರೈತರು ತಮ್ಮ ಹಸುಗಳನ್ನು ಮಾರಿಕೊಳ್ಳುವ ದುಸ್ಥಿತಿಯಲ್ಲಿ ಇದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಎಷ್ಟಿದೆ ಎಂದು ತಿಳಿದು, ಆಮೇಲೆ ಮಾತಾಡಲಿ. ರೈತರನ್ನು ಬದುಕಿಸುವ ಕೆಲಸ ಮಾಡಲಿ” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು: ವಿರೋಧ ಪಕ್ಷದ ನಾಯಕನಾಗಬೇಕು ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ. ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನ ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ತೀರ್ಮಾನ ಕೈಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಒತ್ತಡ ಹಾಕಿದ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಅಭಿನಂದನೆಗಳು. ಈ ದೇಶದ ರಕ್ಷಣೆ ಹಾಗೂ ಜನರ ಹಿತ ಕಾಯಲು ಇಂಡಿಯಾ ಮೈತ್ರಿಕೂಟ ಹೋರಾಟ ಮಾಡಲಿದೆ ಎಂದರು.

ಇದನ್ನೂ ಓದಿ: Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ. ಈ ಬಗ್ಗೆ ಉತ್ತರ ನೀಡಲು ಅವರೇ ಸೂಕ್ತ ವ್ಯಕ್ತಿ ಎಂದು ತಿಳಿಸಿದರು.

Continue Reading

ಬೆಂಗಳೂರು

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

HD Kumaraswamy: ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಮಂತ್ರಿ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

VISTARANEWS.COM


on

Union Minister HD Kumaraswamy latest statement in New Delhi
Koo

ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದರು.

ಕೆಂಪೇಗೌಡರ ಜಯಂತಿಗೆ ನನಗೆ ಆಹ್ವಾನ ಇಲ್ಲ, ಆಹ್ವಾನ ಪತ್ರಿಕೆಯಲ್ಲಿ ಹೆಸರೂ ಹಾಕಿಲ್ಲ ಎಂದು ನೀವು ಕೇಳಿದಿರಿ ಎನ್ನುವ ಕಾರಣಕ್ಕೆ ನಾನು ಮಾತಾಡಬೇಕಾಯಿತು. ನನ್ನ ಹೃದಯದಲ್ಲಿ ನಾಡಪ್ರಭುಗಳು ಇದ್ದಾರೆ. ಅವರು ಕಾರ್ಯಕ್ರಮಕ್ಕೆ ಕರೆಯದಿರುವುದಕ್ಕೆ ನನಗೆ ಬೇಸರವಿಲ್ಲ, ನಾನು ಈ ವಿಚಾರಕ್ಕೆ ಮಹತ್ವ ಕೊಡುವುದಿಲ್ಲ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ನಾನು ಯಾವಾಗಲೂ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿ ಎಂದು ಹೇಳುವುದಿಲ್ಲ. ಪ್ರೀತಿಯಿಂದ ಕರೆದರೆ ಹೋಗುತ್ತೇನೆ. ನಾನು ಈಗ ದೆಹಲಿಯಲ್ಲಿ ಸಂಸತ್ ಕಲಾಪದಲ್ಲಿ ಭಾಗಿಯಾಗಿದ್ದೇನೆ. ನಾಳೆಯ ದಿನ ರಾಷ್ಟ್ರಪತಿಗಳು ಸಂಸತ್ತಿನ ಜಂಟಿ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅವರು ಕರೆದಿದ್ದರೂ ಹೋಗಲು ಆಗುತ್ತಿರಲಿಲ್ಲ ಎಂದರು. ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆದಾಗಲೂ ಆ ನಗರಕ್ಕೆ ಕೊಡುಗೆ ಕೊಟ್ಟಿದ್ದೇನೆ. ಕೆಂಪೇಗೌಡರ ಹಿರಿಮೆಗೆ ಧಕ್ಕೆ ಆಗದ ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕೋ ಹಾಗೆ ನಡೆದುಕೊಂಡಿದ್ದೇನೆ ಎಂದು ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

ಕೆಂಪೇಗೌಡರ ಜಯಂತಿಯನ್ನು ಬೇರೆ ಬೇರೆ ರೀತಿಯಲ್ಲಿ ಜನರು ಆಚರಣೆ ಮಾಡುತ್ತಾರೆ. ಸರ್ಕಾರ ಬೇರೆ ರೀತಿಯಲ್ಲಿ ಆಚರಣೆ ಮಾಡುತ್ತದೆ. ದೇವನಹಳ್ಳಿ ಸೇರಿ ರಾಜ್ಯದ ಅನೇಕ ಭಾಗಗಳಲ್ಲಿ ಮನೆ ಮನೆಯಲ್ಲೂ ನಾಡಪ್ರಭುಗಳ ಭಾವಚಿತ್ರ ಇಟ್ಟು ಪೂಜೆ ಮಾಡಿ ಜಯಂತಿಯನ್ನು ಆಚರಣೆ ಮಾಡುತ್ತಾರೆ. ನಾನು ಸಹ ದೆಹಲಿಯಲ್ಲಿಯೇ ಕೆಂಪೇಗೌಡರನ್ನು ಸ್ಮರಣೆ ಮಾಡುತ್ತೇನೆ ಎಂದರು.

ಕೆಂಪೇಗೌಡರು ಕಟ್ಟಿಸಿದ ಕೆರೆಗಳನ್ನು ರಕ್ಷಿಸಿ

ಬೆಂಗಳೂರು ನಗರದ ಬಗ್ಗೆ ಇಂದು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಕೆಂಪೇಗೌಡರು. ಅವರು ಕಟ್ಟಿರುವ ಕೆರೆಗಳನ್ನು ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾದರೂ ಆ ಕೆರೆಗಳನ್ನು ಕಾಪಾಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಮೇಕೆದಾಟು ಕಟ್ಟಬೇಕು, ಕುಡಿಯುವ ನೀರು ತರುತ್ತೇವೆ ಎಂದೆಲ್ಲಾ ಹೇಳುತ್ತಾರೆ. ಆದರೆ, ನಗರದ ಜಲಮೂಲಗಳಾಗಿದ್ದ ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಈಗಲೇ ಕುಡಿಯಲು ನೀರಿಲ್ಲದೆ ಜನರು ಬೆಂಗಳೂರಿನಲ್ಲಿ ಪರದಾಡುವ ಪರಿಸ್ಥಿತಿ ಇದೆ. 15 ವರ್ಷವಾದ ಮೇಲೆ ಬೆಂಗಳೂರಿನ ಸ್ಥಿತಿ ಏನಾಗುತ್ತದೋ ಗೊತ್ತಿಲ್ಲ. ಈ ಸರಕಾರ ನ್ಯಾಯಯುತವಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡೋದಾದರೆ ಆ ಕೆರೆಗಳನ್ನು ರಕ್ಷಣೆ ಮಾಡುವಂತಹ ಕೆಲಸ ಮಾಡಲಿ. ಮಳೆ ನೀರನ್ನು ಸರಿಯಾಗಿ ಬಳಸಿಕೊಳ್ಳುವತ್ತ ಚಿಂತನೆ ಮಾಡಲಿ. ಇಷ್ಟು ಮಾಡಿದರೆ ನಾನು ಸರ್ಕಾರಕ್ಕೆ ಸಲ್ಯೂಟ್ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಬಿಜೆಪಿ ಅಭ್ಯರ್ಥಿ ಅಂತಲ್ಲ, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಒಮ್ಮತವಾಗಿ ಸ್ಪರ್ಧೆ ಮಾಡಲಿದ್ದಾರೆ. ಇನ್ನೂ ಸಾಕಷ್ಟು ಸಮಯ ಇದೆ. ನಾವು ನಿರ್ಧಾರ ಮಾಡುತ್ತೇವೆ. ಮೈತ್ರಿ ಅಭ್ಯರ್ಥಿ ಅಲ್ಲಿ ಸ್ಪರ್ಧೆ ಮಾಡುತ್ತಾರೆ. ಬಿಜೆಪಿ -ಜೆಡಿಎಸ್ ಎನ್ನುವ ವಿಚಾರ ಅಲ್ಲಿ ಬರೋದೇ ಇಲ್ಲಾ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು ಇದ್ದರು.

ಇದನ್ನೂ ಓದಿ: Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Continue Reading
Advertisement
Terrorists Killed
ಪ್ರಮುಖ ಸುದ್ದಿ33 mins ago

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

DCM Dk shivakumar statement in bagilige bantu sarkara sevege irali sahakara programme in channapattana
ಕರ್ನಾಟಕ1 hour ago

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

MEIL got the opportunity to implement Kaiga nuclear power generation project
ಕರ್ನಾಟಕ1 hour ago

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

DCM DK Shivakumar statement about milk price hike
ಕರ್ನಾಟಕ1 hour ago

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

Union Minister HD Kumaraswamy latest statement in New Delhi
ಬೆಂಗಳೂರು1 hour ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು1 hour ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ1 hour ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sam Pitroda
ಪ್ರಮುಖ ಸುದ್ದಿ2 hours ago

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

ECE V/S CSE
ಶಿಕ್ಷಣ2 hours ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Vijayalakshmi Darshan
ಕರ್ನಾಟಕ2 hours ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌