Dollu Kannada Movie | ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ರಿಲೀಸ್‌ ಡೇಟ್‌ ಫಿಕ್ಸ್‌ - Vistara News

ಸಿನಿಮಾ

Dollu Kannada Movie | ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ರಿಲೀಸ್‌ ಡೇಟ್‌ ಫಿಕ್ಸ್‌

ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ (Dollu Kannada Movie) ಇದೀಗ ಹೊಸ ಸುದ್ದಿಯೊಂದನ್ನು ನೀಡಿದೆ. ಸಾಗರ್ ಪುರಾಣಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಡೊಳ್ಳು ಬಿಡುಗಡೆಯ ದಿನಾಂಕವನ್ನು ಪ್ರಕಟಿಸಿದೆ.

VISTARANEWS.COM


on

Dollu Kannada Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸ್ಯಾಂಡಲ್‌ವುಡ್‌ ನಿರ್ದೇಶಕ ಪವನ್‌ ಒಡೆಯರ್‌ ನಿರ್ಮಾಣದ ಡೊಳ್ಳು ಸಿನಿಮಾ (Dollu Kannada Movie) ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (68th National Film Awards) ಪಡೆದ ಡೊಳ್ಳು ಸಿನಿಮಾ ಇದೀಗ ತೆರೆಗೆ ಬರಲು ಸಜ್ಜಾಗಿದೆ.

ಸ್ಯಾಂಡಲ್‌ವುಡ್‌ ನಿರ್ದೇಶಕ ಪವನ್‌ ಒಡೆಯರ್‌ ನಿರ್ಮಾಣದ ಡೊಳ್ಳು ಸಿನಿಮಾಗೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಘೋಷಿಸಲಾಗಿತ್ತು. ಇದೀಗ ಇದೇ ಆ.26ರಂದು ರಾಜ್ಯಾದ್ಯಂತ ಸಿನಿಮಾ ತೆರೆ ಕಾಣುತ್ತಿದೆ. ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ ಸಿನಿಮಾಗಳ ಮಧ್ಯೆ ಪ್ರಯೋಗಾತ್ಮಕ ಸಿನಿಮಾಗಳು ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಇದರ ಮುಂದುವರಿದ ಭಾಗವಾಗಿ ತಯಾರಾಗಿರುವ ಸಿನಿಮಾ ಡೊಳ್ಳು. ‘ಮಹಾನ್ ಹುತಾತ್ಮ’ ಕಿರುಚಿತ್ರದ ಸಾರಥಿ, ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ಈ ಸಿನಿಮಾದ ಆಡಿಯೋಗ್ರಫಿಗಾಗಿ ಅತ್ಯುತ್ತಮ ರಾಷ್ಟ್ರೀಯ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.

ಇದನ್ನೂ ಓದಿ | 68th National Film Awards | ಕನ್ನಡದ ಡೊಳ್ಳು ಮತ್ತು ತಲೆದಂಡಕ್ಕೆ ಪ್ರಶಸ್ತಿಯ ಗರಿ

ಪ್ರಶಸ್ತಿಗಳ ಸುರಿಮಳೆ

ಸಾಕಷ್ಟು ಅಂತಾರಾಷ್ಟ್ರೀಯ, ರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿಗಳನ್ನು ಈಗಾಗಲೇ ಈ ಸಿನಿಮಾ ಪಡೆದುಕೊಂಡಿದೆ. ಕಿರುತೆರೆ ನಟ ಕಾರ್ತಿಕ್‌ ಮಹೇಶ್‌, ನಿಧಿ ಹೆಗ್ಡೆ, ಬಾಬು ಹಿರಣ್ಣಯ್ಯ, ಚಂದ್ರ ಮಯೂರ್‌, ಶರಣ್‌ ಸುರೇಶ್‌ ಚಿತ್ರದಲ್ಲಿ ನಟಿಸಿದ್ದಾರೆ. ಅನಂತ್‌ ಕಾಮತ್‌ ಸಂಗೀತ ನಿರ್ದೇಶನ ಮಾಡಿದ್ದು, ಅಭಿಲಾಷ್‌ ಕಳತ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದ ಡೊಳ್ಳು ಪ್ರತಿಷ್ಠಿತ ಬರ್ಲಿನ್‌ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ 9 ಭಾರತೀಯ ಸಿನಿಮಾಗಳಲ್ಲಿ ಒಂದು. ಢಾಕಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿಯೂ ಡೊಳ್ಳು ಸಿನಿಮಾ ಪ್ರದರ್ಶನಗೊಂಡಿದೆ. ಚೆನ್ನೈನಲ್ಲಿ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದೆ. ಇದರ ಜತೆ ಹ್ಯಾಬಿಟಾಟ್‌ ಅಂತಾರಾಷ್ಟ್ರೀಯ ಚಿತ್ರೋತ್ಸವ ಹೀಗೆ ಹಲವು ಚಿತ್ರೋತ್ಸವಗಳಲ್ಲಿ ಬಿಡುಗಡೆಗೂ ಮುನ್ನ ಪ್ರಶಸ್ತಿ ಬಾಚಿಕೊಂಡಿದೆ.

ಜನಪದ ಕಲೆ ಸಾರುವ ಡೊಳ್ಳು ಟೀಸರ್‌!

ಈ ಹಿಂದೆ ಡೊಳ್ಳು ಸಿನಿಮಾ ಟೀಸರ್‌ ರಿಲೀಸ್‌ ಆಗಿದ್ದಾಗ ಜನರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದರು. ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಾಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್‌ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ ತಿಳಿಸಲಾಗಿದೆ.

ಚಿತ್ರವನ್ನು ಶಿವಮೊಗ್ಗ, ಸೊರಬ, ಶಿಕಾರಿಪುರ, ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷವಾಗಿ ಈ ಚಿತ್ರಕ್ಕೆ ವೃತ್ತಿಪರ ಡೊಳ್ಳು ಕುಣಿತಗಾರರಿಂದಲೇ ಹೆಜ್ಜೆ ಹಾಕಿಸಲಾಗಿದೆ.

ಇದನ್ನೂ ಓದಿ |Dollu Teaser| ಅಂತಾರಾಷ್ಟ್ರೀಯ ಖ್ಯಾತಿ ಪಡೆದ ಡೊಳ್ಳು ಸಿನಿಮಾ ಟೀಸರ್‌ ಔಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

Rave Party: ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣದಲ್ಲಿ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಮಾದಕ ವಸ್ತು ಸೇವನೆ ಆರೋಪದಲ್ಲಿ ತೆಲುಗು ನಟಿ ಹೇಮಾ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Rave Party
Koo

ಬೆಂಗಳೂರು: ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ಬಂಧನವಾಗಿದ್ದ ತೆಲುಗು ನಟಿ ಹೇಮಾ ಅವರಿಗೆ 12 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದಾರೆ.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದರು. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾದಾಗ ಅವರನ್ನು ಬಂಧಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ರಾತ್ರಿ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಅವರ ಮುಂದೆ ನಟಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ, ನಟಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ಬಂಧಿಸಲಾಗಿದೆ.

ನಾನೇನು ತಪ್ಪು ಮಾಡಿಲ್ಲ ಎಂದ ನಟಿ

ಕೋರ್ಟ್‌ಗೆ ಹಾಜರುಪಡಿಸುವಾಗ ನಟಿ ಹೇಮಾ ಮಾತನಾಡಿ, ನಾನೇನು ತಪ್ಪು ಮಾಡಿಲ್ಲ. ನಾನು ನಿಜವಾಗಿಯೂ ಹೈದರಾಬಾದ್‌ನಿಂದಲೇ ವಿಡಿಯೊ ಕಳುಹಿಸಿದ್ದೆ. ಬರ್ತ್ ಡೇ ಕೇಕ್ ಕಟ್ ಮಾಡಿ ಹೈದರಾಬಾದ್‌ಗೆ ಹೋಗಿಬಿಟ್ಟಿದ್ದೆ. ನಮ್ಮ ಮನೆಯಿಂದ ಬಿರಿಯಾನಿ ಮಾಡುವ ವಿಡಿಯೊ ಹಾಕಿದ್ದೆ. ನಾನು ಡ್ರಗ್ಸ್ ತೆಗೆದುಕೊಂಡಿಲ್ಲ. ಅವರು ಎಲ್ಲಾ ಟೆಸ್ಟ್‌ಗಳನ್ನು ಮಾಡಿದ್ದಾರೆ. ಸುಖಾಸುಮ್ಮನೆ ನನ್ನನ್ನು ಸಿಲುಕಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

ಎಂಡಿಎಂಎ ಸೇವಿಸಿದ್ದ ನಟಿ

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾರೆ? ಇದರ ಜಾಲ ಯಾವುದು? ಎಂಬಿತ್ಯಾದಿ ಅಂಶಗಳನ್ನು ಬಯಲಿಗೆಳೆಯಲು ತಯಾರಿ ನಡೆಸಲಾಗಿದೆ.

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಇದನ್ನೂ ಓದಿ | Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

Continue Reading

ಕರ್ನಾಟಕ

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

Rave Party: ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಸೋಮವಾರ ಹಾಜರಾದ ವೇಳೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಳೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲು ಸಿಸಿಬಿ ಅಧಿಕಾರಿಗಳು ತೀರ್ಮಾನಿಸಿದ್ದಾರೆ.

VISTARANEWS.COM


on

Rave Party
Koo

ಬೆಂಗಳೂರು: ರೇವ್ ಪಾರ್ಟಿ ಪ್ರಕರಣದಲ್ಲಿ (Rave Party) ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾಗಿದ್ದ ನಟಿಯನ್ನು ಬಂಧಿಸಲಾಗಿದೆ. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದು, ಈ ವೇಳೆ ಅವರನ್ನು ಸಿಸಿಬಿ ತನಿಖಾಧಿಕಾರಿಗಳು ಬಂಧಿಸಿ ಹೇಳಿಕೆ ಪಡೆಯುತ್ತಿದ್ದಾರೆ.

ಎರಡು ಬಾರಿ ನೋಟಿಸ್ ನೀಡಿದ್ದರೂ ಸಹ ವಿಚಾರಣೆಗೆ ನಟಿ ಬಂದಿರಲಿಲ್ಲ. ಇನ್ನು ವಿಚಾರಣೆ ವೇಳೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ನಟಿಯನ್ನು ಬಂಧಿಸಲಾಗಿದೆ. ಸದ್ಯ ನಟಿಗೆ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ವಶಕ್ಕೆ ಪಡೆದಿದ್ದು, ನಾಳೆ ಕೋರ್ಟ್‌ಗೆ ಹಾಜರುಪಡಿಸಲು ಸಿಸಿಬಿ ತೀರ್ಮಾನಿಸಿದೆ.

ನಟಿ ಹೇಮಾ ಸೇವಿಸಿದ್ದು ಯಾವ ಡ್ರಗ್ಸ್?

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾರೆ? ಇದರ ಜಾಲ ಯಾವುದು? ಎಂಬಿತ್ಯಾದಿ ಅಂಶಗಳನ್ನು ಬಯಲಿಗೆಳೆಯಲು ತಯಾರಿ ನಡೆಸಲಾಗಿದೆ.

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

ಕಿರಿಕ್‌ ಮಾಡಿದ್ದ ನಟಿ ಹೇಮಾ

ಜಿಆರ್ ಫಾರ್ಮ್ ಹೌಸ್‌ನಲ್ಲಿ ಶನಿವಾರ ರಾತ್ರಿಯಿಂದಲೇ ರೇವ್ ಪಾರ್ಟಿ ಶುರುವಾಗಿತ್ತು ಎಂಬುದು ಗೊತ್ತಾಗಿದೆ. ಒಂದು ದಿನ ಪಾರ್ಟಿ ಆದ ಬಳಿಕ ಸಿಸಿಬಿ ಪೊಲೀಸರಿಗೆ ವಿಚಾರ ತಿಳಿದು ರೈಡ್ ಮಾಡಲಾಗಿದೆ‌. ಇದರ ಜತೆಗೆ ಸಿಸಿಬಿ ಪೊಲೀಸರೊಂದಿಗೆ ನಟಿ ಹೇಮಾ ಕಿರಿಕ್ ಮಾಡಿದ್ದಾರೆ. ವಿಚಾರಣೆಗೆಂದು ಪೊಲೀಸರು ಇರಿಸಿಕೊಂಡಿದ್ದಾಗ ಕಿರಿಕ್ ತೆಗೆದು, ನನಗೆ ಸರಿಯಾದ ಊಟ ಕೊಟ್ಟಿಲ್ಲ. ನಾನೊಬ್ಬ ನಟಿ ಸರಿಯಾಗಿ ಟ್ರೀಟ್ ಮಾಡಿ ಎಂದು ಆಕ್ರೋಶ ಹೊರಹಾಕಿದ್ದರು ಎಂದು ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Kannada New Movie: 1980-90ರ ದಶಕದಲ್ಲಿನ ಸೂಕ್ಷ್ಮ ಹಾಗೂ ಸುಂದರವಾದ ಭಾವನೆಗಳ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಶ್ರೀಲಕ್ಷ್ಮಿ ನರಸಿಂಹ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಈ ಚಿತ್ರದಲ್ಲಿ ನಾಯಕನಾಗಿ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ನಟಿಸುತ್ತಿದ್ದಾರೆ.

VISTARANEWS.COM


on

Kannada New Movie Mandela nari shrinivas
Koo

ಬೆಂಗಳೂರು: ʻಮಂಡೇಲಾʼ (Kannada New Movie) ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ. ಪ್ರತಿಭಾವಂತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ನಾರಿ ಶ್ರೀನಿವಾಸ್ ಹಲವು ಹಿಟ್‌ ಸಿನಿಮಾಗಳನ್ನು ನೀಡಿದವರು. ಶ್ರೀಧರ್ ಪೂರ್ವಜಿತ್ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು. ಆ ಚಿತ್ರದ ಹೆಸರು ಮಂಡೇಲಾ.

ಇದೊಂದು ವಿಭಿನ್ನ ಪ್ರಯೋಗದ ಚಿತ್ರ ಎಂದೂ ಹೇಳಬಹುದು. ಸಿನಿಮಾ ಎಂದಮೇಲೆ ಹಲವಾರು ಪಾತ್ರಗಳಿರಬೇಕಲ್ಲವೆ, ಈ ಚಿತ್ರದಲ್ಲೂ ಒಂದಷ್ಟು ಪಾತ್ರಗಳಿವೆ. ಆದರೆ ಪ್ರಮುಖವಾಗಿ ಮೂರು ಪಾತ್ರಗಳ ಮೂಲಕ ನಿರ್ದೇಶಕರು ಕಥೆಯನ್ನು ಹೇಳಹೊರಟಿದ್ದಾರೆ.

1980-90ರ ದಶಕದಲ್ಲಿನ ಸೂಕ್ಷ್ಮ ಹಾಗೂ ಸುಂದರವಾದ ಭಾವನೆಗಳ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಶ್ರೀಲಕ್ಷ್ಮಿ ನರಸಿಂಹ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಈ ಚಿತ್ರದಲ್ಲಿ ನಾಯಕನಾಗಿ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ನಟಿಸುತ್ತಿದ್ದಾರೆ. ಅಲ್ಲದೆ ಚಿತ್ರದಲ್ಲಿ ಇಬ್ಬರು ನಾಯಕಿಯರು ನಟಿಸುತ್ತಿದ್ದು, ಅವರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಇದನ್ನೂ ಓದಿ: Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

ಕನ್ನಡದಲ್ಲಿ ಈಗಾಗಲೇ ʻಬಾ ನಲ್ಲೆ ಮಧುಚಂದ್ರಕೆʼ, ʻಬೆಳದಿಂಗಳ ಬಾಲೆʼಯಂಥ ಚಿತ್ರಗಳು ಬಂದು ಹೋಗಿವೆ. ಆಗಿನಿಂದಲೂ ಹೊಸಥರದ ಕಂಟೆಂಟ್ ಇರುವ ಕಥೆಗಳನ್ನು ನಮ್ಮ ಜನ ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಅದೇರೀತಿ ನಮ್ಮ ಹೊಸ ಈ ಪ್ರಯತ್ನವನ್ನೂ ಪ್ರೇಕ್ಷಕರು ಕೈ ಹಿಡಿಯುತ್ತಾರೆ ಎಂಬ ಭರವಸೆಯನ್ನು ಚಿತ್ರದ ನಾಯಕ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ವ್ಯಕ್ತಪಡಿಸಿದರು.

ಕನ್ನಡ, ತೆಲುಗು, ತಮಿಳು ಸೇರಿ ಮೂರು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜುಲೈ 2 ಅಥವಾ 3ನೇ ವಾರ ಈ ಚಿತ್ರ ಸೆಟ್ಟೇರಲಿದೆ. ಮಂಡೇಲಾದ ಸ್ಕ್ರಿಪ್ಟ್ ಅಂತಿಮ ಹಂತದಲ್ಲಿದೆ.

Continue Reading

ಟಾಲಿವುಡ್

Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

Ram Charan: ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ.

VISTARANEWS.COM


on

Ram Charan Instagram story of daughter Klin Kaara receiving bujji
Koo

ಬೆಂಗಳೂರು: ಟಾಲಿವುಡ್ ಸೂಪರ್‌ಸ್ಟಾರ್ ರಾಮ್ ಚರಣ್ (Ram Charan) ಮತ್ತು ಪ್ರಭಾಸ್‌ (Prabhas) ನಡುವೆ ಒಳ್ಳೆಯ ಆತ್ಮೀಯತೆ ಇದೆ. ಪ್ರಭಾಸ್ ನಟನೆಯ ‘ಕಲ್ಕಿ 2898 AD’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ‘ಬುಜ್ಜಿ’ ಕಾರ್ ಮೂಲಕ ಸಿನಿಮಾ ಪ್ರಮೋಷನ್ ಆರಂಭಿಸಲಾಗಿದೆ. ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. ʻಬುಜ್ಜಿʼ ವಾಹನವನ್ನು ಹೋಲುವ ಚಿಕ್ಕ ಬೇಬಿ ರಾಕರ್ ಅನ್ನು ಚಿತ್ರತಂಡ ರಾಮ್‌ಚರಣ್‌ ಮಗಳು ಕ್ಲಿಂಕಾರಳಿಗೆ ಉಡುಗೊರೆಯಾಗಿ ನೀಡಿದೆ.

ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Jackfruit seeds: ಹಲಸಿನ ಬೀಜ ಎಂದು ಕಡೆಗಣಿಸಬೇಡಿ, ಇದರ ಉಪಯೋಗ ಎಷ್ಟೊಂದು!

ಏನಿದು ಬುಜ್ಜಿ ಕಾರ್‌?

ಬರೋಬ್ಬರಿ 7 ಕೋಟಿ ವೆಚ್ಚದಲ್ಲಿ ಈ ಕಾಲ್ಪನಿಕ ವಾಹನವನ್ನು ಸಿದ್ಧಪಡಿಸಿದ್ದಾರೆ ಎನ್ನಲಾಗುತ್ತಿದೆ. ಬುಜ್ಜಿ ವಾಹನವನ್ನು ಹೋಲುವ ಚಿಕ್ಕ ಬೇಬಿ ರಾಕರ್ ಅನ್ನು ಚಿತ್ರತಂಡ ಕ್ಲಿಂಕಾರಳಿಗೆ ಉಡುಗೊರೆಯಾಗಿ ನೀಡಿದೆ. ಇದನ್ನು ಫೋಟೊ ಉಪಾಸನಾ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಬುಜ್ಜಿ ರಾಕರ್ ಜತೆ ಕ್ಲಿಂಕಾರ ಆಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಉಡುಗೊರೆ ಜೊತೆಗೆ ಒಂದು ಪತ್ರವನ್ನು ಕಳುಹಿಸಲಾಗಿದೆ. ಉಪಾಸನಾ ಸಂತಸ ವ್ಯಕ್ತಪಡಿಸಿ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Continue Reading
Advertisement
Mallikarjun Kharge
Lok Sabha Election 20244 hours ago

Mallikarjun Kharge: ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಿ: ಮತ ಎಣಿಕೆ ಸಿಬ್ಬಂದಿಗೆ ಮಲ್ಲಿಕಾರ್ಜುನ ಖರ್ಗೆ ಕರೆ

SA vs SL
ಕ್ರೀಡೆ5 hours ago

SA vs SL: ಲಂಕಾ ದಹನ ಮಾಡಿದ ನೋರ್ಜೆ; ಹರಿಣ ಪಡೆಗೆ 6 ವಿಕೆಟ್​ ಜಯ

Arecanut Price
ಕೃಷಿ5 hours ago

Arecanut Price: ಅಡಿಕೆ ಧಾರಣೆ ನಿರೀಕ್ಷೆ ಮೀರಿ ಏರಲಿದೆ! ಇದು ರೈತರ ‘ನಂಬಿಕೆ’ ಮತ್ತು ‘ಅಭಿಪ್ರಾಯ’ಗಳ ಎಕ್ಸಿಟ್ ಪೋಲ್!

First PU Class Commencement Programme at Vishwadarshana College
ಉತ್ತರ ಕನ್ನಡ5 hours ago

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Job News
ಉದ್ಯೋಗ5 hours ago

Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

Road Accident
ಕರ್ನಾಟಕ6 hours ago

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

T20 World Cup 2024
ಕ್ರೀಡೆ6 hours ago

T20 World Cup 2024: ದೂರದರ್ಶನದಲ್ಲಿಯೂ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​ ಪಂದ್ಯಾವಳಿ

Uttara Kannada Lok Sabha Constituency
ಉತ್ತರ ಕನ್ನಡ6 hours ago

Uttara Kannada Lok Sabha Constituency: ಉತ್ತರ ಕನ್ನಡ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ?

Dr. K Sudhakar
ಕರ್ನಾಟಕ6 hours ago

Dr. K Sudhakar: ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ; ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್

Rave Party
ಕರ್ನಾಟಕ7 hours ago

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ13 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌