ಚಾಮರಾಜಪೇಟೆ ಮೈದಾನ: ಖಾಕಿ ಕಣ್ಗಾವಲು, ಕೆಎಸ್‌ಆರ್‌ಪಿ ಪಥಸಂಚಲನ - Vistara News

ಪ್ರಮುಖ ಸುದ್ದಿ

ಚಾಮರಾಜಪೇಟೆ ಮೈದಾನ: ಖಾಕಿ ಕಣ್ಗಾವಲು, ಕೆಎಸ್‌ಆರ್‌ಪಿ ಪಥಸಂಚಲನ

ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದು, ಪೊಲೀಸರು ಹಾಗೂ ಕೆಎಸ್‌ಆರ್‌ಪಿ ಪಡೆಯವರು ಶುಕ್ರವಾರ ಪಥಸಂಚನ ನಡೆಸಿದರು.

VISTARANEWS.COM


on

eidgah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದೂ ಹಾಗೂ ಮುಸ್ಲಿಂ ಪರ ಸಂಘಟನೆಗಳ ನಡುವಿನ ತಿಕ್ಕಾಟ, ಸಂಘರ್ಷಕ್ಕೆ ಕಾರಣವಾಗಿರುವ ಚಾಮರಾಜಪೇಟೆಯ ಮೈದಾನದಲ್ಲಿ ಪೊಲೀಸ್‌ ಹಾಗೂ ಅರೆಸೇನಾ ಪಡೆಗಳು ಪಥಸಂಚಲನ ನಡೆಸಿದವು.

ಚಾಮರಾಜಪೇಟೆಯ ರಸ್ತೆಗಳು ಹಾಗೂ ಮೈದಾನದಲ್ಲಿ ಕೆಎಸ್ಆರ್‌ಪಿ‌ ತುಕಡಿ ಹಾಗು ಪೊಲೀಸರು ಸೇರಿ ಸುಮಾರು 600 ಸಿಬ್ಬಂದಿ ಪಥಸಂಚಲನದಲ್ಲಿ ಭಾಗಿಯಾದರು. ಡಿಸಿಪಿ ಲಕ್ಷ್ಮಣ್ ನಿಂಬರಗಿ, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಏರಿಯಾ ಮ್ಯಾಪಿಂಗ್ ನಡೆಸಿದ್ದಾರೆ.

ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿ, ಪರಿಸರದಲ್ಲಿ ಶಾಂತಿ ಕಾಪಾಡುವ ಹಾಗೂ ದುಷ್ಕೃತ್ಯಕ್ಕೆ ಮುಂದಾಗಲಿರುವ ಕಿಡಿಗೇಡಿಗಳಿಗೆ ಎಚ್ಚರ ನೀಡುವ ಉದ್ದೇಶದಿಂದ ಈ ಪರೇಡ್‌ ನಡೆಸಲಾಗಿದೆ ಎಂದರು.

ಆಗಸ್ಟ್‌ 15ರಂದು ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ಶಾಂತಿಯುತವಾಗಿ ಸರ್ಕಾರದ ಕಡೆಯಿಂದಲೇ ಇಲ್ಲಿ ಧ್ವಜಾರೋಹಣ ನಡೆಯಲಿದೆ. ಯಾವುದೇ ರೀತಿಯ ಗಲಭೆಗೆ ಆಸ್ಪದ ಇಲ್ಲ. ಕಾರ್ಯಕ್ರಮಕ್ಕೆ ಆಹ್ವಾನ ಇರುವವರಿಗೆ ಮಾತ್ರ ಅವಕಾಶ. ಎರಡು ತುಕಡಿ ಕೆಎಸ್‌ಆರ್‌ಪಿ ಸಿಬ್ಬಂದಿ ಹಾಗೂ ಪೊಲೀಸರು ಸದಾ ಇಲ್ಲಿರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಜಮೀರ್‌ ಅಹ್ಮದ್‌ಗೆ ಹಿನ್ನಡೆ: ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯ ಸರ್ಕಾರದಿಂದಲೇ ಧ್ವಜಾರೋಹಣ

ಈದ್ಗಾ ಮೈದಾನ ಹಾಟ್‌ಸ್ಪಾಟ್‌

ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಈಗ ಈದ್ಗಾ ಮೈದಾನ ಹಾಟ್‌ಸ್ಪಾಟ್ ಎನಿಸಿದೆ. ಕಂದಾಯ ಇಲಾಖೆಯ ಸುಪರ್ದಿಗೆ ಬಂದ ಬಳಿಕ ಈದ್ಗಾ ಮೈದಾನದಲ್ಲಿ ಪ್ರಥಮ ಬಾರಿಗೆ ಸರ್ಕಾರದ ವತಿಯಿಂದ ಧ್ವಜಾರೋಹಣ ನಡೆಯಲಿದೆ. ಪ್ರತಿ ಬಾರಿ ಮಾಣಿಕ್ ಶಾ ಪರೇಡ್ ಗ್ರೌಂಡ್‌ನಲ್ಲಿ ಹೆಚ್ಚಿನ ಭದ್ರತೆ ನೀಡಲಾಗುತಿತ್ತು. ಆದರೆ ಈ ಬಾರಿ ಈದ್ಗಾ ಮೈದಾನಕ್ಕೆ ಹೆಚ್ಚಿನ ಪೊಲೀಸ್ ದಳ ನಿಯೋಜನೆ ಮಾಡಲಾಗಿದೆ‌. ಆಗಸ್ಟ್ 15ರಂದು ಹೆಚ್ಚಿನ ಭದ್ರತೆ ಬೇಕಿರುವ ಹಿನ್ನೆಲೆಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್‌ಗೂ ಪೊಲೀಸ್ ಇಲಾಖೆ ಮನವಿ ಮಾಡಲಿದೆ.

eidgah

ಚಾಮರಾಜಪೇಟೆ ಮೈದಾನದಲ್ಲಿ ಮುಸ್ಲಿಮರು ಹಾಗೂ ಹಿಂದೂಗಳು ಕಾರ್ಯಕ್ರಮ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಪ್ರದೇಶದ ಸೂಕ್ಷ್ಮ ಪರಿಸ್ಥಿತಿ ಅರಿತ ಪೊಲೀಸರು ಸ್ಥಳದಲ್ಲಿ ಸಾಕಷ್ಟು ಮುಂಜಾಗರೂಕತೆ ವಹಿಸಿದ್ದಾರೆ. 15 ದಿನಗಳಿಂದ ಕೆಎಸ್‌ಆರ್‌ಪಿ ತುಕಡಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿವೆ.

ಪಶ್ಚಿಮ ವಿಭಾಗದ ಪೊಲೀಸರು ಮಫ್ತಿಯಲ್ಲಿ ಮಾಹಿತಿ ಕಲೆ ಹಾಕುತ್ತಿದ್ದು, ಅಂಗಡಿ ಮುಂಗಟ್ಟು, ಬಾರ್ ಆ್ಯಂಡ್ ರೆಸ್ಟೋರೆಂಟ್, ಸಂಘಸಂಸ್ಥೆಗಳು, ಕಚೇರಿಗಳು, ಸಾರ್ವಜನಿಕ ಪ್ರದೇಶಗಳು, ಆಟೋ ಸ್ಟಾಂಡ್‌ಗಳು, ದೇವಾಲಯಗಳು ಹೀಗೆ ಹತ್ತು ಹಲವಾರು ಕಡೆ ಬಾತ್ಮಿದಾರರನ್ನು ಹೆಚ್ಚಿಸಿಕೊಂಡಿದ್ದಾರೆ. ದಿನದ 24 ಗಂಟೆಯೂ ಗಸ್ತು ನಡೆಸುತ್ತಿರುವ ಪೊಲೀಸ್ ಪಡೆ ಮೈದಾನದ ಸುತ್ತಮುತ್ತ ಜನ ಗುಂಪುಗೂಡದಂತೆ ನೋಡಿಕೊಂಡಿದ್ದಾರೆ. ಸ್ಥಳೀಯ ಮತ್ತು ಸುತ್ತಮುತ್ತಲಿನ ಪೊಲೀಸ್ ಠಾಣೆಗಳ ರೌಡಿ ಶೀಟರ್‌ಗಳ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದಾರೆ.

ಇದನ್ನೂ ಓದಿ: ಈದ್ಗಾ ಮೈದಾನ ಇನ್ನು `ಸರ್ವೇ ನಂಬರ್‌ 40-ಗುಟ್ಟಹಳ್ಳಿʼ: ಸಚಿವ ಆರ್‌. ಅಶೋಕ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Dubbing Premier League: ಕಳೆದ ಎರಡು ಆವೃತ್ತಿಯ ಯಶಸ್ಸಿನ ಹಿನ್ನೆಲೆಯಲ್ಲಿ ಕಲಾವಿದರೇ ಜತೆಯಾಗಿ ಸೇರಿಕೊಂಡು ಈ ಟೂರ್ನಿಯನ್ನು ಅಯೋಜಿಸಿದ್ದಾರೆ. ಕರ್ನಾಟಕದ ಜನಪ್ರಿಯ ಸುದ್ದಿವಾಹಿನಿ ‘ವಿಸ್ತಾರ ನ್ಯೂಸ್​’ ಈ ಟೂರ್ನಿಗೆ ಮಾಧ್ಯಮ ಸಹಯೋಗ ನೀಡಿದೆ. ಅದೇ ರೀತಿ ಎಮ್​ ಸ್ಪೋರ್ಟ್​​ ಯೂಟ್ಯೂಬ್ ಚಾನೆಲ್​ನಲ್ಲಿ ಪಂದ್ಯದ ಕ್ಷಣಗಳು ನೇರ ಪ್ರಸಾರವಾಗಲಿದ್ದು https://cricheroes.com/ ನಲ್ಲಿ ಲೈವ್ ಸ್ಕೋರ್ ಅಪ್​ಡೇಟ್​ ಸಿಗಲಿದೆ.

VISTARANEWS.COM


on

Dubbing Premier League
Koo

ಬೆಂಗಳೂರು: ಕನ್ನಡ ಸಿನಿಮಾ ಹಾಗೂ ಕಿರುತೆರೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಸಂಖ್ಯಾತ ಡಬ್ಬಿಂಗ್ ಕಲಾವಿದರು ಹಾಗೂ ಕಲಾವಿದರ ಸಮಾಗಮದೊಂದಿಗೆ ಆಯೋಜಿಸಲಾಗುತ್ತಿರುವ ಡಬ್ಬಿಂಗ್​ ಪ್ರೀಮಿಯರ್ ಲೀಗ್ (Dubbing Premier League)​ ಕ್ರಿಕೆಟ್​ ಟೂರ್ನಿಯ ಮೂರನೇ ಆವೃತ್ತಿ ಶನಿವಾರ (ಮೇ 18) ಹಾಗೂ ಭಾನುವಾರ (ಮೇ 19)ರಂದು ನಡೆಯಲಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಗ್ಲೋಬಲ್​ ಅಕಾಡೆಮಿ ಆಫ್​ ಟೆಕ್ನಾಲಜಿಯ ಮೈದಾನದಲ್ಲಿ ಈ ಟೂರ್ನಿಯು ಪಂದ್ಯಗಳು ಅಯೋಜನೆಗೊಂಡಿದೆ. ಈ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಸಿನಿ ಹಾಗೂ ಕಿರುತೆರೆ ಕ್ಷೇತ್ರದ ಹೆಸರಾಂತ ಕಲಾವಿದರು ಹಾಗೂ ಸೆಲೆಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ. ಅವರೆಲ್ಲರೂ ಒಂದೆಡೆ ಸೇರಿ “ಜಂಟಲ್​ಮ್ಯಾನ್ಸ್​ ಸ್ಪೋರ್ಟ್”​​ ಎಂದೇ ಕರೆಯವ ಕ್ರಿಕೆಟ್​ ಆಡಿ ಸಂಭ್ರಮಿಸಲಿದ್ದಾರೆ.

ಕಳೆದ ಎರಡು ಆವೃತ್ತಿಯ ಯಶಸ್ಸಿನ ಹಿನ್ನೆಲೆಯಲ್ಲಿ ಕಲಾವಿದರೇ ಜತೆಯಾಗಿ ಸೇರಿಕೊಂಡು ಈ ಟೂರ್ನಿಯನ್ನು ಅಯೋಜಿಸಿದ್ದಾರೆ. ಕರ್ನಾಟಕದ ಜನಪ್ರಿಯ ಸುದ್ದಿವಾಹಿನಿ ‘ವಿಸ್ತಾರ ನ್ಯೂಸ್​’ ಈ ಟೂರ್ನಿಗೆ ಮಾಧ್ಯಮ ಸಹಯೋಗ ನೀಡಿದೆ. ಅದೇ ರೀತಿ ಎಮ್​ ಸ್ಪೋರ್ಟ್​​ ಯೂಟ್ಯೂಬ್ ಚಾನೆಲ್​ನಲ್ಲಿ ಪಂದ್ಯದ ಕ್ಷಣಗಳು ನೇರ ಪ್ರಸಾರವಾಗಲಿದ್ದು https://cricheroes.com/ ನಲ್ಲಿ ಲೈವ್ ಸ್ಕೋರ್ ಅಪ್​ಡೇಟ್​ ಸಿಗಲಿದೆ.

ಶನಿವಾರ ಬೆಳಗ್ಗೆ 7.30ಕ್ಕೆ ಮೊದಲ ಪಂದ್ಯ ನಡೆಯಲಿದೆ. ಅದಕ್ಕಿಂತ ಮೊದಲು ಟೂರ್ನಿಯ ಉದ್ಘಾಟನಾ ಕಾರ್ಯಕ್ರಮ ಅಯೋಜನೆಗೊಂಡಿದೆ. ಟೂರ್ನಿಯಲ್ಲಿ 9 ತಂಡಗಳು ಪ್ರಶಸ್ತಿಗಾಗಿ ಹೋರಾಡಲಿವೆ. ನಿರಂಜನ್ ಸ್ಟುಡಿಯೋಸ್, ಧ್ವನಿ ಸಂಗಮ ಸ್ಟುಡಿಯೋಸ್, ಆರ್​ಸಿಬಿ, ಹರಿವು ಹುಡುಗರು, ಸೌಂಡ್ ಮ್ಯಾಪ್ ರಾಯಲ್ಸ್ ರಾಯಲ್ ಎಡಿಟರ್ಸ್, ಲಗಾನಾ ಬಾಯ್ಸ್, ಕನ್ನಡ ಕಂಠಗಳು, ಭಜರಂಗಿ ಬಾಯ್ಸ್ ಕ್ರಿಕೆಟರ್ಸ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ತಂಡಗಳಾಗಿವೆ. ಎರಡು ದಿನಗಳ ಅವಧಿಯಲ್ಲಿ 10 ಲೀಗ್ ಪಂದ್ಯಗಳು ಹಾಗೂ ಎರಡು ಸೆಮಿ ಫೈನಲ್ ಹಾಗೂ ಫೈನಲ್ ಸೇರಿ ಒಟ್ಟು 13 ಪಂದ್ಯಗಳು ನಡೆಯಲಿವೆ.

ವಸತಿ ಸಚಿವರ ಆಗಮನ ನಿರೀಕ್ಷೆ

ಕರ್ನಾಟಕ ಸರ್ಕಾರದ ವಸತಿ ಸಚಿವರಾದ ಬಿ. ಝಡ್​ ಜಮೀರ್​ ಅಹಮದ್ ಅವರು ಆಗಮಿಸಿ ಪಂದ್ಯವನ್ನು ವೀಕ್ಷಿಸುವುದಾಗಿ ಹೇಳಿದ್ದಾರೆ ಎಂಬುದಾಗಿ ಆಯೋಜಕರು ತಿಳಿಸಿದ್ದಾರೆ. ಅದೇ ರೀತಿ ಕಲಾವಿದರ ಈ ಸಂಗಮಕ್ಕೆ ಸಿನಿಮಾ ಹಾಗೂ ಕಿರುತೆರೆ ಕ್ಷೇತ್ರದ ಹಲವಾರು ಕಲಾವಿದರು ಆಗಮಿಸುವ ನಿರೀಕ್ಷೆಯಿದೆ. ಚಲನಚಿತ್ರ ಕಲಾವಿದ ಮತ್ತು ನಿರ್ದೇಶಕ, ನಾಗೇಂದ್ರ ಅರಸ್, ಸಿನಿಮಾ ಕಲಾವಿದ ರಮೇಶ್ ಪಂಡಿತ್, ಜೀ ಟಿವಿ ಮಹಾನಟಿ ಸೀರಿಯಲ್​ ನ ಆಶಿಕಾ ಶರ್ಮಾ, ಟಿವಿ ಕಲಾವಿದರಾದ ಪುನೀತ್ ಬಾಬು, ಧನಂಜಯ. ಸುಹಾಸ್ ಆತ್ರೇಯಸ್, ಕಾರ್ತಿಕ್ ವೈಭವ್,ಆಯುಷ್ ಜೆ ಶೆಟ್ಟಿ, ವಲ್ಲಭ ಸೂರಿ, ಮಧುಸೂದನ್, ಸಿನಿ ಕಲಾವಿದರಾದ ಹರ್ಷಿಲ್ ಕೌಶಿಕ್, ಶಕ್ತಿ ರಾಜ್, ವಿಕಾಸ್ ವಸಿಷ್ಠ, ರಿಚಾ ಶಾಸ್ತ್ರಿ, ಸಿಲ್ಲಿ ಲಲ್ಲಿ ಆನಂದ್, ಚೇತನ್ ಗಂಧರ್ವ, ಯಶವಂತ್ ಬಿಜೂರ್, ನರೇಶ್ ಗಾಂಧಿ, ಗೀತರಚನೆಕಾರ ಪ್ರಮೋದ್ ಮರವಂತೆ, ಟಿವಿ ಕಲಾವಿದೆ ಪುಷ್ಪಾ ಅನಿಲ್, ಗಾಯಕರಾದ ಕರಿಬಸವ ಅವರು ಟೂರ್ನಿಯಲ್ಲಿ ಪಾಲ್ಗಳ್ಳಲಿದ್ದಾರೆ.

ಇದನ್ನೂ ಓದಿ: IPL 2024 : ಆರ್​ಸಿಬಿ ವಿರುದ್ಧ ವೇಗದ ಬೌಲರ್​ ಕಣಕ್ಕೆ; ಚೆನ್ನೈ ತಂಡದಲ್ಲಿ ಸಂಭ್ರಮ

ಎರಡು ಆವೃತ್ತಿಗಳ ಯಶಸ್ಸು

ಸಿನಿಮಾ ಹಾಗೂ ಕಿರುತೆರೆಯಲ್ಲಿ ಹಲವಾರು ಡಬ್ಬಿಂಗ್ ಕಲಾವಿದರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿ ಬದುಕಿನ ಜಂಜಾಟ ಹಾಗೂ ಇನ್ನೂ ಅನೇಕ ಕಾರಣಗಳಿಂದಾಗಿ ಅವರೆಲ್ಲರೂ ಪರಸ್ಪರ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎರಡು ವರ್ಷಗಳ ಹಿಂದೆ ಡಬ್ಬಿಂಗ್​ ಆರ್ಟಿಸ್ಟ್​​ಗಳು ಹಾಗೂ ಇನ್ನಿತರ ಕಲಾವಿರ ಸಮಾಗಮದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆರಂಭಿಸಲಾಗಿತ್ತು. ಕಳೆದ ಎರಡು ವರ್ಷದ ಟೂರ್ನಿ ಅತ್ಯಂತ ಯಶಸ್ಸು ಕಂಡಿತ್ತು. ಕಲಾವಿದರು ಎರಡು ದಿನಗಳ ಕಾಲ ಜತೆಯಾಗಿ ಸೇರಿಕೊಂಡು ಕ್ರಿಕೆಟ್ ಆಡಿ ಸಂಭ್ರಮಿಸಿದ್ದರು. ಟ್ರೋಫಿ ಗೆದ್ದಿದ್ದರು. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮೂರನೇ ಆವೃತ್ತಿಯನ್ನು ಆಯೋಜಿಸಲಾಗಿದೆ. ಶನಿವಾರ ಹಾಗೂ ಭಾನುವಾರ ಕ್ರಿಕೆಟ್​ ಪ್ರೇಮಿ ಕಲಾವಿದರು ಈ ಟೂರ್ನಿಯಲ್ಲಿ ಆಡಿ ಸಂಭ್ರಮಿಸಲಿದ್ದಾರೆ ಎಂಬುದಾಗಿ ಅಯೋಜಕರು ಮಾಹಿತಿ ನೀಡಿದ್ದಾರೆ.

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ರಾಜಕೀಯ

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

CM Siddaramaiah: ರಾಜ್ಯದಲ್ಲಿ ಬರ ಹಾಗೂ ಮಳೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ಕೊಂಚ ಸಡಿಲ ಮಾಡಲಾಗಿದೆ. ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಆಯೋಗದಿಂದ ಅವಕಾಶ ಸಿಕ್ಕಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖಾವಾರು ಟೆಂಡರ್ ಕರೆಯಲು ಚುನಾವಣಾ ಆಯೋಗದಿಂದ ಅವಕಾಶ ಸಿಕ್ಕಿದೆ. ಅಲ್ಲದೆ, ಸಿಎಂ ಹಾಗೂ ಸಚಿವರು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲು ಅನುಮತಿಯನ್ನು ನೀಡಲಾಗಿದೆ. ಆದರೆ, ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ನಿರ್ಬಂಧ ಮುಂದುವರಿದಿದೆ. ಆದರೆ, ಜೂನ್ ಒಳಗೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ.

VISTARANEWS.COM


on

Pension and NAREGA money credited to farmers loans CM Siddaramaiah slams bank
Koo

ಬೆಂಗಳೂರು: ಬರ ಪರಿಹಾರ (Drought Relief), ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿಧಾನಸೌಧದಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ರೈತರ ಖಾತೆಗಳಿಗೆ ಜಮೆಯಾಗುತ್ತಿರುವ ಬಗ್ಗೆ ಕೆಂಡವಾಗಿದ್ದಾರೆ. ಇದು ತಕ್ಷಣವೇ ನಿಲ್ಲಬೇಕು. ಕೂಡಲೇ ಎಲ್ಲ ಬ್ಯಾಂಕ್‌ಗಳಿಗೂ ಪತ್ರ ಬರೆದು ತಾಕೀತು ಮಾಡಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಪಿಂಚಣಿ, ನರೇಗಾ ಕೂಲಿಗೆ ಸಂಬಂಧಪಟ್ಟ ಹಣವು ರೈತರ ಬ್ಯಾಂಕ್‌ಗಳಿಗೆ ಜಮೆಯಾಗುತ್ತಿದ್ದರೆ ಅದನ್ನು ಬ್ಯಾಂಕ್‌ನವರು ರೈತರ ಸಾಲಗಳಿಗೆ ವಜಾ ಮಾಡಿಕೊಳ್ಳುವುದು ಸರಿಯಲ್ಲ. ಹೀಗಾಗಿ ಬ್ಯಾಂಕ್‌ಗಳಿಗೆ ಖಡಕ್‌ ಸೂಚನೆಯನ್ನು ರವಾನೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದರು.

ರಾಜ್ಯದಲ್ಲಿ ಬರ ಹಾಗೂ ಮಳೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ಕೊಂಚ ಸಡಿಲ ಮಾಡಲಾಗಿದೆ. ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಆಯೋಗದಿಂದ ಅವಕಾಶ ಸಿಕ್ಕಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖಾವಾರು ಟೆಂಡರ್ ಕರೆಯಲು ಚುನಾವಣಾ ಆಯೋಗದಿಂದ ಅವಕಾಶ ಸಿಕ್ಕಿದೆ. ಅಲ್ಲದೆ, ಸಿಎಂ ಹಾಗೂ ಸಚಿವರು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲು ಅನುಮತಿಯನ್ನು ನೀಡಲಾಗಿದೆ. ಆದರೆ, ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ನಿರ್ಬಂಧ ಮುಂದುವರಿದಿದೆ. ಆದರೆ, ಜೂನ್ ಒಳಗೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಸರ್ಕಾರದ ವಿರುದ್ಧ ಕಿಡಿಕಾರಿದ್ದ ಎಚ್‌ಡಿಕೆ

ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್‌ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಎಕ್ಸ್ ಖತೆಯಲ್ಲಿ ಪೋಸ್ಟ್ ಮಾಡಿದ್ದ ಅವರು, ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ, ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ.‌ ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್‌ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದರು. ರಾಜ್ಯ ಸರ್ಕಾರ ಕೂಡಲೇ ಸಾಲ ನೀಡಿರುವ ಎಲ್ಲ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎಂದು ಆಗ್ರಹಿಸಿದ್ದರು.

ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 20 ಮಾರ್ಕ್ಸ್‌ ಅನ್ನು ಏಕೆ ಕೊಟ್ಟಿರಿ? ಯಾರನ್ನು ಕೇಳಿ ಹೆಚ್ಚುವರಿ ಅಂಕ ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಲ್ಲದೆ, ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

ಗ್ರೇಸ್‌ ಮಾರ್ಕ್ಸ್‌ ಮರು ಪರಿಶೀಲಿಸಿ

ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಮುಂದಿನ ವರ್ಷ ಹೀಗಿರುವುದಿಲ್ಲ

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿಯಲ್ಲಿ ಯಾವಾಗಲೂ ಶೇಕಡಾ 5ರಷ್ಟು ಗ್ರೇಸ್‌ ಮಾರ್ಕ್ಸ್‌ ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿದೆವು. ಇದು ಈ ವರ್ಷಕ್ಕೆ ಮಾತ್ರವಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಇನ್ನು 15 ದಿನಗಳಲ್ಲಿ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಗ್ರೇಸ್‌ ಮಾರ್ಕ್ಸ್‌ ಕೊಟ್ಟಿದ್ದರಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆ ಗ್ರೇಸ್‌ ಮಾರ್ಕ್ಸ್‌ ಹೆಚ್ಚಳದ ತೀರ್ಮಾನವನ್ನು ಮಾಡಿತ್ತು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಕೆ ಮಾಡಿದ್ದಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿತ್ತು. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿತ್ತು. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿತ್ತು. ಆದರೆ, ಇದಕ್ಕೆ ಈಗ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

Continue Reading

ಪ್ರಮುಖ ಸುದ್ದಿ

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

ಕಾನ್‌ ಫಿಲ್ಮ್ ಫೆಸ್ಟಿವಲ್‌ನ 3ನೇ ದಿನದಂದು (Canne Film Festival 2024) ಬಾಲಿವುಡ್ ನಟಿ ಅಥಿಯಾ ಶೆಟ್ಟಿಯ ಶಿಮ್ಮರ್ ಜಂಪ್‌ಸೂಟ್‌ನಲ್ಲಿ ಶೋಭಿತಾ ಕಾಣಿಸಿಕೊಂಡರೆ; ಊರ್ವಶಿ ರೌತೆಲಾ ಆಕರ್ಷಕ ರೆಡ್ ಗೌನ್‌ನಲ್ಲಿ ಕಣ್ಮನ ಸೆಳೆದರು. ಇನ್ನುಳಿದವರು ಹೇಗೆಲ್ಲಾ ಕಂಡರು? ಇದಕ್ಕಾಗಿ ಹೇಗೆಲ್ಲಾ ಸಿದ್ಧಗೊಂಡಿರುತ್ತಾರೆ ಎಂಬುದರ ಬಗ್ಗೆ ಫ್ಯಾಷನ್ ವಿಮರ್ಶಕರು ಇಲ್ಲಿ ವಿವರಿಸಿದ್ದಾರೆ.

VISTARANEWS.COM


on

Canne Film Festival 2024
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು
ಕಾನ್‌ ಫಿಲ್ಮ್ ಫೆಸ್ಟಿವಲ್ 2024ರ ರೆಡ್‌ ಕಾರ್ಪೆಟ್‌ (Canne Film Festival 2024) ಮೇಲೆ ಒಂದೊಂದು ದಿನವೂ ಒಂದೊಂದು ಬಗೆಯ ವಿಶೇಷವಾದ ಡಿಸೈನರ್‌ವೇರ್‌ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್ ನಟಿಯರು ಹಾಗೂ ಸೆಲೆಬ್ರೆಟಿಗಳು 3ನೇ ದಿನವೂ ಕೂಡ ಆಫ್ ಶೋಲ್ಡರ್ ಡಿಸೈನರ್‌ವೇರ್‌ಗಳಿಗೆ ಪ್ರಾಮುಖ್ಯತೆ ನೀಡಿದ್ದರು. ಅಂದಹಾಗೆ, ಬಾಲಿವುಡ್ ನಟಿ ಶೋಭಿತಾ, ಕಳೆದ ಬಾರಿ ನಟಿ ಅಥಿಯಾ ಶೆಟ್ಟಿ ಲ್ಯಾಕ್ಮೆ ಫ್ಯಾಷನ್ ವೀಕ್‌ನಲ್ಲಿ ಡಿಸೈನರ್ ನಮ್ರತಾ ವಿನ್ಯಾಸಗೊಳಿಸಿ, ಧರಿಸಿದ್ದ ಶಿಮ್ಮರ್ ಪರ್ಪಲ್ ಜಂಪ್‌ಸೂಟ್‌ನಲ್ಲಿ ಕಾಣಿಸಿಕೊಂಡರು. ಹಳೆಯ ಡಿಸೈನ್ ಮತ್ತೊಮ್ಮೆ ರಿಪೀಟ್ ಮಾಡಿದರು.

ಊರ್ವಶಿ ರೌತೆಲಾ ಆಕರ್ಷಕ ರೆಡ್ ಗೌನ್: ಇನ್ನು ಬಾಲಿವುಡ್ ನಟಿ ಊರ್ವಶಿ ರೌತೆಲಾ, ತುನೇಸಿಯನ್ ಡಿಸೈನರ್‌ನ ಆಫ್ ಶೋಲ್ಡರ್ ಕೇಪ್ ಶೈಲಿಯ ಬಲೂನ್ ಸ್ಲೀವ್‌ನ ಆಕರ್ಷಕ ರೆಡ್ ಗೌನ್‌ನಲ್ಲಿ ಯೂರೋಪಿಯನ್ ಕ್ವೀನ್ ಲುಕ್‌ ಮೂಲಕ ಕಣ್ಮನ ಸೆಳೆದರು.

ಇದನ್ನೂ ಓದಿ: Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

ದೀಪ್ತಿ – ನಮಿತಾ ತಾಪರ್ ಡಿಸೈನರ್‌ವೇರ್ಸ್: ಇನ್ನು, ದೀಪ್ತಿ ಯೆಲ್ಲೋ & ಗೋಲ್ಡ್ ಫಿಶ್ಟೇಲ್ ರಫಲ್ ಗೌನ್‌ನಲ್ಲಿ ಕಾಣಿಸಿಕೊಂಡರೆ, ನಮಿತಾ ರಾಯಲ್ ಬ್ಲ್ಯೂ ಸ್ಯಾಟೀನ್ ಗೌನ್‌ನಲ್ಲಿ ಪೋಸ್ ನೀಡಿದರು.

ಸೆಲೆಬ್ರೆಟಿಗಳ ರೆಡ್‌ಕಾರ್ಪೆಟ್‌ ಸ್ಟೈಲಿಂಗ್ ಬದಲಾವಣೆ: ಮೊದಲ ದಿನ ಬಹುತೇಕ ಸೆಲೆಬ್ರೆಟಿಗಳು ತಮ್ಮ ಡಿಸೈನರ್‌ವೇರ್‌ಗಳು ಎಕ್ಸ್ಕ್ಲೂಸಿವ್ ಡಿಸೈನ್ ಹೊಂದಿವೆ ಎಂದು ಭಾವಿಸಿಯೇ ರೆಡ್ ಕಾರ್ಪೆಟ್‌ ಮೇಲೆ ವಾಕ್ ಮಾಡಿದರೆ, ತದನಂತರ ಕೊಂಚ ಜಾಗರೂಕರಾಗಿ ಸ್ಟೈಲಿಂಗ್‌ನಲ್ಲಿ ಬದಲಾವಣೆ ತಂದಿರುವುದು ಕಂಡು ಬಂದಿತು.

ಡಿಸೈನರ್‌ವೇರ್‌ ಬದಲಿಸಲಾಗದು!

ಹಾಗೆಂದು ಇದ್ದಕ್ಕಿದ್ದಂತೆ ಯಾವ ಸೆಲೆಬ್ರೆಟಿಗೂ ಕೂಡ ಡಿಸೈನರ್ವೇರ್ ಮತ್ತೊಬ್ಬರ ದಿರಸಿನಂತೆ ಇದೆ ಎಂದು ಅರಿವಾದಾಕ್ಷಣ ಬದಲಿಸಲು ಆಗುವುದಿಲ್ಲ! ಯಾಕೆಂದರೇ, ಅವರು ಧರಿಸುವ ಒಂದೊಂದು ಉಡುಪು ಲಕ್ಷಗಟ್ಟಲೆ ರೂ. ಬೆಲೆ ಬಾಳುತ್ತವೆ. ಅಲ್ಲದೇ, ತಿಂಗಳಾನುಗಟ್ಟಲೇ ಮೊದಲೇ ಯಾವುದನ್ನು ಧರಿಸಬೇಕೆಂಬುದು ನಿರ್ಧರಿತವಾಗಿರುತ್ತದೆ. ಇದಕ್ಕಾಗಿ ಸ್ಟಾರ್ಗಳ ಡಿಸೈನರ್‌ಗಳು ಕೂಡ ತಿಂಗಳಾನುಗಟ್ಟಲೇ ಹೋಮ್‌ ವರ್ಕ್‌ ಮಾಡಿರುತ್ತಾರೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ವಿಶೇಷ ದಿರಸನ್ನು ಸಿದ್ಧಪಡಿಸಲು ಸಾಕಷ್ಟು ಕಷ್ಟಪಟ್ಟಿರುತ್ತಾರೆ. ಕೆಲವು ಯಾರೂ ಧರಿಸದ ಹೊಸ ಡಿಸೈನರ್‌ಗಳಾಗಿ ಹಿಟ್ ಲಿಸ್ಟ್‌ಗೆ ಸೇರಿದರೇ, ಮತ್ತೆ ಕೆಲವು ಸೇಮ್ ಟು ಸೇಮ್ ಅಥವಾ ಕಾಪಿಕ್ಯಾಟ್ ಆಗಿ ನಗೆಪಾಟಲೀಗಿಡಾಗುತ್ತವೆ ಎನ್ನುತ್ತಾರೆ ಫ್ಯಾಷನಿಸ್ಟಾ ರಾಕ್.

(ಲೇಖಕಿ ಫ್ಯಾಷನ್ ಪತ್ರಕರ್ತೆ)

Continue Reading
Advertisement
Dubbing Premier League
ಕ್ರಿಕೆಟ್5 mins ago

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Uttar Pradesh
ದೇಶ8 mins ago

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಅಂಶಗಳು ಇಲ್ಲಿವೆ

Prajwal Revanna Case
ಕರ್ನಾಟಕ24 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

theft Case
ಕ್ರೈಂ46 mins ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು55 mins ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ59 mins ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ1 hour ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ1 hour ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

MLC Meeting
ರಾಜಕೀಯ1 hour ago

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Arvind Kejriwal
ದೇಶ1 hour ago

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌