ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ʼಜೀವನದಿʼ ರಾಷ್ಟ್ರೀಯ ಪ್ರಶಸ್ತಿ ಪ್ರದಾನ - Vistara News

ಕರ್ನಾಟಕ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ʼಜೀವನದಿʼ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಶ್ರೀ ದುರ್ದಂಡೇಶ್ವರ ಮಹಂತ ಶಿವಯೋಗಿಗಳ ಮಠದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ʼಜೀವನದಿʼ ರಾಷ್ಟ್ರೀಯ ಪ್ರಶಸ್ತಿ, ಬೆಳಗಾವಿ ಜಿಲ್ಲೆ ಅಥಣಿಯ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಮಹಾಸ್ವಾಮೀಜಿಗೆ ʼಸಾಹಿತ್ಯ ಶಿವಭೂಷಣ ಪ್ರಶಸ್ತಿʼ ಪ್ರದಾನ ಮಾಡಲಾಗಿದೆ.

VISTARANEWS.COM


on

ಜೀವನದಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಂಡವಪುರ: ತಾಲೂಕಿನ ಬೇಬಿ ಗ್ರಾಮದ ಶ್ರೀ ದುರ್ದಂಡೇಶ್ವರ ಮಹಂತ ಶಿವಯೋಗಿಗಳ ಮಠದ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ʼಜೀವನದಿʼ ರಾಷ್ಟ್ರೀಯ ಪ್ರಶಸ್ತಿಯನ್ನು ಶ್ರೀ ತ್ರಿನೇತ್ರ ಸ್ವಾಮೀಜಿ ಪ್ರದಾನ ಮಾಡಿ ಗೌರವಿಸಿದರು.

ತಾಲೂಕಿನ ಬೇಬಿ ಗ್ರಾಮದ ಶ್ರೀ ದುರ್ದಂಡೇಶ್ವರ ಮಹಂತ ಶಿವಯೋಗಿಗಳ ಮಠದ ವತಿಯಿಂದ ಶ್ರೀ ಮಠದ ಸಂಸ್ಥಾಪಕರಾದ ಮಹಾತಪಸ್ವಿ ಹಾಗೂ ಶತಾಯುಷಿ ಪೂಜ್ಯ ಲಿಂಗೈಕ್ಯರಾದ ಶ್ರೀ ಮರಿದೇವರು ಶಿವಯೋಗಿ ಮಹಾಸ್ವಾಮಿ ಅವರ 14ನೇ ವರ್ಷದ ಪುಣ್ಯಸ್ಮರಣೆ ಹಾಗೂ 6ನೇ ವರ್ಷದ ಮಹಾ ರಥೋತ್ಸವದ ಅಂಗವಾಗಿ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ʼಸಾಹಿತ್ಯ ಶಿವ ಭೂಷಣʼ ಪ್ರಶಸ್ತಿ ಪ್ರದಾನ ಮತ್ತು ಚಂದ್ರವನ ಕಂಪು ಎಂಬ ವಿಶೇಷ ಸಂಚಿಕೆ ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆ ಅಥಣಿಯ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಮಹಾಸ್ವಾಮೀಜಿಗೆ ʼಸಾಹಿತ್ಯ ಶಿವಭೂಷಣ ಪ್ರಶಸ್ತಿʼ ಪ್ರದಾನ ಮಾಡಲಾಯಿತು. ಅಲ್ಲದೆ, ಬೆಂಗಳೂರಿನ ಜಿ.ಮರಿಸ್ವಾಮಿ ಅವರು ʼಚಂದ್ರವನ ಕಂಪುʼ ಎಂಬ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದರು.

ಲಿಂಗೈಕ್ಯ ಶ್ರೀ ಮರಿದೇವರು ಮಹಾ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಶ್ರೀಮಠದ ಡಿ.ಎಂ.ಎಸ್ ಜ್ಞಾನಕುಟೀರ ಶಾಲಾ ಕಟ್ಟಡ ಹಾಗೂ ಸಮಾರಂಭವನ್ನು ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಶ್ರೀ ಮರಿದೇವರು ಮಹಾತಪಸ್ವಿಯಾಗಿದ್ದರು. ನಾನು ಆಗಾಗ ಮಠಕ್ಕೆ ಭೇಟಿ ನೀಡುತ್ತಿದ್ದಾಗ ನಾಡಿನ ದೊರೆಯಾಗುವೆ, ಮುನ್ನುಗ್ಗು ಎಂದು ಆರ್ಶೀವಾದ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಾನು ರಾಜ್ಯದ ಉನ್ನತ ಸ್ಥಾನಗಳನ್ನು ಪಡೆಯುವಂತಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅಪೇಕ್ಷೆಯಂತೆ ನಾನೂ ಕೂಡ ನನ್ನ ಮನೆ ಮೇಲೆ ಭಾರತ ಬಾವುಟ ಹಾರಿಸಿದ್ದೇನೆ. ಶ್ರೀಕ್ಷೇತ್ರ ಮಠದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ | ಪ್ರಿಯಾಂಕ್‌ ಖರ್ಗೆಗೆ ತಿರುಗೇಟು: ಕಾಂಗ್ರೆಸ್‌ ನಾಯಕರ ಲಂಚ-ಮಂಚದ ಕತೆ ತೆರೆದಿಟ್ಟ ಬಿಜೆಪಿ

ಧಾರ್ಮಿಕ ಪ್ರಜ್ಞೆ, ರಾಷ್ಟ್ರಾಭಿಮಾನ ಮೂಡಿಸುವ ಕೆಲಸ ದೇಶದ ಉದ್ದಗಲಕ್ಕೂ ನಡೆಯುತ್ತಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ಶ್ಲಾಘನೀಯ. ಈ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಲು ಸರ್ಕಾರ ಅನುದಾನ ನೀಡಲಿದೆ. ಪೋಷಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಅಧಿಕಾರ ಮುಖ್ಯವಲ್ಲ, ಶಾಶ್ವತವೂ ಅಲ್ಲ. ಅಧಿಕಾರ ಸಿಕ್ಕಾಗ ಏನು ಮಾಡಿದ್ದೇವೆ ಎಂಬುವುದು ಮುಖ್ಯ. ಸಿಎಂ ಆಗಿದ್ದಾಗ ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮೀ ಎಂಬ ಐತಿಹಾಸಿಕ ಕಾರ್ಯಕ್ರಮ ಜಾರಿ ಮಾಡಿದ್ದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವನ್ನು ನೀಡಿದ್ದೇನೆ. ಕರ್ನಾಟಕವನ್ನು ಮಾದರಿ ಮಾಡುವ ಅನೇಕ ಕಾರ್ಯಕ್ರಮವನ್ನು ಜಾರಿ ಮಾಡಿದ್ದೆ ಎಂದು ಯಡಿಯೂರಪ್ಪ ತಿಳಿಸಿದರು.

ಬೇಬಿ ಗ್ರಾಮ ಮಠದ ಶ್ರೀ ತ್ರಿನೇತ್ರ ಸ್ವಾಮೀಜಿ ಅವರು ಮಾತನಾಡಿ, ಮಹಾತಪಸ್ವಿ ಲಿಂಗೈಕ್ಯ ಶ್ರೀ ಮರಿದೇವರು ಅವರನ್ನು ಪೂಜಿಸುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ “ಜೀವನದಿ ಪ್ರಶಸ್ತಿ” ನೀಡಿರುವುದು ನಮಗೆ ತುಂಬಾ ಸಂತಸ ತಂದಿದೆ ಎಂದರು.

ಶಾಸಕ ಸಿ.ಎಸ್.ಪುಟ್ಟರಾಜು ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮೇಲುಕೋಟೆ ಕ್ಷೇತ್ರ ಸೇರಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಸಹಕಾರಿಯಾಗಿದ್ದಾರೆ ಎಂದರು.

ಡಿಎಂಎಸ್ ಶಾಲೆಯ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಯುವ ಸಬಲೀಕರಣ, ರೇಷ್ಮೆ ಹಾಗೂ ಕ್ರೀಡಾ‌ ಸಚಿವ ಕೆ.ಸಿ.ನಾರಾಯಣಗೌಡ, ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀಮಠಕ್ಕೂ ಅವಿನಾಭಾವ ಸಂಬಂಧವಿದೆ. ನಾನು ಕೂಡ ಶ್ರೀಮಠದ ಭಕ್ತನಾಗಿದ್ದೇನೆ ಎಂದರು.

ಸಮಾರಂಭದಲ್ಲಿ ಹುಕ್ಕೇರಿ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾ ಸ್ವಾಮೀಜಿ, ಬಿಜೆಪಿ ಮುಖಂಡರಾದ ಡಾ.ಎನ್.ಎಸ್.ಇಂದ್ರೇಶ್, ರುದ್ರೇಶ್, ನಟೇಶ್, ಧನರಾಜ್, ಸಿದ್ಧಲಿಂಗೇಶ್ವರ ಗೃಹ ಮಂಡಳಿ ಅಧ್ಯಕ್ಷ ಯು.ಎಸ್.ಶೇಖರ್, ಹೊನಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಸಿ.ಚಂದ್ರಶೇಖರಯ್ಯ, ನಿರಂಜನ್ ಬಾಬು ಮತ್ತಿತರರು ಇದ್ದರು.

ಇದನ್ನೂ ಓದಿ | ಜನೋತ್ಸವ | ವಿವಿಧೆಡೆ ರ‍್ಯಾಲಿ ಮಾಡಲು ಒಪ್ಪದ ದೊಡ್ಡಬಳ್ಳಾಪುರ ಜನ; ಆಗಸ್ಟ್‌ 28ರಂದು ಕಾರ್ಯಕ್ರಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳಿಗೆ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪವಿತ್ರಾ ಗೌಡಳನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ (Pavithra Gowda) ಸೇರಿ 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಎ1 ಪವಿತ್ರಾ ಗೌಡಳನ್ನು ಮಂಗಳವಾರ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಈ ವೇಳೆ ಜೀಪ್‌ನಿಂದ ಇಳಿಯುವಾಗ ಯಾವುದೇ ರೀತಿಯ ಭಯವಿಲ್ಲದೇ ಪವಿತ್ರಾ ಗೌಡ ನಗುನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದು ಕಂಡುಬಂದಿದೆ.

ಆರೋಪಿಗಳಿಗೆ 6 ದಿನಗಳ ಕಾಲ ಕಸ್ಟಡಿ ವಿಧಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಯಿತು. ಈ ವೇಳೆ ಕ್ಯಾಮೆರಾಗಳ ಕಣ್ಣಿಗೆ ಬೀಳದಂತೆ ಮುಖಕ್ಕೆ ಅಡ್ಡಲಾಗಿ ವಾಟರ್‌ ಬಾಟಲ್‌ ಹಿಡಿದು ಕಾರಿನಲ್ಲಿ ಪವಿತ್ರಾ ಗೌಡ ನಗುತ್ತಿದ್ದದ್ದು ಕಂಡುಬಂದಿದೆ. ನಂತರ ಯಾವುದೇ ಭಯವೇ ಇಲ್ಲದಂತೆ ನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದಾಳೆ. ಸದ್ಯ ಈ ವಿಡಿಯೊ ವೈರಲ್‌ ಆಗಿದ್ದು, ಬಂಧನವಾದರೂ ಇವರಿಗೆ ಯಾವುದೇ ಆತಂಕ, ಭಯ ಇಲ್ಲ ಎಂದು ನೆಟ್ಟಿಗರು ಛೀಮಾರಿ ಹಾಕಿದ್ದಾರೆ.

ಇದನ್ನೂ ಓದಿ | Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Actor Darshan Arrested

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದಲ್ಲಿ ಬಗ್ಗೆ ಅವರ ಅಭಿಪ್ರಾಯ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮಂಗಳವಾರ ಬೆಳಗ್ಗಿನಿಂದ ಪ್ರಕರಣ ರಾಜ್ಯಾದ್ಯಂತ ಹವಾ ಎಬ್ಬಿಸಿದ್ದು ಒಬ್ಬೊಬ್ಬರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಅಭಿಮಾನಿಗಳಂತೂ ಈ ವಿಚಾರದಲ್ಲಿ ಭಾವುಕರಾಗಿದ್ದಾರೆ. ಆದರೆ ಪತಿ ಜೈಲಿಗೆ ಹೋಗುವ ಸ್ಥಿತಿ ತಂದುಕೊಂಡಿದ್ದರೂ ವಿಜಯಲಕ್ಷ್ಮೀ ಈ ಕುರಿತು ಏನೂ ಹೇಳಿಕೆಗಳನ್ನು ನೀಡಿಲ್ಲ.

ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ! ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

Continue Reading

ಕರ್ನಾಟಕ

CM Siddaramaiah: ಗಣಿಗಳ ಹರಾಜು ಪ್ರಕ್ರಿಯೆ ಕೂಡಲೇ ಕೈಗೆತ್ತಿಕೊಳ್ಳಲು ಸಿಎಂ ಸೂಚನೆ

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆಯಿತು.

VISTARANEWS.COM


on

CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆಯಿತು. ಈ ವೇಳೆ ಹರಾಜಿಗೆ ಲಭ್ಯವಿರುವ ಗಣಿಗಳ ಹರಾಜು ಪ್ರಕ್ರಿಯೆಯನ್ನು ಕೂಡಲೇ ಕೈಗೆತ್ತಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಸಿಎಂ, ರಾಜಸ್ವ ಸಂಗ್ರಹ ಚುರುಕುಗೊಳಿಸಬೇಕು. ಉಪ ಖನಿಜ ರಾಜಸ್ವ ಸಂಗ್ರಹ ಹೆಚ್ಚಿಸಲು ಕ್ರಮ ಕೈಗೊಳ್ಲಬೇಕು, ಇದಕ್ಕಾಗಿ ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಕಂದಾಯ ಇಲಾಖೆ ಲ್ಯಾಂಡ್‌ ಬ್ಯಾಂಕ್‌ ಸೃಜಿಸಿದಲ್ಲಿ, ಅರಣ್ಯ ಪರಿಹಾರ ಭೂಮಿ (compensatory aforestation) ನೀಡಲು ಅನುಕೂಲವಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಡ್ರೋನ್‌ ಸರ್ವೇ ಮತ್ತು AI ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಳ್ಳುವ ಮೂಲಕ ಕ್ರಷರ್‌ಗಳ ರಾಜಸ್ವ ಸಂಗ್ರಹ ಸೋರಿಕೆ ತಡೆಗಟ್ಟಲು ಮುಖ್ಯಮಂತ್ರಿಗಳು ಸೂಚಿಸಿದರು.

ಉಪನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸೌಲಭ್ಯ ಹೆಚ್ಚಿಸಲು ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಪ್ರಗತಿ ಪರಿಶೀಲನಾ ನಗರದಲ್ಲಿ ಸಭೆ ಮಂಗಳವಾರ ನಡೆಯಿತು. ಈ ವೇಳೆ ಈ ವರೆಗಿನ ತೆರಿಗೆ ಸಂಗ್ರಹ ನಿಗದಿತ ಗುರಿಗೆ ಶೇ. 110 ರಷ್ಟಿದೆ. ಮಾರ್ಗಸೂಚಿ ದರ ಪರಿಷ್ಕರಣೆ ಹಾಗೂ ಆಡಳಿತ ಸುಧಾರಣಾ ಕ್ರಮಗಳಿಂದ ಹೆಚ್ಚಿನ ತೆರಿಗೆ ಸಂಗ್ರಹದ ನಿರೀಕ್ಷೆ ಇದೆ. 2023-24 ನೇ ಸಾಲಿನಲ್ಲಿ 20,000 ಕೋಟಿ ರೂ. ಗುರಿಗೆ ಎದುರಾಗಿ 20287.30 ಕೋಟಿ ರೂ ರಾಜಸ್ವ ಸಂಗ್ರಹವಾಗಿದೆ. ಜಿ.ಐ.ಎಸ್. ಆಧಾರಿತ ಆಸ್ತಿಗಳ ವಿವರ ಹಾಗೂ ಮಾರ್ಗಸೂಚಿ ದರ ನಿಗದಿಯನ್ನು ಜಾರಿಗೊಳಿಸುವ ಮೂಲಕ ತೆರಿಗೆ ಸೋರಿಕೆ ತಡೆಗಟ್ಟಲು ಸಾಧ್ಯವಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ | CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

ಈ ವೇಳೆ ಸಿಎಂ ಪ್ರತಿಕ್ರಯಿಸಿ, ಉಪನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನಾಗರಿಕ ಸೌಲಭ್ಯಗಳನ್ನು ಹೆಚ್ಚಿಸುವಂತೆ ಸೂಚಿಸಿದರು. ದಸ್ತಾವೇಜುಗಳ ನೋಂದಣಿಯನ್ನು ಡಿಜಿಟಲ್‌ ಆಗಿ ಮಾಡಲು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಜಾರಿಗೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

Continue Reading

ಕರ್ನಾಟಕ

Rajeev Taranath: ಖ್ಯಾತ ಸರೋದ್‌ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

Rajeev Taranath: ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದರಾದ ರಾಜೀವ್ ತಾರಾನಾಥ್ ಅವರು, ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಇವರ ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿ ಹತ್ತಾರು ಪ್ರಶಸ್ತಿ ಸಂದಿವೆ.

VISTARANEWS.COM


on

Rajeev Taranath
Koo

ಮೈಸೂರು: ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ (91) (Rajeev Taranath) ಅವರು ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಿಧನರಾದರು. ಸುಮಾರು 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದರಾದ ಇವರು, ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಇವರ ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿ ಹತ್ತಾರು ಪ್ರಶಸ್ತಿ ಸಂದಿವೆ. ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

17, 1932ರ ಅ.17ರಂದು ಜನಿಸಿದ ರಾಜೀವ್ ತಾರಾನಾಥ್ ಅವರು ಅತ್ಯಂತ ಸರಳತೆ ಮತ್ತು ಶ್ರೇಷ್ಠ ಸಂಗೀತಕ್ಕೆ ಹೆಸರಾಗಿದ್ದವರು. ತಮ್ಮ ಪ್ರಾರಂಭಿಕ ಪಾಠಗಳನ್ನು ತಂದೆ ಪಂಡಿತ ತಾರಾನಾಥ್‌ ಅವರಿಂದ ಪಡೆದಿದ್ದರು. ಒಂಬತ್ತು ವರ್ಷದವರಿದ್ದಾಗ ಅವರು ಪ್ರಥಮ ಸಂಗೀತ ಕಛೇರಿಯನ್ನು ನಡೆಸಿದ್ದ ಇವರು,. ಇಪ್ಪತ್ತರ ತಾರುಣ್ಯದಲ್ಲಿ ಆಕಾಶವಾಣಿಯಲ್ಲಿ ಸಂಗೀತಗಾರರಾಗಿ ಹಾಡುತ್ತಿದ್ದರು. ರಾಜೀವ್ ತಾರಾನಾಥರು ಸಾಹಿತ್ಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದು, ಕೆಲ ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ನಂತರ ಕೆಲಸಕ್ಕೆ ರಾಜೀನಾಮೆ ಕೊಟ್ಟು ಮತ್ತೆ ಸಂಗೀತ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದರು. ಸಂಗೀತ ಅಭ್ಯಸಿಸಲು ಕೊಲ್ಕೊತ್ತಾಗೆ ತೆರಳಿದ್ದರು.

ಉಸ್ತಾದ್ ಅಲಿ ಅಕ್ಬರ್‌ ಖಾನ್‌ ಅವರ ಶಿಷ್ಯರಾದ ಇವರು, ಕ್ಯಾಲಿಪೋರ್ನಿಯಾ ವಿವಿಯ ಕಲಾವಿಭಾಗದ ಮುಖ್ಯಸ್ಥರಾಗಿದ್ದರು. 1995ರಿಂದ 2005ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದರು. ಬಳಿಕ ಮೈಸೂರಿನಲ್ಲಿ ನೆಲೆಸಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

ರಾಜೀವ್ ತಾರಾನಾಥ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಜಗತ್ಪ್ರಸಿದ್ಧ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ
ತುಂಬಲಾರದ ನಷ್ಟ.

ಇದನ್ನೂ ಓದಿ | Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು‌ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ ತಿಳಿಸಿದ್ದಾರೆ.

Continue Reading

ಧಾರ್ಮಿಕ

Ballari News: ಜೂ.12ರಂದು ಚೇಳ್ಳಗುರ್ಕಿ ಶ್ರೀ ಎರ‍್ರಿತಾತನವರ ಮಹಾರಥೋತ್ಸವ

Ballari News: ಬಳ್ಳಾರಿ ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಶ್ರೀ ಎರ‍್ರಿತಾತನವರ ಮಹಾರಥೋತ್ಸವವು ಜೂ.12 ರಂದು ಸಂಜೆ 5 ಗಂಟೆಗೆ ಜರುಗಲಿದೆ. ಜೂ.5 ರಿಂದಲೇ ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ.

VISTARANEWS.COM


on

Chellagurki Shri Yerrithathanavara Maharathotsava On 12th June
Koo

ಬಳ್ಳಾರಿ: ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಶ್ರೀ ಎರ‍್ರಿತಾತನವರ ಮಹಾರಥೋತ್ಸವವು ಜೂ.12ರಂದು ಸಂಜೆ 5 ಗಂಟೆಗೆ ಜರುಗಲಿದ್ದು, ಜಾತ್ರಾ ಮಹೋತ್ಸವ ಅಂಗವಾಗಿ ಜೂ.5 ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು (Ballari News) ಆರಂಭವಾಗಿವೆ.

ಇದನ್ನೂ ಓದಿ: Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

ಜಾತ್ರಾ ಮಹೋತ್ಸವದ ಅಂಗವಾಗಿ ಜೂ.5ರಂದು ಬೆಳಿಗ್ಗೆ 6 ಗಂಟೆಯಿಂದಲೇ ನಂದಿ ಧ್ವಜಾರೋಹಣ ಮತ್ತು ಸಪ್ತಭಜನೆ ಕಾರ್ಯಕ್ರಮ ಆರಂಭವಾಗಿದೆ. ಜೂ.6ರಂದು ಸಂಜೆ ಬೆಳ್ಳಿ ರಥೋತ್ಸವ ಕಾರ್ಯಕ್ರಮ ನಡೆಯಿತು. ಮಂಗಳವಾರ ಬಸವ ಉತ್ಸವ ಕಾರ್ಯಕ್ರಮ ನಡೆಯಿತು. ಜೂ.12ರಂದು ಬುಧವಾರ ಬೆಳಿಗ್ಗೆ 6 ಗಂಟೆಗೆ ಸಪ್ತಭಜನೆ ಮುಕ್ತಾಯ ಕಾರ್ಯಕ್ರಮ ನಡೆಯಲಿದೆ.

ಶ್ರೀ ಎರ‍್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್ ಕಮಿಟಿಯ ಆವರಣದಲ್ಲಿ ಎರ‍್ರಿತಾತನವರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ಉದ್ಘಾಟನೆ ಕಾರ್ಯಕ್ರಮ ಜೂ.12ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಉರವಕೊಂಡ ಗವಿಮಠ ಸಂಸ್ಥಾನದ ಡಾ. ಕರಿಬಸವರಾಜೇಂದ್ರ ಮಹಾಸ್ವಾಮೀಜಿ, ಮಳಿಗೆ ಉದ್ಘಾಟನೆ ಮಾಡಲಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

ಜೂ.12 ರಂದು ಸಂಜೆ 5 ಗಂಟೆಗೆ ಶ್ರೀ ಎರ‍್ರಿತಾತನವರ ಮಹಾರಥೋತ್ಸವ ನಡೆಯಲಿದೆ. ಅಂದು ರಾತ್ರಿ 7 ಗಂಟೆಗೆ ಕರ್ಪೂರದ ಆರತಿ ಕಾರ್ಯಕ್ರಮ ನಡೆಯಲಿದೆ. ಜೂ.13ರಂದು ಸಂಜೆ 7 ಗಂಟೆಗೆ ಹೂವಿನ ರಥೋತ್ಸವ ಕಾರ್ಯಕ್ರಮ ನಂತರ ಬಾಣೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಎರ‍್ರಿಸ್ವಾಮಿ ಜೀವಸಮಾಧಿ ಟ್ರಸ್ಟ್‌ನ ಅಧ್ಯಕ್ಷ ಬಾಳನಗೌಡ ಮತ್ತು ಶ್ರೀ ದಾಸೋಹ ಸೇವಾ ಸಂಘದ ಅಧ್ಯಕ್ಷ ಪಂಪನಗೌಡ ತಿಳಿಸಿದ್ದಾರೆ.

Continue Reading
Advertisement
T20 World Cup
ಪ್ರಮುಖ ಸುದ್ದಿ3 hours ago

T20 World Cup : ಕೊನೆಗೂ ದುರ್ಬಲ ಕೆನಾಡ ತಂಡದ ವಿರುದ್ಧ ಜಯ ಗಳಿಸಿದ ಪಾಕಿಸ್ತಾನ

Lt. General Upendra Dwivedi
ಪ್ರಮುಖ ಸುದ್ದಿ4 hours ago

Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

Terrorist Killed
ಪ್ರಮುಖ ಸುದ್ದಿ4 hours ago

Terrorist Killed : ಜಮ್ಮು ಕಾಶ್ಮೀರದಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ ಭದ್ರತಾ ಪಡೆ

Joe Biden
ಪ್ರಮುಖ ಸುದ್ದಿ5 hours ago

Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

Pavithra Gowda
ಕರ್ನಾಟಕ5 hours ago

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Priyanka Gandhi:
ಪ್ರಮುಖ ಸುದ್ದಿ6 hours ago

Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

CM Siddaramaiah
ಕರ್ನಾಟಕ6 hours ago

CM Siddaramaiah: ಗಣಿಗಳ ಹರಾಜು ಪ್ರಕ್ರಿಯೆ ಕೂಡಲೇ ಕೈಗೆತ್ತಿಕೊಳ್ಳಲು ಸಿಎಂ ಸೂಚನೆ

Modi Ka Parivar
ಪ್ರಮುಖ ಸುದ್ದಿ6 hours ago

Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

Rajeev Taranath
ಕರ್ನಾಟಕ7 hours ago

Rajeev Taranath: ಖ್ಯಾತ ಸರೋದ್‌ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

Aishwarya Arjun
ಪ್ರಮುಖ ಸುದ್ದಿ7 hours ago

Aishwarya Arjun : ಚೆನ್ನೈನಲ್ಲಿ ವಿವಾಹವಾದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್​; ಇಲ್ಲಿವೆ ಚಿತ್ರಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ11 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ12 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ14 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ16 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌