ವಿದೇಶಾಂಗ ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಜೆಡಿಎಸ್‌ ಮಾಜಿ ಎಂಎಲ್‌ಸಿ - Vistara News

ರಾಜಕೀಯ

ವಿದೇಶಾಂಗ ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಜೆಡಿಎಸ್‌ ಮಾಜಿ ಎಂಎಲ್‌ಸಿ

ರಾಮನಗರ ಸೇರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಲವರ್ಧನೆಗೆ ಸಚಿವ ಅಶ್ವತ್ಥನಾರಾಯಣ ಪ್ರಯತ್ನ ನಡೆಸುತ್ತಿದ್ದಾರೆ. ವಿದೇಶಾಂಗ ಸಚಿವರ ನೇತೃತ್ವದಲ್ಲಿ ಮಾಜಿ ಎಂಎಲ್‌ಸಿ ಮರಿಲಿಂಗೇಗೌಡ ಅವರು ಪಕ್ಷ ಸೇರ್ಪಡೆಯಾಗಿದ್ದಾರೆ.

VISTARANEWS.COM


on

marilingegowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾರೋಹಳ್ಳಿ (ರಾಮನಗರ): ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿಲಿಂಗೇಗೌಡ ಮತ್ತು ಇನ್ನೂ ಹಲವರು ಶನಿವಾರ ಜೆಡಿಎಸ್‌ಗೆ ವಿದಾಯ ಹೇಳಿ, ಬಿಜೆಪಿ ಸೇರಿಕೊಂಡರು.

ಹಾರೋಹಳ್ಳಿ ಸಮೀಪದ ಹನುಮಂತನಗರದಲ್ಲಿರುವ ಮರಿಲಿಂಗೇಗೌಡರ ಮನೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ. ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ, ಪಕ್ಷದ ಕೇಸರಿ ಶಾಲು ಹೊದಿಸುವ ಮೂಲಕ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಈರೇಗೌಡ, ಬಮೂಲ್ ಮಾಜಿ ನಿರ್ದೇಶಕ ಮರಿಯಪ್ಪ ಸೇರಿ ಅನೇಕರು ಸಂದರ್ಭದಲ್ಲಿ ಬಿಜೆಪಿ ಸೇರಿದರು.

ಇದನ್ನೂ ಓದಿ ನಕಲಿ ಡೀಲ್‌ ರಾಜ V/S ಮಿಸ್ಟರ್‌ ಬ್ಲ್ಯಾಕ್‌ಮೇಲರ್‌: ಎಚ್‌ಡಿಕೆ, ಅಶ್ವತ್ಥನಾರಾಯಣ ಸಮರ

ಮರಿಲಿಂಗೇಗೌಡರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಅಶ್ವತ್ಥನಾರಾಯಣ, ‘ಬಿಜೆಪಿ ಮಾತ್ರ ಎಲ್ಲರಿಗೂ ಮುಕ್ತ ಅವಕಾಶ ನೀಡುವ ಪಕ್ಷವಾಗಿದ್ದು, ಸಮಾಜದ ಎಲ್ಲ ವರ್ಗಗಳಿಗೂ ಪ್ರಾತಿನಿಧ್ಯ ನೀಡುವ ಸಂಸ್ಕೃತಿಯನ್ನು ಹೊಂದಿದೆ. ಮರಿಲಿಂಗೇಗೌಡರ ಸೇರ್ಪಡೆಯಿಂದ ರಾಮನಗರ ಜಿಲ್ಲೆಯಲ್ಲಿ ಬಿಜೆಪಿಗೆ ಬಲ ಬಂದಿದೆ’ ಎಂದರು.

ಕಾಂಗ್ರೆಸನ್ನು ದೇಶದ ಜನ ತಿರಸ್ಕರಿಸಿದ್ದಾರೆ. ಜೆಡಿಎಸ್ ಕೇವಲ ಒಂದು ಕುಟುಂಬಕ್ಕೆ ಜೋತು ಬಿದ್ದಿರುವ ಊಳಿಗಮಾನ್ಯ ಪಕ್ಷವಾಗಿದೆ. ಬಿಜೆಪಿ ಮಾತ್ರ ದೇಶದ ಜನರಲ್ಲಿ ಭರವಸೆ ಹುಟ್ಟಿಸಿದ್ದು, ಅಭಿವೃದ್ಧಿ ಕೇಂದ್ರಿತ ರಾಜಕಾರಣದಲ್ಲಿ ನಂಬಿಕೆ ಹೊಂದಿದೆ ಎಂದು ನುಡಿದರು.

ಮರಿಲಿಂಗೇಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಜನಪರ ಮತ್ತು ಬದ್ಧತೆಯ ಆಡಳಿತ ಕಂಡು ಬಿಜೆಪಿ ಸೇರುತ್ತಿದ್ದೇನೆ. ದೇಶವನ್ನು ಬಲಿಷ್ಠವಾಗಿ ಕಟ್ಟುವುದು ಮತ್ತು ಪ್ರಜಾಪ್ರಭುತ್ವದ ಉಳಿವು ಬಿಜೆಪಿಯಿಂದ ಮಾತ್ರ ಸಾಧ್ಯ’ ಎಂದರು.

ಇದನ್ನೂ ಓದಿ | ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ ಪಾಟಿದಾರ್‌ ನಾಯಕ ಹಾರ್ದಿಕ್‌ ಪಟೇಲ್‌ ಜೂನ್‌ 2ರಂದು ಬಿಜೆಪಿ ಸೇರ್ಪಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

CM Siddaramaiah: ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

One year for the government Cm Siddaramaiah reveals many dreams and media interaction live
Koo

ಬೆಂಗಳೂರು: ಇಂದಿಗೆ (ಮೇ 20) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಾಧ್ಯಮದ ಸಂವಾದದ ಮೂಲಕ ರಾಜ್ಯದ ಜನರಿಗೆ ಧನ್ಯವಾದ ಹೇಳಿದ್ದಾರೆ. ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದು ಹೇಳಿದ್ದಾರೆ. ಅಲ್ಲದೆ, ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವ ಗುರಿ ಇದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಡಿ

ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ. ಅಭಿವೃದ್ಧಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದಾಗಿದೆ. ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧ ಪಕ್ಷಗಳು ಜಾತಿ – ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆಯಾಗಿದೆ. ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಸಿಎಂ ಸಿದ್ದರಾಮಯ್ಯ ಭರವಸೆಯನ್ನು ನೀಡಿದ್ದಾರೆ.

ಸಿಎಂ ಮಾಧ್ಯಮ ಸಂವಾದ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಸೋಮವಾರ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ನುಡಿದಂತೆ ನಡೆದಿದ್ದೇವೆ, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದೇವೆ ಎಂದು ಹೇಳಿದರು. ಅಲ್ಲದೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಎಂಬಿತ್ಯಾದಿ ಯೋಜನೆಗಳ ಬಗ್ಗೆ ಅಂಕಿ-ಅಂಶಗಳ ಸಹಿತ ಮಾಹಿತಿ ನೀಡಿದರು.

Continue Reading

ದೇಶ

Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

Lok Sabha Election 2024:ಎರಡು ನಿಮಿಷಗಳ ಅವಧಿಯ ವೀಡಿಯೊದಲ್ಲಿ, ರಾಜನ್‌ ಸಿಂಗ್‌, ಬಿಜೆಪಿ ಅಭ್ಯರ್ಥಿ ಮುಖೇಶ್ ರಜಪೂತ್ ಅವರಿಗೆ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ (ಇವಿಎಂ) ಕನಿಷ್ಠ 8 ಬಾರಿ ಮತ ಚಲಾಯಿಸುವುದನ್ನು ಕಾಣಬಹುದು. ರಜಪೂತ್ ಉತ್ತರ ಪ್ರದೇಶದ ಫರೂಕಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಎಆರ್ ಒ ಪ್ರತೀತ್ ತ್ರಿಪಾಠಿ ಅವರ ದೂರಿನ ಆಧಾರದ ಮೇಲೆ ನಯಾ ಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

VISTARANEWS.COM


on

Lok sabha Election 2024
Koo

ಉತ್ತರ ಪ್ರದೇಶ: ಚುನಾವಣೆ(Lok Sabha Election 2024) ಬಂತೆಂದರೆ ಸಾಕು ಮತಯಂತ್ರ(EVMs)ಗಳ ಕಾರ್ಯಕ್ಷಮತೆ ಬಗ್ಗೆ ಆಗಾಗ ಅನುಮಾನಗಳು ಕೇಳಿ ಬರುವುದು ಸಾಮಾನ್ಯ. ಇದಕ್ಕೆ ಪೂರಕ ಎಂಬಂತೆ ಕೆಲವೊಮ್ಮೆ ಮತಯಂತ್ರಗಳ ಕ್ಷಮತೆ ಮೇಲೆ ಅನುಮಾನ ಹುಟ್ಟಿಸುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ವಿಡಿಯೋ ಹರಿದಾಡುತ್ತಿದ್ದು, ಮತಗಟ್ಟೆಯೊಂದರಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಒಬ್ಬನೇ ವ್ಯಕ್ತಿ ಹಲವು ಬಾರಿ ಮತಹಾಕಿದ್ದಾನೆ. ಈ ವಿಡಿಯೋ ವೈರಲ್‌(Viral Video) ಆಗುತ್ತಿದ್ದಂತೆ ಪೊಲೀಸರು ಆ ವ್ಯಕ್ತಿಯನ್ನು ಅರೆಸ್ಟ್‌ ಮಾಡಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಉತ್ತರಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಾಜನ್‌ ಸಿಂಗ್‌ ಎಂಬ ಯುವಕ ತಾನು ಮತ ಚಲಾಯಿಸುವ ವಿಡಿಯೋವನ್ನು ರೆಕಾರ್ಡ್‌ ಮಾಡಿದ್ದಾರೆ. ಈ ವಿಡಿಯೋವನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳ ಹಲವಾರು ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡ ನಂತರ ಆರೋಪಿ ರಾಜನ್ ಸಿಂಗ್ ಎನ್ನುವಾತನನ್ನು ವಶಕ್ಕೆ ಪಡೆಯಲಾಗಿದೆ.

ಎರಡು ನಿಮಿಷಗಳ ಅವಧಿಯ ವೀಡಿಯೊದಲ್ಲಿ, ರಾಜನ್‌ ಸಿಂಗ್‌, ಬಿಜೆಪಿ ಅಭ್ಯರ್ಥಿ ಮುಖೇಶ್ ರಜಪೂತ್ ಅವರಿಗೆ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ (ಇವಿಎಂ) ಕನಿಷ್ಠ 8 ಬಾರಿ ಮತ ಚಲಾಯಿಸುವುದನ್ನು ಕಾಣಬಹುದು. ರಜಪೂತ್ ಉತ್ತರ ಪ್ರದೇಶದ ಫರೂಕಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಎಆರ್ ಒ ಪ್ರತೀತ್ ತ್ರಿಪಾಠಿ ಅವರ ದೂರಿನ ಆಧಾರದ ಮೇಲೆ ನಯಾ ಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನು ರಾಜನ್‌ ಸಿಂಗ್‌ ವಿರುದ್ಧ ಸೂಚನೆ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 171F (ಚುನಾವಣೆಗಳಿಗೆ ಸಂಬಂಧಿಸಿದ ಅಪರಾಧ), ಐಪಿಸಿ ಸೆಕ್ಷನ್ 419 (ವ್ಯಕ್ತಿಯಿಂದ ವಂಚನೆಗೆ ಶಿಕ್ಷೆ), ಸೆಕ್ಷನ್ 128, 132, ಮತ್ತು 136 ಸೇರಿದಂತೆ ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯಿದೆ (ಮತದಾನದ ಗೌಪ್ಯತೆಯನ್ನು ಕಾಪಾಡುವುದು, ಚುನಾವಣೆಗಳಲ್ಲಿ ವಂಚನೆ ಮತ್ತು ಇತರ ಚುನಾವಣಾ ಅಪರಾಧಗಳಿಗೆ ಸಂಬಂಧಿಸಿದೆ) ಮತ್ತು ಇತರೆ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಆಯೋಗ ಕೂಡ ಈ ವಿಷಯದ ಬಗ್ಗೆ ಗಮನಹರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಘಟನೆ ನಡೆದಾಗ ಮತಗಟ್ಟೆಯಲ್ಲಿ ಹಾಜರಿದ್ದ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ಹೊರಡಿಸಲಾಗಿದೆ.

ಇದನ್ನೂ ಓದಿ:Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Continue Reading

ದೇಶ

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Lok Sabha Election 2024: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

VISTARANEWS.COM


on

Lok Sabha Election 2024
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ. ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

4ನೇ ಹಂತದಲ್ಲಿ ಹೆಚ್ಚಿದ ಮತದಾನ

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಮೂರು ಹಂತಗಳಿಗಿಂತ ಗರಿಷ್ಠ ಮತದಾನ ದಾಖಲಾಗಿದೆ. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Continue Reading

ಕರ್ನಾಟಕ

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Pralhad Joshi: ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹುಬ್ಬಳ್ಳಿ ಅಂಜಲಿ ಹತ್ಯೆ ಬಗ್ಗೆ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Pralhad Joshi
Koo

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ, ಆತ್ಮಹತ್ಯೆ ಕೃತ್ಯಗಳೇ ಅಧಿಕವಾಗಿದ್ದು, ಅಭಿವೃದ್ಧಿ ಸಮಾಧಿಯಾಗಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ. 600 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರ ಪ್ರಚಾರಕ್ಕೆ ತೆರಳಿದ್ದ ಸಚಿವರು ಭಾನುವಾರ ಹುಬ್ಬಳ್ಳಿಗೆ ಬರುತ್ತಲೇ ನೇರ ಅಂಜಲಿ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವಿರುದ್ಧ ಹರಿ ಹಾಯ್ದರು. ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಬಳಿಕ ಈಗ ಮತ್ತೊಬ್ಬ ಯುವತಿ ಭೀಕರವಾಗಿ ಕೊಲೆಯಾಗಿದ್ದಾಳೆ. ಅಂಜಲಿ ಅಜ್ಜಿ ಮತ್ತು ‌ಸಹೋದರಿಯರು‌ ಹೇಳಿದ್ದನ್ನು ಕೇಳಿದ್ರೆ ಭಯ ಹುಟ್ಟುತ್ತದೆ. ಈ ಹಿಂದೆಯೆ ಆರೋಪಿ ಬಗ್ಗೆ ದೂರು ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಅವರ ಆರೋಪ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು‌? ಅವರ ಬಗ್ಗೆಯೂ‌ ತನಿಖೆಯಾಗಬೇಕು ಎಂದು ಸಚಿವ ಜೋಶಿ ಆಗ್ರಹಿಸಿದರು.

ಇದನ್ನೂ ಓದಿ | Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

ನೇಹಾ ಹತ್ಯೆಯಾದಾಗ ಬಹುದೊಡ್ಡ ಜನಾಂದೋಲನವೇ ಆಯಿತು. ಆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ‌ ಕೃತ್ಯ ನಡೆಸುವವರಿಗೆ‌ ಪ್ರೋತ್ಸಾಹ ನೀಡಿದಂತಾಗಿದೆ. ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ. ರಾಜ್ಯ ಸರ್ಕಾರಕ್ಕೆ ಗಂಭೀರತೆಯೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಪ್ರಕರಣಗಳಾಗಿವೆ ಎಂಬುದನ್ನು ಹುಡುಕಲು ಅಧಿಕಾರಿಗಳನ್ನು ನೇಮಿಸುತ್ತಾರೆ ಎಂದು ಕಿಡಿಕಾರಿದರು.

ಅಧಿಕಾರಿಗಳ ವರ್ಗಾವಣೆ ದಂಧೆ

ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಿಕ್ಕಾಪಟ್ಟೆ ಹಣ ತೆಗೆದುಕೊಳ್ತಾರೆ. ಗಾಂಜಾ‌, ಅಫೀಮು‌ ಚಟುವಟಿಕೆಗಳಿಗೆ‌ ಕಡಿವಾಣ ಹಾಕಲು ಆಗ್ತಿಲ್ಲ. ಕಾನೂನು‌ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಭಿವೃದ್ದಿಯು ಸಮಾಧಿಯಾಗಿದೆ ಎಂದು ಸಚಿವ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಾಲಕರಲ್ಲಿ ಭಯ

ರಾಜ್ಯದಲ್ಲಿ ಕಡುಬಡ‌ವರು ಹೆಣ್ಣು ಮಕ್ಕಳನ್ನು ಕಾಲೇಜಿಗೆ ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಜನರು ಬೀದಿಗಿಳಿಯುವ ಪರಿಸ್ಥಿತಿಯನ್ನ‌ ಸರ್ಕಾರ ತಂದುಕೊಳ್ಳಬಾರದು. ಕೊಲೆ, ಹತ್ಯೆ, ಆತ್ಮಹತ್ಯೆ ಪ್ರಕರಣಗಳಲ್ಲಿ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಯಾರೋ ಒಬ್ಬ ಅಧಿಕಾರಿ‌ಯನ್ನು ಅಮಾನತ್ತು ಮಾಡಿ ಕೈ ತೊಳೆದುಕೊಳ್ಳಬಾರದು ಎಂದು ಹೇಳಿದರು.

ಅಂಜಲಿ ಭಾವಚಿತ್ರಕ್ಕೆ ಪುಷ್ಪ ನಮನ

ದುಷ್ಕರ್ಮಿಯಿಂದ ಹತ್ಯೆಗೀಡಾದ ಹುಬ್ಬಳ್ಳಿ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಭಾವಚಿತ್ರಕ್ಕೆ ಸಚಿವರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಇದನ್ನೂ ಓದಿ | R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

ಈ‌ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಶೋಕ‌ ಕಾಟವೆ, ಅಂಬಿಗೇರ ಸಮಾಜದ ಮುಖಂಡರಾದ ಮಾರುತಿ ಕಬ್ಬೇರ, ಪಕ್ಷದ ಪ್ರಮುಖರಾದ ಶಿವು ಮೆಣಸಿನಕಾಯಿ, ಪ್ರಭು ನವಲಗುಂದಮಠ, ಚಂದ್ರಶೇಖರ ಗೋಕಾಕ, ಬಸವರಾಜ ಅಮ್ಮಿನಬಾವಿ, ಶಶಿ ಬಿಜುವಾಡ, ಅನೂಪ್ ಬಿಜುವಾಡ, ರಾಜು ಜರ್ತಾರಘರ್, ಶಿವಯ್ಯ ಹಿರೇಮಠ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Continue Reading
Advertisement
Payal Rajput Accuses Rakshana Producers Of Not Clearing Her Dues
ಟಾಲಿವುಡ್5 mins ago

Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

Salman Khan Ultimate Sex Symbol Says Malaika Arora
ಬಾಲಿವುಡ್9 mins ago

Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Ebrahim Raisi
ವಿದೇಶ10 mins ago

Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

One year for the government Cm Siddaramaiah reveals many dreams and media interaction live
ರಾಜಕೀಯ19 mins ago

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

Drowned in water
ಬೆಂಗಳೂರು37 mins ago

Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

gold rate today sai pallavi
ಚಿನ್ನದ ದರ1 hour ago

Gold Rate Today: 22 ಕ್ಯಾರಟ್‌ ಚಿನ್ನದ ಬೆಲೆ 500 ರೂ. ಏರಿಕೆ; ಇಂದಿನ ಬಂಗಾರದ ಧಾರಣೆ ಹೀಗಿದೆ

Murder case
ದೇಶ1 hour ago

Murder Case: ತಾಜ್‌ ಮಹಲ್‌ ಸಮೀಪದಲ್ಲೇ ಘೋರ ಕೃತ್ಯ; ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

Mohan Lal watching dr rajkumars super hit song
ಮಾಲಿವುಡ್1 hour ago

Mohan Lal: ಅಣ್ಣಾವ್ರ ಹಾಡನ್ನು ಎಂಜಾಯ್‌ ಮಾಡಿದ ಮೋಹನ್ ಲಾಲ್; ವಿಡಿಯೊ ವೈರಲ್‌!

Lok Sabha Election 2024
Lok Sabha Election 20241 hour ago

Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

actor Chetan Kumar Ahimsa
ಸಿನಿಮಾ2 hours ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ22 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ23 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌