'ಮಂತ್ರದ್ರಷ್ಟ ಅರವಿಂದ ಘೋಷ್​' ಪುಸ್ತಕ ಬಿಡುಗಡೆ; ಅರವಿಂದರ ಮಾಹಿತಿ ಬಿಚ್ಚಿಟ್ಟ ಲೇಖಕ ಕಾ.ಶ್ರೀ.ನಾಗರಾಜ - Vistara News

ಕರ್ನಾಟಕ

‘ಮಂತ್ರದ್ರಷ್ಟ ಅರವಿಂದ ಘೋಷ್​’ ಪುಸ್ತಕ ಬಿಡುಗಡೆ; ಅರವಿಂದರ ಮಾಹಿತಿ ಬಿಚ್ಚಿಟ್ಟ ಲೇಖಕ ಕಾ.ಶ್ರೀ.ನಾಗರಾಜ

ಯೋಗಿ ಅರವಿಂದರ 150ನೇ ಪಾವನ ಜನ್ಮದಿನದ ಪ್ರಯುಕ್ತ ಕೇಂದ್ರೀಯ ಸದನದಲ್ಲಿ ಶನಿವಾರ ಕಾ.ಶ್ರೀ. ನಾಗರಾಜ ಅವರ ಕೃತಿ “ಯೋಗಿ ಅರವಿಂದ” ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

VISTARANEWS.COM


on

ARAVINDO 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯೋಗಿ ಅರವಿಂದ ಅವರ ಬಗ್ಗೆ ಸಾಕಷ್ಟು ಸ್ವಾರಸ್ಯಕರ ಸಂಗತಿಗಳಿವೆ. ದೇಶವನ್ನು ಕಟ್ಟುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು. ಚಿಕ್ಕ ವಯಸ್ಸಿನಲ್ಲಿಯೇ ಅವರ ಸಾಧನೆ, ಛಲವನ್ನು ನಾವು ತಿಳಿದುಕೊಳ್ಳಲೇಬೇಕು. ಅವರು ಹಲವು ರಂಗಗಳಲ್ಲಿ ಸಾಧನೆ ಮಾಡಿದವರು ಎಂದು ಸಾಹಿತಿ, ಲೇಖಕ ಕಾ.ಶ್ರೀ.ನಾಗರಾಜ ಹೇಳಿದರು.

ಯೋಗಿ ಅರವಿಂದರ 150ನೇ ಪಾವನ ಜನ್ಮದಿನದ ಪ್ರಯುಕ್ತ ಕೇಂದ್ರೀಯ ಸದನದಲ್ಲಿ ಶನಿವಾರ ತಮ್ಮ ಕೃತಿ “ಯೋಗಿ ಅರವಿಂದ” ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ೧೯೨೦ರಲ್ಲಿ ನಾಗಪುರ ಕಾಂಗ್ರೆಸ್‌ಗೆ ಅರವಿಂದರನ್ನು ಅಧ್ಯಕ್ಷರಾಗಿ ಬರಬೇಕೆಂದು ಕೆಲವರು ಕೇಳಿಕೊಂಡಾಗ ನಿರಾಕರಿಸಿದ್ದ ಅವರು, ತಾವು ಅಧ್ಯಾತ್ಮಿಕ ಕ್ಷೇತ್ರಕ್ಕೆ ಸೇರಿಕೊಂಡಿದ್ದು, ಬರುವುದಿಲ್ಲ ಎಂದು ಹೇಳಿದ್ದರು. ಆದರೆ, ಅವರು ಹುಟ್ಟಾ ರಾಜಕಾರಣಿಯೇ, ಹುಟ್ಟಾ ಚರಿತ್ರಕಾರರೇ? ವಿದ್ವಾಂಸರೇ? ಎಂಬ ಬಗ್ಗೆ ಹೇಳಲು ಕಷ್ಟವಾಗುತ್ತದೆ. ಅವರ ತಂದೆ ಕಳುಹಿಸಿದರು ಎಂಬ ಕಾರಣಕ್ಕೆ ಚಿಕ್ಕವಯಸ್ಸಿಗೆ ಓದಲು ಇಂಗ್ಲೆಂಡ್‌ ಹೋಗಿದ್ದರು. ಭಾರತದ ಹೆಸರು ಗೊತ್ತಿಲ್ಲ, ಸಂಸ್ಕೃತ, ಬಂಗಾಳಿ ಯಾವುದೂ ಗೊತ್ತಿಲ್ಲ. ಆದರೆ, ಅವರು ಅಲ್ಲಿಂದ ಭಾರತಕ್ಕೆ ವಾಪಸ್‌ ಬಂದ ಮೇಲೆ ಬಂಗಾಳಿ ಸೇರಿದಂತೆ ಎಲ್ಲವನ್ನೂ ಕಲಿತರು. ಜ್ಞಾನವನ್ನು ಉದಾರವಾಗಿ ಹಂಚಿದರು ಎಂದು ಹೇಳಿದರು.

ARAVINDO
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದ ಸಾಹಿತ್ಯಾಸಕ್ತರು.

ಅರವಿಂದರು ವಿದೇಶದಿಂದ ಬಂದ ಬಳಿಕ ಕಾಂಗ್ರೆಸ್‌ ಸೇರಿದ್ದರು. ಒಂದೇ ಮಾತರಂ ಚಳವಳಿಗೆ ಧುಮುಕಿದರು. ಬಳಿಕ ಕಾಂಗ್ರೆಸ್‌ ವಿಭಜನೆಯಾಯಿತು. ಆಗ ಅವರು ಬ್ರಿಟಿಷರನ್ನು ಕೊಡಿ ಎಂದು ಕೇಳುವ ಕಾಂಗ್ರೆಸ್‌ ಬಿಟ್ಟು, ಕೊಡು ಎಂದು ಕೇಳುವ ಕಾಂಗ್ರೆಸ್‌ ಅನ್ನು ಆಯ್ಕೆ ಮಾಡಿಕೊಂಡರು. ಅವರು ಅಷ್ಟು ದೊಡ್ಡ ನಾಯಕರಾಗಿ ಬೆಳೆದರು. ಕೊನೆಗೆ ಅವರು ಯೋಗವನ್ನು ಆಯ್ದುಕೊಂಡರು. ಈ ಕ್ಷೇತ್ರದಲ್ಲಿ ಭಾರಿ ಸಾಧನೆ ಮಾಡಿದರು ಎಂದು ಕಾ. ಶ್ರೀ ನಾಗರಾಜ ಮಾಹಿತಿಯನ್ನು ಬಿಚ್ಚಿಟ್ಟರು.

ಈ ಪುಸ್ತಕವು 160 ಪುಟಗಳನ್ನು ಹೊಂದಿದ್ದು, ಮಾರುಕಟ್ಟೆಯಲ್ಲಿ ಲಭ್ಯವಿದೆ. 100 ರೂಪಾಯಿ ದರವನ್ನು ನಿಗದಿ ಮಾಡಲಾಗಿದೆ ಎಂದು ಲೇಖಕರು ತಿಳಿಸಿದ್ದಾರೆ.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಖ್ಯಾತ ಲೇಖಕ ಹಾಗೂ ವಿಮರ್ಶಕ ಡಾ. ಜಿ.ಬಿ. ಹರೀಶ್ ಮಾತನಾಡಿ, ಭಾರತೀಯ ಸಂಸ್ಕೃತಿ, ಪರಂಪರೆ ಹೇಗಿತ್ತು? ನಮ್ಮ ತಂಟೆಗೆ ಬಂದವರನ್ನು ಬಿಡದಿರುವ ಮನೋಭಾವದ ಜತೆ ಜತೆಗೆ ಇನ್ನೊಬ್ಬರ ಸ್ವತ್ತಿನ ಮೇಲೆ ಕಣ್ಣು ಹಾಕುವವರಲ್ಲ ಎಂಬ ಮನಸ್ಥಿತಿಯನ್ನೂ ಹೊಂದಿದವರು. ಇಂತಹ ಹಲವು ನಿದರ್ಶನಗಳು ರಾಮಾಯಣ, ಮಹಾಭಾರತದಲ್ಲಿ ಬರುತ್ತದೆ. ಅಲ್ಲದೆ, ನಮ್ಮಲ್ಲಿರುವ ಶಕ್ತಿಯನ್ನು ಸಾತ್ವಿಕವಾಗಿ ಬಳಸಬೇಕು ಎಂಬಿತ್ಯಾದಿ ಮಾಹಿತಿಯನ್ನು ಸಹ ಚರ್ಚೆ ವೇಳೆ ವಿವರಿಸಿದರು.

ಇದನ್ನೂ ಓದಿ | ಜಿ ಎನ್ ರಂಗನಾಥ ರಾವ್ ಅವರ ಆ ಪತ್ರಿಕೋದ್ಯಮ ಕೃತಿ ನಾಳೆ ಬಿಡುಗಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

Milk Price Hike: ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ದರ ಹೆಚ್ಚಳದ ಹಾಲು ಮಾರಾಟವಾಗುತ್ತಿದೆ. ಈ ಬಗ್ಗೆ ಬಳ್ಳಾರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಗೃಹಿಣಿಯರು, ಏಕಾಏಕಿ ದರ ಹೆಚ್ಚಳ ಮಾಡಿ ನಮ್ಮ ಜೇಬಿಗೆ ಸರಕಾರ ಕತ್ತರಿ ಹಾಕ್ತಿದೆ ಎಂದು ಆಕ್ರೋಶಿಸಿದ್ದಾರೆ.

VISTARANEWS.COM


on

shubham milk price hike
Koo

ಬಳ್ಳಾರಿ: ಶುಭಂ ಗೋಲ್ಡ್‌ ಹಾಲಿನ ದರವನ್ನು (Shubham Gold Milk) ಅರ್ಧ ಲೀಟರ್‌ಗೆ ಏಕಾಏಕಿ 4 ರೂ. ಹೆಚ್ಚಳ ಮಾಡಲಾಗಿದೆ. ಘೋಷಿತ ದರ ಏರಿಕೆಗಿಂತ (Milk Price Hike) ಹೆಚ್ಚು ದರ ಏರಿಸಲಾಗಿದೆ ಎಂದು ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಕೆಎಂಎಫ್‌ ನಂದಿನ ಹಾಲಿನ (KMF Nandini Milk) ದರ ಹೆಚ್ಚಿಸಿ ಪರಿಷ್ಕೃತ ದರದ ಪಟ್ಟಿ ಬಿಡುಗಡೆ ಮಾಡಿತ್ತು. ಪ್ರತಿ ಲೀಟರ್‌ ಹಾಗೂ ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲಿ 50 ಎಂಎಲ್‌ ಹಾಲಿನ ಪ್ರಮಾಣ ಹೆಚ್ಚಿಸಿ 2 ರೂ. ಹೆಚ್ಚಳ ಮಾಡಿರುವುದಾಗಿ ಘೋಷಣೆ ಮಾಡಿತ್ತು. ಆದ್ರೆ ಶುಭಂ ಗೋಲ್ಡ್ ಹಾಲಿನ ದರವನ್ನು ತಾನೇ ಘೋಷಿಸಿದಂತೆ 2 ರೂ. ಹೆಚ್ಚಳ ಮಾಡುವ ಬದಲು ಅರ್ಧ ಲೀಟರ್‌ಗೆ 3 ರೂ. ಹಾಗೂ 1 ಲೀಟರ್‌ಗೆ 4 ರೂ. ಹೆಚ್ಚಳ ಮಾಡಿದೆ. ಈಗ ಬಂದಿರುವ ಹೊಸ ಪ್ಯಾಕೆಟ್‌ನಲ್ಲಿ ದುಬಾರಿ ಬೆಲೆ ಮುದ್ರಿತವಾಗಿದೆ. ಈ ಮೊದಲು ಅರ್ಧ ಲೀಟರ್‌ಗೆ 26 ರೂ. ಇದ್ದ ಶುಭಂ ಗೋಲ್ಡ್ ಹಾಲು 28 ರೂ. ಬದಲು 29 ರೂ. ಆಗಿದೆ. 1 ಲೀಟರ್‌ಗೆ 49 ರೂ. ಇದ್ದ ಹಾಲು 51 ರೂ. ಬದಲು 53 ರೂಪಾಯಿ ಆಗಿದೆ.

ಹೀಗಾಗಿ, ಹಾಲಿನ ದರ ಏರಿಕೆ ವಿಚಾರದಲ್ಲಿ ಕೆಎಂಏಫ್‌ ಹಾಗೂ ಸರ್ಕಾರ ಸುಳ್ಳು ಹೇಳಿದೆ ಎಂದು ಬಳಕೆದಾರರು ಆಕ್ರೋಶಿಸಿದ್ದಾರೆ. ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ದರ ಹೆಚ್ಚಳದ ಹಾಲು ಮಾರಾಟವಾಗುತ್ತಿದೆ. ಈ ಬಗ್ಗೆ ಬಳ್ಳಾರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಗೃಹಿಣಿಯರು, ಏಕಾಏಕಿ ದರ ಹೆಚ್ಚಳ ಮಾಡಿ ನಮ್ಮ ಜೇಬಿಗೆ ಸರಕಾರ ಕತ್ತರಿ ಹಾಕ್ತಿದೆ ಎಂದು ಆಕ್ರೋಶಿಸಿದ್ದಾರೆ.

ಕೆಎಂಎಫ್‌ ದರ ಹೆಚ್ಚಳ ಹೀಗಿತ್ತು:

ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 44 ರೂ.

ಹೋಮೋಜಿನೈಸ್ಡ್‌ ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 45 ರೂ.

ಹೋಮೋಜಿನೈಸ್ಡ್‌ ಹಸುವಿನ ಹಾಲು
550 ಎಂಎಲ್‌ – 26 ರೂ.
1050 ಎಂಎಲ್‌ – 48 ರೂ.

ಸ್ಪೆಷಲ್‌ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ಸಮೃದ್ಧಿ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 53 ರೂ.

ಹೋಮೋಜಿನೈಸ್ಡ್‌ ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 51 ರೂ.

ಸಂತೃಪ್ತಿ ಹಾಲು
550 ಎಂಎಲ್‌ – 30 ರೂ.
1050 ಎಂಎಲ್‌ – 57 ರೂ.

ಶುಭಂ ಗೋಲ್ಡ್‌ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 51 ರೂ.

ಡಬಲ್‌ ಟೋನ್ಡ್‌ ಹಾಲು
550 ಎಂಎಲ್‌ – 23 ರೂ.
1050 ಎಂಎಲ್‌ – 43 ರೂ.

ಇದನ್ನೂ ಓದಿ: Nandini Milk Price Hike : ಕೈಗೆ ಸಿಗದ ನಂದಿನಿ ಹಾಲು; ಪರಿಷ್ಕೃತ ದರ ಎಷ್ಟು?

Continue Reading

ಪ್ರಮುಖ ಸುದ್ದಿ

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Hosur Airport: ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು.

VISTARANEWS.COM


on

hosur airport
Koo

ಬೆಂಗಳೂರು: ಹೊಸೂರಿನಲ್ಲಿ (Hosur) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (International Airport) ನಿರ್ಮಿಸುವುದಾಗಿ (Hosur Airport) ಘೋಷಿಸಿದ ತಮಿಳುನಾಡು ಸರ್ಕಾರ (Tamil Nadu Govt) ಇದೀಗ ಅದರ ಹೊಣೆಯನ್ನು ಬಿಐಎಎಲ್‌ಗೆ (BIAL) ವಹಿಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲ್ಯಾನ್‌ ಮಾಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (Kempegowda Internationa Airport) ನಿರ್ವಹಿಸುತ್ತಿರುವ ಬಿಐಎಎಲ್‌ಗೆ ಜವಾಬ್ದಾರಿ ನೀಡಲು ಮಾತುಕತೆ ನಡೆದಿದೆ. ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು. ಬಿಐಎಎಲ್‌ ಜುಲೈ 5, 2004ರಂದು ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ದೃಷ್ಟಿಯಿಂದ 2033ರವರೆಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ತಲೆ ಎತ್ತುವಂತಿಲ್ಲ.

ಈ ತಡೆಯನ್ನು ಮೀರಲು ಸ್ಟಾಲಿನ್‌ ಸರ್ಕಾರ ಪ್ಲ್ಯಾನ್‌ ಹಾಕಿಕೊಂಡಿದೆ. ಈ ಬಗ್ಗೆ ತಮಿಳುನಾಡು ಕೈಗಾರಿಕಾ ಅಭಿವೃದ್ಧಿ ನಿಗಮ ಟಿಡ್ಕೊದ ಉನ್ನತ ಅಧಿಕಾರಿಗಳ ಸಭೆ ನಡೆದಿದ್ದು, ಬಿಐಎಎಲ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದಕ್ಕೆ ಬಿಐಎಎಲ್‌ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ. ಬಿಐಎಎಲ್‌ಗೆ ಹೊಸೂರು ವಿಮಾನ ನಿಲ್ದಾಣ ಟೆಂಡರ್ ಕೊಟ್ಟರೆ ಈ ಒಪ್ಪಂದ ಅನ್ವಯ ಆಗುವುದಿಲ್ಲ ಎನ್ನಲಾಗುತ್ತಿದೆ.

ಹೊಸೂರು ಕೈಗಾರಿಕಾ ವಲಯಕ್ಕೆ ಹೆಚ್ಚಿದ ಬೇಡಿಕೆ

ತಮಿಳುನಾಡು ಏರ್‌ಪೋರ್ಟ್ ಘೋಷಣೆ‌ ಬೆನ್ನಲ್ಲೇ ಹೊಸೂರು ಕೈಗಾರಿಕಾ ವಲಯಕ್ಕೆ ಬೇಡಿಕೆ ಹೆಚ್ಚಿದೆ. ಕಳೆದ ಐದು ವರ್ಷದಲ್ಲಿ ಹೊಸೂರು ಸುತ್ತ 200 ಹೊಸ ಕಂಪನಿಗಳು- ಕಾರ್ಖಾನೆಗಳು ಆರಂಭವಾಗಿವೆ. ಬೆಂಗಳೂರು ಸುತ್ತ ಅನುಷ್ಠಾನ ಆಗಬೇಕಿದ್ದ ಕಂಪನಿಗಳು ಹೊಸೂರಿಗೆ ಶಿಫ್ಟ್ ಆಗಿವೆ.

ಇದಕ್ಕೆ ಕಾರಣ, ತಮಿಳುನಾಡು ಸರ್ಕಾರ ಕೈಗಾರಿಕಾ ಕಂಪನಿಗಳಿಗೆ ಕಡಿಮೆ ಬೆಲೆಗೆ ಭೂಮಿ ನೀಡಿತ್ತು. ಮೆಟ್ರೋ ನಗರ ಬೆಂಗಳೂರಿಗೆ ಹತ್ತಿರದಲ್ಲೇ ಇರಿವುದರಿಂದ ಮೂಲಸೌಕರ್ಯಗಳಿಗೆ ಮೋಸವಿಲ್ಲ. ಇನ್ನು ಅತ್ತಿಬೆಲೆವರೆಗೂ ಮೆಟ್ರೋ ವಿಸ್ತೀರ್ಣದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅದೂ ಅನುಷ್ಠಾನಗೊಳ್ಳಲಿದೆ. ಹೊಸೂರು ಹೊಸ ಇಂಡಸ್ಟ್ರಿಗಳಿಗೆ ವರದಾನವಾಗುತ್ತಿದೆ. ಬೆಂಗಳೂರಿನ ಕಂಪನಿಗಳು ಹೊಸೂರಿಗೆ ಸ್ಥಳಾಂತರಕ್ಕೆ ಇದೂ ಕೂಡಾ ಕಾರಣ.

ಹೊಸೂರಿನಲ್ಲಿ ಕಾಸ್ಟ್ ಆಫ್ ಲಿವಿಂಗ್ ಕಡಿಮೆ, ಟ್ರಾನ್ಸ್ ಪೋರ್ಟ್ ಕನೆಕ್ಟಿವಿಟಿ ಹೆಚ್ಚು ಇದೆ. ಟ್ರಾಫಿಕ್ ಸಮಸ್ಯೆ ಕಡಿಮೆ ಹಾಗೂ ಮೂಲಭೂತ ಸೌಕರ್ಯ ಹೆಚ್ಚಾಗಿ ಲಭ್ಯವಿದೆ. ಹೀಗಾಗಿ ದೊಡ್ಡ ಕಂಪನಿಗಳು ಅತ್ತ ಶಿಫ್ಟ್‌ ಆಗಲು ಯೋಚಿಸುತ್ತಿವೆ. ನಗರದೊಳಗೆ ಹೆಚ್ಚುತ್ತಿರುವ ಟ್ರಾಫಿಕ್‌, ಜೀವನವೆಚ್ಚ ಜಾಗದ ಕೊರತೆಗಳು ಇದನ್ನು ಇನ್ನಷ್ಟು ಪ್ರಚೋದಿಸುತ್ತಿವೆ.

ಇದನ್ನೂ ಓದಿ: Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Continue Reading

ಮಳೆ

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Karnataka Weather Forecast : ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲೂ ಗುಡುಗು ಮಳೆ

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 30 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಅಲರ್ಟ್‌

ಜು.1ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಜು.1ರಿಂದ ಕೊಡಗಿಗೆ ಭಾರಿ ವಾಹನಗಳ ಓಡಾಟ ನಿಷೇಧ

ಕೊಡಗು: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ (Rain Effect), ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜುಲೈ 1 ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು. ಆದರೆ ಗುಡ್ಡದ ಬದಿಯಿಂದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ.

ಯಾವೆಲ್ಲ ವಾಹನಗಳಿಗೆ ನಿರ್ಬಂಧ?

ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.

ಈ ವಾಹನಗಳಿಗೆ ವಿನಾಯಿತಿ

ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಆದೇಶ ಮೀರಿದರೆ ದಂಡ ಪ್ರಯೋಗ

ಈ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ. ಜತೆಗೆ ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸುವಂತೆ ತಿಳಿಸಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bangalore–Mysore Expressway : ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Bangalore–Mysore Expressway : ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

VISTARANEWS.COM


on

Bengaluru-Mysuru highway
Koo

ಬೆಂಗಳೂರು: ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಇಂದಿನಿಂದ (ಜುಲೈ 1) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಈ ಹೈವೇಯಲ್ಲಿ ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ.

ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

ಹೆಚ್ಚಿನ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳು, ಕ್ಯಾಮೆರಾಗಳ ಹೊರತಾಗಿಯೂ ಪೊಲೀಸರು ಹೆದ್ದಾರಿಗಳಿಗೆ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳನ್ನು ಸಂಗ್ರಹಿಸಲು ಹಣ ಹಂಚಿಕೆ ಮಾಡುತ್ತಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರನ್ನು ತಡೆಯಲು ಸುಮಾರು 800 ಆಲ್ಕೋಮೀಟರ್‌ಗಳು ಮತ್ತು 155 ಲೇಸರ್ ಸ್ಪೀಡ್ ಗನ್‌ಗಳನ್ನು ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ವಿತರಿಸಲಾಗುತ್ತಿದೆ.

Continue Reading
Advertisement
Parliament Sessions
ದೇಶ10 mins ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Watermelon At Nigh
ಆರೋಗ್ಯ10 mins ago

Watermelon At Night: ಸಂಜೆ 7 ಗಂಟೆಯ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

Off Shoulder Tops Fashion
ಫ್ಯಾಷನ್10 mins ago

Off Shoulder Tops Fashion: ನೀವೂ ಆಫ್‌ ಶೋಲ್ಡರ್‌ ಟಾಪ್‌ ಧರಿಸಬಹುದು! ಆದರೆ ಈ ಎಚ್ಚರಿಕೆ ವಹಿಸಿ

shubham milk price hike
ಪ್ರಮುಖ ಸುದ್ದಿ12 mins ago

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

irat Kohli's Heartfelt Tribute to Anushka Sharma
ಕ್ರಿಕೆಟ್20 mins ago

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Birla Opus
ವಾಣಿಜ್ಯ31 mins ago

Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Kalki 2898 AD Prabhas Film Hits Jackpot 500 Cr WW In Opening
ಟಾಲಿವುಡ್45 mins ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

hosur airport
ಪ್ರಮುಖ ಸುದ್ದಿ50 mins ago

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Healthy Foods For Kidney
ಆರೋಗ್ಯ1 hour ago

Healthy Foods For Kidney: ನಮ್ಮ ಕಿಡ್ನಿ ಆರೋಗ್ಯವಾಗಿರಲು ಈ ಆಹಾರ ಸೇವನೆ ಸೂಕ್ತ

bengal assault case
ಕ್ರೈಂ1 hour ago

Assault Case: ಜೋಡಿಗೆ ಥಳಿತ; ʼಇದು ಮುಸ್ಲಿಂ ರಾಷ್ಟ್ರ…ʼ ಎಂದ ತೃಣಮೂಲ ಶಾಸಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು20 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌