Harry Potter | ಮುಂದಿನ ಟಾರ್ಗೆಟ್ ನೀನೇ, ರಶ್ದಿ ಮೇಲಿನ ದಾಳಿ ಖಂಡಿಸಿದ ಹ್ಯಾರಿ ಪಾಟರ್‌ ಲೇಖಕಿಗೆ ಬೆದರಿಕೆ - Vistara News

ವಿದೇಶ

Harry Potter | ಮುಂದಿನ ಟಾರ್ಗೆಟ್ ನೀನೇ, ರಶ್ದಿ ಮೇಲಿನ ದಾಳಿ ಖಂಡಿಸಿದ ಹ್ಯಾರಿ ಪಾಟರ್‌ ಲೇಖಕಿಗೆ ಬೆದರಿಕೆ

ಭಾರತೀಯ ಮೂಲದ ಲೇಖಕ ಸಲ್ಮಾನ್‌ ರಶ್ದಿ ಮೇಲಿನ ದಾಳಿ ಖಂಡಿಸಿದ್ದ ಹ್ಯಾರಿ ಪಾಟರ್‌ (Harry Potter) ಕೃತಿಗಳ ಲೇಖಕಿ ಜೆ.ಕೆ.ರೋಲಿಂಗ್‌ ಅವರಿಗೆ ಇರಾನ್‌ ಮೂಲದ ಮೂಲಭೂತವಾದಿ ಒಬ್ಬ ಬೆದರಿಕೆ ಹಾಕಿದ್ದಾನೆ.

VISTARANEWS.COM


on

Harry Potter
ಲೇಖಕಿ ಜೆ.ಕೆ. ರೋಲಿಂಗ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್:‌ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಮೂಲದ ಲೇಖಕ ಸಲ್ಮಾನ್‌ ರಶ್ದಿ (Salman Rushdie) ಅವರ ಮೇಲೆ ನಡೆದ ದಾಳಿಯನ್ನು ಖಂಡಿಸಿದ ಹ್ಯಾರಿ ಪಾಟರ್‌ (Harry Potter) ಸರಣಿ ಕಾದಂಬರಿಗಳ ಲೇಖಕಿ ಜೆ.ಕೆ. ರೋಲಿಂಗ್‌ (JK Rowling) ಅವರಿಗೂ ಸಾರ್ವಜನಿಕವಾಗಿ ಬೆದರಿಕೆ ಹಾಕಲಾಗಿದೆ. “ನೀನೇ ಮುಂದಿನ ಟಾರ್ಗೆಟ್”‌ ಎಂದು ಬೆದರಿಕೆ ಒಡ್ಡಲಾಗಿದೆ.

ಇರಾನ್‌ ಮೂಲದ ಮೂಲಭೂತವಾದಿ ಒಬ್ಬನಿಂದ ಜೀವ ಬೆದರಿಕೆ ಹಾಕಲಾಗಿದ್ದು, ಇದನ್ನು ಜೆ.ಕೆ. ರೋಲಿಂಗ್‌ ಅವರೇ ದೃಢಪಡಿಸಿದ್ದಾರೆ. “ಭಯಂಕರ ಸುದ್ದಿಯೊಂದು ಗೊತ್ತಾಗಿದೆ. ಇದನ್ನು ತಿಳಿಯುತ್ತಲೇ ನಾನು ಆತಂಕಕ್ಕೀಡಾಗಿದ್ದೇನೆ. ನನಗೆ ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಬೇಕಿದೆ” ಎಂದು ಲೇಖಕಿ ಟ್ವೀಟ್‌ ಮಾಡಿದ್ದಾರೆ.

ಮೀರ್‌ ಆಸಿಫ್‌ ಅಜೀಜ್‌ ಎಂಬ ಟ್ವಿಟರ್‌ ಖಾತೆಯಿಂದ ಬೆದರಿಕೆ ಹಾಕಲಾಗಿದ್ದು, ಆತನ ಬಯೋದಲ್ಲಿ ವಿದ್ಯಾರ್ಥಿ, ಸಾಮಾಜಿಕ ಕಾರ್ಯಕರ್ತ, ರಾಜಕೀಯ ಕಾರ್ಯಕರ್ತ ಹಾಗೂ ಸಂಶೋಧನಾ ಕಾರ್ಯಕರ್ತ ಎಂದು ಬರೆದುಕೊಂಡಿದ್ದಾನೆ. ಹಾಗೆಯೇ, ಸಲ್ಮಾನ್‌ ರಶ್ದಿ ಮೇಲೆ ದಾಳಿ ಮಾಡಿದ ಹದಿ ಮಾಟರ್‌ನನ್ನು ಹೊಗಳಿದ್ದಾನೆ. ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಶ್ದಿ, ಭಾಷಣ ಮಾಡಲು ವೇದಿಕೆ ಮೇಲೇರುತ್ತಲೇ ಹದಿ ಮಾಟರ್‌ ಚಾಕು ಇರಿದ್ದು ಹಲ್ಲೆ ನಡೆಸಿದ್ದ. ಸದ್ಯ, ರಶ್ದಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಜೆ.ಕೆ.‌ ರೋಲಿಂಗ್ ಅವರು ಬ್ರಿಟನ್‌ ಲೇಖಕಿಯಾಗಿದ್ದು, ಹ್ಯಾರಿ ಪಾಟರ್‌ ಎಂಬ ಸರಣಿ ಕಾದಂಬರಿಗಳ ಮೂಲಕ ವಿಶ್ವವಿಖ್ಯಾತಿಯಾಗಿದ್ದಾರೆ. ಹ್ಯಾರಿ ಪಾಟರ್‌ ಸರಣಿಯ ಏಳು ಪುಸ್ತಕಗಳು ಜಗತ್ತಿನ ಹಲವು ಭಾಷೆಗಳಿಗೆ ಭಾಷಾಂತರ ಮಾಡಲಾಗಿದೆ.

ಇದನ್ನೂ ಓದಿ | ಹಲ್ಲೆಗೆ ಒಳಗಾದ ಬರಹಗಾರ ಸಲ್ಮಾನ್‌ ರಶ್ದಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Gold Heist Case: ಕಳೆದ ವರ್ಷ ಏಪ್ರಿಲ್‌ 17ರಂದು 22 ಕೆನಾಡಿಯನ್‌ ಡಾಲರ್ಸ್‌ ಮೌಲ್ಯದ ವಿದೇಶಿ ಕರೆನ್ಸಿ ಮತ್ತು ಗೋಲ್ಡ್‌ ಬಿಸ್ಕೇಟ್ಸ್‌ ಇದ್ದ ಏರ್‌ ಕಾರ್ಗೋ ಕಂಟೈನರ್‌ ಅನ್ನು ನಕಲಿ ದಾಖಲೆ ಬಳಸಿ ದರೋಡೆ ಮಾಡಲಾಗಿತ್ತು. ಈ ಕಂಟೈನರ್‌ ಏರ್‌ ಕೆನಡಾ ವಿಮಾನದ ಮೂಲಕ ಸ್ವಿಡ್ಜರ್‌ಲ್ಯಾಂಡ್‌ನ ಜೂರಿಚ್‌ ಇಂದ ಟೊರೊಂಟೋ ವಿಮಾನ ನಿಲ್ದಾಣಕ್ಕೆ ಬಂದಿತ್ತು. ವಿಮಾನ ಲ್ಯಾಂಡ್‌ ಆಗ್ತಿದ್ದಂತೆ ಕಾರ್ಗೋವನ್ನು ವಿಮಾನ ನಿಲ್ದಾಣದ ಬೇರೆ ಪ್ರದೇಶಕ್ಕೆ ಸಾಗಿಲಾಗಿತ್ತು. ಇದಾದ ಬಳಿಕ ಅದು ನಿಗೂಡವಾಗಿ ಕಣ್ಮರೆ ಆಗಿತ್ತು.

VISTARANEWS.COM


on

Koo

ಒಟ್ಟವಾ: ಕೆನಡಾ(Canada)ದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ(Gold Heist Case)ಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣ(Pearson International Airport)ದಲ್ಲಿ ಅರೆಸ್ಟ್‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಇದೊಂದು ಅತಿ ದೊಡ್ಡ ದರೋಡೆ ಪ್ರಕರಣವಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದೆ. ಇನ್ನು ಬಂಧಿತನನ್ನು ಅರ್ಚಿತ್‌ ಗ್ರೋವರ್‌ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕಾಗಿ ಕೆನಡಾದಾದ್ಯಂತ ವಾರೆಂಟ್‌ ಜಾರಿಗೊಳಿಸಲಾಗಿತ್ತು. ಗ್ರೋವರ್‌ ವಿರುದ್ಧ 5,000ಡಾಲರ್‌ ಕಳ್ಳತನ ಮತ್ತು ದರೋಡೆಗೆ ಸಂಚು ರೂಪಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಅಮೆರಿಕದ ಮಿಲಿಟರಿ ಶಸ್ತ್ರಾಸ್ತ್ರ ಸಾಗಾಟ ಪ್ರಕರಣದಲ್ಲೂ ಈತನ ಹೆಸರು ಕೇಳಿ ಬಂದಿದೆ.

ಏನಿದು ದರೋಡೆ ಪ್ರಕರಣ?

ಕಳೆದ ವರ್ಷ ಏಪ್ರಿಲ್‌ 17ರಂದು 22 ಕೆನಾಡಿಯನ್‌ ಡಾಲರ್ಸ್‌ ಮೌಲ್ಯದ ವಿದೇಶಿ ಕರೆನ್ಸಿ ಮತ್ತು ಗೋಲ್ಡ್‌ ಬಿಸ್ಕೇಟ್ಸ್‌ ಇದ್ದ ಏರ್‌ ಕಾರ್ಗೋ ಕಂಟೈನರ್‌ ಅನ್ನು ನಕಲಿ ದಾಖಲೆ ಬಳಸಿ ದರೋಡೆ ಮಾಡಲಾಗಿತ್ತು. ಈ ಕಂಟೈನರ್‌ ಏರ್‌ ಕೆನಡಾ ವಿಮಾನದ ಮೂಲಕ ಸ್ವಿಡ್ಜರ್‌ಲ್ಯಾಂಡ್‌ನ ಜೂರಿಚ್‌ ಇಂದ ಟೊರೊಂಟೋ ವಿಮಾನ ನಿಲ್ದಾಣಕ್ಕೆ ಬಂದಿತ್ತು. ವಿಮಾನ ಲ್ಯಾಂಡ್‌ ಆಗ್ತಿದ್ದಂತೆ ಕಾರ್ಗೋವನ್ನು ವಿಮಾನ ನಿಲ್ದಾಣದ ಬೇರೆ ಪ್ರದೇಶಕ್ಕೆ ಸಾಗಿಲಾಗಿತ್ತು. ಇದಾದ ಬಳಿಕ ಅದು ನಿಗೂಡವಾಗಿ ಕಣ್ಮರೆ ಆಗಿತ್ತು. ಇನ್ನು ಕಾರ್ಗೋದಲ್ಲಿ 400 ಕೆಜಿ ತೂಕದ 6600 ಚಿನ್ನದ ಗಟ್ಟಿ ಇದ್ದಿದ್ದು, ಅದರ ಮೌಲ್ಯ ಸುಮಾರು 20 ಮಿಲಿಯನ್‌ ಡಾಲರ್‌ ಎಂದು ಅಂದಾಜಿಸಲಾಗಿದೆ. ಇನ್ನು ಕಾರ್ಗೋದಲ್ಲಿ 2.5 ಮಿಲಿಯನ್‌ ಡಾಲರ್‌ ಮೌಲ್ಯದ ವಿದೇಶಿ ಕರೆನ್ಸಿ ಇತ್ತು ಎನ್ನಲಾಗಿದೆ.

ಇದನ್ನೂ ಓದಿ: Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಭಾರತ ಮೂಲದ ಪರಂಪಾಲ್‌ ಸಿಧು, ಅಮಿತ್‌ ಜಲೋಟಾ, ಅಮ್ಮದ್‌ ಚೌಧರಿ, ಅಲಿರಾಝಾ ಮತ್ತು ಪ್ರಶಾಂತ್‌ ಪರಮಲಿಂಗಂ ಎಂಬುವವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು. ಇನ್ನು ನಾಪತ್ತೆಯಾಗಿರುವ ಸಿಮ್ರನ್‌ ಪ್ರಿತ್‌ ಪನೇಸರ್‌ ಮತ್ತು ಅರ್ಸಲನ್‌ ಚೌಧರಿ ಪತ್ತೆಗೆ ಪೊಲೀಸರರು ಕೆನಡಾದಾದ್ಯಂತ ಅರೆಸ್ಟ್‌ ವಾರೆಂಟ್‌ ಜಾರಿಗೊಳಿಸಿದ್ದಾರೆ. ಇನ್ನು ಈ ಭಾರೀ ದರೋಡೆಗೆ ಕೆನಡಾ ಏರ್‌ಲೈನ್‌ ನೌಕರರು ಸಹಾಯ ಮಾಡಿರುವ ಆರೋಪ ಕೇಳಿ ಬಂದಿತ್ತು. ಒಬ್ಬನನ್ನು ಈಗಾಗಲೇ ಅರೆಸ್ಟ್‌ ಮಾಡಿದ್ದು, ಇನ್ನೊಬ್ಬನ ಬಂಧನಕ್ಕೆ ವಾರೆಂಟ್‌ ಹೊರಡಿಸಿದೆ. ಪೊಲೀಸರ ಮಾಹಿತಿ ಪ್ರಕಾರ ತನಿಖಾಧಿಕಾರಿಗಳು ಸುಮಾರು ಕೆನಡಾದ ಡಾಲರ್ 89,000 ಮೌಲ್ಯದ ಒಂದು ಕಿಲೋಗ್ರಾಂ ಚಿನ್ನ, ಸುಮಾರು 434,000 ಡಾಲರ್‌ ಮೌಲ್ಯದ ಕೆನಡಾದ ಕರೆನ್ಸಿಯನ್ನೂ ವಶಕ್ಕೆ ಪಡೆಯಲಾಗಿದೆ.

Continue Reading

ಮಹಿಳೆ

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

ಫ್ರಾನ್ಸ್ ನ 101 ವರ್ಷದ ಯೋಗ ಶಿಕ್ಷಕಿಯೊಬ್ಬರು (French Yoga Teacher) ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪುರಸ್ಕಾರ ಪಡೆದಿದ್ದಾರೆ. ಈ ಕುರಿತು ರಾಷ್ಟ್ರಪತಿ ಭವನದಿಂದ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

VISTARANEWS.COM


on

By

French Yoga Teacher
Koo

ನವದೆಹಲಿ: ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಇದೀಗ 101 ವರ್ಷದ ಫ್ರೆಂಚ್ ಯೋಗ ಶಿಕ್ಷಕಿ (French Yoga Teacher) ಸಾಬೀತು ಪಡಿಸಿದ್ದಾರೆ. ವಯಸ್ಸಿನ ಮಿತಿ ನಿಯಮಗಳನ್ನು ಮೀರಿ ಸುಮಾರು ನಾಲ್ಕು ದಶಕಗಳ ಕಾಲ ಯೋಗಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಗೌರವಿಸಿ ಶಾರ್ಲೆಟ್ ಚಾಪಿನ್ (Charlotte Chopin) ಅವರಿಗೆ ಭಾರತದ (India) ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ( Padma Shri award) ಅನ್ನು ನೀಡಿ ಗೌರವಿಸಲಾಯಿತು.

ನವದೆಹಲಿಯ (new delhi) ರಾಷ್ಟ್ರಪತಿ ಭವನದಲ್ಲಿ ( Rashtrapati Bhawan) ಗುರುವಾರ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಹಸಿರು ಸೀರೆಯನ್ನು ಧರಿಸಿದ ಶಾರ್ಲೆಟ್ ಚಾಪಿನ್ ವೇದಿಕೆಯತ್ತ ನಡೆದು ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಯೋಗ ಕ್ಷೇತ್ರದಲ್ಲಿ ಶಾರ್ಲೆಟ್ ಚಾಪಿನ್ ಅವರ ಪ್ರಯತ್ನವನ್ನು ಶ್ಲಾಘಿಸಿ ರಾಷ್ಟ್ರಪತಿಯವರ ಕಚೇರಿಯು ಎಕ್ಸ್ ನಲ್ಲಿ ಟ್ವೀಟ್ ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯೋಗ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಶಾರ್ಲೆಟ್ ಚಾಪಿನ್ ಅವರಿಗೆ ಪ್ರದಾನ ಮಾಡಿದರು. ಅವರು ಪ್ರಸಿದ್ಧ ಫ್ರೆಂಚ್ ಯೋಗ ಶಿಕ್ಷಕಿಯಾಗಿದ್ದಾರೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯೋಗವನ್ನು ಕಲಿಸುತ್ತಿದ್ದಾರೆ ಮತ್ತು 101ನೇ ವಯಸ್ಸಿನಲ್ಲಿ ಯೋಗ ಶಿಕ್ಷಕರಾಗಿ ಸಕ್ರಿಯರಾಗಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.


ಶಾರ್ಲೆಟ್ ಚಾಪಿನ್ ಯಾರು?

ಚಾಪಿನ್ ಫ್ರಾನ್ಸ್ ಮೂಲದವರಾಗಿದ್ದು, ಪ್ರಸ್ತುತ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ವಯಸ್ಸಿನ ಮಿತಿಯ ಮಾನದಂಡಗಳನ್ನು ಮೀರಿ ಚಾಪಿನ್ ಅವರು 50 ವರ್ಷ ವಯಸ್ಸಿನ ಅನಂತರ ಯೋಗವನ್ನು ಕಲಿತರು. 1982 ರಲ್ಲಿ ಫ್ರಾನ್ಸ್ ನಲ್ಲಿ ಕಲಿಸಲು ಪ್ರಾರಂಭಿಸಿದರು. ಅವರು ದೇಶದಲ್ಲಿ ಯೋಗದ ಅಲೆಯನ್ನು ಸೃಷ್ಟಿಸಿದರು. ಇದು ಪ್ರಸಿದ್ಧ ಫಿಟ್ನೆಸ್ ಅಭ್ಯಾಸವನ್ನು ಮಾಡಿದರು. ಅವರು ಫ್ರೆಂಚ್ ಟಿವಿ ಶೋ, ‘ಫ್ರಾನ್ಸ್ ಗಾಟ್ ಇನ್‌ಕ್ರೆಡಿಬಲ್ ಟ್ಯಾಲೆಂಟ್’ ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

2023ರ ಜುಲೈನಲ್ಲಿ ಅವರು ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪಾಲ್ಗೊಳ್ಳಲು ಫ್ರೆಂಚ್ ಪ್ರವಾಸದಲ್ಲಿದ್ದಾಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲ ಬಾರಿಗೆ ಪ್ಯಾರಿಸ್‌ನಲ್ಲಿ ಭೇಟಿಯಾದರು. ಯೋಗ ಕ್ಷೇತ್ರದಲ್ಲಿ ಅವರ ಅಸಾಧಾರಣ ಕೆಲಸದಿಂದ ಪ್ರಭಾವಿತರಾದ ಪ್ರಧಾನಿ, ಯೋಗದಲ್ಲಿ ಚಾಪಿನ್ ಅವರ ಆಳವಾದ ನಂಬಿಕೆ ಮತ್ತು ಫ್ರಾನ್ಸ್‌ನಲ್ಲಿ ಯೋಗವನ್ನು ಉತ್ತೇಜಿಸಲು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.

ಯೋಗವು ಸಂತೋಷವನ್ನು ತರುತ್ತದೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ ಎಂದು ಜುಲೈನಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದಾಗ ಚಾಪಿನ್ ಹೇಳಿದ್ದರು.

Continue Reading

ಪ್ರಮುಖ ಸುದ್ದಿ

PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

PoK Crisis: ಜಮ್ಮು-ಕಾಶ್ಮೀರ ಜಾಯಿಂಟ್‌ ಅವಾಮಿ ಆಕ್ಷನ್‌ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹತ್ತಾರು ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌ ಮಾಡಿದರೂ ನಿಯಂತ್ರಿಸಲು ಆಗುತ್ತಿಲ್ಲ ಎನ್ನಲಾಗಿದೆ.

VISTARANEWS.COM


on

PoK
Koo

ಶ್ರೀನಗರ:‌ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (PoK Crisisi) ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಸರ್ಕಾರ, ಅಧಿಕಾರಿಗಳ ವಿರುದ್ಧವೇ ಜನ ದಂಗೆ ಎದ್ದಿದ್ದಾರೆ. ಹಣದುಬ್ಬರ ಏರಿಕೆ (Inflation), ಹೆಚ್ಚಿನ ತೆರಿಗೆ ಹಾಗೂ ವಿದ್ಯುತ್‌ ಪೂರೈಕೆಯ ಕೊರತೆಯಿಂದಾಗಿ ಬೇಸತ್ತಿರುವ ಜನ ಸರ್ಕಾರದ ಕಚೇರಿಗಳು, ಪೊಲೀಸ್‌ ಅಧಿಕಾರಿಗಳ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ, ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತದ ಜತೆ ವಿಲೀನಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಹಾಗಾಗಿ, ಪಿಒಕೆ ಮೇಲೆ ಪಾಕಿಸ್ತಾನದ (Pakistan) ನಿಯಂತ್ರಣವು ಪೂರ್ತಿ ಕೈತಪ್ಪಿಹೋಗಿದೆ ಎಂದು ಹೇಳಲಾಗುತ್ತಿದೆ.

ಹೌದು, ಕಳೆದ ಎರಡು ದಿನಗಳಿಂದ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಸುಮಾರು 10 ಜಿಲ್ಲೆಗಳಲ್ಲಿ ಜನ ಅಕ್ಷರಶಃ ದಂಗೆಯೆದ್ದಿದ್ದಾರೆ. ಮುಜಫರಾಬಾದ್‌ನಿಂದ ರಾವಲ್‌ಕೋಟ್‌ವರೆಗೆ ಜನ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಸೇನೆ ಹಾಗೂ ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ, ಸರ್ಕಾರಿ ಕಚೇರಿಗಳ ಮೇಲೆ ದಾಳಿ, ಪೊಲೀಸರ ಮೇಲೆ ಹಲ್ಲೆ ಸೇರಿ ಹಲವು ರೀತಿಯ ಹಿಂಸಾಚಾರ ಭುಗಿಲೆದ್ದಿದೆ. ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನವು ಪಿಒಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಭಾರತದ ಜತೆ ವಿಲೀನಕ್ಕೆ ಬೇಡಿಕೆ

ಭಾರತದ ಜತೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು ವಿಲೀನಗೊಳಿಸಬೇಕು ಎಂಬುದು ಕೂಡ ಪ್ರತಿಭಟನಾಕಾರರ ಬೇಡಿಕೆಯಾಗಿದೆ. ಭಾರತದ ಪರ ಘೋಷಣೆಗಳು, ಭಾರತದ ಧ್ವಜ ಪ್ರದರ್ಶನಗಳು ಕೂಡ ನಡೆದಿವೆ. ಇನ್ನು, ಸ್ವಾತಂತ್ರ್ಯ ಬೇಕು, ಸ್ವಾತಂತ್ರ್ಯಕ್ಕಾಗಿ ಹೋರಾಟ ಎಂಬ ಘೋಷಣೆಗಳು ಕೂಡ ಕೇಳಿಬಂದಿವೆ. ಪೊಲೀಸರು, ಭದ್ರತಾ ಸಿಬ್ಬಂದಿ ಹಾಗೂ ಜನರ ನಡುವಿನ ಸಂಘರ್ಷಕ್ಕೆ ಒಬ್ಬ ಪೊಲೀಸ್‌ ಅಧಿಕಾರಿ ಬಲಿಯಾಗಿದ್ದಾರೆ. ಪೊಲೀಸರು, ಸೈನಿಕರು ಸೇರಿ ಸುಮಾರು 90 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಕಾರಣಕ್ಕೂ ಜನರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ಆಗುತ್ತಿಲ್ಲ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಿಂದ ಮಾಹಿತಿ ಲಭ್ಯವಾಗಿದೆ.

ಜಮ್ಮು-ಕಾಶ್ಮೀರ ಜಾಯಿಂಟ್‌ ಅವಾಮಿ ಆಕ್ಷನ್‌ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹತ್ತಾರು ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌ ಮಾಡಿದರೂ ನಿಯಂತ್ರಿಸಲು ಆಗುತ್ತಿಲ್ಲ ಎನ್ನಲಾಗಿದೆ. ಈಗಾಗಲೇ ಪಿಒಕೆ ನಮ್ಮದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಿಒಕೆ ಜನರೇ ಭಾರತದ ಜತೆ ವಿಲೀನಗೊಳ್ಳಲು ಬಯಸುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಇದರ ಬೆನ್ನಲ್ಲೇ, ಬಲೂಚಿಸ್ತಾನದ ಜತೆಗೆ ಪಿಒಕೆಯಲ್ಲೂ ದಂಗೆ ಶುರುವಾಗಿದೆ.

ಇದನ್ನೂ ಓದಿ: Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

Continue Reading

ವಿದೇಶ

Pig Kidney: ಹಂದಿಯ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

Pig Kidney: ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ ಕಸಿ ಪಡೆದ ಮೊದಲ ವ್ಯಕ್ತಿ, ಇಂಗ್ಲೆಂಡ್‌ನ ವೇಮೌತ್‌ನ ನಿವಾಸಿ 62 ವರ್ಷದ ರಿಕ್ ಸ್ಲೇಮನ್ ಶಸ್ತ್ರ ಚಿಕಿತ್ಸೆ ನಡೆದ ಸುಮಾರು ಎರಡು ತಿಂಗಳ ನಂತರ ನಿಧನ ಹೊಂದಿದ್ದಾರೆ. ಆದರೆ ಅವರ ನಿಧನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಡ್ನಿ ಕಸಿಯ ಪರಿಣಾಮದಿಂದ ಅವರು ನಿಧನ ಹೊಂದಿದ್ದಾರೆ ಎಂಬುದಕ್ಕೆ ನಮಗೆ ಯಾವುದೇ ಸೂಚನೆ ಸಿಕ್ಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

VISTARANEWS.COM


on

Pig Kidney
Koo

ಬೋಸ್ಟನ್: ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ (Pig Kidney) ಕಸಿ ಪಡೆದ ಮೊದಲ ವ್ಯಕ್ತಿ, ಇಂಗ್ಲೆಂಡ್‌ನ ವೇಮೌತ್‌ನ ನಿವಾಸಿ 62 ವರ್ಷದ ರಿಕ್ ಸ್ಲೇಮನ್ (Rick Slayman) ಶಸ್ತ್ರ ಚಿಕಿತ್ಸೆ ನಡೆದ ಸುಮಾರು ಎರಡು ತಿಂಗಳ ನಂತರ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕದ ಬೋಸ್ಟನ್‌ನ ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ರಿಕ್ ಸ್ಲೇಮನ್ ಅವರಿಗೆ ಹಂದಿಯ ಮೂತ್ರಪಿಂಡ ಕಸಿ ಮಾಡಲಾಗಿತ್ತು. ʼʼಹಂದಿ ಮೂತ್ರಪಿಂಡವು ಕನಿಷ್ಠ ಎರಡು ವರ್ಷಗಳವರೆಗೆ ಕಾರ್ಯ ನಿರ್ವಹಿಸುತ್ತದೆ ಎಂದು ನಂಬಿದ್ದೆವು. ಆದರೆ ರಿಕ್ ಸ್ಲೇಮನ್ ಅವರ ಹಠಾತ್‌ ನಿಧನ ಆಘಾತ ತಂದಿದೆʼʼ ಎಂದು ವೈದ್ಯರು ತಿಳಿಸಿದ್ದಾರೆ.

“ರಿಕ್ ಸ್ಲೇಮನ್ ಅವರ ಹಠಾತ್ ನಿಧನದಿಂದ ತೀವ್ರ ದುಃಖವಾಗಿದೆ. ಕಿಡ್ನಿ ಕಸಿಯ ಪರಿಣಾಮದಿಂದ ಅವರು ನಿಧನ ಹೊಂದಿದ್ದಾರೆ ಎಂಬುದಕ್ಕೆ ನಮಗೆ ಯಾವುದೇ ಸೂಚನೆ ಸಿಕ್ಕಿಲ್ಲ. ಸ್ಲೇಮನ್ ಅವರನ್ನು ವಿಶ್ವಾದ್ಯಂತದ ಕಿಡ್ನಿ ಸಮಸ್ಯೆ ಇರುವವರ ಭರವಸೆ ಎಂದೇ ಪರಿಗಣಿಸಲಾಗುತ್ತದೆ. ಸ್ಲೇಮನ್ ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತಿದ್ದೇವೆʼʼ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಂತಿಮ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಸ್ಲೇಮನ್ ಅವರಿಗೆ ಮಾರ್ಚ್ 16ರಂದು ಶಸ್ತ್ರಚಿಕಿತ್ಸೆ ನಡೆಸಿ ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ ಕಸಿ ಮಾಡಲಾಗಿತ್ತು. ಟೈಪ್ 2 ಮಧುಮೇಹಿಯಾಗಿದ್ದ ಅವರು ಈ ಹಿಂದೆ 2018ರಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು. ಆದಾಗ್ಯೂ ಐದು ವರ್ಷಗಳ ನಂತರ ಕಸಿ ಮಾಡಿಸಿಕೊಂಡಿದ್ದ ಮೂತ್ರಪಿಂಡ ವಿಫಲವಾಗಲು ಪ್ರಾರಂಭಿಸಿತು ಮತ್ತು ಅಂದಿನಿಂದ ಅವರು ಡಯಾಲಿಸಿಸ್‌ನಲ್ಲಿದ್ದರು.

ಕೊನೆಗೆ ಅವರು ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಿಸಿಕೊಳ್ಳಲು ಒಪ್ಪಿಗೆ ನೀಡಿದ್ದರು. ಈ ವೇಳೆ ಅವರು ಇದು ತಾನು ಎದುರಿಸುವಂತಹ ಸಮಸ್ಯೆ ಇರುವವರಿಗೆ ಭರವಸೆಯ ಬೆಳಕನ್ನು ಒದಗಿಸಲಿದೆ ಎಂದು ಹೇಳಿದ್ದರು. ಅದರಂತೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ವೈದ್ಯರ ಪ್ರಯೋಗ ಯಶಸ್ವಿಯಾಗಿತ್ತು. ಆ ಮೂಲಕ ರಿಕ್ ಸ್ಲೇಮನ್ ಹಂದಿ ಮೂತ್ರಪಿಂಡ ಕಸಿ ಸ್ವೀಕರಿಸಿದ ವಿಶ್ವದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಸುಮಾರು ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿದ್ದು, ಬಳಿಕ ಮನೆಗೆ ತೆರಳಿದ್ದರು. ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಮನೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು. ʼʼಸ್ಲೇಮನ್‌ಗೆ ಕಸಿ ಮಾಡಲಾದ ಹಂದಿಯ ಮೂತ್ರಪಿಂಡವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಕ್ತದಲ್ಲಿನ ತ್ಯಾಜ್ಯವನ್ನು ತೆಗೆದು ಹಾಕುತ್ತಿದ್ದು, ಮೂತ್ರವನ್ನು ಉತ್ಪಾದಿಸುತ್ತದೆ. ದೇಹದ ದ್ರವಗಳನ್ನು ಸಮತೋಲನಗೊಳಿಸುತ್ತದೆʼʼ ಎಂದು ಅಂದು ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಇದರಿಂದ ಮುಂಬರುವ ದಿನಗಳಲ್ಲಿ ಮಾನವನ ಮೇಲೆ ಪ್ರಾಣಿಗಳ ಅಂಗಾಂಗ ಕಸಿಯ ಪ್ರಯೋಗದ ಹೊಸ ಯುಗವೊಂದು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದೇ ವಿಶ್ಲೇಷಿಸಲಾಗಿತ್ತು.

ಈ ಹಿಂದೆ ಹಂದಿಯ ಹೃದಯವನ್ನು ಕಸಿ ಮಾಡಿದ ಕೆಲವೇ ವಾರಗಳಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹೀಗಾಗಿ ಈ ಪ್ರಯೋಗ ಭರವಸೆ ಮೂಡಿತ್ತು.

ಇದನ್ನೂ ಓದಿ: Pig kidney: ಮನುಷ್ಯನಿಗೆ ಹಂದಿಯ ಕಿಡ್ನಿ ಅಳವಡಿಕೆ ಸಕ್ಸೆಸ್! ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Continue Reading
Advertisement
gold rate today 34
ಚಿನ್ನದ ದರ16 mins ago

Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

Shilpa Shetty sister Shamita visit Kedarnath with their mother
ಬಾಲಿವುಡ್19 mins ago

Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

Drowned in water
ಮೈಸೂರು28 mins ago

Drowned in Water : ತಲಕಾಡು ಪ್ರವಾಸಕ್ಕೆ ಹೋದ ಯುವತಿ ‌ನೀರಿನಲ್ಲಿ ಮುಳುಗಿ ಸಾವು

Murder case Hacked to death with sickle for stepping into a field with an injection order
ಕರ್ನಾಟಕ30 mins ago

Murder case: ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

Narendra Modi
ದೇಶ35 mins ago

Narendra Modi: ಗುರುದ್ವಾರದಲ್ಲಿ ಅಡುಗೆ ಮಾಡಿ ಭಕ್ತರಿಗೆ ಬಡಿಸಿದ ಪ್ರಧಾನಿ; ವಿಡಿಯೋ ವೈರಲ್‌

CBSE 12th results 2024
ಪ್ರಮುಖ ಸುದ್ದಿ1 hour ago

CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ವಿದೇಶ1 hour ago

Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Murder Case in hubballi
ಹುಬ್ಬಳ್ಳಿ1 hour ago

Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Kareena Kapoor Saif Ali Khan share a kiss in front of paparazzi
ಬಾಲಿವುಡ್1 hour ago

Kareena Kapoor: ರೊಮ್ಯಾಂಟಿಕ್‌ ಮೂಡ್‌ನಲ್ಲಿ ಸೈಫ್-ಕರೀನಾ: ಫೋಟೊಗ್ರಾಫರ್‌ಗಳ ಮುಂದೆಯೇ ಕಿಸ್ಸಿಂಗ್‌!

shivamogga road accident hit and run
ಕ್ರೈಂ2 hours ago

Hit and Run: ಆಟೋಗೆ ಗುದ್ದಿ ವಿದ್ಯಾರ್ಥಿನಿಯನ್ನು ಕೊಂದು ಪರಾರಿಯಾದ ಕ್ಯಾಂಟರ್ ಚಾಲಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ7 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ8 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ19 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ19 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ19 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌