ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಗುಡ್ಡ ಕುಸಿತದ ಆತಂಕ: ಭೂ ವಿಜ್ಞಾನಿಗಳ ತಂಡ ಭೇಟಿ - Vistara News

ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಗುಡ್ಡ ಕುಸಿತದ ಆತಂಕ: ಭೂ ವಿಜ್ಞಾನಿಗಳ ತಂಡ ಭೇಟಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮತ್ತೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದೆ.

VISTARANEWS.COM


on

ಗುಡ್ಡ ಕುಸಿತದ ಆತಂಕ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುತ್ತಿರುವುದರಿಂದ ಮತ್ತೆ ಗುಡ್ಡ ಕುಸಿತದ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪುನಃ ಸಮೀಕ್ಷೆ ನಡೆಸುತ್ತಿದ್ದಾರೆ. ಸೂಕ್ಷ್ಮ ಪ್ರದೇಶಗಳಿಗೆ ಕೇಂದ್ರದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಹಾಗೂ ಜಿಲ್ಲಾ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿದೆ.

ಶಿರಸಿಯ ಜಾಜಿಗುಡ್ಡ, ಕುಮಟಾದ ತಂಡ್ರಕುಳಿ, ಹೊನ್ನಾವರದ ಅಪ್ಸರಕೊಂಡ, ಯಲ್ಲಾಪುರ ಭಾಗದ ಕಳಚೆ, ಜೋಯಿಡಾ ಭಾಗದ ಅಣಶಿ, ಭಟ್ಕಳದ ಮುಟ್ಟಳ್ಳಿ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಶಿರಸಿಯ ಜಾಜಿ ಗುಡ್ಡದ ಭಾಗದ ಜನರಿಗೆ ಗುಡ್ಡ ಕುಸಿತ ಆತಂಕದಿಂದ ಬೇರೆಡೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಿದೆ.

ಭಟ್ಕಳದ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ನಾಲ್ಕು ಮಂದಿ ಮೃತಪಟ್ಟಿದ್ದರು. ಹೊನ್ನಾವರದ ಅಪ್ಸರಕೊಂಡದಲ್ಲೂ ಹಲವು ಕಡೆ ಭೂಕುಸಿತವಾಗಿ ಗುಡ್ಡದಲ್ಲಿ ಬಿರುಕು ಮೂಡಿತ್ತು. ಆದ್ದರಿಂದ ಜಿಲ್ಲೆಯ ಪಶ್ಚಿಮಘಟ್ಟ ಭಾಗ ಹಾಗೂ ಕರಾವಳಿಯ ಸೂಕ್ಷ್ಮ ಪ್ರದೇಶಗಳ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ |Heavy Rain | ಸತತ ಮಳೆಗೆ ಭಟ್ಕಳದಲ್ಲಿ ಮತ್ತೆ ಗುಡ್ಡ ಕುಸಿತ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಇದನ್ನೂ ಓದಿ | ಗುಡ್ಡ ಕುಸಿತದ ಭೀತಿ | ಆ.11ರವರೆಗೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ಬಂದ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

Karnataka weather Forecast : ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮಳೆಯು ಅಬ್ಬರಿಸಿದ್ದು, ಭಾನುವಾರಕ್ಕೂ ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Koo

ಬೆಂಗಳೂರು: ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಜಿಟಿ ಜಿಟಿ ಮಳೆಯಿಂದ (Rain News) ಶುರುವಾಗಿ ಸಂಜೆ ವೇಳೆಗೆ ಹಲವೆಡೆ ಸಾಧಾರಣ (Karnataka weather Forecast) ಮಳೆಯಾಗಿದೆ. ಮುಂಜಾವಿನ ಮಳೆಯಿಂದ ಜಾಗಿಂಗ್, ರನ್ನಿಂಗ್ ಹೋಗುವವರಿಗೆ ತೊಂದರೆ ಆಯಿತು.

ನಗರದ ಕೆ.ಆರ್.ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಶಿವಾಜಿನಗರ, ಮಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂ, ಶೇಷಾದ್ರಿಪುರಂ, ವಿಧಾನಸೌಧದಲ್ಲೂ ಮಳೆಯ ಸಿಂಚನವಾಗಿದೆ.

ಭಾರಿ ಮಳೆಗೆ ಕಾಳಿ ಸೇತುವೆ ಕುಸಿತದಿಂದಾಗಿ ಹೊಸ ಸೇತುವೆಯಲ್ಲಿ ಹೆಚ್ಚಾದ ವಾಹನ ದಟ್ಟಣೆ

ಉತ್ತರ ಕನ್ನಡದ ಕಾರವಾರದ ಕಾಳಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಹೊಸ ಸೇತುವೆಯು ಕಾರವಾರ-ಗೋವಾ ಸಂಪರ್ಕಿಸಲಿದೆ.

ಒಂದೇ ಸೇತುವೆ ಮೇಲೆ ದ್ವಿಮುಖ ಸಂಚಾರದಿಂದ ವಾಹನ ದಟ್ಟಣೆ ಎದುರಾಗಿದ್ದು, ಒಂದರ ಹಿಂದೆ ಒಂದರಂತೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ-ಮಂಗಳೂರು ನಡುವಿನ ಸರಕು ಸಾಗಾಟಕ್ಕೆ ತೊಡಕು ಉಂಟಾಗಿದೆ. ಹೊಸ ಸೇತುವೆಗೆ ಬೀದಿದೀಪ ಅಳವಡಿಸದೇ ಐಆರ್‌ಬಿ ನಿರ್ಲಕ್ಷ್ಯ ವಹಿಸಿದ್ದು, ರಾತ್ರಿ ವೇಳೆ ವಾಹನ ಸಂಚಾರದಿಂದ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. ಹೊಸ ಸೇತುವೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸವಾರರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಸಾಧಾರಣ ಮಳೆ ಸಾಧ್ಯತೆ

ನಾಳೆ ಭಾನುವಾರ ಕರಾವಳಿಯ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಈ ದಿನ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಹಾಗೂ ಒಳನಾಡಿನಲ್ಲಿ ವಾತಾವರಣ ಹೇಗಿರಲಿದೆ? ಇಲ್ಲಿದೆ ಮಾಹಿತಿ

VISTARANEWS.COM


on

By

karnataka weather Forecast
Koo

ಬೆಂಗಳೂರು: ಆಗಸ್ಟ್‌ 10ರಂದು ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮೈಸೂರು-ಮಂಡ್ಯದಲ್ಲೂ ಭಾರಿ ಮಳೆ

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಸುರಿಯಲಿದೆ.

ಇದನ್ನೂ ಓದಿ: Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಬೆಂಗಳೂರಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವಾರಾಂತ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಇತ್ತ ಮಳೆ ಇಲ್ಲದೆ ಕಂಗಲಾಗಿದ್ದ ವಿಜಯಪುರದಲ್ಲಿ ಮಳೆಯಾದರೆ, ಕಲಬುರಗಿಯಲ್ಲಿ ನೀರು ನುಗ್ಗಿ ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka weather Forecast
Koo

ವಿಜಯಪುರ: ಮಳೆ ಬಾರದೆ (Rain News) ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಶುಕ್ರವಾರ ವಿಜಯಪುರ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದೆ. ಮಳೆ ಇಲ್ಲದೆ ತೊಗರಿ, ಮೆಕ್ಕೆಜೋಳ ಬೆಳೆ ಒಣಗುತ್ತಿತ್ತು. ವಿಜಯಪುರ ಜಿಲ್ಲೆಯ ಸಿಂದಗಿ, ಕೋರವಾರ, ಕೊಂಡಗೂಳಿ, ಜಾಲವಾದ, ಹಂಚಲಿ, ಸೇರಿದಂತರ ಹಲವೆಡೆ (Karnataka Weather Forecast) ಮಳೆಯಾಗಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಭೀಮಾನದಿಗೆ ಬಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿ ತಾಲೂಕಿನ ಹಾಗರಗುಂಡಗಿ, ಕೌಲಗಾ ಗ್ರಾಮದ ಸುತ್ತಲ್ಲಿ‌ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಹಾಗರಗುಂಡಗಿ ಗ್ರಾಮದ ಜಮೀನಿಗೆ ನೀರು ನುಗ್ಗಿದೆ. ಸರಿ ‌ಸುಮಾರು 500 ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಬ್ಬು, ತೊಗರಿ , ಹೆಸರು ಬೆಳೆ ಭೀಮಾ ನೀರು ಪಾಲಾಗಿದ್ದು, ಮತ್ತಷ್ಟು ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ: Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ವಾರಾಂತ್ಯದಲ್ಲಿ ಹಗುರ ಮಳೆ ಸಾಧ್ಯತೆ

ವಾರಾಂತ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Karnataka Nataka Akademi Award: ಉ.ಕ ಜಿಲ್ಲೆಯ ಮೂವರು ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Karnataka Nataka Akademi Award: ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಯಲ್ಲಾಪುರ ತಾಲೂಕಿನ ಇಬ್ಬರು ಸೇರಿದಂತೆ ಜಿಲ್ಲೆಯ ಒಟ್ಟು ಮೂವರು ಕಲಾವಿದರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗಿರಿಜಾ ಸಿದ್ದಿ, ಬಾಚನಳ್ಳಿ ಗ್ರಾಮದ ಸುರೇಶ ರಾಮಚಂದ್ರ ಸಿದ್ದಿ ಹಾಗೂ ನಿವೃತ್ತ ಶಿಕ್ಷಕ ಮಂಜುನಾಥ ತಿಮ್ಮಣ್ಣ ಭಟ್ಟ ಅವರ ಕಲಾ ಸೇವೆಯನ್ನು ಗಮನಿಸಿ, ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

VISTARANEWS.COM


on

Karnataka Nataka Akademi Award
Koo

ಯಲ್ಲಾಪುರ: ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು ತಾಲೂಕಿನ ಇಬ್ಬರು ಸೇರಿದಂತೆ ಜಿಲ್ಲೆಯ ಒಟ್ಟು ಮೂವರು ಕಲಾವಿದರು ಪ್ರಶಸ್ತಿಗೆ (Karnataka Nataka Akademi Award) ಭಾಜನರಾಗಿದ್ದಾರೆ.

ತಾಲೂಕಿನ ಮಂಚಿಕೇರಿಯ ಗಿರಿಜಾ ಸಿದ್ದಿ, ಬಾಚನಳ್ಳಿ ಗ್ರಾಮದ ಸುರೇಶ ರಾಮಚಂದ್ರ ಸಿದ್ದಿ ಹಾಗೂ ನಿವೃತ್ತ ಶಿಕ್ಷಕ ಮಂಜುನಾಥ ತಿಮ್ಮಣ್ಣ ಭಟ್ಟ ಅವರ ಕಲಾ ಸೇವೆಯನ್ನು ಗಮನಿಸಿ, ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

ಗಿರಿಜಾ ಸಿದ್ದಿ

ಮಂಚಿಕೇರಿಯ ಅಣಲೇಸರ ಗ್ರಾಮದ ಗಿರಿಜಾ ಸಿದ್ದಿ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರಶುರಾಮ ಗಿರಗೋಲಿ ಸಿದ್ದಿ ಹಾಗೂ ಲಕ್ಷ್ಮಿ ಸಿದ್ದಿಯವರ ಪುತ್ರಿಯಾಗಿದ್ದಾರೆ. ನೀನಾಸಮ್ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪಡೆದ ಸಿದ್ದಿ ಸಮುದಾಯದ ಪ್ರಥಮ ಮಹಿಳೆಯಾಗಿ ಹೊರಹೊಮ್ಮಿದರು. ಎರಡು ವರ್ಷಗಳ ಕಾಲ ನೀನಾಸಮ್ ತಿರುಗಾಟದ ನಟಿಯಾಗಿ, ವಸ್ತ್ರ ವಿನ್ಯಾಸಕಿಯಾಗಿ ಹಿನ್ನಲೆ ಗಾಯಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ರಂಗಭೂಮಿಯ ಹಲವು ವಿಭಾಗಗಳಾದ ವಸ್ತ್ರ ವಿನ್ಯಾಸ, ರಂಗ ಸಜ್ಜಿಕೆ, ಪ್ರಸಾಧನ, ಮುಂತಾದವುಗಳಲ್ಲಿ ಹಲವು ವರ್ಷಗಳಿಂದ ಕನ್ನಡ ರಂಗಭೂಮಿಯಲ್ಲಿ ದುಡಿಯುತ್ತಿದ್ದಾರೆ.

ಕನ್ನಡ ಸಿನಿಮಾ ಲೋಕದಲ್ಲಿಯೂ ಸಹ ತಮ್ಮನ್ನು ತಾವು ತಮ್ಮ ಗಾಯನದೊಂದಿಗೆ ಗುರುತಿಸಿಕೊಂಡಿದ್ದಾರೆ. ದುನಿಯಾ ವಿಜಯ ನಿರ್ದೇಶನದ ‘ಸಲಗ’, ಪ್ರಿಯಾಂಕ ಉಪೇಂದ್ರ ನಟನೆಯ “ಉಗ್ರಾವತಾರ’ ಇತ್ತೀಚೆಗೆ ಬಿಡುಗಡೆಯಾದ “ಬ್ಲಿಂಕ್” ಸಿನಿಮಾಗಳಲ್ಲಿ ಹಿನ್ನಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಸಲಗ ಸಿನಿಮಾದ ‘ಟಿಣಿಂಗ್ ಮಿಣಿಂಗ್ ಟಿಶ್ಯ’ ಮತ್ತು ಉಗ್ರಾವತಾರ ಸಿನಿಮಾದ ‘ಬರ್ತಾಳ್ ಬರ್ತಾಳ್’ ಹಾಡಿಗೆ ಚಂದನವನ ಉತ್ತಮ ಗಾಯಕಿ ಪ್ರಶಸ್ತಿಗಳು ದೊರೆತಿವೆ.

ಸುರೇಶ ರಾಮಚಂದ್ರ ಸಿದ್ದಿ

ಸುರೇಶ ರಾಮಚಂದ್ರ ಸಿದ್ದಿ ಅವರು ಮಂಚಿಕೇರಿಯ ಬಾಚನಳ್ಳಿ ಗ್ರಾಮದ ಇವರ ತಂದೆ ರಾಮಚಂದ್ರ ಪುಟ್ಟಾ ಸಿದ್ದಿ ಸಣ್ಣಾಟದ ಕಲಾವಿದರಾಗಿದ್ದರಿಂದ ಅವರಿಂದ ಬಳುವಳಿಯಾಗಿ ಕುಣಿತ, ಸಂಗೀತ, ವಾದ್ಯ ನುಡಿಸುವಿಕೆಯನ್ನು ಕಲಿತರು. ಕೌಟುಂಬಿಕ ಮತ್ತು ಆರ್ಥಿಕ ಸಮಸ್ಯೆಯಿಂದ ಶಾಲೆಯ ಮೆಟ್ಟಿಲನ್ನೇ ಹತ್ತದ ಇವರು ತಮ್ಮ ಚಿಕ್ಕ ವಯಸ್ಸಿನಿಂದ ಕೃಷಿಯೊಂದಿಗೆ ಸಂಗ್ಯಾ-ಬಾಳ್ಯಾದ ನಟರಾಗಿ ಮತ್ತು ಹಿಮ್ಮೇಳದ ಭಾಗವತರಾಗಿದ್ದಾರೆ.

ಕರ್ನಾಟಕದ ಪ್ರಮುಖ ನಿರ್ದೇಶಕರ ನಾಟಕಗಳಲ್ಲಿ ನಟರಾಗಿ, ವಾದಕರಾಗಿ ಕೆಲಸ ಮಾಡಿದ್ದಾರೆ. ಸಿದ್ದಿ ಡಮಾಮಿ ವಾದಕರಾಗಿ ಕರ್ನಾಟಕದ ಹಲವಾರು ಕಡೆ ತಮ್ಮ ತಂಡದ ಮೂಲಕ ಪ್ರದರ್ಶನ ನೀಡಿದ್ದಾರೆ. ಅವರು ಕಾಕನಕೋಟೆ, ಅಗ್ನಿವರ್ಣ, ಸತ್ತವರ ಕಥೆ ಅಲ್ಲ, ಮಿಸ್ಟರ್ ಪುಂಟಿಲಾ, ಕೋಟೆಮನೆ ಪೊಲೀಸ್ ಸ್ಟೇಷನ್, ಚೋರಚರಣದಾಸ, ತ್ರಿಪೆನ್ನಿ ಓಪೇರಾ, ಕಂತು, ಬೆಟ್ಟದ ಅರಸು, ಸೂರ್ಯಶಿಕಾರಿ ಮುಂತಾದ ಪ್ರಮುಖ ನಾಟಕಗಳಲ್ಲಿ ನಟರಾಗಿ ಹಾಗೂ ವಾದಕರಾಗಿ ಕೆಲಸ ಮಾಡಿದ್ದಾರೆ. ಹವ್ಯಾಸಿ ರಂಗಭೂಮಿಯಲ್ಲಿ ನಟರಾಗಿಯೂ, ವಾದಕರಾಗಿಯೂ ಕಾರ್ಯ ನಿರ್ವಹಿಸುತ್ತಾ, ತಮ್ಮ ಕುಟುಂಬದೊಂದಿಗೆ ಕೃಷಿ ಕಾಯಕ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.

ಮಂಜುನಾಥ ತಿಮ್ಮಣ್ಣ ಭಟ್ಟ

1944 ರಲ್ಲಿ ಜನಿಸಿದ ಮಂಜುನಾಥ ತಿಮ್ಮಣ್ಣ ಭಟ್ಟ ಅವರು, 33 ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 5ನೇ ತರಗತಿಯಲ್ಲಿದ್ದಾಗ ರಂಗಭೂಮಿಗೆ ಪ್ರವೇಶಿಸಿ 20ಕ್ಕೂ ಅಧಿಕ ಏಕಾಂಕ ನಾಟಕಗಳಲ್ಲಿ ಅಭಿನಯ ಮಾಡಿರುತ್ತಾರೆ. ಹೊನ್ನಾವರದ ನವಿಲಗೋಣ ಗ್ರಾಮದ ಪ್ರಸಿದ್ಧ ನಾಟಕಕಾರರಾದ ರಾಮಚಂದ್ರ ಗಣೇಶ ಭಟ್ಟರಮಕ್ಕಿ ಇವರ ಶಿಷ್ಯರಾಗಿ ಅನೇಕ ವರ್ಷಗಳ ಕಾಲ ಕೆಲಸ ಮಾಡಿದ್ದಾರೆ.

ರಂಗ ನಟ, ನಿರ್ದೇಶಕರಲ್ಲದೇ ‘ಸ್ತ್ರೀ’ ವೇಷದಲ್ಲಿ ಕೂಡ ತಾಯಿ ಪಾತ್ರವನ್ನು ಹಲವಾರು ನಾಟಕಗಳಲ್ಲಿ ನಿರ್ವಹಿಸಿದ್ದಾರೆ. ಕಥಾನಾಯಕ, ಖಳನಾಯಕ, ಹಾಸ್ಯಪಾತ್ರ, ಪೋಷಕ ಪಾತ್ರ ಹೀಗೆ ಹಲವಾರು ವಿಭಿನ್ನ ಪಾತ್ರಗಳಲ್ಲಿ ಮತ್ತು ವಿಭಾಗಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.

ಈ ಮೂವರ ಸಾಧನೆಗೆ ಮಂಚಿಕೇರಿ ರಂಗಸಮೂಹದ ಅಧ್ಯಕ್ಷ ರಾಮಕೃಷ್ಣ ಭಟ್ಟ ದುಂಡಿ, ಕಲಾವಿದ ಎಂ.ಕೆ. ಭಟ್ ಯಡಳ್ಳಿ ಹಾಗೂ ರಂಗ ಸಮೂಹದ ಎಲ್ಲ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading
Advertisement
natwar singh
ದೇಶ2 hours ago

Natwar Singh: ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವ ನಟ್ವರ್‌ ಸಿಂಗ್‌ ನಿಧನ; ಗಣ್ಯರ ಸಂತಾಪ

Paris Olympics 2024
ಪ್ರಮುಖ ಸುದ್ದಿ3 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧಿಗಳ ಹೋರಾಟ ಮುಕ್ತಾಯ; ಈ ಬಾರಿ ಆರು ಪದಕಗಳು ಮಾತ್ರ

Hindenburg
ವಾಣಿಜ್ಯ3 hours ago

Hindenburg: ಅದಾನಿ ವಿದೇಶಿ ಕಂಪನಿಯಲ್ಲಿ ಸೆಬಿ ಅಧ್ಯಕ್ಷೆಯದ್ದೂ ಪಾಲು; ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ

Narendra Modi Stadium
ಪ್ರಮುಖ ಸುದ್ದಿ4 hours ago

Narendra Modi Stadium : ಗುಜರಾತ್​ಗೆ ಸಡ್ಡು; ತಮಿಳುನಾಡಿನಲ್ಲಿ ನಿರ್ಮಾಣವಾಗಲಿದೆ ನರೇಂದ್ರ ಮೋದಿ ಸ್ಟೇಡಿಯಮ್​​ಗಿಂತ ದೊಡ್ಡ ಕ್ರಿಕೆಟ್​ ಸೌಲಭ್ಯ

Tharun Sudhir
ಸಿನಿಮಾ4 hours ago

Tharun Sudhir: ತರುಣ್‌-ಸೋನಲ್‌ಗೆ ಬಿಎಸ್‌ವೈ, ರಮೇಶ್‌ ಅರವಿಂದ್‌ ಸೇರಿ ಗಣ್ಯರಿಂದ ಶುಭಾಶಯ; Video, Photos ಇಲ್ಲಿವೆ

Paris Olympics 2024
ಪ್ರಮುಖ ಸುದ್ದಿ4 hours ago

Paris Olympics 2024 : ವಿನೇಶ್ ಫೋಗಟ್​ ಬೆಳ್ಳಿ ಪದಕದ ಮನವಿ ತೀರ್ಪು ಭಾನುವಾರಕ್ಕೆ ಮುಂದೂಡಿಕೆ

BJP-JDS Padayatra
ಕರ್ನಾಟಕ5 hours ago

BJP-JDS Padayatra: ಪರಿಶಿಷ್ಟ, ಒಬಿಸಿಯವರಿಗೆ ಕಾಂಗ್ರೆಸ್‌ನಿಂದ ಸದಾ ಅಪಮಾನ; ಪ್ರಲ್ಹಾದ್‌ ಜೋಶಿ

Independence Day 2024
ದೇಶ5 hours ago

Independence day 2024: ಮೊದಲ ಸ್ವಾತಂತ್ರ್ಯೋತ್ಸವದಲ್ಲಿ ಗಾಂಧೀಜಿಯೇ ಭಾಗವಹಿಸಲಿಲ್ಲ! ಇಲ್ಲಿವೆ ಸ್ವಾತಂತ್ರ್ಯ ದಿನಾಚರಣೆಯ ಕುತೂಹಲಕರ ಸಂಗತಿಗಳು

Shira News
ತುಮಕೂರು5 hours ago

Shira News: ಶ್ರಾವಣದ ಮೊದಲ ಶನಿವಾರ; ಶಿರಾ ತಾಲೂಕಿನಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ

Jitesh Sharma
ಕ್ರೀಡೆ5 hours ago

Jitesh Sharma : ಟೆಕಿ ಜತೆ ಎಂಗೇಜ್ಮೆಂಟ್​ ಮಾಡಿಕೊಂಡ ಜಿತೇಶ್ ಶರ್ಮಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌