Independence Day | ಶ್ವೇತ ವರ್ಣದ ಪೇಟಾ, ನೀಲಿ ಕೋಟ್‌ನಲ್ಲಿ ಮಿಂಚಿದ ಪ್ರಧಾನಿ ನರೇಂದ್ರ ಮೋದಿ - Vistara News

ಪ್ರಮುಖ ಸುದ್ದಿ

Independence Day | ಶ್ವೇತ ವರ್ಣದ ಪೇಟಾ, ನೀಲಿ ಕೋಟ್‌ನಲ್ಲಿ ಮಿಂಚಿದ ಪ್ರಧಾನಿ ನರೇಂದ್ರ ಮೋದಿ

ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವೇಷಭೂಷಣ ಈ ವರ್ಷವೂ ಎಲ್ಲರ ಗಮನ ಸೆಳೆಯಿತು. ಮುಖ್ಯವಾಗಿ ಶ್ವೇತವರ್ಣದ ಪೇಟಾ ಅತ್ಯಂತ ಆಕರ್ಷಕವಾಗಿತ್ತು.

VISTARANEWS.COM


on

modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ (Independence Day) ಪ್ರಧಾನಿ ನರೇಂದ್ರ ಮೋದಿಯವರ ವೇಷಭೂಷಣಗಳು ಆಕರ್ಷಣೀಯವಾಗಿತ್ತು. ತ್ರಿವರ್ಣ ಮುದ್ರಿತ ಶ್ವೇತ ವರ್ಣದ ಪೇಟಾ ಸೂಜಿಗಲ್ಲಿನಂತೆ ಎಲ್ಲರ ಗಮನ ಸೆಳೆಯಿತು.

ಮೋದಿಯವರು ಧರಿಸಿದ್ದ ಶ್ವೇತ ವರ್ಣದ ಪೇಟಾದಲ್ಲಿ ಮುದ್ರಿತ ತ್ರಿವರ್ಣ ಇತ್ತು. ಹೀಗಾಗಿ ಸ್ವಾತಂತ್ರ್ಯೋತ್ಸವ ಸಮಾರಂಭದ ಮಹತ್ವವನ್ನು ಸಾರುವಂತಿತ್ತು. ಸಾಂಪ್ರದಾಯಿಕ ಕುರ್ತಾ, ಪೈಜಾಮ, ನೀಲಿ ಕೋಟ್‌ನಲ್ಲಿ ಪ್ರಧಾನಿ ಮೋದಿ ಕಂಗೊಳಿಸಿದರು. ಪೇಟಾದಲ್ಲಿ ” ಹರ್‌ ಘರ್‌ ತಿರಂಗಾʼ ಎಂಬ ಸಾಲನ್ನೂ ಮುದ್ರಿಸಲಾಗಿತ್ತು.

೨೦೨೧ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಪ್ರಧಾನಿ ಮೋದಿವರು ಕೇಸರಿ ಮತ್ತು ಬೂದು ಬಣ್ಣದ ಪೇಟಾ ಧರಿಸಿದ್ದರು. 2019ರಲ್ಲಿ ಬಹು ವರ್ಣರಂಜಿತ ಪೇಟಾವನ್ನು ತೊಟ್ಟಿದ್ದರು. ಆ ವರ್ಷ ಪ್ರಚಂಡ ಬಹುಮತದೊಂದಿಗೆ ಎರಡನೇ ಬಾರಿಗೆ ಪ್ರಧಾನಿಯಾಗಿದ್ದರು. ೨೦೧೮ರಲ್ಲಿ ಕೇಸರಿ ಬಣ್ಣದ ಪೇಟಾ ಧರಿಸಿದ್ದರು. ೨೦೧೭ರಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಪೇಟಾ ತೊಟ್ಟಿದ್ದರು. ೨೦೧೫ರಲ್ಲಿ ಹಳದಿ ಬಣ್ಣದ ಪೇಟಾ ಹಾಗೂ ೨೦೧೪ರಲ್ಲಿ ಕೆಂಪು ಬಣ್ಣದ ಜೋಧ್‌ಪುರಿ ಪೇಟಾ ಧರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Modi Meditation: ಮೋದಿ ಧ್ಯಾನ ಮಾಡುವುದೂ ನೀತಿ ಸಂಹಿತೆ ಉಲ್ಲಂಘನೆ ಎಂದ ಕಾಂಗ್ರೆಸ್;‌ ಆಯೋಗಕ್ಕೆ ದೂರು!

Modi Meditation: ಸ್ವಾಮಿ ವಿವೇಕಾನಂದ ರಾಕ್ ಮೆಮೋರಿಯಲ್ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ಸಮುದ್ರದ ಮಧ್ಯದಲ್ಲಿದೆ. ಇದರು ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲಾ ಪ್ರತಿಮೆಗೆ ಹತ್ತಿರದಲ್ಲಿದೆ. ಮೂರನೇ ಅವಧಿಗೆ ಪ್ರಧಾನಿಯಾಗುವ ಕನಸು ಹೊಂದಿರುವ ನರೇಂದ್ರ ಮೋದಿ ಗುರುವಾರ (ಮೇ 30) ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಿದ್ದಾರೆ. ಬಳಿಕ ಜೂನ್ 1 ರಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ.

VISTARANEWS.COM


on

Modi Meditation
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪಾಕಿಸ್ತಾನ, ಜಮ್ಮು-ಕಾಶ್ಮೀರ, ಮೀಸಲಾತಿ, ರಾಮಮಂದಿರ, ಜಾತಿ, ಧರ್ಮ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಇದುವರೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ವಿಷಯಗಳ ಕುರಿತು ಟೀಕೆ, ವಾದ, ವಾಗ್ವಾದಗಳು ನಡೆದಿವೆ. ಈಗ ಚುನಾವಣೆ ಅಂತಿಮ ಹಂತ ತಲುಪಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಧ್ಯಾನ (Modi Meditation) ಮಾಡಲು ತೀರ್ಮಾನಿಸಿದ್ದಾರೆ. ಆದರೆ, ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣೆ ಆಯೋಗಕ್ಕೆ ಕಾಂಗ್ರೆಸ್‌ ದೂರು ನೀಡಿದೆ.

ನರೇಂದ್ರ ಮೋದಿ ಅವರು ಗುರುವಾರ (ಮೇ 30) ತಮಿಳುನಾಡಿನ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ. ಕನ್ಯಾಕುಮಾರಿಯಲ್ಲಿರುವ ರಾಕ್‌ ಮೆಮೋರಿಯಲ್‌ಗೆ ಭೇಟಿ ನೀಡಲಿದ್ದಾರೆ. ಮೇ 30 ಸಂಜೆಯಿಂದ ಜೂನ್‌ 1ರವರೆಗೆ ಧ್ಯಾನ ಮಂಟಪದಲ್ಲಿ ಮೋದಿ ಅವರು ಧ್ಯಾನ ಮಾಡಲು ತೀರ್ಮಾನಿಸಿದ್ದಾರೆ. ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಮೋದಿ ಕೂಡ ಧ್ಯಾನ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಇದು ಈಗ ದೇಶದ ಗಮನ ಸೆಳೆದಿದ್ದು, ಕಾಂಗ್ರೆಸ್‌ ದೂರು ನೀಡಿದೆ.

“ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದೆ. ಮಾದರಿ ನೀತಿ ಸಂಹಿತೆ ಪ್ರಕಾರ, ಮತದಾನಕ್ಕೂ 48 ಗಂಟೆ ಮೊದಲು ಯಾರೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಕೈಗೊಳ್ಳಬಾರದು. ನರೇಂದ್ರ ಮೋದಿ ಅವರು ಧ್ಯಾನ ಸೇರಿ ಏನು ಬೇಕಾದರೂ ಮಾಡಬಹುದು. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಅವರು ಮಾದರಿ ನೀತಿ ಸಂಹಿತೆಯನ್ನು ಮೀರಿ ಧ್ಯಾನ ಮಾಡಲು ತೀರ್ಮಾನಿಸಿದ್ದಾರೆ. ಇದು ಮತದಾನದ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ನರೇಂದ್ರ ಮೋದಿ ವಿರುದ್ಧ ನಾವು ಚುನಾವಣೆ ಆಯೋಗಕ್ಕೆ ದೂರು ನೀಡಿದ್ದೇವೆ” ಎಂದು ಕಾಂಗ್ರೆಸ್‌ ನಾಯಕ ಅಭಿಷೇಕ್‌ ಮನು ಸಿಂಘ್ವಿ ದೆಹಲಿಯಲ್ಲಿ ಮಾಹಿತಿ ನೀಡಿದ್ದಾರೆ.

“ಮೇ 30ರ ಸಂಜೆ 7 ಗಂಟೆಯಿಂದ ಜೂನ್‌ 1ರವರೆಗೆ ರಾಜಕೀಯ ನಾಯಕರು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಮಾಡಬಾರದು ಎಂಬ ನಿಯಮವಿದೆ. ಆದರೆ, ನರೇಂದ್ರ ಮೋದಿ ಅವರು ಮೇ 30ರಿಂದ ಜೂನ್‌ 1ರವರೆಗೆ ಧ್ಯಾನ ಮಾಡಲಿದ್ದಾರೆ. ಇದರ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗುತ್ತದೆ. ಪತ್ರಿಕೆಗಳಲ್ಲೂ ವರದಿಗಳು ಪ್ರಕಟವಾಗುತ್ತವೆ. ಇದರಿಂದ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ನರೇಂದ್ರ ಮೋದಿ ಅವರು ಜೂನ್‌ 1ರ ಸಂಜೆಯಿಂದ ಧ್ಯಾನ ಆರಂಭಿಸಬೇಕು ಎಂಬುದಾಗಿ ಚುನಾವಣೆ ಆಯೋಗವು ಸೂಚಿಸಬೇಕು. ಜೂನ್‌ 30ರಂದೇ ಧ್ಯಾನ ಆರಂಭಿಸುವುದಾದರೆ, ಮಾಧ್ಯಮಗಳಲ್ಲಿ ವರದಿ ಪ್ರಕಟಿಸುವುದನ್ನು ತಡೆಯಬೇಕು ಎಂಬುದಾಗಿ ಮನವಿ ಮಾಡಿದ್ದೇವೆ” ಎಂದು ಸಿಂಘ್ವಿ ತಿಳಿಸಿದ್ದಾರೆ.

ಇದನ್ನೂ ಓದಿ: Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

T20 World Cup 2024: ಕಳೆದ 8 ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿ(T20 World Cup 2024)ಯಲ್ಲಿ ಒಟ್ಟು 6 ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ. ಈ ಪೈಕಿ 2021ರಲ್ಲಿ ಗರಿಷ್ಠ ಮೂರು ಮಂದಿ ಬೌಲರ್​ಗಳಿ ಈ ಸಾಧನೆ ಮಾಡಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಶನಿವಾರ(ಜೂನ್​ 1)ದಿಂದ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಆತಿಥೇಯ ಅಮೆರಿಕ ಮತ್ತು ಕೆನಡಾ ತಂಡಗಳು ಉದ್ಘಾಟನ ಪಂದ್ಯದಲ್ಲಿ ಕಣಕ್ಕಿಳಿಯಲಿವೆ. ಕಳೆದ 8 ಆವೃತ್ತಿಯ ಟೂರ್ನಿಯಲ್ಲಿ(t20 world cup history) ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್(Hat-tricks in Men’s T20 World Cup)​ ಪಡೆದಿದ್ದಾರೆ ಎಂಬ ಕುತೂಹಲಕಾರಿ ವರದಿ ಇಂತಿದೆ.

ಬ್ರೆಟ್​ ಲೀ


ಆಸ್ಟ್ರೇಲಿಯಾದ ಘಾತಕ ಮಾಜಿ ವೇಗಿ ಬ್ರೆಟ್​ ಲೀ ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಹ್ಯಾಟ್ರಿಕ್​ ವಿಕೆಟ್​ ಪಡೆದ ಮೊದಲ ಬೌಲರ್​. ಈ ಸಾಧನೆಯನ್ನು ಅವರು 2007 ಉದ್ಘಾಟನ ಆವೃತ್ತಿಯಲ್ಲೇ ನಿರ್ಮಿಸಿದ್ದು ವಿಶೇಷ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶಕೀಬ್ ಅಲ್ ಹಸನ್, ಮಶ್ರಫೆ ಮೊರ್ತಜಾ, ಅಲೋಕ್ ಕಪಾಲಿ ವಿಕೆಟ್​ ಕೀಳುವ ಮೂಲಕ ಈ ದಾಖಲೆ ಬರೆದಿದ್ದರು.


ಕರ್ಟಿಸ್ ಕ್ಯಾಂಪರ್


ಬ್ರೆಟ್​ ಲೀ ಬಳಿಕ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್​ ದಾಖಲಾದದ್ದು 2021ರಲ್ಲಿ. ಐರ್ಲೆಂಡ್​ನ ಕರ್ಟಿಸ್ ಕ್ಯಾಂಪರ್​ ಈ ದಾಖಲೆ ಮಾಡಿದ ಬೌಲರ್​. ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಕರ್ಟಿಸ್ ಕ್ಯಾಂಪರ್ ಸತತವಾಗಿ ನಾಲ್ಕು ವಿಕೆಟ್​ ಕಿತ್ತು ಮಿಂಚಿದ್ದರು. ಇವರ ಬೌಲಿಂಗ್​ ದಾಳಿಗೆ ವಿಕೆಟ್​ ಕಳೆದುಕೊಂಡ ಬ್ಯಾಟರ್​ಗಳೆಂದರೆ, ಕಾಲಿನ್ ಅಕರ್ಮನ್, ರಿಯಾನ್ ಟೆನ್ ಡೋಸ್ಚೇಟ್, ಸ್ಕಾಟ್ ಎಡ್ವರ್ಡ್ಸ್ ಮತ್ತು ರೋಲೋಫ್ ವ್ಯಾನ್ ಡೆರ್ ಮೆರ್ವೆ.


ವನಿಂದು ಹಸರಂಗ


ಶ್ರೀಲಂಕಾದ ಸ್ಪಿನ್ನರ್​ ವನಿಂದು ಹಸರಂಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್​ ಕಿತ್ತ ಬೌಲರ್​ಗಳ ಯಾದಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಹಸರಂಗ 2021ರಲ್ಲಿ ನಡೆದಿದ್ದ ಆವೃತ್ತಿಯಲ್ಲಿ ಈ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್, ಟೆಂಬಾ ಬವುಮಾ, ಡ್ವೈನ್ ಪ್ರಿಟೋರಿಯಸ್ ವಿಕೆಟ್​ ಕೀಳುವ ಮೂಲಕ ಈ ದಾಖಲೆ ಬರೆದರು.


ಕಗಿಸೊ ರಬಾಡ


ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಕೂಡ 2021ರಲ್ಲಿ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಇಂಗ್ಲೆಂಡ್​ ತಂಡದ ಕ್ರಿಸ್ ವೋಕ್ಸ್, ಇಯಾನ್ ಮೋರ್ಗನ್, ಕ್ರಿಸ್ ಜೋರ್ಡಾನ್ ವಿಕೆಟ್​ ಕೀಳುವ ಮೂಲಕ ಈ ಸಾಧನೆ ತೋರಿದ್ದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು


ಕಾರ್ತಿಕ್ ಮೇಯಪ್ಪನ್

ಯುಎಇ ಸ್ಪಿನ್ನರ್ ಕಾರ್ತಿಕ್ ಮೇಯಪ್ಪನ್ ಟಿ20 ವಿಶ್ವ ಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತ 5ನೇ ಬೌಲರ್​ ಎನಿಸಿಕೊಂಡಿದ್ದಾರೆ. 2022ರಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ಧದ ಅರ್ಹತಾ ಪಂದ್ಯದಲ್ಲಿ ಕಾರ್ತಿಕ್ ಈ ಸಾಧನೆ ಮಾಡಿದ್ದರು. ಭಾನುಕ ರಾಜಪಕ್ಸೆ, ಚರಿತ್ ಅಸಲಂಕಾ, ದಸುನ್ ಶನಕ ವಿಕೆಟ್​ ಕಿತ್ತಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಯುಎಇ ಆಟಗಾರ ಎನಿಸಿಕೊಂಡರು.


ಜೋಶ್ ಲಿಟಲ್


ಐರ್ಲೆಂಡ್​ ತಂಡದ ಜೋಶ್ ಲಿಟಲ್ ಟಿ20 ವಿಶ್ವ ಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತ ವಿಶ್ವದ 6ನೇ ಬೌಲರ್​ ಎನಿಸಿಕೊಂಡಿದ್ದಾರೆ. ನ್ಯೂಜಿಲ್ಯಾಂಡ್​ ವಿರುದ್ಧದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದರು. 2022ರ ಆವೃತ್ತಿ ಇದಾಗಿತ್ತು. ಕೇನ್ ವಿಲಿಯಮ್ಸನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್ ವಿಕೆಟ್​ ಒಪ್ಪಿಸಿದ ಬ್ಯಾಟರ್​ಗಳು.

ಇದನ್ನೂ ಓದಿ T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!

Continue Reading

ದೇಶ

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Rudram II: ರುದ್ರಂ II ಕ್ಷಿಪಣಿಯು ಪ್ರಮುಖ ಅಸ್ತ್ರವಾಗಿದೆ. ಸುಮಾರು 100 ಕಿಲೋಮೀಟರ್‌ ದೂರದಲ್ಲಿರುವ ಶತ್ರುಗಳ ರೇಡಾರ್‌ ಸಿಸ್ಟಮ್‌ಗಳು, ರೇಡಿಯೊಗಳು ಸೇರಿ ಯಾವುದೇ ಸಂವಹನ ಸಾಧನಗಳನ್ನು ಟ್ರ್ಯಾಕ್‌ ಮಾಡುವ ಸಾಮರ್ಥ್ಯವನ್ನು ಇದು ಹೊಂದಿದೆ. ಇದನ್ನು ದೇಶೀಯವಾಗಿಯೇ ತಯಾರಿಸಿರುವ ಕಾರಣ ಮೇಕ್‌ ಇನ್‌ ಇಂಡಿಯಾಗೂ ಬಲ ಬಂದಂತಾಗಿದೆ.

VISTARANEWS.COM


on

Rudram II
Koo

ಭುವನೇಶ್ವರ: ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ಬುಧವಾರ (ಮೇ 29) ಹೊಸ ಮೈಲುಗಲ್ಲು ಸ್ಥಾಪಿಸಿದೆ. ದೇಶೀಯವಾಗಿ ನಿರ್ಮಿಸಿದ, ಆ್ಯಂಟಿ-ರೇಡಿಯೇಷನ್‌ ಸಾಮರ್ಥ್ಯ (ವೈರಿಗಳ ರೇಡಾರ್‌, ಜಾಮರ್‌ ಹಾಗೂ ರೇಡಿಯೊಗಳನ್ನು ಗುರುತಿಸಿ, ಅವುಗಳನ್ನು ನಾಶಪಡಿಸುವ ಸಾಮರ್ಥ್ಯ) ಹೊಂದಿರುವ ರುದ್ರಂ II (Rudram II) ಕ್ಷಿಪಣಿಯ ಪ್ರಯೋಗಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ಕೈಗೊಂಡಿದೆ. ಒಡಿಶಾದ (Odisha) ಕರಾವಳಿ ಪ್ರದೇಶದಿಂದ ನಡೆಸಿದ ಪ್ರಯೋಗಾರ್ಥ ಉಡಾವಣೆಯು ಯಶಸ್ವಿಯಾಗಿದೆ.

ಭಾರತೀಯ ವಾಯುಪಡೆಯ ಸುಖೋಯ್-‌30 ಎಂಕೆ-I (Su-30 MK-I) ಯುದ್ಧವಿಮಾನದ ಮೂಲಕ ಏರ್‌ ಟು ಸರ್ಫೆಸ್‌ ದಾಳಿಯ ದಕ್ಷತೆ ಹೊಂದಿರುವ (Air To Surface- ಯುದ್ಧವಿಮಾನದಿಂದ ಕ್ಷಿಪಣಿ ದಾಳಿ ನಡೆಸಿ ಭೂಮಿ ಹಾಗೂ ಸಾಗರದಲ್ಲಿರುವ ಶತ್ರುಗಳನ್ನು ಹೊಡೆದುರುಳಿಸುವ ಸಾಮರ್ಥ್ಯ) ಕ್ಷಿಪಣಿಯನ್ನು ಪ್ರಯೋಗಕ್ಕೆ ಒಳಪಡಿಸಲಾಗಿದೆ. ಪ್ರಯೋಗದ ಯಶಸ್ಸಿನಿಂದಾಗಿ ಭಾರತದ ವಾಯುಪಡೆಗೆ ಹೆಚ್ಚಿನ ಬಲ ಬಂದಂತಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಅಭಿನಂದನೆ ತಿಳಿಸಿದ ರಾಜನಾಥ್‌ ಸಿಂಗ್‌

ರುದ್ರಂ II ಕ್ಷಿಪಣಿಯ ಯಶಸ್ವಿ ಪ್ರಯೋಗಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಭಿನಂದನೆ ಸಲ್ಲಿಸಿದ್ದಾರೆ. “ರುದ್ರಂ II ಕ್ಷಿಪಣಿಯನ್ನು ಡಿಆರ್‌ಡಿಒ ಯಶಸ್ವಿಯಾಗಿ ಪ್ರಯೋಗಕ್ಕೆ ಒಳಪಡಿಸಿದೆ. ಇದಕ್ಕಾಗಿ ಡಿಆರ್‌ಡಿಒ, ವಾಯುಪಡೆಗೆ ಅಭಿನಂದನೆಗಳು. ಕ್ಷಿಪಣಿಯಿಂದ ಭಾರತೀಯ ಸೇನೆಗೆ ಭೀಮಬಲ ಸಿಕ್ಕಂತಾಗಲಿದೆ” ಎಂಬುದಾಗಿ ರಾಜನಾಥ್‌ ಸಿಂಗ್‌ ಹೇಳಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಕಚೇರಿಯು ಟ್ವೀಟ್‌ ಮಾಡಿದೆ. ಡಿಆರ್‌ಡಿಒ ಸಾಧನೆಗೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.

ಏನಿದರ ಉಪಯೋಗ?

ಗಡಿ ಹಾಗೂ ಸಮುದ್ರ ಪ್ರದೇಶದಲ್ಲಿ ಭಾರತದ ಮೇಲೆ ದಾಳಿ ನಡೆಸುವ, ಆಕ್ರಮಣಕಾರಿ ನೀತಿ ಅನುಸರಿಸುವ ಚೀನಾ ಹಾಗೂ ಪಾಕಿಸ್ತಾನಕ್ಕೆ ತಿರುಗೇಟು ನೀಡಲು ಸಂಪೂರ್ಣ ದೇಶೀಯವಾಗಿಯೇ ತಯಾರಿಸಿದ ರುದ್ರಂ II ಕ್ಷಿಪಣಿಯು ಪ್ರಮುಖ ಅಸ್ತ್ರವಾಗಿದೆ. ಸುಮಾರು 100 ಕಿಲೋಮೀಟರ್‌ ದೂರದಲ್ಲಿರುವ ಶತ್ರುಗಳ ರೇಡಾರ್‌ ಸಿಸ್ಟಮ್‌ಗಳು, ರೇಡಿಯೊಗಳು ಸೇರಿ ಯಾವುದೇ ಸಂವಹನ ಸಾಧನಗಳನ್ನು ಟ್ರ್ಯಾಕ್‌ ಮಾಡುವ ಸಾಮರ್ಥ್ಯವನ್ನು ಇದು ಹೊಂದಿದೆ. ಆಗಸದಿಂದಲೇ ಸಮುದ್ರ ಹಾಗೂ ಭೂಮಿ ಮೇಲಿನ ವೈರಿಗಳನ್ನು ಹೊಡೆದುರುಳಿಸುವ ದಕ್ಷತೆ ಹೊಂದಿದೆ. ಹಾಗಾಗಿ ಕ್ಷಿಪಣಿ ಪ್ರಯೋಗದ ಯಶಸ್ಸು ಒಂದು ಮೈಲುಗಲ್ಲು ಎಂದೇ ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: DRDO India: ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್‌ಸ್ಟ್ರೇಟರ್‌ನ ಹಾರಾಟದ ಪ್ರಯೋಗ ಯಶಸ್ವಿ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Valmiki Corporation Scam: 88 ಕೋಟಿ ರೂ. ದುರುಪಯೋಗ ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದ್ದು, ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

VISTARANEWS.COM


on

Valmiki corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ (Valmiki Corporation Scam) ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ಇದೀಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ, ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

ವಾಲ್ಮೀಕಿ ನಿಗಮದ ಪ್ರಭಾರ ಎಂಡಿಯಾಗಿ ಡಾ. ಕೆ. ಆರ್. ರಾಜ್ ಕುಮಾರ್ ನೇಮಕ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 88 ಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ MD ಜೆ. ಜೆ. ಪದ್ಮನಾಭ ಅವರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದ ಬೆನ್ನಲ್ಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಪ್ರಭಾರರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Continue Reading
Advertisement
Modi Meditation
ದೇಶ3 mins ago

Modi Meditation: ಮೋದಿ ಧ್ಯಾನ ಮಾಡುವುದೂ ನೀತಿ ಸಂಹಿತೆ ಉಲ್ಲಂಘನೆ ಎಂದ ಕಾಂಗ್ರೆಸ್;‌ ಆಯೋಗಕ್ಕೆ ದೂರು!

T20 World Cup 2024
ಕ್ರೀಡೆ7 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

Self Harming
ಕರ್ನಾಟಕ47 mins ago

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Rudram II
ದೇಶ1 hour ago

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Chahal-Dhanashree
ಕ್ರೀಡೆ2 hours ago

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Timing change of 5 trains arriving at Sri Siddharooda Swamiji Railway Station Hubballi
ಹುಬ್ಬಳ್ಳಿ2 hours ago

Hubballi Train: ಪ್ರಯಾಣಿಕರೇ ಗಮನಿಸಿ; ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯ ಬದಲಾಗಿದೆ

Valmiki corporation Scam
ಕರ್ನಾಟಕ2 hours ago

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

PM Kisan Samman
ಕೃಷಿ2 hours ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Nita Ambani
ವಾಣಿಜ್ಯ2 hours ago

Nita Ambani: ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ 49 ಲಕ್ಷ ರೂಪಾಯಿ!

Team India Coach
ಕ್ರೀಡೆ2 hours ago

Team India Coach: ಅಭಿಮಾನಿಗಳು ಬಯಸಿದರೂ ಕೋಚ್​ ಹುದ್ದೆಗೆ ಧೋನಿ ಅನರ್ಹ; ಕಾರಣವೇನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌