Video | ಜನ ಗಣ ಮನ ನುಡಿಸಿ ಭಾರತದ ಸ್ವಾತಂತ್ರ್ಯೋತ್ಸವಕ್ಕೆ ಶುಭಕೋರಿದ ಪಾಕ್​ ರಬಾಬ್​ ಕಲಾವಿದ - Vistara News

ದೇಶ

Video | ಜನ ಗಣ ಮನ ನುಡಿಸಿ ಭಾರತದ ಸ್ವಾತಂತ್ರ್ಯೋತ್ಸವಕ್ಕೆ ಶುಭಕೋರಿದ ಪಾಕ್​ ರಬಾಬ್​ ಕಲಾವಿದ

ಹಸಿರು ಇರುವ ಗುಡ್ಡಗಾಡು ಪ್ರದೇಶವೊಂದರಲ್ಲಿ ಕುಳಿತು ರಬಾಬ್​ ನುಡಿಸಿದ ಈ ಕಲಾವಿದನ ಹೆಸರು ಸಿಯಾಲ್ ಖಾನ್​. ವಿಡಿಯೋ ಇದೀಗ ಸಿಕ್ಕಾಪಟೆ ವೈರಲ್ ಆಗುತ್ತಿದೆ.

VISTARANEWS.COM


on

Pakistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: 75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿರುವ ಭಾರತಕ್ಕೆ ಜಗತ್ತಿನ ಹಲವು ದೇಶಗಳು ಶುಭಾಶಯ ಕೋರಿವೆ. ಹಾಗೇ, ಪಾಕಿಸ್ತಾನದ ರಬಾಬ್​ ವಾದಕನೊಬ್ಬ ತುಂಬ ವಿಶೇಷವಾಗಿ ಭಾರತಕ್ಕೆ ಸ್ವಾತಂತ್ರ್ಯೋತ್ಸವದ ಶುಭ ಕೋರಿದ್ದಾರೆ. ರಬಾಬ್​ ಎಂದರೆ ವೀಣೆ ಮಾದರಿಯ ಒಂದು ಸಂಗೀತ ಉಪಕರಣ. ಅದರಲ್ಲಿ ಭಾರತದ ರಾಷ್ಟ್ರಗೀತೆ ಜನ ಗಣ ಮನವನ್ನು ಅತ್ಯಂತ ಸುಂದರವಾಗಿ ನುಡಿಸಿದ್ದು, ವಿಡಿಯೋವನ್ನು ಸೋಷಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಹಸಿರು ಇರುವ ಗುಡ್ಡಗಾಡು ಪ್ರದೇಶವೊಂದರಲ್ಲಿ ಕುಳಿತು ರಬಾಬ್​ ನುಡಿಸಿದ ಈ ಕಲಾವಿದನ ಹೆಸರು ಸಿಯಾಲ್ ಖಾನ್​. ಶುಭ್ರವಾದ ಬಿಳಿ ಬಟ್ಟೆ ಧರಿಸಿ, ಏಕಾಗ್ರತೆಯಿಂದ ಅವರು ರಬಾಬ್​​ನಲ್ಲಿ ಭಾರತದ ರಾಷ್ಟ್ರಗೀತೆ ಹೊರಹೊಮ್ಮಿಸಿದ್ದಾರೆ. ವಿಡಿಯೋವನ್ನು ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿರುವ ಅವರು, ‘ಗಡಿಯಾಚೆಗಿನ ಎಲ್ಲರಿಗೂ ಇದು ನನ್ನ ಉಡುಗೋರೆ’ ಎಂದಿದ್ದಾರೆ. ಹಾಗೇ, ‘ಭಾರತಕ್ಕೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಶಾಂತಿ, ಸಹಿಷ್ಣುತೆ ಮತ್ತು ಭಾರತ-ಪಾಕಿಸ್ತಾನ ನಡುವಿನ ಉತ್ತಮ ಸಂಬಂಧ, ಸ್ನೇಹವನ್ನು ಆಶಿಸುತ್ತ, ನಾನು ರಾಷ್ಟ್ರಗೀತೆಯನ್ನು ನುಡಿಸಲು ಯತ್ನಿಸಿದ್ದೇನೆ’ ಎಂದೂ ಬರೆದುಕೊಂಡಿದ್ದಾರೆ. ಸಿಯಾಲ್​ ಖಾನ್​ ವಿಡಿಯೋವನ್ನು ಭಾರತೀಯರು ಅನೇಕರು ಮೆಚ್ಚಿಕೊಂಡಿದ್ದಾರೆ. ಪಾಕಿಸ್ತಾನದವರೂ ಕೆಲವರು ಇದೇ ವಿಡಿಯೋ ಶೇರ್​ ಮಾಡಿಕೊಂಡು ಭಾರತಕ್ಕೆ ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: Viral Video: ಮೊಮ್ಮಗನೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಿದ ಮುಕೇಶ್​ ಅಂಬಾನಿ, ನೀತಾ ಅಂಬಾನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Porsche Crash: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣ; ಸಾಕ್ಷ್ಯ ತಿರುಚಿದ ಅಪ್ರಾಪ್ತನ ತಾಯಿಯ ಬಂಧನ

Porsche Crash: ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಬಾಲಕ ಮದ್ಯಪಾನ ಮಾಡಿ ಐಷಾರಾಮಿ ಪೋರ್ಷೆ ಕಾರನ್ನು ಚಲಾಯಿಸಿ ಇಬ್ಬರು ಐಟಿ ವೃತ್ತಿಪರರನ್ನು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇನ್ನೊಂದು ಮಹತ್ವದ ಬೆಳವಣಿಗೆ ಸಂಭವಿಸಿದೆ. ಸಾಕ್ಷ್ಯಗಳನ್ನು ತಿರುಚಿದ್ದಕ್ಕಾಗಿ ಬಾಲಕನ ತಾಯಿಯನ್ನು ಬಂಧಿಸಲಾಗಿದೆ.

VISTARANEWS.COM


on

Porsche Crash
Koo

ಮುಂಬೈ: ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಬಾಲಕ ಮದ್ಯಪಾನ ಮಾಡಿ ಐಷಾರಾಮಿ ಪೋರ್ಷೆ ಕಾರನ್ನು (Porsche Crash) ಚಲಾಯಿಸಿ ಇಬ್ಬರು ಐಟಿ ವೃತ್ತಿಪರರನ್ನು (IT Engineers) ಸಾಯಿಸಿದ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆ ಕಾರಣವಾಗಿದೆ. ಸದ್ಯ ಅಪ್ರಾಪ್ತನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಬಾಲಕನ ತಾಯಿ ಶಿವಾನಿ ಅಗರ್‌ವಾಲ್‌ ಅವರನ್ನು ಬಂಧಿಸಲಾಗಿದೆ. ಬಾಲಕ ಮದ್ಯಪಾನ ಸೇವಿಸಿದ್ದಾನೆಯೇ ಎಂದು ಪರೀಕ್ಷಿಸಲು ಆತನ ರಕ್ತದ ಮಾದರಿ ಸಂಗ್ರಹಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಶಿವಾನಿ ಅಗರ್‌ವಾಲ್‌ ತಮ್ಮ ರಕ್ತವನ್ನು ನೀಡಿ ತನಿಖೆಯ ದಾರಿ ತಪ್ಪಿಸಲು ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅವರನ್ನೂ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾಕ್ಷ್ಯಗಳನ್ನು ತಿರುಚಿದ್ದಕ್ಕಾಗಿ ಮತ್ತು ರಕ್ತದ ಮಾದರಿಗಳನ್ನು ತೆಗೆದುಕೊಂಡಾಗ ಆಸ್ಪತ್ರೆಯಲ್ಲಿದ್ದ ಕಾರಣ ಶಿವಾನಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿ ಪುಣೆ ಅಪರಾಧ ವಿಭಾಗವು ಈ ಹಿಂದೆ ಶಿವಾನಿ ಅವರ ಹೇಳಿಕೆಯನ್ನು ದಾಖಲಿಸಿತ್ತು. ಅಲ್ಲದೆ ರಕ್ತ ಪರೀಕ್ಷೆ ನಡೆಸಿದ ಸಸೂನ್ ಆಸ್ಪತ್ರೆಯ ಕೆಲವು ಸಿಬ್ಬಂದಿಗೆ ಪುಣೆ ಅಪರಾಧ ವಿಭಾಗವು ಸಮನ್ಸ್ ನೀಡಿ ವಿಚಾರಣೆ ನಡೆಸಿತ್ತು. ರಕ್ತದ ಮಾದರಿಗಳನ್ನು ಬದಲಾಯಿಸಿರುವ ಬಗ್ಗೆ ಅವರನ್ನು ಪ್ರಶ್ನಿಸಲಾಗಿತ್ತು.

ಇಬ್ಬರು ವೈದ್ಯರ ಅರೆಸ್ಟ್‌

ರಕ್ತದ ಮಾದರಿ ಬದಲಾಯಿಸಿದ ಘಟನೆ ಸಂಬಂಧಿಸಿ ಕೆಲವು ದಿನಗಳ ಹಿಂದೆ ಇಬ್ಬರು ವೈದ್ಯರನ್ನು ಬಂಧಿಸಲಾಗಿತ್ತು. ʼʼಪುಣೆಯ ಸಾಸೂನ್‌ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಅಜಯ್‌ ತಾವರೆ ಮತ್ತು ಡಾ. ಶ್ರೀಹರಿ ಹರ್ನೂರ್‌ ಆರೋಪಿಯ ರಕ್ತದ ಮಾದರಿಯನ್ನೇ ಬದಲಿಸಿದ್ದಾರೆ. ಆಮೂಲಕ ಈ ಪ್ರರಕಣದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವರಿಬ್ಬರನ್ನೂ ಇದೀಗ ಬಂಧಿಸಲಾಗಿದೆʼʼ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದರು. ಅಲ್ಲದೆ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದ ಎರವಾಡ ಪೊಲೀಸ್‌ ಠಾಣೆ ಇಬ್ಬರು ಪೊಲೀಸರನ್ನೂ ಅಮಾನತುಗೊಳಿಸಲಾಗಿತ್ತು.

ಪ್ರಕರಣದ ಹಿನ್ನೆಲೆ

ಇತ್ತೀಚೆಗೆ ಕಲ್ಯಾಣಿನಗರ ಪ್ರದೇಶದಲ್ಲಿನ ಬಾರ್‌ನಲ್ಲಿ ಮದ್ಯ ಸೇವಿಸಿ ಪಾನಮತ್ತನಾಗಿದ್ದ 17 ವರ್ಷದ ಬಾಲಕ ಚಾಲನೆ ಮಾಡುತ್ತಿದ್ದ ಪೋರ್ಷೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮೃತಪಟ್ಟಿದ್ದರು. ಇದಾದ ಬಳಿಕ ಪೊಲೀಸರು ಬಾಲಾಪರಾಧಿ ನ್ಯಾಯಾಲಯದ ತೀರ್ಪಿನಂತೆ ಬಾಲಕನನ್ನು ಬಂಧಿಸಿ ಬಳಿಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ಬಳಿಕ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿದ್ದರು.

ಇದನ್ನೂ ಓದಿ: Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಇಬ್ಬರು ವೈದ್ಯರು ಅರೆಸ್ಟ್‌

ಎಲ್ಲೆಡೆ ಪೊಲೀಸರ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಾಲಕನ ಜಾಮೀನನ್ನು ರದ್ದುಗೊಳಿಸಿ ಮತ್ತೆ ಬಂಧಿಸಲಾಗಿತ್ತು. ಮೊದಲು ವಿಶಾಲ್ ಅಗರ್ವಾಲ್​ ತನ್ನ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಡ್ರೈವರ್​ ಇದ್ದಾರೆ ಎಂದು ಹೇಳಿದ್ದರು. ಇನ್ನು ಬಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಶಂಕೆ ವ್ಯಕ್ತವಾಗಿತ್ತು. ಇದಕ್ಕೆ ಪೂರಕ ಎಂಬಂತೆ ಘಟನೆಗೂ ಮುನ್ನ ಆತ ಸ್ನೇಹಿತರ ಜತೆಗೂಡಿ ಬಾರ್‌ನಲ್ಲಿ ಕುಡಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಹೀಗಾಗಿ ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

Continue Reading

Lok Sabha Election 2024

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Narendra Modi: ಲೋಕಸಭಾ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತದಾರರಿಗೆ ವಿಶೇಷವಾಗಿ ಯುವ ಜನತೆ ಮತ್ತು ಮಹಿಳೆಯರಿಗೆ ಸಂದೇಶ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ 7ನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ದೇಶದ 57 ಕ್ಷೇತ್ರಗಳಲ್ಲಿ ಇಂದು (ಜೂನ್‌ 1) ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತದಾರರಿಗೆ ವಿಶೇಷವಾಗಿ ಯುವ ಜನತೆ ಮತ್ತು ಮಹಿಳೆಯರಿಗೆ ಸಂದೇಶ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, ʼʼಇಂದು 2024ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಆಯೋಜಿಸಲಾಗಿದೆ. 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 57 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿ. ಯುವ ಮತ್ತು ಮಹಿಳಾ ಮತದಾರರು ದಾಖಲೆ ಸಂಖ್ಯೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಾರೆ ಎನ್ನುವ ಭರವಸೆ ಇದೆ. ಎಲ್ಲರೂ ಒಟ್ಟಾಗಿ, ನಮ್ಮ ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಪಡಿಸೋಣʼʼ ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. “ದೇಶ ಮತ್ತು ಉತ್ತರ ಪ್ರದೇಶದಲ್ಲಿ ಹೆದ್ದಾರಿಗಳು, ವಿಮಾನ ನಿಲ್ದಾಣಗಳು, ಹೈಸ್ಪೀಡ್ ರೈಲುಗಳು ಮತ್ತು ಇಂಟರ್‌ನೆಟ್‌ ಜಾಲವನ್ನು ನಿರ್ಮಿಸುವ ಪ್ರಾಮಾಣಿಕ ಸರ್ಕಾರವನ್ನು ಆಯ್ಕೆ ಮಾಡಲು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಎಲ್ಲ ಮತದಾರರು ವಿಶೇಷವಾಗಿ ಯುವಕರಿಗೆ ಮನವಿ ಮಾಡುತ್ತೇನೆ. ಪ್ರತಿಯೊಬ್ಬ ಬಡ ವ್ಯಕ್ತಿಗೆ ಮನೆ, ಅನಿಲ ಮತ್ತು ಉಚಿತ ಚಿಕಿತ್ಸೆಯನ್ನು ಒದಗಿಸುವ ವಿಶ್ವಾಸಾರ್ಹ ಸರ್ಕಾರವು ಭಾರತ ಮತ್ತು ಉತ್ತರ ಪ್ರದೇಶದ ಚಿತ್ರಣವನ್ನೇ ಬದಲಾಯಿಸಬಹುದು” ಎಂದು ಶಾ ಹೇಳಿದ್ದಾರೆ.

ʼಇಂಡಿಯಾʼ ಒಕ್ಕೂಟಕ್ಕೆ ಅನುಕೂಲ ಎಂದ ಖರ್ಗೆ

ಇತ್ತ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಾರಿಯ ಚುನಾವಣೆ ಪ್ರತಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟಕ್ಕೆ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಇಂದು ಕೊನೆಯ ಹಂತದ ಮತದಾನ. ಸಂವಿಧಾನವನ್ನು ರಕ್ಷಿಸಲು ವೋಟು ಮಾಡಿ. ʼಇಂಡಿಯಾʼ ಮೈತ್ರಿಕೂಟ ಸರ್ವಾಧಿಕಾರಿ ಶಕ್ತಿಯ ವಿರುದ್ಧ ಹೋರಾಟ ನಡೆಸುತ್ತಿದೆ. ಆರು ಹಂತಗಳ ಮತದಾನದಲ್ಲಿಯೂ ನಾವು ಜಯ ಗಳಿಸಬೇಕೆಂದು ಮತದಾರರು ಬಯಸಿದ್ದಾರೆ. ಈ ಹಂತದಲ್ಲಿಯೂ ಕೈ ಹಿಡಿಯಲಿದ್ದಾರೆ. ಮೊದಲ ಬಾರಿ ಹಕ್ಕು ಚಲಾಯಿಸಲಿರುವ ಯುವ ಮತದಾರರ ಹೆಗಲ ಮೇಲೆ ಬಹು ದೊಡ್ಡ ಜವಾಬ್ದಾರಿ ಇದೆ. ಅವರನ್ನು ನಾನು ಸ್ವಾಗತಿಸುತ್ತೇನೆ. ಬದಲಾವಣೆಗಾಗಿ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಿʼʼ ಎಂದು ಖರ್ಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಲಿದೆ.

Continue Reading

Lok Sabha Election 2024

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

OpenAI: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು (ಜೂನ್‌ 1) ನಡೆಯುತ್ತಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಇಸ್ರೇಲ್‌ ಸಂಸ್ಥೆ ಕೃತಕ ಬುದ್ಧಿಮತ್ತೆ (AI) ಮಾದರಿಗಳನ್ನು ಬಳಸಲು ಪ್ರಯತ್ನಿಸಿದೆ ಎಂದು ಓಪನ್ಎಐ ಹೇಳಿದೆ. ಈ ಬಗ್ಗೆ ಬಿಜೆಪಿ ತೀವ್ರ ಕಳವಳ ವ್ಯಕ್ತಪಡಿಸಿದೆ.

VISTARANEWS.COM


on

OpenAI
Koo

ನವದೆಹಲಿ: ಸುಮಾರು ಎರಡು ತಿಂಗಳ ಕಾಲ ನಡೆದ ಲೋಕಸಭಾ ಚುನಾವಣೆ (Lok Sabha Election)ಯ ಕೊನೆಯ ಹಂತದ ಮತದಾನ ಇಂದು (ಜೂನ್‌ 1) ನಡೆಯುತ್ತಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಇಸ್ರೇಲ್‌ ಸಂಸ್ಥೆ ಕೃತಕ ಬುದ್ಧಿಮತ್ತೆ (AI) ಮಾದರಿಗಳನ್ನು ಬಳಸಲು ಪ್ರಯತ್ನಿಸಿದೆ ಎಂದು ಚಾಟ್‌ಜಿಪಿಟಿ (ChatGPT)ಯ ಓಪನ್ಎಐ (OpenAI) ಹೇಳಿದೆ.

ಇಸ್ರೇಲ್‌ ಮೂಲದ ಸಂಸ್ಥೆಯಾದ STOIC ಅಭಿಯಾನ ನಡೆಸಿ ಬಿಜೆಪಿ ವಿರೋಧಿ ಚಟುವಟಿಕೆ ನಡೆಸಲು ಪ್ರಯತ್ನಿಸಿ, ವಿಫಲವಾಗಿದೆ ಎನ್ನಲಾಗಿದೆ. ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸುವ ಕಮೆಂಟ್‌, ಲೇಖನ, ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ರಚಿಸುವಂತಹ ಕಾರ್ಯಗಳಿಗಾಗಿ ಓಪನ್ಎಐಯ ಶಕ್ತಿಯುತ ಭಾಷಾ ಮಾದರಿಗಳನ್ನು ಬಳಸಿಕೊಳ್ಳಲು ಪ್ರಯತ್ನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಓಪನ್‌ಎಐ ಹೇಳಿದ್ದೇನು?

“ಮೇಯಲ್ಲಿ STOIC ನೆಟ್‌ವರ್ಕ್‌ ಭಾರತದ ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸುವ ಕಮೆಂಟ್‌ಗಳನ್ನು ರಚಿಸಲು ಪ್ರಾರಂಭಿಸಿತು. ಚುನಾವಣೆಯ ಮೇಲೆ ಪರಿಣಾಮ ಬೀರಬಹುದಾದ ಇಂತಹ ಕೆಲವು ಚಟುವಟಿಕೆಗಳನ್ನು ನಾವು ತಡೆದಿದ್ದೇವೆʼʼ ಎಂದು ಓಪನ್‌ಎಐ ಹೇಳಿದೆ. ʼʼಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌, ವೆಬ್‌ಸೈಟ್‌ ಮತ್ತು ಯೂಟ್ಯೂಬ್‌ನಲ್ಲಿ ಪ್ರಭಾವ ಬೀರಲು ಯತ್ನಿಸುತ್ತಿದ್ದ ಇಸ್ರೇಲ್‌ನಿಂದ ಕಾರ್ಯನಿರ್ವಹಿಸುವ ಖಾತೆಗಳ ಸಮೂಹವನ್ನು ನಿಷೇಧಿಸಲಾಗಿದೆʼʼ ಎಂದೂ ವಿವರಿಸಿದೆ.

ʼʼಈ ಅಭಿಯಾನವನ್ನು ಕೆನಡಾ, ಅಮೆರಿಕ ಮತ್ತು ಇಸ್ರೇಲ್‌ನಲ್ಲಿರುವವರನ್ನು ಗುರಿಯಾಗಿಸಿ ಆರಂಭಿಸಲಾಗಿತ್ತು. ಇದಕ್ಕಾಗಿ ಸಂದೇಶಗಳಲ್ಲಿ ಇಂಗ್ಲಿಷ್‌ ಮತ್ತು ಹಿಬ್ರೂ ಭಾಷೆಗಳನ್ನು ಬಳಸಲಾಗುತ್ತಿತ್ತು. ಬಳಿಕ ಮೇಯಲ್ಲಿ ಭಾರತೀಯರನ್ನು ತಲುಪುವ ಉದ್ದೇಶದಿಂಧ ಇಂಗ್ಲಿಷ್‌ನಲ್ಲಿ ಕಮೆಂಟ್‌ ರಚಿಸಲಾಗಿತ್ತುʼʼ ಎಂದು ಓಪನ್‌ಎಐ ತಿಳಿಸಿದೆ.

ಅಪಾಯಕಾರಿ ಬೆದರಿಕೆ ಎಂದ ಬಿಜೆಪಿ

ಈ ಬೆಳವಣಿಗೆ ಬಗ್ಗೆ ಬಿಜೆಪಿ ಆತಂಕ ವ್ಯಕ್ತಪಡಿಸಿದೆ. ಇದು ಅಪಾಯಕಾರಿ ಬೆದಿಕೆ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿರುವ ಸಚಿವ ರಾಜೀವ್ ಚಂದ್ರಶೇಖರ್, ʼʼಇದು ನಮ್ಮ ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾಯಾದ ಬೆದರಿಕೆ. ಭಾರತ ಮತ್ತು ಹೊರಗಿನ ಪಟ್ಟಭದ್ರ ಹಿತಾಸಕ್ತಿಗಳು ಬಿಜೆಪಿ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎನ್ನುವುದು ಇದರಿಂದ ಸ್ಪಷ್ವಾಗುತ್ತದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕಾಗಿದೆ ಮತ್ತು ಸತ್ಯವನ್ನು ಬಹಿರಂಗಪಡಿಸಬೇಕಾಗಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇಂಟರ್‌ನೆಟ್‌ ಮೂಲಕ ನಮ್ಮ ಮಾದರಿಗಳನ್ನು ಬಳಸಿ ವಂಚನೆಯಲ್ಲಿ ತೊಡಗಿದ್ದ ಇಂತಹ ಸುಮಾರು ಐದು ರಹಸ್ಯ ಕಾರ್ಯಾಚರಣೆಗಳನ್ನು ಕಳೆದ ಮೂರು ತಿಂಗಳಲ್ಲಿ ಗುರುತಿಸಲಾಗಿದೆ ಎಂದು ಓಪನ್ಎಐ ಹೇಳಿದೆ. 2015ರಲ್ಲಿ ಸ್ಥಾಪಿಸಲಾದ ಕೃತಕ ಬುದ್ಧಿಮತ್ತೆ ಸಂಶೋಧನಾ ಸಂಸ್ಥೆಯೇ ಓಪನ್ಎಐ.

ಇದನ್ನೂ ಓದಿ: Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

2024ರ ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಾಲಿವುಡ್‌ ನಟಿ ಕಂಗನಾ ರಾಣಾವತ್‌, ಚರಣ್‌ಜೀತ್‌ ಸಿಂಗ್‌ ಚನ್ನಿ, ಅನುರಾಗ್ ಠಾಕೂರ್, ಅಭಿಷೇಕ್ ಬ್ಯಾನರ್ಜಿ, ಮೀಸಾ ಭಾರ್ತಿ ಮತ್ತಿತರರ ಪ್ರಮುಖ ನಾಯಕರ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ.

Continue Reading

ಪ್ರಮುಖ ಸುದ್ದಿ

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Shatru Bhairavi Yaga: ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

VISTARANEWS.COM


on

shatru bhairavi yaga
ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯ
Koo

ಮಂಗಳೂರು: ʼತಮ್ಮನ್ನು ಮುಗಿಸಲು ಕೇರಳದಲ್ಲಿ ಶತ್ರು ಭೈರವಿ ಯಾಗ (Shatru Bhairavi Yaga) ನಡೆದಿದೆʼ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನೀಡಿದ್ದ ಹೇಳಿಕೆ ಕೇರಳದಲ್ಲಿ (Kerala) ಸಂಚಲನ ಸೃಷ್ಟಿಸಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರ ತನಿಖೆ ನಡೆಸಿದೆ. ಅಂಥ ಯಾವುದೇ ಯಾಗ ನಡೆದಿಲ್ಲ, ಪ್ರಾಣಿ ಬಲಿ (animal sacrifice) ನೀಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಾಣಿ ಬಲಿ ಕೊಟ್ಟು ಶತ್ರು ಭೈರವಿ ಯಾಗ ನಡೆದಿದೆಯಾ ಎಂದು ತನಿಖೆ ನಡೆಸಿ ಸಮಗ್ರ ಮಾಹಿತಿ ಸಂಗ್ರಹಿಸಿ ಕೇರಳ ಡಿಜಿಪಿಗೆ ವಿಶೇಷ ತನಿಖಾ ತಂಡ ವರದಿ ಸಲ್ಲಿಸಿದೆ.

ತಳಿಪರಂಬ ಶ್ರೀ ರಾಜರಾಜೇಶ್ವರಿ ದೇವರು

ತಳಿಪರಂಬ, ರಾಜರಾಜೇಶ್ವರಂ ಹಾಗೂ ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ತನಿಖೆ ನಡೆಸಿದ ಕೇರಳ ಟೀಂ, ಅಂಥ ಯಾವುದೇ ಪ್ರಾಣಿ ಬಲಿ ಯಾಗ ನಡೆದಿಲ್ಲ ಎಂದು ಕೇರಳ ಡಿಜಿಪಿಗೆ ವರದಿ ಸಲ್ಲಿಸಿದೆ. ಈ ನಡುವೆ ಕರ್ನಾಟಕ ಪೊಲೀಸ್ ವಿಶೇಷ ತಂಡದಿಂದಲೂ ಗುಪ್ತವಾಗಿ ಮಾಹಿತಿ ಸಂಗ್ರಹ ನಡೆದಿದೆ. ಆದರೆ ಯಾರ ತನಿಖೆಯಲ್ಲೂ ಯಾಗದ ಕುರಿತು ಸುಳಿವು ದೊರೆತಿಲ್ಲ.

ಕೇರಳ ಸಚಿವರಿಂದಲೂ ಸ್ಪಷ್ಟನೆ

ಕೇರಳದ ದೇವಸ್ವಂ ಬೋರ್ಡ್ ಸಚಿವ ರಾಧಾಕೃಷ್ಣನ್ ಅವರೂ ಡಿಕೆ ಶಿವಕುಮಾರ್ ಆರೋಪವನ್ನು ನಿರಾಕರಿಸಿದ್ದಾರೆ. ನಮ್ಮ ರಾಜ್ಯದ ಯಾವುದೇ ದೇವಸ್ಥಾನಗಳಲ್ಲೂ ಪ್ರಾಣಿ ಬಲಿ ನಡೆಯಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ದೇವಳ ಆಡಳಿತ ಮಂಡಳಿ ನಿರಾಕರಣೆ

“ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳು ನಡೆಯುವುದಿಲ್ಲ. ಕೇರಳದ ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ರಾಜರಾಜೇಶ್ವರಂ ದೇವಸ್ಥಾನದ ಹೆಸರಿನ ಬಗ್ಗೆ ದೃಶ್ಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದುರದೃಷ್ಟಕರ” ಎಂದು ಅಧಿಕೃತ ಪತ್ರಿಕಾ ಹೇಳಿಕೆ‌ ಮೂಲಕ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ದೇವಾಲಯ ಆಡಳಿತ ಮಂಡಳಿ ಸ್ಪಷ್ಟನೆ

“ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಕೇರಳದ ಅತ್ಯಂತ ಹಳೆಯ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಕಣ್ಣೂರು ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಅಂತಹ ಯಾವುದೇ ಪೂಜೆ ಅಥವಾ ಶತ್ರು ಭೈರವಿ ಯಾಗವನ್ನು ನಡೆಸಲಾಗುವುದಿಲ್ಲ. ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳಿಲ್ಲ. ದೇವಾಲಯದ ಹಿತಾಸಕ್ತಿಗಳ ವಿರುದ್ಧದ ಪ್ರಚಾರಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ” ಎಂದು ಪತ್ರಿಕಾ ಹೇಳಿಕೆ ಮೂಲಕ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹೇಳಿಕೆ ನೀಡಿದ್ದಾರೆ.

ಡಿಕೆಶಿ ಆರೋಪ ಏನಿತ್ತು?

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದಲ್ಲಿ ಸಿಎಂ ಹಾಗೂ ನನ್ನ ವಿರುದ್ಧ ಶತ್ರು ಭೈರವಿ ಯಾಗ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆಶಿ ಮೊನ್ನೆ ಹೇಳಿದ್ದರು. “ಇದು ಶತ್ರು ಸಂಹಾರಕ್ಕಾಗಿ ಮಾಡುತ್ತಿರುವ ಶತ್ರು ಭೈರವಿ ಯಾಗವಾಗಿದ್ದು, ಇದನ್ನು ಮಾಡಿಸುತ್ತಿರುವವರು ಯಾರೆಂದು ಗೊತ್ತಿದೆ. ರಾಜಕೀಯ ವೈರಿಗಳು ಮಾಡಿಸುತ್ತಿದ್ದಾರೆ. ಯಾಗದಲ್ಲಿ ಮೇಕೆ, ಹಂದಿ, ಕುರಿ, ಹೀಗೆ ಪಂಚಬಲಿ ಕೊಟ್ಟಿದ್ದಾರೆ. ಅಘೋರಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಆಸುಪಾಸು ಚೆಕ್ ಮಾಡಿ, ನಿಮಗೇ ಗೊತ್ತಾಗುತ್ತೆ. ಇದರಲ್ಲಿ ಭಾಗವಹಿಸಿದವರೇ ನನಗೆ ಮಾಹಿತಿ ನೀಡಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದರು.

ಇದನ್ನೂ ಓದಿ: ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

Continue Reading
Advertisement
T20 World Cup 2024
ಕ್ರಿಕೆಟ್40 seconds ago

Team India: ವೆಸ್ಟ್​ ಇಂಡೀಸ್​ ಮೈದಾನ ಭಾರತದ ಪಾಲಿಗೆ ಅನ್ ಲಕ್ಕಿ; ಹಿಂದಿನ 2 ವಿಶ್ವಕಪ್ ಟೂರ್ನಿಯ​ ಹಿನ್ನೋಟ ಇಲ್ಲಿದೆ

Porsche Crash
ದೇಶ23 mins ago

Porsche Crash: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣ; ಸಾಕ್ಷ್ಯ ತಿರುಚಿದ ಅಪ್ರಾಪ್ತನ ತಾಯಿಯ ಬಂಧನ

Physical Abuse
ಉಡುಪಿ28 mins ago

Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

Nandamuri Balakrishna touch actress anjali back
ಟಾಲಿವುಡ್53 mins ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ55 mins ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Narendra Modi
Lok Sabha Election 202459 mins ago

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Murder Case in tumkur
ತುಮಕೂರು1 hour ago

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

OpenAI
Lok Sabha Election 20242 hours ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Murder Case in Mysuru
ಕ್ರೈಂ2 hours ago

Murder case : ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

Ambati Rayudu
ಕ್ರೀಡೆ2 hours ago

Ambati Rayudu: ಸ್ಟಾಂಡರ್ಡ್​ ಕಮ್ಮಿ ಮಾಡಿದರೆ ಉತ್ತಮ ಎಂದು ಕೊಹ್ಲಿಯ ಕಾಲೆಳೆದ ರಾಯುಡು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌