Healthy food | ಒಳ್ಳೆಯ ಬಾದಾಮಿಯಿಂದ ಕೆಟ್ಟ ಪರಿಣಾಮವೂ ಇದೆ ಅಂದರೆ ನಂಬ್ತೀರಾ? - Vistara News

ಆಹಾರ/ಅಡುಗೆ

Healthy food | ಒಳ್ಳೆಯ ಬಾದಾಮಿಯಿಂದ ಕೆಟ್ಟ ಪರಿಣಾಮವೂ ಇದೆ ಅಂದರೆ ನಂಬ್ತೀರಾ?

ಬಾದಾಮಿ ಒಂದು ಮಿತಿಯಲ್ಲಿ ಸೇವಿಸಿದರೆ ಅತ್ಯುತ್ತಮ ವಿಟಮಿನ್‌ ಇ ಮೂಲ. ಆದರೆ
ಪೌಷ್ಟಿಕ ಎಂದು ಅತಿಯಾಗಿ ಸೇವಿಸಿದರೆ ಏನಾಗಬಹುದು? ಇಲ್ಲಿದೆ ನೋಡಿ.

VISTARANEWS.COM


on

almond
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾದಾಮಿ ಒಳ್ಳೆಯದು ಅಂದುಕೊಂಡು ಪ್ರತಿದಿನ ಬೇಕಾದ ಹಾಗೆ ಬಾದಾಮಿ ತಿನ್ನುತ್ತಿದ್ದೀರಾ? ಅತಿಯಾದರೆ ಅಮೃತವೂ ವಿಷ ಎಂದು ಹಿರಿಯರು ಸುಮ್ಮನೆ ಹೇಳಿಲ್ಲ. ಬಾದಾಮಿಯ ವಿಷಯದಲ್ಲೂ ಇದು ನಿಜವೂ ಹೌದು. ಬಾದಾಮಿ ಒಮ್ಮೆ ಬಾಯಿಗಿಟ್ಟರೆ ಮತ್ತೆ ಮತ್ತೆ ತಿನ್ನಬೇಕೆನ್ನಿಸುವ ಹಾಗೆ ರುಚಿಯಾಗಿಯೂ ಇದೆ. ಹುರಿದಿಟ್ಟು ಸ್ವಲ್ಪ ಉಪ್ಪು ಬೆರೆಸಿದ ಬಾದಾಮಿಯಾದರೆ ಕಥೆ ಮುಗಿದಂತೆಯೇ. ಒಂದಾದ ಮೇಲೆ ಒಂದರಂತೆ ಬಾದಾಮಿ ಹೊಟ್ಟೆಯೊಳಗೆ ಸೇರದೆ ಇರದು. ಬಾದಾಮಿ ತಾನೇ, ಎಷ್ಟು ತಿಂದರೂ ಸಮಸ್ಯೆಯಿಲ್ಲ ಅಂದುಕೊಂಡು ಕಡಿವಾಣವೇ ಇಲ್ಲದಂತೆ ತಿನ್ನುವ ಮೊದಲು ಯೋಚನೆ ಮಾಡಿ. ಬಾದಾಮಿಯನ್ನು ಉಪಯೋಗಿಸುವ ಮೊದಲು ಅದರ ಸಾಧಕ ಬಾಧಕಗಳ ಬಗ್ಗೆ ಅರಿವಿರಬೇಕು.

೧. ಬಾದಾಮಿಯಲ್ಲಿ ನಾರಿನಂಶ ಇದೆ ನಿಜ. ಆದರೆ, ನಾರಿನಂಶ ಒಳ್ಳೆಯದೆಂದು ಹೆಚ್ಚು ತಿಂದರೆ, ಮಲಬದ್ಧತೆಗೂ ಕಾರಣವಾಗಬಹುದು. ಹೊಟ್ಟೆಯಲ್ಲಿ ಗ್ಯಾಸ್‌ ತುಂಬಿದಂತಾಗುವುದು, ಹೊಟ್ಟೆನೋವು, ಹೊಟ್ಟೆ ಹಿಡಿದಂತಾಗುವುದು ಮುಂತಾದ ಅಡ್ಡ ಪರಿಣಾಮಗಳೂ ಕಾಣಿಸಿಕೊಳ್ಳಬಹುದು. ಹಾಗಾಗಿ ಹೆಚ್ಚು ಬಾದಾಮಿ ತಿಂದಿರೆಂದಾದಲ್ಲಿ, ಹೆಚ್ಚು ನೀರನ್ನೂ ಕುಡಿಯಬೇಕು.

೨. ಬಾದಾಮಿಯಲ್ಲಿ ಹೆಚ್ಚು ನಾರಿನಂಶ ಇರುವುದರಿಂದ ಅದು ಖನಿಜಾಂಶಗಳಾದ ಕ್ಯಾಲ್ಶಿಯಂ, ಮೆಗ್ನೀಶಿಯಂ, ಝಿಂಕ್‌, ಹಾಗೂ ಕಬ್ಬಿಣಾಂಶಗಳ ಜೊತೆ ಸೇರಿಕೊಂಡು ರಕ್ತ ಅವನ್ನು ಸರಿಯಾಗಿ ಹೀರಿಕೊಳ್ಳುವಲ್ಲಿ ತಡೆಯೊಡ್ಡುತ್ತದೆ. ಹಾಗಾಗಿ, ಬಾದಾಮಿಯ ಪೂರ್ಣ ಉಪಯೋಗ ಲಭಿಸಬೇಕಾದಲ್ಲಿ ಅದನ್ನು ಬೇರೆಯದೇ ಆಗಿ ಅಥವಾ ಎರಡು ಊಟಗಳ ನಡುವಿನ ಸ್ನ್ಯಾಕ್‌ ಆಗಿ ಸೇವಿಸಬೇಕು.

೩. ದಿನಕ್ಕೆ ೨೦ಕ್ಕಿಂತ ಹೆಚ್ಚು ಬಾದಾಮಿಯನ್ನು ಹೊಟ್ಟೆಗಿಳಿಸಿದಿರೆಂದಾದಲ್ಲಿ ಖಂಡಿತವಾಗಿಯೂ ತೂಕ ಹೆಚ್ಚಾಗುತ್ತದೆ. ಸರಿಯಾದ ವ್ಯಾಯಾಮ ಇಲ್ಲದೆ, ಸುಮ್ಮನೆ ಕೂತು, ತಾನೇ ತಾನಾಗಿ ಬಾದಾಮಿ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಬಾದಾಮಿಯ ಮೇಲೆ ಭಾರ ಹಾಕಿದರೆ ಕೆಲಸ ಆಗುವುದಿಲ್ಲ. ಕೊಂಚ ದೇಹ ದಂಡನೆ, ಸರಿಯಾದ ಪ್ರಮಾಣದಲ್ಲಿ ಬಾದಾಮಿಯ ಸೇವನೆ ಮಾತ್ರ ಒಳ್ಳೆಯ ಫಲ ನೀಡುತ್ತದೆ.

೪. ವಾಲ್‌ನಟ್‌ ಮತ್ತು ಗೋಡಂಬಿಯನ್ನು ತಿಂದಾದ ಮೇಲೆ ಬಾದಾಮಿಯನ್ನು ತಿಂದರೆ ಅಲರ್ಜಿಯನ್ನೂ ತರಿಸಬಹುದು. ಸಾಮಾನ್ಯವಾಗಿ ಬಾದಾಮಿ ತಿಂದಾಗ ಬಾಯಿ ತುರಿಕೆ, ಗಂಟಲು ಕೆರೆತ, ನಾಲಿಗೆ ಬಾಯಿ ಹಾಗೂ ತುಟಿಗಳು ದಪ್ಪವಾದಂತಾಗುವುದು ಮತ್ತಿತರ ಅಲರ್ಜಿ ಸಮಸ್ಯೆಗಳು ಕೆಲವರಿಗೆ ಇದರಿಂದ ಉಂಟಾಗಬಹುದು. ಬಾದಾಮಿಯಲ್ಲಿ ಅನಾಫಿಲಿಕ್ಸ್‌ ಎಂಬ ಅಲರ್ಜಿ ಉಂಟಾಗುವ ಸಂಭವವೂ ಇದ್ದು, ಇದು ಉಸಿರುಗಟ್ಟಿದಂತಾಗುವುದು, ತಲೆಸುತ್ತುವುದು, ವಾಂತಿ, ಗೊಂದಲ, ಸ್ವರದಲ್ಲಿ ಬದಲಾವಣೆ, ರಕ್ತದೊತ್ತಡ ಕಡಿಮೆಯಾಗುವುದು ಮತ್ತಿತರ ತೊಂದರೆಗಳು ಗೋಚರಿಸಬಹುದು.

ಇದನ್ನೂ ಓದಿ: ವಿಜ್ಞಾನಿಗಳಿಂದ ನ್ಯಾನೋ ಹಚ್ಚೆ ಸಂಶೋಧನೆ; ಆರೋಗ್ಯ ಸಮಸ್ಯೆಗಳಿಂದ ರಕ್ಷೆ?

೫. ಬಾದಾಮಿ ಎಂದರೆ ವಿಟಮಿನ್‌ ಇ. ಆದರೆ ವಿಟಮಿನ್‌ ಇ ದಕ್ಕೀತು ಎಂದು ಬೇಕಾಬಿಟ್ಟಿ ತಿಂದರೆ, ಅಗತ್ಯಕ್ಕಿಂತ ಹೆಚ್ಚು ಮಿಟಮಿನ್‌ ಇ ನಿಮ್ಮ ದೇಹವನ್ನು ಸೇರಿ ತೊಂದರೆಯಲ್ಲಿ ಸಿಲುಕಿಸಬಹುದು. ಯಾಕೆಂದರೆ, ದಿನನಿತ್ಯ ನೀವು ನಾನಾ ಆಹಾರಗಳ ರೂಪದಲ್ಲಿ ವಿಟಮಿನ್‌ ಇ ತೆಗೆದುಕೊಳ್ಳುತ್ತಿರುವುದರಿಂದ ಅತಿಯಾದ ವಿಟಮಿನ್‌ ಇ ಒಳ್ಳೆಯದಲ್ಲ. ಇದರಿಂದ ರಕ್ತ ಪರಿಚಲನೆಯಲ್ಲೂ ಏರಿಳಿತಗಳಾಗಬಹುದು.

೬. ಅತಿಯಾದ ಬಾದಾಮಿ ಕಿಡ್ನಿ ಸ್ಟೋನ್‌ ಸಮಸ್ಯೆ ತಂದೊಡ್ಡಬಹುದು. ೧೦೦ ಗ್ರಾಂ ಹುರಿದ ಬಾದಾಮಿಯಲ್ಲಿ ೪೬೯ ಮಿಲಿಗ್ರಾಂಗಳಷ್ಟು ಓಕ್ಸಲೇಟ್‌ಗಳಿದ್ದು ಇದು ಕಿಡ್ನಿ ಸ್ಟೋನ್‌ಗೆ ಕಾರಣವಾಗುತ್ತದೆ.

೭. ಮುಖ್ಯವಾಗಿ ಕಹಿ ಬಾದಾಮಿಯಲ್ಲಿ ವಿಷಕಾರಕ ಎಚ್‌ಸಿಎನ್‌ ಮಟ್ಟ ಸಿಹಿ ಬಾದಾಮಿಗಿಂತ ೪೦ ಪಟ್ಟು ಅಧಿಕವಾಗಿರುವುದರಿಂದ, ಇದು ಉಸಿರಾಟದ ತೊಂದರೆ, ಉಸಿರುಗಟ್ಟಿದಂಥ ಅನುಭವಗಳನ್ನೂ ನೀಡಬಹುದು. ಹಾಗಾಗಿ, ಹಾಲುಣಿಸುವ ತಾಯಂದಿರು, ಗರ್ಭಿಣಿಯರು ಕಹಿ ಬಾದಾಮಿಯಿಂದ ದೂರವಿರುವುದು ಒಳ್ಳೆಯದು.

ಹಾಗಾದರೆ ಎಷ್ಟು ಬಾದಾಮಿಯನ್ನು ಸಾಮಾನ್ಯರು ತಿನ್ನಬಹುದು ಎಂಬ ಪ್ರಶ್ನೆಗಳೇಳುವುದು ಸಹಜ. ಇಂತಿಷ್ಟೇ ತಿನ್ನಬೇಕು ಎಂಬ ನಿಬಂಧನೆಗಳೇನೂ ಇಲ್ಲದಿದ್ದರೂ ಅಂದಾಜು ಹೆಚ್ಚೆಂದರೆ ಒಬ್ಬ ಪ್ರತಿದಿನ, ೧೦- ೧೫ ಬಾದಾಮಿ ತಿನ್ನಬಹುದು. ಅದೂ ಆತನ ಇತರ ಆಹಾರ ಹಾಗೂ ವ್ಯಾಯಾಮದ ಮೇಲೆ ಅವಲಂಬಿತವಾಗಿದೆ. ಹುರಿದ ಬಾದಾಮಿಗಿಂತಲೂ ನೀರಿನಲ್ಲಿ ನೆನೆಸಿ ಸಿಪ್ಪೆ ತೆಗೆದ ಬಾದಾಮಿ ಹೆಚ್ಚು ಉತ್ತಮ.

ಇದನ್ನೂ ಓದಿ: Health Tips | ಮೆದುಳಿಗೆ ಮರೆವು ಆವರಿಸದಿರಲು ಬೇಕು ವಿಟಮಿನ್‌ ಬಿ12

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಹಾರ/ಅಡುಗೆ

Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

ಹಲವಾರು ರೀತಿಯ ರೊಟ್ಟಿಗಳು ಆಹಾರವಾಗಿ ಜನಪ್ರಿಯತೆ ಗಳಿಸಿವೆ. ಒಂದೊಂದು ಪ್ರಾಂತ್ಯದಲ್ಲಿ ಒಂದೊಂದು ಧಾನ್ಯ ಪರಂಪರಾಗತ ಆಹಾರವಾಗಿಯೂ ಬಳಕೆಯಲ್ಲಿದೆ. ಆದರೆ ಯಾರಿಗೆ ಯಾವ ರೊಟ್ಟಿ ಒಳ್ಳೆಯದು? ಯಾವ ರೊಟ್ಟಿಯಲ್ಲಿ ಏನೇನು ಸತ್ವಗಳು ದೊರೆಯುತ್ತವೆ? ಇಲ್ಲಿವೆ (Which Type Of Roti Is Best) ವಿವರ.

VISTARANEWS.COM


on

Which Type Of Roti Is Best
Koo

ಭಾರತದಲ್ಲಿ ಎಲ್ಲವೂ ವೈವಿಧ್ಯಮಯ, ಊಟವೂ ಸೇರಿ. ಅನ್ನ ಎಂದರೆ ಎಲ್ಲವೂ ಒಂದೇ ಅಲ್ಲ. ಬಿಳಿಯಕ್ಕಿ, ಕೆಂಪಕ್ಕಿ, ಕುಚ್ಚಲಕ್ಕಿ ಮುಂತಾದ ಹಲವು ರೀತಿಯ ಅಕ್ಕಿಗಳಲ್ಲಿ ಅನ್ನ ಮಾಡಲಾಗುತ್ತದೆ. ರೊಟ್ಟಿ ಎಂದರೆ ಅದರಲ್ಲೂ ಭಿನ್ನತೆಯಿದೆ. ಅಕ್ಕಿರೊಟ್ಟಿ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಚಲಿತ; ಗೋಧಿ ರೊಟ್ಟಿ ಭಾರತದೆಲ್ಲೆಡೆ ಚಾಲ್ತಿಯಲ್ಲಿದೆ; ಜೋಳದ್ದು ಕರ್ನಾಟಕವೂ ಸೇರಿದಂತೆ ಹಲವೆಡೆ ಬಳಕೆಯಲ್ಲಿದೆ; ರಾಗಿ ರೊಟ್ಟಿ ಕರ್ನಾಟಕದಲ್ಲಿ ಹೆಚ್ಚು ಪ್ರಿಯ; ಸಜ್ಜೆ ರೊಟ್ಟಿ ಗುಜರಾತ್‌, ರಾಜಸ್ಥಾನಗಳಲ್ಲಿ ಮುಖ್ಯ ಆಹಾರ; ಪಂಜಾಬ್‌ ಪ್ರಾಂತ್ಯದಲ್ಲಿ ಮೈದಾ ನಾನ್‌ಗಳು ಜನಪ್ರಿಯ. ಆದರೆ ಈ ಎಲ್ಲಾ ರೊಟ್ಟಿಗಳಲ್ಲಿ ತೂಕ ಇಳಿಸುವವರಿಗೆ ಸೂಕ್ತವಾಗಿದ್ದು (Which Type Of Roti Is Best) ಯಾವುದು? ಇತ್ತೀಚಿನ ವರ್ಷಗಳಲ್ಲಿ ಸಿರಿಧಾನ್ಯದ ಬಳಕೆ ಹೆಚ್ಚಿದೆ. ಆರೋಗ್ಯದ ಬಗ್ಗೆ ಕಾಳಜಿಯೂ ಹೆಚ್ಚಿರುವುದರಿಂದ, ಯಾವುದು ಹೆಚ್ಚು ಆರೋಗ್ಯಕರ ಎಂಬ ಚರ್ಚೆಗೆ ಕಾವೇರಿದೆ. ಆಹಾರ ತಜ್ಞರು ಈ ಬಗ್ಗೆ ನಾನಾ ರೀತಿಯ ವಿವರಣೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ರೀತಿಯ ರೊಟ್ಟಿಗಳ ಸತ್ವ ಮತ್ತು ಕ್ಯಾಲೊರಿಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ. ಇವೆಲ್ಲವೂ ಆರೋಗ್ಯಕ್ಕೆ ಒಳ್ಳೆಯದೇ ಆದರೂ ಒಂದೊಂದು ಧಾನ್ಯಗಳಿಗೂ ಅದರದ್ದೇ ಆದ ಅನನ್ಯತೆಯಿದೆ. ಹಾಗಾಗಿ ಅವುಗಳ ಸತ್ವಗಳು ಭಿನ್ನವಾಗುತ್ತವೆ.

Wheat Roti

ಗೋಧಿ ರೊಟ್ಟಿ

ಒಂದು ಮಧ್ಯಮ ಗಾತ್ರದ ಗೋಧಿ ರೊಟ್ಟಿಯಲ್ಲಿ 70-80 ಕ್ಯಾಲರಿ ಶಕ್ತಿ ದೊರೆಯುತ್ತದೆ. ಇದರಲ್ಲಿ ನಾರು, ಪಿಷ್ಟ, ಅಲ್ಪ ಪ್ರಮಾಣದ ಪ್ರೊಟೀನ್‌ ಮತ್ತು ಕೊಬ್ಬು, ಮ್ಯಾಂಗನೀಸ್‌, ಫಾಸ್ಫರಸ್‌ನಂಥ ಖನಿಜಗಳು, ಹಲವು ರೀತಿಯ ಬಿ ವಿಟಮಿನ್‌ಗಳು ಇದರಲ್ಲಿ ವಿಫುಲವಾಗಿವೆ. ಈ ಧಾನ್ಯ ದೊರೆಯುವುದು, ಇದರಲ್ಲಿ ಆಹಾರ ತಯಾರಿಸುವುದು ಕಷ್ವವಲ್ಲ ಮತ್ತು ಇದರ ರುಚಿಯೂ ಇಷ್ಟವಾಗುವಂಥದ್ದು.

Millet Roti

ರಾಗಿ ರೊಟ್ಟಿ

ಒಂದು ರಾಗಿ ರೊಟ್ಟಿಯಲ್ಲಿ 80-90 ಕ್ಯಾಲರಿ ಶಕ್ತಿ ದೊರೆಯುತ್ತದೆ. ಜೊತೆಗೆ, ಕ್ಯಾಲ್ಶಿಯಂ, ಕಬ್ಬಿಣ, ನಾರು, ಪ್ರೊಟೀನ್‌, ಪಿಷ್ಟ, ಉತ್ಕರ್ಷಣ ನಿರೋಧಕಗಳಿಂದ ಭರಿತವಾಗಿದೆ. ಹಲವು ರೀತಿಯ ಖನಿಜಾಂಶಗಳು ಇದರಲ್ಲಿವೆ. ಮೂಳೆಗಳ ಆರೋಗ್ಯಕ್ಕೆ ಇದು ಸೂಕ್ತವಾದದ್ದು ಮಾತ್ರವಲ್ಲ, ಮಧುಮೇಹಿಗಳಿಗೆ ಇದು ಒಳ್ಳೆಯ ಆಹಾರವಾಗಿದ್ದು, ರಕ್ತದಲ್ಲಿ ಸಕ್ಕರೆಯಂಶ ಏರದಂತೆ ಕಾಪಾಡಲು ನೆರವಾಗುತ್ತದೆ. ರಾಗಿ ತಿಂದವ ನಿರೋಗಿ ಎಂಬ ಮಾತು ವ್ಯಾಪಕ ಮನ್ನಣೆ ಪಡೆದಿದೆ.

jolada Roti

ಜೋಳದ ರೊಟ್ಟಿ

ಒಂದು ದೊಡ್ಡ ಜೋಳದ ರೊಟ್ಟಿಯಲ್ಲಿ 50-60 ಕ್ಯಾಲರಿ ಶಕ್ತಿ ದೊರೆಯುತ್ತದೆ. ಜೋಳ ತಿಂದವ ತೋಳದಂತಿರಬಹುದು ಎಂಬುದು ಜನಪ್ರಿಯ ಗಾದೆ. ಗ್ಲೂಟೆನ್‌ ರಹಿತವಾದ ಆಹಾರ ಇದಾಗಿದ್ದು, ಮಧುಮೇಹಿಗಳಿಗೆ ಸೂಕ್ತವಾದ ಆಹಾರವಿದು. ಇದರಲ್ಲಿ ಪ್ರೊಟೀನ್‌, ಕೊಬ್ಬು, ನಾರು, ಪಿಷ್ಟ, ಕ್ಯಾಲ್ಶಿಯಂ, ರಂಜಕ, ಕಬ್ಬಿಣ ಮುಂತಾದ ಸೂಕ್ಷ್ಮ ಪೋಷಕಾಂಶಗಳು ಬಹಳಷ್ಟಿವೆ.

Multigrain Roti

ಬಹುಧಾನ್ಯಗಳ ರೊಟ್ಟಿ

ಇದರಲ್ಲಿ ಹಲವಾರು ರೀತಿಯ ಧಾನ್ಯಗಳನ್ನು ಮಿಶ್ರ ಮಾಡಲಾಗುತ್ತದೆ. ಅಂದಾಜಿಗೆ ಹೇಳುವುದಾದರೆ, ಒಂದು ರೊಟ್ಟಿಯಲ್ಲಿ 80-100 ಕ್ಯಾಲರಿ ಶಕ್ತಿ ದೊರೆಯಬಹುದು. ಆದರೆ ಯಾವ್ಯಾವ ಧಾನ್ಯಗಳನ್ನು ಎಷ್ಟು ಪ್ರಮಾಣದಲ್ಲಿ ಮಿಶ್ರ ಮಾಡಲಾಗುತ್ತದೆ ಎನ್ನುವುದರ ಮೇಲೆ, ಇದರ ಕ್ಯಾಲರಿಗಳು ನಿರ್ಧಾರವಾಗುತ್ತದೆ. ಇದರಿಂದ ಹಲವು ರೀತಿಯ ಧಾನ್ಯಗಳು ಮತ್ತು ಸಿರಿಧಾನ್ಯಗಳು ಒಟ್ಟಿಗೇ ದೇಹಕ್ಕೆ ದೊರೆಯುವುದಕ್ಕೆ ಸಾಧ್ಯ. ಇದರಲ್ಲಿ ಹಲವು ರೀತಿಯ ವಿಟಮಿನ್‌ ಮತ್ತು ಖನಿಜಗಳು, ನಾರು ಹೇರಳವಾಗಿ ದೊರೆಯುತ್ತದೆ.

ಇದನ್ನೂ ಓದಿ: Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

ಯಾವುದು ಸೂಕ್ತ?

ಗ್ಲೂಟೆನ್‌ ಮುಕ್ತ ಆಹಾರ ಬೇಕೆಂದರೆ ರಾಗಿ ಮತ್ತು ಜೋಳದ ರೊಟ್ಟಿಗಳು ಸೂಕ್ತ. ಬಹುಧಾನ್ಯಗಳಲ್ಲಿ ಗೋಧಿ ಮಿಶ್ರವಾಗಿರುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದನ್ನು ಬಿಡುವುದು ಒಳಿತು. ಮಧುಮೇಹ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದರೆ ರಾಗಿ ಮತ್ತು ಜೋಳದ ರೊಟ್ಟಿಗಳು ಒಳ್ಳೆಯದು. ಹೆಚ್ಚು ಸಮತೋಲಿತ ಆಹಾರದ ಬಗ್ಗೆ ಗಮನ ಹೊಂದಿದ್ದರೆ ಬಹುಧಾನ್ಯಗಳ ರೊಟ್ಟಿ ಒಳ್ಳೆಯ ಆಯ್ಕೆ. ತೂಕ ಇಳಿಸುವುದು ಮುಖ್ಯ ಉದ್ದೇಶವಾಗಿದ್ದರೆ ಜೋಳದ ರೊಟ್ಟಿ ಸೂಕ್ತವಾದದ್ದು.

Continue Reading

ಆರೋಗ್ಯ

Colour In Food: ನಾವು ಸೇವಿಸುವ ಕಲ್ಲಂಗಡಿ ಸುರಕ್ಷಿತವೇ?; ಆಹಾರ ತಜ್ಞರು ಏನು ಹೇಳಿದ್ದಾರೆ?

ಕೆಂಪುಕೆಂಪಾಗಿರುವ ಕಲ್ಲಂಗಡಿ ಹಣ್ಣುಗಳಿಗೆ ನಿಜವಾಗಲೂ ಬಣ್ಣ ಬರಲು (Colour In Food) ಚುಚ್ಚು ಮದ್ದು ನೀಡಲಾಗುತ್ತದೆಯೇ? ಈ ಕುರಿತು ಆಹಾರ ತಜ್ಞರು ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

By

Color In Food
Koo

ಮಾರುಕಟ್ಟೆಯಲ್ಲಿ (market) ಕೆಂಪು ಕೆಂಪಾಗಿರುವ (Colour In Food) ಕಲ್ಲಂಗಡಿ (Watermelon) ಹಣ್ಣನ್ನು ಕಂಡರೆ ಎಂಥವರ ಬಾಯಲ್ಲೂ ನೀರೂರುತ್ತದೆ. ಆದರೆ ಇತ್ತೀಚೆಗಂತೂ ಈ ಹಣ್ಣುಗಳಿಗೆ ಚುಚ್ಚು ಮದ್ದು (inject the harmful colour) ನೀಡಲಾಗುತ್ತದೆ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ (social media) ಭಾರಿ ಚರ್ಚೆಯಾಗುತ್ತಿದೆ. ಆದರೆ ಇದು ನಿಜ ಹೌದೋ ಅಲ್ಲವೋ ಎನ್ನುವ ಕುರಿತು ಆಹಾರ ತಜ್ಞರು (Food expert) ಹೇಳುವುದೇನು ಗೊತ್ತೇ?

ಮಾರುಕಟ್ಟೆಯಲ್ಲಿ ಸಿಗುವ ಕಲ್ಲಂಗಡಿ ಹಣ್ಣುಗಳ ಬಗ್ಗೆ ಚಿಂತಿಸುವುದು ಬಿಡಿ. ಇದಕ್ಕೆ ಹಾನಿಕಾರಕ ಬಣ್ಣಗಳಿಂದ ಚುಚ್ಚಲಾಗುತ್ತದೆ ಎಂಬ ವರದಿ ಸರಿಯಲ್ಲ ಎಂದು ಆಹಾರ ಪರಿಣತರು ಹೇಳಿದ್ದಾರೆ.

ಹಣ್ಣು ಮಾರಾಟಗಾರರು ಕಲ್ಲಂಗಡಿಗಳಿಗೆ ರೆಡ್-ಬಿ ಎಂದು ಕರೆಯಲ್ಪಡುವ ಹಾನಿಕಾರಕ ಬಣ್ಣದ ಎರಿಥ್ರೋಸಿನ್- ಬಿ ಅನ್ನು ಚುಚ್ಚುತ್ತಾರೆ ಎನ್ನುವ ಮಾಧ್ಯಮ ವರದಿಗಳ ಕುರಿತು ಮಾಧ್ಯಮದವರನ್ನು ಹಿರಿಯ ಆಹಾರ ಪರಿಣತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅವರ ಪ್ರಕಾರ, ಕಲ್ಲಂಗಡಿ ಹಣ್ಣಿಗೆ ಒಂದೇ ಸ್ಥಳದಲ್ಲಿ ಬಣ್ಣವನ್ನು ಚುಚ್ಚುವುದರಿಂದ ನಿರ್ದಿಷ್ಟ ಭಾಗದಲ್ಲಿ ಮಾತ್ರ ಹಣ್ಣು ಕೆಂಪಾಗಲು ಸಾಧ್ಯ. ಸಂಪೂರ್ಣ ಹಣ್ಣು ಕೆಂಪಾಗುವುದಿಲ್ಲ. ಒಂದು ಸ್ಥಳದಲ್ಲಿ ಕಲ್ಲಂಗಡಿಗೆ ಬಣ್ಣವನ್ನು ಚುಚ್ಚಿದರೆ ಅಲ್ಲಿನ ಪ್ರದೇಶ ಮಾತ್ರ ಬಣ್ಣ ಪಡೆಯುತ್ತದೆ. ಆದರೆ ಮಾಧ್ಯಮಗಳಲ್ಲಿ ತೋರಿಸಿರುವ ಹಣ್ಣುಗಳು ಸಂಪೂರ್ಣವಾಗಿ, ಸಮವಾಗಿ ಕೆಂಪು ಬಣ್ಣದಲ್ಲಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಅವರು ಇದರಲ್ಲಿ ಫೋಟೋಶಾಪ್ ಕಾರ್ಯನಿರ್ವಹಿಸಿದೆ.


ಅನೇಕ ಮಂದಿ ಕಲ್ಲಂಗಡಿಯಲ್ಲಿ ಬಳಸುವ ಸಾಮಾನ್ಯ ಕಲಬೆರಕೆ ಎರಿಥ್ರೋಸಿನ್ ಬಿ ಎಂದು ಹೇಳಿದ್ದಾರೆ. ಇದು ಕೆಂಪು ಬಣ್ಣವಾಗಿದ್ದು ಅದು ಹಣ್ಣನ್ನು ಮಾಗಿದ ಮತ್ತು ರಸಭರಿತವಾಗಿ ಕಾಣುವಂತೆ ಮಾಡುತ್ತದೆ. ಇದು ಕಲ್ಲಂಗಡಿಗಳ ಬಾಳಿಕೆ ಅವಧಿಯನ್ನು ಹೆಚ್ಚಿಸುತ್ತದೆ ಎನ್ನಲಾಗುತ್ತದೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಇದರ ವಿಡಿಯೋ ಭಾರಿ ವೈರಲ್ ಆಗಿದೆ. ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಕ್ಲಿಪ್ ನಲ್ಲಿ ಈ ಪ್ರಯೋಗ ಮಾಡುತ್ತಿರುವ ವ್ಯಕ್ತಿಯೊಬ್ಬ ಕಲ್ಲಂಗಡಿಗೆ ರಾಸಾಯನಿಕಗಳನ್ನು ಚುಚ್ಚುತ್ತಿರುವುದನ್ನು ಕಾಣಬಹುದು.


ಎರಿಥ್ರೋಸಿನ್ ಬಿ ಸೇವನೆ ಪರಿಣಾಮ

WebMD ಪ್ರಕಾರ, ಎರಿಥ್ರೋಸಿನ್ ಬಿ ಸೇವನೆಯಿಂದ ವಾಕರಿಕೆ, ವಾಂತಿ, ಅತಿಸಾರ, ಹೊಟ್ಟೆ ನೋವು ಮತ್ತು ಹಸಿವಾಗದಿರುವುದಕ್ಕೆ ಕಾರಣವಾಗಬಹುದು. ಪ್ರಸ್ತುತ ಸಂಶೋಧನೆ ಮತ್ತು ಆಹಾರ ವಿಜ್ಞಾನ ಜರ್ನಲ್‌ನಲ್ಲಿನ ಅಧ್ಯಯನವು ಈ ವಿಷಕಾರಿ ಸಂಯುಕ್ತವು ಗರ್ಭಿಣಿಯರ ಹೊಟ್ಟೆಯಲ್ಲಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಬಂಜೆತನದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: Fruit Juice Side Effects: ಹಣ್ಣು ತಿಂದರೆ ಒಳ್ಳೆಯದೋ, ಹಣ್ಣಿನ ಜ್ಯೂಸ್‌ ಕುಡಿದರೆ ಒಳ್ಳೆಯದೋ?

ಈ ಚುಚ್ಚುಮದ್ದು ಹಾಕಿರುವ ಹಣ್ಣುಗಳು ವೇಗವಾಗಿ ಕೊಳೆಯಲು ಪ್ರಾರಂಭಿಸುತ್ತದೆ. ಹೀಗಾಗಿ ಇದು ಹೆಚ್ಚಿನ ಕಲ್ಲಂಗಡಿಗಳಿಗೆ ಬಳಸಲು ಸಾಧ್ಯವಿಲ್ಲ ಎಂದು ಆಹಾರ ಪರಿಣತರು ಹೇಳಿದ್ದಾರೆ.

ಚುಚ್ಚುಮದ್ದುಗಳನ್ನು ಹಾಕಿರುವ ಹಣ್ಣುಗಳಲ್ಲಿ ರಂಧ್ರಗಳು ಕಾಣಿಸುತ್ತವೆ. ಭಾರತದ ಬೇಸಿಗೆಯಲ್ಲಿ ಈ ಹಣ್ಣುಗಳು ವೇಗವಾಗಿ ಕೊಳೆಯಲು ಕಾರಣವಾಗುತ್ತವೆ. ಹೀಗಾಗಿ ಭಾರತೀಯ ರೈತರು ಈ ಅಪಾಯವನ್ನು ತೆಗೆದುಕೊಳ್ಳುವುದಿಲ್ಲ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಪ್ರಮುಖ ಸುದ್ದಿ

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Rameshwaram Cafe : ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Rameshwaram Cafe
Koo

ಹೈದರಾಬಾದ್: ಹೈಟೆಕ್​ ರೀತಿಯಲ್ಲಿ ದೋಸೆ ಸೇರಿದಂತೆ ಆಹಾರ ಪದಾರ್ಥಗಳನ್ನು ತಯಾರಿ ಮಾಡುವ ಮತ್ತು ದಕ್ಷಿಣ ಭಾರತದ ಉಪಾಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ (Rameshwaram Cafe) ಮೇಲೆ ಹೈದರಾಬಾದ್​​ನ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಗುರುವಾರ ರೆಸ್ಟೋರೆಂಟ್ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬಂದಿದ್ದರಿಂದ ಅನೇಕ ಉಲ್ಲಂಘನೆಗಳನ್ನು ಕಂಡುಕೊಂಡಿದ್ದಾರೆ. ರಾಮೇಶ್ವರಂ ಕೆಫೆ ಕೆಲವು ತಿಂಗಳ ಹಿಂದೆ ರಾಷ್ಟ್ರ ಮಟ್ಟದ ಸುದ್ದಿಗೆ ಗ್ರಾಸವಾಗಿತ್ತು. ಬೆಂಗಳೂರಿನ ವೈಟ್​ಫೀಲ್ಡ್​ ಶಾಖೆಯ ಮೇಲೆ ಬಾಂಬ್​ ದಾಳಿ ನಡೆದ ಬಳಿಕ ಸಂಚಲನ ಮೂಡಿಸಿತ್ತು. ಈ ಪ್ರಕರಣದ ಬಗ್ಗೆ ಈಗಲೂ ತನಿಖೆ ನಡೆಯುತ್ತಿದೆ.

ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 450 ಕೆ.ಜಿ ಹಸಿ ಅಕ್ಕಿ, 300 ಕೆಜಿ ಲೇಬಲ್ ಮಾಡದ ಬೆಲ್ಲವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಏತನ್ಮಧ್ಯೆ, ಆಹಾರ ತಯಾರಿಸುವವರಿಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರವನ್ನು ಸಲ್ಲಿಸಲಾಗಿಲ್ಲ ಮತ್ತು ರಾಮೇಶ್ವರಂ ಕೆಫೆಯಲ್ಲಿ ಕಸದ ಬುಟ್ಟಿಗಳನ್ನು ಮುಚ್ಚಳಗಳಿಂದ ಮುಚ್ಚಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನೇಕ ಕಡೆ ದಾಳಿ

ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹೈದರಾಬಾದ್​ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದ್ದಾರೆ ಮತ್ತು ಅನೇಕ ಜನಪ್ರಿಯ ತಿನಿಸುಗಳ ಅಂಗಡಿಗಳು ನೈರ್ಮಲ್ಯ ಮಾನದಂಡಗಳನ್ನು ಕಾಪಾಡಿಕೊಳ್ಳದಿರುವುದು ಕಂಡುಬಂದಿದೆ. ಅದೇ ದಿನ, ಬಾಹುಬಲಿ ಕಿಚನ್ ಎಂಬ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಲಾಗಿದೆ. ಸಂಗ್ರಹಿಸಿದ ಆಹಾರ ಪದಾರ್ಥಗಳಲ್ಲಿ ಜಿರಳೆಗಳು ಕಂಡುಬಂದಿದ್ದವು. ರೆಸ್ಟೋರೆಂಟ್​ನ ಅಡುಗೆಮನೆಯ ಆವರಣವು ತುಂಬಾ ಅನೈರ್ಮಲ್ಯ ಸ್ಥಿತಿಯಲ್ಲಿ ಕಂಡುಬಂದಿದ್ದು, ರೆಸ್ಟೋರೆಂಟ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಇತ್ತೀಚೆಗೆ ತನ್ನ ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ (ಕ್ಯೂಎಸ್ಆರ್) ಜಾಲವನ್ನು ಟೆಕ್ ರಾಜಧಾನಿ ಬೆಂಗಳೂರಿನಿಂದ ವಿಸ್ತರಿಸಿದೆ. ಈ ವರ್ಷದ ಜನವರಿಯಲ್ಲಿ ಹೈದರಾಬಾದ್​ನ ಮಾಧಾಪುರ ಪ್ರದೇಶದಲ್ಲಿ ಹೋಟೆಲ್​ ಪ್ರಾರಂಭಿಸಲಾಗಿತ್ತು. ಈ ಕೆಫೆಯು ತುಪ್ಪದ ಇಡ್ಲಿ ಮತ್ತು ದೋಸೆಗಳಿಗೆ ಹೆಸರುವಾಸಿಯಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಹೋಟೆಲ್​ನ ಆಹಾರ ಪ್ರಿಯರಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಸಂಪೂರ್ಣ ಜನದಟ್ಟಣೆಯ ರೆಸ್ಟೋರೆಂಟ್ ಗೆ ಅನೇಕ ಸೆಲೆಬ್ರಿಟಿಗಳು ಆಗಾಗ್ಗೆ ಭೇಟಿ ನೀಡುತ್ತಾರೆ. ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಶಾಖೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕಾಗಿ ಸುದ್ದಿಯಲ್ಲಿತ್ತು. ಮಾರ್ಚ್ 1 ರಂದು ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದರು.

Continue Reading

Latest

Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ನೈಸರ್ಗಿಕವಾಗಿ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಆಯುರ್ವೇದ ಸೂಚಿಸುವ ಏಳು ಗಿಡಮೂಲಿಕೆ ಪಾನೀಯಗಳು ಇವೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹವನ್ನು (Diabetes Management Tips) ನಿಯಂತ್ರಿಸಬಹುದು.

VISTARANEWS.COM


on

By

Diabetes Management Tips
Koo

ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರನ್ನು ಕಾಡುವ ಕಾಯಿಲೆ ರಕ್ತದೊತ್ತಡ (blood pressure) ಮತ್ತು ಮಧುಮೇಹ (diabetes). ರಕ್ತದೊತ್ತಡವಾದರೆ ಬಹುಬೇಗನೆ ತನ್ನ ಇರುವಿಕೆಯನ್ನು ಸೂಚಿಸುತ್ತದೆ. ಆದರೆ ಮಧುಮೇಹ ಹೆಚ್ಚಿನವರಿಗೆ ಗೊತ್ತೇ ಆಗುವುದಿಲ್ಲ. ಮಧುಮೇಹದಿಂದ ಬಳಲುತ್ತಿರುವವರು ನೀವಾಗಿದ್ದರೆ ನೈಸರ್ಗಿಕವಾಗಿ ದೇಹದಲ್ಲಿ ಇನ್ಸುಲಿನ್ (insulin) ಉತ್ಪಾದನೆಯನ್ನು ಹೆಚ್ಚಿಸುವ ಹಲವು ಆಯುರ್ವೇದ ಗಿಡಮೂಲಿಕೆಯ (Ayurvedic herbal) ಪಾನೀಯಗಳಿವೆ.

ಮಧುಮೇಹವು ಇಂದು ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಕಾಡುತ್ತಿರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಆರೋಗ್ಯಕರ ಜೀವನ ನಡೆಸಲು ಮಧುಮೇಹದ ಲಕ್ಷಣಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅತ್ಯಗತ್ಯ. ಪುರಾತನ ಭಾರತೀಯ ವೈದ್ಯಕೀಯ ಪದ್ಧತಿಯಾದ ಆಯುರ್ವೇದವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ನೈಸರ್ಗಿಕ ಚಿಕಿತ್ಸೆಗಳನ್ನು ಶಿಫಾರಸು ಮಾಡುತ್ತದೆ. ಮಧುಮೇಹದ ರೋಗಲಕ್ಷಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಹಾಯ ಮಾಡುವ ಏಳು ಪ್ರಸಿದ್ಧ ಆಯುರ್ವೇದ ಪಾನೀಯಗಳಿವೆ.

ಆಯುರ್ವೇದವು ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸಲು ನೈಸರ್ಗಿಕ ಪದಾರ್ಥಗಳ ಬಳಕೆಯನ್ನು ಪ್ರೋತ್ಸಾಹಿಸುತ್ತದೆ. ಆಯುರ್ವೇದದ ಪಾನೀಯಗಳು ಔಷಧೀಯ ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಹಣ್ಣುಗಳನ್ನು ದೈನಂದಿನ ಜೀವನದಲ್ಲಿ ಸೇರಿಸಲು ನೆಚ್ಚಿನ ವಿಧಾನವಾಗಿದೆ. ಇದು ಕೇವಲ ರುಚಿಕರವಲ್ಲ ಆದರೆ ಸುಧಾರಿತ ಸೇರಿದಂತೆ ಆರೋಗ್ಯ ಪ್ರಯೋಜನಗಳಿಂದ ಕೂಡಿದೆ.


ದಾಲ್ಚಿನ್ನಿ ಮತ್ತು ಮೆಂತ್ಯ

ದಾಲ್ಚಿನ್ನಿ ಮತ್ತು ಮೆಂತ್ಯ ಮಧುಮೇಹ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ದಾಲ್ಚಿನ್ನಿ ಮತ್ತು ಮೆಂತ್ಯಯೊಂದಿಗೆ ಒಂದು ಕಪ್ ಚಹಾ ಮಾಡಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಇನ್ಸುಲಿನ್ ಹೆಚ್ಚಿಸುತ್ತದೆ. ಉತ್ಕರ್ಷಣ ನಿರೋಧಕಗಳಿಂದ ತುಂಬಿರುವ ಈ ಪದಾರ್ಥಗಳು ಮಧುಮೇಹ ರೋಗಲಕ್ಷಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.

ಹಾಗಲಕಾಯಿ

ಹಾಗಲಕಾಯಿಯನ್ನು ಆಯುರ್ವೇದದಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುವ ಪರಿಣಾಮಕ್ಕಾಗಿ ಪ್ರಶಂಸಿಸಲಾಗುತ್ತದೆ. ಇದರ ರಸವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸಮತೋಲನಗೊಳಿಸಬಹುದು. ನೈಸರ್ಗಿಕವಾಗಿ ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಬಹುದು.


ನೆಲ್ಲಿಕಾಯಿ

ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಆಮ್ಲಾ ಜ್ಯೂಸ್ ಮಧುಮೇಹವನ್ನು ನಿರ್ವಹಿಸಲು ಪ್ರಸಿದ್ಧವಾದ ಆಯುರ್ವೇದ ಟಾನಿಕ್ ಆಗಿದೆ. ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿರುವ ಆಮ್ಲಾವು ಮೇದೋಜ್ಜೀರಕ ಗ್ರಂಥಿಯ ಕಾರ್ಯಗಳನ್ನು ಮತ್ತು ಇನ್ಸುಲಿನ್ ಸ್ರವಿಸುವಿಕೆಯನ್ನು ಸುಧಾರಿಸುತ್ತದೆ. ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.

ಅರಿಶಿನ

ಅರಿಶಿನವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಮಲಗುವ ಮುನ್ನ ಅರಿಶಿನ ಬೆರೆಸಿದ ಹಾಲನ್ನು ಕುಡಿಯುವುದು ಉರಿಯೂತವನ್ನು ಕಡಿಮೆ ಮಾಡುತ್ತದೆ, ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಉತ್ತಮ ನಿದ್ರೆಗೆ ಕಾರಣವಾಗುತ್ತದೆ. ಅರಿಶಿನದಲ್ಲಿರುವ ಅಗತ್ಯ ಸಂಯುಕ್ತವಾದ ಕರ್ಕ್ಯುಮಿನ್ ಸ್ವಾಭಾವಿಕವಾಗಿ ಮಧುಮೇಹದ ಲಕ್ಷಣಗಳನ್ನು ನಿರ್ವಹಿಸಬಲ್ಲದು.

ಬೇವಿನ ಎಲೆ

ಔಷಧೀಯ ಗುಣಗಳು ಸಮೃದ್ಧವಾಗಿರುವ ಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಸ್ವಲ್ಪ ಕಹಿಯಾಗಿದ್ದರೂ, ಬೇವಿನ ಎಲೆಯ ಚಹಾವು ಪರಿಣಾಮಕಾರಿ ಆಯುರ್ವೇದ ಪಾನೀಯವಾಗಿದ್ದು ಅದು ರಕ್ತದಲ್ಲಿನ ಗ್ಲೂಕೋಸ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ.


ನಿಂಬೆ ಮತ್ತು ಶುಂಠಿ

ನಿಂಬೆ ಮತ್ತು ಶುಂಠಿ ಆರೋಗ್ಯದ ಪರಿಣಾಮಗಳಿಗೆ ಹೆಸರುವಾಸಿಯಾಗಿದೆ. ಶುಂಠಿ ಮತ್ತು ನಿಂಬೆಯ ಬೆಚ್ಚಗಿನ ಪಾನೀಯವು ದೇಹವನ್ನು ನಿರ್ವಿಷಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಇದು ನೈಸರ್ಗಿಕವಾಗಿ ಇನ್ಸುಲಿನ್ ಉತ್ಪಾದನೆ ಮಾಡುತ್ತದೆ.

ಇದನ್ನೂ ಓದಿ: FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ತ್ರಿಫಲ

ಆಯುರ್ವೇದ ಗಿಡಮೂಲಿಕೆಗಳ ಮಿಶ್ರಣವು ಮೂರು ಹಣ್ಣುಗಳನ್ನು ಒಳಗೊಂಡಿದೆ: ಆಮ್ಲಾ, ಬಿಭಿಟಕಿ ಮತ್ತು ಹರಿತಕಿ. ತ್ರಿಫಲಾ ಚಹಾವು ಒಟ್ಟಾರೆ ಆರೋಗ್ಯ ಮತ್ತು ಜೀರ್ಣಕಾರಿ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ. ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ ಮತ್ತು ಕರುಳಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ.

Continue Reading
Advertisement
Bhavani Revanna
ಕರ್ನಾಟಕ3 mins ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Team India's T20 WC Jersey
ಕ್ರೀಡೆ5 mins ago

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Missing Case
ಕರ್ನಾಟಕ19 mins ago

Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

Prajwal Revanna Case
ಕರ್ನಾಟಕ25 mins ago

Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

Virat Kohli
ಕ್ರೀಡೆ43 mins ago

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

PM Narendra Modi
ದೇಶ56 mins ago

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

Arvind Kejriwal
ದೇಶ57 mins ago

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Love Jihad
ಪ್ರಮುಖ ಸುದ್ದಿ1 hour ago

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ1 hour ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ1 hour ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ21 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌