Independence Day | ಕರಿಯಂಗಳ, ಕುಕ್ಕಿಪ್ಪಾಡಿ, ಕಡೇಶ್ವಾಲ್ಯದಲ್ಲಿ ಧ್ವಜಾರೋಹಣ - Vistara News

ದಕ್ಷಿಣ ಕನ್ನಡ

Independence Day | ಕರಿಯಂಗಳ, ಕುಕ್ಕಿಪ್ಪಾಡಿ, ಕಡೇಶ್ವಾಲ್ಯದಲ್ಲಿ ಧ್ವಜಾರೋಹಣ

ಬಂಟ್ವಾಳ ತಾಲೂಕಿನ ಕರಿಯಂಗಳ, ಕುಕ್ಕಿಪ್ಪಾಡಿ, ಕಡೇಶ್ವಾಲ್ಯ ಗ್ರಾಪಂ ವ್ಯಾಪ್ತಿಯ ಅಮೃತ ಸರೋವರದ ಬಳಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

VISTARANEWS.COM


on

Independence Day
ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕುಟ ಕೊಳದ ಬಳಿ ಅಮೃತ ಸರೋವರದ ಬಳಿ ಸ್ವಾಂತಂತ್ರ್ಯೋತ್ಸವ ಆಚರಿಸಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ(Independence Day) ಅಂಗವಾಗಿ ಬಂಟ್ವಾಳ ತಾಲೂಕಿನ ಕರಿಯಂಗಳ, ಕುಕ್ಕಿಪ್ಪಾಡಿ, ಕಡೇಶ್ವಾಲ್ಯ ಗ್ರಾಪಂ ವ್ಯಾಪ್ತಿಯ ಅಮೃತ ಸರೋವರದ ಬಳಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕರಿಯಂಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕುಟ ಕೊಳದ ಬಳಿ ಅಮೃತ ಸರೋವರದ ಬಳಿ ಧ್ವಜಾರೋಹಣವನ್ನು ಮಾಜಿ ಸೈನಿಕರಾದ ಅನೀಶ್‌ ಎ.ಎಲ್.‌ ಅವರು ನೆರವೇರಿಸಿದರು. ಸಾಧಕರಿಗೆ ಸನ್ಮಾನ, ಅಭಿನಂದನೆ ಹಾಗೂ ಆಟೋಟಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಶಾಸಕರಾದ ರಾಜೇಶ್‌ ನಾಯ್ಕ್‌ ಕಾರ್ಯಕ್ರಮವನ್ನು ಉದ್ದೆಶಿಸಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಪಂಚಾಯಿತಿ ಪ್ರಭಾರ ಸಹಾಯಕ ನಿರ್ದೇಶಕ ದಿನೇಶ್ ಎಂ, ಪಂಚಾಯತ್ ರಾಜ್ ಎಂಜಿನಿಯರಿಂಗ್‌ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ತಾರಾನಾಥ ಸಾಲಿಯಾನ್, ಗ್ರಾಪಂ ಪಿಡಿಒ ಮಾಲಿನಿ, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

ಇದೇ ವೇಳೆ ಗ್ರಾಪಂ ಸಂಜೀವಿನಿ ಒಕ್ಕೂಟದ ವಾರದ ಸಂತೆ ನಡೆಯಿತು. ಇದಕ್ಕೂ ಮುನ್ನ ವಿವಿಧ ಶಾಲೆಗಳ 300ಕ್ಕೂ ಹೆಚ್ಚು ಮಕ್ಕಳಿಂದ ಜಾಥಾ ನಡೆಯಿತು. ಕರಿಯಂಗಳ ಗ್ರಾಪಂ ವ್ಯಾಪ್ತಿಯ ಕಲ್ಕುಟ ಕೊಳದ ಬಳಿ ಅಮೃತ ಸರೋವರದ ಸಂಪೂರ್ಣ ಅಭಿವೃದ್ಧಿ ರೂಪುರೇಷೆ ಬಿಂಬಿಸುವ ಫ್ಲೆಕ್ಸ್‌ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು

ಅದೇ ರೀತಿ ಕುಕ್ಕಿಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ಯಾರು ಅಮೃತ ಸರೋವರದ ಬಳಿ ಧ್ವಜಾರೋಹಣವನ್ನು ಮಾಜಿ ಸೈನಿಕರಾದ ದಯಾನಂದ ಶೆಟ್ಟಿ‌ ಅವರು ನೆರವೇರಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಯಿತು. ಗ್ರಾಪಂ ಅಧ್ಯಕ್ಷರಾದ ಸುಜಾತಾ, ಉಪಾಧ್ಯಕ್ಷರಾದ ಯೋಗೀಶ್‌ ಆಚಾರ್ಯ, ಗ್ರಾಪಂ ಸದಸ್ಯರು, ಗ್ರಾಪಂ ಪಿಡಿಒ ತುಳಸಿ, ಗ್ರಾಮಸ್ಥರು ಹಾಜರಿದ್ದರು.

ಹಾಗೇಯೇ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಪಂ ಪಂಚಾಯತ್‌ ವ್ಯಾಪ್ತಿಯ ಕಲ್ಲಾಜೆ ಅಮೃತ ಸರೋವರದ ಬಳಿ ಧ್ವಜಾರೋಹಣವನ್ನು ಮಾಜಿ ಸೈನಿಕರಾದ ವಿದ್ಯಾಧರ್‌ ಪೂಜಾರಿ ಅವರು ನೆರವೇರಿಸಿದರು. ಗ್ರಾಪಂ ಅಧ್ಯಕ್ಷರಾದ ಸುರೇಶ ಶೆಟ್ಟಿಗಾರ್‌, ಉಪಾಧ್ಯಕ್ಷರಾದ ಜಯ, ಗ್ರಾಪಂ ಸದಸ್ಯರು, ಗ್ರಾಪಂ ಪಿಡಿಒ ಸುನೀಲ್‌ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಬಳಿಕ 250ಕ್ಕೂ ಹೆಚ್ಚು ಮಕ್ಕಳಿಂದ ಜಾಥಾ ನಡೆಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Robbery Case: ಐಟಿ ದಾಳಿ ಮಾದರಿಯಲ್ಲಿ ಬಂದು ದರೋಡೆಗೆ ಯತ್ನಿಸಿದ ಖದೀಮರು! ಲೂಟಿ ವಿಫಲಗೊಳಿಸಿದ ಲೈವ್‌ ಸೆಕ್ಯುರಿಟಿ

Robbery Case: ಸುಮಾರು 6-8 ಜನರು ಇದ್ದ ಈ ದುಷ್ಕರ್ಮಿಗಳ ಟೀಮ್‌ನಲ್ಲಿ ಎಲ್ಲರೂ ಟಿಪ್‌ಟಾಪಾಗಿ ದಿರಿಸು ತೊಟ್ಟಿದ್ದರು. ಅವರಲ್ಲಿ ಒಬ್ಬಾತ ಪೊಲೀಸ್ ಪೇದೆಯಂತೆ ಡ್ರೆಸ್‌ ಧರಿಸಿದ್ದ. ಸಿಸಿಟಿವಿಯಲ್ಲಿ ಮುಖ ಕಾಣದಂತೆ ನೋಡಿಕೊಳ್ಳಲು ಇವರು ಯತ್ನಿಸಿದ್ದಾರೆ.

VISTARANEWS.COM


on

robbery case brahmavara
Koo

ಉಡುಪಿ:‌ ಐಟಿ ದಾಳಿ (IT Raid) ಮಾದರಿಯಲ್ಲಿ ತಂಡ ಕಟ್ಟಿಕೊಂಡು ಬಂದ ಅಪರಿಚಿತ ದುಷ್ಕರ್ಮಿಗಳು (Miscreants) ಮನೆ ಲೂಟಿಗೆ (Robbery Case) ಪ್ರಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ಸೈನ್‌ ಇನ್‌ ಸೆಕ್ಯುರಿಟಿ (Sign In Security) ಸಂಸ್ಥೆಯ ಲೈವ್ ಸರ್ವೈಲೆನ್ಸ್‌ (Live Surveillance) ಹಾಗೂ ತಕ್ಷಣ ಅಲರ್ಟ್‌ ನೀಡಿದ ಪರಿಣಾಮ ಮನೆಯವರು ಬಾಗಿಲು ತೆಗೆಯದೇ ಇದ್ದುದರಿಂದ, ಸಂಭಾವ್ಯ ದರೋಡೆಯಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ಘಟನೆ ನಡೆದಿದೆ. ಕವಿತಾ ಎಂಬವರ ಮನೆಗೆ ಅಪರಿಚಿತ ದುಷ್ಕರ್ಮಿಗಳು ಎರಡು ಇನ್ನೋವಾ ಹಾಗೂ ಸ್ವಿಫ್ಟ್‌ ಕಾರುಗಳಲ್ಲಿ ಸರ್ಕಾರಿ ಅಧಿಕಾರಿಗಳಂತೆ ಆಗಮಿಸಿದ್ದಾರೆ. ಜುಲೈ 25ರ ಬೆಳಗ್ಗೆ 8.30ರ ವೇಳೆಗೆ, ಮಳೆ ಸುರಿಯುತ್ತಿದ್ದಾಗ ಹಾಗೂ ಯಾರೂ ಇಲ್ಲದ ಸಮಯ ನೋಡಿ ತಂಡ ಆಗಮಿಸಿತ್ತು. ಗೇಟ್‌ ತಳ್ಳಿ ತೆರೆಯಲು ಯತ್ನಿಸಿ, ಅದು ತೆರೆದುಕೊಳ್ಳದೆ ಇದ್ದಾಗ ಮುರಿಯಲು ನೋಡಿದ್ದಾರೆ.

ಗೇಟ್‌ ತೆರೆಯದೆ ಇದ್ದಾಗ ಇನ್ನೊಂದು ಕಡೆಯಿಂದ ಕಂಪೌಂಡ್ ಜಿಗಿದು ಆವರಣ ಪ್ರವೇಶಿಸಿ ಬಾಗಿಲು ಬಡಿದು ಮನೆಯವರನ್ನು ಕರೆದಿದ್ದಾರೆ. ಆದರೆ ಈ ಮನೆಗೆ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಲೈವ್ ಸರ್ವೈಲೆನ್ಸ್‌ ಅಳವಡಿಸಿದ್ದ ಕಾರಣ, ಸಂಸ್ಥೆಯವರು ಕೂಡಲೇ ಮನೆ ಮಾಲಕಿಗೆ ಅಲರ್ಟ್‌ ನೀಡಿದ್ದಾರೆ. ಯಾರೋ ಅಕ್ರಮವಾಗಿ ಕೌಂಪೌಂಡ್‌ ಪ್ರವೇಶಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಎಚ್ಚೆತ್ತುಕೊಂಡ ಮಾಲಕಿ ಬಾಗಿಲು ತೆರೆದಿಲ್ಲ. ಸ್ವಲ್ಪ ಹೊತ್ತು ಕಾದು ಈ ಪುಂಡರ ತಂಡ ಮರಳಿ ಹೋಗಿದೆ.

ಸಿಸಿಟಿವಿಯಲ್ಲಿ ಅಪರಿಚಿತ ತಂಡದ ಕೃತ್ಯದ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಕುಂದಾಪುರ ವ್ಯಾಪ್ತಿಯಲ್ಲಿ ಹಲವು ಕಳ್ಳತನಗಳನ್ನು ಸೈನ್ ಇನ್ ಸೆಕ್ಯೂರಿಟಿ ವಿಫಲಗೊಳಿಸಿದೆ. ಇದು ಸಿಸಿಟಿವಿ ಅಳವಡಿಸಿರುವ ಮನೆಗೆ 24 ಗಂಟೆಯೂ ಭದ್ರತೆ ನೀಡುತ್ತದೆ. ಯಾವುದಾದ್ರೂ ಅನಪೇಕ್ಷಿತ ಬೆಳವಣಿಗೆ ಕಂಡರೆ ಅಲರ್ಟ್ ಮಾಡುತ್ತದೆ.

ಸುಮಾರು 6-8 ಜನರು ಇದ್ದ ಈ ದುಷ್ಕರ್ಮಿಗಳ ಟೀಮ್‌ನಲ್ಲಿ ಎಲ್ಲರೂ ಟಿಪ್‌ಟಾಪಾಗಿ ದಿರಿಸು ತೊಟ್ಟಿದ್ದರು. ಅವರಲ್ಲಿ ಒಬ್ಬಾತ ಪೊಲೀಸ್ ಪೇದೆಯಂತೆ ಡ್ರೆಸ್‌ ಧರಿಸಿದ್ದ. ಸಿಸಿಟಿವಿಯಲ್ಲಿ ಮುಖ ಕಾಣದಂತೆ ನೋಡಿಕೊಳ್ಳಲು ಇವರು ಯತ್ನಿಸಿದ್ದಾರೆ. ಮನೆ ಮಾಲಕಿ ಕವಿತಾ ಅವರು ಈ ಬಗ್ಗೆ ದೂರು ನೀಡಿದ್ದಾರೆ. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಕಸದ ಲಾರಿ (BBMP Lorry) ಮತ್ತೆರಡು ಬಲಿ (Road Accident) ಪಡೆದುಕೊಂಡಿದೆ. ನಗರದ ಹೃದಯ ಭಾಗದ ಕೆಆರ್ ಸರ್ಕಲ್ (KR Circle) ಬಳಿ ಈ ದುರ್ಘಟನೆ ನಡೆದಿದೆ. ಮೃತರಿಬ್ಬರೂ ಟೆಕ್ಕಿಗಳಾಗಿದ್ದು, ಟಿಸಿಎಸ್‌ನಲ್ಲಿ (TCS) ಕೆಲಸ ಮಾಡುತ್ತಿದ್ದರು.

ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡುತ್ತಿದ್ದ ಯುವತಿ ಶಿಲ್ಪ, ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದೆ.

ಮೆಜೆಸ್ಟಿಕ್‌ದ ಕೆಆರ್ ಸರ್ಕಲ್ ಮಾರ್ಗವಾಗಿ ಇವರಿಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆಆರ್ ಸರ್ಕಲ್ ಕಡೆ ಕಸದ ಲಾರಿ ತೀವ್ರ ವೇಗದಿಂದ ಬಂದಿದೆ. ತಿರುವು ಇದ್ದ ಮಾರ್ಗದಲ್ಲಿ ಲಾರಿ ವೇಗವಾಗಿ ಬಂದ ಕಾರಣ ಕಸದ ಲಾರಿಯ ವೇಗದಿಂದ ತಪ್ಪಿಸಿಕೊಳ್ಳಲಾಗದೇ ಬೈಕ್‌ ಲಾರಿ ಕೆಳಗೆ ಸಿಲುಕಿಕೊಂಡಿದೆ.

ಮೃತರ ಮೇಲೆ ಹರಿದ ಕಸದ ಲಾರಿ ಸುಮಾರು 10 ಮೀಟರ್‌ನಷ್ಟು ದೂರ ದೇಹಗಳನ್ನು ಎಳೆದೊಯ್ದಿದೆ. ರಸ್ತೆ ಮೇಲೆ ರಕ್ತ ಚೆಲ್ಲಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಘಾತದ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗದಲ್ಲಿಯೇ ಇಬ್ಬರೂ ಮೃತ ಪಟ್ಟರು. ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಒಯ್ಯಲಾಗಿದೆ.

ಇದನ್ನೂ ಓದಿ: Police Firing: ದರೋಡೆ, ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ

Continue Reading

ಪ್ರಮುಖ ಸುದ್ದಿ

Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

Shiradi Landslide: ಶಿರಾಡಿ ಘಾಟಿಯ ಎಡಕುಮೇರಿ- ಕಡಗರವಳ್ಳಿ ಮಧ್ಯೆ ಭೂಕುಸಿತವಾಗಿ ರೈಲ್ವೆ ಹಳಿ ಮುಚ್ಚಿಹೋಗಿದೆ. ಆಗಸ್ಟ್ 10ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ಹೇಳಿದೆ. 14 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. 400 ಮಂದಿಯಿಂದ ರೈಲು ಹಳಿ ತೆರವು ಕಾಮಗಾರಿ ನಡೆಯುತ್ತಿದೆ. ಅದರೆ ಕಾಮಗಾರಿಗೆ ಭಾರಿ ಮಳೆ ಅಡ್ಡಿಯಾಗಿದೆ.

VISTARANEWS.COM


on

shiradi landslide railway track
Koo

ಬೆಂಗಳೂರು: ಶಿರಾಡಿ ಘಾಟಿಯಲ್ಲಿ (Shiradi Ghat) ರೈಲ್ವೇ ಹಳಿ (Railway Track) ಮೇಲೆ ಭಾರಿ ಭೂಕುಸಿತ (Shiradi Landslide) ಆಗಿರುವ ಪರಿಣಾಮ, ಬೆಂಗಳೂರು- ಮಂಗಳೂರು (Bengaluru Mangaluru Trains) ನಡುವೆ ಸಂಚರಿಸುವ ರೈಲುಗಳನ್ನು 15 ದಿನಗಳ ಕಾಲ ಬಂದ್ ಮಾಡಲಾಗಿದೆ. ಆಗಸ್ಟ್‌ 10ರವರೆಗೆ ಇಲ್ಲಿ ರೈಲು ಸಂಚಾರ (Trains Cancelled) ಇರುವುದಿಲ್ಲ.

ಶಿರಾಡಿ ಘಾಟಿಯ ಎಡಕುಮೇರಿ- ಕಡಗರವಳ್ಳಿ ಮಧ್ಯೆ ಭೂಕುಸಿತವಾಗಿ ರೈಲ್ವೆ ಹಳಿ ಮುಚ್ಚಿಹೋಗಿದೆ. ಆಗಸ್ಟ್ 10ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ಹೇಳಿದೆ. 14 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. 400 ಮಂದಿಯಿಂದ ರೈಲು ಹಳಿ ತೆರವು ಕಾಮಗಾರಿ ನಡೆಯುತ್ತಿದೆ. ಅದರೆ ಕಾಮಗಾರಿಗೆ ಭಾರಿ ಮಳೆ ಅಡ್ಡಿಯಾಗಿದೆ.

ರೈಲು ಸಂಚಾರ ರದ್ದಾದ ಬೆನ್ನಲ್ಲೇ ಬೆಂಗಳೂರು – ಮಂಗಳೂರು ನಡುವಿನ ಫ್ಲೈಟ್ ಟಿಕೇಟ್ ದರ ದುಪ್ಪಟ್ಟಾಗಿದೆ. ಸಾಮಾನ್ಯವಾಗಿ ಇರುತ್ತಿದ್ದ 3000- 3500 ರೂ. ದರ ಇದೀಗ 6604 ರೂಪಾಯಿಗೆ ಏರಿಕೆಯಾಗಿದೆ.

ಎಡಕುಮೇರಿ– ಕಡಗರವಳ್ಳಿ ನಡುವಿನ ದೋಣಿಗಲ್‌ನಲ್ಲಿ ಉಂಟಾಗಿರುವ ಗಂಭೀರ ಸ್ವರೂಪದ ಭೂಕುಸಿತದಿಂದ ಹಾನಿಗೀಡಾಗಿರುವ ರೈಲು ಮಾರ್ಗದ ದುರಸ್ತಿ ಕಾರ್ಯ ಹಗಲು ರಾತ್ರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ನಿರಂತರ ಮಳೆಯ ಸವಾಲಿನ ನಡುವೆಯೂ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ. ಅಗತ್ಯ ಸಲಕರಣೆಗಳೊಂದಿಗೆ ಕಾರ್ಮಿಕರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಹಗಲು ಪಾಳಿಯಲ್ಲಿ 200, ರಾತ್ರಿ ಪಾಳಿಯಲ್ಲಿ 120 ಹಾಗೂ ಇತರ 110 ಸಿಬಂದಿಯನ್ನು ನಿಯೋಜಿಸಲಾಗಿದೆ. ಸುರಕ್ಷೆಗೆ ಆದ್ಯತೆ ನೀಡಿ ಕಾಮಗಾರಿ ನಿರ್ವಹಿಸಲಾಗುತ್ತಿದೆ.

ಶುಕ್ರವಾರ ಸಂಜೆ ವೇಳೆ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿ ರೈಲು ಹಳಿಗೆ ಅಪಾಯ ಉಂಟಾಗಿತ್ತು. ಆರು ಹಿಟಾಚಿ ಯಂತ್ರಗಳು, ಐದು ಪೋಕ್ಲೈನ್‌ ಯಂತ್ರಗಳೂ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಭೂಕುಸಿತವಾದ ಜಾಗದಲ್ಲಿ ಮಣ್ಣನ್ನು ತಡೆದಿಡುವ ಕೆಲಸ ನಡೆಯುತ್ತಿದ್ದು, ಕಲ್ಲು ಬಂಡೆ, ಮರಳಿನ ಚೀಲ ಜೋಡಿಸಲಾಗುತ್ತಿದೆ. ಅದಕ್ಕೆ ಕಬ್ಬಿಣದ ನೆಟ್‌ (ಗೇಬಿಯನ್‌ ಮೆಷ್‌) ಮೂಲಕ ತಡೆಗೋಡೆ ನಿರ್ಮಿಸಲಾಗುತ್ತಿದೆ.

ಆಹಾರ ತಯಾರಿ, ಪೂರೈಕೆ ಹಾಗೂ ವೈದ್ಯಕೀಯ ತಂಡಗಳೂ ಸ್ಥಳದಲ್ಲಿವೆ. ಸುಬ್ರಹ್ಮಣ್ಯ ನಿಲ್ದಾಣದಿಂದ ಆಹಾರ, ನೀರು ಸರಬರಾಜು ಮಾಡಲಾಗುತ್ತಿದೆ. ದುರಸ್ತಿಗೆ ಬೇಕಾಗಿರುವ 8 ಜನರೇಟರ್‌ಗಳು, ಸಮರ್ಪಕ ಬೆಳಕಿನ ವ್ಯವಸ್ಥೆಯೊಂದಿಗೆ ಸಂಪರ್ಕ ನೆಟ್‌ವರ್ಕ್‌, ಇಂಟರ್‌ನೆಟ್‌ ವ್ಯವಸ್ಥೆಯನ್ನೂ ಮಾಡಲಾಗಿದೆ. ಸಂವಹನ ವ್ಯವಸ್ಥೆಗಳಾದ ಆಟೋ ಫೋನ್‌ಗಳು, ಕಂಟ್ರೋಲ್‌ ಫೋನ್‌, ಸ್ಯಾಟಲೈಟ್‌ ಫೋನ್‌, ವಿಎಸ್‌ಟಿಎ ಸಂವಹನ (ಲೈವ್‌ ಸ್ಟ್ರೀಮಿಂಗ್‌ಗಾಗಿ) ವ್ಯವಸ್ಥೆಗಳನ್ನು ಬಳಸಲಾಗುತ್ತಿದ್ದು, ಹುಬ್ಬಳ್ಳಿಯ ಕೇಂದ್ರ ಕಚೇರಿಯ ವಾರ್‌ ರೂಮ್‌ನಿಂದ ಸಂವಹನ ನಡೆಸಲಾಗುತ್ತಿದೆ.

ಯಾವ್ಯಾವ ರೈಲು ರದ್ದು?

ಮಂಗಳೂರು: ನಂ.16511 ಕೆಎಸ್‌ಆರ್‌ ಬೆಂಗಳೂರು- ಕಣ್ಣೂರು ಎಕ್ಸ್‌ಪ್ರೆಸ್‌ ರೈಲನ್ನು ಜು.29ರಿಂದ ಆ.3ರ ವರೆಗೆ ಸಂರ್ಪೂವಾಗಿ ರದ್ದು ಮಾಡಲಾಗಿದೆ.
ನಂ.16512 ಕಣ್ಣೂರು- ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲನ್ನು ಜು.30ರಿಂದ ಆ.4ರ ವರೆಗೆ ರದ್ದುಪಡಿಸಲಾಗಿದೆ.
ನಂ.07378 ಮಂಗಳೂರು ಸೆಂಟ್ರಲ್‌- ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು ಜು.30ರಿಂದ ಆ.4 ವರೆಗೆ ಸಂಪೂರ್ಣ ರದ್ದುಪಡಿಸಲಾಗಿದೆ.
ನಂ.07377 ವಿಜಯಪುರ- ಮಂಗಳೂರು ಸೆಂಟ್ರಲ್‌ ರೈಲನ್ನು ಜು. 29ರಿಂದ ಆ. 3ರ ವರೆಗೆ ಸಂಪೂರ್ಣ ರದ್ದುಪಡಿಸಲಾಗಿದೆ.
ನಂ.16585 ಎಸ್‌ಎಂವಿಟಿ ಬೆಂಗಳೂರು – ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲು ಜು. 29ರಿಂದ ಆ. 3ರ ವರೆಗೆ ಸಂಪೂರ್ಣ ರದ್ದಾಗಿದೆ.
ನಂ.16586 ಮುರುಡೇಶ್ವರ – ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಜು.30ರಿಂದ ಆ. 4ರ ವರೆಗೆ ಸಂಪೂರ್ಣ ರದ್ದಾಗಿದೆ.
ನಂ.16595 ಕೆಎಸ್‌ಆರ್‌ ಬೆಂಗಳೂರು – ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಜು. 29 ರಿಂದ ಆ. 3ರ ವರೆಗೆ ರದ್ದಾಗಿದೆ.
ನಂ.16596 ಕಾರವಾರ -ಕೆಎಸ್‌ಆರ್‌ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಜು.30ರಿಂದ ಆ.4ರ ವರೆಗೆ ಸಂಪೂರ್ಣ ರದ್ದಾಗಿದೆ.
ನಂ.16576 ಮಂಗಳೂರು ಜಂಕ್ಷನ್‌ – ಯಶವಂತಪುರ ಜಂಕ್ಷನ್‌ ಎಕ್ಸ್‌ಪ್ರಸ್‌ ರೈಲನ್ನು ಜು. 30 ಮತ್ತು ಆ. 1ರಂದು ರದ್ದುಗೊಳಿಸಿದೆ.
ನಂ.16575 ಯಶವಂತಪುರ ಜಂಕ್ಷನ್‌-ಮಂಗಳೂರು ಜಂಕ್ಷನ್‌ ಆ. 31 ಮತ್ತು ಜು. 2ರಂದು ರದ್ದುಪಡಿಸಲಾಗಿದೆ.
ನಂ.16539 ಯಶವಂತಪುರ ಜಂಕ್ಷನ್‌ – ಮಂಗಳೂರು ಜಂಕ್ಷನ್‌ ಎಕ್ಸ್‌ ಪ್ರಸ್‌ ರೈಲನ್ನು ಆ.3ರಂದು ರದ್ದುಪಡಿಸಿದೆ.
ನಂ.16540 ಮಂಗಳೂರು ಜಂಕ್ಷನ್‌ – ಯಶವಂತಪುರ ಜಂಕ್ಷನ್‌ ರೈಲನ್ನು ಆ.4ರಂದು ರದ್ದುಪಡಿಸಲಾಗಿದೆ.
ನಂ.16515 ಯಶವಂತಪುರ ಜಂಕ್ಷನ್‌- ಕಾರವಾರ ಎಕ್ಸ್‌ಪ್ರೆಸ್‌ ರೈಲನ್ನು ಜು. 29, 31 ಮತ್ತು ಆ.2ರಂದು ರದ್ದುಪಡಿಸಲಾಗಿದೆ.
ನಂ.16516 ಕಾರವಾರ -ಯಶವಂತಪುರ ಜಂಕ್ಷನ್‌ ರೈಲನ್ನು ಜು. 30, ಆ. 1 ಮತ್ತು ಆ.3ರಂದು ಸಂಪೂರ್ಣ ರದ್ದುಪಡಿಸಲಾಗಿದೆ.

ಇದನ್ನೂ ಓದಿ: Shiradi Ghat: ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

Continue Reading

ಮಳೆ

Karnataka Weather : ಒಳನಾಡಿನಲ್ಲಿ ಬ್ರೇಕ್‌ ಕೊಟ್ಟು, ಕರಾವಳಿ- ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ

Karnataka Weather Forecast : ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆರಾಯ ಬ್ರೇಕ್‌ (Rain News) ಕೊಟ್ಟಿದ್ದು, ಕರಾವಳಿ-ಮಲೆನಾಡಿನಲ್ಲಿ ಭಾರಿ ವರ್ಷಧಾರೆಯಾಗುವ ಸಾಧ್ಯತೆ ಇದೆ. ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾದರೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಬೆಳಗಾವಿಯಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,40-50 ಕಿ.ಮೀದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೂಲ್‌ ಆದ ಬೆಂಗಳೂರು; ನಾಳೆಗೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Karnataka Weather Forecast : ಬೆಂಗಳೂರಿನಲ್ಲಿ ಜೋರಾಗಿ ಗಾಳಿ ಬೀಸಲಿದ್ದು, ವಾತಾವರಣ ಕೂಲ್‌ ಆಗಿರಲಿದೆ. ನಾಳೆಯೂ ಉತ್ತರ ಕನ್ನಡ ಸೇರಿದಂತೆ ಹಲವೆಡೆ ಮಳೆಯಾಗುವ (Rain News) ನಿರೀಕ್ಷೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (Karnataka Weather Forecast) ದುರ್ಬಲವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ (Rain News) ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡು ಮೂಲಕ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 7 ಸೆಂ.ಮೀ ಮಳೆಯಾಗಿದೆ. ಜಗಲಬೆಟ್, ಲೋಂಡಾದಲ್ಲಿ 6, ಕದ್ರಾ 5 ಸೆಂ.ಮೀ ಮಳೆಯಾಗಿದೆ.

ಯಲ್ಲಾಪುರ, ಸಿದ್ದಾಪುರ, ಬೆಳಗಾವಿ ಪಿಟಿಒ, ಕಮ್ಮರಡಿ 3 ಸೆಂ.ಮೀ, ಮಂಕಿ, ಗೇರ್ಸೊಪ್ಪ, ಕಾರವಾರ ವೀಕ್ಷಣಾಲಯ, ಬನವಾಸಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಗೋಕರ್ಣ, ಧರ್ಮಸ್ಥಳ, ಬೆಳ್ತಂಗಡಿ, ಹಳಿಯಾಳ, ಉಪ್ಪಿನಂಗಡಿ, ಔರಾದ್ , ಬೆಳಗಾವಿ ವಿಮಾನ ನಿಲ್ದಾಣ ವೀಕ್ಷಣಾಲಯ, ಸೋಮವಾರಪೇಟೆ, ಶೃಂಗೇರಿ ಎಚ್‌ಎಂಎಸ್, ಲಿಂಗನಮಕ್ಕಿ ಎಚ್‌ಎಂಎಸ್‌ನಲ್ಲಿ 1 ಸೆಂ.ಮೀ ಮಳೆಯಾಗಿದೆ.

ಮುಂದುವರಿಯಲಿದೆ ಮಳೆ ಅಬ್ಬರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆ

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಹೊರ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮೇಲೆ ಸಂಚಾರ ನಿರ್ಬಂಧಿಸಲಾಗಿದ್ದು, ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಹಂಚಿನಾಳ, ಯರಗೋಡಿ, ಕಡದರಗಡ್ಡಿ, ಯಳಗುಂದಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ನಡುಗಡ್ಡೆಯಲ್ಲಿ ವಾಸಿಸುವ ಜನರಿಗೆ ಸಂಪೂರ್ಣ ಜಲದಿಗ್ಭಂಧನ ಹಾಕಲಾಗಿದೆ. ರೈತರ ಪಂಪ್ ಸೆಟ್, ಪೈಪ್‌ಗಳು ಮುಳುಗಡೆಯಾಗಿದೆ.

ಇದೇ ಕೃಷ್ಣಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡು ಕುರಿಗಾಹಿಗಳು ಪೇಚಿಗೆ ಸಿಲುಕಿದರು. ಮುಳುಗಡೆಯಾದ ಶೀಲಹಳ್ಳಿ ಸೇತುವೆ ಬಳಿಯ ಗುಡ್ಡದಲ್ಲಿ ಕುರಿಗಳನ್ನು ಮೇಯಲುಬಿಟ್ಟು,ಮೂವರು ಕುರಿಗಾಹಿಗಳು ಬೆಟ್ಟ ಇಳಿದಿದ್ದರು. ಈ ವೇಳೆ ಧುಮ್ಮಿಕ್ಕಿ ಹರಿಯಿತ್ತಿರುವ ನದಿ ನೋಡಿ‌ ಬೆಚ್ಚಿ ಬಿದ್ದರು. ಕೆಲಹೊತ್ತು ಹೇಗೆ ಸುರಕ್ಷಿತವಾಗಿ ಸ್ಥಳ ತಲುಪ ಬೇಕೆಂದು ಗೊತ್ತಾಗದೇ ಕಂಗಾಲಾಗಿದ್ದರು. ಸುಮಾರು ಒಂದು ಗಂಟೆ ಬೆಟ್ಟದಲ್ಲೇ ಅತ್ತಿತ್ತ ಓಡಾಡಿ, ಬಳಿಕ ಮತ್ತೊಂದು ದಡದಲ್ಲಿ ವ್ಯಕ್ತಿಯೊಬ್ಬ ಸೂಚಿಸಿದ ದಿಕ್ಕಿನತ್ತ ಹೊರಟು ಹೋದರು.

ಇತ್ತ ತುಂಗಭದ್ರಾ ಡ್ಯಾಂನಿಂದ 1,50,000 ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತಿರುವುದರಿಂದ ರಾಯಚೂರಿನ ಎಲೆಬಿಚ್ಚಾಲಿ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ರಾಯರ ಜಪದ ಕಟ್ಟೆಗೆ ಮುಳುಗಿದೆ. ಜಪದ ಕಟ್ಟೆ ಬಳಿ ತೆರಳದಂತೆ ಆಡಳಿತ ಮಂಡಳಿ ಬ್ಯಾರಿಕೇಡ್ ಅಳವಡಿಸಿ-ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ. ರಾಯಚೂರಿನ ಕೃಷ್ಣಾ ತೀರದ ಮತ್ತೊಂದು ದೇವಸ್ಥಾನ ಜಲಾವೃತಗೊಂಡಿದೆ. ಕೊಪ್ಪರದಲ್ಲಿರೊ ಲಕ್ಷ್ಮೀ ನರಸಿಂಹ ದೇವಸ್ಥಾನ ಮುಳುಗುಡೆಯಾಗಿದೆ. ದೇವಸ್ಥಾನ ಜಲಾವೃತ ಹಿನ್ನೆಲೆ ಅರ್ಚಕರು ನೀರಲ್ಲೇ ನಡೆದುಕೊಂಡು ಹೋಗಿ ಪೂಜಾ ಕೈಂಕರ್ಯ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
cm siddaramaiah mallikarjun kharge dk shivakumar
ಪ್ರಮುಖ ಸುದ್ದಿ5 mins ago

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

Carrie Fisher Iconic Golden Bikini Rs 1.46 Crore
ಸಿನಿಮಾ10 mins ago

Carrie Fisher: ಹಾಲಿವುಡ್‌ ಖ್ಯಾತ ನಟಿ ಧರಿಸಿದ ಬಿಕಿನಿ ಬರೋಬ್ಬರಿ 1.46 ಕೋಟಿ ರೂಪಾಯಿಗೆ ಹರಾಜು!

Drowned in river
ಬಾಗಲಕೋಟೆ12 mins ago

Drowned In River : ಆಟವಾಡುವಾಗ ಕೃಷ್ಣಾ ನದಿ ಹಿನ್ನೀರಿಗೆ ಬಿದ್ದ ಬಾಲಕಿ ಸಾವು; ಅಂಗಾಂಗ ದಾನ ಮಾಡಿ 6 ಜೀವ ಉಳಿಸಿದ ಬಾಲೆ

Gold Rate Today
ಚಿನ್ನದ ದರ38 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Arvind Kejriwal
ದೇಶ46 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

Dhruva Sarja``KD'' Sanjay Dutt First Look Out of
ಸ್ಯಾಂಡಲ್ ವುಡ್47 mins ago

Dhruva Sarja: ʻಕೆಡಿʼ ಚಿತ್ರದಿಂದ ಹೊರ ಬಿತ್ತು ಸಂಜಯ್ ದತ್ ಫಸ್ಟ್ ಲುಕ್; ಫ್ಯಾನ್ಸ್‌ ಫಿದಾ!

Actor Darshan case Vinod Raj said that he did not go to negotiations Renukaswamy family
ಕ್ರೈಂ58 mins ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್‌ ರಾಜ್‌ !

Road Accident
ಕಲಬುರಗಿ58 mins ago

Road Accident : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಚೆಲ್ಲಾಪಿಲ್ಲಿಯಾಗಿ ಬಿದ್ದ ಇಬ್ಬರು ಸಾವು

Paris Olympics 2024
ಕ್ರೀಡೆ1 hour ago

Paris Olympics 2024: ಪ್ಯಾರಿಸ್‌ ಒಲಿಂಪಿಕ್ಸ್;‌ ಇಂದು ಭಾರತೀಯರ ಅಥ್ಲೀಟ್‌ಗಳ ಕಾದಾಟ ಏನೇನು? ಪದಕ ನಿಶ್ಚಿತ?

Stock Market
ವಾಣಿಜ್ಯ1 hour ago

Stock Market: ಭರ್ಜರಿಯಾಗಿಯೇ ಕಂಬ್ಯಾಕ್‌ ಮಾಡಿದ ಷೇರುಪೇಟೆ; ಸಾರ್ವಕಾಲಿಕ ಗರಿಷ್ಠ ಅಂಕಕ್ಕೆ ತಲುಪಿದ ಸೆನ್ಸೆಕ್ಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ18 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ20 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ22 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ23 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌