Jote Joteyali | ಧಾರಾವಾಹಿಯಿಂದ ಅನಿರುದ್ಧ್‌ಗೆ ಗೇಟ್‌ ಪಾಸ್‌, ಎರಡು ವರ್ಷ ಬ್ಯಾನ್‌ಗೆ ನಿರ್ಮಾಪಕರ ನಿರ್ಧಾರ - Vistara News

ಕಿರುತೆರೆ

Jote Joteyali | ಧಾರಾವಾಹಿಯಿಂದ ಅನಿರುದ್ಧ್‌ಗೆ ಗೇಟ್‌ ಪಾಸ್‌, ಎರಡು ವರ್ಷ ಬ್ಯಾನ್‌ಗೆ ನಿರ್ಮಾಪಕರ ನಿರ್ಧಾರ

ಜೊತೆ ಜೊತೆಯಲಿ (Jote Joteyali ) ಧಾರಾವಾಹಿ ಖ್ಯಾತಿಯ ನಟ ಅನಿರುದ್ಧ್‌ ಅವರನ್ನು ಕಿರುತೆರೆ ನಿರ್ಮಾಪಕರ ಸಂಘ ಎರಡು ವರ್ಷಗಳ ಕಾಲ ಕಿರುತೆರೆಯಿಂದ ಬ್ಯಾನ್‌ ಮಾಡುವ ನಿರ್ಧಾರ ಕೈಗೊಂಡಿದೆ.

VISTARANEWS.COM


on

Jote Joteyali
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ನಂಬರ್‌ ಒನ್‌ ಧಾರಾವಾಹಿಯಾಗಿ ಜನಪ್ರಿಯವಾಗಿರುವ “ಜೊತೆ ಜೊತೆಯಲಿʼ (Jote Joteyali ) ಧಾರಾವಾಹಿಯಿಂದ ನಟ ಅನಿರುದ್ಧ್‌ ಅವರನ್ನು ಕೈಬಿಡುವುದು ಬಹುತೇಕ ನಿಶ್ಚಿತವಾಗಿದೆ. ಜತೆಗೆ ಬೇರೆ ಯಾವುದೇ ಧಾರಾವಾಹಿ ಅಥವಾ ರಿಯಾಲಿಟಿ ಶೋಗಳಲ್ಲಿ ಅನಿರುದ್ಧ್‌ ಅವರನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಕಿರುತೆರೆ ನಿರ್ಮಾಪಕರ ಸಂಘ ನಿರ್ಧಾರ ತಗೆದುಕೊಂಡಿದೆ. ನಿರ್ಮಾಪಕ ಆರೂರ್‌ ಜಗದೀಶ್‌ ಅವರ ದೂರಿನ ಮೇರೆಗೆ ಕಿರುತೆರೆ ನಿರ್ಮಾಪಕರ ಸಂಘ ಈ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ನಿರ್ಮಾಪಕರ ಸಂಘದ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ.

‘ಶೂಟಿಂಗ್‌ ಸೆಟ್‌ನಲ್ಲಿ ನಿರ್ದೇಶಕರಿಗೆ ಅನಿರುದ್ಧ್‌ ಅವರು ನಿಂದಿಸಿ ಸೆಟ್‌ನಿಂದ ಹೊರಗೆ ನಡೆದಿದ್ದಾರೆ. ಸೆಟ್‌ನಲ್ಲಿ ಸ್ಕ್ರಿಪ್ಟ್‌ ವಿಚಾರಕ್ಕೆ ಅವರು ಪದೇಪದೆ ಜಗಳವಾಡುತ್ತಿದ್ದರು. ಇದರಿಂದಾಗಿ ನಿರ್ಮಾಪಕ ಆರೂರು ಜಗದೀಶ್‌ ತೀವ್ರ ನೊಂದಿದ್ದಾರೆ’ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್‌ ಹೇಳಿಕೆ ನೀಡಿದ್ದಾರೆ. ಈಗಾಗಲೇ ನಿರ್ಮಾಪಕರ ಸಂಘ ಈ ಕುರಿತು ಎಲ್ಲ ವಾಹಿನಿಗಳಿಗೆ ಪತ್ರ ಬರೆದಿದ್ದು, ಎರಡು ವರ್ಷಗಳ ಕಾಲ ಅನಿರುದ್ಧ್‌ ಅವರನ್ನು ಬ್ಯಾನ್‌ ಮಾಡಬೇಕು ಎಂದು ಕೋರಿದೆ.

ಇದನ್ನೂ ಓದಿ | Jote Joteyali | ಧಾರಾವಾಹಿ ಖ್ಯಾತಿಯ ಅನಿರುದ್ಧ್‌ ಕಿರುತೆರೆಯಿಂದ ಬ್ಯಾನ್‌ ಆಗುತ್ತಿದ್ದಾರಾ? ಹೇಳಿದ್ದೇನು?

ಅನಿರುದ್ಧ ಹೇಳೋದೇನು?

ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿರುವ ಅನಿರುದ್ಧ್‌ ʻʻನಾನು ರಂಗಭೂಮಿಯಿಂದ ಬಂದ ಕಲಾವಿದ. ವೀಕ್ಷಕರ ಹಾರೈಕೆಯಿಂದ ಯಶಸ್ಸು ಸಿಕ್ಕಿದೆ. ಚಿತ್ರೀಕರಣಕ್ಕಾಗಿ ನಾನು ಶ್ರಮ ವಹಿಸಿದ್ದೇನೆ. ಸಾಕಷ್ಟು ಹೋಮ್‌ವರ್ಕ್‌ ಮಾಡಿದ್ದೇನೆ. ನನಗೆ ದುರಹಂಕಾರ ಎಂದು ಆರೋಪಿಸಿದ್ದಾರೆ. ನನ್ನಲ್ಲಿ ದುರಂಹಂಕಾರ ಇದ್ದಿದ್ದರೆ ಅದು ನಟನೆಯಲ್ಲಿ ಮಾತ್ರ. ನಿರ್ದೇಶಕರು ಅವರ ಮಕ್ಕಳ ಮೇಲೆ ಕೈಯಿಟ್ಟು ಹೇಳಲಿ. ಕ್ಯಾರವಾನ್‌ ಇಲ್ಲದೇ ನಟಿಸಲ್ಲ ಎಂದಿದ್ದು ಸುಳ್ಳು ಆರೋಪ. ಮಧ್ಯಮ ವರ್ಗದ ವ್ಯಕ್ತಿ ನಾನು. ಈ ಪಾತ್ರಕ್ಕಾಗಿ 12 ಕೆ.ಜಿ ತೂಕ ಇಳಿಸಿಕೊಂಡಿದ್ದೆ. ಒಂದೊಂದಾಗಿ ಸ್ಕ್ರಿಪ್ಟ್‌ ಕಳುಹಿಸಲು ಹೇಳಿದ್ದೆ. ಅದು ಕೇಳಿದ್ದು ನನ್ನ ತಪ್ಪಾ? “ಜೊತೆ ಜೊತೆಯಲಿʼ ಧಾರಾವಾಹಿಯಲ್ಲಿ ನಟನೆಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಧಾರಾವಾಹಿ ಯಶಸ್ಸು ನನ್ನಿಂದಲೇ ಎಂದು ಭಾವಿಸಿಲ್ಲʼʼ ಎಂದು ಪ್ರತಿಕ್ರಿಯಿಸಿದ್ದಾರೆ.

ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಮಿಂಚಿದ್ದ ನಟ ಅನಿರುದ್ಧ್‌ ಅವರು “ಜೊತೆ ಜೊತೆಯಲಿʼ ಧಾರಾವಾಹಿ ಮೂಲಕ ಮನೆ ಮಾತಾಗಿದ್ದರು. ಇದೀಗ ನಿರ್ಮಾಪಕರ ಸಂಘ ಎರಡು ವರ್ಷಗಳ ಕಾಲ ಅವರನ್ನು ಬಹಿಷ್ಕರಿಸಲು ನಿರ್ಧರಿಸಿದೆ. ಈ ನಿರ್ಧಾರ ಅನಿರುದ್ಧ್‌ ವೃತ್ತಿ ಬದುಕಿನ ಮೇಲೆ ಯಾವ ಪರಿಣಾಮ ಬೀರಲಿದೆ ಎಂಬ ಬಗ್ಗೆ ಕುತೂಹಲ ಮೂಡಿದೆ.

ಇದನ್ನೂ ಓದಿ | Self Marriage | ಸ್ವಯಂ ಮದುವೆಯಾದ ಕಿರುತೆರೆ ನಟಿ, ದೇಶದಲ್ಲೇ ದ್ವಿತೀಯ ʼವಿಶೇಷ ಬಂಧನʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

Vaishnavi Gowda: ಕನ್ನಡದ ಜನಪ್ರಿಯ ಸೀತಾ ರಾಮ ಧಾರಾವಹಿಯ ನಾಯಕಿ ವೈಷ್ಣವಿ ಗೌಡ ಅವರಿಗೆ ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗಿದೆ.

VISTARANEWS.COM


on

Vaishnavi Gowda
Koo

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸದ್ಯ ಝೀ ಕನ್ನಡ ವಾಹಿನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಸೀತಾ ರಾಮʼ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ನಾಯಕಿ ಸೀತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023ರ ಜುಲೈ 17ರಂದು ಆರಂಭವಾದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಿದೆ. ಆರಂಭವಾಗಿ ಸುಮಾರು 10 ತಿಂಗಳು ಕಳೆದಿದ್ದರೂ ಈಗಲೂ ಟಾಪ್‌ ಲಿಸ್ಟ್‌ನಲ್ಲಿದೆ. ಉತ್ತಮ ಟಿಆರ್‌ಪಿ ಪಡೆದುಕೊಳ್ಳುತ್ತಿರುವ ಈ ಧಾರಾವಾಹಿಯ ದೃಶ್ಯವೇ ಸದ್ಯ ವೈಷ್ಣವಿ ಗೌಡ ಅವರಿಗೆ ಫಜೀತಿ ತಂದಿಟ್ಟಿದೆ.

ಏನಿದು ಪ್ರಕರಣ?

ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ವೈಷ್ಣವಿ ಗೌಡ ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಪೊಲೀಸರಿಗೆ ಬಳಿಕ ಧಾರಾವಾಹಿಯ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದ ವಿಚಾರ ಗೊತ್ತಾಗಿತ್ತು. ಬಳಿಕ ಇದನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸ್ಕೂಟರ್‌ ಮಾಲೀಕರಾದ ಸವಿತಾ ಹಾಗೂ ವೈಷ್ಣವಿ ಅವರಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಹಿಂದಿಗೆ ರಿಮೇಕ್‌

ಸದ್ಯ ʼಸೀತಾ ರಾಮʼ ಧಾರಾವಾಹಿ ಹಿಂದಿಗೆ ರಿಮೇಕ್‌ ಆಗುತ್ತಿದೆ. ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕನ್ನಡದಲ್ಲಿ ವೈಷ್ಣವಿ ಗೌಡ ಜತೆಗೆ ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಇದರ ಜತೆಗೆ ʼಸೀತಾ ರಾಮʼ ಮಲೆಯಾಳಂಗೂ ಡಬ್‌ ಆಗುತ್ತಿದೆ. ಝೀ ಕೇರಳಂ ವಾಹಿನಿಯಲ್ಲಿ ಇದು ಪ್ರಸಾರವಾಗಲಿದೆ.

ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಸಿನಿಮಾ

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Pavithra Jayaram: ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ.

VISTARANEWS.COM


on

Pavithra Jayaram died in the accident may alive if the ambulance arrived
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೇ.12ರಂದು ಮೃತಪಟ್ಟಿದ್ದರು. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ (ಮೇ.12) ಮುಂಜಾನೆ ಅಪಘಾತವಾಗಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ಬಸ್‌ ಡಿಕ್ಕಿ ಹೊಡದಿತ್ತು. ಅಪಘಾತವಾದ ಕೂಡಲೇ ಆಂಬ್ಯುಲೆನ್ಸ್‌ ಸರಿಯಾದ ಸಮಯಕ್ಕೆ ಬಾರದೆ ಇದ್ದಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ಸಹನಟ ಚಂದ್ರಕಾಂತ್ ಆರೋಪ ಮಾಡಿದ್ದಾರೆ.

ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇನ್ನು ತೆಲುಗಿನ ‘ನಿನ್ನೆ ಪೆಲ್ಲಡತಾ’ ಅನ್ನೋ ಜನಪ್ರಿಯ ಧಾರಾವಾಹಿಯಲ್ಲೂ ನಟಿಸಿದ್ದರು. ಇದೀಗ ನಟಿಯ ಅಂತ್ಯಕ್ರಿಯೆ ಕೂಡ ನೆರವೇರಿದೆ. ಸಹನಟ ಚಂದ್ರಕಾಂತ್ ಮಾಧ್ಯಮದ ಜತೆ ಮಾತನಾಡಿ ʻʻಪವಿತ್ರಗೆ ಏನು ಗಾಯ ಆಗಿರಲಿಲ್ಲ ಭಯದಲ್ಲೇ ಉಸಿರು ಹೋಯ್ತು. ಅವರಿಗೆ ಏನೂ ಪೆಟ್ಟಾಗಿಲ್ಲ. ಆಂಬ್ಯುಲೆನ್ಸ್ 20 ನಿಮಿಷ ಮುಂಚೆ ಬಂದಿದ್ದರೆ, ಬಹುಶ: ಅವರು ಬದುಕುತ್ತಿದ್ದರು. ಅಪಘಾತವಾದಾಗ ಅವರು ಉಸಿರಾಡುತ್ತಿದ್ದರು” ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

ಅಪಘಾತವಾದ ಕಾರಿನಲ್ಲಿ ನಟಿ ಪವಿತ್ರಾ ಜೊತೆ ಅವರ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್, ಸಹನಟ ಚಂದ್ರಕಾಂತ್ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲರಿಗೂ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಹನಟ ಚಂದ್ರಕಾಂತ್ ಚಿಕಿತ್ಸೆ ಪಡೆದು ಪವಿತ್ರ ಜಯರಾಂ ಅಂತ್ಯಕ್ರಿಯೆ ಪಾಲ್ಗೊಂಡಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼ ಎಂದಿದ್ದರು.

Continue Reading

ಕಿರುತೆರೆ

Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

Vijay Surya: ವಿಜಯ್ ಸೂರ್ಯ ಅವರ ಕಿರುತೆರೆ ಪಯಣ ಶುರುವಾಗಿದ್ದು ‘ಉತ್ತರಾಯಣ’ ಧಾರಾವಾಹಿಯ ಮೂಲಕ.’ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ ಸಿದ್ಧಾರ್ಥ್ ಆಗಿ ಅಭಿನಯಿಸಿದರು ವಿಜಯ್ ಸೂರ್ಯ. ಮುಂದೆ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿಯೂ ನಾಯಕ ಸಿದ್ಧಾರ್ಥ್ ಆಗಿ ಕಂಡಿದ್ದರು.ಈ ಬಾರಿ ವಿಶೇಷವಾಗಿ ಅಮ್ಮಂದಿರ ದಿನಾಚರಣೆಯನ್ನು ಆಚರಿಸಿದ್ದಾರೆ ನಟ.

VISTARANEWS.COM


on

Vijay Surya changes his name on mothers day
Koo

ʻಅಗ್ನಿಸಾಕ್ಷಿ’ ,’ನಮ್ಮ ಲಚ್ಚಿ’ ಧಾರಾವಾಹಿ ಖ್ಯಾತಿಯ ನಟ ವಿಜಯ್ ಸೂರ್ಯ (Vijay Suriya) ಅವರು ಈ ಬಾರಿ ವಿಶೇಷವಾಗಿ ಅಮ್ಮಂದಿರ ದಿನಾಚರಣೆಯನ್ನು ಆಚರಿಸಿದ್ದಾರೆ.

ಇಂದಿನಿಂದ ನಾನು ನನ್ನ ಹೆಸರನ್ನು ʻವಿಜಯ್ ಲಲಿತಾ ಸೂರ್ಯʼ ಎಂದು ಬದಲಿಸಿಕೊಳ್ಳುತ್ತಿದ್ದೇನೆ. ಲಲಿತಾ ನನ್ನ ಅಮ್ಮನ ಹೆಸರು. ನನ್ನ ಪಾಲಿನ ಉಸಿರು ಎಂದು ವಿಜಯ್ ಸೂರ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ ನಟ.

ಇದನ್ನೂ ಓದಿ: Puneeth Parva | ಅಪ್ಪುವಿನ ಮಾಸ್‌ ಡೈಲಾಗ್‌ ಹೇಳಿದ ಧ್ರುವ ಸರ್ಜಾ: ದುನಿಯಾ ವಿಜಯ್‌ ಭಾವುಕ

ವಿಜಯ್‌ ಸೂರ್ಯ ಪೋಸ್ಟ್‌ ಮಾಡಿ. ʻʻಅಮ್ಮ ಹಚ್ಚಿದೊಂದು ಹಣತೆ
ಇನ್ನೂ ಬೆಳಗಿದೆ..
ಮನಕೆ ಮಬ್ಬು ಕವಿಯದಂತೆ
ಸದಾ ಕಾದಿದೆ..

ಎಂ ಆರ್ ಕಮಲಾ ಅವರು ಬರೆದ ಈ ಸಾಲನ್ನು ಮನದಲ್ಲಿ ನೆನೆಯುತ್ತಾ ಅಮ್ಮನಿಗೊಂದು ಭಾವುಕ ನಮನ ಸಲ್ಲಿಸುತ್ತೇನೆ. ಹ್ಯಾಪಿ ಮದರ್ಸ್‌ ಡೇ ಅಮ್ಮ.

ಇಷ್ಟು ಹೇಳಿದರೆ ಸಾಕಾ ? ಅಮ್ಮ ಪ್ರತಿ ಕ್ಷಣದ ಮಿಡಿತ ಅಲ್ವಾ ? ಈ ಪ್ರಶ್ನೆ ನನ್ನನ್ನು ಸದಾ ಕಾಡಿದೆ ಇದಕ್ಕೆ ಉತ್ತರ ಹುಡುಕಲು ಹೊರಟಾಗ ಅನ್ನಿಸಿದ್ದು ನನ್ನ ಹೆಸರಿನಲ್ಲಿ ಅಮ್ಮನ ಹೆಸರು ಬೆರೆತರೆ ಹೇಗೆ ಎಂಬ ಭಾವ. ಅದನ್ನು ಅಳವಡಿಸಿಕೊಳ್ಳಲು ಅಮ್ಮಂದಿರ ದಿನಕ್ಕಿಂತ ವಿಶೇಷ ಸಂದರ್ಭ ಯಾವುದಿದೆ ಅಲ್ವಾ ?

ಹೌದು ಇಂದಿನಿಂದ ನಾನು ನನ್ನ ಹೆಸರನ್ನು ʻವಿಜಯ್ ಲಲಿತಾ ಸೂರ್ಯʼ ಎಂದು ಬದಲಿಸಿಕೊಳ್ಳುತ್ತಿದ್ದೇನೆ. ಲಲಿತಾ ನನ್ನ ಅಮ್ಮನ ಹೆಸರು. ನನ್ನ ಪಾಲಿನ ಉಸಿರು.

ಜಗತ್ತಿನ ಎಲ್ಲ ಅಮ್ಮಂದಿರಿಗೂ ನನ್ನ ಶುಭಾಶಯಗಳು. ʻನಿಮ್ಮವನುʼ , ವಿಜಯ್ ಲಲಿತಾ ಸೂರ್ಯ…ʼʼಎಂದು ಬರೆದುಕೊಂಡಿದ್ದಾರೆ.

ತಾಯಿಗಾಗಿ ಹೆಸರನ್ನೇ ಬದಲಿಸಿಕೊಂಡ ನಟನ ಈ ನಡೆಗೆ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ವಿಜಯ್ ಸೂರ್ಯ ಅವರ ಕಿರುತೆರೆ ಪಯಣ ಶುರುವಾಗಿದ್ದು ‘ಉತ್ತರಾಯಣ’ ಧಾರಾವಾಹಿಯ ಮೂಲಕ.’ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ ಸಿದ್ಧಾರ್ಥ್ ಆಗಿ ಅಭಿನಯಿಸಿದರು ವಿಜಯ್ ಸೂರ್ಯ. ಮುಂದೆ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿಯೂ ನಾಯಕ ಸಿದ್ಧಾರ್ಥ್ ಆಗಿ ಕಂಡಿದ್ದರು.

Continue Reading

ಕಿರುತೆರೆ

Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

Jyoti Rai: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಜ್ಯೋತಿ ರೈ ಅವರನ್ನ ಅವರ ಅಭಿಮಾನಿಗಳು ಮಾತನಾಡಿಸಿದ್ದಾರೆ. ಜ್ಯೋತಿ ರೈ ಕೂಡ ಅಲ್ಲಿನ ಸಿಬ್ಬಂದಿ ಜೊತೆ ಕಷ್ಟ-ಸುಖ ಹಂಚಿಕೊಂಡಿದ್ದಾರೆ.ಜ್ಯೋತಿ ರೈ ತಿರುಪತಿಯ ತಮ್ಮ ಈ ದಿವ್ಯ ಅನುಭವವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ನಟಿ ತೀವ್ರ ಬೇಸರದ ನಡುವೆಯೂ ಜನಪದ ಗಾಯಕರೊಬ್ಬರಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾದರಿಯಾದರು.

VISTARANEWS.COM


on

Jyoti Rai seeks divine blessings at tirupathi
Koo

ಬೆಂಗಳೂರು: ಕಿರುತೆರೆ ನಟಿ, ಬಹುಭಾಷಾ ಕಲಾವಿದೆ, ಕನ್ನಡ ಮೂಲದ ಜ್ಯೋತಿ ರೈ (Jyoti Rai) ಕುರಿತಾದ ಸುದ್ದಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಜ್ಯೋತಿ ರೈ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವುದೇ ಇದಕ್ಕೆ ಕಾರಣ. ಇದಾದ ಬಳಿಕ ನಟಿ ತೀವ್ರ ಬೇಸರದ ನಡುವೆಯೂ ಜನಪದ ಗಾಯಕರೊಬ್ಬರಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾದರಿಯಾದರು. ಈ ಎಲ್ಲದರ ನಡುವೆ ನಟಿ ತಮ್ಮ ಸಂಗಾತಿ ಸುಕು ಪೂರ್ವಜ್ ಜತೆ ತಿರುಪತಿಗೆ ತೆರಳಿದ್ದಾರೆ. ತಿರುಪತಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಜ್ಯೋತಿ ರೈ ಅವರನ್ನ ಅವರ ಅಭಿಮಾನಿಗಳು ಮಾತನಾಡಿಸಿದ್ದಾರೆ. ಜ್ಯೋತಿ ರೈ ಕೂಡ ಅಲ್ಲಿನ ಸಿಬ್ಬಂದಿ ಜೊತೆ ಕಷ್ಟ-ಸುಖ ಹಂಚಿಕೊಂಡಿದ್ದಾರೆ.ಜ್ಯೋತಿ ರೈ ತಿರುಪತಿಯ ತಮ್ಮ ಈ ದಿವ್ಯ ಅನುಭವವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ

ತೆಲುಗಿನ ಜನಪ್ರಿಯ ಜನಪದ ಗಾಯಕ ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಗಿಲಯ್ಯ (Darshanam Mogilaiah) ತೀವ್ರ ಬಡತನದಲ್ಲಿದ್ದು, ಜೀವನ ನಿರ್ವಹಣೆಗಾಗಿ ಗಾರೆ ಕೆಲಸ ಮಾಡುತ್ತಿದ್ದರು. ಅವರು ಗಾರೆ ಕೆಲಸ ಮಾಡುತ್ತಿರುವ ಚಿತ್ರಗಳು, ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ತನ್ನ ನೋವನ್ನು ನುಂಗಿ ಜ್ಯೋತಿ ರೈ ಅವರು ಈ ಹಿರಿಯ ಕಲಾವಿದರ ನೆರವಿಗೆ ಧಾವಿಸಿದ್ದರು.

ಧನ ಸಹಾಯ

ಅಕ್ಷಯ ತೃತೀಯ ದಿನ (ಶುಕ್ರವಾರ)ದಂದು ಜ್ಯೋತಿ ರೈ ಅವರು ಮೊಗಿಲಯ್ಯ ಅವರಿಗೆ 50 ಸಾವಿರ ರೂ. ಧನ ಸಹಾಯ ನೀಡಿದ್ದರು. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದರು. ʼʼಅಕ್ಷಯ ತೃತೀಯದ ಪುಣ್ಯ ದಿನದಂದು ಪದ್ಮಶ್ರೀ ಮೊಗಿಲಯ್ಯ ಅವರಿಗೆ ನಾನು 50 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಿದೆ. ಮೊಗಿಲಯ್ಯ ಅಷ್ಟು ಜನಪ್ರಿಯರಾಗಿದ್ದರೂ ತಮ್ಮ ಖಾಸಗಿ ಜೀವನ ಹಾಗೂ ವೃತ್ತಿಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರು ನಡೆಸಿದ ಸುದ್ದಿಗೋಷ್ಠಿಯಿಂದಾಗಿ ಅವರ ಕಷ್ಟಗಳು ನನಗೆ ತಿಳಿದು ಬಂತುʼʼ ಎಂದು ಜ್ಯೋತಿ ರೈ ಹೇಳಿದ್ದರು.

ಇದನ್ನೂ ಓದಿ: Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

ಮುಂದುವರಿದು, ʼʼಸದ್ಯಕ್ಕೆ ನಾನು ಸಹ ಕಷ್ಟದ ದಿನಗಳನ್ನು ಕಳೆಯುತ್ತಿದ್ದೇನೆ. ಆದರೆ ಅವರ ಕಷ್ಟ ಕೇಳಿದಾಗ ನನ್ನೊಳಗೆ ಮೂಡಿದ ಬೆಳಕು, ಮೊಗಿಲಯ್ಯ ಅವರನ್ನು ಭೇಟಿಯಾಗಿ ಸಹಾಯ ಮಾಡಲು ಪ್ರೇರೇಪಿಸಿತು. ಹೀಗಾಗಿ ಅವರಿಗೆ ಸಹಾಯ ಮಾಡಿದೆ. ಅವರಿಗೆ ಇನ್ನಷ್ಟು ಸಹಾಯ ಮಾಡುವ ಆಸೆಯಿದೆ. ನನ್ನಿಂದ ಸಾಧ್ಯವಾಗಿದ್ದನ್ನು ನಾನು ಮಾಡಿದ್ದೇನೆ. ಇನ್ಯಾರಿಗಾದರೂ ಮೊಗಿಲಯ್ಯ ಅವರಿಗೆ ಸಹಾಯ ಮಾಡುವ ಇಚ್ಛೆಯಿದ್ದರೆ ಬನ್ನಿ ಎಲ್ಲರೂ ಒಟ್ಟು ಸೇರಿ ನೆರವಾಗೋಣʼʼ ಎಂದು ಕರೆ ನೀಡಿದ್ದರು.

ಸವಾಲು

ಇದರ ಜತೆಗೆ ತಮ್ಮದು ಎನ್ನಲಾದ ನಕಲಿ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ವ್ಯಕ್ತಿಗಳಿಗೆ ಸವಾಲು ಹಾಕಿದ್ದರು. ʼʼಈ ವಿಡಿಯೊ (ಮೊಗಿಲಯ್ಯ ಅವರಿಗೆ ಆರ್ಥಿಕ ನೆರವು ನೀಡುತ್ತಿರುವ ವಿಡಿಯೊ)ವನ್ನು ವೈರಲ್‌ ಮಾಡುವ ತಾಕತ್ತು ನಿಮ್ಮಲ್ಲಿ ಇದೆಯಾ? ಇದು ನಿಜವಾದುದು. ಈ ಕೆಳಗಿನ ಸಾಲುಗಳು ಕೆಲಸ ಇಲ್ಲದವರಿಗೆ, ಬುದ್ಧಿ ಇಲ್ಲದವರಿಗಾಗಿ. ಜಗತ್ತು ನನ್ನೆಡೆಗೆ ಅಂಧಕಾರವನ್ನು ದೂಡಿದಾಗ ನನ್ನೊಳಗಿನ ನಾನು ಇನ್ನಷ್ಟು ಪ್ರಕಾಶಮಾನವಾಗಿ ಹೊಳೆಯುತ್ತೇನೆ. ನನ್ನೊಳಗಿನ ಬೆಳಕು ಉರಿಯಲು ಇಂತಹ ಕತ್ತಲೇ ಇಂಧನ. ನಿರಾಶಾವಾದದ ಬೂದಿಯಿಂದ ಸಾಧ್ಯತೆಯ ಫೀನಿಕ್ಸ್ ಏಳುತ್ತದೆ. ನಕಾರಾತ್ಮಕ ಶಕ್ತಿಯು ಮೆಟ್ಟಿಲು; ನಾನು ಅದರ ಮೇಲೆ ಹತ್ತಿ ಸಕಾರಾತ್ಮಕತೆಯ ದಿಗಂತದ ಕಡೆಗೆ ಸಾಗುತ್ತೇನೆʼʼ ಎಂದು ಜ್ಯೋತಿ ರೈ ಬರೆದುಕೊಂಡಿದ್ದರು. ಸದ್ಯ ಅವರ ಈ ಪೋಸ್ಟ್‌ ವೈರಲ್‌ ಆಗಿದೆ. ಅಭಿಮಾನಿಗಳು ಅವರ ಈ ದಿಟ್ಟತನವನ್ನು, ಮಾನವೀಯತೆಯ ಗುಣವನ್ನು ಮೆಚ್ಚಿದ್ದರು.

ಇನ್ನೂ ವಿಡಿಯೊ ವಿಚಾರಕ್ಕೆ ಬಂದರೆ ಜ್ಯೋತಿ ರೈ ವಿಚಾರದ ಕಿಡಿಗೇಡಿಗಳು ಡೀಪ್‌ಫೇಕ್ ವಿಡಿಯೊ ಬಳಸಿ ನಟಿ ಜ್ಯೋತಿ ರೈ ಅವರ ನಕಲಿ ವಿಡಿಯೋ ಹಾಗೂ ಫೋಟೊಗಳನ್ನು ಸೃಷ್ಟಿಸಿರಬಹುದೆಂದು ಚರ್ಚೆಯಾಗುತ್ತಿದೆ. ಈ ಬಗ್ಗೆ ನಟಿ ಈಗಾಗಲೇ ಜತೆಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಹ ನೀಡಿದ್ದರು.

Continue Reading
Advertisement
KL Rahul
ಕ್ರೀಡೆ16 mins ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Actor Dhanush
ಸಿನಿಮಾ19 mins ago

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

pm narendra modi nomination 2
ಪ್ರಮುಖ ಸುದ್ದಿ23 mins ago

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

HD Revanna released from jail Revanna Go straight to HD Deve Gowda house
ರಾಜಕೀಯ25 mins ago

HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Patanjali case
ದೇಶ41 mins ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

T20 World Cup 2024
ಕ್ರೀಡೆ58 mins ago

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

Job News
ಉದ್ಯೋಗ2 hours ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

kurkure divorce viral news
ವೈರಲ್ ನ್ಯೂಸ್2 hours ago

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Supriya Sule
ದೇಶ2 hours ago

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Road Accident
ಕ್ರೈಂ2 hours ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು4 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ11 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ21 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ21 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ22 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ22 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ22 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌