ಕಿರಿ ಕಿರಿ ಬಗ್ಗೆ ಪೋಷಕರಿಗೆ ದೂರು ನೀಡಿದ್ದ ಬಾಲಕಿಗೆ ಚೂರಿ ಇರಿದು ಹತ್ಯೆ - Vistara News

ಕ್ರೈಂ

ಕಿರಿ ಕಿರಿ ಬಗ್ಗೆ ಪೋಷಕರಿಗೆ ದೂರು ನೀಡಿದ್ದ ಬಾಲಕಿಗೆ ಚೂರಿ ಇರಿದು ಹತ್ಯೆ

ಅಸಭ್ಯ ವರ್ತನೆ ಬಗ್ಗೆ ಬಾಲಕಿ ಆರೋಪಿಸಿದ ಹಿನ್ನೆಲೆಯಲ್ಲಿ ಕಂಪನಿಯಿಂದ ನೋಟಿಸ್‌ ನೀಡಲಾಗಿತ್ತು. ಇದರಿಂದ ಕುಪಿತಗೊಂಡ ಆರೋಪಿ, ಬಾಲಕಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ, ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

ಕೊಲೆ
ಆರೋಪಿ ಕಿಶೋರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಸಭ್ಯ ವರ್ತನೆ ತೋರಿ ಕಿರಿಕಿರಿ ನೀಡುತ್ತಿದ್ದಾನೆ ಎಂದು ಪೋಷಕರಿಗೆ ದೂರು ನೀಡಿದ ಬಾಲಕಿಯನ್ನು ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ ಕ್ವಾರ್ಟರ್ಸ್‌ನಲ್ಲಿ ನಡೆದಿದೆ.

ಬಾಲಕಿಯನ್ನು ಹತ್ಯೆ ಮಾಡಿದ ಆರೋಪಿ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಉತ್ತರಾಖಂಡ ಮೂಲದ ಲಕ್ಷ್ಮಣ್ ಸಿಂಗ್ ಎಂಬುವವರ ಪುತ್ರಿ ಖುಷಿ (11) ಕೊಲೆಯಾದ ಬಾಲಕಿ. ಹರಿಯಾಣ ಮೂಲದ ನಂದ ಕಿಶೋರ್ (50) ಆರೋಪಿ. ಬಾಲಕಿ ತಂದೆ ಲಕ್ಷ್ಮಣ್ ಸಿಂಗ್ ಹಾಗೂ ಅರೋಪಿ ನಂದಕಿಶೋರ್ ಜಿಂದಾಲ್ ಕಂಪನಿ ನೌಕರರಾಗಿದ್ದಾರೆ. ಕಿರಿಕಿರಿ ನೀಡುತ್ತಿದ್ದಾನೆ ಎಂದು ಬಾಲಕಿ ಆರೋಪಿಸಿದ ಹಿನ್ನೆಲೆಯಲ್ಲಿ ಕ್ವಾರ್ಟರ್ಸ್ ಖಾಲಿ ಮಾಡುವಂತೆ ಕಂಪನಿಯಿಂದ‌ ಆರೋಪಿ ಕಿಶೋರ್‌ಗೆ ನೋಟಿಸ್ ನೀಡಲಾಗಿದೆ.

ನೋಟಿಸ್‌ ನೀಡಿದ್ದರಿಂದ ಕುಪಿತನಾದ ಆರೋಪಿ, ಬಾಲಕಿಗೆ ಚಾಕು ಇರಿದು ಕೊಲೆ ಮಾಡಿ, ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಂಭೀರ ಗಾಯಗೊಂಡ ಸ್ಥಿತಿಯಲ್ಲಿದ್ದ ಆರೋಪಿಯನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Cow Slaughter | ಗೋಮಾಂಸ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Parliament Security Breach: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ಗೆ ಎಂಟ್ರಿ ಕೊಡೋಕೆ ಯತ್ನ; ತಪ್ಪಿದ ಭಾರೀ ಅವಘಡ

Parliament Security Breach: ಸಂಸತ್‌ ಭವನದ ಎದುರು ನಿಯೋಜನೆಗೊಂಡಿರುವ CISF ಭದ್ರತಾ ಸಿಬ್ಬಂದಿ ಮೂವರನ್ನು ತಪಾಸಣೆ ನಡೆಸಿದಾಗ ಇವರ ಬಳಿ ನಕಲಿ ಆಧಾರ್‌ ಕಾರ್ಡ್‌ ಇರುವುದು ಕಂಡು ಬಂದಿದ್ದು, ತಕ್ಷಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಫೋರ್ಜರಿ ಮತ್ತು ವಂಚನೆ ಪ್ರಕರಣ ದಾಖಲಿಸಿ ತನಿಖೆಗೊಳಪಡಿಸಲಾಗಿದೆ. ಇದರ ಬೆನ್ನಲ್ಲೇ CISF ಸಿಬ್ಬಂದಿ ಹಾಗೂ ದಿಲ್ಲಿ ಪೊಲೀಸರು ಸಂಸತ್‌ ಭವನದ ಸಂಪೂರ್ಣ ಭದ್ರತೆಯನ್ನು ಮರುಪರಿಶೀಲಿಸಿದ್ದಾರೆ.

VISTARANEWS.COM


on

Parliament Security Breach
Koo

ನವದೆಹಲಿ: ಸಂಸತ್‌(Parliament Security Breach) ನುಗ್ಗಿ ಯುವಕರು ಸ್ಮೋಕ್‌ ಬಾಂಬ್‌(Color Smoke Bomb) ಸಿಡಿಸಿ ದಾಂಧಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅಂತಹದ್ದೇ ಒಂದು ಘಟನೆ ಸ್ವಲ್ಪದರಲ್ಲೇ ತಪ್ಪಿದೆ. ನಕಲಿ ಆಧಾರ್‌ ಕಾರ್ಡ್‌(Fake Aadhaar Card) ಬಳಸಿ ಸಂಸತ್‌ ಭವನಕ್ಕೆ ಎಂಟ್ರಿ ಕೊಡಲು ಯತ್ನಿಸಿದ್ದ ಮೂವರನ್ನು ಭದ್ರತಾ ಪಡೆ ಅರೆಸ್ಟ್‌ ಮಾಡಿದೆ. ಇನ್ನು ಬಂಧಿತರನ್ನು ಖಾಸಿಂ, ಮೋನೀಶ್‌ ಮತ್ತಿ ಸೋಯೆಬ್‌ ಎಂದು ಗುರುತಿಸಲಾಗಿದೆ.

ಏನಿದು ಘಟನೆ?

ಗುರುವಾರ ಭದ್ರತಾ ಸಿಬ್ಬಂದಿ ನಿತ್ಯದ ನಡೆಸುವಂತೆ ತಪಾಸಣೆ ವೇಳೆ ಈ ಮೂರು ಕಾರ್ಮಿಕರು ನಕಲಿ ಆಧಾರ್‌ ಕಾರ್ಡ್‌ ಹೊಂದಿರುವುದು ಪತ್ತೆಯಾಗಿದೆ. ಸಂಸತ್‌ ಭವನದ ಎದುರು ನಿಯೋಜನೆಗೊಂಡಿರುವ CISF ಭದ್ರತಾ ಸಿಬ್ಬಂದಿ ಮೂವರನ್ನು ತಪಾಸಣೆ ನಡೆಸಿದಾಗ ಇವರ ಬಳಿ ನಕಲಿ ಆಧಾರ್‌ ಕಾರ್ಡ್‌ ಇರುವುದು ಕಂಡು ಬಂದಿದ್ದು, ತಕ್ಷಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಫೋರ್ಜರಿ ಮತ್ತು ವಂಚನೆ ಪ್ರಕರಣ ದಾಖಲಿಸಿ ತನಿಖೆಗೊಳಪಡಿಸಲಾಗಿದೆ. ಇದರ ಬೆನ್ನಲ್ಲೇ CISF ಸಿಬ್ಬಂದಿ ಹಾಗೂ ದಿಲ್ಲಿ ಪೊಲೀಸರು ಸಂಸತ್‌ ಭವನದ ಸಂಪೂರ್ಣ ಭದ್ರತೆಯನ್ನು ಮರುಪರಿಶೀಲಿಸಿದ್ದಾರೆ.

ಇನ್ನು ಈ ಮೂವರು ನೌಕರರು ಡೀ ವೀ ಪ್ರಾಜೆಕ್ಟ್‌ ಲಿಮಿಟೆಡ್‌ ನಿಯೋಜಿಸಿರುವ ಗುತ್ತಿಗೆ ನೌಕರರಾಗಿದ್ದು, ಇವರು ಸಂಸತ್‌ ಭವನದ ಒಳಗೆ ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. IPC ಸೆಕ್ಷನ್‌ಗಳು 465 (ನಕಲಿ), 419 (ವ್ಯಕ್ತಿತ್ವದಿಂದ ವಂಚನೆ), 120B (ಅಪರಾಧದ ಪಿತೂರಿ), 471 (ನಕಲಿ ದಾಖಲೆಯನ್ನು ಅಸಲಿ ಎಂದು ಬಳಸುವುದು), ಮತ್ತು 468 (ವಂಚನೆಯ ಉದ್ದೇಶಕ್ಕಾಗಿ ನಕಲಿ) ಅಡಿಯಲ್ಲಿ ಮೂವರ ಮೇಲೂ FIR ದಾಖಲಿಸಲಾಗಿದೆ.

ಬುಧವಾರ ಇಬ್ಬರು ಆಗುಂತಕರು ಲೋಕಸಭೆಗೆ ಬಂದು ಬಣ್ಣದ ಸ್ಮೋಕ್ ಬಾಂಬ್ ಸಿಡಿಸಿ (Color Smoke Bomb) ಆತಂಕದ ಪರಿಸ್ಥಿತಿ ಸೃಷ್ಟಿಸಿದ್ದರು. ಈ ಲೋಕಸಭೆ ಭದ್ರತಾ ಲೋಪ ಪ್ರಕರಣಕ್ಕೆ (Security Breach in Lok Sabha) ಸಂಬಂಧಿಸಿದಂತೆ, ಕರ್ನಾಟಕದ ಮನೋರಂಜನ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿತ್ತು. ಇಡೀ ಪ್ರಕರಣದ ಮಾಸ್ಟರ್‌ಮೈಂಡ್ ಎನ್ನಲಾಗಿದ್ದ ಲಲಿತ್ ಝಾ(Masterminde Lalit Jha), ದಿಲ್ಲಿಯ ಕರ್ತವ್ಯ ಪಥ ಪೊಲೀಸ್ ಠಾಣೆಗೆ ಹೋಗಿ ಗುರುವಾರ ಶರಣಾಗಿದ್ದಾನೆ(Surrendered to police). ಬಳಿಕ ಆತನನ್ನು ಔಪಚಾರಿಕವಾಗಿ ನವದೆಹಲಿ ಜಿಲ್ಲಾ ಪೊಲೀಸರು (Delhi Police) ಅರೆಸ್ಟ್ ಮಾಡಿ, ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಿದ್ದಾರೆ. ಕೋಲ್ಕೊತಾ ಮೂಲದ ಶಿಕ್ಷಕ ಲಲಿತ್ ಝಾ, ಘಟನೆ ನಡೆದ ಕೂಡಲೇ ಪರಾರಿಯಾಗಿದ್ದ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಶಿಫಾರಸಿನ ಅನ್ವಯ ಪಾಸ್ ‌ಪಡೆದುಕೊಂಡಿದ್ದ ಡಿ. ಮನೋರಂಜನ್ ಮತ್ತು ಉತ್ತರ ಪ್ರದೇಶದ ಸಾಗರ್ ಶರ್ಮಾ ಅವರು ಸಂಸತ್ ಭದ್ರತೆಯನ್ನು ಭೇದಿಸಿದ್ದರು ಮತ್ತು ಲೋಕಸಭೆ ವಿಸಿಟರ್ ಗ್ಯಾಲರಿಗೆ ಆಗಮಿಸಿದ್ದರು. ಕಲಾಪ ನಡೆಯುತ್ತಿದ್ದ ವೇಳೆ, ಮನೋರಂಜನ್ ಮತ್ತು ಸಾಗರ್ ಶರ್ಮಾ ಅವರು ವಿಸಿಟರ್ ಗ್ಯಾಲರಿಯಂದ ಸಂಸದರು ಇರುವಲ್ಲಿಗೆ ಜಂಪ್ ಮಾಡಿ, ಬಣ್ಣದ ಸ್ಮೋಕ್ ಬಾಂಬ್ ಸಿಡಿಸಿದ್ದರು. ಇದು ಭಾರೀ ಆತಂಕಕ್ಕೆ ಕಾರಣವಾಗಿತ್ತು. ಅಲ್ಲದೇ, ಸಂಸತ್ತಿನ ಹೊರಗೆ ನೀಲಂ ಆಜಾದ್ ಮತ್ತು ಅಮೋಲ್ ಶಿಂಧೆ ಅವರು ಬಣ್ಣದ ಸ್ಮೋಕ್ ಬಾಂಬ್ ಸಿಡಿಸಿದ್ದರು. ಬಳಿಕ ಈ ನಾಲ್ವರು ಅಲ್ಲದೇ, ವಿಕ್ಕಿ ಶರ್ಮಾ ಎಂಬಾತನನ್ನು ದಿಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ, ಸಂಸತ್ ಭದ್ರತಾ ಲೋಪ ಪ್ರಕರಣದ ಮುಖ್ಯ ಆರೋಪಿಯಾಗಿದ್ದ ಲಲಿತ್ ಝಾ ಮಾತ್ರ ತಲೆ ಮರೆಸಿಕೊಂಡಿದ್ದ ಮತ್ತು ಆತನನ್ನು ಗುರುವಾರ ಬಂಧಿಸಲಾಗಿದೆ.

Pulses Benefits: ಬೇಳೆಕಾಳುಗಳಲ್ಲಿರುವ ಎಲ್ಲ ಪೋಷಕಾಂಶಗಳು ದೇಹಕ್ಕೆ ಸೇರಬೇಕಾದರೆ ಹೀಗೆ ಮಾಡಿ!

Continue Reading

ಕ್ರೈಂ

Road Accident: ಭೀಕರ ಕಾರು ಅಪಘಾತ, 3 ಸಾವು, ಮರದಲ್ಲಿ ನೇತಾಡಿದ ಪ್ರಯಾಣಿಕನ ಶವ

Road Accident: ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ.

VISTARANEWS.COM


on

road accident gauribidanuru
Koo

ಚಿಕ್ಕಬಳ್ಳಾಪುರ: ಭೀಕರ ಕಾರು ಅಪಘಾತವೊಂದರಲ್ಲಿ (Road Accident) ಕಾರು ಕಾಲುವೆಗೆ ಬಿದ್ದು (car Accident) ಮೂವರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರೇ ಬೆಚ್ಚಿಬಿದ್ದಿದ್ದಾರೆ.

ಗೌರಿಬಿದನೂರು (Gauribidanur) ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ದುರ್ಘಟನೆ ನಡೆದಿದೆ. ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ. ಕಾರಿನಲ್ಲಿ ನಾಲ್ವರಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ. ಇವರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್‌ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಚಿಮ್ಮಿದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

ರಾಯಚೂರು: ರಾಯಚೂರಲ್ಲಿ ಅಕ್ಷರ ದಾಸೋಹ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇದು ಕಳೆದ ಒಂದು ತಿಂಗಳಲ್ಲಿ ವರದಿಯಾಗುತ್ತಿರುವ ಇಂಥ ಮೂರನೇ ಪ್ರಕರಣವಾಗಿದೆ.

ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು. ಕೆಲಸದ ಜತೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಏಕಾಏಕಿ ಕಚೇರಿಯಿಂದ ಒಂದು ದಿನದ ಮಟ್ಟಿಗೆ ರಜೆ ಪಡೆದಿದು ಮನೆಗೆ ಬಂದಿದ್ದ ಮೌನೇಶ್, ಮನೆಯಲ್ಲೇ ಟ್ಯಾಬ್ಲೆಟ್‌ಗಳನ್ನು ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಲಿಂಗಸಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ತಿಂಗಳು ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ ನಡೆದ ಹಗರಣದ ಬಗ್ಗೆ ಅವರು ಬರೆದಿಟ್ಟ ಡೆತ್‌ನೋಟ್‌ ಇದೀಗ ಸಚಿವರ ತಲೆದಂಡ ಪಡೆದಿದೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಮಹಾ ನಿರ್ದೇಶಕರೊಬ್ಬರು ಕಾಮಗಾರಿ ನಡೆಸಿದ 8 ಕೋಟಿ ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತುಮಕೂರಿನ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಬಿಲ್‌ ಹಣ ಬಿಡುಗಡೆಯಾಗಿತ್ತು.

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Continue Reading

ಕ್ರೈಂ

Self Harming Attempt: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

Self Harming Attempt: ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು.

VISTARANEWS.COM


on

self harming attempt
Koo

ರಾಯಚೂರು: ರಾಯಚೂರಲ್ಲಿ (Raichur news) ಅಕ್ಷರ ದಾಸೋಹ (Akshra dasoha) ಅಧಿಕಾರಿಯೊಬ್ಬರು ಆತ್ಮಹತ್ಯೆಗೆ (Self Harming Attempt) ಯತ್ನಿಸಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇದು ಕಳೆದ ಒಂದು ತಿಂಗಳಲ್ಲಿ ವರದಿಯಾಗುತ್ತಿರುವ ಇಂಥ ಮೂರನೇ ಪ್ರಕರಣವಾಗಿದೆ.

ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು. ಕೆಲಸದ ಜತೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಏಕಾಏಕಿ ಕಚೇರಿಯಿಂದ ಒಂದು ದಿನದ ಮಟ್ಟಿಗೆ ರಜೆ ಪಡೆದಿದು ಮನೆಗೆ ಬಂದಿದ್ದ ಮೌನೇಶ್, ಮನೆಯಲ್ಲೇ ಟ್ಯಾಬ್ಲೆಟ್‌ಗಳನ್ನು ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಲಿಂಗಸಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ತಿಂಗಳು ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಭಾರಿ ಸುದ್ದಿಯಾಗಿದೆ. ನಿಗಮದಲ್ಲಿ ನಡೆದ ಹಗರಣದ ಬಗ್ಗೆ ಅವರು ಬರೆದಿಟ್ಟ ಡೆತ್‌ನೋಟ್‌ ಇದೀಗ ಸಚಿವರ ತಲೆದಂಡ ಪಡೆದಿದೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಮಹಾ ನಿರ್ದೇಶಕರೊಬ್ಬರು ಕಾಮಗಾರಿ ನಡೆಸಿದ 8 ಕೋಟಿ ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತುಮಕೂರಿನ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಬಿಲ್‌ ಹಣ ಬಿಡುಗಡೆಯಾಗಿತ್ತು.

ಸಿಡಿಲಿಗೆ ಬಾಲಕ, ಮಹಿಳೆ ಬಲಿ

ಗದಗ/ಕೊಪ್ಪಳ: ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Continue Reading

ದೇಶ

Manipur Violence: ಮಣಿಪುರ ಹಿಂಸಾಚಾರ; ಮೋಸ್ಟ್‌ ವಾಂಟೆಡ್‌ ಗಲಭೆಕೋರ ಅರೆಸ್ಟ್‌

Manipur Violence: ಎನ್‌ಐಎ ತನಿಖೆಯ ಪ್ರಕಾರ, ಈಶಾನ್ಯ ರಾಜ್ಯಗಳು ಮತ್ತು ನೆರೆಯ ಮ್ಯಾನ್ಮಾರ್‌ನಲ್ಲಿರುವ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಕುಕಿ ಮತ್ತು ಜೋಮಿ ಬಂಡುಕೋರರು ಈ ಪ್ರದೇಶದಲ್ಲಿ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಸೃಷ್ಟಿಸಲು ಮತ್ತು ಸರ್ಕಾರದ ವಿರುದ್ಧ ದಂಗೆ ಉದ್ದೇಶದಿಂದ ಸಂಚು ರೂಪಿಸಿದ್ದಾರೆ. ಆರೋಪಿಯು ಕಳೆದ ವರ್ಷದಿಂದ ನಡೆಯುತ್ತಿರುವ ದಂಗೆ ಮತ್ತು ಹಿಂಸಾಚಾರದ ವೇಳೆ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

VISTARANEWS.COM


on

Manipur violence
Koo

ಮಣಿಪುರ: ಈಶಾನ್ಯ ರಾಜ್ಯವಾದ ಮಣಿಪುರ(Manipur Violence)ದಲ್ಲಿ ಕಳೆದ ವರ್ಷ ಉಂಟಾಗಿದ್ದು, ಜನಾಂಗೀಯ ಹಿಂಸಾಚಾರಕ್ಕೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅರೆಸ್ಟ್‌ ಮಾಡಿದೆ. ಬಂಧಿತನನ್ನು ಥಾಂಗ್ಮಿಂಥಾಂಗ್ ಹಾಕಿಪ್ ಅಲಿಯಾಸ್ ತಂಗ್ಬೋಯಿ ಹಾಕಿಪ್ ಅಲಿಯಾಸ್ ರೋಜರ್‌ ಎಂದು ಗುರುತಿಸಲಾಗಿದ್ದು, ಈತನನ್ನು ಇಂಫಾಲ್‌(Impal Airport) ಏರ್‌ಪೋರ್ಟ್‌ನಲ್ಲಿ ಎನ್‌ಐಎ ಅಧಿಕಾರಿಗಳು ಹೆಡೆಮುರಿಕಟ್ಟಿದ್ದಾರೆ.

ಕುಕಿ ನ್ಯಾಷನಲ್ ಫ್ರಂಟ್-ಮಿಲಿಟರಿ ಕೌನ್ಸಿಲ್ (KNF-MC) ಸದಸ್ಯನಾಗಿರುವ ರೋಜರ್‌ನ ವಿರುದ್ಧ ಮಣಿಪುರ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲು ಹಿಂಸಾಚಾರ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ ಆರೋಪ ಇದೆ. ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ. ಕಳೆದ ವರ್ಷ ಜು. 19ರಂದು ಎನ್‌ಐಎ ಈತನ ವಿರುದ್ಧ ಸೂಮೋಟೋ ಕೇಸ್‌ ದಾಖಲಿಸಿಕೊಂಡಿತ್ತು.

ಎನ್‌ಐಎ ಆರೋಪ ಏನು?

ಎನ್‌ಐಎ ತನಿಖೆಯ ಪ್ರಕಾರ, ಈಶಾನ್ಯ ರಾಜ್ಯಗಳು ಮತ್ತು ನೆರೆಯ ಮ್ಯಾನ್ಮಾರ್‌ನಲ್ಲಿರುವ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಕುಕಿ ಮತ್ತು ಜೋಮಿ ಬಂಡುಕೋರರು ಈ ಪ್ರದೇಶದಲ್ಲಿ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಸೃಷ್ಟಿಸಲು ಮತ್ತು ಸರ್ಕಾರದ ವಿರುದ್ಧ ದಂಗೆ ಉದ್ದೇಶದಿಂದ ಸಂಚು ರೂಪಿಸಿದ್ದಾರೆ. ಆರೋಪಿಯು ಕಳೆದ ವರ್ಷದಿಂದ ನಡೆಯುತ್ತಿರುವ ದಂಗೆ ಮತ್ತು ಹಿಂಸಾಚಾರದ ವೇಳೆ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಮಣಿಪುರ ರಾಜ್ಯದಲ್ಲಿನ ಅಸ್ಥಿರ ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಮತ್ತು ಜನರ ಮನಸ್ಸಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸಲು ಮ್ಯಾನ್ಮಾರ್‌ನ ಕುಕಿ ನ್ಯಾಷನಲ್ ಫ್ರಂಟ್ (ಕೆಎನ್‌ಎಫ್)-ಬಿ ಉಗ್ರರ ಜೊತೆ ರೋಜರ್‌ಗೆ ಸಂಪರ್ಕ ಇರುವುದು ಕಂಡು ಬಂದಿದೆ. ಅಲ್ಲದೇ ಈತ ಹಿಂಸಾಚಾರದಲ್ಲಿ ಬಳಸಲು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೂರೈಸಲು ಪಿಡಿಎಫ್ / ಕೆಎನ್‌ಎಫ್-ಬಿ (ಮ್ಯಾನ್ಮಾರ್) ನಾಯಕರನ್ನು ಭೇಟಿಯಾಗಿದ್ದ ಎಂದು ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.

ಮಣಿಪುರ ಹಿಂಸಾಚಾರ

ಮೇ 3, 2023 ರಂದು ಈಶಾನ್ಯ ರಾಜ್ಯ ಮಣಿಪುರದಲ್ಲಿ ಮೊದಲ ಬಾರಿಗೆ ಘರ್ಷಣೆಗಳು ಪ್ರಾರಂಭವಾದವು, ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಮೀಸಲಾತಿಗೆ ಆಗ್ರಹಿಸಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಈ ಸಂಘರ್ಷ ಆರಂಭವಾಗಿತ್ತು. ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದ ನಾಗಾಗಳು ಮತ್ತು ಕುಕಿಗಳು ಜನಸಂಖ್ಯೆಯ ಶೇಕಡಾ 40 ರಷ್ಟಿದ್ದಾರೆ ಮತ್ತು ಬೆಟ್ಟದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಸುಮಾರು 10,000 ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಣಿಪುರದಲ್ಲಿ ಭುಗಿಲೆದ್ದಿರುವ ಮಣಿಪುರದಲ್ಲಿ ಮೈತೆಯಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 200 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು ಮತ್ತು 310 ಜನರು ಗಾಯಗೊಂಡಿದ್ದಾರೆ. ರಾಜ್ಯದ ಹೊರಗಿನ ನಿರಾಶ್ರಿತರ ಶಿಬಿರಗಳಲ್ಲಿ ಸಾವಿರಾರು ಜನರು ಇದ್ದಾರೆ ಮತ್ತು ಲಕ್ಷಗಟ್ಟಲೆ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸರ್ಕಾರ 11 ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಿದೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ:Road Accident: ಗೂಡ್ಸ್ ವಾಹನ-ಕಾರು ಡಿಕ್ಕಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Continue Reading
Advertisement
dhananjaya sarji mlc election
ಪ್ರಮುಖ ಸುದ್ದಿ16 mins ago

MLC Election Results: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಧನಂಜಯ ಸರ್ಜಿಗೆ ಗೆಲುವು; ರಘುಪತಿ ಭಟ್‌ ಬಂಡಾಯ ವಿಫಲ

Narendra Modi
ದೇಶ29 mins ago

ಮೋದಿಯ ಮುಸ್ಲಿಂ ವಿರೋಧಿ ಹೇಳಿಕೆ ಬಳಿಕ ಬಿಜೆಪಿ ಸ್ಥಾನ ಗಳಿಕೆ ಏರಿಕೆ! 7 ಹಂತಗಳಲ್ಲಿ ಬಿಜೆಪಿ ಏರಿಳಿತದ ಪಟ್ಟಿ ಇಲ್ಲಿದೆ

NDA 3.0
Lok Sabha Election 202429 mins ago

NDA 3.0: ಎನ್‌ಡಿಎ ನಾಯಕರಿಂದ ಇಂದು ರಾಷ್ಟ್ರಪತಿ ಭೇಟಿ; ಸರ್ಕಾರ ರಚನೆಯ ಹಕ್ಕು ಮಂಡನೆ ಸಾಧ್ಯತೆ

Ira Khan faces trolling for dancing in a bikini
ಬಾಲಿವುಡ್33 mins ago

Ira Khan: ಬಿಕಿನಿ ಧರಿಸಿ ಕುಣಿದು ಕುಪ್ಪಳಿಸಿದ ಆಮೀರ್ ಪುತ್ರಿ; ಟ್ರೋಲ್‌ ಆದ ಇರಾ ಖಾನ್!

Lok Sabha Election 2024
ರಾಜಕೀಯ38 mins ago

Lok Sabha Election 2024: ನೂತನ ಸಂಸದರಲ್ಲಿ ಶೇ. 93ರಷ್ಟು ಮಂದಿ ಕೋಟ್ಯಧೀಶರು, ಶೇ.46ರಷ್ಟು ಮಂದಿ ವಿರುದ್ಧ ಕ್ರಿಮಿನಲ್ ಕೇಸ್!

rahul gandhi dk shivakumar cm siddaramaiah
ಪ್ರಮುಖ ಸುದ್ದಿ49 mins ago

Rahul Gandhi: ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ

Hamare Baarah Karnataka bans release of movie
ಬಾಲಿವುಡ್53 mins ago

Hamare Baarah: ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬ್ಯಾನ್‌ ಮಾಡಿದ ಕರ್ನಾಟಕ ಸರ್ಕಾರ

Sunita Williams
ವೈರಲ್ ನ್ಯೂಸ್1 hour ago

Sunita Williams: ಡ್ಯಾನ್ಸ್‌ ಮಾಡುತ್ತಲೇ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಭಾರತ ಮೂಲದ ಸುನೀತಾ ವಿಲಿಯಮ್ಸ್; ವಿಡಿಯೊ ವೈರಲ್‌

Parliament Security Breach
ದೇಶ2 hours ago

Parliament Security Breach: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ಗೆ ಎಂಟ್ರಿ ಕೊಡೋಕೆ ಯತ್ನ; ತಪ್ಪಿದ ಭಾರೀ ಅವಘಡ

road accident gauribidanuru
ಕ್ರೈಂ2 hours ago

Road Accident: ಭೀಕರ ಕಾರು ಅಪಘಾತ, 3 ಸಾವು, ಮರದಲ್ಲಿ ನೇತಾಡಿದ ಪ್ರಯಾಣಿಕನ ಶವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌