Mardini Kannada Movie | ಕಿಚ್ಚ ಸುದೀಪ್‌ ವಿಶ್‌ ಪಡೆದಿದ್ದ ಮರ್ದಿನಿ ಸಿನಿಮಾ ರಿಲೀಸ್‌ ಡೇಟ್ ಫಿಕ್ಸ್‌! - Vistara News

ಸಿನಿಮಾ

Mardini Kannada Movie | ಕಿಚ್ಚ ಸುದೀಪ್‌ ವಿಶ್‌ ಪಡೆದಿದ್ದ ಮರ್ದಿನಿ ಸಿನಿಮಾ ರಿಲೀಸ್‌ ಡೇಟ್ ಫಿಕ್ಸ್‌!

ಕಿಚ್ಚ ಸುದೀಪ್‌ ಬೆಂಬಲ ನೀಡಿದ್ದ ಮರ್ದಿನಿ ಸಿನಿಮಾ (Mardini Kannada Movie) ಬಿಡುಗಡೆಯ ದಿನಾಂಕ ನಿಗದಿಯಾಗಿದೆ. ಹಲವು ನಟರು ಪಾತ್ರಗಳಿಗೆ ಜೀವ ತುಂಬಿದ್ದಾರೆ.

VISTARANEWS.COM


on

Mardini Kannada Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಗದೀಶ್ ಜಗ್ಗಿ ಅವರ ಚೊಚ್ಚಲ ನಿರ್ಮಾಣದಲ್ಲಿ ಮೂಡಿಬಂದಿರುವ ಮರ್ದಿನಿ (Mardini Kannada Movie) ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್‌ ಆಗಿದೆ. ಈ ಸಿನಿಮಾ ಹಾಗೂ ಜಗ್ಗಿ ಪ್ರಯತ್ನದ ಬಗ್ಗೆ ಕಿಚ್ಚ ಸುದೀಪ್‌ ಈ ಹಿಂದೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಿನಿಮಾ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಕಿಚ್ಚ ಸುದೀಪ್ ಸಾಥ್ ನೀಡಿ ಶುಭಕೋರಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿತ್ತು. ಅಂಕಿತ್‌ ಫಿಲ್ಮ್ಸ್‌ ಮೂಲಕ ಜಗದೀಶ್ ಜಗ್ಗಿ ನಿರ್ಮಾಣ ಮಾಡುತ್ತಿದ್ದ, ಅವರ ಕಷ್ಟದ ದಿನಗಳು ಹಾಗೂ ಬೆಳವಣಿಗೆಗಳನ್ನು ನೆನೆದಿದ್ದ ಸುದೀಪ್‌, ಚಿತ್ರತಂಡಕ್ಕೆ ಪ್ರೀತಿಯ ಹಾರೈಕೆಯನ್ನು ವ್ಯಕ್ತಪಡಿಸಿದ್ದರು. ಸಸ್ಪೆನ್ಸ್ ಥ್ರಿಲರ್‌ ಕಥಾಹಂದರ ಹೊಂದಿರುವ ಮರ್ದಿನಿ ಸೆಪ್ಟೆಂಬರ್‌ ೧೬ರಂದು ತೆರೆ ಮೇಲೆ ಬರಲು ಸಜ್ಜಾಗಿದೆ.

ಕಿರಣ್ ಕುಮಾರ್ ನಿರ್ದೇಶನದ ಈ ಸಿನಿಮಾಗೆ ಜಗದೀಶ್‌ ಜಗ್ಗಿ ಹಾಗೂ ಭಾರತಿ ಜಗ್ಗಿ ಬಂಡವಾಳ ಹೂಡಿದ್ದಾರೆ. ಹೊಸ ಪರಿಚಯವಾಗಿರುವ ರಿತನ್ಯ ಹೂವಣ್ಣ ಚಿತ್ರದ ನಾಯಕಿಯಾಗಿದ್ದು, ಪೋಸ್ಟರ್‌ನಲ್ಲಿ ಕಾಖಿಧಾರಿಯಾಗಿ ಗಮನ ಸೆಳೆಯುತ್ತಿದ್ದಾರೆ. ಮನೋಹರ್ ಎನ್, ಅಕ್ಷಯ್ ಗೌಡ, ಇಂಚರ ಜೋಷಿ, ಅನುಪ್ ಶೂನ್ಯ, ರಚನ ಎಸ್, ಮನಮೋಹನ್ ರೈ, ಸುಷ್ಮಿತ ಸೋನು, ಅಂಕಿತ್ ಜೈ ಹಾಗೂ ಹಲವು ನಟರು ಪಾತ್ರಗಳಿಗೆ ಜೀವ ತುಂಬಿದ್ದಾರೆ.

ಹಿತನ್ ಹಾಸನ್ ಸಂಗೀತ ನಿರ್ದೇಶ ಮಾಡಿದ್ದಾರೆ. ಅರುಣ್ ಸುರೇಶ್‌ ಛಾಯಾಗ್ರಹಣವಿದೆ. ಸಂಕಲನ ಜವಾಬ್ದಾರಿಯನ್ನು ವಿಶ್ವ ಹೊತ್ತಿದ್ದಾರೆ.

ಇದನ್ನೂ ಓದಿ | Independence Day | ಸ್ಯಾಂಡಲ್‌ವುಡ್‌ ಟ್ರಿಬ್ಯೂಟ್ ವಿಡಿಯೊ ಸಾಂಗ್‌ ಔಟ್‌: ಇದು ಒಗ್ಗಟ್ಟಿನ ವಂದೇ ಮಾತರಂ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Raghu Thatha: ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು.

VISTARANEWS.COM


on

Raghu Thatha Hombale Films Realease date announced
Koo

ಬೆಂಗಳೂರು: ʼಕೆಜಿಎಫ್‌ʼ ಸರಣಿ, ʼಕಾಂತಾರʼ, ʼಸಲಾರ್‌ʼ ಮುಂತಾದ ಚಿತ್ರಗಳನ್ನು ನಿರ್ಮಿಸಿ ದೇಶಾದ್ಯಂತ ಸಂಚಲನ ಸೃಷಿಸಿದ ಕನ್ನಡದ ಹೊಂಬಾಳೆ ಫಿಲ್ಮ್ಸ್‌ನ (Hombale Films) ಮೊದಲ ತಮಿಳು ಸಿನಿಮಾ ‘ರಘು ತಾತಾ’ (Raghu Thatha). ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ನ ಮೊದಲ ಈ ತಮಿಳು ಸಿನಿಮಾದಲ್ಲಿ ಬಹುಭಾಷಾ ನಟಿ, ಪ್ರತಿಭಾವಂತ ಕಲಾವಿದೆ ಕೀರ್ತಿ ಸುರೇಶ್‌ (Keerthy Suresh) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼ ಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು. ಈ ಸಿನಿಮಾ ಅಗಸ್ಟ್‌ 15ರಂದು ತೆರೆಗೆ ಅಪ್ಪಳಿಸಲಿದೆ.

ಇದನ್ನೂ ಓದಿ: Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

ಗಮನ ಸೆಳೆದ ಕೀರ್ತಿ ಸುರೇಶ್‌

ಈ ಮುಂಚೆ ಬಿಡುಗಡೆಯಾದ ಒಂದು ನಿಮಿಷದ ಟೀಸರ್‌ನಲ್ಲಿ, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ಹೋರಾಡುವ ಯುವತಿಯಾಗಿ ಕೀರ್ತಿ ಸುರೇಶ್‌ ಮಿಂಚಿದ್ದರು. ಉದ್ಯೋಗ ಬಡ್ತಿಗಾಗಿ ಹಿಂದಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಬೇಕು ಎನ್ನುವ ಷರತ್ತನ್ನು ಆಕೆ ವಿರೋಧಿಸುತ್ತಾಳೆ. ಅನೇಕ ಜನರನ್ನು ಸಂಘಟಿಸಿ ಬೀದಿಗಿಳಿದು ಹೋರಾಡುತ್ತಾಳೆ. ಸದ್ಯ ಇದಿಷ್ಟು ವಿಚಾರ ಟೀಸರ್‌ ಮೂಲಕ ಬಹಿರಂಗಗೊಂಡಿತ್ತು. ರೆಟ್ರೋ ಶೈಲಿಯಲ್ಲಿ ಚಿತ್ರ ಮೂಡಿ ಬಂದಿದೆ. ದಿಟ್ಟ ಯುವತಿ ಪಾತ್ರದಲ್ಲಿ ಕಂಡು ಬಂದಿರುವ ಕೀರ್ತಿ ಸುರೇಶ್‌ ಪಾತ್ರಕ್ಕೆ ಅಭಿಮಾನಿಗಳು ಮನ ಸೋತಿದ್ದರು.

ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್‌ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ʼಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. 

ಪುಷ್ಪ ಸಿನಿಮಾಗೆ ಸೆಡ್ಡು ಹೊಡೆದ ಹೊಂಬಾಳೆ!

ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು.ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು.

Continue Reading

ಬಾಲಿವುಡ್

Anant Ambani: ಅನಂತ್ ಅಂಬಾನಿ ಕ್ರೂಸ್ ಪಾರ್ಟಿಯಲ್ಲಿ ರಂಜಿಸಲಿದ್ದಾರೆ ‘ವಾಕಾ ವಾಕಾ’ ಖ್ಯಾತಿಯ ಪಾಪ್ ಗಾಯಕಿ!

Anant Ambani: ಅಂಬಾನಿಯ ಕ್ರೂಸ್ ಪಾರ್ಟಿ ಮೇ 29ರಂದು ಪ್ರಾರಂಭಗಿದ್ದು, ಮತ್ತು ಜೂನ್ 1ರವರೆಗೆ ನಡೆಯಲಿದೆ. ಸಲ್ಮಾನ್ ಖಾನ್, ಆಲಿಯಾ ಭಟ್, ರಣಬೀರ್ ಕಪೂರ್, ರಣವೀರ್ ಸಿಂಗ್, ಅನನ್ಯ ಪಾಂಡೆ, ಸಾರಾ ಅಲಿ ಖಾನ್, ಓರಿ ಮತ್ತು ಇತರರು ಇದ್ದಾರೆ. ಈ ಹಿಂದೆ ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಮತ್ತು ರಾಧಿಕಾ ಅವರ ಮೊದಲ ಪೂರ್ವಭಾವಿ ಕಾರ್ಯಕ್ರಮಕ್ಕಾಗಿ ರಿಹಾನ್ನಾ ಅವರು ಪ್ರದರ್ಶನ ನೀಡಿದ್ದರು. 74 ಕೋಟಿ ರೂ. ಸಂಭಾವನೆ ಪಡೆದಿದ್ದರು. ಇದೀಗ ಶಕೀರಾ ಸರದಿ ಎನ್ನಲಾಗಿದೆ.

VISTARANEWS.COM


on

Anant Ambani Shakira set to perform 2nd pre-wedding
Koo

ಬೆಂಗಳೂರು: ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚಂಟ್‌ ಫ್ರೆಂಚ್ ಕ್ರೂಸ್​ನಲ್ಲಿ ತಮ್ಮ ವಿವಾಹ ಪೂರ್ವ ಎರಡಡನೇ ಪಾರ್ಟಿಯನ್ನು ಪ್ರಾರಂಭಿಸುತ್ತಿದ್ದಂತೆ ಎಲ್ಲರ ಕಣ್ಣುಗಳು ಅವರ ಮೇಲೆ ನೆಟ್ಟಿದ್ದವು. , ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಇದೀಗ ನಾಲ್ಕು ದಿನಗಳ ವಿವಾಹ ಪೂರ್ವ ಸಮಾರಂಭದಲ್ಲಿ ಐಷಾರಾಮಿ ಫ್ರೆಂಚ್ ಕ್ರೂಸ್‌ನಲ್ಲಿ ತನ್ನ ಪವರ್‌ಪ್ಯಾಕ್ಡ್ ಪ್ರದರ್ಶನದೊಂದಿಗೆ ಅತಿಥಿಗಳನ್ನು ಮನರಂಜಿಸಲಿದ್ದಾರಂತೆ ಶಕೀರಾ.

ʻವಾಕಾ ವಾಕಾʼ ಹಾಡಿನ ಖ್ಯಾತ ಗಾಯಕಿ ಶಕೀರಾ 10ರಿಂದ 15 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಮತ್ತು ರಾಧಿಕಾ ಅವರ ಮೊದಲ ಪೂರ್ವಭಾವಿ ಕಾರ್ಯಕ್ರಮಕ್ಕಾಗಿ ರಿಹಾನ್ನಾ ಅವರು ಪ್ರದರ್ಶನ ನೀಡಿದ್ದರು. 74 ಕೋಟಿ ರೂ. ಸಂಭಾವನೆ ಪಡೆದಿದ್ದರು. ಇದೀಗ ಶಕೀರಾ ಸರದಿ ಎನ್ನಲಾಗಿದೆ.

ಅಂಬಾನಿಯ ಕ್ರೂಸ್ ಪಾರ್ಟಿ ಮೇ 29ರಂದು ಪ್ರಾರಂಭವಾಗಿದ್ದು, ಮತ್ತು ಜೂನ್ 1ರವರೆಗೆ ನಡೆಯಲಿದೆ. ಸಲ್ಮಾನ್ ಖಾನ್, ಆಲಿಯಾ ಭಟ್, ರಣಬೀರ್ ಕಪೂರ್, ರಣವೀರ್ ಸಿಂಗ್, ಅನನ್ಯ ಪಾಂಡೆ, ಸಾರಾ ಅಲಿ ಖಾನ್, ಓರಿ ಮತ್ತು ಇತರರು ಇದ್ದಾರೆ.

ಇದನ್ನೂ ಓದಿ: Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಮದುವೆ ಯಾವಾಗ?

ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್​ನಲ್ಲಿ ಮದುವೆ ನಡೆಯಲಿದೆ.

ಭಾರತೀಯ ಸಂಪ್ರದಾಯದ ಉಡುಪುಗಳು

ಜುಲೈ 12ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್​ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.

Continue Reading

ಟಾಲಿವುಡ್

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

Nivetha Pethuraj: ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

VISTARANEWS.COM


on

Nivetha Pethuraj heated argument video with cops
Koo

ಬೆಂಗಳೂರು: ಬಹುಭಾಷಾ ನಟಿ ನಿವೇತಾ ಪೇತುರಾಜ್ (Nivetha Pethuraj) ಅವರು ಹೈದರಾಬಾದ್‌ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಜಗಳವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕಾರಿನ ಟ್ರಂಕ್‌ ಓಪನ್‌ ಮಾಡುವಂತೆ ಕೇಳಿದ ಪೊಲೀಸರೊಂದಿಗೆ ಅವರು ವಾಗ್ವದ ನಡೆಸಿದ್ದು ಮಾತ್ರವಲ್ಲದೆ, ಈ ದೃಶ್ಯವನ್ನು ಚಿತ್ರೀಕರಿಸಿದವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿವೇತಾ ಪೇತುರಾಜ್ ಪೊಲೀಸರೊಂದಿನ ವಾಗ್ವಾದದ ವಿಡಿಯೊ ಇದೀಗ ಭಾರಿ ಚರ್ಚೆ ಹುಟ್ಟುಹಾಕಿದೆ. ಕಾರಿನಲ್ಲಿ ಹೋಗುತ್ತಿದ್ದ ನಿವೇತಾ ಅವರನ್ನು ತಡೆದ ಪೊಲೀಸರು ಕಾರಿನ ಡಿಕ್ಕಿ ಓಪನ್‌ ಮಾಡುವಂತೆ ಹೇಳಿದ್ದಾರೆ. ತೆರೆಯಲು ನಿರಾಕರಿಸಿದ ನಟಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಡಾಕ್ಯುಮೆಂಟ್‌ಗಳೆಲ್ಲಾ ಸರಿಯಾಗಿವೆ, ದಯವಿಟ್ಟು ಅರ್ಥಮಾಡಿಕೊಳ್ಳಿ ನಾನು ಡಿಕ್ಕಿ ತೆರೆಯಲ್ಲ. ಎಂದು ಹೇಳುತ್ತಾರೆ. ಪೊಲೀಸರು ಮತ್ತು ನಿವೇತಾ ಅವರ ನಡುವಿನ ವಾಗ್ವಾದದ ದೃಶ್ಯವನ್ನು ರೆಕಾರ್ಡ್‌ ಮಾಡುತ್ತಿದ್ದ ವ್ಯಕ್ತಿಗೂ ಆ ಸಂದರ್ಭದಲ್ಲಿ ನಟಿ ತರಾಟೆಗೆ ತೆಗೆದುಕೊಳ್ಳುತ್ತಾರೆ.

ಇದನ್ನೂ ಓದಿ: Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಇದು ಪ್ರಚಾರದ ಗಿಮಿಕ್‌ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ವಿಡಿಯೊ ಫೇಕ್‌ ಇರಬಬಹುದು ಶೂಟಿಂಗ್‌ ದೃಶ್ಯ ಇರಬಹುದುʼಎಂದು ಕಮೆಂಟ್‌ ಮಾಡಿದ್ದಾರೆ. ಪೊಲೀಸರು ಕಾಲಿಗೆ ಕ್ರಾಕ್ಸ್‌ ಧರಿಸಿದ್ದ ಕಾರಣ ನೆಟ್ಟಿಗರು ಇದೆಲ್ಲಾ ಪಬ್ಲಿಸಿಟಿ ಸ್ಟಂಟ್‌ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಹೀಗಿದ್ದರೂ ನಟಿ ಈ ವಿಡಿಯೋದ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

ಪ್ರಸ್ತುತ, ನಟಿ ತಮಿಳಿನ ʻಸೊಪ್ಪಣ್ಣ ಸುಂದರಿʼಯ ತೆಲುಗು ರಿಮೇಕ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೊ ಈ ಸಿನಿಮಾದೇ ಆಗಿರಬಹದು ಎಂದು ಹಲವರು ಊಹಿಸಿದ್ದಾರೆ.

Continue Reading

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

Kannada Serials TRP: ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ.ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಈ ಧಾರಾವಾಹಿಗೆ ಆರಂಭದಲ್ಲಿ ಎಷ್ಟು ಟಿಆರ್​ಪಿ ಬರುತ್ತಿತ್ತೋ ಅಷ್ಟು ಟಿಆರ್​ಪಿ ಈಗ ಸಿಗುತ್ತಿಲ್ಲ. ಈ ಕಾರಣಕ್ಕೆ ಧಾರಾವಾಹಿ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ.

VISTARANEWS.COM


on

Kannada Serials TRP Colors Kannada serials not in top 5 Shravani Subramanya is back on track
Koo

ಬೆಂಗಳೂರು: ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ಲಕ್ಷ್ಮೀ ನಿವಾಸ’ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಈ ಧಾರಾವಾಹಿಗೆ ಆರಂಭದಲ್ಲಿ ಎಷ್ಟು ಟಿಆರ್​ಪಿ ಬರುತ್ತಿತ್ತೋ ಅಷ್ಟು ಟಿಆರ್​ಪಿ ಈಗ ಸಿಗುತ್ತಿಲ್ಲ. ಈ ಕಾರಣಕ್ಕೆ ಧಾರಾವಾಹಿ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಈಗ ಮೂರನೇ ಸ್ಥಾನದಲ್ಲಿದೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಮೃತಧಾರೆ

ಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ಮತ್ತು ಗೌತಮ್‌ ಹನಿಮೂನ್‌ ಹಾಳು ಮಾಡಿದ್ದಾಳೆ ಶಕುಂತಲಾ. ಇದೀಗ ಅಜ್ಜಿ ಮೊಮ್ಮಗ ಗೌತಮ್‌ ಸಂಸಾರ ಶುರು ಮಾಡುವಂತೆ ಒಂದಲ್ಲ ಒಂದು ಪ್ಲ್ಯಾನ್‌ ಮಾಡುತ್ತಿದ್ದಾರೆ. ಮಲ್ಲಿಗೆ ಎಷ್ಟೋ ಶಕುಂತಲಾ ತೊಂದರೆ ಕೊಟ್ಟರೂ ಮಹಿಮಾ ಕಾವಲಾಗಿ ನಿಂತಿದ್ದಳು. ಈಗ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ. ಈಗಾಗಲೇ ಸೀತಾ ರಾಮರ ಎಂಗೇಜ್‌ಮೆಂಟ್‌ ಆಗಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಹಿನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಈ ಧಾರಾವಾಹಿಯನ್ನು ಹಿಂದಿಕ್ಕಿದೆ. ಈಗ ರಾಮ ಹಾಗೂ ಸೀತೆಯ ಮದುವೆ ನಿಶ್ಚಯ ಆಗಿದೆ. ಮುಂದಿನ ದಿನಗಳಲ್ಲಿ ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಕೆ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Continue Reading
Advertisement
Prajwal revanna
ಪ್ರಮುಖ ಸುದ್ದಿ8 mins ago

Prajwal Revanna : ಪ್ರಜ್ವಲ್​ ರೇವಣ್ಣ ಅರೆಸ್ಟ್​ ಆಗುವಾಗ ಧರಿಸಿದ್ದ ಬಟ್ಟೆ ಬ್ರಾಂಡ್ ಯಾವುದು? ಅದಕ್ಕೆಷ್ಟು ಬೆಲೆ?

contractor self harming
ಕ್ರೈಂ18 mins ago

Self Harming: ಕಂಟ್ರಾಕ್ಟರ್‌ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ, ಮತ್ತೊಂದು ಸರ್ಕಾರಿ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಯಲಿಗೆ!

Aadhaar-PAN Link
ದೇಶ32 mins ago

Aadhaar-PAN Link: ಇನ್ನೂ ಆಧಾರ್‌, ಪ್ಯಾನ್‌ ಲಿಂಕ್‌ ಆಗಿಲ್ಲವೆ? ಇಂದೇ ಕೊನೆಯ ದಿನ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

Valmiki Corporation Scam
ಪ್ರಮುಖ ಸುದ್ದಿ45 mins ago

Valmiki Corporation Scam: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್‌; ರಾಜೀನಾಮೆ ಕೊಡಲು ಸಿಎಂ ಸೂಚನೆ

RBI
ದೇಶ52 mins ago

RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ!

Raghu Thatha Hombale Films Realease date announced
ಕಾಲಿವುಡ್52 mins ago

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Anant Ambani Shakira set to perform 2nd pre-wedding
ಬಾಲಿವುಡ್56 mins ago

Anant Ambani: ಅನಂತ್ ಅಂಬಾನಿ ಕ್ರೂಸ್ ಪಾರ್ಟಿಯಲ್ಲಿ ರಂಜಿಸಲಿದ್ದಾರೆ ‘ವಾಕಾ ವಾಕಾ’ ಖ್ಯಾತಿಯ ಪಾಪ್ ಗಾಯಕಿ!

Prajwal Revanna
ಪ್ರಮುಖ ಸುದ್ದಿ1 hour ago

Prajwal Revanna : ನಾನವನಲ್ಲ, ನಾನವನಲ್ಲ; ಪೊಲೀಸರ ಪ್ರಶ್ನೆಗೆ ಈ ಒಂದೇ ಉತ್ತರ ನೀಡುತ್ತಿರುವ ಪ್ರಜ್ವಲ್​ ರೇವಣ್ಣ!

T20 World Cup 2024
ಕ್ರೀಡೆ1 hour ago

T20 World Cup 2024: ನ್ಯೂಯಾರ್ಕ್​ನಲ್ಲಿ ಕಳಪೆ ಗುಣಮಟ್ಟದ ಆಹಾರ; ಟೀಮ್​ ಇಂಡಿಯಾ ಆಟಗಾರರಿಂದ ಅಸಮಾಧಾನ

Vijayanagara News
ವಿಜಯನಗರ1 hour ago

Vijayanagara News : ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌