ಪ್ರವಾದಿ ಮೊಹಮ್ಮದ್​ಗೆ ಅವಹೇಳನ; ತೆಲಂಗಾಣ ಬಿಜೆಪಿ ಶಾಸಕ ಬಂಧನ - Vistara News

ದೇಶ

ಪ್ರವಾದಿ ಮೊಹಮ್ಮದ್​ಗೆ ಅವಹೇಳನ; ತೆಲಂಗಾಣ ಬಿಜೆಪಿ ಶಾಸಕ ಬಂಧನ

ನೂಪುರ್ ಶರ್ಮಾ ಈಗಾಗಲೇ ಪ್ರವಾದಿ ಮೊಹಮ್ಮದ್​ ವಿರುದ್ಧ ಮಾತಾಡಿ ಸಂಕಷ್ಟಕ್ಕೀಡಾಗಿದ್ದಾರೆ. ಇದೀಗ ಬಿಜೆಪಿಯ ಇನ್ನೊಬ್ಬ ಮುಖಂಡ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

VISTARANEWS.COM


on

Telangana BJP MLA T Raja Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಪ್ರವಾದಿ ಮೊಹಮ್ಮದ್​ ವಿರುದ್ಧ ಮಾತನಾಡಿ ಬಿಜೆಪಿ ಮಾಜಿ ವಕ್ತಾರೆ ನೂಪುರ್​ ಶರ್ಮಾ ಎಷ್ಟು ಸಂಕಷ್ಟಕ್ಕೀಡಾಗಿದ್ದಾರೆ ಎಂಬುದನ್ನು ನೋಡಿದ್ದೇವೆ. ಅವರ ವಿರುದ್ಧ ಹಲವು ಕೇಸ್​​ಗಳು ದಾಖಲಾಗಿದ್ದು ಒಂದೆಡೆಯಾದರೆ, ನೂಪುರ್​ಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವುದು ಇನ್ನೊಂದೆಡೆ. ಈ ಮಧ್ಯೆ ತೆಲಂಗಾಣ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್​​ (Telangana BJP MLA T Raja Singh)ಕೂಡ ಇದೇ ಕೇಸ್​​ನಲ್ಲಿ ಸಿಲುಕಿದ್ದಾರೆ. ಪ್ರವಾದಿ ಮೊಹಮ್ಮದ್​​ ಬಗ್ಗೆ ಅವಹೇಳನ ಮಾಡಿದ ರಾಜಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಟಿ. ರಾಜಾ ಸಿಂಗ್ ಘೋಶಾಮಹಲ್​ ಕ್ಷೇತ್ರದ ಶಾಸಕನಾಗಿದ್ದು, ಅವರು ​ ಪ್ರವಾದಿ ಬಗ್ಗೆ ಅವಹೇಳನ ಮಾಡಿದ ವಿಡಿಯೋ ವೈರಲ್​ ಆಗಿತ್ತು. ಅದರ ಬೆನ್ನಲ್ಲೇ ಸೋಮವಾರ ರಾತ್ರಿ ಹೈದರಾಬಾದ್​ನ ಪೊಲೀಸ್​ ಆಯುಕ್ತ ಸಿವಿ ಆನಂದ್​ ಕಚೇರಿ ಎದುರು, ದಬೀರ್​​ಪುರ, ಭವಾನಿನಗರ್​, ರೇನ್‌ಬಜಾರ್ ಮತ್ತು ಮಿರ್‌ಚೌಕ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆದಿತ್ತು. ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ರಾಜಾ ಸಿಂಗ್​​ರನ್ನು ಬಂಧಿಸುವಂತೆ ಆಗ್ರಹಿಸಿದ್ದರು. ದಬೀರ್​ಪುರ ಠಾಣೆಯಲ್ಲಿ ಈಗ ರಾಜಾ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿತ್ತು. ಇದೀಗ ಅವರನ್ನು ಅರೆಸ್ಟ್ ಮಾಡಲಾಗಿದೆ.

ಕಾಮಿಡಿಯನ್​ ಮುನಾವರ್​ ಫಾರೂಕಿಗೂ ರಾಜಾ ಸಿಂಗ್​ ಬೆದರಿಕೆ ಒಡ್ಡಿದ್ದರು. ಹೈದರಾಬಾದ್​ನಲ್ಲಿ ಮುನಾವರ್​ ಕಾರ್ಯಕ್ರಮವನ್ನು ಆಗಸ್ಟ್​ 20ರಂದು ಆಯೋಜಿಸಲಾಗಿತ್ತು. ಆದರೆ ಅದನ್ನು ತಡೆಯಲು ರಾಜಾ ಸಿಂಗ್​ ಮತ್ತು ಅವರ ಸಹಚರರು ತುಂಬ ಪ್ರಯತ್ನಿಸಿದ್ದರು. ‘ಮುನಾವರ್ ಫಾರೂಕಿ ಹಿಂದು ದೇವರು-ದೇವತೆಗಳನ್ನು ಅಪಹಾಸ್ಯ ಮಾಡುತ್ತಾನೆ. ಹಾಗಾಗಿ ಆತನ ಕಾರ್ಯಕ್ರಮ ನಡೆಯಲು ಬಿಡುವುದಿಲ್ಲ. ಮುನಾವರ್​ ಸಮಾರಂಭ ನಡೆಯುವ ಸ್ಥಳಕ್ಕೆ ಬೆಂಕಿ ಹಚ್ಚುತ್ತೇವೆ’ ಎಂದೂ ಇವರು ಬೆದರಿಕೆ ಒಡ್ಡಿದ್ದರು. ಅವರು ಹೀಗೆ ಬೆದರಿಕೆ ಹಾಕಿದ ವಿಡಿಯೋಗಳನ್ನೂ ಸೋಷಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದರು. ಆಗ ಮುನ್ನೆಚ್ಚರಿಕೆ ಕ್ರಮವಾಗಿ ರಾಜಾ ಮತ್ತು ಅವರ ನಾಲ್ವರು ಸಹಚರರನ್ನು ಕಸ್ಟಡಿಗೆ ಕರೆದುಕೊಂಡು ಹೋಗಲಾಗಿತ್ತು. ಅಂದಹಾಗೇ, ಆ ಕಾರ್ಯಕ್ರಮ ನಿಗದಿತ ದಿನದಂದು ಯಶಸ್ವಿಯಾಗಿ ನಡೆದಿದೆ.

ಇದನ್ನೂ ಓದಿ: ISIS terror | ರಷ್ಯದಲ್ಲಿ ಸಿಕ್ಕಿಬಿದ್ದ ಐಸಿಸ್‌ ಉಗ್ರನಿಗೆ ಆನ್‌ಲೈನ್‌ನಲ್ಲೇ ತರಬೇತಿ, ನೂಪುರ್‌ ಶರ್ಮಾ ಕೊಲ್ಲಲು ಸ್ಕೆಚ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mann Ki Baat: ನಾಲ್ಕು ತಿಂಗಳ ನಂತರ ಮೋದಿ ʼಮನ್‌ ಕೀ ಬಾತ್‌ʼ; Live ಲಿಂಕ್ ಇಲ್ಲಿದೆ

Mann Ki Baat:ಇನ್ನು ಈ ಬಗ್ಗೆ ಪ್ರಧಾನಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಮತ್ತೆ ನಿಮ್ಮನ್ನು ಭೇಟಿಯಾಗುತ್ತಿರುವುದು ಸಂತಸದ ವಿಚಾರ. ಎಲ್ಲರನ್ನೂ ಈ ಕಾರ್ಯಕ್ರಮಕ್ಕೆ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಬೆಳಗ್ಗೆ 11ಗಂಟೆಗೆ ಭೇಟಿಯಾಗೋಣ ಎಂದಿದ್ದಾರೆ.

VISTARANEWS.COM


on

Mann Ki Baat
Koo

ಹೊಸದಿಲ್ಲಿ: ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊಲದ ಬಾರಿಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ಮನ್‌ ಕೀ ಬಾತ್‌(Mann Ki Baat) ಕಾರ್ಯಕ್ರಮ ಇಂದು ಪ್ರಸಾರವಾಗಲಿದೆ. ಬರೋಬ್ಬರಿ ಮೂರು ನಾಲ್ಕು ನಂತರ ನಡೆಯುತ್ತಿರುವ ಈ ರೇಡಿಯೋ ಕಾರ್ಯಕ್ರಮದ ಬೆಳಗ್ಗೆ 11 ಗಂಟೆಗೆ ಪ್ರಸಾವಾಗಲಿದೆ. ಈ ಬಾರಿ ಹಲವು ಮಹತ್ವದ ವಿಚಾರಗಳ ಬಗ್ಗೆ ಪ್ರಧಾನಿ ಮಾತನಾಡುವ ನಿರೀಕ್ಷೆ ಇದೆ.

ಇನ್ನು ಈ ಬಗ್ಗೆ ಪ್ರಧಾನಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಮತ್ತೆ ನಿಮ್ಮನ್ನು ಭೇಟಿಯಾಗುತ್ತಿರುವುದು ಸಂತಸದ ವಿಚಾರ. ಎಲ್ಲರನ್ನೂ ಈ ಕಾರ್ಯಕ್ರಮಕ್ಕೆ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಬೆಳಗ್ಗೆ 11ಗಂಟೆಗೆ ಭೇಟಿಯಾಗೋಣ ಎಂದಿದ್ದಾರೆ.

ಮನ್ ಕಿ ಬಾತ್ ಕಾರ್ಯಕ್ರಮ ಅಕ್ಟೋಬರ್ 3, 2014 ರಂದು ಪ್ರಾರಂಭವಾದಾಯಿತು. ಪ್ರಧಾನಿ ಪ್ರತಿ ತಿಂಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗವಹಿಸಲು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದ್ದಾರೆ. ಪ್ರತಿ ತಿಂಗಳು ವಿವಿಧ ಕ್ಷೇತ್ರದ ಸಾಧನೆಗಳು, ಕಹಿಘಟನೆ, ಸಂತೋಷ ಮತ್ತು ಹೆಮ್ಮೆಯ ಕ್ಷಣಗಳನ್ನು ಮತ್ತು ನವ ಭಾರತಕ್ಕಾಗಿ ಸಲಹೆಗಳನ್ನು ಮೋದಿ ಈ ಕಾರ್ಯಕ್ರಮದ ಮೂಲಕ ಹಂಚಿಕೊಳ್ಳುತ್ತಿದ್ದಾರೆ.

22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳನ್ನು ಹೊರತುಪಡಿಸಿ, ‘ಮನ್ ಕಿ ಬಾತ್’ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ಡಾರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಮನ್ ಕಿ ಬಾತ್ ಅನ್ನು ಆಲ್ ಇಂಡಿಯಾ ರೇಡಿಯೊದ 500 ಕ್ಕೂ ಹೆಚ್ಚು ಪ್ರಸಾರ ಕೇಂದ್ರಗಳು ಪ್ರಸಾರ ಮಾಡುತ್ತವೆ.

ಇನ್ನು ನಿನ್ನೆಯಷ್ಟೇ ಐಸಿಸಿ ಟಿ 20 ವಿಶ್ವಕಪ್ (T20 World Cup 2024 ) ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಫೈನಲ್ ನಲ್ಲಿ ಭಾರತ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ಮತ್ತು ತಂಡವು 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ದೇಶಕ್ಕೆ ತಂದಿತು ಮತ್ತು 2011 ರ ನಂತರ ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ.

ಚಾಂಪಿಯನ್ಸ್! ನಮ್ಮ ತಂಡವು ಟಿ 20 ವಿಶ್ವಕಪ್ ಅನ್ನು ತನ್ನದೇ ಶೈಲಿಯಲ್ಲಿ ಮನೆಗೆ ತರುತ್ತಿದೆ. ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading

ದೇಶ

Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Indian Armed Forces: ಜನರಲ್‌ ದ್ವಿವೇದಿ ಅವರ ರೋಲ್‌ ನಂಬರ್‌ 931 ಹಾಗೂ ಅಡ್ಮಿರಲ್‌ ತ್ರಿಪಾಠಿ ಅವರು ರೋಲ್‌ ನಂಬರ್‌ 938. ಶಾಲಾ ದಿನಗಳಿಂದಲೇ ಇವರಿಬ್ಬರೂ ಸ್ನೇಹಿತರಾಗಿದ್ದು, ಇಬ್ಬರೂ ಜೊತೆಯಾಗಿಯೇ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ಇದಾದ ಬಳಿಕ ಇಬ್ಬರೂ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.

VISTARANEWS.COM


on

Indian Armed Forces
Koo

ಹೊಸದಿಲ್ಲಿ: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ತರಗತಿಯಲ್ಲಿ ಓದಿದ್ದ ಇಬ್ಬರು ಭಾರತೀಯ ಸೇನೆ(Indian Army) ಮತ್ತು ನೌಕಾಪಡೆ(Navy)ಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದಾರೆ(Indian Armed Forces). ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ(Upendra Dwivedi) ಹಾಗೂ ನೌಕಾಪಡೆ ಮುಖ್ಯಸ್ಥರಾಗಿ ಅಡ್ಮಿರಲ್‌ ದಿನೇಶ್‌ ತ್ರಿಪಾಠಿ(Dinesh Tripati) ನೇಮಕಗೊಂಡಿದ್ದಾರೆ. ಇವರಿಬ್ಬರೂ 70ರ ದಶಕದಲ್ಲಿ ಮಧ್ಯಪ್ರದೇಶದ ರೇವಾ ಸೈನಿಕ ಶಾಲೆಯಲ್ಲಿ 5A ತರಗತಿಯಲ್ಲಿ ಜೊತೆಯಲ್ಲಿ ಓದಿದ್ದರು.

ಇವರಿಬ್ಬರೂ ಶಾಲಾ ದಿನಗಳಿಂದ ಬಹಳ ಬಾಂದವ್ಯದಿಂದ ಇದ್ದರು. ಜನರಲ್‌ ದ್ವಿವೇದಿ ಅವರ ರೋಲ್‌ ನಂಬರ್‌ 931 ಹಾಗೂ ಅಡ್ಮಿರಲ್‌ ತ್ರಿಪಾಠಿ ಅವರು ರೋಲ್‌ ನಂಬರ್‌ 938. ಶಾಲಾ ದಿನಗಳಿಂದಲೇ ಇವರಿಬ್ಬರೂ ಸ್ನೇಹಿತರಾಗಿದ್ದು, ಇಬ್ಬರೂ ಜೊತೆಯಾಗಿಯೇ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ಇದಾದ ಬಳಿಕ ಇಬ್ಬರೂ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.

ರಕ್ಷಣಾ ಸಚಿವರ ಅಧಿಕೃತ ವಕ್ತಾರ ಎ ಭರತ್ ಭೂಷಣ್ ಬಾಬು ಅವರು ಎಕ್ಸ್ ಪೋಸ್ಟ್‌ನಲ್ಲಿ, “ಭಾರತೀಯ ಮಿಲಿಟರಿ ಇತಿಹಾಸದಲ್ಲಿ ಮೊದಲ ಬಾರಿಗೆ, ಒಂದೇ ಶಾಲೆಯ ವಿದ್ಯಾರ್ಥಿಗಳು ನೌಕಾಪಡೆ ಮತ್ತು ಸೇನಾ ಮುಖ್ಯಸ್ಥರಾಗಿದ್ದಾರೆ. ಇಬ್ಬರು ಅದ್ಭುತ ವಿದ್ಯಾರ್ಥಿಗಳು ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. 50 ವರ್ಷಗಳ ನಂತರ ಜೊತೆಯಾಗಿ ಇಬ್ಬರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಎರಡು ತಿಂಗಳ ಅಂತರದಲ್ಲಿ ಇಬ್ಬರು ಸಹಪಾಠಿಗಳ ನೇಮಕಾತಿಗಳು ಒಂದೇ ಸಮಯದಲ್ಲಿ ಬಂದಿವೆ. ಅಡ್ಮಿರಲ್ ಅವರು ಮೇ 1 ರಂದು ಭಾರತೀಯ ನೌಕಾಪಡೆಯ ಕಮಾಂಡ್ ಅನ್ನು ವಹಿಸಿಕೊಂಡರು, ಲೆಫ್ಟಿನೆಂಟ್ ಜನರಲ್ ದ್ವಿವೇದಿ ಇಂದು (ಜೂನ್ 30) ತಮ್ಮ ಹೊಸ ನೇಮಕಾತಿಯನ್ನು ವಹಿಸಿಕೊಳ್ಳಲಿದ್ದಾರೆ.

ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಯಾರು?

ಜುಲೈ 1, 1964 ರಂದು ಜನಿಸಿದ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಡಿಸೆಂಬರ್ 15, 1984 ರಂದು ಭಾರತೀಯ ಸೇನೆಯ ಪದಾತಿ ದಳಕ್ಕೆ (ಜಮ್ಮು ಮತ್ತು ಕಾಶ್ಮೀರ ರೈಫಲ್ಸ್) ನೇಮಕಗೊಂಡರು. ಸುಮಾರು 40 ವರ್ಷಗಳ ಕಾಲ ಅವರ ಸುದೀರ್ಘ ಮತ್ತು ವಿಶಿಷ್ಟ ಸೇವೆ ಸಲ್ಲಿಸಿದ್ದು, ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು ಉತ್ತರ ಸೇನಾ ಕಮಾಂಡರ್ ಆಗಿ ಸುದೀರ್ಘ ಅಧಿಕಾರಾವಧಿಯನ್ನು ಹೊಂದಿದ್ದರು, ಅಲ್ಲಿ ಅವರು ಪೂರ್ವ ಲಡಾಖ್‌ನಲ್ಲಿನ ಎಲ್‌ಎಸಿಯಲ್ಲಿನ ಮಿಲಿಟರಿ ಸ್ಟ್ಯಾಂಡ್‌ಫ್‌ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳಿಗೆ ದೀರ್ಘಾವಧಿಯ ಮಾನ್ಯತೆ ಹೊಂದಿದ್ದಾರೆ.

ಅವರು ನ್ಯಾಷನಲ್ ಡಿಫೆನ್ಸ್ ಕಾಲೇಜ್ ಮತ್ತು US ಆರ್ಮಿ ವಾರ್ ಕಾಲೇಜ್‌ನ ಹಳೆಯ ವಿದ್ಯಾರ್ಥಿಯೂ ಆಗಿದ್ದಾರೆ ಮತ್ತು DSSC ವೆಲ್ಲಿಂಗ್‌ಟನ್ ಮತ್ತು ಆರ್ಮಿ ವಾರ್ ಕಾಲೇಜ್, Mhow ನಲ್ಲಿ ಕೋರ್ಸ್‌ಗಳನ್ನು ಪಡೆದಿದ್ದಾರೆ. ಅಧಿಕಾರಿಯು ಡಿಫೆನ್ಸ್ ಮತ್ತು ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಎಂ ಫಿಲ್ ಮತ್ತು ಸ್ಟ್ರಾಟೆಜಿಕ್ ಸ್ಟಡೀಸ್ ಮತ್ತು ಮಿಲಿಟರಿ ಸೈನ್ಸ್‌ನಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ.

ಅಡ್ಮಿರಲ್ ದಿನೇಶ್ ತ್ರಿಪಾಠಿ ಯಾರು?

1985 ರಲ್ಲಿ ಭಾರತೀಯ ನೌಕಾಪಡೆಗೆ ನಿಯೋಜಿಸಲ್ಪಟ್ಟ ಅಡ್ಮಿರಲ್ ತ್ರಿಪಾಠಿ, ವಿವಿಧ ನಿರ್ಣಾಯಕ ಕಾರ್ಯಯೋಜನೆಗಳಲ್ಲಿ ಸೇವೆ ಸಲ್ಲಿಸಿದ, ಸುಮಾರು 40 ವರ್ಷಗಳ ಅನುಭವ ಇರುವ ಹಿರಿಯ ಅಧಿಕಾರಿ. ಅವರು ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್, ವೆಸ್ಟರ್ನ್ ನೇವಲ್ ಕಮಾಂಡ್ ಮತ್ತು ಕೇರಳದ ಎಝಿಮಲದಲ್ಲಿರುವ ಇಂಡಿಯನ್ ನೇವಲ್ ಅಕಾಡೆಮಿಯ ಕಮಾಂಡೆಂಟ್ ಮುಂತಾದ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿ ಅನುಭವಸ್ಥರು. ಅವರ ವೃತ್ತಿಜೀವನದುದ್ದಕ್ಕೂ, ಅವರು ಐಎನ್‌ಎಸ್ ವಿನಾಶ್, ಕಿರ್ಚ್ ಮತ್ತು ತ್ರಿಶೂಲ್ ಸೇರಿದಂತೆ ಹಲವಾರು ನೌಕಾ ಹಡಗುಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಇದನ್ನೂ ಓದಿ: Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Continue Reading

ಸಿನಿಮಾ

Actress Tamanna Bhatia: ಬೆಂಗಳೂರಿನ ಶಾಲೆಯಲ್ಲಿ ನಟಿ ತಮನ್ನಾ ಭಾಟಿಯಾ ಬಗ್ಗೆ ಪಾಠ; ಪೋಷಕರ ಆಕ್ಷೇಪ

Actress Tamanna Bhatia: ನಟಿ ತಮನ್ನಾ ಭಾಟಿಯಾ ಕುರಿತ ಅಧ್ಯಾಯವನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ʼಸಿಂಧಿ ಹೈಸ್ಕೂಲ್’ನಲ್ಲಿನ ಪಠ್ಯದಲ್ಲಿ ಸೇರಿಸಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಸಿಂಧಿ ಮಹನೀಯರ ಕುರಿತು ಸೇರಿಸಲಾದ ಅಧ್ಯಾಯದಲ್ಲಿ ತಮನ್ನಾ ಭಾಟಿಯಾ ಕುರಿತ ವಿವರವೂ ಇದೆ.

VISTARANEWS.COM


on

tamanna bhatia gold
Koo

ಬೆಂಗಳೂರು: ನಟಿ ತಮನ್ನಾ ಭಾಟಿಯಾ (Actress Tamanna Bhatia) ಬಗ್ಗೆ ಬೆಂಗಳೂರಿನ ಸಿಂಧಿ ಶಾಲೆಯೊಂದರಲ್ಲಿ (Sindhi School) ಪಠ್ಯವೊಂದನ್ನು (Text) ಸೇರಿಸಲಾಗಿದೆ. ಪೋಷಕರು ಈ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿದ್ದು, ಈಕೆಯ ಬಗ್ಗೆ ಮಕ್ಕಳು ʼಹೆಚ್ಚಿನ ಅಧ್ಯಯನʼಕ್ಕೆ ಇಂಟರ್‌ನೆಟ್‌ (Internet) ಮೊರೆ ಹೋದರೆ ಗತಿಯೇನು?ʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಮ್ಮ ಸೌಂದರ್ಯ ಹಾಗೂ ಅಭಿನಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ, ಇತ್ತೀಚೆಗೆ ವೆಬ್‌ಸಿರೀಸ್‌ನಲ್ಲಿ ಬೋಲ್ಡ್ ದೃಶ್ಯಗಳ ಮೂಲಕ ಸುದ್ದಿಯಾಗಿದ್ದ ನಟಿ ತಮನ್ನಾ ಭಾಟಿಯಾ ಕುರಿತ ಅಧ್ಯಾಯವನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ʼಸಿಂಧಿ ಹೈಸ್ಕೂಲ್’ನಲ್ಲಿನ ಪಠ್ಯದಲ್ಲಿ ಸೇರಿಸಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಸಿಂಧಿ ಮಹನೀಯರ ಕುರಿತು ಸೇರಿಸಲಾದ ಅಧ್ಯಾಯದಲ್ಲಿ ತಮನ್ನಾ ಭಾಟಿಯಾ ಕುರಿತ ವಿವರವೂ ಇದೆ.

ಇದಕ್ಕೆ ಇಲ್ಲಿ ಓದುತ್ತಿರುವ ಏಳನೇ ತರಗತಿ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಅವರೆಲ್ಲ ದೂರು ದಾಖಲಿಸಿದ್ದಾರೆ. ಅಧ್ಯಾಯ ಸೇರ್ಪಡೆ ಕುರಿತು ಪೋಷಕರು ಶಾಲೆಯ ಆಡಳಿತದ ಗಮನಕ್ಕೆ ತಂದಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ, ʼಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್’ ಸಂಪರ್ಕಿಸುವಂತೆ ತಿಳಿಸಿದೆ ಎಂದು ತಿಳಿದು ಬಂದಿದೆ.

ಹೆಬ್ಬಾಳದ ಸಿಂಧಿ ಶಾಲೆಯಲ್ಲಿ 7ನೇ ತರಗತಿಯ ಪಠ್ಯಪುಸ್ತಕದಲ್ಲಿ ಈ ಸಮುದಾಯದ ಬಗ್ಗೆ ಪಾಠ ಒಳಗೊಂಡಿದೆ. ಅದರಲ್ಲಿ ಒಂದು ಅಧ್ಯಾಯವು ದೇಶದ ವಿಭಜನೆಯ ನಂತರದ ಜೀವನ, ಸಿಂಧ್‌ನಲ್ಲಿ ವಲಸೆ, ಸಮುದಾಯ ಮತ್ತು ಕಲಹ, 1947ರಿಂದ 1962 ಕುರಿತಾದ ಅಂಶಗಳು ಇವೆ. ಭಾಷಾ ಅಲ್ಪಸಂಖ್ಯಾತರಾದ ಸಿಂಧಿ ಸಮುದಾಯ ಮತ್ತು ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಅವಕಾಶ ಮಾಡಿಕೊಡಲಾಗಿದೆ.

ಸಿಂಧಿ ಸಮುದಾಯದ ನಟ ರಣವೀರ್ ಸಿಂಗ್ (Actor Ranveer Singh) ಅವರಂತಹ ಸಮುದಾಯದ ಪ್ರಮುಖ ಮತ್ತು ಯಶಸ್ವಿ ಸದಸ್ಯರನ್ನು ಅಧ್ಯಾಯದಲ್ಲಿ ಸೇರಿಸಿದರೆ ಯಾವುದೇ ವಿರೋಧ ಇಲ್ಲ. ಆದರೆ ತಮನ್ನಾಗೆ ಸಂಬಂಧಿಸಿದ ವಿಷಯ ಸೇರ್ಪಡೆ ಸರಿಯಲ್ಲ ಎಂದು ಪೋಷಕರು ಹೇಳಿದರು.

ಸ್ವಾತಂತ್ರ್ಯಾ ನಂತರದ ಭಾರತೀಯರ ಜನಜೀವನ ಆಧ್ಯಾಯದಲ್ಲಿ ತಮನ್ನಾ ಭಾಟಿಯಾ ಬಗ್ಗೆ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಅವರು ಹಸಿ ಬಿಸಿ, ಬೋಲ್ಡ್ ದೃಶ್ಯಗಳಲ್ಲಿ ನಟಿಸುತ್ತಾರೆ. ಅವರು ಕಮರ್ಷಿಯಲ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇವರು ಮಕ್ಕಳಿಗೆ ಆದರ್ಶವಾಗಬೇಕೇ?. ಇದು ಸರಿಯಲ್ಲ ಎಂದು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಮತ್ತೊಂದು ಸಂಸ್ಕೃತಿಯ ಬಗ್ಗೆ ಪರಿಚಯಿಸುವ ಬಗ್ಗೆ ನಮಗೆ ಯಾವುದೇ ವಿರೋಧವಿಲ್ಲ. ಆದರೆ ಪೋಷಕರು ನಮ್ಮ ಆಕ್ಷೇಪಣೆಯು 7ನೇ ತರಗತಿ ವಿದ್ಯಾರ್ಥಿಗಳಿಗೆ ಸೂಕ್ತವಲ್ಲದ ನಟಿಯ ಅಧ್ಯಾಯ ಒಳಗೊಂಡಿದೆ. ಇದನ್ನು ವಿರೋಧಿಸಿದರೆ, ತಮ್ಮ ವಾರ್ಡ್‌ಗಳಿಗೆ ವರ್ಗಾವಣೆ ಪ್ರಮಾಣಪತ್ರ ನೀಡುವುದಾಗಿ ಶಾಲಾ ಆಡಳಿತ ಮಂಡಳಿ ಬೆದರಿಕೆ ನೀಡುತ್ತಿದೆ ಎಂದು ಪೋಷಕರು ಆರೋಪಿಸಿದರು.

ಸಿಂಧಿ ಸಮುದಾಯದ ಹಿರಿಯ ಕಲಾವಿದರ ಕುರಿತ ಅಧ್ಯಾಯಗಳ ಬೋಧನೆ ಬಗ್ಗೆ ಸಮಸ್ಯೆ ಇಲ್ಲ. ಆದರೆ ತಮನ್ನಾ ಭಾಟಿಯಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಿದರೆ ಅರೆಬರೆ ಬಟ್ಟೆಯ, ಅಸೂಕ್ತವಾದ ವಿಷಯ ಕಾಣಿಸುತ್ತದೆ. ಹೀಗಾಗಿ ಇವರ ಬಗ್ಗೆ ಮಕ್ಕಳಿಗೆ ಹೇಳಿಕೊಡುವುದು ಸೂಕ್ತ ಅಲ್ಲ ಎಂದು ಪೋಷಕರು ಆಡಳಿತ ಮಂಡಳಿಗೆ, ಸಂಬಂಧಿಸಿದ ಇಲಾಖೆಗೆ ದೂರಿದ್ದಾರೆ.

ಇದನ್ನೂ ಓದಿ: Star Fashion: ಪಂಚೆ ಜೊತೆ ಟ್ರೋಫಿ ಜಾಕೆಟ್‌ ಧರಿಸಿದ ನಟಿ ತಮನ್ನಾಳ ಯೂನಿಕ್‌ ಫ್ಯಾಷನ್‌!

Continue Reading

Latest

Railway Rules: ರೈಲು ಪ್ರಯಾಣಿಕರು ತಿಳಿದುಕೊಳ್ಳಲೇಬೇಕಾದ ನಿಯಮಗಳು

Railway Rules: ರೈಲಿನ ಪ್ರಯಾಣ ಆರಾಮದಾಯಕವಾಗಿರುತ್ತದೆ. ಇನ್ನು ಖರ್ಚು ಕೂಡ ಕಡಿಮೆ ಎನ್ನಬಹುದು. ಮಕ್ಕಳು, ವಯಸ್ಸಾದವರಿಗೆ ಈ ರೈಲಿನ ಪ್ರಯಾಣ ಉತ್ತಮವಾಗಿರುತ್ತದೆ. ಆದರೆ ಪ್ರತಿಯೊಬ್ಬ ರೈಲ್ವೆ ಪ್ರಯಾಣಿಕರು ತಿಳಿದುಕೊಳ್ಳಬೇಕಾದ 7 ಪ್ರಮುಖ ಭಾರತೀಯ ರೈಲ್ವೆ ನಿಯಮಗಳು ಇಲ್ಲಿವೆ. ಈ ನಿಯಮಗಳ ಬಗ್ಗೆ ಅರಿವಿದ್ದರೆ ಇನ್ಮುಂದೆ ಖುಷಿಯಾಗಿ ರೈಲಿನ ಪ್ರಯಾಣವನ್ನು ಎಂಜಾಯ್ ಮಾಡಬಹುದು.ಆ ನಿಯಮಗಳು ಏನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Railway Rules
Koo

ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುವುದೆಂದರೆ ಎಲ್ಲರಿಗೂ ತುಂಬಾ ಇಷ್ಟ. ಯಾಕೆಂದರೆ ಅಲ್ಲಿ ನಿಮಗೆ ಪ್ರಯಾಣದ ವೇಳೆ ವಾಂತಿ, ತಲೆ ಸುತ್ತುವುದು, ಶೌಚಾಲಯದಂತಹ ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ. ಮತ್ತು ಇದರ ದರ ಕೂಡ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ನಿಮಗೆ ಇಡೀ ಭಾರತವನ್ನು ಅನ್ವೇಷಣೆ ಮಾಡಲು ಭಾರತೀಯ ರೈಲ್ವೆ ಒಂದು ಅತ್ಯುತ್ತಮ ಮಾರ್ಗವಾಗಿದೆ. ಭಾರತೀಯ ರೈಲ್ವೆ 7,000ಕ್ಕೂ ಹೆಚ್ಚು ನಿಲ್ದಾಣಗಳು ಮತ್ತು ಪ್ರತಿದಿನ 23 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಾರೆ. ಆದರೆ ಈ ಸಂಸ್ಥೆ ಪ್ರಯಾಣಿಕರಿಗೆ ಕೆಲವು ನಿಯಮಗಳು ಮತ್ತು ನಿಬಂಧನೆಗಳನ್ನು ಹಾಕುತ್ತದೆ. ಹಾಗಾಗಿ ಪ್ರತಿಯೊಬ್ಬ ಪ್ರಯಾಣಿಕರು ತಿಳಿದುಕೊಳ್ಳಬೇಕಾದ 7 ಪ್ರಮುಖ ಭಾರತೀಯ ರೈಲ್ವೆ ನಿಯಮಗಳು(Railway Rules) ಇಲ್ಲಿವೆ:

ಟಿಕೆಟ್ ಬುಕಿಂಗ್:

ರೈಲಿನಲ್ಲಿ ಪ್ರಯಾಣಿಸುವಾಗ ಎಲ್ಲಾ ಪ್ರಯಾಣಿಕರು ತಮ್ಮ ಟಿಕೆಟ್ ಮರೆಯದೆ ಕೊಂಡೊಯ್ಯಬೇಕು. ಟಿಕೆಟ್‌ಗಳನ್ನು ಆನ್‌ಲೈನ್‌, ರೈಲ್ವೆ ನಿಲ್ದಾಣಗಳಲ್ಲಿ ಅಥವಾ ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮೂಲಕ ಕಾಯ್ದಿರಿಸಬಹುದು. ಟಿಕೆಟ್ ಇಲ್ಲದೆ ಪ್ರಯಾಣಿಸುವುದು ದಂಡ ಮತ್ತು ಶಿಕ್ಷೆಗೆ ಕಾರಣವಾಗುತ್ತದೆ.

ಲಗೇಜ್:

ಪ್ರಯಾಣಿಕರು ತಮ್ಮೊಂದಿಗೆ ಸಾಮಾನುಗಳನ್ನು ಲಗೇಜ್‌ನಲ್ಲಿ ಕೊಂಡೊಯ್ಯಲು ಅವಕಾಶವಿದೆ, ಆದರೆ ತೂಕವು ಅನುಮತಿಸಲಾದ ತೂಕದ ಮಿತಿಯನ್ನು ಮೀರಬಾರದು. ಫಸ್ಟ್ ಎಸಿ ಮತ್ತು 2ನೇ ಎಸಿಗೆ 40 ಕೆಜಿ, 3ನೇ ಎಸಿ ಮತ್ತು ಚೇರ್ ಕಾರ್ ಗೆ 35 ಕೆಜಿ, ಸ್ಲೀಪರ್ ಕ್ಲಾಸ್ ಗೆ 15 ಕೆಜಿ ಲಗೇಜ್ ಸಾಗಿಸಲು ಮಿತಿ ಇದೆ. ಪ್ರಯಾಣಿಕರು ಯಾವುದೇ ಅಪಾಯಕಾರಿ ಸರಕುಗಳನ್ನು ಸಾಗಿಸಲು ಅನುಮತಿ ಇಲ್ಲ.

ಮದ್ಯಪಾನ:

ರೈಲಿನಲ್ಲಿ ಮದ್ಯ ಸೇವನೆಗೆ ಅವಕಾಶವಿಲ್ಲ. ರೈಲಿನಲ್ಲಿ ಆಲ್ಕೋಹಾಲ್ ಸೇವನೆಯನ್ನು ನಿಷೇಧಿಸಲಾಗಿದೆ. ಮದ್ಯ ಸೇವಿಸಿ ಸಿಕ್ಕಿ ಬಿದ್ದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಧೂಮಪಾನ:

ರೈಲುಗಳು, ಪ್ಲಾಟ್ ಫಾರ್ಮ್‌ಗಳು ಮತ್ತು ನಿಲ್ದಾಣದ ಆವರಣದಲ್ಲಿ ಧೂಮಪಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಆಹಾರ:

ಪ್ರಯಾಣಿಕರು ತಮ್ಮದೇ ಆದ ಆಹಾರವನ್ನು ತೆಗೆದುಕೊಂಡು ಹೋಗಬಹುದು ಅಥವಾ ಪ್ಲಾಟ್‌ಫಾರ್ಮ್‌ನಲ್ಲಿರುವ ಆಹಾರ ಮಳಿಗೆಗಳಿಂದ ಆಹಾರವನ್ನು ಖರೀದಿಸಬಹುದು.

ರದ್ದತಿ ಮತ್ತು ಮರುಪಾವತಿ:

ಪ್ರಯಾಣಿಕರು ತಮ್ಮ ಟಿಕೆಟ್ ಅನ್ನು ರದ್ದುಗೊಳಿಸಲು ಬಯಸಿದರೆ, ಅವರು ಅದನ್ನು ರೈಲು ನಿರ್ಗಮನ ಸಮಯದ ಮೊದಲು ಮಾಡಬೇಕು. ಮತ್ತು ಭಾರತೀಯ ರೈಲ್ವೆಯ ರದ್ದತಿ ನೀತಿಯ ಪ್ರಕಾರ ಮರುಪಾವತಿ ನೀಡಲಾಗುವುದು.

ಸುರಕ್ಷತೆ:

ಪ್ರಯಾಣಿಕರು ತಮ್ಮ ವಸ್ತುಗಳ ಬಗ್ಗೆ ಅವರೇ ಕಾಳಜಿ ವಹಿಸಬೇಕು ಮತ್ತು ಪ್ರಯಾಣಿಸುವಾಗ ಅಮೂಲ್ಯವಾದ ವಸ್ತುಗಳನ್ನು ಒಯ್ಯುವುದನ್ನು ತಪ್ಪಿಸಬೇಕು. ಈ ವಿಚಾರದಲ್ಲಿ ಅವರು ಸಹ ಪ್ರಯಾಣಿಕರೊಂದಿಗೆ ವಾದಗಳು ಅಥವಾ ಜಗಳಗಳಲ್ಲಿ ತೊಡಗುವುದನ್ನು ತಪ್ಪಿಸಬೇಕು.

ಪ್ರಶ್ನೆ-ಉತ್ತರಗಳು:

  • ಪ್ರಶ್ನೆ 1: ಭಾರತೀಯ ರೈಲ್ವೆಯಲ್ಲಿ ನಾನು ರೈಲು ಟಿಕೆಟ್ ಗಳನ್ನು ಹೇಗೆ ಕಾಯ್ದಿರಿಸಬಹುದು?
  • ನೀವು ಭಾರತೀಯ ರೈಲ್ವೆಯಲ್ಲಿ ರೈಲು ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಕಾಯ್ದಿರಿಸಬಹುದು. ಅದಕ್ಕಾಗಿ ಐಆರ್‌ಟಿಸಿ ವೆಬ್‌ಸೈಟ್‌ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಅಥವಾ ವಿವಿಧ ರೈಲ್ವೆ ನಿಲ್ದಾಣಗಳಲ್ಲಿನ ರೈಲ್ವೆ ಮೀಸಲಾತಿ ಕೌಂಟರ್‌ಗಳಲ್ಲಿ ಟಿಕೆಟ್ ಪಡೆಯಬಹುದು.
  • ಪ್ರಶ್ನೆ 2: ನಾನು ಭಾರತೀಯ ರೈಲ್ವೆಯಲ್ಲಿ ಆಹಾರವನ್ನು ಸಾಗಿಸಬಹುದೇ?
  • ಎ 2: ಹೌದು, ನೀವು ನಿಮ್ಮ ಮನೆಯಲ್ಲಿ ತಯಾರಿಸಿದ ಆಹಾರವನ್ನು ಒಯ್ಯಬಹುದು ಅಥವಾ ಪ್ಯಾಂಟ್ರಿ ಕಾರು ಅಥವಾ ಪ್ಲಾಟ್ ಫಾರ್ಮ್‌ನಲ್ಲಿರುವ ಆಹಾರ ಮಳಿಗೆಗಳಿಂದ ಆಹಾರವನ್ನು ಖರೀದಿಸಬಹುದು.
Continue Reading
Advertisement
Kamal Haasan on limited screen time in 'Kalki 2898 AD
ಟಾಲಿವುಡ್14 mins ago

Kamal Haasan: ನನ್ನ ಪಾತ್ರ ಚಿಕ್ಕದಿರಬಹುದು ಆದರೆ ಇದು ಆರಂಭವಷ್ಟೇ ಎಂದು ಕಲ್ಕಿ ಭಾಗ- 2ರ ಸುಳಿವು ಕೊಟ್ಟ ಕಮಲ್‌ ಹಾಸನ್‌!

T20 World Cup 2024
ಕ್ರೀಡೆ18 mins ago

T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

Self Harming
ಮೈಸೂರು24 mins ago

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Jay Shah Promise
ಪ್ರಮುಖ ಸುದ್ದಿ36 mins ago

Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

snake Bite
ಕಲಬುರಗಿ46 mins ago

Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

T20 World Cup 2024 prize money
ಕ್ರೀಡೆ1 hour ago

T20 World Cup 2024 Prize Money:ಚಾಂಪಿಯನ್​ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

Text Book
ಕರ್ನಾಟಕ1 hour ago

Text Book: ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರ ಅಸಮಾಧಾನ; ಸಿಎಂಗೆ ಪತ್ರ

Virat Kohli video calls Anushka Sharma after winning
ಬಾಲಿವುಡ್1 hour ago

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Sabja Seeds Benefits
ಆರೋಗ್ಯ1 hour ago

Sabja Seeds Benefits: ಸಬ್ಜಾ ಬೀಜವನ್ನು ನೆನೆಹಾಕಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆ ದೂರ

Physical Abuse
ಚಿಕ್ಕಬಳ್ಳಾಪುರ1 hour ago

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌