Vikram Trailer: ಯಶ್‌ ಕೈಲಿದ್ದ ʼದೊಡ್ಡಮ್ಮʼ ಇದೀಗ ಕಮಲ್‌ ಹಾಸನ್‌ ಕೈಯಲ್ಲಿ! - Vistara News

ಸಿನಿಮಾ

Vikram Trailer: ಯಶ್‌ ಕೈಲಿದ್ದ ʼದೊಡ್ಡಮ್ಮʼ ಇದೀಗ ಕಮಲ್‌ ಹಾಸನ್‌ ಕೈಯಲ್ಲಿ!

“ವಿಕ್ರಮ್‌ʼ ಚಿತ್ರದ ಟ್ರೈಲರ್‌ ಬೆಚ್ಚಿ ಬೀಳಿಸುವಂತಿದೆ. ಕಮಲ್‌ ಹಾಸನ್‌ ನಟನೆಯ ಈ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಹಿನ್ನೆಲೆ ಸಂಗೀತವೂ ಅದ್ಭುತವಾಗಿದೆ. ಈ ಚಿತ್ರ ಕೂಡ ಧೂಳೆಬ್ಬಿಸಲಿದೆಯೇ ಎಂಬ ಕುತೂಹಲ ಮೂಡಿದೆ.

VISTARANEWS.COM


on

Vikram
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಮಲ್‌ ಹಾಸನ್‌ ಅಭಿನಯದ “ವಿಕ್ರಮ್‌ʼ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿದೆ. ಟ್ರೈಲರ್‌ ರಿಲೀಸ್‌ ಆಗಿದ್ದೇ ತಡ ಲಕ್ಷಾಂತರ ಅಭಿಮಾನಿಗಳು ಇದನ್ನು ನೋಡಿ ಖುಷಿಪಟ್ಟಿದ್ದಾರೆ. ಸ್ವಲ್ಪ ದಿನ ಸಿನಿಮಾದಿಂದ ದೂರ ಇದ್ದ ಕಮಲ್‌ ಹಾಸನ್‌ ಇದೀಗ ಮತ್ತೆ ಎಂಟ್ರಿ ನೀಡಿದ್ದಾರೆ. ಸಾಹಸಗಳು ಟ್ರೈಲರ್‌ನಲ್ಲಿ ಬೆಚ್ಚಿ ಬೀಳಿಸುವಂತಿದೆ. ಬ್ಯಾಕ್‌ ರೌಂಡ್‌ ಮ್ಯೂಸಿಕ್‌  ಮೈ ರೋಮಾಂಚನಗೊಳಿಸುವಂತಿದೆ.

ಇದನ್ನೂ ಓದಿ |ತಮಿಳುನಾಡಿನ ಇಡ್ಲಿ ಅಮ್ಮನಿಗೆ ಹೊಸ ಮನೆ ನೀಡಿದ ಆನಂದ್‌ ಮಹೀಂದ್ರಾ

ಕಮಲ್‌ ಹಾಸನ್‌ ಜೊತೆ ವಿಜಯ್‌ ಸೇತುಪತಿ, ಫಹಾದ್‌ ಫಾಸಿಲ್‌ ಅವರಂತಹ ಮೇರು ಕಲಾವಿದರ ದಂಡಿರುವುದನ್ನು ನೋಡಿ ವಾವ್‌ ಅನ್ನುತ್ತಿದ್ದಾರೆ ಪ್ರೇಕ್ಷಕರು.

ಯಶ್‌ ಅವರ ಕೆಜಿಎಫ್‌-2  ಸಿನಿಮಾದಲ್ಲಿ “ದೊಡ್ಡಮ್ಮʼ ಬಹಳ ಫೇಮಸ್ ಆಗಿತ್ತು. ದೊಡ್ಡಮ್ಮ ಮೂಲಕ ಒಂದರ ಮೇಲೊಂದು ಗುಂಡು ಹಾರಿಸಿ, ಬ್ಯಾರೆಲ್‌ ಕೆಂಪಾಗಿ ಅದರಲ್ಲೆ ಸಿಗರೇಟ್‌ ಸೇದುವ ದೃಶ್ಯಕ್ಕೆ ಫ್ಯಾನ್‌ಗಳು ಫಿದಾ ಆಗಿದ್ದರು. ಇದೀಗ ಅದೇ ರೀತಿಯ “ದೊಡ್ಡಮ್ಮʼನನ್ನು ಹಿಡಿದುಕೊಂಡು ಕಮಲ್‌ ಹಾಸನ್‌ ಪೋಸ್‌ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ವಿಕ್ರಮ್‌ ತಂಡ ಕೆಜಿಎಫ್‌ 2ನಿಂದ ಪ್ರಭಾವಿತವಾಯಿತೇ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕಮಲ್‌ ಹಾಸನ್‌ ಮತ್ತು ಆರ್‌ ಮಹೇಂದ್ರನ್‌ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್‌ ರವಿಚಂದರ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ಗಿರೀಶ್‌ ಗಂಗಾಧರನ್‌ ಛಾಯಾಗ್ರಹಣ ಮಾಡಿದ್ದಾರೆ. ಜೂನ್‌ 3ರಂದು ಸಿನಿಮಾ ರಿಲೀಸ್‌ ಆಗಲಿದ್ದು, ಇದೂ ಕೂಡ ಹೊಸ ದಾಖಲೆ ಬರೆಯುವ ಸಾದ್ಯತೆ ಇದೆ.

ಇದನ್ನೂ ಓದಿ |Trivikrama: ವಿಕ್ರಮ್ ರವಿಚಂದ್ರನ್ ನಟನೆಯ ‘ತ್ರಿವಿಕ್ರಮ’ ಸಿನಿಮಾ ಡೇಟ್‌ ಅನೌನ್ಸ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Kareena Kapoor: ಚಿತ್ರದಲ್ಲಿ ಕರೀನಾ ಕಪೂರ್ ಅವರದ್ದು ಅತಿಥಿ ಪಾತ್ರವಲ್ಲ. ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.

VISTARANEWS.COM


on

kareena kapoor out from yash starrer toxic
Koo

ಬೆಂಗಳೂರು: ʼಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ  ಎಂದು ಫ್ಯಾನ್ಸ್‌ ಸಂತದಲ್ಲಿ ಇದ್ದಿದ್ದರು. ಆದರೀಗ ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.

ಚಿತ್ರದಲ್ಲಿ ಕರೀನಾ ಕಪೂರ್ ಅವರದ್ದು ಅತಿಥಿ ಪಾತ್ರವಲ್ಲ. ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಡೇಟ್‌ ಹೊಂದಾಣಿಕೆ ಸಮಸ್ಯೆ ಬಂದ ಕಾರಣ ಕರೀನಾ ಅವರು ಈ ಸಿನಿಮಾದಿಂದ ಹೊರ ಬಂದಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಚಿತ್ರತಂಡ ಇನ್ನೊಬ್ಬ ನಟಿಯನ್ನು ಹುಡುಕುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Crime News: ಪತ್ನಿಯ ಪ್ರಿಯಕರನ ದ್ವೇಷಕ್ಕೆ ಬಲಿಯಾಯ್ತು ಎರಡು ಜೀವ; ಪಾರ್ಸಲ್‌ ಬಾಂಬ್‌ ಸ್ಫೋಟಕ್ಕೆ ಅಪ್ಪ-ಮಗಳು ಸಾವು

ಪ್ರಶಾಂತ್‌ ನೀಲ್‌ ನಿರ್ದೇಶನದ ʼಕೆಜಿಎಫ್‌ 2ʼ ಚಿತ್ರದಲ್ಲಿ ಬಾಲಿವುಡ್‌ ತಾರೆಯರಾದ ಸಂಜಯ್‌ ದತ್‌ ಮತ್ತು ರವೀನಾ ಟಂಡನ್‌ ಕಾಣಿಸಿಕೊಂಡಿದ್ದರು. ಯಶ್‌ ಜತೆ ಇವರ ಪಾತ್ರಗಳೂ ಮೆಚ್ಚುಗೆ ಪಡೆದಿದ್ದವು. ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ʼಟಾಕ್ಸಿಕ್‌ʼ ಚಿತ್ರವನ್ನು ನಿರ್ಮಿಸಲಿದ್ದಾರೆ.

ಕಳೆದ ತಿಂಗಳು ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಇದರಿಂದ ಕನ್ಫರ್ಮ್ ಆಗಿದೆ.

Continue Reading

ಕಿರುತೆರೆ

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Shrirasthu Shubhamasthu: ಪ್ರತಿ ಧಾರಾವಾಹಿಯಲ್ಲಿಯೂ ಕಥೆಯಲ್ಲಿ ಯಾವುದಾದರೂ ಮುಖ್ಯ ರಹಸ್ಯವನ್ನು ಗುಟ್ಟಾಗಿಯೇ ಇಡುತ್ತಾರೆ. ಆ ಗುಟ್ಟು ರಟ್ಟಾದರೆ ಧಾರಾವಾಹಿಯೇ ಅಂತ್ಯಗೊಂಡಂತೆ. ಆದರೀಗ ಶಾವರ್ರಿ ಪಾತ್ರಧಾರಿ ತಾನು ಇಷ್ಟೂ ದಿನ ಸೇಡು ತೀರಿಸಿಕೊಳ್ಳಲು ಕಾರಣ ಏನು ಎಂಬುದುನ್ನು ಹೇಳ ಹೊರಟ್ಟಿದ್ದಾಳೆ. ಶ್ರೀರಸ್ತು ಶುಭಮಸ್ತು’ ಧಾರಾವಾಹಿಯು ಮರಾಠಿಯ ‘ಅಗ್ಗಾಬಾಯಿ ಸಾಸುಭಾಯಿ’ಯ ರಿಮೇಕ್ ಆಗಿದೆ. ‘ಶ್ರೀರಸ್ತು ಶುಭಮಸ್ತು’ 100 ಕ್ಕೂ ಹೆಚ್ಚು ಸಂಚಿಕೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ʻ

VISTARANEWS.COM


on

Shrirasthu Shubhamasthu serial will be end
Koo

ಬೆಂಗಳೂರು:  ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ‘ಶ್ರೀರಸ್ತು ಶುಭಮಸ್ತು’ (Shrirasthu Shubhamasthu) ಕೂಡ ಒಂದು. ಟಿಆರ್‌ಪಿಯಲ್ಲಿ ಮೊದ ಮೊದಲು ಒಳ್ಳೆಯ ಟಿಆರ್‌ಪಿ ಪಡೆದ ಧಾರಾವಾಹಿ ಬರಬರುತ್ತಾ ಟಾಪ್‌ 5ನಲ್ಲೇ ಇಲ್ಲವಾಗಿತ್ತು. ಆದರೀಗ ಧಾರಾವಾಹಿ ಮುಕ್ತಾಯಗೊಳ್ಳಲಿದೆ ಎಂದು ಗಾಸಿಪ್‌ಗಳು ಹರಿದಾಡುತ್ತಿವೆ. ಏಕೆಂದರೆ ಜೀ ಕನ್ನಡ ಹೊಸ ಪ್ರೋಮೊ ಹಂಚಿಕೊಂಡಿದೆ.

ಪ್ರತಿ ಧಾರಾವಾಹಿಯಲ್ಲಿಯೂ ಕಥೆಯಲ್ಲಿ ಯಾವುದಾದರೂ ಮುಖ್ಯ ರಹಸ್ಯವನ್ನು ಗುಟ್ಟಾಗಿಯೇ ಇಡುತ್ತಾರೆ. ಆ ಗುಟ್ಟು ರಟ್ಟಾದರೆ ಧಾರಾವಾಹಿಯೇ ಅಂತ್ಯಗೊಂಡಂತೆ. ಆದರೀಗ ಶಾವರ್ರಿ ಪಾತ್ರಧಾರಿ ತಾನು ಇಷ್ಟೂ ದಿನ ಸೇಡು ತೀರಿಸಿಕೊಳ್ಳಲು ಕಾರಣ ಏನು ಎಂಬುದುನ್ನು ಹೇಳ ಹೊರಟ್ಟಿದ್ದಾಳೆ. ಶಾರ್ವರಿ ತನ್ನ ಗಂಡನ ಅಣ್ಣ ಮಾಧವ್​,ಮತ್ತು ಅವರ ಪತ್ನಿ, ಮಕ್ಕಳನ್ನು ಮುಗಿಸಿಲೆಂದು ಹೊಂಚು ಹಾಕಿ ಆ್ಯಕ್ಸಿಡೆಂಟ್​ ಮಾಡಿಸಿರುತ್ತಾಳೆ. ಆಗ ಮಾಧವನ ಪತ್ನಿ ತೀರಿಕೊಳ್ಳುತ್ತಾರೆ. ಇದಾದ ಬಳಿಕ ಮಾಧವನ ಮಕ್ಕಳು ತಮ್ಮ ಅಪ್ಪನನ್ನು ತಾಯಿ ಕೊಲ್ಲಲು ತಂದೆಯೇ ಕಾರಣವೆಂದು ಅಪ್ಪನನ್ನು ಕೀಳಾಗಿ ನೋಡಿಕೊಂಡು ಬರುತ್ತಿರುತ್ತಾರೆ. ಇನ್ನು ಶಾರ್ವರಿ ಅನ್ನು ದೇವರಂತೆ ಪೂಜೆ ಮಾಡುತ್ತಿರುತ್ತಾರೆ ಮಾಧವನ ಮಕ್ಕಳು. ಇದೀಗ ಶಾರ್ವರಿ ಗಂಡ ಮಹೇಶನಿಗೆ ಶಾರ್ವರಿಯೇ ಆಕ್ಸೆಡೆಂಟ್‌ ಮಾಡಿಸಿದ್ದು ಎಂದು ಗೊತ್ತಾಗಿದೆ. ಶಾರ್ವರಿಯ ಗುಟ್ಟು ರಟ್ಟಾದರೆ ಅಲ್ಲಿ ಕಥೆ ಮುಗಿದಂತೆ. ಆದರೀಗ ಬಿಡುಗಡೆಯಾಗಿರುವ ಪ್ರೊಮೋದಲ್ಲಿ ತುಳಸಿ ಪೂಜೆ ಮುಗಿಸುತ್ತಿದ್ದಂತೆಯೇ ಸಂಪೂರ್ಣ ಸತ್ಯವನ್ನು ಒಪ್ಪಿಕೊಳ್ಳುವಂತೆ ಮಹೇಶ್‌ ಪತ್ನಿ ಶಾರ್ವರಿಗೆ ಹೇಳಿದ್ದಾನೆ.

ಶಾರ್ವರಿ ಅಪಘಾತ ಮಾಡಿಸಲು ಕಾರಣವೂ ಇದೆ. ಮಾಧವ್​ ಪತ್ನಿ ಸುಮತಿಗೆ ಮನೆಯಲ್ಲಿ ಎಲ್ಲರೂ ಗೌರವ ಕೊಡುತ್ತಿರುತ್ತಾರೆ. ಅವಳ ಮುಂದೆಯೇ ತಲೆಬಾಗಿ ಎಲ್ಲರೂ ಮರ್ಯಾದೆ ಕೊಡುತ್ತಾರೆ, ನಾನೂ ಆ ಮನೆಯ ಸೊಸೆ. ಆದರೆ ನನಗೆ ಯಾರೂ ಮರ್ಯಾದೆ ಕೊಡುತ್ತಿರಲಿಲ್ಲ. ಅದಕ್ಕಾಗಿ ಕೊಲೆ ಮಾಡಿಸಿದೆ ಎಂದು ಎಷ್ಟು ಸಲೀಸಾಗಿ ಹಿಂದೆ ಒಪ್ಪಿಕೊಂಡಿದ್ದಳು ಶಾರ್ವರಿ. ಆದರೆ ಈಗ ಮಾಧವನಿಗೆ ಎರಡನೇ ಹೆಂಡತಿಯಾಗಿ ತುಳಸಿ ಬಂದಿರುತ್ತಾಳೆ. ತುಳಸಿಗೂ ಅದೇ ಗೌರ ಸಿಕ್ಕಿರುವುದನ್ನು ಸಹಿಸಲು ಆಗುತ್ತಿಲ್ಲ ಶಾರ್ವರಿಗೆ. ಈಗ ಮಹೇಶ ಆಜ್ಞೆಯಂತೆ ಮನೆಯವರ ಮುಂದೆ ಎಲ್ಲ ಸತ್ಯವನ್ನು ಒಪ್ಪಿಕೊಳ್ಳಬೇಕಿದೆ.

ಇದನ್ನೂ ಓದಿ: Shrirasthu Shubhamasthu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯ ಮಾಧವ್‌ ಕಿರುತೆರೆಗೆ ಹೊಸಬರಲ್ಲ!

ಪೂಜೆ ಮುಗಿಯುತ್ತಿದ್ದಂತೆಯೇ ಶಾರ್ವರಿ ನಾನು ಸತ್ಯವನ್ನು ಹೇಳಬೇಕಿದೆ. ಎಲ್ಲರ ಎದುರು ಸತ್ಯ ಹೇಳುತ್ತಿದ್ದೇನೆ ಎಂದು ಹೇಳಿದ್ದಾಳೆ. ಅದರ ಪ್ರೊಮೋ ಅನ್ನು ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಶಾರ್ವರಿ ನಿಜಕ್ಕೂ ಸತ್ಯ ನುಡಿದರೆ ಸೀರಿಯಲ್‌ ಮುಗಿದಂತೆಯೇ ಎಂದು ಪ್ರೇಕ್ಷಕರು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ಹೇಳುವ ಭರದಲ್ಲಿ ಬೇರೆ ಏನಾದರೂ ಶಾರ್ವರಿ ಹೇಳಬಹುದು ಎಂದು ನೋಡುಗರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Shrirasthu Shubhamasthu | ದುಡಿದು, ದಣಿವ ಅಮ್ಮಂದಿರ ದನಿಯಾಗಿ ಬರುತ್ತಿದೆ ಹೊಸ ಕಥೆ: ಶ್ರೀರಸ್ತು ಶುಭಮಸ್ತು!

 ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯು ಮರಾಠಿಯ ‘ಅಗ್ಗಾಬಾಯಿ ಸಾಸುಭಾಯಿ’ಯ ರಿಮೇಕ್ ಆಗಿದೆ. ‘ಶ್ರೀರಸ್ತು ಶುಭಮಸ್ತು’ 100 ಕ್ಕೂ ಹೆಚ್ಚು ಸಂಚಿಕೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಲ್ಲಿ ನಟಿ ಸುಧಾರಾಣಿ ಸೊಸೆಯ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಮಧ್ಯ ವಯಸ್ಕನ ಪಾತ್ರವನ್ನು ಅಜಿತ್‌ ನಿರ್ವಹಿಸುತ್ತಿದ್ದಾರೆ.

Continue Reading

ಕಿರುತೆರೆ

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

Kannada Serials TRP: ಜೀ ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಟಿಆರ್‌ಪಿ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಜೀ ಕನ್ನಡದಲ್ಲಿ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಆರಂಭ ಆದ ಕೆಲವು ದಿನಗಳಲ್ಲೇ ‘ಪುಟ್ಟಕ್ಕನ ಮಕ್ಕಳು’ ನಂಬರ್ ಒನ್ ಸ್ಥಾನದಿಂದ ಕೆಳಗೆ ಇಳಿದಿತ್ತು.ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

VISTARANEWS.COM


on

Kannada Serials TRP puttakkana makkalu top the list
Koo

ಬೆಂಗಳೂರು:  ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ಈ ವಾರ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ. ಮೇ 3ರಂದು ಕಳೆದ ವಾರದ ಟಿಆರ್‌ಪಿ ಲಿಸ್ಟ್ ಹೊರಬಿದ್ದಿದೆ.ಜೀ ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಟಿಆರ್‌ಪಿ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಜೀ ಕನ್ನಡದಲ್ಲಿ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಆರಂಭ ಆದ ಕೆಲವು ದಿನಗಳಲ್ಲೇ ‘ಪುಟ್ಟಕ್ಕನ ಮಕ್ಕಳು’ ನಂಬರ್ ಒನ್ ಸ್ಥಾನದಿಂದ ಕೆಳಗೆ ಇಳಿದಿತ್ತು.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿತ್ತು. ಪಾಯಿಂಟ್ ಒಂದು ಅಂಕಗಳ ಅಂತರದಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಸಹನಾ ದಾಂಪತ್ಯ ಕಲಹದಿಂದಾಗಿ ಇದೀಗ ಟಿಆರ್‌ಪಿ ಜಾಸ್ತಿ ಆದಂತಾಗಿದೆ. ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

ಲಕ್ಷ್ಮೀ ನಿವಾಸ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ಧೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.’ರಾಮಾಚಾರಿ’ ಧಾರಾವಾಹಿ ಕಲರ್ಸ್ ಕನ್ನಡದ ಟಾಪ್ ಸ್ಥಾನದಲ್ಲಿದೆ. 4.6 ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿದೆ.

ಇನ್ನು ಕಲರ್ಸ್‌ಕನ್ನಡದಲ್ಲಿ ರಾಮಾಚಾರಿ ಟಾಪ್‌ 1 ಆದರೆ, ‘ಭಾಗ್ಯಲಕ್ಷ್ಮಿ’ ಧಾರಾವಾಹಿ 4.3 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಹಾಗೇ ‘ಲಕ್ಷ್ಮಿ ಬಾರಮ್ಮ’ 3.6 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

ಸ್ಟಾರ್‌ ಸುವರ್ಣದಲ್ಲಿ ಕೂಡ ಧಾರಾವಾಹಿಗಳು ಒಳ್ಳೆಯ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ : 3.7 ಅಂಕಗಳೊಂದಿಗೆ ಟಾಪ್‌ ಸ್ಥಾನದಲ್ಲಿದೆ. ‘ಯಡಿಯೂರು ಸಿದ್ಧಲಿಂಗೇಶ್ವರ’ 3.5 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ‘ನೀನಾದೆ ನಾ’ 3 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕನ್ನಡ ಟಾಪ್ 3 ಮನರಂಜನಾ ವಾಹಿನಿಗಳಲ್ಲಿ ಜೀ ಕನ್ನಡ, ಕಲರ್ಸ್ ಕನ್ನಡ ಹಾಗೂ ಸ್ಟಾರ್ ಸುವರ್ಣವಿದೆ. ಎಂದಿನಂತೆ ಮೂರೂ ವಾಹಿನಿಗಳು ಕಾಂಪಿಟೇಷನ್‌ಗೆ ಬಿದ್ದು, ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳನ್ನು ಪ್ರಸಾರ ಮಾಡುತ್ತಿದೆ.

Continue Reading

ಟಾಲಿವುಡ್

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Rashmika Mandanna: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಬ್ಯುಸಿ ಕಲಾವಿದೆಯರಲ್ಲಿ ಒಬ್ಬರು. ವಿವಿಧ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದೀಗ ಸದ್ದಿಲ್ಲದೆ ತಮ್ಮ ನಾಲ್ಕನೇ ಹಿಂದಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಜತೆ ಅಭಿನಯಿಸುತ್ತಿರುವ ಮೊದಲ ಚಿತ್ರ ʼಛಾವಾʼ (Chhava)ದ ಶೂಟಿಂಗ್‌ ಅನ್ನು ರಶ್ಮಿಕಾ ಪೂರ್ಣಗೊಳಿಸಿದ್ದಾರೆ.

VISTARANEWS.COM


on

Rashmika Mandanna's younger sister Shiman
Koo

ಬೆಂಗಳೂರು: ಮೇ 2 ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ತಂಗಿಗೆ ಜನುಮದಿನದ ಸಂಭ್ರಮ. ರಶ್ಮಿಕಾ ಮಂದಣ್ಣ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಹೋದರಿಯೊಂದಿಗೆ ಇರುವ ಕ್ಯೂಟ್‌ ಫೋಟೊವನ್ನು ಹಂಚಿಕೊಂಡಿದ್ದಾರೆ,. “ಇಂದು ನನ್ನ ತಂಗಿಯ ಜನ್ಮದಿನ. ಜನ್ಮದಿನದ ಶುಭಾಶಯಗಳು ನನ್ನ ಬೇಬಿ! ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆʼʼಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ. ಚಿತ್ರದಲ್ಲಿ, ರಶ್ಮಿಕಾ ಅವರು ತಂಗಿ ಶಿಮಾನ್ ಮಂದಣ್ಣ (Mandanna’s younger sister Shiman) ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಇದೀಗ ಶಿಮಾನ್ ಮಂದಣ್ಣ 11ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಶಿಮನ್’ಗಿಂತ ರಶ್ಮಿಕಾ ಸುಮಾರು 17 ವರ್ಷ ದೊಡ್ಡವರು. ರಶ್ಮಿಕಾ ಹಲವು ಸಂದರ್ಭಗಳಲ್ಲಿ ತಂಗಿಯ ಕುರಿತಾಗಿ ಹೇಳಿದ್ದೂ ಇದೆ. ʻʻನನ್ನ ತಂಗಿ ವಿಚಾರದಲ್ಲಿ ನನಗೆ ಜವಾಬ್ದಾರಿ ಹೆಚ್ಚಿಗೆ ಇದೆ. ಆಕೆ ಸದಾ ಖುಷಿಯಾಗಿ ಇರಬೇಕು ಸುರಕ್ಷಿತವಾಗಿ ಇರಬೇಕು. ಪ್ರತಿಯೊಬ್ಬ ಅಕ್ಕಂದಿರು ಇಷ್ಟ ಪಡುವಂತೆ ನನಗೂ ಆಕೆ ಚೆನ್ನಾಗಿ ಓದಬೇಕು ಎನ್ನುವ ಆಸೆ ತುಂಬಾ ಇದೆʼʼಎಂದು ಹೇಳಿಕೊಂಡಿದ್ದರು.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಬ್ಯುಸಿ ಕಲಾವಿದೆಯರಲ್ಲಿ ಒಬ್ಬರು. ವಿವಿಧ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದೀಗ ಸದ್ದಿಲ್ಲದೆ ತಮ್ಮ ನಾಲ್ಕನೇ ಹಿಂದಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಜತೆ ಅಭಿನಯಿಸುತ್ತಿರುವ ಮೊದಲ ಚಿತ್ರ ʼಛಾವಾʼ (Chhava)ದ ಶೂಟಿಂಗ್‌ ಅನ್ನು ರಶ್ಮಿಕಾ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: Rashmika Mandanna: ಪುಷ್ಪ 2ನಲ್ಲಿ ಶ್ರೀವಲ್ಲಿ 2.0 ಲೆವೆಲ್‌ಗೆ ಇದ್ದಾಳಂತೆ! ರಶ್ಮಿಕಾ ಹೇಳಿದ್ದೇನು?

ಹಿಂದಿ ಮತ್ತು ಮರಾಠಿ ಚಿತ್ರಗಳನ್ನು ನಿರ್ದೇಶಿಸಿರುವ ಲಕ್ಷ್ಮಣ್‌ ಉಟೇಕರ್ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಐತಿಹಾಸಿಕ ಚಿತ್ರ ʼಛಾವಾʼ. ಈ ಮೂಲಕ ಅವರು ಮರಾಠ ಯೋಧ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಕಥೆಯನ್ನು ತೆರೆ ಮೇಲೆ ತರುತ್ತಿದ್ದಾರೆ. ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ವಿಕ್ಕಿ ಕೌಶಲ್‌ ನಟಿಸುತ್ತಿದ್ದು, ಅವರ ಪತ್ನಿ ಯೇಸುಬಾಯಿಯಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿ ರಶ್ಮಿಕಾ ಐತಿಹಾಸಿಕ ಚಿತ್ರವೊಂದರ ಭಾಗವಾಗುತ್ತಿದ್ದಾರೆ.

ಸೂಪರ್ ಸ್ಟಾರ್ ಧನುಷ್ (Actor Dhanush) ಅವರ ʻಡಿ 51ʼ ಸಿನಿಮಾ ಟೈಟಲ್‌ ರಿವೀಲ್‌ ಆಗಿದೆ. ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ. ಸದ್ಯ ಈ ಚಿತ್ರಕ್ಕೆ ‘ಕುಬೇರ’ ಎನ್ನುವ ಟೈಟಲ್ ಫಿಕ್ಸ್ ಆಗಿದೆ. ನಟ ಧನುಷ್ ಗಡ್ಡ ಬಿಟ್ಟು ನಗುತ್ತ ನೋಡುತ್ತಿರುವ ಪೋಸ್ಟರ್‌ ರಿಲೀಸ್ ಮಾಡಲಾಗಿದೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ‘ದಿ ಗರ್ಲ್‌ಫ್ರೆಂಡ್’ ಎಂಬ ರೋಮಾಂಚಕ ಪ್ರೇಮಕಥೆಯಲ್ಲಿ ನಾಯಕಿಯಾಗಿ ನಟಿಸಲು ಸಿದ್ಧರಾಗಿದ್ದಾರೆ. ಏಳು ವರ್ಷಗಳ ವೃತ್ತಿಜೀವನದಲ್ಲಿ ಇದು ನಟಿಯ 24ನೇ ಚಿತ್ರವಾಗಿದೆ. ‘ದಿ ಗರ್ಲ್‌ಫ್ರೆಂಡ್’ ರಶ್ಮಿಕಾ ಅವರ ಸೋಲೊ ಸಿನಿಮಾ ಎನ್ನಲಾಗಿದೆ. ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಗೆ ಕನ್ನಡದ ‘ದಿಯಾ’ ಚಿತ್ರದಲ್ಲಿ ನಟಿಸಿ ಗೆದ್ದಿದ್ದ ನಟ ದೀಕ್ಷಿತ್ ಶೆಟ್ಟಿ ಚಿತ್ರದಲ್ಲಿ ಹೀರೊ ಆಗಿ ನಟಿಸಿದ್ದಾರೆ. ಇತ್ತೀಚೆಗೆ ತೆಲುಗಿನ ‘ದಸರಾ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟ ನಾನಿ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
kareena kapoor out from yash starrer toxic
ಬಾಲಿವುಡ್7 mins ago

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Shrirasthu Shubhamasthu serial will be end
ಕಿರುತೆರೆ8 mins ago

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Stock Market
ದೇಶ11 mins ago

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Bengaluru Rains
ಮಳೆ19 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Smrithi Irani
ರಾಜಕೀಯ22 mins ago

Smirthi Irani: ಅಮೇಥಿಯಲ್ಲಿ ಕಾಂಗ್ರೆಸ್‌ ಸೋಲನ್ನು ಒಪ್ಪಿಕೊಂಡಿದೆ; ಸ್ಮೃತಿ ಇರಾನಿ ವ್ಯಂಗ್ಯ

Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ24 mins ago

Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

RCB vS GT:
ಕ್ರೀಡೆ28 mins ago

RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

English Alphabet
ಬೆಂಗಳೂರು33 mins ago

English Alphabet: ಇಂಗ್ಲಿಷ್‌ನಲ್ಲಿ ಹೊಸ ಅಕ್ಷರ ವಿನ್ಯಾಸಕ್ಕಾಗಿ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ಪ್ರಯತ್ನ

Crime News
ಕ್ರೈಂ35 mins ago

Crime News: ಪತ್ನಿಯ ಪ್ರಿಯಕರನ ದ್ವೇಷಕ್ಕೆ ಬಲಿಯಾಯ್ತು ಎರಡು ಜೀವ; ಪಾರ್ಸಲ್‌ ಬಾಂಬ್‌ ಸ್ಫೋಟಕ್ಕೆ ಅಪ್ಪ-ಮಗಳು ಸಾವು

Viral News
ವೈರಲ್ ನ್ಯೂಸ್58 mins ago

Viral News: 17 ವರ್ಷದ ಯುವತಿ ಎರಡು ಬಾರಿ ಗರ್ಭಿಣಿ; ಪೋಷಕರು ಸೇರಿ 16 ಜನರ ವಿರುದ್ಧ ಕೇಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ19 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ12 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ22 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌