ರೈಲ್ವೆ ಮೇಲ್ಸೇತುವೆ ಕಾಮಗಾರಿ: ಪಾಟರಿ ರಸ್ತೆ- ಕ್ಲಾರೆನ್ಸ್ ಜಂಕ್ಷನ್ ಮಾರ್ಗದಲ್ಲಿ‌ ನಾಳೆಯಿಂದ ಸಂಚಾರ ಬಂದ್ - Vistara News

ಬೆಂಗಳೂರು

ರೈಲ್ವೆ ಮೇಲ್ಸೇತುವೆ ಕಾಮಗಾರಿ: ಪಾಟರಿ ರಸ್ತೆ- ಕ್ಲಾರೆನ್ಸ್ ಜಂಕ್ಷನ್ ಮಾರ್ಗದಲ್ಲಿ‌ ನಾಳೆಯಿಂದ ಸಂಚಾರ ಬಂದ್

ರೈಲ್ವೆ ಮೇಲ್ಸೇತುವೆ ಕಾಂಗಾರಿ ಹಿನ್ನೆಲೆಯಲ್ಲಿ ಈ ರಸ್ತೆ ಬಂದ್‌ ಮಾಡಲಾಗಿದ್ದು, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ವ್ಯವಸ್ಥೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

VISTARANEWS.COM


on

ಸಂಚಾರ ವ್ಯವಸ್ಥೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:‌ ನಗರದ ಪುಲಕೇಶಿನಗರ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಾಟರಿ ರಸ್ತೆ ಹಾಗೂ ಮಾಸ್ಕ್ ರಸ್ತೆ (ಕ್ಲಾರೆನ್ಸ್ ಜಂಕ್ಷನ್) ಬಳಿ ಇರುವ ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 18ರವೆರೆಗೆ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆ ಅಂಡರ್ ಬ್ರಿಡ್ಜ್ ಕೆಳಭಾಗದ ರೈಲ್ವೆ ಹಳಿಗಳ ಜತೆಗೆ ಹೆಚ್ಚುವರಿಯಾಗಿ ಎರಡು ರೈಲ್ವೆ ಹಳಿಗಳನ್ನು ಅಳವಡಿಸಲು, ಈಗಿರುವ ರೈಲ್ವೆ ಮೇಲ್ಸೇತುವೆಯನ್ನು ಒಡೆದು, ಹೆಚ್ಚುವರಿಯಾಗಿ ಎರಡು ರೈಲ್ವೆ ಹಳಿಗಳನ್ನು ಅಳವಡಿಸಿದ ನಂತರ ಹೊಸ ರೈಲ್ವೆ ಬ್ರಿಡ್ಜ್ ಅನ್ನು ಮರು ನಿರ್ಮಾಣ ಮಾಡಲಾಗುತ್ತದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಈ ಕೆಳಕಂಡಂತೆ ವ್ಯವಸ್ಥೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.

  • ನೇತಾಜಿ ರಸ್ತೆಯಿಂದ ಲಿಂಗರಾಜಪುರ, ಹೆಣ್ಣೂರು ಕಡೆಗೆ ಹೋಗುವ ವಾಹನಗಳು ಎಂ.ಎಂ. ರಸ್ತೆಯಲ್ಲಿ ನೇರವಾಗಿ ಚಲಿಸಿ ಲಾಜ‌ರ್ ರಸ್ತೆ ಬಳಿ (ಸಂಚಾರ ಠಾಣಾ ಮುಂಭಾಗ) ಎಡ ತಿರುವು ಪಡೆದು ರೈಲ್ವೆ ಅಂಡರ್ ಬ್ರಿಡ್ಜ್ ದಾಟಿ ಪಾಟರಿ ರಸ್ತೆ-ಹೆಣ್ಣೂರು ಮುಖ್ಯ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಲಿಂಗರಾಜಪುರ, ಹೆಣ್ಣೂರು ಕಡೆಗೆ ಸಂಚರಿಸಬಹುದಾಗಿದೆ.
  • ನೇತಾಜಿ ರಸ್ತೆಯಿಂದ ಐ.ಟಿ.ಸಿ, ಬಾಣಸವಾಡಿ ಕಡೆಗೆ ಹೋಗುವ ವಾಹನಗಳು ಎಂ.ಎಂ ರಸ್ತೆಯಲ್ಲಿ ನೇರವಾಗಿ ಚಲಿಸಿ ರಾಜ‌ ರಸ್ತೆ ಬಳಿ (ಸಂಚಾರ ಠಾಣಾ ಮುಂಭಾಗ) ಎಡ ತಿರುವು ಪಡೆದು ರೈಲ್ವೆ ಅಂಡರ್ ಬ್ರಿಡ್ಜ್ ದಾಟಿ ಪಾಟರಿ ರಸ್ತೆಯಲ್ಲಿ ‘ಯು-ಟರ್ನ್’ ಪಡೆದು ಐ.ಟಿ.ಸಿ, ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.‌
  • ಮಾಸ್ಕ್ ರಸ್ತೆಯಿಂದ ಲಿಂಗರಾಜಪುರ, ಹೆಣ್ಣೂರು ಕಡೆಗೆ ಹೋಗುವ ವಾಹನಗಳು ಮಾಸ್ಕ್ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ಎಂ.ಎಂ. ರಸ್ತೆಯಲ್ಲಿ ನೇರವಾಗಿ ಚಲಿಸಿ ಲಾಜರ್ ರಸ್ತೆ ಬಳಿ (ಸಂಚಾರ ಠಾಣಾ ಮುಂಭಾಗ) ಎಡ ತಿರುವು ಪಡೆದು ರೈಲ್ವೆ ಅಂಡರ್ ಬ್ರಿಡ್ಜ್ ದಾಟಿ ಪಾಟರಿ ರಸ್ತೆ-ಹೆಣ್ಣೂರು ಮುಖ್ಯ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಲಿಂಗರಾಜಪುರ, ಹೆಣ್ಣೂರು ಕಡೆಗೆ ಸಂಚರಿಸಬಹುದಾಗಿದೆ.
  • ಮಾಸ್ಕ್ ರಸ್ತೆಯಿಂದ ಐ.ಟಿ.ಸಿ, ಬಾಣಸವಾಡಿ ಕಡೆಗೆ ಹೋಗುವ ವಾಹನಗಳು ಮಾಸ್ಕ್ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ಎಂ.ಎಂ. ರಸ್ತೆಯಲ್ಲಿ ನೇರವಾಗಿ ಚಲಿಸಿ, ಲಾಜರ್ ರಸ್ತೆ ಬಳಿ (ಸಂಚಾರ ಠಾಣಾ ಮುಂಭಾಗ) ಎಡ ತಿರುವು ಪಡೆದು ರೈಲ್ವೆ ಅಂಡರ್ ಬ್ರಿಡ್ಜ್ ದಾಟಿ ಪಾಟರಿ ರಸ್ತೆಯಲ್ಲಿ ಯು-ಟರ್ನ್ ಪಡೆದು ಪಟಿಸಿ, ಬಾಗಸವಾಡಿ ಕಡೆಗೆ ಸಂಚರಿಸಬಹುದಾಗಿದೆ.
  • ಕೋಲ್ಸ್ ರಸ್ತೆಯಿಂದ ಐ.ಟಿ.ಸಿ, ಬಾಣಸವಾಡಿ ಕಡೆಗೆ ಹೋಗುವ ವಾಹನಗಳು ಕೋಲ್ಸ್ ರಸ್ತೆ-ವೀಲ್ಡ‌ರ್ ರಸ್ತೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಸಿಂಧಿ ಕಾಲನಿ ಜಂಕ್ಷನ್ – ಐಟಿಸಿ ಫ್ಲೈ ಓವರ್‌ನಲ್ಲಿ ನೇರವಾಗಿ ಚಲಿಸಿ ಐ.ಟಿ.ಸಿ, ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.
  • ಮಾಸ್ಕ್ ರಸ್ತೆಯಿಂದ ಟ್ಯಾನರಿ ರಸ್ತೆ, ನಾಗಾವಾರ ಕಡೆಗೆ ಹೋಗುವ ವಾಹನಗಳು ಮಾಸ್ಕ್ ಸರ್ಕಲ್‌ ನಲ್ಲಿ ಎಡ ತಿರುವು ಪಡೆದು ಎಂ.ಎಂ.ರಸ್ತೆಯಲ್ಲಿ ನೇರವಾಗಿ ಚಲಿಸಿ ನೇತಾಜಿ ರಸ್ತೆ-ಜಿ.ಕೆ.ವೇಲ್‌ನಲ್ಲಿ ಯುಟರ್ನ್ ಪಡೆದು ಟ್ಯಾನರಿ ರಸ್ತೆ, ನಾಗಾವಾರ ಕಡೆಗೆ ಸಂಚರಿಸಬಹುದಾಗಿದೆ.
  • ಎಂ.ಎಂ. ರಸ್ತೆಯಿಂದ ಟ್ಯಾನರಿ ರಸ್ತೆ, ನಾಗಾವಾರ ಕಡೆಗೆ ಹೋಗುವ ವಾಹನಗಳು ಎಂ.ಎಂ.ರಸ್ತೆಯಲ್ಲಿ ನೇರವಾಗಿ ಚಲಿಸಿ ನೇತಾಜಿ ರಸ್ತೆ-ಜಿ.ಕೆ.ವೇಲ್‌ನಲ್ಲಿ ಯು-ಟರ್ನ್ ಪಡೆದು ಟ್ಯಾನರಿ ರಸ್ತೆ, ನಾಗಾವಾರ ಕಡೆಗೆ ಸಂಚರಿಸಬಹುದಾಗಿದೆ.

ಇದನ್ನೂ ಓದಿ | ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಉಗ್ರರ ಮೊಬೈಲ್‌ ಮಾಹಿತಿ ಬಯಲು, ಪ್ರಚೋದನಾಕಾರಿ ವಿಡಿಯೊ, ಹಲವು ಸಾಕ್ಷ್ಯ ಲಭ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

Kalki 2898 AD:ಪ್ಯಾನ್‌ ಇಂಡಿಯಾ ಸ್ಟಾರ್‌ ಎಂಬ ಹಣೆಪಟ್ಟಿಯನ್ನು ಮತ್ತಷ್ಟು ಗಟ್ಟಿಯಾಗಿಯೇ ಅಚ್ಚೊತ್ತಿಕೊಂಡಿದ್ದಾರೆ ಪ್ರಭಾಸ್‌. ಪ್ರಭಾಸ್ ಅವರ ಕಟ್ಟಾ ಅಭಿಮಾನಿಗಳ ತಂಡವೊಂದು ಇತ್ತೀಚೆಗೆ ಅವರ ‘ಕಲ್ಕಿ 2898 AD’ ಸಿನಿಮಾ ವೀಕ್ಷಿಸಲು ಜಪಾನ್‌ನಿಂದ ಹೈದರಾಬಾದ್‌ಗೆ ಆಗಮಿಸಿತ್ತು.

VISTARANEWS.COM


on

Fans came from Japan to Hyderabad to watch Prabhas starrer Kalki 2898 AD
Koo

ಬೆಂಗಳೂರು: ವೈಜಯಂತಿ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಬಹುಕೋಟಿ ವೆಚ್ಚದ ಕಲ್ಕಿ 2898 ಎಡಿ (Kalki 2898 AD) ಸಿನಿಮಾ ಬಾಕ್ಸ್‌ಆಫೀಸ್‌ನಲ್ಲಿ ಗಳಿಕೆಯ ನಾಗಾಲೋಟ ಮುಂದುವರಿಸಿದೆ. ಸಾಹಸ ದೃಶ್ಯಗಳಿಗೆ ಪ್ರೇಕ್ಷಕ ವರ್ಗ ಮೂಕವಿಸ್ಮಿತನಾಗಿದ್ದ. ನಿರ್ದೇಶಕ ನಾಗ್‌ ಅಶ್ವಿನ್‌ ಅವರ ಕೈ ಚಳಕಕ್ಕೂ ಬಹುಪರಾಕ್‌ ಸಿಕ್ಕಿತ್ತು. ಅಭಿಮಾನಿಗಳಿಂದಲೂ ಪ್ರಭಾಸ್‌ ಹೊಸ ಅವತಾರಕ್ಕೆ ಮೆಚ್ಚುಗೆಯ ಮಹಾಪೂರವೇ ಸಿಕ್ಕಿತ್ತು. ಸಲಾರ್‌ಗೂ ಮುನ್ನ ಸರಣಿ ಸೋಲು ಅನುಭವಿಸಿದ್ದ ಪ್ರಭಾಸ್‌ಗೀಗ ಕಲ್ಕಿ ಸಿನಿಮಾ ಮೂಲಕ ಮತ್ತೆ ಮರು ಜೀವ ಸಿಕ್ಕಿದೆ.

ಪ್ಯಾನ್‌ ಇಂಡಿಯಾ ಸ್ಟಾರ್‌ ಎಂಬ ಹಣೆಪಟ್ಟಿಯನ್ನು ಮತ್ತಷ್ಟು ಗಟ್ಟಿಯಾಗಿಯೇ ಅಚ್ಚೊತ್ತಿಕೊಂಡಿದ್ದಾರೆ ಪ್ರಭಾಸ್‌. ಕಲ್ಕಿ ಸಿನಿಮಾ ಅಂಥದ್ದೊಂದು ದೊಡ್ಡ ಗೆಲುವನ್ನು ಪ್ರಭಾಸ್‌ ಅವರಿಗೆ ನೀಡಿದೆ. ಫ್ಯಾಂಟಸಿ ಸಿನಿಮಾ ಮೂಲಕ, ಕಣ್ಣಿಗೆ ಅಚ್ಚರಿ ಎನಿಸುವ ದೃಶ್ಯಾವಳಿಗಳನ್ನೇ ನೋಡುಗರಿಗೆ ನೀಡಿ, ಮಾಸ್‌ ಆಕ್ಷನ್‌ ಸೀನ್‌ಗಳಿಂದ ಸಮೃದ್ಧವಾದ ಚಿತ್ರವನ್ನೇ ಪ್ರೇಕ್ಷಕನ ತಟ್ಟೆಗೆ ಬಡಿಸಿದ್ದಾರೆ ಪ್ರಭಾಸ್‌. ತಮ್ಮ ಗಮನಾರ್ಹವಾದ ಆನ್- ಸ್ಕ್ರೀನ್ ಪಾತ್ರದಿಂದಲೇ ಗಮನ ಸೆಳೆದ ಪ್ರಭಾಸ್‌, ಜಾಗತಿಕ ಅಭಿಮಾನಿಗಳಿಗೂ ಹಬ್ಬದೂಟ ಹಾಕಿಸಿದ್ದಾರೆ.

ಪ್ರಭಾಸ್ ಅವರ ಕಟ್ಟಾ ಅಭಿಮಾನಿಗಳ ತಂಡವೊಂದು ಇತ್ತೀಚೆಗೆ ಅವರ ‘ಕಲ್ಕಿ 2898 AD’ ಸಿನಿಮಾ ವೀಕ್ಷಿಸಲು ಜಪಾನ್‌ನಿಂದ ಹೈದರಾಬಾದ್‌ಗೆ ಆಗಮಿಸಿತ್ತು. ಈ ಅದ್ಭುತ ಗೆಸ್ಚರ್ ಸೂಪರ್‌ಸ್ಟಾರ್‌ನ ಜಾಗತಿಕ ಸ್ಟಾರ್‌ಡಮ್‌ಗೆ ಹಿಡಿದ ಸಾಕ್ಷಿ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಚಿತ್ರದ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್, ಹೈದರಾಬಾದ್‌ನ ಪ್ರಸಾದ್ಸ್ ಮಲ್ಟಿಪ್ಲೆಕ್ಸ್‌ನಲ್ಲಿ ಐಕಾನಿಕ್ ‘ರೆಬೆಲ್’ ಟ್ರಕ್ ಪಕ್ಕದಲ್ಲಿ ನಿಂತಿರುವ ಮೂವರು ಜಪಾನೀ ಅಭಿಮಾನಿಗಳ ಫೋಟೋಗಳನ್ನು ಹಂಚಿಕೊಂಡಿದೆ. ಪ್ರಭಾಸ್ ಪಾತ್ರದ ಭೈರವ ಮತ್ತು ಬುಜ್ಜಿ ವಾಹನದ ಫೋಟೋ ಇರುವ ವಿಶೇಷ ಬಾವುಟ ಹಿಡಿದು “ಕಲ್ಕಿ 2898 AD. ಬಿಡುಗಡೆಗೆ ಅಭಿನಂದನೆಗಳು!! ಜಪಾನಿನ ಅಭಿಮಾನಿಗಳಿಂದ 2024.6.27.” ಎಂದು ಜಪಾನಿನ ಫ್ಯಾನ್ಸ್‌ ಖುಷಿ ವ್ಯಕ್ತಪಡಿಸಿದ್ದಾರೆ.

‘ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

‘ಬಾಹುಬಲಿ’ಯಿಂದ ‘ಸಲಾರ್’, ‘ಕಲ್ಕಿ 2898 AD’ ವರೆಗೆ ಪ್ರಭಾಸ್ ತಮ್ಮ ಸ್ಟಾರ್ ಪವರ್‌ಗೆ ಸಾಟಿಯಿಲ್ಲ ಎಂಬುದನ್ನು ಸಾಬೀತುಪಡಿಸುತ್ತಲೇ ಬಂದಿದ್ದಾರೆ. ಸಮಕಾಲೀನ ಸಿನಿಮಾರಂಗದಲ್ಲಿ ಅತ್ಯಂತ ಅಪ್ರತಿಮ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರಾಗಿ ಹೊರಹೊಮ್ಮುತ್ತಿದ್ದಾರೆ ಪ್ರಭಾಸ್.‌ ಅಂದಹಾಗೆ ನಾಗ್ ಅಶ್ವಿನ್ ನಿರ್ದೇಶಿಸಿದ, ‘ಕಲ್ಕಿ 2898 AD’ 2898 AD ವರ್ಷದಲ್ಲಿ ಹಿಂದೂಗಳ ಮಹಾಕಾವ್ಯ ಮಹಾಭಾರತದಿಂದ ಸ್ಫೂರ್ತಿ ಪಡೆದು ನಿರ್ಮಿಸಲಾಗಿದೆ. ಈ ವೈಜ್ಞಾನಿಕ ಆಕ್ಷನ್ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರಂತಹ ಲೆಜಂಡರಿ ಕಲಾವಿದರಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಸೇರಿ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.

Continue Reading

ಕರ್ನಾಟಕ

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

BS Yediyurappa: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಕೇಸ್‌ (POCSO Case) ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಪೋಕ್ಸೊ ವಿಶೇಷ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ಜುಲೈ 17ರಂದು ಬಿ.ಎಸ್.ಯಡಿಯೂರಪ್ಪ ಸೇರಿ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಖು ಎಂದು ಸಮನ್ಸ್‌ ಜಾರಿ ಮಾಡಿದೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

B S yediyurappa

ಯಡಿಯೂರಪ್ಪ ನಿರ್ದೇಶನದಂತೆ ಆರೋಪಿ ರುದ್ರೇಶ್‌ ಅವರಿಂದ 2 ಲಕ್ಷ ರೂ. ಪಡೆದು ಅದನ್ನು ಸಂತ್ರಸ್ತ ಮಹಿಳೆಗೆ ನೀಡಿ, ಆಕೆಯ ಫೋನ್‌ನಲ್ಲಿನ ಬಿಎಸ್‌ವೈಗೆ ಸಂಬಂಧಿಸಿದ ವಿಡಿಯೊವನ್ನು ಡಿಲೀಟ್‌ ಮಾಡಿಸಿರುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಿಂದ ತೆಗೆಸಿದ ಆರೋಪ ಅರುಣ್ ಮತ್ತು ಮರಿಸ್ವಾಮಿ ಅವರ ಮೇಲಿದೆ. ಇನ್ನು ಯಡಿಯೂರಪ್ಪ ಅವರು ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಗಳು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: Actress Ramya: ದರ್ಶನ್, ಪ್ರಜ್ವಲ್‌, ಸೂರಜ್, ಯಡಿಯೂರಪ್ಪ ಹೆಸರು ಉಲ್ಲೇಖಿಸಿ ಮತ್ತೆ ಕಿಡಿ ಕಾರಿದ ರಮ್ಯಾ; ಪೋಸ್ಟ್‌ನಲ್ಲಿ ಏನಿದೆ?

Continue Reading

ಕರ್ನಾಟಕ

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

CM Siddaramaiah: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Muda site allocation Politically motivated allegation says CM Siddaramaiah
Koo

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ ರೂ. ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

ಬಿಜೆಪಿ ಅಧಿಕಾರದಲ್ಲಿತ್ತು

ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದು ತಿಳಿಸಿದರು.

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ

ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ. ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ರೂ. ಕೊಟ್ಟುಬಿಡಲಿ ಎಂದು ಹೇಳಿದರು.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ, ಕಡತ ತಂದಿಲ್ಲ ಎಂದು ಈ ವೇಳೆ ಸಿಎಂ ತಿಳಿಸಿದರು.

Continue Reading

ಕರ್ನಾಟಕ

Kannada New Movie: ಶೀಘ್ರದಲ್ಲೇ ತೆರೆಗೆ ಬರಲಿದೆ ‘ಕಡಲೂರ ಕಣ್ಮಣಿ’ ಚಿತ್ರ

Kannada New Movie: ಶಿರಸಿ ಮೂಲದ ಅರ್ಜುನ್‌ ನಗರ್ಕರ್‌ ನಾಯಕನಾಗಿ ನಟಿಸಿರುವ, ನಿಶಾ ಯಾಲಿನಿ ನಾಯಕಿಯಾಗಿ ನಟಿಸಿರುವ, ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕೊಳ ಶೈಲೇಶ್ ಆರ್. ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ. ಅವರ ಸಹ ನಿರ್ಮಾಣವಿದ್ದು, ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

VISTARANEWS.COM


on

Kannada New Movie Kadalura Kanmani will release soon
Koo

ಬೆಂಗಳೂರು: ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕೊಳ ಶೈಲೇಶ್ ಆರ್. ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ. ಅವರ ಸಹ ನಿರ್ಮಾಣವಿದ್ದು, ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ ಈ ಚಿತ್ರವನ್ನು (Kannada New Movie) ನಿರ್ದೇಶಿಸಿದ್ದಾರೆ.

ಚಿತ್ರದ ನಾಯಕನಾಗಿ ಶಿರಸಿ ಮೂಲದ ಅರ್ಜುನ್‌ ನಗರ್ಕರ್‌ “ಕಡಲೂರ ಕಣ್ಮಣಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ನಿಶಾ ಯಾಲಿನಿ ನಾಯಕಿಯಾಗಿ ನಟಿಸಿದ್ದು. ಅಂಜು ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಉಡುಪಿ, ಮಂಗಳೂರು, ಹೊನ್ನಾವರ, ಮಂಕಿ, ಮುರುಡೇಶ್ವರದ ಸುತ್ತಮುತ್ತಲ್ಲಿನ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ‌. ಈ ಮನಮೋಹಕ ಪ್ರಾಕೃತಿಕ ಸ್ಥಳಗಳನ್ನು ಮನೋಹರ್, ರವಿರಾಮ್ ಸುಂದರವಾಗಿ ಚಿತ್ರೀಕರಿಸಿದ್ದಾರೆ. ‘ಕಡಲೂರ ಕಣ್ಮಣಿ’ ಚಿತ್ರಕ್ಕೆ ನಿರ್ದೇಶಕ ರಾಮ್ ಪ್ರಸಾದ್ ಅವರು ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

‘ಕಡಲೂರ ಕಣ್ಮಣಿ’ ಅಂದರೆ ವಜ್ರ ಎಂದೂ ಅರ್ಥ. ಚಿತ್ರಕಥೆ ಯುವ ಮನಸುಗಳ ಪ್ರೀತಿ ಪ್ರೇಮದ ಮೇಲೆ ಸಾಗುತ್ತದೆ. ಸಿಟಿಯ ಹುಡುಗ ಕಡಲ ತೀರದ ಹುಡುಗಿಯ ಪ್ರೇಮ ಕಥೆಯೇ ‘ಕಡಲೂರ ಕಣ್ಮಣಿ’. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಚಿತ್ರದ ಕಲಾವಿದರು ತುಂಬಾ ಚಂದವಾಗಿ ನಟಿಸಿದ್ದಾರೆ.

ಇದನ್ನೂ ಓದಿ: Job Alert: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿವೆ. ಸಂಕಲನ ಕಾರ್ಯದಲ್ಲಿ ನಿಶಿತ್ ಪೂಜಾರಿ ತಮ್ಮ ಕೈಚಳಕ ತೋರಿಸಿದ್ದಾರೆ. ಬಂಡೆ ಚಂದ್ರು ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳು ಚೆನ್ನಾಗಿ ಮೂಡಿ ಬಂದಿವೆ. ‘ಕಡಲೂರ ಕಣ್ಮಣಿ’ ಚಿತ್ರವನ್ನು ಡಿಎಸ್‌ಕೆ ಸಿನಿಮಾಸ್ ಸಂಸ್ಥೆಯ Dr. ಸುನೀಲ್ ಕುಂಬಾರ್ ಅವರು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿದ್ದಾರೆ ಎಂದು ನಿರ್ದೇಶಕ ರಾಮ್ ಪ್ರಸಾದ್ ಹುಣಸೂರ ತಿಳಿಸಿದ್ದಾರೆ.

Continue Reading
Advertisement
Dina Bhavishya
ಭವಿಷ್ಯ18 seconds ago

Dina Bhavishya :‌ ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಗುಡ್‌ ನ್ಯೂಸ್

Team India
ಪ್ರಮುಖ ಸುದ್ದಿ5 hours ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Viral Video
ದೇಶ6 hours ago

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

A lorry collided with a bike Two persons died on the spot
ಕರ್ನಾಟಕ6 hours ago

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Drowned In Water A woman died while crossing the kalu sanka
ಕರ್ನಾಟಕ6 hours ago

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Fans came from Japan to Hyderabad to watch Prabhas starrer Kalki 2898 AD
ಕರ್ನಾಟಕ6 hours ago

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

India's open-bus parade
ಪ್ರಮುಖ ಸುದ್ದಿ6 hours ago

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

Dr Jitendra Singh
ದೇಶ6 hours ago

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Rohit Sharma
ಕ್ರಿಕೆಟ್7 hours ago

Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Mukesh Ambani
ದೇಶ8 hours ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ11 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ13 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ14 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ16 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ16 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ17 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ18 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌