Asia Cup- 2022 | ಏಷ್ಯಾ ಕಪ್‌ಗೆ ಹೋಗುವ ಭಾರತ ತಂಡದ ಹಂಗಾಮಿ ಕೋಚ್‌ ಆಗಿ ವಿವಿಎಸ್‌ ಲಕ್ಷ್ಮಣ್‌ ನೇಮಕ - Vistara News

ಕ್ರಿಕೆಟ್

Asia Cup- 2022 | ಏಷ್ಯಾ ಕಪ್‌ಗೆ ಹೋಗುವ ಭಾರತ ತಂಡದ ಹಂಗಾಮಿ ಕೋಚ್‌ ಆಗಿ ವಿವಿಎಸ್‌ ಲಕ್ಷ್ಮಣ್‌ ನೇಮಕ

ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಅವರು ಕೊರೊನಾ ಸೋಂಕಿಗೆ ಒಳಗಾದ ಹಿನ್ನೆಲೆಯಲ್ಲಿ Asia Cup- 2022 ಟೂರ್ನಿಗೆ ತೆರಳುವ ಭಾರತದ ತಂಡದ ಹಂಗಾಮಿ ಕೋಚ್‌ ಅಗಿ ವಿವಿಎಸ್ ಲಕ್ಷ್ಮಣ್‌ ನೇಮಕಗೊಂಡಿದ್ದಾರೆ.

VISTARANEWS.COM


on

Asia Cup- 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ : ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್ ಅವರು ಕೊರೊನಾ ಸೋಂಕಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಏಷ್ಯಾ ಕಪ್‌ಗೆ (Asia Cup- 2022) ಪ್ರವಾಸ ಹೊರಡಲಿರುವ ಭಾರತ ತಂಡದ ಹಂಗಾಮಿ ಕೋಚ್‌ ಆಗಿ ಎನ್‌ಸಿಎ ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್‌ ನೇಮಕಗೊಂಡಿದ್ದಾರೆ. ಯುಎಇನಲ್ಲಿ ೨೦೨೨ನೇ ಆವೃತ್ತಿಯ ಏಷ್ಯಾ ಕಪ್‌ ನಡೆಯಬೇಕಾಗಿದ್ದು, ಪ್ರವಾಸಕ್ಕೆ ಸಿದ್ದತೆ ನಡೆಸುತ್ತಿದ್ದ ವೇಳೆ ಕೋಚ್‌ ದ್ರಾವಿಡ್ ಅವರಿಗೆ ಸೋಂಕು ತಗುಲಿದೆ. ಸದ್ಯಕ್ಕೆ ಅವರಿಗೆ ಯುಎಇಗೆ ಪ್ರವಾಸ ಮಾಡಲು ಸಾಧ್ಯವಿಲ್ಲದ ಕಾರಣ ಹೊಣೆಗಾರಿಕೆಯನ್ನು ಲಕ್ಷ್ಮಣ್‌ ಅವರಿಗೆ ವಹಿಸಲಾಗಿದೆ.

ಲಕ್ಷ್ಮಣ್ ಅವರು ಜಿಂಬಾಬ್ವೆಗೆ ಪ್ರವಾಸ ಹೋಗಿದ್ದ ಭಾರತ ತಂಡದ ಕೋಚ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಈ ಸರಣಿಯನ್ನು ಭಾರತ ೩-೧ ಅಂತರದಿಂದ ಕ್ಲೀನ್‌ ಸ್ವೀಪ್‌ ಮಾಡಿತ್ತು. ಏಷ್ಯಾ ಕಪ್‌ಗೆ ಆಯ್ಕೆಯಾಗಿರುವ ಭಾರತ ತಂಡದ ಕೆಲವು ಆಟಗಾರರು ಜಿಂಬಾಬ್ವೆಯಿಂದಲೇ ಯುಎಇಗೆ ಪ್ರವಾಸ ಮಾಡಲಿದ್ದು, ಹಂಗಾಮಿ ಕೋಚ್ ಆಗಿ ನೇಮಕಗೊಂಡ ಲಕ್ಷ್ಮಣ್‌ ಕೂಡ ಅಲ್ಲಿಂದಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ.

“ಏಷ್ಯಾ ಕಪ್‌ಗೆ ಪ್ರವಾಸ ಹೋಗುವ ಮುನ್ನ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ಅವರಿಗೆ ಪ್ರವಾಸ ಮಾಡಲು ಸಾಧ್ಯವಾಗುವುದಿಲ್ಲ. ಲಕ್ಷ್ಮಣ್‌ ಅವರನ್ನು ಹಂಗಾಮಿ ಕೋಚ್‌ ಆಗಿ ನೇಮಕ ಮಾಡಲಾಗಿದ್ದು, ಒಂದು ಬಾರಿ ದ್ರಾವಿಡ್‌ ಅವರ ಪರೀಕ್ಷಾ ವರದಿ ನೆಗೆಟಿವ್ ಬಂದ ಬಳಿಕ ತಂಡವನ್ನು ಸೇರಿಕೊಳ್ಳಲಿದ್ದಾರೆ” ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಲಕ್ಷ್ಮಣ್‌ ಅವರು ಈಗ ಉಪನಾಯಕ ಕೆ. ಎಲ್‌. ರಾಹುಲ್‌, ಆಲ್‌ರೌಂಡರ್‌ ದೀಪಕ್‌ ಹೂಡ ಹಾಗೂ ವೇಗದ ಬೌಲರ್ ಆವೇಶ್‌ ಖಾನ್ ಹಾಗೂ ಮೀಸಲು ಆಟಗಾರ ದೀಪಕ್‌ ಚಾಹರ್‌ ಜತೆ ಯುಎಇ ಪ್ರವಾಸ ಮಾಡಲಿದ್ದಾರೆ.

ಇದನ್ನೂ ಓದಿ | Asia Cup | ಭಾರತ ತಂಡದ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ಗೆ ಕೊರೊನಾ ಸೋಂಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

RCB vs CSK: ಶನಿವಾರದ ಚೆನ್ನೈ ಮತ್ತು ಆರ್​ಸಿಬಿ(RCB vs CSK) ನಡುವಣ ಪಂದ್ಯ ಜಿಯೋ ಸಿನಿಮಾದಲ್ಲಿ(jiocinema) 50 ಕೋಟಿ ವೀಕ್ಷಣೆ ಕಾಣುವ ಮೂಲಕ ಐಪಿಎಲ್(IPL 2024)​ ಇತಿಹಾಸದಲ್ಲೇ ಡಿಜಿಟಲ್​ ವೀಕ್ಷಣೆಯಲ್ಲಿ ಅತ್ಯಧಿಕ ವೀಕ್ಷಣೆ ಕಂಡ ಪಂದ್ಯವೆಂಬ ದಾಖಲೆ ನಿರ್ಮಿಸಿದೆ.

VISTARANEWS.COM


on

RCB vs CSK
Koo

ಬೆಂಗಳೂರು: ಫೈನಲ್​ ಪಂದ್ಯಕ್ಕೂ ಮಿಗಿಲಾದ ಕಾತುಕ ಸೃಷ್ಟಿಸಿದ್ದ ಶನಿವಾರದ ಚೆನ್ನೈ ಮತ್ತು ಆರ್​ಸಿಬಿ(RCB vs CSK) ನಡುವಣ ಪಂದ್ಯ ಜಿಯೋ ಸಿನಿಮಾದಲ್ಲಿ(jiocinema) 50 ಕೋಟಿ ವೀಕ್ಷಣೆ ಕಾಣುವ ಮೂಲಕ ದಾಖಲೆಯೊಂದನ್ನು ಬರೆದಿದೆ. ಐಪಿಎಲ್(IPL 2024)​ ಇತಿಹಾಸದಲ್ಲೇ ಡಿಜಿಟಲ್​ ವೀಕ್ಷಣೆಯಲ್ಲಿ ಅತ್ಯಧಿಕ ವೀಕ್ಷಣೆ ಕಂಡ ಪಂದ್ಯವೆಂಬ ದಾಖಲೆ ನಿರ್ಮಿಸಿದೆ.

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು.


ಅದರಲ್ಲೂ ಅಂತಿಮ ಓವರ್​ ವೇಳೆಗೆ ವೀಕ್ಷಕರ ಸಂಖ್ಯೆ ಒಂದೇ ಕ್ಷಣ ಏರಿಕೆ ಕಂಡಿತು. ಚೆನ್ನೈಗೆ(RCB vs CSK) ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಪಂದ್ಯದಲ್ಲಿ 201ರನ್​ ಗಡಿ ದಾಟಿಬೇಕಿತ್ತು. ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು ಪಂದ್ಯ ಗೆಲ್ಲದಿದ್ದರೂ ಕೂಡ ಪ್ಲೇ ಆಫ್​ ಲೆಕ್ಕಾಚಾರದಲ್ಲಿ 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರು. ಈ ಗುರಿ ತಲುಪಲು ಚೆನ್ನೈಗೆ ಅಂತಿಮವಾಗಿ 6 ಎಸೆತಗಳಲ್ಲಿ 17 ರನ್ ತೆಗೆಯುವ ಸವಾಲು ಎದುರಾಯಿತು. ಈ ವೇಳೆ  ಯಶ್​ ದಯಾಳ್​ ಎಸೆತ ಅಂತಿಮ ಓವರ್​ನ ಮೊದಲ ಎಸೆತವನ್ನೇ ಧೋನಿ ಔಟ್​ ಆಫ್​ದಿ ಸ್ಟೇಡಿಯಂಗೆ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ 110 ಮೀ. ದೂರ ಚಿಮ್ಮಿತು. ಈ ವೇಳೆ ಪಂದ್ಯ ರೋಚಕ ಘಟ್ಟ ತಲುಪಿತು. 5 ಎಸೆತಗಳಲ್ಲಿ 11 ರನ್ ಬೇಕಿದ್ದಾಗ ಧೋನಿ ಮತ್ತೊಂದು ಸಿಕ್ಸರ್​ಗೆ ಪ್ರಯತ್ನಪಟ್ಟರು. ಆದರೆ ಇದು ಬ್ಯಾಟ್​ನ ತಳಭಾಗಕ್ಕೆ ಸಿಕ್ಕಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ಔಟಾದರು. ಅಂತಿಮವಾಗಿ 2 ಎಸೆತಕ್ಕೆ 10 ರನ್​ ಬೇಕಿದ್ದಾಗ ಜಡೇಜಾ 2 ಬಾಲ್​ ಡಾಡ್​ ಮಾಡಿದರು. ಆರ್​ಸಿಬಿ 27 ರನ್​ಗಳ ಗೆಲುವು ಸಾಧಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಪ್ರವೇಶ ಪಡೆಯಿತು.

ಇದನ್ನೂ ಓದಿ RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?


​ಅಭಿಮಾನಿಗಳು ಈ ಪಂದ್ಯವನ್ನು ಅಕ್ಷರಶಃ ಫೈನಲ್‌ ಎಂದೇ ಪರಿಗಣಿಸಿದ್ದರು. ಆರ್​ಸಿಬಿ ಗೆಲುವಿನ ಬಳಿಕ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು.  ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಸಂಭ್ರಮಾಚರಣೆ ಕಂಡು ಬಂತು.

ಪಂದ್ಯ ಮುಕ್ತಾಯವಾದಾಗ ತಡರಾತ್ರಿಯಾಗಿದ್ದರೂ ಅಭಿಮಾನಿಗಳ ಸಡಗರಕ್ಕೆ ಕೊರತೆ ಇರಲಿಲ್ಲ. ಪುಟ್ಟ ಮಕ್ಕಳು ಸೇರಿದಂತೆ ಆರ್‌ಸಿಬಿ ಫ್ಯಾನ್ಸ್‌ ರಸ್ತೆಯಲ್ಲೇ ಕುಣಿದು ಕುಪ್ಪಳಿಸಿದರು. ಮಕ್ಕಳಂತೂ ಈ ಸಲ ಕಪ್ ನಮ್ದೆ ಎನ್ನುವ ಘೋಷಣೆ ಕೂಗುತ್ತಿರುವುದು ಕಂಡು ಬಂತು. ಚಿನ್ನಸ್ವಾಮಿ ಕ್ರೀಡಾಂಗಣದ ಎದುರಿನ ರಸ್ತೆ ಬ್ಲಾಕ್ ಮಾಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಇದು ನಿಜವಾದ ಹೊಸ ಅಧ್ಯಾಯ ಎನ್ನುವ ಮಾತು ಎಲ್ಲೆಡೆ ಕೇಳಿ ಬಂದಿದೆ.

Continue Reading

ಕ್ರೀಡೆ

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

Rohit Sharma: ಸ್ಟಾರ್ ಸ್ಪೋರ್ಟ್ಸ್ ನಾನು ತಂಡದ ಸಹ ಆಟಗಾರರು ಮತ್ತು ಸಹೋದ್ಯೋಗಿಗಳೊಂದಿಗೆ ಆಡಿದ ವೈಯಕ್ತಿಕ ಮಾತುಕತೆಗಳ ಆಡಿಯೊ ಮತ್ತು ವಿಡಿಯೊ ತುಣುಕನ್ನು ಹಂಚಿಕೊಳ್ಳುವುದನ್ನು ಸ್ಟಾರ್ ಸ್ಪೋರ್ಟ್ಸ್ ಮುಂದುವರೆಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್​ ಹುಟ್ಟಿಸುವ ಸಲುವಾಗಿ ಪ್ರಸಾರಕರು ಈ ರೀತಿ ಕ್ರಿಕೆಟಿಗರ ಗೌಪ್ಯತೆಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ರೋಹಿತ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ (Rohit Sharma) ಅವರು ಐಪಿಎಲ್ ಬ್ರಾಡ್‌ಕಾಸ್ಟರ್(IPL Broadcaster) ಸ್ಟಾರ್ ಸ್ಪೋರ್ಟ್ಸ್(Star Sports) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ರೋಹಿತ್​ ಅವರು ಧವಳ್ ಕುಲಕರ್ಣಿ ಅವರೊಂದಿಗೆ ಸಂಭಾಷಣೆ ನಡೆಸಿದ್ದರು. ಇದನ್ನು ರೆಕಾರ್ಡ್​ ಮಾಡುತ್ತಿರುವ ಕ್ಯಾಮೆರಾಮನ್​ಗೆ ಆಡಿಯೊ ಆಫ್​ ಮಾಡಿ ಎಂದು ಕೋರಿಕೊಂಡಿದ್ದರು. ಆದರೂ ಕೂಡ ಆಡಿಯೊ ರೆಕಾರ್ಡ್​ ಮಾಡಿ ಈ ತುಣುಕನ್ನು ಹರಿ ಬಿಟ್ಟು ಖಾಸಗಿತನವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.

ರೋಹಿತ್​ ಶರ್ಮ ಈ ಕುರಿತು ಟ್ವೀಟ್​ ಮಾಡಿದ್ದು, ‘ತನ್ನ ವಿನಂತಿಯ ಹೊರತಾಗಿಯೂ, ಸ್ಟಾರ್ ಸ್ಪೋರ್ಟ್ಸ್ ನಾನು ತಂಡದ ಸಹ ಆಟಗಾರರು ಮತ್ತು ಸಹೋದ್ಯೋಗಿಗಳೊಂದಿಗೆ ಆಡಿದ ವೈಯಕ್ತಿಕ ಮಾತುಕತೆಗಳ ಆಡಿಯೊ ಮತ್ತು ವಿಡಿಯೊ ತುಣುಕನ್ನು ಹಂಚಿಕೊಳ್ಳುವುದನ್ನು ಸ್ಟಾರ್ ಸ್ಪೋರ್ಟ್ಸ್ ಮುಂದುವರೆಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್​ ಹುಟ್ಟಿಸುವ ಸಲುವಾಗಿ ಪ್ರಸಾರಕರು ಈ ರೀತಿ ಕ್ರಿಕೆಟಿಗರ ಗೌಪ್ಯತೆಗೆ ಅಡ್ಡಿಪಡಿಸುವುದು ಸರಿಯಲ್ಲ. ಸ್ವಲ್ಪವಾದರೂ ಸಾಮಾನ್ಯ ಜ್ಞಾನ ಇರಬೇಕು” ಎಂದು ಟ್ವೀಟ್​ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕ್ರಿಕೆಟಿಗರ ಜೀವನವು ಎಷ್ಟು ಗೊಂದಲವಾಗಿದೆ ಎಂದರೆ, ಈಗ ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ಗೌಪ್ಯವಾಗಿ ಮಾತನಾಡು ಕೂಡ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಾನು ನಡೆಸುವ ಪ್ರತಿಯೊಂದು ಸಂಭಾಷಣೆಯನ್ನು ಕೂಡ ಕ್ಯಾಮೆರಾಗಳು ರೆಕಾರ್ಡ್ ಮಾಡುತ್ತಿವೆ. ಇದು ಒಳ್ಳೆಯ ವಾತಾವರಣವಲ್ಲ ಎಂದು ರೋಹಿತ್​ ಬೇಸರ ವ್ಯಕ್ತಪಡಿಸಿದ್ದಾರೆ.

ರೋಹಿತ್​ ಅವರು ಕೆಕೆಆರ್​ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಜತೆ ಮಾತನಾಡುತ್ತಿದ್ದಾಗಲೂ ಇದನ್ನು ರೆಕಾರ್ಡ್ ಮಾಡಿ ಪ್ರಸಾರ ಮಾಡಲಾಗಿತ್ತು. ಈಡನ್ ಗಾರ್ಡನ್ಸ್​​ನಲ್ಲಿ ನಡೆದಿದ್ದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೂ ಮೊದಲು ರೋಹಿತ್ ಅವರು ನಾಯರ್ ಅವರೊಂದಿಗೆ ಸಂವಾದ ನಡೆಸಿದ್ದರು.

ಇದನ್ನೂ ಓದಿ IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

ನಾಯಕತ್ವದ ಕರ್ತವ್ಯಗಳಿಂದ ಮುಕ್ತರಾದ ನಂತರ ರೋಹಿತ್ ಈ ಬಾರಿ ದೊಡ್ಡ ಸ್ಕೋರ್ ಮಾಡುತ್ತಾರೆ ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ ಈ ನಿರೀಕ್ಷೆಗಳಲ್ಲೆ ಹುಸಿಯಾಗಿತ್ತು. ರೋಹಿತ್​ ಈ ಬಾರಿ 1 ಶತಕ ಬಾರಿಸಿದ್ದು ಬಿಟ್ಟರೆ ಉಳಿದ ಬಹುತೇಕ ಪಂದ್ಯಗಳಲ್ಲಿಯೂ ಕಳಪೆ ಪ್ರದರ್ಶನ ತೋರಿದ್ದರು. ಐಪಿಎಲ್​​ ವೇದಿಕೆಯಲ್ಲಿ ಮಿಂಚಲು ಸಾಧ್ಯವಾಗದಿದ್ದರೂ, ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ರೋಹಿತ್ ದೊಡ್ಡ ಮೊತ್ತವನ್ನು ಗಳಿಸಲು ಎದುರು ನೋಡುತ್ತಿದ್ದಾರೆ.

ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

Continue Reading

ಕ್ರಿಕೆಟ್

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

RCB vs CSK: ಪಂದ್ಯದ ಮುಕ್ತಾಯದ ಬಳಿಕ ವಾಡಿಕೆಯಂತೆ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಬೇಕು. ಅದರಂತೆ ಚೆನ್ನೈ ತಂಡದ ಆಟಗಾರರೆಲ್ಲ ಸರದಿ ಸಾಲಿನಲ್ಲಿ ನಿಂತು ಸಿದ್ಧರಾಗಿದ್ದರು. ಆದರೆ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಕೆಲ ಕಾಲ ಕಾದ ಧೋನಿ ಆರ್​ಸಿಬಿ ಆಟಗಾರರು ಬರದೇ ಇದದ್ದನ್ನು ನೋಡಿ ಪೆವಿಲಿಯನ್​ನತ್ತ ಮರಳಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಮಹೇಂದ್ರ ಸಿಂಗ್‌ ಧೋನಿ(MS Dhoni) ಕ್ರಿಕೆಟ್‌ ಮೈದಾನದಲ್ಲಿ ಶಾಂತಿಯಿಂದ ವ‌ರ್ತಿಸುತ್ತಾರೆ. ಬ್ಯಾಟಿಂಗ್‌, ವಿಕೆಟ್‌ ಕೀಪಿಂಗ್‌ ಅಥವಾ ನಾಯಕನಾಗೇ ಇರಲಿ ಶಾಂತಚಿತ್ತ ಅವರ ಮುಖ್ಯ ಗುಣ. ಎಂತಹ ಸನ್ನಿವೇಶವಿದ್ದರೂ ಧೋನಿ(MS Dhoni leaves without shaking hands) ತಾಳ್ಮೆ ಕಳೆದುಕೊಳ್ಳುವುದು ವಿರಳ. ಇದೇ ಕಾರಣಕ್ಕೆ ಅವರಿಗೆ ಕ್ಯಾಪ್ಟನ್‌ ಕೂಲ್‌ ಎಂಬ ಹೆಸರು ಕೂಡ ಇದೆ. ಆದರೆ ನಿನ್ನೆ(ಶನಿವಾರ) ನಡೆದ ಆರ್​ಸಿಬಿ(RCB vs CSK) ವಿರುದ್ಧದ ಪಂದ್ಯದಲ್ಲಿ ಧೋನಿ ತೋರಿದ ವರ್ತನೆಗೆ ಎದುರಾಳಿ ತಂಡದ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ಇದನ್ನೂ ಓದಿ RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

ಪಂದ್ಯದ ಮುಕ್ತಾಯದ ಬಳಿಕ ವಾಡಿಕೆಯಂತೆ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಬೇಕು. ಅದರಂತೆ ಚೆನ್ನೈ ತಂಡದ ಆಟಗಾರರೆಲ್ಲ ಸರದಿ ಸಾಲಿನಲ್ಲಿ ನಿಂತು ಸಿದ್ಧರಾಗಿದ್ದರು. ಆದರೆ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಕೆಲ ಕಾಲ ಕಾದ ಧೋನಿ ಆರ್​ಸಿಬಿ ಆಟಗಾರರು ಬರದೇ ಇದದ್ದನ್ನು ನೋಡಿ ಪೆವಿಲಿಯನ್​ನತ್ತ ಮರಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಆರ್​ಸಿಬಿ ಅಭಿಮಾನಿಗಳು ಚೆನ್ನೈ ವಿರೋದಿಯಾಗಿದ್ದರೂ ಕೂಡ ನಿನ್ನೆ ಧೋನಿಗೆ ಸಂಪೂರ್ಣ ಬೆಂಬಲ ಸೂಚಿಸಿದ್ದರು. ಅಲ್ಲದೆ ಧೋನಿಯ ಜೆರ್ಸಿ ತೊಟ್ಟು, ದೊಡ್ಡ ಬ್ಯಾನರ್​ ಮೂಲಕ ನೀವು ವಿದಾಯ ಹೇಳಬೇಡಿ ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳ ಬೇಡಿಕೆ ಎಂದು ಮನವಿ ಮಾಡಿದ್ದರು. ಈ ಮೂಲಕ ಧೋನಿಗೆ ಸಪೋರ್ಟ್​ ಮಾಡಿದ್ದರು. ಆದರೆ ಧೋನಿ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ಮಾಡದೆ ತೆರಳಿದ್ದು ಮಾತ್ರ ಬೇಸರ ತಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ‘ಇಟ್‌ ಹರ್ಟ್ಸ್‌​’ ಎಂದ ಹ್ಯಾಶ್​ ಟ್ಯಾಗ್​ನೊಂದಿಗೆ ಬರೆದುಕೊಂಡಿದ್ದಾರೆ.

ಧೋನಿ ಮೈದಾನದಲ್ಲಿದ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ಮಾಡದಿದ್ದರೂ ಕೂಡ ತಾವು ಪೆವಿಲಿಯನ್​ ಕಡೆಗೆ ಹೋಗುವಾಗ ಎದುರಿಗೆ ಸಿಕ್ಕ ಆರ್​ಸಿಬಿ ಸಿಬ್ಬಂದಿಗಳಿಗೆ ಹಸ್ತಲಾಘವ ನೀಡಿದ್ದಾರೆ. ಯಶ್​ ದಯಾಳ್​ ಎಸೆತ ಅಂತಿಮ ಓವರ್​ನ ಮೊದಲ ಎಸೆತವನ್ನೇ ಧೋನಿ ಔಟ್​ ಆಫ್​ದಿ ಸ್ಟೇಡಿಯಂಗೆ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ 110 ಮೀ. ದೂರ ಚಿಮ್ಮಿತು. ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಧೋನಿ ವಿಕೆಟ್​ ಪತನಗೊಳ್ಳುತ್ತಿದ್ದಂತೆ ಚೆನ್ನೈ ಸೋಲು ಕೂಡ ಖಚಿತಗೊಂಡಿತು.

Continue Reading

ಕ್ರೀಡೆ

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

RCB vs CSK: ಧೋನಿ ಬಾರಿಸಿದ ಸಿಕ್ಸರ್ 110 ಮೀಟರ್ ಸಾಗಿ ಸ್ಟೇಡಿಯಂನಿಂದ ಹೊರಬಿದ್ದ ಕಾರಣ ಹೊಸ ಚೆಂಡನ್ನು ನೀಡಲಾಯಿತು. ಇದು ಒದ್ದೆಯಿಲ್ಲದ ಕಾರಣ ಬೌಲರ್ ಯಶ್ ದಯಾಳ್​ಗೆ ಚೆಂಡಿನ ಮೇಲೆ ಹಿಡಿತ ಸಾಧಿಸಲು ನೆರವಾಯಿತು.ಹೀಗಾಗಿ ನಾವು ಪಂದ್ಯ ಗೆದ್ದುವು ಎಂದು ದಿನೇಶ್ ಕಾರ್ತಿಕ್​ ಹೇಳಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ(M.Chinnaswamy Stadium) ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್(IPL 2024) 2024ರ 68ನೇ ಪಂದ್ಯದಲ್ಲಿ ಎಂಎಸ್ ಧೋನಿ ಅವರು ಬಾರಿಸಿದ 110 ಮೀಟರ್ ಸಿಕ್ಸರ್ ಸಿಎಸ್‌ಕೆ ಸೋಲಿಗೆ ಪ್ರಮುಖ ಕಾರಣವಾಯಿತು ಎಂದು ಆರ್​ಸಿಬಿ ಆಟಗಾರ ದಿನೇಶ್​ ಕಾರ್ತಿಕ್​ ಅಭಿಪ್ರಾಯಪಟ್ಟಿದ್ದಾರೆ.

ಚೆನ್ನೈಗೆ(RCB vs CSK) ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಪಂದ್ಯದಲ್ಲಿ 201ರನ್​ ಗಡಿ ದಾಟಿಬೇಕಿತ್ತು. ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು ಪಂದ್ಯ ಗೆಲ್ಲದಿದ್ದರೂ ಕೂಡ ಪ್ಲೇ ಆಫ್​ ಲೆಕ್ಕಾಚಾರದಲ್ಲಿ 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರು. ಈ ಗುರಿ ತಲುಪಲು ಚೆನ್ನೈಗೆ ಅಂತಿಮವಾಗಿ 6 ಎಸೆತಗಳಲ್ಲಿ 17 ರನ್ ತೆಗೆಯುವ ಸವಾಲು ಎದುರಾಯಿತು. ಈ ವೇಳೆ ಯಶ್​ ದಯಾಳ್​ ಎಸೆತ ಅಂತಿಮ ಓವರ್​ನ ಮೊದಲ ಎಸೆತವನ್ನೇ ಧೋನಿ ಔಟ್​ ಆಫ್​ದಿ ಸ್ಟೇಡಿಯಂಗೆ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ 110 ಮೀ. ದೂರ ಚಿಮ್ಮಿತು. ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಬಳಿಕ ಎಸೆತ ನಾಲ್ಕು ಎಸೆತಗಳಲ್ಲಿಯೂ ದಯಾಳ್​ ಹಿಡಿತ ಸಾಧಿಸಿ ಆರ್​ಸಿಬಿಗೆ ಅಭೂತಪೂರ್ವ ಗೆಲುವು ತಂದು ಕೊಟ್ಟರು.

ಧೋನಿ ಸಿಕ್ಸರ್​ನಿಂದ ಆರ್​ಸಿಬಿ ಲಾಭವಾಯಿತು ಎಂದು ದಿನೇಶ್​ ಕಾರ್ತಿಕ್​ ಹೇಳಿದ್ದಾರೆ. ಇದಕ್ಕೆ ಕಾರಣವನ್ನು ಕೂಡ ಅವರು ತಿಳಿಸಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ದಿನೇಶ್​ ಕಾರ್ತಿಕ್​, ‘ಧೋನಿ ಬಾರಿಸಿದ ಸಿಕ್ಸರ್ 110 ಮೀಟರ್ ಸಾಗಿ ಸ್ಟೇಡಿಯಂನಿಂದ ಹೊರಬಿದ್ದ ಕಾರಣ ಹೊಸ ಚೆಂಡನ್ನು ನೀಡಲಾಯಿತು. ಇದು ಒದ್ದೆಯಿಲ್ಲದ ಕಾರಣ ಬೌಲರ್ ಯಶ್ ದಯಾಳ್​ಗೆ ಚೆಂಡಿನ ಮೇಲೆ ಹಿಡಿತ ಸಾಧಿಸಲು ನೆರವಾಯಿತು. ಇದಕ್ಕೂ ಮುನ್ನ ಚೆಂಡು ಒದ್ದೆಯಾಗಿದ್ದ ಕಾರಣ ಬೌಲರ್​ಗಳಿಗೆ ಸರಿಯಾಗಿ ಚೆಂಡಿನ ಮೇಲೆ ಹಿಡಿತ ಸಾಧಿಸಲು ಕಷ್ಟವಾಗಿತ್ತು. ಹೀಗಾಗಿ ನೋ ಬಾಲ್​, ಫುಲ್​ಟಾಸ್​ ಸೇರಿ ವೈಡ್​ ಎಸೆತಗಳು ಕಂಡುಬಂತು. ಹೊಸ ಚೆಂಡು ಸಿಕ್ಕಿದ್ದು ಆರ್​ಸಿಬಿ ಗೆಲುವಿಗೆ ಸಹಾಯವಾಯಿತು” ಎಂದು ಹೇಳುವ ಮೂಲಕ ಧೋನಿ ಸಿಕ್ಸರ್​ ತಮ್ಮ ತಂಡಕ್ಕೆ ವರದಾನವಾಯಿತು ಎಂದರು.

ಇದನ್ನೂ ಓದಿ RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸಿಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

Continue Reading
Advertisement
RCB vs CSK
ಕ್ರೀಡೆ11 mins ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ24 mins ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Prajwal Revanna Case
ಕರ್ನಾಟಕ39 mins ago

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Rohit Sharma
ಕ್ರೀಡೆ52 mins ago

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

R Ashok
ರಾಜಕೀಯ1 hour ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್2 hours ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್2 hours ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ2 hours ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್2 hours ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌