ನಿವೃತ್ತ ಪತ್ರಕರ್ತರ ಮಾಸಾಶನ ಹೆಚ್ಚಳ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ - Vistara News

ಬೆಂಗಳೂರು

ನಿವೃತ್ತ ಪತ್ರಕರ್ತರ ಮಾಸಾಶನ ಹೆಚ್ಚಳ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ಆಯೋಜಿಸಲಾಗಿದ್ದ ಬಿಸ್ನೆಸ್‌ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜಕಾರಣಿಗಳಿಗೂ ಮಾಧ್ಯಮದವರಿಗೂ ಅವಿನಾಭಾವ ಸಂಬಂಧ. ಅವರನ್ನು ಬಿಟ್ಟು ನಾವು, ನಮ್ಮನ್ನು ಬಿಟ್ಟು ಅವರು ಇರಲಾಗುವುದಿಲ್ಲ ಎಂದಿದ್ದಾರೆ.

VISTARANEWS.COM


on

ಬಸವರಾಜ ಬೊಮ್ಮಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪತ್ರಕರ್ತರಿಗೆ ಸಾಮಾಜಿಕ, ಆರ್ಥಿಕ ಭದ್ರತೆಯ ಅವಶ್ಯಕತೆ ಇದೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ಹೆಚ್ಚಿಸಲು ಸಮಿತಿ ರಚಿಸಲು ಆದೇಶ ಹೊರಡಿಸಿ, ಅದಕ್ಕಿರುವ ನಿಯಮಗಳನ್ನು ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ನಗರದ ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ಆಯೋಜಿಸಲಾಗಿದ್ದ ಬಿಸ್ನೆಸ್‌ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಮಾತನಾಡಿ, ವಿಧಾನಸಭೆಯ ಹತ್ತಿರವೇ ಪ್ರೆಸ್ ಕ್ಲಬ್ ಇದೆ. ಪತ್ರಕರ್ತರು ಶಕ್ತಿಸ್ಥಳ ಭಾಗವಾಗಿದ್ದು, ನಾಡು ಕಟ್ಟಲು ನಿಮ್ಮ ಶಕ್ತಿ ಬಳಕೆಯಾಗಲಿ. ಹೊಗಳಿಕೆ ತೆಗಳಿಕೆಗಳನ್ನು ಸಮಾನವಾಗಿ ಸ್ವೀಕರಿಸುವ ಸ್ಥಿತಪ್ರಜ್ಞತೆ ಇದ್ದಾಗ ರಾಜಕಾರಣಿ ಯಶಸ್ವಿಯಾಗಲು ಸಾಧ್ಯ. ಇಂತಹ ಕಾರ್ಯಕ್ರಮಗಳನ್ನು ಪ್ರೆಸ್ ಕ್ಲಬ್ ಹೆಚ್ಚಾಗಿ ಮಾಡಬೇಕು ಎಂದರು.

ಇದನ್ನೂ ಓದಿ | ನ್ಯಾಯಾಂಗ ತನಿಖೆಯಾಗದಿದ್ದರೆ 40% ಕಮಿಷನ್‌ ನಿಜ ಎಂದರ್ಥ: ಮಾಜಿ ಸಿಎಂ ಸಿದ್ದರಾಮಯ್ಯ

ಪ್ರೆಸ್ ಕ್ಲಬ್ ಸಾಮಾನ್ಯವಾಗಿ ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದವರನ್ನು ಗುರುತಿಸುತ್ತದೆ. ಆದರೆ ಈ ಬಾರಿ ಬಿಸ್ನೆಸ್‌ ಐಕಾನ್ ಅವಾರ್ಡ್ ಕೊಡುತ್ತಾರೆ ಎಂದಾಗ ಆಶ್ಚರ್ಯವಾಯಿತು. ಪ್ರೆಸ್ ಕ್ಲಬ್ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಹೆಚ್ಚಿಸಿಕೊಂಡಿದೆ. ಬಿಸ್ನೆಸ್‌ನಲ್ಲಿ ವಿಶೇಷ ಸಾಧನೆ ಮಾಡಿರುವವರನ್ನು ಗುರುತಿಸಿ ಅವಾರ್ಡ್ ಕೊಡುವುದು ವಿಶೇಷ ಎಂದು ತಿಳಿಸಿ ಪ್ರಶಸ್ತಿ ಪಡೆದವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಇದು ವಿಶೇಷ ಪ್ರಶಸ್ತಿ, ಟೀಕೆಗಾರರಿಂದ ಪ್ರಶಸ್ತಿ ಪಡೆಯುವುದು ಸುಲಭವಲ್ಲ. ಅವರಿಂದ ಪ್ರಶಸ್ತಿ ಪಡೆದಿರುವುದು ನಿಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದೀರಿ ಎಂದು ನಿರೂಪಿಸುತ್ತದೆ ಎಂದರು.

ರಾಜಕಾರಣಿಗಳಿಗೂ ಮಾಧ್ಯಮದವರಿಗೂ ಅವಿನಾಭಾವ ಸಂಬಂಧ. ಅವರನ್ನು ಬಿಟ್ಟು ನಾವು, ನಮ್ಮನ್ನು ಬಿಟ್ಟು ಅವರು ಇರಲಾಗುವುದಿಲ್ಲ. ನಾವು ಮಾಡಿರುವ ಕೆಲಸಗಳು ಜನರಿಗೆ ತಿಳಿಯಲು ನಿಮ್ಮ ಅಗತ್ಯವಿದೆ. ಹೀಗಾಗಿ ನಮ್ಮ ನಿಮ್ಮ ಅನ್ಯೋನ್ಯ ಸಂಬಂಧ ಅವಶ್ಯಕ ಮತ್ತು ಅನಿವಾರ್ಯ ಎಂದರು. ಹಾಗಂತ ಅದು ಒಂದೇ ಮಾರ್ಗದ ಟ್ರಾಫಿಕ್ ಅಲ್ಲ. ನಮ್ಮನ್ನು ಬಿಟ್ಟರೆ ನಿಮಗೆ ಸುದ್ದಿಗಳಿಲ್ಲ. ನೀವು ಕ್ರೀಡೆ, ಸಿನಿಮಾ ಎಂದು ಸುದ್ದಿ ಹಾಕಿದರೂ ಮೊದಲ ಪುಟದಲ್ಲಿ ನಾವೇ ಬೇಕು. ರಾಜಕಾರಣವೇ ಇಲ್ಲದ ದಿನವನ್ನು ಕಲ್ಪಿಸಿಕೊಳ್ಳಲೂ ಅಸಾಧ್ಯ. ಇಲ್ಲಿದಿದ್ದರೆ ವಾಹಿನಿಗಳ ಟಿಆರ್‌ಪಿ ಹಾಗೂ ರಾಜಕಾರಣಿಗಳ ಮಹತ್ವ ಕಡಿಮೆಯಾಗುತ್ತದೆ ಎಂದರು. ನಾವು ಹೇಳಿ ಮಾಡಿಸಿದ ಜೋಡಿ. ಒಟ್ಟಿಗೇ ಬಾಳಬೇಕೆಂದು ತಿಳಿಸಿದರು.

ಅಂತಃಕರಣದಿಂದ ಕೆಲಸ ಮಾಡಿ
ಕಾಲ ಬದಲಾಗಿದೆ. ತಂತ್ರಜ್ಞಾನ ಮುಂದುವರಿದಿದೆ. ಜ್ಞಾನ, ವಿಜ್ಞಾನ, ತಂತ್ರಜ್ಞಾನ, ಈಗ ತಂತ್ರಾಂಶ ಜ್ಞಾನ ವಾಗಿದೆ. ಡಿಜಿಟಲ್ ಪ್ರಪಂಚಕ್ಕೆ ಬಂದಿದ್ದೇವೆ. ಈ ಸಂದರ್ಭದಲ್ಲಿ ನಾವು ಕೆಲವು ಮೂಲಭೂತ ವಿಷಯ ಮರೆಯಬಾರದು. ತತ್ವಜ್ಞಾನದಿಂದ ತಂತ್ರಾಂಶ ಜ್ಞಾನಕ್ಕೆ ಬದಲಾವಣೆ ಆಗಿದೆ. ಆದರೆ ತತ್ವಜ್ಞಾನದ ಮಾರ್ಗದರ್ಶನ ಹಾಗೂ ಅದರ ಮಹತ್ವವನ್ನು ಮರೆಯಬಾರದು. ಖಾಸಗೀಕರಣ, ಉದಾರೀಕರಣ ಹಾಗೂ ಜಾಗತೀಕರಣವಾಗಿದೆ. ಇವುಗಳ ಮಧ್ಯೆ ಅಂತಃಕರಣವನ್ನು ಕಡಿಮೆಯಾಗಿದೆ. ಅಂತಃಕರಣವನ್ನು ಇಟ್ಟುಕೊಂಡು ನಾವು ಕೆಲಸ ಮಾಡಬೇಕು. ಬಡವರಿಗಾಗಿ, ಮನಮಿಡಿಯುವ ಕೆಲಸಗಳನ್ನು ಮಾಡಬೇಕು ಎಂದರು.

ಇದನ್ನೂ ಓದಿ | 40 ಪರ್ಸೆಂಟ್ ಕಮಿಷನ್‌ ಸಾಕ್ಷ್ಯವಿದ್ದರೆ ಬಹಿರಂಗಪಡಿಸಲಿ : ಈಶ್ವರಪ್ಪ ಸೇರಿ ಬಿಜೆಪಿ ನಾಯಕರ ಕಿಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

Lok Sabha Election 2024: ಬೇಸಿಗೆಯ ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು. ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆ ನಡುವೆ ಎಲ್ಲೆಡೆ ಶಾಂತಿಯುತವಾಗಿ ಮತದಾನ ನಡೆದಿದೆ.

VISTARANEWS.COM


on

Lok Sabha Election 2024
ಮತದಾನ ಪ್ರಕ್ರಿಯೆ ಮುಗಿದ ತಕ್ಷಣ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತಗಟ್ಟೆಯಲ್ಲಿ ಚುನಾವಣೆ ಇವಿಎಂ, ವಿವಿ ಪ್ಯಾಟ್‌ ಸೇರಿ ಇತರೆ ಸಾಮಗ್ರಿಗಳನ್ನು ಭದ್ರಪಡಿಸಿದರು.
Koo

ಬೆಂಗಳೂರು: ರಾಜ್ಯದ ಬೆಳಗಾವಿ, ಚಿಕ್ಕೋಡಿ ಸೇರಿ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ 2ನೇ ಹಂತದ ಮತದಾನ (Lok Sabha Election 2024) ಮಂಗಳವಾರ ಮುಕ್ತಾಯವಾಯಿತು. ಮತದಾನ ಬಹಿಷ್ಕಾರ, ಪ್ರತಿಭಟನೆ ನಡುವೆ ಎಲ್ಲೆಡೆ ಶಾಂತಿಯುತವಾಗಿ ಮತದಾನ ನೆರವೇರಿದೆ. 2ನೇ ಹಂತದಲ್ಲಿ ಶೇ. 70.41 ಮತದಾನ (Voter Turnout) ದಾಖಲಾಗಿದ್ದು, ಬೇಸಿಗೆಯ ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿರುವುದು ಕಂಡುಬಂದಿದೆ.

14 ಕ್ಷೇತ್ರಗಳಿಂದ 227 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಇವರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಮತದಾನ ಮುಕ್ತಾಯವಾಗಿದ್ದರಿಂದ ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದ್ದು, ಜೂನ್‌ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಎರಡನೇ ಹಂತದಲ್ಲಿ ಚಿಕ್ಕೋಡಿ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.76.99 ಮತದಾನವಾಗಿದ್ದು, ಕಲಬುರಗಿ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ 61.73 ಮತದಾನವಾಗಿದೆ. ಇನ್ನೂ ಈ ಬಾರಿ ದಕ್ಷಿಣ ಕರ್ನಾಟಕಕ್ಕೆ (ಶೇ.69.23) ಹೋಲಿಸಿದರೆ ಉತ್ತರ ಕರ್ನಾಟಕವೇ(ಶೇ.70.41) ಶೇಕಡಾವಾರು ಮತದಾನದಲ್ಲಿ ಮುಂದಿದೆ.

ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಶೇ.69.23 ಮತದಾನ ದಾಖಲಾಗಿತ್ತು. ಮಂಗಳವಾರ ಮುಗಿದಿರುವ 2ನೇ ಹಂತದ ಚುನಾವಣೆಯಲ್ಲಿ ಶೇ. 70.41 ಮತದಾನ ದಾಖಲಾಗಿದೆ. ಇನ್ನು 2019 ಚುನಾವಣೆಯ ಮೊದಲ ಹಂತದಲ್ಲಿ ಶೇ. 68.96, ಎರಡನೇ ಹಂತದಲ್ಲಿ 68.66 ಮತದಾನವಾಗಿತ್ತು.

ಇದನ್ನೂ ಓದಿ | West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರ20242019
ಚಿಕ್ಕೋಡಿಶೇ. 76.99ಶೇ. 75.62
ಬೆಳಗಾವಿಶೇ. 71ಶೇ. 67.84
ಬಾಗಲಕೋಟೆ
ಶೇ.70.10ಶೇ. 70.70
ವಿಜಯಪುರ
ಶೇ. 64.71ಶೇ.61.89
ಕಲಬುರಗಿ
ಶೇ. 61.73ಶೇ. 61.18
ರಾಯಚೂರುಶೇ. 64.10ಶೇ. 58.34
ಬೀದರ್
ಶೇ. 63.55ಶೇ. 63
ಕೊಪ್ಪಳ
ಶೇ. 69.87ಶೇ. 68.56
ಬಳ್ಳಾರಿ
ಶೇ.72.35ಶೇ. 69.76
ಹಾವೇರಿ
ಶೇ.76.78ಶೇ. 74.21
ಧಾರವಾಡ
ಶೇ. 72.53ಶೇ. 70.29
ಉತ್ತರ ಕನ್ನಡ
ಶೇ. 73.52ಶೇ. 74.16
ದಾವಣಗೆರೆ
ಶೇ. 76.23ಶೇ. 73.19
ಶಿವಮೊಗ್ಗಶೇ. 76.05
ಶೇ. 76.58
ಒಟ್ಟು ಶೇ. ಮತದಾನ ಶೇ. 70.41

ಉತ್ಸಾಹದಿಂದ ಹಕ್ಕು ಚಲಾವಣೆ

ಯುವಕ-ಯುವತಿಯರು, ಮಹಿಳೆಯರು, ವೃದ್ಧರು ಸೇರಿ ಎಲ್ಲ ವಯೋಮಾನದ ಮತಾದಾರರು ಅತ್ಯಂತ ಉತ್ಸಾಹದಿಂದ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ಮತ ಚಲಾಯಿಸುವ ಮೂಲಕ ಸಂಭ್ರಮಿಸಿದರು. ಇನ್ನು ಹಲವೆಡೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷಚೇತನರು, ವೃದ್ಧರು, ಶತಾಯುಷಿ ಮತದಾರರು ಹಕ್ಕು ಚಲಾವಣೆ ಮಾಡುವ ಮೂಲಕ ಯುವ ಮತದಾರರಿಗೆ ಮಾದರಿಯಾದರು.

ಇದನ್ನೂ ಓದಿ | Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

ಗಮನ ಸೆಳೆದ ವಿಷಯಾಧಾರಿತ ಮತಗಟ್ಟೆಗಳು

ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಉಪ್ಪಾರಗೇರಿಯಲ್ಲಿ ಸಾಂಪ್ರದಾಯಿಕ ಮತಗಟ್ಟೆ ಮತದಾರರನ್ನು ಆಕರ್ಷಿಸಿತು.

ಎರಡನೇ ಹಂತದ ಮತದಾನದಲ್ಲಿ ವಿಭಿನ್ನ ವಿಷಯಾಧಾರಿತ ಮತಗಟ್ಟೆಗಳು ಗಮನಸೆಳೆದವು. ಮಹಿಳೆಯರಿಂದ ಕಾರ್ಯ ನಿರ್ವಹಿಸಲ್ಪಡುವ ಮಾದರಿ ಮತಗಟ್ಟೆಯಾದ ಸಖಿ ಮತಗಟ್ಟೆ, ಅದೇ ರೀತಿ ವಿಶೇಷ ಚೇತನರ ಮಾದರಿ ಮತಗಟ್ಟೆ, ಸಾಂಪ್ರದಾಯಿಕ ಮತಗಟ್ಟೆ, ಗ್ರೀನ್ ಬೂತ್, ಯುವ ಮತಗಟ್ಟೆಗಳು ಮತದಾರರನ್ನು ಆಕರ್ಷಿಸಿದವು.

ಕಾಗವಾಡದಲ್ಲಿ ಶತಾಯುಷಿ ಮಹಿಳೆ ಮತದಾನ

ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದ 103 ವಯಸ್ಸಿನ ಹಿರಿಯ ಮಹಿಳೆ ನೀಲವ್ವ ಶಿವಗೌಡ ಗಾಳಿ ಅವರು ಉತ್ಸಾಹದಿಂದ ಮತ ಚಲಾಯಿಸಿದರು. ಅದೇ ರೀತಿ ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ತಮ್ಮ 96 ವರ್ಷದ ಇಳಿ ವಯಸ್ಸಿನಲ್ಲಿ ಸಿದ್ದವ್ವ ಡೊನೂರ ಅವರು ಮರಿಮೊಮ್ಮಗಳೊಡನೆ ಮಸಬಿನಾಳ ಗ್ರಾಮದ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸಿ ಎಲ್ಲರಿಗೂ ಆದರ್ಶರಾದರು.

ಸವದತ್ತಿ ತಾಲೂಕಿನ ಆಲದಕಟ್ಟಿ ಕೆ.ಎಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಕಟ್ಟಿ ಕೆ.ಎಂ ಗ್ರಾಮದ ನಿವಾಸಿ ಅಂತಾರಾಷ್ಟ್ರೀಯ ಮಟ್ಟದ ವ್ಹೀಲ್‌ಚೇರ್‌ ಬಾಸ್ಕೆಟ್ ಬಾಲ್ ಕ್ರೀಡಾಪಟು ಕುಮಾರಿ ಲಕ್ಷ್ಮೀ ರಾಯಪ್ಪ ರಾಯಣ್ಣವರ ಅವರು ಸ್ವಗ್ರಾಮದಲ್ಲಿ ಮತ ಚಲಾಯಿಸಿ ಅನಿಸಿಕೆ ಹಂಚಿಕೊಂಡರು. ಇನ್ನು ಅಂತಾರಾಷ್ಟ್ರೀಯ ಈಜುಗಾರ ವಿಶೇಷ ಮತದಾರರಾದ ಮೊಯಿನ್ ಅವರು ಬೆಳಗಾವಿ ನಗರದಲ್ಲಿ ತಮ್ಮ ಅಮೂಲ್ಯವಾದ ಮತ ಚಲಾಯಿಸಿದರು.

ಇದನ್ನೂ ಓದಿ | Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

ಹಲವೆಡೆ ಮತದಾನ ಬಹಿಷ್ಕಾರ

ವಿವಿಧ ಕಾರಣಗಳಿಗಾಗಿ ಹಲವೆಡೆ ಜನರು ಮತದಾನ ಬಹಿಷ್ಕಾರ ಮಾಡಿರುವುದು ಕಂಡುಬಂದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ 18ನೇ ವಾರ್ಡ್‌ನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು ಪ್ರಕರಣ ಖಂಡಿಸಿ ಮತಗಟ್ಟೆ ಸಂಖ್ಯೆ 147 ರಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದರು. ಅದೇ ರೀತಿ ಕುಕನೂರು ತಾಲೂಕಿನ ಗುದ್ನೆಪ್ಪನಮಠ ಗ್ರಾಮದಲ್ಲಿ ಸೇವಾದಾರರ ಭೂಮಿಯನ್ನು ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಒತ್ತುವರಿ ವಿರೋಧಿಸಿ ಮತದಾನ ಬಹಿಷ್ಕಾರವಾಗಿದೆ.

ರಾಯಚೂರಿನ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಮತಗಟ್ಟೆ ಸಂಖ್ಯೆ 254 ಹಾಗೂ 255 ರಲ್ಲಿ ಮತದಾನ ಸ್ಥಗಿತವಾಗಿತ್ತು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಚಿಲಕನಹಟ್ಟಿ ಗ್ರಾಮದ ಮಾರುತಿ ನಗರದಲ್ಲಿ ಪ್ರತ್ಯೇಕ ಮತದಾನ ಕೇಂದ್ರ ಮಾಡದ ಹಿನ್ನೆಲೆ ಮತದಾರರು ಮತ ಹಾಕಲಿಲ್ಲ. ಕಂದಾಯ ಗ್ರಾಮ ಮಾಡಿ ಮೂಲಭೂತ ಸೌಲಭ್ಯ ನೀಡಲು ಆಗ್ರಹಿಸಿ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹಳವ ತರ್ಲಗಟ್ಟ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿದೆ.

ವೋಟರ್‌ ಲಿಸ್ಟ್‌ನಲ್ಲಿ ಹೆಸರು ಡಿಲೀಟ್; ಮತದಾರರ ಆಕ್ರೋಶ

ಹುಬ್ಬಳ್ಳಿ: ಮತಗಟ್ಟೆಯಲ್ಲಿ 200 ರಿಂದ 300 ಜನ ಮತದಾರರ ಹೆಸರುಗಳು ಡಿಲೀಟ್ ಆಗಿವೆ ಎಂದು ಮತಗಟ್ಟೆ ಮುಂದೆ ಮತದಾರರು ಆಕ್ರೋಶ ಹೊರಹಾಕಿದ ಘಟನೆ ಹುಬ್ಬಳ್ಳಿಯ ಪೆಂಡಾರಗಲ್ಲಿ ಸರ್ಕಾರಿ ಶಾಲೆಯಲ್ಲಿ ನಡೆಯಿತು. ಪೆಂಡಾರಗಲ್ಲಿಯ ಮತಗಟ್ಟೆ ಸಂಖ್ಯೆ 26 ಹಾಗೂ 27 ರಲ್ಲಿ ಹಲವು ಹೆಸರು ನಾಪತ್ತೆಯಾಗಿವೆ ಎಂದು ಮತದಾರರು ಕಿಡಿಕಾರಿದರು.

ಇದನ್ನೂ ಓದಿ | Lok Sabha Election: 3ನೇ ಹಂತದಲ್ಲಿ ಶೇ.60ರಷ್ಟು ಮತದಾನ, ಕಳೆದ ಬಾರಿಗಿಂತಲೂ ಕಡಿಮೆ

ಬಿಜೆಪಿ ಪರ‌ ಮತ ಹಾಕಿ ಎಂದ ಅಧಿಕಾರಿ ವಿರುದ್ಧ ಆಕ್ರೋಶ

ಚಿಕ್ಕೋಡಿ: ಬಿಜೆಪಿ ಪರ‌ ಮತ ಚಲಾಯಿಸುವಂತೆ ಮತಗಟ್ಟೆ ಒಳಗಿನ ಅಧಿಕಾರಿ ಒತ್ತಾಯ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆ ಎದುರು ಪ್ರತಿಭಟನೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಕೋಟೆಬಾಗ ಶಾಲೆಯ ಬೂತ್ ನಂಬರ್ 162 ರಲ್ಲಿ ನಡೆಯಿತು. ಮಹಿಳೆಯರಿಗೆ ಬಿಜೆಪಿ ಪರ ಮತಚಲಾಯಿಸುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎಂದು ಮತಗಟ್ಟೆಗೆ ಕೈ ಕಾರ್ಯಕರ್ತರು ಆಗಮಿಸಿ ಆಕ್ರೋಶ ಹೊರಹಾಕಿದರು. ಇದರಿಂದ ಅವರನ್ನು ತಡೆಯಲು ಹೋದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಮೊದಲ ಹಂತದ ಚುನಾವಣೆಯಲ್ಲಿ ಶೇ.69.23 ಮತದಾನ

ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಏ.26ರಂದು ನಡೆದಿತ್ತು. ಬೆಂಗಳೂರು, ಮೈಸೂರು ಸೇರಿ 14 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಶೇ.69.23 ಮತದಾನ ದಾಖಲಾಗಿತ್ತು. ಮೊದಲ ಹಂತದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿತ್ತು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿತ್ತು.

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರ20242019
ಉಡುಪಿ-ಚಿಕ್ಕಮಗಳೂರುಶೇ. 76.06ಶೇ. 76.07
ಹಾಸನಶೇ. 77.51ಶೇ. 77.35
ದಕ್ಷಿಣ ಕನ್ನಡ
ಶೇ. 77.43ಶೇ. 77.99
ಚಿತ್ರದುರ್ಗ
ಶೇ. 73.11ಶೇ. 70.80
ತುಮಕೂರು
ಶೇ. 77.70ಶೇ. 77.43
ಮಂಡ್ಯಶೇ. 81.48ಶೇ. 80.59
ಮೈಸೂರುಕೊಡಗು
ಶೇ. 70.45ಶೇ. 69.51
ಚಾಮರಾಜನಗರ
ಶೇ. 76.59ಶೇ. 75.35
ಬೆಂಗಳೂರು ಗ್ರಾಮಾಂತರ
ಶೇ.67.29ಶೇ. 64.98
ಬೆಂಗಳೂರು ಉತ್ತರ
ಶೇ.54.42ಶೇ. 54.76
ಬೆಂಗಳೂರು ಸೆಂಟ್ರಲ್‌
ಶೇ. 52.81ಶೇ. 54.32
ಬೆಂಗಳೂರು ದಕ್ಷಿಣ
ಶೇ. 53.15ಶೇ. 53.70
ಚಿಕ್ಕಬಳ್ಳಾಪುರ
ಶೇ. 76.82ಶೇ. 76.74
ಕೋಲಾರಶೇ. 78.07
ಶೇ. 77.25
ಒಟ್ಟು ಶೇಕಡಾವಾರು ಮತದಾನ 69.23

2019ರ ಲೋಕಸಭಾ ಚುನಾವಣೆಯ ಒಟ್ಟು ಮತದಾನ ಎಷ್ಟು?

2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತ ಸೇರಿ ಒಟ್ಟು ಶೇ. 68.96 ಮತದಾನ ನಡೆದಿತ್ತು. ಮಂಡ್ಯದಲ್ಲಿ ಅತಿಹೆಚ್ಚು ಶೇ. 80.59, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 53.70 ಮತದಾನ ದಾಖಲಾಗಿತ್ತು.

Continue Reading

ಬೆಂಗಳೂರು

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Music Festival: ಬೆಂಗಳೂರಿನ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Music Festival
Koo

ಬೆಂಗಳೂರು: ಸಪ್ತಕ ಸಂಸ್ಥೆಯ 19ನೇ ವಾರ್ಷಿಕ ಸಂಗೀತ ಉತ್ಸವದ ನಿಮಿತ್ತ ಮೇ 12ರಂದು ಸಂಜೆ 5.30ಕ್ಕೆ ಸಂಗೀತ ಸಂಭ್ರಮ 552ನೇ ಕಾರ್ಯಕ್ರಮವನ್ನು (Music Festival) ನಗರದ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ತಕ ಸಂಚಾಲಕರಾದ ಜಿ.ಎಸ್‌.ಹೆಗಡೆ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಕಾಡೆಮಿ ಆಫ್‌ ಮ್ಯೂಸಿಕ್‌ ಪ್ರಾಯೋಕತ್ವದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಿಣಿದೇವಿ ಮಾಲಗತ್ತಿ ಭಾಗವಹಿಸಲಿದ್ದಾರೆ.

ಕೋಲ್ಕೊತಾ ಗಾಯಕಿ ವಿದುಷಿ ರುಚಿರಾ ಪಾಂಡಾ, ಬೆಂಗಳೂರಿನ ತಬಲಾ ವಾದಕ ಪಂ. ರಾಜೇಂದ್ರ ನಾಕೋಡ, ಹಾರ್ಮೋನಿಯಂ ವಾದಕ ಪಂ. ವ್ಯಾಸಮೂರ್ತಿ ಕಟ್ಟಿ, ಮುಂಬಯಿಯ ತಬಲಾ ಸೋಲೋ ಕಲಾವಿದ ಪಂ. ಯೋಗೀಶ ಸಂಸಿ, ಪುಣೆಯ ಹಾರ್ಮೋನಿಯಮ್ ಲೆಹರಾ ಕಲಾವಿದರಾದ ತನ್ಮಯ ದೇವಚಕೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Continue Reading

ಕರ್ನಾಟಕ

BESCOM Helpline: ಮಳೆ ಹಾನಿ; ದೂರು ಸಲ್ಲಿಸಲು ಬೆಸ್ಕಾಂ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌, ದೂರವಾಣಿ ಸಂಖ್ಯೆ

BESCOM Helpline: ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆಗಳು ಇದ್ದರೆ ದೂರು ಸಲ್ಲಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ಬೆಸ್ಕಾಂ ನೀಡಿದೆ. ಗ್ರಾಹಕರು ಬೆಸ್ಕಾಂ ಸಂಖ್ಯೆಗೆ ಸಂದೇಶ ಕಳುಹಿಸಿ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು.

VISTARANEWS.COM


on

Bescom Helpline
Koo

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯ ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು (rain damage) ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಪರ್ಯಾಯ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು (BESCOM Helpline) ಬೆಸ್ಕಾಂ ನೀಡಿದೆ.

ವಾಟ್ಸ್‌ಆ್ಯಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜತೆಗೆ ಎಸ್‌ಎಂಎಸ್‌ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ.

ಇದನ್ನೂ ಓದಿ | Mahila Samman Saving Certificate : ಮಹಿಳಾ ಸಮ್ಮಾನ್‌ ಸೇವಿಂಗ್‌ ಸರ್ಟಿಫಿಕೇಟ್‌ಗೆ 7.5% ಬಡ್ಡಿ, ಏಪ್ರಿಲ್‌ 1ರಿಂದ ಲಭ್ಯ

ಜಿಲ್ಲಾವಾರು ವಾಟ್ಸ್‌ಆ್ಯಪ್‌ ಸಂಖ್ಯೆಗಳು

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021.

ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ಆ್ಯಪ್‌ ಸಂಖ್ಯೆ: 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ- 9449844640.

ಈ ಕೆಳಗಿನ ಮೊಬೈಲ್‌ ಸಂಖ್ಯೆಗಳು- ಕೇವಲ ಎಸ್‌ಎಂಎಸ್‌ಗಳಿಗೆ ಮಾತ್ರ: 9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

Continue Reading
Advertisement
nanna desha nanna dani column
ಅಂಕಣ3 seconds ago

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

Ghee Testing Method
ಆಹಾರ/ಅಡುಗೆ16 mins ago

Ghee Testing Method: ನಾವು ತಿನ್ನುವ ತುಪ್ಪ ಶುದ್ಧವಾಗಿದೆಯೇ ಎಂದು ಪರೀಕ್ಷಿಸುವುದು ಹೇಗೆ? ಇಲ್ಲಿದೆ ವಿಧಾನ

karnataka weather Forecast
ಮಳೆ46 mins ago

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Food Safety
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಆಹಾರ ಸುರಕ್ಷತೆಗಾಗಿ ನಿಷೇಧ ಆದೇಶ ಹೊರಡಿಸಿದರೆ ಸಾಕೆ?

Juices Side Effect
ಆರೋಗ್ಯ1 hour ago

Juices Side Effect: ಅಂಗಡಿಯಲ್ಲಿ ಸಿಗುವ ಜ್ಯೂಸ್‌ ಕುಡಿದರೆ ಏನಾಗುತ್ತದೆ?

Dina Bhavishya
ಭವಿಷ್ಯ2 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

70.94 percent voting in Koppal Lok Sabha constituency says Koppal DC Nalin Atul
ಕೊಪ್ಪಳ7 hours ago

Lok Sabha Election 2024: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94ರಷ್ಟು ಮತದಾನ

Rampura PSI Mahesh Hosapete admitted to the hospital Hanagal village road accident injured persons
ಕರ್ನಾಟಕ7 hours ago

Road Accident: ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸಿದ ಪಿಎಸ್‌ಐ

Lok Sabha Election 2024
ಕರ್ನಾಟಕ7 hours ago

Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

Mayawati
ಪ್ರಮುಖ ಸುದ್ದಿ7 hours ago

Mayawati: ನೇಮಿಸಿದ 5 ತಿಂಗಳಲ್ಲೇ ಸೋದರಳಿಯನನ್ನು ಉತ್ತರಾಧಿಕಾರಿ ಹುದ್ದೆಯಿಂದ ತೆಗೆದ ಮಾಯಾವತಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ10 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ13 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ15 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌