Tumkur accident | ಕಂಬನಿ ಮಿಡಿದ ಸಿಎಂ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ - Vistara News

Latest

Tumkur accident | ಕಂಬನಿ ಮಿಡಿದ ಸಿಎಂ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ

ತುಮಕೂರು ಜಿಲ್ಲೆಯ ಕಳ್ಳಂಬೆಳ್ಳದಲ್ಲಿ ನಡೆದ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

VISTARANEWS.COM


on

Tumkur accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡು ಹಲವರು ಗಾಯಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ ಎಂದಿರುವ ಅವರು ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಈ ನಡುವೆ, ರಾಜ್ಯ ಸರಕಾರದಿಂದ ಮೃತರ ಕುಟುಂಬಗಳಿಗೆ ತಲಾ ೫ ಲಕ್ಷ ರೂ. ಮತ್ತು ಗಾಯಗೊಂಡಿರುವವರ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ನಾಳೆ ಮನೆಗಳಿಗೆ ಭೇಟಿ ನೀಡುವ ಸಾಧ್ಯತೆ
ಶಿರಾ ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಕ್ಕೊಳಗಾದವರೆಲ್ಲರೂ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ನಿವಾಸಿಗಳು. ನಾಳೆ ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವ ಸಾಧ್ಯತೆ ಇದೆ. ವಡವಟ್ಟಿ, ಕುರುಕುಂದ, ಶಾಂತಗಲ್ ಗ್ರಾಮಕ್ಕೆ ಭೇಟಿ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಎಚ್‌ಡಿಕೆ ಕಂಬನಿ
ʻʻತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಮೃತಪಟ್ಟವರು ಕೂಲಿಕಾರ್ಮಿಕರು, ಬದುಕು ಕಟ್ಟಿಕೊಳ್ಳಲು ಅವರೆಲ್ಲರೂ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದರೆಂದು ತಿಳಿದು ನನಗೆ ಅತೀವ ದುಃಖವಾಗಿದೆ.ʼʼ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

ಅತ್ಯಾಕರ್ಷಕ ಬಡ್ಡಿ ದರದೊಂದಿಗೆ ಅಂಚೆ ಇಲಾಖೆ ಒದಗಿಸಿರುವ ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಹೂಡಿಕೆ (Money Guide) ಮಾಡಬಹುದು. ಖಾತ್ರಿ ಮರುಪಾವತಿ ನೀಡುವ ಯೋಜನೆ ಇದಾಗಿದ್ದು, ಇದರಲ್ಲಿ ಹೂಡಿಕೆ ಮಾಡುವುದರಿಂದ ಏನು ಲಾಭ, ಸಿಗುವ ಬಡ್ಡಿ ದರ ಎಷ್ಟಿದೆ ಗೊತ್ತೇ? ಹಿರಿಯ ನಾಗರಿಕರಿಗೆ ಉಪಯುಕ್ತವಾದ ಮಾಹಿತಿ ಇಲ್ಲಿದೆ.

VISTARANEWS.COM


on

By

Money Guide
Koo

ಹಿರಿಯ ನಾಗರಿಕರ (Senior Citizen) ಉಳಿತಾಯ ಯೋಜನೆಯು (SCSS) 60 ವರ್ಷಕ್ಕಿಂತ ಮೇಲ್ಪಟ್ಟವರು ಹೂಡಿಕೆ (Money Guide) ಮಾಡಬಹುದಾದ ಖಾತ್ರಿ ಮರುಪಾವತಿ (guaranteed return) ನೀಡುವ ಯೋಜನೆಯಾಗಿದೆ. ಇದರಲ್ಲಿ ಜಂಟಿ ಖಾತೆಯನ್ನು ಸಂಗಾತಿಯೊಂದಿಗೆ ಮಾತ್ರ ತೆರೆಯಬಹುದು.

ಅಂಚೆ ಇಲಾಖೆಯು (post office) ಈ ಸಣ್ಣ ಉಳಿತಾಯ ಯೋಜನೆಗೆ (small savings scheme) ವಾರ್ಷಿಕ ಶೇ. ಶೇ. 8.2 ಬಡ್ಡಿ ದರವನ್ನು (interest rate) ನೀಡುತ್ತಿದೆ. ನೀವು ಈ ಯೋಜನೆಯನ್ನು 5 ವರ್ಷಗಳವರೆಗೆ ತೆರೆಯಬಹುದು. ಆದರೆ ಮೆಚ್ಯೂರಿಟಿಯ ದಿನಾಂಕದಿಂದ ಮುಂದಿನ 3 ವರ್ಷಗಳವರೆಗೆ ಇದನ್ನು ವಿಸ್ತರಿಸಬಹುದು.

ಎಷ್ಟು ಹೂಡಿಕೆ ಮಾಡಬಹುದು?

ಒಂದು ಬಾರಿಯ ಮೊತ್ತದ ಹೂಡಿಕೆಯನ್ನು ಮಾಡಬೇಕು. ಇದರಲ್ಲಿ ಕನಿಷ್ಠ 1,000 ರೂ. ನಿಂದ ಗರಿಷ್ಠ 30 ಲಕ್ಷ ರೂ. ವರೆಗೆ ಹೂಡಿಕೆ ಮಾಡಲು ಅವಕಾಶವಿದೆ. ಇದರಲ್ಲಿ ಮಾಡಿದ ಠೇವಣಿಗಳ ಮೇಲೆ ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ಪಡೆಯಬಹುದು.

ಬಡ್ಡಿ ದರ

ತ್ರೈಮಾಸಿಕ ಆಧಾರದಲ್ಲಿ ಬಡ್ಡಿಯನ್ನು ಪಾವತಿಸಲಾಗುತ್ತದೆ. ಠೇವಣಿ ಮಾಡಿದ ದಿನಾಂಕದಿಂದ ಮಾರ್ಚ್ 31, ಜೂನ್ 30, ಸೆಪ್ಟೆಂಬರ್ 30, ಡಿಸೆಂಬರ್ 31ರಂದು ಬಡ್ಡಿಯನ್ನು ಪಾವತಿಸಲಾಗುತ್ತದೆ. ಯಾವುದೇ ತ್ರೈಮಾಸಿಕದಲ್ಲಿ ಬಡ್ಡಿಯನ್ನು ಕ್ಲೈಮ್ ಮಾಡದಿದ್ದರೆ ಹೆಚ್ಚುವರಿ ಬಡ್ಡಿಯನ್ನು ಗಳಿಸಲು ಸಾಧ್ಯವಾಗುವುದಿಲ್ಲ. ಉಳಿತಾಯ ಖಾತೆಗೆ ಸ್ವಯಂ ಕ್ರೆಡಿಟ್ ಮೂಲಕ ಬಡ್ಡಿಯನ್ನು ಡ್ರಾ ಮಾಡಬಹುದು.


ಬಡ್ಡಿಗೆ ತೆರಿಗೆ

ಎಲ್ಲಾ ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಖಾತೆಗಳಲ್ಲಿನ ಒಟ್ಟು ಬಡ್ಡಿಯು 50,000 ರೂ. ಗಳನ್ನು ಮೀರಿದರೆ ಬಡ್ಡಿಗೆ ತೆರಿಗೆ ವಿಧಿಸಲಾಗುತ್ತದೆ. ಅನಂತರ ಬಡ್ಡಿಯ ಮೇಲೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಫಾರ್ಮ್ 15 ಜಿ /15ಹೆಚ್ ಅನ್ನು ಸಲ್ಲಿಸಿದರೆ ಮತ್ತು ಸಂಚಿತ ಬಡ್ಡಿಯು 50,000 ರೂ. ಗಿಂತ ಹೆಚ್ಚಿಲ್ಲದಿದ್ದರೆ ಯಾವುದೇ ಟಿಡಿಎಸ್ ಅನ್ನು ಕಡಿತಗೊಳಿಸಲಾಗುವುದಿಲ್ಲ.

ಎಷ್ಟು ಲಾಭ?

ಪ್ರಸ್ತುತ ಪೋಸ್ಟ್ ಆಫೀಸ್ ಎಸ್‌ಸಿಎಸ್‌ಎಸ್‌ನಲ್ಲಿ ತಲಾ 1 ಲಕ್ಷ, 2 ಲಕ್ಷ, 5 ಲಕ್ಷ ಮತ್ತು 10 ಲಕ್ಷ ರೂ. ಹೂಡಿಕೆ ಮಾಡಿದರೆ ಎಷ್ಟು ಲಾಭ ಸಿಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಯೋಜನೆಯ ಒಟ್ಟು ಅವಧಿಯು 5 ವರ್ಷಗಳು ಮತ್ತು ಬಡ್ಡಿ ದರವು ವಾರ್ಷಿಕ ಶೇ. 8.2. ಗಳಾದರೆ 1 ಲಕ್ಷ ರೂ. ಹೂಡಿಕೆ ಮಾಡಿದರೆ ಒಟ್ಟು ಬಡ್ಡಿ 41,000, 2,050 ತ್ರೈಮಾಸಿಕ ಬಡ್ಡಿ ಹಾಗೂ ಐದು ವರ್ಷಗಳಲ್ಲಿ ಮುಕ್ತಾಯದ ಮೊತ್ತ 1,41,000 ರೂ. ಅನ್ನು ಪಡೆಯಬಹುದು. ಅದೇ ರೀತಿ 2 ಲಕ್ಷ ರೂ. ಹೂಡಿಕೆ ಮಾಡಿದರೆ 82,000, 4,100, 2,82,000, 3 ಲಕ್ಷ ಹೂಡಿಕೆ ಮಾಡಿದರೆ 1,23,000, 6,150, 4,23,000, 4 ಲಕ್ಷ ಹೂಡಿಕೆ ಮಾಡಿದರೆ 1,64,000, 8,200, 5,64,000, 5 ಲಕ್ಷ ರೂ. ಹೂಡಿಕೆ ಮಾಡಿದರೆ 2,05,000, 10,250, 7,05,000, 10 ಲಕ್ಷ ರೂ. ಹೂಡಿಕೆ ಮಾಡಿದರೆ 4,10,000, 20500, 14,10,000, 20 ಲಕ್ಷ ರೂ. ಹೂಡಿಕೆ ಮಾಡಿದರೆ 8,20,000, 41,000, 28,20,000, 30 ಲಕ್ಷ ಹೂಡಿಕೆ ಮಾಡಿದರೆ 12,30,000, 61,500, 42,30,000 ಪಡೆಯಬಹುದು.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

ಅಕಾಲಿಕ ಮುಚ್ಚುವಿಕೆ

ಹಿರಿಯ ನಾಗರಿಕರ ಉಳಿತಾಯ ಯೋಜನೆಯನ್ನು ಯಾವುದೇ ಸಮಯದಲ್ಲಿ ಅಕಾಲಿಕವಾಗಿ ಮುಚ್ಚಬಹುದು. ಆದರೂ ಖಾತೆಯನ್ನು ತೆರೆಯುವ 1 ವರ್ಷದ ಮೊದಲು ಮುಚ್ಚಿದ್ದರೆ ಯಾವುದೇ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ. ಅಂಚೆ ಕಚೇರಿಯು ಒಟ್ಟು ಮೊತ್ತದಿಂದ ಪಾವತಿಸಿದ ಬಡ್ಡಿಯನ್ನು ಸಹ ಪಡೆಯುತ್ತದೆ. 1 ವರ್ಷದಿಂದ 2 ವರ್ಷಗಳ ಅವಧಿಯಲ್ಲಿ ಖಾತೆಯನ್ನು ಮುಚ್ಚಿದ್ದರೆ, ಮೊತ್ತದ ಶೇ. 1.5ರಷ್ಟನ್ನು ಕಡಿತಗೊಳಿಸಿದ ಅನಂತರ ಮೂಲ ಮೊತ್ತವನ್ನು ಪಾವತಿಸಲಾಗುತ್ತದೆ.

Continue Reading

Latest

Apple With sticker: ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

Apple With sticker: ಸೇಬು ಹಣ್ಣು ಎಂದರೆ ಯಾರಿಗೆ ಇಷ್ಟವಿರಲ್ಲ? ದಿನಕ್ಕೊಂದು ಸೇಬು ತಿನ್ನಿ ವೈದ್ಯರಿಂದ ದೂರವಿರಿ ಇರುತ್ತಾರೆ. ಇದೆಲ್ಲಾ ಸರಿ ಮಾರುಕಟ್ಟೆಯಲ್ಲಿ ಹಣ್ಣು ತರಲು ಹೋದಾಗ ಈ ಸೇಬು ಹಣ್ಣುಗಳ ಮೇಲೆ ಚಿಕ್ಕದಾದ ಸ್ಟಿಕ್ಕರ್‌ವೊಂದು ಹಚ್ಚಿರುತ್ತಾರೆ ಅಲ್ವಾ ಅದರ ಹಿಂದಿರುವ ರಹಸ್ಯವೇನೆಂದು ನಿಮಗೆ ಗೊತ್ತಾ? ಆ ಭಾಗ ಹಾಳಾದ ಕಾರಣ ಸ್ಟಿಕರ್‌ನಿಂದ ಮುಚ್ಚಿರುತ್ತಾರೆ ಎನ್ನುತ್ತಾರೆ ಕೆಲವರು ಅದರ ನಿಜವಾದ ಕಾರಣ ಬೇರೆಯೇ ಇದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Apple With sticker
Koo

ಬೆಂಗಳೂರು : ಮಾರುಕಟ್ಟೆಯಲ್ಲಿ ಸೇಬುಹಣ್ಣುಗಳು ಹಲವು ವಿಧಗಳಲ್ಲಿ ಕಂಡುಬರುತ್ತದೆ. ಕೆಲವು ಸೇಬುಗಳು ಹಸಿರು ಬಣ್ಣದಲ್ಲಿರುತ್ತದೆ. ಕೆಲವು ಸೇಬುಗಳು ಕೆಂಪು ಬಣ್ಣದಲ್ಲಿರುತ್ತದೆ. ಹಾಗೇ ಕೆಲವು ಸೇಬು ಹಣ್ಣಿನ (Apple With sticker) ಮೇಲೆ ಸ್ಟಿಕ್ಕರ್‌ಗಳನ್ನು ಅಂಟಿಸಿರುತ್ತಾರೆ. ಅದಕ್ಕೆ ಬೆಲೆ ಕೂಡ ಹೆಚ್ಚಾಗಿರುತ್ತದೆ. ಹಾಗಾಗಿ ಕೆಲವರು ಅದು ಉತ್ತಮವಾಗಿರುವುದು, ಆರೋಗ್ಯಕ್ಕೆ ಒಳ್ಳೆಯದು ಎಂದು ಅದನ್ನೇ ಕಂಡುಕೊಳ್ಳುತ್ತಾರೆ. ಆದರೆ ಕೆಲವರು ಅದು ಹಾಳಾದ ಕಾರಣ ಆ ಭಾಗವನ್ನು ಸ್ಟಿಕರ್ ನಿಂದ ಮುಚ್ಚಿದ್ದಾರೆ ಎಂದು ಭಾವಿಸುತ್ತಾರೆ. ಸೇಬಿನ ಮೇಲೆ ಸ್ಟಿಕ್ಕರ್ ಯಾಕೆ ಅಂಟಿಸುತ್ತಾರೆ. ಅದು ಏನನ್ನು ಸೂಚಿಸುತ್ತದೆ ಎಂಬುದನ್ನು ಮೊದಲು ತಿಳಿಯಿರಿ.

ಸ್ಟಿಕ್ಕರ್ ಇರುವ ಸೇಬು ಒಳ್ಳೆಯ ಗುಣಮಟ್ಟದಾಗಿರುತ್ತದೆ ಮತ್ತು ಅದಕ್ಕೆ ಬೆಲೆ ಕೂಡ ಹೆಚ್ಚು ಎಂದು ವ್ಯಾಪಾರಿಗಳು ಮಾರಾಟ ಮಾಡುತ್ತಾರೆ. ಆದರೆ ವಾಸ್ತವಾಗಿ ಕೆಟ್ಟ ಭಾಗವನ್ನು ಮುಚ್ಚಲು ಅಥವಾ ಕೊಳೆತ ಭಾಗವನ್ನು ಮರೆಮಾಚಲು ಸ್ಟಿಕ್ಕರ್ ಅನ್ನು ಅಂಟಿಸಿರುವುದಿಲ್ಲ.

ತಜ್ಞರು ತಿಳಿಸಿದ ಪ್ರಕಾರ, ಸೇಬು ಮಾತ್ರವಲ್ಲ ಕಿತ್ತಳೆ ಹಣ್ಣುಗಳನ್ನು ಸಹ ಸ್ಟಿಕ್ಕರ್‌ಗಳೊಂದಿಗೆ ಮಾರಾಟ ಮಾಡಲಾಗುತ್ತದೆ. ಸ್ಟಿಕ್ಕರ್ ನೋಡಿದವರು ಅದು ದುಬಾರಿ ಎಂದು ಭಾವಿಸುತ್ತಾರೆ. ಆದರೆ ಸ್ಟಿಕ್ಕರ್ ನೇರವಾಗಿ ಆರೋಗ್ಯಕ್ಕೆ ಸಂಬಂಧಿಸಿದ್ದಾಗಿದೆಯಂತೆ. ಹಾಗಾಗಿ ನೀವು ಸೇಬು ಖರೀದಿಸುವಾಗ ಅದರ ಮೇಲಿರುವ ಸ್ಟಿಕ್ಕರ್ ಅನ್ನು ಓದಿ.

ಸೇಬಿನ ಮೇಲಿನ ಸ್ಟಿಕ್ಕರ್‌ನಲ್ಲಿ ಸೇಬಿನ ಗುಣಮಟ್ಟ ಹಾಗೂ ಅದನ್ನು ಹೇಗೆ ಬೆಳೆಸಲಾಗಿದೆ ಎಂಬುದರ ಕುರಿತು ಮಾಹಿತಿ ಇದೆಯಂತೆ. ಕೆಲವು ಸ್ಟಿಕ್ಕರ್ ಗಳ ಮೇಲೆ ನಾಲ್ಕು ಸಂಖ್ಯೆಯ ನಂಬರ್ ಇರುತ್ತದೆ. ಅಂದರೆ ಅವು 4026 ಅಥವಾ 4987 ನಂತಹ ಸಂಖ್ಯೆ ಇರುತ್ತದೆ. ಇದು ಕೀಟ ನಾಶಕ ಮತ್ತು ರಾಸಾಯನಿಕಗಳನ್ನು ಬಳಸಿ ಬೆಳೆಸಲಾಗಿದೆ ಎಂದು ಸೂಚಿಸುತ್ತದೆಯಂತೆ. ಈ ಹಣ್ಣುಗಳ ಮೇಲೆ ಕೀಟನಾಶಕವನ್ನು ಹೆಚ್ಚಾಗಿ ಬಳಸಿರುತ್ತಾರಂತೆ. ಈ ಹಣ್ಣು ಅಗ್ಗವಾಗಿರುತ್ತದೆ.

ಕೆಲವು ಹಣ್ಣುಗಳ ಮೇಲೆ ಐದು ಅಂಕಿಯ ಸಂಖ್ಯೆಯನ್ನು ಬರೆಯಲಾಗುತ್ತದೆ. ಅಂದರೆ 84131 ಅಥವಾ 86532 ಹೀಗೆ 8ರಿಂದ ಪ್ರಾರಂಭವಾಗುವ ನಂಬರ್ ಇರುತ್ತದೆ. ಈ ಹಣ್ಣುಗಳು ನೈಸರ್ಗಿಕವಲ್ಲ. ಇವುಗಳನ್ನು ರಾಸಾಯನಿಕಗಳಿಂದ ಸಂಸ್ಕರಿಸಿದ್ದು, ಇದು ತುಂಬಾ ದುಬಾರಿಯಾಗಿರುತ್ತದೆ.

ಕೆಲವು ಹಣ್ಣುಗಳಲ್ಲಿ 9ರಿಂದ ಪ್ರಾರಂಭವಾಗುವ ಐದು ಅಂಕಿಯ ನಂಬರ್ ಇರುತ್ತದೆ. ಅದು 93435 ಇರುತ್ತದೆ. ಈ ಹಣ್ಣು ಸಾವಯವವಾಗಿ ಬೆಳೆದಿರುತ್ತದೆ. ಇದಕ್ಕೆ ಕೀಟನಾಶಕ ಮತ್ತು ರಾಸಾಯನಿಕ ಬಳಸಿಲ್ಲ ಎಂಬುದನ್ನು ಸೂಚಿಸುತ್ತದೆ. ಇದಕ್ಕೆ ಬೆಲೆ ಜಾಸ್ತಿಯಾದರೂ ಇದು ಆರೋಗ್ಯಕ್ಕೆ ಒಳ್ಳೆಯದು.

ಇದನ್ನೂ ಓದಿ: Viral Video: ಜೀವಂತ ಹಾವನ್ನೇ ತರಕಾರಿಯಂತೆ ಕಚ್ಚಿ ತಿಂದ ಬೆಡಗಿ! ಈ ವಿಡಿಯೊ ನೋಡುವ ಮುನ್ನ ಯೋಚಿಸಿ!

ಹೀಗೆ ಒಂದೊಂದು ಸ್ಟಿಕ್ಕರ್‌ಗೂ ಬೇರೆ ಬೇರೆ ಅರ್ಥವಿದ್ದರೂ ಕೂಡ ಕೆಲವೊಮ್ಮೆ ನಕಲಿ ಸ್ಟಿಕ್ಕರ್‌ಗಳನ್ನು ಅಂಟಿಸಿ ಮಾರಾಟ ಮಾಡುತ್ತಾರೆ. ಹಾಗಾಗಿ ಯಾವುದೇ ಹಣ್ಣುಗಳನ್ನು ಖರೀದಿಸುವಾಗ ತುಂಬಾ ಜಾಗರೂಕರಾಗಿರಿ.

Continue Reading

Latest

Viral News: ಮುಖಕ್ಕೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಅಮ್ಜದ್ ಅರೆಸ್ಟ್!

Viral News: ಕ್ರೀಂ, ಲೋಷನ್ ಹಚ್ಚಿ ಫೇಸ್ ಮಸಾಜ್ ಮಾಡುವುದರ ಬಗ್ಗೆ ಕೇಳಿರುತ್ತೀರಿ. ಆದರೆ ಉತ್ತರಪ್ರದೇಶದ ಈ ಮುಸ್ಲಿಂ ಕ್ಷೌರಿಕ ತನ್ನ ಬಳಿ ಫೇಸ್ ಮಸಾಜ್ ಮಾಡಿಸಿಕೊಳ್ಳಲು ಬಂದ ಯುವಕನ ಮುಖಕ್ಕೆ ಎಂಜಲು ಹಚ್ಚಿ ಮಸಾಜ್ ಮಾಡಿದ್ದಾನೆ, ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈತನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.

VISTARANEWS.COM


on

Viral News
Koo

ಹುಡುಗಿಯರ ಹಾಗೇ ಹುಡುಗರಿಗೂ ಸುಂದರವಾಗಿ ಕಾಣಬೇಕೆಂಬ ಆಸೆ ಇರುತ್ತದೆ. ಹಾಗಾಗಿ ಹುಡುಗಿಯರು ಬ್ಯೂಟಿ ಪಾರ್ಲರ್ ನಲ್ಲಿ ಫೇಸ್ ಮಸಾಜ್, ಫೇಶಿಯಲ್ ಮಾಡಿಸಿಕೊಂಡ ಹಾಗೆ ಹುಡುಗರು ಕ್ಷೌರದ ಅಂಗಡಿಯಲ್ಲಿ ಫೇಸ್ ಮಸಾಜ್, ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ. ಆದರೆ ಇತ್ತೀಚೆಗೆ ವ್ಯಕ್ತಿಯೊಬ್ಬ ಕ್ಷೌರದಂಗಡಿಯಲ್ಲಿ ಫೇಸ್ ಮಸಾಜ್ ಮಾಡಿಕೊಳ್ಳಲು ಹೋಗಿ ಅವಾಂತರ ಮಾಡಿಕೊಂಡ ವಿಡಿಯೊವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಫೇಸ್‌ ಮಸಾಜ್‌ ಮಾಡಿಕೊಂಡರೆ ಮುಖದಲ್ಲಿ ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ದಣಿದ ಮುಖಕ್ಕೆ ರಿಲೀಫ್‌ ಆಗುತ್ತೆ ಎಂದು ಕೆಲವರು ದುಡ್ಡು ಸುರಿದು ಮಸಾಜ್‌ ಮಾಡಿಕೊಳ್ಳುತ್ತಾರೆ. ಹೀಗೆ ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿನ ಕ್ಷೌರದಂಗಡಿಗೆ ವ್ಯಕ್ತಿಯೊಬ್ಬ ಫೇಸ್ ಮಸಾಜ್ ಮಾಡಿಕೊಳ್ಳಲು ಹೋಗಿದ್ದಾನೆ. ಆದರೆ ಕ್ಷೌರದಂಗಡಿಯವನು ಕ್ರೀಂ, ಲೋಷನ್‌ಗಳನ್ನು ಹಚ್ಚಿ ಮುಖಕ್ಕೆ ಮಸಾಜ್‌ ಮಾಡುವುದರ ಬದಲು ಎಂಜಲು ಉಗಿದು ಮಸಾಜ್‌ ಮಾಡಿದ್ದಾನಂತೆ. . ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆರೋಪಿ ಅಮ್ಜದ್ ಎಂಬುದಾಗಿ ತಿಳಿದುಬಂದಿದೆ. @TruestoryUP ಎಂಬ ಹೆಸರಿನ ಖಾತೆಯಲ್ಲಿ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ಈತನ ಘೋರ ಕೃತ್ಯದ ದೃಶ್ಯ ವೈರಲ್ ಆಗಿದ್ದು, ಈತನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:James Wan: ಜೇಮ್ಸ್‌ ವಾನ್‌ ನಿರ್ದೇಶನದ ಈ 6 ಥ್ರಿಲ್ಲರ್‌ ಚಿತ್ರಗಳನ್ನು ತಪ್ಪದೇ ನೋಡಿ!

ಜೂನ್ 8ರಂದು ಈ ವಿಡಿಯೊ ಹಂಚಿಕೊಂಡಿದ್ದು, ಇದನ್ನು16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ ಮತ್ತು ಈತನ ಕೃತ್ಯದ ವಿರುದ್ಧ ವೀಕ್ಷಕರು ಪ್ರತಿಕ್ರಿಯೆ ನೀಡಿದ್ದಾರೆ.

Continue Reading

Latest

Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

Viral Video: ವಾಕಿಂಗ್ ಮಾಡಿದರೆ ದೇಹದ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ.ನಗರದ ಮಂದಿ ವಾಕಿಂಗ್‌ಗೆ ತಾವು ಪ್ರೀತಿಯಿಂದ ಸಾಕಿದ ನಾಯಿಯನ್ನು ಕೂಡ ಕರೆದುಕೊಂಡು ಹೋಗುವುದು ನಾವು ಕಂಡಿರುತ್ತೇವೆ. ಇಂತಹ ಸಾಕು ಪ್ರಾಣಿಯ ಜೊತೆ ಎಲ್ಲರೂ ವಾಕಿಂಗ್ ಹೋಗುತ್ತಾರೆ. ಆದರೆ ದುಬೈನ ಈ ಬೆಡಗಿ ಮಾತ್ರ ಮನುಷ್ಯರು ಬೆಚ್ಚಿಬೀಳುವ ಹುಲಿಯ ಜೊತೆ ಪಾರ್ಕ್‌ನಲ್ಲಿ ವಾಕಿಂಗ್ ಮಾಡಿದರೆ ನೋಡಿದವರ ಎದೆ ಝಲ್ ಎನ್ನದೆ ಇರುತ್ತಾ ಹೇಳಿ!

VISTARANEWS.COM


on

Viral Video
Koo

ಹುಲಿ ಎಂದರೆ ಎಲ್ಲರೂ ಭಯಭೀತರಾಗುತ್ತಾರೆ. ಯಾಕೆಂದರೆ ಹುಲಿ ತನ್ನ ಆಹಾರಕ್ಕಾಗಿ ಪ್ರಾಣಿಗಳು ಮಾತ್ರವಲ್ಲ ಮನುಷ್ಯರನ್ನೂ ಕೊಂದು ತಿನ್ನುತ್ತದೆ. ಹಾಗಾಗಿ ಹುಲಿಯನ್ನು ಎದುರು ನೋಡುವುದು ಬೇಡ ದೂರದಲ್ಲಿ ಅದರ ಗರ್ಜನೆ ಕೇಳಿದರೂ ಸಾಕು ಎಲ್ಲರೂ ದಿಕ್ಕಾಪಾಲಾಗಿ ಓಡುತ್ತಾರೆ. ಅಂತಹದರಲ್ಲಿ ದುಬೈನಲ್ಲಿ ಮಹಿಳೆಯೊಬ್ಬಳು ವಾಕಿಂಗ್‌ಗಾಗಿ ಹುಲಿಯೊಂದಿಗೆ ನಡೆದುಕೊಂಡು ಬಂದರೆ ಅಲ್ಲಿದ್ದವರ ಪರಿಸ್ಥಿತಿ ಹೇಗಿರಬೇಡ ಹೇಳಿ. ಈ ಮಹಿಳೆ ಹುಲಿ ಜೊತೆ ನಡೆದುಕೊಂಡು ಬರುವ ದೃಶ್ಯ ಎಲ್ಲರಲ್ಲೂ ಭಯವನ್ನು ಹುಟ್ಟಿಸಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್ (Viral Video) ಆಗಿದೆ.

ನಾಯಿ ಕುತ್ತಿಗೆಗೆ ಚೈನ್‌ ಕಟ್ಟಿಕೊಂಡು ವಾಕಿಂಗ್‌ಗೆ ಹೋಗುವವರು ನಿಮಗೆ ರಸ್ತೆಯಲ್ಲಿ ನೂರಾರು ಜನರು ಸಿಗುತ್ತಾರೆ. ಆದರೆ ದುಬೈಯಲ್ಲಿ ಮಹಿಳೆಯೊಬ್ಬಳು ವಾಕಿಂಗ್‌ಗೆ ಬರುವಾಗ ಕಾಡಿನಲ್ಲಿರಬೇಕಾದ ಹುಲಿಯನ್ನು ತನ್ನ ಜೊತೆ ಕರೆದುಕೊಂಡು ಬಂದರೆ ಹೇಗಿರಬೇಡ ಹೇಳಿ. ಹುಲಿಯ ಕುತ್ತಿಗೆಗೆ ಸರಪಳಿಯನ್ನು ಕಟ್ಟಿ ನಾಯಿಯಂತೆ ಕರೆದುಕೊಂಡು ಬರುತ್ತಿರುವ ಈಕೆಯ ಧೈರ್ಯ ನೋಡಿ ಎಲ್ಲರೂ ಬೆಕ್ಕಸ ಬೆರಗಾಗಿದ್ದಾರೆ. ಹುಲಿಯ ಜೊತೆ ವಾಕಿಂಗ್‌ಗೆ ಹೋಗುವುದನ್ನು ವಿಡಿಯೊ ಮಾಡಿ “ ನನ್ನ ಮುದ್ದಿನ ಹುಲಿಯನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದೇನೆ “ ಎಂದು ಶೀರ್ಷಿಕೆ ಬರೆದು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾಳೆ.

ಇವಳ್ಯಾರು ಎಂಬ ಕುತೂಹಲ ನಿಮಗೂ ಆಗಿರಬಹುದು ಅಲ್ವಾ…?ಈಕೆ ಇನ್ ಸ್ಟಾಗ್ರಾಂ, ಟಿಕ್ ಟಾಕ್ ಮತ್ತು ಯೂಟ್ಯೂಬ್ ನಲ್ಲಿ ಜಪ್ರಿಯರಾಗಿದ್ದ ನಾಡಿಯಾ ಖಾರ್ ಎನ್ನಲಾಗಿದೆ. ಈಕೆ ಫ್ಯಾಷನ್ ವಿಷಯಕ್ಕೆ ಹೆಸರುವಾಸಿಯಾಗಿದ್ದಾಳೆ. ಆಗಾಗ ಐಷರಾಮಿ ಕಾರುಗಳು, ವ್ಲಾಗ್ ಗಳು ಮತ್ತು ಕಿರು ವಿಡಿಯೊಗಳನ್ನು ಪ್ರದರ್ಶಿಸುತ್ತಿರುತ್ತಾಳೆ. ಇದೀಗ ಅವಳು ದುಬೈನಲ್ಲಿ ಹುಲಿಯ ಜೊತೆಗೆ ನಡೆದುಕೊಂಡು ಬರುತ್ತಿರುವ ವಿಡಿಯೊ ಪೋಸ್ಟ್ ಮಾಡಿದ್ದಾಳೆ. ವಿಡಿಯೊದಲ್ಲಿ ಅವಳು ಮೃಗಾಲಯದ ಒಳಗೆ ಮತ್ತು ದುಬೈನ ಸಾರ್ವಜನಿಕ ಉದ್ಯಾನವನದಲ್ಲಿ ಹುಲಿಯೊಂದಿಗೆ ನಡೆಯುತ್ತಿರುವ ವಿಡಿಯೊ ವೈರಲ್ ಆಗಿದೆ. ಇದಕ್ಕೆ 6 ಮಿಲಿಯನ್ ವೀಕ್ಷಣೆ ಮತ್ತು 100000ಕ್ಕೂ ಹೆಚ್ಚು ಲೈಕ್ಸ್ ಬಂದಿದೆ.

ಹಾಗೇ ಈ ವಿಡಿಯೊಗೆ ಹೆಚ್ಚಿನ ಪ್ರತಿಕ್ರಿಯೆ ಬಂದಿದ್ದು, ಕೆಲವರು ಹುಲಿಯನ್ನು ನಾಯಿಯಂತೆ ಸಾಕಿಕೊಂಡಿರುವುದಕ್ಕೆ ಆಕೆಯ ಕೃತ್ಯವನ್ನು ಟೀಕಿಸಿದರೆ, ಕೆಲವರು ಅದನ್ನು ಕಂಡು ಆಶ್ಚರ್ಯಚಕಿತರಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೊಬ್ಬರು “ಪ್ರಾಣಿಗಳ ಕ್ರೌರ್ಯವನ್ನು ಕ್ಷಮಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಸುಂದರಿ! ಆಕೆ ಕೊಟ್ಟ ಕಾರಣ ಮಜವಾಗಿದೆ!

ದುಬೈಯಲ್ಲಿ ಕ್ರೂರ ಪ್ರಾಣಿಗಳನ್ನು ಸಾಕು ಪ್ರಾಣಿಗಳಂತೆ ಸಾಕುತ್ತಾರೆ. ಇಲ್ಲಿ ಹುಲಿ, ಸಿಂಹ, ಕರಡಿಗಳಂತಹ ನರಭಕ್ಷಕ ಪ್ರಾಣಿಗಳನ್ನು ಪಳಗಿಸಿ ಖಾಸಗಿ ಮೃಗಾಲಯದಲ್ಲಿ ಸಾಕುತ್ತಾರೆ. ಅದರ ಜೊತೆಗೆ ಕೋತಿ ಮತ್ತು ಜಿರಾಫೆಗಳಂತಹ ಪ್ರಾಣಿಗಳಿಗೂ ವಸತಿ ನೀಡುತ್ತಾರೆ. ಇದು ಅವರಿಗೆ ಪ್ರಾಣಿಗಳ ಮೇಲಿದ್ದ ಕಾಳಜಿಯನ್ನು ತೋರಿಸುತ್ತದೆ.

ಈಗ ಸೋಷಿಯಲ್‌ ಮೀಡಿಯಾದ್ದೇ ಹವಾ. ತಿಂದಿದ್ದು, ಕುಡಿದಿದ್ದು, ಹೆತ್ತಿದ್ದು ಎಲ್ಲವನ್ನೂ ಇದರಲ್ಲಿ ಹಾಕುತ್ತಾರೆ. ಆ ದೇಶದಲ್ಲಿ ಬೆಡಗಿಯೊಬ್ಬಳು ಹಸಿ ಹಾವನ್ನೇ ತಟ್ಟೆಯಲ್ಲಿಟ್ಟುಕೊಂಡು ತಿಂದರೆ, ಮತ್ತೊಬ್ಬಳು ಹರೆಯದ ಹುಡುಗಿ ಅಜ್ಜನನ್ನೇ ಪ್ರೀತಿಸಿ ಮದುವೆಯಾದಳು. ಈಗ ಲೈಕ್ಸ್‌, ಕಾಮೆಂಟ್‌ಗಳಿಗಾಗಿ ಏನು ಬೇಕಾದರೂ ಮಾಡುವುದಕ್ಕೆ ಸೈ ಅನ್ನುವ ಹಂತದಲ್ಲಿ ನಾವಿದ್ದೇವೆ.

Continue Reading
Advertisement
Petrol Diesel Price
ಕರ್ನಾಟಕ15 mins ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ16 mins ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ55 mins ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ56 mins ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ1 hour ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ1 hour ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ2 hours ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ2 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ3 hours ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Kannada New Movie Chowkidar pruthvi ambaar
ಸಿನಿಮಾ3 hours ago

Kannada New Movie: ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’: ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ1 hour ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ8 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌