Congress Party | ಕಿರಿಯರಿಗೆ ಬೆಲೆಯಿಲ್ಲ, ಹಿರಿಯರಿಗೆ ನೆಲೆಯಿಲ್ಲ; ಯಾರಿಗೆ ಸಲ್ಲುವ ಪಕ್ಷವಾಗಿ ಉಳೀತು ಕಾಂಗ್ರೆಸ್​? - Vistara News

ದೇಶ

Congress Party | ಕಿರಿಯರಿಗೆ ಬೆಲೆಯಿಲ್ಲ, ಹಿರಿಯರಿಗೆ ನೆಲೆಯಿಲ್ಲ; ಯಾರಿಗೆ ಸಲ್ಲುವ ಪಕ್ಷವಾಗಿ ಉಳೀತು ಕಾಂಗ್ರೆಸ್​?

ಕಳೆದ ಎರಡು ಲೋಕಸಭಾ ಚುನಾವಣೆ, ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಸೋತ ನಂತರ ಕಾಂಗ್ರೆಸ್​​ನ ಆಂತರಿಕ ಸ್ಥಿತಿ ಹದಗೆಟ್ಟಿದೆ. ಪಕ್ಷದೊಳಗೇ ಕಲಹ, ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದೆ.

VISTARANEWS.COM


on

Congress
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: 2014ರಿಂದ ಅಧಿಕೃತವಾಗಿ ಪ್ರಾರಂಭವಾದ ಕಾಂಗ್ರೆಸ್​ ಸೋಲು, ಇವತ್ತಿಗೂ ಮುಂದುವರಿದಿದೆ. ಮೊದಮೊದಲು ನಿಧಾನವಾಗಿಯಾದರೂ ನಡೆದಾಡುತ್ತಿದ್ದ ಪಕ್ಷವೀಗ ತೆವಳುವ ಹಂತಕ್ಕೆ ಬಂದಿದೆ ಎಂದರೂ ತಪ್ಪಾಗಲಾರದು. ಅದರಲ್ಲೂ ಇಂದು ಗುಲಾಂ ನಬಿ ಆಜಾದ್​ರಂಥ ಒಬ್ಬ ದಿಗ್ಗಜ ನಾಯಕನೇ ಕಾಂಗ್ರೆಸ್​ ತೊರೆದ ಮೇಲೆ, ಆ ಪಕ್ಷದಲ್ಲಿ ಆಂತರಿಕ ಸ್ಥಿತಿ ಅದೆಷ್ಟು ದುಃಸ್ಥಿತಿಗೆ ತಲುಪಿದೆ ಎಂಬುದನ್ನು ಬಾಯ್ಬಿಟ್ಟು ಹೇಳಬೇಕಿಲ್ಲ..! ಕಳೆದ 50 ವರ್ಷಗಳಿಂದ ಕಾಂಗ್ರೆಸ್​​ಗೆ ನಿಷ್ಠೆ ತೋರಿಸಿದ್ದ ಅವರೀಗ ತಮ್ಮ ಅಸಮಾಧಾನಗಳನ್ನು ಹೊರಹಾಕಿಯೇ ಹೊರಬಿದ್ದಿದ್ದಾರೆ. ಅವರು ಸೋನಿಯಾ ಗಾಂಧಿಗೆ ಬರೆದ 5 ಪುಟಗಳ ಪತ್ರವೇ ಎಲ್ಲಕ್ಕೂ ಸಾಕ್ಷಿಯಾಗಿದೆ.

ಗುಲಾಂ ನಬಿ ಆಜಾದ್​ 1949ರಲ್ಲಿ ಜಮ್ಮು-ಕಾಶ್ಮೀರದ ಭಲೆಸ್ಸ ಎಂಬಲ್ಲಿ ಹುಟ್ಟಿದವರು. 73 ವರ್ಷದ ಅವರು ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ್ದು 1973ರಲ್ಲಿ. ಭಲೆಸ್ಸದ ಬ್ಲಾಕ್​ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಕಾರ್ಯಾರಂಭ ಮಾಡಿದರು. ಎರಡೇ ವರ್ಷದಲ್ಲಿ ಜಮ್ಮು-ಕಾಶ್ಮೀರ ಯುವ ಕಾಂಗ್ರೆಸ್ ಅಧ್ಯಕ್ಷರಾದರು. 1980ರಲ್ಲಿ ಅಖಿಲ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ನೇಮಕಗೊಂಡರು. ಅದೇ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ ವಾಶಿಮ್​ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ರಾಷ್ಟ್ರರಾಜಕಾರಣಕ್ಕೆ ಹೆಜ್ಜೆ ಇಟ್ಟರು. ಕೇಂದ್ರದಲ್ಲಿ ಸಚಿವರಾಗಿ ವಿವಿಧ ಇಲಾಖೆಗಳ ಹೊಣೆ ಹೊತ್ತಿದ್ದರು.

ಒಬ್ಬ ಕಾಶ್ಮೀರದವರಾಗಿ ಮಹಾರಾಷ್ಟ್ರಕ್ಕೆ ಹೋಗಿ ಅಲ್ಲಿಂದ ಚುನಾವಣೆ ಸ್ಪರ್ಧಿಸಿ ಗೆದ್ದಿದ್ದ ಅವರನ್ನು ಇಂದಿರಾ ಗಾಂಧಿ ಹೊಗಳಿದ್ದರು. ಆಜಾದ್​ ಎಂದಿಗೂ ಯಾವುದಕ್ಕೂ ಇಲ್ಲ ಎನ್ನುವುದೇ ಇಲ್ಲ ಎಂಬ ಮಾತುಗಳನ್ನೂ ಮೆಚ್ಚುಗೆಯಿಂದ ಆಡಿದ್ದರು. ಹೀಗೆ ಇಂದಿರಾ ಗಾಂಧಿ ಕಾಲದಿಂದಲೂ ಗುಲಾಂ ನಬಿ ಆಜಾದ್​ ಕಾಂಗ್ರೆಸ್​​ನ ಮತ್ತು ಗಾಂಧಿ ಕುಟುಂಬದ ನಿಷ್ಠಾವಂತರು ಎಂಬ ಟ್ಯಾಗ್​ಲೈನ್​ ಪಡೆದುಕೊಂಡೇ ಇತ್ತೀಚಿನವರೆಗೂ ಸಾಗಿಬಂದಿದ್ದರು. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಕೊನೆಗೆ ಸೋನಿಯಾ ಗಾಂಧಿಯೊಂದಿಗೂ ಚೆನ್ನಾಗಿಯೇ ಹೊಂದಿಕೊಂಡು ಕೆಲಸ ಮಾಡಿದ ಅವರಿಗೆ ರಾಹುಲ್ ಗಾಂಧಿ ಮತ್ತು ಅವರ ಕಾರ್ಯಶೈಲಿಯನ್ನು ಒಪ್ಪಿಕೊಳ್ಳಲು ಸಾಧ್ಯವಾಗಲೇ ಇಲ್ಲ ಎಂಬುದು ಅವರು ಇಂದು ಬರೆದ ಪತ್ರದಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಇದಕ್ಕೆ ಬಹುಶಃ ಪೀಳಿಗೆಯ ನಡುವಿನ ಅಂತರವೂ (Generation Gap)ಕಾರಣ ಇರಬಹುದು..!

ಎಲ್ಲರೂ ಹೇಳುವ ಕಾರಣ ಒಂದೇ
2020ರಿಂದ ಇವತ್ತಿನವರೆಗೆ ಕಾಂಗ್ರೆಸ್​ಗೆ ಹಲವು ಪ್ರಮುಖ ನಾಯಕರು ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಎಲ್ಲರೂ ನೀಡುವ ಕಾರಣ ಒಂದೇ. ‘ಕಾಂಗ್ರೆಸ್​ನಲ್ಲಿ ನಾವೆಲ್ಲ ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇವೆ. ಕಾಂಗ್ರೆಸ್​ ತನ್ನ ಸಿದ್ಧಾಂತಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿಲ್ಲ. ನಾಯಕತ್ವ ಸರಿಯಿಲ್ಲ’ ಎಂಬುದೇ ಬಹುಮುಖ್ಯ ಆರೋಪ. ಅಂದು 2020ರಲ್ಲಿ ರಾಜೀನಾಮೆ ಕೊಟ್ಟ ಜ್ಯೋತಿರಾದಿತ್ಯ ಸಿಂಧಿಯಾ, ಇತ್ತೀಚೆಗೆ ಪಕ್ಷ ಬಿಟ್ಟ ಹಾರ್ದಿಕ್​ ಪಟೇಲ್​, ಜೈವೀರ್​ ಶೆರ್ಗಿಲ್​ ನಂಥ ಯುವ ನಾಯಕರು, ‘ಕಾಂಗ್ರೆಸ್​​ನಲ್ಲಿ ನಮ್ಮಂಥ ಯುವ ನಾಯಕರು ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದ್ದೇವೆ’ ಎಂದು ಕಿಡಿಕಾರಿದ್ದರೆ, ಇವತ್ತು ರಾಜೀನಾಮೆ ಕೊಟ್ಟ ಗುಲಾಂ ನಬಿ ಆಜಾದ್​ರಿಂದ ಹಿಡಿದು, ಈ ಹಿಂದೆ ಪಕ್ಷ ತೊರೆದು ಹೋದ ಕಪಿಲ್​ ಸಿಬಲ್​, ಸುನೀಲ್ ಜಾಖರ್​, ಅಶ್ವನಿ ಕುಮಾರ್​, ಆರ್​ಪಿಎನ್​ ಸಿಂಗ್​ ಹೇಳಿದ್ದು, ‘ಕಾಂಗ್ರೆಸ್​ನಲ್ಲಿ ನಮ್ಮಂಥ ಹಿರಿಯ ನಾಯಕರಿಗೆ ನೆಲೆ ಇಲ್ಲ. ಇಲ್ಲಿನ ವರಿಷ್ಠರಿಗೆ ಬೇಕಾಗಿರುವುದು ಅನನುಭವಿಗಳು ಮತ್ತು ಮುಖಸ್ತುತಿ ಮಾಡುವ ಭಟ್ಟಂಗಿಗಳು’ ಎಂಬ ಮಾತನ್ನು. ಹಾಗಿದ್ದರೆ ಕಾಂಗ್ರೆಸ್​​ನಲ್ಲಿ ಯಾರು ನಿರ್ಲಕ್ಷಿತರಲ್ಲ? ಯುವಕರಿಗೂ ಸಲ್ಲದ-ಹಿರಿಯರೂ ಉಳಿಯಲು ಸಾಧ್ಯವಾಗದ ಪಕ್ಷವಾಗಿಬಿಟ್ಟಿತಾ ಕಾಂಗ್ರೆಸ್​?

ಕಳೆದ ಎರಡು ವರ್ಷಗಳಿಂದ ಸಾಲುಸಾಲು ರಾಜೀನಾಮೆ ಪತ್ರಗಳು ಕಾಂಗ್ರೆಸ್​​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಎದುರು ಬರುತ್ತಿದ್ದರೂ, ನೇರವಾಗಿ, ಕಠೋರವಾಗಿ ರಾಹುಲ್ ಗಾಂಧಿ ವಿರುದ್ಧ ಆರೋಪ ಮಾಡಿ ಹೋದ, ‘ಇಡೀ ಕಾಂಗ್ರೆಸ್​ ಪಕ್ಷವನ್ನು ಮುಳುಗಿಸಿದ್ದು ನಿಮ್ಮ ಪುತ್ರನೇ. ಜಿ 23 ನಾಯಕರಾದ ನಮಗೆ ನೀವೆಲ್ಲ ಸೇರಿ ಅನ್ಯಾಯ ಮಾಡಿದ್ದೀರಿ’ ಎಂದು ನೇರ-ನಿಷ್ಠುರವಾಗಿ ಹೇಳಿ ಹೋಗಿದ್ದು ಮಾತ್ರ ಗುಲಾಂ ನಬಿ ಆಜಾದ್​ ಒಬ್ಬರೇ. ಸದ್ಯ ಸೋನಿಯಾ ಗಾಂಧಿಯಾಗಲೀ, ಅವರ ಮಕ್ಕಳಾಗಲೀ (ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ) ಭಾರತದಲ್ಲಿ ಇಲ್ಲ. ಇದೇ ಹೊತ್ತಲ್ಲಿ ಗುಲಾಂ ಪಕ್ಷದೊಂದಿಗೆ ನಂಟು ಕಳಚಿಕೊಂಡಿದ್ದಾರೆ.

ಅಷ್ಟು ನಿಷ್ಠಾವಂತರಾಗಿದ್ದವರು ರೆಬೆಲ್​ ಆಗಿದ್ದೇಕೆ?
ಪಕ್ಷ ಸಿದ್ಧಾಂತಗಳನ್ನು ಹೊರತುಪಡಿಸಿ, ವೈಯಕ್ತಿಕವಾಗಿ ಹೇಳುವುದಾದರೆ ಗುಲಾಂ ನಬಿ ಆಜಾದ್​ ಎಲ್ಲ ಪಕ್ಷಗಳ ನಾಯಕರೊಂದಿಗೆ ಒಳ್ಳೆಯ ಸ್ನೇಹ ನಿಭಾಯಿಸಿಕೊಂಡು ಬಂದವರು. ಪ್ರಧಾನಮಂತ್ರಿ ನರೇಂದ್ರ ಮೋದಿಗೂ ಅವರು ಅತ್ಯುತ್ತಮ ಸ್ನೇಹಿತ. ಇತ್ತೀಚೆಗೆ ನಬಿಯವರನ್ನು ರಾಜ್ಯಸಭೆಯಿಂದ ಬೀಳ್ಕೊಡುವಾಗ ಪ್ರಧಾನಿ ಮೋದಿ ತುಂಬ ಭಾವನಾತ್ಮಕವಾಗಿ ಮಾತನಾಡಿದ್ದರು. ಆದರೆ ಕಾಂಗ್ರೆಸ್ ಪಕ್ಷವೇ ಅವರನ್ನು ಕಡೆಗಣಿಸಿತು. ಈ ಬಗ್ಗೆ ಗುಲಾಂ ನಬಿ ಆಜಾದ್​ಗೂ ನೋವಿದೆ ಎಂಬುದನ್ನು ಅದೇ ಪಕ್ಷದ ಪ್ರಮುಖ ನಾಯಕರೇ ಪರೋಕ್ಷವಾಗಿ ಹಿಂದೆ ಕೆಲವು ಬಾರಿ ಹೇಳಿದ್ದಿದೆ. ತಮ್ಮ ಇಡೀ ರಾಜಕೀಯ ಜೀವನವನ್ನು ಕಾಂಗ್ರೆಸ್​ಗೇ ಧಾರೆ ಎರೆದಿದ್ದ ಆಜಾದ್​ ಇತ್ತೀಚೆಗೆ ರೆಬೆಲ್​ ಆಗಲು ಪ್ರಮುಖ ಕಾರಣಗಳು ಇವು..

1. ಗಾಂಧಿ ಕುಟುಂಬದ ಹಿರಿಯರೊಂದಿಗೆ ಇದ್ದಾಗ ಎಲ್ಲ ರೀತಿಯ ಗೌರವ, ಅಧಿಕಾರ ಪಡೆದಿದ್ದ ಗುಲಾಂ ನಬಿಗೆ, ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಏರಿದ ಮೇಲೆ ತನ್ನ ಮತ್ತು ತನ್ನಂಥ ಹಿರಿಯರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಅಸಮಾಧಾನ ಕಾಡುತ್ತಿತ್ತು. ರಾಹುಲ್ ಗಾಂಧಿಗೆ ಹತ್ತಿರವಾದವರು ತನ್ನ ಬಗ್ಗೆ ಚಾಡಿ ಹೇಳಿದ್ದಾರೆ. ಹಾಗಾಗಿಯೇ ನನ್ನನ್ನು ಬದಿಗೊತ್ತಲಾಗುತ್ತಿದೆ ಎಂಬುದು ಅವರ ಅನಿಸಿಕೆಯಾಗಿತ್ತು. ದಿನೇದಿನೇ ಆ ಅನಿಸಿಕೆ ಬಲವಾಗುವಂಥ ಸನ್ನಿವೇಶಗಳು ಅವರಿಗೆ ಪಕ್ಷದಲ್ಲಿ ಎದುರಾಗುತ್ತ ಹೋದವು.
2. ಆಜಾದ್​ ಎಂಟು ಅವಧಿಗೆ ರಾಜ್ಯ ಸಭೆ ಸದಸ್ಯರಾಗಿ ಕಾರ್ಯನಿರ್ವಹಿಸಿದರು. ಆದರೆ 2021ರ ಮಾರ್ಚ್​​ನಲ್ಲಿ ಅವರ ಅವಧಿ ಮುಗಿದಾಗ ಕಾಂಗ್ರೆಸ್​ ವರಿಷ್ಠರು ಮತ್ತೆ ಅವರನ್ನು ಮುಂದುವರಿಸಲಿಲ್ಲ. ಮೇಲ್ಮನೆಗೆ ಮತ್ತೊಮ್ಮೆ ಆಯ್ಕೆ ಮಾಡಲಿಲ್ಲ.
3. ಈ ವರ್ಷದ ಪ್ರಾರಂಭದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಗುಲಾಂ ನಬಿ ಆಜಾದ್​ಗೆ ಪದ್ಮ ಭೂಷಣ ಪ್ರಶಸ್ತಿ ಕೊಟ್ಟಾಗ ಕಾಂಗ್ರೆಸ್​​ನಲ್ಲಿ ಜೈರಾಮ್​ ರಮೇಶ್ ಸೇರಿ ಕೆಲವರು ಟೀಕೆ ಮಾಡಿದ್ದರು. ಬಿಜೆಪಿ ಸರ್ಕಾರ ಅವರಿಗೆ ರಾಷ್ಟ್ರದ ಅತ್ಯುನ್ನತ ಗೌರವ ಕೊಟ್ಟಿದೆ ಎಂದರೆ, ಅವರು ಬಿಜೆಪಿಯತ್ತ ಒಲಿಯುತ್ತಿದ್ದಾರೆ ಎಂದೇ ಅರ್ಥ, ಪ್ರಶಸ್ತಿ ತಿರಸ್ಕರಿಸಿದ್ದರೆ ಚೆನ್ನಾಗಿತ್ತು ಎಂಬ ಮಾತುಗಳು ಪರೋಕ್ಷವಾಗಿ ಕಾಂಗ್ರೆಸ್​​ ವಲಯದಿಂದಲೇ, ಅದೂ ಗಾಂಧಿ ಕುಟುಂಬದ ಆಪ್ತರಿಂದಲೇ ಕೇಳಿಬಂದಿತ್ತು.
4. 2020ರಲ್ಲಿ ಜಿ 23 ನಾಯಕರೆಲ್ಲ ಸೇರಿ ಸೋನಿಯಾ ಗಾಂಧಿಗೆ ಪತ್ರ ಬರೆದು, ಪಕ್ಷದ ನಾಯಕತ್ವ ಗಟ್ಟಿಯಾಗಬೇಕು, ಸಂಘಟನೆ ಬಲವಾಗಬೇಕು. ರಾಷ್ಟ್ರಾದ್ಯಂತ ಕಾಂಗ್ರೆಸ್​​ನಲ್ಲಿ ಸಂಪೂರ್ಣ ಬದಲಾವಣೆಯಾಗಬೇಕು ಎಂದು ಆಗ್ರಹಿಸಿದ್ದರು. ಅದರಲ್ಲಿ ಗುಲಾಂ ನಬಿ ಆಜಾದ್ ಕೂಡ ಸೇರಿದ್ದಾರೆ. ಆದರೆ ಇದುವರೆಗೂ ವರಿಷ್ಠರು ಆ ದಿಶೆಯಲ್ಲಿ ಕೆಲಸ ಮಾಡಲಿಲ್ಲ. ಪಕ್ಷ ಪದೇಪದೆ ಎಡವುತ್ತಿದೆ ಎಂಬ ಬೇಸರ ಗುಲಾಂಗೆ ಇದ್ದೇ ಇತ್ತು.

ಬಿಟ್ಟು ಹೋದ ಪ್ರಮುಖರ ಲಿಸ್ಟ್​
2019ರ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಕಳಪೆ ಪ್ರದರ್ಶನ ತೋರಿದ ಮೇಲೆ ಗುಲಾಂ ನಬಿ ಆಜಾದ್​ ಸೇರಿ ಹಲವು ಹಿರಿಯ ನಾಯಕರ ಅಸಮಾಧಾನ ತುತ್ತತುದಿಗೆ ಏರಿತ್ತು. ಕೇಳಿದ ಅಧಿಕಾರ ಸಿಗುತ್ತಿಲ್ಲ, ಪಕ್ಷದಲ್ಲಿ ಬದಲಾವಣೆಗಳು ಆಗುತ್ತಿಲ್ಲ ಎಂಬಿತ್ಯಾದಿ ಕಾರಣಗಳನ್ನು ಕೊಟ್ಟು ಒಂದಷ್ಟು ಪ್ರಮುಖರು ಈಗಾಗಲೇ ಜಾರಿಕೊಂಡಿದ್ದಾರೆ. ಹೀಗೆ ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್​ ಬಿಟ್ಟವರ ಪಟ್ಟಿ ಇಲ್ಲಿದೆ.
1. ಜ್ಯೋತಿರಾದಿತ್ಯ ಸಿಂಧಿಯಾ:
2. ಆರ್​.ಪಿ. ಎನ್​ ಸಿಂಗ್​
3. ಸುನೀಲ್ ಜಾಖರ್​
4. ಅಶ್ವನಿ ಕುಮಾರ್​
5. ಕಪಿಲ್​ ಸಿಬಲ್​
6. ಕ್ಯಾಪ್ಟನ್​ ಅಮರಿಂದರ್​ ಸಿಂಗ್​
7. ಹಾರ್ದಿಕ್​ ಪಟೇಲ್​
8. ಜೈವೀರ್​ ಶೆರ್ಗಿಲ್​
ಇವರೆಲ್ಲ ರಾಷ್ಟ್ರ ಕಾಂಗ್ರೆಸ್​​ನಲ್ಲಿ ಗುರುತಿಸಿಕೊಂಡ ಪ್ರಮುಖರಾಗಿದ್ದರು. ಅದರಾಚೆಗೆ ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿ ಪ್ರಮುಖರು ಎನ್ನಿಸಿಕೊಂಡಿದ್ದ ಕಾಂಗ್ರೆಸ್​ ನಾಯಕರೂ ಕೂಡ ರಾಜೀನಾಮೆ ಕೊಟ್ಟ ಉದಾಹರಣೆಗಳಿವೆ. 2024ರ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ಪಕ್ಷ ಸಂಘಟನೆ ಮಾಡಬೇಕು ಎಂದು ಹಲವು ಸಾಂಸ್ಥಿಕ ಹುದ್ದೆಗಳ ಬದಲಾವಣೆ, ನೇಮಕಾತಿ ಪ್ರಕ್ರಿಯೆಯೂ ಕಾಂಗ್ರೆಸ್​ನಲ್ಲಿ ಭರದಿಂದ ನಡೆಯುತ್ತಿದೆ. ಅದರ ಮಧ್ಯೆಯೇ ಇಂದು ಗುಲಾಂ ನಬಿ ಆಜಾದ್​ ರಾಜೀನಾಮೆ ಕಾಂಗ್ರೆಸ್​ಗೆ ಆಘಾತ ಕೊಟ್ಟಿದೆ.

ಇದನ್ನೂ ಓದಿ: ಕಾಂಗ್ರೆಸ್​​ಗೆ ಮತ್ತಷ್ಟು ಹಿನ್ನಡೆ; ಗುಲಾಂ ನಬಿ ಆಜಾದ್​ ಬೆನ್ನಲ್ಲೇ ಮತ್ತೂ ಐವರು ಪ್ರಮುಖರ ರಾಜೀನಾಮೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Trichy Tour: ದಾಂಪತ್ಯದ ಲವಲವಿಕೆಯನ್ನು ಮತ್ತೆ ಜೀವಂತಗೊಳಿಸಲು ತಿರುಚಿರಾಪಳ್ಳಿಗೆ ಹೋಗಿ ಬನ್ನಿ!

ನಿತ್ಯದ ಬದುಕಿನ ಒತ್ತಡದಲ್ಲಿ ದಂಪತಿಗೆ ಪರಸ್ಪರ ಸಮಯ ಕೊಡಲು ಅವಕಾಶವೇ ಸಿಗುವುದಿಲ್ಲ. ಇಂತವರು ಬಿಡುವು ಮಾಡಿಕೊಂಡು ಒಮ್ಮೆ ತಿರುಚಿರಾಪಳ್ಳಿಗೆ (Trichy Tour) ಬಂದರೆ ಬದುಕಿನಲ್ಲಿ ಮತ್ತೆ ಪ್ರೀತಿ ಹುಟ್ಟದೇ ಇರಲು ಸಾಧ್ಯವೇ ಇಲ್ಲ. ಅಂತಹ ರೊಮ್ಯಾಂಟಿಕ್ ಸ್ಥಳಗಳು ಇಲ್ಲಿವೆ.

VISTARANEWS.COM


on

By

Trichy Tour
Koo

ಒಟ್ಟಿಗೆ ಇದ್ದರೂ ಕೆಲಸದ ಒತ್ತಡವನ್ನೆಲ್ಲ ಬದಿಗೊತ್ತಿ ವರ್ಷದಲ್ಲೊಮ್ಮೆಯಾದರೂ ಪತಿ – ಪತ್ನಿ (Couple) ಏಕಾಂತವಾಗಿ ಸಮಯ ಕಳೆಯಬೇಕು ಎಂದು ಬಯಸುವುದು ಸಹಜ. ಇಂಥವರಿಗೆ ಸೂಕ್ತವೆನಿಸುವ ಹಲವಾರು ತಾಣಗಳು ಭಾರತದಲ್ಲಿ (india) ಇದೆ. ಅದರಲ್ಲಿ ತಿರುಚಿರಾಪಳ್ಳಿ (Trichy Tour) ಕೂಡ ಒಂದು.

ತಿರುಚಿರಾಪಳ್ಳಿ ಅಥವಾ ತಿರುಚಿ ಗಡಿಬಿಡಿಯ ಜೀವನದಿಂದ ದೂರವಿರಲು ಬಯಸುವ ದಂಪತಿ ಖಂಡಿತವಾಗಿಯೂ ಭೇಟಿ ನೀಡಬೇಕಾದ ಸ್ಥಳ. ಇಲ್ಲಿನ ಪುರಾತನ ದೇವಾಲಯಗಳು, ಶಾಂತವಾದ ನದಿ, ರುಚಿಕರವಾದ ಆಹಾರ, ಆಳವಾದ ಸಂಸ್ಕೃತಿ ಮತ್ತು ಸಂಪ್ರದಾಯಗಳ ಜೊತೆಗೆ ಸುಂದರವಾದ ನೈಸರ್ಗಿಕ ದೃಶ್ಯಾವಳಿಗಳನ್ನು ಕಣ್ತುಂಬಿಕೊಳ್ಳಬಹುದು. ರೋಮ್ಯಾಂಟಿಕ್ ಮತ್ತು ಸಾಹಸಮಯ ಪ್ರವಾಸಗಳಿಗೆ ಸೂಕ್ತವಾಗಿರುವ ತಿರುಚಿಯಲ್ಲಿ ಯಾವುದಾದರೂ ಹಳೆಯ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೈ ಹಿಡಿದುಕೊಂಡು ಹೋಗುತ್ತಿರುವಾಗ ಅಥವಾ ನದಿಯ ದಡದಲ್ಲಿ ಒಟ್ಟಿಗೆ ವಿವಿಧ ಭಕ್ಷ್ಯಗಳನ್ನು ಸವಿಯುತ್ತಿರುವಾಗ ನಿಮ್ಮ ಪ್ರೇಮ ಕಥೆಯ ಪ್ರಾರಂಭದ ದಿನಗಳ ನೆನಪು ಚಿಗುರೊಡೆಯದೆ ಇರಲಾರದು.

ತಿರುಚಿ ಎಂದೂ ಕರೆಯಲ್ಪಡುವ ತಿರುಚಿರಾಪಳ್ಳಿಯು ಇತಿಹಾಸ, ಸಂಸ್ಕೃತಿ ಮತ್ತು ಸೌಂದರ್ಯದ ನಗರವಾಗಿದೆ. ಇದು ಭಾರತದ ಅತ್ಯುತ್ತಮ ಪ್ರಣಯ ವಿಹಾರ ತಾಣಗಳಲ್ಲಿ ಒಂದಾಗಿದೆ. ತಮಿಳುನಾಡಿನ ದಕ್ಷಿಣ ರಾಜ್ಯದಲ್ಲಿರುವ ಪ್ರಾಚೀನ ವಾಸ್ತುಶೈಲಿಯು ಶಾಂತವಾದ ನೈಸರ್ಗಿಕ ಭೂದೃಶ್ಯಗಳು ಮತ್ತು ರುಚಿಕರವಾದ ಆಹಾರದೊಂದಿಗೆ ಬೆರೆತಿರುವ ಕೆಲವು ಕ್ಷಣಗಳನ್ನು ಜೀವಂತಗೊಳಿಸುತ್ತದೆ.

ಪ್ರಾಚೀನ ದೇವಾಲಯಗಳು

ಸ್ಥಳದ ಸುತ್ತಲೂ ಹರಡಿರುವ ಹಲವಾರು ದೇವಾಲಯಗಳಿಗಿಂತ ಹೆಚ್ಚು ಆಕರ್ಷಕವಾದದ್ದು ಯಾವುದು? ತಿರುಚ್ಚಿಯು ಅನೇಕ ಪವಿತ್ರ ದೇವಾಲಯಗಳೊಂದಿಗೆ ಅಗಾಧವಾದ ಧಾರ್ಮಿಕ ಹಿನ್ನೆಲೆಯನ್ನು ಹೊಂದಿದೆ. ಅವುಗಳಲ್ಲಿ ದೈವಿಕ ವೈಭವ ಮತ್ತು ವಾಸ್ತುಶಿಲ್ಪದ ಅದ್ಭುತಗಳ ಸಾರಾಂಶವಾಗಿರುವ ಶ್ರೀ ರಂಗನಾಥಸ್ವಾಮಿ ದೇವಾಲಯವೂ ಒಂದು. ಭಗವಾನ್ ವಿಷ್ಣುವಿನ ರಂಗನಾಥ ಅವತಾರದಲ್ಲಿ ನಿರ್ಮಿಸಲಾದ ಈ ದೇವಾಲಯದ ಸಂಕೀರ್ಣವು ತನ್ನ ಸಂಕೀರ್ಣವಾದ ಕೆತ್ತನೆಗಳು, ಎತ್ತರದ ಗೋಪುರಗಳು ಮತ್ತು ಪವಿತ್ರ ತೊಟ್ಟಿಗಳಿಂದ ಭಕ್ತರನ್ನು ಮೋಡಿಮಾಡುತ್ತದೆ. ಇಲ್ಲಿನ ವಿಸ್ಮಯಕಾರಿ ರಚನೆಗಳ ಮಧ್ಯೆ ದಂಪತಿ ಆಧ್ಯಾತ್ಮಿಕ ವಾತಾವರಣದಲ್ಲಿ ತಮ್ಮನ್ನು ತಾವು ನೆನೆಯಬಹುದು.


ರಾಕ್‌ಫೋರ್ಟ್ ಟೆಂಪಲ್

ತಪ್ಪಿಸಿಕೊಳ್ಳಬಾರದ ಮತ್ತೊಂದು ದೇವಾಲಯ ರಾಕ್‌ಫೋರ್ಟ್ ಟೆಂಪಲ್. ನಗರದ ಮೇಲೆ ಪಕ್ಷಿನೋಟವನ್ನು ನೀಡುವ ಬೃಹತ್ ಬಂಡೆಯ ಮೇಲೆ ಕುಳಿತಿರುವ ಈ ದೇಗುಲ 437 ಕಲ್ಲು ಮೆಟ್ಟಿಲುಗಳನ್ನು ಒಟ್ಟಿಗೆ ಹತ್ತುವುದು ಪ್ರೀತಿಯ ಸಂಬಂಧವನ್ನು ಪರೀಕ್ಷಿಸುತ್ತದೆ; ಅಕ್ಕಪಕ್ಕದಲ್ಲಿ ಸವಾಲುಗಳನ್ನು ಎದುರಿಸುವ ಮೂಲಕ ದಂಪತಿ ತಮ್ಮ ಸಂಬಂಧವನ್ನು ಬಲಪಡಿಸಲು ಇದು ಒಂದು ಉತ್ತಮ ಮಾರ್ಗವಾಗಿದೆ. ಅವರ ಉತ್ತುಂಗದಲ್ಲಿ ಗಣಪತಿ ಮತ್ತು ನಟರಾಜನಿಗೆ ಸಮರ್ಪಿತವಾದ ಪ್ರಾಚೀನ ಪಲ್ಲವ-ಯುಗದ ದೇವಾಲಯಗಳಿವೆ. ಅಲ್ಲಿ ಪ್ರೇಮಿಗಳು ತಮ್ಮ ಪ್ರೀತಿಯ ಜೀವನದಲ್ಲಿ ಶಾಂತಿಗಾಗಿ ಪ್ರಾರ್ಥಿಸಬಹುದು.

ಕಾವೇರಿ ನದಿ ತೀರ

ಕಾವೇರಿ ನದಿಯ ದಡವು ರಮಣೀಯ ಸೌಂದರ್ಯದೊಂದಿಗೆ ಶಾಂತಿಯನ್ನು ನೀಡುತ್ತದೆ. ಗದ್ದಲದ ಸ್ಥಳಗಳಿಂದ ಸ್ವಲ್ಪ ದೂರವಾಗಿ ಶಾಂತತೆವಾಗಿ ಪ್ರಕೃತಿಯ ಮಧ್ಯೆ ಸುತ್ತಲು ಬಯಸಿದರೆ ಈ ತೀರದಲ್ಲಿ ನಿಧಾನವಾಗಿ ನಡೆಯಿರಿ. ದಂಪತಿ ಮೌನವಾಗಿ ದೋಣಿ ವಿಹಾರಕ್ಕೆ ಹೋಗಬಹುದು ಅಥವಾ ನದಿಯ ಪಕ್ಕದಲ್ಲಿ ಹಾಕಲಾದ ಬೆಂಚುಗಳ ಮೇಲೆ ಕುಳಿತುಕೊಳ್ಳಬಹುದು. ದೂರದ ಪರ್ವತಗಳ ಹಿಂದೆ ಸೂರ್ಯ ಮುಳುಗಿದ ಅನಂತರ ಕಿತ್ತಳೆ ಬಣ್ಣದ ಆಕಾಶವನ್ನು ವೀಕ್ಷಿಸಬಹುದು.


ಪಾಕಶಾಲೆ

ರೊಮ್ಯಾಂಟಿಕ್ ಗೆಟ್‌ವೇಗಳ ವಿಷಯಕ್ಕೆ ಬಂದಾಗ ಸ್ಥಳೀಯ ಆಹಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳದಿರುವುದು ಹೇಗೆ? ತಿರುಚಿ ನಿಮಗೆ ಅದಕ್ಕಿಂತ ಹೆಚ್ಚಿನದನ್ನು ನೀಡುತ್ತದೆ. ಸಾಂಪ್ರದಾಯಿಕ ತಮಿಳುನಾಡಿನ ತಿನಿಸುಗಳಿಂದ ಹಿಡಿದು ಅಂತಾರಾಷ್ಟ್ರೀಯ ಪಾಕಪದ್ಧತಿಗಳವರೆಗೆ ರೆಸ್ಟೋರೆಂಟ್‌ಗಳು ಇಲ್ಲಿ ವಿಭಿನ್ನ ರುಚಿ ಮೊಗ್ಗುಗಳನ್ನು ಪೂರೈಸುತ್ತವೆ. ದಂಪತಿಗಳು ಸ್ಥಳೀಯ ತಿನಿಸುಗಳಲ್ಲಿ ದೋಸೆ, ಇಡ್ಲಿ ಮತ್ತು ಬಿರಿಯಾನಿಯನ್ನು ಪ್ರಯತ್ನಿಸಬೇಕು ಅಥವಾ ನದಿಯ ನೋಟವನ್ನು ಆನಂದಿಸುತ್ತಿರುವಾಗ ಉನ್ನತ ಮಟ್ಟದ ರೆಸ್ಟೋರೆಂಟ್‌ನಲ್ಲಿ ಕ್ಯಾಂಡಲ್‌ಲೈಟ್ ಡಿನ್ನರ್ ಮಾಡಬಹುದು.

ಸಾಂಸ್ಕೃತಿಕ ಪ್ರದರ್ಶನ

ಸಂಸ್ಕೃತಿಗೆ ಹತ್ತಿರವಾಗುವುದು ನಿಮ್ಮ ಪ್ರೀತಿಪಾತ್ರರೊಂದಿಗಿನ ಯಾವುದೇ ಪ್ರವಾಸದ ಪ್ರಮುಖ ಭಾಗವಾಗಿದೆ ಮತ್ತು ಈ ನಿಟ್ಟಿನಲ್ಲಿ ತಿರುಚಿಯು ಸಾಕಷ್ಟು ಕೊಡುಗೆಗಳನ್ನು ಹೊಂದಿದೆ. ಪ್ರದೇಶದ ಶ್ರೀಮಂತ ಕಲಾತ್ಮಕ ಸಂಪ್ರದಾಯಗಳನ್ನು ಪ್ರದರ್ಶಿಸುವ ಶಾಸ್ತ್ರೀಯ ಸಂಗೀತ ಕಛೇರಿಗಳು ಮತ್ತು ನೃತ್ಯ ಕಾರ್ಯಕ್ರಮಗಳಿಗೆ ಹಾಜರಾಗಿ ಅಥವಾ ಪ್ರದೇಶದ ವಿಶಿಷ್ಟವಾದ ಕರಕುಶಲ ವಸ್ತುಗಳನ್ನು ಮಾರಾಟ ಮಾಡುವ ರೋಮಾಂಚಕ ಮಾರುಕಟ್ಟೆಗಳಿಗೆ ಭೇಟಿ ನೀಡಿ. ಯಾಕೆಂದರೆ ಮನೆಗೆ ಮರಳಿದ ಸ್ಮಾರಕಗಳು ಶಾಶ್ವತವಾಗಿ ಹತ್ತಿರದಲ್ಲಿ ಉಳಿಯುತ್ತವೆ. ಮಸಾಲೆಯುಕ್ತ ಗಾಳಿಯ ನಡುವೆ ಕೈ- ಕೈ ಹಿಡಿದು ಬಿಡುವಿಲ್ಲದ ಬೀದಿಗಳಲ್ಲಿ ನಡೆಯುವುದು ದಂಪತಿ ಹೃದಯದಲ್ಲಿ ದೀರ್ಘಕಾಲ ಬದುಕುವ ನೆನಪುಗಳನ್ನು ಸೃಷ್ಟಿಸುತ್ತದೆ.

ಇದನ್ನೂ ಓದಿ: Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ಪ್ರಕೃತಿಯ ನಡುವೆ ಒಂದಷ್ಟು ಹೊತ್ತು

ನಮ್ಮ ರಜಾದಿನಗಳಲ್ಲಿ ಬೇಕಾಗಿರುವುದು ಶಾಂತಿ. ನಗರಗಳು ಕೆಲವೊಮ್ಮೆ ನಮ್ಮನ್ನು ಬ್ಯುಸಿಯಾಗಿರುವಂತೆ ಮಾಡುತ್ತದೆ. ಆದ್ದರಿಂದ ತಿರುಚ್ಚಿಗೆ ಬಂದರೆ ಹೊರವಲಯವನ್ನು ನೋಡಬೇಡಿ. ಸುತ್ತಮುತ್ತಲಿನ ಹಚ್ಚ ಹಸಿರಿನಿಂದಾಗಿ ಪ್ರಶಾಂತ ವಾತಾವರಣವನ್ನು ನೋಡಿ. ಜಲಪಾತಗಳ ಶಬ್ದಗಳನ್ನು ಕಿವಿಕೊಟ್ಟು ಆಲಿಸಿ. ದಂಪತಿಗಳು ಪರಸ್ಪರ ಜೊತೆಯಾಗಿ ಪ್ರಕೃತಿಯೊಂದಿಗೆ ಇರಲು ಇದಕ್ಕಿಂತ ಹೆಚ್ಚು ನೆಮ್ಮದಿಯ ತಾಣ ಬೇರೆ ಇರಲಾರದು ಎಂದೆನಿಸಿದರೆ ತಪ್ಪಿಲ್ಲ.

Continue Reading

ವೈರಲ್ ನ್ಯೂಸ್

Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

Yamuna Bridge: ರೈಲ್ವೆ ಸಚಿವಾಲಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಆಗ್ರಾದಲ್ಲಿನ ಯಮುನಾ ರೈಲ್ವೆ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿದೆ. ರೈಲ್ವೆ ಹಂಚಿಕೊಂಡಿರುವ, ಡ್ರೋನ್‌ ಸೆರೆಹಿಡಿರುವ ಈ ಚಿತ್ರದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಐತಿಹಾಸಿಕ ಸೇತುವೆಯ ಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದ್ದು, ನೆಟ್ಟಿಗರು ಮನ ಸೋತಿದ್ದಾರೆ. ಫೋಟೊ ಹಂಚಿಕೊಂಡ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಈಗಾಗಲೇ 28 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 490ಕ್ಕೂ ಹೆಚ್ಚು ಮಂದಿ ಲೈಕ್‌ ಬಟನ್‌ ಒತ್ತಿದ್ದಾರೆ. 200ಕ್ಕೂ ಹೆಚ್ಚು ಶೇರ್‌ ಆಗಿದೆ. ಯಮುನೆಯ ಸೌಂದರ್ಯಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

VISTARANEWS.COM


on

Yamuna Bridge
Koo

ಹೊಸದಿಲ್ಲಿ: ಭಾರತೀಯ ರೈಲ್ವೆ ಇಲಾಖೆ (Railways Ministry) ಆಗಾಗ ತನ್ನ ಕಾಮಗಾರಿಗಳ ವಿವರಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತದೆ. ಸ್ವೇಷನ್‌, ಸೇತುವೆ ನಿರ್ಮಾಣ ಕಾಮಗಾರಿ, ಹೊಸ ಯೋಜನೆಗಳ ಮಾಹಿತಿಯನ್ನು ನೀಡುತ್ತಿರುತ್ತದೆ. ಇದೀಗ ರೈಲ್ವೆ ಸಚಿವಾಲಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಆಗ್ರಾದಲ್ಲಿನ ಯಮುನಾ ರೈಲ್ವೆ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿದೆ. ರೈಲ್ವೆ ಹಂಚಿಕೊಂಡಿರುವ, ಡ್ರೋನ್‌ ಸೆರೆಹಿಡಿರುವ ಈ ಚಿತ್ರದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಐತಿಹಾಸಿಕ ಸೇತುವೆಯ ಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದ್ದು, ನೆಟ್ಟಿಗರು ಮನ ಸೋತಿದ್ದಾರೆ (Viral News).

“ಆಗ್ರಾದಲ್ಲಿನ ಯಮುನಾ ಸೇತುವೆಯ ಪಕ್ಷಿ ನೋಟ. ಸೇತುವೆಯ ಹಿನ್ನೆಲೆಯಲ್ಲಿ ಭವ್ಯವಾದ ತಾಜ್ ಮಹಲ್ ಅನ್ನೂ ಕಾಣಬಹುದುʼʼ ಎಂದು ಫೋಟೊಕ್ಕೆ ಕ್ಯಾಪ್ಶನ್‌ ನೀಡಲಾಗಿದೆ. ಫೋಟೊ ಹಂಚಿಕೊಂಡ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಈಗಾಗಲೇ 28 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 490ಕ್ಕೂ ಹೆಚ್ಚು ಮಂದಿ ಲೈಕ್‌ ಬಟನ್‌ ಒತ್ತಿದ್ದಾರೆ. 200ಕ್ಕೂ ಹೆಚ್ಚು ಶೇರ್‌ ಆಗಿದೆ. ಯಮುನೆಯ ಸೌಂದರ್ಯಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

ನೆಟ್ಟಿಗರು ಏನಂದ್ರು?

ʼʼವಾವ್‌ ತಾಜ್‌ʼʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದೆʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಜೈ ಭಾರತ್‌, ಜೈ ಭಾರತಿʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼವಿಹಂಗಮ ದೃಶ್ಯʼʼ ಎಂದು ಮಗದೊಬ್ಬರು ಉದ್ಘರಿಸಿದ್ದಾರೆ. ʼʼನಿಜವಾಗಿಯೂ ಈ ಫೋಟೊ ಮನಮೋಹಕವಾಗಿದೆʼʼ ಎಂದು ನೆಟ್ಟಿಗರೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ಒಟ್ಟಿನಲ್ಲಿ ಯಮುನೆಯ ಒನಪು, ಸೇತುವೆಯ ಗಾಂಭೀರ್ಯ, ತಾಜ್‌ ಮಹಲ್‌ನ ಸೌಂದರ್ಯ ಹಲವರ ಗಮನ ಸೆಳೆದಿದ್ದು ಸುಳ್ಳಲ್ಲ.

ಶತಮಾನಗಳ ಇತಿಹಾಸ

ವಿಶೇಷವೆಂದರೆ ಭಾರತೀಯ ರೈಲ್ವೆಯ ಪ್ರಮುಖ ಜೀವನಾಡಿಯಾದ ಈ ಸೇತುವೆ 1875ರಲ್ಲಿ ಸಂಚಾರಕ್ಕೆ ಮುಕ್ತವಾಗಿತ್ತು. ಆಗ್ರಾ ಈಸ್ಟ್ ಬ್ಯಾಂಕ್ ನಿಲ್ದಾಣ ಮತ್ತು ಆಗ್ರಾ ಕೋಟೆ ನಿಲ್ದಾಣವನ್ನು ಇದು ಸಂಪರ್ಕಿಸುತ್ತದೆ. ಶತಮಾನಗಳ ಇತಿಹಾಸ ಹೊಂದಿರುವ ಯಮುನಾ ಸೇತುವೆಯ ಸಮೀಪದ ಆಗ್ರಾ ರೈಲ್ವೆ ನಿಲ್ದಾಣವು ಅತ್ಯಂತ ಜನನಿಬಿಡ ರೈಲ್ವೆ ನಿಲ್ದಾಣಗಳಲ್ಲಿ ಒಂದಾಗಿದೆ. ಇದು ಪ್ರಯಾಣಿಕರು ಮತ್ತು ಸರಕುಗಳೆರಡಕ್ಕೂ ಪ್ರಮುಖ ಸಾರಿಗೆ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಜತೆಗೆ ಆಗ್ರಾವನ್ನು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುತ್ತದೆ.

ಜನರೊಂದಿಗೆ ನಿರಂತರ ಸಂಪರ್ಕ

ರೈಲ್ವೆ ಸಚಿವಾಲಯವು ರೈಲುಗಳು ಮತ್ತು ಅವುಗಳ ಸೇವೆಗಳ ಬಗ್ಗೆ ಆಗಾಗ ಆಸಕ್ತಿದಾಯಕ ಸಂಗತಿಗಳು ಮತ್ತು ಮಾಹಿತಿಯನ್ನು ಹಂಚಿಕೊಂಡು ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತದೆ. ಕೆಲವು ವಾರಗಳ ಹಿಂದೆ ಸಚಿವಾಲಯವು ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗಾಗಿ ನಿರ್ಮಿಸಲಾದ ಗುಜರಾತ್‌ನ ಔರಂಗ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿತ್ತು. ವಲ್ಸಾದ್ ಜಿಲ್ಲೆಯ ಔರಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಕಾಮಗಾರಿ 2023ರ ಆಗಸ್ಟ್‌ನಲ್ಲಿ ಪೂರ್ಣಗೊಂಡಿತ್ತು. ಜತೆಗೆ ಪಶ್ಚಿಮ ಘಟ್ಟದ ಹಸಿರಿನ ನಡುವೆ, ಗುಡ್ಡಗಳ ಮಧ್ಯೆ ಚಲಿಸುವ ರೈಲಿನ ವಿಡಿಯೊವನ್ನು ಇತ್ತೀಚೆಗೆ ಹಂಚಿಕೊಂಡಿತ್ತು. ʼʼಸ್ವರ್ಗ ಸದೃಶ ಪಶ್ಚಿಮ ಘಟ್ಟದ ಸೌಂದರ್ಯವನ್ನು ಭಾರತೀಯ ರೈಲ್ವೆಯೊಂದಿಗೆ ಆನಂದಿಸಿʼʼ ಎನ್ನುವ ಶೀರ್ಷಿಕೆಯಡಿ ಹಂಚಿಕೊಂಡ ಈ ಪೋಸ್ಟ್‌ಗೂ ನೂರಾರು ಲೈಕ್‌ಗಳು ಸಂದಿವೆ.

ಇದನ್ನೂ ಓದಿ: India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Continue Reading

ಪ್ರಮುಖ ಸುದ್ದಿ

Road Accident: ಪಿಕ್‌ಅಪ್‌ ವಾಹನ ಕಂದಕಕ್ಕೆ ಬಿದ್ದು 18 ಕಾರ್ಮಿಕರ ದುರ್ಮರಣ; ಕೆಲಸಕ್ಕೆ ಹೊರಟವರು ಮಸಣಕ್ಕೆ!

Road Accident: ಅಪಘಾತ ಸಂಭವಿಸಿ 18 ಜನ ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ವಿಜಯ್‌ ಶರ್ಮಾ ಸಂತಾಪ ಸೂಚಿಸಿದ್ದಾರೆ. ಕವಾರ್ಧ ಜಿಲ್ಲೆಯಲ್ಲಿ ಪಿಕ್‌ಅಪ್‌ ವಾಹನ ಕಂದಕಕ್ಕೆ ಉರುಳಿ 15 ಜನ ಮೃತಪಟ್ಟಿರುವ ಸುದ್ದಿ ತಿಳಿದು ಅತೀವ ನೋವಾಯಿತು. ಕುಟುಂಬಸ್ಥರ ನೋವಿನಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Road Accident
Koo

ರಾಯ್‌ಪುರ: ಛತ್ತೀಸ್‌ಗಢದ ಕವಾರ್ಧ ಜಿಲ್ಲೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದ್ದು, 18 ಕಾರ್ಮಿಕರು ಮೃತಪಟ್ಟಿದ್ದಾರೆ. ಛತ್ತೀಸ್‌ಗಢದ (Chhattisgarh) ಕವಾರ್ಧ (Kawardha) ಪ್ರದೇಶದಲ್ಲಿ ಸುಮಾರು 25-30 ಕಾರ್ಮಿಕರಿದ್ದ ಪಿಕ್‌ಅಪ್‌ ವಾಹನವು ತೆರಳುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಾಹ್‌ಪನಿ ಪ್ರದೇಶದ ಕಂದಕಕ್ಕೆ ಉರುಳಿದೆ. 8 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸೋಮವಾರ (ಮೇ 20) ಬೆಳಗಿನ ಜಾವವೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬೈಗಾ ಬುಡಕಟ್ಟು ಸಮುದಾಯದವರು ಕೆಲಸಕ್ಕೆಂದು ಪಿಕ್‌ಅಪ್‌ ವಾಹನದಲ್ಲಿ ತೆರಳುತ್ತಿದ್ದರು. ಸುಮಾರು 20 ಅಡಿ ಆಳದ ಕಂದಕಕ್ಕೆ ಬಸ್‌ ಉರುಳಿದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸುತ್ತಲೇ ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಯಿತಾದರೂ ವಾಹನ ಬಿದ್ದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಹಿಳೆಯರು ಕೂಡ ಇದ್ದಾರೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ. ಇವರು ಕುಯಿ ಗ್ರಾಮದವರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಸಂತಾಪ ಸೂಚಿಸಿದ ಡಿಸಿಎಂ

ಅಪಘಾತ ಸಂಭವಿಸಿ 18 ಜನ ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ವಿಜಯ್‌ ಶರ್ಮಾ ಸಂತಾಪ ಸೂಚಿಸಿದ್ದಾರೆ. “ಕವಾರ್ಧ ಜಿಲ್ಲೆಯಲ್ಲಿ ಪಿಕ್‌ಅಪ್‌ ವಾಹನ ಕಂದಕಕ್ಕೆ ಉರುಳಿ 15 ಜನ ಮೃತಪಟ್ಟಿರುವ ಸುದ್ದಿ ತಿಳಿದು ಅತೀವ ನೋವಾಯಿತು. ಕುಟುಂಬಸ್ಥರ ನೋವಿನಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರು ಹಾಗೂ ಅವರ ಕುಟುಂಬಸ್ಥರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದಷ್ಟೇ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಖಾಸಗಿ ಸಂಸ್ಥೆಯೊಂದರ 12 ಕಾರ್ಮಿಕರು ಮೃತಪಟ್ಟು, 14 ಮಂದಿ ಗಾಯಗೊಂಡಿದ್ದರು. ದುರ್ಗದ ಗಣಿಯಲ್ಲಿ ಕಾರ್ಮಿಕರಿಂದ ತುಂಬಿದ್ದ ಬಸ್ ಪಲ್ಟಿಯಾಗಿತ್ತು. ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ) ಗೆ ಸ್ಥಳಾಂತರಿಸಲಾಗಿತ್ತು, ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಘಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದರು.

ಇದನ್ನೂ ಓದಿ: Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Continue Reading

ದೇಶ

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Physical Abuse & Murder:ಬಾಲಕಿಯನ್ನು ಅತ್ಯಾಚಾರಗೈದು ಬಳಿಕ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲೇಬಿಯಾ ಬುಡಗಟ್ಟು ಜನಾಂಗದ ಇಬ್ಬರು ಸಹೋದರರಾದ ಕಲು ಮತ್ತು ಕಹ್ನಾ ವಿರುದ್ಧ ಪೋಕ್ಸೋ ಕಾಯ್ದೆಯಲ್ಲಿ ಕೇಸು ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೂರು ಮಹಿಳೆಯರು ಸೇರಿದಂತೆ ಇತರೆ ಏಳು ಜನರ ವಿರುದ್ಧವೂ ಕೇಸ್‌ ದಾಖಲಿಸಲಾಗಿತ್ತು. ಅವರು ಆರೋಪಿಗಳಿಗೆ ಸಾಕ್ಷ್ಯಾಧಾರ ನಾಶಕ್ಕೆ ಸಹಕರಿಸಿದ ಆರೋಪ ಎದುರಿಸುತ್ತಿದ್ದರು. ಇದೀಗ ಕಲು ಮತ್ತು ಕಹ್ನಾಗೆ ಮರಣದಂಡನೆ ವಿಧಿಸಿರುವ ಕೋರ್ಟ್‌ ಉಳಿದ ಏಳು ಜನರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ.

VISTARANEWS.COM


on

Physical Abuse & Murder
Koo

ನವದೆಹಲಿ: ಕಳೆದ ವರ್ಷ ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಬರ್ಬರ ಕೊಲೆ(Physical Abuse & Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹಂತಕರಿಗೆ ರಾಜಸ್ಥಾನ(Rajasthan)ದ ಬಿಲ್ವಾರ ವಿಶೇಷ ಕೋರ್ಟ್‌ ಮರಣದಂಡನೆ(Death Penalty) ವಿಧಿಸಲಾಗಿದೆ. ನ್ಯಾಯಮೂರ್ತಿ ಅನಿಲ್‌ ಗುಪ್ತಾ ಇದ್ದ ನ್ಯಾಯಪೀಠ, ಪ್ರಕರಣದ ದೋಷಿಗಳಾದ ಕಲು ಮತ್ತು ಕಹ್ನಾ ಎಂಬ ಸಹೋದರರಿಗೆ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದ್ದು, ಇದು ಅಪರೂಪಗಳಲ್ಲಿ ಅಪರೂಪದ ಪ್ರಕರಣ ಎಂದು ಹೇಳಿದೆ.

ಬಾಲಕಿಯನ್ನು ಅತ್ಯಾಚಾರಗೈದು ಬಳಿಕ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲೇಬಿಯಾ ಬುಡಗಟ್ಟು ಜನಾಂಗದ ಇಬ್ಬರು ಸಹೋದರರಾದ ಕಲು ಮತ್ತು ಕಹ್ನಾ ವಿರುದ್ಧ ಪೋಕ್ಸೋ ಕಾಯ್ದೆಯಲ್ಲಿ ಕೇಸು ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೂರು ಮಹಿಳೆಯರು ಸೇರಿದಂತೆ ಇತರೆ ಏಳು ಜನರ ವಿರುದ್ಧವೂ ಕೇಸ್‌ ದಾಖಲಿಸಲಾಗಿತ್ತು. ಅವರು ಆರೋಪಿಗಳಿಗೆ ಸಾಕ್ಷ್ಯಾಧಾರ ನಾಶಕ್ಕೆ ಸಹಕರಿಸಿದ ಆರೋಪ ಎದುರಿಸುತ್ತಿದ್ದರು. ಇದೀಗ ಕಲು ಮತ್ತು ಕಹ್ನಾಗೆ ಮರಣದಂಡನೆ ವಿಧಿಸಿರುವ ಕೋರ್ಟ್‌ ಉಳಿದ ಏಳು ಜನರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ. ಇದೀಗ ಇವರ ಬಿಡುಗಡೆ ಪ್ರಶ್ನಿಸಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆಯಾಗುವ ನಿರೀಕ್ಷೆ ಇದೆ. ಇನ್ನು ಮೂವರು ಮಹಿಳೆಯರಲ್ಲಿ ಇಬ್ಬರು ಕಲು ಮತ್ತು ಕಹ್ನಾನ ಪತ್ನಿಯರು ಎಂದು ಹೇಳಲಾಗಿದೆ.

ಇನ್ನು ಈ ಬಗ್ಗೆ ಸರ್ಕಾರಿ ವಕೀಲ ಮಹಾವೀರ್‌ ಸಿಂಗ್‌ ಕಿಶ್ವಂತ್‌ ಪ್ರತಿಕ್ರಿಯಿಸಿದ್ದು, ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲು ಮತ್ತು ಕಹ್ನಾಗೆ ಮರಣದಂಡನೆ ವಿಧಿಸಲಾಗಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದಿತ್ತು ಪೈಶಾಚಿಕ ಕೃತ್ಯ

ಬಿಲ್ವರಾ ಜಿಲ್ಲೆಯ ಕೊಟ್ರಿ ತಾಲೂಕಿನ ಶಹಾಪುರದಲ್ಲಿ ನಡೆದಿದ್ದು, ದನ ಮೇಯಿಸಲು ಹೋಗಿದ್ದ 14ವರ್ಷದ ಬಾಲಕಿ ನಿಗೂಢವಾಗಿ ಕಣ್ಮರೆ ಆಗಿದ್ದಳು. ದನಗಳು ಹಟ್ಟಿಗೆ ವಾಪಾಸಾದರೂ ಮಗಳು ಬಾರದೇ ಇರುವುದನ್ನು ಕಂಡ ಪೋಷಕರು ಗಾಬರಿಗೊಂಡಿದ್ದರು. ಆಕೆಗಾಗಿ ಮನೆಯವರೆಲ್ಲಾ ಹುಡುಕಾಟ ಶುರು ಮಾಡಿದ್ದರು. ಸುಮಾರು ಹೊತ್ತಿನ ಹುಡುಕಾಟದ ಬಳಿಕ ರಾತ್ರಿ 10ಗಂಟೆ ವೇಳೆಗೆ ಇದ್ದಿಲಿನ ಕುಲುಮೆಯಿಂದ ಹೊಗೆ ಹೋಗುತ್ತಿರುವುದನ್ನು ಗಮನಿಸಿದ್ದರು. ಅದನ್ನು ಕೆದಕಿ ನೋಡಿದಾಗ ಬಾಲಕಿ ಧರಿಸಿದ್ದ ಬಟ್ಟೆ ತುಂಡುಗಳು, ಚಪ್ಪಲಿ ಪತ್ತೆಯಾಗಿತ್ತು.

ತಕ್ಷಣ ಪೊಲೀಸರಿಗೆ ಕರೆ ಮಾಡಿದ ಕುಟುಂಬಸ್ಥರು ಘಟನೆ ಬಗ್ಗೆ ವಿವರಿಸಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಅರೆಬೆಂದ ಮೃತದೇಹ ಸಿಕ್ಕಿತ್ತು. ಇದರಿಂದ ಆಕೆಯನ್ನು ಹಂತಕರು ಜೀವಂತವಾಗಿ ಸುಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಇದಾದ ಬಳಿಕ ವಿಧಿ ವಿಜ್ಞಾನ ವಿಭಾಗಕ್ಕೆ ಮೃತದೇಹ ಕಳಿಸಿದಾಗ, ಬಾಲಕಿ ಪ್ರಜ್ಞಾ ಹೀನ ಸ್ಥಿತಿಯಲ್ಲಿರುವಾಗಲೇ ಆಕೆಯನ್ನು ಇದ್ದಿಲಿನ ಕುಲುಮೆಯಲ್ಲಿ ಸುಟ್ಟಿದ್ದಾರೆ. ಆಕೆಯನ್ನು ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಿತ್ತು.

ಇನ್ನು ಈ ಕೃತ್ಯ ಇಡೀ ರಾಜ್ಯದಲ್ಲೇ ಸಂಚಲನ ಮೂಡಿಸಿತ್ತು. ಅಲ್ಲದೇ ರಾಜಕೀಯ ಟೀಕಾಪ್ರಹಾರಕ್ಕೂ ಕಾರಣವಾಗಿತ್ತು. ಪೊಲೀಸರು ಪ್ರಕರಣದಕ್ಕೆ ಸಂಬಂಧಿಸಿದಂತೆ ಕೇವಲ 30ದಿನಗಳಲ್ಲಿ 400ಕ್ಕೂ ಅಧಿಕ ಪುಟುಗಳ ಚಾರ್ಜ್‌ಶೀಟ್‌ ದಾಖಲಿಸಿದ್ದರು.

ಇದನ್ನೂ ಓದಿ:Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Continue Reading
Advertisement
Prajwal Revanna Case
ಪ್ರಮುಖ ಸುದ್ದಿ7 mins ago

Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

Holenarasipura sexual assault case SIT moves HC against HD Revanna bail order
ಕ್ರೈಂ12 mins ago

HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

Due to heavy rain in Shira water entered houses and shops
ತುಮಕೂರು19 mins ago

Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Lok Sabha Election 2024 Shah Rukh Khan booth in Mumbai
ಬಾಲಿವುಡ್22 mins ago

Lok Sabha Election 2024: ಕುಟುಂಬದ ಜತೆ ಬಂದು ಮತ ಚಲಾಯಿಸಿದ ಶಾರುಖ್‌ ಖಾನ್‌

Trichy Tour
ಪ್ರವಾಸ27 mins ago

Trichy Tour: ದಾಂಪತ್ಯದ ಲವಲವಿಕೆಯನ್ನು ಮತ್ತೆ ಜೀವಂತಗೊಳಿಸಲು ತಿರುಚಿರಾಪಳ್ಳಿಗೆ ಹೋಗಿ ಬನ್ನಿ!

Money Guide
ಮನಿ-ಗೈಡ್31 mins ago

Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Yamuna Bridge
ವೈರಲ್ ನ್ಯೂಸ್36 mins ago

Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

KKR vs SRH Qualifier 1
ಕ್ರೀಡೆ51 mins ago

KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

Road Accident
ಪ್ರಮುಖ ಸುದ್ದಿ55 mins ago

Road Accident: ಪಿಕ್‌ಅಪ್‌ ವಾಹನ ಕಂದಕಕ್ಕೆ ಬಿದ್ದು 18 ಕಾರ್ಮಿಕರ ದುರ್ಮರಣ; ಕೆಲಸಕ್ಕೆ ಹೊರಟವರು ಮಸಣಕ್ಕೆ!

theft case
ತುಮಕೂರು1 hour ago

Theft Case : ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌