Kidnap Case | ಡೇಟಿಂಗ್ ಆ್ಯಪ್ ತಂದ ಅವಾಂತರ: ಪ್ರಿಯತಮನ ಕಿಡ್ನಾಪ್ ಮಾಡಿ ಹಲ್ಲೆ ಎಸಗಿದ ಪ್ರಿಯತಮೆ - Vistara News

ಕ್ರೈಂ

Kidnap Case | ಡೇಟಿಂಗ್ ಆ್ಯಪ್ ತಂದ ಅವಾಂತರ: ಪ್ರಿಯತಮನ ಕಿಡ್ನಾಪ್ ಮಾಡಿ ಹಲ್ಲೆ ಎಸಗಿದ ಪ್ರಿಯತಮೆ

ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವಕ ಯುವತಿಯೊಂದಿಗೆ ಸಲುಗೆ ಬೆಳೆಸಿದ್ದ. ಇದೀಗ ಪ್ರಿಯತಮೆಯೆ ಯುವಕನನ್ನು ಕಿಡ್ನಾಪ್‌ (Kidnap Case) ಮಾಡಿ ಹಲ್ಲೆ ಮಾಡಿಸಿದ್ದಾಳೆ.

VISTARANEWS.COM


on

Kidnap Case
ಪ್ರಿಯತಮೆ ಕ್ಲಾರಾ ಹಾಗೂ ಪ್ರಿಯಕರ ಮಹದೇವಪ್ರಸಾದ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಪ್ರಿಯತಮೆಯೇ ಪ್ರಿಯತಮನನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಹನುಮಂತನಗರದಲ್ಲಿ ಇಬ್ಬರು ಯುವತಿಯರು ಸೇರಿ 8 ಜನ ಆರೋಪಿಗಳು ಯುವಕನನ್ನು ಕಿಡ್ನಾಪ್‌ (Kidnap Case) ಮಾಡಿ ಹಲ್ಲೆ ಮಾಡಿದ್ದಾರೆ.

ಡೇಟಿಂಗ್ ಆ್ಯಪ್ ಮೂಲಕ ಮಹದೇವ ಪ್ರಸಾದ್ ಮತ್ತು ಕ್ಲಾರಾ ಪರಿಚಯವಾಗಿದ್ದರು. ದಿನಕಳೆದಂತೆ ಒಬ್ಬರಿಗೊಬ್ಬರು ಹತ್ತಿರವಾಗಿದ್ದರು. ನಂತರ ಇಬ್ಬರೂ ಮನೆ ಮಾಡಿಕೊಂಡು ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿ ಇ‌ದ್ದರು. ಸ್ವಲ್‌ ಸಮಯದ ಬಳಿಕ ಇವರಿಬ್ಬರ ನಡುವೆ ಪರಸ್ಪರ ಅನುಮಾನ ಮೂಡಿದೆ. ಆತನಿಗೆ ಕ್ಲಾರಾಗೆ ಬೇರೆ ಅನೈತಿಕ ಸಂಬಂಧ ಇದೆ ಎನ್ನುವ ಸಂಶಯ ಮೂಡಿದರೆ, ಇತ್ತ ಕ್ಲಾರಾಗೂ ಮಹದೇವಪ್ರಸಾದ್‌ಗೆ ಬೇರೆ ಸಂಬಂಧ ಇದೆ ಎಂಬ ಸಂಶಯ ಮೂಡಿತ್ತು.

ಇದನ್ನೂ ಓದಿ | ಡೇಟಿಂಗ್‌ ಆ್ಯಪ್‌ ಬೆಡಗಿಗಾಗಿ 6 ಕೋಟಿ ಕಳಕೊಂಡ ಬ್ಯಾಂಕ್‌ ಮ್ಯಾನೇಜರ್‌!

ಅನುಮಾನದ ಭೂತ ಇಬ್ಬರ ಬಾಂಧವ್ಯವನ್ನು ಹಾಳು ಮಾಡುತ್ತಿದ್ದಂತೆ ಭಿನ್ನಾಭಿಪ್ರಾಯ ಶುರುವಾಗುತ್ತದೆ. ಒಂದು ದಿನ ಅವರಿಬ್ಬರೂ ಬೇರೆಯಾದರು. ಬೇರೆ ಬೇರೆ ಕಡೆ ವಾಸಿಸಲು ಶುರು ಮಾಡುತ್ತಾರೆ. ಕಳೆದ 10 ದಿನದ ಹಿಂದೆ ʻʻಕೊನೆ ಬಾರಿ ನಿನ್ನ ನೋಡಬೇಕುʼʼ ಎಂದು ಮನೆ ಬಳಿ ಕ್ಲಾರಾ ಯುವಕನನ್ನು ಕರೆಸಿಕೊಳ್ಳುತ್ತಾಳೆ. ಆಸೆಯಿಂದ ಮಹದೇವಪ್ರಸಾದ್ 11.30ರ ಸುಮಾರಿಗೆ ಕ್ಲಾರಾಳನ್ನು ನೋಡಬೇಕೆಂದು ಬರುತ್ತಾನೆ. ಆ ಸಂದರ್ಭದಲ್ಲಿ ಆತನನ್ನು ಐದು ಜನ ಯುವಕರು ಮತ್ತು ಇಬ್ಬರು ಮಹಿಳೆಯರು ಸೇರಿ ಕಿಡ್ನಾಪ್‌ ಮಾಡುತ್ತಾರೆ. ನಂತರ ಆತನ ಮೇಲೆ ಹಲ್ಲೆಗೈದು ವಾಪಸ್ಸು ಮನೆಗೆ ತಂದು ಬಿಟ್ಟು ಅಲ್ಲಿಂದ ಪರಾರಿಯಾಗುತ್ತಾರೆ.

ಘಟನೆ ಸಂಬಂಧ ಹನುಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಒಟ್ಟು 8 ಜನ ಆರೋಪಿಗಳಾದ ಲೋಕೇಶ್‌ ಗೌಡ, ಅಶ್ವಥ್‌ ನಾರಾಯಣ್‌, ಹೇಮಾವತಿ ಮತ್ತು ಮನು, ಕಿರಣ್‌,ಮಧು,ಸಂತೋಷ್‌ ಗೌಡ, ಕ್ಲಾರಾನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ | Blackmail Case | ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಮಹಿಳೆಯಿಂದ ಬಿಲ್ಡರ್‌ಗೆ ಬ್ಲ್ಯಾಕ್‌ಮೇಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Phone tapping: ಫೋನ್‌ ಕದ್ದಾಲಿಕೆ ಆಗುತ್ತಿದೆ ಎಂದಾದರೆ ಈ ಬಗ್ಗೆ ಗೃಹ ಸಚಿವರಿಗೆ ಬರವಣಿಗೆ ಮೂಲಕ ದೂರು ಕೊಡಲಿ. ಅವರ ಕಾಲದಲ್ಲೆಲ್ಲ ಮಾಡಿದ್ದರಲ್ಲವೇ? ಯಾರ ಯಾರ ಕಾಲದಲ್ಲಿ ಫೋನ್‌ ಕದ್ದಾಲಿಕೆ ಮಾಡಿದ್ದಾರೆಂಬುದು ಗೊತ್ತಿದೆ. ಅಶೋಕ್‌ ಹೋಮ್ ಮಿನಿಸ್ಟರ್ ಆಗಿದ್ದವರು, ಕೆಲವರು ಚೀಫ್‌ ಮಿನಿಸ್ಟರ್ ಆಗಿದ್ದವರು ಮಾಡಿರುವ ಫೋನ್‌ ಟ್ಯಾಪಿಂಗ್‌ ಬಗ್ಗೆ ನಮಗೂ ರಿಪೋರ್ಟ್‌ ಬಂದಿತ್ತು ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ವಿಧಾನಸಭಾ ವಿಪಕ್ಷ ನಾಯಕ ಆರ್.‌ ಅಶೋಕ್‌ಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Phone tapping case Let Ashok file a complaint to Home Minister DK Shivakumar hits back at phone tapping allegations
Koo

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಕೇಳಿಬಂದಿರುವ ಫೋನ್‌ ಕದ್ದಾಲಿಕೆ (Phone tapping) ಆರೋಪವು ದಿನೇ ದಿನೆ ವಾಕ್ಸಮರಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಮೊದಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದರು. ಬಳಿಕ ಇದಕ್ಕೆ ಧ್ವನಿಗೂಡಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದ್ದರು. ಈಗ ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದು, ಅಶೋಕ್‌ ಅವರಿಗೆ ಗೃಹ ಸಚಿವರಿಗೆ ಬರವಣಿಗೆ ಮೂಲಕ ದೂರು ಕೊಡಲು ಹೇಳಿ ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಸರ್ಕಾರ ಫೋನ್‌ ಕದ್ದಾಲಿಕೆ ಮಾಡುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಕ್ಕೆ ತಿರುಗೇಟು ನೀಡಿದರು.

ಫೋನ್‌ ಕದ್ದಾಲಿಕೆ ಆಗುತ್ತಿದೆ ಎಂದಾದರೆ ಈ ಬಗ್ಗೆ ಗೃಹ ಸಚಿವರಿಗೆ ಬರವಣಿಗೆ ಮೂಲಕ ದೂರು ಕೊಡಲಿ. ಅವರ ಕಾಲದಲ್ಲೆಲ್ಲ ಮಾಡಿದ್ದರಲ್ಲವೇ? ಯಾರ ಯಾರ ಕಾಲದಲ್ಲಿ ಫೋನ್‌ ಕದ್ದಾಲಿಕೆ ಮಾಡಿದ್ದಾರೆಂಬುದು ಗೊತ್ತಿದೆ. ಅಶೋಕ್‌ ಹೋಮ್ ಮಿನಿಸ್ಟರ್ ಆಗಿದ್ದವರು, ಕೆಲವರು ಚೀಫ್‌ ಮಿನಿಸ್ಟರ್ ಆಗಿದ್ದವರು ಮಾಡಿರುವ ಫೋನ್‌ ಟ್ಯಾಪಿಂಗ್‌ ಬಗ್ಗೆ ನಮಗೂ ರಿಪೋರ್ಟ್‌ ಬಂದಿತ್ತು ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ನಿಮ್ಮ ಸುತ್ತ ಮುತ್ತ ಇರುವವರೇ ಮಾಹಿತಿ ನೀಡಿದ್ದಾರೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಬಹಳ ಸಂತೋಷ. ಅವರು ಯಾರು ಯಾರು ಮಾಹಿತಿ ಕೊಟ್ಟಿದ್ದಾರೆಂಬುದರ ಬಗ್ಗೆ ಅಪ್ಡೇಟ್ ಕೊಡುವುದಕ್ಕೆ ಹೇಳಿ ಎಂದು ಮಾಧ್ಯಮವರಿಗೆ ಹೇಳಿದರು.

ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು

ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ. ಅವರು ತಪ್ಪು ಮಾಡಿಲ್ಲ ಎಂದಾದರೆ ಕೂಡಲೇ ಸಿಬಿಐಗೆ ತನಿಖೆ ಹೊಣೆಯನ್ನು ಒಪ್ಪಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಮಂಗಳವಾರ ಮಾಧ್ಯಮದವರ ಮುಂದೆ ಸವಾಲು ಹಾಕಿದ್ದರು.

ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.‌ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ? ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

ಸರ್ಕಾರ ಮಾಡಿಲ್ಲವಾದರೆ ತನಿಖೆಗೆ ಕೊಡಲಿ

ಫೋನ್‌ ಟ್ಯಾಪ್‌ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್‌ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಆರ್‌. ಅಶೋಕ್ ಒತ್ತಾಯಿಸಿದ್ದರು.

Continue Reading

ಕ್ರೈಂ

Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

Murder Case: ಕತ್ತು ಮತ್ತು ಕೈಯನ್ನು ಚಾಕುವಿನಿಂದ ಕುಯ್ದು ಕೊಲೆ ಮಾಡಿದ್ದಾರೆ. ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ ಎಂದು ತಾಯಿ ಅನುಮಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಪೊಲೀಸರು, ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದಾರೆ.

VISTARANEWS.COM


on

prabuddha murder case
Koo

ಬೆಂಗಳೂರು: ರಾಜಧಾನಿಯ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಭುದ್ಧ ಎಂಬ ಯುವತಿಯ ಸಾವಿನ (Girl Death) ಕುರಿತು ಅನುಮಾನಗಳು ಮೂಡಿದ್ದು, ಇದು ಆತ್ಮಹತ್ಯೆ (Self Harming) ಅಲ್ಲ ಕೊಲೆ (Murder Case) ಎಂದು ಪ್ರಬುಧ್ದ ತಾಯಿ ದೂರು ನೀಡಿದ್ದಾರೆ.

ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಈ ಪ್ರಕರಣದಲ್ಲಿ ಸೆಕ್ಷನ್‌ 302 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ 15ನೇ ತಾರೀಕಿನಂದು ಪ್ರಬುಧ್ದ (20) ಸಾವಿಗೀಡಾಗಿದ್ದರು. ಬಾತ್ ರೂಮಿನಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಕಂಡುಬಂದಂತೆ ಇದು ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆತ್ಮಹತ್ಯೆಗೆ ಬಳಸಲಾದ ಚಾಕು ಕೂಡ ಶವದ ಪಕ್ಕದಲ್ಲೇ ಇತ್ತು, ಯಾವುದೇ ವಸ್ತು ಕಳವಾಗಿರಲಿಲ್ಲ. ಮನೆಯ ಮುಂದಿನ ಬಾಗಿಲು ಒಳಗಿನಿಂದ ಲಾಕ್‌ ಆಗಿದ್ದು, ಹಿಂದಿನ ಬಾಗಿಲಿನ ಚಿಲಕ ಹಾಕಿರಲಿಲ್ಲ.

ಆದರೆ ಮಗಳ ಸಾವಿನ‌ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂಥ ಸ್ವಭಾವದವಳಲ್ಲ, ಅದಕ್ಕೆ ಯಾವುದೇ ಕಾರಣವೂ ಇರಲಿಲ್ಲ. ನನ್ನ ಮಗಳನ್ನು ಯಾರೋ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕತ್ತು ಮತ್ತು ಕೈಯನ್ನು ಚಾಕುವಿನಿಂದ ಕುಯ್ದು ಕೊಲೆ ಮಾಡಿದ್ದಾರೆ. ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ ಎಂದು ತಾಯಿ ಅನುಮಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಪೊಲೀಸರು, ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದಾರೆ. ಪೋಸ್ಟ್ ಮಾರ್ಟಂ ವರದಿಗಾಗಿ ಕಾಯಲಾಗುತ್ತಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

ಹುಬ್ಬಳ್ಳಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ (Rameshwaram Cafe Blast) ಸಂಬಂಧ ನಗರದಲ್ಲಿ ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ವಿಚಾರಣೆಗೆ ಗುರಿಪಡಿಸಿದ ನಂತರ ಇಬ್ಬರು ಸಹೋದರರನ್ನು ವಶಕ್ಕೆ ಪಡೆಯಲಾಗಿದೆ.

ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶೋಯಬ್ ಮಿರ್ಜಾ ಹಾಗೂ ಈತನ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ | Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಾಲದ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ.

ಮಂಡ್ಯ: ಸಾಲ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರೂಪೇಶ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಒಂದೂವರೆ ಎಕರೆ ಜಮೀನಿನಲ್ಲಿ ರೈತ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ವಿವಿಧ ಬ್ಯಾಂಕುಗಳು ಹಾಗೂ ಚಿನ್ನಾಭರಣದ ಮೇಲೆ ಒಟ್ಟು 5ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಬೆಳೆಗೆ ನೀರಿಲ್ಲದೆ ನಷ್ಟಕ್ಕೀಡಾಗಿ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Continue Reading

ಬೆಳಗಾವಿ

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

Food Poisoning: ಗ್ರಾಮದಲ್ಲಿ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು‌ ಮಾವಿನ ಹಣ್ಣಿನ ಸೀಕರಣೆಯನ್ನು ಗ್ರಾಮಸ್ಥರು ಸೇವಿಸಿದ್ದರು. ಆದರೆ, ಪ್ರಸಾದ ಸೇವಿಸಿದ ಜನರಲ್ಲಿ ಇಂದು ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ಸ್ಥಳೀಯ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

VISTARANEWS.COM


on

food poisoning savadatthi
Koo

ಬೆಳಗಾವಿ: ಬೆಳಗಾವಿಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆಯ (belagavi news) ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಸಾದದಲ್ಲಿ ಕಲುಷಿತ ಪದಾರ್ಥ (Food Poisoning) ಸೇರಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.

ಗ್ರಾಮದಲ್ಲಿ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು‌ ಮಾವಿನ ಹಣ್ಣಿನ ಸೀಕರಣೆಯನ್ನು ಗ್ರಾಮಸ್ಥರು ಸೇವಿಸಿದ್ದರು. ಆದರೆ, ಪ್ರಸಾದ ಸೇವಿಸಿದ ಜನರಲ್ಲಿ ಇಂದು ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ಸ್ಥಳೀಯ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಸದ್ಯ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ತೀವ್ರ ಅಸ್ವಸ್ಥಗೊಂಡ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಹಿತಕರ ಘಟನೆ ಆಗದಂತೆ ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆಯನ್ನು ತಾಲೂಕು ವೈದ್ಯರು ಮಾಡುತ್ತಿದ್ದಾರೆ.

ಈವರೆಗೂ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಡಿಎಚ್ಓ ಮಾಹಿತಿ ನೀಡಿದ್ದಾರೆ. ಪ್ರಸಾದ ಸೇವಿಸಿದವರಲ್ಲಿ ವಾಂತಿಭೇದಿ ಕಂಡುಬಂದ ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ. ಪ್ರತಿ ಗಂಟೆಗೂ ರೋಗಿಗಳ ಮಾನಿಟರ್ ಮಾಡಲಾಗುತ್ತಿದೆ. ಯಾವುದೇ ರೀತಿಯ ಸಮಸ್ಯೆ ಆಗದಂತೆ ‌ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಎಚ್ಓ ಡಾ.ಮಹೇಶ ಕೋಣಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

ಹುಬ್ಬಳ್ಳಿ: ಬಾಡಿಗೆ ಮನೆಯಲ್ಲಿ ಜೋಡಿಯೊಂದು ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಮನೆಯಿಂದ ದುರ್ವಾಸನೆ ಬರತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಪರಿಶೀಲನೆ ನಡೆಸಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಧಾರವಾಡದ ಟ್ರಾಫಿಕ್‌ ಕಾನ್‌ಸ್ಟೇಬಲ್ ಮಹೇಶ್ ಹೆಸರೂರ (31), ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು. ಬಾಡಿಗೆ ಮನೆಯಲ್ಲಿ ಜೋಡಿ ಆತ್ಮಹತ್ಯೆಗೆ ಶರಣಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಅನೈತಿಕ ಸಂಬಂಧದ ಕಾರಣ ಜೋಡಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ

Boiler Blast

ಚಿಕ್ಕೋಡಿ: ಬಾಯ್ಲರ್ ಸ್ಫೋಟವಾಗಿ ಮಹಿಳೆ ಮೃತಪಟ್ಟು, ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Boiler Blast) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಿಯಾ ಎಕ್ಸ್‌ಪೋರ್ಟ್ಸ್‌ ಕೈಗಾರಿಕಾ ಘಟಕದ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.

ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿವಾಸಿ ಸುನಂದಾ ಸಿದಪ್ಪ ತೇಲಿ (36) ಮೃತರು. ಗಾಯಗೊಂಡವರನ್ನು ಅಥಣಿ ಪಟ್ಟಣದ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗೊಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ: ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೇತುಮಕೂರು ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣಕ್ಕೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಅರ್ಧ ಗಂಟೆಯಾದರೂ ಆಸ್ಪತ್ರೆಯಲ್ಲಿ ವೈದ್ಯರು ಕಂಡುಬಂದಿಲ್ಲ. ಹೀಗಾಗಿ ವ್ಯಕ್ತಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗುತ್ತಿದ್ದು, ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದಾರೆ.

ಇದನ್ನೂ ಓದಿ | Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಸಾಲದ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ.

ಮಂಡ್ಯ: ಸಾಲ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರೂಪೇಶ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಒಂದೂವರೆ ಎಕರೆ ಜಮೀನಿನಲ್ಲಿ ರೈತ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ವಿವಿಧ ಬ್ಯಾಂಕುಗಳು ಹಾಗೂ ಚಿನ್ನಾಭರಣದ ಮೇಲೆ ಒಟ್ಟು 5ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಬೆಳೆಗೆ ನೀರಿಲ್ಲದೆ ನಷ್ಟಕ್ಕೀಡಾಗಿ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Continue Reading

ದೇಶ

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

ರಾಜಸ್ಥಾನದ ಜೈಪುರದಲ್ಲಿ ಮಹಿಳೆಯೊಬ್ಬರು ತಮ್ಮ 22 ವರ್ಷದ ಮಗಳನ್ನೇ ಕೊಂದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಓದುವುದು ಬಿಟ್ಟು, ಮೂರು ಹೊತ್ತೂ ಮೊಬೈಲ್‌ನಲ್ಲಿಯೇ ಮುಳುಗಿರುತ್ತಿದ್ದ ಮಗಳ ಗೀಳನ್ನು ಸಹಿಸದೆ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರಾಡ್‌ನಿಂದ ಬಿದ್ದ ಪೆಟ್ಟಿನಿಂದಾಗಿ ಯುವತಿಯು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

VISTARANEWS.COM


on

Mobile
Koo

ಜೈಪುರ: ಮಕ್ಕಳಿಂದ ಹಿಡಿದು ಹಿರಿಯರವರೆಗೆ, ಅಕ್ಷರಸ್ಥರಿಂದ ಹಿಡಿದು, ಅನಕ್ಷರಸ್ಥರವರೆಗೆ ಬಹುತೇಕ ಮಂದಿ ದಿನದ ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲಿಯೇ (Mobile Addiction) ಕಳೆಯುತ್ತಾರೆ. ಅದರಲ್ಲೂ, ಶಾಲೆ-ಕಾಲೇಜುಗಳಿಗೆ ತೆರಳುವ ಮಕ್ಕಳು ಮೂರು ಹೊತ್ತೂ ಮೊಬೈಲ್‌ನಲ್ಲಿಯೇ ಮುಳುಗಿರುವುದನ್ನು ಕಂಡು ಪೋಷಕರು ಅಸಮಾಧಾನ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಇಷ್ಟಾದರೂ ಮಕ್ಕಳು ಮೊಬೈಲ್‌ನಲ್ಲೇ ತಲ್ಲೀನರಾಗಿರುತ್ತಾರೆ. ಹೀಗೆ, ರಾಜಸ್ಥಾನದಲ್ಲಿ (Rajasthan) ಮೂರು ಹೊತ್ತೂ ಮೊಬೈಲ್‌ ಹಿಡಿದುಕೊಂಡೇ ಕೂತಿರುತ್ತಿದ್ದನ್ನು ಸಹಿಸದ ಮಹಿಳೆಯೊಬ್ಬರು ತಮ್ಮ 22 ವರ್ಷದ ಮಗಳನ್ನೇ ಕೊಂದು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ರಾಜಸ್ಥಾನದ ಜೈಪುರದಲ್ಲಿ ಸೀತಾ ದೇವಿ ಎಂಬ ಮಹಿಳೆಯು ತಮ್ಮ ಮಗಳನ್ನೇ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ನಿಕಿತಾ (22) ಮೃತ ಯುವತಿ. ನಿಕಿತಾ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಳು. ಪರೀಕ್ಷೆಗೆ ಓದು, ಮೊಬೈಲ್‌ ನೋಡುವುದು ಬಿಡು. ಮೂರು ಹೊತ್ತೂ ಮೊಬೈಲ್‌ ಹಿಡಿದರೆ ಪರೀಕ್ಷೆಯಲ್ಲಿ ಹೇಗೆ ತೇರ್ಗಡೆಯಾಗ್ತೀಯಾ ಎಂಬುದಾಗಿ ಸೀತಾ ದೇವಿ ಗದರಿದ್ದಾರೆ. ಇದರಿಂದ ಕುಪಿತಗೊಂಡ ನಿಕಿತಾ, ತಾಯಿಗೆ ಎದುರು ಉತ್ತರ ಕೊಟ್ಟಿದ್ದಾಳೆ. ಆಗ ಇಬ್ಬರ ಮಧ್ಯೆ ಜಗಳ ನಡೆದಿದೆ ಎನ್ನಲಾಗಿದೆ.

Mobile

ರಾಡ್‌ನಿಂದ ಹೊಡೆದಾಡಿಕೊಂಡರು

ಮೂರು ಹೊತ್ತೂ ಮೊಬೈಲ್‌ ನೋಡಬೇಡ ಎಂದಿದ್ದಕ್ಕೆ ನಿಕಿತಾ ರೇಗಿದ್ದಾಳೆ. ಇದರಿಂದ ಸೀತಾ ದೇವಿ ಅವರಿಗೆ ಸಿಟ್ಟು ಬಂದಿದೆ. ಪಕ್ಕದಲ್ಲಿದ್ದ ರಾಡ್‌ ತೆಗೆದುಕೊಂಡು ಮಗಳಿಗೆ ಹೊಡೆದಿದ್ದಾರೆ. ತಾಯಿ ಎಂಬುದನ್ನೂ ಲೆಕ್ಕಿಸದ ಮಗಳು ಕೂಡ ರಾಡ್‌ನಿಂದ ತಾಯಿ ಮೇಲೆ ಹಲ್ಲೆ ನಡೆಸಿದ್ದಾಳೆ. ಇಬ್ಬರೂ ರಾಡ್‌ಗಳಿಂದ ಬಡಿದಾಡಿಕೊಂಡಿದ್ದಾರೆ. ಜೈಪುರದ ಮುಂಡಿಯಾರಮ್ಸಾರ್‌ ಎಂಬ ಗ್ರಾಮದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರೂ ಗಾಯಗೊಂಡ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ನಿಕಿತಾ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ. ಸೀತಾ ದೇವಿ ವಿರುದ್ಧ ಕೊಲೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಧುನಿಕ ಕಾಲಘಟ್ಟದಲ್ಲಿ ಮೊಬೈಲ್‌ ಎಲ್ಲರಿಗೂ ಅವಿಭಾಜ್ಯ ಅಂಗವೇ ಆಗಿದೆ. ಅದರಲ್ಲೂ, ವಿದ್ಯಾರ್ಥಿಗಳಿಗೆ ಮೊಬೈಲ್‌ ಅಚ್ಚುಮೆಚ್ಚಾಗಿದೆ. ಹಾಗೆಯೇ, ಇದು ಶಿಕ್ಷಣಕ್ಕೂ ಅನುಕೂಲ ಕಲ್ಪಿಸಿದೆ. ಆದರೆ, ಮಕ್ಕಳು ಯಾವಾಗಲೂ ಮೊಬೈಲ್‌ ಬಳಸುತ್ತಿದ್ದರೆ, ಅದು ಗೀಳಾಗಿ ಬದಲಾಗಿದ್ದರೆ, ಪೋಷಕರು ಅದರ ಕುರಿತು ಮಕ್ಕಳೊಂದಿಗೆ ಸಮಾಧಾನದಿಂದ ಜಾಗೃತಿ ಮೂಡಿಸಬೇಕು. ಅತಿಯಾಗಿ ಮೊಬೈಲ್‌ ಬಳಸುವುದರಿಂದ ಶಿಕ್ಷಣದ ಮೇಲೆ ಬೀರುವ ಪರಿಣಾಮದ ಮೇಲೆ ತಿಳಿಹೇಳಬೇಕು. ಸಮಾಧಾನದಿಂದ ತಿಳಿಹೇಳದೆ, ಬೈಯುವುದು, ಹೊಡೆಯುವುದು ಮಾಡಿದರೆ ಹಿಂಸೆ, ದುಃಖಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಜೈಪುರದ ಪ್ರಕರಣವೇ ಸಾಕ್ಷಿಯಾಗಿದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Continue Reading
Advertisement
Rakshit Shetty Richard Anthony Produce By Hombale
ಅವಿಭಾಗೀಕೃತ1 second ago

Viral News: ಸಿಂಹದ ಹಿಂಡನ್ನೇ ಹಿಮ್ಮೆಟ್ಟಿಸಿದ ಕಾಡುಕೋಣಗಳು; ರೋಮಾಂಚನಕಾರಿ ವಿಡಿಯೊ ನೀವೂ ನೋಡಿ

Rishab shetty family visit Hariharpur Narasimhaswamy
ಸ್ಯಾಂಡಲ್ ವುಡ್18 mins ago

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

nisha cp yogeshwara
ವೈರಲ್ ನ್ಯೂಸ್23 mins ago

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

Nandini Milk No incentives for milk producers Ashok slams govt for sponsoring foreign cricket team
ರಾಜಕೀಯ29 mins ago

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Viral video
ವೈರಲ್ ನ್ಯೂಸ್39 mins ago

Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

AR Rahman says his mother thought his Oscar statuettes were made of gold
ಬಾಲಿವುಡ್43 mins ago

AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

Phone tapping case Let Ashok file a complaint to Home Minister DK Shivakumar hits back at phone tapping allegations
ರಾಜಕೀಯ53 mins ago

Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Cannes 2024 Chidananda S Naik bows in Cannes with Kannada folk tale
ಸಿನಿಮಾ1 hour ago

Cannes 2024: ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಕನ್ನಡದ ಕಿರು ಚಿತ್ರ ಪ್ರದರ್ಶನ

Turbulence
ವಿದೇಶ2 hours ago

Singapore Airlines: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ: ಇಲ್ಲಿದೆ ನೋಡಿ ಭೀಕರತೆಯನ್ನು ಸಾರುವ ಫೋಟೊಗಳು

MDH, Everest Spices
ದೇಶ2 hours ago

MDH, Everest Spices: ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳಲ್ಲಿ ಮಾರಕ ರಾಸಾಯನಿಕ ಇಲ್ಲ; FSSAI ವರದಿಯಲ್ಲಿ ಬಯಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌