Ganesh Chaturthi 2022 | ಗಣಪತಿಗೆ ಇಷ್ಟವಾದ ಮೋದಕ, ಲಡ್ಡು, ಕಜ್ಜಾಯ ಮಾಡುವುದು ಹೀಗೆ - Vistara News

ಗಣೇಶ ಚತುರ್ಥಿ

Ganesh Chaturthi 2022 | ಗಣಪತಿಗೆ ಇಷ್ಟವಾದ ಮೋದಕ, ಲಡ್ಡು, ಕಜ್ಜಾಯ ಮಾಡುವುದು ಹೀಗೆ

ಗಣಪತಿ ಹಬ್ಬದಂದು (Ganesh Chaturthi 2022) ನೈವೇದ್ಯಕ್ಕೆ ಮೋದಕ ಬೇಕೇ ಬೇಕು. ಅಂತೆಯೇ ಕಡುಬು, ಕಜ್ಜಾಯ, ಲಡ್ಡು ಇಲ್ಲದಿದ್ದರೆ ಹೇಗೆ? ಇವುಗಳನ್ನೆಲ್ಲಾ ಮನೆಯಲ್ಲಿಯೇ ಮಾಡಲು ರೆಸಿಪಿ (recipes) ಇಲ್ಲಿದೆ.

VISTARANEWS.COM


on

Ganesh Chaturthi 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಣಪತಿ ಹಬ್ಬ ಬಂದಿದೆ (Ganesh Chaturthi 2022). ಗಣಪತಿ ತಿಂಡಿ ಪೋತ. ಸಿಕ್ಕಿದ್ದನ್ನೆಲ್ಲಾ ತಿಂದು ಹೊಟ್ಟೆ ಒಡೆದುಕೊಂಡಾತ! ಹೀಗಾಗಿ ಗಣಪತಿ ಹಬ್ಬದಂದು ಆತನಿಗೆ ಬಗೆ ಬಗೆಯ ತಿನಿಸುಗಳನ್ನು ಸಿದ್ಧಪಡಿಸಿ, ನೈವೇದ್ಯ ಮಾಡುವುದು ವಾಡಿಕೆ.

ಗಣಪತಿಗೆ ಮೋದಕ ಎಂದರೆ ಬಹಳ ಇಷ್ಟ. ಕೈಯಲ್ಲಿಯೇ ಅದನ್ನು ಹಿಡಿದುಕೊಂಡು ಕುಳಿತಿದ್ದಾನೆ! ಹೀಗಾಗಿ ಹಬ್ಬದಲ್ಲಿ ನೈವೇದ್ಯಕ್ಕೆ ಮೋದಕ ಇರಲೇಬೇಕು. ಇನ್ನು ಕಡುಬು, ಉಂಡೆ (ಲಡ್ಡು), ಕಜ್ಜಾಯ ಎಂದರೆ ಬಹಳ ಪ್ರೀತಿ. ಮೋದಕದ ಜತೆಗೆ ಇವೆಲ್ಲವನ್ನೂ ಮಾಡಿ ಗಣಪತಿ ಹಬ್ಬದಂದು ನೈವೇದ್ಯ ಮಾಡಲಾಗುತ್ತದೆ. ಗಣೇಶನಿಗೆ ಪ್ರಿಯವಾದ ಈ ತಿನಿಸುಗಳನ್ನು ಮಾಡುವುದು ಹೇಗೆ? ರೆಸಿಪಿ ಇಲ್ಲಿದೆ.

ಮೋದಕ ಮಾಡುವುದು ಹೇಗೆ?
ಬೇಕಾಗುವ ಸಾಮಗ್ರಿ: ಮೈದಾ ಹಿಟ್ಟು- 1/4 ಕೆ.ಜಿ, ಚಿರೋಟಿ ರವೆ 50 ಗ್ರಾಂ, ಸಾಟಿ ಜಿಡ್ಡು- 2 ಟೇಬಲ್ ಸ್ಪೂನ್, ಕರಿಯಲು ಎಣ್ಣೆ- 1/2 ಕೆ.ಜಿ.

ಮಾಡುವ ವಿಧಾನ: ಮೊದಲು ಕಣಕ ಮಾಡಿಟ್ಟುಕೊಳ್ಳಿ. ಮೈದಾ, ರವೆ ಸೇರಿಸಿ ಕಾಯಿಸಿದ ಜಿಡ್ಡನ್ನು ಸೇರಿಸಿ. ಚೆನ್ನಾಗಿ ನೀರುಹಾಕಿ ಪೂರಿ ಹಿಟ್ಟಿನ ಹದಕ್ಕೆ ಕಲಸಿರಿ. ಚೆನ್ನಾಗಿ ನಾದಿ 1/2ಗಂಟೆ ಬಿಡಿ. ಈಗ ಕಣಕ ತಯಾರಾಗುತ್ತದೆ. ಹುರಿಗಡಲೆ, ಬೆಲ್ಲಗಳನ್ನು ಮಿಕ್ಸಿಯಲ್ಲಿ ಅರೆದು ಅದಕ್ಕೆ ತೆಂಗಿನ ತುರಿ, ಏಲಕ್ಕಿ ಪುಡಿ ಬೆರೆಸಿದರೆ ಹೂರಣ ತಯಾರಾಗುತ್ತದೆ.

ನಿಂಬೆ ಗಾತ್ರದ ಕಣಕವನ್ನು ಪೂರಿಯ ಹದಕ್ಕೆ ಲಟ್ಟಿಸಿ, ಒಳಗೆ ಹೂರಣ ಇಟ್ಟು ಮೇಲ್ಭಾಗಕ್ಕೆ ತಿರುವಿ ಮುಚ್ಚಿ. ಅದನ್ನು ಕಾದ ಎಣ್ಣೆಯಲ್ಲಿ ಕರಿಯಿರಿ. ಬಸಿ ಪಾತ್ರೆಯಲ್ಲಿ ಹಾಕಿ, ತೆಗೆದಿರಿಸಿ. ಗಣಪನಿಗೆ ನಿವೇದಿಸಿ, ಪ್ರಸಾದವಾಗಿ ಸ್ವೀಕರಿಸಿ.

Ganesh Chaturthi 2022

ಮೋದಕ ಹೀಗೂ ಮಾಡಬಹುದು

ಬೇಕಾಗುವ ಸಾಮಾಗ್ರಿ: ಒಂದೂವರೆ ಕಪ್ ತೆಂಗಿನ ಹಾಲು, ಗೋಡಂಬಿ, ಚಿರೋಟಿ ರವೆ ಅಥವಾ ಅಕ್ಕಿ ಹಿಟ್ಟು, ಸ್ವಲ್ಪ ಗೋದಿ ಹಿಟ್ಟು, ತೆಂಗಿನ ಹಾಲು, ಪಿಸ್ತಾ, ಏಲಕ್ಕಿ, ಬೆಲ್ಲ ತುಪ್ಪ, ಚಿಟಿಕೆ ಉಪ್ಪು, ತೆಂಗಿನ ಹೂರ್ಣ.

ಮಾಡುವ ವಿಧಾನ: ಕಡಿಮೆ ಉರಿಯಲ್ಲಿ ನೀರು ಕುದಿಸಿ, ಅದರಲ್ಲಿ ಅಕ್ಕಿಹಿಟ್ಟು ಅಥವಾ ಚಿರೋಟಿ ರವೆ, ಸ್ವಲ್ಪ ಗೋಧಿ ಹಿಟ್ಟು ಹಾಕಿ ಸ್ವಲ್ಪ ಬೇಯಿಸಿಕೊಳ್ಳಿ. ಅದಕ್ಕೆ ತೆಂಗಿನ ಹಾಲನ್ನು ಅಲ್ಪ ಪ್ರಮಾಣದಲ್ಲಿ ಹಾಕಿ ಮಿಶ್ರಣ ಮಾಡಿ ಗಟ್ಟಿಯಾಗಿ ನಾದಿಕೊಳ್ಳಿ. ಕಾಯಿ ಹಾಲು ಹಾಕಿ ಹಿಟ್ಟನ್ನು ಕಲಸಿಕೊಂಡರೆ ಕಣಕ ತಯಾಗಿರುತ್ತದೆ.

ನಂತರ ತೆಂಗಿನಕಾಯಿ ತುರಿಗೆ ಬೆಲ್ಲವನ್ನು ಹಾಕಿ,ಪಿಸ್ತಾ, ಗೋಡಂಬಿ ಹಾಕಿ ಬೇಯಿಸಿ ಹೂರಣ ತಯಾರಿಸಿಕೊಳ್ಳಿ. ಮಿಶ್ರಣ ಮಾಡಿದ ಹಿಟ್ಟನ್ನು ಸಣ್ಣದಾಗಿ ಲಟ್ಟಿಸಿ ಅದಕ್ಕೆ ಕಾಯಿ ಹೂರಣ ತುಂಬಿ ಮೋದಕ ತಯಾರಿಸಿಕೊಳ್ಳಿ. ನಂತರ ಕಾದ ಎಣ್ಣೆಗೆ ಹಾಕಿ ಹೊಂಬಣ್ಣ ಬರುವ ತನಕ ಮಂದ ಉರಿಯಲ್ಲಿ ಕರಿಯಬೇಕು. ನಂತರ ಬಸಿ ಪಾತ್ರೆಯಲ್ಲಿ ಹಾಕಿ, ತೆಗೆದಿರಿಸಿ. ಗಣಪನಿಗೆ ನಿವೇದಿಸಿ, ಪ್ರಸಾದವಾಗಿ ಸ್ವೀಕರಿಸಿ.

ಚೂರ್ಮ ಲಡ್ಡು ತಯಾರಿಸಿ
ಬೇಕಾಗುವ ಸಾಮಾಗ್ರಿ: ಚೂರ್ಮ ಲಡ್ಡು ತಯಾರಿಸಲು ಕಡಲೆ ಹಿಟ್ಟು 3 ಕಪ್, ಎಳ್ಳು 4-5 ಚಮಚ ಸ್ಪೂನ್, ತೆಂಗಿನ ತುರಿ 1ಕಪ್, ಬೆಲ್ಲ ಒಂದೂವರೆ ಕಪ್, 8-9 ಟೇಬಲ್ ಸ್ಪೂನ್ ತುಪ್ಪ, ಸ್ವಲ್ಪ ಗೋಡಂಬಿ ಬೇಕು.

Ganesh Chaturthi 2022

ಮಾಡುವ ವಿಧಾನ: ದೊಡ್ಡ ಪಾತ್ರೆಗೆ ಕಡಲೆ ಹಿಟ್ಟನ್ನು ಹಾಕಿ, ಅದಕ್ಕೆ ಸ್ವಲ್ಪ ನೀರು ಸೇರಿಸಿ ಕಲೆಸಿ, ಮಿಶ್ರಣ ತರಿ ತರಿಯಾಗಿರಲಿ. ನಂತರ 2 ಚಮಚ ತುಪ್ಪವನ್ನು ಬಾಣಲೆಗೆ ಹಾಕಿ ಬಿಸಿ ಮಾಡಿ, ತುಪ್ಪ ಬಿಸಿಯಾದಾಗ ಅದರಲ್ಲಿ ಕಡಲೆ ಹಿಟ್ಟು ಹಾಕಿ ಹುರಿಯಿರಿ. ಒಂದು ಪಾತ್ರೆಯಲ್ಲಿ ಹಾಕಿಡಿ. ಈಗ ಅದೇ ಪ್ಯಾನ್‌ಗೆ ಒಂದು ಚಮಚ ತುಪ್ಪ ಹಾಕಿ ಅದರಲ್ಲಿ ಎಳ್ಳು ಮತ್ತು ತೆಂಗಿನ ತುರಿ ಹಾಕಿ ಕಡಿಮೆ ಉರಿಯಲ್ಲಿ 4-5 ನಿಮಿಷ ಹುರಿಯಿರಿ.

ನಂತರ ಅದನ್ನು ತೆಗೆದು ಮತ್ತೊಂದು ಬಟ್ಟಲಿನಲ್ಲಿ ಇಡಿ. ನಂತರ ಉಳಿದ ತುಪ್ಪವನ್ನು ಬಾಣಲೆಗೆ ಹಾಕಿ ಅದಕ್ಕೆ ಬೆಲ್ಲ ಹಾಕಿ ರಡು ನಿಮಿಷ ಬಿಸಿ ಮಾಡಿ ಮತ್ತು ಸ್ವಲ್ಪ ಬೆಲ್ಲ ಹಾಕಿ ಬೆಲ್ಲ ಕರಗುವಷ್ಟು ಹೊತ್ತು ಬಿಸಿ ಮಾಡಿ. ಈಗ ಹುರಿದಿಟ್ಟ ಕಡಲೆಹಿಟ್ಟು, ಎಳ್ಳು, ತೆಂಗಿನ ತುರಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ, ಉರಿಯಿಂದ ಇಳಿಸಿ. ನಂತರ ಕೈಗೆ ತುಪ್ಪ ಸವರಿಕೊಂಡು ಆ ಮಿಶ್ರಣದಿಂದ ಚಿಕ್ಕ ಚಿಕ್ಕ ಉಂಡೆ ಕಟ್ಟಿ, ನಂತರ ಅದನ್ನು ಗೋಡಂಬಿಯಿಂದ ಅಲಂಕರಿಸಿದರೆ ರುಚಿಯಾದ ಲಡ್ಡು ಗಣಪತಿಯ ನೈವೇದ್ಯಕ್ಕೆ ಸಿದ್ಧ.

ಬೂಂದಿ ಲಡ್ಡು ಮಾಡಿ
ಬೇಕಾಗುವ ಸಾಮಾಗ್ರಿ: ಬೂಂದಿ ಲಡ್ಡು ತಯಾರಿಸಲು ಎರಡೂವರೆ ಕಪ್ ಕಡಲೆ ಹಿಟ್ಟು, ಅರ್ಧ ಲೀಟರ್ ಹಾಲು, ಅರ್ಧ ಚಮಚ ಏಲಕ್ಕಿ ಪುಡಿ, ಮೂರು ಕಪ್ ತುಪ್ಪ, ಬಾದಾಮಿ ಚೂರುಗಳು, ಬೇಕಿದ್ದರೆ ಪಿಸ್ತಾ ಚೂರನ್ನು ಬಳಸಿ
ಕೊಳ್ಳಬಹುದು. ಪಾಕ ತಯಾರಿ ಸಲು ಎರಡೂವರೆ ಕಪ್ ಸಕ್ಕರೆ, ಮೂರೂವರೆ ಕಪ್ ನೀರು, ಎರಡು ಚಮಚ
ಹಾಲು, ಕೇಸರಿ ಬಣ್ಣ.

ಮಾಡುವ ವಿಧಾನ: ಲಾಡು ತಯಾರಿಸಲು ಮೊದಲು ಪಾಕವನ್ನು ತಯಾರಿಸಿಟ್ಟು ಕೊಳ್ಳ ಬೇಕು. ನೀರನ್ನು ಕಾಯಲು ಇಟ್ಟು ಸಕ್ಕರೆ ಹಾಕಿ ಅದು ಕರಗುವ ತನಕವೂ ಕಾಯಿಸಬೇಕು. ಅದಕ್ಕೆ ಎರಡು ಚಮಚ ಹಾಲು ಬೆರೆಸಿ ಮೂರ್ನಾಲ್ಕು ನಿಮಿಷ ಕಾಯಿಸಬೇಕು. ಮೇಲೆ ನೊರೆ ಏಳಲು ಆರಂಭಿಸುತ್ತಿದ್ದಂತೆ ಚೆನ್ನಾಗಿ ತಿರುಗಿಸಿ ಮತ್ತೆ ಕಾಯಿಸ ಬೇಕು. ಇದಕ್ಕೆ ಏಲಕ್ಕಿ ಪುಡಿ ಮತ್ತು ಕೇಸರಿ ಬಣ್ಣ ಸೇರಿಸಿ ಪಾಕವನ್ನು ಇಟ್ಟುಕೊಳ್ಳಬೇಕು.

Ganesh Chaturthi 2022

ಕಡಲೆಹಿಟ್ಟು ಮತ್ತು ಹಾಲನ್ನು ತೆಳ್ಳನೆ ಹಿಟ್ಟಿನಂತೆ ಕಲೆಸಿಕೊಳ್ಳಬೇಕು. ಬಾಣಲೆಗೆ ತುಪ್ಪ ಹಾಕಿ ಕಾಯಿಸಿ, ಬೆರೆಸಿರುವ ಕಡಲೆ ಹಿಟ್ಟನ್ನು ಸಣ್ಣ ತೂತುಗಳಿರುವ ಹಿಡಿ (ಬೂಂದಿ ತಯಾರಿಸುವಂತಹ ಹಿಡಿ) ಮೂಲಕ ಬಾಣಲೆಗೆ ಸಣ್ಣ ಸಣ್ಣ ಉಂಡೆಗಳಾಗಿ ಬೀಳುವಂತೆ ನೋಡಿ ಕೊಳ್ಳಬೇಕು. ಬೂಂದಿ ಕೆಂಬಣ್ಣಕ್ಕೆ ತಿರುಗುವ ತನಕ ಬೇಯಿಸಿ ತೆಗೆಯಬೇಕು.
ಕರಿದ ಬೂಂದಿಯನ್ನು ಪಾಕಕ್ಕೆ ಹಾಕಿ ಮತ್ತೆ ಎತ್ತಿ ತಟ್ಟೆಯ ಮೇಲೆ ಆರಲು ಬಿಡಬೇಕು. ಅದಕ್ಕೆ ಬಾದಾಮಿ, ಪಿಸ್ತಾ ಚೂರುಗಳನ್ನು ಸೇರಿಸಿ, ಒಂದೈದು ನಿಮಿಷದ ನಂತರ ಬೂಂದಿಗೆ ಸ್ವಲ್ಪ ಬಿಸಿ ನೀರು ಚುಮುಕಿಸಿ ತೇವದ ಕೈಗಳಲ್ಲಿ ಉಂಡೆ ಕಟ್ಟಬೇಕು. ಈ ಉಂಡೆಯನ್ನು ಗಣಪತಿಗೆ ಅರ್ಪಿಸಿದರೆ ಆತನಿಗೆ ಬಹಳ ಇಷ್ಟವಾಗುತ್ತದೆ.

ಕಜ್ಜಾಯ ಮಾಡುವುದು ಹೀಗೆ
ಬೇಕಾಗುವ ಸಾಮಗ್ರಿ: ಒಂದು ಕೆಜಿ ದಪ್ಪ ಅಕ್ಕಿ, ಒಂದು ಕೆಜಿ ಬೆಲ್ಲ, 1/4 ಕೆಜಿ ಬಿಳಿ ಎಳ್ಳು, ಅರ್ಧ ಒಣಕೊಬ್ಬರಿ, 1/4 ಕೆಜಿ ಚಿರೋಟಿ ರವೆ.

ಮಾಡುವ ವಿಧಾನ: ಅಕ್ಕಿಯನ್ನು 36 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ಅಂದ್ರೆ ಸುಮಾರಾಗಿ ಇಂದು ಬೆಳಿಗ್ಗೆ ನೆನೆಸಿದರೆ, ಮಾರನೇ ದಿನ ಸಂಜೆವರೆಗೆ ಇಡಬೇಕು. ನಂತರ ನೀರನ್ನೆಲ್ಲಾ ಒಂದು ಬಟ್ಟೆಯಲ್ಲಿ ಬಸಿದು ತೆಗೆದು, ಬಟ್ಟೆ ಹಾಸಿ ನೆಲದ ಮೇಲೆ ಗಾಳಿಗೆ ಹರಡಬೇಕು. ಅಕ್ಕಿಯಲ್ಲಿರುವ ತೇವಾಂಶಗಳೆಲ್ಲಾ ಆರಿದ ಮೇಲೆ ಮಿಕ್ಸಿ ಮಾಡಿ ಜರಡಿ ಹಿಡಿಯಿರಿ. ತರಿತರಿಯಾಗಿದ್ದರೂ ಆಗುತ್ತದೆ.

ಇದಕ್ಕೆ ಒಣಕೊಬ್ಬರಿ, ಎಳ್ಳು ಪುಡಿ ಮಾಡಿ, ರವೆ ಹಾಕಿ ಬೆರೆಸಿಕೊಳ್ಳಿ. ಬೆಲ್ಲವನ್ನು ಪುಡಿ ಮಾಡಿಕೊಂಡು ಇದಕ್ಕೆ 4-5 ಚಮಚ ನೀರು ಹಾಕಿ ದಪ್ಪ ತಳದ ಪಾತ್ರೆಯಲ್ಲಿ ಪಾಕ ಮಾಡಲು ಒಲೆಯ ಮೇಲಿಡಿ. ಪಾಕ ಬೆರಳಲ್ಲಿ ಹಿಡಿದು ನೋಡಿ. ಅಂಟು ಅಂಟಾದಾಗ ಇದಕ್ಕೆ ಬೆರೆಸಿಕೊಂಡ ಅಕ್ಕಿ ಹಿಟ್ಟನ್ನು ಹಾಕಿ ಚೆನ್ನಾಗಿ ಕಲಸಿ. ಗಂಟಾಗದಂತೆ ಕಲಸಿ ಬೇಯಿಸಿ. ಸಣ್ಣ ಉರಿಯಲ್ಲಿ ಬೇಯಿಸಬೇಕು. ತಳ ಹತ್ತದಂತೆ ತಿರುಗಿಸುತ್ತಿರಬೇಕು. ಸ್ವಲ್ಪ ಹೊತ್ತಾದ ನಂತರ, ನೀರಿನಲ್ಲಿ ಕೈಯನ್ನು ಅದ್ದಿ ಇದನ್ನು ಮುಟ್ಟಿ ನೋಡಿ. ಕೈಗೆ ಕಜ್ಜಾಯದ ಹಿಟ್ಟು ಅಂಟದಿದ್ದರೆ ಬೆಂದಿದೆ ಎಂದರ್ಥ. ಆಗ ಕೆಳಗಿಳಿಸಿ ತಣ್ಣಗಾಗಲು
ಬಿಡಿ. ನಂತರ ಒದ್ದೆ ಕೈಯಲ್ಲಿ ಹಿಟ್ಟನ್ನು ತೆಗೆದುಕೊಂಡು ಶುಭ್ರವಾದ ಒದ್ದೆ ಬಟ್ಟೆಯ ಮೇಲೆ ಅಂಗೈಯಗಲ ದಪ್ಪಗೆ ತಟ್ಟಿ ಕಾದ ಎಣ್ಣೆಯಲ್ಲಿ ಕರಿಯಿರಿ. ಕಂದು ಬಣ್ಣ ಬಂದಾಗ ತೆಗೆಯಿರಿ.

ಸಿಹಿಕುಂಬಳಕಾಯಿ ಹಾಗೂ ಬಾಳೆಹಣ್ಣು ಬಳಸಿಯೂ ಕಜ್ಜಾಯ ಮಾಡಬಹುದು. ಗಣೇಶನಿಗೆ ಪ್ರಿಯವಾದ ತಿಂಡಿಗಳಲ್ಲಿ ಕಜ್ಜಾಯವೂ ಒಂದು. ನೀವು ಮಾಡಿದ ಕಜ್ಜಾಯ ಗಣೇಶನಿಗೆ ಖಂಡಿತಾ ಇಷ್ಟವಾಗುತ್ತದೆ.

ಇದನ್ನೂ ಓದಿ |Krishna Janmashtami̇ 2022 | ತಿಂಡಿ ಪ್ರಿಯ ಶ್ರೀಕೃಷ್ಣನಿಗೆ ನಿಮ್ಮ ಮನೆಯಲ್ಲಿ ಯಾವ ಉಂಡೆ ಮಾಡುವಿರಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಗಣಪತಿ ವಿಸರ್ಜನೆ ಮಾಡುವಾಗ ನೀರಲ್ಲಿ ಮುಳುಗಿ ಬಾಲಕ ಸಾವು

Drowned in River : ಸ್ನೇಹಿತರೊಂದಿಗೆ ಗಣೇಶ ವಿಸರ್ಜನೆ (Ganesha chaturthi) ಮಾಡುವಾಗ ಬಾಲಕನೊರ್ವ ಹಳ್ಳದಲ್ಲಿ ನೀರಿನ ಆಳ ಅರಿಯದೇ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

VISTARANEWS.COM


on

By

nishal tej
ಮೃತ ಬಾಲಕ ನಿಶಾಲ್‌ ತೇಜ್
Koo

ಚಿಕ್ಕಬಳ್ಳಾಪುರ : ಇಲ್ಲಿನ ಚಿಕ್ಕಕಾಡಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀರಾಮಕುಂಟೆ ಹಳ್ಳದಲ್ಲಿ (Drowned) ಗಣಪತಿ ವಿಸರ್ಜನೆ (Ganesha chathurthi) ಮಾಡಲು ಹೋಗಿ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಡಶೀಗೇನಹಳ್ಳಿ ಗ್ರಾಮದ ನಿಶಾಲ್ ತೇಜ್ (12) ಮೃತ ಬಾಲಕ.

ಸೆ.29ರಂದು ಸ್ನೇಹಿತರೊಂದಿಗೆ ನಿಶಾಲ್‌ ತೇಜ್‌ ಗಣಪತಿ ವಿಸರ್ಜನೆಗೆ ತೆರಳಿದ್ದ. ಈ ವೇಳೆ ಗಣೇಶ ವಿಸರ್ಜನೆ ಮಾಡುವ ಉತ್ಸಾಹದಲ್ಲಿ ಹಳ್ಳದ ಆಳ ಅರಿಯದೇ ನೀರಿಗೆ ಇಳಿದಿದ್ದಾನೆ. ಆದರೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಆತನ ಮೃತದೇಹವು ಕೂಗಳತೆ ದೂರದಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Doctor death : ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯೆ ನಿಗೂಢ ಸಾವು; ಪಕ್ಕದಲ್ಲೇ ಸಿರಿಂಜ್‌ ಪತ್ತೆ!

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿ ದಾರುಣ ಸಾವು

ಹಾಸನ: ಇಲ್ಲಿನ ಅರಕಲಗೂಡು ತಾಲ್ಲೂಕಿನ ಮಧುರನಹಳ್ಳಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಆಟವಾಡುವಾಗ ಬಾಲಕಿ ಕಾಲು ಜಾರಿ ನಾಲೆ ಬಿದ್ದು (Drowned In Canal) ಮೃತಪಟ್ಟಿರುವ ಘಟನೆ ನಡೆದಿದೆ. ಸುಪ್ರೀತಾ (5) ಮೃತ ದುರ್ದೈವಿ.

ಗ್ರಾಮದ ರೇವಣ್ಣ-ಭಾಗ್ಯ ದಂಪತಿ ಪುತ್ರಿ ಸುಪ್ರೀತಾ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇತ್ತು. ಹೀಗಾಗಿ ಗ್ರಾಮದ ಸಮೀಪವಿರುವ ನಾಲೆಯ ಬಳಿ ಸ್ನೇಹಿತರೊಂದಿಗೆ ಸುಪ್ರೀತಾ ಆಟವಾಡುತ್ತಿದ್ದಳು. ಈ ವೇಳೆ ಅಚಾನಕ್‌ ಆಗಿ ಕಾಲುಜಾರಿ ನಾಲೆಗೆ ಬಿದ್ದಿದ್ದಾಳೆ. ನಾಲೆಯಲ್ಲಿ ಹರಿಯುತ್ತಿದ್ದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ಹಾರಂಗಿ ಬಲದಂಡೆ ನಾಲೆಯಲ್ಲಿ ಮುಳುಗಿರುವ ಬಾಲಕಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಈಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿ 6 ಕಿ.ಮೀವರೆಗೂ ಶೋಧಕಾರ್ಯ ನಡೆಸಿದ್ದಾರೆ. ಆದರೆ ಮೃತದೇಹವು ಪತ್ತೆಯಾಗಿಲ್ಲ. ಹಳ್ಳಿ ಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Tumkur News : ತುಮಕೂರಲ್ಲಿ ಗಣೇಶ ವಿಸರ್ಜನೆ (Ganesh Chaturthi) ವೇಳೆ ಪ್ರಸಾದ ಸೇವಿಸಿದ 20ಕ್ಕೂ ಹೆಚ್ಚು ಜನರು (Food Poisoning) ಅಸ್ವಸ್ಥಗೊಂಡಿದ್ದಾರೆ. ಹಲವರು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

By

Food Poisoning
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು
Koo

ತುಮಕೂರು: ಇಲ್ಲಿನ ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.24) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

6 ಮಂದಿ ಆರೋಗ್ಯವು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20ಕ್ಕೂ ಹೆಚ್ಚು ಜನರಿಗೆ ಗೂಳೂರು ಪ್ರಾಥಮಿಕ ವೈದ್ಯರಿಂದ ಗ್ರಾಮದಲ್ಲೇ ಚಿಕಿತ್ಸೆ ಮುಂದುವರಿದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 54 ಮನೆಗಳಿದ್ದು, ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಿನ್ನೆ ಬೆಳಗ್ಗೆ (ಸೆ.25) 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ವೇಳೆ ಎಚ್ಚತ್ತ ಆರೋಗ್ಯ ಅಧಿಕಾರಿಗಳು ವೈದ್ಯರ ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಇದುವರೆಗೆ ಸುಮಾರು 28ಮಂದಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡಿರುವವರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಅಣಬೆ ಸೇವಿಸಿದ್ದ ಬಗ್ಗೆಯೂ ಶಂಕೆ ಇದೆ. ಮೇಲ್ನೋಟಕ್ಕೆ ಕುಡಿಯುವ ನೀರು ಕಲುಷಿತಗೊಂಡಿರಬಹುದು, ಆಹಾರದಲ್ಲಿ ವ್ಯತ್ಯಾಸಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಬಳಿಕ ಪ್ರಕರಣದ ಸತ್ಯಸಂಗತಿ ಹೊರಬರಲಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಆತಂಕವು ಹೆಚ್ಚಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಗಣೇಶ ಚತುರ್ಥಿ

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi : ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ವಾಹನ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.

VISTARANEWS.COM


on

By

Ganesh Chaturthi Vehicular traffic on this route to be restricted tomorrow
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Ganesh Chaturthi: ನಾಳೆ ಗಣೇಶ ಮೂರ್ತಿಗಳ ವಿಸರ್ಜನೆ; ‌ಬೆಂಗಳೂರಿನ ಹಲವೆಡೆ ರಸ್ತೆ ಮಾರ್ಗ ಬದಲಾವಣೆ

Ganesh Chaturthi: ಬೆಂಗಳೂರಿನ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸೆ.21ರಂದು ಸಂಜೆ 6 ಗಂಟೆಯಿಂದ ಸೆ.22 ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

VISTARANEWS.COM


on

Ganesh visarjan
Koo

ಬೆಂಗಳೂರು: ನಗರದಲ್ಲಿ ಸೆ.21ರಂದು ಗಣೇಶ ಮೂರ್ತಿಗಳ ವಿಸರ್ಜನೆ (Ganesh Chaturthi) ‌ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸುಗಮ ಸಂಚಾರಕ್ಕಾಗಿ ಹಲವೆಡೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಗುರುವಾರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಅದ್ದರಿಂದ ವಾಹನ ಸವಾರರು ಬದಲಿ‌ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ | Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ಎಲ್ಲಾ ಮಾದರಿಯ ವಾಹನಗಳು ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದ್ದು, ಇದಕ್ಕಾಗಿ ಸಂಚಾರ ಪೋಲಿಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸೂಕ್ತ ಸ್ಥಳಗಳಲ್ಲಿ ಅಧಿಕಾರಿಗಳ ನಿಯೋಜನೆ ಮತ್ತು ಬಂದೋಬಸ್ತ್ ಮಾಡಲಾಗಿದೆ.

ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾದ ರಸ್ತೆಗಳ ವಿವರ

  1. ದಿಣ್ಣೂರು ಮುಖ್ಯರಸ್ತೆ
  2. ಆರ್.ಟಿ ನಗರ ಮುಖ್ಯರಸ್ತೆ.
  3. ಸಿಬಿಐ ಮುಖ್ಯರಸ್ತೆ.

ಮಾರ್ಗ ಬದಲಾವಣೆ ವಿವರಗಳು

1.ಸುಲ್ತಾನ್ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್‌ಮೆಂಟ್ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್‌-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ – ಎಡ ತಿರುವು- ಟಿ.ವಿ ಟವರ್ – ಎಡ ತಿರುವು-ಜಯಮಹಲ್ ಮುಖ್ಯರಸ್ತೆ- ರಸ್ತೆಯಲ್ಲಿ ನೇರವಾಗಿ ಕಂಟೋನೆಂಟ್ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

2.ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ -ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ -ಬಲ ತಿರುವು- ಮಠದಹಳ್ಳಿ ಮುಖ್ಯರಸ್ತೆ- ಗುಂಡೂರಾವ್ ಸರ್ಕಲ್ – ಎಡ ತಿರುವು – ತರಳಬಾಳು ರಸ್ತೆ – ಎಡತಿರುವು- ಬೆಂಗಳೂರು ಬಳ್ಳಾರಿ ರಸ್ತೆ ಮೇಕ್ರಿ ಸರ್ಕಲ್ – ಬೆಂಗಳೂರು ನಗರದ ಕಡೆಗೆ ಸಂಚರಿಸಬಹುದಾಗಿದೆ.

    3.ಕಂಟೋನ್ಸೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು. – ಸುಲ್ತಾನ್ ಪಾಳ್ಯ – ಕಾವಲ್‌ ಭೈರಸಂದ್ರ ಕಡೆಗೆ:

    ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ – ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) – ವಾಟರ್ ಟ್ಯಾಂಕ್ ಜಂಕ್ಷನ್ – ಬಲ ತಿರುವು – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ ತಿರುವು -ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      4.ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

      ಮೇಕ್ರಿ ಸರ್ಕಲ್‌- ಜಯಮಹಲ್ ಮುಖ್ಯರಸ್ತೆ – ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್‌ ಟ್ಯಾಂಕ್ ಜಂಕ್ಷನ್ – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೇಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ- ತಿರುವು ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      5.ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು:

      ಮೇಕಿ ಸರ್ಕಲ್- ಬಲ ತಿರುವು – ಜಯಮಹಲ್‌ ಮುಖ್ಯರಸ್ತೆ ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್ ಟ್ಯಾಂಕ್ ಜಂಕ್ಷನ್‌ – ಎಡ ತಿರುವು ಮಠದಹಳ್ಳಿ ಮುಖ್ಯ ರಸ್ತೆ – ಸರ್ಕಲ್ – ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಸಂಚರಿಸಬಹುದು.

      6.ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು – ಸಂಚರಿಸಬೇಕಾದ ಮಾರ್ಗಗಳು:

      ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ – ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್‌ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆ ಎಡತಿರುವು- ದೇಸ್ವರಾಜ್ ರಸ್ತೆ -ಗುಂಡೂರಾವ್ ಸರ್ಕಲ್ ಬಲತಿರುವು- 1 – ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್‌ ಎಡ ತಿರುವು -ಪಿ.ಆರ್.ಟಿ.ಸಿ ಜಂಕ್ಷನ್ – ದೇವೆಗೌಡ ರಸ್ತೆ – ದಿಣ್ಣೂರು ಸಂಚರಿಸಬಹುದು. – ಎಡ ತಿರುವು ದಿಣ್ಣೂರು ಜಂಕ್ಷನ್ ಬಲ ತಿರುವು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ.

        Continue Reading
        Advertisement
        Exit Poll
        ಪ್ರಮುಖ ಸುದ್ದಿ19 mins ago

        Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

        Poll Of Polls
        ದೇಶ35 mins ago

        Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

        Exit Poll 2024
        ಪ್ರಮುಖ ಸುದ್ದಿ2 hours ago

        Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

        Bangalore rain
        ಪ್ರಮುಖ ಸುದ್ದಿ2 hours ago

        Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

        Dinesh Karthik
        ಪ್ರಮುಖ ಸುದ್ದಿ2 hours ago

        Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

        Exit Poll
        ಪ್ರಮುಖ ಸುದ್ದಿ2 hours ago

        Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

        Exit Poll 2024
        ದೇಶ3 hours ago

        Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

        Prajwal Revanna Case
        ಕರ್ನಾಟಕ3 hours ago

        Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

        Exit Poll 2024
        ಪ್ರಮುಖ ಸುದ್ದಿ3 hours ago

        Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

        Exit Poll 2024
        ದೇಶ4 hours ago

        Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

        Sharmitha Gowda in bikini
        ಕಿರುತೆರೆ8 months ago

        Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

        Kannada Serials
        ಕಿರುತೆರೆ8 months ago

        Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

        Bigg Boss- Saregamapa 20 average TRP
        ಕಿರುತೆರೆ8 months ago

        Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

        galipata neetu
        ಕಿರುತೆರೆ6 months ago

        Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

        Kannada Serials
        ಕಿರುತೆರೆ8 months ago

        Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

        Kannada Serials
        ಕಿರುತೆರೆ8 months ago

        Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

        Bigg Boss' dominates TRP; Sita Rama fell to the sixth position
        ಕಿರುತೆರೆ7 months ago

        Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

        geetha serial Dhanush gowda engagement
        ಕಿರುತೆರೆ6 months ago

        Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

        varun
        ಕಿರುತೆರೆ7 months ago

        Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

        Kannada Serials
        ಕಿರುತೆರೆ9 months ago

        Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

        Liquor ban
        ಬೆಂಗಳೂರು7 hours ago

        Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

        Assault Case in Shivamogga
        ಕ್ರೈಂ2 days ago

        Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

        Karnataka weather Forecast
        ಮಳೆ4 days ago

        Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

        tumkur murder
        ತುಮಕೂರು5 days ago

        Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

        Karnataka Weather Forecast
        ಮಳೆ5 days ago

        Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

        Karnataka Rain
        ಮಳೆ6 days ago

        Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

        Basavanagudi News
        ಬೆಂಗಳೂರು6 days ago

        Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

        Karnataka Rain
        ಮಳೆ1 week ago

        Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

        dina bhavishya read your daily horoscope predictions for May 23 2024
        ಭವಿಷ್ಯ1 week ago

        Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

        Karnataka Weather Forecast
        ಮಳೆ2 weeks ago

        Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

        ಟ್ರೆಂಡಿಂಗ್‌