ಬೆಂಗಳೂರಿಗೆ ಬರಲಿದ್ದಾರೆ ಅರುಂಧತಿ ರಾಯ್‌, ಜುಬೇರ್‌: ಗೌರಿ ಲಂಕೇಶ್‌ ನೆನಪಿನ ಕಾರ್ಯಕ್ರಮ - Vistara News

ನೋಟಿಸ್ ಬೋರ್ಡ

ಬೆಂಗಳೂರಿಗೆ ಬರಲಿದ್ದಾರೆ ಅರುಂಧತಿ ರಾಯ್‌, ಜುಬೇರ್‌: ಗೌರಿ ಲಂಕೇಶ್‌ ನೆನಪಿನ ಕಾರ್ಯಕ್ರಮ

ಗೌರಿ ಲಂಕೇಶ್‌ ನೆನಪಿನ ಉಪನ್ಯಾಸ ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ಭಾಗವಹಿಸಲಿದ್ದಾರೆ.

VISTARANEWS.COM


on

Arundhati roy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್‌ ಸ್ಮರಣೆಯ ಕಾರ್ಯಕ್ರಮದಲ್ಲಿ ಅರುಂಧತಿ ರಾಯ್‌ ಸೇರಿ ಅನೇಕರು ಬೆಂಗಳೂರಿನಲ್ಲಿ ಭಾಗವಹಿಸಲಿದ್ದಾರೆ.

ಗೌರಿ ಮೆಮೊರಿಯಲ್‌ ಟ್ರಸ್ಟ್‌ ವತಿಯಿಂದ ʼಗೌರಿ ನೆನಪುʼ ಹೆಸರಿನಲ್ಲಿ ಗೌರಿ ಲಂಕೇಶ್‌ ನೆನಪಿನ ಉಪನ್ಯಾಸ ಆಯೋಜನೆ ಮಾಡಲಾಗಿದೆ. ಸೆಪ್ಟೆಂಬರ್‌ 5ರ ಸಂಜೆ 5 ಗಂಟೆಗೆ ಮಹಾರಾಣಿ ಕಾಲೇಜು ಪಕ್ಕದಲ್ಲಿರುವ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಅರುಂಧತಿ ರಾಯ್‌ ಜತೆಗೆ ಚಲನಚಿತ್ರ ನಟ ಪ್ರಕಾಶ್‌ ರೈ ಹಾಗೂ ಆಲ್ಟ್‌ ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ಸಹಿತ ಭಾಗವಹಿಸಲಿದ್ದಾರೆ.

ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ ಟ್ವೀಟ್‌ ಮಾಡಿದ ಆರೋಪದಲ್ಲಿ ಇತ್ತೀಚೆಗೆ ಜುಬೇರ್‌ ಬಂಧನಕ್ಕೊಳಗಾಗಿದ್ದರು, ನಂತರ ಜಾಮೀನು ಪಡೆದು ಹೊರಬಂದಿದ್ದಾರೆ.

ಇದನ್ನೂ ಓದಿ | ಆಲ್ಟ್‌ ನ್ಯೂಸ್‌ನ ಮೊಹಮ್ಮದ್‌ ಜುಬೇರ್‌ಗೆ ಬಿಡುಗಡೆ ಭಾಗ್ಯ; ಸುಪ್ರೀಂಕೋರ್ಟ್‌ನಿಂದ ಮಧ್ಯಂತರ ಜಾಮೀನು
ಇದನ್ನೂ ಓದಿ | Alt News ಸಹಸಂಸ್ಥಾಪಕ ಜುಬೇರ್‌ ವಿರುದ್ಧ ಸಾಕ್ಷ್ಯ ನಾಶ, ವಿದೇಶಿ ಫಂಡ್‌ ಸ್ವೀಕಾರದ ಹೊಸ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

PGCET 2024: ಜುಲೈ 13 ಮತ್ತು 14ರಂದು ನಿಗದಿಯಾಗಿದ್ದ ಪಿಜಿಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಇಎ ತಿಳಿಸಿದೆ.

VISTARANEWS.COM


on

PGCET 2024
Koo

ಬೆಂಗಳೂರು: 2024 -25 ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (PGCET 2024)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಈ ಹಿಂದೆ ಜುಲೈ 13 ರಂದು ಎಂಇ, ಎಂ ಟೆಕ್, ಎಂ ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಹಾಗೂ ಜುಲೈ 14ರಂದು ಎಂಸಿಎ ಮತ್ತು ಎಂಬಿಎ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ನಿಗದಿಯಾಗಿತ್ತು. ಆದರೆ, ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು 10ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪಿಜಿಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದು, ಶೀಘ್ರವೇ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಲಾಗುವುದು. ಪರೀಕ್ಷೆಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದ್ದು, ಜುಲೈ 7ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಜುಲೈ 9ರ ಸಂಜೆ 6 ಗಂಟೆಯೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ https://kea.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ.

ಯುಜಿಸಿಇಟಿಗೆ ಜೂನ್ 29ರವರೆಗೆ ಆಫ್‌ಲೈನ್ ವೆರಿಫಿಕೇಶನ್‌; ಈ ಅಭ್ಯರ್ಥಿಗಳು ಮಾತ್ರ ಹಾಜರಾಗಬೇಕಿಲ್ಲ!

UGCET 2024

ಬೆಂಗಳೂರು: ಯುಜಿಸಿಇಟಿ-2024ರ (UGCET 2024) ಆನ್‌ಲೈನ್ ಅರ್ಜಿಯಲ್ಲಿ ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಂ. ಎನ್, ಜೆಡ್- ಈ ಕ್ಲಾಸ್‌ಗಳನ್ನು ಕ್ಲೇಮ್‌ ಮಾಡಿರುವ ಹಾಗೂ ರ‍್ಯಾಂಕ್‌ ಪಡೆದಿರುವ ಅಭ್ಯರ್ಥಿಗಳಿಗೆ ಆಫ್ ಲೈನ್ ದಾಖಲಾತಿ ಪರಿಶೀಲನೆಯು ಜೂನ್ 25ರಿಂದ 29 ರವರೆಗೆ ಬೆಂಗಳೂರಿನ ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ದಾಖಲಾತಿ ಪರಿಶೀಲನೆಗೆ ಸಂಬಂಧಿಸಿದ ಅಭ್ಯರ್ಥಿಗಳಿಗೆ ಖುದ್ದು ಹಾಜರಾಗಲು ಸೂಚಿಸಿದ್ದಾರೆ. ಇನ್ನೂ “ವೈ” ಅರ್ಹತಾ ಕಂಡಿಕೆಯನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಅಗತ್ಯವಿಲ್ಲ ಎಂದೂ ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ ಕೋರ್ಸುಗಳು, [ಬಿ.ಎಸ್ಸಿ (ಆನರ್ಸ್) ಕೃಷಿ, ಬಿ.ಎಸ್ಸಿ (ಆನರ್ಸ್) (ರೇಷ್ಮೆ ಕೃಷಿ) ಮುಂತಾದವು], ಬಿ.ಎಸ್ಸಿ (ನರ್ಸಿಂಗ್), ಬಿ.ಫಾರ್ಮಾ, 2ನೇ ವರ್ಷದ ಬಿ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ
ಇದು ಅನ್ವಯವಾಗುತ್ತದೆ.

ವಿದ್ಯಾರ್ಥಿಗಳು ತಮ್ಮ ರ‍್ಯಾಂಕ್‌ ಆಧರಿಸಿ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿರುವ ಇ-ಮಾಹಿತಿ ಪುಸ್ತಕದಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತಾ ಕಂಡಿಕೆಗೆ ಅನುಸಾರವಾಗಿ ಅವಶ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು.

ಇದನ್ನೂ ಓದಿ: PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

ಅರ್ಹತಾ ಕಂಡಿಕೆ “ಎ”, “ಇ”, “ಎಫ್”, “ಜಿ”, “ಹೆಚ್”, “ಓ” ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಯುಜಿಸಿಇಟಿ-2024ರ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ದಾಖಲಾತಿ ಪರಿಶೀಲನೆಯನ್ನು ಆನ್‌ಲೈನ್ ಮೂಲಕ ನಡೆಸಲಾಗುತ್ತಿದೆ. ಈ ಬಗ್ಗೆ ವಿವರ ಮಾಹಿತಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ಸೂಚನೆಗಳನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಸನ್ನ ತಿಳಿಸಿದ್ದಾರೆ.

UGCET 2024

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Transfer Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ; ಜು.9ರವರೆಗೆ ಅವಕಾಶ

Transfer Guidelines: ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ಜೂನ್‌ 25ರಿಂದ ಜುಲೈ 9ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

VISTARANEWS.COM


on

Transfer Guidelines
Koo

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆಡಳಿತದಲ್ಲಿನ ನೂತನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವರ್ಗಾವಣಾ ಮಾರ್ಗಸೂಚಿಗಳನ್ನು ವ್ಯಾಪಕವಾಗಿ ಪುನರಾವಲೋಕನ ಮಾಡಿ, ವರ್ಗಾವಣಾ ಮಾರ್ಗಸೂಚಿಗಳನ್ನು (Transfer Guidelines) ಪರಿಷ್ಕರಿಸಿ, ಹೊಸದಾದ ವರ್ಗಾವಣಾ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ವರ್ಗಾವಣೆ ಸಂಖ್ಯೆಯು ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ಜೂನ್‌ 25ರಿಂದ ಜುಲೈ 9ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ. ವರ್ಗಾವಣೆಯಲ್ಲಿ ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸುವ ಬಗ್ಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರವು ಇಚ್ಛಿಸುತ್ತದೆ. ಈ ಮಾರ್ಗಸೂಚಿಗಳು 2024-25 ನೇ ಸಾಲಿನಿಂದ ಜಾರಿಗೆ ಬರುತ್ತವೆ. ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

1. ವಿವರಣೆ:- ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು;

  1. 1.“ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ,
    2.”ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ನಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಚೇರಿಯ ಪ್ರಸ್ತುತ ಇರುವ ಕೇಂದ್ರ ಸ್ಥಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಚೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.
    3.“ಚಲನವಲನ” ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಮಾಡುವ ಸ್ಥಳ ನಿಯುಕ್ತಿ, ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.
    ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.
    4.‘ಗುಂಪು-‘ಎ’, ‘ಬಿ’, ‘ಸಿ’, ಮತ್ತು ‘ಡಿ’ ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು.
  2. 5.‘ಜೇಷ್ಠತಾ ಘಟಕ’ ಎಂದರೆ ಒಂದು ಹುದ್ದೆಗೆ ಸಂಬಂಧಿಸಿದಂತೆ ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ;

2.ವರ್ಗಾವಣಾ ಪ್ರಕ್ರಿಯೆ:

  1. ವರ್ಗಾವಣೆ/ಚಲನವಲನಗಳನ್ನು ಸಕ್ಷಮ ಪ್ರಾಧಿಕಾರವು ಈ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು.

3. ವರ್ಗಾವಣೆಯ ಬಗ್ಗೆ ನಿರ್ಬಂಧಗಳು/ ಸಕ್ಷಮ ಪ್ರಾಧಿಕಾರ ಹಾಗೂ ನೌಕರನ ಜವಾಬ್ದಾರಿಗಳು:

  1. 1.ಪ್ರಸಕ್ತ 2024-25ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆ/ ಚಲನವಲನಗಳ ಸಂಖ್ಯೆಯು ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ದಿನಾಂಕ: 25.06.2024 ರಿಂದ ದಿನಾಂಕ: 09.07.2024ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.
  2. 2.ಆದರೆ ವರ್ಗಾವಣೆ/ ಚಲನವಲನಗಳನ್ನು ಮಾಡುವಾಗ ಯಾವುದೇ ಸರ್ಕಾರಿ ನೌಕರನು ಕಡ್ಡಾಯ ನಿರೀಕ್ಷಣೆಯಲ್ಲಿ ಉಳಿಯುವಂತಹ ಸಂದರ್ಭಗಳು ಉಂಟಾಗದಂತೆ ನೋಡಿಕೊಳ್ಳತಕ್ಕದ್ದು.
    3.ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಆರೋಪಗಳಿದ್ದಲ್ಲಿ ಹಾಗೂ ಆತನ ವಿರುದ್ಧ ಇಲಾಖಾ ವಿಚಾರಣೆ / ಕ್ರಿಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಸೂಕ್ಷ್ಮ ಹುದ್ದೆಗಳಿಗೆ / ಕಾರ್ಯಕಾರಿ ಹುದ್ದೆಗಳಿಗೆ ನೇಮಿಸದೇ ಅವರು ತಮ್ಮ ಬಾಕಿಯಿರುವ ವಿರುದ್ಧ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲದಿರುವಂತಹ ಕಾರ್ಯಕಾರಿಯೇತರ (non-executive) ಹುದ್ದೆಗಳಿಗೆ ನೇಮಿಸತಕ್ಕದ್ದು, ಮುಂದುವರೆದು, ಇಲಾಖಾ ವಿಚಾರಣೆ/ ಕ್ರಿಮಿನಲ್ ಮೊಕದ್ದಮೆ ಬಾಕಿಯಿರುವ ಸರ್ಕಾರಿ ನೌಕರನನ್ನು ಅವನು ಕೋರುವ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಬಾರದು.
    4.ವರ್ಗಾವಣೆಗೊಂಡ ಸರ್ಕಾರಿ ನೌಕರರು ವರ್ಗಾವಣೆ ಆದೇಶದ ಪ್ರಕಾರ ಅವರಿಗೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗದೆ, ವೈದ್ಯಕೀಯ ಕಾರಣಗಳನ್ನು ನೀಡಿ ರಜೆ ಅರ್ಜಿಗಳನ್ನು ಸಲ್ಲಿಸುವ ಪ್ರಕರಣಗಳಲ್ಲಿ ವರ್ಗಾವಣೆಗೊಂಡ ಅಂತಹ ಸರ್ಕಾರಿ ನೌಕರ, ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ (as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ಮಂಡಳಿಯ ಪತ್ರದೊಂದಿಗೆ ದೃಢೀಕರಣ ರಜೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಲ್ಲಿ, ವೈದ್ಯಕೀಯ ಕಾರಣಗಳ ಮೇಲೆ ರಜೆಯನ್ನು ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರ ಪರಿಶೀಲಿಸಿ ರಜೆಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ.
  3. 5.ಒಳರೋಗಿಯಾಗಿದ್ದವರು ಆಸ್ಪತ್ರೆಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶ್ರಾಂತಿ ಪಡೆಯುತ್ತಿದ್ದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ, ರಜೆ ಮಂಜೂರು ಮಾಡಿದ ನಂತರವೇ ರಜೆ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸತಕ್ಕದ್ದು.6.
  4. ಸಂಬಂಧಿಸಿದ ಸರ್ಕಾರಿ ನೌಕರರು ಒಳರೋಗಿಯಾಗಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ವೈದ್ಯಕೀಯ ಕಾರಣಗಳ ಮೇಲೆ ರಜಾ ಅರ್ಜಿಯನ್ನು ಕಡ್ಡಾಯವಾಗಿ ನಿಗದಿತ ಸೇರಿಕೆ ಕಾಲದೊಳಗೆ (Within the joining time prescribed) ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು, ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರುಹಾಜರಿ ಎಂದು ಪರಿಗಣಿಸತಕ್ಕದ್ದು.

4.ಈ ಕೆಳಕಂಡ ಸಂದರ್ಭಗಳನ್ನು ಹೊರತುಪಡಿಸಿ ಸಕ್ಷಮ ಪ್ರಾಧಿಕಾರಗಳು ವರ್ಗಾವಣೆಗಳನ್ನು ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡತಕ್ಕದ್ದಲ್ಲ;

  1. (1) ಒಬ್ಬ ಸರ್ಕಾರಿ ನೌಕರನನ್ನು ಸೇವೆಯಿಂದ ಅಮಾನತ್ತಿನಲ್ಲಿಡುವ ಬದಲು ವರ್ಗಾಯಿಸಲು/ ಚಲನವಲನಗೊಳಿಸಲು ಉದ್ದೇಶಿಸಿದಾಗ;
    (2) ಹೊಸ ಕಚೇರಿ / ಹುದ್ದೆಗಳನ್ನು ಸೃಜಿಸಿದಾಗ ಅಥವಾ ನಿವೃತ್ತಿ, ಬಡ್ತಿ, ರಾಜೀನಾಮೆ ಹಿಂಬಡ್ತಿ, ವಜಾಗೊಳಿಸುವುದರಿಂದ, ಮರಣದಿಂದ, ಕಡ್ಡಾಯ ನಿವೃತ್ತಿಯ ಕಾರಣದಿಂದ ಹುದ್ದೆಗಳು ತೆರವಾದಾಗ ಅಥವಾ ನೇರ ನೇಮಕಾತಿ ಹೊಂದಿದವರನ್ನು ಮೊದಲು ನೇಮಿಸುವಾಗ ಅಥವಾ ಬಡ್ತಿ ಹೊಂದಿದವರನ್ನು ನೇಮಿಸುವಾಗ ಅಥವಾ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯಿಂದ ಉದ್ಭವವಾದ ಹುದ್ದೆಗಳನ್ನು ತಕ್ಷಣ ತುಂಬಬೇಕಾದಾಗ:
    (3) ವಿಶೇಷವಾದ ಅಥವಾ ಅಪವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ ನಿರ್ದಿಷ್ಟ ಪ್ರಕರಣಗಳಲ್ಲಿ ವರ್ಗಾವಣೆಯು ಅವಶ್ಯವೆನಿಸಿದಲ್ಲಿ ಇಂತಹ ಪ್ರಕರಣಗಳನ್ನು ಚಾಚೂ ತಪ್ಪದೇ ಸನ್ಮಾನ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಅವರ ಅನುಮೋದನೆ ಪಡೆದು ವರ್ಗಾವಣೆ ಮಾಡತಕ್ಕದ್ದು.
    (4) ಯಾವುದೇ ಸರ್ಕಾರಿ ನೌಕರನ ವಿರುದ್ಧ ಮೇಲ್ನೋಟಕ್ಕೆ ಗಂಭೀರ ಸ್ವರೂಪದ ದೂರು ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪವಿದೆಯೆಂಬ ಬಗ್ಗೆ, ಇಲಾಖಾ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಲ್ಲಿ ಅಂತಹ ಪ್ರಕರಣಗಳಲ್ಲಿ ಸರ್ಕಾರಿ ನೌಕರನಿಗೆ ದೋಷಾರೋಪಣೆ ಪಟ್ಟಿ/ಚಾರ್ಜ್‌ ಶೀಟ್ ಜಾರಿಯಾಗಿರುವುದು ಅಥವಾ ಸಕ್ಷಮ ನ್ಯಾಯಾಲಯದಲ್ಲಿ ಅಧಿಕಾರಿಯನ್ನು ಅಭಿಯೋಜಿಸುವ ಬಗ್ಗೆ, ಅನುಮತಿ ನೀಡಿರುವುದು ಖಚಿತವಾದ ಪ್ರಕರಣಗಳಲ್ಲಿ,

5.ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ:

  1. (1). ಒಂದು ಸ್ಥಳದಲ್ಲಿ ಈ ಕೆಳಗೆ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ/ ಚಲನವಲನ ಮಾಡುವಂತಿಲ್ಲ:
    ವೃಂದ-ಸೇವಾವಧಿ
    ಎಲ್ಲ ಗುಂಪು-ಎ ಹುದ್ದೆಗಳು- 2 ವರ್ಷ
    ಎಲ್ಲ ಗುಂಪು-ಬಿ ಹುದ್ದೆಗಳು- 4 ವರ್ಷ
    ಎಲ್ಲ ಗುಂಪು-ಸಿ ಹುದ್ದೆಗಳು- 4 ವರ್ಷ
    ಎಲ್ಲ ಗುಂಪು-ಡಿ ಹುದ್ದೆಗಳು-7 ವರ್ಷ
    ತಮ್ಮ ಇಲಾಖೆಯ ವ್ಯಾಪ್ತಿಯಡಿ ಬರುವ ಇಲಾಖೆಗಳ ಒಂದು ನಿರ್ದಿಷ್ಟವಾದ ಹುದ್ದೆಯ ಕಾರ್ಯ ಸ್ವರೂಪದ / ಸೂಕ್ಷ್ಮತೆಯ ಆಧಾರದ ಮೇಲೆ ಒಂದು ಹುದ್ದೆಯಲ್ಲಿ ಸರ್ಕಾರಿ ನೌಕರನು ಸೇವೆ ಸಲ್ಲಿಸಬಹುದಾದ ಕನಿಷ್ಠ ಅವಧಿಯನ್ನು ಸಚಿವಾಲಯದ ಆಡಳಿತ ಇಲಾಖೆಗಳು ಸನ್ಮಾನ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯೊಂದಿಗೆ ಕಾಲಕಾಲಕ್ಕೆ ಪರಿಷ್ಕರಿಸಿ/ನಿಗದಿಪಡಿಸಿ ಆದೇಶ ಹೊರಡಿಸಬಹುದು.
  2. (2). ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ನೆಲೆಸಿರುವ ಕಛೇರಿಗಳಿಗೆ ಸ್ಥಳಿಯ ವೃಂದ ಮತ್ತು ಮಿಕ್ಕುಳಿದ ವೃಂದಗಳಲ್ಲಿನ ವಿವಿಧ ವೃಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆದುರಾಗಿ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳ ವರೆವಿಗೂ ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತುಪಡಿಸಿ ವರ್ಗಾವಣೆ ಮಾಡಬಾರದು.

6. ಅವಧಿ ಪೂರ್ವ /ಅವಧಿ ಮೀರಿದ ವರ್ಗಾವಣೆಗಳು:

  1. (1). ಈ ಕೆಳಕಂಡ ಸಂದರ್ಭಗಳಲ್ಲಿ ಸಕ್ಷಮ ಪ್ರಾಧಿಕಾರವು ಸರ್ಕಾರಿ ನೌಕರನು ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಸೇವಾವಧಿಯನ್ನು ವಿಸ್ತರಿಸಬಹುದು ಅಥವಾ ಕಡಿತಗೊಳಿಸಬಹುದು.
    (ಎ) ಒಂದು ಸ್ಥಳದಲ್ಲಿರಬಹುದಾದ ಗರಿಷ್ಠ ಅವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹನಿರುವ ಸರ್ಕಾರಿ ನೌಕರನಿಗೆ ನಿವೃತ್ತನಾಗಲು ಎರಡು ವರ್ಷಕ್ಕಿಂತ ಕಡಿಮೆ ಸೇವಾವಧಿ ಇದ್ದಲ್ಲಿ;
    (ಬಿ) ಒಬ್ಬ ಸರ್ಕಾರಿ ನೌಕರನು ವಿಶೇಷ ತಾಂತ್ರಿಕ ವಿದ್ಯಾರ್ಹತೆ ಅಥವಾ ಅನುಭವ ಹೊಂದಿದ್ದು, ಅಂತಹ ನಿರ್ದಿಷ್ಟವಾದ ಹುದ್ದೆಗೆ ತಕ್ಷಣಕ್ಕೆ ನೇಮಿಸಲು ಸೂಕ್ತವಾದ ಬದಲಿ ನೌಕರರು ಲಭ್ಯವಿಲ್ಲದಿದ್ದಲ್ಲಿ;
    (ಸಿ) ಕೇಂದ್ರ ಸರ್ಕಾರದ ಯೋಜನೆ ಅಥವಾ ಫಾಗ್‌ಶಿಪ್ ಯೋಜನೆಗಳಲ್ಲಿ ಒಬ್ಬ ಸರ್ಕಾರಿ ನೌಕರನು ಕೆಲಸ ಮಾಡುತ್ತಿದ್ದು ಆ ಯೋಜನೆಯ ಅನುಷ್ಠಾನಗೊಳಿಸುವಿಕೆಯು ಪ್ರಮುಖ ಹಂತದಲ್ಲಿರುವಾಗ ಆತನ ಸೇವೆಯನ್ನು ಹಿಂಪಡೆದಲ್ಲಿ ಸಕಾಲದಲ್ಲಿ ಆ ಯೋಜನೆಯ ಪೂರ್ಣಗೊಳ್ಳುವಿಕೆಯು ಗಂಭೀರವಾಗಿ ನಿಲ್ಲುವ ಸಂಭವವಿದ್ದಲ್ಲಿ
    (ಡಿ)ಪತಿ-ಪತ್ನಿಯರಿಬ್ಬರೂ ಸರ್ಕಾರಿ ನೌಕರರಾಗಿದ್ದು, ಇವರಲ್ಲಿ ಒಬ್ಬರು ವರ್ಗಾವಣೆಗೊಂಡಲ್ಲಿ, ಆಗ ಇನ್ನೊಬ್ಬರು ಹಾಲಿಯಿರುವ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು ಪೂರೈಸದಿದ್ದರೂ ಖಾಲಿ ಹುದ್ದೆಯ ಲಭ್ಯತೆಗೊಳಪಟ್ಟು ಆ ಸ್ಥಳಕ್ಕೆ ಅಥವಾ ಹತ್ತಿರವಿರುವ ಸ್ಥಳಕ್ಕೆ ವರ್ಗಾಯಿಸಲು;
    (ಇ) ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ವರ್ಗಾಯಿಸಬಾರದು. ७ ಪದಾಧಿಕಾರದ ಅವಧಿ ಮುಗಿಯುವವರೆಗೆ
    (ಎಫ್) ಸರ್ಕಾರಿ ನೌಕರ ಅಥವಾ ಆತನ / ಆಕೆಯ ಅಥವಾ ಮಕ್ಕಳು ಯಾವುದೇ ಗಂಭೀರ ಅಥವಾ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ ಒಂದು ಸ್ಥಳದಲ್ಲಿ ಆ ವೈದ್ಯಕೀಯ ಚಿಕಿತ್ಸಾ ಸೌಲಭ್ಯವು ಲಭ್ಯವಿದ್ದು ಈ ಬಗ್ಗೆ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆದಲ್ಲಿ;

7.ವಿಶೇಷ ಚೇತನ ನೌಕರರಿಗೆ ಸಂಬಂಧಿಸಿದಂತೆ ಕೆಲವು ವಿನಾಯಿತಿಗಳು:

  1. (1) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು;
    (2) ವಿಶೇಷ ಚೇತನರು ನೇಮಕಾತಿಗೆ ಆಯ್ಕೆಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವೆನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸುವುದು.
    (3) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಇವರುಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್ ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹೆಚ್ಚಿನ ಪಾತ್ರವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ವಿನಾಯಿತಿ ನೀಡಬಹುದು ಮತ್ತು ಅಂತಹ ನೌಕರರುಗಳಿಗೆ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.
    (4) ಸೇವಾನಿರತ ಸರ್ಕಾರಿ ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಅಂಗವಿಕಲರಾದಲ್ಲಿ, ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವ ಷರತ್ತಿಗೊಳವಟ್ಟು ಅವರನ್ನು ಹತ್ತಿರದ ಸ್ಥಳಕ್ಕೆ ವರ್ಗಾಯಿಸುವುದು.

ಇದನ್ನೂ ಓದಿ | Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

Continue Reading

ಕರ್ನಾಟಕ

Birth and Death Certificate: ಇನ್ಮುಂದೆ ಗ್ರಾಮ ಪಂಚಾಯಿತಿ ಕಚೇರಿಗಳಲ್ಲೇ ಸಿಗಲಿದೆ ಜನನ, ಮರಣ ಪ್ರಮಾಣ ಪತ್ರ

Birth and Death Certificate: ಜುಲೈ 1 ರಿಂದ ಗ್ರಾಮ ಪಂಚಾಯಿಗಳಲ್ಲೇ ಅಧಿಕಾರಿಗಳು ಜನನ, ಮರಣ ನೋಂದಣಿ ಮಾಡಿ, ಪ್ರಮಾಣ ಪತ್ರ ವಿತರಿಸಲಿದ್ದಾರೆ. ನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹಾಗೂ 30 ದಿನಗಳ ನಂತರದ ವಿಳಂಬ ನೋಂದಣಿಯನ್ನು ಗ್ರಾಮ ಆಡಳಿತ ಅಧಿಕಾರಿಗಳು ಮಾಡಲಿದ್ದಾರೆ.

VISTARANEWS.COM


on

Birth and Death Certificate
Koo

ಬೆಂಗಳೂರು: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಜನನ, ಮರಣ ಉಪ ನೋಂದನಾಧಿಕಾರಿಗಳ (Birth and Death Certificate) ಕಾರ್ಯ ನಿರ್ವಹಿಸಲು ರಾಜ್ಯ ಸರ್ಕಾರ ಅಧಿಕಾರ ನೀಡಿದೆ. ಇದರಿಂದ ಇನ್ನು ಮುಂದೆ ಆಸ್ಪತ್ರೆ, ತಾಲೂಕು ಕಚೇರಿ ಅಥವಾ ಇತರ ಸ್ಥಳೀಯ ಸಂಸ್ಥೆ ಕಚೇರಿಗಳಿಗೆ ಜನರು ಅಲೆದಾಡುವುದು ತಪ್ಪಲಿದ್ದು, ಗ್ರಾಮ ಪಂಚಾಯಿತಿ (gram panchayat) ಕಚೇರಿಗಳಲ್ಲೇ ಜನನ, ಮರಣ ಪ್ರಮಾಣಪತ್ರ ಪಡೆಯಬಹುದಾಗಿದೆ.

ಜುಲೈ1 ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗೆ ನೋಂದಣಿ ಮಾಡಿ ಪ್ರಮಾಣ ಪತ್ರವನ್ನು ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ನೀಡಲಾಗಿದೆ. ಅದೇ ರೀತಿ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳ ನಂತರದ ವಿಳಂಬ ನೋಂದಣಿಯನ್ನು ಗ್ರಾಮ ಆಡಳಿತ ಅಧಿಕಾರಿಗಳು ಮಾಡಲಿದ್ದಾರೆ.

ಈ ಕುರಿತಂತೆ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದೇಶಾದ್ಯಂತ ಜನನ, ಮರಣ ನೋಂದಣಿ ಅಧಿನಿಯಮ, 1969 ಜಾರಿಯಲ್ಲಿದೆ. ಕರ್ನಾಟಕ ಜನನ, ಮರಣಗಳ ನೋಂದಣಿ ನಿಯಮಗಳು, 1999ರ ಮೂಲಕ ಪುನರ್ ರಚಿತ ನಾಗರಿಕ ನೋಂದಣಿ ಪದ್ಧತಿಯನ್ನು ದಿನಾಂಕ: 01-01-2000 ರಿಂದ ರಾಜ್ಯಾದ್ಯಂತ ಏಕೀಕರಿಸಿ ಜನನ, ಮರಣ ನೋಂದಣಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | UGCET 2024: ಯುಜಿಸಿಇಟಿಗೆ ಜೂನ್ 25ರಿಂದ ಆಫ್‌ಲೈನ್ ವೆರಿಫಿಕೇಶನ್‌; ಈ ಅಭ್ಯರ್ಥಿಗಳು ಮಾತ್ರ ಹಾಜರಾಗಬೇಕಿಲ್ಲ!

ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೋಂದಣಿ ಅಧಿನಿಯಮ 1969ರ ಪ್ರಕರಣ 7(5) ರನ್ವಯ ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ಹಾಗೂ ಪ್ರಕರಣ 7(1) ರನ್ವಯ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳ ನಂತರದ ವಿಳಂಬ ನೋಂದಣಿಯನ್ನು ನೋಂದಾಯಿಸಲು ಗ್ರಾಮ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಉಲ್ಲೇಖಿತ (3) ರಲ್ಲಿ ಸರ್ಕಾರದ ಆದೇಶವನ್ನು ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಜುಲೈ 1 ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶವನ್ನು ಗ್ರಾಮೀಣ ಪ್ರದೇಶಕ್ಕೆ ಅನ್ವಯವಾಗುವಂತೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕೆಳಕಂಡ ಅಂಶಗಳನ್ನು ಪಾಲಿಸಲು ಸೂಚಿಸಲಾಗಿದೆ.

  1. 1.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳೊಳಗೆ ಜನನ, ಮರಣ ಉಪ ನೋಂದಣಾಧಿಕಾರಿಗಳಾದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ನಿಯಮಾನುಸಾರ ನೋಂದಣಿ ಮಾಡತಕ್ಕದ್ದು.
    a. ಘಟನೆ ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿ ಉಚಿತವಾಗಿ ಒಂದು ಪ್ರಮಾಣ ಪತ್ರವನ್ನು ವಿತರಿಸುವುದು.
    b. ಕರ್ನಾಟಕ ಜನನ, ಮರಣ ನೋಂದಣಿ ನಿಯಮ 5ರಲ್ಲಿ ನಿಗದಿಪಡಿಸಿದ 21 ದಿನಗಳ ತರುವಾಯ ಮತ್ತು 30 ದಿನಗಳೊಳಗಾಗಿ ವರದಿಯಾಗುವ ಘಟನೆಗಳನ್ನು ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ 9(1) ರ ಪುಕಾರ ರೂ.2/- ತಡ ಶುಲ್ಕ ಪಡೆದು ನೋಂದಾಯಿಸುವುದು.
    c. ಘಟನೆ ಸಂಭವಿಸಿದ 30 ದಿನಗಳ ತರುವಾಯ ವರದಿಯಾಗುವ ಘಟನೆಗಳ ನೋಂದಣಿಯನ್ನು ಮಾಡತಕ್ಕದ್ದಲ್ಲ. ಈ ಘಟನೆಗಳ ನೋಂದಣಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಬೇಕಾಗಿರುವ ಹಿನ್ನೆಲೆಯಲ್ಲಿ ಕುರಿತಂತೆ ಸಾರ್ವಜನಿಕರಿಗೆ/ ಅರ್ಜಿದಾರರಿಗೆ ಮಾಹಿತಿಯನ್ನು ನೀಡುವುದು.
  2. 2.ಜನನ, ಮರಣ ಘಟನೆ ಸಂಭವಿಸಿದ 30 ದಿನಗಳ ನಂತರ ವರದಿಯಾಗುವ ಘಟನೆಗಳನ್ನು ಜನನ, ಮರಣ ನೋಂದಣಾಧಿಕಾರಿಗಳಾದ ಗ್ರಾಮ ಆಡಳಿತ ಅಧಿಕಾರಿಗಳು ನಿಯಮಾನುಸಾರ ಈ ಕೆಳಕಂಡಂತೆ ನೋಂದಣಿ ಮಾಡತಕ್ಕದ್ದು.
    a. ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ ನಿಯಮ 9(2) ರ ಪ್ರಕಾರ 30 ದಿನಗಳ ತರುವಾಯ ಒಂದು ವರ್ಷದ ಒಳಗೆ ವರದಿಯಾಗುವ ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ತಹಸೀಲ್ದಾರರ ಲಿಖಿತ ಅನುಮತಿಯೊಂದಿಗೆ ರೂ.5/- ತಡೆ ಶುಲ್ಕ ಪಡೆದು ನೋಂದಾಯಿಸುವುದು
    b. ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳು 1999ರ ನಿಯಮ 9(3) ರ ಪ್ರಕಾರ ಒಂದು ವರ್ಷದ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾ ಪ್ರಾಂತ ದಂಡಾಧಿಕಾರಿ (Presidency Magistrate) ರವರ ಆದೇಶದೊಂದಿಗೆ ರೂ.10/- ತಡೆ ಶುಲ್ಕ ಪಡೆದು ನೋಂದಾಯಿಸುವುದು.
    ಜನನ, ಮರಣ ನೋಂದಣಿ ಸಂಬಂಧ ಯಾವುದಾದರೂ ಸಂದೇಹ/ಸೃಷ್ಟಿಕರಣ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು.

ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಮಾಡುವ ಸಂದರ್ಭದಲ್ಲಿ ಇ-ಜನ್ಮ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಅಥವಾ ಇ-ಜನ್ಮ ಸಹಾಯವಾಣಿ ಹಾಗೂ ಇ-ಮೇಲ್ crbdkar@gmail.com / ejanmahelpdesk@gmail.com ಮತ್ತು ದೂರವಾಣಿ 1800-425-6578 ಕ್ಕೆ ಸಂಪರ್ಕಿಸಬಹುದು ಎಂದು ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅಪರ ನಿರ್ದೇಶಕರು ತಿಳಿಸಿದ್ದಾರೆ.

Continue Reading

ಬೆಂಗಳೂರು

Bengaluru Power Cut: ಜೂನ್‌ 26ರಂದು ಬೆಂಗಳೂರಿನ ಜೆ.ಸಿ.ನಗರ, ಮಾರಪ್ಪ ಗಾರ್ಡನ್ ಸೇರಿ ಹಲವೆಡೆ ವಿದ್ಯುತ್‌ ವ್ಯತ್ಯಯ

Bengaluru Power Cut: ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಜೂನ್‌ 26ರಂದು ಬೆಂಗಳೂರಿನ ಜೆ.ಸಿ.ನಗರ, ಮಾರಪ್ಪ ಗಾರ್ಡನ್ ಸೇರಿ ವಿವಿಧೆಡೆ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

VISTARANEWS.COM


on

Bengaluru Power Cut
Koo

ಬೆಂಗಳೂರು: 220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ 26ರಂದು ಬೆಳಗ್ಗೆ 10:30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಜಯಮಹಲ್ ಎಕ್ಸ್‌ಟೆನ್ಶನ್, ನಂದಿ ದುರ್ಗ, ದೂರದರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ.ನಗರ, ಮಾರಪ್ಪ ಗಾರ್ಡನ್, ಚಿನಪ್ಪ ಗಾರ್ಡನ್, ಎನ್.ಡಿ.ರಸ್ತೆ, ಏರ್‌ಟೆಲ್ ಭಾಗದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ಮಂಗಳವಾರವೂ ವಿವಿಧೆಡೆ ವಿದ್ಯುತ್‌ ಕಡಿತ

ಬೆಂಗಳೂರು: ಜೂ.25ರಂದು ವಿದ್ಯುತ್‌ ಕಡಿತದಿಂದಾಗಿ ಬೆಂಗಳೂರಿಗರು ಕತ್ತಲೆಯಲ್ಲಿ (Bengaluru Power Cut) ಇರಬೇಕಾಗುತ್ತದೆ. ಮಂಗಳವಾರ ಬೆಳಗ್ಗೆ 10:30ರಿಂದ ಮಧ್ಯಾಹ್ನ 3:30ರವರಗೆ ಎಚ್.ಬಿ.ಆರ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ಬೆಸ್ಕಾಂ ಕೈಗೆತ್ತಿಕೊಂಡಿದೆ. ಹೀಗಾಗಿ ಬೆಂಗಳೂರಿನ ಅರ್ಧಪಾಲು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಹೀಗಿವೆ

ಎಚ್‌.ಬಿ.ಆರ್‌ನ 1, 2 ಮತ್ತು 3ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್‌ ಕಾಲೋನಿ, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆಯಲ್ಲಿ ಕರೆಂಟ್‌ ಇರುವುದಿಲ್ಲ.

ಜತೆಗೆ ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಎಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಎಚ್‌.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಎಚ್.ಕೆ.ಬಿ.ಕೆ ಕಾಲೇಜ್, 4 ಮತ್ತು 5ನೇ ಎಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್‌ನಲ್ಲೂ ವ್ಯತ್ಯಯವಾಗಲಿದೆ.

ಇದನ್ನೂ ಓದಿ: UGCET 2024: ಯುಜಿಸಿಇಟಿಗೆ ಜೂನ್ 25ರಿಂದ ಆಫ್‌ಲೈನ್ ವೆರಿಫಿಕೇಶನ್‌; ಈ ಅಭ್ಯರ್ಥಿಗಳು ಮಾತ್ರ ಹಾಜರಾಗಬೇಕಿಲ್ಲ!

ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಎಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್‌, ಎ.ಕೆ.ಕಾಲೋನಿ, ಎಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್‌, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ,ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡಿನಲ್ಲಿ ಕರೆಂಟ್‌ ಇರುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Vijayalakshmi Darshan
ಕರ್ನಾಟಕ9 mins ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Monsoon Rain Boots Fashion
ಫ್ಯಾಷನ್31 mins ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Narendra Modi
ದೇಶ55 mins ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ1 hour ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು1 hour ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ2 hours ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್2 hours ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ2 hours ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest2 hours ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ3 hours ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌